ಒಟ್ಟು 19658 ಕಡೆಗಳಲ್ಲಿ , 137 ದಾಸರು , 8696 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಂಜೀವ ದೀಪ್ತಿಪೂರ್ಣ ಪ. ದೇವ ದೇವರದೇವ ನೀನಹುದೊದೇವಕಿಯೊಳವತರಿಸಿ ಗೋಕುಲವನ್ನುಪಾವನ ಮಾಡಿ ಮಡುಹಿಮಾವನ ಮಧುರಾವನಿಯ ಉಗ್ರಸೇನನಿಗಿತ್ತು ದೈ -ತ್ಯಾವಳಿಯ ಸವರಿಜೀವಸಖನಾಗಿ ಪಾಂಡವರೊಳ್ಪಾರ್ಥಸೇವೆ ಕೈಕೊಂಡು ತರಿದು ಕೌರವರ ದ್ವಾ-ರಾವತಿಯಿಂದ ಹಯಮೇಧಕ್ಕೆ ಬಂದದೇವ ನೀನಹುದೊ 1 ಧರ್ಮಾರ್ಜುನರೆಜ್ಞತುರಗರಕ್ಷಕ ಕೃತ-ವರ್ಮಾದ್ಯರುಗೂಡಿ ನಡೆದು ನಿಲ್ಲುತ್ತಮರ್ಮವರಿದು ಮುರಿದು ಹಂಸಧ್ವಜನಧರ್ಮವನು ತಡೆದುಕರ್ಮವಶದಿಂದ ಬಭ್ರುವಾಹನ ಕೈಯ್ಯಾದುರ್ಮರಣವಾದ ವಿಜಯ ಕರ್ಣಾತ್ಮಜಗೆಪೆರ್ಮೆಯಿಂದಸುವಿತ್ತು ಪೊರೆದ ನಿತ್ಯನಿರ್ಮಲಾತ್ಮನಹುದೊ2 ಪಿಂತೆಬಾಹರ್ಜುನರ ಕಂಡು ತಾಮ್ರಧ್ವ -ಜಂ ತಡೆಯೆ ಬಡದ್ವಿಜನಾಗಿ ಶಿಖಿಕೇತು-ವಂ ತಾನು ಬೇಡಿ ವೀರವರ್ಮನ ಗೆಲಿದುಕುಂತಳೇಂದ್ರಗೊಲಿದುದÀಂತಿಪುರಕ್ಕವರನು ತಂದು ಹಯಮೇಧವಂತು ಮಾಡಿಸಿ ಮೈದುನರ ಕಾಯ್ದಹೊಂತಕಾರಿ ಹಯವದನನೆ ಶ್ರೀ ಲಕ್ಷೀ -ಕಾಂತ ನೀನಹುದೊ 3
--------------
ವಾದಿರಾಜ
ಸಂಜೀವ ಪ ಸುರವೈರಿವಿಪಿನ ದಾವಾ | ನಲ | ಸೂರ್ಯಾನೇಕ ಪ್ರಭಾವ ಅ.ಪ ಕರುಣಾಬ್ಧಿದೀನಬಂಧು | ಕರಿರಾಜ ಕರೆಯೆ ಬಂದು ಸಿಂಧು 1 ಅನುದಿನದಿ ನಿನ್ನಪಾದ ನೆನೆವರಿಗೆ ಕೊಡುವೆ ಮೋದಾ ಘನಮಹಿಮನೆಂದು ವೇದಗಳು ಪೊಗಳುವುದೊ ಶ್ರೀಧ 2 ನತ ಪ್ರೇಮವೆಂಕಟೇಶ ಶುಭನಾಮ ಭಕ್ತಪೋಷ ಚಿಂತಾಮಣಿ ಪುರವಾಸ ಗುರುರಾಮವಿಠಲ ಶ್ರೀಶಾ 3
--------------
ಗುರುರಾಮವಿಠಲ
ಸಂಜೀವ ಬಾ ಈಗ ನಿನ್ನ ಲಾಹ ಭಾವವ ತೋರಿ ನೀಡೆನಗೆ ಭೋಗ ಪ. ಜಾನಕಿವರ ರಾಮ ರಾಜೇಂದ್ರನಡಿಯ ಸೇ- ವಾನು ಸಂಧಾನದಿ ಪಯೋನಿಧಿಯ ದಾಟಿ ದು- ರ್ಮಾನಿ ದಶಕಂಧರನ ಧಿಕ್ಕರಿಸಿ ವನಸಹಿತ ದಾನವರನೆಲ್ಲ ನುಗ್ಗಿಸಿ ಮುದ್ರಿಕೆಯ ಮಾನನಿಧಿಗಿತ್ತು ವಂದಿಸಿದೆ ಮಣಿವರವ ಶ್ರೀನಿವಾಸನ ಪಾದಕರ್ಪಿಸುತ ನಲಿದೆ 1 ಕಟ್ಟಾಜ್ಞೆಯಿಂದ ಕಂಗೆಟ್ಟ ನೃಪವರನು ದಯಾ- ದೃಷ್ಟಿಯಿಂದಲಿ ನೋಡಿ ದುಷ್ಟ ಬಾರ್ಹದ್ರಥನ ಮೆಟ್ಟಿ ಕಿಮ್ಮೀರ ಬಕ ಧಾರ್ತರಾಷ್ಟ್ರಾದಿಗಳ ಕುಟ್ಟಿ ಗದೆಯಿಂದ ಪುಡಿಗೈದೆ ಕ್ರೋಧವಶ ರಟ್ಟುಳಿಯ ನಡುಗಿಸುತ ಹ್ಯೊದೆ ವಾ- ಶಿಷ್ಟ ಕೃಷ್ಣಾನಂದನನೆ ತಾತ್ಸರವ್ಯಾಕೆ ಬರಿದೆ2 ಭಾಗೀರಥೀ ಜನಕ ಭಕ್ತಜನ ಭಯಮೋಕ ನಾಗಗಿರಿನಾಥನನು ನೆಲೆದೋರು ಗತಶೋಕ ಶ್ರೀಗುರುವರಾನಂದತೀರ್ಥಾರ್ಯನೀ ಪರಿಯ ನಿಖಿಳ ಪುರುಷಾರ್ಥ ನಿನ್ನಡಿಗೆ ಬಾಗಿ ಬೇಡುವೆನಯ್ಯ ಭಾರತಕೃತಾರ್ಥ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸಂಜೀವ ಶ್ರೀ ವೆಂಕಟ ನಮ್ಮನು ಪೊರೆವ ಪ ವೈಕುಂಠದಿಂದ ಬಂದು ಶೇಷಾಚಲದಲಿ ನಿಂದುಭಕ್ತರ ಪಾಲಿಪೆನೆಂದು ಅಭಯ ದಯಾಕರ ಸಿಂಧುಭಕುತಿ ಮುಕುತಿಯೀವ ಮತ್ಕುಲದೇವನೆಸಕಲ ಜನಸೇವಿತ ಘನ ಪರಿಪೂರ್ಣನೆವಿಕಸಿತ ಕಮಲನಯನ ಕಂಜನಾಭನೆಪ್ರಕಟಿತ ಶುಭಕೀರ್ತಿಯಿಂದ ಮೆರೆವನೆ 1 ಕ್ಲೇಶ ದುರಿತ ಸಂಹರನೆ2 ಜಯತು ದೋಷವಿನಾಶ ಜಯಮಹಿಮಾ ವಿಶೇಷಜಯತು ಲಕುಮೀ ಪರಿತೋಷ ಜಯ ಶ್ರೀವೆಂಕಟೇಶಜಯ ಕಮಲಜನಕನೆ ಜಯಜಗದೀಶಜಯ ಗಜವರದ ಪಾಲಿತ ಪುಣ್ಯಘೋಷಜಯತು ಜನಾರ್ಧನ ಜಗÀನ್ಮೋಹನ ವೇಷÀಜಯ ರಂಗವಿಠಲ ಕರುಣಾವಿಲಾಸ 3
--------------
ಶ್ರೀಪಾದರಾಜರು
ಸಂಜೀವರಾಯ ಸಾಧುಜನಪ್ರಿಯ ಪ ಭುಂಜಿಪ ಸದ್ಭಕ್ತರ ಸೇವೆಯೊಳಿರಿಸೆನ್ನನು ಅ.ಪ ರಾಮನಾಜ್ಞೆಯಲಿ ಶರಧಿಯದಾಟುತಲಿ | ರಾವಣನ ಪಟ್ಟಣದಿ ಭೂಮಿಜಾತೆಗುಂಗುರವನು ನೀಡುತಲಿ ಆ ಮಹಾಶಿರೋ ಮಾಣಿಕ್ಯವ ಸೀ- ತಾ ಮಹಾದೇವಿಯಿಂದ ಕೈಕೊಂಡ 1 ವನವ ಕೀಳುತಕ್ಷಾದಿ ರಾಕ್ಷಸರನು ವಧಿಸಿ | ಮುದದಿ ದಶಕಂ- ಠನ ತೃಣೀಕರಿಸಿ ವರಪುರವನುದಹಿಸಿ ಇನಕುಲಂಗೆ ವಾರ್ತೆಯ ತಿಳುಹಿಸಿ ನೀ ವನಜ ಸಂಭವನ ಪಟ್ಟವ ಪಡೆದೆ 2 ಕೋಲಾಹಲನಗರ ನಿವಾಸವಗೈಯ್ವೆ ಕುಜನರನು ತರಿವೆ | ಕರು- ಣಾಲವಾಲ ಭಕ್ತರಿಗೀಪ್ಸಿತವೀವೆ ಶ್ರೀಲತಾಂಗಿಪತಿ ಗುರುರಾಮವಿಠಲ ನೋಲಗಿಸುವ ಭಾಗ್ಯವಂತರೊಡೆಯನೆ 3
--------------
ಗುರುರಾಮವಿಠಲ
ಸಜ್ಜನರ ಸಂಗ ನೀಡೊ ಸರ್ವಪಾಲಕನೆ ಮುದ್ದು ಗೋಪಿಯ ಕಂದ ಮೂರ್ಜಗದೊಳ್ವಂದ್ಯ ಪ ಸಾಧುಜನಪ್ರಿಯನೆ ಯಾದವರಿಗೊಡೆಯನೆ ಶ್ರೀದೇವಿ ಅರಸು ಶಿವ ಬ್ರಹ್ಮರಿಗುತ್ತಮನೆ ಶ್ರೀಧರ ಲೋಕಾಧಿಪತಿ ಸದಾನಂದಭರಿತ ನಿನ ಪಾದಪಂಕಜದಿ ನಿಜವಾದ ಭಕುತಿಯ ಕೊಡುವೊ 1 ದುಷ್ಟಜನ ಶಿಕ್ಷಕನೆ ಶಿಷ್ಟರ ಸಂರಕ್ಷಕನೆ ಕಷ್ಟದಾರಿದ್ರ್ಯ ಸಂಹಾರ ಭಯ ಛÉೀದಕÀನೆ ಸೃಷ್ಟಿ ಸ್ಥಿತಿಲಯ ಕರ್ತೃ ಯುಧಿಷ್ಠಿರ(ನ)ನುಜನಸಖನೆ 2 ವಸುದೇವನ ಸುತನೆ ಶೇಷನ್ಹಾಸಿಕÉಯಲ್ಲಿ ಶ್ರೀಸಹಿತ ಶಯನ ಕಂಸಾಸುರಾರಿ ವಾಸವಿಯ ರಥ ನಡೆಸಿದ್ವರಲಕ್ಷ್ಮಿ ವಲ್ಲಭನೆ ಕ್ಲೇಶ ಪರಿಹರಿಸೊ ಭೀಮೇಶಕೃಷ್ಣ ಎನಗೆ 3
--------------
ಹರಪನಹಳ್ಳಿಭೀಮವ್ವ
ಸಜ್ಜನರ ಸಂತಾಪ-ಕುಲಕೆ ಮೃತ್ಯುವುಕಂಡ್ಯ-ಮನವೇ ಪ ನಿರ್ಜರೇಶಗು ಹಾನಿ-ತಪ್ಪದೈ ಇದರಿಂದ ಅ.ಪ. ಅಂದು ದುರ್ಯೋಧನನು ಸಂದ ಸಭೆಯೊಳು ಪಾಂಡು ನಂದನರ ಸತಿಮಾನ ಕಂದಿಸಲೆತ್ನಗೈಯೆ ತಾಪ ಬಂದು ಬಡಿಯಲು ಖಳಗೆ ಬಂಧು ಬಳಗವುಸಹಿತ ಪೊಂದಿದನೆ ಯಮಸದನ 1 ತ್ರೇತೆಯಲಿ ರಾವಣನು ನೀತಿಮರೆತವನಾಗಿ ಖ್ಯಾತ ನಂದಿಯ ನೋಡಿ ಕೋತಿ ಚೇಷ್ಟೆಯನಡಿಸೆ ಸೀತೆ ದ್ರೋಹದಿ ಹಾಗೆ ವ್ರಾತ್ಯ ಕುಲಸಹಿತ ಖರೆ 2 ಇಂದ್ರ ನೆನಿಸಿದ ನಹುಷ ಪೊಂದಿದನು ಸರ್ಪತ್ವ ಕುಂದದಾ ಯಾದವರು ಪೊಂದಿದರು ಕುಲನಾಶ ಚಂದ್ರಮೌಳಿಯ ಅಂಶ ಚಂಡಮುನಿ ದೂರ್ವಾಸ ನೊಂದು ಧಾವಿಸಿ ಜಗದಿ ಬಂದು ನಿಂತುದನರಿಯ 3 ಶರಧಿ ಧುಮುಕಲಿಬಹುದು ಉರಿಯ ನುಂಗಲಿ ಬಹುದು ಉರಗವನು ಪಿಡಿಯಬಹುದು ಹರಿಯ ಶರಣರ ದ್ರೋಹ ತಿರುಗಿದರು ಮುರ್ಲೋಕ ಹರಿಸಲಾಗದು ಅವರೆ ಕರುಣಗೈಯದೆ ಮತ್ತೆ 4 ಭಕ್ತವತ್ಸಲ ಹರಿಯು ಭಕ್ತತಾಪವ ಸಹಿಸ ಶಕ್ತಿಸಾಹಸ ಜರಿದು ಉಕ್ತಿಲಾಲಿಸಿ ಬೇಗ ಕರ್ತೃ ಹರಿಯೆಂದರಿತು ಭಕ್ತರನು ಸೇವಿಸುತ ನಿತ್ಯದೊರೆ “ಶ್ರೀಕೃಷ್ಣವಿಠಲ” ಕರುಣವ ಘಳಿಸು 5
--------------
ಕೃಷ್ಣವಿಠಲದಾಸರು
ಸಡಿಲ ಬಿಡದೆ ಕೈಯ ಪಿಡಿದು ಉದ್ಧರಿಸಯ್ಯ ಬಡವನು ನಾನೈಯ್ಯ - ಕೊಡು ನಿನ್ನ ಸೇವೆಯ ಪ ಒಡಲಿಗೋಸುಗ ಪರರಡಿಗಳ ಪಿಡಿಯುತೆ ಭವ ಕಡಲಿನೊಳಗೆ ಅ.ಪ. ಪಡೆದು ವರಗಳನು ಕಡು ಖೂಳ ರಾವಣ ನಡುಗಿಸಿ ಸುರನರ ಭುಜಗರೊಡೆಯರನ್ನು ಹಿಡಿದು ಮುನೀಶರ ಹೊಡೆದು ಬಡಿದು ಹಿಂಸೆ - ಪಡಿಸುತ್ತ ಯುವತೇರ ದುಡುಕು ಮಾಡುತ್ತಲಿರೆ ಗಡಣೆಗಾರದೆ ಪಾಲ ಕಡಲ ತಡಿಗೆ ಬಂದು ದೃಢ ಭಕ್ತಿಯಲಿ ನಿಂದು ಜಡಜ ಭವಾದ್ಯರು ಪೊಡಮಟ್ಟು ಬೇಡಲು ಕೊಡುತೆ ಅಭಯವನು ಮಡದಿಯನೊಡಗೂಡಿ ಪೊಡವಿಗಿಳಿದು ಬಂದೆ 1 ಸತಿ ಕೌಸಲ್ಯದೇವಿಯ ಬಸುರೊಳು ಸಂಜನಿಸಿ ದಶದಿಶದೊಳು ಯಶ ಪಸರಿಸಿ ಅಸುರೆಯ ಅಸುವನು ಹಾರಿಸಿ ಕುಶಿಕ ಸುತನ ಯಜ್ಞ ಹಸನಾಗಿ ಪಾಲಿಸಿ ನಸುನಗುತಲಿ ಪದಸರಸಿಜ ಸೋಕಿಸಿ ಅಶಮವಾಗಿದ್ದ ಮುನಿಸತಿಯನುದ್ಧರಿಸಿ ಪಶುಪತಿ ಧನುಭಂಗವೆಸಗಿ ಸೀತೆಯ ಕರ ಬಿಸಜವ ನೊಶಗೈದ ಅಸಮ ಸಮರ್ಥ 2 ಚಂದದಿಂ ಶಾಙ್ರ್ಞವನೊಂದಿ ಅಯೋಧ್ಯೆಗೆ ಬಂದು ಪತ್ನಿಯಗೂಡಿ ನಂದದಿಂದಿರುತಿರ್ದು ಬಂದ ಕಾರ್ಯಕೆ ನೆವ ತಂದು ವನಕೆ ಬಂದು ನಿಂದಿರೆ ಜಾನಕಿ ಲಕ್ಷ್ಮಣರೊಡಗೊಂಡು ನೊಂದು ನೃಪನು ದಿನವನ್ನು ಹೊಂದಲು ಕರೆ- ತಂದು ಭರತನಿಗೆ ಅಂದು ರಾಜ್ಯವನೀಯೆ ಬಂದೊಲ್ಲದೆ ಬೇಗ ಬಂದು ವಂದಿಸೆ ಪದ ದ್ವಂದ್ವದ ಪಾದುಕವಂದದಿಂದೊಲಿದಿತ್ತೆ 3 ಚಿತ್ರಕೂಟಾದ್ರಿಯಿಂದತ್ತ ನಡೆದು ನೆಲ ಕೊತ್ತಿ ವಿರಾಧನ್ನ ವತ್ಸ ಲಕ್ಷ್ಮಣ ಸೀತಾ ಯುಕ್ತನು ನೀನಾಗಿ ಪೊರೆಯಲು ಇತ್ತು ಅಭಯವನ್ನು ಉತ್ತಮ ದಂಡಕದಿ ಸ್ತುತ್ಯ ಕುಂಭಜ ಮುನಿಯಿತ್ತ ಧನುವನಾಂತು ಕುತ್ಸಿತ ದನುಜೆಯ ಶಿಕ್ಷಿಸಿ ಖರ ಬಲ ಕತ್ತರಿಸುತೆ ಬೆನ್ಹತ್ತಿ ಮಾರೀಚನ್ನ ತುತ್ತು ಮೂರಾಗಿಸಿದತ್ಯಂತ ಶಕ್ತ 4 ಮೈಥಿಲಿಯಾಡಿದ ಮಾತಿಗೆ ಸೌಮಿತ್ರಿ ಪಾತಕಿ ದಶಮುಖ ಸಾತ್ವೀಕ ವೇಷದಿ ಸೀತೆಯ ನೊಯ್ದೆನೆಂದು ಆರ್ತ ಸ್ವರದಿ ಪೇಳಿ ಮೃತಿಯೊಂದೆ ಖಗಪತಿ ಆತಗೆ ಸದ್ಗತಿಯಿತ್ತು ನಡೆದು ಖಳ ಪೋತಕ ಬಂಧನ ತೋಳ್ಗಳ ಖಂಡಿಸಿ ಪ್ರೀತಿಲಿ ಶಬರಿಗೆ ಮುಕ್ತಿಯ ಪಾಲಿಸಿ ವಾತಸುತನ ಮನ ಪ್ರಾರ್ಥನೆ ಸಲಿಸಿದೆ 5 ಚರಣದಿಂದೊಗೆದು ದುಂದುಭಿಯ ಶರೀರವನ್ನು ತರುಗಳೇಳನು ಒಂದೇ ಸರಳಿನಿಂದುರುಳಿಸಿ ತರಣಿಸುತನ ಭಯ ಹರಿಸಿ ವಾಲಿಯ ಗರ್ವ ಮುರಿಸಿ ವಾನರ ರಾಜ್ಯ ದೊರೆತನ ಸಖಗಿತ್ತೆ ತರುಚರ ತತಿಗಳ ಕೆರಳಿಸಿ ಹರುಷದಿ ಪರನು ಭಕುತನನ್ನು ಕರೆದು ಕುರುಹುಗಳ ನೊರೆದು ಮುದ್ರಿಕೆಯಿತ್ತೆ ಕರುಣವಾರಿಧಿಯೆ 6 ತಿಂಗಳು ಮೀರಿತೆಂದು ಅಂಗದ ಪ್ರಮುಖರು ಕಂಗೆಟ್ಟು ಕುಳಿತಿರೆ ಭಂಗನ ಕಳೆದು ತ - ರಂಗಿಣಿ ಪತಿಯನ್ನು ಲಂಘಿಸಿ ಹನುಮನು ಕಂಗೊಳಿಸುವ ಲಂಕಾ ಪ್ರಾಂಗಣದಲಿ ನಿಂದು ಭಂಗಿಸಿ ಲಂಕಿಣಿಯನು ಸೀತಾಂಗನೆ - ಗುಂಗುರವಿತ್ತುತ್ತಮಾಂಗದ ಮಣಿಯಾಂತು ಕಂಗೆಡಿಸ್ಯಸುರರ ಜಂಗುಳಿಯನು ಭಕ್ತ ಪುಂಗವ ಬರೆ ನಿನ್ನಂಗ ಸಂಗವನಿತ್ತೆ 7 ಹರಿವರರನು ಕೂಡಿ ಶರಧಿಗೆ ಪಯಣಮಾಡಿ ಶರಣ ವಿಭೀಷಣನಿಗೆ ಸ್ಥಿರ ಪಟ್ಟವನು ನೀಡಿ ಭರದಿ ಸೇತುವೆಗಟ್ಟಿ ಅರಿಯ ಪಟ್ಟಣ ಮುಟ್ಟಿ ಧುರಕೆ ದೂತನ್ನ ಅಟ್ಟಿ ಪರಬಲವನು ಕುಟ್ಟಿ ಪುರಕೆ ಉರಿಯನಿಕ್ಕಿ ಶರವರ್ಷಂಗಳ ಕರಿ ರಥಾ ತುರಗ ಪದಾತಿಗ- ಳುರುಳಿಸಿ ದಶಶಿರನುರವನು ಇರಿದು ಪರಮ ಸಾಧ್ವಿಯ ಕರಸರಸಿಜ ಪಿಡಿದೆ 8 ಭಕ್ತ ವಿಭೀಷಣಗೆ ದೈತ್ಯಾಧಿಪತ್ಯವಿತ್ತು ಕೃತ್ತಿವಾಸನ್ನ ಸೇತು ಹತ್ತಿರ ಸ್ಥಾಪಿಸಿ ಪತ್ನಿ ಸಹೋದರ ಮಿತ್ರ ಭೃತ್ಯರ ಕೂಡಿ ಉತ್ತಮ ಪುಷ್ಪಕದಿ ಚಿತ್ರಕೂಟಕೆ ಬಂದೆ ಭಕ್ತನ ಕಳುಹಿ ಸದ್ವøತ್ತವ ಭರತಗೆ ಬಿತ್ತರಿಸಿ ಮಹದುತ್ಸವದಿ ಪುರ ಮತ್ತೆ ಪ್ರವೇಶಿಸಿ ರತ್ನ ಸಿಂಹಾಸನ ಹತ್ತಿ ಶ್ರೀಕಾಂತನೆ ನಿತ್ಯದಿ ಸಲಹುವೆ 9
--------------
ಲಕ್ಷ್ಮೀನಾರಯಣರಾಯರು
ಸಣ್ಣವನ ಬಿನ್ನಪವ ಸಲಿಸಬಹುದಯ್ಯ ಬಣ್ಣಿಸಲೊಶವಲ್ಲ ದಯವುಳ್ಳ ದೊರೆಯೆ ಪ ನಿನ್ನ ಗುಣ ಸುರ ತರುವು ವನದಿ ಶುಕಾದಿಗ ಳುನ್ನತವಾಗಿಹವು ಉಚಿತವೇ ಸರಿಯು ಎನ್ನ ಮನ ಕೋಡಗವು ಅಡವಿಯನು ಬಿದ್ದದೆ ಇ ದನ್ನ ಅದರೊಳಗೆ ಇಡಬಹುದಯ್ಯ ಹರಿಯೆ 1 ಕಮಲಭವ ವಾಣಿ ಮುಖ ನಯನಗಳು ಎಂಬ ಮಹ ಕಮಲೋತ್ಪಲಗಳಿಂದ ಶೋಭಿಸುತಿಹ ವಿಮಲ ಲಾವಣ್ಯ ಸುಧಾಂಬುಧಿಯೊಳಿಡಿಸಯ್ಯ ಮಮ ನೇತ್ರ ಮೀನಗಳ ವಿಷಯ ಪಂಕದಿ ತೆಗಿಸು 2 ನಿಮ್ಮ ನಾಮಾಮೃತದ ಸೂರೆಯನು ಬಿಟ್ಟು ಶ್ರೀ ಭವ ಮುಖರ ಕೆರೆ ಕೋಡೇರಿಸುವಿ ತುತಿ ಚೂರ್ಣ ತೆಗೆದು ತೊಳೆದು ತುಂಬೊ ನಮ್ಮ ವದನ ಕರಡಗೆಯ ವಾಸುದೇವವಿಠಲ 3
--------------
ವ್ಯಾಸತತ್ವಜ್ಞದಾಸರು
ಸಂತ ಚರಣಕೆ ಭಾವದಿ ಮಣಿಯೋ | ಅಂತ ರಂಗದಿ ಬಹಯದುಕುಲಮಣಿಯೋ ಪ ಬಿಡದೇ ಮಾಡಲು ಅವರನುಸರಣಿಯೋ | ಕೊಡುವನು ನಾಮದಿ ಕನಿಭರಣಿಯೋ 1 ವರವರದ್ಹೇಳಲು ಬೋಧಕ ಹಣಿಯೋ | ದೊರೆವುದು ಸುಜ್ಞಾನತನದ ಖಣಿಯೋ 2 ಗುರುಮಹಿಪತಿ ಪ್ರಭು ವಶವರ್ತಣಿಯೋ | ಕರುಣಿಸಿ ಪುನರಪಿ ಭವದಲ್ಲಿ ದಣಿಯೋ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸತತ ಚಿಂತಾಮಣಿಯೆ | ಸುರರೊಳಗೆ ನಿನಗೆಣಿಯೆಸಂತರನ ಪೊರೆವಂಥ ಮುನಿಯೆ | ಸುಖ ಜ್ಞಾನ ಖಣಿಯೇ ಪ ಭವ ಭುವನ ನಿಧಿ ತಾರಕನೆ 1 ಭಾರತಿ ಮನೆ | ಕುಂಬಾರನ ವುಳಹಿದನೆಭಾರತದೊಳು ನೀನೆ | ಭೂಭಾರ ನಿಳುಹಿದವನೆ2 ಶಂಖ ಚಕ್ರಾಧರನೆ ನಿ- | ಶ್ಶಂಕ ಮಹಾಮಹಿಮನೆಶಂಕರ ಸುರಪಾಲಕನೆ | ಶಂಕ ಚಕ್ರವಿತ್ತವನೆ 3 ಘಟಿಕಾಚಲ ವಾಸ | ಉತ್ಕøಷ್ಟ ನರಹರಿಯ ದಾಸಭಟ ಜನರಿಗೆ ಬಲು ಲೇಸಾ ಅ- | ಜಟವಾಗಿ ಕೊಡುವ ಸಂನ್ಯಾಸಾ 4 ಸಿರಿ ನಿತ್ಯ ಸ್ಮರಿಸುವ ಗುರು ಶಿರೋರತ್ನಾ 5
--------------
ಮೋಹನದಾಸರು
ಸತತ ನಿನ್ನ ಭಜನೆಯಲ್ಲಿ ಹಿತವ ಪೊಂದಿಸೊ ದೇವ ಪ ಅತುಲ ಮಹಿಮೆಗಳಲ್ಲಿ ಎನ್ನ ಮತಿಯ ಸೇರಿಸೊ ಶ್ರೀಪತೆ ಅ.ಪ ಕಾಲ ಕಳೆಯಿತೊ ದೇವ ನಾಳೆ ನಾಳೆಯೆಂದು ನಿನ್ನ ಪೊಗಳಲಿಲ್ಲವೊ ದೇವ 1 ಯೋಚಿಸದೆಲೆ ನಿನ್ನ ದೈನ್ಯದಿ ನೀಚ ಜನರಲಿ ನಾನು ಕರವ ಯಾಚಿಸುತ್ತ ಶೋಚನೀಯನಾದೆನೊ 2 ಸ್ಥೈರ್ಯದಿಂದ ಮನವು ನಿನ್ನೊಳು ಸೇರದಿರುವುದೋ ದೇವ ಮಾರ ಜನಕನೆ 3 ಕಾಮಕ್ರೋಧದಿಂದ ವಿಷಯ ಪ್ರೇಮಗಳಲಿ ನಾ ನಿನ್ನ ನಾಮ ಮರೆತು ಬಳಲಿದೆನೊ ಕಾಮಿತಪ್ರದ 4 ಸಣ್ಣ ಜನರ ನಡೆನುಡಿಗಳಿಂ ಖಿನ್ನನಾದೆನೊ ದೇವ ಎನ್ನಮೇಲೆ ಕರುಣದಿಂದ ಪ್ರಸನ್ನನಾಗೆಲೊ ದೇವ 5
--------------
ವಿದ್ಯಾಪ್ರಸನ್ನತೀರ್ಥರು
ಸತತ ಪಾಲಿಸೋ ಎನ್ನ | ಯತಿ ರಾಘವೇಂದ್ರ | ಪತಿತ ಪಾವನ ಪವನ | ಸುತಮತಾಂಬುಧಿ ಚಂದ್ರ ಪ ನಂಬಿದೆನು ನಿನ್ನ ಚರಣಾಂಬುಜವ ಮನ್ಮನದ ಹಂಬಲವ ಪೂರೈಸೊ ಬೆಂಬಿಡದಲೆ || ಕುಂಭಿಣೀಸುರ ನಿಕುರುಂಭ ವಂದಿತ ಜಿತ ಶಂಬರಾಂತಕ ಶಾತಕುಂಭ ಕಶ್ಯಪ ತನಯ 1 ಕ್ಷೋಣಿಯೊಳು ನೀ ಕುಂಭಕೋಣ ಕ್ಷೇತ್ರದಿ ಜನಿಸಿ ವೀಣ ವೆಂಕಟ ಅಭಿದಾನದಿಂದ ಸಾನುರಾಗದಿ ದ್ವಿಜನ ಪ್ರಾಣ ಉಳುಹಿದ ಮಹಿಮೆ | ಏನೆಂದು ಬಣ್ಣಿಸಲಿ ಜ್ಞಾನಿ ಕುಲತಿಲಕ2 ಮಂದಮತಿಗಳ ಸಂಗದಿಂದ ನಿನ್ನಯ ಚರಣ ಇಂದಿನ ತನಕ ನಾ ಪೊಂದಲಿಲ್ಲ ಕುಂದು ಎಣಿಸದೆ ಕಾಯೊ ಕಂದರ್ಪಪಿತ ಶಾಮ ಸುಂದರನ ದಾಸಕರ್ಮಂದಿ ಕುಲವರ್ಯ 3
--------------
ಶಾಮಸುಂದರ ವಿಠಲ
ಸತತ ಸದಮಲ ಪತಿತಪಾವನ ಅತೀತಗುಣತ್ರಯಾನಂದನ ಶ್ರುತಿಗಗೋಚರ ಯತಿಜನಾಶ್ರಯ ಅತಿಶಯಾನಂದಾತ್ಮನ ಭಜಿಸು ಮನವೆ ಧ್ರುವ ಪವಿತ್ರಪ್ರಣವ ಸುವಿದ್ಯದಾಗರ ವ್ಯಕ್ತಗುಣ ಅವಿನಾಶನ ಘವಿಘವಿಸುವಾನಂದಮಯ ರವಿಕೋಟಿ ತೇಜಪ್ರಕಾಶನ ಭವರಹಿತ ಗೋವಿಂದ ಗುರುಪಾವನ ಪರುಮಪುರುಷನ ಭುವನತ್ರಯಲಿಹ್ಯ ಭಾವಭೋಕ್ತ ಸಾವಿರನಾಮ ಸರ್ವೇಶನ 1 ಮೂಜಗದಿ ರಾಜಿಸುತಿಹ್ಯ ತೇಜೋಮಯ ಘನಸಾಂದ್ರನ ಅಜಸುರೇಂದ್ರ ಸುಪೂಜಿತನುದಿನ ರಾಜಮಹಾರಾಜೇಂದ್ರನ ಭಜಕ ಭಯಹರ ನಿಜ ಘನಾತ್ಮಗಜವರದ ಉಪೇಂದ್ರನ 2 ಪರಾತ್ಪರ ಪರಿಪೂರ್ಣ ಪರಂಜ್ಯೋತಿ ಘನಸ್ವರೂಪನ ಪರಂಬ್ರಹ್ಮ ಪರೇಶ ಸುರವರನಾಥ ಗುರುಕುಲದೀಪನ ನಿರಾಳ ನಿರ್ವಿಶೇಷ ನಿರಾಕಾರ ನಿರ್ವಿಕಲ್ಪನ ಕರುಣದಿಂದಲಿ ಹೊರೆವ ಮಹಿಪತಿಸ್ವಾಮಿ ಚಿತ್ಸ ್ವರೂಪನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸತತ ಹರಿಯ ನಾಮವನ್ನು ಯತುನದಿಂದ ನುಡಿವ ನರನು ಪ ಅತಿತ್ವರೆಯಲಿ ಸರ್ವಕಾರ್ಯ ಸಿದ್ಧಿಪೊಂದುವ ಅ.ಪ ದುರ್ಗಮಾರ್ಗ ಪಿಡಿದು ಕುರುಕ್ಷೇತ್ರ ಪಯಣವೇಕೆ ಜಿಹ್ವ ಯಗ್ರದಲ್ಲಿ ಹರಿಯನಾಮವಿರುವ ನರನಿಗೆ 1 ಮೂರು ಲೋಕಗಳಲಿ ಇರುವ ಹೇರು ಪುಣ್ಯಲಾಭ ಒಂದು ಸಾರಿ ಹರಿಯನಾಮದಿಂದ ಸಾಧ್ಯವಿರುವುದು 2 ಉಚ್ಚರಿಸಲು ಹರಿ ಎಂದೆರಡು ಅಕ್ಷರಗಳ ನರನು ಕ್ಷಣದಿ ಮೋಕ್ಷ ಪಾಥೇಯವನ್ನು ಸಿದ್ಧಗೊಳಿಸುವ 3 ಹರಿಯನಾಮ ಒಂದೇ ಎನಗೆ ಸರ್ವವಿಧದ ಜೀವನವು ಹರಿಯನಾಮ ಹೊರತು ಕಲಿಯೊಳರಿಯೆ ಗತಿಯನು 4 ಹರಿಯೇ ಗಂಗಾ ಹರಿಯೇ ಗಯಾ ಹರಿಯೇ ಕಾಶಿ ಸೇತು ಪುಷ್ಕರ ಹರಿಯ ನಾಮ ಜಿಹ್ವೆಯಲ್ಲಿ ಇರುವ ನರನಿಗೆ 5 ನೂಕಿ ಕಾಮಕ್ರೋಧಗಳನು ಏಕವಾರ ಹರಿಯೆಂದೆನಲು ನಾಕುವೇದಗಳನು ಓದಲೇಕೆ ಮನುಜನು 6 ಅಶ್ವಮೇಧ ಪುರುಷಮೇಧ ಯಜ್ಞಫಲವು ಲಬ್ಧವಿಹುದು ವಿಶ್ವಾಸದಿ ಹರಿಯನಾಮ ನುಡಿದ ನರನಿಗೆ 7 ಕೋಟಿ ಶತ ಗೋದಾನ ಕನ್ಯಾಭೂಮಿ ದಶಶತಕಗಳ ದಾನ ಸಾಟಿ ಹರಿಯನಾಮ ನುಡಿಯು ಭಕ್ತಜನರಿಗೆ 8 ಸಪ್ತ ಕೋಟಿ ಮಹಾಮಂತ್ರ ಚಿತ್ತ ವಿಭ್ರಮ ಕಾರಕಗಳು ಯುಕ್ತಿಯೊಂದೇ ಹರಿಯನಾಮದಕ್ಷರದ್ವಯ 9 ಮುನ್ನ ವರ ಪ್ರಹ್ಲಾದ ನುಡಿದ ಘನ್ನನಾಮ ಪಠನದಿಂದ ಪ್ರ ಸನ್ನ ಹರಿಯು ತನ್ನ ಪದವನೀವ ಮುದದಲಿ 10
--------------
ವಿದ್ಯಾಪ್ರಸನ್ನತೀರ್ಥರು