ಒಟ್ಟು 1314 ಕಡೆಗಳಲ್ಲಿ , 102 ದಾಸರು , 1060 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಾಜಕುಲ ವನರಾಶಿ ರಾಜರಾಜೇಶ್ವರಾ | ರಾಜೀವ ನಯನ ಯದುರಾಜ ಎಲೊ ಭಾಪುರೆ ಪ ಗರಳ ಪೇರ್ಮೊಲೆಯಿತ್ತ ಅಸುರಿಯಳ ಸಂಹರಿಸಿ | ಮರಳಿ ಅವಳಿಗೆ ಉತ್ತಮ ಗತಿಯನಿತ್ತೆ | ದುರಳ ಶಕಟಾಸುರನ ಚರಣ ದುಂಗುಟದಲ್ಲಿ | ತರಳಾಟದಿಂದ ಮರ್ದಿಸಿದೆ ಎಲೆ ಭಾಪುರೆ 1 ವ್ರಜ | ಪುರವ ಪಾಲಿಸಿದೆ ಕಾಳಿಂಗನೈದು | ಸಿರದಲ್ಲಿ ತುಳಿದು ರಮಣ ದ್ವೀಪಕೆ ಕಳುಹಿ | ಪರಿಪರಿಯ ಖಳರ ಮರ್ದಿಸಿದೆ ಎಲೊ ಭಾಪುರೆ 2 ಕರೆಯ ಬಂದಾ ಕ್ರೂರ ಭಕ್ತನಿಗೆ ಯಮುನೆಯಲಿ | ಕರುಣದಿಂದಲಿ ನಿಜರೂಪ ತೋರಿ | ಮುರಿದು ಧರಿಗೆ ವರಿಸಿದೆ ಕಂಸನ ಎಲೆ ಭಾಪುರೆ 3 ವನಧಿಯೊಳು ಪುರ ಬಿಗಿದು ಕಾಲಯವನನ ಸದೆದು | ಅನಿಲ ಸುತನಿಂದ ಮಾಗಧನ ಕೊಲ್ಲಿಸಿ | ವನಿತೆಯರ ಸೆರೆ ಬಿಡಿಸಿ ಸೂತತನವನೆ ವೊಹಿಸಿ | ಫಲ್ಗುಣಗೆ ವಿಶ್ವರೂಪವ ತೋರಿದೆ ಎಲೊ ಭಾಪುರೆ 4 ಗುರು ಭೀಷ್ಮ ಶಲ್ಯ ಶಕುನಿ ಸುಬಲ ಭಗದತ್ತ | ತರಣಿಸುತ ದುಶ್ಶಾಸ ಕೌರವೇಶಾ | ಎರಡು ಬಲ ವ್ಯಾಜ್ಯದಲಿ ಭೂಭಾರನಿಳುಹಿ ಸಾ | ವಿರ ತೋಳ ಖಳನ ಭಂಗಿಸಿದೆ ಎಲೊ ಭಾಪುರೆ5 ದ್ವಾರಕಾಪುರದಲ್ಲಿ ನಾರದಗೆ ಸೋಜಿಗವ | ತೋರಿದೆ ಒಬ್ಬೊಬ್ಬ ನಾರಿಯಲಿ | ನಾರಿಯರ ಕೂಡ ಬಲು ಕ್ರೀಡೆಗಳನಾಡಿ ಅ | ವರ ಸಂತಾನವನು ಪಡದೆ ಎಲೊ ಭಾಪುರೆ 6 ವರ ಚಂದ್ರಹಾಸ ಮಿಗಿಲಾದ ಭೂಪಾಲಕರ | ಕರೆಸಿ ಪಾಂಡುವರ ಯಾಗವನೆ ಮುಗಿಸಿ | ಹರುಷದಲಿ ಯದುಕುಲವಾಸ ಮಾಡಿದೆ | ಪರಮ ಪುರುಷ ವಿಜಯವಿಠ್ಠಲನೆ ಎಲೆ ಭಾಪುರೆ 7
--------------
ವಿಜಯದಾಸ
ರಾಜಮುಖೀ ಬೇಗ ಪ. ಚಿತ್ರವಿಚಿತ್ರಮಾಗಿ ಮೆರೆವ ರತ್ನಖಚಿತ ಮಂಟಪದಿ ಕೆತ್ತನೆಯ ಹಸೆಯಮೇಲೆ ರತ್ನಗಂಬಳಿಯ ಹಾಸಿ 1 ಪರಿಪರಿಯ ರಾಗದಿಂದ ತರುಣಿಯರು ನಿನ್ನ ಪಾಡಿ ಕರೆಯುತಿಹರೋಳ್ ಕರುಣೆಯಿರಿಸಿ ಅರಸನೊಡನೆ ಸರಸದಿಂದ2 ಪಂಕಜಾಕ್ಷಿ ನಿನ್ನ ಚರಣಕಿಂಕರರ ಮೊರೆಯ ಕೇಳಿ ಕನಕಪೀಠದಲ್ಲಿ ಕುಳಿತು ಕಾಂಕ್ಷಿತಾರ್ಥವಿತ್ತು ಸಲಹು 3 ಪರಮಪುರುಷ ಶೇಷಶೈಲವರದನರಸಿ ನಿನ್ನ ಗುಣವೆ ಸ್ಮರಿಸಿ ಸ್ಮರಿಸಿ ಕರೆಯುತಿರುವ ತರಳೆಯರಂ ಪೊರೆಯೆ ತಾಯೆ4
--------------
ನಂಜನಗೂಡು ತಿರುಮಲಾಂಬಾ
ರಾಜೀವದಳನೇತ್ರ ರಾಮಚಂದ್ರನೆ ಶುಭ- ನಾಮಧೇಯನೆ ನಿನಗಾನಮಿಸುವೆನು ಪ ರಾಮರಾಕ್ಷಸಕುಲ ಭಯಂಕರ ರಾಮದಶರಥ ಪುತ್ರನೆ ವರ ಸಾಮಗಾನ ವಿಲೋಲ ಶ್ರೀವರ ರಾಮ ಭರತ ಶತ್ರುಘ್ನ ಪಾಲಕ ಅ.ಪ ಸುರರೆಲ್ಲ ನೆರೆದು ಋಷಿವರರೆಲ್ಲ ಒಂದಾಗಿ ವರ ಕ್ಷೀರಾಂಬುಧಿಯ ಸಾರುತ ವೇಗದಿ ಪರಮಾತ್ಮ ನಿನ ಕಂಡು ಪರಿಪರಿ ಸ್ಮರಿಸುತ ನೆರೆದರು ದೇವ ಗಂಧರ್ವ ನಾರದರೆಲ್ಲ ಗರುಡ ಗಮನನೆ ಉರಗಶಯನನೆ ಪರಮ ಪುರುಷನೆ ಪುಣ್ಯಚರಿತನೆ ತ್ವರದಿ ಎಮ್ಮಯ ಮೊರೆಯ ಕೇಳೆಂದು ಭರದಿ ಪ್ರಾರ್ಥನೆ ಮಾಡುತಿಹರು 1 ಖೂಳ ದೈತ್ಯರು ನಮ್ಮ ಬಾಳಗೊಡರೊ ದೇವ ಭಾಳ ವ್ಯಾಕುಲರಾಗಿ ದು:ಖಿಪೆವು ಕೇಳಿ ತಡಮಾಡದೆ ಪಾಲಿಸಿ ಸಲಹಯ್ಯ ಶ್ರೀಲೋಲ ಶ್ರೀವರ ಶ್ರೀವತ್ಸಲಾಂಛನ ಶ್ರೀಶ ಶ್ರೀ ಭೂದೇವಿ ರಮಣನೆ ಮಾತುಳಾಂತಕ ಮದನಜನಕನೆ ವಾಸುದೇವನೆ ಭಜಿಪ ಭಕ್ತರ ಸೋಸಿನಲಿ ರಕ್ಷಿಸುತ ಪೊರೆಯುವೆ 2 ಭಕ್ತವತ್ಸಲ ಸ್ವಾಮಿ ಭಕ್ತರ ಸುರಧೇನು ಯುಕ್ತ ಮಾತುಗಳಾಡಿ ಸಂತಯಿಸಿ ಸತ್ಯ ಸಂಕಲ್ಪನು ಮತ್ತವರನು ಕಳುಹಿ ಸತ್ಯಸಂಧನ ದಶರಥನುದರದಿ ಪುಟ್ಟಿ ಮತ್ತೆ ವಿಶ್ವಾಮಿತ್ರ ಬರಲು ಅರ್ಥಿಯಲಿ ಯಾಗವನೆ ನಡೆಸಲು ಸುತ್ತಿ ಬರುವ ಸುರರನೆ ಸದೆದು ಮತ್ತೆ ಯಾಗ ನಿರ್ವಿಘ್ನ ಮಾಡಿದ 3 ಸೀತಾಸ್ವಯಂವರಕ್ಕಾಗಿ ಬರುತಿರಲಾಗವರು ಗೌತಮ ಸತಿಯ ಶಾಪಹರಿಸಿ ಪಾತಕಿ ತಾಟಕಿಯನು ಕೊಂದು ಹರುಷದಿ ನಿ- ರ್ಭೀತನಾಗಿ ಮಿಥಿಲಾಪುರಕೆ ಸೇರಲು ಬಂದು ಆತ ಲಕ್ಷ್ಮಣನೊಡನೆ ಶಿವಧನು ನೀತಿಯಿಂದೆತ್ತುತಲಿ ಸೀತೆಯು ಪ್ರೀತಿಯಲಿ ವನಮಾಲೆ ಹಾಕಲು ಆಕೆಯ ಕೈಪಿಡಿದ ರಾಮನೆ 4 ರಾಮಲಕ್ಷ್ಮಣ ಭರತ ಶತ್ರುಘ್ನರಿಗೆ ಲಗ್ನ ನೇಮದಿಂದಲಿ ಮಾಡಿ ಕಳುಹಲಾಗ ಸಾಮಜವರ ಅಯೋಧ್ಯಾಪುರದಿ ಭಕ್ತ- ಸ್ತೋಮವನೆರಹಿ ರಾಜ್ಯಾಭಿಷೇಕವ ನಡಸೆ ಆ ಮಹಾಮುನಿ ಸ್ತೋಮ ಸುರಗಣ ರಾಮನಿಗೆ ಪಟ್ಟವೆನುತ ಹರುಷಿಸೆ ಆ ಮಹಾಕೈಕೆ ವರವ ಬೇಡುತ ರಾಮನಿಗೆ ವನವಾಸವೆನಲು 5 ವನವನ ಚರಿಸುತ ಘನರಕ್ಕಸರ ಕೊಂದು ವನಜಾಕ್ಷಿ ಮಾಯಾಮೃಗವೆ ಬೇಡಲು ವನಮೃಗ ಬೆನ್ನಟ್ಟಿ ತರುವೆನೆನುತ ಪೋಗಿ ಬಣಗು ರಾವಣ ಸೀತಾಹರಣವ ಮಾಡಲು ಕುರುಹು ಕಾಣದೆ ಸೀತೆಯ ವನವನದಿ ಚರಿಸುವ ಸಮಯದಲಿ ಕಪಿ ವರರ ಸೈನ್ಯವ ಕಳುಹಿ ಮುದ್ರಿಕೆ ಇತ್ತು ಜನಕ ಜಾತೆಯ ನೋಡಿ ಬರಲು 6 ಕಡಲ ಕಟ್ಟುತ ಸೈನ್ಯ ನಡಿಸಿ ಯುದ್ಧವ ಮಾಡೆ ಬಿಡದೆ ರಾವಣ ಸಹಿತೆಲ್ಲರನು ಕೊಂದು ಕಡು ಭಕ್ತನಿಗೆ ಲಂಕಾಪುರದಲಿ ಪಟ್ಟವ ಕಟ್ಟಿ ಮಡದಿ ಸಹಿತ ಪುಷ್ಪಕವನೇರಿ ಬರುತಿರೆ ಸಡಗರದಿ ಹನುಮಂತ ಭರತಗೆ ಒಡೆಯ ಬರುತಿಹನೆಂದು ಪೇಳಲು ಕಡುಹರುಷದಿ ಅಯೋಧ್ಯೆಯನಾಳಿದ ಕಡಲೊಡೆಯ ಕಮಲನಾಭ ವಿಠ್ಠಲನೆ 7 ಬಂದ ಶ್ರೀರಾಮಚಂದ್ರ ಭಾಗವತರ ಕೂಡಿಇಂದಿರೆ ಜಾನಕಿ ಸೌಮಿತ್ರಿ ಸಹಿತದಿ
--------------
ನಿಡಗುರುಕಿ ಜೀವೂಬಾಯಿ
ರಾಧಾಕೃಷ್ಣ ಮುರಾರಿ ಜಯ ಜಯ ವೇದ ವೇದ್ಯನೆ ವಿಷ್ಣು ಜಯ ಜಯ ಮೋದತೀರ್ಥ ಸುವಂದ್ಯ ಜಯ ಜಯ ಮಾಧವಾ ಮಧುಸೂದನಾ ಪ ಶ್ರೀಧರಾ ಪ್ರದ್ಯುಮ್ನ ಜಯ ಜಯ ಮತ್ಸ್ಯ ಜಯ ಜಯ ಕೂರ್ಮ ಜಯ ಜಯ ಭೂಧವ ದಾ-ಮೋದರಾ 1 ನಾರಸಿಂಹ ಉ-ಪೇಂದ್ರ ಜಯ ಜಯ ಚಾರುವಾಮನ ಪೋರ ಜಯ ಜಯ ಶ್ರೀ ತ್ರಿವಿಕ್ರಮ ವೀರ ಜಯ ಜಯ ಭಾರ್ಗವಾ-ದ್ವೀಜ ಪೋಷಕಾ 2 ರಾಮ ಲೋಕೋ-ದ್ಧಾರ ಜಯ ಜಯ ಬುದ್ಧ ಜಯ ಜಯ ಶ್ರೀಮನೋಹರ ಕಲ್ಕಿ ಕಲಿವೈರಿ 3 ಈಶ ರಸ ಅನಿ-ರುದ್ಧ ಜಯ ಜಯ ದೋಶಹರ ಸಂ-ಕಷ್ರ್ಣ ಜಯ ಜಯ ಶ್ರೀಶಹರಿ ಹೃಷಿಕೇಶ ಜಯ ಜಯ ಕೇಶವಾ ನಾರಾಯಣಾ 4 ಬಾದರಾಯಣ-ದತ್ತ ಜಯ ಜಯ ವೇಧ ಅಚ್ಚುತ-ಕಪಿಲ ಜಯ ಜಯ ಮಧ್ವಗುರು ಮಹಿ-ದಾಸ ಜಯ ಜಯ ಅಧೋಕ್ಷಜ 5 ಶ್ರೀ ಜನಾರ್ಧನ-ಋಷಭಜಯ ಜಯ ನೈಜತೇಜಾ ನಂತ ಜಯ ಜಯ ವಾಜಿವದನ ಇಂ-ಇಂದ್ರ ಜಯ ಜಯ ರಾಜ ಭಕುತರ ಭೋಜ ಸುರರಾಜ 6 ಅಜ ಧನ್ವಂತ್ರಿ ಜಯ ಜಯ ಪೃಶ್ನಿ ಗರ್ಭ ಮುಕುಂದ ಜಯ ಜಯ ಚೆನ್ನ ಬೋಧಕ ಹಂಸ ಜಯ ಜಯ ಶಿಂಶುಮಾರ ಸುಮೋಹಿನಿ 7 ಪಾಂಡುರಂಗ ವಿ-ಠೋಬ ಜಯ ಜಯ ತೊಂಡವತ್ಸಲ-ವರದ ಜಯ ಜಯ ಗಂಡುಗಲಿ ತಿ-ಮ್ಮಪ್ಪ ಜಯ ಜಯ ರಂಗನಾಥ ಪ-ರಾದ್ಯನಂತನೆ 8 ವಿಶ್ವತೈಜಸ-ಪ್ರಾಜ್ಞ ಜಯ ಜಯ ಶಶ್ವದೇಕನೆ-ತುರಿಯ ಜಯ ಜಯ ಶ್ರೀಶ “ಶ್ರೀ ಕೃಷ್ಣ-ವಿಠಲ” ಜಯ ಜಯ ಗೋವಿಂದಾ ಪುರು-ಷೋತ್ತಮಾ 9
--------------
ಕೃಷ್ಣವಿಠಲದಾಸರು
ರಾಮ ಗೋವಿಂದ-ಹರಿ-ಕೃಷ್ಣ ಗೋವಿಂದ ಕೃಷ್ಣ ಗೋವಿಂದ- ಹರಿ-ರಾಮ ಗೊವಿಂದ ಪ ರಾಮ ರಾಮ ಕೃಷ್ಣಕೃಷ್ಣ _ ಕೃಷ್ಣಕೃಷ್ಣ ರಾಮರಾಮ ರಾಮ ಕೃಷ್ಣ ರಾಮರಾಮ _ ಕೃಷ್ಣ ರಾಮ ಕೃಷ್ಣ ಕೃಷ್ಣ ಅ.ಪ. ಮತ್ಸ್ಯಕೂರ್ಮ ಭೂವರಾಹ _ ಜೈ ಜೈ ವಾಮನ ನಾರಸಿಂಹ ತ್ರಿವಿಕ್ರಮ _ ಶರಣು ಉಪೇಂದ್ರ 1 ಬುದ್ಧ ಕಲ್ಕಿ _ ಭೃಗುಜ ಜಯೇಶ ವಾಸುದೇವ ಹೃಷಿಕೇಶ _ ಕೇಶವಾಚ್ಯುತ 2 ಅಧೋಕ್ಷಜ ಅನಿರುದ್ಧ ಶ್ರೀಧರ ವೇದವ್ಯಾಸ ಕಪಿಲದತ್ತ _ ಮಧುಸೂದನ 3 ತೈಜಸ ಪ್ರಾಜ್ಞತುರ್ಯ-ಬ್ರಹ್ಮ ಧಾಮ ಪೃಶ್ನಿಗರ್ಭ ಮಹಿದಾಸ _ ಪುರುಷೋತ್ತಮ 4 ಅಜಪರಶ್ರೀನಿವಾಸ _ ಸಾಸಿರಾನಂತ ಶಿಂಶುಮಾರ _ ಸಚ್ಚಿದಾನಂದ 5 ನಾರಾಯಣ ಜನಾರ್ದನ _ ಹಂಸ ಪ್ರದ್ಯುಮ್ನ ಮಾಧವ 6 ಅಪ್ಪ ಉರಗಾದ್ರಿ ವಾಸ _ ವೆಂಕಟೇಶ ಅಪ್ರಮೇಯ ರಂಗನಾಥ _ ಪಾಂಡುರಂಗ 7 ಸತ್ಯವ್ಯಕ್ತ ಸತ್ಯನೇತ್ರ _ ಸತ್ಯಪರ ಭಿನ್ನ ನಿತ್ಯತೃಪ್ತ _ ಸತ್ತದಾತ _ ಪುರುಷ ಮಹಾಂತ 8 ಲಕ್ಷ್ಮೀರಮಣ ಕೃಷ್ಣವಿಠಲ _ ಮುಕ್ತರಾಶ್ರಯ ಲಕ್ಷ್ಯಮಾಡೆ ಮುಕ್ತಿ ಕೊಡುವ _ ಭಕ್ತವತ್ಸಲ9
--------------
ಕೃಷ್ಣವಿಠಲದಾಸರು
ರಾಮ ಜಾನಕೀರಮಣ ರಾಜೀವದಳನಯನ ಧಾಮ ನಿಧಿವಂಶ ಸೋಮನಿಗೆ ಪ ಪದುಮಶಾಲೆಯೊಳಗೆ ಪದುಮಗದ್ದುಗೆ ಹಾಕಿ ಪದುಮನಾಭನು ಬಂದು ಕುಳಿತನು ಪದುನುನಾಭನು ಬಂದು ಕುಳಿತನು ಎಡದಲ್ಲಿ ಪದುಮಾಕ್ಷಿ ಪದುಮ ಸಾಧನೆ ಲಕುಮಿ ಒಪ್ಪಿದಳು. 1 ವಾರುಣಿ ಗಿರಿಜೆ ಮೀನಕೇತನ ರಾಣಿ ಇಂದ್ರಾಣಿ ಮಿಕ್ಕಾನಲಿದಾಡುತಲಿ ಮೀನಕೇತನ ರಾಣಿ ಇಂದ್ರಾಣಿ ನಕ್ಕು ನಲಿದಾಡುತಲಿ ಆನಂದದಿ ಬಂದು ಕುಳಿತರು ತಮ್ಮ ಠಾಣೆಗೆ 2 ಚಿನ್ನದ ತಳಿಗೇಲಿ ಎಣ್ಣೆ ಅರಿಶಿಣ ಗಂಧ ಸಣ್ಣ ಕುಂಕುಮ ಜಾತಿ ಕಸ್ತೂರಿ ಪೊಂಗಳಸ ಸಣ್ಣ ಕುಂಕುಮ ಜಾತಿ ಕಸ್ತೂರಿ ಪೊಂಗಳಸ ಹೆಣ್ಣುಗಳ ಮಧ್ಯೆ ಇಳಿಸಿದರು3 ತಂದೆ ತಾತನ ಬಳಿಯ ಮಂದಾಕಿನಿ ವಾಗ್ವಿಯ- ರೊಂದಾಗಿ ಒಡಗೂಡಿ ರಂಗಯ್ಯನ ಕೈಗೆ ಒಂದಾಗಿ ಒಡಗೂಡಿ ರಂಗಯ್ಯನ ಕೈಯೊಳಗೆ ತಂದು ಅರಿಶಿಣ ಎಣ್ಣೆ ಗಂಧವಿತ್ತು4 ತಡಮಾಡಲಾಗದು ಕಡಲಶಯನ ನಿಮ್ಮ ಮಡದಿಯಂಗಕ್ಕೆ ತೊಡೆವುದೆನಲು ಮಡದಿಯಂಗಕ್ಕೆ ತೊಡೆವುದು ಎನಲಾಗಿ ಕಡು ಹರುಷದಿ ಸತಿಯಳ ನೋಡಿದನು 5 ಎನ್ನರಸಿ ಹೊನ್ನರಸಿ ಪ್ರಾಣದರಸಿ ಪಟ್ಟದರಸಿ | ಕನ್ಯೆ ಶಿರೋಮಣಿ ಪಾವನ ದೇಹಿ || ಕನ್ಯೆ ಶಿರೋಮಣಿ ಪಾವನ ದೇಹಳೆ ನಿನ್ನ | ಕನ್ನಡಿ ಮುಖವ ತೋರರಿಷಿಣವ ನಾ ಹಚ್ಚುವೆ 6 ತಂದೆ ನಂದನರಿಗೆ ಬಂಧು ಬಳಗ ಸುತ್ತ | ಹೊಂದಿದ ಜನರಿಗೆ ಹಲವರಿಗೆ || ಹೊಂದಿದ ಜನರಿಗೆ ಹಲವರಿಗೆ ಕದನ | ತಂದು ಹಾಕುವಳೆಂದು ಹಚ್ಚಿದನು 7 ತೂಗಿಸಿಕೊಂಬುವಳೆ ದೌತ್ಯಕ್ಕೆ ಸಲ್ಲುವಳೆ | ಬಾಗಿಲ ಕಾಯಿಸುವಳೆ ಬಲ್ಲಿದರ || ಬಾಗಿಲಕಾಯಿಸುವಳೆ ಬಲ್ಲಿದರನು ಬಿಡದೆ | ಸಾಗರನ ಮಗಳು ಎಂದು ತೊಡೆದನು 8 ಇಂದಿರಾದೇವಿ ಬಾ ಮಂದಿರಾಂಬುಜ ರಾಮ | ಸುಂದರ ಶ್ರೀವಾರಿ ಮಂಗಳಗಾತ್ರೆ || ಸುಂದರ ಶ್ರೀನಾರಿ ಮಂಗಳಗಾತ್ರೆ ಯೆಂದು | ಅಂಗಜ ಜನಕನು ನಗುತಲಿದ್ದ 9 ರಮಣಿಯ ದೇಹಕ್ಕೆ ಕಮಲನಾಭನು ಎದ್ದು | ವಿಮಲಕಸ್ತೂರಿ ಗಂಧವರಿಷಿಣ ಎಣ್ಣೆ || ವಿಮಲ ಕಸ್ತೂರಿ ಗಂಧವರಿಷಿಣ ಎಣ್ಣೆಯ | ಕ್ರಮದಿಂದ ಲೇಪಿಸಿ ಊಟಣಿಸಾರಿ 10 ಸಾಕಾರಗುಣವಂತಿ ತ್ರಿಲೋಕದ ಜನನಿ | ನಾಕಜವಂದಿತಳೆ ನಾಗಗಮನೆ || ನಾಕಜವಂದಿತಳೆ ನಾಗಗಮನೆ ಏಳೂ | ಶ್ರೀಕಾಂತನ ಸೇವೆಯ ಮಾಡೆಂದರು 11 ಅಂದ ಮಾತನು ಕೇಳಿ ಗಂಧ ಅರಷಿಣ ಕೊಂಡು | ನಿಂದು ಸಮ್ಮುಖದಲ್ಲಿ ರಂಗನ ನೋಡಿ | ನಿಂದು ಸಮ್ಮುಖದಲ್ಲಿ ರಂಗನ ನೋಡಿ ಹಿಗ್ಗಿ | ಚಂದ್ರವದನೆ ಪತಿಗೆ ಹಚ್ಚಿದಳು 12 ಗೋವಳರ ಎಂಜಲು ಆವಾಗ ತಿಂದವನೆ | ಮಾವನ್ನ ಕೊಂದವನೆ ಮಾಯಾಕಾರ || ಮಾವನ್ನ ಕೊಂದವನೆ ಮಾಯಾಕಾರನೆ ನಿನ್ನ | ಸೇವೆಗೆ ಶಕ್ತಳೆನುತ ಹಚ್ಚಿದಳು 13 ಬೆಣ್ಣೆ ಮೊಸರು ಕದ್ದು ಹೆಣ್ಣುಗಳ ಕೆಡಿಸಿ | ಮುನ್ನೆ ತೊತ್ತಿನ ಮಗನ ಮನಿಯ ಉಂಡ || ಮುನ್ನೆ ತೊತ್ತಿನ ಮಗನ ಮನಿಯಲುಂಡ ಹಿಂದೆ | ಹೆಣ್ಣಾಗಿ ಇದ್ದವನೆಂದು ಹಚ್ಚಿದಳು 14 ಎನ್ನರಸ ಚೆನ್ನರಸ ಪ್ರಾಣದರಸ ಪಟ್ಟಣದರಸ | ಭಿನ್ನವಖಿಳ ಜೀವಕ್ಕೆನ್ನ ಒಡೆಯ || ಭಿನ್ನವಖಿಳ ಜೀವಕ್ಕೆನ್ನ ಒಡೆಯ ಸಲಹಿಂದು | ಚೆನ್ನಾಗಿ ಅರಿಷಿಣ ಗಂಧ ಹಚ್ಚಿದಳು 15 ನಿತ್ಯ ಕಲ್ಯಾಣ ಪುರುಷೋತ್ತಮ ಸರ್ವೇಶ | ಸತ್ಯಸಂಕಲ್ಪ ಸಿದ್ಧ ಅಪ್ರಮೇಯಾ || ಸತ್ಯಸಂಕಲ್ಪ ಸಿದ್ಧ ಅಪ್ರಮೇಯನೆಂದು | ಮಿತ್ರೆ ಸರ್ವಾಂಗಕ್ಕೆ ಹಚ್ಚಿದಳು 16 ದೇವಿ ದೇವೇಶಗೆ ಈ ಉರುಟಣೆಯಿಲ್ಲ | ಆವಾವ ಬಗೆ ಎಲ್ಲ ತೋರಿಸುತ್ತ || ಆವಾವ ಬಗೆ ಎಲ್ಲ ತೋರಿ ವಧು-ವರಗಳಿಗೆ | ಹೂವು ಬಾಸಿಂಗವ ರಚಿಸಿದರು17 ಅಸುರ ವಿರೋಧಿ ವಸುದೇವನಂದನ | ಪಶುಪತಿ ರಕ್ಷಕ ಪರಮ ಪುರುಷ || ಪಶುಪತಿ ರಕ್ಷಕ ಪರಮ ಪುರುಷ ಎಂದು | ಹಸನಾಗಿ ಲೇಪಿಸಿ ಇತ್ತ ಜನರ 18 ಶೃಂಗಾರವಂತೇರು ರಂಗ ಶ್ರೀಲಕುಮಿಗೆ | ಮಂಗಳಾರತಿ ಎತ್ತಿ ಹರಸಿದರು || ಮಂಗಳಾರತಿ ಎತ್ತಿ ಹರಸಿ ದೇವರಮನೆಗೆ | ಅಂಗನೆಯಳ ಸಹಿತ ನಡೆಯೆಂದರಾಗ 17 ಎತ್ತಿಕೊಂಡನು ರಂಗ ಚಿತ್ತದ ವಲ್ಲಭೆಯ | ಮತ್ತೆ ಸುಗಂಧಿಯರು ಹೊಸ್ತಿಲೊಳಗೆ || ಮತ್ತೆ ಸುಗಂಧಿಯರು ಹೊಸ್ತಿಲೊಳಗೆ ನಿಂದು | ಪತ್ನಿಯ ಹೆಸರು ಪೇಳೆಂದರು ಆಗ 20 ಬೇಗ ಮಾರ್ಗವ ಸಾರಿ ತೂಗಲಾರನು ಇವಳ | ಸಾಗಿ ಪೋಗುವನೆಂದು ಪೇಳುತಿರಲು || ಸಾಗಿ ಪೋಗುವನೆಂದು ಪೇಳುತಿರಲು ಸ್ತ್ರೀ ಕೂಟ | ತೂಗವದೆಂತು ನಾಳೆ ನುಡಿಯೆಂದರು 21 ನಕ್ಕು ಸಂತೋಷದಲಿ ರುಕ್ಮಿಣಿ ಎಂದನು | ಅಕ್ಕಯ್ಯ ಪೇಳೆಂದು ಹೆಮ್ಮಕ್ಕಳೆಲ್ಲ || ಅಕ್ಕಯ್ಯ ಪೇಳೆಂದು ಹೆಮ್ಮಕ್ಕಳೆಲ್ಲ ಎನಲು | ಚಕ್ರಪಾಣಿ ಎಂದು ಪೇಳಿದಳು ಲಕುಮಿ 22 ಗಂಡ ಹೆಂಡತಿ ಪೋಗಿ ದಂಡ ಪ್ರಣಾಮಮಾಡಿ | ಮಂಡಲದ ಚರಿತೆ ತೋರಿದರು ಆಗ || ಮಂಡಲದ ಚರಿತೆ ತೋರಿ ವಧು-ವರಗಳಿಗೆ | ಕಂಡವರಿಗೆ ಮದುವೆಯೆನಿಸಿದರು 23 ದಂಪತಿಗಳು ಒಲಿದು ಇಂಪಾಗಿ ಉರುಟಣಿ | ಸೊಂಪಾಗಿ ಮಾಡಿದರು ಅನೇಕವಾಗಿ || ಸಂಪತ್ತು ಕೊಡುವನು ವಿಜಯವಿಠ್ಠಲರಾಯಾ 24
--------------
ವಿಜಯದಾಸ
ರಾಮ ರಾಮ ಶ್ರೀ ರಘುರಾಮ ನೀಲಮೇಘ- ಶ್ಯಾಮ ನಿಸ್ಸೀಮ ಕಾಮಿತಾರ್ಥವಕರೆದತಿ- ಪ್ರೇಮದಿಂದ ಪಾಲಿಸುವುದು ನಿನ್ನ ನಾಮ ಪ ಕಲ್ಲೋದ್ಧಾರಕ ಕರುಣಾಳು ರಾಮ ಬಿಲ್ಲನೆತ್ತಿದ್ದ ಬಿರುದಾತ ರಾಮ ಸೊಲ್ಲು ಸೊಲ್ಲಿಗಿರಲು ಹರಿನಾಮ ಚೆಲ್ಲ್ಯಾಡುವ ದಯ ಅವರಲ್ಲಿ ಪ್ರೇಮ 1 ಧೀರಪುರುಷನೆ ದಿಗ್ವಿಜಯ ರಾಮ ವಾರಿಧಿಯ ಕಟ್ಟಿದ್ವನಜಾಕ್ಷ ರಾಮ ಕ್ರೂರರಾಕ್ಷಸರನು ಕೊಂದು ಲಂಕಾ ಸೂರೆಯನು ಮಾಡಿದಂಥ ನಿಸ್ಸೀಮ 2 ದುಷ್ಟರಾವಣಶತ್ರು ಶ್ರೀರಾಮ ಹುಟ್ಟಿ ಭಾನುವಂಶದಿ ಸೀತಾರಾಮ ಮುಟ್ಟಿಭಜಿಸೆ ಸಜ್ಜನರಿಗೆ ಭೀಮೇಶ- ಧಾಮ 3
--------------
ಹರಪನಹಳ್ಳಿಭೀಮವ್ವ
ರಾಮನ ನೆನ ಮನವೇ-ಹೃದಯಾ-ರಾಮನನೆನೆ ಮನವೇ ಪ ಸದ್ಗುಣ ಧಾಮನಾ ಸೀತಾ ಅ.ಪ. ದಶರಥ ನಂದನನಾ-ಧರಣಿಯೊಳಸುರರ ಕೊಂದವನ ಪಶುಪತಿ ಚಾಪವ ಖಂಡಿಸಿಮುದದಿಂ ವಸುಮತಿ ಸುತೆಯಂ ಒಲಿದೊಡಗೂಡಿದ-ರಾಮನ 1 ತಂದೆಯ ಮಾತಿನಲಿ-ವನಕೈತಂದು ಸರಾಗದಲಿ ಬಂದ ವಿರಾಧನ ಕೊಂದು ನಿಶಾಚರಿ ಯಂದವಳಿದು ಖಳವೃಂದವ ಸವರಿದ 2 ಸೀತೆಯನರಸುತಲಿ-ಕಬಂಧನ ಮಾತನು ಸರಿಸುತಲಿ ವಾತನಮಗನೊಳು ಪ್ರೀತಿಯಿಟ್ಟು ಪುರುಹೂತನ ಸುತನಂ ಘಾತಿಸಿ ದಾತನ-ರಾಮನ 3 ತರಣಿ ತನಯನಿಂದ-ಕಪಿಗಳ ಕರೆಸಿ ವಿಲಾಸದಿಂದ ತರುಣಿಯನರಸಲು ಮರುತನ ಮಗನಿಗೆ ಬೆರಳುಂಗುರವನು ಗುರುತಾಗಿತ್ತನ-ರಾಮನ4 ಗುರುತು ಕೊಂಡು ಅರಿಪುರವನು ಸುಟ್ಟುರುಹಿದ ವಾನರ- ವರನಿಗೆ ಸೃಷ್ಠಿಪಪದವಿತ್ತಾತನ-ರಾಮನ 5 ಶರನಿಧಿಯನು ಕಟ್ಟಿ-ಶತ್ರುನಿಕರವನು ಹುಡಿಗುಟ್ಟಿ ಶರಣನ ಲಂಕೆಗೆ ಧೊರೆಯನು ಮಾಡಿ ಸಿರಿಯನಯೋಧ್ಯಗೆ ಕರೆತಂದಾತನ-ರಾಮನ 6 ಸರಣಿಯ ಲಾಲಿಸುತ ಶರಣಾಭರಣ ಪುಲಿಗಿರಿಯೊಳು ನೆಲೆಸಿದವರದವಿಠ್ಠಲ ಧೊರೆ ಪರಮೋದಾರನ-ರಾಮನ 7
--------------
ಸರಗೂರು ವೆಂಕಟವರದಾರ್ಯರು
ರಾಮರಾಮ ರಾಮ ರಾಮಸೀತಾರಾಮ ದಶರಥನಂದನ ರಾಮ ದಯಮಾಡು ಶ್ರೀರಾಮ ಪಶುಪತಿ ಪಾಲಕರಾಮ ಪಾಲಿಸೊಯನ್ನನು ಶ್ರೀರಾಮ ಪ ಭಕ್ತವತ್ಸಲರಾಮ ಪಾಂಡವ ಪಕ್ಷಕರಾಮ ಮುಕ್ತಿದಾಯಕ ರಾಮ ಮುನಿಗಣ ವಂದ್ಯರಾಮ ಯುಕ್ತ ಜಗತ್ಕರ್ತರಾಮ ಇನಕೂಲಭೂಷಣರಾಮ ಮೌಕ್ತಿಕ ಮಣಿಗಣರಾಮ ಮಾಣಿಕ್ಯ ಮುಕುಟಧರರಾಮ 1 ಅಹಿಪಶಯನ ಶ್ರೀರಾಮ ಅನೇಕ ಚರಿತರಾಮ ಅಮಿತ ಪರಾಕ್ರಮ ರಾಮ ಇಹಪರ ಬಾಂಧವ ರಾಮ ವಿಶ್ವಕುಟುಂಬ ರಾಮ ಮಹಾಮಹಿಮ ಶ್ರೀರಾಮ ಮನುಜಾಧಿಪತಿರಾಮ 2 ಭೂತದಯಾಪರರಾಮ ಪುಣ್ಯಪುರುಷ ಶ್ರೀರಾಮ ಪಾತಕ ಭಯಹರರಾಮ ಪತಿತ ಪಾವನ ರಾಮ ನಾಥ ಜಗತ್ರಯರಾಮ ಅನಾಥ ರಕ್ಷಕರಾಮ ಸೇತುಬಂಧನ ರಾಮ ಶಾಶ್ವತ ವಿಗ್ರಹರಾಮ 3 ಮಂಗಳ ಮೂರುತಿ ರಾಮ ಮಧುಸೂದನ ಶ್ರೀರಾಮ ಗಂಗಾಪಿತ ಹರಿರಾಮ ಗೌರೀವಲ್ಲಭರಾಮ ಶೃಂಗಾರಾಂಗ ರಾಮಾಶ್ರಿತಜನ ಪೋಷಿತರಾಮ ರಾಜೀವ ನಯನ ರಾಮ 4 ಸತ್ಯವಾಕ್ಯ ಶ್ರೀರಾಮ ಸದಾನಂದ ರಾಮ ನಿತ್ಯನಿರಂಜನ ರಾಮ ನಿರ್ವಿಕಲ್ಪ ಶ್ರೀರಾಮ ಭೃತ್ಯಕೋಟಿ ಸಂಘರಾಮ ಪುಣ್ಯಪ್ರಭಾವ ಶ್ರೀರಾಮ ದೈತ್ಯಾಂತಕ ಶ್ರೀರಾಮ ತಾಟಕಮರ್ದನ ಶ್ರೀರಾಮ 5 ನವನೀತ ಹೃದಯರಾಮ ಕೋಟಿ ಭಾನುತೇಜ ರಾಮ ಕರುಣಸಾಗರ ರಾಮ ಹಾಟಕಾಂಬರಧರ ರಾಮ ಆದಿನಾರಾಯಣ ರಾಮ ಕೋಟಿಕಂದರ್ಪರೂಪ ರಾಮ ಕೋಮಲಗಾತ್ರರಾಮ 6 ಯದುಕುಲಾಬ್ಧಿಚಂದ್ರ ರಾಮ ಯಶೋದಾನಂದನ ರಾಮ ಮೃದು ಮಧು ಭಾಷಣರಾಮ ಮೂಲರೂಪ ಶ್ರೀರಾಮ ಗದಧರ ವಂದ್ಯರಾಮ ಘನಗಂಭೀರರಾಮ ಪದುಮನಾಭ ಶ್ರೀರಾಮ ಪರಮಕೃಪಾಳುರಾಮ 7 ಸರಸಿಜಭವನುತರಾಮ ಸದ್ವಿಲಾಸ ಶ್ರೀರಾಮ ಕರಿರಾಜ ಪಾಲಕ ರಾಮ ಕಲ್ಮಷ ಪರಿಹರರಾಮ ಸುರಪತಿ ವಂದ್ಯರಾಮ ಸುಜನಾಂತರ್ಯಾಮಿ ರಾಮ ಶರಧಿಶಯನ ಶ್ರೀರಾಮ ಶಾಙ್ರ್ಞಪಾಣಿ ರಾಮ 8 ಕಮಲೋದರರಾಮ ಘನಗುಣಶಾಂತ ರಾಮ ಸಾರಥಿ ರಾಮ ಕಮಲಮನೋಹರ ರಾಮ ಗರುಡವಾಹನರಾಮ ಕಮಲಾಪ್ತ ಶಶಿನೇತ್ರ ಕರ್ಮಸಾಕ್ಷಿ ಭೂತರಾಮ 9 ಈಶ ಜಗತ್ರಯ ರಾಮ ವಿಷ್ಣುಸರ್ವೋತ್ತಮ ರಾಮ ವಾಸುದೇವ ಕೃಷ್ಣರಾಮ ವಸುದೇವ ನಂದನ ರಾಮ ಭೂಸುರಪ್ರಿಯ ಶ್ರೀರಾಮ ಸರ್ವಪೂಜಿತರಾಮ ವಸುಗಿರಿ ವಾಸರಾಮ ವೈಕುಂಠನಿಲಯರಾಮ 10 ನೀಲಮೇಘವರ್ಣರಾಮ ನಿಖಿಲವೈಭವರಾಮ ಪುಂಡರೀಕ ವರದ ರಾಮ ಫಾಲಲೋಚನ ಪ್ರಿಯರಾಮ ಪಾಂಡುರಂಗ ಶ್ರೀರಾಮ ಕಾಲಿಯಾಮರ್ದನರಾಮ ದ್ವಾರಕಾವಾಸರಾಮ 11 ವೇಣುನಾದ ಶ್ರೀರಾಮ ವೆಂಕಟರಮಣ ರಾಮ ಗಾನಲೋಲ ಶ್ರೀ ರಾಮ ಕಂಬುಕಂಧರರಾಮ ಮಾನಿತ ತ್ರಿಭುವನರಾಮ ಮಂದರಧರ ಶ್ರೀರಾಮ ಧೇನು ಪಾಲಕ ರಾಮ ದೇವಾಧಿದೇವ ರಾಮ 12 ಕುಂಭಿನೀಧವ ರಾಮ ಕುಶಲವ ಜನಕರಾಮ ಅಂಬರ ಧ್ರುವನಂತೆ ರಾಮ ಅಜಮಿಳನಂತೆ ರಾಮ ಪೊರೆದಂಥ ರಾಮ 13 ತಾಪತ್ರಯದಲಿ ರಾಮ ನಾತಪಿಸುತಿರುವೆ ರಾಮ ಪರಿ ತಾಪವ ರಾಮ ಹೆದರಿಸಿ ಕಳೆಯೊ ರಾಮ ಭೂಪ ನೀನಲ್ಲದೆ ರಾಮ ಭೂವಿಯೊಳಧಿಕ ನೀನಲ್ಲವೆರಾಮ ಕಾಪಾಡುವ ಭಾರರಾಮ ಕರ್ತನು ನೀನೆ ರಾಮ 14 ನಿತ್ಯ ಕಲ್ಯಾಣರಾಮ ಅಘನಾಶನ ಶ್ರೀರಾಮ ಅನಂತನಾಮರಾಮ ಜಗದೊಳಧಿಕನಾದರಾಮ ಜಯ`ಹೆನ್ನೆವಿಠಲ’ ರಾಮ ಮನ್ನಿಸಿ ಸಲಹೊರಾಮ 15
--------------
ಹೆನ್ನೆರಂಗದಾಸರು
ರುಕ್ಮಿಣಿಯ ದಿವ್ಯತರ ರೂಪವನು ವರ್ಣಿಸಲು ರುಕ್ಮಗರ್ಭಗೆ ವಶವೆ ರೂಢಿಯೊಳಗೆ ಪ ಮಿಕ್ಕ ಮನುಜರ ಮಾತು ಲೆಕ್ಕವೇತರದಯ್ಯಾ ಪಕ್ಷಿವಾಹನ ಕೇಳು ಪರಮಪುರುಷ ಅ.ಪ ಆ ದೇವಿಯಂಘ್ರಿಗಳ ಕೋಮಲಕೆ ಕುರುಹಾಗಿ ಭೂದೇವಿ ತರುಗಳಲಿ ತಳಿರ ತಾಳಿಹಳೊ 1 ಪಾದ ನಖಕಾಂತಿ ತಾ ಪ್ರಕಾಶಿಪ ತೆರೆಯು ಈ ಪುತ್ಥಳಿಯ ಗಮನವಾದರ್ಶ ಹಂಸಕೆ 2 ಬಡನಡುವ ತಾ ನೋಡಿ ಅಡವಿ ಸೇರಿತು ಸಿಂಹ ಚೆಲುವ ನೇತ್ರವ ನೋಡಿ ಚಪಲ ಹೊಂದಿತು ಹರಿಣ3 ನೀಲವೇಣಿಯ ನೋಡಿ ನಾಗಗಳು ನಾಚಿದವುಶ್ರೀ ಲಕುಮಿಯಾ ಕನ್ಯೆ ಶ್ರೀ ಕರಿಗಿರೀಶನರಾಣಿ 4
--------------
ವರಾವಾಣಿರಾಮರಾಯದಾಸರು
ರುದ್ರದೇವರು ಗಂಗಾಧರ ಮಹಾದೇವ ಶಂಭೊಶಂಕರ ಪ. ಗಂಗಾಧರಾ ನಿನ್ನ ನಂಬಿದ ಭಕ್ತರಘ ದ್ಹಂಬ ಕಡಿದು ಹರಿ ಇಂಬ ತೋರೆ ಜಗ ಕಂಬಾರಮಣ ನಿನ್ನ ಸಂಭ್ರಮದಿ ಸ್ತುತಿಪೆ ಅ.ಪ. ಚಾರು ಚರ್ಮಾಂಬರ ಧೀರ ಧರಿಶಿ ಮೆರೆವ ಚಾರು ಭೂತಗಣ ಸಂಚಾರ ಭಸ್ಮಧರಾ ಹಾರ ಕೇಯೂರ ಮಧ್ಯ ಥೋರ ಸರ್ಪ ಭೂಷ ನಿನ್ನ ಚಾರು ರೂಪ ವರ್ಣಿಸಲಳವೆ ಸಾರಸಾಕ್ಷ ಪಾರ್ವತಿಪ್ರಿಯ ಕರುಣಾಕರಸ ದೊರಕದೆ ಶ್ರೀರಮಣನು ಸಿಗ ಕೋರೆ ಹರಿಯ ನಿನ್ನ ಪಾದಪಂಕಜ ಹಾರೈಸುವೆ ಸಂಸಾರ ಶರಧಿಂ 1 ಪರಮಪುರುಷ ಶ್ರೀ ರಾಮನ ತಾರಕ ವರಮಂತ್ರ ಜಪಿಸುವ ವರ ಪಾರ್ವತಿಗರುಹಿ ಧರೆಯೊಳು ಮನುಜರ ವರಮನ ಪರಿಪರಿ ಬೇಡುವೆ ಹರಿಸ್ಮರಣೇಯ ಎನಗೀಯೋ ಕರುಣದಿ ಮಾರ್ಕಂಡೇಯಗೆ ವರವಿತ್ತು ಚಿರಂಜೀವತ್ವವ ಪರಿಪಾಲಿಸಿದಂತೆ ಪರಿಪರಿ ಭಕ್ತರ ಪೊರೆದಂತೆ ಪೊರೆಯೆನ್ನ ಪರಿ ಇತ್ತು 2 ಪಾಶಾಂಕುರಧರ ಪರಮಪವಿತ್ರನೆ ಈಶ ಭಕ್ತರ ಭವಪಾಶದಿಂದುದ್ಧರಿಪೆ ಶ್ರೀಶ ಶ್ರೀ ಶ್ರೀನಿವಾಸನಾಸಕ್ತಿಯಲಿ ಭಜಿಪ ದೋಷರಹಿತ ಮನ ಭಾಸಿ ಪಂಥದಿ ಈವೆ ಕಾಶೀಶ್ವರ ನಿನ್ನ ಲೇಸು ಭಕ್ತಿಲಿ ಸ್ತುತಿಪಾ ದಾಸ ಸಂಗದೊಳಿರಲು ಲೇಸು ಮನವ ಕೊಡು ವಾಸುಕಿಶಯನ ಸುತನ ಸುತನೆ ನಿನ್ನ ಏಸು ದಿನದಿ ಸ್ತುತಿಸುತ ಹಾರೈಸುವೆ 3
--------------
ಸರಸ್ವತಿ ಬಾಯಿ
ಲಕ್ಷ್ಮೀದೇವಿ ನಮಿಸುವೆ ನಮ್ಮಮ್ಮ ಅಮಿತ ಮಹಿಮಳೇ ಆದಿ ಲಕುಮಿಯೇ ಅನುದಿನ ಸಲಹಮ್ಮ 1 ಅಜತ ನಾಮಕನೆ ಆದಿ ದೈವವೆಂದು ತ್ರಿಜಗಮ ತಿಳಿವಂತೆ ನಿಜ ಪುರುಷನಿಗೆ ವನಮಾಲೆಯ ಹಾಕಿ ಭಜಿಸಿದೆ ಬಲವಂತೆ 2 ಕಮಲಜ ಮೊದಲಾದ ಸುಮನಸರಿಂದಲಿ ಕ್ರಮದಿ ಪೂಜೆಗೊಂಬೆ ಸಮನಿಲ್ಲದ ಸೌಭಾಗ್ಯವ ಕೊಡು ನೀ ಮಹ ಜಗದಂಬೆ 3 ಕಮಲವಾರಿಧೆ ಕಮಲಲೋಚನೆ ಕರವೀರ ಪುರಧೀರೆ ವರ ಕದರುಂಡಲಗಿ ಹನುಮಯ್ಯನೊಡೆಯನಉರದೊಳು ಸ್ಥಿರವಾಸೆ 4
--------------
ಕದರುಂಡಲಗಿ ಹನುಮಯ್ಯ
ಲಕ್ಷ್ಮೀದೇವಿಯ ಪ್ರಾರ್ಥನೆ ಶ್ರೀನಿವಾಸನ ಕರುಣಾನು ಸಂಸರಣಿ ಜ್ಞಾನ ಭಕ್ತಿಗಳನ್ನು ಪಾಲಿಸಂಭರಣಿ ಪ. ಅಜಭವಾದಿಗಳಿಗೆ ನಿಜಪದದಾಯಿನಿ ವೃಜಿನ ಸಮೂಹ ನಿವಾರಿಣಿ ಕುಜನ ಕುಠಾರಿಣಿ ಕುಂಜರ ಗಮನೆ ಪಾಲು ದಧಿವಾಸನ ಕೂಡಿ ಸದನದಿ ನೆಲೆಗೊಳ್ಳೆ 1 ಆರಿಗೆ ನಿನ್ನ ಕರುಣಾರಸ ದೊರೆವದೊ ನೀರಜಾಲಯೆ ನಿನ್ನ ಸೇರಿಕೊಂಡಿಹ ಎನ್ನ ವೈರಿ ಜನರು ಬೇಗ ಗಾರಾಗದುಳಿವರೆ 2 ನೀನೊಲಿಯಲೂ ಸರ್ವ ಮಾನವರೊಳಗತಿ ಮಾನ ಮಹತ್ವಾದಿ ಸದ್ಗುಣವೂ ತಾನಾಗಿ ಬರುವವಿಂನೇನೆಂದು ನಿನ್ನ ಮಹಿ- ಮಾನು ವರ್ಣನೆ ಮಾಳ್ಪೆ ದೀನ ದಯಾಕಲೆ 3 ಮಂದಿರದೊಳಗೆ ನೀ ನಿಂದು ನಗುತ ನಲಿ ವಂದ ನೋಡುತ ಮಿತ್ರ ಬಂಧುಗಳು ಮಂದರಧರ ತಾನೆ ನಿಂದು ರಕ್ಷಿಸನೆಂದಾ ನಂದ ಪೂರಿತ ಮನದಿಂದ ಸೇರಿರುವರು 4 ಸರಸಿಜನಾಭ ಶ್ರೀಹರಿಯು ನಿನ್ನನ್ನೆ ಮುಂ ದಿರಿಸಿ ಚತುರ್ವಿಧ ಪುರುಷಾರ್ಥವಾ ಕರುಣಿಪೆನೆಂದು ಕಂಠಸರದ ಮಧ್ಯೂರದಲಿ ಧರಿಸಿ ಶೋಭಿಪ ಶೇಷಗಿರಿವರ ಶಿಖರದಿ 5
--------------
ತುಪಾಕಿ ವೆಂಕಟರಮಣಾಚಾರ್ಯ
ಲಕ್ಷ್ಮೀಪ್ರಿಯ ಕೃಷ್ಣ ಲಕ್ಷ್ಮೀಪ್ರಿಯ ಕೃಷ್ಣ ಲಕ್ಷ್ಮೀಪ್ರಿಯ ಸತ್ಯಭಾಮಾಪ್ರಿಯ ಪ ಗೋವಿಂದ ಮುನಿವಂದ್ಯ ದೇವ ಕೇಶವ ಯೋಗಿ ಭಾವಾಗೋಚರ ಸರ್ವರೂಪ ಶ್ರೀಕೃಷ್ಣ 1 ಪರಮ ಪಾವನ ನಿತ್ಯವರದ ದಾಮೋದರ ಪದ್ಮನಾಭ 2 ನಾರಾಯಣಾಧೋಕ್ಷಜಾನಂತ ಪರಿಪೂರ್ಣ ಶ್ರೀ ರಾಘವೋಪೇಂದ್ರ ಸಂಕರ್ಷಣಾಖ್ಯ 3 ಮಾಧವ ಶ್ರೀ ವಿಷ್ಣೊ ದನುಜಮರ್ದನ ದಿವ್ಯ ರೂಪ ನರಸಿಂಹ 4 ವಾಮನ ಶ್ರೀಧರ ಹೃಷೀಕೇಶ ಶ್ರೀ ಹರೆ ಕಾಮಿತ ಫಲದ ಜನಾರ್ದನ ರಾಮ 5 ವಾಸುದೇವಾಚ್ಯುತ ವಸುದೇವ ನಂದನ ವಾಸುಕಿಶಯನ ತ್ರಿವಿಕ್ರಮ ಭೀಮ 6 ಮಧುಸೂದನಾನಂದಘನ ಪುರುಷೋತ್ತಮಬುಧವಂದ್ಯ ತಿರುಪತಿ ವೆಂಕಟರಮಣಾ 7
--------------
ತಿಮ್ಮಪ್ಪದಾಸರು
ಲಕ್ಷ್ಮೀರಮಣನೆ ರಕ್ಷಿಸೆನ್ನನು ಅಧೋಕ್ಷಜ ಹರಿ ಪ ಮಂದ ಬಿಡಿಸಿ ಸಲಹೋ ದೇವ ಇಂದು ಮುಂದು ಎನಗೆ ನೀ ಗತಿ ಎಂದು ನಂಬಿದೆ ಮಂದರಧರ ಗೋವಿಂದ ಮುಕುಂದ1 ಗರುಡಗಮನ ವಾಸುದೇವ ನಿರುತ ನಿನ್ನ ಭಜಿಪ ಭಕ್ತರ ಸ್ಮರಣೆ ಪಾಲಿಸೊ ಪರಮಪುರುಷ ಹರಿ ಶರಧಿಶಯನ2 ದೇಶದೇಶ ತಿರುಗಿ ಬಹಳ ಬೇಸರದಲೆ ಬಳಲಿದವರ ಕ್ಲೇಶಗಳನೆ ಕಳೆದು ಪರಮೋಲ್ಲಾಸ ನೀಡಿದ ಸಾಸಿರನಾಮದ ಒಡೆಯನೆ ವೆಂಕಟ 3 ಕ್ಷೀರವಾರಿಧಿ ಶಯನದೇವ ಮಾರಪಿತ ಮಹಾನುಭಾವ ಶರಧಿ ಪಾರುಗಾಣಿಸೋ ಪರಿಸರ ನೊಡೆಯನÉ ಉರಗಶಯನ 4 ಶಂಖು ಚಕ್ರಧಾರಿ ಶ್ರೀಹರಿ ಪಂಕಜಾಕ್ಷರೊಳು ವಿಹಾರಿ ಶೌರಿ ಶಂಕರಾನುತ ಪಂಕಜಲೋಚನ ವೆಂಕಟರಮಣ 5 ಕಪಟ ಸೂತ್ರಧಾರಿ ಚಪಲ ಬುದ್ಧಿಯ ಬಿಡಿಸೊ ಶೌರೀ ಅಪರಿಮಿತ ಮಹಿಮೆಗಳ ತೋರಿ ನಟಿಸಿ ಮೆರೆವ ಸಟೆಯಲ್ಲವೊ ನಾರದ ಮುನಿ ಸೇವಿತ 6 ಕಮಲಾಪತೆ ಪ್ರಿಯ ಜೀಯ ಕಮಲಸಂಭವ ಜನಕದೇವ ಕಮಲನಾಭ ವಿಠ್ಠಲ ಕಾಯೋ ಶ್ರಮವ ಹರಿಸೊಸುಮನಸರೊಡೆಯನೆ ಸುರಮುನಿ ಸೇವಿತ 7
--------------
ನಿಡಗುರುಕಿ ಜೀವೂಬಾಯಿ