ಒಟ್ಟು 5751 ಕಡೆಗಳಲ್ಲಿ , 125 ದಾಸರು , 4114 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಡೆ ನಾ ಬ್ರಹ್ಮಾಂಡಯೊಡೆಯ ಶ್ರೀ ವೆಂಕಟೇಶನ ಪ ಕಂಡೆ ನಾ ಭಕುತರ ಹಿಂಡುಗಳು ನೆರೆ ಕೊಂಡಾಡುತಲಿದೆ ಪದಪುಂಡರೀಕವ ನಾ ಅ.ಪ ತುಂಗ ಮಹಿಮ ಸತ್ಸಂಗವಿತ್ತು ಮನದಂತರ ವರಿ- ತಾಂಗೀರಸದೀ ಮಂಗಳ ಪೌರ್ಣಿಮೆಭಾರ್ಗವವಾಸರದಿ ಭಾರ್ಗವಿಪತಿ ನಿನ್ನನು ಗ್ರಹದಿ ನಗದೊಡೆಯ ಭಕ್ತ- ರಘಹರಿಸುತ ಪನ್ನಗಗಿರಿಯೊಡೆಯ ನಿನ್ನಯ ಗುಡಿಯನ್ನು ಬಗೆ ಬಗೆ ಸುತ್ತಿಪರ ಹಿಂಡನ್ನು ನಾ ಕಂಡೆನೋ ಜಾಗು ಮಾಡದೆ ಬಾಯಿಬೀಗವ ಕೈಕೊಂಡು ಸಾಗಿ ಕಾಸಾರದಿ ಸ್ನಾನ ಮಾಡಿಕೊಂಡು ಬಾಗಿ ವರಾಹದೇವರ ವಂದಿಸಿ ಬೇಗದಿ ಹರಕೆ ಕೈಕೊಂಡಿಹ ದೇವನ 1 ಮುಕ್ತರೊಡೆಯ ಪುರುಷೋತ್ತಮ ನಿನ್ನಯ ಭಕ್ತರ ವಿಪತ್ತುಗಳೆಲ್ಲ ಹರಿಸಿಶಕ್ತ್ಯಾನುಸಾರ ತ್ವ- ದ್ಭಕ್ತರೆಸಗುವ ಅತ್ಯಲ್ಪಭಕ್ತಿಯ ಸ್ವೀಕರಿಸಿ ಭಕ್ತಿಯಿಂದ ಪ್ರಾಕಾರದಿ ಸುತ್ತಲು ಹೊತ್ತಗಂಡದೀಪಸಾರುತಲಿ ನಿತ್ಯನೂತನ ನಿನ್ನ ಸ್ತುತಿಸುತಲೀ ಮತ್ತೆ ಉರುಳುತಲೀ ಉತ್ತಮಗತಿಪ್ರದ ವ್ಯಕ್ತನಹುದೊ ತ್ವ- ದ್ಭಕ್ತರ ಮನೋರಥ ಪೂರ್ತಿಮಾಡುವ ಭಕ್ತವತ್ಸಲನೆಂಬ ಬಿರುದು ಪೊತ್ತ ಸ- ರ್ವೋತ್ತಮ ಶ್ರೀ ಪುರುಷೋತ್ತಮ ನಿನ್ನನು2 ಬೊಮ್ಮಜನಕ ಪರಬೊಮ್ಮನೆ ನಿನ್ನಯ ಸನ್ಮಹಿಮೆಯ ನಾ ಒಮ್ಮನದೀ ಒಮ್ಮೆಯಾದರು ಮನ್ಮನದಲಿ ನಿನ್ನಯ ಸನ್ಮಂಗಳರೂಪವ ನಿಲ್ಲಿಸದೆ ಸುಮ್ಮನೆಕುಳಿತು ಇಮ್ಮನನಾಗಿರೆ ಘಮ್ಮನೆ ಎನ್ನನು ಒಳಕ್ವೈದೆ ಕಣ್ಮನದೆದುರಲಿ ನೀ ನಿಂದೆ ನೀನೆನ್ನಯ ತಂದೆ ಸನ್ಮುದದಿಂದೆ ಪಾಮರನೆಂದೆನ್ನ ಪ್ರೇಮದಿ ಕರುಣಿಸಿ ಸನ್ಮಹಿಮೆಯ ತೋರ್ದೆ ಜಗದೀಶ ಕಾಮಿತಜನರ ಕಲ್ಪದ್ರುಮ ನೀನೆಲೊ ಈ ಮೇಲುಗಿರೀಶ ಶ್ರೀ ವೆಂಕಟೇಶಾ ನಿನ್ನ3
--------------
ಉರಗಾದ್ರಿವಾಸವಿಠಲದಾಸರು
ಕಂಡೆ ನಾಕಂಡೆ ನಾಕಂಡೆ ಕಾಳಿಂಗನ ಮಂಡೆಯಮೇಲೆ ಕುಣಿವ ಕೃಷ್ಣನ್ನ ಪ ತಕ ತಕ ಧಿಮಿ ಧಿಮ್ಮಿ ಧಿಮ್ಮಿ ಧಿ- ಮ್ಮಿಕೆಂದು ಕುಣಿವ ಕೃಷ್ಣನ್ನ ನಾಕಂಡೆ ಅ.ಪ ಹೆಡೆಯ ಮೇಲೆ ತಾ ಎಡಗಾಲಿರಿಸಿ ಎಡಗೈಯಲಿ ಬಾಲ ಹಿಡಿದವನ ಬಿಡದೆ ಅಭಯಹಸ್ತವ ತೋರೊ ಒಡೆಯ ಕೃಷ್ಣಮೂರುತಿಯ ನಾಕಂಡೆ ಸ್ವಪ್ನದಲಿ ನಾಕಂಡೆ ಕಂಡೇನೊ ಸಂಪನ್ನಮೂರ್ತಿಯ ಕಂಡೇನೊ 1 ಗೋವಲರ ಮನೆಯ ಪಾಲುಂಡವನ ಗೋವುಗಳ ಕಾಯ್ದ ಗೋಪಾಲನ್ನ ಗೋವಿಂದನೆಂಬ ದೇವರದೇವನ್ನ ಓವಂತೆ ನಾನು ಕಂಡೇನು ಕಂಡೇನು ಕುಣಿಯುತ ಬಂದ ಕೃಷ್ಣನ್ನ ತಣಿಯುವ ಹಾಗೆ ನೋಡಿದೆನು 2 ಗೋವಿಂದನಾಗಿ ತಲೆಕಾಯ್ವವನ ಗೋವರ್ಧನವನೆ ಕೊಡೆಯಾದವನ ಗೋವನಿತೆಯರ ಮಾಮಾಯನನ್ನ ಅವ್ವಯ್ಯ ಚೆನ್ನಾಗಿ ಕಣ್ತುಂಬ ಕಂಡೆ ಆ ಮುದ್ದು ಬಾಲಕೃಷ್ಣನ್ನ ಕಂಡೆ ಸಾಮುದ್ರಿಕಾ ಸಿರಿಯನ್ನಕಂಡೆ 3 ಅಸುರ ಕಂಸನ ಅಸುವನ್ನು ನೀಗಿದನ ಬೆಸೆದ ಕುಬ್ಜೆಯ ಡೊಂಕ ತಿದ್ದಿದವನ ಅಸುತೆಗೆಯ ಬಂದವಳ ಅಸುವನೆ ಹೀರಿದನ ಮಿಸುಕದಂತೆ ಕಂಡೆ ನಾಕಂಡೆ ನಾಕಂಡೆ ಜಾಜಿಪುರೀಶನ ಕಂಡು ಧನ್ಯನಾದೆ ಸಾಜದಿ ದಾಸಾನುದಾಸನಾದೆ 4 ಪಾಪಿನಾ ಕರುಣೆಯ ತೋರಿ ಸಲಹೊ ಭಾಪುರೆ ಗಟ್ಟಿಸುವ ಪುಟ್ಟಪಾದವಿಟ್ಟು ಮೋಪಾಗಿ ಮೆರೆವ ದುಷ್ಟರ ಮೆಟ್ಟೊ ಪುಂಡರ ಪುಂಡರಿಗೆ ಪುಂಡನಾದವನೆ ಪುಂಡರೀಕಾಕ್ಷ ಚನ್ನಕೇಶವನೆ 5
--------------
ನಾರಾಯಣಶರ್ಮರು
ಕಂಡೆ ನಾನೊಂದು ಕೌತುಕವ ಧ್ರುವ ಭೂಮಿಯ ವೇದನೋದುದ ಕಂಡೆ ರಾಗಭೆÉೀದ ಮಾಡುದಕಂಡೆ ಪಾಡುದು ನಾಕಂಡೆ 1 ಆಕಾಶ ಮಾತುಕೇಳುದು ಕಂಡೆ ಪುರಾಣ ದೃಷ್ಟಿಸುವದು ಕಂಡೆ ಶಬ್ದ ಭೇದಗ್ರಹಿಸುದು ಕಂಡೆ ಪುಣ್ಯ ಶ್ರವಣವು ಕೇಳುದುಕಂಡೆ 2 ಖಣಿಯವಾದುದು ಕಂಡೆ ನಿರ್ಮಿತವಾಗಿಹ ರೂಪವ ಕಂಡೆ 3 ಅಗ್ನಿ ದೃಷ್ಟಿಸುವದು ಕಂಡೆ ಸೃಷ್ಟಿನೆಲ್ಲ ನೋಡುವದು ಕಂಡೆ ದೈವದ್ಯಾವರ ನೋಡುದು ಕಂಡೆ 4 ಗಾಳಿ ಘ್ರಾಣಿಸುವದು ಕಂಡೆ ಪರಿಪರಿವಾಸನೆ ಕೊಂಬುದುಕಂಡೆ ಬೀಜಾಕ್ಷರವು ನುಡಿವದು ಕಂಡೆ 5 ಎರಗಿತು ಪುಣ್ಯಶ್ರೀ ಚರಣದಲಿ ತ್ರಾಹಿಯೆಂದು ಪೊಡವಿಯಲಿ 6 ಬೆರಗಾದನು ಗುರುಕರುಣದಲಿ ಬೆಡಗವ ಕಂಡಿನ್ನು ಬೆರದಾದೆನಯ್ಯ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡೆÀನೀಗ ರಂಗನಾಥನ ಕಾರುಣ್ಯನಿಧಿಯ ಪ. ಮಂಡಲದೊಳುದ್ದಂಡ ಮೂರುತಿ ಹಿಂಡು ದೈತ್ಯರ ತಂಡ ತಂಡದಿ ತುಂಡು ತುಂಡು ಮಾಡಿದ ಸ್ವಾಮಿಯ ಅ.ಪ. ಕೌಸ್ತುಭ ನಾಮವ ನೇಮದಿಂದ ಧರಿಸಿದಾತನ ಹೇಮ ಮಂಟಪದೊಳಗೆ ಕುಳಿತು ಕಾಮಿಸಿದ ಭಕ್ತರಿಗೆ ಕಾಮಿತಾರ್ಥ ಕೊಡುವ ಸ್ವಾಮಿಯ 1 ಗರುಡವಾಹನವೇರಿ ಗಗನದಿ ಚರಿಸುತ್ತ ಬಂದು ಸರಸಿಯೊಳು ಕರಿಯ ಸಲಹಿದೆ ಪರಮಭಕ್ತರ ಕಾವದೇವ ಕರುಣವಾರಿಧಿ ಕಮಲನಯನ ಉರಗಶಯನ ಉದ್ಧಾರಿ ನಿನ್ನ ಮರೆಯಹೊಕ್ಕೆ ಕಾಯೊ ಎನ್ನ2 ಇಂದುಧರನ ಸಖನೆ ಕೇಳಯ್ಯ ಬಂದಂಥ ದುರಿತ ಹಿಂದು ಮಾಡಿ ಮುಂದೆ ಸಲಹಯ್ಯ ಇಂದು ಹೆಳವನಕಟ್ಟೆ ರಂಗ ಆ-ನಂದ ಪಡಿಸೊ ರಾಮಲಿಂಗ ಹೊಂದಿದೆನು ನಿನ್ನ ಚರಣ3
--------------
ಹೆಳವನಕಟ್ಟೆ ಗಿರಿಯಮ್ಮ
ಕಂಡೆನಯ್ಯ ಚನ್ನಕೇಶವರಾಯನ ವೇಲಾಪುರದರಸನ ಸುಕೃತ ಫಲದಿಂದ ಪ ಹೇಯ ವಿಷಯದಿ ರಂಗನಾಕನ ಮರೆದ ಪಶುವಾನು ಹೇಯನಲ್ಲದೆ ನರಕದಲಿ ಬೀಳ್ವವನು1 ಕಂಡೆ ಶಂಖ ಚಕ್ರ ಪದುಮಧರನ ಕಿರೀಟ ಕುಂಡಲಧರನ ಪೀತಾಂಬರಧರನ 2 ಸುರಸಿಂಧು ಜನನ ಕಾರಣ ಚರಣಕಮಲ ವಿಕಾಸ ಧರನ ಕರುಣಾಪವರಧರನ ರಂಗನಾಯಕನ 3
--------------
ಬೇಲೂರು ವೈಕುಂಠದಾಸರು
ಕಂಡೆನು ಕೌತುಕ ಮಂಡಲದೊಳಗೊಂದು ಹೊಯ್ಯಂದ ಡಂಗುರವ ಮಂಡಿಯ ಮಸಿಯಲಖಂಡಿತವಾಗ್ಯದೆ ಧ್ರುವ ಖೋಯೆಂದು ಕೂಗುತ ಕಾಯದೊಳಗದೆ ಮಾಯದ ಮರೆಯಲುಪಾಯ ಮುಚ್ಚಿದ ನೋಡಿ 1 ಝೇಂ ಝೇಂ ಝೇಂ ಝೇಂ ಝೇಂಕರಿಸುತದೆ ಕಂಜನಾಭನ ಕರುಣಾನಂದನೋಡಿರ್ಯೊ 2 ಘೇಳೆನಿಸುತದÀ ತಾಳಮೃದಂಗವು ಒಳಹೊರಗಿದು ಧಿಮಿಗುಡುತದ 3 ಅನುಹಾತ ಧ್ವನಿಅನುಭವ ನೋಡಿರೋ ಅನುದಿನ ಸಾಧಿಸಿ ಘನ ಬೆರದಾಡಿರೊ 4 ಆನಂದೊಬ್ರಹ್ಮದ ಆಟವಿದುನೋಡಿ ಏನೆಂದ್ಹೇಳಲಿ ಸ್ವಾನುಭವದ ಸುಖ 5 ತುಂಬಿತುಳುಕುತದೆ ಅಂಬುಜಾಕ್ಷನ ಮಹಿಮೆ ಕುಂಭಿನಿಯೊಳು ನಿಜ ಗಂಭಗುರುತ ನೋಡಿ 6 ಸಾಧಿಸಿ ನೋಡಿರೊ ಶ್ರೀ ಸದ್ಗುರು ಶ್ರೀಪಾದ ಗಾದಿಯ ಮಾತಲ್ಲ ಭೇದಿಸಿ ನೋಡದು 7 ಶುಕಾದಿ ಮುನಿಗಳ ಸುಖಾಶ್ರಯವಿದು ಏಕಾಕ್ಷರ ಬ್ರಹ್ಮ ಏಕೋಚಿತ್ತದಿ 8 ಮೊತ್ತರಾಗಿ ತನ್ನ ನೆತ್ತಿಯೊಳಗಿದೆ ಉತ್ತಮರ ಸುತ್ತ ಮುತ್ತ ಸೂಸುತದ9 ಗುರು ಕೃಪೆಯಿಲ್ಲದೆ ಗುರುತವಾಗದಿದು ಬರೆ ಮಾತಿನ ಮಾಲೆಗೆ ಸೆರಗ ಸಿಲುಕದಿದು 10 ಗುರುತವಿಟ್ಟು ಗುರುವಿನ ಮಹಿಮೆಯ ತರಳ ಮಹಿಪತಿ ನಿನ್ನೊಳು ನೋಡೆಂದು 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡೆನೋ ಕಂಡೆ ಗುರುಚಿದಂಬರನಾ ತನು ಗೊಂಡು ಭೂಮಂಡಲದೊಳು ಚರಿಸುವನಾ ಪ ಪರಮಾತ್ಮ ಪರತತ್ವವನು ತಿಳಿದವನ ಧರೆಯ ಜನರನÀು ಪಾವನವ ಮಾಡುವನಾ ಕರುಣ ಸಮುದ್ರ ದೀನರ ದಯಾಪರನಾ ನೆರೆನಂಬಿದವರಿಗೆ ವರವ ಕೊಡುವನಾ 1 ಮಳೆ ಛಳಿ ಬಿಸಿಲು ಹಸಿವಿಗಂಜದವನ ಕಲ್ಲು ಮುಳ್ಳು ಬೆಟ್ಟವೆನ್ನದೆ ಚರಿಸುವನ ನೆಲೆಗಾಣದಂತಹ ಅಪಾರ ಮಹಿಮನು ಕಲಿಮನದೊಡ್ಡದಾನಂದ ನಿರ್ಗುಣನ 2 ಸ್ಮರಹರನಂತೆ ಭಸಿತ ದಿಗಂಬರನಾ ಕೆರೆಬಾವಿ ದೇವಾಲಯವನು ಕಟ್ಟಿಸುವನ ಪುರಹರನಂತೆ ಢಿಕ್ಕನೆ ಧರಿಸಿಹನ ನರ ಗುರಿಗಳು ಬಲ್ಲರೇನೋ ಇಂಥವನಾ 3 ಯಮನಿಯಮ ಅಷ್ಟಾಂಗ ನಿರತನ ಕಮಲಾರಿ ಪಿತನಂತೆ ಗಂಭೀರದವನ ಹಿಮವಂತನಂತೆ ಧೈರ್ಯದೊಳಿರುತಿಹನ ಕಮಲ ಬಾಂಧವನಂತೆ ತೇಜದಿಂದಿರುತಿಹನ 4 ಅರಿಗಳನರುವರ ನುಗ್ಗೊತ್ತಿದವನ ಕರಣೇಂದ್ರಿಯಂಗಳ ನಿಗ್ರಹಿಸಿದವನ ಪರಮ ದಾಸಗೆ ಆಲಿಂಗನವನಿತ್ತನಾ ಸ್ಥಿರ ಚಿದಾನಂದ ಪುರದ ದಿಗಂಬರನ 5
--------------
ಕವಿ ಪರಮದೇವದಾಸರು
ಕಡೆವ ಬನ್ನಿ ಸಡಗರದಿಂದ ಘುಡಘುಡಿಸಿ ದೃಢವೆಂಬುದು ಕಡುಕಂಬನೆ ಮಾಡಿ ನಡನಡಿಸಿ ನುಡಿ ನಿಜ ವಡನೆ ಪಡಗವ ತಂದು ಜಡದಿಡಸಿ ಜಡದಿಡಸಿ ನವನೀತ ಗಡಬಡಿಸಿ ಗಡಬಡಿಸಿ 1 ಮೀಸಲಮನ ಕೆನೆ ಮೊಸರನೆ ಮಾಡಿ ಶೋಧಿಸಿ ಶೋಧಿಸಿ ವಾಸನೆ ಮೊಸರ ಕರುಣಿಕುಸಕಿರಿದು ಮರ್ದಿನಿ ಮರ್ದಿನಿ ಮೋಸಹೋಗದೆ ದುರಾಶದ ಕಿಲ್ಮಿಷ ಝಾಡಿಸಿ ಝಾಡಿಸಿ ಧ್ಯಾನ ಬಲಿದು ಸುವಾಸನೆಕಳಲ ಕಡೆವದಾರಂಭಿಸಿ 2 ನಾಮದಿವ್ಯಮಂತ್ರÀವ ಕಟ್ಟಿ ವಿಷಮ ಬಿಡಿಸಿ ವಿಷಮಬಿಡಿಸಿ ನೇಮದಿಂದ ಸುಪ್ರೇಮದರವಿಗಿ ಘಮಗುಡಿಸಿ ಘಮಗುಡಿಸಿ ಶಮೆದಮೆವೆಂಬ್ಹಗ್ಗನೆ ಸಮವಿಡಿದು ಧಿಮಿಗುಡಿಸಿ ಧಿಮಿಗುಡಿಸಿ ಶ್ರಮಜನ್ಮದಹರುವ ಕ್ರಮಗೊಂಡಾಹಂಬಿಡಿಸಿ 3 ನಾವು ನೀವೆಂಬ ಹೊಲೆಗುಡತಿಯನ್ಯರೆ ಬಿಡಿಸಿನ್ಯರೆಬಿಡಿಸಿ ಸಾವಧಾನದಲಿ ಅನುಭವಾಮೃತ ನಿಜಕುಡಿಸಿ ನಿಜಕುಡಿಸಿ ನವನೀತ ಝಲ್ಲಿಸಿ ಝಲ್ಲಿಸಿ ಸವಿಸವಿಗೊಂಡು ಸುವಿದ್ಯಸಾರಾಯವ ಅನುಭವಿಸಿ 4 ಕಡವು ಕುಶಲಿ ಒಬ್ಬಳೇ ಬಲುನಿಜಙÁ್ಞನಶಕ್ತಿ ಶಕ್ತಿ ಒಡಗೂಡಲು ನಿಜಬಾಹುದು ಕೈಗೂಡಿ ಸದ್ಗತಿ ಸದ್ಗತಿ ಪಡಕೊಂಡರು ಇದರಿಂದಲಿ ಮುನಿಜನ ವಿಶ್ರಾಂತಿ ವಿಶ್ರಾಂತಿ ಕೊಂಡಾಡಿದ ಅನುಭವಸ್ತುತಿ ಮೂಢಮಹಿಪತಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡೇವಮ್ಮ ರಂಗನಾ |ಕಂಡೇವಮ್ಮಾ ಕೃಷ್ಣನಾ ಪ ಹೃದಯದೊಳಗಿನ ಸದಮಲ ಬ್ರಹ್ಮನಾ 1 ಬಿಡದೆವೆ ಗೋಕುಲದಿ ಸಂಚರಿಪನಾ 2 ಗುರುಮಹಿಪತಿ ಪ್ರಭು ಕರುಣ ಕಟಾಕ್ಷದಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಣ್ಣ ಮುಂದಿರುವ ವಿಷಯಾದಿ ಸುಖಕೆ ಪ ಮೊರೆವೆ ನರಕುರಿಯೆ ಅದನರಿತಿಹೆಯ ಮನವೆ 1 ಸನ್ನುತದ ನಿಜಸುಖದೊಳಿರಬಹುದು ಮನವೆ 2 ನರಕದೊಳ್ ಬಾಯ್‍ಕಳೆದರೊದಗುವುದೆ ಸುಖವು 3 ತಿರುತಿರುಗಿ ಬಳಲುತಿರೆ ಸುಖವಾಗಬಹುದೊ 4 ದ್ಗುರುವಾಗುತಿಹನಲ್ಲೊ ಅರಿತುಕೊ ಮನವೆ5 ಧ್ಯಾನಿಸುವ ಪುಣ್ಯಾತ್ಮರಿಗೆ ಗೋಚರಿಸಬಹುದು | ತಾನಾಗಿ ಶರಣರೊಳು ಕರುಣವಿಡಬಹುದು6 ಶರಧಿಯೊಳಗೋಲಾಡುತಿರು ನಿರುತ ಮನವೆ 7
--------------
ಸದಾನಂದರು
ಕಣ್ಣಾರೆ ಕಂಡೆವಯ್ಯಾ ಕಣ್ಣಾರೆ ನಾ ಧ್ರುವ ಕಣ್ಣಾರೆ ಕಂಡೆ ಹರಿಯ ಎನ್ನ ಪ್ರಾಣಧೊರಿಯ ಧನ್ಯಗೈಸಿದ ಪರಿಯ ಏನೆಂದ್ಹೇಳಲಯ್ಯ 1 ಸ್ವಾನುಭವದ ಖೂನ ಜನಕ್ಹೇಳಲೇನು 2 ಆಡೇನಂದರ ಅಮಾತು ನಾಡಿಗೇನು ತಿಳದೀತು ಪಡೆದವಗೆ ದೋರಿತು ಬಿಡದ್ಹಾಂಗಾದೀತು 3 ಗುರುಕರುಣ ಕಟಾಕ್ಷ ಗುರುತಾಗ್ಯದ್ಯನ್ನಪೇಕ್ಷಾ ಇರುಳ್ಹಗಲೆ ದೋರುವದಧ್ಯಕ್ಷ 4 ಎನಗದೆ ಬ್ರಹ್ಮಾನಂದ ಭಾನುಕೋಟಿ ತೇಜನಿಂದ ದೀನಮಹಿಪತಿ ಬಂದ ಅನುಭವ ಆನಂದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಣ್ಣಾರೆ ಕಂಡೆವಿಂದು ಪುಣ್ಯತೇಜೋರಾಶಿಯ ಬಣ್ಣಬಣ್ಣದಲಿ ಭಾಸುವ ಪ್ರಭೆಯ ಧ್ರುವ ಹೇಳಲಿಕ್ಕೆ ಬಾರದು ಹೊಳೆವ ಪ್ರಕಾಶವು ಥಳಥಳಿಸುತಿಹುದು ಒಳಹೊರಗೆ ಝಳಿಝಳಿಸುತಿಹದು ಮೊಳೆಮಿಂಚಿನ ಪರಿ ಸುಳವ್ಹುದೋರಿತು ಕಳೆವರದೊಳಗೆ 1 ಒದಗಿಬಂತಿದಿರಿಟ್ಟು ಮೊದಲಿನ ಪುಣ್ಯದ ಫಲ ಸಾಧಿಸಿ ಕಂಡೆ ಸುಖಸದೋದಿತವ ಹಾದಿ ಸಿಲ್ಕಿತು ನೋಡಿ ಆದಿ ಅನಾದಿಯ ಭೇದಿಸಿತು ಮನಸು ನಿಜಬೋಧವ 2 ಭಾವ ಬಲಿದು ನೋಡಿ ದೇವಾಧಿದೇವನ ಸುವಿದ್ಯ ಸುರಸವ ಸವಿಸವಿದು ಪಾವನ್ನವಾಯಿತು ಮಹಿಪತಿ ಜೀವನವುಕಾವಕರುಣ ಗುರುದಯದಿಂದ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಣ್ಣಾರೆ ನೋಡೆನ್ನ ಕರುಣಾ ಕಟಾಕ್ಷದೀ ಇಂದಿರಾರ ಮಣಾ ಅರವಿಂದನೇತ್ರದಲಿ ಪ ದಶರಥನಿಗೆ ದಿವ್ಯಪ್ರಾಣನೇತ್ರಾ ಶಶಿಮುಖಿ ಸೀತೆಯ ಬಿಡದೆ ನೋಡುವ ನೇತ್ರಾ ಶಶಿ ರವಿ ಕಾಂತಿಗೆ ಸಮನಾದ ನೇತ್ರದೀ 1 ದಶರಥನಿಗೆ ದಿವ್ಯಪ್ರಾಣನೇತ್ರಾ ಶಶಿಮುಖಿಯರನೆಲ್ಲಾ ಒಲಿಸಿದ ನೇತ್ರ[ವರ ಸತಿ] ರುಕ್ಮಿಣಿದೇವಿಯ ಪ್ರಾಣನೇತ್ರಗಳಿಂದ 2 ಅಸುರರು ಮೋಹಿಸಿ ಭ್ರಮಿಸಿದ ನೇತ್ರ ಶ್ರೀನಿವಾಸನೆ ನಿಮ್ಮ ಕರುಣ ನೇತ್ರಗಳಿಂದಾ 3
--------------
ಯದುಗಿರಿಯಮ್ಮ
ಕಣ್ಣಿಲಿ ನೋಡಿರೋ ಸಾಕ್ಷ ಘನಗುರು ಪ್ರತ್ಯಕ್ಷ ಧ್ರುವ ಕಣ್ಣಿನೊಳದೆ ನಿಜ ವಸ್ತದ ಖೂನ ಪುಣ್ಯವಂತನೆ ಬಲ್ಲನುಸಂಧಾನ ಧನ್ಯಗೈಸುವದನುಭವದ ಖೂನ ತನ್ನೊಳಗದೆ ಗುರು ಆತ್ಮಙÁ್ಞನ 1 ಕಣ್ಣಿನ ಹಿಂದಾಡುತಲದೆ ಮನ ಕಣ್ಣಿಗೆ ಕಣ್ಣು ನೋಡಲುನ್ಮನ ಕಣ್ಣಿನೊಳಾಡುತಲದೆ ಚಿದ್ಛನ ಅಣುರೇಣುಕ ತಾ ಇದೆ ಪರಿಪೂರ್ಣ 2 ಕಣ್ಣಿನೊಳಾಡುವ ಭಾಸ್ಕರ ಕರುಣ ಭಿನ್ನವಿಲ್ಲದೆ ಚೆನ್ನಾಗ್ಯನುದಿನ ಚಿನ್ನ ಮಹಿಪತಿಗೆ ನೋಡೇವ ಧ್ಯಾನ ಧನ್ಯಗೈಸುವ ತಾ ದೀನೋದ್ಧರಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂತುಪಿತ ಕರುಣಾಕರ ನಿನ್ನ ಚಿಂತೆಯೊಳಗಿರಿಸಿ ಸಲಹಯ್ಯಾ ಜನಾರ್ದನಾ ಪ ಉಣ್ಣದುರಿಯುವಮನವ ನಿನ್ನಡಿದಳಿರನೆಳಲ ತಣ್ಣಸದಲಿರಿಸಿ ಸಲಹಯ್ಯ ಜನಾರ್ದನಾ 1 ವಿಪ್ರ ವಧೆಯಿಂದಲಾದಡಂ ವಿರಚಿಸಿದ ಲಾವಿಕವೆಂದದನೆ ಬಯಸಿ ಬಯಸೀ ದೇವ ಮನಕನವರತ ನಿನ್ನ ಪದ ತೀರ್ಥದಾ ಜೀವನವನಿತ್ತು ಸಲಹಯ್ಯಾ 2 ಭೂಮಿಯದು ಬುಧದಾನ ಸುರದಾನವಾದಡಂ ಆ ಮಹಿಯ ತನ್ನತ್ತ ಸೆಳೆವೆನೆಂದೂ ಕಾಮಿಸುವ ಮನಕೆ ನಿನ್ನಮಲಪಾದಾಂಬುಜವ ಸೀಮೆಯೊಳಗಿರಿಸು ವೈಕುಂಠ ಜನಾರ್ದನಾ 3
--------------
ಬೇಲೂರು ವೈಕುಂಠದಾಸರು