ಒಟ್ಟು 1233 ಕಡೆಗಳಲ್ಲಿ , 96 ದಾಸರು , 1036 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾಹಾನುಭಾವರೇ ಪ ಸದಮಲಾನಂದ ಪಡಿರೋ ನಮ್ಮವರೇ ಮೊದಲು ವಂದನೆ ಹರಿಗೆ ಅರ್ಪಿಸಿ ಅ.ಪ ಪದುಮನಾಭನ ಸದಮಲಂಘ್ರಿಯ ಅಧಿಕ ನಿಖಿಳದೇವರೊಳಗೆಂದು ಕದಲಗೊಡದಂತೆ ಮನವ ನಿಲ್ಲಿಸಿ ವದನದಿಂ ವಿಧವಿಧದಿ ಪೊಗಳುತ 1 ಆದಿ ಅಂತ್ಯಿಲ್ಲದಾದಿವಸ್ತು ಸಾಧುಸಜ್ಜನಪ್ರೇಮಪೂರ್ಣೇಂದು ವೇದ ವೇದಾಗಮ್ಯ ಮಹ ಪಾದ ಮೇಲೆಂದು 2 ನಿಗಮ ಆಗಮಗಳಿಗೆ ನಿಲುಕದ ಸುಗುಣಸಂತರ ಕರುಣಮಂದಿರ ಬಗೆದು ಭಕುತರ ಭಾವ ನೀಡಲು ರಘು ಶ್ರೀರಾಮಗೆ ಸಾಟಿಯಿಲ್ಲೆಂದು 3
--------------
ರಾಮದಾಸರು
ಮಿಗೆ ಧನ್ಯ ನಾನಾದೆ ಜಗದ ವಳಗೆ ಅಘ ಕಳಿವ ಗುರುಪಾದಯುಗಳ ಕಣ್ಣಲ್ಲಿ ಕಂಡು ಪ ಮುಕುಟ ಮಂಡಿತ ದಿನಪ ಪ್ರಕರ ಸನ್ನಿಭ ಶಿರದಿ ಮಕರಂದ ಮಯವಾದ ಶಿಖದ ಸೊಬಗು ಅಕಳಂಕಮಾದ ಫಾಲಕೆ ವಪ್ಪುವ ತಿಲಕ ಭ್ರುಕುಟಿ ಮಧ್ಯದಿ ಪುಂಡ್ರ ಸುಖದ ದ್ವಯದ್ರಿಕ ಕಂಡು 1 ಹರಿನಾಮ ರವಿಯ ಕಂಡರಳುವೊ ಕರ್ಣಾಖ್ಯ ಸರಸಿರುಗ್ವಗಳು ಚಂದ್ರ ತೆರ ಶೋಭಿಪಾ ವರಕದಪಯುತ ವದನ ಕೊರಳು ಉರುಬಲದ ಭುಜ ಕರ ಹೃದಯ ಎರಡು ಘನ ಗೆರೆಯು ಉದರವ ಕಂಡು 2 ಧಿಟ ಕಟಿತ ಪಟರೋಮ ದಟಿತವಾಗಿಹ ಜಾನು ಚಟುಲಶಿರಿ ಗೋವಿಂದ ವಿಠಲ ನಾಮ ಪಠಿಸಿದಾಕ್ಷಣ ನಟಿಸುವ ಪಾದದ ಕಠಿಣ ಸಂಸಾರ ಸಂಕಟ ಕಳೆವ ರಜಕಂಡು 3
--------------
ಅಸ್ಕಿಹಾಳ ಗೋವಿಂದ
ಮುಖ್ಯಪ್ರಾಣ ಮೂಲಗುರು ಅಹುದೊ ಪ. ಅಹುದೊ ಧರಣಿಯ ಮ್ಯಾಲೆ ದಿವಾಕರನ ಪ್ರಭೆಯಂತೆಅಹುದೊ ಮಧ್ವಮತಕೆ ಬಿರುದು ನೀ ಅಹುದೊಅ.ಪ. ಅಂಜನೆಯ ಗರ್ಭದಲಿ ಉದ್ಭವಿಸಿದ್ಯೊ ನೀನುಸಂಜೀವನವ ತಂದ್ಯೊ ಸಕಲ ಕಪಿಗಳಿಗೆಮಂಜುಭಾಷಣ ನೀನು ಶರಧಿಯನು ದಾಟಿದೆಯೊಕಂಜಾಕ್ಷಿ ಸೀತೆಗೆ ಉಂಗುರವನಿತ್ತೆ 1 ಕುಂತಿಯ ಗರ್ಭದಲಿ ಉದ್ಭವಿಸಿದ್ಯೊ ನೀನುಪಂಥವನಾಡಿ ದಾಯಾದ್ಯರೊಡನೆಕಂತುಪಿತನ ಕೂಡಿ ಕೌರವರ ಗೆಲಿದ್ಯೊಸಂತೋಷದಿಂದ ಸಾಮ್ರಾಜ್ಯ ಕೈಗೊಂಡೆ 2 ಮಧ್ವಾವತಾರದಲಿ ಮುನಿವೇಷವನು ತಾಳಿಅದ್ವೈತವೆಂಬೊ ಅರಣ್ಯವನು ತರಿದೆಮಧ್ವಶಾಸ್ತ್ರವೆಂಬೊ ಮತವ ನಿರ್ಣೈಸಿದೆಮುದ್ದು ಹಯವದನದಾಸ ನೀನಹುದೊ 3
--------------
ವಾದಿರಾಜ
ಮುದದಿ ನಂಬಿದೆನೊ ಹಯವದನನೆ ಪ. ಭಕ್ತರನ್ನು ಭವಸಮುದ್ರದಿಂದ ನೂಕೊಇತ್ತ ಒಂದು ತಿಳಿಯಧ್ಹಾಗೆ ಹೀಗೆ ಇರುವರೊ 1 ಮಾಯಪಾಶದೊಶಕೆ ಕೊಟ್ಟ ಮಾಯಕಾರನ ತೋಯಜಾಕ್ಷ ನಾನಿದಕುಪಾಯ ಕಾಣೆನೊ2 ಸತ್ಯಸಂಧÀನೆಂಬೊ ಬಿರುದು ಎತ್ತಹೋಯಿತೊ ಹಸ್ತಿವರದನೆಂಬೋ ಕೀರ್ತಿ ಸುತ್ತಮೆರೆಸಿತೊ 3 ಗೂಢತನದಿ ಗುಡಿಯ ಮಾಡದಲ್ಲಿ ಇರುವರೆನಾಡಜನರು ನಿನ್ನ ಆಡಿಕೊಳದೆ ಬಿಡುವರೆ4 ಸಿರಿಹಯವದನ ಶೈನ (ಎನ್ನ?) ಗುರು ಶಿರೋಮಣಿಧರೆಯೊಳರಸಿದೆನೊ ನಿನಗೆ ಸರಿಯು ನಾ ಕಾಣೆ 5
--------------
ವಾದಿರಾಜ
ಮುದ್ದುಮುಖದಾತ ನಮ್ಮ ಮುಖ್ಯಪ್ರಾಣನಾಥನೊಸದ್ಗುಣ ವಂದಿತ ವಾಯುಜಾತನೊ ರಾಮದೂತನೊ ಪ. ವೈರಿ ಶೂಲನೊ ಬಹು ಧೀರನೊಮಾನಿನಿ ಸೀತೆಯ ಕಂಡು ಬಂದನೊ ಮುಂದೆ ನಿಂದನೊ 1 ವಾನರ ರೂಪಿಲಿ ಮುದ್ರೆಯಿತ್ತನೊ ವನ ಕಿತ್ತನೊಆ ನಗರವನೆಲ್ಲ ಸುಟ್ಟನೊ ಬಹು ದಿಟ್ಟನೊ 2 ಸಾಗರÀವನು ದಾಟಿದ ಧೀರನೊ ಕಂಠೀರವನೊರಾಗ ತಾಳ ಮೇಳದಲ್ಲಿ ಜಾಣನೊ ಪ್ರವೀಣನೊ 3 ನಂಬಿದ ಭಕ್ತರ ಕಾಯ್ವ ದಾತನೊ ಪ್ರಖ್ಯಾತನೊಅಂಬುಜಾಸನಪದಕೆ ಬಂದು ನಿಂತನೊ ಹನುಮಂತನೊ 4 ಹಯವದನನ ಭಕ್ತ ಚೆಲ್ವ ತೇಜನೊ ಯತಿರಾಜನೊದಾನವಕುಲಕೆ ಬಹು ಭೀಮನೊ ಸಾರ್ವಭೌಮನೊ 5
--------------
ವಾದಿರಾಜ
ಮುನಿದಳ್ಯಾತಕ ನೀರೇ ಪಾರ್ವತಿ ಮಾಡಸವರತಿ ಪ ತಾಪ ಮಿಡಿಯಲಿ ದೇಹ ಕೆಡುವ ದಿದೆಂದು | ಜಡಿಯಲ್ಲಿ ಗಂಗೆಯ ಭರಿಸಿದ | ನಾರು ಧರಿಸಿದ ಈ ದುಗುಡ ತಪ್ಪೇನಿಂದು 1 ಇಂದು ವದನೆಯನ್ನಾ ಪದಕನು | ಅದಾಶೇಷನು ಅವನ ಮುಂದಲೆಯೊಳು | ತಾನೊಂದು ಬಗೆದಳು |2 ಎನಗೆ ನಿನಗೆ ಎರಡ್ಯಾಕೆಂದು | ಆಲಿಂಗನಲಿಂದು | ಅರ್ಧ ತನುವನೆ ನೀಡಿ | ಸಾರಥಿ ಘನ ಕರುಣವ ಮಾಡೀ | 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮುನಿರಾಯರ ಸ್ಮರಣೆ ಮಾಡಿರೊ ಮಧ್ವ ಮುನಿರಾಯರ ಸ್ಮರಣೆ ಪ ಚರಣಕಮಲವ ಭರದಿ ಭಜಿಸುವ ಧರಣಿ ಸುರರಾದರದಿ ಪೊರೆಯುವ ತರಣಿ ಮಂಡಲಗಣವ ಗೆಲಿಯುವ ಹರಿಣವಾಹನನಂಶನಾದ ಅ.ಪ ಕಪಿರೂಪವÀ ಧರಿಸಿ ರಾಮನ ಆಜ್ಞೆಯನು ಶಿರದಲಿ ವಹಿಸಿ ವಾರಿಧಿಯನು ನಿಮಿಷ ಮಾತ್ರದಿ ಲಂಘಿಸಿ ದಶವದನನ ಅಶೋಕವನದಲಿ ಶಶಿಮುಖಿಯ ತಾ ಕಂಡು ವಂದಿಸಿ ದಶರಥ ಸುತನ ವಾರ್ತೆ ಪೇಳಿ ನಿಶಿಚರೇಶನ ಪುರವ ವಹಿಸಿದ 1 ಕುರುಕುಲದೊಳಗೆ ಪುಟ್ಟಿ ಮತ್ಸಾಧಿಪನ ನಗರದೊಳಗೆ ತಾ ಜಟ್ಟಿ ಕಾಳಗದಲ್ಲಿ ಮಲ್ಲರ ತಲೆಯ ಮೆಟ್ಟಿ ದುರುಳ ದುರ್ಯೋಧನನ ಸೇನೆಯು ಬರಲು ಪಶುಗಳ ಕದಿಬೇಕೆಂದು ತಿರುಗಿ ಓಡಿಸುವಂತೆ ಮಾಡಿದ 2 ಪರಬ್ರಹ್ಮ ಅಗುಣನೆಂದು ಜೀವೇಶರಿಗೆ ಬೇಧವೇ ಇಲ್ಲವೆಂದು ಪ್ರಪಂಚಕ್ಕೆ ಸತ್ಯತ್ವ ಯಾವುದೆಂದು ಜಗನ್ಮಿಥ್ಯಾವಾದಿ ಜನಗಳ ನಿಗಮ ಯುಕುತಿಗಳಿಂದ ಖಂಡಿಸಿ ಖಗವಾಹನ ನಾಮಗಿರಿ ಸಿರಿ ನೃಹರಿ ಮೂರುತಿಗರ್ಪಿಸಿದ 3
--------------
ವಿದ್ಯಾರತ್ನಾಕರತೀರ್ಥರು
ಮುರಹರ ನಗಧರ ಪಾಹಿಮಾಂ ಕೃಷ್ಣ ಪ ಪರಮ ದಯಾಕರ ಪಾಹಿಮಾಂ ಕೃಷ್ಣ ಅ.ಪ. ಚರಣ ಸುಸೇವೆಯ ನೀಡೋ ಕೃಷ್ಣ 1 ಭಕ್ತವತ್ಸಲ ಭವನಾಶನ ಸರ್ವ ಶಕ್ತ ನೀನಲ್ಲದಿನ್ಯಾರೋ ಕೃಷ್ಣ 2 ಲೋಕನಾಥ ಜಗದೇಕ ಪರಾತ್ಪರ ರಾಕೇಂದು ವದನ ಶ್ರೀಕಾಂತದೇವ 3
--------------
ಲಕ್ಷ್ಮೀನಾರಯಣರಾಯರು
ಮುರಳಿಯಧರ ಶ್ರೀ ಕೃಷ್ಣನ ನೋಡಲು ಏನೋ ಸಂತೋಷ ಏನೋ ವಿನೋದ ಪ ಹರಿವಳು ಯಮುನೆಯು ಮೆಲ್ಲನೆ ನೋಡಲು ಗೋವಿಂದನನು ಪರಮಾನಂದದಿ ಅ.ಪ ಕೊಳಲೂದಲು ಶ್ರೀಕೃಷ್ಣನು ನಾದದ ಸುಳಿ ಬಾಡುವುದೆಂಬುವ ಭೀತಿಯಲಿ ಜಲ ಮೂಲನು ಬೆಳದಿಂಗಳ ಕರಗಳ ತಳಿರುಗಳಿಂದಲಿ ತಳ ಸೇರಿಸುವ 1 ಶರಧಿ ತರಂಗಗಳೆದ್ದವು ರಂಗನ್ನ ವದನ ಶಕಾಂಕನ್ನ ನೋಡಿ ಅಂಗನೆಯರು ತಮ್ಮಂಗಗಳಲಿ ಭಂಗವ ಪಡೆದರನಂಗನ ಶರದಿ 2 ಭುವನವ ತುಂಬಿತು ಗಗನವು ತುಂಬಿತು ದಿವಿಜರ ಲೋಕಗಳೆಲ್ಲವು ತುಂಬಿತು ಕವಿಗಳು ಬೆರಗಾದರು ವರ್ಣಿಸಲೀ ಸವಿ ಮುರುಳಿಯು ನಾದದ ಪ್ರವಹನನು 3 ತುರುಗಳ ಪಯಧರ ಸ್ರವಿಸಿತು ಕ್ಷೀರವ ಕರೆದರು ಮೋದದ ಕಂಬನಿಯೆಲ್ಲರು ಮರೆತರು ನರಲೋಕದ ಮಂದಿಗಳು ಅರಿತು ಮೋಕ್ಷದ ಸುಖವೆಂತೆಂಬುದ 4 ಈಶನು ಕೈಲಾಸದಲಿ ಕುಣಿದನು ಶೇಷನು ಸಾಸಿರ ಫಣಿಗಳನಾಡಿದ ದೋಷರಹಿತ ವಾಣೀಶನ ವದನ ವಿ ಕಾಸವು ಬೆಳಗಿತು ನಾಕು ದಿಕ್ಕುಗಳ 5 ಆ ಸಮಯವ ಇತಿಹಾಸಗಳಲಿ ಕವಿ ವ್ಯಾಸರಿಗಲ್ಲದೆ ವರ್ಣಿಸಲಳವೆ ಭಾಸುರ ಸುಂದರ ವದನ ಪ್ರಸನ್ನನು ರಾಸಕ್ರೀಡೆಯ ರಸವನು ಹರಿಸುತ 6
--------------
ವಿದ್ಯಾಪ್ರಸನ್ನತೀರ್ಥರು
ಮೂಢನು ನಾನಯ್ಯ ನಿನ್ನನುಬೇಡಲರಿಯೆನಯ್ಯಪ. ದಯಾಸಿಂಧು ಹರಿಯೆ ದಯದಲಿ ನೋಡು ವಜ್ರದಖಣಿಯೆಭಯಪಡುವೆನು ಈ ಭವಸಾಗರದಿ ಅ-ಭಯವ ಪಾಲಿಸೊ ಹಯವದನನೆ ಹರಿ 1 ದಿಕ್ಕುಯಾರು ಇದಕೆ ಪಾಪವು ಉಕ್ಕಿತು ದಿನದಿನಕೆಸೊಕ್ಕಿ ಸಿಲುಕಿದೆನು ಯಮನ ಪಾಶಕೆಚಿಕ್ಕವನನು ನೋಡಕ್ಕರದಲಿ ಹರಿ 2 ಸಿರಿಹಯವದನನ್ನ ಶರಣರ ಶಿರೋಮಣಿರನ್ನಗುರುದೊರೆಯೆ ನಂಬಿದೆ ನಿನ್ನಕರಿಯ ರಕ್ಷಕನೆಂದು ಕರೆವೆನೊ ಮುನ್ನ3
--------------
ವಾದಿರಾಜ
ಮೃತ್ಯುಂಜಯನೇ ಶರಣು ಶಂಕರನೆ ಶರಣು ಶರಣು ಪ ವಾಸವೇ ಕೈಲಾಸ ವಸನವೇ ದಿಕ್ಕುಗಳು ಪೂಸಿಹುದು ಸರ್ವಾಂಗವೆಲ್ಲ ಭಸ್ಮ ನೇಸರಿನ ತೇಜ ಶಶಿಜೂಟ ಗಂಗಾಧರನ ಪಾಸಟಿಯು ನಿನಗೊಬ್ಬರಿಲ್ಲ ಗೌರೀಶ 1 ಪಂಚ ವಿಂಶತಿ ತತ್ವದೂರ ವಿಶ್ವಾಧಾರ ಪಂಚ ಶರಹರ ವಿರಂಚ್ಯಾದಿ ಸಂಸ್ತುತಾ ನಿತ್ಯ ಪ್ರ ಪಂಚ ಮಯನಾದ ಗಿರಿಜೇಶ ವಿಶ್ವೇಶ 2 ಪರಮ ಪುರುಷ ಪರೇಶ ಪರಮ ಗುಣಗಣ ನಿಲಯ ಶರಣ ಜನ ಸುರಧೇನು ವಿಶ್ವವಂದ್ಯಾ ಭವ ಪೂಜ್ಯಸೂರ್ಯ ಕೋಟಿಪ್ರಕಾಶ ಉರಗ ಭೂಷಣ ವೃಷಭಾರೂಢ ಗೌರೀಶ 3 ಭೂತಪತಿ ಭುವನೇಶ ಪ್ರೇತ ನಿಲಯ ನಿವಾಸ ನೂತನದ ಗಜಚರ್ಮ ನಿನಗೆ ವಿಖ್ಯಾತ ಗೀತ ನೃತ್ಯ ವಿಲಾಸ ಮಾತುಳಾಧ್ವರನಾಶ ಭಾತಿ ಕಂಠದಿ ವಿಷವು ಗೌರೀಶ 4 ಧರೆಯೊಳಧಿಕತರ ವರದ ಮೂಲನಿವಾಸ ಕರಿವದನ ನಂದೀಶ ಶಕ್ತಿ ಉಮೆ ಸಹಿತ ಭರದಿಂದ ನೆಲಸಿ ಸೊಪ್ಪಿನ ಸುಬ್ಬಗೆವರವಿತ್ತೆ ದುರಿತವನು ಪರಿಹರಿಸೋ ಶಂಭುಲಿಂಗೇಶ 5
--------------
ಕವಿ ಪರಮದೇವದಾಸರು
ಮೆರೆದೆ ಮಹಿಮೆ ಉದಾರ ನಮ್ಮಗುರು ಭೀಮಸೇನ ಸುಧೀರ ಪ. ಮಂಗಳ ಮಹಿಮ ವಿಹಾರ ಮಾಯವಾದಿಗಳಿಗತಿ ಕ್ರೂರ ಅ.ಪ. ಹರಿಯ[ನಿರೂಪ] ವ ಧರಿಸಿ ಮರುತ ಕುಂತಿಯೊಳವತರಿಸಿಹರನೊಳು ವಾದಿಸಿ ಜೈಸಿ ಹರಿಸರ್ವೋತ್ತಮನೆಂದೆನಿಸಿ 1 ಬಕ ಹಿಡಿಂಬಕ ಕೀಚಕ ಜರಾಸುತರ ಮಣಿಮಂತ ಕೀಚಕ ದುರ್ಜನರಸಕಲ ಕೌರವ ಅತಿರಥರ ಕೊಂದು ಸುಖಪಡಿಸಿದೆ ಸಹೋದರರ 2 ಜ್ಞಾನಭಕುತಿಸಂಪನ್ನ ಅಜ್ಞಾನಾರಣ್ಯಛೇದನ ಮುದ್ದುಜ್ಞಾನೇಂದ್ರ ಹಯವದನನ್ನ ಧ್ಯಾನದೊಳಿರಿಸು ಪ್ರಸನ್ನ 3
--------------
ವಾದಿರಾಜ
ಮೋದ ವಿಠಲ | ಪೊರೆ ಇವಳಾ ಪ ದಾನವಾಂತಕ ಕೃಷ್ಣ | ದೀನರುದ್ಧಾರೀ ಅ.ಪ. ದುರಿತಗಳ ಅಟ್ಟಳಿಯ | ಪರಿಹರಿಸಿ ಸಲಹಯ್ಯಕರುಣಾಳು ನರಹರಿಯೆ | ಮರು ತಂತರಾತ್ಮಶರಣಜನ ವತ್ಸಲನೆ | ಅರಿಗಳನೆ ಪರಿಹರಿಸಿಪೊರೆಯ ಬೇಕೀ ಶಿಶುವೆ | ಕಾರುಣ್ಯ ನಿಧಿಯೇ 1 ಪತಿ ಪ್ರಿಯ ಹರಿಯೆಹದ್ದುವಾಹನದೇವ | ಮಧ್ವಾಂತರಾತ್ಮ 2 ಭಾವಶುದ್ದದಿ ನಾಮ | ಓವಿಭಜಿಸುವಂಥಭಾವಭಕ್ತಿಯನಿತ್ತು | ಕಾಯೊ ಶ್ರೀ ಹರಿಯೇಶ್ರೀ ವರನೆ ಸರ್ವತ್ರ | ತವಸ್ಮರಣೆ ಇತ್ತಿವಳನೀವೊಲಿಯ ಬೇಕಯ್ಯ | ದೇವ ಹಯವದನಾ 3 ಬೋಧ ಮೋದ ಮೋದ ನರಹರಿಯೇ 4 ಭಾರ ನಿನದಿಹುದಯ್ಯಗುರ್ವಂತರಾತ್ಮ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಯಚ್ಚರಿಕೆ ಯಚ್ಚರಿಕೆ ಶ್ರೀ ಸೋದೆಪುರಯಚ್ಚರಿಕೆ ಯಚ್ಚರಿಕೆ ಶ್ರೀ ಸೋದೆಪುರವಾಸಿ ಗುರುಪಾದ ಯಚ್ಚರಿಕೆ ಯಚ್ಚರಿಕೆ ಪ ಶ್ರೀ ತ್ರಿವಿಕ್ರಮ ಲೋಕನಾಥನ ತಂದೆ ಶ್ರೀಪಾದಯಚ್ಚರಿಕೆ ಯಚ್ಚರಿಕೆ ಅ.ಪ. ಗುರುಹಯವದನ ಮನಮುಟ್ಟಿ ಸ್ಮರಿಸಿ ಪೂಜಿಪಶ್ರೀ ಗುರುಪಾದ ಯಚ್ಚರಿಕೆ ಯಚ್ಚರಿಕೆ 1 ಶತಷಣ್ಣವತಿ ಸಪ್ತ ಬ್ರಹ್ಮ ಕಲ್ಪಗಳಲ್ಲಿ ಶ್ರೀಹರಿಯೆ ಮಹ ಮಾರೆತವ ಚರಿಸಿದ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 2 ತಪಚರಿನಿಯರ ಡೃವತ್ತೂ ಷಣ್ಣವತಿ ಲಿಷ್ಟನೇ ಕಲ್ಪದ-ಲಿಲಾತವ್ಯ ವಾಯುಸಾಧನ ಮಾಡುವಾನಂದ ಜ್ಞಾನ ಯೋಗ ಸಿದ್ಧಿಸಿ ಕೊಡುವ ಉದಾರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 3 ಪ್ರಧಾನ ವಾಯು ಪದ ಸ್ವೀಕರಿಪ ಹಂಸವಾಹನ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ4 ಹಿಂದೆ ವಿರಜಸ್ನಾನದಿ ಅಜ್ಞಾನಾತ್ಮಕ ಲಿಂಗದೋಷನಿಶ್ಶೇಷ ಹೊಂದಿದ ಗುರುವಿರಾಜರ ವಾದದ್ವಯ ಯಚ್ಚರಿಕೆ ಯಚ್ಚರಿಕೆ 5 ನಿರ್ಜೀವ ನಿಷ್ಕ್ರಿಯಾ ದಗ್ಧಪಟದಪ್ಪಂತಿರುವ ದೇಹ ಲಿಂಗವ ನಿಮಿತ್ತ ಮಾತ್ರಕೆ ಹರಿಯಿಭಯಿಂ ಧರಿಸಿರುವ ಲಾತವ್ಯ ಗುರುಪಾದ ಯಚ್ಚರಿಕೆ ಯಚ್ಚರಿಕೆ6 ಮುಕ್ತ ಅಮುಕ್ತಿ ಭೇದ ತೋರ್ಪದಕೆ ಶಿರಿಯಿಂದನದಿ ಶಾಲ್ಮಲ ವಾಸಿಯ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 7 ದ್ವಸ್ತ ದುರಾಗಮಿ ಶ್ರೀರಾಜಗುರು ಪಾದಕೆಚ್ಚರಿಕೆ 8 ಅಜ್ಞಾನ ಅಹಂಕಾರ ಭಯ ಮೋಹ ವಿಸ್ಮøತಿ ದುಃಖಾದಿಬಂಧನ ಕಳೆವ ಪ್ರಭುವಾದಕೆಚ್ಚರಿಕೆ 9 ಪತಿ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 10 ತ್ರಿವಿಧ ಜೀವರ ಚತುರ್ವಿಧಶರೀರದಿಯಿದ್ದವರ ಸಾಧನವಾ ಮಾಡಿಸಿ ಜೀವರ ಸುಖದುಃಖಗಳಿಂತಾ ಬದ್ಧರಾಗದೆ ಪೂರ್ಣ ನಿರ್ಲಿಪ್ತರಾಗಿರುವಶ್ರೀಪಾದ ಯಚ್ಚರಿಕೆ ಯಚ್ಚರಿಕೆ11 ತ್ರಿವಾರ ವಿರಜ ಸ್ನಾನವ ಮಾಡ್ವ ಸೌಭಾಗ್ಯ ಪ್ರಾರಬ್ಧಪೊಂದಿರುವ ಗುರು ವಾದಿರಾಜರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 12 ಸತ್ವ ಜೀವರ ಮೋಕ್ಷ ಪ್ರಾಪ್ತಿಗೆ ವಿರಜ ನದಿಯಲಿಸ್ನಾನ ಮಾಡಿಸಿ ಜೀವಸತ್ವರ ಮೋಕ್ಷಕ್ಕಿಡುವ ನಿವ್ರ್ಯಾಜ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 13 ಸುಜೀವರ ಅನಾದಿ ಲಿಂಗ ಅಜ್ಞಾನ ಸ್ವರೂಪ ದೇಹ-ಭಂಗಿಸುವ ಶ್ರೀರಮಾತ್ಮಕ ವಿರಜ ನದಿಯಲಿ ಸ್ನಾನ-ಮಾಡಿ ಸ್ವಲಿಂಗ ವಿಶಿಷ್ಟವಾದ ಅಜ್ಞಾನದಿಂ-ವಿರಹಿತರಾದವರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 14 ಆನಂದವ ವೃಷಭಾವಿ ಆನಂದ ತೀರ್ಥ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 15 ತ್ರಿವಿಧ ಜೀವರಲಿಯಿದ್ದು ತ್ರಿವಿಧಸಾಧನ ಮಾಡಿಸುವ ಭಾವಿ ವಾಯುನಾಮಕ ನತ್ತಾ ಪ್ರದ ಲಾತವ್ಯವಾಯು ವಾದಿರಾಜ ಮಧ್ವ ಮುನಿ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 16 ಆಯಾಯರ ಜೀವರ ಚಲನವಲನಾದಿ ವ್ಯಾಪಾರ ಮಾಡಿಸುವ ಭಾವಿ ಪ್ರಾಣನಾಮಕ ಭೀಷ್ಟಾಪ್ರದ ವಾದಿರಾಜಗುರುಪಾದಯಚ್ಚರಿಕೆ ಯಚ್ಚರಿಕೆ 17 ಚತುರ್ವಿದ ಶರೀರಗಳಲಿದ್ದು ಸಂರಕ್ಷಿಸುವ ಭಾವಿ ಧರ್ಮನಾಯಕಧಾರಣಪ್ರದ ಶ್ರೀ ಗುರುರಾಜರಶ್ರೀಪಾದ ಯಚ್ಚರಿಕೆ ಯಚ್ಚರಿಕೆ 18 ಪ್ರಭುತ್ವವಾರ್ತೈಸಿಜೀರರ ಅವರವರ ಸ್ವರೂಪಯೋಗ್ಯಗತಿ ಕೊಡುವ ಭಕ್ತಿ ಮುಕ್ತಿ ಪ್ರದ ಭಾವಿ ಭಾರತೀ ರಮಣ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 19 ದೇವೋತ್ತಮ ಲಾತ ವಾಯುಸ್ವನಾಮಕೆ ಭಗವಂತಗೇ ನಿತ್ಯನ್ವ ಭಕ್ತರ ಪಾಪ ಮನ್ನಿಸುವಂತೆ ಪ್ರಾರ್ಥಿಸಿ ತಾವು ಮನ್ನಿಸಿ ಕ್ಷಮಿಸುವಲ್ಲಿ ಕ್ಷಮಾ ಸಮುದ್ರರಾದ ಶ್ರೀಗುರುಪಾದಯಚ್ಚರಿಕೆ ಯಚ್ಚರಿಕೆ 20 ಪುಣ್ಯ ಪ್ರದಾನ ಮಾಡುವಲ್ಲಿ ಜೀವರಿಗೆ ಪರಮ ದಯಾಳು ಆರ್ತರಿಗೆ ದಯತೋರುವ ಕೃಪಾನಿಧಿ ಸಜ್ಜನರ ದೋಷ ವಿಚಾರದಿ ಮಹಾ ಸಹಿಷ್ಣುಗಳಾದವರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 21 ಶಿಖಾಮಣಿ ಸಕಲ ತಾತ್ವಿಕ ದೇವತಾ ರಂಜಕ ಆಹ್ಲಾದಕರ ದಾನವ ಭಂಜಕ ಸಂಹಾರ ಕರ್ತರಾದ ಕಾರಣ ಭಾವಿ ಪ್ರಭಂಜನ ವರವಾಜ್ಯರಾದವರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 22 ಸರ್ವದಾ ಅನ್ಯ ಜೀವರು ಕಾಣದಾ ಅಸಾಧಾರಣ ಗುಣ ಕ್ರಿಯಾ ಸ್ವರೂಪರಾದ ವೇದ ಪ್ರತಿಪಾದ್ಯರಾದುದರಿಂದ ಮಹಂತರೆಂದು ಕರೆಸುವ ಭಾವಿ ವಾಯುವಿನ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ23 ಅವರವರ ಸಾಧನಗಳ ಪೂರೈಸಿ ಕೊನೆಗವರ ನಿಜಗತಿ ಪ್ರವರಾದ ಸರ್ವ ಜೀವರಂತರ್ಯಾಮಿ ಸಕಲ ಗುಣ ಸದ್ಧಾಮ ಭಾವಿ ಮರುತ ಗುರುವಾದಿರಾಜರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 24 ಬರುವ ಜಗತ್ತಿನ ಸರ್ವ ಜೀವರಿಗೆಲ್ಲ ಜೀವನ ಪ್ರಾಣ- ವಾಗಿರುವ ಜೀವೋತ್ತಮ ಶ್ರೀ ಭಾವಿ ಬ್ರಹ್ಮ ಮರುತ ವಾದಿರಾಜರ ಶ್ರೀಪಾದದ್ವಯ ಯಚ್ಚರಿಕೆ ಯಚ್ಚರಿಕೆ 25 ಸಕಲ ಜೀವರ ಸಂಜೀವರಾದ ಯಲ್ಲ ಜೀವರ ಜೀವ ಯಲ್ಲಪ್ರಾಣಿಗಳ ಪ್ರಾಣರಾಗಿ ಪ್ರಾಣೆಂದು ಕರೆಸುವ ಭಾವಿ ಮುಖ್ಯ ಪ್ರಾಣ ವಾದಿರಾಜರ ಗುರುಪಾದಕೆಚ್ಚರಿಕೆ 26 ಸದಾಸರ್ವತ್ರ ಭಗವದ್ರಷ್ಟøಗಳಾದ ಬ್ರಹ್ಮದೇವರ ಭೃತ್ಯಣ ಜೀವ ಪರ್ಯಂತ ವ್ಯಾಪ್ತರಾದ ಆಯಾ ಸ್ಥಳದಿದ್ದು ಆಯಾ ಜೀವರ ತಕ್ಕ ವ್ಯಾಪಾರ ಮಾಡುವ ಭಾವಿ ಪೂರ್ಣಪ್ರಜ್ಞರೆನಿಸಿರುವ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 27 ಸಾಕ್ಷಾತ್ರ್ಪತಿಬಿಂಬರಾದ ಕಾರಣ ಭಾವಿ ಮುಖ್ಯ ಪ್ರತಿಬಿಂಬ-ರೆಂದೆನಿಸಿಕೊಂಡ ಗುರುವಾದಿರಾಜ ವಿಭುಪಾದಕೆಯಚ್ಚರಿಕೆ ಯಚ್ಚರಿಕೆ 28 ನಿತ್ಯ ಸಾಯುಜ್ಯ ಸಹ ಭೋಜನದ ಭೋಗ ಹೊಂದುವ ಭಾವಿ ಮರುತ ಶ್ರೀಲಾತವ್ಯ ವಾಯು ಗುರು ಮಧ್ವ ಮುನಿಯ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 29 ಸದನ ಪೂರ್ಣ ಚಂದ್ರವದನರು ಮೋಕ್ಷ ಸಾಮ್ರಾಜ್ಯ ನಿರ್ದುಷ್ಟ ಆನಂದ ಸುಖಸ್ವರೂಪರು ಪರಮ ಪುರುಷಾರ್ಥ ಪಾತ್ರಗಳು ಪುಣ್ಯ ಸ್ವರೂಪ ಪಂಚ ರೂಪಾತ್ಮಕ ಹರಿಯೆ ಪಂಚ ವೃಂದಾವನ ಸ್ವರೂಪದಿಯಿರುವ ರಂಜಪುಣ್ಯ ವೃಂದಾವನದಿ ವಿರಾಜಿಸಿ ಪಂಚ ಪುಣ್ಯ ಧಾರೆಯೆರೆವ ಪಂಚಪ್ರಾಣರಾದ ವಾದಿಗಳ ಪಲ್ಮುರಿವ ವಾದಿರಾಜಮಧ್ವ ಮುನಿಯ ಶ್ರೀ ಭಾವೀ ಭಾರತೀದೇವಿ ತನ್ನ ಮೃದು ಕೋಮಲ ತೊಡೆಯ ಮೇಲೆ ಪತಿಯ ಶ್ರೀಪಾದಪದ್ಮದ್ವಯವಿಟ್ಟು ವತ್ತೂವ ಅಜ್ಞಾನ ತಿಮಿರಕೆ ಮಾರ್ತಾಂಡ ವಾದ ಜ್ಞಾನಾನಂದ ದಾಯಕ ಶ್ರೀಗುರುಪಾದ ಯಚ್ಚರಿಕೆ ಯಚ್ಚರಿಕೆ30 ಜಗಜ್ಜೀವನಗಳಿಗೆ ಮುಖ್ಯ ಕಾರಣ ಪ್ರಾಣ ಆ ಪ್ರಾಣವಿಲ್ಲದಿರೆ ಸ್ವತಃ ಚಲಿಸಲು ಅಸಮರ್ಥ ಸರ್ವ ಜಗತ್ತಿಗೆ ಪ್ರಾಣ ವಿಜ್ಞಾನ ಪ್ರಾಣಾಗ್ನಿ ಶಬ್ದವಾಜ್ಯ ಈ ಭಾವಿಮುಖ್ಯ ಪ್ರಾಣ ಜಗಜ್ಜೀವನಗಳಿಗೆ ತಾನೇ ಮುಖ್ಯ ಪ್ರಾಣರೂಪ ಹೀಗೆಂದು ಬಳಿತ್ಥಾ ಸೂಕ್ತ ಅಗ್ನಿ ಸೂಕ್ತದಲಿ ಉಕ್ತ ಈ ಸೂಕ್ತಿಗಳಿಂದ ಪ್ರತಿಪಾದ್ಯರಾದ ಜಗನ್ನೇತ್ರಜಗಜ್ಜೀವನರಾದ ಪಂಚಪ್ರಾಣ-ರೂಪಾತ್ಮಕ ಶ್ವಾಸನಿಯಾಮಕ ಸೋದೆಪುರವಾಸಿ ಭೂತರಾಜರ ಹೃನ್ಮಂದಿರ ವೇದ್ಯ ವೇದ್ಯನುತ ಅಹಿಪ ಖಗಪ ಉಮೇಶಾದಿ ಸುರರಿಗೆ ಚಿಂತಿಸಲು ಅಳವಲ್ಲದ ಅಗಮ್ಯ ಮಹಿಮ ಶ್ರೀ ಪ್ರಭು-ವಾದಿರಾಜರ ನಿರ್ದೋಷ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 31 ಜಿತಣಮ ಸರ್ವಜ್ಞ ಅಶೇಕ್ಷ ಸಂಪದ್ವಿಶಿಷ್ಟ ಸದ್ಗುಣ ಭರಿತ ಪೂರ್ಣ ತೃಪ್ತ ನಿಶ್ಚಲ ಭಕ್ತ ದೃಢವ್ಯೆರಾಗ್ಯಶಾಲಿಚಿರಂಜೀವಿ ಶ್ರೀ ಗುರುವಾದಿರಾಜರ ಶ್ರೀಪಾದ ಪದ್ಮ ನಖರೇಣುಗಳಿಗೆ ಯಚ್ಚರಿಕೆ ಯಚ್ಚರಿಕೆ 32 ಪರಿ ಪರಿ ಕ್ರೀಡೆ-ರಮಿಸಿ ಆ ಆನಂದ ಶ್ರೀ ಹರಿಗೆ ಅರ್ಪಿಪ ಗುರುವಾದಿರಾಜಶ್ರೀಪಾದಂಗಳ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 33 ನಿತ್ಯ ನಿತ್ಯ ಶ್ರೀವರ ಮಾಲೇಶೆಗೆ ಅರ್ಪಿಪ ಭಾವಿಲಾಳೂರ ಶ್ರೀ ಗುರುರಾಜರ ಪಾದಕೆ ಯಚ್ಚರಿಕೆ ಯಚ್ಚರಿಕೆ34 ತನ್ನ ಶ್ರೀಪಾದ ರಜ ಧೆಣಿಯಲಿ ಧರಿಸಿ ಜೀವಿವರ ಹಯವದನ ಪಾದಕರ್ಪಿಸುವೆನೆಂದು ಪಣತೊಟ್ಟು ಜೀವನ್ಮುಕ್ತರನು ಮಾಡಿ ಪರಿಪಾಲಿಪೆನೆಂದು ಧೀರ ವೃಂದಾವನದಿ ಮೆರೆವ ಶ್ರೀಗುರು-ವಾದಿರಾಜರ ಶ್ರೀಪಾದಕೆ ಯಚ್ಚರಿಕೆ ಯಚ್ಚರಿಕೆ 35 ಶ್ರೀ ತ್ರಿವಿಕ್ರಮನ ರಥೋತ್ಸವಕೆ ಬಂದವರಲಿ ಒಂದೊಂದಂಶ ಸುರರ ಪ್ರವೇಶಿಸಿ ಅವರಲ್ಲಿ ತನ್ನೊಂದಂಶದಿಂದ ಸುರರ ಸಾಧನ ಮಾಡಿ ಸುರನರರ ಕೃತ ಕೃತ್ಯರೆನಿಸಿ ಶಿರಿ ಹಯ-ವದನನ ಕಾಣ್ವ ಜ್ಞಾನ ಭಕುತಿ ವೈರಾಗ್ಯ ನಿಷ್ಠಿಯನಿತ್ತು ಬ್ರಹ್ಮ ನಿಷ್ಯ್ಠೆ ಕರೆನು ಮಾಳ್ವ ಶ್ರೀ ಗುರು ಶ್ರೀಪಾದಕೆಯಚ್ಚರಿಕೆ ಯಚ್ಚರಿಕೆ 36 ಶ್ರೀ ಧವಳ ಗಂಗೆಯ ಸ್ನಾನ ಮಾಡುವ ಜ್ಞಾನವೀವ ಶ್ರೀ ಗುರು-ಪಾದಕೆ ಯಚ್ಚರಿಕೆ ಯಚ್ಚರಿಕೆ 37 ವಾಸುದೇವ ಪರಿ ಸ್ತೋತ್ರ ಮಾಡಿರೈ ಜ್ಞಾನಿ-ಗಳಾದವರೆಲ್ಲ ಶ್ರೀ ಗುರುಪಾದದೆಚ್ಚರಿಕೆಯಲಿ ತಂದೆವರದಗೋಪಾಲವಿಠಲ 38
--------------
ಗುರುತಂದೆವರದಗೋಪಾಲವಿಠಲರು
ಯಜನವಾಗಲಿ ನಾನು ಭುಜಿಸುವುದು ಎಲ್ಲ ಪ ಅಜಪಿತನೆ ಅದರ ಅನುಸಂಧಾನವನು ಅರಿಯೆ ಅ.ಪ ದೇಹವೆಂಬುದೆ ಯಜ್ಞಶಾಲೆಯಾಗಿ ಮಹಯಜ್ಞಕುಂಡವು ಎನ್ನ ವದನವಾಗಿ ಆವಹನೀಯಾಗ್ನಿಯು ಮುಖದಲ್ಲಿ ಹೃದಯದೊಳು ಗಾರ್ಹಸ್ಪತೀ ದಕ್ಷಿಣಾಗ್ನಿಯು ಸುನಾಭಿಯಲ್ಲಿ 1 ಅರಿ ಪಂಚಾಗ್ನಿಯೊಳು ಆಕ್ಷಣದಿ ಪ್ರಾಣಾದಿ ಪಂಚರೂಪಗಳು ಹೋತಾಉದ್ಗಾತಾದಿ ಋತ್ವಿಕ್ಕುಗಳಾಗಿ ನಿಂತಿಹರೆಂದು2 ಆಹುತಿಯ ಕೊಡತಕ್ಕ ಶೃಕಶೃಕ್‍ಶೃವಗಳು ಬಾಹುಗಳು ಇಹಭೋಜ್ಯವಸ್ತುವೆಲ್ಲ ಆಹುತಿಯು ದೇಹಗತ ತತ್ವರು ಪರಮಾತ್ಮ ಬ್ರಾಹ್ಮಣರು ಜೀವ ದೀಕ್ಷಿತನು ಬುದ್ಧಿತತ್ಪತ್ನಿ 3 ಅಹಂಮಮತಾದಿ ಅರಿಷಡ್ವರ್ಗಗಳು ವುಹಯಜ್ಞದ ಯೂಪಸ್ಥಂಭದ ಪಶುಗಳು ಅಹರಹ ಬಹ ನೀರಡಿಕೆಯು ಕುಡಿವನೀರೆಲ್ಲವು ಯಜನಕಾರ್ಯದ ಮಧ್ಯ ಪರಿಷಂಚಾಮಿ4 ಇಷ್ಟಾದರನುಸಂಧಾನವನೆ ಕೊಡುಕಂಡ್ಯ ಶ್ರೇಷ್ಠಮೂರುತಿ ಶ್ರೀ ವೇಂಕಟೇಶ ನಿಷ್ಠೆಯೆನ್ನೊಳಗಿಲ್ಲ ಉರಗಾದ್ರಿವಾಸವಿಠಲ ಹೊಟ್ಟೆಹೊರೆವುದು ನಿನಗೆ ತುಷ್ಟವಾಗಲಿ ದೇವ 5
--------------
ಉರಗಾದ್ರಿವಾಸವಿಠಲದಾಸರು