ಒಟ್ಟು 1241 ಕಡೆಗಳಲ್ಲಿ , 90 ದಾಸರು , 756 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಳೀ ದ್ರೌಪದಿ ಭಾರತೀನಿನ್ನಪಾದಕೀಲಾಲಜನುತಿಪೆಪ್ರತಿ||ವೇಳೆಯೊಳಗೂ ಲಕ್ಷ್ಮೀಲೋಲನ ಚರಣಾಬ್ಜ |ವಾಲಗವೀಯೇ ಸುಶೀಲೆ ಸ್ವಯಂಭುಜೆ ಪಇಂದ್ರಸೇನಾ ನಳನಂದಿನಿ ಶಿವಕನ್ಯಾ |ನಂದಪೂರಿತಳೆ ಚಂದ್ರಾ |ನಿಂದಕರಿಪುಜ್ಞಾನಸಾಂದ್ರೆ ಸುಪತಿವ್ರತೆಕಂದುಗೊರಳ ವಾರುಣೀಂದ್ರ ಅಂಡಜಾಧಿಪ ||ಇಂದ್ರನಿರ್ಜರವೃಂದ ಮುನಿಗಣವಂದಿತ ಪದಾರವಿಂದೆ ಭವದಲಿನೊಂದೆ ಭಯವಾರೆಂದು(ನಿನ್ನೊಡಿವೆಂದದಲಿ ನಿನ್ನಡಿ ಪೊಂದಿ ಬೇಡುವೆ ನಂದದಲಿ)ಕೊಡೆ (ಅ)ಮಂದಕರುಣೆ 1ತರಣಿಯಾನಂದ ಭಾಸೆ |ಪ್ರದ್ಯುಮ್ನ ದೇವರ ಸುತೆಕ್ಲೇಶಹರಿಸೆ |ಹರಹಿ ಯನ್ನಯ ಮೇಲೆ ಕರುಣಾಪಾಂಗದ ದೃಷ್ಟಿ |ದುರುಳಮತಿ ಪರಿಹರಿಸಿತವಕಹರಿ-ಗೆರಗೊ ಮನ ಕೊಡುಪರಮಧಾರ್ಮಿಕೆಕರೆವೆ ಬಂದೀಗಿರೆ ಹೃದಯಾಬ್ಜದಿ |ಉರು ಪರಾಕ್ರಮೆಪರತರಳೆ ಸದಾಪೊರೆಯೆ ಬಿಡದಲೆಕರಮುಗಿವೆ 2ವಾಣೀ ಸುಂದರಿ ವರದೆ ಸಾಧ್ವೀ |ವೀಣಾಪಾಣಿ ಪೇಳುವೆನೆ ಇದೇ |ಹೀನ ವಿಷಯವಲ್ಲೆ ಪೋಣಿಸಿ ಸುಮತಿ ಶ್ರೀಪ್ರಾಣೇಶ ವಿಠಲನ ಧ್ಯಾನದೊಳಿಹ ಮ-ಹಾನುಭಾವರ ಸಂಗ ಪಾಲಿಸೇ ||ಮಾನಿನೀ ಕುಲಮೌಳಿಮಣಿಚಂ |ದ್ರಾನನೆ ಮದಗಜಗಮನೆ ಸು-ಶ್ರೋಣಿ ಅಷ್ಟಾಪದ ಸುಕಾಂತೆ 3
--------------
ಪ್ರಾಣೇಶದಾಸರು
ಕೃಷ್ಣ ತನ್ನರೂಪಇಟ್ಟಉತ್ಕøಷ್ಟ ಭಕ್ತರ ಮನೆ ಬಿಟ್ಟು ಹೋಗಲಾರದೆ ಪ.ಮಿತಿಯಿಲ್ಲದೆ ರೂಪದಿಂದ ಕುಂತಿ ಸುತರಭಕ್ತಿಗೆ ಲಕ್ಷ್ಮೀಪತಿ ಅಲ್ಲೆ ನಿಂತಮಿತರೂಪ ದ್ವಾರಕೆಗೆ ಬಂದಇಂಥ ಅತಿಶಯ ಶಕ್ತಿ ನೋಡುವದೆಂಥ ಚಂದ 1ಚೆಲ್ವನ ನೋಡುವರು ಜನರುಮನೆ ಒಲ್ಲದೆ ಜರಿದಾತನಲ್ಲೆ ಇದ್ದರುಫುಲ್ಲನಾಭನರೂಪಚಾರುಇದಕೆಲ್ಲರೂ ನಗಲುಹೃದಯದಂಬರದಲ್ಲಿ ತುಂಬಿದರು 2ಧಿಟ್ಟ ಬೊಮ್ಮಾದಿಗಳೆ ಸಾಕ್ಷಿಇದನಷ್ಟು ಬಲ್ಲಂಥ ಶಿವನೊಬ್ಬ ಸಾಕ್ಷಿಅಷ್ಟ ದಿಕ್‍ಪಾಲಕರೆ ಸಾಕ್ಷಿಮತ್ತಷ್ಟು ವೈಭವದ ಸುರರೆಲ್ಲ ಸಾಕ್ಷಿ 3ಭಕ್ತ ಪ್ರಲ್ಹಾದನೆ ಸಾಕ್ಷಿಇಂಥ ಉತ್ತುಮನೆನಿಸುವ ಧ್ರುವನೊಬ್ಬ ಸಾಕ್ಷಿಸತ್ಯ ಅಜಮಿಳನೊಬ್ಬ ಸಾಕ್ಷಿನಮ್ಮ ಮಿತ್ರಿ ದ್ರೌಪತಾದೇವಿ ಅತ್ಯಂತ ಸಾಕ್ಷಿ 4ಪಂಡಿತಬಲಿಯೊಬ್ಬ ಸಾಕ್ಷಿಜಲದಿ ಕಂಡ ಅಕ್ರೂರ ಅವನೊಬ್ಬ ಸಾಕ್ಷಿಪುಂಡರೀಕನೊಬ್ಬ ಸಾಕ್ಷಿರಮಿಗಂಡ ಭಕ್ತರ ಕಾದು ಕೊಂಡಿಹ ನಿಜ 5
--------------
ಗಲಗಲಿಅವ್ವನವರು
ಕೇಶವನೊಲುಮೆಯು ಆಗುವ ತನಕ ಹರಿದಾಸರೊಳಿರು ಮನವೆಕ್ಲೇಶ ಪಾಶಗಳ ಹರಿದು ವಿಳಾಸದಿ ದಾಸರ ನುತಿಗಳ ಪೊಗಳುತ ಮನದೊಳು ಪ.ಮೋಸದಿ ಜೀವಿಯಘಾಸಿ ಮಾಡಿದ ಫಲಕಾಶಿಗೆ ಹೋದರೆ ಹೋದೀತೆದಾಸರ ಕರೆ ತಂದು ಕಾಸು ಕೊಟ್ಟ ಫಲ ಲೇಸಾಗದೆ ಸಸಿನಿದ್ದೀತೆಭಾಷೆಯ ಕೊಟ್ಟು (ನಿ) ರಾಸೆಯ ಮಾಡಿದಫಲ ಮೋಸವು ಮಾಡದೆ ಬಿಟ್ಟೀತೆಶಶಿವದನೆಯ ಅಧರಾಮೃತ ಸೇವಿಸಿ ಸುಧೆಯೆಂದಡೆ ನಿಜವಾದೀತೆ 1ಕನಕದ ಪಾತ್ರದ ಘನತೆಯ ಪ್ರಭೆಗಳು ಶುನಕನಮನಸಿಗೆ ಸೊಗಸೀತೆಹೀನ ಮನುಜನಿಗೆ ಜಾÕನವ ಭೋಧಿಸೆ ಹೀನ ವಿಷಯಗಳು ಹೋದಿತೇಮಾನಿನಿ ಮನಸು ನಿಧಾನವು ಇಲ್ಲದಿರೆಮಾನಭಿಮಾನ ಉಳಿದೀತೆಭಾನುವಿಕಾಸನ ಭಜನೆಯ ಮಾಡದ ದೀನಗೆ ಮುಕುತಿಯು ದೊರಕೀತೆ 2ಸತ್ಯದ ಧರ್ಮವ ನಿತ್ಯವು ಭೋಧಿಸೆ ತೊತ್ತಿನ ಮನಸಿಗೆ ಸೊಗಸೀತೆತತ್ವದ ಅರ್ಥ ವಿಚಿತ್ರದಿ ಪೇಳಲು ಕತ್ತೆಯ ಮನಸಿಗೆ ತಿಳಿದೀತೆಪುತ್ಥಳಿ ಬೊಂಬೆಯ ಚಿತ್ರದಿ ಬರೆದಿರೆ ಮುತ್ತುಕೊಟ್ಟರೆ ಮಾತಾಡೀತೆಕತ್ತುರಿ ತಿಲಕವನೊತ್ತಿ ಫಣೆಯೊಳಿಡೆ ಅರ್ತಿಯುತೋರದೆ ಇದ್ದೀತೆ 3ನ್ಯಾಯವ ಬಿಟ್ಟು ಅನ್ಯಾಯ ಪೇಳುವ ನಾಯಿಗೆ ನರಕವು ತಪ್ಪೀತೆತಾಯಿ ತಂದೆಗಳ ನೋಯಿಸಿದ ಅನ್ಯಾಯಿಗೆ ಮುಕ್ತಿಯು ದೊರಕೀತೆಬಾಯಿ ಕೊಬ್ಬಿನಿಂದ ಬೈಯುವ ಮನುಜಗೆ ಘಾಯವುಆಗದೆ ಬಿಟ್ಟೀತೆಮಾಯಾವಾದಗಳ ಕಲಿತಾ ಮನುಜಗೆ ಕಾಯಕಷ್ಟ ಬರದಿದ್ದೀತೆ 4ಸಾಧು ಸಜ್ಜನರನು ಬಾಧಿಸಿದಾ ಪರವಾದಿಗೆ ದೋಷವು ತಪ್ಪೀತೆಬಾಧಿಸಿ ಬಡವರ ಅರ್ಥವ ಒಯ್ವವಗೆ ವ್ಯಾಧಿ ರೋಗಗಳು ಬಿಟ್ಟೀತೆಬದ್ದ ಮನುಜ ಬಹು ಕ್ಷುದ್ರವ ಕಲಿತರೆಬುದ್ದಿ ಹೀನನೆಂಬುದು ಹೋದೀತೆಕದ್ದು ಒಡಲ ತಾ ಪೊರೆವನ ಮನೆಯೊಳಗೆಇದ್ದುದು ಹೋಗದೆ ಇದ್ದೀತೆ 5ಅಂಗದ ವಿಷಯಂಗಳನು ತೊರೆದಾತಗೆ ಅಂಗನೆಯರಬಗೆ ಸೊಗಸೀತೆಸಂಗ ಸುಖಂಗಳು ಹಿಂಗಿದ ಮನುಜಗೆ ಶೃಂಗಾರದ ಬಗೆ ಸೊಗಸೀತೆಇಂಗಿತವರಿಯುವ ಸಂಗ ಶರೀರ ವಜ್ರಾಂಗಿಯಾಗದೆ ಇದ್ದೀತೆಮಂಗಳ ಮಹಿಮನ ಅಂಘ್ರಿಯ ಕಾಣದ ಭಂಗಗೆ ಮುಕ್ತಿಯು ದೊರಕೀತೆ 6ಕರುಣಾಮೃತದಾ ಚರಣವ ಧರಿಸಿದ ಪರಮಗೆ ಸರಳಿ ಬಂದೀತೆಕರಣ ಪಾಶದುರವಣೆ ತೊರೆವಾತಗೆ ಶರಣರ ಪದ್ಧತಿ ತಪ್ಪೀತೆಆರುಶಾಸ್ತ್ರವನು ಮೀರಿದ ಯೋಗಿಗೆತಾರಕ ಬ್ರಹ್ಮವು ತಪ್ಪೀತೆವರದ ಪುರಂದರವಿಠಲನ ಚರಣಸ್ಮರಿಸುವವನಿಗೆ ಸುಖ ತಪ್ಪೀತೆ * 7
--------------
ಪುರಂದರದಾಸರು
ಗಂಗಾಧರ ದೇವ ಜಯಗೀಷ ವ್ಯಾನಂಗಾರಿ ಗಿರಿಜಾಧವ |ಮಂಗಳ ಪ್ರದನೆ ಅಮಂಗಳ ಶೀಲ | ಭುಜಂಗ ರೂಪದಿ ಪಾಂಡು |ರಂಗ ಘಾಸಿಗೆಯಾದ ಪವೈಕಾರಿಕಾಹಂಕಾರ ತತ್ವದೊಡೆಯ, ನಾಕುಮೊಗನ ಕುಮಾರ |ಶ್ರೀಕಂಠ, ಸ್ಥಾಣು, ವಿಶ್ಖೋಜನಕ, ಚಂದ್ರಶೇಖರ, ಈಶಪಿನಾಕಿಭಕ್ತವತ್ಸಲ |ಶೋಕನಾಶಕ ಶಂಭು, ಪಶುಪತಿ, ಹೇ ಕರುಣಿ, ಸದ್ಗುಣ ಸುಖಾರ್ಣವ |ಪಾಕಶಾಸನ ಪ್ರಮುಖ ವಂದ್ಯ, ವಿಶೋಕ, ಎನ್ನಭಿಲಾಷೆ ಪೂರ್ತಿಸು1ಪ್ರಾಣನಂದನ ತೈಜಸಾಹಂಕಾರಾಭಿಮಾನಿ ಶ್ರೀಶುಕದೂರ್ವಾಸ|ಕ್ಷೋಣಿಸಂಧೃತ ಧನ್ವಿ, ದಾನವಾಂತಕ, ಶೂಲಪಾಣಿ, ಪ್ರಮಥಾಧಿಪ ಬಾಣವರದಯನ್ನ |ಮಾನನಿನ್ನದು ಚಕ್ರಿ ಪದಕಂಜರೇಣುತೋರಿಸು ತವಕದಿಂದಲಿ |ದ್ರೌಣಿ, ಶಿವ, ಪ್ರಣತ ಜನ ಸುಮನಸಧೇನು, ತವ ಪದ ಸಾರ್ವೆ ಸತತ 2ತಾಮಸಾಹಂಕಾರೇಶ ಸಂಕರ್ಷಣನಾ ಮಗನೇ ಕೊಡು ಲೇಸ ರಾಮನಾಮ ಮಂತ್ರ |ಪ್ರೇಮದಿ ಜಪಿಸುವ ಸ್ವಾಮಿ, ಅನಲ,ವಹ್ನಿಸೋಮಲೋಚನ ಹರ |ವಾಮದೇವ, ಕಪರ್ದಿ,ಭವಭಯ ಭೀಮ ಶ್ರೀ ಪ್ರಾಣೇಶ ವಿಠಲನ |ಪ್ರೇಮ ಪುಟ್ಟಿಸೋ ರೌಪ್ಯ ಪರ್ವತಧಾಮ ಶ್ರೀ ವಿರೂಪಾಕ್ಷ ಗುರುವೇ 3
--------------
ಪ್ರಾಣೇಶದಾಸರು
ಗಂಗಾಪಿತ ರಾಘವ ನಂಬಿದೆ ಶ್ಯಾಮ-ಲಾಂಗ ನಿನ್ನಯ ಪಾದವ ||ಮಂಗಳೆ ರಮಣ ಭುಜಂಗಧರಾರ್ಚಿತಾ |ನಂಗಜ ಜನಕ ಪಾಲಿಸಿಂಗಡಲೊಡೆಯನೆ ಪಶಫರ, ಕಮಠ,ಕೋಲನೃಹರಿ ಬಾಲ |ನೃಪಕುಲ ಪವನ ವ್ಯಾಲ ||ವಿಪಿನಸಂಚರಾ ಕೃಷ್ಣ ವಿಪುಳಾಬುದ್ಧಕಲ್ಕಿ |ವಪುಧರ ಅನಿರುದ್ಧಕೃಪಣವತ್ಸಲ ಸ್ವರ್ಪಾ- ||ದಪನೆಹರಿಕಾಶ್ಯಪಿಯೊಳಗೆ ಸುರ ರಿಪುಹ | ಶಿವನ ಕ |ರಿಪನ ನರಪತಿ ದ್ರುಪದ ನಂದನೆಯ ಪೊರೆದೀಶ್ವರ |ಕಪಟನಾಟಕ ಕಪಿಲ ರೂಪಿ 1ಕುರು ಕುಲೋತ್ತಮನಾಗಾರದೊಳಗೆಕ್ಷೀರ|ಸುರಿದೆ ಗೋಕುಲ ವಿಹಾರ ||ವರವಿಪ್ರಜರ ತಂದೆ ಹರಚಾಪಹನನಈ |ಶರೀರವೇ ನಿನ್ನದು ಸರಿಬಂದದನು ಮಾಡೋ ||ಕರೆಕರೆಯ ಭವಶರಧಿಯೊಳು ಬಾ- |ಯ್ದೆರೆವೆ ರಕ್ಷಿಸುವರನು ಕಾಣೆನೊಬ್ಬರ ನಿನ್ನುಳಿ- ||ದುರಗ ಶಯನನೇ ಧರಿಜವಲ್ಲಭಕರುಣಿ ಕೇಶವ2ಜನನ ಮರಣ ದೂರ ಇಂದ್ರಾನುಜ |ಮುನಿ ಗೇಯಾ ಚಲಧರ ||ವನರುಹಭವಸಂಕ್ರಂದನವಂದ್ಯ ವೀತ ಆ |ವನಿ ಮುಖ ತನ್ಮಾತ್ರಾಗುಣ ಪ್ರಾಣೇಶ ವಿಠಲ ||ಪ್ರನಮಿತಾಘ ಕಕ್ಷಾನಲ ಕಂದರ್ಪನ ಪಿತನೆ |ನಿನ್ನನುಗರೊಳಗಿಡೋ ಮಣಿಯೇ ಅನ್ಯರಿ ||ಗನಘ ಪಾಲಿಪುದನವರತ ಯನ್ನನು ಬಿಡದಲೆ 3
--------------
ಪ್ರಾಣೇಶದಾಸರು
ಗೌರೀವರಶಿವ ನಮೋ ನಮೋ | ಶಿವ |ಗೌರೀವರ ಶಿವ ನಮೋ ನಮೋ |ಈಶಪರಾತ್ಪರದೋಷನಿವಾರ |ಕಾಶೀಪುರವರವಾಸ ವಿಶ್ವೇಶ್ವರ 1ಕರಿಚರ್ಮಾಂಬರ ಕರುಣಾಕರ |ಸ್ಮರಿಸಲು ಸರ್ವರದುರಿತನಿವಾರ 2ಭಸ್ಮಾಲೇಪನ ಶಶಿಶೇಖರವೃಷಭವಾಹನ ಸ್ಮಶಾನ ಸಂಚಾರ 3ಸುರ ಗಂಗಾಧರ | ನರರುಂಡಮಾಲಾ |ಕರದಿ ತ್ರಿಶೂಲವು ಉರಗಕುಂಡಲ 4ಜಟಾಮಕುಟ ನೀಲಕಂಠೇಶ್ವರಾ |ಅಡವಿಯೊಳ್ಕೈರಾತನಟನ ಶಂಕರ 5ಷಣ್ಮುಖ ಭೈರವ ಭೃಂಗಿ ಪ್ರಮಥ |ಗಣನಾಥ ವೀರಭದ್ರ | ನಂದಿವಂ ದಿತ 6ಮಂದರಧರಗೋವಿಂದನ ಸಖನೆ |ವಂದಿಪೆದಾಸನ ಪಾಲಿಸು ಶಿವನೆ 7
--------------
ಗೋವಿಂದದಾಸ
ಚತುರ್ದಶಿಯ ದಿನ(ಹನುಮಂತನನ್ನು ಕುರಿತು)ರಂಭೆ : ಇವನ್ಯಾರೆ ದೂರದಿ ಬರುವವ ಇವನ್ಯಾರೆ ಪ.ಇವನ್ಯಾರೆ ಮಹಾಶಿವನಂದದಿ ಮಾ-ಧವನ ಪೆಗಲೊಳಾಂತು ತವಕದಿ ಬರುವವ 1ದಾಡೆದಂತಮಸಗೀಡಿರುವದು ಮಹಾಕೋಡಗದಂತೆ ಸಗಾಢದಿ ಬರುವವ 2ಕಡಲೊಡೆಯನು ಮೃದುವಡಿಯಡರಿಸಿ ಬಿಡದಡಿಗಡಿಗಾಶ್ರೀತರೊಡಗೂಡಿ ಬರುವವ 3ಊರ್ವಶಿ : ನಾರಿ ಕೇಳೆಲೆಗೆ ವೈಯಾರಿ ನೀ ಮುದದಿನಾರಾಯಣನಿಗೀತ ಬಂಟನಾದಾದರಿದಿವೀರ ರಾಮವತಾರದಿ ಹಿಂದೆ ಹರಿಯಚಾರಕನಾಗಿ ಸೇವೆಯ ಗೈದ ಪರಿಯಕ್ರೂರ ದಶಾಸ್ಯನ ಗಾರುಗೆಡಿಸಿನೃಪವೀರನ ಪೆಗಲಿನೊಳೇರಿಸಿ ದೈತ್ಯರಭೂರಿವಧೆಗೆ ತಾ ಸಾರಥಿಯಾದವಕಾರುಣೀಕ ಮಹಾವೀರ್ಹನುಮಂತ 1ಆಮೇಲೆ ವೀರಾವೇಶದಿ ವಾರಿಧಿಯನುರಾಮನಪ್ಪಣೆಯಿಂದ ದಾಟಿದನಿವನುಭೂಮಿಜೆಗುಂಗುರ ಕೊಟ್ಟ ನಂತರದಿಕಾಮುಕರನು ಸದೆಬಡಿದನಾ ಕ್ಷಣದಿಹೇಮಖಚಿತ ಲಂಕಾಮಹಾನಗರವಹೋಮವ ಗೈದು ಸುತ್ರಾಮಾರಿಗಳ ನಿ-ರ್ನಾಮಿಸಿ ಸೀತೆಗೆ ತಾ ಮಣಿಯುತ ಚೂ-ಡಾಮಣಿ ತಂದ ಮಹಾಮಹಿಮನು ಇವ 2ವಾರಿಮುಖಿ ನೀ ಕೇಳಿದರಿಂದ ಬಂದವೀರ ಹನುಮಂತನನೇರಿ ಗೋವಿಂದಸ್ವಾರಿಗೆ ಪೊರಟ ಚಾತುರ್ದಶಿ ದಿವಸಆರತಿಯನು ಕೈಕೊಳ್ಳುವ ಶ್ರೀನಿವಾಸಭೇರಿಮೃದಂಗ ಮಹಾರವದಿಂದ ಸ-ರೋರುಹನಾಭ ಮುರಾರಿ ಶರಣರುದ್ಧಾರಣಗೈಯುವ ಕಾರಣದಿಂದ ಪಾ-ದಾರವಿಂದಗಳ ತೋರಿಸಿ ಕೊಡುವ 3ಬಳಿಕ ಪಲ್ಲಂಕಿ ಏರಿದ ಕಾಣೆ ನಾರಿನಲವಿಂದ ವೇದಘೋಷವ ಕೇಳ್ವಶೌರಿಜಲಜಭವಾದಿ ನಿರ್ಜರರಿಗಸಾಧ್ಯಸುಲಭನಾದನು ಭಕ್ತಜನಕಿದುಚೋದ್ಯಸುಲಲಿತ ಮಂಟಪದೊಳೊ ನೆಲಸುತ ನಿ-ಶ್ಚಲಿತಾನಂದ ಮಂಗಲದ ಮಹೋತ್ಸವಗಳನೆಲ್ಲವ ಕೈಕೊಳುತಲಿ ಭಕ್ತರಸಲಹುವ ನಿರುತದಿ ಮಲಯಜಗಂಧಿನಿ 4ಶ್ರೀಕಾಂತ ಬಳಿಕ ಭಕ್ತರ ಒಡಗೂಡಿಏಕಾಂತ ಸೇವೆಯಗೊಂಡ ಕೃಪೆಮಾಡಿಸಾಕಾರವಾಗಿ ತೋರುವ ಕಾಣೆ ನಮಗೆಬೇಕಾದ ಇಷ್ಟವ ಕೊಡುವ ಭಕ್ತರಿಗೆಶ್ರೀಕರ ನಾರಾಯಣ ಶ್ರೀನಿವಾಸ ಕೃ-ಪಾಕರ ವಿಬುಧಾನೇಕಾರ್ಚಿತ ರ-ತ್ನಾಕರಶಯನ ಸುಖಾಕರ ಕೋಟಿ ವಿ-ಚಾರಕ ಭಾಸತ್ರಿಲೋಕಾಧಿಪನಿವ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಚಂದ್ರಚೂಡ ಶಿವಶಂಕರ ಪಾರ್ವತಿ ರಮಣಾನಿನಗೆ ನಮೋ ನಮೋ ಪಸುಂದರ ಮೃಗಧರ ಪಿನಾಕಧರ ಹರ |ಗಂಗಾಧರಗಜಚರ್ಮಾಂಬರಧರಅ.ಪನಂದಿವಾಹನಾನಂದದಿಂದ ಮೂಜಗದಿ ಮೆರೆವನು ನೀನೆ |ಕಂದರ್ಪನ ಕ್ರೋಧದಿಂದ ಕಣ್ದೆರೆದು ಕೊಂದ ಉಗ್ರನು ನೀನೆ ||ಅಂದು ಅಮೃತ ಘಟದಿಂದುದಿಸಿದ ವಿಷತಂದುಭುಂಜಿಸಿದವನು ನೀನೆ |ಬಂದು ಚೆಂದದಿ ಇಂದಿರೇಶ ಶ್ರೀ ರಾಮನ ಪೊಂದಿಪೊಗಳುವವ ನೀನೆ 1ಬಾಲಮೃಕಂಡನ ಕಾಲನು ಎಳೆವಾಗಪಾಲಿಸಿದಾತನು ನೀನೆ |ನೀಲಕಂಠ ಕಾಲಕೂಟ ವಿಷವ ಮೆದ್ದಶೂಲಪಾಣಿಯು ನೀನೆ |ವಾಲಾಯದಿ ಕಪಾಲವ ಪಿಡಿದುಭಿಕ್ಷೆಕೇಳುವ ದಿಗಂಬರ ನೀನೆ |ಜಾಲಮಾಡುವ ಗೋಪಾಲನೆಂಬಪೆಣ್ಣಿಗೆ ಮರುಳಾದವ ನೀನೆ 2ಧರೆಗೆ ದಕ್ಷಿಣ ಕಾವೇರಿ ತೀರ ಕುಂಭಪುರನಿವಾಸನು ನೀನೆ |ಕರದಲಿ ವೀಣೆಯ ನುಡಿಸುವ ನಮ್ಮಉರಗಭೂಷಣನು ನೀನೆ ||ಕೊರಳಲಿ ಭಸ್ಮ ರುದ್ರಾಕ್ಷಿಯ ಧರಿಸಿದಪರಮವೈಷ್ಣವನು ನೀನೆ |ಗರುಡಗಮನಶ್ರೀಪುರಂದರವಿಠಲನ ಪ್ರಾಣ ಪ್ರಿಯನುನೀನೆ3
--------------
ಪುರಂದರದಾಸರು
ಚಿತ್ತಶುದ್ಧಿಯಿಲ್ಲದವನವ ಜ್ಞಾನಿಯೆ - ಪುಣ್ಯಪಾತಕಗಳನರಿಯದವ ಮನುಜನೆ ಕೃಷ್ಣ ಪ.ಮಾರಿ ಮನೆಯೊಳಗಿರಲು ಸಹಕಾರಿಯೆನಬಹುದೆ ?ಊರೊಳಗಿನಾ ಕಳ್ಳ ಅವ ಸುಜನನೆ ?ಜಾರತನವೆಸಗುವಳು ಕುಲವನಿತೆಯಹುದೆ - ಸಂಸಾರದೆಚ್ಚವಿಲ್ಲದವ ಸುಗಣನೆ ? 1ಶ್ವಾನ ಬೂದಿಯಲಿರಲು ಶಿವಭಕ್ತನನೆಬಹುದೆ ?ಕಾನನದೊಳಿಹ ಕಾಗೆ ವನವಾಸಿಯೇ ?ಗಾಣ ತಿರುಗುವ ಎತ್ತಿಗದು ಪ್ರದಕ್ಷಣೆಯೆ ಬಕಧ್ಯಾನವನು ಮಾಡಲದು ಮೌನವೇ ಕೃಷ್ಣಾ ? 2ತೋಳ ಅಡವಿಯಲಿರಲು ಅದು ದಿಗಂಬರನಹುದೆ ?ಗಾಳಿಯಂಬುವ ಉರುಗ ಉಪವಾಸಿಯೇ ?ಆಲವದು ಜಡೆಬಿಡಲುಪರಮ ಋಷಿಯಹುದೆ - ಬಲುಕಾಲಉಳಿದ ಹದ್ದು ತಾ ಹಿರಿಯದೆ ?3ಬಂಧನದೊಳಿಹ ವ್ಯಾಘ್ರವನು ತಪಸಿಯೆನಬಹುದೆ ?ಸಿಂಧುಜವು ಎನೆ ವಿಷಯ ಶೀತಕರನೆ ?ಅಂಧಕನು ಕಣ್ಮಚ್ಚಲದು ಧ್ಯಾನವೇ, ಗಜವುಮಂದಗತಿಯಾದರದು ಸ್ಮರಣೆಯೆ ಕೃಷ್ಣಾ ? 4ಮರಣಕ ಗಂಟಲನು ಮಾಡಲದು ಮಂತ್ರವೆ ?ಗಂಡು ನೀರಲಿ ಮುಳುಗಲದು ಸ್ನಾನವೇ ?ಪುಂಡರೀಕಾಕ್ಷ ಶ್ರೀ ಪುರಂದರವಿಠಲನತೊಂಡನಾಗದ ನರನ ಬಾಳು ಬಾಳುವೆಯೆ ? 5
--------------
ಪುರಂದರದಾಸರು
ಜನನಿರುದ್ರಾಣಿ ರಕ್ಷಿಸು ಎನ್ನಜಗದೀಶನ ರಾಣಿ ಪ.ವನಜಭವಸುರಮುನಿಕುಲಾರ್ಚಿತೆಕನಕವರ್ಣಶರೀರೆ ಕಮಲಾ-ನನೆ ಕರುಣಾಸಾಗರೆ ನಮಜ್ಜನ-ಮನಮುದಾಕರೆ ಮಾನಿತೋದ್ಧರೆ ಅ.ಪ.ಆದಿಕೃತಾಯುಗದಿ ಪ್ರತಿಷ್ಠಿತ-ಳಾದೆ ಧರಾತಳದಿಆದಿತೇಯರ ಬಾಧಿಸುವ ದಿತಿ-ಜಾಧಮರ ಭೇದಿಸಿದೆ ಸಜ್ಜನ-ರಾದವರ ಮನ್ನಿಸಿದೆ ತ್ರೈಜಗ-ದಾದಿಮಾಯೆ ವಿನೋದರೂಪಿಣಿ 1ಖಂಡ ಪರಶುಪ್ರೀತೆ ನಿಖಿಲಬ್ರ-ಹ್ಮಾಂಡೋದರಭರಿತೆಚಂಡಮುಂಡವೇತಂಡದಳನೋ-ದ್ದಂಡಸಿಂಹೆ ಅಖಂಡಲಾರ್ಚಿತೆಪಾಂಡುತನುಜಕೋದಂಡವಿತರಣೆಚಂಡಿಕೇ ಕರದಂಡಲೋಚನಿ 2ಸಿಂಧೂರಸಮಯಾನೆ ಸರಸ ಗುಣ-ವೃಂದೆ ಕೋಕಿಲಗಾನೆಸುಂದರಾಂಗಿ ಮೃಗೇಂದ್ರವಾಹಿನಿಚಂದ್ರಚೂಡಮನೋಜೆÕ ಸತತಾ-ನಂದಪೂರ್ಣೆ ಮುನೀಂದ್ರನುತೆ ಸುಮ-ಗಂಧಿ ಗೌರಿ ಶಿವೇ ಭವಾನಿ 3ಲಂಬೋದರಮಾತೆ ಲಲಿತ ಜಗ-ದಂಬಿಕೆ ಗಿರಿಜಾತೆಕಂಬುಕಂಠಿ ಕಾದಂಬನೀಕು-ರುಂಬಜಿತಧಮ್ಮಿಲ್ಲೆ ತವ ಪಾ-ದಾಂಬುಜವ ನಾ ನಂಬಿದೆನು ಎನ-ಗಿಂಬು ಪಾಲಿಸೆ ಶುಂಭಮರ್ದಿನಿ 4ಘನವೇಣುಪುರವಾಸೆ ಸರ್ವಾರ್ಥದಾ-ಯಿನಿ ತ್ರೈಜಗದೀಶೆಸನಕನುತೆ ಶ್ರೀಲಕ್ಷುಮಿನಾರಾ-ಯಣಭಗಿನಿ ಶ್ರೀಮಹಿಷಮರ್ದಿನಿಮನಮಥಾಮಿತರೂಪೆ ಕಾತ್ಯಾ-ಯಿನಿ ನಿರಾಮಯೆ ಮಂಜುಭಾಷಿಣಿ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಜಯ ಜಯಮೃತ್ಯುಂಜಯಜಗದಾಶ್ರಯಭಯಹರ ವಿಗತಾಮಯ ಶಿವಸದಯಪ.ಭಾಗವತೋತ್ತಮ ಭಾಸುರಕಾಯಭಾಗೀರಥೀಧರ ಭಗವತೀಪ್ರಿಯ 1ಅಗಜಾಲಿಂಗನ ಸುಗುಣನಿಕಾಯಮೃಗಧರಚೂಡ ಮುನಿಜನಗೇಯ 2ಲಕ್ಷ್ಮೀನಾರಾಯಣಪರಾಯಣರಕ್ಷಿಸು ತ್ರಿಜಗಾಧ್ಯಕ್ಷ ಸುಶ್ರೇಯ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಜಯತು ಜಯತು ಶ್ರೀ ಗಂಗಾದೇವಿಯೆಜಯತುಪಂಕಜಗಂಧಿಯೇಬಹು ಜಯತು ಶ್ವೇತಾಂಗ ರೂಪೆಯೆಜಯತು ವಕ್ರ ಸವಾರಿಯೆ ಜಯತು ಜಯತೂ 1ಪಾಹಿಶ್ರೀಹರಿ ಪಾದನಂದನೆಪಾಹಿಶಿವ ಶಿರವಾಸಿನಿಪಾಹಿಶ್ರೀಜಹ್ನುಮುನಿ ಹೃದಯ ಶೋಭಿತೆಪಾಹಿಧಾರುಣಿ ಪಾಲಿತೆಪಾಹಿಪಾಹಿ 2ಶರಣು ಭಗೀರಥ ಕುಲ ಉದ್ಧಾರಳೆಶರಣು ವರುಣನಮಾನಿನಿಶರಣು ಗೋವಿಂದನ ದಾಸನೊಡ
--------------
ಗೋವಿಂದದಾಸ
ಜಯಮಂಗಳಂನಿತ್ಯಶುಭಮಂಗಳಂಪ.ದುರುಳತಮ ವೇದವನು ಕದ್ದು ವಾತಾಳದಲಿಇರಲವನ ಕೊಂದು ವೇದಾವಳಿಗಳಸರಸಿಜೋದ್ಭವಗಿತ್ತು ಸುರಮುನಿಗಳನ್ನೆಲ್ಲಪೊರೆದ ಶ್ರೀ ವತ್ಸಾವತಾರಿ ಹರಿಗೆ 1ಸುರರು ದೈತ್ಯರಕೂಡಿ ಸಿಂಧುವನು ಮಧಿಸುತಿರೆಗಿರಿಮುಳಗಿ ಪಾತಳಕಿಳಿದು ಪೋಗೆಭರದಿಂದ ತಾ ಬಂದು ಗಿರಿಯ ಬೆನ್ನಳಗಾಂತುಸುರರ ಸಂರಕ್ಷಿಸಿದ ಶ್ರೀಕೂರ್ಮಹರಿಗೆ2ಭೂಮಿಯನು ಹಿರಣ್ಯಕ್ಷನೆಂಬ ದೈತ್ಯನು ಸುತ್ತಿಭೀಮ ವಿಕ್ರಮನು ಪಾತಾಳಕೊಯ್ಯುತಾಮರಸ ಸಂಭವನು ಬಿನ್ನೈಸಲವನಳಿದುಭೂಮಿಯನು ತಂದು ಶ್ರೀ ಭೂ ವರಾಹನಿಗೆ 3ಪರಮಭಾಗವತ ಪ್ರಲ್ಹಾದನ ಹಿರಣ್ಯಕನುಪರಿಪರಿಯ ಭಾದೆಯಿಂದಲಿ ಪೀಡಿಸಿಕರುಣಾಳು ಕೋಪದಲಿ ದೈತ್ಯನುದರವ ಬಗೆದಶರಣ ರಕ್ಷಕನಾದ ಶ್ರೀ ನರಸಿಂಹಗೆ 4ಬಲಿಚಕ್ರವರ್ತಿ ಭೂಮಿಯ ಧಾರೆಯರೆಯಲುಇಳೆಯನಳೆದವನ ಸುತಳಕೆ ಕಳುಹಿಸಿದಸಿಲುಕಿಭಕುತಿಗೆ ಮೆಚ್ಚಿ ಬಾಗಿಲವಕಾಯ್ದ ಶ್ರೀಬಲವಂಥಹರಿವಾಮಾನಾವತಾರನಿಗೆ5ಕಾರ್ತವೀರ್ಯಾರ್ಜುನನ ಸಂಹರಿಸಿ ಮುದದಿಂದಕೀರ್ತಿಯನು ಲೋಕದೊಳು ವಿಸ್ತರಿಸಿದಪ್ರಾರ್ಥಿವಾಂತಕ ಬಾಹುಬಲದಿ ಪರಿಪೂರ್ಣಗೆಆರ್ತಬಾಂಧವಗೆಭಾರ್ಗವರಾಮಗೆ6ದಶರಥನ ಮನೆಯುದ್ಭವಿಸಿ ಆ ರಾವಣನದಶಶಿರವ ನೀಡಾಡಿ ಅವನನುಜಗೆವಸುಧಾಧಿಪತ್ಯವನು ಲಂಕೆಯೊಳಗವಗಿತ್ತಅಸಮವಿಕ್ರಮ ರಾಮಚಂದ್ರ ಹರಿಗೆ 7ಯದುಕುಲದಿ ತಾ ಬಂದು ಕೊಂದು ಕಂಸನನಂದುಮುದದಿಂದ ಪಾಂಡವರನುದ್ಧರಿಸಿದಒದೆಗೆ ಕೌರವ ಬಲವ ಸಂಹರಿಸಿ ಪದವಿತ್ತುಮುದದಿ ಮನ್ನಿಸಿದ ಶ್ರೀ ಕೃಷ್ಣ ಹರಿಗೆ 8ತ್ರಿಪುರದ ಮುರಾರಿಗಳ ಸತಿಯರ ಪತಿವ್ರತವಅಪಹರಿಸಿ ದಿವ್ಯ ಮೋಹಕರೂಪದಿತ್ರಿಪುರಹರಗಂಬಾಗಿ ಶಿವಗೆ ಕೀರ್ತಿಯನಿತ್ತಅಪರಮಿತ ಬುದ್ಧಾವತಾರ ಹರಿಗೆ 9ಕರಿಯುಗದ ಕಡಯಲಿ ಖಲನೃಪರನೆಲ್ಲರನುತುಳಸಿ ಕುದುರೆಯ ಖುರದ ಪುಟಗಳಿಂದಸುಲಭದಿಂ ನಡೆಸುತೀ ಕೃತಯುಗದ ಧರ್ಮವನುಒಲಿದಂಥ ಕಲ್ಕಿಯವತಾರ ಹರಿಗೆ 10ಮಂಗಳ ಪದಂಗಳನು ಭಕ್ತಿಯಲಿ ಮೋಹನತರಾಂಗನೆಯರೆಲ್ಲ ರಾಗದಿ ಪಾಡುತಮಂಗಳಾತ್ಮಕಗೆಸಿರಿ ಪುರಂದರವಿಠಲಗೆಅಂಗನೆಯರೆಲ್ಲ ಆರತಿಯೆತ್ತಿರೆ 11
--------------
ಪುರಂದರದಾಸರು
ಜಯಮಂಗಳಂನಿತ್ಯಶುಭಮಂಗಳಂಪ.ದುರುಳತಮ ವೇದವನು ಕದ್ದು ವಾತಾಳದಲಿಇರಲವನ ಕೊಂದು ವೇದಾವಳಿಗಳಸರಸಿಜೋದ್ಭವಗಿತ್ತು ಸುರಮುನಿಗಳನ್ನೆಲ್ಲಪೊರೆದ ಶ್ರೀ ವತ್ಸಾವತಾರಿ ಹರಿಗೆ 1ಸುರರು ದೈತ್ಯರಕೂಡಿ ಸಿಂಧುವನು ಮಧಿಸುತಿರೆಗಿರಿಮುಳಗಿ ಪಾತಳಕಿಳಿದು ಪೋಗೆಭರದಿಂದ ತಾ ಬಂದು ಗಿರಿಯ ಬೆನ್ನಳಗಾಂತುಸುರರ ಸಂರಕ್ಷಿಸಿದ ಶ್ರೀಕೂರ್ಮಹರಿಗೆ2ಭೂಮಿಯನು ಹಿರಣ್ಯಕ್ಷನೆಂಬ ದೈತ್ಯನು ಸುತ್ತಿಭೀಮ ವಿಕ್ರಮನು ಪಾತಾಳಕೊಯ್ಯುತಾಮರಸ ಸಂಭವನು ಬಿನ್ನೈಸಲವನಳಿದುಭೂಮಿಯನು ತಂದು ಶ್ರೀ ಭೂ ವರಾಹನಿಗೆ 3ಪರಮಭಾಗವತ ಪ್ರಲ್ಹಾದನ ಹಿರಣ್ಯಕನುಪರಿಪರಿಯ ಭಾದೆಯಿಂದಲಿ ಪೀಡಿಸಿಕರುಣಾಳು ಕೋಪದಲಿ ದೈತ್ಯನುದರವ ಬಗೆದಶರಣ ರಕ್ಷಕನಾದ ಶ್ರೀ ನರಸಿಂಹಗೆ 4ಬಲಿಚಕ್ರವರ್ತಿ ಭೂಮಿಯ ಧಾರೆಯರೆಯಲುಇಳೆಯನಳೆದವನ ಸುತಳಕೆ ಕಳುಹಿಸಿದಸಿಲುಕಿಭಕುತಿಗೆ ಮೆಚ್ಚಿ ಬಾಗಿಲವಕಾಯ್ದ ಶ್ರೀಬಲವಂಥಹರಿವಾಮಾನಾವತಾರನಿಗೆ5ಕಾರ್ತವೀರ್ಯಾರ್ಜುನನ ಸಂಹರಿಸಿ ಮುದದಿಂದಕೀರ್ತಿಯನು ಲೋಕದೊಳು ವಿಸ್ತರಿಸಿದಪ್ರಾರ್ಥಿವಾಂತಕ ಬಾಹುಬಲದಿ ಪರಿಪೂರ್ಣಗೆಆರ್ತಬಾಂಧವಗೆಭಾರ್ಗವರಾಮಗೆ6ದಶರಥನ ಮನೆಯುದ್ಭವಿಸಿ ಆ ರಾವಣನದಶಶಿರವ ನೀಡಾಡಿ ಅವನನುಜಗೆವಸುಧಾಧಿಪತ್ಯವನು ಲಂಕೆಯೊಳಗವಗಿತ್ತಅಸಮವಿಕ್ರಮ ರಾಮಚಂದ್ರ ಹರಿಗೆ 7ಯದುಕುಲದಿ ತಾ ಬಂದು ಕೊಂದು ಕಂಸನನಂದುಮುದದಿಂದ ಪಾಂಡವರನುದ್ಧರಿಸಿದಒದೆಗೆ ಕೌರವ ಬಲವ ಸಂಹರಿಸಿ ಪದವಿತ್ತುಮುದದಿ ಮನ್ನಿಸಿದ ಶ್ರೀ ಕೃಷ್ಣ ಹರಿಗೆ 8ತ್ರಿಪುರದ ಮುರಾರಿಗಳ ಸತಿಯರ ಪತಿವ್ರತವಅಪಹರಿಸಿ ದಿವ್ಯ ಮೋಹಕರೂಪದಿತ್ರಿಪುರಹರಗಂಬಾಗಿ ಶಿವಗೆ ಕೀರ್ತಿಯನಿತ್ತಅಪರಮಿತ ಬುದ್ಧಾವತಾರ ಹರಿಗೆ 9ಕರಿಯುಗದ ಕಡಯಲಿ ಖಲನೃಪರನೆಲ್ಲರನುತುಳಸಿ ಕುದುರೆಯ ಖುರದ ಪುಟಗಳಿಂದಸುಲಭದಿಂ ನಡೆಸುತೀ ಕೃತಯುಗದ ಧರ್ಮವನುಒಲಿದಂಥ ಕಲ್ಕಿಯವತಾರ ಹರಿಗೆ 10ಮಂಗಳ ಪದಂಗಳನು ಭಕ್ತಿಯಲಿ ಮೋಹನತರಾಂಗನೆಯರೆಲ್ಲ ರಾಗದಿ ಪಾಡುತಮಂಗಳಾತ್ಮಕಗೆಸಿರಿ ಪುರಂದರವಿಠಲಗೆಅಂಗನೆಯರೆಲ್ಲ ಆರತಿಯೆತ್ತಿರೆ 11
--------------
ಪುರಂದರದಾಸರು
ತದಿಗೆಯ ದಿವಸ(ಶೇಷ ದೇವರನ್ನು ಕುರಿತು)ರಂಭೆ :ನ್ಯಾರೆಂಬುದನೆನಗೆ ಪೇಳೆಕ್ರೂರತನದಿ ತಾ ತೋರುವನೀಗ ಮ-ಹೋರಗನೆನ್ನುತ ಕೋರಿಕೆ ಬರುವದು 1ಒಂದೆರಡು ಶಿರವಲ್ಲ ಬಹುಹೊಂದಿಹವು ಸಟೆಯಲ್ಲಕಂಧರದಲಿ ಕಪ್ಪಂದದಿ ತೋರ್ಪವುಚಂದಿರಮುಖಿ ಯಾರೆಂದೆನಗರುಹೆಲೆ 2ಊರ್ವಶಿ : ಕೋಮಲಗಾತ್ರೆ ಮಹಾಮಹಿಮನು ಇವನ-ಸಾಮಾನ್ಯನೆ ಕಾಣೆಭೂಮಿಯ ಪೊತ್ತ ನಿರಾಮಯನಾದಸುಧೀಮನಿವನು ಜಾಣೆ 1ವಾಸುದೇವಗೆ ಈತ ಹಾಸಿಗೆಯವ ನಿ-ರ್ದೋಷನಿವನು ಜಾಣೆಸಾಸಿರಮುಖದ ವಿಲಾಸನಾಗಿಹ ಮಹಾ-ಶೇಷನಿವನು ಕಾಣೆ 2ಅದರಿಂದಲಿ ಕೇಳ್ ತದಿಗೆಯ ದಿವಸದಿಮಧುಸೂದನನಿವನಅಧಿಕಾನಂದದಿ ಒದಗಿಸಿ ಬರುವನುಇದೆಯಿಂದಿನಹದನ3ಎಂದಿನಂತೆ ಪುರಂದರವಂದ್ಯ ಮುಕುಂದಸಾನಂದದಲಿಅಂದಣವೇರಿ ಗೋವಿಂದ ಬರುವನೊಲ-ವಿಂದತಿ ಚಂದದಲಿ 4ಕಂಟಕಗಳು ಎಲ್ಲುಂಟೆಂಬಂತೆ ನೃಪ-ಕಂಠೀರವಗೈದಘಂಟಾನಾದದಿ ಮಂಟಪದೊಳು ವೈ-ಕುಂಠನು ಮಂಡಿಸಿದಾ 5ಕಾಂತಾಮಣಿ ಕೇಳಿಂತೀಪರಿ ಶ್ರೀ-ಕಾಂತ ನತತಂಡಸಂತವಿಸುತ ಮಹಾಂತಮಹಿಮನೇ-ಕಾಂತಸೇವೆಯಗೊಂಡ 6* * *ಪರಶಿವನನ್ನು ಕುರಿತುರಂಭೆ : ಯಾರಮ್ಮಾ ಮಹಾವೀರನಂತಿರುವನುಯಾರಮ್ಮಾ ಇವನ್ಯಾವ ಶೂರ ಯಾವಊರಿಂದ ಬಂದ ಪ್ರವೀರ ಆಹಾಮಾರಜನಕನ ವಿಸ್ತಾರಪೂಜೆಯ ವೇಳ್ಯಧೀರನಂದದಿ ತಾ ವಿಚಾರ ಮಾಡುವನೀತ 1ಕರದಿ ತ್ರಿಶೂಲವ ಧರಿಸಿ ಮತ್ತೆವರಕೃಷ್ಣಾಜಿನವನುಕರಿಸಿಹರಿಚರಣಸನ್ನಿಧಿಗೆ ಸತ್ಕರಿಸಿ ಆಹಾಜರಿಯ ದುಕೂಲವ ನಿರಿದುಟ್ಟುಕೊಂಡು ವಿ-ಸ್ತರವಾದ ತೋಷದಿ ಮೆರದು ನಲಿವ ಕಾಣೆ 2ಊರ್ವಶಿ : ಈತನೀಗ ಕಾಲಭೈರವ ಕೇಳೆಲೆಗೆ ನೀರ ಪ.ಈತನೀಗ ಪೂರ್ವದೊಳಗೆಭೂತನಾಥ ಸೇವೆಯೊಲಿದಓತು ವಿಷ್ಣುಭಕ್ತಿಯಿಂದಪೂತನಾದ ಪುಣ್ಯಪುರುಷ ಅ.ಪ.ಊರು ಇವಗೆ ಮೊದಲು ಗಂಗಾತೀರವಾಯ್ತುವೇಣುತಾ ವಿ-ಚಾರದಿಂದ ಪೊದನೈಉದಾರತನದಿ ರಾಮೇಶ್ವರಕೆಸಾರಗ್ರಹಿತ ಮುಕ್ತಿ ಪಥವನು ಕರುಣದಿಂದತೋರಿಸುವನು ವಿಷ್ಣುವೆಂದೆನುತ ಗಿರಿಯನೇರಿ ಕರುಣ ವಾರಿಧಿಯಪದಾರವಿಂದಸೇವೆಗೈದುಮಾರಪಿತನ ಭಕ್ತಿಯೊಳು ತಾ ಹೇರಿನಲಿವ ಚಾರುಚರಿತ 1ಪರಮಪುರುಷ ಹರುಷದಿಂದೀಪುರಕೆಬರುವಕಾಲದಲ್ಲಿಚರಣವನ್ನು ಬಿಡದೆ ಯಿಲ್ಲಿರುವನೈ ಮಹಾತ್ಮನೀತಸ್ಫುರಿತತೇಜೋಮೂರ್ತಿ ಈತನು ಲೋಕದೊಳಗೆಚರಿಸುವ ತ್ರಿಕಾಲಪ್ರಜÕನು ಇವನ ಗುಣವ-ನರಿವರ್ಯಾರು ಮನುಜಭುಜಂಗರಲಿಮಹತ್‍ಕಾರಣೀಕಪುರುಷನಿವ ಮಹಾ ಬಲಾಢ್ಯಕರುಣವುಳ್ಳ ವಿಷ್ಣುಭಕ್ತ 2ಶ್ರೀನಿವಾಸ ಕರುಣದಿಂಪ್ರಧಾನಿಯೆಂದು ನಡೆಸಿಕೊಡುವಏನಗೈದರೀತ ಮನದಿ ತಾನುತೋಷಪಟ್ಟು ಇರುವಕಾಣಿಕೆಗಳ ತರಿಸಿ ಇರಿಸುವ ಬೇತಾಳಪ್ರೇತನಾನಾ ಉಪದ್ರವಗಳ ಬಿಡಿಸುವ ಧನಿಯ ಆಜೆÕಏನ ದೊರಕಿತದನು ಬೇಗ ತಾನೆಬಂದು ಪೇಳಿ ಜನರಮಾನಿಸುತ ನಿಧಾನಗೊಳಿಸಿಕ್ಷೋಣಿಯೊಳಗೆ ಕೀರ್ತಿಪಟ್ಟ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ