ಒಟ್ಟು 1497 ಕಡೆಗಳಲ್ಲಿ , 112 ದಾಸರು , 1202 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭೂರಿ ನಿಗಮವ ಕದ್ದ ಚೋರದೈತ್ಯನ ಗೆದ್ದ ಸಾರ ವೇದಗಳ ವಿಧಿಗಿತ್ತ ಸಾರ ವೇದಗಳ ವಿಧಿಗಿತ್ತ ಮತ್ಸ್ಯಾವ- ತಾರಗಾರತಿಯ ಬೆಳಗಿರೆ 1 ವಾರಿಧಿ ಮಥನದಿ ನೀರೊಳು ಗಿರಿ ಮುಳುಗೆ ತೋರಿ ಬೆನ್ನಾಂತ ಸುರನುತ ತೋರಿ ಬೆನ್ನಾಂತ ಸುರನುತ ಕೂರ್ಮಾವ- ತಾರಗಾರತಿಯ ಬೆಳಗಿರೆ 2 ಧಾತ್ರಿಯ ಕದ್ದೊಯ್ದ ದೈತ್ಯನÀ ಮಡುಹಿದ ಎತ್ತಿ ದಾಡೆಯಲಿ ನೆಗಹಿದ ಎತ್ತಿ ದಾಡೆಯಲಿ ನೆಗಹಿದ ವರಾಹ- ಮೂರ್ತಿಗಾರತಿಯ ಬೆಳಗಿರೆ 3 ಕಡು ಬಾಲನ ನುಡಿಗೆ ಒಡೆದು ಕಂಬದೊಳುದಿಸಿ ಒಡಲ ಸೀಳಿದ ಹಿರಣ್ಯಕನ ಒಡಲ ಸೀಳಿದ ಹಿರಣ್ಯಕನ ನರಸಿಂಹ ಒಡೆಯಗಾರತಿಯ ಬೆಳಗಿರೆ 4 ಸೀಮಾಧಿಪತಿ ಬಲಿಯ ಭೂಮಿ ಮೂರಡಿ ಬೇಡಿ ಈ ಮೂರು ಜಗವ ಈರಡಿಯ ಈ ಮೂರು ಜಗವ ಈರಡಿ ಮಾಡಿ ಅಳೆದ ವಾಮನಗಾರತಿಯ ಬೆಳಗಿರೆ 5 ಅಂಬರಕೇಶನ್ನ ನಂಬಿದ ಕತ್ರಿಯರ ಸಂಭ್ರಮ ಕುಲವ ಸವರಿದ ಸಂಭ್ರಮ ಕುಲವ ಸವರಿದ ಪರಶುರಾ- ಮೆಂಬಗಾರತಿಯ ಬೆಳಗಿರೆ 6 ತಂದೆ ಕಳುಹಲು ವನಕೆ ಬಂದಲ್ಲಿ ಸೀತೆಯ ತಂದ ರಾವಣನ ತಲೆಹೊಯ್ದ ತಂದ ರಾವಣನ ತಲೆಹೊಯ್ದ ರಘುರಾಮ- ಚಂದ್ರಗಾರತಿಯ ಬೆಳಗಿರೆ 7 ಶಿಷ್ಟ ಯಮಳಾರ್ಜುನರಭೀಷ್ಟವ ಸಲಿಸಿದ ದುಷ್ಟ ಕಂಸನ್ನ ಕೆಡಹಿದ ದುಷ್ಟ ಕಂಸನ್ನ ಕೆಡಹಿದ ನಮ್ಮ ಶ್ರೀ ಕೃಷ್ಣಗಾರತಿಯ ಬೆಳಗಿರೆ 8 ರುದ್ರನ್ನ ತ್ರಿಪುರದೊಳಿದ್ದ ಸತಿಯರ ಬುದ್ಧಿ ಭೇದಮಾಡಿ ಕೆಡಿಸಿದ ಬುದ್ಧಿ ಭೇದಮಾಡಿ ಕೆಡಿಸಿ ಬತ್ತಲೆ ನಿಂದ ಬೌದ್ಧಗಾರತಿಯ ಬೆಳಗಿರೆ 9 ಪಾಪಿಜನ ಭಾರಕ್ಕೆ ಈ ಪೃಥ್ವಿ ಕುಸಿಯಲು ತಾ ಪಿಡಿದು ಖಡ್ಗ ತುರಗವ ತಾ ಪಿಡಿದು ಖಡ್ಗ ತುರಗವೇರಿದ ಕಲ್ಕಿ- ರೂಪಗಾರತಿಯ ಬೆಳಗಿರೆ 10 ಮುತ್ತೈದೆ ನಾರಿಯರು ಮುತ್ತಿನಾರತಿ ಮಾಡಿ ಹತ್ತವತಾರಿ ಹಯವದನ ಹತ್ತವತಾರಿ ಹಯವದನನ ಪಾಡುತ ಚಿತ್ರದಾರತಿಯ ಬೆಳಗಿರೆ 11
--------------
ವಾದಿರಾಜ
ಭೇದವ ಮರೆಸಿದ ನಮ್ಮಯ್ಯ ಸು ಸಾಧನ ತಿಳಿಸಿದ ಪ ಭೇದ ಮರೆಸುತ ವಾದನೀಗಿಸಿ ಪರ ಸಾಧನದ ನಿಜಹಾದಿಗೆ ಹಚ್ಚಿದ ಅ.ಪ ಮಂದಮತಿಯ ತರಿದ ಎನ್ನಯ ಭವ ಬಂಧ ಪರಿಹರಿಸಿದ ಕುಂದುವ ಜಗಮಾಯದಂದುಗ ಗೆಲಿಸಿದ ಕಂದನೆಂದುದ್ಧಾರಗೈದ ತಂದೆ ಸಿಂಧುಶಾಯಿ 1 ಜ್ಞಾನಕೆ ಹಚ್ಚಿದ ಎನ್ನದೆ ನಿಜ ಧ್ಯಾನವ ಪಾಲಿಸಿದ ನಾನಾಯೋನಿಯೊಳು ಜನಿಸಿ ಜನಿಸಿ ಬಹ ಹಾನಿಯಿಂದುಳಿಸಿದ ದಾನವಕುಲಹರ 2 ಏನೆಂದು ಬಣ್ಣಿಸಲಿ ನಮ್ಮಯ್ಯನ ಆನಂದದ ಕೀಲಿ ತಾನೆ ಒಲಿದಿತ್ತೆನ್ನಗಾನಂದಮಯಾಂಬುಧಿ ದೀನಜನಾಪ್ತ ಮಮಪ್ರಾಣ ಶ್ರೀರಾಮಯ್ಯ 3
--------------
ರಾಮದಾಸರು
ಭೋಗಿವರನೇ ಪಾಲಿಸೋ ಪ ಆಗಸದೊಳು ನೀನಾಗಮಿಸುತಲಿ ಸ-ದಾಗತಿ ಭೋದವ ಭೋಗಿಸಿ ನಿಂದೇ ಅ.ಪ. ಪರಿ ಪ್ರಾ |ರಬ್ಧವ ಭೋಗವ | ನಾದರದನುಭವಸಾಧನವೀವುದು | ಹೇ ದಯವಂತ 1 ಹೃದಯಾಬ್ಜಾಮಲ | ಸದನದಿ ಸುರತರುಹದುಳ ದೊಳಾಶ್ರಿತ | ಬದಿಗನಿನಾದೆಯೊ |ಸದಮಲ ಶಯ್ಯನೆ | ಇದಿರಾವನು ತವಪದವಿಗೆ ಸುರರೊಳು | ಬುಧಜನ ವಂದ್ಯ 2 ಪತಿ ಗುರುಗೋವಿಂದ ವಿಠಲನ | ಭಾವದಿ ಕಾಣಿಸಿ 3
--------------
ಗುರುಗೋವಿಂದವಿಠಲರು
ಭೋಗೀಂದ್ರ ಭೂಷಣಾ ಪ ಶ್ರೀ ವಾಸುದೇವನ ಮಿತ್ರಾ ದಿನೇಶ ತೇಜ ಪವಿತ್ರಾ ಸರ್ವೇಶ ಮಂಜುಳಗಾತ್ರಾ ಗುಹೇಶ ಸುಚರಿತ್ರಾ1 ಖಳ ತಾರಕಾಸುರ ಮಥನಾ ಬಲು ಧೀರ ಪದ್ಮನ ದಮನಾ ಸುವಿಚಾರಿ ವಲ್ಲಿಯ ರಮಣಾ ಮಯೂರ ವಾಹನಾ 2 ಅರಿ ಭಂಜ ರಕ್ಷಕ ವಾಸಾ ರಂಜನಾನತ ಪೋಷಾ ಧನಂಜಯ ಭಾಸಾ 3
--------------
ಬೆಳ್ಳೆ ದಾಸಪ್ಪಯ್ಯ
ಮಕ್ಕಳಿಂದಲೆ ಗತಿಯು ಎಂಬುದೇನಿರಯ್ಯಮಕ್ಕಳಿಲ್ಲದವರಿಗೆ ಗತಿಯಿಲ್ಲವೇ ಪ ಸತ್ಯ ಶೌಚಾಚಾರ ಶಮೆದಮೆಗಳಳವಟ್ಟುನಿತ್ಯ ಕಾಲದಿ ಹರಿಯ ಮನದಿ ನೆನೆದುಅತ್ಯಂತ ಸಂತುಷ್ಟನಾದರಿಂದಲ್ಲದಲೆಹೆತ್ತವರಿಂದ ಗತಿಯು ಎಂಬುದು ನಗೆಯಲ್ಲವೇ 1 ಅಣುಮಹತ್ತಿಲಿ ಶುಚಿಯು ಅಶುಚಿಯಾಗಿಪ್ಪಂಥಎಣಿಕೆ ಎಲ್ಲವನು ತಾಯೆನಿಸಿ ತಿಳಿದುತ್ರಿಣಯನಾಗಿಹೆನೆಂದು ತಾನೆ ತಾನಾಗದಲೆಕ್ಷಣಿಕ ಸುತರಿಂ ಗತಿಯು ಎಂಬುದು ನಗೆಯಲ್ಲವೆ 2 ಸ್ನಾನ ಜಪತಪ ತಿಲೋದಕ ಶ್ರಾದ್ಧ ತರ್ಪಣದಕ್ಷೀಣ ಕರ್ಮಗಳಿಂದ ಮುಕುತಿಯಹುದೇಮಾನನಿಧಿ ಚಿದಾನಂದ ಗುರುಪಾದ ಪದ್ಮವನುನ್ಯೂನವಿಲ್ಲದೆ ನಂಬಿ ಸುಖಿಯಾದರಲ್ಲವೆ3
--------------
ಚಿದಾನಂದ ಅವಧೂತರು
ಮಗನೆಂದೆಂಬುವ ಇನ್ನು ಮತ್ತಾವನೊ ಜಗದೊಳಗೆ ನಿನ್ನ ವಿನಾ ಕಾಣೆಯೆಲ್ಲಿ ಪ ರಕ್ತ ಶುಕ್ಲ ಮಿಶ್ರವಾದ ಸಮ್ಮಂಧ ವಿಷ_ ಭುಕ್ತನಾಗಿದ್ದ ಸಂಸಾರದೊಳಗಾ ಸಕ್ತತನದಲಿ ಇಪ್ಪ ಎಂದಿಗೆಂದಿಗೆ ಇವನು ಮುಕ್ತಿ ಕೊಡುವನೇನೊ ಮುಂದೊಲಿದು ಕೊಂಡಾಡೆ1 ಪ್ರಕೃತಿ ಬದ್ಧನಾಗಿ ನಾನಾ ಜನುಮಗಳಲ್ಲಿ ವಿಕೃತಿಯ ಮಾಡುವ ಮದದಿಂದಲೀ ಸುಕೃತವನು ಮರೆದು ದೂರಾಗಿ ಸಂಚರಿಸುವ- ನುಕ್ರ ಮವಂದುಮಾಸ ಜನತೆ ಕ್ಯೆಡೆಯಿರದವ 2 ಪುತ್ರ ಉಳ್ಳರೆ ಅವಗೆ ಕಂಡಕಡೆ ತಿರುಗಿ ಉ- ನ್ಮತ್ತನಾಗಿ ಕೆಟ್ಟ ಗ್ರಾಸವನ್ನು ಹೊತ್ತಹೊತ್ತಿಗೆ ತಂದು ಹಾಕಬೇಕು ಸಾಕಿ ನಿತ್ಯದಲ್ಲಿ ಅವಗಾಗಿ ಕ್ಲೇಶಬಡಲಿ ಬೇಕು 3 ನಾಡೊಳಗೆ ನೀನೆ ಮಗನೆಂದವನ ಭಾಗ್ಯಕ್ಕೆ ಈಡುಗಾಣೆನು ಎಲ್ಲಿ ವಿಚಾರಿಸೆ ಕಾಡಿ ಬೇಡುವೆ ಮುನ್ನೆ ಪರಿಪರಿಬಾಧೆಬಡಿಸಿ ಕೂಡಿರುವೆ ಮುಕ್ತರೊಳು ಮುಕ್ತಿಗಳವಲ್ಲಿದೊ 4 ನಿನ್ನಂಥ ಮಗನ ಪಡದಮ್ಯಾಲೆ ಎನಗೆ ಅನ್ಯಚಿಂತೆಗಳಿಲ್ಲ ಚಿಂತಾಮಣೀ ಘನ್ನಮೂರುತಿ ನಮ್ಮ ವಿಜಯವಿಠ್ಠಲರೇಯ ಅನಂತಕಾಲಕ್ಕೆ ವಹಿಸುವ ದೇವ 5
--------------
ವಿಜಯದಾಸ
ಮಂಗಲ ಮಾನವಿ ನಿಲಯ ಕವಿಗೇಯ ಗುರುರಾಯ ಗುರುರಾಯ ಪಿಡಿಕೈಯಾ ಪ ಪರಮ ಕರುಣದಲಿ ವಿರಚಿತ ಶ್ರೀ ಮ- ದ್ಹರಿಯ ಕಥಾಮೃತ ಗ್ರಂಥ ಶುಭ್ರ ಚರಿತ ಜಗನ್ನಾಥ ಜಗನ್ನಾಥ ಪ್ರಖ್ಯಾತ1 ಮೇದಿನಿ ಸುರರಿಗೆ ಮೋದಮುನಿ ಮತದ ಭೇದ ಪಂಚಕ ಸುಬೋಧ ಪ್ರದರಾದ ಸ- ಮೋದ 2 ಶರಣು ಜನಕೆ ಸುರತರುವೆಂದೆನಿಸಿದ ಸಿರಿಕಾರ್ಪರ ಶುಭನಿಲಯ ನರಹರಿಯ ಸುಪ್ರೀಯ ಸುಪ್ರೀಯ ದಾಸಾರ್ಯ 3
--------------
ಕಾರ್ಪರ ನರಹರಿದಾಸರು
ಮಂಗಳಂ ಜಯ ಮಂಗಳಂ ರಾಮ ಸಜ್ಜನರ ಪ್ರೇಮ ಮಂಗಳಂ ಲೋಕಾಭಿರಘುರಾಮ ಪಟ್ಟಾಭಿರಾಮ ಪ ಮಂಗಳಂ ಶ್ರೀ ದಶರಥಾತ್ಮಜಗೆ ಮಂಗಳಂ ಅಯೋಧ್ಯವಾಸಿಗೆ ಮಂಗಳಂ ಜನಕಜಾಮಾತೆಗೆ ಮಂಗಳಂ ಶ್ರೀ ರಾಮಚಂದ್ರಗೆ ಅ.ಪ ದೇವದೇವೋತ್ತಮ ವೈಕುಂಠದೊಳಗೆ ಶ್ರೀ ಭೂಮೇರಿಂದ ಸೇವೆಗಳ ಕೈಗೊಳ್ಳುತ ಮಲಗಿರಲು ದೇವಋಷಿ ಬ್ರಹ್ಮೇಂದ್ರಾದಿಗಳು ಸಹಿತ ಶ್ರೀಧರನ ಸ್ತುತಿಸುತ ರಾವಣಾಸುರನುಪಟಳ ವರ್ಣಿಸಲು ಸಂತೈಸಿ ಅವರನು ಭೂಮಿಪತಿ ದಶರಥನ ಪ್ರೇಮ ಕುಮಾರನಾಗುದಿಸುತಲಯೋಧ್ಯದಿ ಪ್ರೇಮ ತೋರುತ ಮೆರೆದವಗೆ ಜಯ1 ದಶರಥನ ಸುತರಾಗಿ ಬೆಳೆಯುತಲಿ ಕೌಶಿಕನÀಯಜ್ಞವ ಕುಶಲದಲಿ ರಕ್ಷಿಸುತ ಹರುಷದಲಿ ಶಶಿಮುಖಿಯ ಕೂಡುತ ಕುಶಲದಲಿ ವನವಾಸ ಚರಿಸುತಲಿ ದಶಶಿರನು ಜಾನಕಿಯ ಕದಿಯಲು ಶಶಿಮುಖಿಯನರಸುತಲಿ ವನವನ ವಸುಧಿಪತಿ ಕಪಿಗಳ ಕಳುಹಿ ಸತಿ ಕುಶಲ ತಿಳಿಯುತ ನಲಿದವಗೆ ಜಯ 2 ಬಂದ ಕಪಿ ಕಟಕವನೆ ನೋಡುತ್ತ ಸಾಗರಕೆ ಸೇತುವೆ ಒಂದೇ ನಿಮಿಷದಿ ರಚಿಸಿ ಶೀಘ್ರದಲಿ ಮಂದಮತಿ ರಾಕ್ಷಸರ ವಧಿಸುತಲಿ ಅಂದಣವ ಕಳುಹಿ ಮಂದಗಮನೆಯ ಕರೆಸಿ ಬೇಗದಲಿ ಬಂದ ರಾಮನು ಎಂದು ಮಾರುತಿ ಮುಂದೆ ಭರತಗೆ ಕುಶಲ ತಿಳಿಸಲು ತಂದೆ ಕಮಲನಾಥ ವಿಠಲ ಮುಂದೆ ಪ್ರಜೆಗಳ ಪೊರೆದವಗೆ ಜಯ 3
--------------
ನಿಡಗುರುಕಿ ಜೀವೂಬಾಯಿ
ಮಂಗಳ ಪದ್ಯಗಳು ಜಯ ಜಯ ಶ್ರೀ ಮಹಾಕಾಳಿ ಗೋಕರ್ಣೆ ಮಹಾಬಲ ಪೂಣ್ಯವಧು ಭಯವಿರಹಿತ ಭವನಾಶಿನಿ ಸುಲಲಿತೆÀ ಭಕ್ತ ಜಿಹ್ವಾಗ್ರ ಮಧು ಪ ಪರಮೇಶ್ವರಿ ಪರಿಪೂರ್ಣಾಂಬಿಕ ನಿಜ ಪರಮಾನಂದ ಪರೇ ಪರತರವಸ್ತು ಪರಾತ್ಪರ ಶಾಂಭವಿ ಸುರಮುನಿ ಅಭಯಕರೇ ಜಯಜಯ 1 ವೀಣಾ ಪುಸ್ತಕಧಾರಿಣೆ ಅಗಣಿತ ಪಾನಪಾತ್ರಪ್ರಿಯೇ ವಾಣಿನಿತ್ಯಕಲ್ಯಾಣಿ ವಂದಿತಗುಣ ಶ್ರೇಣಿ ಮುನೀ ಸಾಹ್ಯೇ ಜಯಜಯ 2 ಹರಿಮೋಹಿನಿ ಹರಿವಾಹಿನಿ ಗಿರಿಸುತೆ ಹರಿಣಾಂಕಿಣಿ ಭವ್ಯಮುಖೆ ಹರಿಸಖ ಪ್ರಾಣಸಖೇ ಜಯಜಯ 3 ಸರ್ವಗುಣನಿಲಯೇ ಸರ್ವಾತ್ಮಕಿ ಸರ್ವಯಂತ್ರರೂಪೇ ಶರ್ವಾಣೆ ಸರ್ವೇಶ್ವರಿ ಸದಾಶಿವೇ ಸರ್ವ ಮಂತ್ರರೂಪೇ ಜಯಜಯ 4 ಮೂಲಾಧಾರೇ ಮುಕುಂದಾರ್ಚಿತ ಪದ ಬಾಲಾ ತ್ರಿಪುರಹರೇ ಮಾಲಿನಿ ಮಂತ್ರಾತ್ಮಕಿ ಮಹಾದೇವಿ ತ್ರಿ ಶೂಲಿನಿ ಶಶಿಶಿಖರೇ ಜಯಜಯ 5 ನಿತ್ಯಾರ್ಚನಿ ಸುಖಭೋಗಿನಿ ಸುಲಲಿತೇ ನಿತ್ಯಾನಂದಮಯೇ ನಿತ್ಯಾನಿತ್ಯ ಸ್ವರೂಪಿಣಿ ನಿರ್ಗುಣೆ ಸತ್ಯ ಸಾಧು ಹೃದಯೇ ಜಯಜಯ 6 ಶಂಭಾಸುರಮಹಿಷಾ ಸುರಮೇಕ್ಷಕ ದಂ¨ ಮುಕುಟಧರೇ ಅಂಬಾ ಶ್ರಿ ಮಹಾಕಾಳಿ ವಿಮಲಾನಂದ ಸುಖ ಶರೀರೇ ಜಯ ಜಯ 7 ಇತಿ ಶ್ರೀ ಮಹಾಕಾಳ್ಯಷ್ಟಕ ಸ್ತೋತ್ರಂ ತ್ರಿಕಾಲಪಠತೆ ನಿತ್ಯಂ ನಿತ್ಯಂ ನತಿಸುತಧನ ಪೌತ್ರಾದಿ ಕೃತಾರ್ಥಂ ಭವತಿ ಸತ್ಯಂ ಸತ್ಯಂ ಜಯಜಯ 8
--------------
ಭಟಕಳ ಅಪ್ಪಯ್ಯ
ಮಂಗಳ ಮಹಿಮ ಶುಭಾಂಗಗ ಮಂಗಳ ಅಂಗಜ ಜನಕ ಶ್ರೀರಂಗಗ ಮಂಗಳ ಪ ಸಿರಿದೇವಿ ಮುಖಪದ್ಮ ಭಂಗಗ ಮಂಗಳ ಸುರ ಮುನಿಜನ ರಂಗ ಸಂಗಗ ಮಂಗಳ ಶರಣಾಗತರ ಭವಭಂಗಗ ಮಂಗಳ ದುರಿತಾಳಿವ್ಯಾಳ ವಿಹಂಗಗ ಮಂಗಳ 1 ಯಾದವ ಕುಲಾಂಬುದಿ ಚಂದ್ರಗ ಮಂಗಳ ಕೈಟಭಾರಿ ಮಹೀಂದ್ರಗ ಮಂಗಳ ವಿಧಿಭವ ವಂದ್ಯ ನಾದುಪೇಂದ್ರಗ ಮಂಗಳ ಸದಮಲಸದ್ಗುಣಸಾಂದ್ರಗ ಮಂಗಳ 2 ನಾರದಗಾಯನ ಪ್ರೇಮಿಗೆ ಮಂಗಳ ಸುರಸಾದಾಸಾಸಿರ ನಾಮಿಗೆ ಮಂಗಳ ಗುರುವರ ಮಹಿಪತಿಸ್ವಾಮಿಗೆ ಮಂಗಳ ಕರುಣಾಳು ಜಗದಂತ್ರಯಾಮಿಗೆ ಮಂಗಳ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಂಗಳಂ ಶ್ರೀ ಗುರುವರ್ಯರಿಗೆ | ಮಂಗಳಾಂಗರಿಗೆ ಮಂಗಳಂ ಶ್ರೀ ಗುರುವರ್ಯರಿಗೆ ಪ. ರಂಗನಾಥನ ಪದ ಸರೋಜಕೆ ಭೃಂಗರೆನಿಸಿ ಮೆರೆಯುವರಿಗೆ ಅ.ಪ. ತಂದೆ ಮುದ್ದುಮೋಹನರೆಂ ತೆಂದು ಮೆರೆಯುತ ಮಂದಮತಿಯ ಬಿಡಿಸಿ ಎನ್ನ ತಂದೆಯಂತೆ ಪೊರೆಯುವರಿಗೆ 1 ನಾಗಶಯನ ಹರಿಯ ಭಜಿಪ ಭೋಗಿವರರಿಗೆ ಭಾಗವತರ ಸಂಘದೊಳಗೆ ಯೋಗಿಯಾಗಿ ಚರಿಸುವರಿಗೆ 2 ಪರಮಪ್ರಿಯರಾಗಿ ಹರಿಗೆ ಪರಮಪ್ರಿಯರೆಂದು ಕರೆಸಿಕೊಳುತ ನರಹರಿಯ ಚರಣ ಮನದಿ ಸ್ಮರಿಸುವರಿಗೆ 3 ಕರ್ಮಗಳನೆ ಕಡಿದು ಜ್ಞಾನ ಧರ್ಮಮಾರ್ಗದಿ ಧರ್ಮತತ್ವ ಬೋಧಿಸಿ ಅ- ಧರ್ಮಗಳನೆ ಬಿಡಿಸುವರಿಗೆ4 ಗೋಪಾಲಕೃಷ್ಣವಿಠ್ಠಲನ ರೂಪ ತೋರುತ ಪಾಪಗಳನೆ ತರಿದು ಭವ ಕೂಪದಿಂದ ಪೊರೆಯುವರಿಗೆ 5
--------------
ಅಂಬಾಬಾಯಿ
ಮಂಗಳಾರತಿ ಎತ್ತಿರೆಲ್ಲ ಮಹಾತ್ಮರೆಲ್ಲ ಮಂಗಳಾರತಿ ಎತ್ತಿರೆಲ್ಲಮಂಗಳರೂಪಗೆ ಮಂಗಳ ಮಹಿಮಗೆ ಮಂಗಳಕರಗೆ ಮಂಗಳಪ್ರದಗೆ ಪ ಘೃತ ನೀಡಿಮುದದಿಂ ಚಿಜ್ಯೋತಿಯನೆ ಮುಟ್ಟಿಸಿಸದಮಲ ಸರ್ವ ಬ್ರಹ್ಮವೆ ಎಂದು 1 ತುಂಬಿ ಉಳಿವು ಇನ್ನು ಎಂಬೆಬಲುಪ್ರಭೆ ತಿಳಿಯೆ ಥಳಥಳ ಹೊಳೆಯೆ ತೊಳಗಿ ತೊಳಗಿ ಬೆಳಗಿ ಬೆಳಗಿ 2 ನಾನಾ ವರ್ಣವೆ ಪೊಳೆಯಲು ಅತ್ತಲಿತ್ತಲುನಾನಾ ವರ್ಣವ ತಾಳುತ್ತ ಎತ್ತಾಲೆತ್ತಲುತಾನು ಚಿದಾನಂದ ಗುರು ಬೇರಾಗದೆತಾನೆ ತಾನೆಯಾಗಿ3
--------------
ಚಿದಾನಂದ ಅವಧೂತರು
ಮಂಗಳಾರತಿ ಮಾಡಿರೇ ಶೃಂಗಾರದ ಸಿರಿಗೇ ಪ ಮಂಗಳ ಮುಖಪದದಿಂದ ಪಾಡುತಲೆಪೊಂಗೊಳಲೂದುವನಂಗ ಜನಕಗೇ ಅ.ಪ. ವೈರಿ ಭೃಂಗ ಕೂಪ ಜಂಗುಳೇಂದ್ರಯದೋಪಾಂಗ ವೇದ ಮದಗಂಗ ಜನಕ ವೃಜಭಂಗ ಮಾತುಳನ ಮುಂಗುರುಳ್ಹಿಡಿದೆಳೆದನು ಸಂಗರದೊಳಗೇ 1 ಮಣಿ ಕರ್ಣ ನಾಸಿಕ ಧರ ಉಪವಳ ಗೋಕುಲಧರಗಿಳಿಗೇ 2 ವಿನುತ ನಾರದ ಮುನಿನುತಗಂಧರ್ವರಪ್ಸರದಿಂದ ನರ್ತನಾದಿಂದ ಸಂಸ್ಕøತಮಂದ ಸುಗುಣಸಿಂಧು ಪಾಂಡವರ ಗೋ-ವಿಂದ ಸಚ್ಚಿದಾನಂದಮೂರ್ತಿ ಮುಚುಕುಂದ ವರದಗೇ 3
--------------
ಇಂದಿರೇಶರು
ಮಂಗಳಾರತಿಯ ತಂದೆತ್ತಿರೆ ಶುಭಮಂಗಳ ಜಗದಾದಿದೇವಿಗೆ ಪ ಮಧುಕೈಟಭಾಸುರ ಮರ್ದನ ದೇವಿಗೆಮದನ ಕೋಟಿ ರೂಪ ಮಹಾದೇವಿಗೆಸದಮಲ ಬ್ರಹ್ಮರ ಹೃದಯದ ಆತ್ಮಗೆಮದನಾರಿ ಭೂತೆಗೆ ಆರತಿ ಎತ್ತಿರೆ 1 ಭಾನು ಸಾಸಿರ ಕೋಟಿ ತೇಜ ಮಹಾತ್ಮಳಿಗೆದಾನವಾಂತಕಳಾದ ದಯಾಶೀಲಗೆಮಾನನಿಧಿ ಭಕ್ತರನು ಮರೆಯದೇ ರಕ್ಷಿಪಬಾಣಾರಿ ಜನನಿಗೆ ಆರತಿಯನೆತ್ತಿರೆ 2 ರಕ್ಷಬೀಜಾರಿಗೆ ರಾಕ್ಷಸಧ್ವಂಸಿಗೆಭಕ್ತರ ಸಲಹುವ ಬಗಳಾಂಬೆಗೆಮುಕ್ತಿ ಸದ್ಗುರು ಚಿದಾನಂದವಧೂತಗೆಮುತ್ತಿನಾರತಿಯನೆತ್ತಿರೆ3
--------------
ಚಿದಾನಂದ ಅವಧೂತರು
ಮಟ್ಟುದೊರಿತು-ನಿನ್ನ ಗುಟ್ಟು ಹಾರಿತು ಪ ಸಿಟ್ಟುಗೊಳ್ಳಬೇಡವೆನ್ನ ದೃಷ್ಟಿಯಿಂದ ನೋಡಿ ಕಂಡೆ ಅಷ್ಟಸಿದ್ಧಿಗಳಿದ್ದರೂ ವೊಂದಿಷ್ಟುಕೊರತೆ ಕೃಷ್ಣನೆಂಬ 1 ಹೇಯ ಗುಣವಿಲ್ಲ ಮುನಿ-ಗೇಯ ನಿನ್ನೊಳೆಂಬ ಜನರ ಬಾಯ ಮುಚ್ಚಿಸುವೆನೆಂದತ್ಯಾಯಸಪಡುವನೆಂಬ ||ಮಟ್ಟು|| 2 ಸತ್ಯಕಾಮನಹುದು ನೀನು ಸತ್ಯಸಂಕಲ್ಪನು ನಿನಗೆ ದತ್ಯಧಿಕ-ಕೊರತೆಯೆಂಬ ||ಮಟ್ಟು|| 3 ಜ್ಞಾನವಂತನೆಂದು ಬಹುಮಾನವಂತನಾದರೂ ಅ ಜ್ಞಾನ ಶೂನ್ಯನೆಂಬ ದೊಡ್ಡ ಹಾನಿಯೊಂದಿರುವದೆಂಬ4 ಎಲ್ಲ ವಸ್ತುಗಳುಂಟು ನಿನಗೆ ಪುಲ್ಲನಾಭ ನಿನ್ನ ಬಳಿಯೋ ಳಿಲ್ಲವೆಂಬ ಶಬ್ದಮಾತ್ರವಿಲ್ಲವೆಂಬ ಮಾತು ಬಂದಿಹ5 ಪಾಪವೆಂಬ ಕತ್ತಲೆಗೆ ದೀಪನಾಗಿದ್ದರು ಜನರ ಪಾಪಗಳ ನಪಹರಿಪ ದೀಪನಾ ಬಿಡದು ಎಂಬ ||ಮಟ್ಟು||6 ಜ್ಯೋತಿಗಳಿಗೆಲ್ಲ ಪರಂಜ್ಯೋತಿಯಾಗಿರುವ ನಿನಗೆ ಆ ಜ್ಯೋತಿಗಳೆತ್ತಿದಾರತೀ ಪ್ರೀತಿಯೆಂದು ಜನರು ಪೇಳ್ವ ||ಮಟ್ಟು||7 ಹಾನಿವೃದ್ಧಿ ಶೋಕಮೋಹ ಜ್ಞಾನ ನಿನ್ನೊಳಿಲ್ಲವೆಂಬ ಹೀನವಾಕ್ಯವ ಪೇಳ್ವರೆಲ್ಲ ಮಾನನಿಧಿಗಳೆಂತೆಂಬ ||ಮಟ್ಟು||8 ನಿತ್ಯ ತೃಪ್ತನಾದರೂ ನಿಜ-ಭೃತ್ಯರನ್ನು ಪಾಲಿಸುವ ನಿತ್ಯ ಕರ್ಮದಲ್ಲಿ ಕೃತಕೃತ್ಯನು ನೀನಲ್ಲವೆಂಬ 9 ಕಷ್ಟಪಡಬೇಡವೆನ್ನೊ-ಳೆಷ್ಟು ದುರ್ಗುಣಂಗಳಿಹ ವಷ್ಟನು ವೊಪ್ಪಿಸಿ ನಿನಗಿಷ್ಟನಾಗಬೇಕೆಂಬ ||ಮಟ್ಟು|| 10 ಕ್ಷೀರದಧಿನವನೀತ-ಚೋರನಾಗಿರಲಿ ಗೋಪೀ ಜಾರನಾಗಿರಲಿ ಸಂಸಾರವೈರಿಯು ನೀನೆಂಬ ||ಮಟ್ಟು||11 ಕೊರತೆಯೆಂಬಾಜನರಿಗೆಲ್ಲ-ವರವನಿತ್ತು ಪೊರೆವೆನೆಂಬ ವರದವಿಠಲನೆಂಬ ||ಮಟ್ಟು|| 12
--------------
ಸರಗೂರು ವೆಂಕಟವರದಾರ್ಯರು