ಒಟ್ಟು 1372 ಕಡೆಗಳಲ್ಲಿ , 97 ದಾಸರು , 1133 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಾಕೊಲ್ಲ ಯಾಕೊಲ್ಲ ನಲ್ಲೆ ಸಂಪದ ಇವ ಯಾಕೊಲ್ಲ ಯಾಕೊಲ್ಲ ಪ ಅಲ್ಲಬೆಲ್ಲವನೊಲ್ಲ ನಲ್ಲೆಯಾದರವೊಲ್ಲ ಒಲ್ಲನ್ಯಾಕವ್ವ ನಲ್ಲ ಇಲ್ಲದದಕೆ ಒಲ್ಲ ಅ.ಪ ಮೇಲು ಮಾಲು ಒಲ್ಲ ನೀಲದುಪ್ಪರಿಗೊಲ್ಲ ಶಾಲು ಸಕಲಾತೊಲ್ಲ ಶೀಲಮಂಚವನೊಲ್ಲ ಅಮೃತ ಉಂಡು ವೀಳ್ಯ ಮೆಲ್ಲಲು ಒಲ್ಲ ಬಾಲೆ ಯಾಕೊಲ್ಲ ಕೈಯೊಳಿಲ್ಲದದಕೆ ಒಲ್ಲ 1 ರತ್ನದುಂಗುರ ಒಲ್ಲ ಮುತ್ತಿನ್ಹಾರ ಒಲ್ಲ ಪುತ್ಥಳೀ ಚಿನ್ನ ಒಲ್ಲ ಕಸ್ತೂರಿಗಂಧ ಒಲ್ಲ ಉತ್ತಮ ಹಯವನ್ನು ಹತ್ತಿ ಮರೆಯ ಒಲ್ಲ ಮಿತ್ರೆ ಯಾತಕೊಲ್ಲ ಹತ್ತಿರಿಲ್ಲದದಕೊಲ್ಲ2 ಸತಿಯ ಸುತರನೊಲ್ಲ ಅತಿಭಾಗ್ಯವನೊಲ್ಲ ಕ್ಷಿತಿ ಅಧಿಕಾರನೊಲ್ಲ ಛತ್ರ ಚಾಮರನೊಲ್ಲ ಸತತ ಸೌಭಾಗ್ಯನೊಲ್ಲ ಮತಿಮಾನ್ಯವನೊಲ್ಲ ಮತಿಯುತೆ ಯಾತಕೊಲ್ಲ ಗತಿಯಿಲ್ಲದದಕೊಲ್ಲ 3 ಭೋಗಭಾಗ್ಯ ಒಲ್ಲ ರಾಗರಚನೆಯೊಲ್ಲ ಭೋಗದಾಸೆಗೆ ತಲೆದೂಗಿ ಒಲಿಯ ಒಲ್ಲ ತೂಗುಮಂಚವೇರಿ ತೂಗಿಸಿಕೊಳ್ಳಲೊಲ್ಲ ಸುಗುಣೆ ಯಾಕೊಲ್ಲ ಕೈಸಾಗದದಕೆ ಒಲ್ಲ 4 ಜಾಣತನದಿ ಧನಧಾನ್ಯಗಳಿಸಲೊಲ್ಲ ಜಾಣ ಜನರ ಕೂಡಿ ಮಾನ ಪಡೆಯಲೊಲ್ಲ ಜಾಣೆ ಏನಾಶ್ಚರ್ಯ ಏನು ಯಾಕೆ ಒಲ್ಲ ಪ್ರಾಣೇಶ ಶ್ರೀರಾಮ ತ್ರಾಣಕೊಡದದಕೊಲ್ಲ 5
--------------
ರಾಮದಾಸರು
ಯಾತಕಯ್ಯ ತೀರ್ಥಕ್ಷೇತ್ರಗಳುಶ್ರೀ ತುಲಸಿಯ ಸೇವಿಪ ಸುಜನರಿಗೆ ಪ. ಅಮೃತವ ಕೊಡುವ ಹರುಷದೊಳಿರ್ದಕಮಲೆಯರಸನಕ್ಷಿಗಳಿಂದಪ್ರಮೋದಾಶ್ರು ಸುರಿಯೆ ಕ್ಷೀರಾಬ್ಧ್ದಿಯೊಳುಆ ಮಹಾತುಲಸಿ ಅಂದುದಿಸಿದಳು 1 ಪರಿಮಳಿಸುವ ಮಾಲೆಯ ನೆವದಿ ಹರಿಯುದರದಲ್ಲಿಸಿರಿಯೊಲಿಹಳುತÀರುಣಿ ತುಲಸಿ ತಪ್ಪದೆಯವನಚರಣವ ರಮೆ ಭಜಿಸೆ ಭಜಿಪಳು2 ಪೂಜಿಸುವರ ಶಿರದಿ ನಿರ್ಮಾಲ್ಯಗಳವ್ಯಾಜದಿಂದ ಲಕ್ಷ್ಮಿಯ ಕೂಡೆ ಬಹಳುಈ ಜಗದೊಳು ತಾವಿಬ್ಬರಿದ್ದಲ್ಲಿಆ ಜನಾರ್ದನನಾಕ್ಷಣ ತಹಳು 3 ಒಂದು ಪ್ರದಕ್ಷಿಣವನು ಮಾಡಿದವರಹೊಂದಿಪ್ಪುದು ಭೂಪ್ರದಕ್ಷಿಣ ಪುಣ್ಯಎಂದೆಂದಿವಳ ಸೇವಿಸುವ ನರರಿಗೆಇಂದಿರೆಯರಸ ಕೈವಲ್ಯವೀವ 4 ತುಲಸಿಯ ನೆಟ್ಟವನು ಮತ್ತೆ ತನಗೆ ಇಳೆಯೊಳು ಪುಟ್ಟುವ ವಾರ್ತೆಯ ಕಳೆವಜಲವೆÀರೆದು ಬೆಳೆಸಿದ ಮನುಜರಕುಲದವರ ಬೆಳೆಸು ವೈಕುಂಠದಲ್ಲಿ 5 ತುಲಸಿಯೆ ನಿನ್ನ ಪೋಲುವರಾರುಮೂಲದಲ್ಲಿ ಸರ್ವತೀರ್ಥಂಗಳಿಹವುದಳದಲ್ಲಿ ದೇವರ್ಕಳ ಸನ್ನಿಧಾನಚೆಲುವಾಗ್ರದಿ ಸಕಲ ವೇದಗಳು 6 ತುಲಸಿ ಮಂಜರಿಯೆ ಬೇಕಚ್ಚುತಂಗೆದಳಮಾತ್ರ ದೊರಕಲು ಸಾಕವಗೆಸಲುವುದು ಕಾಷ್ಠಮೂಲ ಮೃತ್ತಿಕೆಯುಫಲವೀವನಿವಳ ಪೆಸರ್ಗೊಳಲು 7 ಕೊರಳಲ್ಲಿ ಸರ ಜಪಸರಗಳನ್ನುವರ ತುಲಸಿಯ ಮಣಿಯಿಂದ ಮಾಡಿಗುರುಮಂತ್ರವ ಜಪಿಸುವ ನರರುಹರಿಶರಣರ ನೆಲೆಗೆ ಸಾರುವರು8 ಎಲ್ಲಿ ತುಲಸಿಯ ಬನದಲ್ಲಿ ಲಕ್ಷುಮೀ-ವಲ್ಲಭನು ಸರ್ವಸನ್ನಿಹಿತನಾಗಿನೆಲಸಿಹನಿವಳೆಸಳೊಂದಿಲ್ಲದಿರೆಸಲ್ಲದವಂಗನ್ಯಕುಸುಮದ ಪೂಜೆ 9 ಎಲ್ಲ ಪಾಪಂಗಳೊಮ್ಮೊಮ್ಮೆ ಕೈಮುಗಿಯೆಎಲ್ಲಿ ಪೋಪುದು ದೇಶದೇಶಂಗಳಿಗೆನೆಲ್ಲಿ ಮಲ್ಲಿಗೆ ಮೊದಲಾದ ಸೈನ್ಯಅಲ್ಲೀಗಲು ನಮ್ಮ ಬನದಲೊಪ್ಪಿಹಳು 10 ಹರಿಪಾದಕೆ ಶ್ರೀತುಲಸಿಯೇರಿಸಿದನರರನು ಪರಮ ಪದಕೇರಿಸುವುದುನಿರುತದಿ ತುಲಸಿಯ ಕಂಡರವಗೆನರಕಗಳ ದರುಶನ ಮತ್ತಿಲ್ಲ 11 ಪಡಿ ಆಯಿತು ಗಡನ್ನಿವಳ ವೃಂದಾವನದಲ್ಲಿ ನೆಟ್ಟುಮನೆಮನೆ ಮನ್ನಿಸದವನ್ಯಾವ12 ಕನಸಿನಲಿ ಕಂಡಂತೆ ಇನ್ನೊಂದುಕೊನೆವೆರಸಿದ ಪುಷ್ಪದಿ ಜಪಿಸಿಅನುದಿನ ಹಯವದನನ್ನ ತೀರ್ಥವನು ಕೊಂಡು ನಾ ಧನ್ಯನಾದೆನು 13
--------------
ವಾದಿರಾಜ
ಯಾತಕಿನ್ನಾಥನೆಂಬುವದೂ ಕರುಣಾಳು ಜಗ - ನ್ನಾಥದಾಸರ ಸೇರಿಕೊಂಬುವದೂ ಪ ಭೀತಕರ ಬಹು ಜನ್ಮಕೃತ ಮಹಾ ಪಾತಕಾದ್ರಿಗಳನು ಭೇದಿಸಿ ಮಾತುಳಾಂತಕನಂಘ್ರಿ ಕುಮುದ ನೀತ ಭಕ್ತಿಯ ನೀಡಿ ಸಲಹುವ ಅ.ಪ. ಘೋರಸಂಸಾರ ಪಾರಾವಾರ ದಾಟಿಸುವಾ ಲಕ್ಷ್ಮೀ ನಿತ್ಯ ಭಾರ ವಹಿಸಿರುವಾ ಮೂರು ಲೋಕೋದ್ಧಾರ ದುರಿತೌಘಾರಿ ಕೃಷ್ಣ ಕಥಾಮೃತಾಬ್ಧಿಯ ಸಾರ ತೆಗೆದು ಬೀರಿ ಕರುಣವ ಬೀರಿ ಸುಜನೋದ್ಧಾರ ಮಾಡಿದ 1 ವೇದಶಾಸ್ತ್ರ ಪುರಾಣವೆಲ್ಲವ ತೋರಲಿಟ್ಟಿಹರು ಬಹು ವಿಧ- ವಾದ ದುರ್ಮತವಾದಿಗಳ ಮಾರ್ಗದಿ ಕಟ್ಟಿಹರೊ ಮೋದತೀರ್ಥ ಮತಾನುಗತ ಸದ್ವಾದಪೂರ್ಣ ಪರಮಾತ್ಮದರ್ಶನ ಶ್ರೀದನೊಲಿದು ಕೃಪಾಕಟಾಕ್ಷ ಪ್ರಸಾದ ಒಲಿವ ವಿನೋದಗೊಳಿಸುತ2 ಶ್ರೀರಮಾಪತಿ ಸರ್ವಸುಗುಣಾಧಾರ ದಯದಿಂದಾ ಮುರಲಾ ಸೇರಿ ಬರುವದು ಸರ್ವಸಂಪತ್ಪಾರವಾನಂದ ಕಾರುಣಿಕತನದಿಂದಲಿಂತುಪಕಾರವ ಮಾಡಿ ದೀನ ಜನರಿಗೆ ಧೀರ ಶ್ರೀದವಿಠಲನ ತೋರಿದರು ನಿಜಭಕ್ತಜನರಿಗೆ 3
--------------
ಶ್ರೀದವಿಠಲರು
ಯಾತಕೀಪರಿ ಚಿಂತೆ ಮನದೊಳಗೆ ಭ್ರಾಂತೆ ಪ ನಡಿಯ ಕಲಿಸಿದರ್ಯಾರು ನುಡಿಗಲಿಸಿ ನಿನಗೆ ಒಡಲಿಗಿಕ್ಕಿದರ್ಯಾರು ಷಡುರಸದÀ ಅನ್ನವ ಕಡುಮಮತೆಯೊಳು ಶಿಲ್ಪ ಬಿನ್ನಣಪ್ಪುದು 1 ಪಂಡಜಗೊಲಿದುಗತಿಯಿತ್ತರಿಯು ಸಲಹುವನು ಭಕುತರ ತಲೆಯಮೇಲಿಟ್ಟಮೃತ ಕರವನು ಶ್ರೀನಿಲಯನಿರುತಿರೆ2 ಪಿಂತೆ ರಾವಣನಳಿದಾನಂತ ಮಹಿಮಳ ಚಿಂತೆಯನು ತಾ ಕಳಿದಾ ಚಿಂತಿಪರ ಮನದೊಳು ಸಂತಸದಿ ತಾನುಳಿದಾ ಅಂತರಿಯೆನಿವನ ಸಂತ ಜನರಿಗೆ ಅಂತಕನ ಭಯವೆಂತು ಒಪ್ಪುದು ಹರಿಯ ನೆನೆಯಲು ನಿಂತು ಶ್ರೀ ನರಸಿಂಹವಿಠಲನಂತರಂಗದಿ ಜಪಿಸುವಾತ್ಮಗೆ 3
--------------
ನರಸಿಂಹವಿಠಲರು
ಯಾತರಸುಖ ಸುನೀತಿಯಿಲ್ಲದ ಮಹ ಪಾತಕ ಹೊಲೆಯರಿಗೆ ಪ ಭೂತಳದಲಿ ಬಂದ ರೀತಿಯನರಿಯದೆ ಆತುರದಲಿ ಬಿದ್ದ ನೀತಿಗಡುಕರಿಗೆ ಅ.ಪ ಉತ್ತಮರ್ವಚನದ ಅರ್ಥವನರಿಯದೆ ಕತ್ತೆಯಂತೆ ಕೂಗಿ ಚಿತ್ತಕ್ಕೆ ಬಂದಂತೆ ವರ್ತಿಸಿ ಭವದಿ ಅನರ್ಥಕ್ಕೆ ಗುರಿಯಾಗಿ ಸತ್ಯಜನಕೆ ಕುಂದುತ್ತರಗಳನ್ನಿತ್ತು ಮೃತ್ಯು ಬಲೆಗೆ ಬೀಳ್ವ ಕತ್ತೆ ಮನುಜರಿಗೆ 1 ನಶಿಸಿ ಪೋಗೋ ಮಾಯ ವಿಷಯಲಂಪಟವೆಂಬ ಮುಸುಕಿನೊಳಗೆ ಸೊರಗಿ ನಿಶಿದಿವಯೆನ್ನದೆ ಪುಸಿಯ ಸಂಸಾರವೆಂಬ ವ್ಯಸನದೊಳಗೆ ಕೊರಗಿ ವಸುಧೆಸುಖಕೆ ಮೆಚ್ಚಿ ಮಸಣ ಬುದ್ಧಿಯಿಂದ ಪುಸಿಯ ಬಳಸಿ ಕಾಲನೊಶವಾಗುವವರಿಗೆ 2 ಶೋಧಿಸಿ ನಿಜಪದ ಸಾಧನೆಯೊಳಗಿರ್ದು ಸುಜನ ಸು ಬೋಧ ಪಡೆದು ಭವಬಾಧೆ ರಹಿತರಾಗಿ ಭೇದರಹಿತ ಮಹದಾದಿ ಶ್ರೀರಾಮನ ಪಾದ ನಂಬಿ ಮುಕ್ತಿ ಸಂಪಾದಿಸದವರಿಗೆ 3
--------------
ರಾಮದಾಸರು
ಯಾತ್ರೆಬೇಕು ಕ್ಷೇತ್ರಯಾತ್ರೆ ಬೇಕು ಪ ಸೂತ್ರದಾರ ಪಂಕೇಜನೇತ್ರನ ನೆನೆವುದಕೆ ಅ.ಪ ನೇಮ ಸಾಧನೆಗಾಗಿ ಪ್ರೇಮ ಮೊಳೆವುದಕಾಗಿ ಕಾಮ ಕ್ರೋಧವ ಸುಡುವ ಸ್ಥೈರ್ಯಕಾಗಿ1 ಈ ಮನದ ಚಂಚಲವ ಕಡಿದೊಂದೆ ಮನದಿಂದ ಶ್ರೀಮಾಂಗಿರಿಯ ರಂಗ ನಾಮಾಮೃತವೆಂಬ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಯಾರಿಗುಸುರಲಿ ಸಾರತತ್ವ ವಿ ಚಾರ ಭವದೂರಾ ಪ ಚಾರು ಸೇರಿ ಮುಕ್ತಿಯ ಸೊರೆವಿಡಿವುದಿನ್ಯಾರಿಗುಸುರಲಿ ಅ.ಪ. ಶ್ರೀ ಗುರುನಾಥನ ಕಟಾಕ್ಷದಿ ತ್ಯಾಗಿಸಿ ಸಂಸಾರದ ಗೊಡವೆಯ ಯೋಗಿಯಂದದೊಳಿದ್ದು ಆಗಮ ನಿಗಮಾರ್ಥಕೆ ಸಿಲುಕದ ಯೋಗ ಘನವನೊಳಗೊಂಡಿಹ ಅಂಗದ ಯೋಗಾನಂದದುಯ್ಯಾಲೆಯ ತೂಗಿ ನೆಲೆಗೆ ನಿಂದಿಹ ನಿಜಸುಖವಿನ್ಯಾರಿಗುಸುರಲಿ 1 ಉದರದ ನಾಭಿಯ ನೀಳದ ತುದಿ ಹೃದಯ ವಾರಿಜದೊಳಗಿಪ್ಪ ಶಿವ ಸದನ ಲಿಂಗವ ಕಂಡು ಅದು ಇದು ಬೇರ್ಪಡಿಸದೆ ಹೃದಯದಿ ಚದುರ ಸಾಧು ಸತ್ಪುರುಷರ ಮತದಲಿ ಮುದದಿ ಮುಕ್ತಿ ಮಾನಿನಿಗೆ ಮಂಗಲ ಮದುವೆಯಾದ ಮನಸಿನ ಮಹಾ ಗೆಲವಿನ್ಯಾರಿಗುಸುರಲಿ 2 ನೆತ್ತಿಯೊಳ್ ಹೊಳೆ ಹೊಳೆವ ಚಿದಾ ದಿತ್ಯನ ಪ್ರಕಾಶವ ಕಂಡು ಚಿತ್ತದಿ ನಲಿದಾಡಿ ಉತ್ತಮಾನಂದಾತ್ಮರಸ ಸವಿ ಯುತ್ತ ಚಪ್ಪರಿದು ಶರಣರ ಮೊತ್ತದೊಡನೆ ಕುಣಿಕುಣಿದು ಬ್ರಹ್ಮನ ಗೊತ್ತು ತಿಳಿದ ಗುರುತಿನ ವಿಸ್ತರವಿನ್ಯಾರಿಗುಸುರಲಿ 3 ಕುಂದುವ ಕಾಯದ ಸುಖಿಕೆಳೆಸದೆ ಹೊಂದಿದ ಸರ್ವಾಂಗದ ಶೋಧಿಸಿ ಒಂದೇ ದೇವನೊಳಾಡಿ ವಂದಿಸಿ ಗುರುಹಿರಿಯರ ಚರಣಕೆ ಹೊಂದಿ ಹೊಂದಿ ಓಲಾಡುವ ಅರಿಗಳ ಬಂದಿಯೊಳಗೆ ಸಿಲುಕದೆ ಬ್ರಹ್ಮಾ ನಂದರಸಾಮೃತ ಸವಿದಿಹ ಸುಖವಿನ್ಯಾರಿಗುಸುರಲಿ 4 ಹಲವು ಯೋನಿಯೊಳಗೆ ಹೊರಳ ಕುಲ ಛಲ ಶೀಲವ ಮೂರಡಗಿಸಿ ಸುಲಭ ವಂಶದೊಳುಂಡು ಮಲಿನ ಮಾಯಾಮೋಹಕೆ ಸಿಲುಕದೆ ಬಲೆಯ ಛೇದಿಸಿ ಮುಕ್ತಾಂಜ್ಯದ ಬಗೆ ಇನ್ಯಾರಿಗುಸುರಲಿ 5
--------------
ಭಟಕಳ ಅಪ್ಪಯ್ಯ
ಯಾರು ಇದ್ದರೇನು ನಿನ್ನ ಪಥಕೆ ಬಾರರೋ ಶ್ರೀಹರಿ ಮುರಾರಿ ಎಂದು ಗತಿಯ ನೋಡಿ ಕೊಂಡಿರೋ ಪ ಹೊನ್ನು ಹಣವು ಚಿನ್ನ ಚಿಗುರು ಬಣ್ಣ ಬಂಗಾರವಿರಲು ಎನ್ನವರು ತನ್ನವರು ಎಂದು ಬರುವರೋ ಅನ್ನಕಿಲ್ಲದಿರಲು ಕೆಟ್ಟು ಅಲ್ಲಿ ಪರಿಕಾಲದಲ್ಲಿ ನಿನ್ನ ಕುಶಲವಾರ್ತೆಗಳನು ಮುನ್ನ ಕೇಳರೋ 1 ಇಂದು ಹಬ್ಬ ಹುಣ್ಣಿಮೆಂದು ಬಂಧು ಬಳಗವೆಲ್ಲನೆರೆದು ತಿಂದು ನಿನ್ನ ಹಿಂದೆ ಮುಂದೆ ತಿರುಗು ತಿಪ್ಪರೋ ಬಂಟ ಬಹಳ ಭಾಗ್ಯವೆಲ್ಲ ಕುಂದಿ ಹೋದ ಕಾಲದಲ್ಲಿ ಮುಂದೆ ಸುಳಿಯರೋ 2 ತುಂಬಿ ಇರಲು ಎಡದೆ ಬಿಡದೆ ನೆಂಟರಿಷ್ಟರೆಂದು ತಿಂಬರೋ ವಡವೆ ವಸ್ತು ನಷ್ಟವಾಗಿ ಬಡತನವು ಬಂದ ಬಳಿಕ ಬಿಡುವ ಕೈಯ ನಿನ್ನ ನೊಂದ ನುಡಿಯ ನುಡಿಸರೋ 3 ಮಡದಿ ಮಕ್ಕಳೆಲ್ಲ ನಿನ್ನ ಒಡನೆ ಹುಟ್ಟಿದವರು ಸಹಿತ ಕಡು ಮಮತೆಯಿಂದಲವರು ನೋಡಿ ನಡೆವರೋ ಉಡಲು ತೊಡಲು ಒಡಲಿಗಿಷ್ಟು ಕಡಿಮೆಯಾಗಿ ಎಂದು ಹೊಡೆದು ಕೊಂಬರೋ 4 ಮೃತ್ಯುನಿನ್ನ ಹತ್ತಿರಿದ್ದು ಹೊತ್ತು ವೇಳೆ ನೋಡುತಿಹುದು ವ್ಯರ್ಥವಾಗಿ ಇವರ ನಂಬಿ ಕತ್ತೆ ಕೆಡದಿರೋ ಸತ್ತು ಹುಟ್ಟಿ ಸಾಯ ಬೇಡಿ ಚಿತ್ತದಲ್ಲಿ ಭೀಮನಕೋಣೆ ಗೊತ್ತಿಲಿದ್ದ ಲಕ್ಷ್ಮೀಪತಿಯ ಒತ್ತಿ ಭಜಿಸಿರೋ 5
--------------
ಕವಿ ಪರಮದೇವದಾಸರು
ಯೋಗಿಯಾಗೆಲೆ ಇಲ್ಲ ತ್ಯಾಗಿಯಾಗೆಲೆ ಪ ಹಾಗೂ ಹೀಗೂ ಆಗದೆ ಭವ ರೋಗಿಯೆನಿಸದರೆಲೆ ಗೂಗಿ ಅ.ಪ ಮಾತುಮಾತಿಗೆ ನೀತಿವಚನ ಆತುರಕ್ಕಾಗಿ ಕೂಗಿ ಕೂಗಿ ಪಾತಕದೊಳಗೆ ಬಿದ್ದು ಯಮನ ಯಾತನಕಿಳಿಯಬೇಡ ಭವಿ 1 ಕಾವಿಕಪನಿಲಾಂಛನ್ಹೊದ್ದು ಸೇವೆಗೊಂಡು ಭಾವಗೆಟ್ಟು ಸಾವುಹುಟ್ಟು ಬಲೆಗೆ ಬಿದ್ದು ನೋಯಬೇಡೆಲೆ ನೀಚಮತಿ2 ನಿತ್ಯ ನಿತ್ಯವೆನಿಪ ಪರ ಮಾರ್ಥತತ್ತ್ವಗುರ್ತುಯಿಲ್ಲದೆ ಕತ್ತೆಯಂತೆ ಒದರಿ ವ್ಯರ್ಥ ಮೃತ್ಯುಹೊಂದ ಬೇಡ ಮೂರ್ಖ 3 ಸೋಗುಹಾಕಿ ಸಾಧುಯೆನಿಸಿ ಕಾಗೆಯಂದದಿ ತೀರ್ಥಮುಳುಗಿ ಜಾಗರ ಮಾಡಿ ಪೋಗದಿರಲೆ ನರಕಕಧಮ 4 ಭೂಮಿ ಪ್ರೇಮ ತಾಮಸ ನೀಗಿ ಕಾಮ ಕ್ರೋಧ ಲೋಭ ಜೈಸಿ ಭೂಮಿತ್ರಯಂಗಳೊಡೆಯ ಶ್ರೀ ರಾಮನಾಮ ಭಜಿಸಿ ಮುಕ್ತನಾಗೆಲೊ 5
--------------
ರಾಮದಾಸರು
ರಕ್ಷಿಸು ಶ್ರೀ ಲಕ್ಷ್ಮೀವೆಂಕಟರಮಣ ರಾಕ್ಷಸ ಸಂಹರಣ ಪಕ್ಷೀಂದ್ರವಾಹನ ವಾಸುಕಿಶಯನ ವಾರಿಜದಳನಯನಪ. ತ್ರ್ಯಕ್ಷಾದಿ ವಿಬುಧಪಕ್ಷ ಪರಾತ್ಪರ ಸುಕ್ಷೇಮನಿಧಿ ಕೃಪೇಕ್ಷಣದಿಂ ಸದಾಅ.ಪ. ವೇದಬಾಹಿರರಾಗಿ ಖಲರು ಬಹು ಬಾಧಿಸುವರು ಸಾಧನೆಯೆಲ್ಲ ಕೆಡಿಸುವರು ರಿಪುಗಳಾರ್ವರು ಆದಿಮೂರ್ತಿ ತವಪಾದಾಶ್ರಯ ಸು- ಬೋಧಾಮೃತರಸ ಸ್ವಾದುಗೊಳಿಸುತಲಿ1 ಸರ್ವಾಪರಾಧಂಗಳ ನೀ ಕ್ಷಮಿಸು ಸುಜನರನುದ್ಧರಿಸು ಪೂರ್ವಾರ್ಜಿತ ಪಾಪಂಗಳ ಪರಿಹರಿಸು ಸದ್ಭಕ್ತಿಯೊಳಿರಿಸು ಸರ್ವತ್ರ ವ್ಯಾಪ್ತ ಸಂತಕೃತ ಸ್ತೋತ್ರ ದುರಿತ ದುರ್ಗನಿಗ್ರಹನೆ2 ಸತ್ಯಾತ್ಮ ಪಾವನ ಪಂಕಜನಾಭ ನೀಲಾಭ್ರದಾಭ ಸತ್ವಾದಿಗುಣವರ್ಜಿತ ಮಹಾಶೋಭ ಶರಣಾಗತ ಸುಲಭ ಚಿತ್ತವಾಸ ಶ್ರೀವತ್ಸಾಂಕಿತ ಪರ- ಮಾರ್ಥಬೋಧ ಮಹತ್ತತ್ತ್ವನಿಯಾಮಕ3 ಪವಮಾನಾಂತರ್ಗತ ಪಾಪ ವಿನಾಶ ಪೊರೆಯೊ ಜಗದೀಶ ಅವಿಕಾರ ಲೀಲಾನಂತವಿಲಾಸ ಶತಸೂರ್ಯ ಪ್ರಕಾಶ ಕವಿಜನಾನಂದಭವನ ಭವಭಯಾ- ಮಾಧವ ಮಧುಸೂದನ4 ಚಿತ್ರಾಖ್ಯಪುರಮಂದಿರ ಸುಖರೂಪ ಯಾದವ ಕುಲದೀಪ ಕರ್ತಾಕಾರಯಿತ ಸುಗುಣಕಲಾಪ ಪರಮ ಪ್ರತಾಪ ಸುತ್ರಾಣ ಲಕ್ಷ್ಮೀನಾರಾಯಣ ಪರ ವಸ್ತು ಶಾಶ್ವತ ಪವಿತ್ರ ಚರಿತ್ರ5
--------------
ತುಪಾಕಿ ವೆಂಕಟರಮಣಾಚಾರ್ಯ
ರಕ್ಷಿಸೋ ಜಗನ್ನಾಥದಾಸ ರಕ್ಷಿಸೋ ರಕ್ಷಿಸು ಗುರು ಜಗನ್ನಾಥದಾಸ ಪಕ್ಷಿವಾಹನನ ನಿಜದಾಸ ಮು ಮುಕ್ಷು ಮಾರ್ಗವ ತೋರ್ದಧೀಶ ನೀನೆ ಪ್ರ ತ್ಯಕ್ಷ ಪ್ರಹ್ಲಾದನನುಜ- ||ಅಹಾ|| ಈ ಕ್ಷಿತಿಯೊಳು ಸುರಶ್ರೇಷ್ಠನೆನಿಸಿ ವಿ ಶಿಷ್ಟರ ಮನೋಭೀಷ್ಟವನಿತ್ತ ಹರಿದಾಸ 1 ವೇದವಂದ್ಯನ ನಿಜತತ್ತ್ವ ನಿಜ ನಿತ್ಯ (ಸತ್ಯ) ಪೂರ್ಣ ಬೋಧರ ಗ್ರಂಥ ತತ್ತ್ವ ನೀತಿ ತ ಪ್ಪದೆ ಪೇಳ್ದೆ ಮಹತ್ವ ||ಅಹಾ|| ಮೋದಪಡಿಸಿ ಮೋದತೀರ್ಥರ ಮತ ದು ಗ್ಧಾಬ್ಧಿಸುಧೆಯನಿತ್ತ ಬಾದರಾಯಣನ ದಾಸ 2 ಪ್ರಕೃತಿಬಂಧಕರಾದ ಜನರು ನಿನ್ನ ಪ್ರಾಕೃತಗ್ರಂಥನೊಡಿ ಮೋದಿಪರು ಸತತಾ ಪ್ರಾಕೃತನ ತಾ ವಂದಿಪರು ಜನ್ಮ ಸುಕೃತಕ್ಕೆ ತಾವು ಸಾಧಿಪರು ||ಅಹಾ|| ಸಂಸ್ಕøತ ಭಾಷೆಯ ಪ್ರಕರಣಗಳನೆಲ್ಲ ಪ ರಿಷ್ಕøತ ಪಡಿಸಿ ನೀ ಪ್ರಾಕೃತದೊಳು ತೋರ್ದೆ3 ವಿಪ್ರವರೇಣ್ಯನೆ ನೀನು ಜಗದಿ ಅಪ್ರಮೇಯನ ಪ್ರಮೇಯವನ್ನೂ ಅದಕ್ಕೆ ಸಪ್ರಮಾಣಗಳೆಲ್ಲವನ್ನೂ ತೋರಿ ದಿ ಕ್ ಪ್ರದರ್ಶನ ಮಾಡಿ ಇನ್ನೂ ||ಅಹಾ|| ಸ್ವಪ್ರಯೋಜನ ರಹಿತ ಅಪ್ರಮೇಯನ ಮಹಿಮೆ ಕ್ಷಿಪ್ರ ಭೋಧೆಯಾಗಲ್ ತ್ವತ್ಪ್ರಸಾದವನಿತ್ತೆ4 ನಿನ್ನುಪಕಾರದ ಪರಿಯಾ ನಾನು ಜನ್ಮಜನ್ಮಾಂತರಕೆ ಮರೆಯೆ ನೀನೆ ಘನ್ನ ಶ್ರೀಹರಿದಾಸಾಗ್ರಣಿಯೇ ಇನ್ನು ನಿನ್ನ ಹರಿಕಥಾಮೃತಸಾರಕ್ಕೆಣೆಯೇ ||ಅಹಾ|| ಇನ್ನಿಲ್ಲ ನಿನ್ನಂಥ ಘನ್ನ ಕವಿಗಳ ಕಾಣೆ ಪನ್ನಂಗಶಯನ ಶ್ರೀ ವೆಂಕಟೇಶನ ದಾಸಾ 5
--------------
ಉರಗಾದ್ರಿವಾಸವಿಠಲದಾಸರು
ರಂಗ ಕೊಳಲನೂದುತ ಬಂದಯಶೋದೆಯ ಕಂದ ಪ ಕೊಳಲ ಧ್ವನಿಗೆ ವಿರಹವು ನಾರಿಯರಿಗೆಕಳಕಳÀವಾಗಲು ಕಳಕಳಿಸುತ ಅ.ಪ. ಶೃಂಗಾರ ಕೊಳಲ ಗಾಯನ ಮಾಡೆಸ್ತ್ರೀಯರು ನೋಡೆ ರಂಗನ ಪಾದದಲಿ ಮನ ಹೂಡೆಭೃಂಗಾಮೃತ ತೈಲದಿಅಂಗನೆಯರು ಝಳಕವ ಮಾಡೆದೇವರ್ಕಳು ನೋಡೆತುಂಗವಿಹಂಗ ಭುಜಂಗ ನವಿಲು ಸಾ -ರಂಗ ಗಿಣಿಯು ಮಾತಂಗ ಮರಿಯು ಕು-ರಂಗ ಮಧ್ಯೆ ಚರಣಂಗಳೆಡೆಗೆ ವೇ-ದಂಗಳೆರಗೆ ಕಾಮಂಗಳಲುಗೆ ನೇ-ತ್ರಂಗಳಿಗತಿ ಚಿತ್ರಂಗಳಾಗೆ ಆರಂಗನೂದ್ವ ಸಾರಂಗ ಕೇಳಿ ಋಷಿಪುಂಗಸಹಿತ ತಾವುಗಳು ಬರೆ ನರ-ಸಿಂಗನೂದಿದ ಜಗಂಗಳ ಮೋಹಿಸಿ1 ಬಂಗಾರ ಬಟ್ಟಲೊಳಗೆ ಅಂದುಕ್ಷೀರವ ತಂದು ರಂಗಗರ್ಪಿಸುವೆವು ನಾವೆಂದುಹರುಷದೊಳಂದು ಅಂಗನೆಯರು ಮೈಮರೆತು ನಿಂದುಒಲಿಯಬೇಕೆಂದು ಮಂಗಳ ಮಹಿಮನು ನೀನೆಂದುಅತಿಭಕುತಿಯೊಳಂದುತುಂಗ ವಿಕ್ರಮನ ಪದಂಗಳಿಗೆರಗಲುರಂಗ ನೆಗಹಿ ಕರಂಗಳ್ಹಿಡಿಯ ಮೋ-ಹಂಗಳಿಂದ ವಿರಹಗಳ್ಹೆಚ್ಚಿ ರವಿಕೆಂಗಳುಡೆಯ ಕುಚಂಗಳು ಬಿಟ್ಟಾ-ಲಿಂಗಿಸುತಿರೆ ಶ್ರೀ ಮಂಗಳಾಂಗಗೆ ಪು-ಷ್ಪಂಗಳಿಂದ ವರುಷಂಗಳು ಮೇಲ್ ಸುರ-ರಂಗಳು ಸುರಿಯೆ ಉತ್ತುಂಗ ಮಹಿಮ ಹರುಷಂಗಳ ಬೀರುತ ಅಂಗನೆಯರಿಗೆ 2 ಮಂದಿರ ಮಾನಿನಿಯರು ಬಿಟ್ಟುಮನದಲಿ ಕಂಗೆಟ್ಟುಮಂದರೋದ್ಧರನಲ್ಲೆ ಮನವಿಟ್ಟುಕರೆಕರೆಯ ಬಿಟ್ಟುಚಂದದಿ ಕರ್ಪೂರ ವೀಳ್ಯವನಿಟ್ಟುಸಡಗರವ ತೊಟ್ಟುಒಂದಾಗಿ ಚೆದರುತ ತೋಷವ ತೊಟ್ಟುತ್ವರೆ ಬರುವರು ಅಷ್ಟುಅಂದದಿಂದಲಾನಂದವೇರಿ ಮು -ಕುಂದನಂಘ್ರಿ ಮುದದಿಂದ ಸ್ಮರಿಸಿ ಬರು-ವಂದ ನೋಡಿ ಗೋವಿಂದ ಕೊಳಲ ಬಹುಅಂದದೊಳಿಡೆ ಈ ಇಂದುವದನೆಯರುಚಂದ್ರನುದಯವಾದಂತೆ ಆಯ್ತು ಮನಗಂಧ ಕಸ್ತೂರಿ ತಂದು ಆಗ ಹರಿಕಂದರದೊಳಗಿಡೆ ರಂಗವಿಠಲ ದಯದಿಂದ ನೋಡ್ದ ಪುರಂಧ್ರಿಯರನ್ನು3
--------------
ಶ್ರೀಪಾದರಾಜರು
ರಂಗನಾಥನ್ನ ಈ ಕಂಗಳಿಂದಲಿ ಕಂಡು ಹಿಂಡು ಪ. ಮಂಗಳಾತ್ಮಕ ದೇವ ಮಮ ಸ್ವಾಮಿ ಸಲಹೆಂದು ಅಂಘ್ರಿಗಳಿಗೆರಗಿ ನುತಿಪೇ ಸ್ತುತಿಪೇ ಅ. ಮಾಂಡವ್ಯರಿಗೆ ವಲಿದು ಶ್ರೀನಿಕೇತನ ದೇವ ಗಂಡಕೀಶಿಲೆ ರೂಪದಲ್ಲಿ ಅಂಡಜವಾಹನನು ಉದ್ಭವಿಸಿ ಸ್ವರ್ಣಾದ್ರಿ ಎಂಬ ಸುಕ್ಷೇತ್ರದಲ್ಲೀ ಹಿಂಡುಭಕ್ತರ ಸೇವೆ ಕೈಯಕೊಳುತ ಬದಿಯಲ್ಲಿ ನಿಂದು ವಿಗ್ರಹ ರೂಪದಲ್ಲೀ ಕಂಡು ಪುಳಕಾಂಕಿತದಿ ಕರುಣ ಮೂರ್ತಿಯ ನುತಿಸಿ ಕೊಂಡಾಡಿ ದಣಿದೆ ನಿಂದೂ ಇಂದೂ 1 ಶಂಖಚಕ್ರಾಂಕಿತದ ಚತುರ್ಭಜವು ಶ್ರೀವತ್ಸ ಪಂಕಜಾಕ್ಷಿಯರುಭಯದಿ ಶಂಕೆಯಿಲ್ಲದ ಭಕ್ತರಿಗೆ ವಲಿವ ಸೌಂದರ್ಯಾ ಲಂಕಾರ ಉಡಿಗೆ ಮುದದಿ ಪಂಕಜಾಸನ ಮುಖ್ಯದಿವಿಜಗಣ ಸೇವಿತನು ಕಿಂಕರರಿಗೊಲಿವ ದಯದೀ ವಂಖಿ ಬಾಪುರಿ ತೋಳು ಕಡಗ ಕಾಲ್ಗೆಜ್ಜೆಗಳು ಕಂಕಣ ಕಿರೀಟ ನಿಟ್ಟಾ ದಿಟ್ಟಾ 2 ಆಗಮವ ಅಜಗಿತ್ತು ಸುರರಿಗಮೃತವಿತ್ತು ಭೂದೇವಿ ಭಯ ಬಿಡಿಸಿದಾ ಬೇಗ ಕಂಬದಿ ಬಂದು ಮಗುವ ರಕ್ಷಿಸಿ ಬಲಿಯ ಯಾಗದಲ್ಲಿ ಭೂ ಬೇಡಿದಾ ನೀಗಿ ಕ್ಷತ್ರಿಯ ಕುಲ ದಶಶಿರಿನ ಸಂಹರಿಸಿ ಮಾಗಧನ ಬಲವ ಮುರಿದಾ ಅಂಬರ ಕಲ್ಕಿ ಗೋಪಾಲಕೃಷ್ಣವಿಠಲಾ ಮಾಗಡಿ ತಿರುಮಲೇಶಾ ಶ್ರೀಶಾ 3
--------------
ಅಂಬಾಬಾಯಿ
ರಂಗಯ್ಯ ಮನೆಗೆ ಬಂದರೆ ಅಂತ-ರಂಗದಿ ಗುಡಿಕಟ್ಟಿ ಕುಣಿವೆ ನಾ ಪ ಎಳೆ ತುಳಸಿವನ ಮಾಲೆಯು ರಂಗ-ಗೆಳೆ ನೀಲದ ಮೈಯ ಢಾಳವುಪೊಳೆವ ಪೊಂಗೊಳಲೊಪ್ಪೆ, ಚೆಲುವನು ನಮ್ಮನಿಲಯಕ್ಕೆ ಬಂದ ಭಾಗ್ಯವು ನೋಡ 1 ಬಾಡಿದ ಮಾವು ಪಲ್ಲವಿಸಿತು, ಹರಿನೋಡಲು ಜಗವು ಭುಲ್ಲವಿಸಿತುಕೂಡಿದ ಮನದ ತಾಪಗಳೆಲ್ಲ, ಎತ್ತ-ಲೋಡಿತೊ ಹರಿ ಬಂದ ಭರದಿಂದ ನೋಡ 2 ಬಿಸಿಲು ಬೆಳೆದಿಂಗಳಾಯಿತು, ತಾ-ಮಸಹೋಗಿ ಜ್ಞಾನೋದಯವಾಯಿತುಕುಸುಮನಾಭನು ತಾ ಬಂದರೆ ಅಲ್ಲಿವಿಷ ಹೋಗಿ ಅಮೃತವಾಯಿತು ನೋಡ 3 ಹಾವು ನ್ಯಾವಳವಾಯಿತು, ಅಲ್ಲಿದಾವಾನಳ ತಂಪಾಯಿತುಬೇವು ಸಕ್ಕರೆ ಆಯಿತು ನಮ್ಮದೇವಕಿಸುತ ಬಂದರೆ ನೋಡ 4ಜಾಣೇರರಸನೋಡು ರಂಗನು, ಅವತಾನಾಗಿ ಬೆನ್ನ ಬಿಡ ನಮ್ಮನುಏನಾದರೂ ಅಗಲದಲೆ ನಮ್ಮಮಾನಾಭಿಮಾನದೊಡೆಯ ಶ್ರೀ ಕೃಷ್ಣ 5
--------------
ವ್ಯಾಸರಾಯರು
ರಂಗವಲಿದ ಗುರುರಾಯರ ನೀ ನೋಡೋ | ಅಂತರಂಗದಿ ಪಾಡೋ ಭಂಗ ಬಡಿಪ ದುರಿತಂಗಳ ಈಡ್ಯಾಡೋ ಸತ್ ಸಂಗವ ಬೇಡೋ ಅ.ಪ ಹಿಂದೆ ಮೂರೊಂದವತಾರ ಧರಿಸಿದಾತ ಇದು ಹಿರಿಯರು ಮಾತ | ಬಂದ ಮರಳಿ ಮಹೀತಳದಿ ಜಗನ್ನಾಥ ದಾಸಾರ್ಯ ಪ್ರಖ್ಯಾತ || ತಂದೆ ನಮಗೆ ತಿಳಿ ಎಂದೆಂದಿಗು ಎಂದೆಂದಿಗು ಈತ ಆನಂದ ಪ್ರದಾತ 1 ಬಣ್ಣಿಸಲೆನಗಿನ್ನೊಶವೆ ಇವರ ಚರಿಯ ಕಣ್ಣುಗಳಿಂದಲಿ ಕಾಣುತ ಪೂರ್ಣಯ್ಯತಾನಾಗಿ ವಿಧೇಯ ಧನ್ಯನೆನಿಸಿ ಸತ್ಪುಣ್ಯ ಪಡೆದುದರಿಯ ಪುಸಿಯಲ್ಲವೊ ಖರಿಯ 2 ದಾಸವರ್ಯರಾ ವಾಸಗೈದ ಸ್ಥಾನ ಗಯಕಾಶಿ ಸಮಾನ ಲೇಸು ಭಕ್ತಿಯಲಿ ಸೇವಿಸಲನುದಿನ ಕೊಡುವುದುಸುಜ್ಞಾನ ಶ್ವಾನ | ಯಾತಕೆ ಅನುಮಾನ 3 ಸಾರ ನಿರ್ಮಿಸಿರುವ ದೇಹಾಖ್ಯ ರಥವ ಸೊಗಸಿಲಿಂದ ತಾನೇರಿ ನಗುತ ಬರುವ ಚತುರ್ದಿಕ್ಕಿಲಿ ಮೆರೆವ ಮಿಗೆ ವಿರೋಧಿಸುವ ಪಾಪಿಗೆ ಪಲ್ಮುರಿವ ಪೊಗಳುವರಷತರಿವ 4 ಶಾಮಸುಂದರನ ಸುಕಥಾಮೃತಸಾರ | ರಚಿಸಿದ ಬಹುಚತುರ ಪಾಮರ ಜನರ ಪ್ರೇಮದಿ ಉದ್ಧಾರ ಮಾಡಲು ಗಂಭೀರ ಶ್ರೀಮಾನ್ ಮಾನವಿಕ್ಷೇತ್ರನೆ | ನಿಜಾಗಾರವೆಂದೆನಿಸಿದ ಧೀರ 5
--------------
ಶಾಮಸುಂದರ ವಿಠಲ