ಒಟ್ಟು 19311 ಕಡೆಗಳಲ್ಲಿ , 135 ದಾಸರು , 7892 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿಕರ್ತ ನಾನಲ್ಲೆಂದು ಹಿರಿಯರಾಡಿದ ಮಾತು ಅರಿ ಜೀವೋಪಿ ಕರ್ತನೆಂಬ ವಿರೋಧ ಪ ಸಿರಿ ಅರಸ ತತ್ವೇಶರ ಕೈಯೊಳು ಚರಿಪಾಧೀನ ಜೀವನಲ್ಲವೆ ಪರಮ ನಿಷ್ಕ್ರಿಯ ನಾ ಹೀನ ಮನವೆ ಅ.ಪ ಜಲಾಗ್ನಿ ಸ್ತಂಭ ಜಪ ಕಲಿತ ಮಾತ್ರಕೆ ಪ್ರಾಣಿ ನಿಲಬಹುದೆ ಅನಲ ಜ್ವಾಲೆಯೊಳು ಮ್ಯಾಲೆ ಸುಖದಾಸೆಯಿಂದ ಹಲವು ಕರ್ಮಾಚರಿಸಿ ಗೆಲಬಹುದೆ ನಿಲಯ ಹರಿಕರ್ತನೆಂದ ನುಡಿಗೆ 1 ಬಿಡಿಬಾಯ ಮಾತಿಗೆ ಪೊಡವಿಪ ಒಪ್ಪುವುದಾದರೆ ಪಡುವದ್ಯಾಕೆ ತದ್ಧಿತಪಃ ಪ್ರಮಾಣ ಬಿಡುವುಧ್ಯಾಗೆ ಶ್ರುತಿ ಸ್ಮøತಿ ಹರಿ ಆಜ್ಞೆ ಕಾಯ ಏಕವಾಗೋ ತನಕ 2 ಜ್ಞಾನೇಚ್ಛಾಕ್ರಿಯ ಶಕ್ತಿ ಮಿನುಗುವ ಜೀವಕ್ಕೆ ನಿತ್ಯ ಸ್ವಭಾವದಲ್ಲೆ ಜ್ಞಾನಿಗೆ ಕೊಡುವ ಯಥೇಷ್ಟಾಚರಣೆ ಏನೇನು ಕೂಡದು ಶ್ರವಣಾಧಿಕಾರಿಗೆ 3 ನಾನು ನನ್ನದು ಎಂಬ ಜ್ಞಾನ ಅನುಗಾಲ ಇರಲಾಗಿ ನೀನು ನಿನ್ನದು ಎಂಬ ವಂಚನೆಯಲ್ಲವೆ ಹೀನ ಬಿಡದು ಇದರಿಂದ ಅನುಮಾನ ಮಾಡಸಲ್ಲ ತನ್ನ ಕ್ರಿಯ ಅನ್ಯಕ್ರಿಯದಂತಾಗೋತನಕ ಮನವೆ 4 ಜ್ಞಾತಾಜ್ಞಾತ ಕರ್ಮದೊಳು ಜ್ಞಾತಾನುಷ್ಠಾನ ವಿಶೇಷ ಪೀತನಾಹ ಶ್ರೀಶ ತಾನು ಕರ್ಮ ನಿಷ್ಪಲವಲ್ಲವು ಜ್ಞಾತ ವಿಜಯ ರಾಮಚಂದ್ರವಿಠಲ 5
--------------
ವಿಜಯ ರಾಮಚಂದ್ರವಿಠಲ
ಹರಿಕೃಷ್ಣ ವಿಠಲಾ | ಕರುಣಿಸಿವಳೀಗೆ ಪ ಕರುಣಾನಿಧಿ ಎಂದೆನುತ | ಮರೆಹೊಕ್ಕೆ ದೇವಾ ಅ.ಪ. ಜ್ಞಾನವರ್ಜಿತಳಾಗಿ | ಆಜ್ಞೆಳೆಂದೆನಿಸಿಹಳುಮಾನನಿಧಿ ನೀನಾಗಿ | ಜ್ಞಾನ ಸಾಧನವಾಸಾನುಕೂಲಿಸೆ ಕಾಯೊ | ಮೌನಿಜನ ಸದ್ವಂದ್ವನೀನೆಗತಿ ಎಂದೆನುತಾ | ತನುವನರ್ಪಿಪಳೊ 1 ಕತೃ ನೀನೆಂಬಂಥಾಉತ್ತಮದ ಮತಿಯಿತ್ತು | ಬೃತ್ಯಳನು ಪೊರೆಯೋ 2 ಕ್ಲೇಶಮೋದಗಳು ಸಮ | ಭಾಸವಾಗಲಿ ದೇವವಾಸವಾದ್ಯಮರನುತ | ವಾಸುದೇವಾ ಖ್ಯಏಸೇಸು ಜನ್ಮಗಳ | ರಾಶಿ ಪುಣ್ಯದ ಫಲದಿದಾಸ ದೀಕ್ಷೆಗೆ ಮನವ | ಆಶಿಸಿಹಳಯ್ಯಾ 3 ರಾಜೀವ ನಯನ ಹರಿಓಜಸ್ಸುಗಳ ಕೊಟ್ಟು ಕಾಪಾಡೊ ಇವಳಾ 4 ಸರ್ವಜ್ಞ ಸರ್ವೇಶ | ಸರ್ವಕಾರಣ ಮೂರ್ತಿಊರ್ವಿಯಾಳಿವಳೊಬ್ಬ | ದರ್ವಿಯಂತಿಹಳೋಸರ್ವದಾ ತವಸ್ಮರಣೆ | ಕೃಪೆಗೈದು ಪೊರೆ ಇವಳಾಗುರ್ವಂತರಾತ್ಮ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಹರಿಗುರು ಪ್ರಸನ್ನ ವಿಠಲ | ಪೊರೆಯ ಬೇಕಿವಳಾ ಪ ದುರಿತ ರಾಶಿಯ ಕಳೆದು | ಕಾಪಾಡೋ ಇವಳಾ ಅ.ಪ. ಭವ ವಂದ್ಯ | ಕೋಮಲಾಂಗನೆ ದೇವಕಾಮಿತಾರ್ಥದವನಾಗಿ | ಕಾಪಾಡ ಬೇಕೋ 1 ಬೋಧ ತಿಳಿಸುತಲೀಸಾಧನವ ಗೈಸಿ ಸ | ಮ್ಮೋದ ಕೊಡು ಇವಳೀಗೆಹೇ ದಯಾನಿಧಿ ಹರಿಯೇ | ಬಾದರಾಯಣನೇ 2 ಪತಿಸುತರೊಳು ಹರಿಯೇ | ವ್ಯಾಪ್ತಿಯನೆ ತಿಳಿಸುತ್ತಹಿತದಾದ ಸೇವೆಯಲಿ | ರತಳೆನಿಸೊ ಹರಿಯೇಹಿತವಹಿತವೆರಡನ್ನು | ಸಮತೆಯಲಿ ಉಂಬಂಥಮತಿಯ ನೀ ಕರುಣಿಸುತ | ಅತಿಹಿತದಿ ಪೊರೆಯೋ 3 ಭವವನದಿ ನವಪೋತ | ತವದಿವ್ಯಸ್ಮøತಿ ಇತ್ತುಶ್ರವಣ ಸುಖ ವದಗಿಸುತ | ಸಾಧನವ ಗೈಸೋಭುವನ ಪಾವನ ದೇವ | ತವನಾಮ ಜಪಗಳನುಸರ್ವದಾ ಕರುಣಿಸುತ | ಉದ್ಧರಿಸೋ ಇವಳಾ 4 ಪತಿ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಹರಿಗೆ ನಾ ಮೊರೆಹೊಕ್ಕೆನೊ ದಯಾಳು ಶ್ರೀ- ಹರಿಗೆ ನಾ ಮೊರೆಹೊಕ್ಕೆನೊ ಹರಿಗೆ ನಾ ಮೊರೆಹೊಕ್ಕೆನೊ ಪೊರೆಯ ಬೇಕೆಂದಿನ್ನು ಜರಿದು ನೋಡುವರೇನೊ ಪರಮ ದಯಾಳು ಪ ವೆಂಕಟರಮಣನೆ ಕಿಂಕರರಿಗೆ ಬಂದ ಸಂಕಟ್ಹರಣ ಮಾಡಲಂಕಾರ ಮೂರುತಿ 1 ಸದ್ಯೋಜಾತನು ತಪವಿದ್ದ ಸ್ಥಳದಿ ಬಂದು ಅನಿರುದ್ಧ ಮೂರುತಿಯೆನೆ 2 ಶೇಷಶಯನ ನೀ ಆದಿಶÉೈಲವಾಸನೆ ದಾಸರಿಗೊಲಿವಂಥ ಭೀಮೇಶಕೃಷ್ಣನೆ 3
--------------
ಹರಪನಹಳ್ಳಿಭೀಮವ್ವ
ಹರಿದಾಟ ನಿಲಿಸು ಮನದಘದೂರ ಸುಖಸಾರ ಎರಗುವೆನು ತವಪದಕೆ ಸ್ಮರಿಸಿ ನಿಮ್ಮುಪಕಾರ ಪ ಸಂತಸವ ಕೊಡು ಎನ್ನ ಅಂತರಂಗದಿ ನಿಂತು ಕಂತುಪಿತ ಚಿಂತಿಪರ ಚಿಂತಾಮಣಿ ಪ್ರಭುವೆ 1 ಅಲ್ಪಮನಸಿನ ಕುಕಲ್ಪನೆಯ ಪರಿಹರಿಸು ಅಲ್ಪರಿವ ದೀನರಿಗೆ ಕಲ್ಪತರು ನೀನು 2 ನಾಮಾಡಿದಪರಾಧ ಪ್ರೇಮದಿಂ ಕ್ಷಮಿಸು ಶ್ರೀ ರಾಮ ಮಮಪ್ರಾಣೇಶ ಪ್ರೇಮಾಬ್ಧಿನಿಲಯ 3
--------------
ರಾಮದಾಸರು
ಹರಿದಾಸರ ಸಂಗಕೆ ಸರಿಯುಂಟೆ ಗುರು ಕರುಣಕೆ ಇನ್ನು ಪಡಿಯುಂಟೆ ದೇವ ಪ ದಾವಾನಲವ ತÀಪ್ಪಿಸಿ ಕಾಡಾನೆಯದÉೀವಗಂಗೆಗೆ ತಂದು ಹೊಗಿಸಿದಂತೆಆವರಿಸಿರುವ ಷಡ್ವರ್ಗ ತಪ್ಪಿಸಿ ಎನ್ನಶ್ರೀವರನ ಕರುಣಾರಸದಿ ತೋಯಿಸುವ 1 ಪಾದ ಸನ್ನಿಧಿಯ ಸೇರಿಸುವ 2 ಬಲೆಯ ಹಾರಿದ ಎಳೆ ಹುಲ್ಲೆಯ ಮರಿಗಳಿಗೆಒಲಮೆಯಿಂದಲಿ ತಾಯ ತೋರಿಸಿದಂತೆಬಲು ಇಂದ್ರಿಯಗಳ ಸೆರೆಯ ಬಿಡಿಸಿ ಎನ್ನನಳಿನನಾಭನ ಸನ್ನಿಧಿಯ ತೋರಿಸುವ 3 ಪಾದ ಸಂದರುಶನವನ್ನೀವ 4 ಭವಾಬ್ಧಿ ನಡುವೆ ಸಿಕ್ಕಿದ ಎನ್ನಪಿಡಿದು ಶ್ರೀಕೃಷ್ಣನಂಘ್ರಿಗಳ ಸೇರಿಸುವ 5
--------------
ವ್ಯಾಸರಾಯರು
ಹರಿದಾಸರಿಗೆ ಒಬ್ಬರ ಗೊಡವೆ ಯಾತಕೆ ಅರಿವೆ ಅನ್ನಾಭರಣ ದ್ರವ್ಯ ಸರ್ವವು ಶ್ರೀ ವರನೆ ಎಂಬ ಪ ನಿತ್ಯಾನಂದ ನಿತ್ಯಜ್ಞಾನಾನಿಮಿತ್ತ ಬಂಧು ಭಕ್ತರಿಗೆ ಇತ್ತದ್ದೆ ಸಂಪತ್ತು ಎಂದು ಕೀರ್ತಿಸುತ್ತ ನರ್ತಿಸುವ 1 ದೋಷದೂತರನೊಬ್ಬ ಪೋಷ್ಯ ಪೋಷಕಾಧಾರ ಧೇಯ ದೋಷಕಾರಿ ತ್ರೈ ಲೋಕ್ಯ ವಿಭೂಷಣ ವಿಭೂತಿದನೆಂಬ 2 ಎನ್ನ ಸ್ವಾಮಿ ಸರ್ವರಿಗೆ ಎನ್ನ ಬಿಂಬ ಎಲ್ಲರಿಗೆ ಮಾನ್ಯ ಮಾನದನು ಜಗದ್ಭಿನ್ನನೆಂದು ತುತಿಸುತಿಪ್ಪ 3 ಜನನೀ ಜನಕ ಲಕ್ಷ್ಮೀ ನಾರಾಯಣನೆ ಪುತ್ರಮಿತ್ರನೆಂದು ಕ್ಷಣಶ ಕೊಂಡಾಡುತನ್ಯರ ಗಣನೆ ಮಾಡದಿಪ್ಪ ನಿಜ4 ಹಾನಿ ಲಾಭ ಕೀರ್ತಿ ಅಪಮಾನ ಮಾನ ಪುಣ್ಯಪಾಪ ಶ್ರೀನಿವಾಸಗರ್ಪಿಸಿ ಮದ್ದಾನೆಯಂತೆ ಚರಿಸುತಿಪ್ಪ 5 ಅನಂತ ಜೀವರಿಗಿನ್ನು ಅನಾದಿ ಅನ್ನದನಾಗಿ ಅನಿರ್ವಿಣ್ಣ ನಾಮಕನೆಂದು ಸನ್ನುತಿಸಿ ಹಿಗ್ಗುತಿಪ್ಪ 6 ಸರ್ವ ಜೀವ ದೇಹಾಂತಸ್ಥ ಸರ್ವ ಜಗನ್ನಾಥ ವಿಠಲ ಸರ್ವರೂಪ ಸರ್ವನಾಮ ಸರ್ವವೇದೋದಿತನೆಂಬೊ 7
--------------
ಜಗನ್ನಾಥದಾಸರು
ಹರಿದಾಸರಿಗೆ ಕಿಂಚಿತ್ತಳಿವಿಲ್ಲ ಮನವೆ ಹರಿಯನ್ನು ನೆರೆನಂಬು ಸರಿಯಾರು ನಿನಗೆ ಪ ದುರಿತ ಕೋಟ್ಯಾಚರಿಸಿ ನರಕಿಯಾದಜಮಿಳಗೆ ಮರಣಕಾಲದಿ ಸಂಸ್ಮರಣ ಮಾತ್ರದಿ ನರಕದ ಭಯತಪ್ಪಿ ಸ್ಥಿರಮುಕ್ತಿಪದವಾಯ್ತು ಅರಿದು ನೀ ಗಟ್ಟ್ಯಾಗಿ ಸ್ಮರಿಸು ಮಾಧವನ 1 ಹರಿಸರ್ವೋತ್ತಮನೆಂಬ ತರಳನಿಗೆ ಹಿರಣ್ಯ ಹರಿಯೆಲ್ಲಿ ತೋರದಿರೆ ಶಿರಹಾರಿಸಿಕಪೆನೆನಲು ನರಹರಿಯ ರೂಪದಿಂ ಭರದಿ ಕಂಬದಿ ಬಂದು ಹಿರಣ್ಯಕನ ಶಿರತರಿದು ಪೊರೆದ ಪ್ರಹ್ಲಾದನ 2 ಲಲನೆ ದ್ರೌಪದಿ ಲಕ್ಷ್ಮೀನಿಲಯನ ದಯದಿಂದ ಉಳಿದಳು ಮಾನದಿಂ ಖುಲ್ಲನ ಸಭೆಯಲಿ ಅನುದಿನ ಚಲಿಸದೆ ಮನವಂ ತಿಳಿದು ನೀ ಭಜಿಸೆಲೊ ಸುಲಭ ಶ್ರೀರಾಮ 3
--------------
ರಾಮದಾಸರು
ಹರಿದಾಸರು ದಾಸೋತ್ತಮ ನೀನೆ ಶ್ರೀ ವೈಕುಂಠ-ದಾಸೋತ್ತಮ ನೀನೆ ಪ. ಮಕ್ಕಳುಗಳಿಗೆ ಮೊಮ್ಮಕ್ಕಳುಗಳಿಗೆ ದೇ-ವಕ್ಕಳಿಗೆ ಮನುಮುನಿಗಳಿಗೆಸಿಕ್ಕದ ಪರಬೊಮ್ಮನ ಕೂಸುಮಾಡಿ ತಂ-ದಿಕ್ಕಿ ತೊಡೆಯಮ್ಯಾಲೆ ಆಡಿಸಿ ಮುದ್ದ್ದಿಸುತಿ[ಹ]1 ಅಪರೋಕ್ಷ ಜ್ಞಾನಿಯಾ[ದೆ] 2 ಹರಿಸರ್ವೋತ್ತಮ ಹಯವದನ ಮೂರುತಿ ವೇಲಾ-ಪುರದರಸಗೆ ಪ್ರತಿಬಿಂಬನಾದವರ ವೈಕುಂಠ ದಾಸೋತ್ತಮ ಎನಗೆ ಹರಿಯತೋರಿಸಿ ಪರಮ ಧನ್ಯನಮಾಡಿದ 3
--------------
ವಾದಿರಾಜ
ಹರಿನಾಮ ಜಪಕಿನ್ನು ಸರಿಯಾದುದಿಲ್ಲ ಸರಸಿಜಾಸನಿದರ ಸಾರವನು ಬಲ್ಲ ಪ. ಬಡವಾಗ್ನಿ ಸುತ್ತಿದರು ಕೊಡುವದನುಪಮ ತಂಪ ನಡುನೀರೊಳಗೆ ಮುಳುಗಲುಡುಪವಹದು ಕಡುಭಯದ ಕಾಡಲ್ಲಿ ಮಿಡುಕುತಿಹ ಸಮಯದಲಿ ಒಡೆಯನನು ನೆನೆದವನ ಕಡೆಹಾಯಿಸುವ ನಮ್ಮ 1 ಘೋರ ರಿಪು ರಾಜಾಗ್ನಿ ಘೋರಾಹಿ ಪಕ್ಷಿ ಮೃಗ ಮಾರಿ ಮೊದಲಾದಭಯಕಾರಿಗಳನು ದೂರ ಓಡಿಸಿ ದಡವ ಸೇರೆ ಸಲಹುವ ನಮ್ಮ ಕಾರುಣ್ಯ ನಿಧಿಯನ್ನು ಸಾರಿಸಾರಿಗೆ ನೆನೆವ 2 ಆವ ಕಾಲಕು ಸುಖವನೀವ ಶೇಷ ಗಿರೀಶ ಶ್ರೀವರನ ಸರ್ವತ್ರ ಸ್ಮರಿಸಿರೆಂದು ದೇವಋಷಿಯೆಂದುದನು ದಿಟವೆನುತ ನಂಬುವರ ಕಾವನನುಭವ ಸಿದ್ಧ ಕಮಲಾಕ್ಷ ಗತಿಯೆಂಬ 3
--------------
ತುಪಾಕಿ ವೆಂಕಟರಮಣಾಚಾರ್ಯ
ಹರಿನಾಮ ಭಜನೆಯೊಳಿರು ಇರೂ ಶ್ರೀಹರಿ ಮಹಿಮೆಯ ಭುವಿ ತೋರುರೋರು ಪ ಸಜ್ಜನರ ಸಂಗವ ಮಾಡು ಮಾಡು ದುರ್ಜನರ ಸಂಗವ ಬಿಡೂ ಬಿಡೂ ಮೂಜ್ಜಗದೊಡೆಯನ ಪಾಡು ಪಾಡು ಇನ್ನು ಮುಕುತಿಯ ಬೇಕೆಂದು ಬೇಡು ಬೇಡು 1 ಪಾದ ಹಿಡಿ ಹಿಡಿ ಮನದಿರುವ ಕಾಮ ಕ್ರೋಧ ಕಡಿ ಕಡಿ ಶರಣರ ಕೂಟದೋಳ್ ಕೂಡಿ ಕೂಡಿ ಬೇಗ ನರಹರಿ ಮೂರ್ತಿಯ ನೋಡಿನೋಡಿ 2 ರಾಮನಾಮಾಮೃತ ಕುಡಿ ಕುಡಿ ಅತಿಕಾಮುಕ ದ್ರವ್ಯವ ಬಿಡಿಬಿಡಿ ಸ್ವಾಮಿ ನಾರಾಯಣನೆಂದು ನುಡಿನುಡಿ ಬಹು ಪ್ರೇಮದಿ ಹರಿಕರುಣ ಪಡಿಪಡಿ 3 ಸಕಲಶಾಸ್ತ್ರಗಳ ನೋಡು ನೋಡು ಅದರ ಸಾರಾಂಶ ತಿಳಿದು ಆಡೂ ಆಡೂ ಪ್ರಕಟಿತ ಭಕ್ತರಿಗನ್ನ ನೀಡು ನೀಡು ಇನ್ನು ಪರಮಾತ್ಮನ ಕೊಂಡಾಡು ಆಡು 4 ನರಹರಿಯು ಕಥೆಯ ಕಿವಿಲಿ ಕೇಳುಕೇಳು ಪರಮ ಭಕ್ತರ ಪಾದಕೆ ಬೀಳು ಬೀಳು ಶ್ರೀ ಪರಬ್ರಹ್ಮನ ಸೇವೆಗೆ ಏಳು ಏಳು 5 ಯೋಗ್ಯರ ಕಂಡರೆ ಹಿಗ್ಗೂ ಹಿಗ್ಗೂ ಅತಿ ಭಾಗ್ಯರ ಕಂಡರೆ ತಗ್ಗೂ ತಗ್ಗೂ ಸುಜ್ಞಾನಿಗಳಿಗೆ ಡೊಗ್ಗು ಡೊಗ್ಗು ಇನ್ನು ಶುದ್ಧಾತ್ಮಕರೊಳು ಜಗ್ಗು ಜಗ್ಗು 6 ಸನ್ಯಾಸಿಗಳನು ಸೇರು ಸೇರು ದುಷ್ಟದುರ್ಮಾಗರ ಕಂಡು ದೂರು ದೂರು ಮರ್ಮ ಬಲ್ಲವರಲ್ಲಿ ಜಾರು ಜಾರು ಶ್ರೀ ಮಹಾ 'ಹೆನ್ನ ವಿಠ್ಠಲನ’ ‘ಸಾರೂ ಸಾರೂ’ 7
--------------
ಹೆನ್ನೆರಂಗದಾಸರು
ಹರಿನಾಮ ಮರೆಯ ಬೇಡಯ್ಯ ಪರಿ ದುರಿತಗಳನ್ನು ಅದು ನೀಗುವುದಯ್ಯಾ ಪ ತರಳಪ್ರಲ್ಹಾದನಿಗೊಲಿದ ನಾಮವುಯಿದು ದುರುಳ ರಕ್ಕಸರನ್ನು ತರಿದ ನಾಮವೋ 1 ನಿರುತದಿ ಭಕ್ತರಿಗೊಲಿವ ನಾಮವುಯಿದು ಸರಸದಿ ಭಜಕರ ಪೊರೆವ ನಾಮವೋ 2 ಭಾಮೆಗಕ್ಷಯವಿತ್ತ ಪರಮನಾಮವುಯಿದು ಪ್ರೇಮದಿ ದಾಸರಿಗೊಲಿವ ನಾಮವೋ 3 ಕಾಮಿತ ವರಗಳನೀವ ನಾಮವುಯಿದು ನಿತ್ಯ ಭಜಿಪ ನಾಮವೋ 4 ದಶರೂಪ ಧರಿಸಿದ ದಿವ್ಯ ನಾಮವುಯಿದು ದಶಕಂಠನನು ಕೊಂದ ಶ್ರೀನಾಮವೋ 5 ಕೇಶವ ರೂಪದಿ ಮೆರೆವ ನಾಮವುಯಿದು ಪಾಶವ ಕಡಿಯುವ ನಿಜ ನಾಮವೋ 6 ವರ ದೂರ್ವಾಪುರದ ಶ್ರೀಹರಿಯ ನಾಮವುಯಿದು ಮರೆಯದೆ ಭಕ್ತರ ಪೊರೆವ ನಾಮವೋ 7 ಸಿರಿ ಚನ್ನಕೇಶವನೆಂಬ ನಾಮವೋ 8
--------------
ಕರ್ಕಿ ಕೇಶವದಾಸ
ಹರಿನಾರಾಯಣ ಎನ್ನಿರೊ ಸಜ್ಜನರು ಶ್ರೀ- ಹರಿಕೃಷ್ಣ ಶರಣೆನ್ನಿರೊ ಪ ಪರಿಪರಿ ದುರಿತಗಳಳಿದು ಪೋಗುವದೆಂದು ನಿರುತವು ವೇದಪುರಾಣ ಪೇಳುವದು ಶ್ರೀ ಅ.ಪ ಹರಿ ಎಂದ ಮಾತ್ರದಲಿ ಹತ್ತಿದ ಪಾಪ ಪರಿಹಾರಾಗುವುದು ಕೇಳಿ ಹರಿದಾಸರೊಡನೆ ಕೂಡಿ ಸತ್ಸಂಗದಿ ಹರಿ ಕೀರ್ತನೆಯನು ಪಾಡಿ ಹರಿಯ ಮಹಿಮೆಯ ಸ್ಮರಿಸುತಲಿ ಹಗ ಲಿರುಳು ಚಿಂತನೆ ಮಾಳ್ಪ ಸುಜನರ ಪರಮ ಕರುಣಾ ಸಾಗರನು ತನ್ನ- ವರೊಳಿರಿಸುತ ಪೊರೆವ ಸಂತತ 1 ಕರಿರಾಜ ಕಷ್ಟದಲಿ ಮೊರೆ ಇಡೆ ಕೇಳಿ ತ್ವರದಿ ಓಡಿ ಬರಲಿಲ್ಲವೆ ಹರಿ ನೀ ರಕ್ಷಕನೆನ್ನಲು ಪಾಂಚಾಲಿಗ- ಕ್ಷಯ ವಸ್ತ್ರವೆನಲಿಲ್ಲವೆ ತರುಳರೀರ್ವರ ಪೊರೆದು ರಕ್ಷಿಸಿ ಕರೆಯೆ ನಾರಗನೆಂದ ದ್ವಿಜನಿಗೆ ನರಕ ಬಾಧೆಯ ಬಿಡಿಸಿ ಸಲಹಿದ ಹರಿಗೆ ಸಮರು ಅಧಿಕರಿಲ್ಲ ಶ್ರೀ 2 ಬಡಬ್ರಾಹ್ಮಣನ ಸತಿಯು ನಯಭಯದಿಂದ ಒಡೆಯರ್ಯಾರಿಲ್ಲೆನಲೂ ಪೊಡವೀಶ ಶ್ರೀಪತಿಯು ಪರಮಾಪ್ತನೆನಲು ಹಿಡಿಯಗ್ರಾಸವ ಕೊಡಲು ನಡೆದು ದ್ವಾರಕ ದೊಡೆಯನಿಗೆ ಒ- ಪ್ಪಿಡಿಯ ಗ್ರಾಸವ ಕೊಡಲು ಭುಂಜಿಸಿ ಕೆಡದ ಸೌಭಾಗ್ಯವನೆ ನೀಡಿದ ಬಿಡದೆ ಕಮಲಾನಾಭ ವಿಠ್ಠಲನ 3
--------------
ನಿಡಗುರುಕಿ ಜೀವೂಬಾಯಿ
ಹರಿನಿನ್ನ ಕರುಣವಿರಾಲಾವ ಭಯವು ಸ್ಮರಣಿ ಮಾತ್ರದಿ ಸಕಲದುರಿತಗಳ ಪರಿಹರಿಪ ಪ ಸಣ್ಣ ವಯದಲಿ ಶ್ರೀ ಜಗನ್ನಾಥದಾಸಾರ್ಯ ಬನ್ನ ಬಡುತಿರೆ ವ್ಯಾಧಿ ಪೀಡೆಯಿಂದ ಘನ್ನ ಕರುಣಾಭ್ದಿ ಶ್ರೀ ಗೋಪಾಲದಾಸರಾ - ಬಿನ್ನಪವನಾಲಿಸಿ ರೋಗಮೋಚನ ಗೈದ 1 ದಾಸಕುಲರತ್ನ ಪ್ರಾಣೇಶ ದಾಸಾರ್ಯರ ಆಸುವಂಶದ ತರುಳ ರೋಗದಿಂದಾ ಯಾಸ ಬಡುವದು ಕೇಳಿ, ಆಶೆಯನೆ ತೊರೆದಿಹನು ನೀ ಸಲಹ ಬೇಕಯ್ಯಾ ಕರುಣದಿಂದಲಿ ನೋಡಿ 2 ವರದೇಂದ್ರ ಗುರುವರರ ಸುರುಚಿರಾಲಯದಲ್ಲಿ ಇರಳ್ಹಗಲು ನಿಮ್ಮ ನಾಮ ಸ್ಮರಿಸುವಂಥ ಪರಿ ಪೀಡಿಸುವದುಚಿತವೇನೊ ಶ್ರೀ ಹರಿ ವಿಚಾರಿಸಿ ನೀನೆಸಿದಯದಿಂದ ನೋಡೊ 3 ವಾಸವಾದ್ಯಮರನುತ ವಾಸುದೇವನೆ ನೀನು ಈ ಸಮಯದೊಳಗಿವನ ಕರುಣದಿಂದ ಪೋಷಿಸಲು ನಿನ್ನ ಪೊಂದಿರುವ ಸದ್ಭಕ್ತರ ದಾಸನೆಂದೆನಿಸಿ ಜೀವಿಸಲಿಯನವರತ 4 ನಿನ್ನನೇ ನಂಬಿರುವೆ ನಿನ್ನನೇ ಪ್ರಾರ್ಥಿಸುವೆ ಧನ್ವಂತ್ರಿ ನೀನೆನ್ನ ಮೊರೆಯಾಲಿಸೊ ಬನ್ನ ಬಡಿಸಲು ಸಲ್ಲ ಇನ್ನು ನೀ ಕರುಣಿಪುದು ವರದೇಶವಿಠಲ 5
--------------
ವರದೇಶವಿಠಲ
ಹರಿಪಾದಕಮಲಕ್ಕೆ ಮರೆಹೊಕ್ಕ ಬಳಿಕ ಮರಮರ ಮರುಗುವ ಪರಿಯು ಇನ್ನ್ಯಾಕೋ ಪ ಪರಮಪಾವನ ತನ್ನ ಚರಣದಾಸರ ಸ್ಥಿತಿ ಅರಿಯನೆನೆನ್ನುತ ಸ್ಥಿರವಾಗಿ ನಂಬಿ ಅ.ಪ ಕಂತುಪಿತನಧ್ಯಾನ ಚಿಂತಾಮಣಿಯೆಂದು ಚಿಂತಾದೂರನ ನಿಜಸ್ಮರಣೆಯೇ ಪರಷೆಂದು ಸಂತರೊಡೆಯ ಶ್ರೀಕಾಂತನ ಭಜನೆಯೇ ಭ್ರಾಂತಿನೀಗಿಸುವಂಥ ಕಲ್ಪತರುವಿದೆಂದು 1 ಸೃಷ್ಟಿಕರ್ತನ ಕಥನ ಕಷ್ಟನಿವಾರಣ ಅಷ್ಟಮೂರುತಿ ಕೀರ್ತನಷ್ಟಸಂಪದ ಪೂರ್ಣ ಎಷ್ಟು ಮಾತ್ರಕೆ ತನ್ನ ಇಷ್ಟ ಭಕ್ತರಿಗಿಹ್ಯ ಕಷ್ಟ ನಿವಾರಿಸಿದೆ ಬಿಡನೆಂದು ಗಟ್ಟ್ಯಾಗಿ 2 ಧ್ಯಾನಮೂರುತಿ ಎನ್ನ ಮಾನಾಪಮಾನವು ನಿನ್ನಗೆ ಕೂಡಿತು ಎನಗಿನ್ನೇನೆಂದು ಅನ್ಯಾಯವನು ತ್ಯಜಿಸಿ ಧ್ಯಾನವ ಬಲಿಸಿ ಜಾನಕೀಶನೆ ಭಕ್ತಧೇನು ಶ್ರೀರಾಮೆಂದು 3
--------------
ರಾಮದಾಸರು