ಒಟ್ಟು 4961 ಕಡೆಗಳಲ್ಲಿ , 127 ದಾಸರು , 3302 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣಾಲವಾಲ ಪ ಸಿರಿಯರಸನೆ ನಿನ್ನ ಚರಣವ ನಂಬಿದೆ ಸುರಗಣ ಸೇವಿತ ಸುರರಾಜಪಾಲ ಅ.ಪ ಇಂದ್ರನಕೂಡಿ ಮುನೀಂದ್ರನ ಸತಿಶಾಪ ದಿಂದರೆಯಾಗಿರಲಂದು ನೀ ದಯದಿ ಸುಂದರ ಚರಣಾರವಿಂದಗಳಿತ್ತ ಧೂಳಿ ಯಿಂದ ಪಾವನಗೈದ ಇಂದಿರೇಶನೆ ನೀ 1 ಚಕ್ರವರ್ತಿಯು ಮರೆಹೊಕ್ಕರೆ ನುತಿಸಿ ರಕ್ಷಿಸಿದಾಪರಿಯಕ್ಕರೆ ತೋರಿಸಿ 2 ಶಿರಸರಿಸಕ್ಕೆ ಗುರಿಯಿಡಲು ನರನ ಶಿರವುಳುಹಿದ ಸಿರಿವರದವಿಠಲ ಹರಿ3
--------------
ವೆಂಕಟವರದಾರ್ಯರು
ಕರುಣಾಸಾಗರ ದೀನೋದ್ಧಾರಣ ಎನ್ನನು ಕಾಯ್ವ ಪರಿಯ ಚಿಂತಿಸಿ ರಕ್ಷಿಸೊ ಪರಮ ಪಾವನ ನಾಮಸ್ಮರಣೆಯಲ್ಲದೆ ಕರ್ಮ ಚರಣರಹಿತ ಪಾಪಕರನಾಬ್ಧಿಪತಿತನ ಪ. ವರ್ಣಾಶ್ರಮಾಚಾರ ಕರ್ಮಕೃತ್ಯವ ನೀಗಿ ನಿರ್ಮಲಚಿತ್ತದಿ ನಿನ್ನ ಪೂಜಿಸದೆ ವರ್ಮವಿಡಿದು ವರ ದ್ರೋಹ ಚಿಂತೆಗಳಿಂದ ಧರ್ಮಮಾರ್ಗವ ದೂರದಲಿ ತ್ಯಜಿಸಿ ನಿರ್ಮಲಾಂತ:ಕರಣ ನಿಜಕುಲ ಧರ್ಮರತ ಸಜ್ಜನರ ದೂಷಿಸಿ ದುರ್ಮದಾಂಧರ ಸೇರಿ ಕೂಪದ ಕೂರ್ಮನಂದದಿ ಬರಿದೆ ಗರ್ವಿಪೆ 1 ನೇತ್ರ ದರ್ಶನಕೆ ಸಂಸ್ಮರಕೆ ಜಿಹ್ವೆಯ ಗಾತ್ರ ಸೇವೆಗೆ ನೈರ್ಮಲ್ಯಕೆ ಶಿರವ ಶ್ರೋತ್ರವ ಮಾಹಾತ್ಮ ಶ್ರವಣಕೆ ಪಾದಗಳ ಕ್ಷೇತ್ರಯಾತ್ರೆಗೆ ಕರಗಳ ಪೂಜಾವಿಧಿಗೆ ಇತ್ತ ದೊರೆಯನು ಮರೆತು ಇಂದ್ರಿಯ ವೃತ್ತಿಗಳ ಸ್ವೈರಿಣಿಯ ದರುಶನ ಭುಕ್ತಿ ಚುಂಬನ ಧ್ಯಾನ ದುಷ್ಟ ಕಥಾ ಶ್ರವಣಸಲ್ಲಾಪಕಿತ್ತೆನು 2 ಪತಿತ ಪಾವನ ನೀನು ಪತಿತಾಗ್ರೇಸರ ನಾನು ಅತಿಶಯಿತನು ನೀನು ಅತಿನೀಚನು ನಾನು ಗತಿಹೀನ ಜನಕ ಸದ್ಗತಿಯೆಂಬ ಬಿರುದುಳ್ಳ ಮಿತಚಿತ್ರ ಚರಿತಾತ್ಯದ್ಘುತರೂಪ ಗುಣಪೂರ್ಣ ಪಶುಪತಿ ಸುರೇಶ ಪ್ರ- ಭೃತಿ ದಿವಿಜಗಣ ಸುತ ಪದಾಂಬುಜ ಕ್ಷಿತಿಜಲಾಗ್ನಿ ಮರುನ್ನಭೋಹಂ ಕೃತಿ ಮಹ ಸುಖತತಿನಿಯಮಕ 3 ಕರಿರಾಜ ಧ್ರುವಾಕ್ರೂರನರ ವಿಭೀಷಣ ನಾರದರು ಮೊದಲಾಗಿ ನಿನ್ನನುದಿನವು ಸ್ಮರಿಸಿ ಪೂಜಿಸಿ ಮನವೊಲಿಸಿದವರನ್ನು ಪರಿಪಾಲಿಸಿದನೆಂಬೊ ಗರುವದಿಂದ ನಿರುಪಮಾನಂದೈಕ ಸದ್ಗುಣ ಭರಿತರೆಂಬುದ ಹೆಮ್ಮೆಯಿಂದಲಿ ಮರೆತರೆನ್ನನು ಪರಮಕರುಣಾ ಶರಧಿಯೆಂದ್ಹೆಸರಿರುವುದೇತಕೆ 4 ನಾ ನಿನ್ನ ಮರೆತರು ನೀ ಎನ್ನ ಮರೆದರೆ ಹಾನಿಯಾಗದೆ ನಿನ್ನ ಭಕ್ತ ವತ್ಸಲಕೆ ದಾನವಾಂತಕ ಅಕಿಂಚನಾರೆ ಎಂಬ ಪ್ರಮಾಣ ಉನ್ನತ ವಚನವಾಗದೆ ಮಾನನಿಧಿ ಪವಮಾನ ತತ್ವಮತ ಮಾನಿಜನ ಸಂಸ್ತುತ ಪದಾಂಬುಜ ಶ್ರೀನಿವಾಸ ಕೃಪಾನಿಧೆ ಕಮಲಾ ನಿಲಯ ವೆಂಕಟನಿಜಾಲಯ 5 ವೇದವನು ತಂದು ಭೂಧರನ ಬೆನ್ನಲಿ ನೆಗಹಿ ಈ ಧರೆಯ ಸಲಹೆ ಪ್ರಹ್ಲಾದನನು ಕಾಯ್ದೆ ಮೇದಿನಿಯನಳೆದಿ ಕಾರ್ತದಶಾಸ್ಯ ಕಂ ಸಾದಿಗಳ ತರಿದ ಬೌದ್ಧಾದಿ ಕಲ್ಕಿ ಧಾರಣನೆ ಪತಿತ ಪಾವನನೆಂಬ ಪರಮ ಬಿರುದನು ವಹಿಸಿ ಜತನ ಮಾಡುವಿ ಭಕ್ತತತಿಗಳನು ಬಿಡದೆ ಪತಿತ ಶೇಖರನನ್ಯಗತಿಯಾಗಿರುವ ಎನಗೆ ಗತಿಯ ಪಾಲಿಸು ರಮಾಪತಿಯೆನ್ನುಪೇಕ್ಷಿಸದೆ 6 ನಾರದಕ್ರೂರ ನರ ಹೈರಣ್ಯಕಾದಿಗಳು ಪಾದ ನೀರರುಹಗಳನು ಘೋರತರ ಸಂಸಾರಪಾರವಾರವ ದಾಟಿ ಧೀರರೆನಿಸಿದರೆಲ್ಲಪಾರಸನ್ಮಹಿಮ ತರಣಿ ಉದಿಸಿದ ಮೇಲೆ ತಿಮಿರದೊಂದಿರವ್ಯಾಕೆ ಗರಳ ಭಯವ್ಯಾಕೆ ಸಿರಿಸಹಿತ ಶೇಷಾದ್ರಿ ವರ ನಿನ್ನಪಾದ ಸಂ- ದರುಶನವು ದೊರೆತಮ್ಯಾಲರಿಬಾಧೆಯಾಕೆ ಎನಗೆ 7
--------------
ತುಪಾಕಿ ವೆಂಕಟರಮಣಾಚಾರ್ಯ
ಕರುಣಾಸಾಗರ ಬಾ ಗುರುವೆ | ಚರಣ ಕಮಲವನು ಸಾರಿದೆನೈ ಸ್ವಾಮಿ ಪ ಏನೆಂದು ಬಣ್ಣಿಪೆ | ದೀನವತ್ಸಲಪ್ರಭುವೆ | ಸಾನುರಾಗದಿ ನಿನ್ನ ಧ್ಯಾನಿಪೆನೈ ಜೀಯ1 ಗುರುರಾಘವೇಂದ್ರನೆ | ಶರಣರ ಸುರತರುವೆ | ನಿರುತ ಎಮ್ಮೊಳು ಕೃಪೆಯ ತೋರಿದಿರೈ ಸ್ವಾಮಿ 2 ಶ್ರೀ ಸುಧೀಂದ್ರಾರ್ಯರ | ಭಾಸುರಪ್ರಿಯತನಯ | ಶ್ರೀಶಕೇಶವನೊಲುಮೆ ಯಾಚಿಸುವೈ ಪ್ರಭುವೆ 3
--------------
ಶ್ರೀಶ ಕೇಶವದಾಸರು
ಕರುಣಿಸಬಾರದೆ ಕಂಜನಾಭನೆ ಕೈಯ ಮುಗಿವೆನಯ್ಯಾಪ. ವರ ಫಣಿಗಿರಿ ಸುಸ್ಥಿರಮಂದಿರ ಶ್ರೀ ಗುರು ಜನಾರ್ದನಾಮರಗಣ ಪಾಲಕಅ.ಪ. ಅಪರಾಧಗಳಾಲೋಚಿಸುವರೆ ಸರೀ- ಸೃಪರಾಜನಿಗಳವೆ ಕೃಪೆಯಿಂದಲಿ ಸಂರಕ್ಷಿಸದಿದ್ದರೀ- ಯಪಕೀರ್ತಿಯು ಶ್ರೀಹರಿ ನಿನಗಲ್ಲವೆ 1 ಪುರಂದರ ಮುಖ್ಯ ದಾಸರಂತೆ ಗುಣವೆನಗಿನಿತಿಲ್ಲ ಜನರ ವಿಡಂಬನಕೆ ದಾಸನಾದರೂ ಘನ ಕೃಪಾರ್ಣವನೆ ಕನಕಾಂಬರಧರ2 ಲಕ್ಷ ಮಾತ್ಯಾತಕೆ ಲಕ್ಷ್ಮೀನಾರಾಯಣ ರಕ್ಷಾಮಣಿ ನೀನೆ ಪಕ್ಷೀಂದ್ರವಾಹನ ಪಾಪವಿಮೋಚನ ತ್ರ್ಯಕ್ಷಮಿತ್ರನೆನ್ನಕ್ಷಿಗೋಚರನಾಗಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕರುಣಿಸಬಾರದೇನು ಶರಣೆಂಬೆ ನಾನು ಕರುಣಿಸ ಬಾರದೆ ಮೊರೆಯ ಹೊಕ್ಕವನ ಶರಣಾಗತ ಪಂಜರನೆಂಬೊ ಬಿರುದಿರೆ ಪ ಸ್ತಂಭದಿ ನೀ ಬಂದು ದೈತ್ಯನ ಬೇಗ ಶೀಳಿಕೋಪದಿಂದ ಇರಲು ಆಗ ಬ್ರಹ್ಮೇಂದ್ರ ರುದ್ರ ವೃಂದ ಬೆದರಿ ಪೋಗೆ ಪ್ರಹ್ಲಾದನಾಗ ಇಂದಿರಾವರ ಗೋವಿಂದ ಕೃಪೆಯ ಮಾಡೆಂದು ಸ್ತುತಿಸೆ ಆನಂದದಿ ಕಾಯ್ದತಿ ಸುಂದರಮೂರ್ತಿ ಮುಕುಂದ ಧರಣಿಧರ ಸಿಂಧುಶಯನ ಅರವಿಂದನಯನ ಹರಿ 1 ದಶರಥ ಸುತನೆನಸಿ ಮುನಿಯಧ್ವರ ಕುಶಲದಿನ್ನುದ್ಧರಿಸಿ ಪಶುಪತಿ ಧನು ಭಂಜಿಸಿ ಸೀತೆಯ ಕೋರಿ ದಶರಥನಾಜ್ಞೆ ವಹಿಸಿ ಕಾನನದಿ ಚರಿಸಿ ಕುಶನಿಧಿಯನು ಬಂಧಿಸಿ ರಾವಣನ ದಶ ಶಿರಗಳ ಭರದಿಂದಲಿ ಖಂಡಿಸಿ ಅವನನುಜಗ ನಿಶದೊಳ್ ಶಿರಿಲಾಲಿಸಿ ಪೊರೆದ ಶ್ರೀಶಶಿಧರನÀು ಹರಿ 2 ನಕ್ರ ಭಂಗಬಡಿಸೆ ಗಜಗಳರಸ ರಂಗ ಮುರಾರಿ ದೇವೋತ್ತುಂಗ ಶ್ರೀ ಶ್ಯಾಮಲಾಂಗ ಭಕ್ತಾಭಿಮಾನಿ ಮಂಗಳಾರಸತ್ಸಂಗ ಜಗದಂತರಂಗ ವಿಹಂಗ ಸಿರಿ ನರಸಿಂಹ ಬಂದು ಶಾಪಂಗಳ ತರಿದೆ ಭುಜಂಗತಲ್ಪ ಕಾನಂಗಪಿತ 'ಹೆನ್ನೆರಂಗ' ಶರಣು ರಣರಂಗ ಭೀಮ ಹರಿ 3
--------------
ಹೆನ್ನೆರಂಗದಾಸರು
ಕರುಣಿಸಯ್ಯಾ ಕಂಜಜನಯ್ಯಾ | ಕರ್ಣರಹಿತ ಶಯ್ಯಾ ಕನಕಾದ್ರಿರಾಯಾ ಪ ಕರಿವರದನೆ ನಿನ್ನ ಚರಣ ನಂಬಿದೆ ಎನ್ನಪರಿಪಾಲಿಸುವದು ಪರಮ ಕೃಪಾಳೊ ಅ.ಪ. ಕೋಟಲೆ ಸಂಸಾರವೆಂಬೊ | ನೀಟು ಶರಧಿಯನ್ನುದಾಟಲಾರೆನೊ ನಾನೂ | ಇದೇನೊ ||ನಾಟಕಾಧಾರ ನಿನ್ನ | ನಂಬಿದಾ ಮೇಲೆ ಎನ್ನಬೂಟಕನೆನಸುವರೇ | ಮುರಾರೇ ||ಹಾಟಕಾಂಬರ ಧರ ಹರಿಯೇ ಕೇಳ್ವುದಿನ್ನು | ಕೋಟಿ ವ್ಯಾಳೆಗೆ ಭಕ್ತ ಕೋಟಿಯೊಳಗಿಟ್ಟು ಎನ್ನ | ನೀಟು ಮಾರ್ಗವ ತೋರಿ ಪಾಟುಪಡಿಪ ಯಮಕಾಟ ಕಳೆದು ದಿವ್ಯ ನೋಟದಿ ನೋಡು 1 ಕಂಸಾರಿ ಮುರಾರಿ2 ಇಂದಿರೆ ಜನನಿ ಗೋ-ವಿಂದ ಇನ್ನೊಬ್ಬರಿಲ್ಲ | ನೀ ಬಲ್ಲೆಲ್ಲಾ ||ಸುಂದರ ವಿಗ್ರಹನೆ | ಸುಗುಣ ಸಾಕಾರ ಶುಭಸಾಂದ್ರಾ ಭಕುತ ವತ್ಸಲ | ಗೋಪಾಲಾ ||ಎಂದೆಂದಿಗೆ ಎನ್ನಿಂದ ಅಗಲದೆ ಮುಕುಂದ ಮುನಿ ವೃಂದವಂದಿತ ಚರಣನೇ | ಸಿಂಧುಶಯನ ಶಿರಿ ಮೋಹನ ವಿಠಲ ಬಾ ಲೇಂದು ವದನ ಸುಗುಣ ಸಾಂದ್ರಾ ಉಪೇಂದ್ರಾ 3
--------------
ಮೋಹನದಾಸರು
ಕರುಣಿಸಲಾರೆಯಾ ಇನ್ನಷ್ಟು ನೀ ಸಿರಿಪತಿಯಾ ಪ ಕರುಣಿಸಲಾರೆಯಾ ಕರುಣಾಕರನೆಂಬೊಬಿರುದನುಳಿಸಿಕೊಳ್ಳಲಾರೆಯಾ ನೀನರಿಯಾ ಅ.ಪ. ಬುವಿಯೊಳು ನಿನ್ನ ದಯವಿರದಿರೆ ಕಣಲವಸಹ ಸರಿಯದಯ್ಯಾಭವದೊಳು ದೇವ ನಿನ್ನ ಕೃಪೆಯಾಗಲುಜವದೊಳೀಗಿನ ಸುಖ ಸ್ರವಿಸಿ ಪೋಗುವದಯ್ಯಾ 1 ಈಗೆಲ್ಲ ನಿನ್ನದಯೆದಿಂದೀ ಬಾಳ್ವೆಸಾಗಿದೆ ಬಲ್ಲೆನಯ್ಯಾಹೋಗಿಸಿ ಸಂಸಾರ ಬೇಗುದಿಯನು ನೀನುಬೇಗ ನಿನ್ನ ಧ್ಯಾನಭೋಗವ ನೀಡಯ್ಯಾ 2 ತುಷ್ಟಿಹೊಂದಲು ನೀ ಜೀಯಾ ಕಷ್ಟದ ಪರಿಯಾನಷ್ಟಮಾಡಲು ಅರಿಯಾಸೃಷ್ಟಿಯ ಜೀವಿಗದೃಷ್ಟ ಎಷ್ಟೆಷ್ಟೆಂಬಸ್ಪಷ್ಟ ಸಂಕಲ್ಪವ ಬದಲಿಸಲರಿಯಾ 3 ಎಲ್ಲವು ನಿನ್ನಧಿವಲ್ಲವೇ ಹರಿಯೇಸಲ್ಲದ ಅನುಮಾನಖುಲ್ಲ ದೈವವ ತಿರುವ ಬಲ್ಲೆಯಲ್ಲವೇ ನೀನುಬಲ್ಲೇಕೆ ಮನವನು ಕಲ್ಲು ಮಾಡಿದೆಯಾ 4 ಶರಣೆಂಬ ಜನ ಕೈಯ್ಯಾ ಎಂದೂ ಬಿಡದೆಪೊರೆಯುವೆ ಎಂಬರಯ್ಯಾಧರೆಯೊಳು ಗದುಗಿನ ವೀರನಾರಾಯಣಮರೆಯದೆ ಸಲಹಯ್ಯಾ ಕೇಳ್ವೆನ್ನ ಮೊರೆಯಾ 5
--------------
ವೀರನಾರಾಯಣ
ಕರುಣಿಸಲೊಲ್ಯಾ ಕರುಣಾನಿಧೇ ಪ ಕರುಣಿಸಲೊಲ್ಯಾ ನೀ ಕರುಣಸಾಗರ ನಿನ್ನ ಭವ ಅರಣ ದಾಟುವಂತೆ ಅ.ಪ ವಿಶ್ವವ್ಯಾಪಕನೆ ವಿಶ್ವಾಸುವಿಶ್ವ ನೀ ವಿಶ್ವ ಪ್ರೇರಕ ನಿನ್ನ ವಿಶ್ವಪಾದದೊಳು ನಾ ವಿಶ್ವಾಸಮಾಳ್ಪÀಂತೆ 1 ಜ್ಞಾನದಾಯಕನೆ ಜ್ಞಾನದಾಯಕ ಎನ್ನ ಜ್ಞಾನನಿಚಯ ನೀನೆ ಹಾನಿಮಾಡಿ ನಿನ್ನ ಜ್ಞಾನವನೈದೊಂತೆ 2 ಮಂದರೋದ್ಧರನೆ ಮಹಾರಾಯಾ ನಂದದಾಯಕನೆ ಇಂದಿರಾಪತಿ ನಿಜ ನಂದಕೊಡುವ ನಿನ್ನ ದ್ವಂದ್ವ ಚರಣದೊಳು ಸಂದೇಹವಿಲ್ಲದಂತೆ 3 ಕಾಮಿತಾರ್ಥವನೆ ಕಮಲಾಕ್ಷಾ ಕಾಮನ್ನಪಿತನೆ ಕಾಮಿತಾರ್ಥಗಳನ್ನು ಕಾಮಿಸದಲೆ ನಿನ್ನ ನಾಮವ ಭಜಿಸುವ ನೇಮಮತಿಯನಿತ್ತು 4 ಸೃಷ್ಟಿಕಾರಣನೆ ಶ್ರೀಕೃಷ್ಣಯ್ಯಾ ವೃಷ್ಣಿನಾಯಕನೆ ದುಷ್ಟಮತಿಯ ಬಿಡಿಸಿ ಶಿಷ್ಟಙÁ್ಞನವನಿತ್ತು ದಿಟ್ಟಗುರುಜಗನ್ನಾಥ ವಿಠಲ ನೀ ಎನ್ನ 5
--------------
ಗುರುಜಗನ್ನಾಥದಾಸರು
ಕರುಣಿಸಿ ಪಿಡಿಯಾ ಕೈಯ್ಯಾ | ಗುರುರಂಗವೊಲಿದರಾಯ ಪ ನಂಬಿದೆ ನಿನ್ನ ಚರಣ | ಬೆಂಬಿಡದೆ ಕಾಯೋ ಸತತ ಸ್ತಂಭದಲಿ ನೆಲಸಿದಂಥ | ಕುಂಭಿಣಿಪ | ದಾಸವರ್ಯ 1 ದೀನರ್ಗೆ ದಿವಿಜಧೇನು | ನೀನೆಂದು ಕ್ಷೋಣಿ ತಳದಿ ಜ್ಞಾನಿಗಳು ಪೇಳಿದಂಥ ವಾಣಿಯನು ಸತ್ಯಮಾಡೊ 2 ನಿನ್ನ ಸ್ಥಳವು ಪುಣ್ಯಕ್ಷೇತ್ರ | ನಿನ್ನಲ್ಲಿ ಸಕಲ ತೀರ್ಥ ನಿನ್ನ ಕವನ ಮಧ್ವಶಾಸ್ತ್ರ | ನಿನ್ನವನು ನಿಜಕೃತಾರ್ಥ3 ಹರಿದಾಡುವಂಥ ಮನಸು | ಹರಿಯಲ್ಲಿ ಸ್ಥಿರವಗೊಳಿಸೊ ಹರಿನಾಮ ಸುಧೆಯ ಕುಡಿಸೊ | ಹರಿವರನ ಮತವ ಪಿಡಿಸೊ 4 ಮತಿಭ್ರಷ್ಟನಾಗಿ ನಿನ್ನ ಕೃತಿಗಳನು ಪಾಡದ್ಹೋಗಿ ಕ್ಷಿತಿ ಭಾರನಾದೆ ಮುಂದೆ ಗತಿ ತೋರಿ ಸಲಹೊ ತಂದೆ 5 ಹೆತ್ತವರು ಸುತನ ದೋಷ | ಕೃತ್ಯಗಳ ಕ್ಷಮಿಸದಿಹರೆ ಚಿತ್ತೈಸು ಎನ್ನ ಮಾತ | ಉತ್ತಮರ ಸಂಗವಿತ್ತು 6 ತಳೆದೇಳು ಜನುಮಗಳಲಿ | ಇಳೆಯೊಳಗೆ ಚರಿಪ ಸಮಯ ಸುಳಿದಾಡು ಮತ್ತೊಮ್ಮೆ ಘೋರ ಕಲಿಬಾಧೆ ತಪ್ಪಿಸಯ್ಯ 7 ಮಾನವಿಯ ಸ್ಥಾನದಲ್ಲಿ | ನೀನಿರಲು ನಿನ್ನ ಮರೆದು ಮೋದ 8 ಕಂದರ್ಪಜನಕ ಶಾಮಸುಂದರ ಮೂರ್ತಿಹೃದಯ ಮಂದಿರದಿ ತೋರೋದಾತ ವಂದಿಸುಎ ನಿನ್ನ ಪದಕೆ 9
--------------
ಶಾಮಸುಂದರ ವಿಠಲ
ಕರುಣಿಸು ಕಮಲಾಸನ ಮಾತಯೆ ನೀಂ ಕರಧೃತ ವರ ಕಮಲೆ ಪ ಶರಣವ ಪÉÇಂದಿಹೆ ಕರುಣದೊಳೀಕ್ಷಿಸು ವರದೆ ವರಲಕ್ಷ್ಮಿ ಅ.ಪ. ಕುಸುಮ ಧೂಪಾವಳಿಯಿಂದಲಿ ಸುಂದರಿ ಪೂಜಿಪೆನು ಬಂಧುರಗಾತ್ರಿಯೆ ಅಂದದೊಳೆನ್ನಯ ಮಂದಿರದೊಳಗಿಹುದು 1 ಶ್ರಾವಣ ಮಾಸದಿ ಭಾವಕಿ ನಿನ್ನನು ಭಾವದಿ ಭಾವಿಸುತ ತಾವಕ ಪಾದವ ಪ್ರೇಮದಿ ಪೂಜಿಪೆ ದೇವಿಯೆ ಒಲಿಯುವುದು 2 ಚಂದನಭೂಷಿತೆ ಸುಂದರ ಗಾತ್ರೆಯ ಮಂದಹಾಸಮೊಲಿಯೆ ಚಂದದ ಕಿಂಕಿಣಿಯಂದದರವದೊಳ್ ಬಂದು ದಯಂಗೆಯ್ಯೆ3 ಹರಿಮಾನಸ ಮೋಹದ ಪ್ರಾಣೇಶ್ವರಿ ಹರಸುತ ವರಗಳಿಂದ ವರಧೇನುನಗರ ವರಜನ ಪೋಷಿಣಿ ಕರುಣಾಕರೆ ವರದೆ4
--------------
ಬೇಟೆರಾಯ ದೀಕ್ಷಿತರು
ಕರುಣಿಸು ದೇವ ಶರಣ ಸಂಜೀವ ಮರೆಯದಿರೆನ್ನನು ಮನೆಯೊಳಗಿರುವ ಪ. ಸಿರಿನಲ್ಲ ನೀ ಬೆಂಬಲ ವಲ್ಲದೆ ಬೇರೆ ದಾತರಿಲ್ಲವೆಂಬುದು ಸಿದ್ಧ 1 ಆದರು ಲೌಕಿಕವಾದ ಲಾಭಗಳನ್ನು ನೀ ದಯಮಾಡುವ ಹಾದಿಯನರಿಯೆನು ವ್ಯರ್ಥಹಂಕೃತಿಯಿಂದ ಧೂರ್ತನಾದೆನು ಕೃಷ್ಣ ಕರ್ತ ನೀ ಕರುಣದಿ ಕರಸಿಕೊ ಬೇಗ 2 ಚಂದನ ವಿಗ್ರಹ ಚೆಲುವ ಶೋಭಿತ ಗ್ರಹ ಹೊಂದದಿರಾಗ್ರಹ ಹರಿಸು ಸರ್ವಾಗ್ರಹ 3 ನೋಡದೆ ನಿನ್ನನು ನಡುವಿಲಿ ನೆನೆದೆನು ಬೇಡಿಕೊಂಬೆನು ಶ್ರೀಶ ಮೂಡಲಭೂಧರೇಶ 4
--------------
ತುಪಾಕಿ ವೆಂಕಟರಮಣಾಚಾರ್ಯ
ಕರುಣಿಸು ದೇವದೇವ ಸೆರಗೊಡ್ಡಿ ಬೇಡುವೆನಭವ ಪರಿಹರಿಸು ಎನ್ನ ಕರುಣಾಳು ಲಕ್ಷ್ಮಿಯ ಜೀವ ಪ ಅಂಬುಧಿಶಾಯಿಯೆ ನಿನ್ನ ಭಜಿಪೆ ಪಾವನ್ನ ಅಂಬುಜಸಂಭವಪಿತನೆ ಕಂಬುಕಂಧರಪ್ರಿಯಸಖನೆ ಅಂಬುಧಿಯಸಂಜಾತೆರಮಣ ಬೆಂಬಲಿಸಿ ಕಾಯೊ ಬಡವನ್ನ 1 ಸುಂದರಕಾಯ ಇಂದಿರೆಯ ಪ್ರಾಣಪ್ರಿಯ ಬಂಧನದ ಬಡತನ ಕಳಿಯೊ ವಂದಿಸಿ ಮರೆಹೊಕ್ಕೆ ಜೀಯ 2 ಈಸೀಸಿ ಸಂಸಾರನಿಧಿಯ ಬೇಸತ್ತು ಬಿಡುವೆನೊ ಬಾಯ ಘಾಸಿ ಮಾಡದೆ ಸಲಹಯ್ಯ 3
--------------
ರಾಮದಾಸರು
ಕರುಣಿಸು ನರಹರಿಯೇ ಸ್ಮರಣಿಯ ಕರುಣಿಸು ನರಹರಿಯೇ ಪ ಕರುಣಿಸುವದು ತವಸ್ಮರಣೆ ನಿರಂತರ ಧರಣಿ ಸುರಪ್ರಿಯ ಚರಣಕೆರಗುವೆನು ಅ.ಪ ಶರಣರ ಸುರತರುವೇ ಕರುಣಾ ಶರಧಿ ಶಿರಿಯಧೊರೆಯೆ ಸರಸಿಜ ಭವಮುಖರರಸನೆ ತವಪದ ಸರಸಿಜದಲಿ ಮನವಿರಿಸುವಂತೆ ಜವ 1 ಕಂದನನುಡಿಕೇಳಿ ಸ್ತಂಭದಿ ಬಂದಿಯೊ ವೇಗದಲಿ ವಂದಿಸುವೆನು ಭವಬಂಧ ಬಿಡಿಸಿ ಮನ ಮಂದಿರದಲಿ ತವ ಸಂದರುಶನವನು 2 ಚಾರು ಕೃಷ್ಣ ತೀರಾಕಾರ್ಪರಾ ಗಾರನೆ ಸ್ಮರಿಸುವರ ಘೋರದುರಿತ ಹರನಾರಸಿಂಹ ನಿ ನ್ನಾರಧಕರೊಳು ಸೇರಿ ಸುಖಿಸುವಂತೆ 3
--------------
ಕಾರ್ಪರ ನರಹರಿದಾಸರು
ಕರುಣಿಸು ಭಾರತೀರಮಣ ಕರುಣಿಸು ಪ ಪರಮದಯಾದಿಂದ ಹರಿಯನ್ನ ತೋರಿಸು ದುರುಳರೊಳಡಗಿದೆ ನಿಲಿಸೊ ಜ್ಞಾನಿಗಳಲ್ಲಿ ಅ.ಪ ತ್ರೇತಾಯುಗದಲ್ಲವತರಿಸಿ | ಕಪಿ ವ್ರಾತ ಶಿರೋಮಣಿ ಎನಿಸಿ | ಪಕ್ಷ - ಚೂತ ಫಲಗಳನ್ನು ಸಲಿಸಿ | ಭೂಮಿ - ಜಾತೆಯ ಪಾದಕ್ಕೆ ನಮಿಸೀ | ಅಹ ಘಾತಿಸಿ ಖಳರನ್ನು ಸೀತಾಪತಿ | ಮನೋ ರಥವನು ಸಲಿಸಿದ ಮಾತರಿಶ್ವನೆ ನೀ 1 ಕುಂತಿಯ ಉದರದಿ ಜನಿಸಿ | ಬಹು ಸಿರಿ - ಕಾಂತನ ಪಾದಕ್ಕೆ ನಮಿಸಿ | ಮಡದಿ ಚಿಂತೆಯನು ದೂರಗೈಸಿ | ಅಹ ಸಂತಾಪಗೊಳುತಿಪ್ಪ ದಂತಿಪುರಾಧಿಪನ ತಂತುಗೆಡಹಿತ ಬಲವಂತ ಶಿರೋರನ್ನ 2 ಕಲಿಯುಗದಲುದ್ಭವಿಸಿ | ಬಹು ಲೀಲೆಯೊಳನ್ಯರ ಜಯಿಸಿ | ಸತ್ಯ ಶೀಲರನ್ನುದ್ಧರಿಸಿ | ಸಿರಿ ಲೋಲನೆ ಪರದೈವವೆನಿಸಿ | ಆಹ ಬಾಲ ರವಿ ತೇಜ ವಿಜಯ ರಾಮಚಂದಿರವಿ - ಠಲನ್ನ ಪೂಜಿಸುವಂಥ ಆಲವ ಬೋರ್ಧಾಯನೆ 3
--------------
ವಿಜಯ ರಾಮಚಂದ್ರವಿಠಲ
ಕರುಣಿಸೆನ್ನೊಳು ದೀನಬಂಧು ಪ. ಕರುಣಿಸೆನ್ನೊಳಿರುವ ಸಕಲದುರಿತಜಾತ ರೋಗಗಳನು ಪರಿಹರಿಸಿ ಪಾದಾರವಿಂದ ಸಿರದೊಳಿರಿಸಿ ಸಲಹು ಬೇಗ ಅ.ಪ. ಮೂರು ವಿಧದಲಿ ಸುತ್ತಿಕೊಂಡ ಘೋರ ತಾಪದಿ ಸೂರೆಗೊಳುವ ಗಹನ ಸಂಸಾರ ಕೂಪದಲ್ಲಿ ಬಿದ್ದು ಚೀರುತಿಹೆನು ಚಿತ್ತದಲ್ಲಿ ತಾರೊ ತರಳಗೊಲಿದ ದೇವ 1 ಆದಿ ಭೌತಿಕಾದೇಹಜನಿತಾಗಾಧ ಮೋಹ ತಾ ಬಾಧೆ ಸಹಿಸಲಾರೆ ಮುನಿಸಮಾಧಿಗಮ್ಯ ನಿನ್ನ ಮರವ ವೇಧೆ ವದಗಿ ಬರುವ ಮೊದಲೆ ಮಾಧವನೆ ಮದೀಯನೆಂದು 2 ಮಂದನಾದೆನು ಮಮತೆಯಿಂದ ಕುಂದಿಹೋದೆನು ಮುಂದುಗಾಣವಂದ ಕಾಣದಿಂದು ನಿನ್ನ ಬೇಡಿಕೊಂಬೆ ಇಂದಿರೇಶ ವೆಂಕಟೇಶ ಎಂದು ನಿನ್ನ ಪದವ ಕಾಂಬೆ 3
--------------
ತುಪಾಕಿ ವೆಂಕಟರಮಣಾಚಾರ್ಯ