ಒಟ್ಟು 1169 ಕಡೆಗಳಲ್ಲಿ , 103 ದಾಸರು , 945 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವ್ಯಾಸಾ ಬದರಿ ನಿವಾಸಾ | ಎನ್ನಯ | ಕ್ಲೇಶ ನಾಶನಗೈಸು ಮೌನೀಶಾ | ಸಾಸಿರ ಮಹಿಮನೆ | ದೋಷರಹಿತ ಸುರ ಭೂಸುರ ಪರಿಪಾಲ ಶಾಶ್ವತ ವೇದ ಪ ಸತ್ಯವತಿ ವರಸೂನು ಭವತಿಮಿರ ಭಾನು | ಭೃತ್ಯವರ್ಗದ ಸುರಧೇನು | ಸತ್ಯಮೂರುತಿಯೆ ನೀನು | ಸ್ತುತಿಪೆ ನಾನು || ಹೊತ್ತು ಹೊತ್ತಿಗೆ ಸೂಸುತ್ತಿರಲೆನಗದು | ಅತ್ಯಂತ ಸುಖತರ | ಸುತ್ತವ ಸುಳಿಯೆಂದೆತ್ತಿ ಕಡೆಗೆಯಿಡು | ಎತ್ತ ನೋಡಲು ವ್ಯಾಪುತ ಸದಾಗಮ 1 ಲೋಕ ವಿಲಕ್ಷಣ ಋಷಿ | ಗುಣವಾರಿ ರಾಸಿ | ವೈಕುಂಠ ನಗರನಿವಾಸಿ | ನಾಕಾರಿಗಳ ಕುಲದ್ವೇಷಿ ಚಿತ್ರ ಸನ್ಯಾಸಿ | ಬೇಕೆಂದು ಭಜಿಪೆ ನಿಲಸಿ | ಜೋಕೆ ಮಾಡುವುದ | ನೇಕ ಪರಿಯಿಂದ | ನಿಕರ ತರಿಸದೆ | ಭೂಕಾಂತರು ನೋಡೆ | ಸಾಕಾರ ದೇವ ಕೃಪಾಕರ ಮುನಿ ದಿವಾಕರ ಭಾಸಾ2 ನಿರುತ ಎನ್ನಯ ಅರಿಷ್ಟ | ಮೆರೆವ ಉನ್ನತ ವಿಶಿಷ್ಟ | ಉರಗ ಕಿನ್ನರ ಗಂಧರ್ವರ | ಕರಕಮಲಗಳಿಂದ | ವರಪೂಜೆಗೊಂಬ | ಸಿರಿ ಅರಸನೆ ನಮ್ಮ ವಿಜಯವಿಠ್ಠಲ ಪರಾ | ಶರಸುತ ಬಲು ವಿಸ್ತರ ಜ್ಞಾನಾಂಬುಧೆ || 3
--------------
ವಿಜಯದಾಸ
ಶಂಕರಾ ಪೊರೆಯಯ್ಯ ನಾ ನಿನ್ನ ಕಿಂಕರ ಪ ಪಂಕಜಾಸನಕುವರ ಮನದ ಶಂಕ ನಾಶಗೈಸಿ ಶೇಷಪ ರ್ಯಂಕಶಯನನ ಪಾದ ಪಂಕಜದೇಕ ಭಕುತಿಯನಿತ್ತು ಸಲಹಯ್ಯಅ.ಪ ನಿಟಿಲನಯನ ಧೂರ್ಜಟಿಯೆ ಸೋಮಧರಾ ಜಟಾಜೂಟನೆ ಕಠಿಣವೆನ್ನಯ ಕುಟಿಲಮತಿಯ ಜಟಿಲಕಳೆದು ನಿಷ್ಕುಟಿಲ ಮನದೊಳು ವಿಠಲಮೂರ್ತಿಯ ಧೇನಿಸಲು ಹೃ ತ್ತಟದಿ ದಿಟಮನ ಕೊಟ್ಟು ರಕ್ಷಿಸಯ್ಯ 1 ಘೋರ ದುರಿತಾಪಹಾರ ತ್ರಿಪುರಹರ ಕರುಣಾಸಮುದ್ರನೆ ನಿರುತ ಶ್ರೀಹರಿಚಾರುಚರಣಸ್ಮರಣೆ ಕರುಣಿಸಿ ಪೊರೆಯೋ ಗುರುವರ ಸುರನದೀಧರ ಪಾರ್ವತೀವರ ಕರಿಗೊರಳ ಕೈಲಾಸಮಂದಿರ2 ಸರ್ಪಭೂಷಣ ಶೂಲಿ ಡಮರುಧರ ಕಂದರ್ಪಹರ ಶಿವ ಸರ್ಪಗಿರಿ ಶ್ರಿ ವೆಂಕಟೇಶಗೆ ಸರ್ವಭಕ್ತಿ ಸಮರ್ಪಿಸಯ್ಯ ಆಪತ್ತುಹರ ಸಂಪತ್ತುಕರ ಶಾರ್ವರೀಕರಧರ ಶುಭಕರ 3 ಶಂಬರಾಂತಕವೈರಿ ಭಸಿತಧರ ಬೆಂಬಿಡದೆ ಸಲಹೊ ಶಂಭು ಶಚಿಪತಿಬಿಂಬ ಗುರುವರ ಸಾಂಬ ಪೊಂಬಸುರಕುವರ ತ್ರ್ಯಂಬಕಾ ತ್ರಿಪುರಾಂತಕ ಶುಕ 4 ಗಿರೀಶ ಸುರವರ ರುಂಡಮಾಲಾಧರ ಕರಿಚರ್ಮಾಂಬರ ನಿರುತ ಹೃದಯಸದನದೊಳನ ವರತ ಉರಗಾದ್ರಿವಾಸ ವಿಠಲನ ಚರಣಸರಸಿಜಮಧುಪ- ನೀ ಸುಖ ಸವಿದು ಸೇವಿಪ ವೈಷ್ಣವಾಗ್ರಣಿ5
--------------
ಉರಗಾದ್ರಿವಾಸವಿಠಲದಾಸರು
ಶಂಭೋ ಸುರಗಂಗಾಧರನೆ ಪಾಲಿಸಂಬಾರಮಣ ಲಿಂಗ ಪ ರಂಭ ಜನಕ ಕರುಣಾಂಬುಧಿ ಗುರುವರ ಅ.ಪ. ಮುರಾರಿ ಮಹದೇವ ನಿನ್ನಯ ಪಾದ ವಾರಿಜದಳಯುಗವ ಸಾರಿದೆ ಸತತ ಸರೋರುಹೇಕ್ಷಣ ಹೃ ದ್ವಾರಿಜದೊಳು ತೋರು ಗಾರುಮಾಡದಲೆನ್ನ ಅಮಿತ ಗುಣಗುಣ ವಾರಿನಿಧಿ ವಿಗತಾಘ ವ್ಯಾಳಾ ಗಾರ ವಿತ್ತಪ ಮಿತ್ರ ಸುಭಗ ಶ ಪಾವಕ 1 ಇಂದು ಮೌಳೀ ಈಪ್ಸಿತಫಲ ಸಲಿಸುವ ಘನತ್ರಿಶೂಲೀ ಸಲೆ ನಂಬಿದೆನೊ ಹಾಲಾ ಹಲಕಂಠ ಎನ್ನ ನೀ ಸಲಹೋ ಸಂತತ ರೌಪ್ಯಾಚಲವಾಸ ವರಪಂಪಾ ನಿರ್ಜರ ಸೇವಿತಾನಲ ನಳಿನಸಖ ಸೋಮೇಕ್ಷಣನೆ ಬಾಂ ದಳಪುರಾಂತಕ ನಿಜಶರಣವ ತ್ಸಲ ವೃಷಾರೋಹಣ ವಿಬುಧವರ 2 ದೃತಡಮರುಗ ಸಾರಂಗ ನಿನ್ನಯಪಾದ ಶತಪತ್ರಾರ್ಚಿಪರ ಸಂಗ ಸತತ ಪಾಲಿಸೊ ಜಗನ್ನಾಥ ವಿಠ್ಠಲನ ಸ ನ್ನುತಿಸುವ ನೆರೆಧೀರ ಕ್ಷಿತಿಧರ ಧೃತಧನ್ವಿ ಶತಮಖನ ಜೈಸಿದನ ಪುತ್ರನ ಪಿತನ ಜನಕನ ಕೈಲಿ ಕೊಲಿಸಿದೆ ಅತುಳ ಭುಜಜಲ ಭೂತಪಡೆ ಪಾ ವನತಿ ಮುಖಾಂಭೋರುಹ ದಿವಾಕರ 3
--------------
ಜಗನ್ನಾಥದಾಸರು
ಶರಣಾಗತ ರಕ್ಷಾಮಣಿಯೆ ಶ್ರೀ ಹರಿಯೆ ಪ ಶರಣಾಗತ ಜನ ವರ ರಕ್ಷಾಮಣಿಯೆಂಬ ಬಿರುದಿನಿಂದಲಿ ಮೆರೆವ ಕರುಣಾ ಭರಣ ಕಾಮಿತ ವರಪ್ರದಾಯಕ ಅ.ಪ. ಜನನ ಮರಣ ರಹಿತ ಜಗದ ಜನ್ಮಾದಿ ಕರ್ತ ಜನುಮ ಜನುಮದಲ್ಲಿ ಜಗದ ಜೀವರಿಗೆಲ್ಲಾ ಅನಿಮಿತ್ತ ಬಂಧುವೆಂದು ನಿನ್ನಯ ಪಾದ ವನಜಗಳನು ನಾವಿಂದು ನಂಬಿಹೆವಿನ್ನು ವನಜನಾಭನೇ ನೀ ಬಂದು ಕಾಯಬೇಕೆಂದು ತನುಮನಂಗಳ ನಿನಗೆ ಒಪ್ಪಿಸಿ ಅನುನಯದಿ ಶಿರ ಮಣಿದು ಬೇಡುವೆ ಅನಘ ಅನುಪಮ ಗುಣಗಣಾಂಬುಧಿ ಅನಿಮಿಷೋತ್ತಮ ಅಪ್ರಮೇಯನೆ 1 ಕಾಮಜನಕ ಪೂರ್ಣಕಾಮ ಆಶ್ರಿತ ಜನ ಕಾಮಧೇನುವೆ ಕೋಟಿ ಕಾಮಲಾವಣ್ಯನೆ ಶ್ರೀ ಮನೋಹರ ಗಂಭೀರ ಸುರುಚಿರ ಘನ ಸನ್ನುತ ಮಹಿಮ ಸಾಮಜನರ ಉದ್ಧಾರ ಭಕ್ತ ಮಂದಾರ ಸಾಮಗಾನ ಪ್ರೇಮ ಜಗದಭಿ ರಾಮ ರಾಕ್ಷಸ ಭೀಮ ಮಂಗಳ ನಾಮ ಸುರಮುನಿ ಸ್ತೋಮ ಸನ್ನುತ ಸ್ವಾಮಿದೇವ ಲಲಾಮ ನಮೊ ನಮೊ 2 ಮಾಧವ ಅರ ವಿಂದಲೋಚನ ಪೂರ್ಣಾನಂದ ಸ್ವರೂಪನೆ ಎಂದೆಂದು ನೀನಲ್ಲದೆ ಗತಿ ಎಮಗಿಲ್ಲ ವೆಂದು ನಿನ್ನನು ಬಿಡದೆ ಕರಿಗಿರೀಶನೆ ತಂದೆ ಯೆಮ್ಮಯ ಕುಂದುಗಳ ನೀ ನೊಂದನೆಣಿಸದೆ ಬಂದು ಸಲಹುವು ಇಂದು ಕರುಣಾ ಸಿಂಧು ನತಜನ ಬಂಧು ನರಹರಿ3
--------------
ವರಾವಾಣಿರಾಮರಾಯದಾಸರು
ಶರಣಾಗತರಕ್ಷಕ ಬೇಗದಿ ಬಂದು ಮನಮಂದಿರದಿ ನಿಲ್ಲೋ ಪ ಈ ಕರೆಕರೆ ಸಂಸಾರಶರಧಿಯೊಳು ನಿಂದೆ ಹರಿಯೆ ನಿಲ್ಲೊಂದರಘಳಿಗೆಯಾದರೂ ಮನದಿಅ.ಪ ತೋಯಜಾಂಬಕ ನಿನ್ನ ನಾನೆಂದಿಗೆ ಕಾಯದೊಳು ಕಾಂಬೆನೊ ಮಾಯಾರಮಣನೆ ನೀ ಮಾಯವ ಹರಿಸಯ್ಯ ಆಯಾಸಗೊಳಿಸದೆ ಕಾಯುವುದೀಗಲೆ 1 ನಾನಾಯೋನಿಗಳಲ್ಲಿ ನಾ ಬರಲಂಜೆನೋ ಶ್ವಾನಸೂಕರ ಜನ್ಮದಿ ನೀನಿಟ್ಟರಾದರು ಶ್ರೀನಿಧಿಯೆ ನಿನ್ನಯ ಸ್ಮ- ರಣೆ ಒಂದಿದ್ದರೆ ನಾ ಧನ್ಯ ಧನ್ಯನೋ2 ಲೋಕಾಲೋಕೋದ್ಧಾರನೆ ನಿನ್ನಾಜ್ಞೆಯಿಂ ನಾಕೇಶ ಮೊದಲಾದ ಪಿ- ನಾಕಿ ಪ್ರಮುಖರು ಅನೇಕ ಕಾರ್ಯವೆಸಗಿ ಶೋಕಪಡಿಸುವರಯ್ಯ 3 ದುರ್ಗಾಶ್ರೀರಮಣ ಎನ್ನ ಸಂಸೃತಿಯೆಲ್ಲ ದುರ್ಗಮವಾಗಿಹುದೊ ಸ್ವರ್ಗ ಅಪ- ವರ್ಗಪ್ರದನೆ ಎನ್ನಯ ಭವ- ದುರ್ಗಕಡಿದು ಸನ್ಮಾರ್ಗ ಕರುಣಿಸೊ 4 ಸ್ವಾಮಿತೀರ್ಥದಿವಾಸ ಶ್ರೀಜಗದೀಶ ಸ್ವಾಮಿ ಶ್ರೀ ವೆಂಕಟೇಶ ಪಾಮರನಾದೆನ್ನ ತಾಮಸ ಹರಿಸಿ ಹೃತ್ಕಮಲದಲಿ ನಿಲ್ಲೊ ಕಮಲಾಪತಿಯೆ ದೇವ 5
--------------
ಉರಗಾದ್ರಿವಾಸವಿಠಲದಾಸರು
ಶರಣು ಗುರು ಬ್ರಹ್ಮಣ್ಯ | ಶರಣು ಶಿರಿ ಸುರಮಾನ್ಯಪರಿಹರಿಸು ಭವತಾಪ | ಬಿನ್ನವಿಪೆ ಮುನಿಪ ಪ ಪುರುಷೋತ್ಮ ಕರಜಾತ | ಕಣ್ವತಟದಲಿ ಖ್ಯಾತನರಹರಿಯ ಪದಕಮಲ | ಭಜಕಶೀಲಶರಣ ಜನ ಸುರಕಲ್ಪ | ತರುವೆ ಎನ್ನಯ ಪಾಪಪರಿಹರಿಸೊ ಮುನಿಮೌಳಿ | ನಾನು ಪದಧೂಳಿ 1 ಯೋನಿ ಅನೇಕದಲಿ | ಬಂದಿರುವೆ ನಾಬಳಲಿಮಾನ ನಿಧಿ ನೀಯನ್ನ | ಕಾಯೊ ದಯ ಪೂರ್ಣ |ಜ್ಞಾನಾರ್ಕನೆನಿಸಿರುವ | ಮೌನಿ ತವ ಸದ್ಭಾವಪೂರ್ಣ ಹರಿ ಸುಜ್ಞಾನ | ಪಾಲಿಸೈ ನಿಪುಣ 2 ವಿಕಳ ಮತಿಯನು ಹರಿಸು | ಅಕಳಂಕನೆಂದೆನಿಸುಸುಖತೀರ್ಥ ಮತ ಸುಧೆಯ | ಉಣುವ ಪರಿಯ |ಸುಖದಿಂದ ಕರುಣಿಸುತ | ಸುಖ ಹರಿಯ ನೋಳ್ಪಂಥಪ್ರಕರಣದಲಿರಿಸೆನ್ನ | ಮೌನಿ ಕುಲರನ್ನ 3 ಸುಕೃತ ಒಂದಿರಲಿ | ನಿನ್ನ ದಯವಿರಲಿ 4 ವಿಠ್ಠಲ ಸುಪೂಜಕನೆ | ಕಷ್ಟಗಳ ಕಳೆಯುವನೆಶಿಷ್ಟ ಸಜ್ಜನ ಪಾಲ | ಹರಿಪದ ವಿಲೋಲ ಕೃಷ್ಣ ಗುರು ಗೋವಿಂದ | ವಿಠ್ಠಲನ ಪದದ್ವಂದ್ವಸುಷ್ಠು ಹೃದ್ಗುಹದಲ್ಲಿ | ಕಾಣಿಪುದು ಅಲ್ಲಿ 5
--------------
ಗುರುಗೋವಿಂದವಿಠಲರು
ಶರಣು ಶರಣು ಪ ಪರಿಹರಿಸು ಕರುಣಾಳು ಬಿನ್ನಪವ ಕೇಳು ಅ.ಪ. ವಾಸವಾದ್ಯಮರನುತ ವನಜಸಂಭವನ ಸುತ ನೀ ಸಲಹೊ ಕೈಲಾಸವಾಸ ಈಶ ಕ್ಲೇಶ ಮೋದಾದಿ ಸಮ ತಿಳಿದು ಅಶ್ವತ್ಥಾಮ ಶ್ರೀಶುಕ ದುರ್ವಾಸ ಸ್ಫಟಿಕ ಸಮಭಾಸ 1 ವೈಕಾರಿಕಾದಿ ತ್ರೈರೂಪ ನಿನ್ನಯ ಕೋಪ ಶೋಕಕೊಡುವುದು ದೈತ್ಯಜನಕೆ ನಿತ್ಯ ಲೌಕಿಕಗಳೆಲ್ಲ ವೈದಿಕವಾಗಲೆನಗೆ ಮೈ ನಾಕಿ ಹೃತ್ಕುಮುದೇಂದು ಭಕ್ತಜನ ಬಂಧು 2 ಪವಮಾನತನಯ ನಿನ್ನವರಲ್ಲಿ ಕೊಡು ವಿನಯ ದಿವಸ ಸವನಗಳಲ್ಲಿ ಎನ್ನಿರುವ ನೀ ಬಲ್ಲಿ ಪವನ ದ್ವಿತಿಯರೂಪ ಸತತ ಎನ್ನಯಪಾಪ ಅವಲೋಕಿಸದಲೆನ್ನ ಸಲಹೊ ಸುರಮಾನ್ಯ 3 ಶೇಷನಂದನ ಶೇಷಭೂಷಣನೆ ನಿಶೇಷ ದೋಷರಹಿತನ ತೋರು ಕರುಣವನು ಬೀರು ಶ್ರೀ ಷಣ್ಮುಖನ ತಂದೆ ಸತತ ನೀ ಗತಿಯೆಂದೆ ಶೋಷಿಸು ಭವಾಮಯವ ಬೇಡುವೆನು ದಯವ4 ಗರ್ಗ ಮುನಿಕರಪದುಮ ಪೂಜ್ಯ ಚರಣಾಬ್ಜ ಮಮ ದುರ್ಗುಣಗಳೆಣಿಸದಲೆ ಜಗದೆ ಮೇಲೆ ನಿರ್ಗತಾಶನ ಜಗನ್ನಾಥ ವಿಠಲನ ಸ ನ್ಮಾರ್ಗವನೆ ತೋರು ಈ ದೇಹ ನಿನ ತೇರು 5
--------------
ಜಗನ್ನಾಥದಾಸರು
ಶರಣು ಶ್ರೀ ನಂದನೇಶ್ವರ | ಪಾಲಿಸು ಜಗದೀಶ್ವರ | ಶರಣು ಶ್ರೀ ನಂದನೇಶ್ವರ ಪ ಶರಣು ಶ್ರೀ ಗುರುವರ ಗಂಗಾಧರ | ಕರ ಕಪಾಲಧರ ಹರ ಮೃತ್ಯುಂಜಯ ಅ.ಪ. ತಂದೆ ನಿನ್ನಯ ಪಾದವ | ಮರೆತಿಹುದರಿಂದ | ನಿಂದ ಹಲವಂಗದಲಿ ಭವಭವದಿ || ನೊಂದು ಬಂದೆ ನಾನಿಂದೀ ಭವದೊಳು | ಹೊಂದಿ ತವಾಂಘ್ರಿಯನಂದದಿ ಭಜಿಸುವೆ 1 ಭೇದ ಬುದ್ಧಿಯ ಮಾನವರು | ವೇದ ಶಾಸ್ತ್ರದ| ಹಾದಿಯರಿಯದ ಮತ್ಸರರು || ಸಾಧುಗಳೊಡನೆ ವಿರೋಧವನೆಣಿಸುವ | ಬಾಧಕರಾದರು ಹೇ ದಯಾನಿಧಿಯೇ 2 ತೊಡಕುಗಳನ್ನೆ ಬಿಡಿಸಿ | ಬಾಧೆಗಳ ವಾರಿಸಿ | ಕಡು ದುಷ್ಟಾತ್ಮರ ಶಿಕ್ಷಿಸಿ | ಎಡೆಬಿಡದೆನ್ನ ಮನೋರಥ ಸಲಿಸುತ | ದೃಢತರ ಭಕುತಿಯ ಕೊಡು ಕೃಪೆಯಿಂದಲಿ 3 ಪಾದ | ಮುಕುತಿ ಸಂಪದ ಪಾಲಿಸೊ || ಶಕುತಿಯೊಳಗೆ ನೀ ಯುಕುತಿಯಿಂದ ನಿಜ | ಸುಖದ ಪದವಿಯೊಳು ಪ್ರಕಟದಿ ಪೊರೆಯೈ4 ಯೋಗಿಗಳರಸ ನೀನೆಂಬ | ಬಿರುದುಗಳ ತೋರಿಸು- | ತೀಗೆನ್ನಪರಾಧವ ಕ್ಷಮಿಸೆಂಬ || ರಾಗದ ನುಡಿಯೊಳೆನ್ನಾಗಮನವೊಪ್ಪಿಸು- | ತೀಗ ಸದಾನಂದ ಯೋಗಾಂತರ್ಗತ 5
--------------
ಸದಾನಂದರು
ಶರತ್ಕಾಲ ಶಶಿ| ಪೂರ್ಣನಿಭಾನನೆ| ಜಗದಂಬ, ಜಗದಂಬ ಪ ನಿರುತವು ನಿನ್ನಯ| ಚರಣವ ಸ್ಮರಿಸುವ| ಶರಣಾಮರತರು| ಕರುಣಿ ಭವಾನಿ| ಜಗದಂಬ, ಜಗದಂಬ|| 1 ನೀ ಕರುಣಿಸದೆ ನಿ| ರಾಕರಿಸಲು ಎನ್ನ| ಸಾಕುವರಾರು ಪ| ರಾತ್ಪರ ಜನನಿ| ಜಗದಂಬ, ಜಗದಂಬ||2 ಶರಣಾಗತರನು| ಪೊರೆವಳೆಂಬ ಘನ| ಬಿರುದನಾಂತ ಶ್ರೀ| ಪರಮೇಶ್ವರಿಯೆ| ಜಗದಂಬ, ಜಗದಂಬ||3 ಪಂಕಜಾಕ್ಷಿ ಅಖಿ| ಲಾಂಕಮಹಿಮೆ ತವ| ಕಿಂಕರರನು ಪೊರೆ| ಶಂಕರಿ ದೇವಿ| ಜಗದಂಬ, ಜಗದಂಬ||4 ಜಟಾಮಕುಟಸುರ| ತಟನೀಧರಸತಿ| ನಿಟಿಲಾಂಬಕಿ ಶ್ರೀ| ಕಟಿಲಪುರೇಶ್ವರಿ| ಜಗದಂಬ, ಜಗದಂಬ||5
--------------
ವೆಂಕಟ್‍ರಾವ್
ಶರಧಿಸುತೆ ಮಾತೆ ಶರಧಿಸುತೆ ಮಾತೆ ಪ ಪೊರೆಯೇ ಜಗನ್ಮಾತೆ ಅ.ಪ ಸರಸಿಜಭವ ಶಿವ ಗರುಡ ಶೇಷ ಮುಖ ಸುಮನಸ ವಂದಿತ ಪದಯುಗಳೆ ಮನಸಿಜ ಜನಕನ ಕೋಮಲತಮ ಹೃತ್ಕಮಲದೊಳು ಸದಾ ನೆಲಸಿದ ಶುಭಗೆ 1 ವಂದಿಪೆ ನಿನ್ನಯ ಚರಣ ಕಮಲ ಎನಗೊಂದುಪಕಾರವ ದಯಮಾಡೆ ಒಂದನು ಅರಿಯದ ಭಕುತರೊಳಗೆ ಇವ ನೊಂದು ಎಂದು ಗೋವಿಂದನಿಗರುಹೆ 2 ತುಂಗಮಹಿಮನನು ಎಡಬಿಡದೆಲೆ ಅವ ನಿಂಗಿತವನು ನೀನರಿತಿರುವೆ ಮಂಗಳದೇವತೆ ಅದನರುಹಿ ಕೃಪಾ ಪಾಂಗವ ಬೀರೆ ಪ್ರಸನ್ನ ಸುವದನೇ 3
--------------
ವಿದ್ಯಾಪ್ರಸನ್ನತೀರ್ಥರು
ಶಶಿಮುಖಿ ಜಾನಕಿ ರಮಣ ವಸುಧೆಯೊಳಗೆ ನಿಮ್ಮ ಭಜನೆಯ ಮಾಡುವರ ಶಿಶುವುಯೆಂದು ತಿಳಿದು ಶೀಘ್ರದಿ ರಕ್ಷಿಸೊ ಪ ಪಶುಪತಿ ರಕ್ಷಕ ಪಾವನ ಮೂರ್ತಿ ಪಶುಪಾಲಕನಾದ ಪರಮಾತ್ಮ ಕುಸುಮಜನನು ಅತಿಕರುಣದಿ ನೀನು ಕುಶಲದಿ ಪಡೆದ ಗುಣವಂತಾ ಹಸ ಮೀರಿನಡೆವಂತ ಅನೇಕ ದುಷ್ಟ ಅಸುರರ ಛೇದಿಸಿದ ಬಲವಂತಾ ದಶದಿಕ್ಕಿನೊಳಗೆ ದಾರನು ಕಾಣೆನೊ ದಶವಂತನು ನಿನಗಾರು ಸರಿಹಾರೊ 1 ಪಿತೃವಾಕ್ಯ ಪರಿಪಾಲನೆ ಮಾಡಿದ ಪುತ್ರನು ಅನಿಸಿದ ಪುಣ್ಯನಿಧಿ ಪತಿ ಧರ್ಮವ ಸರ್ವದಾ ನಡೆಸುವ ಸತ್ಯಮೂರ್ತಿ ಸೌಭಾಗ್ಯನಿಧಿ ಶತದ್ರೋಹಿಯಾಗಿ ಸೀತೆಯ ಒಯ್ದನ ಶತಮುಖನಯ್ಯನ ಸಂಹರಿಸಿದಿ ಸತತ ವಿಭೀಷಣ ಭಕ್ತಿಯಿಟ್ಟ ಸಲುವಾಗಿ ಲಂಕೆಯ ಧಾರೆಯನೆರದೀ 2 ಯಾದವ ಕುಲಪತಿ ಯಶೋದೆನಂದನ ವ್ಯಾಧನ ರಕ್ಷಿಸಿದಿ ವಿಶ್ವೇಶ ಬಾಧಕ್ಕೆ ಒಳಗಾಗಿ ಕರಿಕೂಗಲು ಮಕರಿ ಬಾಧೆಯ ತಪ್ಪಿಸಿದ ಪರಮೇಶಾ ಸಾಧು ಸಜ್ಜನ ಸರ್ವರ ಸಲಹುವ ಸಾಧು ಗುಣಾನಂದ ಸರ್ವೇಶಾ ಮಾಧವ `ಸಿರಿಹೆನ್ನೆ ವಿಠಲ' ನಿನ್ನಯ ಮೋದವ ತೋರೋ ಜಗದೀಶಾ 3
--------------
ಹೆನ್ನೆರಂಗದಾಸರು
ಶಾಂತಿಯ ಕರುಣಿಸೊ ಈ ಮನಸಿಗೆ ಶಾಂತಿಯ ಕರುಣಿಸೊ ಪ ಶಾಂತಿಕರುಣಿಸಿ ನಿನ್ನಂತರಂಗದಿ ನಿಮ್ಮ ಚಿಂತೆ ಇರಿಸು ಕರುಣಾಂತರಂಗ ಹರಿಅ.ಪ ವಿಲಸಿತಮತಿ ಕೊಡೊ ಮನವು ಚಲಿಸದಪದ ನೀಡೋ ಸುಲಭದಿ ತವಪಾದ ಒಲಿಸಿ ನಲಿಯುವ ದಾಸರೊಳಗೆ ಕೂಡಿಸಿ ಎನ್ನ ನೊಲಿದು ರಕ್ಷಣೆಮಾಡೊ 1 ಹಲುಬಾಟ ದೂರಮಾಡೊ ಎನ್ನಯ ಪ್ರಳಯ ಗುಣೀಡ್ಯಾಡೊ ಗಲಿಬಿಲಿ ಸಂಸಾರದೊಲಿಮಿಲಿ ಬಳಲುವ ಹೊಲೆಮತಿ ಕಳೆದೆನ್ನ ಸಲಹೆಲೊ ಜ್ಞಾನದಿ 2 ಮರೆಯ ಬೇಡ ಎನ್ನ ಕರುಣಾ ಭರಣ ಭಕ್ತಪ್ರಾಣ ಹರಿವ ಜಗದಿ ಎನ್ನ ಪರಿಪರಿ ನೋಯ್ಸದೆ ಪರಮಮುಕ್ತಿಯನಿತ್ತು ಪೊರೆಯೊ ಶ್ರೀರಾಮ3
--------------
ರಾಮದಾಸರು
ಶಾರದಾಂಬೆ | ಜಯ ಜಯ | ಶಾರದಾಂಬೆಪ. ಶಾರದಾಂಬೆ ಅ.ಪ ನಿರತವು ನೀ ಮನ| ವೊಲಿಯುತಲೆನ್ನಯ | ಕರುಣಿಯೆ ನೀ ದಯ | ದೋರುತ ಪೊರೆವುದು | ಶಾರದಾಂಬೆ 1 ಹರಿನಾಮಾಮೃತ | ವನುದಿನವೆನ್ನಯ | ರಸನೆಯು ಸೇವಿಸು | ವಂದದಿ ನೀ || ವರಗಳ ನೀ ವಾ| ಗ್ದೇವಿಯೆ ಕರುಣಿಸು | ಶಾರದಾಂಬೆ2 ಮರಣದ ಕಾಲದಿ | ಹರಿಯನು ಬಾಯೊಳು | ಸ್ಮರಿಸುವ ಜ್ಞಾನವ | ನೀಯುತಲಿ || ಶರಣನ ಪೊರೆವುದು | ಪರಮ ಕೃಪಾಕರಿ | ಶಾರದಾಂಬೆ 3 ಮಾಡು ನೀ ಕೃಪೆಯ | ನ್ನನವರತ || ಜೋಡಿಸಿ ಕೈಗಳ | ವಿನಯದಿ ಬೇಡುವೆ | ಶಾರದಾಂಬೆ 4 ವೀಣಾಪಾಣಿ | ಕೋಕಿಲ ವಾಣಿ | ಪನ್ನಗವೇಣಿ | ಬೊಮ್ಮನ ರಾಣಿ || ದೀನನ ನುಡಿಗಭಿ | ಮಾನವನೀವುದು | ಶಾರದಾಂಬೆ 5
--------------
ವೆಂಕಟ್‍ರಾವ್
ಶಿಖರಪುರ ದಾಸಾರ್ಯ ವಂಶದಿ ಶಶಿಯಂತೆ ಉದಿಸಿದ ಶ್ರೀನಿವಾಸಾರ್ಯರೆಂಬ ಪ್ರಚಲಿತ ನಾಮದ ದಾಸಾರ್ಯರ ಚರಿತೆ ಗುರುಗಳ ದಯದಿಂದ ಅರಿತಷ್ಟು ಪೇಳುವೆ ಬುಧ ಜನರು ನಿಷ್ಕಪಟ ಭಾವದಿಂದಲಿ ಕೇಳಿ ಸಿರಿಗುರುತಂದೆವರದಗೋಪಾಲವಿಠ್ಠಲನ ಭಕ್ತರೊಳಗಿವರೊಬ್ಬರು ಕಾಣಿರೊ 1 ಶ್ರೀ ರಮೇಶಕೃಷ್ಣನು ತನ್ನ ಪರಿವಾರ ಸಹಿತಾಗಿ ಓಲಗದಿ ಕುಳಿತಿರಲು ಸಾವಧಾನದಿ ತಾನು ಶ್ರೀದೇವಿ ಋಷಿಯಾಜ್ಞೆಯಿಂದಲಿ ಬಂದು ಶಿರಬಾಗಿ ಧರಣಿಯೊಳು ಭಾಗವತರ ಮಹಿಮೆತಿಳಿದು ಸಾಧನೆಗೈಯ್ಯಬೇಕೆಂಬ ಕುತೂಹಲದಿಂದ ದೇವಾಂಶರ ಬಿಡದೆ ಅವತಾರ ಮಾಡಿದ ಪವಿತ್ರವಂಶದಿ ಬಹುಕಾಲ ಪುತ್ರಾಪೇಕ್ಷೆಯಿಂದಲಿ ಶ್ರೀನಿವಾಸನ ಸೇವೆಗೈದ ಮಾತೆ ಶ್ರೀ ರುಕ್ಮಿಣೀದೇವಿ ಪಿತ ರಾಘವೇಂದ್ರರ ಉದರದಿಂದಲಿ ಜನಿಸಿ ಬಾಲತ್ವ ಕೆಲಕಾಲ ಕಳೆದು ತದನಂತರದಿ ಭೂವೈಕುಂಠಪುರದಲ್ಲಿ ದ್ವಿಜತ್ವವನೆ ಪಡೆದು ಲೌಕಿಕ ವಿದ್ಯೆಗಳನೆಲ್ಲ ಕಲಿಸಿ ಬಳಿಕ ಸಂಗೀತ ವಿದ್ಯೆಯ ಸಾಧನಕೆ ಮಿಗಿಲೆಂದು ಸಾಧಿಸಿ ಬಿಡದೆಲೆ ಪ್ರಾವೀಣ್ಯತೆಯ ಪಡೆದು ಅತಿ ಗೌಪ್ಯದಿಂದಲಿ ಶಿರಿಗುರು ತಂದೆವರದಗೋಪಾಲವಿಠ್ಠಲನ ಸ್ತುತಿಸಿ ಮನದಿ ಅತಿ ಹಿಗ್ಗುತಲಿರ್ದ ಬಗೆ ಕೇಳಿ 2 ಗುರು ಕಾಳಿಮರ್ದನ ಕೃಷ್ಣಾಖ್ಯದಾಸರ ಸಹವಾಸದಿಂದಲಿ ಲೌಕಿಕದಿ ಹುರುಳಿಲ್ಲವೆಂಬ ಮರ್ಮವ ತಿಳಿದು ಮನದಿ ವಿಚಾರಿಸುತಿರಲು ಕಾಲವಶದ ಸೋತ್ತುಮ ರಾಜ್ಯದಿ ಸ್ವರೂಪ ಕ್ರಿಯೆಗಳಾಚರಣೆಗೆ ಮನಮಾಡುತಲಿಹ ಓರ್ವ ದ್ವಿಜನ ಮರ್ಮವ ತಿಳಿಯದೆ ನಿಂದಿಸುವ ಮನವ ಮಾಡೆ ಶ್ರೀವದ್ವಿಜಯರಾಯರುತಮ್ಮ ವಂಶಜನಿವನೆಂದು ಶ್ರೀಮತ್ ರಾಘವೇಂದ್ರ ಮುನಿಗೆ ಬಹು ವಿಧ ಪ್ರಾರ್ಥಿಸಿ ಫಲ ಮಂತ್ರಾಕ್ಷತೆಯನಿತ್ತು ಧ್ಯಾನಕ್ಕೆ ತೊಡಗಿಸಿ ಶ್ರೀಮದ್ ಭಾವಿ ಸಮೀರ ಪದರಜವೇ ಬಹು ಭಾಗ್ಯವೆಂದು ಧೇನಿಪ ಭಕ್ತವರ್ಯರಾದ ತಂದೆವರದಗೋಪಾಲ ವಿಠಲದಾಸರಾಯರ ಪದಪದ್ಮಂಗಳಿಗೊಪ್ಪಿಸಿ ಅಪರಾಧಗಳನ್ನೆಲ್ಲ ದೃಷ್ಟಿ ಮಾತ್ರದಿ ದಹಿಸಿ ಫಣಿಗೆ ಮೃತ್ತಿಕೆ ತಡೆದು ಗುರುಗಳನೆ ಅರುಹಿ ನಿಜ ಮಾರ್ಗದಿಂದ ಶಿರಿಗುರುತಂದೆವರದಗೋಪಾಲವಿಠ್ಠಲನ ಕರುಣಿ ಪಡೆವ ಮಾರ್ಗವನೆ ಪಿಡಿದರು ಜವದಿ 3 ಭವದೊಳು ಬಳಲುವ ಭೌತಿಕ ಜೀವಿಗಳ ಬಹು ಬೇಗದಿಂದಲಿ ಉದ್ಧರಿಸಲೋಸುಗ ಬೋಧಮುನಿ ಕೃತ ಗ್ರಂಥಸಾರವ ಬೋಧಿಪ ಮುನಿಗಳ ದರ್ಶನಗೋಸುಗ ಪೊರಟ ಸಮಯದಲಿ ಶ್ರೀಗುರು ವಾದಿರಾಜ ಮುನಿವರ್ಯ ತನ್ನಯ ಪುತ್ರನ ಮೊರೆಕೇಳಿ ಶ್ರೀಲಕ್ಷ್ಮೀಹಯವದನನ ಮೂರ್ತಿಯ ಪ್ರಾರ್ಥಿಸೆ ರೌಪ್ಯಪೀಠ ಪುರವಾಸಿ ಶ್ರೀಕೃಷ್ಣನ ಕರದಿ ಶೋಭಿಪ ವಸ್ತುವಿನ ಪುರದಿ ಸ್ವಪ್ನದಿ ಬಂದು ತಂದೆವರದವಿಠ್ಠಲನೆಂಬ ಅಂಕಿತವನಿತ್ತು ಅದೇ ಸುಂದರ ರೂಪವ ತೋರಿ ನೈಜಗುರುಗಳ ದ್ವಾರಾ ಭಜಿಸೆಂದು ಬೋಧಿಸಿದ ನಂತರದಿ ಬಹು ಸಂಭ್ರಮದಿಂದಲಿ ಉಬ್ಬುಬ್ಬಿ ತನ್ನ ತನುಮನಧನ ಮನೆ ಮಕ್ಕಳನೆಲ್ಲ ನಿನ್ನ ಚರಣಾಲಯಕೆ ಅರ್ಪಿತವೆಂದು ಅರ್ಪಿಸಿ ಗುರುಗಳ ದ್ವಾರಾ ಸಿರಿಗುರು ತಂದೆವರದಗೋಪಾಲಗೆ ಸದಾ ಧೇನಿಸುತ ಮೈಮರೆತಿರ್ದನೀ ದಾಸವರ್ಯ 4 ಪಾದ ಕರವ ಮುಗಿದು ಸ್ವಾಮಿ ಶ್ರೀಗುರುರಾಜಾತ್ವದ್ದಾಸವರ್ಗಕೆಸೇರಿದ ಬಾಲಕ ದಾಸನೀತಾ ಕರುಣದಿಂದಲಿ ಜವದಿ ಕರುಣ ಕಟಾಕ್ಷದಿ ಈಕ್ಷಿಸಿ ಉದ್ಧರಿಸಬೇಕೆಂದು ಬಹುವಿಧ ಪ್ರಾರ್ಥಿಸಲು ಪರಮ ಕರುಣಾನಿಧಿ ಋಜುವರ್ಯ ಶ್ರೀ ವಾದಿರಾಜಾರ್ಯ ತನ್ನ ಹಂಸರೂಪಿಣಿ ಶ್ರೀ ಭಾವೀ ಭಾರತಿಯಿಂದೊಡಗೂಡಿ ಬಹು ಆನಂದದಿಂದಲಿ ಪಂಚ ಬೃಂದಾವನ ರೂಪದಿ ಮೆರೆವ ತನ್ನಯ ರೂಪವ ತೋರಿ ತುತಿಸಿಕೊಂಡು ಬಹು ಆನಂದಭರಿತರಾಗಿ ಬಹು ಬೇಗ ಸಾಧಿಸುವ ಗೈಸಲೋಸುಗ ಶಿರಿಗುರು ತಂದೆವರದಗೋಪಲವಿಠಲನ ಪ್ರಾರ್ಥಿಸಿ ಸಕಲ ಉತ್ಸವಗಳ ತೋರಿ ಶ್ರೀಮದ್ವಿಶ್ವೇಂದ್ರರ ದ್ವಾರಾ ತವ ಪಾದರೇಣು ಫಲ ಮಂತ್ರಾಕ್ಷತೆಯನಿತ್ತು ಬಗೆಯನೆಂತು ವರ್ಣಿಸಲಿ ಪಾಮರ ನರಾಧಮನು ನಾನು 5 ಕೇವಲ ಲೌಕಿಕ ಜನರಂತೆ ಆಧುನಿಕ ಪದ್ಧತಿಗನುಸರಿಸಿ ದಿನಚರ್ಯವನೆ ತೋರುತಲಿ ಭಾರತೀಶನ ಪ್ರಿಯವಾಗಿಹ ಕರ್ಮಗಳನೊಂದನೂ ಬಿಡದೆ ತಿಳಿದು ಮನದಿ ಮಾಡುತಲಿ ಮಂಕುಗಳಿಗೆ ಮೋಹಗೊಳಿಸಿ ಮಮಕಾರ ರಹಿತನಾಗಿ ದಿನಾಚರಣೆಗೈದು ಶ್ರೀ ಶುಕಮುನಿ ಆವೇಶಯುತರಾದ ಸದ್ವಂಶಜಾತ ಶ್ರೀಕೃಷ್ಣನ ಸೇವೆಗೋಸುಗ ಅವತರಿಸಿದ ವಾಯುದೇವ ಪೆಸರಿನಿಂದಲಿ ಶೋಭಿಪ ಕುಲಪುರೋಹಿತರ ಬಳಿಯಲಿ ಬಹು ವಿನಯದಿಂದಲಿ ಶ್ರೀ ನಿಜತತ್ವಗಳ ಮರ್ಮಗಳ ಕೇಳಿಕೊಂಡು ಮನದಿ ವಿಚಾರಿಸಿ ದೃಢೀಕರಣ ಪೂರ್ವಕ ಪಕ್ವವಾದ ಮನದಿಂದಲಿ ಶ್ರೀಶಶ್ರೀ ಮಧ್ವಮುನಿ ಶ್ರೀಗುರುಗಳ ಕರಣವನೆ ಕ್ಷಣಕ್ಷಣಕೆ ಬಿಡದೆ ಸ್ಮರಿಸುತಾನಂದ ಭಾಷ್ಯೆಗಳ ಸುರಿಸುತ ಭಾಗವತರ ಸಮ್ಮೇಳನದಿ ತತ್ವಗಳ ವಿಚಾರಿಸುತ ಶ್ರೀ ದಾಸಾರ್ಯರಾ ಉಕ್ತಿಗಳ ಆಧಾರವನೆ ಪೇಳುತಲಿ ಮನದಿ ಗುರುಗಳ ಸನ್ನಿಧಿಗೆ ಅರ್ಪಿಸಿ ತತ್ವದ್ವಾರ ತಿಳಿದುಪೂರ್ಣ ಸಾಧನವಗೈದು ಶ್ರೀ ಪ್ರಲ್ಹಾದ ಬಲಿ ಮಾಂಧಾತ ಕರಿರಾಜ ಶಿಬಿಮೊದಲಾದ ಚಕ್ರವರ್ತಿಗಳಲಿ ಬಹುಬೇಗ ಸಾಧನವ ಗೈದರು ಇವರಾರೊ ನಾ ಕಾಣೆ ಶಿರಿ ಗುರುತಂದೆವರದ-ಗೋಪಾಲವಿಠಲನ ಆಣೆ 6 ಸತಿ ವತ್ಸರ ವತ್ಸರ ಸತಿ ಮಾಯಾ ಶುಭ ದಿನದಿ ಸಂಖ್ಯಾ ಕಾಲದಿ ಪ್ರಥಮ ಯಾಮವೆಮಿಗಿಲೆಂದು ಮನದಿ ಲಯ ಚಿಂತನೆಯ ಬಿಡದೆ ಮಾಡುತದೇವತೆಗಳ ದುಂದುಭಿ ವಾದ್ಯಗಾಯನಗಳ ರಭಸದಿಶ್ರೀ ಲಕುಮಿ ದೇವಿಯ ಸೌಮ್ಯ ದುರ್ಗಾ ರೂಪಕೆನಮೋ ನಮೋ ಎಂದು ಶಿರಿಗುರುತಂದೆವರದಗೋಪಾಲ ವಿಠಲನಪುರಕೆ ಪುಷ್ಪಕ ವಿಮಾನ ರೋಹಿಣಿಯನೆ ಮಾಡಿನಲಿನಲಿದಾಡುವ ತೆರಳಿ ಪೋದಾರಿವರು 7 ಜತೆ :ಸತಿದೇವಿ ರಮಣನ ಭಕ್ತನೇ ನಿನ್ನಯಸುಖತನವೆಂದಿಗೂ ಕೊಡಲೆಂದು ಬೇಡಿಕೊಂಬೆಸಿರಿಗುರುತಂದೆವರದಗೋಪಾಲ ವಿಠಲನಿಗೆ 8
--------------
ಸಿರಿಗುರುತಂದೆವರದವಿಠಲರು
ಶಿವ ಕರುಣಿಸಯ್ಯ ಚಂದ್ರಶೇಖರ ನೀನೆನ್ನೊಳೊಲಿದು ಪ ತಾಪ ಹರಣ ಮಾಡು ನಿನ್ನ ದಿವ್ಯಚರಣಗಳಿಗೆ ನಮಿಪೆನುರಗಾಭರಣ ಶರಣು ಶರಣು ಶರಣು ಅ.ಪ. ಕಾಳಭೈರವ ಶಂಭು ಶಂಕರ ಗಿರಿಜೆಯಾಣ್ಮಕೇಳು ಕೇಳು ನಿನ್ನ ಕಿಂಕರಹೂಳಿ ಷಡ್ರಿಪುಗಳನು ಮನದಲಿಊಳಿ ನಿಜಜ್ಞಾನವನು ಸಜ್ಜನರೋಳಿಯಲಿ ನಿಲಿಸುತ್ತ ನಿತ್ಯದಿಬಾಳಿ ತಾಳಿ ಎನುವಂತೆ 1 ನಂಟನಯ್ಯ ಭಕ್ತ ಜನಕೆ ಇನ್ನು ಮಿತಿಯುಂಟೆ ನಿನ್ನಯ ಕರುಣಲಹರಿಂಗೆಎಂಟು ದಿಕ್ಕನು ಸುಡುವ ವಿಷವನುಕಂಠದಲಿ ಧರಿಸಿ ಜಗತ್ತಿನಕಂಟಕವನು ಪರಿಹರಿಸಿದಂಥಬಂಟ ನೀನೈ ಮಹಾದೇವಾ 2 ಮೂರು ಊರುಗಳನು ಸಂಹಾರಾಮಾಡಿ ಉಳಿಸಿದಿಘೋರ ಸಂಕಟದಿಂದ ಜಗಪೂರಸೂರಿ ಬೊಮ್ಮನ ಮತ್ತೆ ಗದುಗಿನವೀರನಾರಾಯಣನ ಕೂಡಿನಾರಿ ಸತಿಯನಸೂಯಳನ್ನುದ್ಧಾರ ಮಾಡಿದ ರೀತಿಯಲ್ಲಿ 3
--------------
ವೀರನಾರಾಯಣ