ಒಟ್ಟು 2315 ಕಡೆಗಳಲ್ಲಿ , 118 ದಾಸರು , 1758 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿತ್ಯ ವ್ಯಾಸತತ್ವಜ್ಞರಂಘ್ರಿ ಭಜಿಸೊ | ಕೃತ ಕೃತ್ಯನೆಂದೆನಿಸೊ | ಮಾನವ ಜನ್ಮ ಸಾರ್ಥಕೆನಿಸೊ | ಪುರುಷಾರ್ಥವಗಳಿಸೊ ಪ ಮೂರುವತಾರನ ಮತದೊಳು ಜನಿಸಿದರು ಮೂರನು ತ್ಯಜಿಸಿದರು ಮೂರು ಹತ್ತರಿಗೆ ಮುಖವಾಗಿರುತಿಹರು ಇವರಿಗೆ ಸಮರ್ಯಾರೊ 1 ಮಾನವ ಸ್ಮøತಿ ಮೊದಲಾದ ಗ್ರಂಥಗೈದ ದ್ವಿಜರಿಗೆ ಬೋಧಿಸಿದ || ಸಾನುರಾಗದಲಿ ಜ್ಞಾನಾಮೃತವೆರೆದ ದಶದಿಕ್ಕಿಲಿ ಮೆರೆದ | ಏನು ಪೇಳಲಿ | ಇವರ ದಿವ್ಯಪಾದ | ಮೋದ 2 ಶಾಮಸುಂದರನ ಕವನದಿ ಕೊಂಡಾಡಿ ಬಹಿರಂತರ ನೋಡಿ || ಸೋಮಪುರದಿ ದ್ವಿಜ ಸ್ತೋಮದಿಂದ ಕೂಡಿ ಇರುವರು ಮನೆ ಮಾಡಿ ಈ ಮಹಾತ್ಮರನು ನರನೆಂದವ ಖೋಡಿ ಸಂದೇಹ ಬ್ಯಾಡಿ3
--------------
ಶಾಮಸುಂದರ ವಿಠಲ
ನಿತ್ಯ ಶುಭಮಂಗಳಂ ಪ ವೇದಾಂತ ವೇದ್ಯನಿಗೆ ಆದಿನಾರಾಯಣಗೆ ಸಾದು ಸಜ್ಜನರ ಸಂರಕ್ಷಣಗೆ ಯಾದವಾಧಿಪ ಕೃಷ್ಣ ದನುಜರೆದೆ ದಲ್ಲಣಗೆ ಮಾಧವ ಮುಕುಂದ ಮುರಮರ್ಧನನಿಗೆ ನಿತ್ಯ ಶುಭಮಂಗಳಂ 1 ಶ್ರೀ ವತ್ಸಲಾಂಛನಗೆ ಶ್ರೀ ಕೇಶವಾಚ್ಯುತಗೆ ಭವ ಭಂಜನನಿಗೆ ಗೋವರ್ಧನವ ನೆತ್ತಿ ಗೋವುಗಳ ಕಾಯ್ದವಗೆ ಮಾವ ಕಂಸನ ಕೊಂದ ಗೋವಿಂದಗೆ 2 ನೀಲ ಮೇಘಾಂಗನಿಗೆ ನಿಜಶರಣ ಸಂಗನಿಗೆ ಕಾಲ ಭಯ ಶಿಕ್ಷನಿಗೆ ಕಮಲಾಕ್ಷಗೆ ಬಾಲಾರ್ಕ ಚಂದ್ರ ರವಿಕೋಟಿ ತೇಜನಿಗೆ ಮೂಲೋಕ ದೊಡೆಯನಿಗೆ ಮುರವೈರಿಗೆ 3 ಕಾಮಪಿತ ಕೃಷ್ಣನಿಗೆ ಕಡುಚೆಲ್ವಮಾಧವಗೆ ಸಾಮಗಾನ ವಿಲೋಲ ಸರ್ವೇಶಗೆ ವಾಮ ದೇವನ ಮಿತ್ರ ವಸುದೇವ ಪುತ್ರನಿಗೆ ಶ್ರೀ ಮಹಾಗೋವಿಂದ ಗೋಪಾಲಗೆ 4 ದುರಿತ ಸಂಹಾರಗೆ ಪರಮ ಪಾವನನಿಗೆ ಪಾಪವಿನಾಶಗೆ ಘೋರ ದುರಿತಾರಣ್ಯ ದಹನ ದೈತ್ಯಾಂತಕಗೆ ಪಾರ ಮಹಿಮಾನಂದ ಸುರವಂದ್ಯಗೆ 5 ನಾಗೇಂದ್ರ ಶಯನನಿಗೆ ನಿಗಮಾಗಮ ಸ್ತುತಗೆ ನಾಗಭೂಷಣ ನಮಿತಗೆ ಭಾಗೀರಥೀಪಿತಗೆ ಭಾಗವತ ಹಿತಕರಗೆ ಭಾಮೆಯರರಸ ಶ್ರೀ ಗೋಪಾಲಕೃಷ್ಣಗೆ 6 ವರಮತ್ಸ್ಯರೂಪನಿಗೆ ಕೂರ್ಮಾವತಾರನಿಗೆ ವರಹದಾಕೃತಿಯವಗೆ ನರಸಿಂಹಗೆ ವರದ ವಾಮನನಿಗೆ ವರ ಪರಶುರಾಮನಿಗೆ ಬುದ್ಧ ಶ್ರೀ ಕಲ್ಕಿಗೆ 7 ಇಂದಿರಾರಮಣಗೆ ಚಂದ್ರಶೇಖರ ಪ್ರಿಯಗೆ ನಂದಗೋಕುಲದರಸ ಗೋಪಾಲ ಕೃಷ್ಣಗೆ ಮಂದಮಾರುತ ತನಯ ಕೋಣೆ ನಿಜವಾಸಗೆ ಆ ನಂದ ಮೂರುತಿ ಶ್ರೀ ಲಕ್ಷ್ಮೀನಾರಾಯಣಗೆ 8
--------------
ಕವಿ ಪರಮದೇವದಾಸರು
ನಿತ್ಯದಿತಿಜರು ಕಲಿಗೆ ದೂರುತಿಹರೋ ಸತ್ಯಧ್ಯಾನರ ಕಾಟ ತಾಳಲಾರೆವೊಯೆಂದು ಪ ನೀ ಕಲಿಸಿದಾಟವನು ತಾ ಕಳೆದು ಜನರ ಅಘನೂಕಿ ಜಗಸತ್ಯ ಶ್ರೀ ಹರಿಯು ಪರನು ಶ್ರೀಕಮಲಭವರೆಲ್ಲ ದಾಸರೆಂದರುಪಲು ತಾ ಕಲ್ಪಿಸಿದ ಪಾಠಶಾಲೆ ಸಭೆಗಳನೆಂದು 1 ಭೂಸುರರಿಗನ್ನ ಧನ ಭೂಷಣಗಳಿತ್ತು ಅಭ್ಯಾಸಗೈಸಿದ ಸಕಲ ವೇದಶಾಸ್ತ್ರ ಏಸು ವಿಧ ಯತ್ನಗಳು ನಾ ಮಾಡಿದರು ಜಯ ಲೇಸು ಕಾಣದೆ ನಿನ್ನ ಬಳಿಗೆ ಬಂದೆವು ಎಂದು 2 ಇಂತು ತಾ ಮಾಡಿದನು ಪಿಂತಿನಾಶ್ರಮದಿ ಈ ಗಂತು ನಮ್ಮವರಾದ ವದು ಮತ್ಸರಾ ಕಂತು ಕೋಪಾದಿಗಳಿಗಂತಕನು ಯನಿಸಿ ಮುನಿ ಸಂತತಿಪನಾಗಿರುವದೆಂತು ನೋಳ್ಪೆವು ಎಂದು 3 ತಾಪಸೋತ್ತಮ ಸತ್ಯದ್ಯಾನದಿಂ ಭೂತಳದಿ ಪಾಪ ಸರಿದಿತು ಪುಣ್ಯವೆಗ್ಗಳಿಸಿತು ಲೇಪಿಸದು ಖತಿಜನಕ ಇವರ ದಯದಿಂದೆಮ್ಮ ವ್ಯಾಪಾರ ಧರೆಯೊಳಗೆ ಭೂಪ ಇನ್ಯಾಕೆಂದು 4 ನಿರುತ ಸಿರಿಗೋವಿಂದ ವಿಠಲನ್ನ ಸೇವಿಸುತಾ ಪರಹಿಂಸೆ ಧನಯುವತಿ ದ್ಯೂತತೊರದಾ ವರಯತಿಯ ಮೋಹಿಸುವ ಶಕ್ತಿ ತನಗಿಲ್ಲೆಂದು ಅರುಹಿದನು ಭೃತ್ಯರಿಗೆ ಕಲಿ ಮನನೊಂದು 5
--------------
ಅಸ್ಕಿಹಾಳ ಗೋವಿಂದ
ನಿತ್ಯದುದಯಾಸ್ತಮಾನದಲಿ ಸ ರ್ವೋತ್ತಮ ಹರಿನಾಮ ಬರೆದೋದಿ ಭಕ್ತಿಯಿಂದಾಲಿಪರ ಭವತಾಪ ಜರೆ ಮೃತ್ಯುನೀಗಿ ನಿತ್ಯಮುಕ್ತಿ ಕೈಸೇರುತಿಹ್ಯವು ಪ ನರಿಹರಿ ಹಯವದನ ಜನಾರ್ದನ ವಾಸುದೇವ ವಾರಿಜಾಕ್ಷ ಮುರಧ್ವಂಸಿ ಮುಪ್ಪುರಾಂತಕ ಮುಕ್ಕುಂದ ಹರಿ ಸರ್ವೇಶ ಉರಗಪರ್ಯಂಕ ನಿರಂಜನ ನಿರ್ಜರೇಶ ಶರಣಜನಮಂದಾರ ಸಿರಿಯರಸ ಪರಮಪ್ರಕಾಶ ಪರತರೇಶ ಪರಮಪುರುಷ ಪರಾತ್ಪರನೆಂದು 1 ಮಾಧವ ದೇವದೇವೇಶ ದನುಜರಸಂಹರ ಶ್ಯಾಮಸುಂದರ ಘನಮೇಘಶ್ಯಾಮ ಸಚ್ಚಿದಾನಂದ ಚಿನುಮಯಾತ್ಮ ತಚ್ಚೈತನ್ಯರೂಪ ವೇಣುಧರ ಗೋಪಾಲ ಗೋವ ರ್ಧನೋದ್ಧಾರ ಗಾನಾಂದಧೋಕ್ಷಜಪಿತ ಧ್ಯಾನಗಮ್ಯ ತ್ರಿಭುವನೇಶ ತ್ರಿವಿಕ್ರಮನೆಂದು 2 ನಿತ್ಯಗುಣಾರ್ಣವ ನಿಜಗುಣ ನಿಷ್ಕಲಂಕ ನಿತ್ಯಾತ್ಮ ನಿರುಪಮ ಪರಂಜ್ಯೋತಿ ನಿತ್ಯನಿರ್ಮಲ ಸತ್ಯಭಾಮಾಕಾಂತ ಚಿದ್ರೂಪ ಚಿತ್ಕಳಂಕ ಕಮಲಾಕ್ಷ ಲಕುಮೀಶ ಶೌರಿ ಸೂತ್ರಧಾರಿ ಭಕ್ತವತ್ಸಲ ಭಯನಿವಾರ ನರಸಿಂಹ ಮುಕ್ತಿದಾಯಕ ಮಧುಸೂದನ ರಮಾರಮಣ ಮೃತ್ಯುಂಜಯ ವಿಶ್ವೇಶ ವಿಶ್ವವ್ಯಾಪಕನೆಂದು 3 ಕಾಲಾರಿ ಚಕ್ರಿ ಚತುರ್ಭುಜ ಭವನಾಶ ನೀಲಾಂಗ ರಂಗ ರಾಘವ ಭುವನೇಶ ನೀಲಲೋಚನ ನಗಧರ ಜಗಮೋಹ ಮೇಲುನಿಲಯ ನಿಗಮಾತೀತ ಪದ್ಮನಾಭ ಕಾಲೀಮರ್ದನ ಕೌಸ್ತುಭಾಂಬರ ವಿಷ್ಣು ಪಾಲಸಾಗರಕನ್ನಿಕಾಪ್ರಿಯನಾಥ ಲೀಲಜಾಲ ಜಾಹ್ನವೀಜನಕ ಕೇಶವ ಶೂಲಪಾಣಿಸಖ ಶಾಂತಾಕಾರನೆಂದು4 ಪರಮಾನಂದ ಗೋವಿಂದ ಗಜರಕ್ಷ ಶರಧಿಮಥನ ಕೂರ್ಮಮತ್ಸ್ಯ ಕರುಣಾಂಗ ವಾಮನ ಧ್ರುವಪಾಲ ದುರಿತಾರಿ ಕೃಷ್ಣ ವೆಂಕಟ ವಿಠಲ ಶರಣಾಗತವರದ ನುತಪಾಲ ವರದಾತ ವೇದಾಂಗ ಸುಖಧಾಮ ವರ ಶ್ರೀರಾಮ ಪರಮ ಪುಣ್ಯನಾಮ ಧರೆಮೂರರೊಳತ್ಯಧಿಕಮೆಂದು 5
--------------
ರಾಮದಾಸರು
ನಿಧಾನವೆ ಕೇಳಿ ಸಜ್ಜನವೇ ಇಂದು ಜಿನ ಶಕ್ತಿಯಾನಂದದಾರಾಧನ ಪ ಒಂದು ಮನದಲಿ ವದಗಿನ್ನು ಒಂದು ಮನದಲಿ ವದಗಿನ್ನು ನೀವೆಲ್ಲಾ ವಂದದಾರುತಿಯಾ ಬೆಳಗುವಾ 1 ಒಂದು ಮಾರ್ಗವಿಡಿದು ಬಂದು ಗುರುಮುಖದಿಂದ ಒಂದನೆ ಭಕ್ತಿ ತಿಳಿದಿನ್ನು ಒಂದನೆ ಭಕ್ತಿ ತಿಳಿದು ಪರೀಕ್ಷಿತಿಯಂತೆ ವಂದನಾರುತಿಯಾ ಬೆಳಗುವಾ 2 ಎರಡಕ ಮೀರದಾ ಎರಡಕ್ಷರದಿಂದ ಎರಡನೆ ಭಕ್ತಿ ತಿಳಿದಿನ್ನು ಎರಡನೇ ಭಕ್ತಿ ತಿಳಿದು ನಾರದರಂತೆ ಎರಡನಾರತಿಯಾ ಬೆಳಗೀರೇ 3 ಮೂರು ಬಲಿಯನೆದಾಟಿ ಮೂರು ರತ್ನವಗಂಡು ಮೂರನೇ ಭಕ್ತಿ ತಿಳಿದಿನ್ನು ಮೂರನೇ ಭಕ್ತಿ ತಿಳಿದು ಪ್ರಲ್ಲಾದನಂತೆ ಮೂರನಾರತಿಯಾ ಬೆಳಗೀರೇ 4 ನಾಕುಸ್ಥಾನವ ಮುಟ್ಟಿ ನಾಕರಂತವ ನೋಡಿ ನಾಕನೇ ಭಕ್ತಿ ತಿಳಿದಿನ್ನು ನಾಕನೇ ಭಕ್ತಿ ತಿಳಿದು ಜನಕನಂತೆ ನಾಕನಾರತಿಯಾ ಬೆಳಗೀರೇ 5 ಐದುಕ್ಲೇಶಗಳ್ಹಿಂಗಿ ಐದರೊಂದನೆ ಮಾಡಿ ಐದನೇ ಭಕ್ತಿ ತಿಳಿದಿನ್ನು ಐದನೇ ಭಕ್ತಿ ತಿಳಿದು ಗರುಡನಂತೆ ಐದನಾರತೀಯ ಬೆಳಗೀರೆ 6 ಆರನೇ ಭಕ್ತಿ ಆರು ಸಂಗವ ಮೀರಿ ಆರು ಪರಿಯಾಗದೇ ಆರನೇ ಭಕ್ತಿ ತಿಳಿದಿನ್ನು ಆರನೇ ಭಕ್ತಿ ತಿಳಿದು ಪುಂಡಲೀಕನಂತೆ ಆರನಾರತಿಯಾ ಬೆಳಗೀರೆ 7 ಏಳು ವ್ಯಸನವ ಬಿಟ್ಟು ಏಳು ಧಾತುವ ಕಂಡು ಏಳನೇ ಭಕ್ತಿ ತಿಳಿದಿನ್ನು ಏಳನೇ ಭಕ್ತಿ ತಿಳಿದು ಹನುಮಂತನಂತೆ ಏಳನಾರತಿಯಾ ಬೆಳಗೀರೆ 8 ಎಂಟು ಮದಗಳ ಜರಿದು ಎಂಟು ಸಿದ್ಧಿಯ ತೊರೆದು ಎಂಟನೆ ಭಕ್ತಿ ತಿಳಿದಿನ್ನು ಎಂಟನೇ ಭಕ್ತಿ ತಿಳಿದು ಅರ್ಜುನ ನಂತೆ ಎಂಟನೇ ಭಕ್ತಿ ಯಾರತಿಯಾ ಬೆಳಗೀರೆ 9 ಒಂಭತ್ತರನೇ ಬಲಿದು ಒಂಭತ್ತರ ನೆಗೆಲಿದು ಒಂಭತ್ತರನೇ ಭಕ್ತಿ ತಿಳಿದಿನ್ನು ಒಂಭತ್ತರನೇ ಭಕ್ತಿ ತಿಳಿದು ಬಲಿಯಂದದಿ ಒಂಭತ್ತನಾರತಿಯಾ ಬೆಳಗೀರೆ 10 ಗುರು ಮಹಿಪತಿ ಸುತಬ ಹೊರವ ದೇವಿಗೆ ಧರಿಯೊಳೀಪರಿಯಲಿ ನೀವು ಧರಿಯೊಳೀಪರಿ ನೀವು ಮಾಡಲಿಕೀಗ ಪರಮ ಆನಂದಾದೋರುವದು 11
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿನಗಿಂತ ಕುಂದೇನೊ ನಮ್ಮಮ್ಮ ಜಯಲಕ್ಷ್ಮೀ ಪ ನಿನಗಿಂತ ಕುಂದೇನೋ ಸನಕಾದಿಗಳ ಸ್ವಾಮಿಮನಸಿಜನೊಡೆಯನೆ ಕನಕಗರ್ಭನ ಜನಕ ಅ ಮಚ್ಚ್ಯಾವತಾರ ನೀನಾದರೆ - ಆಕೆಮಚ್ಚ್ಯಗಂಗಳೆ ತಾನಾದಳೊಹೆಚ್ಚಿನ ಶಂಖವ ಪಿಡಿದರೆ - ಆಕೆನಿಚ್ಚ ಶಂಖಕಂಠಳಾದಳಯ್ಯ 1 ನೀಲವರ್ಣ ನೀನಾದರೆ - ಆಕೆನೀಲಕುಂತಳೆ ತಾನಾದಳೊಲೋಲ ಕಮಲನಾಭನಾದರೆ - ಆಕೆಬಾಲ ಕಮಲಮುಖಿಯಾದಳಯ್ಯ2 ಬೆಟ್ಟವ ನೀನೊಂದು ಪೊತ್ತರೆ - ಆಕೆಬೆಟ್ಟದಂಥ ಕುಚವೆರಡು ಪೊತ್ತಳೊಮೆಟ್ಟಿ ಶೇಷನ ನೀ ತುಳಿದರೆ - ಆಕೆಕಟ್ಟಿ ಬಾಸೆಗೆ ಶೇಷನ ನಿಲಿಸಿಹಳಯ್ಯ3 ಗಜರಾಜವರದ ನೀನಾದರೆ - ಆಕೆಗಜಗಮನೆಯು ತಾನಾದಳಯ್ಯನಿಜ ನರಸಿಂಹ ನೀನಾದರೆ - ಆಕೆಭಜಿಸಿ ಸಿಂಹಮಧ್ಯೆಯಾದಳಯ್ಯ 4 ಈ ಪರಿಯೊಳು ನೀನು ಜನಿಸಿದೆ - ಭಲೆಭಾಪುರೆ ಬಾಡದೊಳು ನೆಲೆಸಿದೆಗೋಪಿಯರ ಮೋಹ ಸಲಿಸಿದೆ - ಚೆಲುವಶ್ರೀಪತಿ ಆದಿಕೇಶವರಾಯ ಮೆರೆದೆ5
--------------
ಕನಕದಾಸ
ನಿನಗೆ ಅಂಜುವಳಲ್ಲೋ ಮುರಾರೆ ಮಧುರಿಪು ಪ ಮಲ್ಲರ ಗೆಲಿದಿಹ ಗೊಲ್ಲ ಗೋಪಾಲ ಬಾ ಪರಿಪಾಲಿಸು ಅ.ಪ. ಮಾನವ ಮಡುಹಿದ ಮಲ್ಲನ ಕಂಡು ಅಂಜುವಳೆ ರಂಗ ನಾ ಅಂಜುವಳೇ 1 ಥಂಡ ಥಂಡದಾ ಬಲು ಭಂಡ ಮಾತಾಡುವ ಪುಂಡನಿಗೆ ನಾ ಅಂಜುವಳೇ ಪುಂಡ ಜರಾಸಂಧನಿಗಂಜಿ ನಗೇಂದ್ರನ ಭಂಡಿ ಪೊಡೆದ ಈ ಭಂಡನಿಗೇ ರಂಗಾ ನಾ ಅಂಜುವೆನೇ 2 ಹಿಂಡು ಜೀವರಾ ನಾ ಅಂಬುಜದೊಳಿಟ್ಟು ಸಲಹುವತೊಂಬನಿಗೆ ನಾ ಅಂಜುವಳೇ ಪುಂಡ ಖಳರ ಚಂಡಾಡುವತಂದೆವರದಗೋಪಾಲವಿಠ್ಠಲ ರಂಗಾ 3
--------------
ತಂದೆವರದಗೋಪಾಲವಿಠಲರು
ನಿನಗೆ ನೀನೆ ಕೃಷ್ಣ ದಯಮಾಡಿ ಸಲಹಯ್ಯಎನಗೊಂದು ಸಾಧನ ಲೇಸುಕಾಣಬಾರದು ಪ. ಸ್ನಾನಮಾಡಿಯೆ ನಿನ್ನ ಸಂಪಾದಿಸೇನೆಂದರೆಸ್ನಾನಮಾಡದೇ ಕಪ್ಪೆ ಸರ್ವಕಾಲದಲಿಧ್ಯಾನ ಮಾಡಿಯೇ ನಿನ್ನ ಸಂಪಾದಿಸೇನೆಂದರೆಧ್ಯಾನ ಮಾಡದೇ ಬಕಪಕ್ಷಿಯು ಸರ್ವದಾ 1 ಜಪವ ಮಾಡಿಯೆ ನಿನ್ನ ಕೃಪೆಗೊಳಗಾಗುವೆನೆನೆಜಪದಲ್ಲಿ ಮನಸ್ಸೆನ್ನಾಧೀನವಿಲ್ಲಉಪವಾಸವೇ ಉಚಿತ ಸಾಧನವೆಂಬೆನೆಉಪವಾಸವೇ ಇರದೆ ಉರಗನು ತಾ ಸರ್ವದಾ 2 ಸನ್ನ್ಯಾಸ ಸುಖಸಾಧನವು ಎಂತೆಂಬೆನೆಸನ್ನ್ಯಾಸಿಯಾಗಿರನೆ ರಾವಣನುಕನ್ಯಾದಾನವೆ ಮುಖ್ಯ ಸಾಧನವೆಂಬೆನೆಕನ್ಯಾದಾನವ ಕೊಡನೆ ಕಂಸಗೆ ಜರಾಸಂಧ 3 ದುರುಳ ದುರ್ಯೋಧನ 4 ಬಂಧುತ್ವವೇ ಗತಿ ಸಾಧವವೆಂಬೆನೆಬಂಧುತ್ವವಿರದೆ ಶಿಶುಪಾಲನಿಗೆಒಂದರಿಂದುಚಿತ ಕಾಣೆ ಹಯವದನರಾಯನೆಎಂದೆಂದಿಗೂ ದಾಸನೆಂದೆನಿಸೊ5
--------------
ವಾದಿರಾಜ
ನಿನಗೆ ನೀನೇ ಕೃಷ್ಣ ದಯಮಾಡಿ ಸಲಹೋಎನಗೊಂದು ಸಾಧನ ಲೇಶ ಕಾಣಬರದೋ ಪ ಸ್ನಾನವ ಮಾಡಿ ನಿನ್ನ ಸಮತಿಸುವೆನೆಂದರೆಸ್ನಾನ ಮಾಡದೆ ಕಪ್ಪೆ ಸರ್ವಕಾಲದಲೀಧ್ಯಾನವ ಮಾಡಿ ನಿನ್ನ ಸಮತಿಸುವೆನೆಂದರೆಧ್ಯಾನವ ಬಕ ಸರ್ವಕಾಲದಲೀ 1 ಉರಗ ಸರ್ವ ಕಾಲದಲೀ 2 ಸನ್ಯಾಸವೇ ನಿನ್ನ ಸಾಧನವೆಂದರೆಸನ್ಯಾಸವಿರದೇ ಆ ರಾವಣಗೇಕನ್ಯಾದಾನವೆ ನಿನ್ನಾ ಸಾಧನವೆಂದರೆಕನ್ಯಾದಾನ ಮಾಡಾನೆ ಕಂಸಗೆ ಜರಾಸಂಧ3 ದುರುಳ ದುರ್ಯೋಧನಗೆ 4 ಬಂಧುತ್ವವೇ ನಿನ್ನ ಸಾಧನವೆಂದರೆಬಂಧುತ್ವವಿರದೇ ಆ ಶಿಶುಪಾಲಗೆಒಂದೂ ಸಾಧನ ಕಾಣೇ ಉಚಿತಾವೇ ಶ್ರೀಕೃಷ್ಣಎಂದೆಂದಿಗೂ ನಿನ್ನ ದಾಸನೆನಿಸೊ 5
--------------
ವ್ಯಾಸರಾಯರು
ನಿನ್ನ ಅರುಸುತನಕ್ಕೇನೆಂಬೆನೊ ವೆಂಕಟೇಶಾ ಘನ್ನಗಿರಿಯ ವಾಸ ಕಮಲಾಸನ ಜನಕ ತಿರುಮಲೇಶಾ ಪ ಹರುವ ಸರ್ಪಯಿರುವ ಚೋರ ಶರಧಿ ಉರೆವ ಕಿಚ್ಚು ಕರೆವ ಮೃತ್ಯು ಸುರಿವ ಮಳೆ ಬಿರುವನೆಲ್ಲ ಹೊಡೆವ ದೈತ್ಯಾ ತೊರೆವ ಸನ್ನ್ಯಾವ ಮೇರೆ ತಪ್ಪಿ ಭರದಿ ತನಗೆ ಇದಿರು ಬಂದವ ಕಾಣುತತಿ ಹರಿಯ ನಾಮ ಮುಟ್ಟುವ ದೇವ ಶ್ರೀನಿವಾಸಾ1 ಸೃಷ್ಟಿ ಜನರಿಗೊಂದು ಆಳು ಕೊಟ್ಟು ವೇಗದಿಂದ ಕರಿಯ ಲಟ್ಟಿದವರ ಕಾಣೆನಯ್ಯಾ ಎಷ್ಟೆಷ್ಟು ದೂರದಿಂದಲಿ ಕಟ್ಟಿಕೊಂಡು ಹೊನ್ನು ಹಣಗಳ ತಮಗೆ ತಾನೆ ಅಟ್ಟಹಾಸದಿಂದ ಮಂಗಳವ ಪಾಡಿ ಪೊರ ಮಟ್ಟ ಒಪ್ಪ ತಿರುವೆಂಗಳಾ2 ಹದಿನೆಂಟು ಜಾತಿಯವರು ಒದಗಿ ಮುದದಿಂದ ಕುಣಿದು ಪದೋಪದಿಗೆ ಹಾಡಿ ಪಾಡುತ ಹದುಳವಾದ ಪಂಚವಾದ್ಯ ಎದುರುನಿಂದು ಧ್ವನಿಯ ಮಾಡುತಾ ದಾಸರೆಂಬೊ ಅಟ್ಟಹಾಸದ ಮಾತು ನುಡಿಯುತ್ತ ನಿತ್ಯ ನಿನ್ನ ಮದುವೆಯೆಂದು ಸುಖವು ಸುರಿಯುತ್ತಾ 3 ಎಲ್ಲರಿಲ್ಲಿಗೆ ಬಂದರೇನು ಯಿಲ್ಲ ಪು ಣ್ಯಲೇಶ ಮಾತ್ರ ಸಲ್ಲದಯ್ಯಾ ಮುಕ್ತಿಗವರು ಇಲ್ಲೆ ಸುಖವು ಬಟ್ಟು ಕಡಿಗೆ ಎಲ್ಲೆಲ್ಲಿ ಜನಿಸಿ ಬಹು ಭವದ ಪಲ್ಲಡಿಯೊಳಗೆ ಜನಿಸಿ ಜ್ಞಾನ ವಿಲ್ಲದೆ ಸಲ್ಲುವರು ದುರಿತವ ವಹಿಸಿ 4 ಮನುಜರೆಣಿಕೆ ಏನು ಮತ್ತೆ ವನಜ ಸಂಭವ ಈಶ ಮುಖ್ಯ ಅನಿಮಿಷರೆಲ್ಲ ಬಂದು ಭಯದಿ ಮನಸಿನಲಿ ನಿನ್ನ ಅರಸುತನದ ಶೌರ್ಯ ಮಣಿದು ನಮಸ್ಕರಿಸುತಾ ವಾಲ್ಗೈಸುತಾ ಹೊಣಿಯೊ ವಿಜಯವಿಠ್ಠಲ ಎನುತಾ 5
--------------
ವಿಜಯದಾಸ
ನಿನ್ನ ಉನ್ನತ ಮಹಿಮೆಯನ್ನು ಬಣ್ಣಿಪ ಶಕ್ತಿ ಎನಗೆಂತು ಕರುಣಾರ್ಣವ ಪ ಅನ್ಯಕುಲದಲಿ ಜನಿಸಿ ಅನ್ಯ ಆಹಾರಗಳುಂಡು ಕುನ್ನಿಯಂತೆ ಕಳೆವೆ ದಿನವ ಅಭವ ಅ.ಪ ಶೋಧಿಸಿಶಾಸ್ತ್ರಪದ ಛೇದಿಸಿ ಬಣ್ಣಿಸಲೆ ಓದು ನಾ ಕಲಿತಿಲ್ಲವೋ ವೇದಪೂರ್ವಕಮಾಗಿ ಸಾಧನದಿ ಬಣ್ಣಿಸಲೆ ವೇದ ಎನಗೊಳುಪಿಲ್ಲವೋ ಸಾಧುವರ್ತನದ ಮಹಾದಾದಿಯಿಂ ಬಣ್ಣಿಸಲೆ ಸಾಧುಪಥ ಗುರ್ತಿಲ್ಲವೋ ಆದಿಮೂರುತಿ ನಿನ್ನ ಪಾದಪೊಗಳಲು ಒಂದು ಹಾದಿಗೊತ್ತೆನಗಿಲ್ಲವೋ 1 ದೃಢಮಾಗಿ ನಿನ್ನ ಸಮದೃಢ ಮಹಿಮೆ ಬಣ್ಣಿಸಲೆ ದೃಢಭಕ್ತಿಯೆನಗಿಲ್ಲವೋ ಎಡಬಿಡದೆ ಬಣ್ಣಿಸಲೆ ಪೊಡವಿಯೋಳ್ನಿನ್ನವರ ಒಡನಾಟ ಎನಗಿಲ್ಲವೋ ಕಡು ಗೂಢವಾಗಿ ನಿನ್ನಡಿಗಳನು ಬಣ್ಣಿಸಲೆ ಜಡಮತಿ ನಾ ಬಣ್ಣಿಪೆನೆ ಕಡೆಯಿಲ್ಲದ ತವಮಹಿಮೆ ಮೃಡ ಅಜರಿಗಸದಳವೋ ತಿಳಿವೋ 2 ಸುಗುಣಗುಣಾಂತ ನಿನ್ನ ಸುಗುಣಗಳ ಬಣ್ಣಿಸಲು ಸುಗುಣಗುಣ ಎನಗಿಲ್ಲವೋ ನಿಗಮಾತೀತನೆ ನಿನ್ನ ಗುಟ್ಟು ಬಣ್ಣಿಸಲೆ ನಿಗಮವ ನಾನರಿತಿಲ್ಲವೋ ಅಗಣಿತಮಹಿಮ ನಿನ್ನ ಹಗರಣದ ಮಹಿಮೆಯ ಬಗೆಬಲ್ಲವ ನಾನಲ್ಲವೋ ಪೊಗಳುವೆನು ಮಿಗಿಲೆನ್ನುತ ಸತತ3
--------------
ರಾಮದಾಸರು
ನಿನ್ನ ಚಿತ್ತಕೆ ಬಂದುದನು ಮಾಡು ಸರ್ವೇಶ ಎನ್ನ ಸ್ವಾತಂತ್ರ್ಯ ಲವಮಾತ್ರ ಉಂಟೇ ಸ್ವಾಮಿ ಪ ಅನಂತಾನಂತ ಜನ್ಮ ಕಾದರು ಒಮ್ಮೆ ಚೆನ್ನ ಗೋಪಾಲ ಕೃಷ್ಣದೇವ ಅ.ಪ. ಛೀ ಎನಿಸು ಜನರಿಂದ ನಿಂದ್ಯವನು ಮಾಡಿಸು ಬಾಯದೆರೆಸೊ ಹೊಟ್ಟೆಗಾಗಿ ಗಾಯನವ ಮಾಡಿಸು ಗುಪ್ತದಲ್ಲೇ ಇರಿಸು ದಾಯಾದಿಗಳಿಗೊಪ್ಪಿಸು ರಾಯಪದವಿಯ ಕೊಡಿಸು ರಾಜ್ಯವೆಲ್ಲವ ಮೆರೆಸು ಕಾಯಕ್ಲೇಶವನು ಪಡಿಸು ಮಾಯಾಧವನೆ ನಿನ್ನ ಮಹಿಮೆ ತಿಳಿದವರಾರು ನ್ಯಾಯ ಅನ್ಯಾಯವಾಗಿ ಶ್ರೀಶ 1 ಧನವನ್ನೆ ಕೊಡಿಸು ದಾನವನೆ ಮಾಡಿಸು ಗುಣವುಳ್ಳ ಮನುಜನೆನಿಸು ಮನಸು ಚಂಚಲನೆನಿಸು ಮಾತುಗಳ ಪುಸಿಯೆನಿಸು ಕ್ಷಣದೊಳಗೆ ಶುದ್ಧನೆನಿಸು ಋಣದ ಭಯವನೆ ಹೊರಿಸು ರಿಕ್ತ ನಾನೆಂದೆನಿಸು ತೃಣದಂತೆ ಮಾಡಿ ನಿಲಿಸು ನಿತ್ಯ ಮನದಿಚ್ಛೆಗಾರನೆ ದಿನ ಪ್ರತಿದಿವಸವಾಗೆ, ದೇವ 2 ಯಾತ್ರೆಯನೆ ಮಾಡಿಸು ಯೋಚನೆಯಲೇ ಇರಿಸು ಪಾತ್ರ ಜನರೊಳು ಪೊಂದಿಸು ಗೋತ್ರ ಉತ್ತಮನೆನಿಸು ಗೋವುಗಳ ಕಾಯಿಸು ಧಾತ್ರಿಯೊಳು ನೀಚನೆನಿಸು ಮೈತ್ರರೊಳು ಕೂಡಿಸು ಮೈಗೆಟ್ಟವನೆನಿಸು ಸ್ತೋತ್ರಕ್ಕೆ ಯೋಗ್ಯನೆನಿಸು ನೇತ್ರ ಮೂರುಳ್ಳವನು ಸ್ತುತಿಸಿದ ಮಹಾಮಹಿಮ ರಾತ್ರಿ ಹಗಲು ಎನ್ನದೆ ದೇವ 3 ಉಪವಾಸದಲ್ಲಿರಿಸು ಉಚಿತ ಭೋಜನ ಉಣಿಸು ಜಪತಪವನೆ ಮಾಡಿಸು ಅಪಹಾಸ್ಯ ಮಾಡಿಸು ಅದ್ಭುತವನೈದಿಸು ಗುಪಿತರೊಳಗಧಿಕನೆನಿಸು ಉಪಕಾರಿ ನರನೆನಿಸು ಉದ್ದಂಡನಿವನೆನಿಸು ವಿಪುಳ ಮತಿಯಲಿ ನಿಲಿಸು ಅಪರಿಮಿತ ಗುಣನಿಧಿಯೆ ಆನಂದ ಮೂರುತಿಯ ಸಫಲಮತಿಯೀವ ದೇವ 4 ವೇದವನು ಓದಿಸು ವೇದಾರ್ಥಗಳ ನುಡಿಸು ಓದಿದರು ದಡ್ಡನೆನಿಸು ಹಾದಿಯನು ತಪ್ಪಿಸು ಹಿತದವರನಗಲಿಸು ಸಾಧು ಮಾರ್ಗವನೆ ಕೊಡಿಸು ಬಾಧೆಗಳನಟ್ಟಿಸು ಭಕುತಿವೆಗ್ಗಳನೆನಿಸು ಉದರಕೋಸುಗ ತಿರುಗಿಸು ಪಾದದಲಿ ಗಂಗೆಯನು ಪೆತ್ತ ಪರಮಾನಂದ ಮೋದ ವಿನೋದವಾಗೆ ದೇವ 5 ಕುಣಿಕುಣಿದಾಡಿಸು ಕಾಶಿಯಲಿ ಪೊಂದಿಸು ಮಣಿ ಭೂಷಣವ ತೊಡಿಸು ಘನ ಕವನ ಪೇಳಿಸು ಕೌತುಕವನೈದಿಸು ವನ ಭುವನದೊಳು ನಿಲಿಸು ಪ್ರಣವ ಮಂತ್ರವ ಜಪಿಸು ಪ್ರಕಟಭಯವನೆ ಬಿಡಿಸು ಬಿನುಗು ವೈರಾಗ್ಯನೆನಿಸು ಜನನಿ ತನುಜರ ಕೂಡೆ ಅನುಸರಿಸಿ ನಡೆವಂತೆ ಎನಗೆ ನೀನೆ ಸದ್ಗತಿ ಸ್ವಾಮಿ 6 ಯಾವುದಾದರು ನೀನು ಇತ್ತುದಕೆ ಎನಗಿಷ್ಟು ನೋವು ಒಂದಾದರಿಲ್ಲ ಜೀವೇಶರೊಂದೆಂಬ ದುರ್ಮತವ ಕೊಡದಿರು ಭಾವದಲಿ ನಾ ಬೇಡುವೆ ಆವಾವ ನರಕದಲಿ ಬಹುಕಾಲವಿಟ್ಟರು ಇಪ್ಪೆ ನಾನೊಲ್ಲೆ ಮಿಥ್ಯಮತವ ಕಾವ ಕರುಣೆ ನಮ್ಮ ವಿಜಯವಿಠ್ಠಲರೇಯ ಪಾವನ್ನ ಮಾಳ್ಪ ಶಕ್ತ ವ್ಯಕ್ತ 7
--------------
ವಿಜಯದಾಸ
ನಿನ್ನ ದಾಸನು ನಾನು ಎಂತಾಹೆನಯ್ಯಅನ್ನಂತ ಅಪರಾಧಕಾಕರಾದವನು ಪ. ಅರುಣೋದಯವ ಜರಿದು ಆಹ್ನಿಕ ಕರ್ಮವ ತೊರೆದುಪೊರೆವ ನಿನ್ನಡಿಯ ಮರೆದುದುರುಳರಿಗೆ ಬಾಯ್ದೆರೆದು ದೈನ್ಯದಲಿ ಪಲ್ಗಿರಿದುಮರಿಯಾದೆಗೆಟ್ಟು ತಿರಿದುಇರುಳು ಹಗಲೆನ್ನದೆ ಈ ವಿಧದಿ ಹೊಟ್ಟೆಯಹೊರೆದು ಇದು ಪುಣ್ಯ ಇದು ಪಾಪವೆಂದರಿಯದವ 1 ಜಟ್ಟಿಗಳ ಮನೆಯ ನಾಯಂತೆ ಒಳ್ಳೆಬಟ್ಟೆಗಳತೊಟ್ಟವರ ಹಿಂದೆ ತಿರುಗಿಅಟ್ಟುಂಡು ಬಾಳಿಬದುಕಿದ ತಮ್ಮ ಹಿರಿಯರುಕೆಟ್ಟು ಮುರಿದುದನು ಪೇಳಿಉಟ್ಟ ಅರಿವೆಯ[ಕೋರಿ] ಹೊಟ್ಟೆ ಬಾಯನೆ ತೋರಿಕೊಟ್ಟುದಕೆÉ ತೃಪ್ತನಾಗದೆ ಅವರ ಬಯ್ವವನು 2 ವೃತ್ತಿ ಅಲ್ಲದ ಶೂದ್ರ ವೃತ್ತಿಗಳನನುಸರಿಸಿ ಅ-ಕೃತ್ಯ ಶತಗಳನು ಮಾಡಿಸತ್ಯ ಶೌಚಂಗಳ ಬಿಟ್ಟು ಶ್ರವಣ ಮನನಾದಿ ಪ್ರ-ಸಕ್ತಿಗಳ ಹೋಗಲಾಡಿಉತ್ತಮರು ತಾಯಿತಂದೆ ಗುರುಹಿರಿಯರುಗಳಅರ್ಥಗಳನಪಹರಿಸಿ ಅವರ ನಿಂದಿಸುವನು 3 ಪರ್ವ ಉಪರಾಗ ದ್ವಾದಶಿ ಅಯನಗಳಲ್ಲಿಸರ್ವವಿಹಿತಗಳ ಮೀರಿಉರ್ವಿಯೊಳು ಉಳ್ಳ ಯೋಗ್ಯರನೆಲ್ಲ ಹಳಿದೆನ್ನನಿರ್ವಾಹಗಳನೆ ತೋರಿದುರ್ವಿಚಾರದಿ ಸ್ವಲ್ಪಧನಕಾಗಿ ಎನ್ನೊಳಿಹಪೂರ್ವಸಂಚಿತಮಂತ್ರ ತುಚ್ಛರಿಗೆ ಮಾರಿದವ 4 ಛಲ ಚಾಡಿ ಡಂಭ ಮಿಥ್ಯಾಜ್ಞಾನ ದುರ್ವಿಷಯಕುಲಸತಿಯ ಕೂಡೆ ಕಲಹಕಳವು ಕಠಿಣೋಕ್ತಿ ದುಷ್ಟಾನ್ನಭೋಜನ ಮದುವೆ-ಗಳ ಮುರಿವ ಪಾಪಚಿಂತೆಹಳಿವ ಹರಿವಾಸರ ವ್ರತಭಂಗದಿಂದ ನಾನಾಗಿಸುಲಭ ಹಯವದನನ್ನ ಮರೆತ್ಹಾಳುಹರಟೆಯವ 5
--------------
ವಾದಿರಾಜ
ನಿನ್ನ ಧ್ಯಾನವ ಕೊಡು ಎನ್ನ ಧನ್ಯನ ಮಾಡು ಚೆನ್ನ ಶ್ರೀ ಶೇಷಾದ್ರಿ ಸನ್ನಿವಾಸಾ ಪ ಭೀಷಣವಾಗಿಹ ಭವಸಾಗರದೊಳು ನಾಶಗೊಳಿಪುವರು ನೆಗಳಿಗಳು ಬೀಸುವವನುದಿನ ಮೂರು ಘಾಳಿಗಳು ಈ ಸಂಖ್ಹ್ಯಾಂಗ ಕೈಪಿಡಿಯೋ ಕೃಪಾಳು1 ಭವವೆಂಬ ಕಿಚ್ಚನ್ನ ಸಹಿಸುವ ಪರಿಯೇನೋ ಯುವತೀ ವಿಷಯ ಸುಖಲುಬ್ಧನಾಗಿಹೆನೋ ಹವ್ಯವಾಹನನೆನ್ನನಾಡು ಮಾಡಿದೆಯೇನೋ ಪವನನೈಯಾತ್ವತ್ಪದಾಪದ್ಮ ಭೃಂಗನೋ2 ಪರಿಪರಿ ದುರಿತಂಗಳಿಂದ ಮನದೆಡೆಯೊಳು ಹರಿಸೇವಾರ್ಚನೆಗಳಿಗೆ ಅನುವಿಲ್ಲವು ಪರಮ ಭಾಗವತರ ಜರೆವ ಖಳ ಜನರಾ ನೆರೆಯಿರದಂತೆ ಮಾಡೊ ನರಸಿಂಹವಿಠ್ಠಲಾ 3
--------------
ನರಸಿಂಹವಿಠಲರು
ನಿನ್ನ ನಂಬಿರುವೆ ಪ್ರಸನ್ನನಾಗು ಬ್ಯಾಗಚನ್ನಿಗವರದ ವಿಜಯರಾಯ ಪ ಮನ್ನಿಸಿ ಎನ್ನ ಪಾವನ್ನ ನೀ ಮಾಡದಿರೆಬೆನ್ನ ಬಿಡೆನೊ ನಿನ್ನ ಜೀಯಾ ಅ.ಪ. ಕರುಣಸಾಗರನೆಂಬೊ ಬಿರಿದು ನಿನಗಿಹುದೆಂದುಹಿರಿಯರಿಂದರಿತಿರುವೆ ಜೀಯಾ ||ಮರೆಯದೇ ಪೊರೆ ನಿನ್ನ ಚರಣಭಜಕನೆಂದುಸರುವ ಅಘವನು ಕ್ಷಮಿಸಿ ರಾಯಾ ||ದುರುಳ ವಿಷಯಕ್ಕಿಳಿವ ಮರುಳ ಮನವನ್ನು ನಿನ್ನಚರಣದಲಿ ನಿಲಿಸಿನ್ನು ಜೀಯಾ ರಾಯಾ 1 ವಿಧಿ ಜಪ ತಪವ ಅರಿಯೆ ಹೋಮ ನೇಮಅರಿಯೆ ಮಂತ್ರ ಸ್ತೋತ್ರವ ||ಬರಿದೆ ಧರಿಯೊಳು ತಿರುಗಿ ಹರಿಯ ಸ್ಮರಿಸದೆ ದಿನವಇರುಳು ಹಗಲು ಕಳದೆನು ||ಕರುಣವಿಲ್ಲವ್ಯಾಕೆ ಶರಣಾಗತನ ಇನ್ನುಪೊರೆಯದೇ ಬಿಡುವದು ಥರವಲ್ಲವೆಂದಿಗೂ 2 ಅಜ ಭವರಿಂದೊಂದ್ಯನಾದ್ವಿಜಯ ಮೋಹನ ವಿಠಲಭಜಕರಿಗೊಲಿದಂತೆ ಉಪಾಯ ||ನಿಜವಾಗಿ ಮಾಡದಿರೆ ಬಿರುದಿಗೆ ಕುಂದುಗಜರಾಜವರದನ ಪ್ರಿಯಾ ||ಕುಜನರ ಮತ ಬಡಿದು ವಿಜಯ ವಿಠಲನೇ ಪರನೆಂದುತ್ರಿಜಗದೊಳು ಮೆರಸಿದ ಭಜಕಾಗ್ರೇಸರ ಗುರುವೆ 3
--------------
ಮೋಹನದಾಸರು