ಒಟ್ಟು 1594 ಕಡೆಗಳಲ್ಲಿ , 104 ದಾಸರು , 1331 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪುರಂದರ ಗುರುರಾಯಾ ಸತ್ಪ್ಪುಣ್ಯ ಕಾಯಾ ಪ ನಿರುತ ನಿನ್ನ ಚರಣ ಸೇವೆ ಕರುಣ ಮಾಳ್ಪದೋ ಜೀಯಾಅ.ಪ. ಬಹು ಜನ್ಮಗಳಲ್ಲಿ ನಾನು ಮಹ ಪುಣ್ಯ ಮಾಡಿದವರ ಸಹವಾಸದಲಿದ್ದು ಗ್ರಹದ ಮುಂದೆ ಗ್ರಹದಿಂದೆನಗೆ ಮಹಿಸುರ ಜನ್ನವಿತ್ತೆ 1 ಶ್ವಾನ ಸೂಕರನೊ ನಾನದನು ಕಾಣೆನೊ ಮತ್ತಾವನೊ ನಾನಾ ಜೀವನೊ ಆನು ಒಂದು ತಿಳಿಯೆ ಗುರುವೆ ನೀನೆ ಬಲ್ಲಿ ಎನಗೆ ಬಂದ ಅನಾದಿ ಶರೀರವ ಅಜ್ಞಾನವನ್ನೇ ತೆಜಿಸುವುದು2 ಯಾಚನೆ ದೇಹದಲ್ಲಿ ಊಚು ಭಾಗ್ಯವ ಜಯಸದಿಪ್ಪ ಯೋಚನೆಯಿಂದಲಿ ಕಮಲಲೋಚನ ನಿನ್ನಂಘ್ರಿಯಾ ಕರವ ಬಾಚೆನೊ ಹೀನರಿಗೆ ನಿನ್ನ ಪಾಚಕರ ಮನೆಯ ಪರಿಚಾರ ಸಿದ್ಧÀ್ದವಾಗಲಿ 3 ಹಿಂದೆ ಏನು ಪ್ರೇರಿಸಿದಿಯೊ ನಂದವ ನಾನರಿಯೆನೊ ತಂದೆ ತಾಯಿ ನೀನೆ ಎಂದು ಪೊರದಿ ಸಂದೇಹವಿಲ್ಲ ಯೆಂದು ಪೊರೆದದ್ದು ನಿನ ಕರುಣವಲ್ಲವೆ ಮತ್ತೆ ಭಾರವು ನಿನದೆಂದು ನಾ ಪ್ರಾರ್ಥಿಸುವೆ 4 ತಿರುಗುವುದು ಕುಳ್ಳಿರುವುದು ಬರುವುದು ಮತ್ತೇಳುವದು ಮರಳೆ ಮಾತನಾಡುವುದು ವಾಸರದಲ್ಲಿ ಬಿಡದೆ ಸಿರಿ ವಿಜಯವಿಠ್ಠಲನ್ನ ಕರದೊಳಿಪ್ಪಂತೆ ಮಾಳ್ಪದೊ ಜೀಯಾ 5
--------------
ವಿಜಯದಾಸ
ಪುರಂದರದಾಸರು ಎಂತು ಪೊಗಳಲಿ ನಾನು ಪ ಕಂತುಪಿತನೇಕಾಂತ ಭಕ್ತನ ಪಂಥವನು ಪದ ಪಂಕ್ತಿಯಲಿ ತುಂಬಿಟ್ಟು ಸಲಹಿದ ದಾಸವರ್ಯರ ಅ.ಪ. ನಿತ್ಯ ನೆನೆಯುತ್ತ ಪಂಡಿತೋತ್ತಮರೊಡನೆ ಸುಖಿಸುತ್ತ ಕಂಡು ಹರಿಯನು ಮುಂದೆ ಕುಣಿಯುತ್ತ ಕುಂಡಲಿಗೆ ನಿಜ ಭೂಷಣವು ಎನಿಸುತ್ತ ಭಂಡಜನರಾ ಪುಂಡುಮಾರ್ಗವ ಕಂಡಕಂಡೆಡೆ ಖಂಡ್ರಿಸುತ ಬ್ರಹ್ಮಾಂಡ ದೊಡೆಯನ ಭಕ್ತಿ ಬಿತ್ತುತ ಹಿಂಡಿ ಮತಿಮತ ರಸವ ಕುಡಿಸಿದ ದಾಸವರ್ಯರ 1 ಮೊದಲು ಗಾಯಕ ದೇವಸಭೆಯಲ್ಲಿ ಮುದದಿ ಕಾಮುಕ ಚೇಷ್ಟೆ ನಡೆಸುತಲಿ ಪದವಿಯಿಂ ಚ್ಯುತನಾಗಿ ದಾಸಿಯಲಿ ಉದಿಸಿ ಬಂದು ಸಾಧು ಸಂಗದಲಿ ಬದಿಗೆ ತಳ್ಳುತ ಭವದ ಕೋಟಲೆ ಮುದದಿ ಜಪಿಸುತ ವಾಸುದೇವನ ಪದವಿ ಸಾಧಿಸಿ ದೇವ ಋಷಿ ತಾ ಪದುಮನಾಭನ ನೆನೆದು ನರಕವ ಬ ರಿದು ಮಾಡ್ಡ ಮಹಾನುಭಾವನ 2 ಕಾಸಿನಾಶಯವು ಮೋಸವೆಂತೆಂದು ಹೇಸಿವಿಷಯದಿ ಲೇಸು ಸಿಗದೆಂದು ಶ್ರೀಶ ಸಿಗುವನು ದಾಸಗೆಂತೆಂದು ಆಶೆಯಿಂದಲಿ ಸಾರಬೇಕೆಂದು ಓಸು ಸಂಪದ ನೂಕಿ ಭರದಿಂ ವ್ಯಾಸರಾಯರ ಶಿಷ್ಯನೆನಿಸುತ ವಾಸುದೇವನ ದಾಸನಾಗುತ ದೋಷಜ್ಞಾನವ ನಾಶಮಾಡಿದ ದೇಶ ತಿರುಗಿದ ದಾಸವರ್ಯರ 3 ಭಕ್ತಿಯಿಲ್ಲದ ಗಾನ ತಾನಿನ್ನು ಕತ್ತೆಕೂಗನುಮಾನವಿಲ್ಲೆಂದು ನಿತ್ಯದೇವನ ಗಾನ ಗೈಯಲು ಗಾತ್ರವಿದು ನಿಜವೀಣೆಯೆಂತೆಂದು ಸಪ್ತಸ್ವರಗಳ ಕ್ಲಪ್ತಮರ್ಮಗ ಳೆತ್ತಿ ತೋರುತ ಶ್ರೇಷ್ಠತರ ಸಂಗೀತ ಸೂತ್ರ ಸಂಮತ ನೀತಿ ನುಡಿದಿಹ ದಾಸವರ್ಯರ 4 ಪೊಂದಿ ಪುಸ್ತಕ ದೀಚೆ ಬರದೆಂದು ಛಂದ ಮರ್ಮವ ತಂದಿಡುವೆ ನಮ್ಮೀ ಅಂದ ಕನ್ನಡ ದೊಳಗೆ ಎಂತೆಂದು ಕಂದ ವೃತ್ತ ಸುಳಾದಿ ಪದಗಳ ಛಂದ ಭೂಷಣವೃಂದ ನೀಡುತ ನಂದದಿಂ ಕರ್ಣಾಟಮಾತೆಯ ಮುಂದೆ ತಾ ನಲಿವಂತೆ ಮಾಡಿದ ದಾಸವರ್ಯರ 5 ನಾರಿ ಮನೆ ಪರಿವಾರ ಹರಿಗೆಂದು ಸಾರವನ್ನೆ ಮುರಾರಿ ಮನೆಯೆಂದು ಚಾರು ಶ್ರುತಿಗತಸಾರ ನಡತೆಯಲಿ ಸೂರಿಯಾದವ ತೊರಬೇಕೆಂದು ನೀರಜಾಕ್ಷನ ಧೀರ ದೂತನ ಸಾರ ಮನವನು ಸಾರಿ ಸಾರುತ ದೂರ ಒಡಿಸಿ ಮೂರು ಮತಗಳ ನೇರ ಸುಖಪಥ ತೋರಿಸಿದ ಮಹರಾಯ ದಾಸರ 6 ಕರ್ಮಕೋಟಲೆಗಿಲ್ಲ ಕೊನೆಯೆಂದು ಮರ್ಮತಿಳಿಯುತ ಬಿಂಬಹೃದಯಗನ ನಿರ್ಮಮತೆಯಿಂದೆಸಗಿ ಕರ್ಮಗಳ ಕರ್ಮಪತಿಗೊಪ್ಪಿಸುತ ಸರ್ವಸ್ವ ಭರ್ಮಗರ್ಭನ ಭಕ್ತಿ ಭಾಗ್ಯದಿ ಪೇರ್ಮೆಯಿಂ ಹರಿದಾಸನೆಸಿಸುತ ಶರ್ಮ ಶಾಶ್ವತವಿತ್ತು ಸಲಹುವ ವರ್ಮ ನೀಡಿದ ವಿಶ್ವಬಾಂಧವ 7 ಇಂದಿರೇಶನು ಮುಂದೆ ಕುಣಿಯುತಿರೆ ಕುಂದುಂಟೆ ಮಹಿಮಾತಿಶಯಗಳಿಗೆ ತಂದೆ ಕೌತಕ ವೃಂದ ಮಳೆಗರೆದು ಕಂದನನು ಪೊರೆದಂದವೇನೆಂಬೆ ಬಂದು ಸತಿಸಹ ಮಂದಿರಕೆ ಗೋ ವಿಂದ ಪಾಕವಗೈದು ಬ್ರಾಹ್ಮಣ ವೃಂದಕಿಕ್ಕುತ ದಾಸರಿಗೆ ಮುದ ಮಾಧವ ಭಾಗ್ಯಕೆಣೆಯುಂಟೆ 8 ದೀನ ಹೊಲೆಯಗೆ ಪ್ರಾಣ ಬರಿಸಿದನು ಏನು ಒಲ್ಲದೆ ಹರಿಯ ಯಜಿಸಿದನು ಜ್ಞಾನ ಭಾಗ್ಯದಿ ಮುಳುಗಿ ತೇಲಿದನು ದೀನ ಜನರುದ್ಧಾರ ಮಾಡಿದನು ದಾನಿ ಜಯಮುನಿ ವಾಯು ಹೃದಯಗ ಚಿನ್ಮಯ ಶ್ರೀ ಕೃಷ್ಣವಿಠಲನ ಗಾನ ಸುಧೆಯನು ಬೀರಿಸುತ ವಿ ಜ್ಞಾನವಿತ್ತ ಮಹೋಪಕಾರಿ ವಿಶೇಷ ಮಹಿಮನ 9
--------------
ಕೃಷ್ಣವಿಠಲದಾಸರು
ಪುರುಷರಾದವರೆಲ್ಲ ಪುರುಷರೆನಿಸುವುದೋಪುರುಷರೊಳಗೂ ಪುಣ್ಯಪುರುಷನೇ ಪುರುಷ ಪ ಪರಮ ದಿವ್ಯ ಜ್ಞಾನಪೂತ ಭಸಿತವಿಟ್ಟುಸ್ಥಿರವೆಂಬ ಸಿಂಹ ಪೀಠದಲಿ ಕುಳಿತುನಿರುತ ನಿತ್ಯಾನಂದ ನಿರಾಮಯ ತಾನೆಂದುಭರದಿ ಪೂಜಿಸುತಿರುವನು ಪುರುಷ 1 ಪಥ ಸೇರಿದವನವ ಪುರುಷ2 ಅಂಗ ಕಾಣುವ ವಿಷಯಗಳ ಆತ್ಮಗರ್ಪಿಸುತಸಂಗ ರಹಿತನಾಗಿ ತಾನಾಗಿ ಇರುತಮಂಗಳವು ಎನಿಸಿಯೇ ಮರೆತು ಬಾಹ್ಯವನುವಿಹಂಗಪಥದಿ ನಿಂತಿರುವನವ ಪುರುಷ 3 ಶಾಂತರಸವಂ ಕುಡಿದು ಸರ್ವಕ್ಕೂ ಬೆದರದೆಭ್ರಾಂತು ಎನಿಪ ಬೆಳಗ ತರಿದುಸಂತ ಸಾಲೋಕ್ಯ ಮೊದಲು ಸಾಯುಜ್ಯವನೆಲ್ಲಪಂಥದಿ ಮೀರಿ ಪರಿವನವನೆ ಪುರುಷ 4 ಪರಿ ಪರಿ ಕೇಳುತನಾದ ಸಾಕ್ಷಿಕ ತಾನು ಚಿದಾನಂದ ಗುರುವಾಗಿನಾದದಾನಂದದಲಿ ಮುಳುಗಿರುವನವ ಪುರುಷ 5
--------------
ಚಿದಾನಂದ ಅವಧೂತರು
ಪೂಜಿಸುವೆನು ದೇವಿಯ ಶ್ರೀನಿತ್ಯ ಗೌರಿಯ ಪ ಪರಶಕ್ತಿರೂಪೆಯ ಪರತತ್ವಮೂರ್ತಿಯ ಪರಮಮಂಗಳ ದೇವಿಯ ಪರಮಾನುರಾಗದಿ 1 ಮೃಗಧರಮೌಳಿಯ ಜಗದುದ್ಧಾರಾಂಬೆಯ ಮಿಗೆ ಮನದಲಿ ಧ್ಯಾನಿಸಿ ಅವಾಹಿಸುತ್ತಲಿ 2 ಸರ್ವಲೋಕೇಶ್ವರಿಯ ಸರ್ವಾಲಂಕಾರೆಯ ಸರ್ವಾಂಗ ಸುಂದರಿಯ ಆಸನವನಿತ್ತು 3 ವಿದ್ಯಾಧಿದೇವಿಯ ಶುದ್ಧಚಿದ್ರೂಪೆಯ ಪಾದ್ಯಾಘ್ರ್ಯಾಚ ಮನದಿಂದ ಪರಿಶುದ್ಧ ಹೃದಯದಿ 4 ಪಂಚಮವಾಣಿಯ ಚಂಚರಿಕಾಂಬೆಯ ಪಂಚಾಮೃತವ ಜಲವ ಮುದದಿಂದ ತಳಿಯುತ 5 ಸುಂದರ ಹಾಸೆಯ ಸೌಂದರ್ಯ ಶರದಿಯ ಚಂದ್ರಗಾವಿಯ ನುಡಿಸಿ ಕಂಚುಕವ ಗೊಡಿಸಿ 6 ಚಂದ್ರ ಬಿಂಬಾಸ್ಯೆಯ ಸಿಂಧುರ ಗಮನೆಯ ಇಂದು ತಿಲಕವ ತಿದ್ದುತ ಗಂಧವನೆ ತೊಡೆದು 7 ಮಂಗಳ ಮಾತೆಯ ಮಂಗಳ ಮೂರ್ತಿಯ ಮಂಗಳ ದ್ರವ್ಯದಿಂದ ಶೃಂಗಾರ ವೆಸಗಿ8 ಲೀಲಾವಿನೋದೆಯ ಬಾಲ ಕುಚಾಂಬೆಯ ಮಾಲೆಯ ನರ್ಪಿಸುತ ಕುಸುಮಗಳ ನಿಚಯದಿ 9 ಪಾಪನಿಹಂಶ್ರಿಯ ಶ್ರೀಪತಿ ಸೋದರಿಯ ಧೂಪ ದೀಪವ ಕಲ್ಪಿಸಿ ಅಚಮನವಿತ್ತು 10 ಸತ್ಯಸಂಕಲ್ಪೆಯ ನಿತ್ಯಸಂತುಷ್ಟೆಯ ಉತ್ತಮ ಫಲಭಕ್ಷ್ಯದಿಂ ನೈವೇದ್ಯ ವೆಸಗಿ 11 ಕಂಬುಸುಕಂಠಿಯ ಬಿಂಬಫಲಾಧರೆಯ ತಾಂಬೂಲ ದಕ್ಷಿಣೆಯಂ ಭಕ್ತಿಯೊಳಗರ್ಪಿಸಿ 12 ಮಂಗಳ ಮೂರ್ತಿಯ ಮಂಗಳ ಗೌರಿಯ ಮಂಗಳಾರತಿಯ ಗೈದು ಆಚಮನವಿತ್ತು 13 ಕಲಕೀರವಾಣಿಯ ಕಲಹಂಸಗಮನೆಯ ಲಲನಾಶಿರೋಮಣಿಯ ಬಲವಂದುನಮಿಸಿ 14 ಜಯ ಜಯ ಗೌರಿಯೆ ಜಯ ಜಯ ಮಾತೆಯೆ ಜಯದೇವಿ ಕರುಣಿಸು ನೀಂ ವರ ಸುಪ್ರಸಾದವ 15 ಮಾನಿನಿ ದೇವಿಯು ಮೌನಿ ಸುವಂದ್ಯೆಯು ಧೇನುಪುರೀಶ್ವರಿಯು ಸುಪ್ರೀತೆಯಾಗಲಿ 16
--------------
ಬೇಟೆರಾಯ ದೀಕ್ಷಿತರು
ಪೂಜೆಯ ಮಾಡಿದೆನೆ ದೇವರ ಪೂಜೆಯ ಮಾಡಿದೆನೆಈ ಜಗದರಸ ಚಿದಾನಂದ ತಾನೆಂದು ಪ ಶುದ್ಧ ಸ್ನಾನವನೆ ಮಾಡುತ ನಿರ್ಮಲ ವಸನವನುಬಂಧಿಸಿ ಬಿಗಿದು ಸ್ವಸ್ಥಾನಾಸ ಮಧ್ಯದಲ್ಲಿ ಕುಳಿತು 1 ನಿಸ್ಪøಹ ಭಸಿತವನೇ ಧರಿಸುತ ನಿಷ್ಕಲಂಕನಾಗಿವಿಶ್ವೇಶ್ವರ ವಿರೂಪಾಕ್ಷನೇ ತಾನೆಂದು 2 ಸರ್ವ ಪೂಜಿತನು ತಾನೀಗ ಸರ್ವನಿವಾರಿತನುಸರ್ವರೂಪಕ ತಾನೀಗೆಂದು ಧ್ಯಾನವರ್ಪಿಸಿದೆನೆ3 ಆನಂದ ವ್ಯಾಪಕನೆ ತಾನೀಗ ಆನಂದ ರೂಪಕನೇಆನಂದಾತ್ಮಕ ತಾ ನೀಗೆಂದಾಹ್ವಾನ ವರ್ಪಿಸಿದನೆ 4 ಇಂದ್ರಿಯ ರೂಪಕ ತಾನೀಗ ಇಂದ್ರಿಯ ವ್ಯಾಪಕನೇಇಂದ್ರಿಯ ಸಾಕ್ಷಿಕ ತಾನೀಗೆಂದು ಸಿಂಹಾಸನವರ್ಪಿಸಿದೆನೆ 5 ನಿಶ್ಚಲಾತ್ಮಕನವ ತಾನೀಗ ನಿಶ್ಚಲೈಕ್ಯನಾದನಿಶ್ಚಲವಸ್ತು ನಿಜತಾನೇ ಎಂದಘ್ರ್ಯವರ್ಪಿಸಿದೆನೆ 6 ವಿಶ್ವ ವಿಶ್ವಭೋಕ್ತøವಿಶ್ವಲೀಲಾತ್ಮಕ ತಾನೀಗೆಂದು ಪಾದ್ಯವರ್ಪಿಸಿದೆನೆ 7 ನಿಗಮ ಗೋಚರ ತಾನೆಂದು ಸ್ನಾನವರ್ಪಿಸಿದೆನೆ 8 ಅಂಬರ ವ್ಯಾಪಕನೇಅಂಬರದೊಳು ಚಿದಂಬರ ತಾನೆಂದು ವಸ್ತ್ರವರ್ಪಿಸಿದೆನೆ9 ಚೈತನ್ಯಾಧಾರ ತಾನೀಗ ಚೈತನ್ಯಾದೂರ ಚೈತನ್ಯಾಧಿಪತಾನೆಂದು ಯಜ್ಞೋಪವೀತ ವರ್ಪಿಸಿದನೆ10 ಕಲುಷ ನಿರ್ಜಿತನೇಕಲುಷ ಹರತಾ ನಿಜವೆಂದಾಭರಣವರ್ಪಿಸಿದೆನೆ11 ಲೇಪಕ್ಕಾಧಾರ ತಾನೀಗ ಲೇಪ ನಿರಾಧಾರಲೇಪಹರ ತಾ ನಿಜವೆಂದು ಅನುಲೇಪವರ್ಪಿಸಿದೆನೆ12 ಪುರತನು ವಿಸ್ತರಿಸಿ ತಾನೀಗ ಪುರಾಧಿಪತಾನೆನಿಸಿಪುರುಷೋತ್ತಮ ತಾನೆಂದು ಸುಪುಷ್ಪವರ್ಪಿಸಿದೆನೆ13 ಪರ ಇಹವು ತಾನೇ ತಾನೀಗ ಪರಾತ್ಪರನು ತಾನೆಪರವಸ್ತು ತಾ ನಿಜವೆಂದು ಧೂಪವರ್ಪಿಸಿದೆನೆ 14 ಜ್ಯೋತಿಯ ರೂಪ ತಾನೀಗ ಜ್ಯೋತಿ ನಿರ್ಮಯನುಜ್ಯೋತಿಯಹ ಚಿಜ್ಯೋತಿಯು ತಾನೆಂದು ಜ್ಯೋತಿಯರ್ಪಿಸಿದೆನೆ 15 ನಿತ್ಯ ತೃಪ್ತನುನಿತ್ಯತೃಪ್ತ ತಾನೆಂದು ನೈವೇದ್ಯವರ್ಪಿಸಿದೆನೆ 16 ಮಂಗಳವೆ ಆದ ತಾನೀಗ ಮಂಗಳಾಂಗನಾದಮಂಗಳ ಮೂರುತಿ ತಾನೆಂದು ತಾಂಬೂಲವರ್ಪಿಸಿದೆನೆ 17 ನಿರ್ವಿಕಾರ ನಿಜ ತಾನೀಗ ನಿರಾವಲಂಬ ನಿಜ ನಿ-ರಾವರಣ ತಾನೆಂದು ಪ್ರದಕ್ಷಿಣವರ್ಪಿಸಿದೆನೆ 18 ಜಯ ಜಯಾತ್ಮಕನೆ ತಾನೀಗ ಜಯ ಸದಾತ್ಮಕನೆಜಯನಿತ್ಯಾತ್ಮಕ ತಾನೆಂದು ನಮಸ್ಕಾರವರ್ಪಿಸಿದೆನೆ19 ಲೋಕೈಕನಾಥ ತಾನೀಗ ಏಕೈಕ ನಾಥನುಏಕ ನಾಥನು ತಾನೆಂದು ವಿಸರ್ಜನವರ್ಪಿಸಿದೆನೆ 20 ಪರಿ ಪರಿ ಮಾಡಿದೆನೆ 21
--------------
ಚಿದಾನಂದ ಅವಧೂತರು
ಪೂರ್ವ ಜನ್ಮದಲಿ ನಾ ಮಾಡಿದ ಕರ್ಮದಿಂಉರ್ವಿಯೊಳು ಜನಿಸಿದೆನೊ ಕೃಷ್ಣ ಪ ಕಾರುಣ್ಯನಿಧಿ ಎನ್ನ ಕಾಯಬೇಕಯ್ಯ ಹರಿವಾರಿಜನಾಭನೆ ಮುದ್ದುಕೃಷ್ಣಅ ಪುಟ್ಟಿದಂದಿನಾರಭ್ಯ ಸುಖವೆಂಬುವುದನರಿಯೆಕಷ್ಟ ಪಟ್ಟೆನು ಕೇಳೋ ಕೃಷ್ಣತೊಟ್ಟಿಲ ಶಿಶು ತಾಯ್ಗೆ ಬಾಯ್ಬಿಟ್ಟ ತೆರದಿ ಕಂ-ಗೆಟ್ಟು ಶೋಕಿಪೆನೋ ಕೃಷ್ಣಮುಟ್ಟಲಮ್ಮರು ಎನ್ನ ಬಂಧುಗಳು ಕಂಡರೆಅಟ್ಟಿ ಬಡಿವುತಲಿಹರೊ ಕೃಷ್ಣದಟ್ಟ ದಾರಿದ್ರ್ಯವನು ಪರಿಹರಿಸದಿದ್ದರೆಮುಟ್ಟುವುದು ದೂರು ನಿನಗೆ ಕೃಷ್ಣ1 ಕಾಶಿಯಾ ವಾಸವನು ಬಯಸಿ ಬಹು ದಿನದಿಂದಘಾಸಿ ಪಟ್ಟೆನು ನಾನು ಕೃಷ್ಣಈ ಶರೀರವನಾಂತು ಹೀನಾಯಗೊಂಡೆನುನೀ ಸಲಹಬೇಕಯ್ಯ ಕೃಷ್ಣಹೇಸಿಗೆಯ ಸಂಸಾರದಿ ನೀನಿಂತು ಮಾಯಾಪಾಶದೊಳು ಬಿಗಿವರೇ ಕೃಷ್ಣಘಾಸಿ ಮಾಡದೆ ಎನ್ನ ಪಾಪವನು ಪರಿಹರಿಸೊಸಾಸಿರನಾಮದ ಮುದ್ದುಕೃಷ್ಣ 2 ಲೋಕದೊಳು ಎನ್ನಂಥ ಪಾಪಿಗಳು ಉಂಟೆಂದುನೀ ಕೇಳಿ ಬಲ್ಲೆಯಾ ಕೃಷ್ಣಸಾಕೇಳು ಎನಗೊಂದು ಗತಿಯ ತೋರಿಸಿ ಸದ್ವಿವೇಕಿಯನು ಮಾಡಯ್ಯ ಕೃಷ್ಣರಾಕೇಂದು ಮುಖಿ ದ್ರೌಪದಿಯ ಮಾನವನು ಕಾಯ್ದುಆಕೆಗಕ್ಷಯವಿತ್ತೆ ಕೃಷ್ಣನಾ ಕಾಣುವಂದದಲಿ ಉಡುಪಿಯಾದಿಕೇಶವಏಕೆ ದರಶುನವೀಯೆ ಕೃಷ್ಣ 3
--------------
ಕನಕದಾಸ
ಪೋಗಿ ಬರುವೆನು ಎನ್ನ ಮನೆಗೆ ಜಗದೀಶ ಭಾಗವತಪ್ರಿಯ ಭಾಗೀರಥೀಜನಕ ಪ. ವರುಷವರುಷಕೆ ನಿನ್ನ ದರುಶನವನಿತ್ತೆನ್ನ ಕರುಣಿಸೈ ಶೇಷಾದ್ರಿವರ ಶ್ರೀನಿವಾಸ ವರ ಪ್ರಸಾದವನೀಯೊ ಜನ ಮೆಚ್ಚುವಂತೆ 1 ಜಯ ಹೊಂದಿಸುತ ಮನದ ಭಯವೆಲ್ಲ ಪರಿಹರಿಸಿ ನಿಯಮತಿಯೀಯೊ ನೀರಜನಾಭನೆ ದಯಮಾಡೊ ತವ ಪಾದಸೇವೆಯನ್ನಿತ್ತೆನಗೆ ಪ್ರಿಯನಾಗು ಶ್ರೀಹರಿಯೆ ಭಯನಿವಾರಣನೆ2 ನೀನೆ ಗತಿಯೆನಗೆ ಶ್ರೀನಿವಾಸನೆ ಭಕ್ತಾ ಧೀನ ನೀನೆಂಬ ಬಿರುದುಂಟಾದಡೆ ಮಾನಿಸೈ ಶ್ರೀಲಕ್ಷ್ಮೀನಾರಾಯಣನೆ ನಿನ್ನ ಧ್ಯಾನ ಸೌಭಾಗ್ಯಗಳನಿತ್ತೆನ್ನ ಸಲಹೊ 3
--------------
ತುಪಾಕಿ ವೆಂಕಟರಮಣಾಚಾರ್ಯ
ಪೋಗುವೆನೆ ರಂಗ ಪೋಗುವೆನೆ ಕೃಷ್ಣ ಈಗ ಕರೆ ಬಂದಿದೆ ಮಧುರಾ ಪುರಕ್ಕೆ ಪ. ಮದಿಸಿದ ಕಂಸನು ಚದುರ ಅಕ್ರೂರನ ಮುದದಿ ಕಳಿಸಿದ ಮಧುರ ವೇಣಿಯೆ ಕೇಳೆ 1 ಬಿಲ್ಲು ಹಬ್ಬವಂತೆ ಮಲ್ಲರ ಗೆಲ್ಲಬೇಕಂತೆ ಸಖಿ ಪುಲ್ಲಲೋಚನ ಕೃಷ್ಣಾ ಇಲ್ಲಿ ನÀಮ್ಮನು ಬಿಟ್ಟು 2 ಕಂಗೊಳಿಸುವ ಬೆಳದಿಂಗಳ ಸೊಗವಿಲಿ ಪೊಂಗೊಳಲೂದೆಮ್ಮಂಗಕೆÉ ಹರುಷವಿತ್ತ3 ನಲಿವಿಲಿ ಮೀಸಲು ಬೆಣ್ಣೆಯನಿಡಲು ನಿಲುಕಿತ ಮೆದ್ದೆಮ್ಮ ಒಲವಿತ್ತುದ್ದರಿಸಿದ 4 ಗೋಕುಲವೇತಕೆ ಆ ಕಮಲಾಕ್ಷನಾ ಕಟಾಕ್ಷವಿಲ್ಲದೀಪರಿ ಸಹಿಪುದೆ 5 ಯಮುನೆಯ ತೀರದೊಳ್ ಎಮ್ಮಯ ವಸ್ತ್ರವ ಕ್ಷಮೆಯಿಂದಿತ್ತ ಕಮಲನಯನ ಕೃಷ್ಣ 6 ರಥಬಂದಿದೆ ನೋಡೆ ಅತುಳ ಮಹಿಮಗೆಂದು ಜತೆಯೊಳು ಬಲರಾಮ ಹಿತದಿ ಅಕ್ರೂರ ಸಹ 7 ಬಿಟ್ಟಿರಲಾರೆವೆ ಪುಟ್ಟ ಕೃಷ್ಣನ ಪಾದ ದಿಟ್ಟ ಶ್ರೀ ಶ್ರೀನಿವಾಸಗಿಷ್ಟವಂತೆ ಕೇಳೆ 8 ಭಕ್ತವತ್ಸಲನೆಮ್ಮ ಭರ್ತನೊಳನುರಾಗವಿತ್ತು ಬಾಳಿರೆಂದು ಇತ್ತು ವಚನವನ್ನು 9
--------------
ಸರಸ್ವತಿ ಬಾಯಿ
ಪೋಷಿಸೆನ್ನ ಜೀಯಾ | ಗುರು |ಪ್ರಾಣೇಶ ದಾಸರಾಯಾ |ಶ್ರೀಶನ ಗುಣ ಸಂತೋಷದಿ ಪಾಡುವ |ದಾಸ ಕುಲಾಗ್ರಣಿಯೇ | ಎಣಿಯೆ ಪ ಹರಿಸ್ಮರಣೆಯ ಮರೆದೂ | ಸರ್ವದ |ಪದದನ್ನಕೆ ಬೆರಿದೂ |ದುರುಳ ಜನರ ಸಹವಾಸವನ್ನು ಮಾಡಿ |ಬಂದೆ ದಿನವ ಕಳೆದೇ ಉಳದೇ 1 ಪವನ ಮತದೊಳಿಟ್ಟೂ | ಶ್ರೀ ಹರಿ |ಸ್ತವನವನ್ನೆ ಕೊಟ್ಟೂ |ಕವಿಗಳ ಮುಖದಿಂ ತತ್ವವಿಚಾರದಿ |ಕವಲ ಮತಿಯ ಪಾಲಿಸೀ, ಉದ್ಧರಿಸೀ 2 ಮನ್ನ ಭಿನ್ನಪವನ್ನು ಕೇಳಿ |ಮನ್ನಿಸು ಸುರಧೇನೂ |ಘನ್ನ ಶ್ರೀಶ ಪ್ರಾಣೇಶ ವಿಠಲನ ಧ್ಯಾನ |ವನ್ನು ಮಾಳ್ವ ಶಕ್ತಾ ವಿರಕ್ತಾ 3
--------------
ಶ್ರೀಶಪ್ರಾಣೇಶವಿಠಲರು
ಪ್ರಭವನಾಮ ಸಂವತ್ಸರ ಸ್ತೋತ್ರ 145 ಪದ್ಮನಾಭ ಪದ್ಮೇಶ ಪದ್ಮಸಂಭವ ತಾತ ಮೋದಬಲ ಜ್ಞಾನಾದ್ಯಾಮಲ ಗುಣನಿಧಿಯೇ ಸತ್ಯಜಗತ್ ಸೃಷ್ಟಾದಿ ಕರ್ತನೀನೇ ಪ್ರಭವ ಸಂವತ್ಸರ ನಿಯಾಮಕನು ಸ್ವಾಮೀ ನಮಸ್ತೆ ಪ ಈ ಪ್ರಭವನಾಮ ನಿನ್ನ ನಿಯಾಮನಿಂ ಸೋಮನು ಈ ಸಂವತ್ಸರರಾಜನು ಮಂಗಳನು ಮಂತ್ರಿಃ ಸಸ್ಯ ಸೈನ್ಯಾಧಿಪರು ಶುಕ್ರ ವಿಧುಧಾನ್ಯಪತಿ ಬುದನು ರಸಪ ರವಿ ನಿರಸಗುರು ಹೀಗೆ ನಾಯಕರು ನವರು 1 ವಿಷ್ಣುನವ ಶ್ರೀನವ ನರವಾಯುನವ ಪತೀಶನÀವ ಶೇಷನವ ಈ ಬಗೆ ನವ ಮೂರ್ತಿ ಅಧಿಕಾರಿಗಳಿಂ ಸ್ಮರಣೀಯ ವರ್ಷನವನಾಯಕರೊಳೆ ವಾಯ್ವುಂತರ್ಗತನಾಗಿ ಶ್ರೀಸಹ ವಿಷ್ಣು ನೀನೆ ಇದ್ದು ಕೃತಿನಡೆಸಿ ಲೋಕವಕಾಯುತಿ2 ಸೋಮ ರಾಜನು ತನ್ನ ವಶದಿ ಸೈನ್ಯ ವೇಘಗಳಿಚ್ಚಿಹನು ಅಮಾತ್ಯತ್ಯ ಕುಜಗಿಹುದು ಶಿಷ್ಟಪಾಲನತಿದುಷ್ಟರ ತಿದ್ದುವುದಕ್ಕೆ ಅಮ್ಮಮ್ಮ ಏನೆಂಬೆ ಅಮೃತಕರ ಸೋಮದಿಯಲ್ಲಿದ್ದು ರಾಜ ರಾಜೇಶ್ವರ ನೀ ಕಮಲಾಸನಪಿತ ಪ್ರಸನ್ನ ಶ್ರೀನಿವಾಸ ಸಂತಾನಾದಿ ಭಾಗ್ಯ ವೀವಿ ಕರುಣಾಳು 3
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಭುರಾಯ ಪ್ರಭುರಾಯ ಅಭಿನಂದಿಸುವೆನು | ಶುಭಮತಿ ಪಾಲಿಸು ಪ ಶ್ರೀಶಗುರಪ್ರಾಣೇಶದಾಸರಿಂದ ಪೋಷಿತನಾದ ಭೂಸುರ ಪ್ರೀಯ 1 ಭಾವÀಭಕ್ತಿಲಿ ಸೇವಿಸಿ ಸಂತಸ ಶ್ರೀವರದೇಂದ್ರರ | ನೀಮೊಲಿದ‌ಘನ 2 ಕೋಶಿಗಿ ಗುರು ಉಪದೇಶದಿಂದ ವರ ದೇಶವಿಠಲನ ದಾಸನೆಂದೆನಿಸಿದ 3 ಕಪ್ಪುಗೊರಳನುತ | ಕುಪ್ಪಿಯ ಭೀಮನ ತಪ್ಪು ಕ್ಷಮಿಸೆಂದು | ತಪ್ಪದೆ ಸ್ತವಿಸಿದ 4 ಅನ್ಯನಲ್ಲನಾ ನಿನ್ನಾಪ್ತನು ನಿಜ ವೆನ್ನುತ ಬಿನ್ನಪ ಮನ್ನಿಸಿ ನೋಡೋ 5 ರಾಮಸ್ತವನವನು ನೇಮದಿಗೈಯುವ ಕೋಮಲಾಂಗದ ಹೇಮಮ ಬಂಧು 6 ನಂದಜ ಶಾಮಸುಂದರವಿಠಲನ ಮಂದಜ ಮಧುಪ7
--------------
ಶಾಮಸುಂದರ ವಿಠಲ
ಪ್ರಸನ್ನ ರಾಮಾಯಣ ಸುಂದರಕಾಂಡ ಜಯ ಜಯ ಜಯ ರಾಮಚಂದ್ರ ಜಯ ರಾಮಭದ್ರ ಸರ್ವೇಶ ಜಯ ಜಯ ಜಯ ರಾಮ ಸ್ವರತ ಆಹ ಜಯ ಸೀತಾರಮಣ ನೀ ಭಯಬಂಧ ಮೋಚಕ ಜಲ ಸಂಭವಮುಖ ಸುರಸೇವ್ಯ ನಮೋ ನಮೋ ಪ ಶಾಶ್ವತ ಸುಗುಣಾಬ್ಧಿ ರಾಮ ಸವೇಶ್ವರನೆ ಬಲವೀರ್ಯ ಸಂಪೂರ್ಣಾರ್ಣವ ನಿನ್ನ ನಮಿಸಿ ಆಹ ಶೀಘ್ರ ಆ ಗಿರಿಯೆತ್ತಿ ಹನುಮ ಹಾರಲು ಆಗ ಸಾಗರ ಸರ್ವವು ಕಲಕಿ ಓಡಿತು ಕೂಡ 1 ಹಿಂದೆ ಪರ್ವತಗಳ ಪಕ್ಷ ಹನನ ಕಾಲದಿ ವಾಯು ತನ್ನ ಹಿತದಿ ರಕ್ಷಿಸಿದನು ಎಂದು ಆಹ ಹಿಮಗಿರಿಸುತ ಮೈನಾಕನು ಮೇಲೆ ಬಂದಾಗ ಹನುಮಗೆ ನಮಿಸಿ ವಿಶ್ರಮಿಸಿಕೊಳ್ಳೆಂದ2 ಶ್ರಮರಹಿತನು ಎಂದೂ ಹನುಮ ಶ್ರಮ ನಿವಾರಣ ಅನಪೇಕ್ಷ ಆಶ್ಲೇಷಿಸಿ ನಗವರನ ಆಹ ನಿಸ್ಸೀಮ ಪೌರುಷ ಬಲಯುತ ಹನುಮನು ನಿಲ್ಲದೆ ಮುಂದೆ ತಾ ಸುರಸೆಯೊಳ್ ಹೊಕ್ ಹೊರಟ 3 ಪರೀಕ್ಷಿಸೆ ಸುರಸೆಯ ಸುರರು ಪ್ರೇರಿಸಿ ವರವನ್ನು ಕೊಡಲು ಆಹ ಫಣಿಗಳ ತಾಯಿ ಅವಳು ಬಾಯಿ ತೆರೆಯಲು ಪೊಕ್ಕು ಲೀಲೆಯಿಂ ಹನುಮ ಹೊರಹೊರಟ4 ಸುರರು ಆನಂದದಿ ಆಗ ಸ್ತುತಿಸಿ ಹನುಮನ ಕೊಂಡಾಡಿ ಸುರಿಯಲು ಪುಷ್ಪದ ಮಳೆಯ ಆಹ ಶೀಘ್ರ ಪವನಜನು ಮುಂದೆ ತಾ ಹೋಗುತ್ತ ಸಿಂಹಿಕಾ ರಾಕ್ಷಸಿ ಛಾಯಾಗ್ರಹವ ಕಂಡ 5 ಸರಸಿಜಾಸನ ವರಬಲದಿ ಸಿಂಹಿಕಾ ಲಂಕಾ ಪೋಗುವರ ಸೆಳೆದು ತಾ ನಿಗ್ರಹಿಸುವಳು ಆಹ ಸೆಳೆಯೆ ಆ ರಾಕ್ಷಸಿ ಹನುಮನ ಛಾಯೆಯ ಸೀಳಿದ ಹನುಮ ಅವಳ ಶರೀರದಿ ಪೊಕ್ಕು 6 ತನ್ನ ನಿಸ್ಸೀಮ ಬಲವನು ತೋರಿಸಿ ಈ ರೀತಿ ಹನುಮ ಧುಮುಕಿದ ಲಂಬ ಪರ್ವತದಿ ಆಹ ತೋರ್ಪುದು ಲಂಕಾ ಪ್ರಕಾರದೊಲï ಈ ಗಿರಿ ತನ್ನ ರೂಪವ ಸಣ್ಣ ಹನುಮ ಮಾಡಿದನಾಗ 7 ಆಗಿ ಬಿಡಾಲದೊಲ್ ಸಣ್ಣ ಅಸಿತ ಕಾಲದಿ ಪೋಗೆ ಪುರಿಗೆ ಅಲ್ಲಿದ್ದ ಲಂಕಿಣಿ ತಡೆಯೆ ಆಹ ಅವಳ ಹನುಮ ಮುಷ್ಟಿಯಿಂದ ಕುಟ್ಟಿ ಜಯಿಸಿ ಅನುಮತಿಯಿಂದಲ್ಲೆ ಲಂಕೆಯೊಳ್ ಪೋದ 8 ಶ್ರೀಘ್ರ ಅಶೋಕ ವನದಲಿ ಶಿಂಶುಪಾವೃಕ್ಷ ಮೂಲದಲಿ ಸೀತಾ ಅಕೃತಿಯನು ಕಂಡ ಆಹ ಸೀತೆಗೆ ಏನೇನು ಭೂಷಣ ಉಂಟೋ ಸೀತಾ ಆಕೃತಿಗೂ ಸಹ ಅದರವೊಲಿತ್ತು 9 ಅವನಿಯೋಳು ನಿನ್ನ ವಿಡಂಬ ಅರಿತು ಅನುಸರಿಸಿ ಹನುಮ ಅದರಂತೆ ಪರಿಪಂಥಾವಳಿಗೆ ಆಹ ಅವಶ್ಯ ಮಾತುಗಳಾಡಿ ಅಂಗುಲೀಯಕವೀಯೆ ಚೂಡಾಮಣಿ ನಿನಗೆಂದು ಕೊಟ್ಟಳು 10 ಅರಿಯರು ರಾಕ್ಷಸರಿದನು ಅಮರರು ಕಲಿಮುಖರೆಲ್ಲ ಅವಲೋಕಿಸಿದರು ಈ ಕಾರ್ಯ ಆಹ ಅಮರರು ಲೋಕವಿಡಂಬವಿದೆಂದರಿಯೆ ಅಧಮ ಕಲ್ಯಾದಿಗಳ್ ಮೋಹಿತರಾದರು 11 ಕೃತಕೃತ್ಯವಾಗಿ ತಾ ಹನುಮ ಕೋವಿದೋತ್ತಮ ಬಲವಂತ ಕಾಣಿಸಿಕೊಳ್ಳುವ ಮನದಿ ಕಿಂಚಿತ್ತೂ ಭಯವೇನೂ ಇಲ್ಲದೆ ವನವನು ಕಡಿದು ಧ್ವಂಸವ ಗೈದ ಆ ಶಿಂಶುಪವ ಬಿಟ್ಟು 12 ಕುಜನ ರಾಕ್ಷಸರನು ಕೊಲ್ಲೆ ಕೂಗಿ ಆರ್ಭಟಮಾಡೆ ಹನುಮ ಕೇಳಿ ಚೇಷ್ಟೆಗಳ ರಾವಣನು ಆಹ ಕಪ್ಪು ಕಂಠನ ವರ ಆಯುಧಯುತರು ಕೋಟಿ ಎಂಬತ್ತರ ಮೇಲ್ ಭೃತ್ಯರ ಕಳುಹಿದ 13 ಆರ್ಭಟದಿಂದ ಘೋಷಿಸುತ ಅವರು ಆವರಿಸಿ ಹನುಮನ ಆಯುಧಗಳ ಪ್ರಯೋಗಿಸಲು ಆಹ ಪವನಜ ಮುಷ್ಟಿಪ್ರಹರದಿ ಆ ವೀರರೆಲ್ಲರ ಹಿಟ್ಟು ಮಾಡಿದ ಬೇಗ 14 ಕಡುಕೋಪದಿಂದ ರಾವಣನು ಕಳುಹಿದನು ಏಳು ಮಂತ್ರಿ ಕುವರರ ವರ ಬಲಯುತರ ಆಹ ಖಳರು ಈ ಏಳ್ವರ ಮೆಟ್ಟಿ ಷಿಷ್ಟವ ಮಾಡೆ ಕುಮತಿ ರಾಕ್ಷಸ ಸೈನ್ಯ ತೃತೀಯ ಭಾಗವು ಹೋಯ್ತು 15 ಅನುಪಮ ಬಲಕಾರ್ಯಕೇಳಿ ಅಧಮ ರಾವಣ ತನ್ನ ಸುತನ ಅಕ್ಷನ ಕಳುಹಲು ಹನುಮ ಆಹ ಅಕ್ಷನ ಚಕ್ರಾಕಾರದಿ ಎತ್ತಿ ಸುತ್ತಾಡಿ ಅವನ ಅಪ್ಪಳಿಸಿ ನೆಲದಿ ಚೂರ್ಣ ಮಾಡಿದ 16 ಅತಿ ದುಃಖದಿಂದ ರಾವಣನು ಅಕ್ಷನಗ್ರಜ ಇಂದ್ರಜಿತನ ಒಡಂಪಟ್ಟ ಸ್ವೇಚ್ಛದಿ ಹನುಮ ಬ್ರಹ್ಮಾಸ್ತ್ರಕೆ 17 ರಾವಣನಲಿ ಕೊಂಡು ಪೋಗೆ ರಾವಣ ಪ್ರಶ್ನೆಯ ಮಾಡೆ ರಾಮಗೆ ನಮಿಸಿ ಹನುಮನು ಆಹ ರಘುವರ ರಾಮ ದುರಂತ ವಿಕ್ರಮ ಹರಿ ರಾಕ್ಷಸಾಂತಕ ದೂತ ಮಾರುತಿ ತಾನೆಂದ 18 ರಘುವರ ಪ್ರಿಯೆಯನು ಬೇಗ ರಾಮಗರ್ಪಿಸಲೊಲ್ಲೆ ಎನ್ನೆ ಹನುಮ ಪ್ರಕೋಪದಿ ಅವನ ಆಹ ರಾಜ್ಯ ಮಿತ್ರ ಬಂಧು ಸರ್ವನಾಶ ರಾಘವ ಮಾಡುವನೆಂದು ಪೇಳಿದನು 19 ಅಜ ಶಿವ ಮೊದಲಾದ ಸರ್ವ ಅಮರೇಶ್ವರರು ತಾವು ತಡೆಯ ಆಶಕ್ತರು ರಾಮಬಾಣವನು ಆಹ ಅಂಥ ಬಾಣವ ಅಲ್ಪಶಕ್ತ ರಾವಣ ತಾಳೆ ಅಸಮರ್ಥನೆಂದ ಪ್ರಭಂಜನ ಸುತನು 20 ಪ್ರಭಂಜನ 1 ಸುತ ಮಾತು ಕೇಳಿ ಪ್ರಕುಪಿತನಾಗಿ ರಾವಣನು ಪ್ರಯತ್ನಿಸೆ ಹನುಮನ ಕೊಲ್ಲೆ ಆಹ ಪ್ರಕೃಷ್ಟ ಮನದಿ ವಿಭೀಷಣ ಬುದ್ಧಿ ಪೇಳಲು ಪುಚ್ಛಕ್ಕೆ ಬೆಂಕಿ ಹಚ್ಚೆಂದ ರಾಕ್ಷಸರಾಜ21 ಆತಿಭಾರ ವಸ್ತ್ರ ಕಟ್ಟುಗಳಿಂ ಅಧಮರು ಸುತ್ತಿ ಬಾಲವನು ಅಗ್ನಿಯ ತೀವ್ರದಿ ಹಚ್ಚೆ ಆಹ ಅಗ್ನಿಯ ಪರಸಖ ವಾಯು ಆದುದರಿಂದ ಅಂಜನಾಸುತ ನಿರಾಮಯನ ಸುಡಲೇ ಇಲ್ಲ 22 ಅಧಮ ರಾಕ್ಷಸರ ಚೇಷ್ಟೆಗಳ ಅಸಮ ಬಲಾಢ್ಯನು ಹನುಮ ಅನುಭವಿಸಿ ಕುತೂಹಲದಿ ಆಹ ಅಲ್ಲಲ್ಲಿ ಹಾರಿ ಆ ಲಂಕಾಪುರಿಯ ಸುಟ್ಟು ಅತಿ ಮುದದಲಿ ಗರ್ಜಿಸಿದ ರಾಮದೂತ 23 ಅಧಮ ಸಪುತ್ರ ರಾವಣನ ಅಲ್ಪ ತೃಣೋಪಮ ಮಾಡಿ ಅವರೆದುರಿಗೆ ಪುರಿ ಸುಟ್ಟು ಆಹ ಅಬ್ಧಿಯ ದಾಟೆ ವಾನರರು ಪ್ರಪೂಜಿಸೆ ಉತ್ತಮ ಮಧುವುಂಡು ಪ್ರಭುವೇ ನಿನ್ನಲಿ ಬಂದ 24 ಸಮಸ್ತ ವಾನರ ವರರೊಡನೆ ಸಮರ್ಥ ಹನುಮ ಧೀರ ಬಂದು ಶುಭಸೂಚಕ ಚೂಡಾಮಣಿಯ ಆಹ ಶ್ರೀಶ ನಿನ್ನಯ ಪಾದದ್ವಂದ್ವದಿ ಇಟ್ಟು ತಾ ಸನ್ನಮಿಸಿದ ಭಕ್ತಿಭರಿತ ಸವಾರ್ಂಗದಿ 25 ಭಕ್ತಿ ಸವೈರಾಗ್ಯ ಜ್ಞಾನ ಪ್ರಜ್ಞಾ ಮೇಧಾ ಧೃತಿ ಸ್ಥಿತಿಯು ಪ್ರಾಣ ಯೋಗ ಬಲ ಇಂಥಾ ಆಹ ತುಂಬಿ ಇರುವುವು ಈ ಪ್ರಭಂಜನ ವಾಯು ಹನುಮನಲಿ ಸರ್ವದಾ 26 ಸರ್ವೇಶ ರಾಮ ಅಗಾಧ ಸದ್ಗುಣಾರ್ಣವ ನೀ ಹನುಮನ ಸಂಪೂರ್ಣ ಭಕ್ತಿಗೆ ಮೆಚ್ಚಿ ಆಹ ಸಮ ಯಾವುದೂ ಇಲ್ಲದೆ ನಿನ್ನನ್ನೇ ನೀ ಕೊಟ್ಟೆ ಸುಪ್ರಮೋದದಿ ಹನುಮನ ಆಲಿಂಗನ ಮಾಡಿ27 ನೀ ನಿಂತು ನುಡಿಸಿದೀ ನುಡಿಯು ನಿನ್ನಡಿಗಳಿಗೆ ಅರ್ಪಣೆಯು ನಮ್ಯ ಮಾರುತಿ ಮನೋಗತನೆ ಆಹ ನೀರಜಾಸನ ತಾತ ಪ್ರಸನ್ನ ಶ್ರೀನಿವಾಸ ನಿನಗೆ ಪ್ರೀತಿಯಾಗಲೊ ಸುಹೃದ ಸಂತೃಪ್ತ 28
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಸನ್ನ ಶ್ರೀ ನರಸಿಂಹ (ಪ್ರಹ್ಲಾದ ಚರಿತೆ)] ಪ್ರಥಮ ಅಧ್ಯಾಯ - ಹಿರಣ್ಯಕಶಿಪು ಪೂರ್ವ ವೃತ್ತಾಂತ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ತೋಯಸ್ಥ ಪತ್ರಸ್ಥ ತೋಯಜಾಲಯಾ ಸ್ತುತ್ಯ ಅಂಡ ಸ್ರಷ್ಟಾ ಸರ್ವಸ್ಥ ಅಚ್ಯುತಾನಂತ ಗೋವಿಂದ ನೀ ಸಜ್ಜನರ ಭಯ ನಿವಾರಣ ಮಾಳ್ಪಿ ತೋರಿ ಆಗಾಗ 1 ಪ್ರಳಯ ಜಲಚರ ಶೈಲಧರ ಧರೋದ್ಧರ ನಮೋ ಬಾಲಕಗೆ ಒಲಿದು ಬಲಿಯಲಿ ದಾನ ಕೇಳಿ ಖಳ ಕುಪಾಲರ ಸದೆದು ಜಲಧಿಯ ಬಂಧಿಸಿದ ಲಲನೇರ ರಂಜಿತ ಶಿಶು ಶಂಭಳದಿ ತೋರ್ವಿ 2 ಏಕಾತ್ಮ ಶ್ರೀ ವಿಷ್ಣುಲೋಕಕ್ಕೆ ಬರಲು ದಿಗ್ವಾಸಸ ಶಿಶುರೂಪ ಆ ಮುನಿವರರ ಲೆಕ್ಕಿಸದೇ ತಡೆದರು ದ್ವಾರಪಾಲಕರು 3 ಜಯವಿಜಯರೆಂಬ ಆ ದ್ವಾರಪಾಲಕರಿಗೆ0 ಮಾಯೇಶ ಹರಿ ಪ್ರಿಯತರರು ಮುನಿವರರು ಈಯಲು ಶಾಪವ ಆ ವಿಷ್ಣು ಪಾರ್ಶದರು0 ದೈತ್ಯಜನ್ಮವ ಹೊಂದಿದರು ಪತನವಾಗಿ 4 ಸುತಪೋನಿಧಿ ಕಶ್ಯಪ ತೇಜೋಲ್ಬಣದಿಂ ದಿತಿದೇವಿ ಜಠರದಲಿ ವಿಷ್ಣು ಪಾರ್ಶದರು ಪತಿತ ಆ ಜಯ ವಿಜಯರು ಪ್ರವೇಶಿಸಿದರು ದಿತಿ ಹಡೆದಳು ಗಂಡು ಮಕ್ಕಳೀರ್ವರನು 5 ದಿತಿದೇವಿ ಅಗ್ರಸುತ ಹಿರಣ್ಯಕಶಿಪು ಜಯ ದಿತಿ ಅವರಸುತ ವಿಜಯನೇ ಹಿರಣ್ಯಾಕ್ಷ ಉಪಟಳ ಕೊಟ್ಟನು ಈ ಧರೆಯ ಅಬ್ಧಿಯ ಕೆಳಗೆ ಅಡಗಿಸಿದ 6 ಸುರಸುಜನ ಕ್ಷೇಮಾರ್ಥ ಪದುಮಜ ಪ್ರಾರ್ಥಿಸಲು ಕರದಿಂದ ಹೊಡೆದು ಹಿರಣ್ಯಾಕ್ಷನ ಕೊಂದು ಧರೆಯ ಲೀಲೆಯಿಂದ ಮೇಲೆತ್ತಿತಂದಿ ವರಾಹ ಹರಿ ನೀನು 7 ಜಯ ಜಯತು ವೇಧಪಿತ ಶ್ರೀ ಪ್ರಸನ್ನ ಶ್ರೀನಿವಾಸ ನರಸಿಂಹ ಜಯ ಗುಣಾರ್ಣವ ಭೂಮಾನ್ ಲಕ್ಷ್ಮೀಸಮೇತ ಜಯ ಅಜನಪಿತ ನಮೋ ಶರ್ವಾದಿ ಸುರವಂದ್ಯ ಜಯತು ಭಕ್ತೇಷ್ಟಪ್ರದ ಪ್ರಹ್ಲಾದ ಪಾಲ 8 -ಇತಿ ಪ್ರಥಮಾಧ್ಯಾಯ ಸಂಪೂರ್ಣಂ - ದ್ವಿತೀಯ ಅಧ್ಯಾಯ ಹಿರಣ್ಯಕಶಿಪು ವರ ವೃತ್ತಾಂತ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ಮೂರ್ಜಗದ ದೊರೆ ಹರೇ ನೀ ತನ್ನ ತಮ್ಮನ ಭಂಜಿಸಿದೆ ಎಂದು ಕಡುಕೋಪಗೊಂಡು ದುರ್ಜನ ದಾನವ ವಂದಿತ ಹಿರಣ್ಯಕನು ರಜಸ್ತಮೋಚ್ಛದಿ ದ್ವೇಷ ಮಾಡಿದನು ನಿನ್ನಲ್ಲಿ 1 ಶೂಲದಿಂ ಅಚ್ಯುತನ ಕುತ್ತಿಗೆ ಕತ್ತರಿಸಿ ಗಳರುಧಿರ ತರ್ಪಣ ಕೊಡುವೆ ಎನ್ನುತ್ತ ಖಳ ದೈತ್ಯ ಪ್ರಮುಖರಿಗೆ ಹೇಳಿದನು ವೈಷ್ಣವ ಸ್ಥಳ ದ್ವಿಜ ಗೋ ಭಕ್ತರನ್ನ ತರಿ ಎಂದ 2 ಗರ್ಜಿಸುತ ದೈತ್ಯರು ಪುರ ಗ್ರಾಮ ಆಶ್ರಮ ವ್ರಜಕ್ಷೇತ್ರ ದಹಿಸÀಲು ಹಿರಣ್ಯಕಶಿಪು ಅಜೇಯಾಜರಾಮರತ್ವವ ಅಪ್ರತಿ ಮುಖ್ಯ ರಾಜತ್ವ ಹೊಂದಲು ತಪಸ್ಸು ಮಾಡಿದನು 3 ಊಧ್ರ್ವದಲಿ ಬಾಹುಗಳ ನಭದಲಿ ದೃಷ್ಟಿಯು ಪಾದಾಂಗುಷ್ಟ ಮಾತ್ರದಿ ನಿಂತು ತಪವ ಗೈದನು ಆ ತಪೋಧೂಮಾಗ್ನಿ ಪೀಡಿತ ತ್ರಿದಿವರು ಮೊರೆ ಇಟ್ಟರು ಬ್ರಹ್ಮನಲ್ಲಿ 4 ಪದುಮಭವ ಭೃಗು ದಕ್ಷಾದಿಗಳೊಡೆಯೈದು ದೈತ್ಯೇಶ್ವರ ಹಿರಣ್ಯಕನ ಆಶ್ರಮವ ಭದ್ರಂತೇ ತಪಸಿದ್ಧಿ ಆಯಿತು ವಶೀಕೃತನಾದ ಉತ್ತಿಷ್ಠೋತ್ತಿಷ್ಠ ವರ ಕೊಡುವೆನು ಎಂದ 5 ಬ್ರಹ್ಮನ್ನ ನೋಡಿ ಹಿರಣ್ಯಕನು ಸನ್ನಮಿಸಿ - ಬ್ರಹಾಂತರ್ಗತ ಹರಿ ವಿವಕ್ಷಿತ ಗುಣಗಳ ಬ್ರಹ್ಮ ಹರುಷದಿಂದಲಿ ಸಮ್ಯಕ್ ಕೀರ್ತನೆ ಮಾಡಿ ಆ ಹಂಸವಾಹನನ ವರಗಳ ಬೇಡಿದನು 6 ಸರೋರುಹಾಸನ ಸೃಷ್ಟ ಸರ್ವಭೂತಂಗಳು ಮೃಗ ಪ್ರಾಣ ಉಳ್ಳವು ಇಲ್ಲದವು ಹೊರ ಒಳಗೆ ಭೂಮ್ಯಾಂಬರ ದಿವಾ ರಾತ್ರಿಯು ಸುರಾಸುರ ಮೃತ್ಯು ಮಾ ಭೂನ್ಮ್‍ಮ ಎಂದ 7 ಏಕಪಥ್ಯವು ಅಪ್ರತಿ ಶಕ್ತಿಮತ್ಯವವು ಲೋಕಪಾಲಕರಂತೆ ಬಲವು ಮಹಿಮೆಗಳು ಯೋಗಿ ತಪಸ್ವಿಗಳಂತೆ ಸಿದ್ಧಿಗಳು ಸರ್ವವು ಬೇಕು ತನಗೆಂದು ವರ ಬೇಡಿದ ಬ್ರಹ್ಮನ್ನ 8 ಶತಧೃತಿಯು ಈ ದುರ್ಲಭ ವರಗಳನ್ನಿತ್ತು ತಾ ತೆರಳಿದನು ದೈತ್ಯನಿಂ ಪೂಜೆಗೊಂಡು ಭ್ರಾತೃವಧ ಅನುಸ್ಮರಿಸಿ ಹರಿದ್ವೇಷ ಬೆಳಸಿದನು ಲಬ್ಧವರ ದೈತ್ಯೇಶ ಇನ್ನೂ ಹೆಚ್ಚಾಗಿ 9 ನರಸುರಾಸುರ ಋಷಿ ಗರುಡೋರಗ ಸಿದ್ಧ ಚಾರಣ ವಿದ್ಯಾಧರ ಯಕ್ಷ ಗಂಧರ್ವ ಪಿತೃ ಪ್ರೇತ ಭೂತಪತಿ ರಾಕ್ಷಸ ಪಿಶಾಚೇಶ ಸರ್ವರನು ಜೈಸಿ ತನ್ನವಶ ಮಾಡಿಕೊಂಡ 10 ಮೂರ್ಲೋಕಂಗಳಲ್ಲಿ ದಶದಿಕ್ಕುಗಳಲ್ಲಿ ಈ ಹಿರಣ್ಯಕಶಿಪು ತನ್ನ ಜಯಭೇರಿ ಹೊಡೆದ ಸರ್ವಲೋಕಪಾಲರ ತೇಜಃಸ್ಥಾನಗಳ ಅಪ - ಹರಿಸಿ ತ್ರಿವಿಷ್ಟಪ ಭೋಗದಲಿ ಮನಸ್ಸಿಟ್ಟ 11 ಅಜಿತೇಂದ್ರಿಯ ಹೇಯ ಭೋಗರತ ಅಹಂಕಾರಿ ಮೂರ್ಜಗಾರಿಯು ಧರ್ಮ ಆಚಾರ ದ್ವೇಷಿ ನಿರ್ಜರರು ಅವನಿಂದ ಹಿಂಸೆ ತಾಳದೆ ವಿಷ್ಣೋ ತ್ರಿಜಗದೀಶನೇ ಮೊರೆ ಹೊಕ್ಕರು ನಿನ್ನಲ್ಲಿ 12 ಅಚ್ಯುತ ಈಶ್ವರ ನಿನ್ನ ಭದ್ರವಾಣಿ ಅಭಯ ಹೊಂದಿ ಸುರವರರು ನಿರೀಕ್ಷಿಸಿದರು ಪ್ರಶಾಂತ ಮಹಾತ್ಮಾ ನಿರ್ವೈರ ಪ್ರಹ್ಲಾದ ಹುಟ್ಟುವ ಕಾಲವನು 13 ಜಯತು ಜಯತು ವೇಧಪಿತ ಶ್ರೀ ಪ್ರಸನ್ನ ಶ್ರೀನಿವಾಸ ನರಸಿಂಹ ಜಯ ಗುಣಾರ್ಣವ ಭೂಮಾನ್ ಲಕ್ಷ್ಮೀಸಮೇತ ಜಯ ಅಜನಪಿತ ನಮೋ ಶರ್ವಾದಿ ಸುರವಂದ್ಯ ಜಯತು ಭಕ್ತೇಷ್ಟಪ್ರದ ಪ್ರಹ್ಲಾದ ಪಾಲ 13 -ಇತಿ ದ್ವಿತೀಯ ಅಧ್ಯಾಯ ಸಂಪೂರ್ಣಂ - ತೃತೀಯ ಅಧ್ಯಾಯ - ಬಾಲಕ ಪ್ರಹ್ಲಾದ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ಯುಕ್ತ ಕಾಲದಿ ಹೇಮಕಶಿಪುಗೆ ಐದು ಮಕ್ಕಳು ಹುಟ್ಟಿದರು ನಾಲ್ವರು ಗಂಡು ಮಕ್ಕಳು ನಾಲ್ವರಲ್ಲಿ ಪ್ರವರ ಪ್ರಹ್ಲಾದನು ಅಕಳಂಕ ಗುಣಶ್ರೇಷ್ಠ ಮಹದುಪಾಸಕನು 1 ಸತ್ಯಸಂಧನು ಶೀಲಸಂಪನ್ನ ಬ್ರಹ್ಮಣ್ಯ ಜಿತೇಂದ್ರಿಯ ಸಮದರ್ಶಿ ಆರ್ಯರ ವಿಧೇಯ ಸ್ನಿಗ್ಧರಿಗೆ ಭ್ರಾತೃವತ್ ಯಥಾದೇವೋ ತಥಾಗುರೋ ಭೂತಪ್ರಿಯ ಸುಹೃತ್ತಮ ದೀನವತ್ಸಲನು 2 ವಿಧ್ಯಾರ್ಥಿ ರೂಪಾದಿಗಳ ಗರ್ವ ಇವಗಿಲ್ಲ ಶ್ರುತ ದೃಷ್ಟ ವಿಷಯದಲಿ ಗುಣಗ್ರಾಹಿಯು ಶಾಂತನು ದಾಂತನು ಸಾಧುಗಳಲಿ ಪ್ರಿಯ ಸದಾ ಸ್ವಭಾವದಿ ಶ್ರೀ ವಿಷ್ಣುಭಕ್ತಿ 3 ವಾಸುದೇವ ನಿನ್ನಲ್ಲೇ ಸರ್ವದಾ ಮನವನು ನೆಲಸಿ ಈ ಬಾಲ ಸರ್ವ ನಡೆನುಡಿ ಊಟ ಶಯನ ಪರ್ಯಟನ ಸರ್ವಾವಸ್ಥೆಯಲೂ ನಿನ್ನ ಸ್ಮರಿಸುವನು 4 ಅಂಬುಜೋದ್ಭವ ತ್ರ್ಯಿಂಬಕ ಮುಖ್ಯವಿನುತ ನಿನ್ನ ಅಂಬುಜಾಂಘ್ರಿಗಳನ್ನ ಧ್ಯಾನಿಪ ಈ ಬಾಲಕನ ಅಂಬಕದಿ ಸುಜ್ಞಾನ ಭಕ್ತಿ ಪುಳಕಾಂಬುವು ತುಂಬಿ ತುಳುಕಾಡುವುದು ಕಂಡಿಹರು ಅಂದು 5 ಒಮ್ಮೆ ನಗುವನು ಒಮ್ಮೆ ರೋದಿಸುವನು ಒಮ್ಮೆ ಸುಮ್ಮನಿರುವ ಹರಿ ಪ್ರೇಮಾನಂದದಲಿ ಅಮ್ಮಮ್ಮ ಭಕ್ತಿಯಲಿ ಕೂಗಿ ಕುಣಿವನು ಮಹಾನ್ ರಮೆಯರಸ ನಿನ್ನ ದಾಸಾಗ್ರಣಿಯು ಪ್ರಹ್ಲಾದ 6 ಮಹಾತ್ಮನು ಮಹಾಭಾಗ ಮಹಾಭಾಗವತನು ಮಹಾಕಾರುಣಿಕ ಪ್ರಹ್ಲಾದಗೆರಗುವೆನು ಅಹರ್ನಿಶಿ ಧೃತಿಸ್ಥ ಹರಿ ನಿನ್ನಲ್ಲಿ ಭಕ್ತಿ ಇಹಪರದಿ ಸೌಭಾಗ್ಯ ಎಮಗೀಯಲೆಂದು 7 ಜಯ ಗುಣಾರ್ಣವ ಭೂಮನ್ ಲಕ್ಷ್ಮೀಸಮೇತ ಜಯ ಅಜನಪಿತ ನಮೋ ಶರ್ವಾದಿ ಸುರವಂದ್ಯ ಜಯತು ಭಕ್ತೇಷ್ಟಪ್ರದ ಪ್ರಹ್ಲಾದ ಪಾಲ 8 - ಇತಿ ತೃತಿಯಾ ಅಧ್ಯಾಯ ಸಂಪೂರ್ಣಂ - ಚತುರ್ಥ ಅಧ್ಯಾಯ ಪ್ರಹ್ಲಾದರ ವಿಧ್ಯಾಭ್ಯಾಸ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ದೈತ್ಯರಾಜನು ಪ್ರಿಯಪುತ್ರ ಪ್ರಹ್ಲಾದನಿಗೆ ವಿದ್ಯೆಕಲಿಸಲು ಶಂಡಾಮರ್ಕರು ಎಂಬ ಬೋಧಕರ ಏರ್ಪಾಡು ಮಾಡಿಸಲು ಆ ಮಹಾನ್ ಇತರ ಬಾಲಕರೊಡೆ ಕೂಡಿ ಓದಿದನು 1 ವಿದ್ಯೆ ಕಲಿಯುವಾಗ ಇತರ ಬಾಲರ ಮೀರಿ ಪ್ರತಿಭೆ ತೋರಿಸಿದನು ಬಾಲಪ್ರಹ್ಲಾದ ಕೇಳ್ದ ಕಲಿತದೆÀ್ದಲ್ಲಿ ಸಾಧು ಹೇಳೆಂದು 2 ಸಂಸಾರಿ ಜೀವರುಗಳು ಸದಾ ಐಹಿಕ ನಿಸ್ಸಾರ ವಿಷಯಂಗಳಲ್ಲಿ ಮುಳುಗಿ ತಮಃಸಿಲಿ ಬೀಳದಿರೆ ಸಾಧು ಜನಸಂಗ ಶ್ರೀಶ ಹರಿ ಸರ್ವವಂದ್ಯನ ಆಶ್ರಯಿಪುದು 3 ಹೀಗೆ ಪ್ರಹ್ಲಾದ ಪೇಳಲು ಹಿರಣ್ಯಕ ಕೇಳಿ ಪರ ಬೋಧಿತನಾಗಿಹನೆಂದು ನೆನೆದು ಶುಕ್ರ ಸುತರು ತಮ್ಮ ಮನೆಯಲ್ಲೇ ಇಟ್ಟುಕೊಂಡು ತಕ್ಕ ವಿಧದಲಿ ಬುದ್ಧಿ ತಿದ್ದಿಸುವುದು ಎಂದ 4 ಗುರುಗಳು ಮನೆಯಲ್ಲಿ ಒಳ್ಳೆಮಾತಿಂದಲಿ ಪರಕೃತವೋ ಸ್ವತಃ ಕೃತವೋ ಈ ಹರಿಪಕ್ಷಬುದ್ದಿ ಅನೃತವಾಡದೆ ಸತ್ಯ ಪೇಳೆಂದು ಕೇಳಿದರು ಭಾಗವತ ಪ್ರಹ್ಲಾದ ಬಾಲನ್ನ 5 ಸತ್ತಾ ಪ್ರವೃತ್ತಿ ಪ್ರತೀತ್ಯಾದಿಪ್ರದ ಸರ್ವ - ಚಕ್ರಧರ ವಿಷ್ಣು ವಿಧಿ ಶಿವಾದೀಡ್ಯನಲಿ ರತತಾನು ಕಾಂತವು ಅಯಸ್ಸನ್ನು ಸೆಳೆವಂತೆ ಎಂದು 6
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಸನ್ನ ಶ್ರೀನಿವಾಸ ಕಲ್ಯಾಣ ಜಯ ಜಯ ಜಯ ಶ್ರೀನಿವಾಸ ಕೃತಿ ಮಾಯಾ ಶ್ರೀಶ ಭಯಬಂಧಮೋಚಕ ಜೀಯ ಆಹ ಸುಂದರ ಚಿನ್ಮಯಾನಂದ ಜ್ಞಾನಾತ್ಮನೆ ಮಂದಜಭವ ಸುರವೃಂದ ಸಂಸೇವ್ಯ ಜಯ ಪ ಸುರಸರಿತ ತೀರದಿಂದ ಸುರಮುನಿ ಭೃಗು ಬಂದು ನಿನ್ನ ಪರಸಮರಹಿತನೆಂದರಿತ ಆಹ ಸಿರಿಯು ನಿನ ಭಾವವನುಸರಿಸಿ ಬೇಗ ಕರವೀರ ಪುರ ಪೋಗೆ ಗಿರಿಪುತ್ತ ಪೊಕ್ಕೆಯೊ 1 ಮೇರುಸುತನೆ ಹಾಟಕಾದ್ರಿ ವೀರ ಭಕುತ ವೃಷಭಾದ್ರಿ ಸರೀಸೃಪಾವರಿಸಿದ ಸೌರಭ್ಯಗಿರಿಯಿದು ಪರವೇಂಕಟಾದ್ರಿಯು ಹರಿತು ವಿಪ್ರನ ಪಾಪ 2 ನೀನಿದ್ದ ಸ್ಥಳವೇ ವೈಕುಂಠ ನಿನಗಾರು ಸಮರುಂಟೆ ಶ್ರೀಶ ದೀನ ಸುಜನರಿಗೆ ನಂಟ ಆಹ ಧೇನು ಪಾಲ್ಗರೆಯಲು ಪಾಲಕ ಹೊಡೆಯಲು ದೀನರಕ್ಷಕ ನೀನು ಶಿರಸಿತ್ತು ಪೊರೆದೆಯೊ 3 ಏಳು 2ತಾಳದ ಉದ್ದ ರಕ್ತ ತಾಳಲಾರದೆ ಬಿದ್ದ ಗೋಪ ಚೋಳರಾಯಗೆ ಕೊಟ್ಟೆ ಶಾಪ ಆಹ ಪೇಳಬಲ್ಲೆನೆ ನಿನ್ನ ಅತಿಶಯ ಲೀಲೆಯ ಶೀಲ ಸುರರ ಗುರು ಚಿಕಿತ್ಸೆಯನೈದಿದೆ 4 ಸ್ವಗತ ಭೇದವಿಲ್ಲದಂಥ ಸ್ವಚ್ಛ ಚಿತ್ಸುಖಮಯನಂತ ಸ್ವಾನಿರ್ವಾಹಕ ವಿಶೇಷ ಆಹ ಶ್ವೇತವರಾಹನ ಸಂವಾದದಿಂದಲಿ ಸ್ವೀಕರಿಸಿದೀ ಸ್ಥಳ ಮೊದಲು ಪೂಜೆಯ ಕೊಟ್ಟು 5 ಸರಸ್ವತೀ ಸ್ವಾಮಿ ಪುಷ್ಕರಣಿ ಸುರಮುನಿನರರಿಗೆ ಸ್ನಾನ ಪರಸುಖಮಾರ್ಗ ಸೋಪಾನ ಆಹ ಸುರತಟಿನ್ಯಾದಿ ಸುತೀರ್ಥಗಳೆಲ್ಲವು ಸರಿತವಾಗಿರುತವೆ ಈ ಸ್ವಾಮಿ ತೀರ್ಥದಿ 6 ಆದಿಕಾರಣ ನಿನ್ನ 3ಲೀಲಾ ಮೋದಸಂಭ್ರಮವನ್ನು ನೋಡೆ ಕಾದುಕೊಂಡಿಹರು ಕೋವಿದರು ಆಹ ಸಾಧು ಸಂಭಾವಿತ ಬಕುಳಾದೇವಿಯುಗೈದ ನಿತ್ಯ ಸಂತೃಪ್ತ 7 ಮಂಗಳ ಚಿನ್ಮಯ ರಂಗಾ - ನಂಗನಯ್ಯನೆ ಮೋಹನಾಂಗ ತುಂಗ ಮಹಿಮನೆ ಶುಭಾಂಗ ಆಹ ಬಂಗಾರ ಕುದುರೆ ಮೇಲಂಗನೇರಲಿ 4ಬಂದ ಶೃಂಗಾರವೇನೆಂಬೆ ಎಂದಿಗೂ ಸ್ವರಮಣ8 ತೋಂಡಮಾನ ರಾಯನಣ್ಣ ಚಂಡಭೂಪನು ಆಕಾಶ ಕಂಡನು ಕಮಲದೊಳ್ ಶಿಶುವ ಆಹ ಅಖಿಳ ಕೋಟಿ ಅಸಮ ಈ ಶಿಶುವನ್ನು ಹೆಂಡತಿ ಧರಣಿಯು ಕೊಂಡಳು ಮಗಳಾಗಿ 9 ಮೂಲೇಶ ನಿನ್ನಯ ರಾಣಿ ಮೂಲಪ್ರಕೃತಿ ಗುಣಮಾನಿ ಭವ ತಾಯಿ ಆಹ ಶೀಲ ಭೂಪಾಲನ ಸುತೆ ಪದ್ಮಾವತಿಯೆಂದು 5 ಬಾಲೇರ ಸಹ ಪುಷ್ಪವನಕೆ ಬಂದಿಹಳೊ 10 ಮಹಿದೇವಿ ಕಮಲವಾಸಿನಿಯು ಬಹಿನೋಟಕ್ಕೆ ರಾಜಸುತೆಯು ಬಹು ಚಿತ್ರ ಪುಷ್ಪವ ಕೊಯ್ಯೆ ಆಹ ಮಹತಿಪಾಣಿಯು ಬಹು ವಯೋರೂಪದಲಿ ಬಂದು ಅಹಿತಲ್ಪ ಶ್ರೀಶನೆ ಪತಿಯೆಂದು ನುಡಿದ 11 ಹಾಟಕಗಿರಿಯಿಂದ ನೀನು ಬೇಟೆಯಾಡುವ ರೂಪ ತಾಳಿ ಘೋಟಕವೇರಿ ಸಂಭ್ರಮದಿ ಆಹ ಆಟವಾಡುವ ಬಾಲೆ ಬಳಿಯಲ್ಲಿ ಬಂದು ನೀ ನಾಟಕವಾಡಿದ್ದು ಪಾಡಲರಿಯೆನೊ 12 ನಿತ್ಯನಿರ್ಮಲ ಅವಿಕಾರ ಮತ್ರ್ಯರವೋಲು ನೀ 1ನಟಿಸೋ ಕೃತ್ಯಗಳರಿವರು ಯಾರೋ ಆಹ ಭೃತ್ಯವತ್ಸಲ ನೀನು ಬಕುಳೆಯ ಬಳಿ ಪೇಳಿ ಸಂತ್ಯಸಂಕಲ್ಪ ನಿನ ಸಂದೇಶ ಕಳುಹಿದೆ 13 ಪೊಂದಿದೆ ಫುಲ್ಕಸೀ ರೂಪ ಮಂಧಜಭವ ಶಿಶುವಾಗೆ ನಂದಿನಿಧರ ಯಷ್ಟಿಯಾದ ಆಹ ಮಂದಜಭವಾಂಡ ಗುಣಗುಲ್ಮ ಮಾಡಿ ನೀ ಕಂಧರದಲಿ ಗುಂಜ ಕಂಬುಸರವ ತೊಟ್ಟೆ 14 ನಾರಾಯಣಪುರಿಯಲ್ಲಿ ಮಾರನಯ್ಯನೆ ನಿನ್ನ ಸುಗುಣ ವಾರಿಧಿ ಪೊಕ್ಕಳು ಪದುಮೆ ಆಹ ಪುರಿಪ ಧರಣೀದೇವೀ ಪುತ್ರಿಗೆ ಜ್ವರವೆಂದು ಪರಿಪರಿ ಪರಿಹಾರ ಪರದು ನೋಡಿದರಾಗ 15 ಶುದ್ಧ ಸುಂದರ ಸುಖಕಾಯ ವೃದ್ಧ ಫುಲ್ಕಸೀ ವೇಷಧಾರಿ ಬದ್ಧ ಶೋಕರ ಬಳಿ ಪೋದೆ ಆಹ ಇದ್ದ ಸುದ್ದಿಯ ಅಬದ್ಧವಿಲ್ಲದೆ ಪೇಳಿ ಮುದ್ದು ಪದ್ಮೆಗೆ ಅನಿರುದ್ಧನೆ ಪತಿಯೆಂದೆ 16 ವಹಿಸಿ ನಿನ ಶಾಸನ ಬಕುಳ ಮಹದೇವನಾಲಯದಿಂದ ಮಹಿಳೆಯರ ಸಹ ಕೂಡಿ ಆಹ ಮಹಿದೇವಿಯಲಿ ಪೋಗಿ ವಿಹಿತ ಮಾತುಗಳಾಡಿ ಬಹು ಶುಭವಾರ್ತೆಯ ತಂದು ಪೇಳಿದಳೊ 17 ಶುಕಮುನಿ ಕರಪ್ರದವಾದ ಆಕಾಶ ನೃಪ ಲಗ್ನಪತ್ರ ಸ್ವೀಕರಿಸಿದೆ ಬಹು ಹಿತದಿ ಆಹ ವಾಗೀಶ ಶಶಿಧರ ನಾಗೇಶ ಸೌಪರ್ಣ ನಾಕೀಶ ಮೊದಲಾದ ಸುರರನು ಕರೆದೆ 18 ಶಿಷ್ಟ ಸನ್ಮುನಿಜನ ಕೂಟ ತುಷ್ಟ ಸುಮನಸ ಸಮೂಹ ಶ್ರೇಷ್ಠಸುಗಂಧಿ ಆಗಮನ ಆಹ ಸೃಷ್ಟ್ಯಾದಿಕರ್ತೆ ನಿನ ಸುಮಹೋತ್ಸವ ನೋಡಿ ಇಷ್ಟಾರ್ಥ ಪಡೆವರು ಎಷ್ಟೆಂಬೆ ವಿಭುವೆ 19 ಮಾಯ ಜಯೇಶ ಶ್ರೀವತ್ಸ ಛಾಯೇಶಗುಪಾಯ ಪೇಳಿ ತೋಯಜೆಯನು ಕರೆತಂದೆ ಆಹ ಸಿರಿ ಕೃತಿ ಕಾಂತಿ ನಿನ್ನಿಂದ ವಿಯೋಗರಹಿತರು ಎಂದೂ ಎಲ್ಲೆಲ್ಲೂ 20 ಬೃಹದಣುವಿಗೆ ಸತ್ತಾಪ್ರದನೆ ಸುಹೃದ ಸಂತೃಪ್ತ ಮುಖಾಬ್ಧೇ ದೃಢವ್ರತ ಶುಕಮುನಿಗೊಲಿದೆ ಆಹ ಬೃಹತೀ ಫಲಾನ್ನವನುಂಡು ಫೂತ್ಕಾರದಿ ಗೃಹ ಬಹಿರದಿ ಇದ್ದ ಜನರ ತೃಪ್ತಿಸಿದೆ 21 ಸುಜನರಿಗಾನಂದ ದಾತ ದ್ವಿಜರೂಢ ಜಗದೀಶ ನೀನು ಅಜಸುರರೊಡಗೂಡಿ ಬರೆ ಆಹ ಅಜಿತ ಚಿನ್ಮಯ ನಿನ್ನ ಆಕಾರ ನೃಪ ನೋಡಿ ನಿಜವಾಗಿ ಕೃತಕೃತ್ಯ ಧನ್ಯ ತಾನೆಂದ 22 ಅಜರ ಮಂದಿರ ಪೋಲ್ವ ಮನೆಯು ಪ್ರಜುವಲಿಸುವ ದಿವ್ಯ ಸಭೆಯು ನಿಜಭಕ್ತ ಪುರುಜನ ಗುಂಪು ಆಹ ದ್ವಿಜರ ವೇದಗಾನ ವಾದ್ಯ ಘೋಷಿಸಲಾಗ ನಿಜಸತಿ ಪದ್ಮೆಗೆ ಮಾಂಗಲ್ಯ ಧರಿಸಿದೆ 23 ಸುರಮುನಿಜನ ಮೂರು ವಿಧಕೆ ತರತಮ ಯೋಗ್ಯತೆ ಆರಿತು ಪರಿಪರಿ ಸಾಧನವಿತ್ತೆ ಆಹ ನೀರರುಹಜಾಂಡವು ನಿನ್ನಾಧೀನವು ಸಿರಿಭೂದೊರೆಯೇ ಶ್ರೀನಿವಾಸ ದಯಾನಿಧೆ 24 ನೀ ನಿಂತು ನುಡಿಸಿದೀ ನುಡಿಯು ನಿನ್ನಡಿಗಳಿಗೆ ಅರ್ಪಣೆಯು ಚನ್ನಮಾರುತ ಮನೋಗತನೆ ಆಹ ವನರುಜಹಾಸನ ತಾತ ಪ್ರಸನ್ನ ಶ್ರೀನಿವಾಸ ನಿನಗೆ ಪ್ರೀತಿಯಾಗಲೊ ಸುಹೃದ ಸಂತೃಪ್ತ 25
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಾಣ ನಿನ್ನಂಘ್ರಿ ಸಿರಿರೇಣು ಕಾಣು ಯೋನಿಯಲಿ ಬಂದೆ ನೊಂದೆ ಗುರುವೆ ನೀನೆ ಗತಿಯೊ ಪ ಭರತ ಭಾರತಿರಮಣ ಭಾರತ ಪ್ರತಿಪಾದ್ಯ ಭರದಿಂದಲಿ ಎನ್ನಭಾರ ವಹಿಸುವ ಭರಣ ಭಾರದ್ವಾಜಾತ್ಮಜ ಭಾರಭಂಗಾ 1 ಗತಿ ಅಗತಿ ಗಮನಗರ್ಭ ಸ್ವರ್ಗ ನರಕ ಈ ಕ್ಷಿತಿ ಲೋಕಾಂತದಲ್ಲಿ ಬಳಲಿ ಮತಿಯ ಕಾಣದೇ ಮಂತ್ರಿ ರಾಜ ಮಹಾತತುವೇಶ ಬಲವತ್ವ್ಸರೂಪ2 ಪಂಚಾಹುತಿಯಲಿ ಹಾಕದಿರೋ ಜೀವೇಶ ಸಂಚಿತಾವಳಿ ಸರ್ವನಾಶಾ ಪಂಚದ್ವಾರದಲಿ ಶ್ರೀ ಹರಿಯ ಪೂಜಿಪ ಪುಣ್ಯ ಸಂಚಕನೆ ಪುರುಷಾಕಾರನೀಯೋ 3 ಅಪೂಪ ಬಹುರೂಪ ಹರಿಚಾಪ ಪ್ರತಾಪ ಕಪಿಕುಲಾಂಬುಜ ದಿನಪ ಸುರಪ ರಿಪು ವಿಪಿನಕಾಲ ಮಹಾ ಗುಪುತ ವ್ಯಾಪ್ತ ಸುಪ್ತಿ ಸ್ವಪನ ಜಾಗೃತಕಾರ್ಯಫಲದಾ4 ರಾಜಿಸುವ ರಾಗವಿದೂರಾ ವಾಜಿರೂಪ ವಾಶಿಷ್ಟ ವಂದ್ಯಾ ವರದಾ ಮಜ್ಜಗದ್ಗುರು ಮುಖ್ಯ ಪ್ರಾಣಾ 5 ಪೂರ್ವೋತ್ತರಂಗ ಸಂಧಿ ಸಂಧಾನ ವಿಶಿಷ್ಟಾ ಈರ್ವ ಸ್ಥಾನದಲಿ ನೀನೇ ಸರ್ವದಲಿ ಧ್ಯಾನವನು ಇತ್ತು ಪಾಲಿಸು ನಿತ್ಯ ಮೂರ್ತಿ 6 ಮಾನವ ರೂಪಾ ಮಾನಾಭಿಮಾನಿಗಳೊಡಿಯಾ ಆನಂದತೀರ್ಥಪದ ಭಕ್ತ ಅನಾಥಬಂಧು ವೈರಾಗ್ಯ 7 ಸಮಸ್ತ ಪರಮಾಣು ತಿಳಿಸೋ ಸಾಮ ಸೂರ್ಯಸ್ಥಿತನೆ ಸೂತ್ರಾ8 ಇಪ್ಪತ್ತೆರಡು ಸ್ಥಾನದಲಿ ಪ್ರಭುವೆ ಜಗ ದಪ್ಪ ಚತುರದ್ವಾರವಾಸ ಅಪ್ರತಿಮಲ್ಲ ಶ್ರೀ ವಿಜಯವಿಠ್ಠಲನ್ನ ಅಪ್ಪಿಕೊಂಡು ಮೆರೆದ ಧೀರಾ 9
--------------
ವಿಜಯದಾಸ