ಒಟ್ಟು 14849 ಕಡೆಗಳಲ್ಲಿ , 135 ದಾಸರು , 6533 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹಲವು ಜನ್ಮದಲ್ಲಿ ಹರಿಯ ನೆನೆಯಲಿಲ್ಲಕಲಿಗಳು ಆಗಿ ನೀ ಕೆಡಬೇಡ ಮನುಜ 1ನೀಚಜಾತಿಯಲಿ ಪುಟ್ಟಿ ಅಧಮನಾಗಿರಬೇಡಭಜಿಸು ಭಕ್ತಿಗಳಿಂದ ಮಹಾಮಹಿಮ ಕೃಷ್ಣರ 2ನಂದ ಭದ್ರಾ ಜಯರಿಕ್ತ ಪೂರ್ಣ ವೆಂಬೊಚೆಂದುಳ್ಳ ತಿಥಿಯಲ್ಲಿಘೃತನವನೀತದಧಿಕ್ಷೀರ3ನಂದದಿ ಸಕ್ಕರೆಘೃತನವನೀತದಧಿಕ್ಷೀರದಿಂದಲಿ ಅರ್ಚಿಸಿ ಸುಕೃತವಪಡಿ4ಶಯನಾದಿಗಳಿಂದ ಶಾಖಾದಿ ಫಲವ್ರತಭಯದಿಂದ ಮಾಡೋರೆ ಸತತ 5ಅದರಿಂದ ಚಾತುರ್ಮಾಸ ನಾಲ್ಕು ತಿಂಗಳುಉಳಿದಿನ ಬಂತಲ್ಲ ಭವನ ಪಾವಕ(?) ಭೀತಿ 6ಆಷಾಢÀ ಶುದ್ಧ ಏಕಾದಶಿ ಮೊದಲಾಗಿಕಾರ್ತಿಕ ಶುದ್ಧ ದ್ವಾದಶಿ ಪರಿಯಂತ್ರ 7ಶ್ರೀಕಾಂತ ಯೋಗನಿದ್ರೆಲಿ ತಾ ಪವಳಿಸಿಈಕ್ಷಿಸುತಿರುವೋನೆ ಭಕ್ತರ 8ಹರಿಮಲಗ್ಯಾನೆ ಎಂದು ಅಜ್ಞಾನದಲಿ ನೀವ್ ಕೆಡಬೇಡಿಪರಿಪರಿಕಲ್ಪೋಕ್ತದ ಪ್ರಕಾರದ ವ್ರತಗಳ ಮಾಡಿ9ಸ್ನಾನ ಸಂಧ್ಯಾವಂದನೆಯ ಕಾಲಕಾಲದಲಿ ಮಾಡಿಮನದಲ್ಲಿ ವಾಮನನ ನೆನದು ಸುಕೃತವಪಡಿ10ಅತಿಥಿಗಳ ಮನ್ನಿಸಿ ಅನಾಚಾರಗಳ ಬಿಡಿಸತಿಸುತರನೆ ಒಡಗೂಡಿ ವಿಹಿತವ್ರತಗಳ ಮಾಡಿ 11ಆಷಾಡಮಾಸದಲಿ ಶಾಕ ಹದ್ದಿನ ಮಾಂಸಭೂಷಣ ಶ್ರಾವಣದಲಿದಧಿನಾಯಿಶ್ಲೇಷ್ಮ12ಭಾದ್ರಪದ ಮಾಸದಲಿ ಪಾಲು ಸುರಾಪಾನ ಆಶ್ವೀಜಕಾರ್ತೀಕ ಮಾಸದಲಿ ಚಿತ್ರಕ್ರಿಮಿರಾಶಿದ್ವಿದಳಬಹುಬೀಜ13ಮಾಸನಿಷಿದ್ಧ ವಸ್ತುವನು ಕುದಿಸಿ ಬೇಯಿಸಿದರೆಅಸ್ತ್ರವನು ದೇವರ ಅಂಗದೊಳಿಟ್ಟಂತೆ 14ಮಾಸನಿಷಿದ್ಧ ವಸ್ತುವನು ದೇವರಿಗೆ ಸಮರ್ಪಿಸಿದರೆಬಹುಕಲ್ಪ ನರಕದೊಳದ್ದುವಿರಿ ಪಿತೃಗಳ 15ಧರ್ಮಜರು ನಾರದರು ಸ್ತುತಿ ಮಾಡುತಿರುವೋರುಧರ್ಮರಾದರ ಸಂವಾದ ಚಾತುರ್ಮಾಸದ ಸಂಕಲ್ಪ 16ಈ ಕಥೆ ವ್ರತವನೆಲ್ಲ ಅರಿತು ಯೋಚಿಸಿದವರಿಗೆಬೇಕೆಂಬೊ ಮುಕ್ತಿಯನು ಕೊಡುವ ಹಯವದನ 17
--------------
ವಾದಿರಾಜ
ಹಾ ಹಾ ಸಾಧುರು ಮೆಚ್ಚದನಕ ಹರಿಗುರು ಮೆಚ್ಚ ಪ.ನನ್ನ ಗುಣಕೆ ನಾ ಮೆಚ್ಚಿದೆ ಬರಿದೆಪುಣ್ಯವಂತನೆಂದನ್ಯರ ಜರಿದೆಉನ್ನತ ಸೂಕ್ಷ್ಮ ಸುಧರ್ಮವ ಕಾಣೆನನ್ನೊಳು ನಾ ವೃಥಾ ಹಿಗ್ಗಿದರೇನು 1ಜನದೊಳು ದಣಿಯದೆ ಜ್ಞಾನವನೊರೆದುಘನವೈರಾಗ್ಯಕೆ ಹಿಂದಕೆ ಸರಿದುತನು ಮನ ಕದ್ದು ಭಕುತಿಯೊಳಿದ್ದುಹೆಣಗಾಡುತ ಭಾಗವತೆನಿಸಿದ್ದು 2ಸಂತರು ಒಪ್ಪಿದ ಜ್ಞಾನಿಯವ ಸಂತಸಂತರಿಗಾಗದವಿರತಿಭ್ರಾಂತಿಸಂತರುಕೂಡಿದಭಕುತಿ ಮುಕುತಿಸಂತರ ಪ್ರಿಯ ಪ್ರಸನ್ವೆಂಕಟಯ್ಯ 3
--------------
ಪ್ರಸನ್ನವೆಂಕಟದಾಸರು
ಹಿಡಿರೆವ್ವ ಮುದ್ದುಮೋಹನನ ಇವಹಿಡಿಯದಿದ್ದರೆ ಸಿಕ್ಕತುಡುಗರಂಗಯ್ಯನಪ.ನವದಧಿಕ್ಷೀರನವನೀತಚೋರಇವನ ಬಾಲಲೀಲೆ ನವ ನವ ಬಲ್ಲೆ 1ಹಲವು ದಿನಗಳಿಂದ ಹಲುಬಿಪನಮ್ಮಹೊಲಬಿ ಸಿಗ ಯಾರಿಂದೆ ಹೊಳೆವನು ಮುಂದೆ 2ಕೆಣಕಿದರೆ ಕೋಲನ್ಹಿಡಿವ ಕುಣಿದಾಡುವಸನಕಾದ್ಯರರಸ ಪ್ರಸನ್ವೆಂಕಟೇಶ 3
--------------
ಪ್ರಸನ್ನವೆಂಕಟದಾಸರು
ಹಿಡಿಸುವೆ ಹುಚ್ಚನೆ ಹಿಡಿಸುವೆರಂಗನರಸಿಯರ ಪಾಟ ಬಡಿಸುವೆ ಪ.ತಮವೆಂಬ ಭಂಗಿಯ ಕುಡಿಸುವೆಬುದ್ಧಿಭ್ರಮೆಗೊಂಡ ಮಾತು ನುಡಿಸುವೆಸುಮನಸರಿಗೆ ಹೆಂಡ ಕುಡಿಸುವೆಯಾರೂ ನಮಿಸದಂತೆ ದೂರ ಇಡಿಸುವೆ 1ರಜವೆಂಬೋದ್ರವ್ಯ ಬಚ್ಚಿಡಿಸುವೆಇವರ ರಾಜ ಲಕ್ಷಣಕಟ್ಟಿಇಡಿಸುವೆಗಜಗಮನೆಯರ ಗರ್ವ ಮುರಿಸುವೆನಮ್ಮತ್ರಿಜಗವಂದನ ಹಾಸ್ಯ ಮಾಡಿಸುವೆ2ಸತ್ಯ ಸಾಮಿತ್ಯವತೆಗೆಸುವೆಉನ್ಮತ್ತೆಯರ ಮಾಡಿ ಮೆರೆಸುವೆಕತ್ತಲೆ ಮನೆÀಯೊಳಗೆ ಹೊಗಿಸುವೆಇನ್ನೆತ್ತ ಹೋಗಲೆಂದು ಎನಿಸುವೆ 3ಯಾರೂ ಇಲ್ಲದಲಿ ಇಡಿಸುವೆಇವರ ನೀರು ಕಂಡು ಭಯಬಡಿಸುವೆಓರೆಂದು ಗಾಬರಿಗೆಡಿಸುವೆಕಾಯೋ ಶ್ರೀನಿವಾಸಾನೆಂದೆನಿಸುವೆ 4ಒಬ್ಬರಿÉಲ್ಲದಲಿ ಇಡಿಸುವೆಇವರನು ಗುಬ್ಬಿಯ ಹಾಂಗೆ ಭಯ ಪಡಿಸುವೆತಬ್ಬಿಬ್ಬುಗೊಂಡು ತಳವೆಳಸುವೆಅರ್ಥಿಲೊಬ್ಬ ರಾಮೇಶನ ನೋಡಿಸುವೆ 5
--------------
ಗಲಗಲಿಅವ್ವನವರು
ಹಿಂದಿನ ಪುಣ್ಯ ಫಲವೆಂತೊಇಂದಿರೇಶಾನಂದದ ಲೀಲೆ ಅರುಹಿದ ಪ.ಚಿತ್ರವಿಚಿತ್ರ ಮಹಿಮೆಯ ತೋರುತಖಳದೈತ್ಯರನೆಲ್ಲ ಮಡುಹಿದದೈತ್ಯರನೆಲ್ಲ ಮಡುಹಿ ಬಳಲ್ದನೆಂದುಕಸ್ತೂರಿ ತೈಲವೆರಸಿ ತಂದು 1ಶಂಕಿನಿ ಪದ್ಮಿನಿಯರೊಂದಾಗಿ ಕೃಷ್ಣನಪಂಕಜಾಸನದಲಿ ಕುಳ್ಳಿರಿಸಿಪಂಕಜಾಸನದಲಿ ಕುಳ್ಳಿರಿಸಿ ತಮ್ಮ ಒಲ್ವಕಂಕಣಗೈಯ ಮೌಳಿಯೊಳಿಟ್ಟು 2ಈರೇಳು ಲೋಕದ ದೊರೆಯಾಗು ಭಕುತರಸಿರಿಯಾಗು ದಿತಿಜರರಿಯಾಗುಸಿರಿಯಾಗು ಭಕ್ತರ ದಿತಿಜಾರಿಯಾಗೆನುತಹರಸಿದರರ್ಥಿ ಮಿಗಿಲಾಗಿ 3ಕುಂಭಕುಚದ ಕಾಮಿನಿಯರು ಹರುಷದಿಅಂಬುಜಾಕ್ಷನ ಪೂಸಿ ಕಿರುಬೆಮರಿಅಂಬುಜಾಕ್ಷನ ಪೂಸಿ ಕಿರುಬೆಮರಿ ದಣಿಯದೆ ಕದಂಬ ಕಡಿದಟಕಾಳಿಯ ತಂದು 4ವಿಕ್ರಮಾನ್ವಿವತವಾದವ್ಯಾಕೃತ ಗಾತ್ರಕೆಅಕ್ಕರಿಂದೆ ತೈಲನಾಶನವಅಕ್ಕರಿಂದಲಿ ತೈಲನಾಶನವ ಪೂಸಿ ಜಗುಳಲುಘಕ್ಕನಂಬರವ ಬಿಗಿದುಟ್ಟ 5ಹದವಾದ ಬಿಸಿನೀರ ಪೊಂಬಂಡೆಯೊಳುತುಂಬಿಪದುಮಗಂಧೆಯರು ನೀರೆರೆದರುಪದುಮಗಂಧೆಯರು ನೀರೆರೆವ ಸಂಭ್ರಮಕ್ಕೆಮುದದಿಸುರರುಹೂಮಳೆಗರೆದರು6ಮುಂಬರಿಯುತ ಬಾಲೆಯರುತಕದಿಂದಅಂಬುಧಾರೆಯ ನಿಲ್ಲಗುಡದೆರೆದುಅಂಬುಧಾರೆಯ ನಿಲ್ಲಗುಡದೆರೆದುಜಾಂಬೂನದಾಂಬರವುಡಿಸಿ ಕರೆತಂದು 7ಚಿತ್ರಮಂಟಪಕೆ ನವರತ್ನ ತೆತ್ತಿಸಿದ ಕಂಭಕಸ್ತೂರಿ ಕಾರಣೆ ರಚನೆಯಕಸ್ತೂರಿ ಕಾರಣೆ ರಚನೆಯ ಮಧ್ಯದಿಮುತ್ತಿನ ಹಸೆಯೊಳು ಕುಳ್ಳಿರಿಸಿ 8ನೀಲಮಾಣಿಕಮೋಘದಿಂದಲೊಪ್ಪುವ ಪದಕಲೋಲನೇತ್ರೆಯರಳವಡಿಸಿದರುಲೋಲನೇತ್ರೆಯರು ಅಳವಡಿಸಿ ಅಂಗುಲಿಗೆಲ್ಲ ಮುದ್ರಿಕೆನಿಟ್ಟು ನಲಿದರು 9ಮುಕುಟಕೌಸ್ತುಭಮಣಿಯುಕುತ ಭೂಷಣವಿಟ್ಟುರುಕುಮಿಣಿ ಸತ್ಯರೆಡಬಲದಿರುಕುಮಿಣಿ ಸತ್ಯರೆಡಬಲದಿ ಕುಳ್ಳಿರೆನಿತ್ಯಮುಕುತಗಾರತಿಯ ಬೆಳಗಲು 10ಚಿನ್ನದ ಹರಿವಾಣದಿ ರನ್ನದಾರತಿಯಿಟ್ಟುಕನ್ನೇರು ಕಿರುನಗೆ ಬೀರಿದರುಕನ್ನೇರು ಕಿರುನಗೆ ಬಿರಿಯುತ ಪಣೆಯೊಳುಪೊನ್ನಿನಾಕ್ಷತೆಯಿಟ್ಟು ಲಲಿತವ 11ಜಯ ರಾಮ ತ್ರೈಧಾಮ ಜಯ ಜೀಮೂತಶಾಮಜಯ ಪೂರ್ಣಕಾಮ ಸಾಸಿರನಾಮಜಯ ಪೂರ್ಣಕಾಮ ಸಾಸಿರನಾಮನೆಂದುಭಯರಹಿತಗಾರತಿಯ ಬೆಳಗಿದರು 12ಚಿತ್ತಜನಯ್ಯಗೆ ಚಿನುಮಯ ದೇಹಗೆಉತ್ತಮಗುಣಗಣ ಭರಿತಗೆಉತ್ತಮಗುಣಗಣ ಭರಿತಗೆ ಪರಮಪವಿತ್ರೇರಾರತಿಯ ಬೆಳಗಿದರು 13ಪನ್ನಗಾದ್ರಿವಾಸ ಪ್ರಸನ್ನವೆಂಕಟೇಶಕನ್ನೆ ಲಕ್ಷ್ಮಿಯ ಕೂಡಿ ಆರೋಗಣೆಯಕನ್ನೆ ಲಕ್ಷ್ಮಿಯ ಕೂಡ ಆರೋಗಣೆಯ ಮಾಡಿತನ್ನ ಭಕ್ತರಿಗೆಲ್ಲ ಸುಖಪ್ರೀತ 14
--------------
ಪ್ರಸನ್ನವೆಂಕಟದಾಸರು
ಹಿರಿದು ಸಂಸಾರ ನೆಲೆಯದು ಕಲ್ಪತರುಕಾಮಧೇನುವದು ಸುಖವೋ ದುಃಖವೋಹೊನ್ನು ಸತಿಯು ಸುತರೆನ್ನವರೆನ್ನದೆಚಿನ್ಮಯರೂಪೆಂದು ತಿಳಿದುಉನ್ನತವಾಗಿಹ ಸಾಧುಗುಣದಿ ತಾಮುನ್ನ ನೋಡುವವನ ನರನೋ ಹರನೋ1ಮನೆಯು ಮಾತಾ ಪಿತ ಮನುಜವರ್ಗವನೆಲ್ಲಘನಮಹಿಮನ ವಿನೋದವೆಂದುಸನುಮತದಲಿ ತಾನಧಿಕಾರಿಯೆನಿಸಿಯೆಮನದಿ ಸೂಚಿಪುದು ಉರಿಯೋ ಸಿರಿಯೋ2ಬಂಧನದೊಳು ಮಹಾ ನಿಂದನೆಯನು ಕೇಳುತಲಿಕುಂದುಕೊರತೆಗೆಲ್ಲ ಹಿಗ್ಗುತಲಿಇಂದಿದು ಅತ್ಮನ ಲೀಲಾ ಚರಿತನೆಂದುಮುಂದೆ ತೋರುವದಿದು ಭಯವೋ ಜಯವೋ3ಜನನ ಮರಣ ಸುಟ್ಟುಮನುಜ ಜೀವನ ಕೆಟ್ಟುಕನಸಿನ ತೆರ ಸಂಸಾರ ಮೂಡಿದಿನಕರಜ್ಯೋತಿಯಲಿ ಬಹುಬೆಳಗುತಲಿ ತಾ ನಿಹುದುಗೆಲುವೋ ಒಲವೋ4ಕರುಣಕಟಾಕ್ಷಸುಕರುಣ ಶಾಂತತ್ವದಿಸರಸ ಸುಜ್ಞಾನವನಳವಡಿಸಿಗುರುಚಿದಾನಂದಾವಧೂತನೆ ತಾನಾಗಿಹರುಷಿಸಿ ಸುಖಿಪುದು ದೊರೆಯೋ ಚರಿಯೋ5
--------------
ಚಿದಾನಂದ ಅವಧೂತರು
ಹೀಗೆ ಮಾಡಬೇಕೋ-ವಿಠಲ ತಂದೆಹೀಗೆ ಮಾಡಬೇಕೋ ಪಹೇಗಾದರು ದುರಿತಗಳೆನ್ನ ಕಾಡದಹಾಗೆ ಮಾಡ ಬೇಕೋ ಅ.ಪಹಿಂದಿನ ಸುಕೃತಗಳ ಫಲದಿಂದ ಬಂದೀ ನರಜನುಮಮುಂದೆ ನಾ ತಾಯ ಉದರದಲಿ ಜನಿಸದಹಾಗೆ ಮಡಬೇಕೋ ವಿಠಲ ತಂದೆ 1ದಾನಿ ನಿನ್ನನು ಬೇಡುವೆ ದುಷ್ಕರ್ಮದ -ಹಾನಿಯೊಂದೇ ಸಾಲದೆಹೀನ ಮಾನವರಿಗೆ ನಾನು ಕೈಯಾನದಹಾಗೆ ಮಾಡಬೇಕೋ - ವಿಠಲ ತಂದೆ 2ಕರುಣಿಪುರಂದರವಿಠಲ ತಂದೆನೆರೆನಂಬಿದೆ ನಿನ್ನಶರಣ ರಕ್ಷಕನೆಂಬ ಬಿರುದು ಬೇಕಾದರೆಹೀಗೆ ಮಾಡಬೇಕೋ - ವಿಠಲ ತಂದೆ 3
--------------
ಪುರಂದರದಾಸರು
ಹುಚ್ಚು ಮಾಡಿದ ಎನ್ನ ಗುರುವುಈ ಹುಚ್ಚನರಿವೊಡೆ ಸಚ್ಚರಿತರಿಗರಿವುಪಆಶ್ರಮ ಧರ್ಮವು ಹೋಯ್ತುನಿರಾಶ್ರಮವೆಂಬುದು ನಿಜವಾಯ್ತುಕುಶ್ರಮಗಳು ನಾಶವಾಯ್ತುಜೀವಭ್ರಮೆಯೆಂಬುದು ಖಿಲವಾಯ್ತು1ಸ್ನಾನವು ಮನದಿಚ್ಛೆಯಾಯ್ತು ಸಂಧ್ಯಾದಿಜಪವೆಲ್ಲ ಮರತೇಹೋಯ್ತುಮೌನವೆಂಬುದು ಬಹಳವಾಯ್ತು ಗುರುತಾನೆಎಂದೆಂಬ ಧ್ಯಾನವುಪೂರ್ಣವಾಯ್ತು2ಕುಲಗಳೆಂಬುವು ಕಾಣದಾಯ್ತುಕುಲಛಲಗಳು ಮರತೇಹೋಯ್ತುಹೊಲೆ ಶುದ್ಧಗಳು ಬರಡುನುಡಿಯಾಯ್ತುನಿಶ್ಚಲನಿಜಾನಂದವೆಂಬುದೇ ಸತ್ಯವಾಯ್ತು3ಭೇದಾಭೇದವು ಮಾಯವಾಯ್ತುಹಾಳುವಾದಗಳು ಕೇಳದಂತಾಯ್ತುಸಾಧುಸಂಗವ ಬಿಡದಂತಾಯ್ತುಸುವಾದವಮಾಡಿ ಸುಖಿಸುವಂತಾಯ್ತು4ದಯೆ ನಿರ್ದಯೆಗಳ ತೊರೆದಾಯ್ತುಭಯ ನಿರ್ಭಯಗಳು ಅದೃಶ್ಯವಾಯ್ತುಜಯಾಪಜಯಗಳು ಕಾಣದಾಯ್ತು ಸ್ವಕ್ಷೇಮಪರಕ್ಷೇಮಗಳ ವಿಚಾರ ಹೋಯ್ತು5ಕೋಪ ತಾಪವು ಶಮವಾಯ್ತುತಾಪತ್ರಯದಬಿತ್ತು ಮೊಳೆಯದಾಯ್ತುಯೋಗ ವಿದ್ಯೆಯ ಹರಿತವಾಯ್ತುನಿರ್ವಾಣವಾಗಿ ಎಲ್ಲ ಇಂತಾಯ್ತು6ಇಂತಹ ಹುಚ್ಚನು ಎನಗೆ ಕವಿಯಿಸಿನಿರಂತರ ಚಿಂತೆಯ ನೆನ್ನ ಪಾಲಿಗಿರಿಸಿಅಂತರಂಗದಿ ತಾನೆ ನೆಲೆಸಿ ಚಿಂತಾಯಕಚಿದಾನಂದ ತಾ ಬೆರೆಸಿ7
--------------
ಚಿದಾನಂದ ಅವಧೂತರು
ಹುಚ್ಚು ಹತ್ತಿತು ಹುಚ್ಚು ಹುಚ್ಚು ಜ್ಞಾನದ ಹುಚ್ಚುಹುಚ್ಚು ತಿಳಿವುದಲ್ಲ ಹುಚ್ಚನ ಗುರುವೇ ಬಲ್ಲಪನಿರ್ಮಳಾಂಗದ ಹುಚ್ಚುನಿಗಮಶಿರದ ಹುಚ್ಚುಕರ್ಮರಹಿತನ ಹುಚ್ಚುಕಮನೀಯಹುಚ್ಚು1ಸಜ್ಜನ ಸಂಗದ ಹುಚ್ಚು ಸಂತೋಷಪೂರಿತ ಹುಚ್ಚುವೆಚ್ಚವಿಲ್ಲದ ಹುಚ್ಚು ಎಣಿಸಬಾರದು ಹುಚ್ಚು2ಬ್ರಹ್ಮಾನಂದದ ಹುಚ್ಚು ಭೇದರಹಿತದ ಹುಚ್ಚುಹಮ್ಮನಳಿದ ಹುಚ್ಚು ಪರಿಪೂರ್ಣ ಹುಚ್ಚು3ಮತವ ಕಡಿದಾ ಹುಚ್ಚು ಮಹತ್ತೆನಿಪಾ ಹುಚ್ಚುಸತತ ಶಾಂತಹ ಹುಚ್ಚು ಸಹಜಾನಂದದ ಹುಚ್ಚು4ಲೋಕ ಸಾಕ್ಷಿಕ ಹುಚ್ಚು ಲೋಕವುತಾನಾದ ಹುಚ್ಚುಏಕವೆಂಬ ಹುಚ್ಚು ಯಮನ ಗೆಲಿದಾ ಹುಚ್ಚು5ಆರರ ಮೇಲಣ ಹುಚ್ಚು ಅನ್ಯಮನಸ್ಕದ ಹುಚ್ಚುಚಾರುತಾಮಸಹುಚ್ಚು ಚಲನೆಯಿಲ್ಲದ ಹುಚ್ಚು6ಗುರುಭಕ್ತಿಯ ಹುಚ್ಚು ಗುರೂಪದೇಶದ ಹುಚ್ಚುಸ್ಮರಣೆ ಬಲಿದ ಹುಚ್ಚು ಸಮನಿಸಿದ ಹುಚ್ಚು7ಜ್ಯೋತಿರ್ಮಯದ ಹುಚ್ಚು ಜಾತಿ ನಿರ್ಮೂಲದ ಹುಚ್ಚುಖ್ಯಾತಿಯಾಗಿಹ ಹುಚ್ಚು ಭೇದರಹಿತದ ಹುಚ್ಚು8ಚಿನ್ಮಯ ಚಿದ್ರೂಪದ ಹುಚ್ಚು ಚಿದಾನಂದನ ಹುಚ್ಚುತನ್ಮಯವಾಗಿದೆ ಹುಚ್ಚು ತಿಳಿಯಲರಿಯುವುದು ಹುಚ್ಚು9
--------------
ಚಿದಾನಂದ ಅವಧೂತರು
ಹೆಜ್ಜೆಗಳಿವೆ ನೋಡಿರಿ ರಂಗಯ್ಯನಹೆಜ್ಜೆಗಳಿವೆ ನೋಡಿರಿ ಪಹೆಜ್ಜೆಗಳಿವೆ ನೋಡಿರಿ ಮೂರ್ಜಗದÉೂಡೆಯನಅಬ್ಜಭವಾದ್ಯರ ಹೃದ್ಗøಹವಾಸನ ಅ.ಪಮಧುರಾಪುರದಿ ಜನಿಸಿದನ ಬೇಗಮಾವ ಕಂಸನ ಛೇದಿಸಿದನಚದುರೇರಿಗೊಲಿದ ಶ್ರೀಶನ ದಿವ್ಯಮದನಮೋಹನ ಕೃಷ್ಣವಿಧಿಭವಾರಾಧ್ಯನ1ಗೋಕುಲವಾಸನೆಂದೆನಿಪ ದಿವ್ಯನಾಕೇಶವಂದ್ಯ ಸರ್ವೇಶನಭೀಕರ ದೈತ್ಯರ ಸದೆದನ ಸವ್ಯ-ಸಾಚಿಯ ರಥದೊಳು ಏಕಾಂತ ನುಡಿದನ 2ವೇದ ಚೋರನ ಭೇದಿಸಿದನ ಗಿರಿಭಾರಬೆನ್ನಿಲಿ ಪೊತ್ತು ನಿಂತನಆದಿ ದೈತ್ಯನ ಸೀಳಿ ಭೂಮಿಯ ತಂದುಕ್ರೂರ ದೈತ್ಯನ ಕರುಳ್ಹಾರ ಮಾಡಿದ ಹರಿಯ 3ಬಲಿಯ ದಾನವ ಬೇಡಿದನ ಬಲುಛಲದಿ ಕ್ಷತ್ರಿಯರ ಸೋಲಿಸಿದನಲಲನೆಯ ತಂದ ಶ್ರೀವರನಗೊಲ್ಲರ ಕುಲದಲ್ಲಿ ಬೆಳೆದ ಶ್ರೀಚಲುವ ಗೋಪಾಲನ 4ದುಷ್ಟಕಾಳಿಂಗನ ಮದವನಳಿದುಮೆಟ್ಟಿನಾಟ್ಯದಿ ಸಿರದಿ ತುಳಿದನಪುಟ್ಟಪಾದದ ದಿವ್ಯ ಚಲುವನ ಗೋವ್ಗ-ಳಟ್ಟಿ ಹೋಗುವ ನಮ್ಮ ಪುಟ್ಟ ಗೋಪಾಲನ 5ಶಂಖು ಚಕ್ರವು ಗದ ಪದ್ಮವು ಹೊಳೆವÀಕಿಂಕಿಣಿಪೈಜನಿನಾದವುಬಿಂಕದಿ ಊದುವ ಕೊಳಲಗಾನವು ನಿ-ಶ್ಶಂಕೆಯಿಂದಲಿ ಭಕ್ತವೃಂದವ ಪೊರೆದನ 6ಥಳಥಳಿಸುವ ದಿವ್ಯ ತಿಲಕವು ಹೊಳೆಯೆಬರಿಮೈಯ್ಯ ತೋರುತ ನಿಂತನಕುದುರೆಯನೇರುತ್ತ ಬರುವನಸಿರಿಕಮಲನಾಭ ವಿಠ್ಠಲ ಭಕ್ತಪೋಷನ7
--------------
ನಿಡಗುರುಕಿ ಜೀವೂಬಾಯಿ
ಹೆಂಡತಿ ಎಂಬ ದೇವರನು ನಂಬಿಹನಣ್ಣಹೆಂಡತಿಯೆ ದೇವರೆಂದು ಕೆಡುತಿಹನಣ್ಣಪತಲೆಗೆ ತಾನೆರೆಯುವುದೆ ಮಂಗಲ ಸ್ನಾನವಣ್ಣಬಲು ವಸ್ತ್ರವುಡಿಸುವುದೆ ಅಭಿವಸ್ತ್ರವಣ್ಣಎಲೆಗೊಪ್ಪು ಮೊದಲಾಗಿಡುವುದೇ ಆಭರಣವಣ್ಣಹಲವು ಪರಿಮಳ ಲೇಪನವೇ ಗಂಧವಣ್ಣ1ನಾನಾ ದಂಡೆಯ ಹಾರವ ಮುಡಿವುದೆ ಪುಷ್ಪವಣ್ಣನಾನಾ ಬಹುಮಾನ ಮಾಡುವುದೆ ಧೂಪವಣ್ಣನಾನಾಪರಿಉಣಿಸುವುದೆ ನೈವೇದ್ಯವಣ್ಣನಾನಾ ಸಂತಸಪಡಿಸುವುದೆ ದೀಪವಣ್ಣ2ನೆನೆದೂಳಿಗ ಮಾಡುವುದೆ ಪ್ರದಕ್ಷಿಣವಣ್ಣಮುನಿಸುವಳ ತಿಳಿಸುವುದೆ ಸಾಷ್ಟಾಂಗವಣ್ಣಇನಿತು ಪೂಜೆಯ ಮಾಡಿ ತಿರುಗೊಂದು ಭವವಣ್ಣಚಿನುಮಯ ಚಿದಾನಂದ ನಿನಗೆ ದೊರೆಯನಣ್ಣ3
--------------
ಚಿದಾನಂದ ಅವಧೂತರು
ಹೆಣಗಿದರಾಗದು ಒಣತರ್ಕದಲಿದಣಿದರೆ ಕೂಡದು ಭಕುತಿವನಜಾಕ್ಷನ ಕೃಪೆ ಮನಸ್ಸಾಕ್ಷ್ಯಾದರೆತನ ತಾನಾಹದು ಮುಕುತಿ ಪ.ಸೂಕ್ಷ್ಷ್ಮತತ್ವದಿ ದಕ್ಷನೆನಿಸದೆದೀಕ್ಷಿತ ನಾಮಿದ್ದೇನುಅಕ್ಷರಬಲದಲಿ ಲಕ್ಷವು ವೃಥಾಗುರುಶಿಕ್ಷಿಲ್ಲದ ಜನುಮೇನುಭಿಕ್ಷುಕ ಧಾನ್ಯದ ಲಕ್ಷ್ಷ್ಯದಲಿ ಪದ್ಮಾಕ್ಷನ ಪೊಗಳಿದರೇನುಕುಕ್ಷಿಯ ಲಾಭವುಅಕ್ಷಯತೋಷದಮೋಕ್ಷೋಪಾಯವದೇನು 1ದ್ರವ್ಯಾದಿವ್ರಯ ಹವ್ಯಾದಿಕ್ರಯಅವ್ಯಯಜೀವ ಸ್ವಭಾವಾಖ್ಯಕಾವ್ಯರಚನೆ ಶಬ್ದ ವ್ಯಾಕರಣದಹವ್ಯಾಸವು ಇಹ ಸೌಖ್ಯಅವ್ಯಾಕೃತ ನಾಮಾವ್ಯವಹಾರಿಲ್ಲದನವ್ಯ ಕಥಾಜನಸಖ್ಯದಿವ್ಯಮೂರುತಿ ವೇದವ್ಯಾಸಜಭವಸೇವ್ಯನ ನಿಷ್ಠೆಯೆ ಮುಖ್ಯ 2ಕಡು ಆದರದೊಳು ಕಡಲಳಿಯನ ಪದವಿಡಿಯದವನ ಶ್ರುತಿಶಾಸ್ತ್ರನಡುಹೊಳೆ ದಾಟುತ ತಡಿಯಲಿ ನಾವೆಯುಬುಡಮೇಲಾಯಿತು ವ್ಯರ್ಥದೃಢ ಪ್ರಸನ್ವೆಂಕಟ ಒಡೆಯನಾಚ್ಛಿನ್ನ ದಯಪಡೆದನುಗುರುಸುಖತೀರ್ಥನುಡಿಗಳ ಮಾಲೆಯ ತುಡುಗರ ತಮಸಕೆಬಡಿದಟ್ಟುವನು ಸಮರ್ಥ 3
--------------
ಪ್ರಸನ್ನವೆಂಕಟದಾಸರು
ಹೆಣ್ಣ ನಿಚ್ಛಿಸುವರೆ ಮೂಢ - ಇದನುಕಣ್ಣು - ಮೈ ಮನಗಳಿಂಗಳಿಂ ಸೋಂಕಲು ಬೇಡ ಪ.ತಾಯಾಗಿ ಮೊದಲು ಪಡೆದಿಹುದು - ಮತ್ತೆಬಾಯಯೆಂದನಿಸಿ ಕಾಮದಿ ಕೆಡಹುವುದುಕಾಯದಿ ಜನಿಸುತ ಬಹುದು - ಇಂತುಮಾಯೆಯು ನಿನ್ನ ಬಹು ವಿಧದಿ ಕಾಡುವುದು 1ಹಿತ ಶತ್ರುವಾಗಿ ಹೊಂದುವುದು - ನಿಮಿಷರತಿಗೊಟ್ಟುನಿತ್ಯ ಮುಕ್ತಿಯ ಸೆಳೆಯುವುದುಕ್ಷಿತಿಯ ಪೂಜ್ಯತೆ ಕೆಡಿಸುವುದು - ಮುಂದೆಶತಜನ್ಮಗಳಿಗೆ ಹೊಣೆಯಾಗಿ ನಿಲ್ಲುವುದು2ಬಗೆಯದು ತನುವೆಲುವುನರ - ಖಂಡ - ಅದರೊಳಗೆ ವಾಯುರಂದ್ರ ಕಿಸುಕುಳದ ಉದ್ಧಂಡಭಗವೆಂಬುದು ಮೂತ್ರದಭಾಂಡ - ಆದನೊಗಡಿಸದೆ ನಿಜಸುಖವಿಲ್ಲಕಂಡೆಯ3ವಶನಾದ ವಾಲಿಯ ಕೊಲಿಸಿಹುದು - ಹೀಗೆಹೆಸರು ಮಾತ್ರದಿ ದಶಶಿರನಳಿದಿಹುದುಶಶಿಯಂಗದಲಿ ಕ್ಷಯವಿಹುದು - ಹೀಗೆಹೆಸರು ಪಡೆದ ಕೀಚಕನನಳಿದಿಹುದು 4ಪಶುಪತಿಯ ದೆಸೆಗೆಡಿಸಿಹುದು - ಹೀಗೆವಸುಧೆಯೊಳ ಜೀವರ ಹಸಗೆಡಿಸಿಹುದುವಸುಧೇಶನ ನಾಮ ಮರೆಸುವುದು - ನಮ್ಮಅಸಮ ಪುರಂದರವಿಠಲನ ತೊರೆಸುವುದು 5
--------------
ಪುರಂದರದಾಸರು
ಹೆಸರು ತಂದಿರ್ಯಾ ಭಿಕ್ಷಕೆ |ಹೆಸರು ತಂದಿರ್ಯಾಪಅಸಮವೀರರೆಂಬ ಹೆಸರು |ಕುಶಲಗಾರರೆಂಬ ಹೆಸರುಶಶಿಯಂತೆ ಶೋಭಿಸುವ ಶಿಶುವು |ಕುಲಕೆ ಯೋಗ್ಯನೆಂಬ ಹೆಸರು ||ಹೆಸರು||1ದಾನಶೀಲರೆಂಬ ಹೆಸರು |ಮಾನವಂತರೆಂಬ ಹೆಸರು |ಸಾನುರಾಗದಲ್ಲೂ ಆತ್ಮ |ಜ್ಞಾನಿಗಳೆಂದೆಂಬ ಹೆಸರು2ಹಿರಿಯ ಮನೆತನದ ಹೆಸರು |ಗುರುಗಳಾ ಭಕ್ತಿಯಲಿ ಹೆಸರು |ಪರಮಭಾಗವತರ ತೆರದಿ |ಹರಿಯ ಶರಣರೆಂಬ ಹೆಸರು3ಪುತ್ರವತಿಯರೆಂಬ ಹೆಸರು |ಸತ್ಯಶೀಲೆಯರೆಂಬ ಹೆಸರು |ಪತಿಯ ಸೇವೆಯಲ್ಲಿನಿರತ|ಪತಿವ್ರತೇಯರೆಂಬ ಹೆಸರು4ಸತ್ಯಸಂಧರೆಂಬ ಹೆಸರು |ತತ್ವಜÕರೆಂದೆಂಬ ಹೆಸರು |ಚಿತ್ತ ಶುದ್ಧರೆನಿಸಿ | ಗೋವಿಂದಾನ |ದಾಸರೆಂಬ ಹೆಸರು5
--------------
ಗೋವಿಂದದಾಸ
ಹೇ ದಯಾಬ್ಧೇ ಪಾಲಿಸೆನ್ನನು | ಶ್ರೀದ ಹನುಮಂತ ಪಭೂಧವಜ ನದಿಯಲ್ಲಿ ನಿಂತಾ ಕಾಳೀಕಾಂತ ವೀತಚಿಂತಾ ಅ.ಪ.ರಾವಣಾನುಜನಂತೆ ಮತ್ತಾ ಶೈಲಸುತನಂತೆ |ದೇವತೆಗಳೀಶನಂತೆ ದೇವತೆಗಳಂತೆ ||ಆವವಿಕ್ರಮಪಾರ್ಥನಂತೆ ಕಾದಿ ಬಿದ್ದಾ ಕಪಿಕುಲದಂತೆ |ತಾವರೆಯಸಖಸೂರ್ಯನಂತೆ ತತ್ಸುತ ಸುಗ್ರೀವನಂತೆ 1ಭೂವರಾಧಿಪ ಧರ್ಮನಂತೆ ದ್ರೌಪದಿಯಂತೆ |ಭೂವಿ ಬುಧಸುತನಂತೆ ರಾಕ್ಷಸಿಯಂತೆ ಫಣಿಯಂತೆ ||ಆ ವಿರಾಟರಾಯನಂತೆ ಪಾರ್ವತಿಯ ನಾಥನಂತೆ |ನೀ ವಿಜಯನಾಗಲು ಸಹಿಸದಲೆ ಕೋಪಿಸಿದ ಧೃತರಾಷ್ಟ್ರನಂತೆ ||ಮೋದದಿಂದ ನಿನ್ನ ಪಡೆದಾ ಮಧ್ಯಗೃಹನಂತೆ |ಆದರದಿ ಹರಿಪೂಜೆ ಮಾಳ್ಪಾಸೂರಿಜನರಂತೆ ||ಆ ದಿನ ಕಡಲಲ್ಲಿ ಮುಳುಗಿ ಪೋಗುತ್ತಿದ್ದಾ ನಾವೆಯಂತೆ |ಪಾದಹಿಡಿದಾ ಕಾಳೀಸರ್ಪನ ಕಾಯ್ದ ಪ್ರಾಣೇಶ ವಿಠ್ಠಲನಂತೆ 3
--------------
ಪ್ರಾಣೇಶದಾಸರು