ಒಟ್ಟು 2682 ಕಡೆಗಳಲ್ಲಿ , 118 ದಾಸರು , 2023 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತ್ಯಜಿಸದಲೆ ಸಂಸಾರ ಭಜಿಸಬಹುದು ಪ ಅಜಭವಾದಿಗಳೆಲ್ಲ ತ್ಯಜಿಸಿ ಭಜಿಸುವರೇ ಅ.ಪ ಅರ್ಣವವ ಪೋಲುವ ಭವವನ್ನು ನೀಗಲು ವರ್ಣಾಶ್ರಮಗಳ ಧರ್ಮಗಳನರಿತು ಪೂರ್ಣ ಸುಖಜ್ಞಾನ ಪೊಂದಿದ ಹರಿಯ ಗುಣಗಳನು ನಿರ್ಣಯದ ಭಕುತಿಯಲಿ ವರ್ಣಿಸುವ ನರನು 1 ಜನ್ಮವನು ಕಳೆವುದಕೆ ತೀರ್ಮಾನ ಮಾಡಿ ದು ಷ್ಕರ್ಮಗಳ ತ್ಯಜಿಸಿ ಸತ್ಕರ್ಮಗಳನು ಮರ್ಮವರಿಯುತ ರಚಿಸಿ ಹೆಮ್ಮೆಯಿಂದಲಿ ತನ್ನ ಧರ್ಮದಲಿ ಸತಿಸುತರ ಭೋಗ ಉಣುವವರು2 ಅನ್ಯಾಯಗಳ ಬಿಟ್ಟು ಮಾನ್ಯರೆಂದೆನಿಸುತಲಿ ಘನ್ನ ಮಹಿಮನ ಸೇವೆಯೆಂದರಿಯುತ ಕನ್ಯಾದಿ ದಾನಗಳ ಮಾಡುತಲಿ ಮುದದಿಂದ ಚೆನ್ನಾಗಿ ಹರಿಯ ಪ್ರಸನ್ನತೆಯ ಪಡೆಯುವರು 3
--------------
ವಿದ್ಯಾಪ್ರಸನ್ನತೀರ್ಥರು
ತ್ಯಜಿಸಬಾರದೋ ನೀವು ಸಜ್ಜನರ ಸಂಗತ್ಯಜಿಸಬಾರದೋ ನೀವು ಪ ದರುಶನ ಮಾಡೆ ದುರ್ದೋಷವು ಹರಿವುದುಸ್ಪರ್ಶವ ಮಾಡೆ ಪ್ರಪಂಚವು ಹರಿವುದು 1 ಮಾತು ಆಡುತಲಿರೆ ಮೈಯದು ಮರೆವುದುಪ್ರೀತಿಯಿಂ ಶರಣೆನೆ ಪರಿಣಾಮ ತೋರ್ಪುದು 2 ವಾಸನೆ ಇರೆ ನಿರ್ವಾಸನೆಯಹುದುಸೂಸುತಲಿಹ ಮನ ನಿಶ್ಚಿತವಹುದು 3 ಸಂಶಯವಿರೆ ನಿಃಸಂಶಯವಹುದುಹಂಸೋಹಂ ಭಾವ ಸಹಜಾವಾಗಿ ನಿಲ್ಲುವುದು 4 ಸುದತಿ ಇಹಪರ ತಾ ಬಿಡಲು ಬಹುದುಸುಧಾ ಚಿದಾನಂದನ ಬೆರೆತರೆ ತ್ಯಾಗ ಮಾಡಲು ಬಾರದು 5
--------------
ಚಿದಾನಂದ ಅವಧೂತರು
ದ ಮುದದಿಂದ ಮನವಾರೆ ನಾಂ ಪ. ಕಾಮಜನಕನ ಪ್ರೇಮದ ರಾಣಿಯೆ ಭೂಮಿಸುತೇ ಶ್ರೀಮಹಿತೆ ಕೋಮಲಗಾತ್ರೆ 1 ಗಾನವಿನೋದಿನಿ ದಾನವಭಂಜಿನಿ ಶ್ರೀನಾರಿ ಮೈದೋರಿ ಪೊರೆ ದಯೆತೋರಿ 2 ದೋಷರಹಿತ ಶ್ರೀ ಶೇಷಗಿರೀಶನ ದಾಸರ ಸಂತೋಷದಿ ನೀಂ ಪೋಷಿಪುದೆನ್ನುತೆ 3
--------------
ನಂಜನಗೂಡು ತಿರುಮಲಾಂಬಾ
ದಣಿದು ಮಲಗಿದೆನು ನಾನು-ದಣಿದು ಮಲಗಿದೆನುಮಣಿದೆ ಗುರುವಿಗೆ ಹಣಿದೆ ಶತ್ರುಗಳತಣಿದೆ ರಕ್ತವ ಕುಣಿದೆ ತಲೆಗಳಘಣ ಘಣ ಘಣ ಘಣ ನಾದವ ಕೇಳುತಮಣಿಮಯ ಮಂಟಪ ಉನ್ಮನಿ ಬಯಲಲಿ ಪ ತರಿಸಿ ತಾಪವನು ಕಾಲಲಿ ಒರೆಸಿ ಮಮತೆಯನುಹರಿಸಿ ಸಂಶಯ ಹುರಿಸಿ ದುರ್ಗುಣಕೊರೆಸಿ ವ್ಯಸನವ ಜರಿಸಿ ಮದಗಳಸುರಿ ಸುರಿ ಸುರಿವ ಸುಧಾ ಕಾರಂಜಿಯಮೆರೆವ ಸಹಸ್ರಾರ ಚಪ್ಪರ ಮಂಚದಿ 1 ಹೊಡೆದು ವಾಯುಗಳ ತುಂಡರಿಸಿ ಕ್ಲೇಶಗಳಮಡಿಯೆ ಈಷಣವು ಕಡಿಯೆ ಕಲ್ಪನೆಕೆಡೆಯೆ ಭ್ರಾಂತಿಯು ಒಡೆಯೆ ಶತ್ರುಗಳುಕಿಡಿ ಕಿಡಿಯುಗುಳುತ ವಿಷ ಮೂರ್ಧ್ನಿಯಬಿಡಿ ಮುತ್ತುದುರುವ ಹಂಸತೂಲದಿ2 ಬಳಿದು ವ್ರತಗಳನು ಎಳೆದು ಮತಗಳನುತುಳಿದು ಗರ್ವವ ತೊಳೆದು ಶೋಕವಮುರಿದು ರಾಗವ ಸೆಳೆದು ಮಾನವಥಳಥಳ ಬೆಳುದಿಂಗಳಿನೊಳುಬಲು ಚಿದಾನಂದ ಬ್ರಹ್ಮವೇ ಆಗಿಯೆ 3
--------------
ಚಿದಾನಂದ ಅವಧೂತರು
ದಂತಿಗಮನೆಯರು ಹರುಷದಲಿ ನೀಲಕುಂತಳೆಯ ರತಿರೂಪ ವಂತೆಯರು ಸೊಬಗು ಶ್ರೀ ಕುಂಕುಮವ ಸಂತವಾಡಿದರೂ ಪ ಕಳಹಂಸ ಗಿಳಿವಿಂಡುಗಳ ತಂಡ ಮಧುರದಿಂ ಕೆಲವ ಕೋಗಿಲೆಯ ವಿಹಗಾಳಿಗಳ್ ಪೊಳೆವ ಚೆಂದಳಿರ ವನದೊಳು ಮಂಟಪವ ರಚಿಸಿ ಲಲನೆಯರು ಚೆಲುವಿನಲಿ ಕೊಳವ ಸಿಂಗರಿಸಿ ಜಲಜ ನೈದಿಲೆಯ ಪೂವಲಿಯದೊಲ್ಘೇಂಕರಿಪ ಬಳಸಿನಲಿ ಕೊಳಗುತಿಪ್ಪಳಿಗಳಿಂ ಶೋಭಿಸುವ ಸಲಿಲದೊಳು ಮಲಯಜ ಸುಲಲಿತ ಕುಂಕುಮವೆರಸಿ ಸಲೆ ಪ್ರಹುಡೆ ಕೆಳನಲಿದು ಸಂತಸದೀ 1 ಮಂದಗಮನೆಯರು ಪೂರ್ಣೇಂದುವದನೆಯರು ಶುಭ್ರ ಕುಂದರದನೆಯರು ಅರವಿಂದ ನೇತ್ರೆಯರು ಗೋ ವಿಂದನೈತರಲು ಪೊನ್ನಂದಣದಲಿದಿರುಗೊಳ್ಳೆ ಕುಂದಣದ ರತ್ನಗಳಲಿ | ಬಂದಿಸಲು ದಂಡೆಗಳ ಚೆಂದದಿಂ ಪಿಡಿದು ಮಕರಂದಮಂ ಪೂರಯಿಸಿ ಕಂದರ್ಪಜನಕನನು ಸಂದಣಿಸಿ ತಮತಮಗೆ ಮುಂದುವರಿದು ಲೋವಿಡಿದು ಆನಂದದಿ ಸೂಸಿದರೂ 2 ಪದುಮಗಂಧಿಯರು ಸನ್ಮøದು ಕೀರವಾಣಿಯರು ಚದುರೆಯರ್ತೊಂಡೆವಣ್ಣಧರೆಯರು ಪೇರ್ಮೈಯ ಮದದ ಮದ್ದಾನೆಯರು ಸುದತಿಯರು ಸೌಂದರ್ಯ ಪದಪು ಗಾತಿಯರು ಬಂದೊದಗಿ ಮೂದಲಿಸಿ ಮಧುಸೂದನನ ಬಿಡದಿದಕೋ ಪಿಡಿಪಿ ಮೋಹ ನದ ಬಲೆಯನು ಬೀಸೆನುತ ಯುವತಿಯರುಗಳು ಮುದದಿಂದ ಬೆಂಗೊತ್ತಿ ಪ್ರಣಯ ಕದನದಿಂ ಸೋಲಿಸುತ ಎದೆಗೆಡಿಸಿ ನವಪರಿಮಳದಿ ಮುಸುಕಿದರೂ 3 ಅಡಿಗಡಿಗೆ ಬಟ್ಟ ಪೊಂಗೊಡ ಮೊಲೆಗಳಲುಗುತ್ತ ಕಾ ರಡಿಗಳಂ ಪೋಲ್ವ ಪೇರ್ಮುಡಿ ಸಡಿಲೆ ಹಾರಗಳ ಜಡೆಯಲೊಯ್ಯನೆ ಸಣ್ಣ ನಡು ಬಳುಕೆ ಲಾವಣ್ಯ ವೆಡೆಬಿಡದೆ ಕೋಮಲೆಯರೊಡನೆ ತವದಕಲೀ ಸಡಗರದಿ ಕುಸುಮಗಳ ಎಡೆಬಿಡದೆ ಬೀರೆ ಸೊಂ ಪಡರ್ದಂಗಲತೆಗಳಿಗೆ ತೊಡದ ಮನ್ಮಥಶರವ ಪತಿ ವಿಡಿದು ಮಡದಿಯರು ಅಲರ್ದೊಡೆಯದೊಡಿಸಿದರೂ 4 ತೊರೆದು ಮುಂಬರಿಯೆ ಯೌವನದ ಪೀತಾಂ ಬರದ ನೆರಿಗಳೋಸರಿಸೆ ಮುಂಜೆರಗನೆಳೆವುತ ವಾಮ ಕರದಂಗುಳಿಗಳಿಂದ ಕುರುಳ ನೇವರಿಸುತಾ ತುರದ ತರುಣಿಯರು ಶ್ರೀಹರಿಯ ತರುಬಿದರೂ ಸರಸಿ ಜಾಂಬಕನ ಪೇರುರವ ಕುಚಗಳ ಕೊನೆಯ ಲಿರಿದು ನಿಲ್ಲಿಸಿ ನಿಲ್ಲು ಹೋಗಬೇಡೆನುತ ಯುವತಿಯರು ಧರೆಯೊಳತ್ಯಧಿಕ ಸುರಪುರದ ಲಕ್ಷ್ಮೀಪತಿಯ ಸರಸನೆ ವವಿಡಿದು ಮೇಲ್ವರಿಯೆ ವೊಲಿಸಿದರೂ 5
--------------
ಕವಿ ಲಕ್ಷ್ಮೀಶ
ದಯಮಾಡೋ ಹನುಮಾ ದಯಮಾಡೋ ಪ ಎನ್ನೊಡನಾಡೋ ಬೇಡಿದ ವರಗಳ ಎನಗೆ ನೀಡೋ ಅ.ಪ. ಅಂಜಾನಿಯ ಕಂದನೆ ಸಂಜೀವನ ತಂದನೆ ಅಂಜಾದೆ ರಕ್ಕಸರ ಕೊಂದಾನೆ 1 ಕೀಟಕಾಂತಕನೆ ಕಿರೀಟ ಸಖನೆ ಪಾಂಚಾಲಿ ಹೃತ್ಕುಮುದ ಚಂದ್ರನೆ 2 ಆನಂದತೀರ್ಥನೆ ಅಮ್ನಾಯಸ್ತುತನೆ ಮಾನಿಧಿವಿಠಲನ ದೂತನೆ 3
--------------
ಮಹಾನಿಥಿವಿಠಲ
ದಯವದೋರೋ ದೇವ ಭಕುತ ಭಯನಿವಾರ ಅಭವ ಪ ದಯವದೋರೋ ನಿನ್ನ ಪಾವನಪಾದ ಸು ಸೇವಕ ಜನಮಹಜೀವ ಜಾನಕೀಧವ ಅ.ಪ ಪಾಪಗೆಲಿಯ ಬಂದೆ ಸಂಸಾರ ಕೂಪದೊಳಗೆ ನಿಂದೆ ಕೋಪಜ್ವಾಲದಿ ಬೆಂದೆ ವಿಷಯ ತಾಪತ್ರಯದಿನೊಂದೆ ಆ ಪರಲೋಕದ ವ್ಯಾಪಾರ ಮರೆದಿಹ್ಯ ದ್ವ್ಯಾಪಕನಾಗಿ ಬಲುತಾಪಬಡುವೆ ತಂದೆ 1 ಅಂಗಮೋಹವ ಬಿಡಿಸೋ ನಿನ್ನವರ ಸಂಗವ ಕರುಣಿಸೊ ಭಂಗವ ಪರಹರಿಸೊ ಜಗದವ ರ್ಹಂಗಹನು ತಪ್ಪಿಸೊ ಮಂಗಳಾತ್ಮ ನಿನ್ನ ಮಂಗಳಾಮೂರ್ತಿ ಎನ್ನ ಕಂಗಳೋಳ್ನಿಲ್ಲಿಸಿ ಹಿಂಗದಾನಂದ ನೀಡು 2 ದೋಷದಾರಿದ್ರ್ಯ ಹರಿಸೊ ಮನದ ಅಶಾಪಾಶ ಬಿಡಿಸೊ ಹೇಸಿಪ್ರಪಂಚ ಗೆಲಿಸೊ ಸುಜನರಾ ವಾಸ ತೀವ್ರ ಪಾಲಿಸೊ ದೋಷನಾಶ ಜಗದೀಶ ಶ್ರೀರಾಮ ನಿನ್ನ ದಾಸಾನುದಾಸೆನಿಸಿ ಪೋಷಿಸು ಸತತ 3
--------------
ರಾಮದಾಸರು
ದಯವಿರಲಿ ದಯವಿರಲಿ ದಾಮೋದರ ಪ. ಸಯವಾಗಿ ಬಿಡದೆನ್ನ ಸಾಕುವ ಶ್ರೀಕೃಷ್ಣಅ.ಪ. ಹೋಗಿ ಬರುವೆನಯ್ಯ ಹೋದಹಾಂಗೆಲ್ಲಸಾಗುವವನಲ್ಲ ನಾ ನಿನ್ನ ಬಿಟ್ಟುತೂಗಿ ತೊಟ್ಟಿಲು ಕೊನೆಗೆ ಸ್ಥಳದಲ್ಲೆ ನಿಲ್ಲುವುದುಹ್ಯಾಗೆ ನೀ ನಡೆದಂತೆ ಹಾಗೆ ನಾ ನಡಕೊಂಬೆ 1 ಇದ್ದಲ್ಲೆ ಎನ್ನನುದ್ಧರಿಪ ಶಕ್ತಿ ಅ-ಸಾಧ್ಯ ನಿನಗೆಂದು ನಾ ಬಂದವನಲ್ಲನದ್ಯಾದಿ ಕ್ಷೇತ್ರಮೂರ್ತಿಗಳಲ್ಲಿ ನಿಜ ಜ್ಞಾನ-ವೃದ್ಧಜನರ ಹುಡುಕಿ ನಿನ್ನ ತಿಳಿಯಲು ಬಂದೆ 2 ಸತತ ಇದ್ದಲ್ಲೆ ಎನ್ನ ಸಲಹೊ ಅದರೊಳಗಾಗಿಅತಿಶಯವು ಉಂಟು ವಿಭೂತಿಯಲ್ಲಿಗತಿಯು ಸಾಧನಕೆ ಅಭಿವ್ಯಕ್ತ ಸಂದರ್ಶನದಿಸ್ಮøತಿಗೆ ವಿಶೇಷ ಮಾರುತಿರಮಣ ನಿನ್ನ 3 ನೋಡಿದೆನೆ ನಾ ನಿನ್ನ ನೋಡದೆ ಎಂದೆಂದುಪಾಡಿದೆನೆ ಆರಾರು ಪಾಡದೊಂದುಮಾಡಿದೆನೆ ಅರ್ಚನೆಯ ಮೀಸಲಾದುದು ಒಂದುಮೂಢಮತಿಯಲಿ ಮುಂದೆ ನಿಂದೆ ಕೈಮುಗಿದು 4 ಬಂದೆನೊ ನಾನಿಲ್ಲಿ ಬಹುಜನ್ಮದ ಸುಕೃತ-ದಿಂದ ನಿನ್ನ ಬಳಿಗೆ ಇಂದಿರೇಶಒಂದು ಮಾತ್ರವು ಇಟ್ಟು ಸಕಲವು ಅರ್ಪಿಸಿದೆಬಂಧನ ಕಡಿವ ಭಕುತಿಯು ಜ್ಞಾನ ನೀಡುವುದು 5 ಬಿನ್ನಪವ ಕೇಳು ಸ್ವಾಮಿ ಎನ್ನನ್ನೊಬ್ಬನ್ನೆ ಅಲ್ಲಎನ್ನ ಹೊಂದಿ ನಡೆವ ವೈಷ್ಣವರನಇನ್ನವರಿಗೆ ಬಾಹೊ ದುಷ್ಕರ್ಮಗಳ ಕೆಡಿಸಿಘನಗತಿಗೈದಿಸುವ ಭಕುತಿ ಕೊಡು ಕರುಣದಿ 6 ರಾಜರಾಜೇಶ್ವರ ರಾಜೀವದಳನಯನಮೂಜಗದೊಡೆಯ ಮುಕುಂದಾನಂದಈ ಜೀವಕೀದೇಹ ಬಂದದ್ದಕ್ಕು ಎನಗತಿ ನಿ-ವ್ರ್ಯಾಜದಿ ಸುರಗಂಗೆ ಸ್ನಾನವನು ಮಾಡಿಸೊ 7 ಎನಗೆ ಆವುದು ಒಲ್ಲೆ ಎಲ್ಲೆಲ್ಲಿ ಪೋದರುಕ್ಷಣ ಬಿಡದೆ ನಿನ್ನ ನೋಳ್ಪ ಜ್ಞಾನವ ಕೊಡೊಚಿನುಮಯಮೂರುತಿ ಗೋಪಾಲವಿಠಲಘನಕರುಣಿ ಮಧ್ವಮುನಿಮನಮಂದಿರನಿವಾಸ8
--------------
ಗೋಪಾಲದಾಸರು
ದಯಾ ಸಾಗರ ದಾನವಾರಿ ಸರೋಜ ನಯನ ಸೂತ್ರಧಾರಿ ಪ ಶ್ರೀಯಾಭರಣ ಭೂಷಣ ಶ್ರೀಹರಿ ನಯ ನೀತಿ ಕಾರಣ ನೃಕೇಸರಿ ಅ.ಪ ಸನಕಾರ್ಜಿತ ಸುರಪೂಜನ ಸುನೀಲ ಮಾಂಗಿರಿನಿಕೇತನ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ದಶವಿಧ ನಾದವು ಭಕ್ತರಿಗೆ ಕೇಳುತಿದೆದಶವಿಧ ನಾದವು ಭಕ್ತರಿಗೆ ಕೇಳುತಿದೆದುಶ್ಮಾನರು ಇಬ್ಬಗೆಯಾಗಲು ದೆಸೆ ಬಿರಿಯಲುಯೋಗಿಯ ಕಿವಿ ಎರಡರಲಿ ಪ ಛಿಣಿ ಛಿಣಿ ಎಂಬ ಚಿನ್ನಿನ ನಾದವು ಚಿತ್ಕøತಿಯಾಗಿ ಚಿಮ್ಮತಿರೆಝಣಝಣವೆಂಬ ಝಿಲ್ಲಿಯ ನಾದವು ಝೇಂಕಾರದಿ ಝೇಂಕರಿಸುತಿದೆಎಣಿಕೆಯಿಲ್ಲದೆ ನಾಗಸ್ವರದ ಧ್ವನಿ ಎಡೆದೆರೆಪಿಲ್ಲದೆ ಕೂಗುತಿದೆಧಣಧಣ ಎನಿಪ ತಾಳನಾದವು ದಟ್ಟಣೆಯಾಗಿ ತುಂಬುತಿದೆ 1 ಮೃಣು ಮೃಣು ಎನಿಪ ಮೃದಂಗ ನಾದವುಮುಂಕಾಟ್ಟಾಗಿಯೆ ನುಡಿಯುತಿದೆತನನಾ ಎಂಬ ವೀಣಾಸ್ವರವು ತಂಪಾಗೆಲ್ಲವ ಮುಚ್ಚುತಿದೆಘನಘನ ಎನುತಲಿ ಶಂಖನಾದವುಘಮ್ಮೆನ್ನುತಲಿ ಭೋರೆನುತಲಿದೆಘಣಘಣ ಎನುತಲಿ ಘಂಟಾನಾದವುಘಂಟ್ಯಾಗಿಯೆ ಓಂ ಎನುತಲಿದೆ2 ಭೇರಿಯ ನಾದವು ಧಮಧಮ ಎನುತಲಿ ಬಹಳಾಗಿಯೆ ಭೋಂಕರಿಸುತಿದೆಘೋರದಿ ಮೇಘದ ನಾದವು ಘರ್ಜಿಸುತಿದೆ ಘುಡಿ ಘುಡಿಸುತಿದೆನೂರಾರು ಸಿಡಿಲಂತೆ ನೂಕು ನುಗ್ಗಡಿಸುತಿದೆವೀರ ಚಿದಾನಂದ ವಿಸ್ಮಯನಾಗಲು ವಿಚಿತ್ರದಿ ಬಾರಿಸುತಿದೆ3
--------------
ಚಿದಾನಂದ ಅವಧೂತರು
ದಶವಿಧ ನೌಬತ್ತಾಗುತದಣ್ಣದಶವಿಧ ಸೌಬತ್ತಾಗುತದೆದುಸುಮಾನರ ಎದೆ ಇಬ್ಬಗೆಯಾಗಲುದೆಸೆ ಬಿರಿಯಲು ಯೋಗಿಯ ಕಿವಿಯೆರಡಲ್ಲಿ ಪ ಚಿಣಿ ಚಿಣಿ ಎಂಬ ಸಿಂಜಿಣಿನಾದವುಚಿತ್ಕøತಿಯಾಗಿ ಚಿಮ್ಮುತಿದೆಝಣಝಣಕೃತವೆಂಬ ಝಿಯಾನಾದವುಝೇಂಕಾರದಿ ಝೇಂಕರಿಸುತಿದೆಎಣಿಕೆಯು ಇಲ್ಲದೆ ನಾಗಸ್ವರ ಧ್ವನಿಎಡದೆರಪಿಲ್ಲದೆ ಕೂಗುತಿದೆಘಣಘಣ ಎನಿಪ ತಾಳದ ನಾದವುದಟ್ಟಣೆಯಲಿ ತಾ ತುಂಬುತಿದೆ 1 ಮೃಣು ಮೃಣು ಎನಿಪ ಮೃದಂಗ ನಾದವುಮುಂಕಟ್ಟಾಗಿಯೆ ನುಡಿಯುತಿದೆ ತನನಾ ಎಂಬವೀಣಾ ಸ್ವನವು ತಂಪಾಗೆಲ್ಲವ ಮುಚ್ಚುತಿದೆಘನ ಘನ ಎನುತಲಿ ಶಂಖನಾದವುಘಮ್ಮೆನ್ನುತಲಿ ಭೋರೆನುತಲಿದೆಘಣಘಣ ಎನುತಲಿ ಘಂಟಾನಾದವುಘಂಟ್ಯಾಗಿಯೆ ಓಂ ಎನುತಲಿದೆ 2 ಭೇರಿಯ ನಾದವು ಧಮಧಮ ಎನುತಲಿಧಾಂಧಮ ಧಾಂಧಮ ನುಡಿಯುತಿದೆಘೋರದಿ ಮೇಘದ ನಾದವು ಗರ್ಜಿಸುತಿದೆಘುಡಿ ಘುಡಿಸುತಿದೆ ನೂರಾರು ಸಿಡಿಲಂತೆನೂಕು ನುಗ್ಗಡಿಸುತಿದೆ ವೀರ ಚಿದಾನಂದವಿಸ್ಮಯನಾಗಲು ವಿಚಿತ್ರದಿ ಬಾರಿಸುತಿದೆ 3
--------------
ಚಿದಾನಂದ ಅವಧೂತರು
ದಶವಿಧ ಬ್ರಹ್ಮರ ಮನೆಯಲಿ ಭಿಕ್ಷವ ಕೊಳುತಿಹ ಅವಧೂತದಶವಿಧ ಬ್ರಹ್ಮರ ವಿವರವನೀಗಲೆ ಪೇಳುವೆ ಪ್ರಖ್ಯಾತ ಪ ಸತ್ಯವು ಶೌಚವು ಸಮಸ್ತ ಬ್ರಹ್ಮವು ಸರ್ವದಿ ದಯವಿಟ್ಟಿಹನುನಿತ್ಯವು ತತ್ವವು ಈತನು ಬ್ರಾಹ್ಮಣರೊಳಗೆ ಬ್ರಾಹ್ಮಣನು 1 ಮಾಯೆಯು ಇಲ್ಲವು ಸ್ನಾನಕರ್ಮದಲಿ ದೇವಗೋವು ಪ್ರಿಯನುಆಯುಧದಿಂ ರಣ ಜಯಿಸುವನೀತನು ಬ್ರಾಹ್ಮಣ ಕ್ಷತ್ರಿಯನು2 ಸಿದ್ಧವು ಕರ್ಮದಿ ದೇವಗೋವುಗಳ ಪೂಜಿಸುತಿಹನೀತಉದ್ದಿಮೆ ಮಾಡುವ ನಾನಾ ಬ್ರಹ್ಮರೊಳು ವೈಶ್ಯನೆ ಇವನೀತ 3 ಚಲ್ಲಣ ಹಾಕಿಯೆ ಮಿಣಿನೊಗ ಹೊತ್ತಿಹನೀತಎಲ್ಲ ಕೃಷಿಯ ವ್ಯವಹಾರವನು ಮಾಡುವ ಬ್ರಾಹ್ಮಣರೊಳು ಇವ ಶೂದ್ರ 4 ಹಲಬರು ಇಹೆವೆಂದು ಸ್ವಯಂಪಾಕಕೆತ್ತುವ ಮಾಡುತ ಬಹುಜಾಲಆಚಾರದ ಸೋಗಿನಲಿ ಹೊರಗುಂಬುವರು ಬ್ರಾಹ್ಮಣಮಾರ್ಜಾಲ 5 ಎಡಗೈ ಅರಿಯನು ಬಲಗೈ ಅರಿಯನು ನುಡಿವನು ಬಿರುಮಾತಉಡುವನು ಹಬ್ಬಕೆ ಧೋತ್ರವ ಬ್ರಾಹ್ಮಣರೊಳಿವನೀಗ ಕುರುಬ 6 ಚೋರರ ಕೂಡಿಯೆ ಪಾಲನೆಕೊಂಬನು ಮಾಡುತ ಬಲು ಘಾತಆರಾದರನು ಅರಿಯನು ಬ್ರಾಹ್ಮಣರೊಳವ ಕಿರಾತ 7 ಕಾಣನು ಭೇದವ ತಂದೆ-ತಾಯಿಯಲಿ ಜೀವರುಗಳ ನೋಡಪ್ರಾಣವ ಕೊಂಬನು ಬ್ರಹ್ಮೆಂತೆನ್ನದೆ ಬ್ರಾಹ್ಮಣರೊಳಿವ ಕಟುಕಾ 8 ಬಗೆ ಬಗೆ ನಾಮವು ನಿರಿವುಡಿಧೋತ್ರವು ಸಂಧ್ಯಾಧಿಗಳವ ದೃಶ್ಯಸೊಗಸನೆ ಮಾಡಿಯೆ ಕಣ್ಣನೆ ಹಾರಿಪ ಬ್ರಾಹ್ಮಣರೊಳಿವ ವೇಶ್ಯಾ9 ಸಹೋದರಿ ರಜಕೀಪರಿಭಾಳಾಮಾಯಾದಿ ಸ್ವಪಚಳ ಹೋಗುವ ಬ್ರಾಹ್ಮಣರೊಳಿವ ಚಂಡಾಲ10 ಪರಿ ದಶವಿಧ ಬ್ರಹ್ಮರುಗಳಲಿ ಭಿಕ್ಷೆಯ ಬೇಡುತಭೂಪ ಚಿದಾನಂದ ಅವಧೂತ ಸದ್ಗುರು ಮನವೊಪ್ಪಿಯೆ ಉಂಬ 11
--------------
ಚಿದಾನಂದ ಅವಧೂತರು
ದಶಾವತಾರ ನೀರೊಳಗೆ ನಿಂತು ನಡುಗಿ ನಾರುವಂಗೆ ಗಂಬೂರಿಕಸ್ತೂರಿ ಲೇಪನದ ಮದುವೆಭಾರ ನಿನ್ನಲಿ ಪೊಳಲು ಕಲ್ಲು ಕೈ ಮುಸುಡಿದಂಗೆಧೀರ ಶೇಷನ ಶಯನದ ಮದವೋಮೋರೆಯಲ್ಲಿ ಯಲ್ಲಾ ಕೆದರಿ ಬೇರು ಮೆಲುವನಿಗೆಸಾರಷಡ್ರಸನ್ನ ಭೋಜನದ ಮದವೋಕರುಳ ವನಮಾಲೆ ಹಾಕಿದವಂಗೆ ಹಾರಪದಕ ಹಾಕಿದ ಮದವೋಮೂರಡಿಯ ಭೂದಾನ ಬೇಡಿದವನಿಗೆ ಸಾರಿದವಂಗಭೀಷ್ಟಗಳ ಪೂರೈಪ ಮದವೋಧರಣಿ ವಿಪ್ರರಿಗಿತ್ತು ಕುಳಿಪುದಕೆ ಸ್ಥಳವಿಲ್ಲವಗೆ ಭುವನಕೀಳುವ ಮದವೋಊರ ಬಿಟ್ಟು ವನ ಚರಿಸುವಂಗೆ ಮೂರು ಧಾಮದಮನೆಯ ಭೋಗದ ಮದವೋಪುರನಾರಿಯ ಬಯಸಿ ಕೊಂಬುವಂಗೆ ವಾರಿಜಭವ ಸುರರವಂದ್ಯಾನೆ ಮದವೋಘೋರ ತುರಗವನೇರಿ ಹಾರಿಸ್ಯಾಡುವಂಗೆ ವೀರಸಿಂಹಾಸನದಲ್ಲಿಕುಳಿತ ಮದವೋಮೂರು ದಿನ ಅರಸುತನ ಸ್ಥಿರವೆಂದು ನೆಚ್ಚಿ ಸಾರಿದವನ್ನಮರೆವದುಚಿತವೆಬಾರದೆ ತಪ್ಪದು ಹಿಂದಿನ ಭವಣೆ ನಿನಗೆ ದೂರ ವಿಚಾರಿಸಿನೋಡೊ ಕರುಣಾ ನಿಧಿಶ್ರೀರಂಗ ರಾಜಗೋಪಾಲ ವಿಠಲ ನಿನ್ನ ಪಾರಿದವರ ಪೊರೆದು ಕೀರ್ತಿಪಡಿಯೊ
--------------
ರಾಜಗೋಪಾಲದಾಸರು
ದಶಾವತಾರ ಭವ ದೀನಾತ್ಮ ಜನಗಳಿಗೆ ಜ್ಞಾನಾರ್ಥವಾಗಿ ನದಿಯೋಳ್‍ಸ್ನಾನಾರ್ಥ ಮುಣಗಿರುವ ಶೋಣೀತ ಸತ್ಯವೃತ ಪಾಣೀಲಿ ಬಂದು ಭರದೀಮಾನವರಂತೆ ಮೃದು ವಾಣೀಲಿ ತನಗೆ ಭೂಸ್ಥಾನವಾಬೇಡಿ ಬೆಳೆದೂಪಾನೀಯ ಪಾತ್ರಸ್ವ ವಿಷಾಣಾದಿ ಧರಿಸಿ ರವಿ ಸೂನುನ ಮಾಡಿಹನು 1 ವೃಂದಾರಕಾರು ಬಲ ವೃಂದಾವ ಕೂಡಿ ಗಿರಿಯಿಂದಾಲೆ ಕ್ಷೀರಧಿಯನೂವಂದಾಗಿ ಮಥಿಸುತಿರೆ ಸಿಂಧೂವಿನೋಳ್ ಜರಿದು ಪೊಂದೀತು ತತ್ತಳವನೂಮಂದಾತ್ಮರಾದುಭಯ ಮಂದೀಯ ನೋಡಿ ಬೆನ್ನಿಂದಾಲೆಯೆತ್ತಿ ಸುಧೆಯಾತಂದ್ಯೋರು ರೂಪನಮರಿಂದ್ರಾರಿಗಿತ್ತು ದಿತಿಜೇಂದ್ರಾರಮೋಹಿಸಿದನು 2 ಕ್ಷೋಣೀಶ ಕ್ಷೋಣೀಯನೆತ್ತಿ ಪಥಿ ದಾನಾವತಡಿಯುತಿರಲೂನಾಸವಾತ್ಮನವನ್ಹಾನೀಯ ಮಾಡಿ ನಿಜ ಸೂನೂಗೆಒಪ್ಪಿಸಿದನುಣೇಶ ಜಾತ ನಿಜಮಾನಿನೀ ಸಹಿತ ಸಂಸ್ಥಾನಾದಿ ಕೂತುಸುಖದೀತಾನವರಾನ ಪಡಿಸಿದಾನಂದ ಭೋಗಿಸಲು ತಾ ನೋಡಿಮೋದಿಸಿದನು 3 ಶುಭ ಭರಾತೀಯ ತತ್ಸುತಗೆ ಪ್ರೀತೀಲಿಪಾಲಿಸಿದನೂ 4 ದುಷ್ಟಾತ್ಮರಿಂದ ಬಹು ದುಷ್ಟಾತ್ಮರಾಗಿ ಸುರರಿಷ್ಟಾವ ಸ್ವರ್ಗ ಸುಖವಾಬಿಟ್ಟಾವನಲ್ಲ ನಿಜ ಪೊಟ್ಟೀಯಗೋಸುಗದಿ ಕಷ್ಟಾದಿಸಂಚರಿಸಲೂದೃಷ್ಟಿಂದ ಕಂಡದಿತಿ ತುಷ್ಟೀಸುತಿರಲವಳ ಪೊಟ್ಟೀಯೊಳವತರಿಸಲೂಪುಟ್ಟಾತ್ಮ ಬಲಿಗೆ ಸುತಲಿಷ್ಟಾವ ನೀಡಿ ಸುರರಿಷ್ಟಾವಪಾಲಿಸಿದನೂ 5 ಭೂತೇಶನೊಬ್ಬ ತನ ತಾತಾನ ಕೊಂದುನವ ಮಾತೇಯನಪಹರಿಸಲೂಭೀತೀಲಿ ತಾಯಿಯುರ ಘಾತಕ್ಕ ಸದೃಶ ಭುವಿ ಧಾತ್ರೀಶದುಷ್ಕಲವನೂಘಾತೀಶಿ ಪೂರ್ವಜರ ಪ್ರೀತೀಯ ಪಡೆದು ಮುನಿ ಪೋತಾನ ರಕ್ಷಿಸುತಲೇಪಾಥೋದಿ ತಟದಿ ರಘುನಾಥೇಷ್ಟದಾತ ನಿಜ ಶಾಪಾವಭೋಗಿಸುವನೂ6 ತಾಪ ರಘುನಾಥಾನುನೋಡಿ ವಿಥಿಲಾಜಾತಾಸಮೇತ ಸಹಜಾತಾನ ಕೂಡಿ ವನಜಾತಾದಿಸಂಚರಿಸುತಾಘಾತೀಸಿ ರಾಕ್ಷಸರ ಪ್ರಿಯನಿತ್ತು ಮುನಿಪಾತ್ಮರಿಗೆಲ್ಲ ಪುರದೀಸೀತಾಸಮೇತ ಕಪಿ ಪೋತಾನ ಕೂಡಿ ನಿಜ ಭೂತಿಯಭೋಗಿಸಿದನು 7 ಕಾರಾಳಯಾದಿ ನಿಜ ನಾರೀಯ ಕೂಡುತಲೆಶೂರಾತ್ಮಜಾತನಿರಲೂನಾರಾಯಣಾತ್ಮತನು ತೋರೀಸಿ ಬಾಲವಪುಗೋರಾಜನಾಲಯದಲೀಶೀರೀಯ ಕೂಡಿ ಸುರವೈರಿಗಳಳಿದು ನದಿ ತೀರಾದಿಕೊಳಲನೂದಿನಾರೇರಿಗೆಲ್ಲ ನಿಜ ಜಾರಾಟ ಸೌಖ್ಯವನು ತೋರೀಸಿತೋಷಿಸಿದನು 8 ವೃಷ್ಣೀಯ ಮಧುರೆಯಲಿ ಪುಟ್ಟೂತ ಗಾರ್ಗಸುತನಟ್ಟೂಳಿಗಾಗಿಜಲದೀಪಟ್ಟಣ ನಿರ್ಮಿಸುತಲಿಷ್ಟಾಪ್ತ ಜನರುಗಳ ನಿಟ್ಟಲ್ಲೆ ಪಾಲಿಸಿದನುಸೃಷ್ಟೀಶಮಕ್ಕಳನು ಮುಟ್ಟೂತ ಕರದಿ ತದಭಿಷ್ಟಾರ್ಥಗಳನುಸುರಿದೂತೃಷ್ಣೇಶ ಪಾಂಡವರ ಕಷ್ಟಾವ ಕಳಿದು ಗಜಪಟ್ಟಣವಸಾಧಿಸಿದನು 9 ಪಾರ್ಥಾರ ಶಾಲೆಯೊಳು ಪೂತಾತ್ಮರಿಂದ ಹರಿ ಭೂತೀಶುಕೇಳಿ ಮನದೀಪ್ರಾತಃ ಸಮಾರಭಿಸಿ ರಾತ್ರೀಯತನಕ ಹರಿ ಮೂರ್ತೀಯಪೂಜಿಸುತಿಹಾದೈತ್ಯಾರ ನೋಡಿ ಸುರನಾಥರ ಜಯಿಸಿ ಜಿನ ಪೋತಾತ್ಮ ಮಲಗಿ ತೊಡಿಯೋಳ್‍ಶಾಸ್ತ್ರಾವ ಬೋಧಿಶ್ಚವರಾತ್ಮಾವ ಕೆಡಿಸಿ ಸುರವೈತಾವತೋಷಿಸಿದನೂ10 ಶುಭ ಸತಿ ಮಿಷ್ಟಾತ್ಮಹಯವ ಮಾಡಿಅಷ್ಟಾಷ್ಟ ಖಡ್ಗವನು ಮುಷ್ಟೀಲಿ ಪಿಡಿದು ಬಹು ಶಿಟ್ಟೀಲಿಸುತ್ಲೆ ಚರಿಸೀವಿಪ್ಲವಾತ್ಮಕ ಕಲ್ಕಿ ಖಳರ್ಹೊಟ್ಟೀಯವಡೆದು ಶುಭಪಾಲಿಸಿದನು11 ವೆಂಕಟನಾಥ ಭವಪರಿಕವ ಹರಿಸೂತ ಕಿಂಕರನಾಗಿರುವೆನೂಶಂಬಾಸುರೋದರಜ ಶಂಖಾವಪಿಡಿದು ಮುಖ ಪಂಕೇಜದಿಂದೂದುತಾಹುಂಕಾರ ಮಾಡುತಲೆ ಕಿಂಕಿರನೆಂದು ಭುವಿ ಸಂಕರ್ಷಣದಿಸುರರೂಶಂಕೀತರಾಗುತ ಭಯಂಕಾರವೆಂದು ಮಹಾತಂಕಾದಿಸಂಸ್ಮರಿಪರೂ 12 ದಂಷ್ಟ್ರೇಶ ಬ್ರಹ್ಮಾನಾಸಿ ಪುಟ್ಟೂತವಾರಿನಿಧಿ ಮೆಟ್ಟೂತಘರ್ಘವಿಸಲೂದೃಷ್ಟೀಲಿ ನೋಡಿ ಕಿವಿಗೊಟ್ಟಾಲಿಸೂತ ನಿಜಪೊಟ್ಟೀಯರಾಂತರದಲೀಯಷ್ಟೇನೊ ಸನ್ನಾವಿದು ಪುಟ್ಟೂತಲ್ಹಂದಿ ಮರಿಬೆಟ್ಟೇಶದಂತಿರುವದೂಧಿಷ್ಟ್ಯಾದಿ ಕೂತು ಪರಮೇಷ್ಠೀಯ ಮಹಿಮೆಯನು ತುಷ್ಟಿಸಿ ಪಾಡುತಿಹನು 13 ತರೂನ ಮೂಲದಿ ಕೂತು ಬೋರೆಯಾ ಹರಿಯ ಶಾಸ್ತ್ರವ ಪೇಳೆ ಮುನಿಪನ ಸ್ವರವ ಸ್ಮರಿಸಿರಿ ಮನುಜರೇ ಭವದರವು ಪೋಗುವದು 14 ಚಿಕ್ಕ ಹುಡುಗೆಯು ತನ್ನಾಗತ ಚಕ್ರದಲಿ ಬ್ರಹ್ಮಾಂಡ ಕಟಹವ ಟೊಕ್ಕ ವೆನಿಸುತ ಜೀವ ಸಂಸ್ಕಾರ ಮುಕ್ಕು ಮಾಡುವಳು ಮೋಘ ಸೌಖ್ಯ ನೀಡುವಳು 15 ಧ್ವಾನ ಮಾಡಲುಧರ್ಮರಾಜಗೆಮಾನವಾದಿಗಳೆಲ್ಲ ಮುಖಭವ ಶೋಣಿತಾಗುವದು 16 ತತ್ವ ದಿವಿಜರು ನಮ್ಮ ದೇಹದಿ ನಿತ್ಯದಲಿ ಹರಿಸ್ಮರಿಸಿ ತುತಿಸುತಸತ್ವ ದಿವಿಜರಿಗೆತ್ತುವೆನು ಕರವಾ17 ದುರಿತ ಹರಿಸುವನೂ 18 ಯಲ್ಲಿ ಬ್ರಹ್ಮಾಂಡದಲಿ ಶಿರಿ ವರವಲ್ಲಭವ ಸಂಸ್ಮರಿಸಿ ಹಿಗ್ಗುವಫುಲ್ಲನಾಭನ ಭಕ್ತರನು ಮನದಲ್ಲಿ ಸ್ಮರಿಸುವೆನೂ 19 ಶ್ರೀಶಾನು ಭಕ್ತಜನದಾಶೀಯ ಪೂರೈಸಲು ಕೂಸಾಗಿದೇವಕಿಸುತಾಯೇಷಾದಿಗಳ ದಿಶುಭರಾಶೀಲಿ ಪುಟ್ಟುತವನೀಶಾರ ವಂಶಬೆಳೆಸಿ 20 ದೋಷಾತ್ಮಾ ದೈತ್ಯಕುಲ ಘಾಶೀಶಿ ಭೂದೇವಿ ಕ್ಲೇಶಾವನೆಲ್ಲಕಳೆದೂ ದಾಶೀಜ ನಾಗಿ ನಿಜ ಕೋಶಾದಿ ಮೋಕ್ಷಾ ಪದಮೀರೇಶ ತೋರಿಸಿದನು ಇಂದಿರೇಶನ ಸಾಧಿಸಿದನು 21 ನಾರದರ್ಷಿಯ ಕರುಣದಲಿ ಶನಿವಾರ ಮಾಡೀದ ಪರಮತುತಿಯನುಭೂರಿ ಪಠಿಸಲು ಇಂದಿರೇಶನುದಾರ ನೋಡುವನು 22
--------------
ಇಂದಿರೇಶರು
ದಾತ ಕರುಣೆಯಿಂದಲಿ ಪೊರೆಯೊ ಸುಪ್ರೀತ ಪ ತರಳನನು ಸ್ಥಿರಸುಖದಿ ಪಾಲಿಸು ಅ.ಪ ಬ್ರಹ್ಮ ಗುರು ಪರಬ್ರಹ್ಮಣೇ ನಮಃ1 ನಿರಂಜನ ಕರ್ತಿಸುವೆನೀ ತನುಮನಂಗಳ 2 ನೀನೆ ಎನ್ನಯ ಪ್ರಾಣನಾಥನು 3 ಭವ ಗಾದರದಿ ನೀ ಬೋಧಿಸೈ ನಿಜ 4 ಸರ್ವದಾ ಸದಾನಂದ ಜಯ ಜಯ 5
--------------
ಸದಾನಂದರು