ಒಟ್ಟು 1500 ಕಡೆಗಳಲ್ಲಿ , 99 ದಾಸರು , 1080 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮುಯ್ಯ ಒಯ್ಯೋಣು ಬಾರೆ ಮಾನಿನಿಯರೆಲ್ಲರು ನೀರೆಮೈ ಮರೆದೇನೆ ನಾರಿ ಮಾರನಯ್ಯನ ತೋರೆ ಪ. ಹರದಿ ಸುಭದ್ರಾ ತಮ್ಮ ದೊರೆಗಳಿಗೆ ಅರುಹಲು ಪರಮ ಹರುಷರಾಗಿ ಐವರು ಚಪಲಾಕ್ಷಿ ಪರಮ ಹರುಷರಾಗಿ ಐವರು ಮುಯ್ಯಕ್ಕದುರದಿಂದ ಭೇರಿ ಹೊಯ್ಸಿದರ ಚಪಲಾಕ್ಷಿ1 ಹಸ್ತಿನಾಪುರದರಸು ಮತ್ತೆ ಜೋಯಿಸರ ಕರೆಸಿ ಮುತ್ತು ತುಂಬಿಡಿಸಿ ಮರದಾಗ ಚಪಲಾಕ್ಷಿಮುತ್ತು ತುಂಬಿಡಿಸಿ ಮರದಾಗ ಮುಯ್ಯಕ್ಕಉತ್ತಮ ತಿಥಿಯು ಬರಬೇಕು ಚಪಲಾಕ್ಷಿ 2 ಧರ್ಮನ ಪ್ರಶ್ನೆಯ ಪ್ರೇಮದಿಂದಲೆ ಕೇಳಿ ಅಮ್ಮಯ್ಯ ಶ್ರೀ ರಮಣನ ನೆನೆಯುತ ಚಪಾಲಾಕ್ಷಿ ಶ್ರೀ ರಮಣನ ನೆನೆಯುತ ಬೃಹಸ್ಪತಿಜಮ್ಮನೆ ತೆಗೆದಾ ಶುಭತಿಥಿಚಪಲಾಕ್ಷಿ3 ಈಗಿನ ವ್ಯಾಳ್ಯಕ್ಕ ಜಾಗು ಮಾಡದೆ ಕೃಷ್ಣಿಹೋಗ ನೀಗೆದ್ದು ಬರತೀಯೆ ಚಪಲಾಕ್ಷಿಹೋಗ ನೀಗೆದ್ದು ಬರತೀಯೆ ಎನುತಲೆ ಆಗಬೃಹಸ್ಪತಿಯು ನುಡಿದಾನೆ ಚಪಲಾಕ್ಷಿ 4 ಇಂದಿನ ದಿವಸÀಕ್ಕ ಸಂದೇಹ ಬ್ಯಾಡವ್ವಾ ತಂದೆರಾಮೇಶನ ಮಡದೇರ ಚಪಲಾಕ್ಷಿತಂದೆ ರಾಮೇಶನ ಮಡದೇರ ನಾಚಿಸಿ ಬಂದಿಯೆಕೃಷ್ಣಿ ನಗುತಲೆ ಚಪಲಾಕ್ಷಿ5
--------------
ಗಲಗಲಿಅವ್ವನವರು
ಮುಯ್ಯದ ಹಾಡುಗಳು ನೋಡೆ ಧರಣಿ ನಿನ್ನ ಬೀಗರೋಡಿ ಬರುವುದಾ ಕಾಡು ಜನರು ನಗುವ ರೀತಿ ಮಾಡಿ ಮೆರೆವುದಾ ಪ. ಸುತ್ತ ನಾಲ್ಕು ಮುಖದಿ ವೇದ ತತ್ವ ಪೇಳ್ವ ಹಂಸ ಪಕ್ಷಿ ಹತ್ತಿಕೊಂಡು ಬಂದ ಹಳಬ ಮುತ್ಯನೊಬ್ಬನು ಹಸ್ತದೊಳಗಕ್ಷಮಾಲೆಯೆತ್ತಿ ಮಣಿಗಳೆಣಿಸುವಗಿ ನ್ನೆತ್ತ ಪೂಜೆಯಿಲ್ಲವೆಂಬರತ್ಯಾಶ್ಚರ್ಯವರಿಯೆಯ 1 ಮತ್ತೊಬ್ಬನ ನೋಡೆ ಮುದಿಯೆತ್ತನೇರಿ ಬರುವನಿವನ ಜೊತೆಯಲಿರುವ ಭೂತಗಣವು ಸುತ್ತ ಮೆರೆವುದ ಬತ್ತಲಿದ್ದು ಭಸ್ಮ ಪೂಸಿ ಕೃತ್ತಿವಾಸನನಾದ ಫಾಲ ನೇತ್ರ ರುಂಡಮಾಲಶೂಲವೆತ್ತಿ ಕುಣಿವ ಮುತ್ಯತನವ 2 ಗರುವದಿಂದ ಗಜವನೇರಿ ಬರ್ವನ ನೋಡಮ್ಮ ಶತ ಪರ್ವವನ್ನು ಪಿಡಿದ ಸಕಲ ಗೀರ್ವಾಣೀಶನ ಸರ್ವಾವಯವದಲ್ಲಿ ಕಣ್ಣಾಗಿರ್ವದೇನೊ ತಿಳಿಯದು ನಿ ಗರ್ವಿ ಶಿರೋಮಣಿಯೆ ಈತ ಪರ್ವತಾರಿಯೆಂಬುವುದನು 3 ಠಗರು ಕೋಣನೆಗಳ ಮೇಲೆ ಸೊಗಸಿನಿಂದಲೇರ್ದ ಕೆಲಸ ಬಗೆ ಬಗೆ ಬೈರೂಪ ವರ್ಣನೆಗಳು ಸಾಕಿನ್ನು ಸುಗುಣೆ ಮೊದಲೆ ತಿಳಿಯದೆ ನೀ ಮಗಳನೀವ ಭಾಷೆ ಕೊಟ್ಟ ಬಗೆಯ ಪೇಳೆ ಭಾಗ್ಯದ ಹಮ್ಮಿಗೆ ತಕ್ಕಂಥ ನಗೆಯ ಕೇಳೆ 4 ಎರಡು ಮಗುಗಳದರಳೊಂದು ಬಿರುದ ಹೊಟ್ಟೆ ಮೇಲೆ ಕಟ್ಟಿ ದುರಗ ಬೆಳೆವ ಪೋರ ನೋಡೆ ಕರಿಯ ಕುವರನು ಕಿರಿಯ ಕೂಸಿನೊಂದು ನವಿಲ ಮರಿಯನೇರುತ್ತಾರು ಮುಖದಿ ಮೆರೆವ ಛಂದವೇನನೆಂಬೆ ಥರವೆ ನಿನಗೆ ಮಿಸುಣಿ ಗೊಂಬೆ 5 ಅಳಿಯನ ಸಂಸ್ಥಿತಿಯ ನೋಡಿ ತಿಳಿವದೆಂತು ಸುಲಭವಲ್ಲ ಹಲವು ಜನರ ಕೂಡಿಕೊಂಡು ಸುಳಿವರೆ ಬಲ್ಲ ನೆಲೆಯ ಕಾಣದಖಿಳ ವೇದ ಕುಲವು ಭ್ರಮೆಯ ತಾಳ್ವದಿಂಥಾ ಕುಲವೆಂದರಿಯಳಾಗಿ ಲೋಕ ಚೆಲುವೆ ಮಗಳನಿತ್ತೆಯಲ್ಲೆ 6 ಆದರೀತ ಭಕ್ತಜನರ ಕಾದುಕೊಳುವನೆಂಬ ಗುಣವ ಶೋಧಿಪರಿಗೆ ಸಕಲಾನಂದ ಸಾಧಕನೆಂದು ಬೋಧಗೊಳದೆ ನುಡಿದ ಸ್ವಾಪರಾಧವೆಲ್ಲ ಕ್ಷಮಿಸಿ ನಮ್ಮ ಶ್ರೀದ ವೆಂಕಟಾದ್ರಿನಾಥ ಕಾದುಕೊಳಲಿ ಕರುಣವಿಡಲಿ 7
--------------
ತುಪಾಕಿ ವೆಂಕಟರಮಣಾಚಾರ್ಯ
ಮುರಳೀ ಮನೋಹರ ವಿಠಲ | ಪೊರೆ ಇವಳಾ ಪ ಗುರು ರಾಘವೇಂದ್ರರ್ಗೆ | ತೋರ್ದ ಶಿರಿಕೃಷ್ಣಾ ಅ.ಪ. ಸಿರಿ | ನರಸಿಂಹ ಮೂರುತಿಯೆಚಂದದಲಿ ಸುಜ್ಞಾನ | ದೊಂದು ಅಂಕುರವಾ |ಸಂದೇಹ ವಿಲ್ಲದಲೆ | ಅಂದು ಸ್ವಪ್ನದಿ ತೋರಿಮಂದಳನ ಉದ್ಧಾರ | ವೆಂದು ಸೂಚಿಸಿದೇ 1 ಭಯ ಕೃತುವು ಭಯನಾಶ | ವಿಯದಧಿಪ ಗೊಲಿದವನೆನಯ ವಿನಯದಿಂ ಬೇಡ್ವ | ಹಯಮೊಗನ ದಾಸ್ಯದಯದಿ ಕೊಟ್ಟವಳೀಗೇ | ಭಾಗ್ಯ ವೈರಾಗ್ಯವನುದಯೆಗೈದು ಹೇಯೊ ಸಾ | ದೇಯಗಳ ತಿಳಿಸೋ 2 ಹರಿಯು ನೀ ನಿತ್ತುದಕೆ | ಉರುತರದ ತೃಪ್ತಿಯನುಅರಿತಿಹಳು ಈ ಗೃಹಿಣಿ | ಪರಿಸರೇಡ್ಯಾ |ದುರಿತ ರಾಶಿಗಳಳಿದು | ಹರುಷವನೆ ಸುಡಿಸುವುದುಶರಣ ಜನ ಮಂದಾರ | ಕರುಣಾಬ್ಧಿ ಹರಿಯೇ 3 ಮಧ್ವಮತ ಪದ್ಧತಿಗ | ಳುದ್ಧರಿಸ ಇವಳಲ್ಲಿಶ್ರದ್ಧೆ ಭಕುತಿಯು ಜ್ಞಾನ | ಮಧ್ವಮತದೀಕ್ಷಾವೃದ್ಧಿಗೈಸಿವಳಲ್ಲಿ | ಶುದ್ಧ ಆನಂದಾತ್ಮಅಧ್ವರೇಡ್ಯನೆ ಅನಿ | ರುದ್ಧ ಮೂರುತಿಯೇ 4 ಮೋದ ಮೋದ ಬಡಿಸಿವಳಾ 5
--------------
ಗುರುಗೋವಿಂದವಿಠಲರು
ಮೂರ್ಖ ತಿಳಿವನೆ ಗುರುವೆ ನಿನ್ನ ಬೋಧದ ಸವಿಯ ಅರ್ಕನಾ ತೇಜವನು ಗೊಗೆಯರಿದಪುದೇ ಪ ನೀನೆ ಪರಮಾತ್ಮನಿಹೆ ಎಂದು ನೀ ಬೋಧಿಸಲು ಮಾನವ ನಾನು ಪರಮಾತ್ಮನೆ ಏನಾದರೂ ಪೇಳಿ ಮೋಸಮಾಳ್ಪನು ಎಂದು ಸ್ವಾನುಭವ ಪಡೆಯದಲೆ ನಿನ್ನ ನಿಂದಿಸುವಾ 1 ಕರ್ಮದಾ ಸಂಕಲೆಯ ಕಟ್ಟಿಕೊಂಡಿಹ ಜೀವ ಕರ್ಮ ಕಳೆಯುವ ದಿವ್ಯ ಜ್ಞಾನವರಿಯುವನೇ ದುರ್ಮತಿಯು ದ್ವೇಷಿಸುತ ಬೋಧದಲಿ ಮನವಿಡದೆ ಧರ್ಮವಂತನು ಎಂಬ ಒಣ ಹೆಮ್ಮೆ ಪಡುತಿರುವ 2 ಈ ನಿಂದೆ ಸ್ತೋತ್ರಗಳಿಗೊಳಗಾಗುವವನೆ ನೀ ಸ್ವಾನುಭವಸಂವೇದ್ಯ ಕೇವಲಾನಂದಾ ನೀನೆ ಸರ್ವವ್ಯಾಪಿ ನಿನ್ನ ನಿಂದಿಸಿದೊಡೆ ತಾನು ತನ್ನನು ಬೈದು ದೂರಿಕೊಂಡಂತೆ 3 ಜಗದ ಸುಖಕಾಗಿ ಬಲು ಕಾತರಿಪ ಮನುಜನಿವ ಜಗದಾಚೆಗಿಹ ಪರಮಶಾಂತಿಯರಿಯುವನೇ ಸೊಗಸಾಗಿ ತಿಳಿಯುವೊಡೆ ಜಿಜ್ಞಾಸುವಲ್ಲದೆ ಅಘನಾಶಶಂಕರನೆ ಅನ್ಯರರಿಯುವರೇ 4
--------------
ಶಂಕರಭಟ್ಟ ಅಗ್ನಿಹೋತ್ರಿ
ಮೂರ್ತಿ ನೆಲಸಲಂತರ್ಧಾನದಿ ಕ್ಷಣದೀ 1ನಾ ಪುಣ್ಯವಂತನೆಂಬೆನೆ ಮೂರ್ತಿಯಗಲುವದೆ ನಾಪಾಯೆಂಬೆನೆಕಾಬೆನೆರೂಪುಮರೆಯಾದರೇನೈ ಪೂರ್ಣವಸ್ತುವೆಂಬೀ ಪಂಥವನು ಪಿಡಿವೆನೆವ್ಯಾಪಾರದಲಿ ಸಿಲುಕಿದೀ ಮನಕೆ ಬಿಡದೆ ಸದ್ರೂಪ ನಂಬಿದ್ದೆನಿದನೆಸಾಪರಾಧಿಗೆ ಮುಖಗೊಡದ ತೆರದಿ ಮರೆಯಾದ ತಾಪ ಬೆಂಬಿಡದು ತಾನೆ ಎನ್ನನೆ 2ಬರಿದೆ ನಾನಪರಾಧಿಯೆಂದು ಪಂಬಲಿಸುವದು ತರವಲ್ಲ ಧನ್ಯ ನಾನೂಕರುಣದಿಂ ಮೂರುತಿಯ ತೋರಿ ಸುಖಗೊಳಿಸಿಯುರೆ ಮರೆಯಾದ ಭಾವ ತಾನೂಸ್ಮರಿಸಿ ಸ್ಮರಿಸಿಯೆ ಮನವು ಕರಗಿ ತನ್ನೊಳುನಿಜದಿ ಬೆರೆಯಲೆಂತೆಂಬುದಿದನೂಮರಳಿ ಜಾನಿಸಿ ಧೈರ್ಯ'ಡಿದರೂ ಮೊದಲುಂಡ ಪರಮಸುಖ ಬಿಡದೆನ್ನನೂ ತಾನೂ 3ಭಾಪುರೆ ಭಾಗ್ಯಶಾಲಿಯು ಧನ್ಯಧನ್ಯನೈ ನಾ ಪುಣ್ಯವಂತನಹುದೂತಾ ಪೂರ್ಣ ಕೃಪೆವಂತ ಶ್ರೀಕೃಷ್ಣಯೋಗೀಂದ್ರ ನೀ ಪೊಡ' ಮೊದಲೊಳಹುದೂತಾಪಬಡುವರು ಭಜಕರೆಂದು ಮಂಗಳಕರದ ರೂಪವನು ಮೊದಲೆ ತಳೆದೂವ್ಯಾಪಕನು ಶ್ರೀ ದಾಸಾರ್ಯನಾಗಿರುವನೀ ಪದ'ಗೆಣೆಯಾವದು ಇಹುದೂ 4ಗುರು ವಾಸುದೇವಾರ್ಯನೆನಿಸಿ ಚಿಕ್ಕನಾಗಪುರ ವರದವೆಂಕಟರಮಣನೆಕರದು ಸುಜ್ಞಾನಸುಧೆಯೆರೆದಜ್ಞರಜ್ಞತೆಯ ಪರಿದ ಕರುಣಾವಂತನೆವರ ಕೃಷ್ಣಯೋಗೀಂದ್ರ ಶ್ರೀರಾಮದಾಸಾರ್ಯ ಶರಣಾಗತೋದ್ಧರಣನೆಮರೆಯೊಕ್ಕೆ ನಾನು ತಿಮ್ಮದಾಸ ಜೀಯ್ಯಪರಾಕು ಕರ'ಡಿಯಬೇಕೆನ್ನನೆ ನೀನೆ5
--------------
ತಿಮ್ಮಪ್ಪದಾಸರು
ಮೂರ್ತಿ ಸತ್ಯ ಸಂಧರ ಕೀರ್ತಿ ಜಗದಲ್ಲಿ ಉದ್ಧರರ ಪ. ಪದ್ಮನಾಭ ಮಾಧವ ಮಾಧವ ಅಕ್ಷೋಭ್ಯರ ಚರಣವವಿದ್ಯುಕ್ತದಿಂದ ಬಲಗೊಂಬೆ ರನ್ನದ 1 ಪಾದ ಪದ್ಮವ ಮೊದಲೆ ಬಲಗೊಂಬೆ ರನ್ನದ 2 ರಘುನಾಥ ರಘುವರ್ಯ ರಘೋತ್ತಮ ತೀರ್ಥರ ವೇದವ್ಯಾಸ ವಿದ್ಯಾಧೀಶರೆ ರನ್ನದ ವೇದವ್ಯಾಸ ವಿದ್ಯಾಧೀಶರ ಚರಣವ ಜಗದ ಗುರುಗಳನು ಬಲಗೊಂಬೆ3 ಉತ್ತಮ ವೇದನಿಧಿ ಸತ್ಯವೃತ ತೀರ್ಥರ ಸತ್ಯನಿಧಿ ಸತ್ಯನಾಥರ ರನ್ನದ ಸತ್ಯನಾಥರ ಚರಣವ ಭಕ್ತಿಂದ ಮೊದಲ ಬಲಗೊಂಬೆ 4 ಸತ್ಯಾಭಿನವ ತೀರ್ಥ ಸತ್ಯಪೂರ್ಣ ತೀರ್ಥರಸತ್ಯವಿಜಯ ಸತ್ಯಪ್ರಿಯರ ರನ್ನದ ಸತ್ಯಪ್ರಿಯರ ಚರಣವ ಅತ್ಯಂತವಾಗಿ ಬಲಗೊಂಬೆ 5 ಸತ್ಯಬೋಧ ಸತ್ಯಸಂಧ ಸತ್ಯವರಚಿತ್ತಶುದ್ಧಿಯಲೆ ಬಲಗೊಂಬೆಚಿತ್ತಶುದ್ಧಿಯಲೆ ಸಭೆಯೊಳುಸತ್ಯವಾಕ್ಯಗಳ ನುಡಿಸಲು ರನ್ನದ6 ಸತ್ಯವರ್ಯರೆಂಬ ಉತ್ತಮ ಗುರುಗಳ ಹಸ್ತಕಮಲದಲೆ ನಮಿಸುವೆ ರನ್ನದ ಹಸ್ತಕಮಲದಲೆ ನಮಿಸುವೆ ಜಗದೊಳುಮೆರೆವ ಸತ್ಯಧರ್ಮರನು ಬಲಗೊಂಬೆ 7 ಪಾದ ಪೊಂದಿದ್ದ ಗುರುಗಳು ವಿದ್ಯುಕ್ತದಿಂದ ಬಲಗೊಂಬೆ ರನ್ನದ ವಿದ್ಯುಕ್ತದಿಂದ ಬಲಗೊಂಬೆ ಅತ್ತಿಗೆಯರ ಗೆದ್ದು ದುಂಧುಭಿಯ ಹೊಯಿಸೇವ ರನ್ನದ 8 ಯತಿ ಮುನಿರಾಯರು ಅತಿ ಭಕ್ತರಾಗಿದ್ದಅತಿಪ್ರಿಯರಾದ ಗುರುಗÀಳು ಅತಿ ಪ್ರಿಯರಾದ ರಾಮೇಶನ ಅತಿ ಭಕ್ತರ ಮೊದಲ ಬಲಗೊಂಬೆ ರನ್ನದ 9
--------------
ಗಲಗಲಿಅವ್ವನವರು
ಮೃಡ ಫಣೀಂದ್ರವೀಂದ್ರ ವಂದ್ಯ ಕಡಲಶಯನ ಶ್ರೀನಿವಾಸ ಒಡೆಯನಾಜ್ಞೆಯಿಂದಲೆನಗೆ ಪ. ಜೀವಗಣಪತೆ ಸರ್ವದೇವತಾಗತೆ ಪಾವನಾತ್ಮ ಪದ್ಮ ಸಮಕರಾವಲಂಬಿತ್ತು ಬೇಗ 1 ಮೂರು ತಾಪವಾ ಹತ್ರ ಸೇರದಂದದಿ ಅದರ ಬೇರ ಕಡಿದು ಭಕ್ತಿಸಾರ ಧಾರದಿಂದ ದೃಢವ ಮಾಡಿ 2 ಕೈಟಭಾರಿಯ ಪುರದ ಭಾಟದಾರಿಯ ಬೇಟ ಜಲಟ ಕುಕ್ಕುಟಗಳ ನೋಟಾಪಾಟದೊಡನೆ ತೋರಿ 3 ಹರಿಯ ದೊರೆತನ ಕರುಣಿಕಾಗ್ರಣಿ ಕಮಲ ಕರವ ಎನ್ನ ಶಿರದೊಳಿಕ್ಕಿ 4 ನಿನ್ನ ಕರುಣವು ನಿಯತವಾಗಲು ಪನ್ನಗಾಚಲೇಂದ್ರ ದಯದಿ ತನ್ನ ದಾಸನೆಂದು ಕಾವ 5
--------------
ತುಪಾಕಿ ವೆಂಕಟರಮಣಾಚಾರ್ಯ
ಮೆಚ್ಚಿದೆ ಯಾಕಮ್ಮ ಲಕ್ಕುಮಿದೇವಿ ಸಚ್ಚಿದಾನಂದಾತ್ಮ ಹರಿಯೆಂದರಿಯದಲೆ ಪ ರಕ್ಕಸಾಂತಕ ಹರಿಗೆ ಸೊಗಸಿನ ತಕ್ಕ ವಾಹನವಿಲ್ಲದಿದ್ದೊಡೆ ಹಕ್ಕಿಯ ಹೆಗಲೇರಿ ತಿರುಗುವ ಚಿಕ್ಕ ಬುದ್ಧಿಯ ಚಲುವ ಕೃಷ್ಣಗೆಅ.ಪ ನೀರೊಳು ಮುಳುಗಿ ಭಾರವಪೊತ್ತು ಧರಣಿಯ ಕೋರೆದಾಡೆಲಿ ತಂದ ಕ್ರೂರ ರೂಪನಿಗೆ ಮೂರಡಿ ಭೂಮಿಯ ಬೇಡಿ ಕ್ಷಿತಿಪರ ಕೊಂದು ನಾರು ವಸ್ತ್ರಗಳುಟ್ಟು ಸೀರೆ ಕದ್ದವಗೆ ಶೂರತನದಲಿ ತ್ರಿಪುರರಗೆದ್ದು ವಿ- ಹಾರ ಮಾಡ್ಡ ಏರ್ದ ಕುದುರೆಯ ಮಾರಪಿತ ಮಧುಸೂಧನನ ವ್ಯಾ- ಪಾರ ತಿಳಿಯದೆ ವಾರಿಜಾಕ್ಷಿ 1 ಹಾಸಿಕಿಲ್ಲದೆ ಹಾವಿನ ಮೇಲೆ ಮಲಗುವ ಹೇಸಿಕಿಲ್ಲದೆ ಎಂಜಲ್ಹಣ್ಣನೆ ಮೆಲುವ ದೋಷಕಂಜದೆ ಮಾವನ ಕೊಂದು ಮಧುರೆಲಿ ದಾಸಿ ಕುಬ್ಜೆಯ ಡೊಂಕು ತಿದ್ದಿ ಪರಿಮಳ ಪೂಸಿ ಸೋಸಿನಿಂದಲಿ ಕರಡಿ ಮಗಳನು ಯೋಚಿಸದೆ ಕೈಪಿಡಿದು ಸೌಳ- ಸಾಸಿರದ ಸತಿಯರನು ಕೂಡಿದ ವಾಸುದೇವನ ಮೋಸವರಿಯದೆ 2 ಮೋಸದಿಂದಲಿ ಬಂದು ಶಿಶುವನೆತ್ತಿದ ದೈತ್ಯ ದಾಸಿಯ ಕೊಂದ ಉದಾಸೀನದಿಂದ ಗ್ರಾಸಕಿಲ್ಲದೆ ಗೋಪೇರ ಮನೆಗಳ ಪೊಕ್ಕು ಮೀಸಲು ಬೆಣ್ಣೆ ಪಾಲ್ಮೊಸರನೆ ಸವಿದು ರಾಸಕ್ರೀಡೆಯ ವನಿತೆಯರ ಮನ ದಾಸೆ ಪೂರೈಸಿ ರಾತ್ರಿ ವೇಳದಿ ವಾಸುದೇವನು ಓರ್ವ ಸತಿಯೊಳು ಕ್ಲೇಶಪಡಿಸದೆ ಮೋಸವರಿಯದೆ3 ಅಖಿಳ ಮಹಿಮನೆನೆ ಊಳಿಗ ಮಾಡಬಹುದೆ ಚಂಡನಾಡುವ ನೆವದಿಂದ ಕಾಳಿಂಗನ ಮಂಡೆಯ ತುಳಿದು ನಾಟ್ಯವನಾಡಬಹುದೆ ಗಂಡುಗಲಿ ಅರ್ಜುನನು ರಥಕೆ ಬಂಡಿಬೋವನ ಮಾಡಬಹುದೆ ಪುಂಡಲೀಕನು ಇಟ್ಟೆಗೆಯ ಮೇ- ಲ್ಪಾಂಡುರಂಗ ನಿಲಿಸಬಹುದೆ4 ಕಮಲಾಕ್ಷ ಯಾಗಶಾಲೆಗೆ ಗೋಪರನು ಕಳುಹಿ ರಮೆಯರಸಗೆ ಬಹಳ್ಹಸಿವೆನುತಿರಲು ಕಮಲಾಕ್ಷನ ನುಡಿ ಗಮನಿಸದೆ ರುಷಿವರರಿಗೆ ಕಮಲ ಮುಖಿಯರೆಲ್ಲ ಪರಮ ಸಂಭ್ರಮದಿಂದ ಕಮಲನೇತ್ರಗೆ ವಿವಿಧ ಭಕ್ಷಗ- ಘೃತ ಪರಮಾನ್ನಗಳನು ಕಮಲನಾಭ ವಿಠ್ಠಲಗೆ ಅರ್ಪಿಸಿ ಶ್ರಮವ ಕಳೆದೈದಿದರು ಮುಕ್ತಿಯ 5 ಯಾಕೆ ಮೆಚ್ಚಿದೆಯಮ್ಮ ಲೋಕ ಸುಂದರಿಯೆಶ್ರೀ ಕಮಲಜಪಿತ ಲೋಕ ಮೋಹಕನ
--------------
ನಿಡಗುರುಕಿ ಜೀವೂಬಾಯಿ
ಮೇಲನೆಸಗಲಿ ನಿಮಗೆ ಮಾಲಕುಮಿ ಮನ್ನಿಸುಗೆ ಪ. ಬಾಲಕರು ಬಯಸುವೆವು ಬಾಲೆಯರು ಹರಸುವೆವು ಅ.ಪ. ಮಾಧವನ ದಯೆಯಿರಲಿ ಯೊಧರಿಗೆ ಜಯವಿರಲಿ ಸಾಧನವು ಕೈಸೇರೆ ಶ್ರೀಧರನು ಮೈದೋರೆ 1 ಸಿದ್ಧಿಸಿದಾವ್ರತವೆಂದು ಶುದ್ಧಭಾವದಿ ಬಂದು ಬದ್ಧಕಂಕಣರಾಗಿ ಶ್ರದ್ಧೆಯಿಂ ಶಿರಬಾಗಿ 2 ವಾಸುದೇವನ ಸ್ಮರಿಸಿ ಮೀಸಲಂ ತೆಗೆದಿರಿಸಿ ವಾಸಪಂಥದಿ ಬೇಗ ದಾಸ್ಯಮಂ ಬಿಡಿಸೀಗ 3 ವಿಜಯದಶಮಿಯು ನಾಳೆ ವಿಜಯಯಾತ್ರೆಗೆ ತೆರಳೆ ವಿಜಯಸಾರಥಿಯೊಲಿದು ವಿಜಯವೀಯುವನಹುದು 4 ಘನತೆಗೇರುವ ನಮ್ಮ ವನಿತೆಯರೆ ನಿಮ್ಮ ಮನೆತನವ ಬೆಳಗಿಸಿರೆ ಇನಿಯರನು ಹುರಿಡಿಸಿರೆ 5 ಪೌರುಷವು ಪುಟ್ಟುವೋಲ್ ವೀರರಹುದೆನ್ನುವೋಲ್ ವೀರಮಾತೆಯರೆ ನೀಂ ವೀರಪುತ್ರರ ಪಡೆಯಿರೆ 6 ಮಕ್ಕಳಂ ತಕ್ಕೈಸಿ ತಕ್ಕಂತೆ ನುಡಿಗಲಿಸಿ ಕಕ್ಕುಲಿತೆಯಿಂ ನೋಡಿ ಅಕ್ಷರಸ್ಥರ ಮಾಡಿ 7 ಮಹಿಳೆಯರೆ ಮಾದರಿಯ ಗೃಹಿಣಿರಹೆ ಶಾರದೆಯ ಮಹಿಮೆಯದು ಕರಮೆಸೆಗೆ ವಿಹಿತಮದು ನಿಮ್ಮೊಳಗೆ 8 ದೇಶದೇಳಿಗೆಯಲ್ಲಿ ಆಸೆ ನಿಮಗಿರುವಲ್ಲಿ ದೇಶೀಯವ್ರತಧರಿಸಿ ಐಶ್ವರ್ಯಮಂ ಬೆಳಸಿ 9 ಪತಿ ಸುತ ಸಹೋದರರ ಹಿತವೆಳಸಿ ಬಾಂಧವರ ಮತವರಿತು ನಡೆಯಿಸಿರೆ ವ್ರತಸಾಂಗವೆನ್ನಿಸಿರಿ 10 ಇನ್ನೇಳಿ ಕೈನೀಡಿ ಸನ್ಮಾನೈಯರೆ ನೋಡಿ ಧನ್ಯವಾದವ ಮಾಡಿ ಮನ್ನಿಸಿರೆ ದಯೆಗೂಡಿ 11 ಬಾಲಕರು ಬೇಡುವರು ಮೇಲೆನಿಪ ಮಮತೆಯನು ಶಾಲುಸಕಲಾಸೆಯನು ಬಾಲಕರು ತಾ ಬಯಸರು 12 ತಾಯಿಯರೆ ನೀವಿತ್ತ ತಾಯ್ನಲವನಿತ್ತ ತಾಯೆಂದುಕೊಳ್ಳುವರು ಈಯಣುಗರ್ ಕೇಳಿದನು 13 ಕನ್ಯೆಯರು ಹಾಡುವರು ಕನ್ನಡವ ಪಾಡುವರು ಕನ್ನಡಕೆ ಜಯವಾಗಲೆನ್ನುವರು ನಲವೀಗೆ 14 ಹರಕೆಯನು ಸಲ್ಲಿಸಿರೆ ತರಳರಂ ಮನ್ನಿಸಿರಿ ಮರಳಿ ಬಾರೆಂದೆನಿರೆ ಹರುಷದಿಂ ಬೀಳ್ಕೊಡಿರಿ15 ವರಶೇಷಗಿರಿವಾಸ ಕರುಣದಿಂದಲೆ ಲೇಸ ಧರೆಗೆಲ್ಲ ಸಂತೋಷ ದಯೆಗೆಯೈ ಸರ್ವೇಶ16
--------------
ನಂಜನಗೂಡು ತಿರುಮಲಾಂಬಾ
ಮೊದಲನೇ ಅಧ್ಯಾಯ ಪಾತಿವ್ರತ್ಯ ಮಹಾತ್ಮೆ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಬೋಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ನಿರ್ದೋಷ ಗುಣಪೂರ್ಣ ವಿಷ್ಣು ಸರ್ವೋತ್ತಮ ಸ್ವತಂತ್ರ ಶ್ರೀದ ಶ್ರೀಪತಿ ಜಗಜ್ಜನ್ಮಾದಿಕರ್ತನು ಸಚ್ಛಾಶ್ರ - ದಿಂದಲೇ ವೇದ್ಯನು ಮೂರು ವಿಧ ಜೀವರಿಗೆ ಯೋಗ್ಯ ಸಾಧನಕೆ ಗತಿಯ ಮಾಡುವ ಅವತಾರ ಲೀಲಾ 1 ಸುಪುಷ್ಪಭವ ಬ್ರಹ್ಮದೇವನೋಳ್ ತತ್ ಶಬ್ದವಾಚ್ಯನು ಶ್ರೀ ಪುರುಷೋತ್ತಮನೆ ಪ್ರಜಾಸೃಷ್ಟಿ ಮಾಡಿಸುವನು ತ್ರಿಪುರಾರಿ ಭಸ್ಮಧರ ರುದ್ರನೋಳ್ ತನ್ನಾಮದಲಿ ಶ್ರೀ ಪುರುಷೋತ್ತಮನೇ ಸಂಹಾರ ಮಾಳ್ಪ ಅಂತರ್ಯಾಮಿ 2 ಉರುಜ್ಞಾನ ಸುಖ ಬಲಾದ್ಯಮಿತ ಗುಣಧಾಮನ ಕರ ಚರಣಾದ್ಯವಯವಕ್ಕೂ ಅವಗೂ ಅವನು ಧರೆಯಲ್ಲಿ ಅವತಾರ ಮಾಡುವ ರೂಪಗಳಿಗೂ ಪರಿಪೂರ್ಣವಾಗಿ ಅಭೇದ ಭೇದಲೇಶವೂ ಇಲ್ಲ 3 ದ್ವಿ ಷೋಡಶ ಶುಭಲಕ್ಷಣ ತನುವುಳ್ಳ ಬ್ರಹ್ಮಗೂ ವಿಷಕಂಠ ರುದ್ರಗೂ ಪರಸ್ಪರ ಭೇದ ಅಂತಸ್ಥ ವಿಷ್ಣುಗೂ ಇವರುಗಳಿಗೂ ಭೇದವು, ಅಂತರ್ಯಾಮಿ ವಿಷ್ಣು ಒಬ್ಬನೇ ದ್ವಿರೂಪದಲ್ಲಿ ಇವರಲ್ಲಿಹ 4 ಹತ್ತಾವತಾರ ಮತ್ಸ್ಯಾದಿರೂಪಗಳು ಮಾತ್ರವಲ್ಲ ಅನಂತರೂಪನು ಅನಂತಗುಣ ಕ್ರಿಯಾವಂತನು ಕ್ಷಿತಿಯಲ್ಲಿ ಬಲಕಾರ್ಯಕ್ಕೆ ಕೆಲವು ಅವತಾರ ಹಿತಕರ ಹಲವು ಜ್ಞಾನಬೋಧಕ್ಕೇವೇ ಕೆಲವು 5 ಧ್ಯಾತ್ಮನು ಜ್ಞಾನಕಾರ್ಯಕ್ಕಾಗಿ ಅವತರಿಸುವನು ಶ್ರೀಮಾನ್ ಹಯಗ್ರೀವ ಸನತ್ಕುಮಾರ ದತ್ತ ಕಪಿಲ ಧೀಮಾನ್ ಪರಾಶರ ವಾಸವೀಸೂನು ಐತರೇಯಾದಿ 6 ದ್ವಾಪರದಲ್ಲೇವೆ ಅಲ್ಲಲ್ಲಿ ಕಲಿವಿಷ ಹರಡಿ ತಪೋಧನರು ಗೌತಮರು ಶಪಿಸೆ ಜ್ಞಾನಕುಂದೆ ಶ್ರೀಪ ವೇದವ್ಯಾಸ ಜ್ಞಾನ ತೇಜಃಪುಂಜ ಬಂದು ತೋರಿ ಆ ಪೀಡಿಸುವ ಅಜ್ಞಾನ ತರಿದು ಸಜ್ಞಾನ ಇತ್ತ 7 ಹಿಂದೆ ಬ್ರಹ್ಮದೇವರಾಜÉ್ಞಯಿಂ ಅತ್ರಿಋಷಿವರ್ಯರು ನಿಂತರು ಋಕ್ಷಗಿರಿಯಲ್ಲಿ ಅಪತ್ಯಾಪೇಕ್ಷೆಯಿಂದ ಅದ್ಭುತ ತಪವಚರಿಸಿ ಜಗದೀಶ್ವರ ಸಮ - ಪುತ್ರ ಕೊಡೆ ಚಿಂತಿಸಿ ಹರಿಯಲ್ಲಿ ಶರಣಾದರು 8 ಹರಿ ತಾನು ತನ್ನ ಅಧಿಷ್ಟಾನರಾದ ಬ್ರಹ್ಮೇಶ್ವರ ಕರಕೊಂಡು ಋಷಿ ಮುಂದೆ ನಿಂತು ಯುಕ್ತಮಾತನ್ನಾಡಿ ಮೂರು ಮಂದಿಗಳು ತಾವು ಪುತ್ರರಾಗುವೆವು ಎಂದ ತರುವಾಯ ತಾನಿತ್ತ ವರವ ಒದಗಿಸಿದನು 9 ಭಾಗವತ ಈ ವಿಷಯ ಒಳಗೊಂಡು ಇಹುದು ಪತಿ ವೇದವ್ಯಾಸ ಸಂಕೃತ ಈ ಭೂರಾದಿ ಜಗತ್ತಿನಲ್ಲಿ ಪ್ರಖ್ಯಾತ ಪುರಾಣಂಗಳೊಳ್ ಶ್ರೀ ಭಗವಾನ್ ದತ್ತಾತ್ರಯನ ಅವತಾರವು ವೇದ್ಯ 10 ಗೀರ್ವಾಣ ಛಂದಸ್ಸು ಅಷ್ಟಿಯಲಿ ಬರೆಯುವದೆಂದು ಶ್ರೀವರನ ಹಿತಾಜÉ್ಞಯಿಂ ಪ್ರಸನ್ನ ಶ್ರೀನಿವಾಸೀಯ ಶ್ರೀವಿಷ್ಣು ಸಹಸ್ರನಾಮ ಭಾಷ್ಯ ಕನ್ನಡದಲ್ಲಿ ಅಳವಡಿಸಿದಂತೆ ಅಷ್ಟೀ ಛಂದಸ್ಸಲಿ ಈ ಗ್ರಂಥವ 11 ಈ ಗ್ರಂಥದಲಿ ಶ್ರೀಭಾಗವತವು ಮಾರ್ಕಂಡೇಯವು ಭಾಗವತರಿಗೆ ಉಪಾಸನಾ ಹೇತು ಪಂಚರಾತ್ರ ಆಗಮವು ಒಳಗೊಂಡ ವಿಷಯಗಳು ಇವೆಯು ಕಾಯ ಶುದ್ಧಿಯಿಂ ಪಠಣೀಯವು 12 ಗುರುಮಂತ್ರ ಉಪದೇಶವಿಲ್ಲದಂತಹ ಸ್ತ್ರೀ ಜನ ಶೂದ್ರರು ಬ್ರಹ್ಮಬಂಧುಗಳು ಈ ಗ್ರಂಥ ಪಠಿಸಲು ಹರಿಭಕ್ತ ಸಾಧು ವೈದಿಕ ಬ್ರಾಹ್ಮಣರ ಅಪ್ಪಣೆ ಕೋರಿ ಅವರ ಅಪ್ಪಣೆಯಿಂದ ಓದಬಹುದು 13 ಪ್ರತಿಷ್ಠಾನಪುರದಲ್ಲಿ ಕೌಶಿಕಾಹ್ವಯ ದ್ವಿಜನು ವ್ಯಾಧಿ ಪೀಡಿತನು ಕುಷ್ಠಿ ನಡಮಾಡಲು ಅಶಕ್ತ ಆತನ ಪತ್ನಿಯು ಸಾಧುಗುಣವತಿ ಬಲುಶ್ರೇಷ್ಠ ಪತಿ ಹೇಳಿದಂತೆ ನಡೆಯುವಳು 14 ಒಂದು ದಿನ ಆ ಬ್ರಾಹ್ಮಣನು ನೋಡಿದ ಬಾಗಿಲಾಚೆ ಬೀದಿಯಲಿ ಹೋಗುತ್ತಿದ್ದ ಸುಂದರಿ ವೇಶ್ಯೆಯೋರ್ವಳಲಿ ಸೋತು ಮನ ಅವಳನ್ನು ತಾನು ಹೊಂದಬೇಕೆನ್ನಲು ಸಾಧ್ವಿಸತಿ ಪತಿಯನ್ನು ಎತ್ತಿದಳು ಸೊಂಟದಲಿ 15 ರಾತ್ರಿ ಕತ್ತಲೆಮಾರ್ಗ ತಿಳಿಯದಲೆ ಪತಿಯನ್ನು ಹೊತ್ತುಕೊಂಡು ಹೋಗುವಾಗ ಪತಿಯ ಕಾಲು ತಾಕಿತು ಹಾದಿಯಲ್ಲಿ ಕಬ್ಬಿಣ ಸಲಾಕದಲ್ಲಿ ಚುಚ್ಚಿಸಿ ಇದ್ದ ಕಟಿ ಸಮೀಪ ಹಾಹಾ 16 ಅನ್ಯಾಯದಿ ಆ ರಾಜ್ಯದರಸ ಆ ಮಹಾಮುನಿಯ ಧನಚೋರನೆಂದು ಶೂಲಕ್ಕೆ ಹಾಕಿಸಿದ್ದ ಆ ಶೂಲ ಕಾಣದೇ ಕೌಶಿಕನ ಕಾಲ್ತಗಲಿ ಬಲು ನೋವಾಗಿ ಮುನಿ ಶಾಪವಿತ್ತರು ಸೂರ್ಯೋದಯಲ್ಲೇ ಸಾಯೆಂದು 17 ಹಾಹಾ ಇದು ಏನು ಮುನಿಗಳಿಗೆ ನೋವಾಯಿತಲ್ಲಾ ಮಹಾತ್ಮರ ಶಾಪ ವೀಣಾಗಲಾರದು ಮಾಂಗಲ್ಯವ ಪತಿ ಅಂತಸ್ಥ ಶ್ರೀಹರಿಯ ಸ್ಮರಿಸಿ ಆ ಪತಿವ್ರತೆ ಹೇಳಿದಳು 18 ಸೂರ್ಯೋದಯವಾಗದಿದ್ದರೆ ಶಾಪವು ಫಲಿಸದು ಸೂರ್ಯೋದಯವಾಗಬೇಡಿ ಎಂದು ಹೇಳಿದಳು ಸಾಧ್ವಿ ಆರ್ಯಧರ್ಮ ಲೋಕಕಾರ್ಯ ಸರ್ವವೂ ಸ್ತಬ್ಧವಾದವು ಎಲೆಲ್ಲೂ ಕತ್ತಲೆಯು ಭಾನು ಉದಯಿಸಲಿಲ್ಲ 19 ಇಂದ್ರಾದಿ ದೇವರ್ಗಗಳು ಬ್ರಹ್ಮನಲಿ ಮೊರೆಯಿಡಲು ಪತಿವ್ರತೆ ಮಹಾತ್ಮನೆ ಮತ್ತೊಬ್ಬ ಪತಿವ್ರತೆಯೇ ಪ್ರತಿ ಮಾಡುವಳು ಅತ್ರಿಋಷಿ ಪತ್ನಿ ಅನಸೂಯಾ ಪತಿವ್ರತಾ ರತ್ನಳಾ ಸಹಾಯ ಕೇಳೆಂದರು ವೇಧ 20 ಶಕ್ರಾದಿ ಸುರರುಗಳು ಅನಸೂಯಾದೇವಿಯಲಿ ಕೋರಿಕೆ ಮಾಡಲು ಆಕೆ ದೇವತೆಗಳ ಸಮೇತ ಧೀರ ಪತಿವ್ರತೆಯಾದ ಕೌಶಿಕಾ ಗೃಹಕೆ ಹೋಗಿ ಪರಿಚಯ ಮಾಡಿಕೊಂಡು ಕೊಂಡಾಡಿದಳಾ ಸಾಧ್ವಿಯ 21 ಮಹಾಭಾಗರು ಇಂದ್ರಾದಿಗಳಿಗೂ ಅನಸೂಯಗೂ ವಿಹಿತೋಪಚಾರ ಪೂಜಾದಿಗಳ ಮಾಡಿ ಆ ಸಾಧ್ವಿ ಮಹಾಭಾಗ್ಯ ಆಗಮನ ಎನ್ನುತ್ತ ಕಾರಣವನು ಬಹು ಹಿತದಲಿ ಕೇಳಿದಳು ತನ್ನ ಸ್ಥಿತಿ ಹೇಳಿ 22 ಸೂರ್ಯ ಉದಿಸುವದಕ್ಕೆ ಪತಿ ಬದುಕಿಸಲ್ಪಡುವನು ಎನ್ನುತೆ ಕೌಶಿಕಾ ಸಾಧ್ವಿಯು ಅನುಮೋದನೆ ಕೊಂಡು ಇನ ಉದಿಸಲಿ ಎಂದ ಅಘ್ರ್ಯ ಕೊಟ್ಟಳು ಮುದದಿ 23 ಸೂರ್ಯ ಮುನಿಶಾಪ ಫಲಿಸಿತು ಬಿದ್ದ ಕೆಳಗೆ ಕೌಶಿಕ ತತ್‍ಕ್ಷಣವೇ ಬದುಕಿ ಎದ್ದ ಪತಿವ್ರತಾ ಶಿರೋಮಣಿ ಅನಸೂಯಾ ದೇವಿ ಪ್ರಭಾವ ಪತಿವ್ರತಾ ಮಹಾತ್ಮೆ ಜ್ವಲಿಸಿತು ಲೋಕದಲ್ಲಿ 24 ಕೌಶಿಕನ್ನ ಬದುಕಿಸಿದ್ದು ಮಾತ್ರವಲ್ಲದೇ ಸರ್ವ ಕುಷ್ಠಾದಿ ರೋಗ ಪರಿಹರಿಸಿ ಯುವವಾಗಿ ಮಾಡಿ ಅಯುಷ್ಯ ಬಹುನೂರು ವರ್ಷಗಳ ಅನುಗ್ರಹಿಸಿ ತುಷ್ಠಿ ಸುಖಜೀವನ ಒದಗಿಸಿದಳ್ ಅನಸೂಯಾ 25 ಅನಸೂಯೆಯ ಪಾತಿವ್ರತ್ಯ ಮಹಾತ್ಮೆಯ ಶ್ಲಾಘಿಸಿ ಏನು ವರ ಕೇಳಿದರೂ ಕೊಡುವವೆಂದು ಸುರಪ ಆನಿಮಿಷರು ಹೇಳಲು ಪತಿವ್ರತಾ ಶಿರೋಮಣಿ ವಿಧಿ ಶಿವ ತನ್ನಲ್ಲವತರಿಸಲೆಂದಳು 26 ತಥಾಸ್ತು ಎಂದ ದೇವತೆಗಳ ವರ ಸತ್ಯಮಾಡೆ ಸುತಪಸ್ವಿ ಅತ್ರಿಗೆ ಹಂಸ ವೃಷಾರೂಡರು ಪ್ರತ್ಯಕ್ಷದಿ ಹೇಳಿದಂತೆಯೂ ಅನಸೂಯ ಅತ್ರಿಗೆ ಪುತ್ರರೆಂದುದಿಸಿದರು ಸೋಮಸ್ತ ಬ್ರಹ್ಮೇಶ ವಿಷ್ಣು 27 ಮುಖ್ಯಪ್ರಾಣಾಂತರ್ಗತನೇ ಪಂಕಜಾಸನ ಪಿತನೆ ಶ್ರೀಕರಾರ್ಚಿತ ಶ್ರೀಪ್ರಸನ್ನ ಶ್ರೀನಿವಾಸ ಕಪಿಲ ಅರ್ಕಕೋಟ್ಯಾಮಿತ ತೇಜನೇ ಬ್ರಹ್ಮಾದ್ಯಮರ ಗುರೋ ಜಗದೀಶ ದತ್ತಾತ್ರಯನಮೋ ಪ್ರಿಯತಾಂ ಶರಣು 28 ಎರಡನೇ ಅಧ್ಯಾಯ ಶ್ರೀ ದತ್ತಾತ್ರಯ ಪ್ರಾದುರ್ಭಾವ ಸಾರ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಭೋಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ಬ್ರಹ್ಮಾವಿಷ್ಟನು ಸೋಮ ಔಷಧಿಗಳ ರಾಜನಾದ ಉನ್ಮಾದ ಚರ್ಯದಿ ಕೋಪ ಪ್ರಕಟಿಸಿ ಮೆರೆವರು ತಮ್ಮ ಶಿಷ್ಯರೊಡಗೂಡಿ ಶಿವಾವತಾರ ದೂರ್ವಾಸ ಸುಮ್ಮನಸ ಸಜ್ಜನ ಹಿತರು ದುಷ್ಟನಿಗ್ರಹರು 1 ತನ್ನನ್ನ ತಾನೇ ಸುತನಾಗಿ ದತ್ತಮಾಡಿಕೊಂಡನು ವಿಷ್ಣು ಅತ್ರಿ ದಂಪತಿಗೆ ಆದ ಕಾರಣ ಪ್ರಖ್ಯಾತೆ ಉನ್ನಾಮ ದತ್ತಾತ್ರಯ ಕ್ಷೋಣಿ ಯೋಗ್ಯಾಧಿಕಾರಿಗಳಿಂ ಘನಭಕ್ತಿಯಿಂ ಶುಚಿಯಿಂ ಜಪ್ಯ ಸ್ಮರಣೀಯಿಂ ಶ್ರೋತವ್ಯ ಜಯತು 2 ಕಲ್ಯಾಣತಮ ಪೂರ್ಣ ಅಮಲ ಗುಣಗಣ ಸಿಂಧು ಮಾಲೋಲ ಶ್ರೀವಕ್ಷ ಶ್ರೀಶನೇ ಪ್ರಾದುರ್ಭವಿಸಿದನು ಚೆಲುವ ಅನುಪಮ ಸೌಂದರ್ಯಸಾರ ಸರ್ವೋತ್ತಮ ಲೀಲಾನಂದಮಯ ಚಿನ್ಮಾತ್ರಗಾತ್ರ ಭಕ್ತೇಷ್ಟದಾತ 3 ಕಮಲಾಸನಾವಿಷ್ಟ ಸೋಮ ರುದ್ರಾವತಾರ ದೂರ್ವಾಸ ತಮ್ಮ ತಮ್ಮ ಉದ್ಯೋಗಸಾಧನಕೆ ಬೇರೆ ಬೇರೆ ಹೋಗೆ ಸುಮನೋಹರ ರೂಪ ಶ್ರೀಮನೋರಮ ದತ್ತಾತ್ರಯ ಸುಮಹಾ ಯೋಗಿಯಾದ ನಿಸ್ಸಂಗ ಯೋಗೇಶ್ವರೇಶ್ವರ 4 ಅತ್ರೇಯರು ಮೂವರು ಹೀಗೆ ಬೇರೆ ಬೇರೆಯಾಗಿಯೇ ತಮ್ಮ ತಮ್ಮ ರೂಪದಲ್ಲೇ ಇದ್ದರು ಒಂದಾಗಿ ಅಲ್ಲ ಸೋಮ ಶಿವ ದತ್ತರಿಗೆ ಬೇರೆ ಬೇರೆ ಮಂತ್ರವುಂಟು ಸೋಮ ಪಂಚ ಶಿವ ಪಂಚ ದತ್ತ ನವಅಕ್ಷರವು 5 ಪ್ರೋದ್ಯ ದಿವಾಕರ ಪೋಲ್ವ ವರ್ಣವುಳ್ಳ ಶುಭಗಾತ್ರ ಆದಿತ್ಯ ಸಹಸ್ರಾಮಿತ ಮಹೋತ್ಕøಷ್ಟ ತೇಜಃಪುಂಜ ವ್ಯಾಪ್ತ ಸರ್ವತ್ರ ಜ್ಞಾನಾಭಯಕರನು ಬ್ರಹ್ಮಾದಿ ತ್ರಿದಿವ ಸುಬೋಧಕನು ಕಪಿಲನು ದತ್ತಾತ್ರಯ 6 ಇಂಥ ಮಹಾಮಹಿಮನು ಕಪಿಲ ದತ್ತಾತ್ರಯನು ಅಧಿಕಾರಿಗಳಿಗೆ ಅಪರೋಕ್ಷಜ್ಞಾನ ಮೋಕ್ಷದಾತ ಶ್ರೋತೃ, ಮಂತ್ರ, ಧ್ಯಾತೃಗಳಿಗೆ ಕಪಿಲ ದತ್ತಾತ್ರಯ ಭಕ್ತಿ ಮೆಚ್ಚಿ ಸದಾ ಸಂರಕ್ಷಿಸಿ ಇಷ್ಟಾರ್ಥ ಕೊಡುವ 7 ಪದ್ಮ ಭವಾದ್ಯಮರರಿಂ ಧ್ಯಾತ ದತ್ತಾತ್ರಯ ಹರಿ ಮೇದಿನಿ ನರರಂತೆ ಅವತಾರ ಲೀಲೆ ಚರಿಸಿ ಅದ್ಭುತ ಯೋಗಾನುಷ್ಠಾನದಿ ಇರುತಿರೆ ಜನರು ಈತನ ಸೌಂದರ್ಯ ಯೋಗಸಾಮಥ್ರ್ಯ ಹೊಗಳಿದರು 8 ಸಹಸ್ರಾರು ಋಷಿಪುತ್ರ ಬ್ರಹ್ಮಚಾರಿಗಳು ಬಂದು ಅಹರ್ನಿಶಿ ಯೋಗೇಶ್ವರೇಶ್ವರ ದತ್ತನಾಶ್ರಮದಿ ಬಹಳುತ್ಸಾಹದಲಿ ಸುತ್ತು ಮುತ್ತು ಗುಂಪುಗೂಡಿ ಮಹಾಯೋಗಾಭ್ಯಾಸಕ್ಕೆ ಚ್ಯುತಿಯ ಕಲ್ಪಿಸಿದರು 9 ಯೋಗ್ಯರು ಸಜ್ಜನರು ಈ ಭಕ್ತ ಋಷಿಕುವರರು ಯೋಗ್ಯಸಾಧನೆ ಅವರವರ ಆಶ್ರಮದಲ್ಲಿಯೇ - ಗೈಯಲಿ ಬೇಕೆಂದು ಅವರುಗಳು ಹೋಗೋ ಉಪಾಯ ನಿಶ್ಚೈಸಿ ಮುಳುಗಿದ ದತ್ತನು ಸರೋವರದೊಳು 10 ಸುರಮಾನದಿ ಸಾವಿರವರ್ಷ ಭಗವಾನ್ ದತ್ತನು ಸರೋವರದೊಳಿದ್ದನು ಹೊರಜನಕ್ಕೆ ಕಾಣದೆ ಆ ಋಷಿಪುತ್ರರು ತೀರದಲಿ ಇಕೋ ಈಗ ನಾಳೆ ಬರುವನು ಮೇಲೆ ಎಂದು ಕಾಯುತ್ತಿದ್ದರು ದೃಢದಿ 11 ಜಲಧಿ ಉಕ್ಕಿ ಹರಿದು ಕ್ಷೋಣಿಯ ಮುಳುಗಿಸದೆ ಜಲಮಧ್ಯ ತಾನಿದ್ದು ಕಾಯುವ ವಡವಾ ಮುಖಾಗ್ನಿ ಜಲಮಧ್ಯದಿ ಈಗ ಹೊಕ್ಕಿರುವ ದತ್ತಾತ್ರಯನು ಮುಳುಗಿರುವುದು ಆಶ್ಚರ್ಯವಲ್ಲ ಈರ್ವರೂ ಏಕ 12 ಬಲುದೀರ್ಘ ದೇವವರ್ಷಗಳು ಸಾಸಿರವಾದರೇನು ಶೀಲತಮ ವರವಾಯುವು ವರುಣನು ಬುಧಾದಿ ಜಲಾಭಿಮಾನಿಗಳು ಕಿಂಕರರಾಗಿ ಇರುತಿಹರು ಜಲಶಾಯಿ ನಾರಾಯಣ ಅವತಾರ ದತ್ತನಿಗೆ 13 ಒಂದು ದಿನ ಕೆರೆನೀರು ಚಲಿಸಲು ಸಂತೋಷದಿ ಬಂದರೂ ಬಂದರೂ ಎಂದು ಕೂಗೆ ಋಷಿಕುವರರು ಇಂದಿರಾಪತಿ ದತ್ತ ಮೇಲೆದ್ದು ಬಂದ ಬದಿಯಲ್ಲಿ ಇಂದಿರಾಂಗಿ ನಾರೀಮಣಿ ಓರ್ವಳ ಆಲಿಂಗಿಸುತ 14 ಯಾರನ್ನೂ ಲೆಕ್ಕಿಸದೆ ಕಾಮವಿಲಾಸ ಕೇಳಿಯ ಆ ಸ್ತ್ರೀಯೊಡನೆ ಮಾಡುತ್ತಿದ್ದುದು ಕಂಡು ಯುವಕರು ಯೋಗಿ ಹೀಗಾದರೆ ಎನ್ನುತ ತ್ವರಿತ ತೆರಳಿದರು ಜುಗುಪ್ಸೆಯಲ್ಲಿ ತ್ಯಜಿಸಿ 15 ಆ ಪುಣ್ಯವಂತ ಋಷಿಪುತ್ರರು ತಿಳಕೊಳ್ಳಲಿಲ್ಲ ಆ ಸ್ಛುರದ್ರೂಪಿಣಿ ನಾರಿ ಸಾಕ್ಷಾತ್ ಲಕ್ಷ್ಮೀದೇವಿಯೆಂದು ವಿಪುಲ ಮನ ಹರುಷ ತೋರಿಸಿ ದತ್ತಾತ್ರಯನು ಕೈಪಿಡಿದು ಲಕ್ಷ್ಮಿಯ ಕರೆದುಹೋದ ಆಶ್ರಮಕೆ 16 ಯಾವ ತನ್ನಾಶ್ರಮದಿ ಸ್ವಾಧ್ಯಾಯ ಪ್ರವಚನಗಳ್ ದಿವ್ಯ ಯೋಗ ಅಭ್ಯಾಸ ಶಿಷ್ಯರ್ಗೆ ಶೀಕ್ಷಾದಿಗಳ್ ಯಾವಾಗಲೂ ಹಿಂದೆ ನಡೆಸುತ್ತಿದ್ದನೋ ಅಲ್ಲಿ ಈಗ ದೇವಿಯೊಡನೆ ಲೀಲಾವಿಲಾಸಗಳ ತೋರಿಸಿದ 17 ಮಂದ ಧೀಗಳು ಈ ವಿಡಂಬನೆ ಕಂಡು ಮೋದದಲಿ ಶ್ರೀದತ್ತ ಈ ರೀತಿ ಆದನಲ್ಲಾ ಎಂದು ಮಾತನಾಡೆ ಸುಧೀಗಳು ಬೃಹಸ್ಪತ್ಯಾದಿಗಳು ದತ್ತಾತ್ರಯನು ಮೋದಚಿನ್ಮಯ ನಿರ್ದೋಷ ಹರಿ ಶ್ರೀಶನೆ ಎಂದರÀು 18 ಮುಖ್ಯಪ್ರಾಣಾಂತರ್ಗತನೇ ಪಂಕಜಾಸನ ಪಿತನೆ ಶ್ರೀಕರಾರ್ಚಿತ ಶ್ರೀಪ್ರಸನ್ನ ಶ್ರೀನಿವಾಸ ಕಪಿಲ ಅರ್ಕಕೋಟ್ಯಮಿತ ತೇಜನೇ ಬ್ರಹ್ಮಾದ್ಯಮರ ಗುರೋ ಜಗದೀಶ ದತ್ತಾತ್ರಯ ನಮೋ ಪ್ರಿಯತಾಂ ಶರಣು 19 -ಇತಿ ಎರಡನೇ ಅದ್ಯಾಯ ಸಂಪೂರ್ಣಂ - ಮೂರನೇ ಅದ್ಯಾಯ ಸಂಪತ್‍ಲಕ್ಷ್ಮೀ ವೃತ್ತಾಂತ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಬೊಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ಸುರಪ ಜಂಭಾಸುರನಿಂದ ಅಪಜಯವ ಕೊಂಡು ಸುರಗುರು ಪ್ರೇರಣೆಯಿಂ ದತ್ತಾತ್ರಯನಲಿ ಹೋಗಿ ಶರಣು ಹೊಕ್ಕು ಸೇವಗೈಯಲು ಆಗ ಅವನನ
--------------
ಪ್ರಸನ್ನ ಶ್ರೀನಿವಾಸದಾಸರು
ಮೊದಲೆ ಪಾಲಿಸೆನ್ನ ಮೊದಲಗಟ್ಟಿ ಹನುಮನೆ ಮುದದಿ ಜಾನಕಿಗೆ ಮುದ್ರೆಯಿಟ್ಟ ವಾನರನೆ ಪ ದಶರಥಾತ್ಮಜನ ಬಳಿಗೆ ವಾರಿಧಿನ್ಹಾರಿ ವಸುಧೆ ಕುಶಲವಾರ್ತೆ ತಂದಸುರನ ದಶಶಿರಗಳ ಧ್ವಂಸಮಾಡಿದ 1 ದುರುಳ ದುರ್ಯೋಧನರ ಭಾರತೀಶ ಭಾಳ ದಯವನಿಟ್ಟು 2 ವಂದಿಸುವೆನು ಶ್ರೀಮದಾನಂದತೀರ್ಥರಾಗಿ ನಂದನ ಕಂದ ಭೀಮೇಶ ಕೃಷ್ಣನರವಿಂದ ಪಾದಕ್ವಂದಿಸುವನೆ 3
--------------
ಹರಪನಹಳ್ಳಿಭೀಮವ್ವ
ಮೋಹನ ಕೃಷ್ಣವಿಠಲ | ಸಲಹ ಬೇಕಿವಳಾ ಪ ದೇಹ ಮಮತೆಯ ಕಳೆದು | ವೈರಾಗ್ಯವಿತ್ತೂ ಅ.ಪ. ವನಧಿ ಉತ್ತರಿಪ | ನವಪೋತ ಹರಿಯಾ |ಸ್ತವನ ಗೈಯುವ ಭಕ್ತಿ | ಪ್ರವಹ ಕೊಟ್ಟಿವಳಿಗೆಹವಣಿಸೋ ಸಾಧನವ | ಶ್ರೀವರನೆ ಕೃಷ್ಣಾ 1 ಭಾರತೀ ಪತಿಯಾದ | ಮಾರುತದ ಮತದಲ್ಲಿಸಾರತತ್ವವ ತಿಳಿಸಿ | ತೋರೋ ಸುಜ್ಞಾನ |ಮಾರುತಾಂತಾರ್ಗತನೆ | ಧೀರ ಸುಜನರ ಸಂಘಸಾರುವಂತೆಸಗೊ ಹರಿ | ಕಾರುಣ್ಯ ಮೂರ್ತೇ 2 ಪತಿಸುತರು ಹಿತರಲ್ಲಿ | ವ್ಯಾಪ್ತ ಶ್ರೀ ಹರಿಯೆಂಬಗುಪ್ತ ಮಹಿಮೆಯ ತಿಳಿದು | ಸೇವೆ ಸಲ್ಲಿಸುತಾ |ಅತಿಶಯದ ಆನಂದ | ಗತಿಯ ಸೇರುವ ಹವಣೆಕೃತಿಪತಿಯ ತೋರೆಂದು | ಪ್ರಾರ್ಥಿಸುವೆ ಹರಿಯೇ 3 ಗುರುಕರುಣವಿಲ್ಲದಲೆ | ಹರಿಯೊಲಿಯನೆಂದೆಂಬವರತತ್ವ ಸಾರವನೆ | ಕರುಣಿಸುತ ಹರಿಯೇ |ಹರಿಗುರು ಸೇವೆಯನು | ಕರಣತ್ರಯದಲಿ ಮಾಳ್ದವರಮತಿಯ ಪಾಲಿಸುತ | ಪೊರೆಯ ಬೇಕಿವಳಾ 4 ಸೃಷ್ಠಿ ಸ್ಥಿತಿ ಲಯ ಕರ್ತ | ವಿಷ್ಣು ಲೀಲಾಮೃತವಸುಷ್ಟುಸಂತತ ಸವಿವ | ಶ್ರೇಷ್ಠ ಸಾಧನವಾಕೊಟ್ಟು ಪಾಲಿಪುದೆಂಬ | ಇಷ್ಟವನೆ ಸಲಿಸೆಂದುಕೃಷ್ಣ ಗುರು ಗೋವಿಂದ | ವಿಠಲ ಪ್ರಾರ್ಥಿಸುವೇ 5
--------------
ಗುರುಗೋವಿಂದವಿಠಲರು
ಯಾಕೆ ಜೀವನವೆ ನೀ ಶ್ರೀಕಾಂತನನು ಮರೆವಿ | ವಿವೇಕವೇ ನಿನಗಿದು ? ಪ ಜೋಕೆಯಿಂದಲಿ ನಿನ್ನ ಸಾಕುವ ಶ್ರೀ ಹರಿಯು | ಬೇಕಾದ ವರವೀವ ಭಕ್ತವತ್ಸಲ ದೊರೆಯಾಅ.ಪ ಲೇಸಾದರು ವಿಷಯದಾಸೆಯ ಬಿಡಲೊಲ್ಲಿ | ಏಸು ಜನ್ಮಂಗಳಾದರು ಈ ಶರೀರವು ನಿನ್ನದೆಂದು ತಿಳಿದು || ಪೋಷಿಸುವಿಯೊ ಬರಿದೆ ದೋಷರಹಿತ ಶ್ರೀನಿ- | ವಾಸನ್ನ ನೆನೆದು ನಿರ್ದೋಷವ ಕಳೆದೆನ್ನ ಪೋಷಿಸು ಎನ್ನದಲೆ 1 ಸತಿ-ಸುತರನು ನೀನು ಸಲಹುವೆನೆನುತಲಿ | ಅತಿ ಚಿಂತೆ ನಿನಗ್ಯಾತಕೊ ಗತಿ ನಿನಗಾಗುವ || ಹಿತಚಂತನೆ ಮಾಡೊ ಸದ್ಗತಿಯಾಗುವ ತನಕ | ರತಿಪತಿ ಪಿತನ ನೆನೆದು ನೀ ಪ್ರತಿಕ್ಷಣ ಹರಿಕಥೆ ಕೇಳದಲೆ2 ಪೊಟ್ಟೆಗೋಸುಗ ಭ್ರಷ್ಟರ ಸ್ತುತಿಸಿ ನೀ | ಕೆಟ್ಟು ಪೋಗುವಿ ಯಾತಕೋ ಜೀವನವೆ || ಪುಟ್ಟಿಸಿದವ ನಿನ್ನ ಪೊಟ್ಟೆಗೆ ಕೊಡನೇನೋ | ಕೆಟ್ಟುಹೋಗದೆ ವಿಜಯವಿಠ್ಠಲನ್ನ ನೆನೆದು ಸುಖಿಯಾಗು3
--------------
ವಿಜಯದಾಸ
ಯಾಕೆ ನಿನಗೆ ಮನವೆ ವ್ಯಥೆಯು ಎಷ್ಟು ಲೋಕನಾಯಕ ಶ್ರೀಲೋಲ ಲಕ್ಷ್ಮಯ್ಯಾ ರಮಣ ಶ್ರೀಕಪರೇಯಾ ನಿನ್ನನ್ನೇ ಸ್ಮರಿಸುವುದು ಬಿಟ್ಟೂ ಪ ಹಲವು ಹಂಬಲಿಸಿದರೇನು ಫಲಾ ವ್ಯರ್ಥಾ ಬಳಲುವದೊಂದೇ ಅಲ್ಲದೆ ಬಾಧೆಯಿಂದಾ ಅಜ ಬ್ರಹ್ಮಾಂಬರದ ವರ-----ಆರಾರಿಗ್ವಶನಲ್ಲಾ ನಳಿನಾನಾಭನಾ ದಿವ್ಯನಾಮಾ ಭಜನೆಯ ತೊರೆದು 1 ಹರಿಶ್ಚಂದ್ರಾ ನಳರಾಜಾ-------ದಶರಥ ಮೊದಲು ಪುರಾಕೃತ ಕರ್ಮಾದಿ ಭಂಗಾ ಬಡಲಿಲ್ಲೇನೋ ಅರಿತೂನೀ ಹೃದಯಾದಿ ಅನ್ಯಚಿಂತನೆ ಹಿಡಿದು ಪರಮಾತ್ಮ ಪರಬ್ರಹ್ಮನ ಪಾದಧ್ಯಾನವೇ ಬಿಟ್ಟು 2 ಧರೆಯೊಳಾಧಿಕನಾದ ಧೋರಿ 'ಹೊನ್ನವಿಠಲನ’ ಚರಣವೇ ಗತಿಯೆಂದು ಚಿತ್ತಾದಲೆ ಸ್ಥಿರವಾಗಿ ಪೂಜಿಸಿ ಸೇವೆಯನೆ ಮಾಡಿ ಪರಮಹರುಷದಿಂದ ಪಡೆಯಾದೆ ಹರಿಕರುಣಾ 3
--------------
ಹೆನ್ನೆರಂಗದಾಸರು
ಯಾಕೆ ನಿರ್ದಯ ಮಾಡಿದೆ ರಂಗಯ್ಯ ನೀನ್ಯಾಕೆ ನಿರ್ದಯ ಮಾಡಿದೆ ಪ ವ್ಯಾಕುಲ ಪಡಲಾರೆ ನಿಮ್ಮ ಲೋಕವ ಸೇರಿಸು ಅ.ಪ ದುಷ್ಟರ ಮಧ್ಯದಲ್ಲಿ ನಾನಿರಲಾರೆ ಸೃಷ್ಟಿಗೀಶ್ವರನೆ ಕೇಳು ಮುಟ್ಟಿ ಭಜಸಿ ನಿಮ್ಮ ಪಾದಪದ್ಮದ ಭಕ್ತಿಯಿಟ್ಟೇನೆಂದರೆ ದುಷ್ಟ ಇಂದ್ರಿಯ ಬಿಡದೆನ್ನ 1 ಪಂಚೇಂದ್ರಿಯಗಳೆನ್ನ ಬಹುಬೇಗ ವಂಚನೆ ಮಾಡುತಿದೆ ಪಂಚಬಾಣನ ಪಿತ ಪರಮಪುರುಷ ರಂಗ ಅ ಕಿಂಚನಾದೆ ನಿನ್ನಂಘ್ರಿಯ ಸೇರಿಸು 2 ಸಂಸಾರವೆಂಬ ಸರ್ಪ ಕಚ್ಚಿ ವಿಷ ಕ್ಷಣದಲ್ಲಿ ತಲೆಗೇರಿತು ಪರಮ ಹಂಸರ ಸಂಗದೊಳಗೆಯಿರಿಸಿ ಎನಗೆ ಭರದಿಂದೇರಿದ ವಿಷ ತಿರುಗೆಸೋ ಶ್ರೀಹರಿ 3 ಸರ್ಪ ತುಂಬಿದ ಕೂಪದಿ ಬಿದ್ದಿಹೆನು ಎನ್ನಪ್ಪ ರಕ್ಷಿಸೊ ಬೇಗದಿ ಸರ್ಪಶಯನ ಶ್ರೀಅಪ್ರಮೇಯ ರಂಗ ಇನ್ನು ಕ್ಷಿಪ್ರದಿಂ ಮುಕ್ತಿಯ ಒಲಿದು ಪಾಲಿಸು ರಂಗ 4 ಅಮ್ಬುಜನಾಭನೆ ನಿಮ್ಮ ಪಾದದಧ್ಯಾನ ಒಂದು ನಿಮಿಷವಾದರು ಮಾಡಲೀಸದು 5 ಹಿಂದಿನ ಕರ್ಮಂಗಳು ಇಂದಿರೇಶ ನಿಂದಕರ ವಶವಾಯಿತು ಇಂದು ಧರ್ಮದಲಿರ್ದೆ ಬಂಧುಗಳ ವಶವಾಯ್ತು ಇನ್ನು ಬಂಧನವೇನಯ್ಯ ಮುಕ್ತ್ಯಾನಂದ ತೋರುವುದಕ್ಕೆ 6 ಎಂದಿಗಾದರೂ ಮುಕ್ತಿಯ ಕೊಡುವೆಯೆಂದಾನಂದ ಇಂದು ಈ ಸಂಸಾರ ಬಂಧನದೊಳಗೆ ನಾ ಒಂದು ನಿಮಿಷ ಜೀವಿಸಲಾರೆನು ರಂಗ 7 ಅಂದು ದ್ರೌಪದಿ ಧ್ರುವÀ ಗಜೇಂದ್ರನ ರಕ್ಷಿಸಲಿಲ್ಲವೆ ಬಂದು ಅಂಬರೀಷ ಅಜಾಮಿಳರ ಪ್ರಹ್ಲಾದನ ಕಂಬದಿಂದಲೆ ಬಂದು ಕಾಯ್ದ ಗೋವಿಂದ 8 ಭಕ್ತವತ್ಸಲನೆಂತೆಂಬೊ ಬಿರುದು ಈಗ ವ್ಯರ್ಥವಾಯಿತೆ ಶ್ರೀರಂಗ ಉತ್ತಮ ಗುರುಗಳು ಶ್ರೇಯೋನಿಧಿಗಳ ವಾಕ್ಯ ಸತ್ಯವ ಮಾಡಿ ಮುಕ್ತ್ಯಾನಂದ ಪಾಲಿಸು 9 ರಂಗನಾಥ ನೀ ಕೈ ಬಿಟ್ಟರೆ ಎನ್ನ ಲೋಕಮಾತೆ ಬಿಡುವಳೆ ಬೇಗ ಮುಕ್ತಿಪಥವ ಪಾಲಿಸುವಳು 10 ಮಾಡಬಾರದ ಮಾಡಿದೆ ಈ ಸಂಸಾರದೆ ನೋಡಬಾರದ ನೋಡಿದೆ ಆಡಬಾರದ ವಾರ್ತೆಗಳನಾಡಿದೆ ಇನ್ನು ಗಾಡನೆ ಮುಕ್ತಿಯ ನೀಡೊ ವೆಂಕಟರಮಣ 11
--------------
ಯದುಗಿರಿಯಮ್ಮ