ಒಟ್ಟು 2882 ಕಡೆಗಳಲ್ಲಿ , 122 ದಾಸರು , 2152 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಯಮಾಡೊ ಕಾಶಿ ಬಿಂದುಮಾಧವಮಾಡದಿರೆನಗೆ ತಂದೆ ಭೇಧವ ಪ. ಪಾಪನಾಶನ ಪಾಲಿಸೊ ಎನ್ನಸರ್ಪಭೂಷಣನತಾತನೆಂದೆನಿಸುವ ತವ ನಾಮಸ್ಮರಣೆಪಾರ್ವತಿಪತಿಯ ಧ್ಯಾನದೊಳಿರಿಸೊ 1 ಮೋಕ್ಷÀದಾಯಕ ಪಾಲಿಸೊ ಎನ್ನಲಕ್ಷ್ಮೀನಾಯಕಕುಕ್ಷಿಯೊಳೀರೇಳುಭುವನ ತಾಳಿದವನೆಭಿಕ್ಷಾಪಾತ್ರ ಶಿವನಧ್ಯಾನದೊಳಿರಿಸೊ 2 ಆದಿಮೂರುತಿ ವಿಶ್ವೇಶ್ವರಗೆ ವಿಷ್ಣುಪಾದವೆ ಗತಿಮೇದಿನಿಯೊಳು ಸೋದೆಪುರದಿ ನೆಲೆಸಿವಾದಿರಾಜವರದನೆ ಬಂದೆ ಹಯವದನನೆ 3
--------------
ವಾದಿರಾಜ
ದಯವ ಮಾಡೋರಂಗ ನಯದಿ ನೋಡೊ ದಯವು ನಯವು ನಿನಗಿರದಿದ್ದರೆ ಎನಗೆ ಕೇಳೊ ಪ ಭಯವು ಲಯವು ನಿನಗಿದೆಯೆಂಬುದು ನನ್ನ ಹಾಡೊ ಭಯ ಭೀತಿಗಳನು ಬಿಡಿಸುವುದೊಂದೇ ನಿನ್ನ ಪಾಡೊ ಅ.ಪ ಜನನ ಮರಣ ಮತ್ತಿರಲೆಂಬುದು ನೀನು ಬಲ್ಲೆ ಮನಸು ನೆನಸು ನಿನ್ನೆಡೆಗಿರೆ ವೈಕುಂಠವಲ್ಲೆ ರಂಗ ದಿನವು ಸ್ಮರಣೆಯ ಗೈಸುವ ರೀತಿಯ ನೀನೇ ಬಲ್ಲೆ 1 ಹಿಂದಿನ ಜನ್ಮದ ಪಾಪಗಳೆಲ್ಲವನಳಿಸೋ ರಾಮ ಇಂದಿನ ಜನ್ಮದ ನಾಮಸ್ಮರಣೆಯ ನುಡಿಸೋ ರಾಮ ಮುಂದಿನ ಭವಗಳ ನೀಗಿಸಿ ಕಾಯೋ ಸೀತಾರಾಮ ಇಂದಿರೆಯರಸ ಮುಕುಂದ ನೀ ಮಾಂಗಿರಿ ರಂಗಧಾಮ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ದಯವಿರಲಿ ಎನ್ನಲ್ಲಿ ಧರಣಿಧರನೆ ಭಯಗಳನು ಪೋಗಾಡು ಭಕ್ತಜನ ಪ್ರೀಯಾ ಪ ಎರಗಿಸುವದು ಚರಣದಲಿ ಶಿರಸು ಎರಗಲಿ ನಿನ್ನ ಧ್ಯಾನದಲಿ ಮನಸು ಎರವೆರವು ಮಾಡದಲೆ ನಿನ್ನ ನಾಮಾಮೃತವ ಎರದು ಸಾಕುವದು ಸಂತತ ಎನ್ನ ಬಿಡದೆ 1 ಮತಿಗೆಟ್ಟ ಮಾನವಗೆ ಗತಿ ನೀನೆ ಆವಾವಾ ಶ್ರುತಿಗಳೊಳು ಪೇಳುತಿದೆ ವರದೊರದೂ ಕ್ಷಿತಿಯೊಳಗೆ ರವಿ ಶಶಿಯ ಗತಿ ತಪ್ಪಿದರೇನು ಪತಿತ ಪಾವನ ನಿನ್ನ ಕೃಪೆಗೆ ಎಣೆಗಾಣೆ 2 ಕೊಡುವಲ್ಲಿ ಕೊಳುವಲ್ಲಿ ಯಡಿಯಡಿಗೆ ಭಕುತಿರಸ ಕುಡಿಸುವಲಿ ಕಲಕಾಲ ಸಂತೋಷವ ಬಡಿಸಿ ಪೊರೆವಲ್ಲಿ ನಿನಗಾವಲ್ಲಿ ಸರಿಗಾಣೆ ಸಿರಿ ವಿಜಯವಿಠ್ಠಲ ತಿರುಮಲೇಶಾ 3
--------------
ವಿಜಯದಾಸ
ದಾತನೀತ ಯತಿನಾಥ ನಿಜಪದ ದೂತಜನರ ಪೊರೆವಾ ಪ ಧಾತನಾಂಡದೊಳತಿ ಖ್ಯಾತನಾಗಿ ಶಿರಿ ನಾಥ ನೊಲಿಸಿ ಮೆರೆವಾ ನೀತಮನದಿ ತನ ಮಾತು ಮೀರಿದಿಹ - ಗೀತೆರದಿ ತಾನೆ ಒಲಿವಾ ತಾತನೆ ಮನೋಗತ ಭೀತಿಯ ಬಿಡಿಸೆನೆ ಪ್ರೀತಿ ಮನದಿ ತಾ ಬರುವಾ ಅ.ಪ ರಾಮ ಕೃಷ್ಣ ನರಹರ್ಯಂಘ್ರಿಯ ಪ್ರೇಮಮನದಿ ಭಜಿಪಾ ನೇಮದಿ ತನ್ನನು ಕಾಮಿಪ ಜನರಿಗೆ ಕಾಮಿತ ಫಲರೂಪಾ ಈ ಮಹಾ ಮಹಿಮೆಯ ನೇಮದಿ ತೋರುವ ಭೂವಿ ಸುರರ ಭೂಪಾ ತಾಮಸ ಮತಿ ನಿರ್ಧೂಮ ಗೈಸುವ ಧೂಮಕೇತುನೆನಿಪಾ 1 ಮಂದ ಜನರಿಗೆ ಎಂದಿಗಲಭ್ಯನ - ಪೊಂದಿದ ಜನರಾ ಕುಂದೆÀಣಿಸದೆ ತಾ ನಂದ ಕೊಡವೊ ಮಹಾರಾಯಾ ವಂದಿಪ ಜನರಘ - ವೃಂದವ ದರುಶನ - ದಿಂದ ತರಿವೊ ಜೀಯಾ ಸುಂದರತರ ವೃಂದಾವನ ನಿಜ ಮಂದಿರ ಗತ ಧ್ಯೇಯಾ 2 ದಾತಗುರು ಜಗನ್ನಾಥ ವಿಠಲನತಿ ಪ್ರೀತಿಯಿಂದ ಭಜಿಪಾ ದೂತ ಜನರು ಬಲು ಆತುರದಲಿ ಕರಿಯೆ ಪ್ರೀತ ಮನದಿ ತಾ ಬಪ್ಪ ಮಾತೆಯತೆರ ನಿಜ ದೂತರÀ ಮನಸಿನ ಮಾತು ನಡೆಸುವ ನೀಭೂಪಾ ಈತಗೆ ಸರಿಯತಿನಾಥ ಕಾಣೆನೊ ಭೂತಳೇಶರಧಿಪಾ 3
--------------
ಗುರುಜಗನ್ನಾಥದಾಸರು
ದಾನವಗಿರಿಕುಲಿಶಾ ನರಸಾರಥಿ ದಶರಥ ಸುಕುಮಾರ ಪ ಕುಂಭಿನಿಜಾರಮಣ ನಂಬಿದೆ ನಾನಿನ್ನ 1 ಕಮಠ ವರಾಹ ನರಹರಿ ವಾ- ಮನ ಭಾರ್ಗವ ರಾಮ ಭಂಜನ ಜಿನಸುತ ಕಲ್ಕಿಯೆ ದೀನ ಜನ ಪ್ರೇಮಾ 2 ತಿರುಪತಿಯಲಿ ನೆಲಸಿರುವೆ ಭಕ್ತಸುರ- ತರುವೆ ವೆಂಕಟೇಶ ಗುರುರಾಮವಿಠಲ ಕೋರಿದ ವರಗಳ ಕೊಡುವ ಶ್ರೀನಿವಾಸ 3
--------------
ಗುರುರಾಮವಿಠಲ
ದಾನವಿಲ್ಲ ಧರ್ಮವಿಲ್ಲ ಜ್ಞಾನವಿಲ್ಲಏನು ಹೇಳಿದರೇನು ವಿಷಯಮೆಚ್ಚಿದವಗೆ ಪ. ಕಂಡಕಂಡವರ ಅನ್ನಕೆ ಸಿಲುಕಿ ಅನುಗಾಲಭಂಡತನದಲಿ ಕಾಲವ ಕಳೆಯುತತಂಡ ತಂಡದಿ ಬಾಹ ಔತಣಕೆ ಮೈಯ್ಯುಬ್ಬಿಉಂಡು ಎನಗಿಂದಧಿಕ ಯೋಗ್ಯನಿಲ್ಲವೆಂದು 1 ಪರ್ವಕಾಲ ಪಿತೃದಿವ್ಸ ಗುರುಗÀಳ ಪುಣ್ಯದಿನಸರ್ವಕರ್ಮವ ತ್ಯಜಿಸಿ ಅತಿಥಿಗೀಯದೆಪರರ ಅನ್ನವ ಬಿಡದೆ ಉತ್ಸಾಹದಲಿ ಪೋಗಿನಲಿನಲಿದುಂಡು ಸ್ತೋತ್ರವ ಮಾಡಿ ದಿನಕಳೆವೆ 2 ಅನ್ಯರೊಡವೆಯು ತನಗೆ ಬಂದರೆ ಸಂತೋಷತನ್ನೊಡವೆ ಒಬ್ಬರಿಗೆ ಕೊಡಲು ಕ್ಲೇಶಉನ್ಮತ್ತನಾಗಿ ಉದರವ ಪೊರೆವ ಈ ದೋಷಮನ್ನಿಸಿ ದಯಮಾಡಿ ಸಲಹೋ ಹಯವದನ3
--------------
ವಾದಿರಾಜ
ದಾರಿಯ ವಿಡಿರಣ್ಣ | ಸ್ವಹಿತದ ದಾರಿಯ ಹಿಡಿರಣ್ಣಾ ಪ ದಾರಿಯ ವಿಡಿನಿಜ ಸಾರಿಹ ಶೃತಿಗಳ | ಚಾರು ಭಕುತಿಯಾ ಅ.ಪ ಬಲ್ಲವರಿಗೆ ಬೆಸಗೊಳ್ಳುತ ಮನಸಿನ | ಖುಳ್ಳತನದ ಗುಣವೆಲ್ಲವು ಹೋಗಿ | ಬಲ್ಲವರನು ಕಂಡು ಮೆಲ್ಲಡಿಗಳ ವಿಡಿ | ದುಳ್ಳ ಸಿದ್ಧಾಂತದ ಸೊಲ್ಲವ ಕೇಳಿ | ಉಲ್ಹಾಸದಿಂದಲಿ ಮೆಲ್ಲನ ಭ್ಯಾಸವ | ಮೆಲ್ಲನೆ ಮಾಡುತ ಸುಲ್ಲಭ ತೆರದಾ 1 ಕಂಡ ಪಥಕ ಹರಿದಂಡಲೆಯದೆನೆರೆ | ತಂಡಿಸುತಿಹ ಪಾಷಾಂಡ ಹೋಗಿ | ಚಂಡ ಸುಜ್ಞಾನದ ಲುಂಡನು ಭವದೃಢ | ಗಂಡು ಸದ್ಭೋಧದಿ ಪಂಡಿತನಾಗಿ | ಹಿಂಡ ಭಾಗವತರ ಮಂಡಲದೊಳು ಕೂಡಿ | ಪುಂಡರೀಕಾಕ್ಷನ ಕೊಂಡಾಡುತ ನಿಜ 2 ಹಿಂದಿನ ಸುಕೃತಗಳಿಂದ ನೃದೇಹದಿ | ಬಂದೆನು ನಾನಿನ್ನು ಮುಂದಣ ಗತಿಯಾ | ಹೊಂದುವೆ ನಾವದುಯಂದು ವಿಚಾರವಾ | ತಂದು ಸದ್ಭಾವಲಿಂದೇ ನಿಷ್ಠೆಯಲಿ ತಂದೆ ಮಹಿಪತಿ ಪ್ರಭುಪದ ಭವ ಬಂಧನ ಹರಿವಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದಾವಲ್ಲಿ ಕೂತಿದ್ದೀಯೊ ರೋಗಿಷ್ಠ ಕಾಯ ಎನ್ನನು ಕಾಯ್ಕೊಂಡು ಪ ಜೀವಕಂಟಕನಾಗಿ ಹೇಯದಿಂದೊಡಗೂಡಿ ಆವಕಾಲದಿ ರೋಗದ್ಹೊರಳುತ ಎಲೆ ಖೋಡಿ ಅ.ಪ ಏನು ಕರ್ಮವ ಮಾಡಿದ್ದೋ ಪಾಪಾತ್ಮ ನೀ ಹೀನಸ್ಥಿತಿಯ ಪೊಂದಿದಿ ನಾನಾವಿಧದಿ ಮಹಬೇನೆಯಿಂ ನರಳುತ ನೀನೆನ್ನ ಜತೆಗೂಡಿ ಬನ್ನಬಡಿಸುವಿ ಪಾಪಿ1 ಹೊಲಸಿನ ದ್ವಾರದಿಂದ ಇಹ್ಯಕೆ ಬಂದಿ ಮಲಮೂತ್ರ ತುಂಬಿಕೊಂಡು ತೊಳೆಯದಿರಲು ನಿಮಿಷ ಹೊಲಸಿಕ್ಕಿನಾರುವಿ ತಿಳಿದುನೋಡಲು ನಿನ್ನ ಸಲಿಗೆಯಿಂ ನಾ ಕೆಡುವೆ 2 ಎನ್ನ ಜೊತೆಯ ಪೊಂದಿರ್ದ ಕಾರಣದಿಂ ನಾ ನಿನ್ನ ಕ್ಷೇಮವ ಬಯಸುವೆ ಎನ್ನಯ್ಯ ಶ್ರೀರಾಮನುನ್ನತಡಿಗಳ ನಂಬಿ ಸನ್ನುತಿಯಿಂ ಕ್ಷಮೆಬೇಡಿ ಧನ್ಯನಾಗೆಲೋದೇಹ್ಯ3
--------------
ರಾಮದಾಸರು
ದಾಸನ ಮೇಲಿಷ್ಟು ಬೇಸರವ್ಯಾಕೋ ಶೇಷಶಯನನೆ ನಿನ್ನ ಧ್ಯಾಸದೊಳಿರುವ ಪ ನಶಿಸಿಹೋಗುವ ಕಾಯದ್ವ್ಯಸನವನು ಪರಿಹರಿಸಿ ಹಸನಾದ ಮತಿಯೆನಗೆ ಒಸೆದು ನೀಡೆಂದು ನಿಶಿದಿವದಿ ನಿನ್ನಡಿಕುಸುಮಗಳನಂಬಿ ಮಾ ನಸದಿ ಭಜಿಸಲು ಎನಗೊಶನಾಗದಿರುವಿ1 ಜಡತನದ ಸಂಸಾರ ತೊಡರೆಡರು ಕಡಿದು ಗಡ ಜಡಮತಿಯ ತೊಡೆದೆನಗೆ ದೃಢ ನಿಶ್ಚಯವನು ಕೊಡುಯೆಂದು ದೃಢದಿ ನಿನ್ನಡಿಗೆರಗಿ ಬೇಡಿದರೆ ಒಡಲೊಳಗೆ ನಿಂದೆನ್ನ ಜಡತನಳಿವಲ್ಲಿ 2 ಶ್ರೀಶ ಶ್ರೀರಾಮ ನಿನ್ನ ಧ್ಯಾನಮಾಡಲು ಒಮ್ಮೆ ಅಘ ನಾಶನಲ್ಲೇನು ದಾಸಜನಕರುಣಾಬ್ಧಿ ದಾಸನೊಳ್ದಯವಾಗಿ ಪೋಷಿಸೈ ತವಪಾದ ನಿಜಧ್ಯಾಸವಿತ್ತು 3
--------------
ರಾಮದಾಸರು
ದಾಸನಾಗಬೇಕು ಮನದಲಿ ಆಸೆಯಿಂಗಬೇಕು ಪ ಮೋಸಮೆಂಬುದಂಕುರಿಸದ ಅದರ ವಾಸನೆಯಂಟದ ಮಾನಸದಲಿ ಹರಿಅ.ಪ ಅತಿಮಾತಾಡುವ ಸತಿಯಿರಬೇಕು ಖತಿಯಿಂತೆರಳುವ ನೆಂಟರು ಬೇಕು ಹಿತವನು ಬಯಸದ ಸುತರೂ ಬೇಕು ಸತತಮಿವೆಲ್ಲರ ಸಹಿಸಿ ಭಜನೆಗೈವ 1 ತಣಿವಿಲ್ಲದೆ ತಿಂಬ ಅಣುಗರು ಬೇಕು ಹಣವ ಕೊಡೆಂಬುವ ಅಳಿಯರು ಬೇಕು ಋಣಬಾಧೆಗಳೊಳು ಕೊರಗಲು ಬೇಕು [ಅಣು ಅಣು ಕಾಡುವ ಸಂಸಾರಕಂಟದೆ] 2 ಮಾನಸವ ಬಿಗಿಹಿಡಿದಿರಬೇಕು ಧ್ಯಾನದೊಳಾತ್ಮಶಾಂತಿಯು ಬರಬೇಕು ಶ್ರೀನಿವಾಸನೇ ಶರಣೆನಬೇಕು ಜ್ಞಾನದಿ ಮಾಂಗಿರಿರಂಗನ ಪಾದದ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ದಾಸನಾಗಬೇಕು ರಂಗಸ್ವಾ'ುೀಗುರು ನಿಮ್ಮ ದಾಸನಾಗಬೇಕು ಪದಾಸನಾಗಬೇಕು ಕ್ಲೇಶಪಂಚಕವಳಿದು ಆಸೆಯಲ್ಲಿ ಮನಸೂಸದೆ ಸರ್ವದಾ ಅ.ಪಮನದ ಕಲ್ಮಷ ಕಳೆದು ಮಹಾ ರಾಮಕೋಟಿಗಳ ಮ'ಮೆಗಳನು ತಿಳಿದು ಇನಿತು ಈ ಜಗವೆಲ್ಲ ಶ್ರೀರಾಮಮಯವೆಂದು ಘನವಾದ ಮೋಹದಾ ಗಡಿಯನು ದಾಂಟುತ್ತಾ 1ತನುವು ಅಸ್ಥಿರವೆನ್ನುತಾ ತಿಳಿದು ಈ ದುವ್ರ್ಯಾಧಿಪ್ಲೇಗು ಭಯವಬಿಡುತಾ ಘನವಾದ ರಾಮಕೋಟಿಯಲಿ ನೆಲೆಸುತಾಬಿನಗು ಸಂಸಾರದ ಮಮತೆಯ ಬಿಡುತಾ 2ಆರುಚಕ್ರದಿಮೆರೆವ ಅಖಂಡನಾ ಮೂರುಗುಣವತಿಳಿಪ ಆರುಮೂರದಿನಾರು ತತ್ವಾತೀತನಿಜತೋರಿ ರಾಮಕೃಷ್ಣಾದಾಸನುದ್ಧರಿಸಿದರು 3
--------------
ಮಳಿಗೆ ರಂಗಸ್ವಾಮಿದಾಸರು
ದಾಸನಾಗೋ ಪ್ರಾಣಿ ಬರಿದೆ ಕಾಣಿ ಪ ದಾಸನಾಗು ರಮೇಶನ ಪಾದ ಹೇಸಿಮನಸಿನ ಕ್ಲೇಶವ ನೀಗಿ ಅ.ಪ ಹಮ್ಮು ಬಿಟ್ಟುಬಿಡೋ ಈಶತ್ವ ಸುಮ್ಮನಲ್ಲ ನೋಡೋ ಸಮ್ಮತ್ಹೇಳಬೇಡೋ ಮಹವಾಕ್ಯ ಮರ್ಮಶೋಧ ಮಾಡೋ ಹಮ್ಮು ಅಹಂಕಾರ ದೂಡಿ ನಿರ್ಮಲಮತಿಗೂಡಿ ಒಮ್ಮನದಿಂ ಪರಬ್ರಹ್ಮನ ಪಾಡಿ 1 ಶಂಕೆಯನೀಡ್ಯಾಡೋ ಚಿತ್ತದ ಕ ಲಂಕ ದೂರ ಮಾಡೋ ಓಂಕಾರರ್ಥ ಮಾಡೋ ಬ್ರಹ್ಮದ ಅಂಕಿತಿಟ್ಟು ಪಾಡೋ ಕಿಂಕರನಾಗದೆ ಶಂಕರ ನಿನಗೆಲ್ಲಿ ಮಂಕುತವನವ ಬಿಟ್ಟು ಸಂಕರುಷಣನ 2 ಹಾಳು ವಾಸನೆ ತೂರಿ ನಿಜವಾದ ಶೀಲಜನರ ಸೇರಿ ಮೂಲತತ್ತ್ವದಾರಿ ಅನುಭವ ಕೀಲಿ ತಿಳಿದು ಭೇರಿ ತಾಳನಿಕ್ಕುತ ಮಮಶೀಲ ಶ್ರೀರಾಮನ ಮೇಲೆಂದು ನಂಬಿ ಭವಮಾಲೆ ಗೆಲಿದು ನಿಜ 3
--------------
ರಾಮದಾಸರು
ದಾಸನಾದ ಮೇಲೆ ಈಶ ದೂರುಂಟೆ ಆಸೆನೀಗಲು ಸುಖದ ರಾಶಿ ಬೇರುಂಟೆ ಪ ದೋಷಕ್ಕಂಜಿದಮೇಲೆ ಸನ್ಮಾರ್ಗ ಬೇರುಂಟೆ ಕ್ಲೇಶ ನೀಗಿದಮೇಲೆ ಪುಣ್ಯ ಇನ್ನುಂಟೆ ಹೇಸಲು ಪ್ರಪಂಚಕೆ ಸತ್ಸಂಗ ಬೇರುಂಟೆ ವಾಸನ್ಹಿಂಗಿದಮೇಲೆ ವೈರಾಗ್ಯವುಂಟೆ 1 ಜ್ಞಾನಗೂಡಿದಮೇಲೆ ಮತ್ತೆ ತೀರ್ಥಗಳುಂಟೆ ಧ್ಯಾನವಿಡಿದಮೇಲೆ ಅನ್ಯಮೌನುಂಟೆ ಹೀನಗುಣ ತೊಳೆದಮೇಲಿನ್ನು ಸ್ನಾನಗಳುಂಟೆ ಮಾನಸವು ಶುದ್ಧಿರಲು ಬೇರೆ ಮಡಿಯುಂಟೆ 2 ಕೈವಲ್ಯ ಇನ್ನುಂಟೆ ಶರಣು ಪೊಂದಿದಮೇಲೆ ಪರಮಾರ್ಥ ಬೇರುಂಟೆ ಅರಿವನರಿತರೆ ಬೇರೆ ಪರಲೋಕ ಇರುಲುಂಟೆ ಶರಣರೊಲಿದಮೇಲ್ಹರಿಚರಣ ಹೊರತುಂಟೆ 3 ಸಫಲನಾದಮೇಲೆ ವ್ರತನೇಮ ಬೇರುಂಟೆ ಗುಪಿತವರಿತಮೇಲೆ ಪರತತ್ವವುಂಟೆ ಅಪರೂಪ ಧ್ಯಾನಿರಲು ತಪ ಬೇರೆ ಇರಲುಂಟೆ ಅಪರೋಕ್ಷಜ್ಞಾನ್ಯಾದ ಮೇಲೆ ಮಿಕ್ಕಸಾಧನುಂಟೆ 4 ಮಾನಹೋದಮೇಲೆ ಮರಣ ಬೇರಿರಲುಂಟೆ ನಾನತ್ವ ಪೋದಮೇಲೆ ಸತ್ಕರ್ಮವುಂಟೇ ಧ್ಯಾನದಾಯಕ ಮಮಪ್ರಾಣ ಶ್ರೀರಾಮನಡಿ ಖೂನ ತಿಳಿದ ಮೇಲೆ ಮುಕ್ತಿ ಬೇರುಂಟೆ 5
--------------
ರಾಮದಾಸರು
ದಾಸನಾದವನಿಗೆ ಭವಭೀತಿಯುಂಟೆ ಆಸೆಬಿಟ್ಟವನಿಗೆ ಘಾಸಿಯಿನ್ನುಂಟೆ ಪ ವನಿತೆಯರಾಸ್ಯಳಿದವಗೆ ಮನಸಿಜನರ ಭೀತಿಯೆ ಮಣ್ಣಿನಾಸೆ ಪೋದವಗೆ ಅವನಿಪರ ಭಯವೆ ಧನದಾಸೆ ಪೋದವಗೆ ಬಿನುಗುಜನರಂಜಿಕೆಯೆ ತನುಮೋಹ ಬಿಟ್ಟವಗೆ ಮರಣದ ಭಯವೆ 1 ನಿಂದೆಯನು ಬಿಟ್ಟವಗೆ ಬಂಧಸೋಂಕುವ ಭಯವೆ ಸಂದೇಹವಳಿದವಗೆ ಕರ್ಮಗಳ ಭಯವೆ ಮಂದಿಗೋಷ್ಠಿಯಿಲ್ಲದವಗೆ ಅಪವಾದ ಭೀತಿಯೆ ಸಿಂಧುಶಯನನರ್ಚಕಗೆ ಕಾಲನ ಭಯವೆ 2 ಪರಮ ಧಾರ್ಮಿಕನಿಗೆ ಬಡತನದ ಭೀತಿಯೆ ಪರವ ಸಾಧಿಪನಿಗೆ ಕಷ್ಟಗಳ ಭಯವೆ ಅರಿವಿಟ್ಟು ನಡೆವವಗೆ ದುರಿತದ ಭಯವಿಹುದೆ ಶರಣರೊಳಾಡುವಗೆ ನರಕಂದಜಿಕೆಯೆ 3 ತತ್ವದರ್ಥಿಕನಿಗೆ ಮಿಥ್ಯಶಾಸ್ತ್ರದ ಭಯವೆ ನಿತ್ಯನಿರ್ಮಲನಿಗೆ ಮಡಿ ಮುಟ್ಟು ಭಯವೆ ಸತ್ಯಸನ್ಮಾರ್ಗಿಕಗೆ ಮತ್ರ್ಯದವರಂಜಿಕೆಯೆ ಸತ್ಯರೊಳಾಡುವಗೆ ಮೃತ್ಯುವಿನ ಭಯವೆ 4 ಕೊಟ್ಟು ಹುಟ್ಟಿದವಗೆ ಹೊಟ್ಟೆ ಬಟ್ಟೆಯ ಭಯವೆ ಇಟ್ಟು ಹಂಗಿಸದವಗೆ ಹೊಟ್ಟೆ ಬೇನೆ ಭಯವೆ ಸೃಷ್ಟಿಯೊಳಗೆ ನಮ್ಮ ದಿಟ್ಟ ಶ್ರೀರಾಮನಡಿ ಮುಟ್ಟಿ ಭಜಿಪಗೆ ಮತ್ತೆ ಹುಟ್ಟುವ ಭಯವೆ 5
--------------
ರಾಮದಾಸರು
ದಾಸನು ನಾ ನಿನ್ನಯ ಬೇಸರಿಸದ ಸೇವಾ ವಾಸುದೇವನೆ ಮಾಡುವ ಮನವಾ ವಾಸುಕಿಶಯನ ನೀ ನೀಡು ದೃಢವಾ ಪ ಭಾಸುರಾಂಗಿಯ ಶ್ರೀಶನೆ ಬಡ ದಾಸನ ಸೇವೆಯು ಮನಕ್ಹ್ಯಾಂಗೆ ಬಂತು ಶ್ರೀಶನ ಕೌಸ್ತುಭಕೆ ಆಶೆ ತಂತು ಅ. ಪ. ಅನುಗಾಲದ ನಿನ್ನ ನಾಮದ ಸ್ಮರಣೆಯಾ ಮನಸಿಜ ಪಿತಗೆ ಮೆಚ್ಚು ಬಾ ಧ್ಯಾನ ಕೇಳಲು ಕಿವಿ ನಿಮಿರಿಸಿದಾ ಘನ ಪ್ರಲ್ಹಾದನ ಸ್ಮರಣೆಗೆ ನಿಂತಿರ್ದಾ- ಘನ ಸಂಪ್ರೀತನ ಎನ್ನೊಳ್ಯಾಂಗ ಕರುಣಿಸಿದಾ ಮೇಣ್ ಕರಣದಿಂದ ಗಾಯನ ಎನ್ನಯ ಕಾಯಜ ಪಿತಾ ನಿನಗೆ ಶ್ರಾವ್ಯವಾದುದು ಅರಿಯೆನು ನಾ 1 ಮೇಣ್ ಪ್ರೀಯವಾದುದು ಹರಿಯೇ ಸುರ ಮಾನಿಯೆ ಮಾಯೆಯ ಹರಿದು ರಕ್ಷಿಸೇಯಾ ನಿನ್ನ ಮನಕಾನಂದವಾಗುವುದಯ್ಯಾ 2 ಮತಿವಂತನೆ ನೀ ಮಾಡುವ ಹರಿಪೂಜೆ ಚಿತ್ತಜಪಿತ ಹರಿಗಾಯ್ತು ಕೇಳ್ ಮುದದಿ ಹೃದಯ ತುಂಬೀತು ಅತಿ ಮಾನಿನಿಯೆ ವಿಧಿಪೂಜಿತನಿಗೆ ಸರಿ ಪಾತೆನ್ನ ಪೂಜೆಯಾಯ್ತು ಶ್ರೀ- ಪತಿ ಶ್ರೀಹರಿಯ ಮನಕೆ ಬಂದೀತು 3 ಮಾನವ ನಿನ್ನಯ ಹರಿಧ್ಯಾನವ ರಮಾಧ- ವನು ತಾ ಕೈಕೊಂಡಾ ತನ್ನ ಹೃದಯಾರವಿಂದದೆಡೆಗೆ ಸೆಳೆಕೊಂಡಾ ಮುನಿಶುಕ ಮುಖ್ಯರ ಧ್ರುವಾದಿ ಭಕ್ತರಾ ಮನಗೊಂಡ ಹರಿಯೆನ್ನ ಧ್ಯಾನಕಿಂಬುಗೊಂಡಾ ಮನದೊಳಗೆಂತು ಆತುಕೊಂಡಾ 4 ಪುರುಷೋತ್ತಮ ಹರಿ ಪರಮ ದಯಾರ್ಣವ ಕರುಣದಿ ನಿನ್ನ ಕೈಪಿಡಿದಾ ನಿಜದಾಸನೆಂದೊಡಬಡಿದಾ ವರಮಹಾಲಕುಮಿಯೆ ಸಿರಿಹರಿಸತಿಯೆ ಅನುದಿನ ಎನ್ನ ಮನದಿ ನೆಲೆಸೆ 5
--------------
ನರಸಿಂಹವಿಠಲರು