ಒಟ್ಟು 1328 ಕಡೆಗಳಲ್ಲಿ , 102 ದಾಸರು , 1073 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮುಳಬಾಗಲುರಂಗಸ್ವಾ'ುೀ ಯಮ್ಮನುಳುಹಬೇಕು ಭಕ್ತಪ್ರೇ'ುೀ ಪನಳಿತೋಳು ಕಳೆಮುಖ ತಲೆಗೆ ಕಿರೀಟವುನಳಿನಲೋಚನಮೂರ್ತಿ ಕಳೆುಂದ ಬೆಳಗುವೆಅ.ಪಅದ್ವೈತ ಶಾಸ್ತ್ರಾನುಭವರು ನಮ್ಮಅಣ್ಣಯ್ಯಸ್ವಾ'ುಯ ಸುತರೂಸಾಧ್ವೀಗುರ್ರಮಗರ್ಭಾಂಬುಧಿ ಶಶಿಯಾಗಿಸದ್ವಿಲಾಸದೊಳು ಸಂಜನಿಸಿದ ಚಲುವ 1ಕೃತ್ತಿಕಾನಕ್ಷತ್ರ ಪ್ರಥಮಾ ಪಾದತಿಥಿಯು ದ್ವಾದಶಿ 'ಭವನಾಮಾ'ತವಾದ ಧನುರ್ಮಾಸ ಸ್ಥಿರವಾರದುದಯದೊಳ್‍ಪೃಥಿ'ೀಪಥನವಾದ ಪರಮಪುರುಷಮೂರ್ತಿ 2ಸದ್ಗುಣದಾಟಿನೋಟಗಳೂ ಶಾಸ್ತ್ರ'ದ್ಯ ಸಂಯೋಗಪಾಠಗಳೂ ಸದ್‍ವೃದ್ಧಿ ಸ'ಯ ವ್ಯಾಪಾರ ವರ್ಜಿತಮಾಡಿಶುದ್ಧವೈಷ್ಣವ ತುಲಸಿರಾಮರ ಭಜಿಸುವ 3ಹರಸೀ ವಾಗೀಶಕಿರೀಟಾ ಗುರುಪರಂಪರೆ ಕಥೆನುಡಿದಾಟ ಹರುಷದಿ ಮೆಚ್ಚಿಸಿ ಧರಿಸಿ ಕಿರೀಟಾ ನಿರುಪಮ ಪರತತ್ವದೊಳಗೆ 'ಶೇಷಾ 4ಪರಕಾಲಮಠಕಾಗಾ'ುಸಿದೇ ಜನರತರುಣೋಪಾಯಗಳ ಮಾಡಿಸಿದೇತಿರುಮಂತ್ರಸಂಸ್ಕಾರ ಚರಮಾರ್ಥದೊರಕಿಸಿಪರಮಪಾವನರಾಗಿ ಮಾಡುತಲಿರುತಿಹ 5ವರಯತಿಗುರುಗಳ ಭಾಷಾ ಪೂರ್ಣಪರತತ್ವಬೋಧೆ ಗುಣಭೂಷಪರಮಾನುಭವಜ್ಞಾನ ಅರು' ಭಕ್ತರನೆಲ್ಲ ಪರಲೋಕಸಾಧನ ಅರಿವು ತೋರಿಸುವಂಥಾ 6ಚನ್ನಪಟ್ಣಾದಿರಾಮಕೋಟಿ ಅಲ್ಲಿಜನಕೆನೀ ತುಂಬಿದೆ ನಾಟಿಮುನ್ನುಮಾಡಿದ ಪಾಪವೆಲ್ಲವು ಪರಿಹಾರವುನ್ನತಮಾರ್ಗವ ತೋರಿದ ಗುರುದೇವ 7ರಾಮಕೃಷ್ಣೋತ್ಸವಗಳನೂ ಬಹುಪ್ರೇಮದಿನಡೆಸಿದಾದರನೂಆಮಹಾ ಕಾರ್ಯಕಾತುರದುರಂಧರನೂುೀಮ'ಯೊಳು ಪ್ರಖ್ಯಾತನಾಗಿಹನೂ 8ಪುರಪುರಗ್ರಾಮಗಳಲ್ಲಿ ಗುರು ತಿರುನಕ್ಷತ್ರೋತ್ಸವವಲ್ಲಿಪರಮವೈಭವದಿಂದ ಸ್ಥಿರವಾಗಿ ನಡೆಯಲುಹರುಷದಿ ಸೌಲಭ್ಯ ದೊರಿಕಿಸಿ ಇರುವಂಥಾ 9ಪ್ರತಿವರ್ಷ ಧನುರ್ಮಾಸ ಭಜನೇ ಒಳ್ಳೆಶೃತಿಮೃದಂಗವು ತಾಳರಚನೇಸತತವು ಹರಿಕಥೆ ತೀರ್ಥಪ್ರಸಾದವು'ತಕರಗುರುಸೇವಾ ದುರಂಧರಬಿರುದುಳ್ಳ 10ಭರತಪುರೀವಾಸಶ್ರೇಷ್ಟಾ ಗುರುವರತುಲಸಿರಾಮ ಪ್ರತಿಷ್ಠಾಪರಿಪರಿತತ್ಸೇವಾನಿರತ ಸಂತುಷ್ಟಾಗುರುಪಾದಸರಸಿಜ ಭೃಂಗಾವೆ ಸ್ವಷ್ಟಾ 11ಅಪರೋಕ್ಷಜ್ಞಾನ ಸಂಪೂರ್ಣ ಜನ್ಮಸಫಲಮಾರ್ಗದಲ್ಲಿ ಉತ್ತೀರ್ಣಾ ಅಪರಾಧಗಳನು ಮನ್ನಿಸಿ ಶ್ರಿತಜನರನ್ನುಸಫಲಗೊಳಿಸಿ ಜನ್ಮಸಾರ್ಥಕಪಡಿಸುವ 12ಪತಿತಪಾಮರರಿಗೆಯೆಲ್ಲಾಪ್ರತಿಫಲ'ಲ್ಲಾದುಪದೇಶ ಬಲ್ಲಾ'ತಕರವಾಗಿ ತೋರ್ಪುದು ಶಿಷ್ಯಜನಕೆಲ್ಲಾ ಸತತವು ತವಪಾದ ಗತಿಮೋಕ್ಷದಾಯಕ 13ಜ್ಞಾನಭಕ್ತಿಯು ವೈರಾಗ್ಯ ಸುಜ್ಞಾನದಿ ತುಳುಕುವ ಭಾಗ್ಯಮಾನವ ಜನ್ಮದಿ ಅವತರಿಸಿರುತಿಹದೀನರ ಮುಕ್ತಿಗೆ ಕಾರಣವಾಗಿಹ 14ಅಂಗ ದ್ವಾದಶನಾಮಧಾರಾ ಬಹುಶೃಂಗಾರತರ ಮಕುಟಾಂಬರಾರಂಗುಮಂಟಪದಿ ಲಂಘಿಸಿ ರಾಗ ಪಾಡುತ್ತಮಂಗಳಕರ ತುಲಸಿನಳಿನಾಕ್ಷಹಾರುಳ್ಳ 15ಗೃಹಮಣಿ ಸುಬ್ಬಾಂಬನವರೂ ನಿಮ್ಮಮಹದಾಂಶ ಸುಗುಣವಂತೆಯರುಸಹಚರಿಸುತ ಪುರಗ್ರಾಮ ಮಾದರಿಯಾಗಿಸಹಪತ್ನಿಸ'ತ ಭಕ್ತರನು ಪಾಲಿಸತಿರ್ಪಾ 16ದಿನಚರಿಬರುವ ದಾಸರನೂ ಮನದನುವಾರಿತಾನ್ನದಾನವನೂಮನದೊಳು ಭಕ್ತರವೊಡಲ ಪರೀಕ್ಷಿಸಿಘನವಾದ ಮೋಕ್ಷಾರ್ಹವಾದನರ ಕೈಪಿಡಿದ 17ಅಂಕಿತಮಾಡದೆ ುಹೆನೂ ಚಕ್ರಾಂಕಿತ 'ಲ್ಲದ್ಯೋಚಿಪೆನೂ ಕಿಂಕರನಾಗಿ ಬೇಡುವೆ ಪಾದವನೂಅಂಕಿತಕನುವiತಿ ಆಗಹೊಂದುವೆನೂ 18ಸೋಮೆಗೌಡನ ಪುರವಾಸಾ ರಂಗಸ್ವಾ'ುದಾಸರ ದಾಸದಾಸಪ್ರೇಮಭೈರವಗೌಡನೊಳಗೆ ತೋರಿಸಬೇಕು ಸ್ವಾ'ುನಿನ್ನಾಜ್ಞೆಗೇ ಬಾಗಿದಂಕಿತ'ದು19
--------------
ಮಳಿಗೆ ರಂಗಸ್ವಾಮಿದಾಸರು
ಮೂರುತಿಯ ತೋರೋ ಮಾರುತಿ ಧಾರುಣಿಯೊಳ್ ನೀನೇ ಗತಿಪ ಅಂಜನಾ ಸುಕುಮಾರ ಕಂಜಾಕ್ಷ ಕಿಂಕರ ಸಂಜೀವ ಗಿರಿಧರ ಅಂಜಿಕೆಯ ಕಳೆವ ಧೀರ 1 ಎರೆಡು ದಳದವರ ಕರೆದು ಕೌರವನುರ ಇರಿದು ಕರುಳಸರ ವರಸತಿಗಿತ್ತ ಧೀರ 2 ಕಾಕು ಮಾಯ್ಗಳ ಮತ ನೂಕಿ ಬಿಸಾಡುತ ಶ್ರೀಕಾಂತ ಸನ್ಮತ ಕೈಗೊಂಡು ನಿಲಿಸಿದಂಥ 3
--------------
ಲಕ್ಷ್ಮೀನಾರಯಣರಾಯರು
ಮೂರ್ಖ ಬಲ್ಲನೆ ಸತ್ಯಸುಜ್ಞಾನಿ ನಡೆಯ ತಾರ್ಕಿ ಬಲ್ಲನೆ ಪರಸಾಧನದ ಬಗೆಯ ಪ ಕತ್ತೆ ಬಲ್ಲುದೆ ಹೊತ್ತ ಮುತ್ತುರತ್ನದ ಬೆಲೆಯ ತೊತ್ತು ಬಲ್ಲುದೆ ಮಹ ಉತ್ತಮರ ನಡೆಯ ಮಿಥ್ಯ ಬಲ್ಲನೆ ಶರಣಸತ್ಸುಜನರ ನೆಲೆಯ ಮೃತ್ಯು ಬಲ್ಲುದೆ ಹೊತ್ತು ಗೊತ್ತಿನ ಪರಿಯ 1 ಸೂಶೆಬಲ್ಲಳೆ ಸತಿಯ ಶೀಲವ್ರತನೇಮಗಳ ಕೋಳಿ ಬಲ್ಲುದೆ ಮರಿಗೆ ಮೊಲೆಹಾಲುಣಿಸಿ ಸಲಹೋದ ಕೇಳಬಲ್ಲನೆ ಕಿವುಡ ಆಲಿಸಿ ಏಕಾಂತವನು ಹೇಳಬಲ್ಲನೆ ಮೂಕ ಕೇಳಿ ಹರಿಚರಿತ 2 ಭ್ರಷ್ಟಬಲ್ಲನೆ ಸುಗುಣ ಶಿಷ್ಟ ಸಂತರ ಸಂಗ ದುಷ್ಟಬಲ್ಲನೆ ಪರರ ಕಷ್ಟನಷ್ಟಗಳ ಹುಟ್ಟುಗುರುಡ ಬಲ್ಲನೆ ಮುಂದಿಟ್ಟ ಗಂಟಿನ ವಿವರ ಕೆಟ್ಟಭವಿಬಲ್ಲನೆ ತತ್ತ್ವಕಟ್ಟಳೆಯ ಗುಟ್ಟು 3 ಕುರಿಯು ಬಲ್ಲುದೆ ತನ್ನ ಕೊರಲು ಕೊಯ್ಯವರೆಂದು ಮರುಳ ಬಲ್ಲನೆ ದೊರೆತ ನರಜನುಮ ಸಮಯ ನರಕದ ಹುಳ ಬಲ್ಲುದೆ ಕಾಳೋರಗನ ಹರಿದಾಟ ತಿರುಕ ಬಲ್ಲನೆ ಅರಸರ ಮನೆಯ ಸುದ್ದಿ 4 ಕಾಮಿಗಳು ಬಲ್ಲರೆ ನೇಮನಿತ್ಯದ ನಿಜವ ತಾಮಸರು ಬಲ್ಲರೆ ಸಾಮ ದಾನ ಗುಣವ ಪಾಮರರು ಬಲ್ಲರೆ ಭೂಮಿಯೊಳಧಿಕ ಮಮ ಸ್ವಾಮಿ ಶ್ರೀರಾಮನ ನಾಮಮಹಾತ್ಮೆಯನು 5
--------------
ರಾಮದಾಸರು
ಮೆಚ್ಚಿದೆ ಯಾಕಮ್ಮ ಲಕ್ಕುಮಿದೇವಿ ಸಚ್ಚಿದಾನಂದಾತ್ಮ ಹರಿಯೆಂದರಿಯದಲೆ ಪ ರಕ್ಕಸಾಂತಕ ಹರಿಗೆ ಸೊಗಸಿನ ತಕ್ಕ ವಾಹನವಿಲ್ಲದಿದ್ದೊಡೆ ಹಕ್ಕಿಯ ಹೆಗಲೇರಿ ತಿರುಗುವ ಚಿಕ್ಕ ಬುದ್ಧಿಯ ಚಲುವ ಕೃಷ್ಣಗೆಅ.ಪ ನೀರೊಳು ಮುಳುಗಿ ಭಾರವಪೊತ್ತು ಧರಣಿಯ ಕೋರೆದಾಡೆಲಿ ತಂದ ಕ್ರೂರ ರೂಪನಿಗೆ ಮೂರಡಿ ಭೂಮಿಯ ಬೇಡಿ ಕ್ಷಿತಿಪರ ಕೊಂದು ನಾರು ವಸ್ತ್ರಗಳುಟ್ಟು ಸೀರೆ ಕದ್ದವಗೆ ಶೂರತನದಲಿ ತ್ರಿಪುರರಗೆದ್ದು ವಿ- ಹಾರ ಮಾಡ್ಡ ಏರ್ದ ಕುದುರೆಯ ಮಾರಪಿತ ಮಧುಸೂಧನನ ವ್ಯಾ- ಪಾರ ತಿಳಿಯದೆ ವಾರಿಜಾಕ್ಷಿ 1 ಹಾಸಿಕಿಲ್ಲದೆ ಹಾವಿನ ಮೇಲೆ ಮಲಗುವ ಹೇಸಿಕಿಲ್ಲದೆ ಎಂಜಲ್ಹಣ್ಣನೆ ಮೆಲುವ ದೋಷಕಂಜದೆ ಮಾವನ ಕೊಂದು ಮಧುರೆಲಿ ದಾಸಿ ಕುಬ್ಜೆಯ ಡೊಂಕು ತಿದ್ದಿ ಪರಿಮಳ ಪೂಸಿ ಸೋಸಿನಿಂದಲಿ ಕರಡಿ ಮಗಳನು ಯೋಚಿಸದೆ ಕೈಪಿಡಿದು ಸೌಳ- ಸಾಸಿರದ ಸತಿಯರನು ಕೂಡಿದ ವಾಸುದೇವನ ಮೋಸವರಿಯದೆ 2 ಮೋಸದಿಂದಲಿ ಬಂದು ಶಿಶುವನೆತ್ತಿದ ದೈತ್ಯ ದಾಸಿಯ ಕೊಂದ ಉದಾಸೀನದಿಂದ ಗ್ರಾಸಕಿಲ್ಲದೆ ಗೋಪೇರ ಮನೆಗಳ ಪೊಕ್ಕು ಮೀಸಲು ಬೆಣ್ಣೆ ಪಾಲ್ಮೊಸರನೆ ಸವಿದು ರಾಸಕ್ರೀಡೆಯ ವನಿತೆಯರ ಮನ ದಾಸೆ ಪೂರೈಸಿ ರಾತ್ರಿ ವೇಳದಿ ವಾಸುದೇವನು ಓರ್ವ ಸತಿಯೊಳು ಕ್ಲೇಶಪಡಿಸದೆ ಮೋಸವರಿಯದೆ3 ಅಖಿಳ ಮಹಿಮನೆನೆ ಊಳಿಗ ಮಾಡಬಹುದೆ ಚಂಡನಾಡುವ ನೆವದಿಂದ ಕಾಳಿಂಗನ ಮಂಡೆಯ ತುಳಿದು ನಾಟ್ಯವನಾಡಬಹುದೆ ಗಂಡುಗಲಿ ಅರ್ಜುನನು ರಥಕೆ ಬಂಡಿಬೋವನ ಮಾಡಬಹುದೆ ಪುಂಡಲೀಕನು ಇಟ್ಟೆಗೆಯ ಮೇ- ಲ್ಪಾಂಡುರಂಗ ನಿಲಿಸಬಹುದೆ4 ಕಮಲಾಕ್ಷ ಯಾಗಶಾಲೆಗೆ ಗೋಪರನು ಕಳುಹಿ ರಮೆಯರಸಗೆ ಬಹಳ್ಹಸಿವೆನುತಿರಲು ಕಮಲಾಕ್ಷನ ನುಡಿ ಗಮನಿಸದೆ ರುಷಿವರರಿಗೆ ಕಮಲ ಮುಖಿಯರೆಲ್ಲ ಪರಮ ಸಂಭ್ರಮದಿಂದ ಕಮಲನೇತ್ರಗೆ ವಿವಿಧ ಭಕ್ಷಗ- ಘೃತ ಪರಮಾನ್ನಗಳನು ಕಮಲನಾಭ ವಿಠ್ಠಲಗೆ ಅರ್ಪಿಸಿ ಶ್ರಮವ ಕಳೆದೈದಿದರು ಮುಕ್ತಿಯ 5 ಯಾಕೆ ಮೆಚ್ಚಿದೆಯಮ್ಮ ಲೋಕ ಸುಂದರಿಯೆಶ್ರೀ ಕಮಲಜಪಿತ ಲೋಕ ಮೋಹಕನ
--------------
ನಿಡಗುರುಕಿ ಜೀವೂಬಾಯಿ
ಮೊಚ್ಚೆ ಮೊಚ್ಚೆಲಿ ಹೊಡೆಯಿರಿ ಇವನ | ನೆಚ್ಚಿದೆತನುವಿದನೆಂಬುವನ || ಹುಚ್ಚ ನಾಯಿಯೋಲ್‍ಎಚ್ಚರವಿಲ್ಲದೆ | ಅರ್ಚಕ ಜನರನು ಬೊಗಳುವನ ಪ ಪರ ಉಪಕಾರಿಲ್ಲದ | ಮಾನುಷನಾಗಿಬಾಳುವನ || ತಾ ಅಜ್ಞಾನ ಮಾರ್ಗದಿ ನಡೆದು |ಜ್ಞಾನವ ಪರರಿಗೆ ಹೇಳುವನ 1 ಸತಿಸುತರತಿಶಯ ಹಿತವರು ಎನುತಲಿ | ಸತತವು ಅವರೊಳುಮರಗುವನ | ಮಿತಿಯಿಲ್ಲದೆ ಧನಧಾನ್ಯವ ಬೇಡುತ |ಕ್ಷಿತಿಯ ಮೇಲೆ ತಿರುಗುವನ2 ಕರುಣವ ಪಡೆಯದೆ ಭವತಾರಕನ | ನರ ತನುಗಳನುಸ್ತುತಿಸುವನ | ಪರಿಪರಿ ಸಂಸಾರದ ವಿಷಯದಲಿ |ನಿರುತದಿ ಮನವನು ಮಥಿಸುವನ 3
--------------
ಭಾವತರಕರು
ಮೊದಲನೇ ಅಧ್ಯಾಯ ಪಾತಿವ್ರತ್ಯ ಮಹಾತ್ಮೆ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಬೋಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ನಿರ್ದೋಷ ಗುಣಪೂರ್ಣ ವಿಷ್ಣು ಸರ್ವೋತ್ತಮ ಸ್ವತಂತ್ರ ಶ್ರೀದ ಶ್ರೀಪತಿ ಜಗಜ್ಜನ್ಮಾದಿಕರ್ತನು ಸಚ್ಛಾಶ್ರ - ದಿಂದಲೇ ವೇದ್ಯನು ಮೂರು ವಿಧ ಜೀವರಿಗೆ ಯೋಗ್ಯ ಸಾಧನಕೆ ಗತಿಯ ಮಾಡುವ ಅವತಾರ ಲೀಲಾ 1 ಸುಪುಷ್ಪಭವ ಬ್ರಹ್ಮದೇವನೋಳ್ ತತ್ ಶಬ್ದವಾಚ್ಯನು ಶ್ರೀ ಪುರುಷೋತ್ತಮನೆ ಪ್ರಜಾಸೃಷ್ಟಿ ಮಾಡಿಸುವನು ತ್ರಿಪುರಾರಿ ಭಸ್ಮಧರ ರುದ್ರನೋಳ್ ತನ್ನಾಮದಲಿ ಶ್ರೀ ಪುರುಷೋತ್ತಮನೇ ಸಂಹಾರ ಮಾಳ್ಪ ಅಂತರ್ಯಾಮಿ 2 ಉರುಜ್ಞಾನ ಸುಖ ಬಲಾದ್ಯಮಿತ ಗುಣಧಾಮನ ಕರ ಚರಣಾದ್ಯವಯವಕ್ಕೂ ಅವಗೂ ಅವನು ಧರೆಯಲ್ಲಿ ಅವತಾರ ಮಾಡುವ ರೂಪಗಳಿಗೂ ಪರಿಪೂರ್ಣವಾಗಿ ಅಭೇದ ಭೇದಲೇಶವೂ ಇಲ್ಲ 3 ದ್ವಿ ಷೋಡಶ ಶುಭಲಕ್ಷಣ ತನುವುಳ್ಳ ಬ್ರಹ್ಮಗೂ ವಿಷಕಂಠ ರುದ್ರಗೂ ಪರಸ್ಪರ ಭೇದ ಅಂತಸ್ಥ ವಿಷ್ಣುಗೂ ಇವರುಗಳಿಗೂ ಭೇದವು, ಅಂತರ್ಯಾಮಿ ವಿಷ್ಣು ಒಬ್ಬನೇ ದ್ವಿರೂಪದಲ್ಲಿ ಇವರಲ್ಲಿಹ 4 ಹತ್ತಾವತಾರ ಮತ್ಸ್ಯಾದಿರೂಪಗಳು ಮಾತ್ರವಲ್ಲ ಅನಂತರೂಪನು ಅನಂತಗುಣ ಕ್ರಿಯಾವಂತನು ಕ್ಷಿತಿಯಲ್ಲಿ ಬಲಕಾರ್ಯಕ್ಕೆ ಕೆಲವು ಅವತಾರ ಹಿತಕರ ಹಲವು ಜ್ಞಾನಬೋಧಕ್ಕೇವೇ ಕೆಲವು 5 ಧ್ಯಾತ್ಮನು ಜ್ಞಾನಕಾರ್ಯಕ್ಕಾಗಿ ಅವತರಿಸುವನು ಶ್ರೀಮಾನ್ ಹಯಗ್ರೀವ ಸನತ್ಕುಮಾರ ದತ್ತ ಕಪಿಲ ಧೀಮಾನ್ ಪರಾಶರ ವಾಸವೀಸೂನು ಐತರೇಯಾದಿ 6 ದ್ವಾಪರದಲ್ಲೇವೆ ಅಲ್ಲಲ್ಲಿ ಕಲಿವಿಷ ಹರಡಿ ತಪೋಧನರು ಗೌತಮರು ಶಪಿಸೆ ಜ್ಞಾನಕುಂದೆ ಶ್ರೀಪ ವೇದವ್ಯಾಸ ಜ್ಞಾನ ತೇಜಃಪುಂಜ ಬಂದು ತೋರಿ ಆ ಪೀಡಿಸುವ ಅಜ್ಞಾನ ತರಿದು ಸಜ್ಞಾನ ಇತ್ತ 7 ಹಿಂದೆ ಬ್ರಹ್ಮದೇವರಾಜÉ್ಞಯಿಂ ಅತ್ರಿಋಷಿವರ್ಯರು ನಿಂತರು ಋಕ್ಷಗಿರಿಯಲ್ಲಿ ಅಪತ್ಯಾಪೇಕ್ಷೆಯಿಂದ ಅದ್ಭುತ ತಪವಚರಿಸಿ ಜಗದೀಶ್ವರ ಸಮ - ಪುತ್ರ ಕೊಡೆ ಚಿಂತಿಸಿ ಹರಿಯಲ್ಲಿ ಶರಣಾದರು 8 ಹರಿ ತಾನು ತನ್ನ ಅಧಿಷ್ಟಾನರಾದ ಬ್ರಹ್ಮೇಶ್ವರ ಕರಕೊಂಡು ಋಷಿ ಮುಂದೆ ನಿಂತು ಯುಕ್ತಮಾತನ್ನಾಡಿ ಮೂರು ಮಂದಿಗಳು ತಾವು ಪುತ್ರರಾಗುವೆವು ಎಂದ ತರುವಾಯ ತಾನಿತ್ತ ವರವ ಒದಗಿಸಿದನು 9 ಭಾಗವತ ಈ ವಿಷಯ ಒಳಗೊಂಡು ಇಹುದು ಪತಿ ವೇದವ್ಯಾಸ ಸಂಕೃತ ಈ ಭೂರಾದಿ ಜಗತ್ತಿನಲ್ಲಿ ಪ್ರಖ್ಯಾತ ಪುರಾಣಂಗಳೊಳ್ ಶ್ರೀ ಭಗವಾನ್ ದತ್ತಾತ್ರಯನ ಅವತಾರವು ವೇದ್ಯ 10 ಗೀರ್ವಾಣ ಛಂದಸ್ಸು ಅಷ್ಟಿಯಲಿ ಬರೆಯುವದೆಂದು ಶ್ರೀವರನ ಹಿತಾಜÉ್ಞಯಿಂ ಪ್ರಸನ್ನ ಶ್ರೀನಿವಾಸೀಯ ಶ್ರೀವಿಷ್ಣು ಸಹಸ್ರನಾಮ ಭಾಷ್ಯ ಕನ್ನಡದಲ್ಲಿ ಅಳವಡಿಸಿದಂತೆ ಅಷ್ಟೀ ಛಂದಸ್ಸಲಿ ಈ ಗ್ರಂಥವ 11 ಈ ಗ್ರಂಥದಲಿ ಶ್ರೀಭಾಗವತವು ಮಾರ್ಕಂಡೇಯವು ಭಾಗವತರಿಗೆ ಉಪಾಸನಾ ಹೇತು ಪಂಚರಾತ್ರ ಆಗಮವು ಒಳಗೊಂಡ ವಿಷಯಗಳು ಇವೆಯು ಕಾಯ ಶುದ್ಧಿಯಿಂ ಪಠಣೀಯವು 12 ಗುರುಮಂತ್ರ ಉಪದೇಶವಿಲ್ಲದಂತಹ ಸ್ತ್ರೀ ಜನ ಶೂದ್ರರು ಬ್ರಹ್ಮಬಂಧುಗಳು ಈ ಗ್ರಂಥ ಪಠಿಸಲು ಹರಿಭಕ್ತ ಸಾಧು ವೈದಿಕ ಬ್ರಾಹ್ಮಣರ ಅಪ್ಪಣೆ ಕೋರಿ ಅವರ ಅಪ್ಪಣೆಯಿಂದ ಓದಬಹುದು 13 ಪ್ರತಿಷ್ಠಾನಪುರದಲ್ಲಿ ಕೌಶಿಕಾಹ್ವಯ ದ್ವಿಜನು ವ್ಯಾಧಿ ಪೀಡಿತನು ಕುಷ್ಠಿ ನಡಮಾಡಲು ಅಶಕ್ತ ಆತನ ಪತ್ನಿಯು ಸಾಧುಗುಣವತಿ ಬಲುಶ್ರೇಷ್ಠ ಪತಿ ಹೇಳಿದಂತೆ ನಡೆಯುವಳು 14 ಒಂದು ದಿನ ಆ ಬ್ರಾಹ್ಮಣನು ನೋಡಿದ ಬಾಗಿಲಾಚೆ ಬೀದಿಯಲಿ ಹೋಗುತ್ತಿದ್ದ ಸುಂದರಿ ವೇಶ್ಯೆಯೋರ್ವಳಲಿ ಸೋತು ಮನ ಅವಳನ್ನು ತಾನು ಹೊಂದಬೇಕೆನ್ನಲು ಸಾಧ್ವಿಸತಿ ಪತಿಯನ್ನು ಎತ್ತಿದಳು ಸೊಂಟದಲಿ 15 ರಾತ್ರಿ ಕತ್ತಲೆಮಾರ್ಗ ತಿಳಿಯದಲೆ ಪತಿಯನ್ನು ಹೊತ್ತುಕೊಂಡು ಹೋಗುವಾಗ ಪತಿಯ ಕಾಲು ತಾಕಿತು ಹಾದಿಯಲ್ಲಿ ಕಬ್ಬಿಣ ಸಲಾಕದಲ್ಲಿ ಚುಚ್ಚಿಸಿ ಇದ್ದ ಕಟಿ ಸಮೀಪ ಹಾಹಾ 16 ಅನ್ಯಾಯದಿ ಆ ರಾಜ್ಯದರಸ ಆ ಮಹಾಮುನಿಯ ಧನಚೋರನೆಂದು ಶೂಲಕ್ಕೆ ಹಾಕಿಸಿದ್ದ ಆ ಶೂಲ ಕಾಣದೇ ಕೌಶಿಕನ ಕಾಲ್ತಗಲಿ ಬಲು ನೋವಾಗಿ ಮುನಿ ಶಾಪವಿತ್ತರು ಸೂರ್ಯೋದಯಲ್ಲೇ ಸಾಯೆಂದು 17 ಹಾಹಾ ಇದು ಏನು ಮುನಿಗಳಿಗೆ ನೋವಾಯಿತಲ್ಲಾ ಮಹಾತ್ಮರ ಶಾಪ ವೀಣಾಗಲಾರದು ಮಾಂಗಲ್ಯವ ಪತಿ ಅಂತಸ್ಥ ಶ್ರೀಹರಿಯ ಸ್ಮರಿಸಿ ಆ ಪತಿವ್ರತೆ ಹೇಳಿದಳು 18 ಸೂರ್ಯೋದಯವಾಗದಿದ್ದರೆ ಶಾಪವು ಫಲಿಸದು ಸೂರ್ಯೋದಯವಾಗಬೇಡಿ ಎಂದು ಹೇಳಿದಳು ಸಾಧ್ವಿ ಆರ್ಯಧರ್ಮ ಲೋಕಕಾರ್ಯ ಸರ್ವವೂ ಸ್ತಬ್ಧವಾದವು ಎಲೆಲ್ಲೂ ಕತ್ತಲೆಯು ಭಾನು ಉದಯಿಸಲಿಲ್ಲ 19 ಇಂದ್ರಾದಿ ದೇವರ್ಗಗಳು ಬ್ರಹ್ಮನಲಿ ಮೊರೆಯಿಡಲು ಪತಿವ್ರತೆ ಮಹಾತ್ಮನೆ ಮತ್ತೊಬ್ಬ ಪತಿವ್ರತೆಯೇ ಪ್ರತಿ ಮಾಡುವಳು ಅತ್ರಿಋಷಿ ಪತ್ನಿ ಅನಸೂಯಾ ಪತಿವ್ರತಾ ರತ್ನಳಾ ಸಹಾಯ ಕೇಳೆಂದರು ವೇಧ 20 ಶಕ್ರಾದಿ ಸುರರುಗಳು ಅನಸೂಯಾದೇವಿಯಲಿ ಕೋರಿಕೆ ಮಾಡಲು ಆಕೆ ದೇವತೆಗಳ ಸಮೇತ ಧೀರ ಪತಿವ್ರತೆಯಾದ ಕೌಶಿಕಾ ಗೃಹಕೆ ಹೋಗಿ ಪರಿಚಯ ಮಾಡಿಕೊಂಡು ಕೊಂಡಾಡಿದಳಾ ಸಾಧ್ವಿಯ 21 ಮಹಾಭಾಗರು ಇಂದ್ರಾದಿಗಳಿಗೂ ಅನಸೂಯಗೂ ವಿಹಿತೋಪಚಾರ ಪೂಜಾದಿಗಳ ಮಾಡಿ ಆ ಸಾಧ್ವಿ ಮಹಾಭಾಗ್ಯ ಆಗಮನ ಎನ್ನುತ್ತ ಕಾರಣವನು ಬಹು ಹಿತದಲಿ ಕೇಳಿದಳು ತನ್ನ ಸ್ಥಿತಿ ಹೇಳಿ 22 ಸೂರ್ಯ ಉದಿಸುವದಕ್ಕೆ ಪತಿ ಬದುಕಿಸಲ್ಪಡುವನು ಎನ್ನುತೆ ಕೌಶಿಕಾ ಸಾಧ್ವಿಯು ಅನುಮೋದನೆ ಕೊಂಡು ಇನ ಉದಿಸಲಿ ಎಂದ ಅಘ್ರ್ಯ ಕೊಟ್ಟಳು ಮುದದಿ 23 ಸೂರ್ಯ ಮುನಿಶಾಪ ಫಲಿಸಿತು ಬಿದ್ದ ಕೆಳಗೆ ಕೌಶಿಕ ತತ್‍ಕ್ಷಣವೇ ಬದುಕಿ ಎದ್ದ ಪತಿವ್ರತಾ ಶಿರೋಮಣಿ ಅನಸೂಯಾ ದೇವಿ ಪ್ರಭಾವ ಪತಿವ್ರತಾ ಮಹಾತ್ಮೆ ಜ್ವಲಿಸಿತು ಲೋಕದಲ್ಲಿ 24 ಕೌಶಿಕನ್ನ ಬದುಕಿಸಿದ್ದು ಮಾತ್ರವಲ್ಲದೇ ಸರ್ವ ಕುಷ್ಠಾದಿ ರೋಗ ಪರಿಹರಿಸಿ ಯುವವಾಗಿ ಮಾಡಿ ಅಯುಷ್ಯ ಬಹುನೂರು ವರ್ಷಗಳ ಅನುಗ್ರಹಿಸಿ ತುಷ್ಠಿ ಸುಖಜೀವನ ಒದಗಿಸಿದಳ್ ಅನಸೂಯಾ 25 ಅನಸೂಯೆಯ ಪಾತಿವ್ರತ್ಯ ಮಹಾತ್ಮೆಯ ಶ್ಲಾಘಿಸಿ ಏನು ವರ ಕೇಳಿದರೂ ಕೊಡುವವೆಂದು ಸುರಪ ಆನಿಮಿಷರು ಹೇಳಲು ಪತಿವ್ರತಾ ಶಿರೋಮಣಿ ವಿಧಿ ಶಿವ ತನ್ನಲ್ಲವತರಿಸಲೆಂದಳು 26 ತಥಾಸ್ತು ಎಂದ ದೇವತೆಗಳ ವರ ಸತ್ಯಮಾಡೆ ಸುತಪಸ್ವಿ ಅತ್ರಿಗೆ ಹಂಸ ವೃಷಾರೂಡರು ಪ್ರತ್ಯಕ್ಷದಿ ಹೇಳಿದಂತೆಯೂ ಅನಸೂಯ ಅತ್ರಿಗೆ ಪುತ್ರರೆಂದುದಿಸಿದರು ಸೋಮಸ್ತ ಬ್ರಹ್ಮೇಶ ವಿಷ್ಣು 27 ಮುಖ್ಯಪ್ರಾಣಾಂತರ್ಗತನೇ ಪಂಕಜಾಸನ ಪಿತನೆ ಶ್ರೀಕರಾರ್ಚಿತ ಶ್ರೀಪ್ರಸನ್ನ ಶ್ರೀನಿವಾಸ ಕಪಿಲ ಅರ್ಕಕೋಟ್ಯಾಮಿತ ತೇಜನೇ ಬ್ರಹ್ಮಾದ್ಯಮರ ಗುರೋ ಜಗದೀಶ ದತ್ತಾತ್ರಯನಮೋ ಪ್ರಿಯತಾಂ ಶರಣು 28 ಎರಡನೇ ಅಧ್ಯಾಯ ಶ್ರೀ ದತ್ತಾತ್ರಯ ಪ್ರಾದುರ್ಭಾವ ಸಾರ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಭೋಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ಬ್ರಹ್ಮಾವಿಷ್ಟನು ಸೋಮ ಔಷಧಿಗಳ ರಾಜನಾದ ಉನ್ಮಾದ ಚರ್ಯದಿ ಕೋಪ ಪ್ರಕಟಿಸಿ ಮೆರೆವರು ತಮ್ಮ ಶಿಷ್ಯರೊಡಗೂಡಿ ಶಿವಾವತಾರ ದೂರ್ವಾಸ ಸುಮ್ಮನಸ ಸಜ್ಜನ ಹಿತರು ದುಷ್ಟನಿಗ್ರಹರು 1 ತನ್ನನ್ನ ತಾನೇ ಸುತನಾಗಿ ದತ್ತಮಾಡಿಕೊಂಡನು ವಿಷ್ಣು ಅತ್ರಿ ದಂಪತಿಗೆ ಆದ ಕಾರಣ ಪ್ರಖ್ಯಾತೆ ಉನ್ನಾಮ ದತ್ತಾತ್ರಯ ಕ್ಷೋಣಿ ಯೋಗ್ಯಾಧಿಕಾರಿಗಳಿಂ ಘನಭಕ್ತಿಯಿಂ ಶುಚಿಯಿಂ ಜಪ್ಯ ಸ್ಮರಣೀಯಿಂ ಶ್ರೋತವ್ಯ ಜಯತು 2 ಕಲ್ಯಾಣತಮ ಪೂರ್ಣ ಅಮಲ ಗುಣಗಣ ಸಿಂಧು ಮಾಲೋಲ ಶ್ರೀವಕ್ಷ ಶ್ರೀಶನೇ ಪ್ರಾದುರ್ಭವಿಸಿದನು ಚೆಲುವ ಅನುಪಮ ಸೌಂದರ್ಯಸಾರ ಸರ್ವೋತ್ತಮ ಲೀಲಾನಂದಮಯ ಚಿನ್ಮಾತ್ರಗಾತ್ರ ಭಕ್ತೇಷ್ಟದಾತ 3 ಕಮಲಾಸನಾವಿಷ್ಟ ಸೋಮ ರುದ್ರಾವತಾರ ದೂರ್ವಾಸ ತಮ್ಮ ತಮ್ಮ ಉದ್ಯೋಗಸಾಧನಕೆ ಬೇರೆ ಬೇರೆ ಹೋಗೆ ಸುಮನೋಹರ ರೂಪ ಶ್ರೀಮನೋರಮ ದತ್ತಾತ್ರಯ ಸುಮಹಾ ಯೋಗಿಯಾದ ನಿಸ್ಸಂಗ ಯೋಗೇಶ್ವರೇಶ್ವರ 4 ಅತ್ರೇಯರು ಮೂವರು ಹೀಗೆ ಬೇರೆ ಬೇರೆಯಾಗಿಯೇ ತಮ್ಮ ತಮ್ಮ ರೂಪದಲ್ಲೇ ಇದ್ದರು ಒಂದಾಗಿ ಅಲ್ಲ ಸೋಮ ಶಿವ ದತ್ತರಿಗೆ ಬೇರೆ ಬೇರೆ ಮಂತ್ರವುಂಟು ಸೋಮ ಪಂಚ ಶಿವ ಪಂಚ ದತ್ತ ನವಅಕ್ಷರವು 5 ಪ್ರೋದ್ಯ ದಿವಾಕರ ಪೋಲ್ವ ವರ್ಣವುಳ್ಳ ಶುಭಗಾತ್ರ ಆದಿತ್ಯ ಸಹಸ್ರಾಮಿತ ಮಹೋತ್ಕøಷ್ಟ ತೇಜಃಪುಂಜ ವ್ಯಾಪ್ತ ಸರ್ವತ್ರ ಜ್ಞಾನಾಭಯಕರನು ಬ್ರಹ್ಮಾದಿ ತ್ರಿದಿವ ಸುಬೋಧಕನು ಕಪಿಲನು ದತ್ತಾತ್ರಯ 6 ಇಂಥ ಮಹಾಮಹಿಮನು ಕಪಿಲ ದತ್ತಾತ್ರಯನು ಅಧಿಕಾರಿಗಳಿಗೆ ಅಪರೋಕ್ಷಜ್ಞಾನ ಮೋಕ್ಷದಾತ ಶ್ರೋತೃ, ಮಂತ್ರ, ಧ್ಯಾತೃಗಳಿಗೆ ಕಪಿಲ ದತ್ತಾತ್ರಯ ಭಕ್ತಿ ಮೆಚ್ಚಿ ಸದಾ ಸಂರಕ್ಷಿಸಿ ಇಷ್ಟಾರ್ಥ ಕೊಡುವ 7 ಪದ್ಮ ಭವಾದ್ಯಮರರಿಂ ಧ್ಯಾತ ದತ್ತಾತ್ರಯ ಹರಿ ಮೇದಿನಿ ನರರಂತೆ ಅವತಾರ ಲೀಲೆ ಚರಿಸಿ ಅದ್ಭುತ ಯೋಗಾನುಷ್ಠಾನದಿ ಇರುತಿರೆ ಜನರು ಈತನ ಸೌಂದರ್ಯ ಯೋಗಸಾಮಥ್ರ್ಯ ಹೊಗಳಿದರು 8 ಸಹಸ್ರಾರು ಋಷಿಪುತ್ರ ಬ್ರಹ್ಮಚಾರಿಗಳು ಬಂದು ಅಹರ್ನಿಶಿ ಯೋಗೇಶ್ವರೇಶ್ವರ ದತ್ತನಾಶ್ರಮದಿ ಬಹಳುತ್ಸಾಹದಲಿ ಸುತ್ತು ಮುತ್ತು ಗುಂಪುಗೂಡಿ ಮಹಾಯೋಗಾಭ್ಯಾಸಕ್ಕೆ ಚ್ಯುತಿಯ ಕಲ್ಪಿಸಿದರು 9 ಯೋಗ್ಯರು ಸಜ್ಜನರು ಈ ಭಕ್ತ ಋಷಿಕುವರರು ಯೋಗ್ಯಸಾಧನೆ ಅವರವರ ಆಶ್ರಮದಲ್ಲಿಯೇ - ಗೈಯಲಿ ಬೇಕೆಂದು ಅವರುಗಳು ಹೋಗೋ ಉಪಾಯ ನಿಶ್ಚೈಸಿ ಮುಳುಗಿದ ದತ್ತನು ಸರೋವರದೊಳು 10 ಸುರಮಾನದಿ ಸಾವಿರವರ್ಷ ಭಗವಾನ್ ದತ್ತನು ಸರೋವರದೊಳಿದ್ದನು ಹೊರಜನಕ್ಕೆ ಕಾಣದೆ ಆ ಋಷಿಪುತ್ರರು ತೀರದಲಿ ಇಕೋ ಈಗ ನಾಳೆ ಬರುವನು ಮೇಲೆ ಎಂದು ಕಾಯುತ್ತಿದ್ದರು ದೃಢದಿ 11 ಜಲಧಿ ಉಕ್ಕಿ ಹರಿದು ಕ್ಷೋಣಿಯ ಮುಳುಗಿಸದೆ ಜಲಮಧ್ಯ ತಾನಿದ್ದು ಕಾಯುವ ವಡವಾ ಮುಖಾಗ್ನಿ ಜಲಮಧ್ಯದಿ ಈಗ ಹೊಕ್ಕಿರುವ ದತ್ತಾತ್ರಯನು ಮುಳುಗಿರುವುದು ಆಶ್ಚರ್ಯವಲ್ಲ ಈರ್ವರೂ ಏಕ 12 ಬಲುದೀರ್ಘ ದೇವವರ್ಷಗಳು ಸಾಸಿರವಾದರೇನು ಶೀಲತಮ ವರವಾಯುವು ವರುಣನು ಬುಧಾದಿ ಜಲಾಭಿಮಾನಿಗಳು ಕಿಂಕರರಾಗಿ ಇರುತಿಹರು ಜಲಶಾಯಿ ನಾರಾಯಣ ಅವತಾರ ದತ್ತನಿಗೆ 13 ಒಂದು ದಿನ ಕೆರೆನೀರು ಚಲಿಸಲು ಸಂತೋಷದಿ ಬಂದರೂ ಬಂದರೂ ಎಂದು ಕೂಗೆ ಋಷಿಕುವರರು ಇಂದಿರಾಪತಿ ದತ್ತ ಮೇಲೆದ್ದು ಬಂದ ಬದಿಯಲ್ಲಿ ಇಂದಿರಾಂಗಿ ನಾರೀಮಣಿ ಓರ್ವಳ ಆಲಿಂಗಿಸುತ 14 ಯಾರನ್ನೂ ಲೆಕ್ಕಿಸದೆ ಕಾಮವಿಲಾಸ ಕೇಳಿಯ ಆ ಸ್ತ್ರೀಯೊಡನೆ ಮಾಡುತ್ತಿದ್ದುದು ಕಂಡು ಯುವಕರು ಯೋಗಿ ಹೀಗಾದರೆ ಎನ್ನುತ ತ್ವರಿತ ತೆರಳಿದರು ಜುಗುಪ್ಸೆಯಲ್ಲಿ ತ್ಯಜಿಸಿ 15 ಆ ಪುಣ್ಯವಂತ ಋಷಿಪುತ್ರರು ತಿಳಕೊಳ್ಳಲಿಲ್ಲ ಆ ಸ್ಛುರದ್ರೂಪಿಣಿ ನಾರಿ ಸಾಕ್ಷಾತ್ ಲಕ್ಷ್ಮೀದೇವಿಯೆಂದು ವಿಪುಲ ಮನ ಹರುಷ ತೋರಿಸಿ ದತ್ತಾತ್ರಯನು ಕೈಪಿಡಿದು ಲಕ್ಷ್ಮಿಯ ಕರೆದುಹೋದ ಆಶ್ರಮಕೆ 16 ಯಾವ ತನ್ನಾಶ್ರಮದಿ ಸ್ವಾಧ್ಯಾಯ ಪ್ರವಚನಗಳ್ ದಿವ್ಯ ಯೋಗ ಅಭ್ಯಾಸ ಶಿಷ್ಯರ್ಗೆ ಶೀಕ್ಷಾದಿಗಳ್ ಯಾವಾಗಲೂ ಹಿಂದೆ ನಡೆಸುತ್ತಿದ್ದನೋ ಅಲ್ಲಿ ಈಗ ದೇವಿಯೊಡನೆ ಲೀಲಾವಿಲಾಸಗಳ ತೋರಿಸಿದ 17 ಮಂದ ಧೀಗಳು ಈ ವಿಡಂಬನೆ ಕಂಡು ಮೋದದಲಿ ಶ್ರೀದತ್ತ ಈ ರೀತಿ ಆದನಲ್ಲಾ ಎಂದು ಮಾತನಾಡೆ ಸುಧೀಗಳು ಬೃಹಸ್ಪತ್ಯಾದಿಗಳು ದತ್ತಾತ್ರಯನು ಮೋದಚಿನ್ಮಯ ನಿರ್ದೋಷ ಹರಿ ಶ್ರೀಶನೆ ಎಂದರÀು 18 ಮುಖ್ಯಪ್ರಾಣಾಂತರ್ಗತನೇ ಪಂಕಜಾಸನ ಪಿತನೆ ಶ್ರೀಕರಾರ್ಚಿತ ಶ್ರೀಪ್ರಸನ್ನ ಶ್ರೀನಿವಾಸ ಕಪಿಲ ಅರ್ಕಕೋಟ್ಯಮಿತ ತೇಜನೇ ಬ್ರಹ್ಮಾದ್ಯಮರ ಗುರೋ ಜಗದೀಶ ದತ್ತಾತ್ರಯ ನಮೋ ಪ್ರಿಯತಾಂ ಶರಣು 19 -ಇತಿ ಎರಡನೇ ಅದ್ಯಾಯ ಸಂಪೂರ್ಣಂ - ಮೂರನೇ ಅದ್ಯಾಯ ಸಂಪತ್‍ಲಕ್ಷ್ಮೀ ವೃತ್ತಾಂತ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಬೊಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ಸುರಪ ಜಂಭಾಸುರನಿಂದ ಅಪಜಯವ ಕೊಂಡು ಸುರಗುರು ಪ್ರೇರಣೆಯಿಂ ದತ್ತಾತ್ರಯನಲಿ ಹೋಗಿ ಶರಣು ಹೊಕ್ಕು ಸೇವಗೈಯಲು ಆಗ ಅವನನ
--------------
ಪ್ರಸನ್ನ ಶ್ರೀನಿವಾಸದಾಸರು
ಮೊರೆ ಕೇಳು ನೀನೆನ್ನ ಕರುಣದಿ ತವಪಾದ ಪರಮಭಕ್ತಗಗೊಲಿಸದಿರು ದೇವ ಚರಣದಾಸರ ಕಾವ ಸಿರಿಯ ಸಖಜೀವ ಪ ಕ್ಷಿತಿಯೊಳು ಸತಿಸುತರತಿ ಮೋಹರತಿಯೊಳು ಮತಿಶೂನ್ಯನೆನಿಸಧೋಗತಿಗೆಳೆಸದೆ ಪತಿತಪಾವನ ನಿಮ್ಮ ಶ್ರುತಿಭೋದ್ವ್ಯಾಕ್ಯದಭಿ ರತಿಯನೆನ್ನೊಡಲೊಳು ನೆಲೆಸೀಶಾ ಹತಕಂಸ ಸುರತೋಷಾದ್ವಿತಿ ಪಂಚಶಿರ ನಾಶ 1 ವಿಷಯ ವಾಸನದೇಳಸ್ವಿಷಮ ಸಂಸಾರವೆಂಬ ಮುಸುಕಿದ ಮಡುವಿನೊಳ್ಮುಳುಗಿಸಿದೆ ವಸುಧೆಯೊಳಸೆವ ಆ ಅಸಮಹಿಮನ ಪಾದ ದಾಸರ ಸಂಗ ನೀಡ್ವಿಮಲಾಂಗ ಭಂಗ ಕುಸುಮಾಕ್ಷ ಕೃಪಾಂಗ 2 ಮದನಕದನದಿ ಮುದಸುಖವಿಧಿಸಗ ಲ್ಹೋದ ಸುದತಿಯಳ ನೆನೆವಂತೆ ಪಾದ ಸದುಭಕ್ತಿ ಹಂಬಲ ಅಗ ಲದಿರಿಸು ರಘುಕುಲಸೋಮ ಸದುಭಕ್ತರ ಪ್ರೇಮ ಸುದಯನೆ ಶ್ರೀರಾಮ3
--------------
ರಾಮದಾಸರು
ಯತಿಗಳು ಟೀಕಾಚಾರ್ಯರು ಜಯರಾಯಾ ಜಯರಾಯಾ ಪ ದಯಕರ ಸಜ್ಜನಭಯಹರ ಗುರುವರ ಅ.ಪ ವಾಸವ ನೀ ವಸುಧೀಶನ ನಿಜ ಕೂಸೆನಿಸೀಪರಿ ದೇಶದಿ ಮೆರೆದೆ 1 ಸತಿಯಳ ತ್ಯಜಿಸಿ ಯತಿರೂಪ ಧರಿಸಿ ಪÀತಿತರ ಶಾಸ್ತ್ರವ ಹತಮಾಡಿದಿ ನೀ 2 ಸುಧಾದಿಗ್ರಂಥವ ಮುದದಲಿ ರಚಿಸಿ ಬುಧಜನಸ್ತೊಮಕೆ ಒದಗಿಸಿ ಕೊಟ್ಟಿ3 ಅಲವಬೋಧರ ಮತ ಬಲವತ್ತರಮಾಡಿ ಜಲಜನಾಭನ ಮನ ಒಲಿಸಿದ್ಯೊ ಜೀಯಾ 4 ಪ್ರಮಿತಜನಗಣನಮಿತ ಪದಾಂಬುಜ ಅಮಿತಮಹಿಮ ನಿನ್ನ ನಮಿಸುವೆ ದಿನದಿನ 5 ಯಾತಕೆ ಎನ್ನನು ಈ ತೆರನೋಡುವಿ ದಾತಗುರುಜಗನ್ನಾಥ ವಿಠಲ ಪ್ರೀಯ6
--------------
ಗುರುಜಗನ್ನಾಥದಾಸರು
ಯಾಕೆ ಜೀವನವೆ ನೀ ಶ್ರೀಕಾಂತನನು ಮರೆವಿ | ವಿವೇಕವೇ ನಿನಗಿದು ? ಪ ಜೋಕೆಯಿಂದಲಿ ನಿನ್ನ ಸಾಕುವ ಶ್ರೀ ಹರಿಯು | ಬೇಕಾದ ವರವೀವ ಭಕ್ತವತ್ಸಲ ದೊರೆಯಾಅ.ಪ ಲೇಸಾದರು ವಿಷಯದಾಸೆಯ ಬಿಡಲೊಲ್ಲಿ | ಏಸು ಜನ್ಮಂಗಳಾದರು ಈ ಶರೀರವು ನಿನ್ನದೆಂದು ತಿಳಿದು || ಪೋಷಿಸುವಿಯೊ ಬರಿದೆ ದೋಷರಹಿತ ಶ್ರೀನಿ- | ವಾಸನ್ನ ನೆನೆದು ನಿರ್ದೋಷವ ಕಳೆದೆನ್ನ ಪೋಷಿಸು ಎನ್ನದಲೆ 1 ಸತಿ-ಸುತರನು ನೀನು ಸಲಹುವೆನೆನುತಲಿ | ಅತಿ ಚಿಂತೆ ನಿನಗ್ಯಾತಕೊ ಗತಿ ನಿನಗಾಗುವ || ಹಿತಚಂತನೆ ಮಾಡೊ ಸದ್ಗತಿಯಾಗುವ ತನಕ | ರತಿಪತಿ ಪಿತನ ನೆನೆದು ನೀ ಪ್ರತಿಕ್ಷಣ ಹರಿಕಥೆ ಕೇಳದಲೆ2 ಪೊಟ್ಟೆಗೋಸುಗ ಭ್ರಷ್ಟರ ಸ್ತುತಿಸಿ ನೀ | ಕೆಟ್ಟು ಪೋಗುವಿ ಯಾತಕೋ ಜೀವನವೆ || ಪುಟ್ಟಿಸಿದವ ನಿನ್ನ ಪೊಟ್ಟೆಗೆ ಕೊಡನೇನೋ | ಕೆಟ್ಟುಹೋಗದೆ ವಿಜಯವಿಠ್ಠಲನ್ನ ನೆನೆದು ಸುಖಿಯಾಗು3
--------------
ವಿಜಯದಾಸ
ಯಾಕೆ ಜೀವನೆ ಒಣ ಉಸಾಬರಿ ನಿನ ಗ್ಯಾಕೆ ಲೋಕದ ಸುಳ್ಳೆ ಕಿರಿ ಕಿರಿ ಪ ಪಾದ ಬಿದ್ದು ಮೊರಿ ಪರ ಲೋಕ ಪದವಿ ಸಂಪಾದಿಸಿ ಮೆರಿ ಅ.ಪ ಇಷ್ಟಬಂಧು ಸತಿಸುತರೆಲ್ಲ ನೀನು ಬಿಟ್ಟು ಹೋಗ್ವಾಗ್ಯಾರು ದಿಕ್ಕಿಲ್ಲ ಎಷ್ಟು ಸಂಪಾದಿಸಿದ ಗಳಿಕೆಲ್ಲ ನೀನು ಕಟ್ಟಿಕೊಂಡು ಸಂಗಡೊಯ್ಯೋಣಿಲ್ಲ ಕುಟ್ಟಿ ಯಮದೂತರು ಕಟ್ಟಿ ಎಳೆಯುವಾಗ ನೀ ಗಟ್ಟಿ ಮಾಡಿದ್ದು ಎಲ್ಲ ಬಟ್ಟಬೈಲೆ 1 ಯಾರು ಮೆಚ್ಚಿದರು ಫಲವಿಲ್ಲ ನಿನ ಗ್ಯಾರು ಮುನಿದರೇನು ಕೆಡುಕಿಲ್ಲ ನೀರಮೇಲಿನ ಲಿಪಿಯಂತೆಲ್ಲಜಗ ಸಾರ ಸುಳ್ಳು ಖರೆವೊಂದಿಲ್ಲ ತೋರುವ ಬಿಸಿಲಿನ ವಾರಿಯಂತೆ ಮಾಯಾ ಕಾರ ತಿಳಕೋ ತೋರುವುದೆಲ್ಲ 2 ಬಂದಿ ಇಲ್ಲಿಗೆ ಬಹಳ ಲಗುಮಾಡಿ ಮತ್ತೆ ಮುಂದೆ ಹೋಗುವುದೆಲ್ಲಿ ತಿಳಿ ಮಂದನಾಗದೆ ಚಾಚಿ ಜ್ಞಾನಕುಡಿ ಅಲ್ಲಿ ನಿಂದು ನೋಡು ನಿಜ ಹುಡುಕಾಡಿ ಇಂದಿನ ಸಮಯವು ಮುಂದೆ ಸಿಗುವುದೇನೋ ತಂದೆ ಶ್ರೀರಾಮಪಾದಕ್ಹೊಂದಿ ಮುಕ್ತಿಯ ಪಡಿ3
--------------
ರಾಮದಾಸರು
ಯಾಕೆ ಬಾರನಕ್ಕಯ್ಯ ಎನ್ನಯ ಪ್ರಾಣನಾಥನ ಕರೆತಾರೆ ಸೈರಿಸಲಾರೆ ಪ. ಸೋಗೆಗಂಗಳ ಸನ್ನೆ ಮಾಡಿ ಪೊಳೆದು ಪೋದ ಮೇಘದ ಮಿಂಚಿನಂತೆ ಮಂದರೋದ್ಧಾರ ಬಾಗಿದ ಮುಖವೆತ್ತಿ ಎನ್ನ ನೋಡದೆ ಪೋದ ಹ್ಯಾಂಗ ಮಾಡಲಿ ಸಖಿಯೆ ಹೇಳಲಿ ಪ್ರಿಯೆ 1 ಕರವೊಡ್ಡಿ ಬೇಡಿಕೊಂಡರೆ ಒಲ್ಲದೆ ಪೋದ ಕರೆದರೆ ಪಿತನಾಜ್ಞೆ ತೋರುತಾನೆ ನಿರುತದಿ ಏಕಪತ್ನಿಯ ವ್ರತನೆನುತ ಸರಿಬಂದ ಸತಿಯರ ಒಡನಾಡುತೈದಾನೆ ಗರುವತನವ ಬಿಡನೆ ಗೋವ ಕಾಯ್ವವನೆ 2 ಸುಮ್ಮನೆ ಲಜ್ಜೆಭಂಗವ ಮಾಡಿ ಪೋದನೆ ಒಮ್ಮೆ ಮನೆಗೆ ಬಾರನೆ ವಾಜಿವಾಹನನೆ ತಮ್ಮ ಧ್ಯಾನದೊಳೆನ್ನ ಮನಸು ನಿಲ್ಲಿಸಿ ಪರ- ಬೊಮ್ಮ ಮೂರುತಿ ಹೆಳವನಕಟ್ಟೆರಂಗನ ಘಮ್ಮನೆ ಕರೆದುತಾರೆ ಸೈರಿಸಲಾರೆ 3
--------------
ಹೆಳವನಕಟ್ಟೆ ಗಿರಿಯಮ್ಮ
ಯಾಕೆ ಮಲಗಿದೆಯೊ ಶ್ರೀಕಾಂತ ದ್ವಾರಕಾವಾಸ ಸೂರ್ಯ ಉದಯಾಯಿತು ಗೋಕುಲದೊಳಗಿದ್ದ ಗೋಮಕ್ಕಳೆಲ್ಲ ಧ್ವಜ- ರೇಖಾ ಚರಣಕಮಲಕೆರಗಿ ಕರೆಯುತಲಾಗ ಪ ಅಂಬುಧಿ ಒಳಗಾಡಿ ತಂದು ವೇದವನು ಕೊಡು ಮಂದರೋದ್ಧಾರ ಸುರರಿಗೆ ಸುಧೆಯ ನೀಡು ತಂದು ದಾಡಿಂದ ಧರೆಯನು ಹರವಿ ಧರಾಪತಿಯೆ ಕೊಂದು ರಕ್ಕಸನ ನಂದನಗೆ ದಯಮಾಡದಲೆ 1 ಬೇಡಿ ದಾನವ ಭುವನ ಮಾಡಿದೆಲೆ ಮೂರ್ಹೆಜ್ಜೆ ಆಡಿದ್ವಚÀನವ ನಡೆಸುತಾರಣ್ಯವಾಸದಲಿ ಆದಿಲಕ್ಷ್ಮಿಯನೆ ಕದ್ದಸುರನ್ನ ಸಂಹರನೆ 2 ಗೊಲ್ಲ ಸತಿಯರ ಕೂಡ ಸಲ್ಲಾಪ ಸಾಲದಲೆ ಎಲ್ಲ ತ್ರಿಪುರರ ಸತಿಯರಲ್ಲಿ ಪೋಗುವರೆ ಎಲ್ಲಿ ಓಡ್ಯಾಡಿದ್ಹೇಳಿಲ್ಲಿ ವಾರಿಧಿಶಯನ 3
--------------
ಹರಪನಹಳ್ಳಿಭೀಮವ್ವ
ಯಾಕೆ ಮೈ ಮರೆತಿದ್ದೆ ಹೇಳೋ ಎಲೆ ಮರುಳೆ ಜೋಕÉ ತೀರೀತು ನಿನ್ನ ಬಾಳು ಪ ನಿಟ್ಟೆಲುಗಳಿಂದ ಕೈ ಕಾಲ್ಗಳೆಂಬುವನು ಮಾಡಿ ಚಿಟ್ಟೆಲುಗಳನು ಸಂದಕೂಡಿ ಪಟ್ಟಿನಲ್ಲಿ ತನುಪುರವ ಕಟ್ಟಿದರು ನರದಿಂದ ಪಟ್ಟಣವ ನಿರ್ಮಿತವ ಮಾಡಿ ಅಷ್ಟಪುರ ಕಲ್ಲಲ್ಲಿ ನವಕವಾಟವ ರಚಿಸಿ ದುಷ್ಟದುರ್ಜನರೆಲ್ಲ ಕೂಡಿ ಕಟ್ಟಿದರು ಜೀವನಿಗೆ ಇವರ ಕೂಡಾಡಿ 1 ರಕ್ತಮಾಂಸವು ಚರ್ಮಪೂಡಿ ಮತ್ತೆ ಮಲ ಮೂತ್ರ ಕ್ರಿಮಿ ಕೀಟ ರುಜೆಬಾಧೆಯಲಿ ವಿಸ್ತರದಲಿದಕೆÉ ನಲಿದಾಡಿ ವ್ಯರ್ಥದಲಿ ದಿನವ ನೀಗಾಡಿ ಅಸ್ಥಿರದ ದೇಹವನು ನಚ್ಚಿಭವ ಶರಧಿಯೊಳು ಕುಸ್ತರಿಸಿ ಬಿದ್ದು ಈಜಾಡಿ 2 ಹೊಲಸು ಹೆಬ್ಬಡಿಕೆ ನಾರುವನರಕ ಕೀವು ಕ್ರಿಮಿ ಯಲು ನರಂಗಳು ಮಜ್ಜೆ ಮಾಂಸ ಕೊಳಕು ನಾರುವ ಹಡಿಕೆಗೆಳಸುತಿಹ ನಾಯಂತೆ ಬಲಿದಿಹುದು ನಿನ್ನ ಮೇಲಂಶ ಬಳಲಿ ಬಸವಳಿದೆಲೋನ ಪುಂಸ ಕೊಳೆಯ ಮೇಧ್ಯದ ಪುಂಜ ತನುವಿದನು ನೆರೆನಂಬಿ ಫಲವಿಲ್ಲ ಹರಿಯಧ್ಯಾನಿಸೋ ಪರಮಹಂಸ 3 ಸತಿ ಹೊಂದುವರು ನಿನ್ನ ಕಣ್ಣಾರೆ ಕೇಳ್ವೆ ಕಿವಿಯಿಂದ ಗುರಿಯಾಗಿ ಇಂದಿರೇಶನ ಪೂಜಿಸಲು ನಾಕೈಯಾರೆ4 ಇದರೊಳಗೆ ಬಾಲ್ಯಕೆನೊರ್ಯ ಯೌವ್ವನವೆಂಬ ಉದಯಾಸ್ತಮಾನ ಪರಿಯಂತರವು ಸುದತಿ ಸುತರಲಿ ಮೋಹವಿರಿಸಿ ದಣಿಯದಿರು ಮನವ ನೆರೆನಿಲಿಸಿ ಲಕ್ಷ್ಮೀರಮಣನನು ಹೃದಯದೊಳುಸ್ಮರಿಸಿ 5
--------------
ಕವಿ ಪರಮದೇವದಾಸರು
ಯಾಕೊಲ್ಲ ಯಾಕೊಲ್ಲ ನಲ್ಲೆ ಸಂಪದ ಇವ ಯಾಕೊಲ್ಲ ಯಾಕೊಲ್ಲ ಪ ಅಲ್ಲಬೆಲ್ಲವನೊಲ್ಲ ನಲ್ಲೆಯಾದರವೊಲ್ಲ ಒಲ್ಲನ್ಯಾಕವ್ವ ನಲ್ಲ ಇಲ್ಲದದಕೆ ಒಲ್ಲ ಅ.ಪ ಮೇಲು ಮಾಲು ಒಲ್ಲ ನೀಲದುಪ್ಪರಿಗೊಲ್ಲ ಶಾಲು ಸಕಲಾತೊಲ್ಲ ಶೀಲಮಂಚವನೊಲ್ಲ ಅಮೃತ ಉಂಡು ವೀಳ್ಯ ಮೆಲ್ಲಲು ಒಲ್ಲ ಬಾಲೆ ಯಾಕೊಲ್ಲ ಕೈಯೊಳಿಲ್ಲದದಕೆ ಒಲ್ಲ 1 ರತ್ನದುಂಗುರ ಒಲ್ಲ ಮುತ್ತಿನ್ಹಾರ ಒಲ್ಲ ಪುತ್ಥಳೀ ಚಿನ್ನ ಒಲ್ಲ ಕಸ್ತೂರಿಗಂಧ ಒಲ್ಲ ಉತ್ತಮ ಹಯವನ್ನು ಹತ್ತಿ ಮರೆಯ ಒಲ್ಲ ಮಿತ್ರೆ ಯಾತಕೊಲ್ಲ ಹತ್ತಿರಿಲ್ಲದದಕೊಲ್ಲ2 ಸತಿಯ ಸುತರನೊಲ್ಲ ಅತಿಭಾಗ್ಯವನೊಲ್ಲ ಕ್ಷಿತಿ ಅಧಿಕಾರನೊಲ್ಲ ಛತ್ರ ಚಾಮರನೊಲ್ಲ ಸತತ ಸೌಭಾಗ್ಯನೊಲ್ಲ ಮತಿಮಾನ್ಯವನೊಲ್ಲ ಮತಿಯುತೆ ಯಾತಕೊಲ್ಲ ಗತಿಯಿಲ್ಲದದಕೊಲ್ಲ 3 ಭೋಗಭಾಗ್ಯ ಒಲ್ಲ ರಾಗರಚನೆಯೊಲ್ಲ ಭೋಗದಾಸೆಗೆ ತಲೆದೂಗಿ ಒಲಿಯ ಒಲ್ಲ ತೂಗುಮಂಚವೇರಿ ತೂಗಿಸಿಕೊಳ್ಳಲೊಲ್ಲ ಸುಗುಣೆ ಯಾಕೊಲ್ಲ ಕೈಸಾಗದದಕೆ ಒಲ್ಲ 4 ಜಾಣತನದಿ ಧನಧಾನ್ಯಗಳಿಸಲೊಲ್ಲ ಜಾಣ ಜನರ ಕೂಡಿ ಮಾನ ಪಡೆಯಲೊಲ್ಲ ಜಾಣೆ ಏನಾಶ್ಚರ್ಯ ಏನು ಯಾಕೆ ಒಲ್ಲ ಪ್ರಾಣೇಶ ಶ್ರೀರಾಮ ತ್ರಾಣಕೊಡದದಕೊಲ್ಲ 5
--------------
ರಾಮದಾಸರು
ಯಾತಕೆನ್ನ ಮೇಲಿನ್ನು ಪಂಥ ಸಾಕೊ ಶ್ರೀಕಾಂತ ಪ. ಘೋರ ಷಡ್ವೈರಿಗಳಾರುಭಟಿಗಳನ್ನು ದೂರಗೈದರೆ ನಿನ್ನ ಮಂದಿರವನು ಸಾರಿಸಿ ಶುಚಿಗೈವನಿಂದಿರಾ- ವರ ಬಾರೊ ಭಕ್ತ ಕುಮುದ ಚಂದಿರಾ ಶ್ರುತಿ ಸಾಗರಾ ಲೋಕೈಕ ಸುಂದರಾ 1 ವ್ಯರ್ಥವಾಗಿ ಬಹಿರರ್ಥದಿ ಮಾನಸ ವರ್ತಿಸದಿರೆ ನಿನ್ನ ನೋಡುವೆ ಬಹ- ಳರ್ಥಿಯಿಂದಲಿ ಪಾಡಿ ಪೊಗಳುವೆ ಮೋಹ ಕಾರ್ಥ ಶಾಸ್ತ್ರವ ದೂರ ದೂಡುವೆ ಪುರು- ಷಾರ್ಥದಾಯಕ ನಿನ್ನ ಕೂಡುವೆ 2 ಪತಿಯೆಂದು ಸಂಭ್ರಮಗೊಂಬೆನು ಭೂ- ಪತಿಯಲಿ ನೀನಿಹೆಯೆಂಬೆನು ಸಮ ರತಿಯಿಂದ ಪುರುಷ ಸುಖವುಂಬೆನು ಭಕ್ತಿ ಸತಿಯರ ಭರವನಿಂತು ಕಾಂಬೆನು 3
--------------
ತುಪಾಕಿ ವೆಂಕಟರಮಣಾಚಾರ್ಯ