ಒಟ್ಟು 11458 ಕಡೆಗಳಲ್ಲಿ , 137 ದಾಸರು , 6242 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉದಯದಲೆದ್ದು ಶ್ರೀಹರಿಯ ನಾಮಂಗಳನು | ವದನದಿಂದುಚ್ಚರಿಸಿ ಪಾಡುವ ನರರು ದುರಿ | ಮುದದಿಸದಮಲಾನಂದ ಸುಖವ ಪ ಕೃಷ್ಣ ಕಮಲೇಶ ಕಂಜಾಕ್ಷ ಕರುಣಾಬ್ಧಿ ಶ್ರೀ | ವಿಷ್ಣು ವಿರಂಚಿಪಿತ ವಿಮಲ ವಿಶ್ವೇಶ ಭ್ರಾ | ತುಷ್ಣಿಕರ ಕೋಟಿತೇಜಾ || ವೃಷ್ಣಿ ಕುಲತಿಲಕ ವೃಂದಾವನ ವಿಹಾರಿ ಗೃಹ | ಜಿಷ್ಣು ಸುರಸೇವೆ ಸಜ್ಜನ ಪ್ರಿಯ ಸರ್ವೇಶನ | ಅಭಿಮಾನಿ ಎಂದು1 ಪರಮ ಪುರುಷೋತ್ತಮ ಪರಂಧಾಮ ಪರಬ್ರಹ್ಮ | ಪರಮಾತ್ಮ ಪರಂಜ್ಯೋತಿ ಪರತರಾನಂದ ಗುಣ ಪರಿಪೂರ್ಣ | ಪದ್ಮನಾಭ | ಮುರಮಥನ ಮದನಮೋಹನ ಮುರಲಿಲೋಲ ಮಧು | ಹರಹಲಾಯುಧ ಹಯವದನ ಸ್ಮರಹರಾರ್ಚಿತ | ಚರಣ ಸಚರಾಚರ ವ್ಯಾಪ್ತ ಚಿದ್ವನರೂಪ ಚಾರುಚರಿತ ಚಲರದಹಿತನೆಂದು 2 ಕಾಮಜಿತರೂಪ ಕೌಸ್ತುಭಧಾರಿ ತ್ರಿ | ಧಾಮ ತ್ರಿವಿಕ್ರಮ ತ್ರಿಕಾಲಙ್ಞ ತ್ರಿಜಗನುತ | ಹರಣ || ಶುಭ | ನಾಮ ನಾರದ ಪ್ರಿಯ ನಾರಾಯಣ ಜನಕ | ಕಾಮಪೂರಿತನೆಂದ 3 ಅನಿರುದ್ಧ ಧೋ ಕ್ಷಜಾಕ್ಷರತೀತಕ್ಷಯ ಗದಾಂ | ಪವನಜ ಪ್ರಿಯ ನರಕಾಂತಕಾ | ಗಜಗತಿಪ್ರದ ಗರುಡಗಮನ ಗೋವಿಂದ ಗೊ | ವ್ರಜಪಾಲ ವನಮಾಲಿ ವಸುದೇವಸುತ ಶಾರಂಗಿ | ಕುಜಹರ ಕಿರೀಟಧರ ಜಂಭಾರಿಧೃತ ಚತುರ್ಭುಜ ಭುವನ ಭರಿತನೆಂದು4 ಶ್ರೀರಂಗ ಮುನಿಸಂಗ ಸುರತುಂಗ ಗೋಪಾಂಗ | ನಾರಿಮಣಿ ನೀಲಾಂಗ ಕಾಳಿಂಗ ಮದಭಂಗ | ಸಹಕಾರನೆಂದು | ನೂರೆಂಟು ನಾಮಾವಳಿಯ ರತ್ನಮಾಲಿಕೆಯ | ನಾರುಧರಿಸುವರವರ ಇಷ್ಟಾರ್ಥಗಳ ಕೊಟ್ಟು | ಸಹಕಾರ ನಿಜಪದವಿತ್ತು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಉದಯರಾಗ ಜನಿಸಲಾರೆನು ಜಗದೊಳಗೆ ಹರಿಯೆ ಪ ಕನಸಿನೊಳು ನೆನೆಯೆ ಕಂಪನವಾಗುತಿದೆ ಮನಕೆ ಅ.ಪ ವಾರಿಮಂಡಲ ವೃಷ್ಟಿಧಾರೆ ಧಾರುಣಿ ಜನಕ ದ್ವಾರದಿಂ ಸರಿದುಪೋಗಿ-ಸಾಗಿ ಜಾರಿ ಜನನೀ ಜಠರ ನಾರುವ ದುರ್ಗಂಧ ಸೇರಿ ಬೊಬ್ಬುಳಿಯ ತೆರದಿ-ಭರದಿ ವಾರಿವಾರಕೆ ಬೆಳೆದು ತಾರಿತಗಲಿ ಬಳಲಿ ಶರೀರವನ್ನೆ ಪೊತ್ತು-ತೆತ್ತು ಖಾರ ಕಟು ಲವಣಾದಿ ಘೋರತರ ಮಹಕ್ಲೇಶ ವಾರಿಧಿಯೊಳಗೆ ಮುಳುಗಿ ಮರುಗಿ ಸೊರಗಿ 1 ಲೇಶಾವಕಾಶವಿಲ್ಲದ ದೇಶದೊಳು ಸನ್ನಿ ವಾಸ ಉಲ್ಬಣದೊಳಿದ್ದು-ಕುದ್ದು ಘಾಸಿಯಲ್ಲಿ ಪರಿತಾಪ ಸೂಸಲು ಹಾಹಾಯೆಂಬ ಘೋಷಧ್ವನಿಯಿಂದ ಬೆದರಿ-ಅದರಿ ರೋಷವಾಗಿದ್ದ ಕ್ರಿಮಿರಾಶಿ ಮುಖ ಕಾಟದಿಂ ಏಸು ಬಗೆಯಿಂದ ನೊಂದು ಬೆಂದು ಶ್ವಾಸ ಬಿಡುವುದಕೆ ವ್ಯತ್ಯಾಸವಾಹುದು ಮುಂದೆ ಮೋಸಗೊಂಡು ಮತಿಗೆಟ್ಟು ಬೇಸರಿಕೆ ಅಕಟಕಟ 2 ಜಾನು ಮಧ್ಯದಲಿ ಶಿರಗೋಣು ತೂರಿಸಿಕೊಂಡು ಮಾಣದಲೆ ಬಿಕ್ಕಿ ಬಿಕ್ಕಿ-ಸಿಕ್ಕಿ ಏನೆಂಬೆ ಮಸೆದುಕ್ಕಿನ ಬಾಣ ಪೆಟ್ಟಿನ ಸಮ- ಬೇನೆಯಿಂದಧಿಕವಾಗೆ ಮೈಗೆ ಮೇಣು ಕೈಕಾಲುಗಳು ಕಾಣಿಕಾ ಕಾಲವಗ- ಲಾನು ಚರಿಸದಾದೆನೊ ಇನ್ನೇನೊ ಗಾಣ ತಿರುಗಿದಂತೆ ಗೇಣು ಬೈಲೊಳಗೆ ಈ ಆ-ನನ ಮೇಲಡಿಯಾಗಿ ಬಂದೆ-ನೊಂದೆ 3 ಸೂತಿಕಾಮರುತ ಬೀಸಿದಾತುರಕೆ ಬೆಸಸುವ ಯಾತನೆಗೆ ಕಾಣೆ ಲೆಖ್ಖ-ದು:ಖ ಗಾತುರವು ಕಿರಿದಾಗಿ ಪೋತಭಾವವ ವಹಿಸೆ ಭೂತಳಕೆ ಉಗ್ಗಿಬಿದ್ದು-ಎದ್ದು ಶೀತೋಷ್ಣ ಮಲರೋಗ ಭೀತಿ ಲಾಲನೆಯಿಂದ ಮಾತೆಯ ಮೊಲಿಯನುಂಡು-ಉಂಡು ಆ ತರುವಾಯ ಉಪನೀತ ವಿವಹಗಳಲ್ಲಿ ವ್ರಾತ ಕೈಕೊಂಡೆನಯ್ಯ ಜೀಯ 4 ಯೌವನದಿ ಚತುರ್ವಿಂಶತಿ ತತ್ವಜ್ಞಾನವ ಜರಿದು ಯುವತಿಯರ ರೂಪಲಾವಣ್ಯ ನೋಡಿ-ಬಾಡಿ ನೆವನೆವದಿ ಭೋಗಗಳ ಸವಿ ಸವಿದಿಪೇಕ್ಷಿಸಿ ಭವನ ಭವನವÀನು ಪೊಕ್ಕು -ಸೊಕ್ಕು ಅವರಿವರ ಜಾತಿಯೆನ್ನದೆ ಮಾತುಗಳನಾಡಿ ದಿವರಾತ್ರಿಯಲ್ಲಿ ಹೊರಳಿ-ಉರುಳಿ ಕವಿಜನರ ಧಿಕ್ಕರಿಸಿ ಕೋಣನಂತೆ ಸದಾ ಕಾಲ ಕಳೆದೆ ಉಳಿದೆ 5 ಹೆಂಡ್ರು ಮಕ್ಕಳಿಗಾಗಿ ಎನ್ನ ಹಿತಮನೆ ಮರೆದು ಕಂಡಕಂಡವರ ಕಾಡಿ-ಬೇಡಿ ಉಂಡುಟ್ಟು ಸುಖಪಟ್ಟು ಪಾರತ್ರಯವ ಜರೆದು ಕೊಂಡೆಯಲಿ ನಿಪುಣನಾಗಿ ತೂಗಿ ಮಂಡೆಯನು ಬಲಿತ ಪಶುವಿನಂತೆ ಮದವೇರಿ ಚಂಡ ವೃತ್ತಿಯಲಿ ನಡೆದು-ನುಡಿದು ಹಿಂಡು ಮಾತೇನು ಈ ಜರೆನರೇ ಬಂದೆನ್ನ ಲಂಡತನ ಪೋಗದಕಟ್ಟ-ಉಂಬೆ ವಿಕಟ 6 ನಾನಾ ಯೋನಿಗಳಲ್ಲಿ ಬರಲಾರೆ ಬರಲಾರೆ ನಾನು ಪೇಳುವುದು ಏನೋ-ಇನ್ನೇನೊ ನೀ ನೋಡಿದರೆ ಅನ್ಯ ಕಾವ ದೈವರ ಕಾಣೆ ಮಾನಸದೊಳಗೆ ಒಮ್ಮೆ-ಇಮ್ಮೆ ದೀನರಕ್ಷಕ ಬಿರುದು ಅನವರತ ನಿನ್ನದು ಎಣಿಸದಿರು ಎನ್ನ ದೋಷ ಲೇಶ ಶ್ರೀನಾಥ ವಿಜಯವಿಠ್ಠಲರೇಯ ನೀನೊಲಿದು ಧ್ಯಾನದಲ್ಲಿ ಬಾರೊ ನಿಜ ಮೂರುತಿಯ ತೋರೊ 7
--------------
ವಿಜಯದಾಸ
ಉದಯವಾಯಿತು ಹೃದಯ ಕಮಲದೊಳಗೆ ಧ್ರುವ ಗುರುಕರುಣಾನಂದಬೋಧ ಅರುಣೋದಯವಾಯಿತು ಸ್ಮರಣಿಗರವು ದೊರೆಯಿತು ಹರಿಯ ಚರಣದ 1 ಸಮ್ಯಜ್ಞಾನದ ಪ್ರಭೆ ಸಮ್ಯವಾಗಿದೋರಿತು ತಾಮಸನಿದ್ರೆ ಹರಿಯಿತು ತಿಮಿರಾಂಧದ 2 ಥಳಥಳಿಸುವ ರವಿಕೋಟಿ ಬೆಳಗಾಯಿತು ಹೊಳೆಯುತ ತೇಜೋನ್ಮಯವು ಒಳಗೊರಗೆಲ್ಲ 3 ಒದಗಿ ಬಂತೆದುರಿಟ್ಟು ಮೊದಲೆ ಪುಣ್ಯದ ಘಲ ಉದಯವಾಯಿತದೃಷ್ಟವು ಸದೃಷ್ಟವಾಗಿ 4 ಸದ್ಗತಿ ಸುಖವಿದು ಸದೋದಿತವಾಯಿತು ಸಾಧಿಸಿ ಮಹಿಪತಿಗೆ ಸದ್ಗರು ಕೃಪೆಯು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಉದಿಸೀದಾ ರವಿಯು ತಾನುದಿಸಿದ ಪ ಉದಿಸಿದ ರವಿಯು ತಾನೆನಿಸೀ | ಗುರುಮುದಮುನಿ ಮತವ ವಿಸ್ತರಿಸೀ | ಆಹಬುಧಜನರಂತಸ್ಥ ಬಹು ವಿಧ ತಿಮಿರವಒದೆದು ಛೇದಿಸುವಂಥ ವಿಜಯಾರ್ಯ ತರಣಿಯು ಅ.ಪ. ಸುರಮುನಿ ಪಾದವ ಭಜಿಸೀ | ಯುಗವೆರಡರೊಳ್ ಸುರಲೀಲ ನೆನಿಸೀ | ಯುಗಮೂರರೊಳ್ ನಿಕಂಪನೆನಿಸೀ | ಯುಗಮೂರೊಂದರಲಿ ಕರುವೆನಿಸೀ | ಆಹಪುರಂದರ ದಾಸರ ಗೃಹದೊಳಗುದಿಸುತ 1 ಕರಣೀಕ ಶೀನಪ್ಪ ತನು | ತನ್ನವರಪ್ರಿಯ ಸತಿಕೂಸಮ್ಮನು | ಬಲುಪರಿಪರಿ ಸೇವಿಸಿ ವರವನು | ಪೊಂದಿಎರಡೊಂದು ತನಯರುಗಳು | ಆಹಪರಿ ಪಾಲಿಸುತ್ತಲಿ ಪರಿಪರಿ ಭವಣೇಲಿಪೊರೆಯವು ಉದರವ ಸರಿಯಿತು ಕಾಲವು 2 ಬಡತನ ಭವಣೇಲಿ ಬಂದೂ | ಒಂದುಕುಡಿತೆ ಗಂಜಿಗಾಗಿ ನೊಂದೂ | ಛಾಗಿಒಡೆಯನ ಮನೆಯೊಳಗಂದೂ | ಮೆದ್ದುಒಡಲ ತುಂಬಿಕೊಂಡು ಬಂದೂ | ಆಹಬಡಗ ದಿಕ್ಕಿನ ಗಂಗೆ ಮಡುವ ಕಾಣುವೆನೆಂದುಸಡಗರದಲಿ ಪೋದ ಬಡ ಕೂಸೀಮಗದಾಸ 3 ವತ್ಸರ ತರಳ | ತನ್ನಹಿರಯರಿಗ್ಹೇಳದೆ ಪೊಳಲ | ಬಿಟ್ಟುತಿರುಗುತ ತೀರ್ಥ ಕ್ಷೇತ್ರಗಳ | ಮಿಂದುಮರಳಿ ತಾ ಮಾತಾ ಪಿತೃಗಳ | ಆಹಬೆರೆದು ಮಾನವರಂತೆ ಸಂಸಾರ ವೃತ್ತಿಲಿಚರಿಸಿದವೆರಡುಂಟು ವರುಷವ ಕಳೆಯುತ 4 ಮತ್ತೆ ತಾ ವೈರಾಗ್ಯದಲ್ಲಿ | ಹರಿಪೆತ್ತ ಗಂಗೆಯ ಸ್ನಾನದಲ್ಲಿ | ಮನತೆತ್ತು ಗಯಾದೇಶದಲ್ಲಿ | ಪಿಂಡವಿತ್ತು ವಾರಣಾಸಿಯಲ್ಲಿ | ಆಹಉತ್ತಮರ ಸಂಗ ನಿತ್ಯಸ್ನಾನ ಸಂಧ್ಯಕೃತ್ಯವನೆಸಗಿ ಸುಚಿತ್ತದಿ ಮಲಗಿರೆ 5 ಸತ್ಯ ಸ್ವಪ್ನದಿ ನರಹರಿಯು | ತನ್ನಪುತ್ರನೆಬ್ಬಿಸಿದಂತೆ ಪರಿಯು | ದಾಸರಂತೆ ರೂಪವ ತಾಳಿ ಹರಿಯು | ತನ್ನಹತ್ತಿರ ಕರೆಯುತ ಧೊರೆಯು | ಆಹಚಿತ್ತಜ ಪಿತ ಪೆತ್ತ ಸರಿತವ ದಾಂಟಿಸಿಉತ್ತಮ ಕಾಶಿಯ ವ್ಯಾಸರ ಕಂಡವ 6 ಪರಿ ಪರಿಯ | ಆಹಅಚ್ಚ ಕವನ ಪೇಳಿ ನೆಚ್ಚಿನ ಮನದವರಸ್ವಚ್ಛತನಕೆ ತಿದ್ದಿ ಅಚ್ಚ್ಯುತಗಿಂತವ 7 ಎರಡೊಂದನೇ ಬಾರಿ ಪೋಗಿ | ಕಾಶಿಪುರದಿ ಗಂಗಾಸ್ನಾನಕಾಗಿ | ಕೂಡೆಸುರನದಿ ಪೆಚ್ಚಿ ಮೇಲಾಗಿ | ಸಿರಿವರದ್ವಿಜಗಭಿಷೇಕವಾಗಿ | ಆಹಸರಿತವು ಮುಂಚಿನ ಪರಿಯಂತೆ ಪ್ರವಹಿಸೆಸುರನರೋರುಗರೆಲ್ಲ ಪರಿಪರಿ ಕೊಂಡಾಡೆ 8 ತುತಿಸುತಲಲ್ಲಿಂದ ಸೇತು | ಸ್ನಾನರತಿಯಿಂದ ಗೈಯ್ಯುತ ಹೊತ್ತು | ಹರಿಕಥೆಗಳ ಪೇಳಿ ಯಾವತ್ತು | ಜನತತಿಗೆ ಸನ್ಮಾರ್ಗವನಿತ್ತು | ಆಹತೀರ್ಥ ಕ್ಷೇತ್ರಂಗಳ ನತಿಸುತ ದಶಮತಿಮತವ ಬೀರಿದನೀತ ಸುಜನರ ಪೊರೆಯಲು 9 ಸಾರ | ಸೊಳ್ಹಾದಿಗಳ್ ಮೊದಲಾದ ಹಾರ | ದಿಂದಭೇದ ವಾದಿಯ ಮತೋದ್ಧಾರ | ಗೈದುಶ್ರೀಶ ಗೊಪ್ಪಿಸೀದ ಧೀರ | ಆಹನಾದ ಮೂರುತಿ ಗುರು ಗೋವಿಂದ ವಿಠಲನಪಾದವ ಸ್ಮರಿಸುತ್ತ ಮೋದವ ಪಡುತ್ತಿದ್ದ 10
--------------
ಗುರುಗೋವಿಂದವಿಠಲರು
ಉದ್ದರುಸುವದೆನ್ನ ಉದಧಿಶಯನ | ಪಾದ | ಪದ್ಮದ್ವಯಕೆಯಿಂದು ಪ ಅಂದು ನೀ ಪೇಳಿದಂದಲಿ ತೀರ್ಥಯಾತ್ರೆ | ನಿಂದರದೆ ಸಂಚರಿಸಿ ಪುಣ್ಯವೆಲ್ಲಾ | ತಂದು ನಿನಗರ್ಪಿಸಿದೆ ಕೈ ಕೊಂಡು | ತೋರು ತಡಮಾಡದಲೆ ದೇವಾ 1 ಯಾತರವ ನಾನು ನರಮನೆ ಗಾಯಕರ ದೂತರೆಂಜಲನುಂಡು ಬೆಳದ ನರನೋ || ನೋತ ಫಲವಾವದೊ ನೀನೆ ಬಲ್ಲೆಯಾ ಜೀಯಾ | ಮಾತು ಮಾತಿಗೆ ಹಿಗ್ಗಿ ನಗುವ ಚನ್ನಿಗರಾಯಾ2 ಇಷ್ಟೆನ್ನ ಮನದ ಭೀಷ್ಟೆ ಒಂದೆ ವುಂಟು | ಕೃಷ್ಣಾ ಸ್ನಾನ ಕೃಷ್ಣ ಸಂದರುಶನಾ | ಕೊಟ್ಟು ಕೇವಲವಾಗಿ ನಿನ್ನಂಘ್ರಿಯಲಿ ರತಿ | ಇಟ್ಟು ಭಜಿಸುವಂತೆ ಭಾಗ್ಯವನು ಕೊಡೊವೇಗಾ3 ಏನು ಕಡಿಮೆ ನೀನು ಒಲಿದರಾದಡೆ ರಾಮ | ಧೇನು ತರುಮಣಿ ಬಾರದೆ ನಿಲ್ಲವೇ || ಶ್ರೀನಿವಾಸನೆ ನಿನ್ನ | ಲೇಶ ಸುಖವು ತೋರದು ದೇವಾ 4 ವೆಂಕಟಗಿರವಾಸಾ ವೇದ ವಂದಿತ ಚರಣಾ | ಶಂಖ ಚಕ್ರಪಾಣಿ ಕರುಣಾಕರಾ | ಶಂಖಾಣ ನೃಪವರದ ವಿಜಯವಿಠ್ಠಲ ತಿಮ್ಮ ಅಂಕದ ಮೇಲಾಡುವ ಬಾಲನೆಂದು ಬಿಡದೆ 5
--------------
ವಿಜಯದಾಸ
ಉದ್ದಾಳಿಕನ ಕಥೆ ಪಾಶಾಂಕುಶ ಧರನೆ ಕರಿಣಿಸೊ ಮತಿಯ 1 ಮಾನಿನಿಕುಲಕೆ ಕಟ್ಟಾಣಿ ಕರುಣಿಸೆ ಮತಿಯ2 ಮನೋಹರನೆ ನಿಜಮತಿಯ 3 ಅಂಬರ ಮೇಲಾದಷ್ಟದಿಕ್ಪಾಲಕರು ಪುಣ್ಯಕಥೆಯ 4 ಓಣ್ಯೊಳು ಚೆಲ್ಲಿದ ಅಣಿ ಮುತ್ತಾರಿಸಿ ನೂಲಿಗೆ ಪೋಣಿಸಿದಂತೆ ಯೋಗಿಗಳರಸುದ್ದಾಳಿಕನ ಕಥೆಯನು ಹೇಳುವೆ ಚರಿತೆಯ ಮಾಡಿ5 ವೇದವೇದಾಂತ ಪಾರಗನು ಧರ್ಮ ಪತ್ನಿ 6 ಸುತಜನಿಸಿದ ಉದ್ದಾಳಿಕ ಮಾಡಿದ ಕ್ರಮದಿಂದ 7 ಮೌಂಜಿಯ ಕಟ್ಟಿ ನಡೆದರು ಪರಗತಿಗೆ 8 ನಾಲ್ಕು ವೇದಗಳ ಘನತಪವನಕಾಗಿ ನಡೆದ 9 ನಿಂದು ಬೆಳಗುವ ಜ್ಯೋತಿಯಂತೆ ಸಂದವರುವತ್ತು ಸಾವಿರವು 10 ಪಟ್ಟಣದಿ ರಾಜ್ಯವಾಳುವನು 11 ಕನ್ಯಾದಾನವು ಭೂದಾನ ರಾಜ್ಯವಾಳುವನು 12 ಹೆತ್ತ ತಾಯಿ ಮಕ್ಕಳಗಲರೆಂದೆದಿಗು ಬತ್ತದೆ ಕರೆವ ಧೇನುಗಳು ದೇಶದೊಳಗೆ 13 ಪುಣ್ಯಸಾಧನರು ಸಜ್ಜನರು ಧರ್ಮಗಳಾ ದೇಶದೊಳಗೆ 14 ಬಡವರಿಲ್ಲಿ ಚಾರರುಂಟು ದೇಶದೊಳಗೆ 15 ಧರ್ಮವ ನಡೆಸಿ ರಾಜ್ಯವಾಳುವನು 16 ಮಕುಟವೆಂದೆನಿಸಿ ಪಟ್ಟದರಸಿಯಲ್ಲದನ್ಯತ್ರ ನೋಡೇಕ ಪತ್ನಿಯ ವ್ರತವ ನಡೆಸಿದನು17 ಸಂತೋಷದೋರಲು ಹುಟ್ಟಿದಳ್ ಚಂದ್ರಾವತಿಯು 18 ಹೊನ್ನಿನ ರಾಸಿ ಸುವರ್ಣದ ಬೆಟ್ಟವು ಕನ್ಯಾದಾನದ ಹೆಬ್ಬೆಳಸು ಮಾಣಿಕವೆ ಸಂತಾನ 19 ನಡೆಯೋಳು ದಟ್ಟಡಿಯಿಡುತ ಕಡುಲಾಲಿಕೆ ಬಾಲಲೀಲೆ 20 ಬಡವಾದಾಳೆಂದು ಕಡುಹರುಷದಲಿ ಹಿಗ್ಗಿದರು 21 ಅಕ್ಷರಾಭ್ಯಾಸವ ಮಾಡಿಸಿ ಕುಮಾರಿಗೆ ನರ್ತನ ಗೀತವ ಕಲಿಸಿ ಪುತ್ರಿಗಭ್ಯಾಸ ಮಾಡಿಸಿದ 22 ಯೌವನವು ತೋರಿದವು ಆಲಯವನೆ ಕಟ್ಟಿಸಿದ 23 ಪುತ್ರಿಯ ಸೇವೆಗೆ ಇಟ್ಟನೆ ಭೂಪಾಲ ಹತ್ತುಸಾವಿರ ಕೆಳದಿಯರ ಸುತ್ತಲು ಪ್ರಾಕಾರ ಎಸೆದವು ರಕ್ಷೆಗೆ ಇಟ್ಟನೆ ದ್ವಾರಪಾಲಕರ24 ಮುನಿಕೌಶಿಕನು ನೋಡುತಲಿ 25 ಸತ್ಯಲೋಕ ತಪೋಲೋಕವ ಚರಿಸುತ್ತ ಹೊಕ್ಕ[ನೆ] ಯಮ ಲೋಕವನು ಜೀವಿಗಳ ತಾಕಂಡ 26 ತೃಣದ ಮೂಲಾಗ್ರದಿ ನಡುಗುತಿಪ್ಪರ ಕಂಡು ಬ[ಳಿ] ಯಲ್ಲಿ ನಿಂತು ಮಾತಾಡಿ ತಿಳಿದು ಹೇಳುವುದು ಎನ್ನೊಡನೆ 27 ಜಗದೊಳಗೆ ಎಮಗೆ ಪತನಕ್ಕೆ ಬಿದ್ದೆವೆಂದೆನಲು 28 ಕಾಣಿಸುವ ದೌಹಿತ್ರರು ಮುನಿಯು ಕೇಳಿದನು 29 ಹೆಣ್ಣನೊಲ್ಲದೆ ಅರಣ್ಯವ ಚರಿಸುವ ಉನ್ನಂತ ತಪಸೀಲಿದ್ದ ತಿಳಿದು ಹೇಳುವುದು 30 ಪುತ್ರಸಂತಾನವ ಪಡೆದು ವಿಸ್ತಾರವಾಗಿ ಹೇಳುವುದು 31 ಭೋರನಲ್ಲಿಂದ ತೆರಳಿದನಾಗಲೆ ಮುನಿ ಅರಣ್ಯವ ಚರಿಸುತಲೆ ತಪೋವನವ 32 ಕರವಿಡಿದು ಕರೆ ತಂದನಾಗ ಬರವೇನೆಂದು ಕೇಳಿದನು 33 ಯಮ ಲೋಕವನು ಅತ್ಯಂತ ನರಕಕೈದುವರು 34 ಆಲಸÀ್ಯವಿಲ್ಲದೆ ಬೀಳ್ಪರು ಪತನಕ್ಕೆ º
--------------
ಹೆಳವನಕಟ್ಟೆ ಗಿರಿಯಮ್ಮ
ಉದ್ಧರಿಸಿ ಸಲಹಿವನ ಮಧ್ವಪತಿ ವಿಠಲಾ ಶುದ್ಧ ಬುದ್ಧಿಯನಿತ್ತು ಬಿಡಿಸುಮನ ಚಂಚಲಾ ಪ ಪದಿನಾರ ಶತಕದೊಳು ಮೊದಲು ಜನ್ಮವ ತಾಳಿ ಸದಮಲ ದಾಸರಾಯರ ಪುತ್ರನೆನಿಸಿ ಪದುಮನಾಭನ ಪಾಡಿ ಮುದದಿ ಭವನುತ್ತರಿಸಿ ಯದುಪತಿಯ ಪಾದಾರವಿಂದವ ಪಡೆದನು 1 ಕರ್ದಮ ಬಲದಿ ಉತ್ತುಮರ ಕುಲವಲ್ಲಿ ಸ್ತುತ್ಯಗುರು ಪೂರ್ಣಪ್ರಜ್ಞರ ಮತದಿ ಜನಿಸಿ ವತ್ತರದಿ ದಾಸರಾಯರು ಮಾರ್ಗ ಪೇಳಲು ಮತ್ತೆ ಹರಿಭಕ್ತಿಯಿಂದಲಿ ಜನ್ಮ ತಳೆದಾ2 ನಲನಾಮ ವತ್ಸರದ ಫಲಪುಷ್ಪದಮಾವಾಶ್ಯಾ ಜಲಧಿ ಶಯನನ ದಾಸರಾಯರ ದಿನದಿ ಸುಲಭ ನರಸಿಂಹ ವಿಠ್ಠಲ ಕರುಣಿ ಸಂತತವ ಕಲುಷರಹಿತೇನರಗೆ ಬಲದಿ ಒಲಿದಿತ್ತನು 3
--------------
ನರಸಿಂಹವಿಠಲರು
ಉದ್ಧರಿಸೆನ್ನಯ್ಯ ಮುದ್ದು ಶ್ರೀಹರಿಯೆ ಬಿದ್ದು ಬೇಡುವೆ ನಿಮ್ಮ ಪಾದಪದ್ಮದೊಳು ಪ ಬದ್ಧಗುಣ ಬಚ್ಚಿಟ್ಟು ಶುದ್ಧ ಮನದವನಂತೆ ಸುದ್ದಿ ಹೇಳುತ ಸತತ ಕದ್ದು ತಿನ್ನುವ ಎನ್ನ ಬದ್ಧ ಮನಸಿನ ಡೊಂಕ ತಿದ್ದು ಬೇಗದೊಳು 1 ನಂಬಿಗುಳ್ಳವನಂತೆ ಹೇಳುವ ಪರರ ಅಂಬುಜಾಕ್ಷಯರೊಲುಮೆ ಹಂಬಲವ ಮನದಿ ತುಂಬಿಕೊಂಡಿಹ್ಯ ಎನ್ನಡೊಂಕ ಶಂಭುವಿನುತನೆ ತಿದ್ದಿ ಇಂಬುಗೊಡು ಜವದಿ 2 ಸಫಲಮಾನಿಸನಂತೆ ಜಪಮಾತುಗಳಾಡಿ ಕಪಟತ್ವದಿಂದಿತರ ಅಪಹರಿಸುವ ಕುಪಿತ ಮನಸಿನ ಡೊಂಕ ಅಪರೂಪತಿದ್ದಿ ನುತ ಸುಫಲದಾಯಕ ಹರಿ ಕೃಪೆಮಾಡು ಜವದಿ 3 ಹಸುತೃಷಳಿದವನಂತೆ ವಸುಧೆಜನರಿಗೆ ತೋರಿ ಬಸವಳಿದು ಬಾಯಾರಿ ದೆಸೆಗೆಟ್ಟು ಪರರ ಅಶನ ಬೇಡುಂಬ ಪುಸಿಯ ಮನಸಿನ ಡೊಂಕ ಹಸನಾಗಿ ತಿದ್ದಿ ಲಕುಮೀಶ ಒಲಿ ದಯದಿ 4 ಪಾಮರಮನದ ದುಷ್ಕಾಮಿತಗಳನೆಲ್ಲ ಕ್ಷೇಮದಿಂ ಕಡೆಹಾಯ್ಸಿ ಸ್ವಾಮಿಯೇ ನಿಮ್ಮ ನಾಮಧ್ಯಾನದ ನಿತ್ಯನೇಮವನು ಪಾಲಿಸಿ ಪ್ರೇಮದ್ಹಿಡಿಕರ ಶ್ರೀರಾಮಪ್ರಭುತಂದೆ 5
--------------
ರಾಮದಾಸರು
ಉದ್ಧವನು ಯಮುನೆಗೆ ಪೋಗುವಾಗಗದ್ದಲವ ಕೇಳಿದನು ಗೋಪನಾರಿಯರ ಪ ಎದ್ದು ಗೋಪಿಯರೆಲ್ಲ ಮುದ್ದು ಮುಖವನೆ ತೊಳೆದುತಿದ್ದಿ ತಿಲ್ಕವನಿಟ್ಟು ಬಾಲ್ಯದಲ್ಲೆಶ್ರದ್ಧೆಪೂರ್ವಕ ಹರಿಯ ಪದ್ಮಂಗಳಿಗೆ ನಮಿಸಿಉದ್ಧಾರ ಮಾಡೆಂದು ಪ್ರಾರ್ಥಿಸಿದರು 1 ಅಂಗಳಕೆ ಥಳಿಹಾಕಿ ರಂಗವಾಲಿಯನಿಕ್ಕಿಮಂಗಳಾತ್ಮಕ ದೀಪ ಮನೆಯ ಮುಂದತೆಂಗುಬಾಳೆ ಸ್ತತ್ಥ ಫಲಂಗಳ್ಹೊಸ್ತಲಿಕಿಟ್ಟುರಂಗಗರ್ಪಿತವೆಂದು ನುಡಿದಲಾಗ 2 ವಾಲೆ ಸರಪಣಿಯಾ ಕಿವಿಯಲಿಟ್ಟುಮಂದಹಾಶ್ಯದಿ ಮುಖದಿ ಮುಖರೆನಿಟ್ಟು3 ಕಾಲಿಕಾಲ್ಕಡ್ಗ ರುಳಿಯು ಘಾಲು ಪೈಝಣಕಾಲುಂಗ್ರಗಳು ಪಿಲ್ಲೆ ಕಾಲಿನಲ್ಲೆಸಾಲುಗೆಜ್ಜೆಗಳುಳ್ಳ ಮೇಲೆ ಕಾಂಚಿಯನುಟ್ಟುಮುಕ್ತಮಾಲೆಗಳು ಕೊರಳಲ್ಲೆ ಲೋಲಪದಕ 4 ಕಂಕಣವು ಕರದಲ್ಲಿ ವಂಕಿ ತಾಯಿತ ಭುಜದಿಬಿಂಕದಿಂದಲೆ ಮಂಲಿ ಹೆರಳ್ಹಾಕಿಅಂಕೆಯಿಲ್ಲದ ಸರ್ವಲಂಕಾರಗಳನಿಟ್ಟುಪಂಕಜಾಕ್ಷನ ಮನದಿ ಸ್ಮರಿಸಿದ 5 ಲೋಲಾಕ್ಷಿ ಗೋಪಿಯರು ಭಾಳ ವಸ್ತ್ರಗಳಿಟ್ಟುಲೋಲ ಲತೆಯಂತೆ ಬಳುಕಾಡುತಮಾಲೆ ಹೆಗಲ್ಹಾಡುತಿರೆ ಮೇಲೆ ಸ್ವರಗಳನೆತ್ತಿನೀಲವರ್ಣನ ಮಹಿಮಿ ಪಾಡಿದರು 6 ಬಂಗಾರದ ತಬಕಿನಲಿ ಮಂಗಳಾರುತಿಯೆತ್ತಿಶೃಂಗಾರ ಪದಗಳನೆ ಪಾಡುತಲೆರಂಗು ನೀಲದ ರತ್ನದುಂಗುರವು ಬೆರಳಲ್ಲೆರಂಗಗಾರತಿ ಬೆಳಗಿ ಬೇಡಿದರು 7 ಕಂದರ್ಪ ಶರಾದರತಿ 8 ಘಿಲ್ಲು ಘಿಲುಕೆಂದು ಮೈಯ್ಯಲ್ಲಿ ವಸ್ತ್ರದ ಶಬ್ದಪುಲ್ಲಾಕ್ಷಿಯರು ಕಡಿದ ಮಥನ ಶಬ್ದನಲ್ಲೆರ್ಹಾಡುವ ಕಂಠದಲ್ಲೆ ಗಾಯನದ ಶಬ್ದಎಲ್ಲ ಶಬ್ದವು ಸ್ವರ್ಗ 9 ನಿಂತು ನಿಜಕರದಿಂದ ಮಂತಧಾಮವ ಪಿಡಿದುಕಂತುಪಿತ ಕೃಷ್ಣನ್ನ ಪಾಡುತಲೆಕಾಂತೆರೆಲ್ಲರು ಮಸರು ಕಡೆವ ಶಬ್ದವ ಕೇಳಿಭ್ರಾಂತಿಯಲಿ ಉದ್ಧವನು ನಿಂತನಲ್ಲೆ 10 ಅವರ ಭಕುತಿಯ ನೋಡಿ ಅನುದಿನದಿ ಉದ್ಧವನುಅವರ ಪಾದದ ಧೂಳಿ ಸ್ವೀಕರಿಸಿದಅವರರುಹದೊಳಗೆನ್ನ ಆಗಲುದಯವು ಎಂದಅವರೊಳಗೆ ಅವರಂತೆ ಅನುಕರಿಸಿದ 11 ಇಂಥ ಪರಿಯಲಿ ಗೋಪಕಾಂತೆ ಕಾಲಾಪಗಳುನಿಂತು ನೋಡುತ ತನ್ನ ಮೈಯ್ಯ ಮುರಿದಭ್ರಾಂತನಾಗುತಲೆ ಅವರಂತೆ ಮಥನವ ಮಾಡಿಅವರಂತೆ ಕರಗಳ ಮಾಡಿ ನಲಿದು ಕುಣಿವ 12 ಎರಡು ಸಾಲಲಿ ದೀಪ ಕರಗಳಂಬಾರಗಳುತುರವು ತರಿಸುವ ದನಿಯು ಮಥನ ಶಬ್ದಸರಸಿಜಾಕ್ಷಿಯರೆಲ್ಲ ಗಾಯನ ಮಾಡುವ ಶಬ್ದಬೆರಗಾಗಿ ಕೇಳಿದನು ಪರಿಹರುಷದಿ 13 ಮಂದ ಸುಗಂಧಡಗಿತು 14 ಸರಸಿಜಾಕ್ಷಿಯರೆಲ್ಲ ಪರಮಪುರುಷನ ಸ್ಮರಿಸಿಸುರಿಸುತಲಿ ಕಣ್ಣೀರು ಪರವಶದಲೇನೆರಗು ಬೀಳಲು ಹೊರದೆ ಹೆರಳ ಮಾಲೆಯ ಮರೆದುಬರೆದ ಚಿತ್ರಗಳಂತೆ ಪರಿಯಾದರು 15 ವಾರಿಜಾಕ್ಷಿಯರ್ಹರಿಯ ಧ್ಯಾನಮನದಲಿ ಕೃಷ್ಣಸಾರ ಸುಂದರ ಮೂರ್ತಿಯಳೆ ಕಾಣುತಮದ ಜಾನಕನ ಮಾತನಾಡುತ ಮನದಿಪಾರುಗಾಣದೆ ಸುಖದ ವಾರಿಧಿಯೊಳು 16 ಮನೆಯ ಹಂಬಲವಿಲ್ಲ ಮಾವನಂಕೆಯಿಲ್ಲಮೊದಲೆಯಿಲ್ಲ ಅತ್ತಿ ಪತಿಗಳಂಜಿಕೆಮಾರಜನಕನ ಕೂಡ ಮೈಯ್ಯಕೈಯನ ಮುರಿದುಮಾಧವನೆ ಪಾಲಿಸೆಂದೊದರಿದಾರು 17 ಮಂದಜಾಕ್ಷರು ಮಾಳ್ಪ ನಂದಬಾಲನ ಕಥೆಯಆನಂದದಲಿ ಕೇಳಿ ಉದ್ಧವನುಇಂದಿರೇಶನ ಚರಣ ದ್ವಂದ್ವ ಸ್ಮರಿಸುತಮಧುರೆಲ್ಹಿಂದ ಬಂದ್ಹೇಳಿದನು ನಂದಸುತಗೆ 18
--------------
ಇಂದಿರೇಶರು
ಉದ್ಧಾರ ಮಾಡೆಯ್ಯಾ ಸಿದ್ಧೇಶ್ವರ | ಸದ್ಧರ್ಮದಲಿ ಸತತ ನೀಲ ಲೋಹಿತ ವಿಗತ ಚೈಲ ಭೂಷಿತ ಭನಿಸಿತ ಕಾಲಾರಿ ಶಿವ ದ್ರೌಣಿಂ ಶೂಲಪಾಣಿ ಹಾಲವಿಪುರವಾಸ | ಹಾಲಾ ಹಲವ ಮೆದ್ದು ತಾಳಲಾರದೆ ಕೊಂಡ ಮೇತೌಷಧವನಿತ್ತು 1 ವ್ಯಾಧ ರೂಪದಿ ರಣದಿ ಕಾದು ಪಾರ್ಥನೆ ಸೋತು ನೀ ದಯದಿ ದಿವ್ಯಾಸ್ತ್ರ ಪಾಲಿಸಿದೆಯೋ | ಸಾದರದಿ ನಾ ನಿನ್ನ ಪಾದಕೆರಗುವೆ | ಎನಗೆ ಮೋದದಿಂದಲಿ ಪಂಚಭೇದ ಜ್ಞಾನವನರುಹಿ 2 ಕಾಮಾರಿ ಸುಪವಿತ್ರ ಸೋಮಾರ್ಕ ಶಿಬಿನೇತ್ರ ಶಾಮಸುಂದರ ವಿಠಲಸ್ವಾಮಿ ಮಿತ್ರ | ಪ್ರೇಮಾಬ್ಧಿ ಕಳತ್ರ | ತಾಮರಸ ಭವಪುತ್ರ ಧವಳಗಾತ್ರ 3
--------------
ಶಾಮಸುಂದರ ವಿಠಲ
ಉಪಕೃತಿ ಎನ್ನದಲ್ಲ ನರಹರಿ ಕೃಪೆ ಕಾರಣವಿದಕೆಲ್ಲ ಪ ಅಪರಾಧಗಳನು ಮನ್ನಿಸಿ ಪೊರೆಯುವ ವಿಪುಲ ಕೃಪಾನಿಧಿ ಹರಿಯಲ್ಲದೆಲೆ ಅÀ.ಪ. ಜೀವ ಪರಾಧೀನ ಸ್ವತಂತ್ರ ರಾ ಜೀವದಳನಯನ ಸರ್ವೋತ್ತಮ ಪ್ರಭು ಕರಿಗಿರೀಶನೆ ಜಗ ಜೀವನ ಪಾವನ ಪ್ರೇರಕನಲ್ಲದೆ 1
--------------
ವರಾವಾಣಿರಾಮರಾಯದಾಸರು
ಉಪವಾಸ ಬೀಳುವುದ್ಯಾಕೋ ಮನುಜಉಪವಾಸ ಬೀಳುವುದ್ಯಾಕೋಉಪವಾಸ ಬೀಳಲಿಕೆ ನಿನಗೆ ಗ್ರಹಚಾರ ಸಾಲದೆ ಬೇಕೋ ಪ ಅಂಗದಿ ತತ್ವಾಭಿಮಾನವು ಇರಲಿಕೆ ಆಹಾರವರ್ಜಿಪುದ್ಯಾಕೋಮಂದ ಮತಿಗಳು ಕೂಡಿಯೆ ನೀನು ಮಂದಮತಿಯಾದೆ ಯಾಕೋ 1 ದೇಹದಿ ವೈಶ್ವಾನರನಿರಲಿಕೆ ದೇಹವ ದಂಡಿಪುದ್ಯಾಕೋಮಹಾವ್ರತವೆಂದು ಮೊಸರ ಬಿಟ್ಟು ಮಣ್ಣನೆ ಮುಕ್ಕುವಿಯಾಕೋ 2 ನಿತ್ಯಾತ್ಮನು ಚಿದಾನಂದ ತಾನಿರೆ ನಿರಾಹಾರವದ್ಯಾಕೋಮತ್ತೇಕಾದಶಿ ಶಿವರಾತ್ರೆನ್ನುತ ಬಿಣ್ಣನೆ ಬಳಲುವಿಯಾಕೋ 3
--------------
ಚಿದಾನಂದ ಅವಧೂತರು
ಉಪೇಂದ್ರ ವಿಠ್ಠಲನೆ ಕೃಪೆಯಿಂದ ಕೈಯ್ಯ ಪಿಡಿಯೊ ಪ ಅಪವರ್ಗ ಪ್ರದಹರಿಯೆ | ನಿಪುಣವೆನಿಸುತ ಶಿಶುವವಿಪುಲ ಮತಿಯನೆ ಕೊಟ್ಟು | ಕಾಪಾಡೊ ಹರಿಯೇ ಅ.ಪ. ವರುಷ ಕಾರಣವಲ್ಲ ಹರಿಭಜನೆಗೆಂಬುದನಪರಿಕಿಸುತ ಇವನಲ್ಲಿ| ಪ್ರಾರ್ಥಿಸುವೆ ನಿನಗೇ |ನಿರುತ ನಿನ್ನಯ ಪದದಿ | ಮೆರೆವ ಭಕುತಿ ಜ್ಞಾನಕರುಣಿಸುವುದೆಂದೆನುತ | ಪರಿಪರಿಯಲಿಂದ 1 ಕಾಕು ಮತ ದಿಕ್ಕರಿಪವಾಕು ವೈಖರಿಯಿತ್ತು | ತೋಕನ್ನ ಸಲಹೋ |ಲೌಕಿಕದಿ ಸತ್ಕೀರ್ತಿ | ಬೇಕಾದವರವಿತ್ತುನೀ ಕರುಣಿಸುವೆನೆಂದು | ನಾ ಕೇಳ್ವೆ ಹರಿಯೇ2 ದೇವದೇವೇಶ ತವ| ಪಾವನ್ನಸ್ಮøತಿಯಿತ್ತು ಗೋವತ್ವದ ನಿಗಾವು | ಧಾವಿಸುವ ತೆರದೀಕೋವಿದೋದ್ಗೀತ ಗುರು ಗೋವಿಂದ ವಿಠ್ಠಲನೆಭಾವುಕನ ನೀಪೊರೆಯೊ | ಗೋವಿದಾಂಪತಿಯೇ 3
--------------
ಗುರುಗೋವಿಂದವಿಠಲರು
ಉಪ್ಪವಡಿಸಯ್ಯ ಉಡುಪಿನ ಕೃಷ್ಣ ಚೆಲ್ವಕಂ-ದÀರ್ಪನಪ್ಪನೆ ಕಣ್ದೆರೆ ಪ. ಸರ್ಪನಂಗದಲಿ ರುಕ್ಮಿಣಿ ಸತ್ಯಭಾಮೆಯರಅಪ್ಪಿಕೊಂಡಿಪ್ಪ ಬಲು ಸುಪ್ರಸಿದ್ಧಅಪ್ರತಿಮ ಗುಣಗಣಾಂಬುಧಿ ಕರುಣಾನಿಧಿಯೆಸುಪ್ರೇಮದಿಂದ ನೋಡಾ ದೇವ 1 ದೇಹಿಗಳ ನಿದ್ರೆಯನು ತಿಳುಹಿಸುವರಾರು ನಿ-ರ್ವಾಹಕನು ನೀನು ನಿದ್ರೆಯ ಕೈಕೊಳೆಆಹುತಿಗಳನುವಾದ ಅನಲಮುಖದಲಿ ನಿನಗೆಶ್ರೀಹರಿಯೆ ದುರಿತಾರಿಯೆ ದೇವ 2 ನಿದ್ರೆಯಂ ತೊರೆದು ಸಿದ್ಧಾಸನದಿ ಕುಳ್ಳಿರ್ದುಸಿದ್ಧರೆಲ್ಲರು ತಮ್ಮ ಹೃದಯಕಮಲಸದ್ಮವನು ಬೆಳಗಿ ನಿನ್ನನೆ ಅರಸುತೈದಾರೆಮುದ್ದುಮೊಗವನು ತೋರಿಸಾ ದೇವ 3 ತುಂಬಿ ಕರೆಯಕಳುಹಿದ ನಿನ್ನಮನೆಯ ಬಾಗಿಲೊಳರಸುತ್ತ ದೇವ 4 ಕಮಲಕೊಬ್ಬಿತು ಸೂರ್ಯನತಿ ಪೆರ್ಮೆಯಂ ಪೊತ್ತಕ್ರಮದಿಂದ ನಿನ್ನ ಪೂರ್ವಜಸೋಮನೊಭ್ರಮೆಗೊಂಡವನ ಪರಿವಾರಕಾಯಿತು ಸೋಲುಸುಮುಖಚಂದ್ರನೆ ಬೆಳಗಿಸಾ ದೇವ 5 ಅಮಲಜಲದಲ್ಲಿ ಮಜ್ಜನವ ಮಾಡುವೆನೆಂದುಕ್ರಮದಿಂದ ತೀರ್ಥಗಳು ಕರೆದು ನಿನ್ನ ರಮಣೀಯ ಮೂರುತಿಯ ಮನದಲ್ಲಿ ನಿಲಿಸುವಶ್ರಮವ ಸಾರ್ಥಕ ಮಾಡೊ ದೇವ 6 ಅತಿಶೀತ ಹರುಷದಿಂ ಪುಳಕ ಶೋಭಿತರಾಗಿಪ್ರತಿಕ್ಷಣದಿ ನಿನ್ನನೇ ನೆನೆದು ನೆನೆದುವ್ರತದಿಂದ ಪೇಳುವ ಶ್ರುತಿ ಪುರಾಣದೊಳಿಪ್ಪಸ್ತುತಿಯನಾಲೈಸಿ ಕೇಳಾ ದೇವ 7 ತನುವ ರಂಜಿಸಿ ಶಂಖ ಚಕ್ರೋಧ್ರ್ವಪುಂಡÀ್ರದಿಂಪ್ರಣಮಮಂ ಪೇಳಿ ಮಂತ್ರಿತ ವಾರಿಯಘನ ಮಹಿಮ ನಿನ್ನ ಹಸ್ತದಲಿ ತರ್ಪಣ ಮಾಡಲನುವಾದರಯ್ಯ ಬುಧರು 8 ಎನಲುಪ್ಪವಡಿಸಿ ಶ್ರೀಕೃಷ್ಣ ಹಯವದನ ತಂ-ಪಿನ ನಾಗಭೋಗ ವಿಸ್ತರದಿ ಕುಳಿತುವನಜಸಂಭವಸಹಿತ ವಿಬುಧರೊಡ್ಡೋಲಗದಿಮುನಿಗಳರ್ಚಿಸಿ ಮೆಚ್ಚಿಸೆ ದೇವ9
--------------
ವಾದಿರಾಜ
ಉಪ್ಪವಡಿಸಯ್ಯ ತ್ರಿವಿಕ್ರಮ ನಿನ್ನ ಪುರದೊಳಗೆ ಇಪ್ಪ ಮುಕುತರಿಗೆ ಸಲ್ಲದು ನಿದ್ರೆ ನಿನಗಿಲ್ಲ ಕಲ್ಪಾಂತದಲಿ ನಿತ್ಯವಾದ ವೇದವ ನೆನೆವ ಸುಪ್ರಭಾವನಿಗೇಕೆ ಹೀನಮನುಜರ ಸಾಮ್ಯ ಪ. ಹರಿನಾಲ್ಕು ಮನ್ವಂತ್ರಗಳನು ಹಗಲನು ಮಾಳ್ಪ ವಿಧಿ ನಿನ್ನ ಕುವರನೆ ನಿದ್ರೆಗೊಪ್ಪದೆ ಬಂದ ಇದು ಸರ್ವಸೊಪನ ಅನಿಮಿಷರೆಂಬ ಬಿರುದಿನವ ರಿದಕೆ ಕೋಪಿಸಿ ಬಂದರು ವಿಧಿ ತನ್ನ ಹಗಲ ನಡೆಸುತ ನಿನಗೆ ಈ ತೆರನ ಮದನಪಿತ ತಾಳದೆ ಇಳೆಗೆ ನಡೆತಂದ ಸದುಬುಧರು ತಮ್ಮ ವಿಷಯವ ನೆನೆವ ಜಂತುಗಳು ಇದು ತಾಳೆವೆನುತ ಬಾಗಿಲೊಳು ಬಂದೈದಾರೆ 1 ನಿದ್ರೆಗೈವರ ಹೃದಯದಲ್ಲಿ ಭೂಭೂಯೆಂಬ ಎದ್ದು ಬಹ ಶ್ವಾಸದಭಿಮಾನಿ ಮುಖ್ಯಪ್ರಾಣ ಕ್ಷುದ್ರಗತಿ ತನ್ನಾಳ್ದಗಿದು ಪುಸಿಯೆನುತ ಬಂದ ಮಧ್ವಸದ್ಭಾಷ್ಯಕಾರ ಹೊದ್ದಿ ಕರಗಳ ಮುಗಿದು ಜೀವರಿಗು ನಿನಗು ಪ್ರ- ಬುದ್ಧಜನೆನುತ ಬಂದ ವೇದಾಂತದೇವಿಯರು ನಿರ್ದೋಷ ನೀನೆತ್ತ ನಿದ್ರೆಯೆತ್ತೆನುತ ಪಾದ- ಪದ್ಮಗಳ ಪಿಡಿದು ಪಾಡುವ ಸಾಮಗಳ ಸವಿದು 2 ಅಪ್ರಾಕೃತನೆ ನಿನಗೆ ಈ ಪ್ರಕೃತಿಗುಣಗಳಿಂ- ದಿಪ್ಪ ಯುಕ್ತಿಗಳ ಸುಪ್ತಿಗಳು ಸಲ್ಲವು ದೇವ ಅಪ್ರಬುದ್ಧರ ಮುಂದೆ ಆಡುವಾಟಗಳು ಈ ಸುಪ್ರಬುದ್ಧರ ಸಭೆಯಲಿ ಸರ್ಪತÀಲ್ಪನೆ ತೋರಿದಯ್ಯ ಸಾಕೈನಟನೆ ಸುಪ್ರಭಾತವು ಬಂತು ಹಯವದನ ದಿನದಿನದಿ ತಪ್ಪದೆ ಮಾಡುವಘ್ರ್ಯದಿ ಸತ್ಕರ್ಮಗಳ ಒಪ್ಪುಗೊಳು ಅಪ್ರತಿಮಮಹಿಮ ತ್ರಿವಿಕ್ರಮರಾಯ 3
--------------
ವಾದಿರಾಜ