ಒಟ್ಟು 1531 ಕಡೆಗಳಲ್ಲಿ , 106 ದಾಸರು , 1191 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮೇಲನೆಸಗಲಿ ನಿಮಗೆ ಮಾಲಕುಮಿ ಮನ್ನಿಸುಗೆ ಪ. ಬಾಲಕರು ಬಯಸುವೆವು ಬಾಲೆಯರು ಹರಸುವೆವು ಅ.ಪ. ಮಾಧವನ ದಯೆಯಿರಲಿ ಯೊಧರಿಗೆ ಜಯವಿರಲಿ ಸಾಧನವು ಕೈಸೇರೆ ಶ್ರೀಧರನು ಮೈದೋರೆ 1 ಸಿದ್ಧಿಸಿದಾವ್ರತವೆಂದು ಶುದ್ಧಭಾವದಿ ಬಂದು ಬದ್ಧಕಂಕಣರಾಗಿ ಶ್ರದ್ಧೆಯಿಂ ಶಿರಬಾಗಿ 2 ವಾಸುದೇವನ ಸ್ಮರಿಸಿ ಮೀಸಲಂ ತೆಗೆದಿರಿಸಿ ವಾಸಪಂಥದಿ ಬೇಗ ದಾಸ್ಯಮಂ ಬಿಡಿಸೀಗ 3 ವಿಜಯದಶಮಿಯು ನಾಳೆ ವಿಜಯಯಾತ್ರೆಗೆ ತೆರಳೆ ವಿಜಯಸಾರಥಿಯೊಲಿದು ವಿಜಯವೀಯುವನಹುದು 4 ಘನತೆಗೇರುವ ನಮ್ಮ ವನಿತೆಯರೆ ನಿಮ್ಮ ಮನೆತನವ ಬೆಳಗಿಸಿರೆ ಇನಿಯರನು ಹುರಿಡಿಸಿರೆ 5 ಪೌರುಷವು ಪುಟ್ಟುವೋಲ್ ವೀರರಹುದೆನ್ನುವೋಲ್ ವೀರಮಾತೆಯರೆ ನೀಂ ವೀರಪುತ್ರರ ಪಡೆಯಿರೆ 6 ಮಕ್ಕಳಂ ತಕ್ಕೈಸಿ ತಕ್ಕಂತೆ ನುಡಿಗಲಿಸಿ ಕಕ್ಕುಲಿತೆಯಿಂ ನೋಡಿ ಅಕ್ಷರಸ್ಥರ ಮಾಡಿ 7 ಮಹಿಳೆಯರೆ ಮಾದರಿಯ ಗೃಹಿಣಿರಹೆ ಶಾರದೆಯ ಮಹಿಮೆಯದು ಕರಮೆಸೆಗೆ ವಿಹಿತಮದು ನಿಮ್ಮೊಳಗೆ 8 ದೇಶದೇಳಿಗೆಯಲ್ಲಿ ಆಸೆ ನಿಮಗಿರುವಲ್ಲಿ ದೇಶೀಯವ್ರತಧರಿಸಿ ಐಶ್ವರ್ಯಮಂ ಬೆಳಸಿ 9 ಪತಿ ಸುತ ಸಹೋದರರ ಹಿತವೆಳಸಿ ಬಾಂಧವರ ಮತವರಿತು ನಡೆಯಿಸಿರೆ ವ್ರತಸಾಂಗವೆನ್ನಿಸಿರಿ 10 ಇನ್ನೇಳಿ ಕೈನೀಡಿ ಸನ್ಮಾನೈಯರೆ ನೋಡಿ ಧನ್ಯವಾದವ ಮಾಡಿ ಮನ್ನಿಸಿರೆ ದಯೆಗೂಡಿ 11 ಬಾಲಕರು ಬೇಡುವರು ಮೇಲೆನಿಪ ಮಮತೆಯನು ಶಾಲುಸಕಲಾಸೆಯನು ಬಾಲಕರು ತಾ ಬಯಸರು 12 ತಾಯಿಯರೆ ನೀವಿತ್ತ ತಾಯ್ನಲವನಿತ್ತ ತಾಯೆಂದುಕೊಳ್ಳುವರು ಈಯಣುಗರ್ ಕೇಳಿದನು 13 ಕನ್ಯೆಯರು ಹಾಡುವರು ಕನ್ನಡವ ಪಾಡುವರು ಕನ್ನಡಕೆ ಜಯವಾಗಲೆನ್ನುವರು ನಲವೀಗೆ 14 ಹರಕೆಯನು ಸಲ್ಲಿಸಿರೆ ತರಳರಂ ಮನ್ನಿಸಿರಿ ಮರಳಿ ಬಾರೆಂದೆನಿರೆ ಹರುಷದಿಂ ಬೀಳ್ಕೊಡಿರಿ15 ವರಶೇಷಗಿರಿವಾಸ ಕರುಣದಿಂದಲೆ ಲೇಸ ಧರೆಗೆಲ್ಲ ಸಂತೋಷ ದಯೆಗೆಯೈ ಸರ್ವೇಶ16
--------------
ನಂಜನಗೂಡು ತಿರುಮಲಾಂಬಾ
ಮೈಹೋಳು ನೀ ಬಂದು ಮೈಯ ಮರಿಯ ಬ್ಯಾಡವೋ ಮಹಿಮಾನಂದನಂಘ್ರಿಯ ಬಿಡಬ್ಯಾಡವೋ ಧ್ರುವ ಮಾಯಾ ಮೋಹದೊಳು ಸಿಲ್ಕಿ ದೇಹ್ಯ ಭ್ರಮೆಯಗೊಂಡು ಕಾಯ ಸೌಖ್ಯಕೆ ಬಾಯಿದೆರಿಯಬ್ಯಾಡವೋ 1 ಹೊನ್ನು ಹೆಣ್ಣು ಮಣ್ಣಿಗಾಗಿ ಬಣ್ಣ ಪರಿಯಲಿನ್ನು ಕಣ್ಣು ಗೆಟ್ಟು ಕರುಡನಂತೆ ದಣಿಯಬ್ಯಾಡವೋ 2 ನಾನು ನೀನು ಎಂಬ ಭಾವ ಮಹಿಪತಿಗಳೆದು ಭಾನುಕೋಟಿತೇಜನಂಘ್ರಿ ಬೆರೆದು ಮನಕೂಡವೂ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮೊದಲನೇ ಅಧ್ಯಾಯ ಪಾತಿವ್ರತ್ಯ ಮಹಾತ್ಮೆ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಬೋಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ನಿರ್ದೋಷ ಗುಣಪೂರ್ಣ ವಿಷ್ಣು ಸರ್ವೋತ್ತಮ ಸ್ವತಂತ್ರ ಶ್ರೀದ ಶ್ರೀಪತಿ ಜಗಜ್ಜನ್ಮಾದಿಕರ್ತನು ಸಚ್ಛಾಶ್ರ - ದಿಂದಲೇ ವೇದ್ಯನು ಮೂರು ವಿಧ ಜೀವರಿಗೆ ಯೋಗ್ಯ ಸಾಧನಕೆ ಗತಿಯ ಮಾಡುವ ಅವತಾರ ಲೀಲಾ 1 ಸುಪುಷ್ಪಭವ ಬ್ರಹ್ಮದೇವನೋಳ್ ತತ್ ಶಬ್ದವಾಚ್ಯನು ಶ್ರೀ ಪುರುಷೋತ್ತಮನೆ ಪ್ರಜಾಸೃಷ್ಟಿ ಮಾಡಿಸುವನು ತ್ರಿಪುರಾರಿ ಭಸ್ಮಧರ ರುದ್ರನೋಳ್ ತನ್ನಾಮದಲಿ ಶ್ರೀ ಪುರುಷೋತ್ತಮನೇ ಸಂಹಾರ ಮಾಳ್ಪ ಅಂತರ್ಯಾಮಿ 2 ಉರುಜ್ಞಾನ ಸುಖ ಬಲಾದ್ಯಮಿತ ಗುಣಧಾಮನ ಕರ ಚರಣಾದ್ಯವಯವಕ್ಕೂ ಅವಗೂ ಅವನು ಧರೆಯಲ್ಲಿ ಅವತಾರ ಮಾಡುವ ರೂಪಗಳಿಗೂ ಪರಿಪೂರ್ಣವಾಗಿ ಅಭೇದ ಭೇದಲೇಶವೂ ಇಲ್ಲ 3 ದ್ವಿ ಷೋಡಶ ಶುಭಲಕ್ಷಣ ತನುವುಳ್ಳ ಬ್ರಹ್ಮಗೂ ವಿಷಕಂಠ ರುದ್ರಗೂ ಪರಸ್ಪರ ಭೇದ ಅಂತಸ್ಥ ವಿಷ್ಣುಗೂ ಇವರುಗಳಿಗೂ ಭೇದವು, ಅಂತರ್ಯಾಮಿ ವಿಷ್ಣು ಒಬ್ಬನೇ ದ್ವಿರೂಪದಲ್ಲಿ ಇವರಲ್ಲಿಹ 4 ಹತ್ತಾವತಾರ ಮತ್ಸ್ಯಾದಿರೂಪಗಳು ಮಾತ್ರವಲ್ಲ ಅನಂತರೂಪನು ಅನಂತಗುಣ ಕ್ರಿಯಾವಂತನು ಕ್ಷಿತಿಯಲ್ಲಿ ಬಲಕಾರ್ಯಕ್ಕೆ ಕೆಲವು ಅವತಾರ ಹಿತಕರ ಹಲವು ಜ್ಞಾನಬೋಧಕ್ಕೇವೇ ಕೆಲವು 5 ಧ್ಯಾತ್ಮನು ಜ್ಞಾನಕಾರ್ಯಕ್ಕಾಗಿ ಅವತರಿಸುವನು ಶ್ರೀಮಾನ್ ಹಯಗ್ರೀವ ಸನತ್ಕುಮಾರ ದತ್ತ ಕಪಿಲ ಧೀಮಾನ್ ಪರಾಶರ ವಾಸವೀಸೂನು ಐತರೇಯಾದಿ 6 ದ್ವಾಪರದಲ್ಲೇವೆ ಅಲ್ಲಲ್ಲಿ ಕಲಿವಿಷ ಹರಡಿ ತಪೋಧನರು ಗೌತಮರು ಶಪಿಸೆ ಜ್ಞಾನಕುಂದೆ ಶ್ರೀಪ ವೇದವ್ಯಾಸ ಜ್ಞಾನ ತೇಜಃಪುಂಜ ಬಂದು ತೋರಿ ಆ ಪೀಡಿಸುವ ಅಜ್ಞಾನ ತರಿದು ಸಜ್ಞಾನ ಇತ್ತ 7 ಹಿಂದೆ ಬ್ರಹ್ಮದೇವರಾಜÉ್ಞಯಿಂ ಅತ್ರಿಋಷಿವರ್ಯರು ನಿಂತರು ಋಕ್ಷಗಿರಿಯಲ್ಲಿ ಅಪತ್ಯಾಪೇಕ್ಷೆಯಿಂದ ಅದ್ಭುತ ತಪವಚರಿಸಿ ಜಗದೀಶ್ವರ ಸಮ - ಪುತ್ರ ಕೊಡೆ ಚಿಂತಿಸಿ ಹರಿಯಲ್ಲಿ ಶರಣಾದರು 8 ಹರಿ ತಾನು ತನ್ನ ಅಧಿಷ್ಟಾನರಾದ ಬ್ರಹ್ಮೇಶ್ವರ ಕರಕೊಂಡು ಋಷಿ ಮುಂದೆ ನಿಂತು ಯುಕ್ತಮಾತನ್ನಾಡಿ ಮೂರು ಮಂದಿಗಳು ತಾವು ಪುತ್ರರಾಗುವೆವು ಎಂದ ತರುವಾಯ ತಾನಿತ್ತ ವರವ ಒದಗಿಸಿದನು 9 ಭಾಗವತ ಈ ವಿಷಯ ಒಳಗೊಂಡು ಇಹುದು ಪತಿ ವೇದವ್ಯಾಸ ಸಂಕೃತ ಈ ಭೂರಾದಿ ಜಗತ್ತಿನಲ್ಲಿ ಪ್ರಖ್ಯಾತ ಪುರಾಣಂಗಳೊಳ್ ಶ್ರೀ ಭಗವಾನ್ ದತ್ತಾತ್ರಯನ ಅವತಾರವು ವೇದ್ಯ 10 ಗೀರ್ವಾಣ ಛಂದಸ್ಸು ಅಷ್ಟಿಯಲಿ ಬರೆಯುವದೆಂದು ಶ್ರೀವರನ ಹಿತಾಜÉ್ಞಯಿಂ ಪ್ರಸನ್ನ ಶ್ರೀನಿವಾಸೀಯ ಶ್ರೀವಿಷ್ಣು ಸಹಸ್ರನಾಮ ಭಾಷ್ಯ ಕನ್ನಡದಲ್ಲಿ ಅಳವಡಿಸಿದಂತೆ ಅಷ್ಟೀ ಛಂದಸ್ಸಲಿ ಈ ಗ್ರಂಥವ 11 ಈ ಗ್ರಂಥದಲಿ ಶ್ರೀಭಾಗವತವು ಮಾರ್ಕಂಡೇಯವು ಭಾಗವತರಿಗೆ ಉಪಾಸನಾ ಹೇತು ಪಂಚರಾತ್ರ ಆಗಮವು ಒಳಗೊಂಡ ವಿಷಯಗಳು ಇವೆಯು ಕಾಯ ಶುದ್ಧಿಯಿಂ ಪಠಣೀಯವು 12 ಗುರುಮಂತ್ರ ಉಪದೇಶವಿಲ್ಲದಂತಹ ಸ್ತ್ರೀ ಜನ ಶೂದ್ರರು ಬ್ರಹ್ಮಬಂಧುಗಳು ಈ ಗ್ರಂಥ ಪಠಿಸಲು ಹರಿಭಕ್ತ ಸಾಧು ವೈದಿಕ ಬ್ರಾಹ್ಮಣರ ಅಪ್ಪಣೆ ಕೋರಿ ಅವರ ಅಪ್ಪಣೆಯಿಂದ ಓದಬಹುದು 13 ಪ್ರತಿಷ್ಠಾನಪುರದಲ್ಲಿ ಕೌಶಿಕಾಹ್ವಯ ದ್ವಿಜನು ವ್ಯಾಧಿ ಪೀಡಿತನು ಕುಷ್ಠಿ ನಡಮಾಡಲು ಅಶಕ್ತ ಆತನ ಪತ್ನಿಯು ಸಾಧುಗುಣವತಿ ಬಲುಶ್ರೇಷ್ಠ ಪತಿ ಹೇಳಿದಂತೆ ನಡೆಯುವಳು 14 ಒಂದು ದಿನ ಆ ಬ್ರಾಹ್ಮಣನು ನೋಡಿದ ಬಾಗಿಲಾಚೆ ಬೀದಿಯಲಿ ಹೋಗುತ್ತಿದ್ದ ಸುಂದರಿ ವೇಶ್ಯೆಯೋರ್ವಳಲಿ ಸೋತು ಮನ ಅವಳನ್ನು ತಾನು ಹೊಂದಬೇಕೆನ್ನಲು ಸಾಧ್ವಿಸತಿ ಪತಿಯನ್ನು ಎತ್ತಿದಳು ಸೊಂಟದಲಿ 15 ರಾತ್ರಿ ಕತ್ತಲೆಮಾರ್ಗ ತಿಳಿಯದಲೆ ಪತಿಯನ್ನು ಹೊತ್ತುಕೊಂಡು ಹೋಗುವಾಗ ಪತಿಯ ಕಾಲು ತಾಕಿತು ಹಾದಿಯಲ್ಲಿ ಕಬ್ಬಿಣ ಸಲಾಕದಲ್ಲಿ ಚುಚ್ಚಿಸಿ ಇದ್ದ ಕಟಿ ಸಮೀಪ ಹಾಹಾ 16 ಅನ್ಯಾಯದಿ ಆ ರಾಜ್ಯದರಸ ಆ ಮಹಾಮುನಿಯ ಧನಚೋರನೆಂದು ಶೂಲಕ್ಕೆ ಹಾಕಿಸಿದ್ದ ಆ ಶೂಲ ಕಾಣದೇ ಕೌಶಿಕನ ಕಾಲ್ತಗಲಿ ಬಲು ನೋವಾಗಿ ಮುನಿ ಶಾಪವಿತ್ತರು ಸೂರ್ಯೋದಯಲ್ಲೇ ಸಾಯೆಂದು 17 ಹಾಹಾ ಇದು ಏನು ಮುನಿಗಳಿಗೆ ನೋವಾಯಿತಲ್ಲಾ ಮಹಾತ್ಮರ ಶಾಪ ವೀಣಾಗಲಾರದು ಮಾಂಗಲ್ಯವ ಪತಿ ಅಂತಸ್ಥ ಶ್ರೀಹರಿಯ ಸ್ಮರಿಸಿ ಆ ಪತಿವ್ರತೆ ಹೇಳಿದಳು 18 ಸೂರ್ಯೋದಯವಾಗದಿದ್ದರೆ ಶಾಪವು ಫಲಿಸದು ಸೂರ್ಯೋದಯವಾಗಬೇಡಿ ಎಂದು ಹೇಳಿದಳು ಸಾಧ್ವಿ ಆರ್ಯಧರ್ಮ ಲೋಕಕಾರ್ಯ ಸರ್ವವೂ ಸ್ತಬ್ಧವಾದವು ಎಲೆಲ್ಲೂ ಕತ್ತಲೆಯು ಭಾನು ಉದಯಿಸಲಿಲ್ಲ 19 ಇಂದ್ರಾದಿ ದೇವರ್ಗಗಳು ಬ್ರಹ್ಮನಲಿ ಮೊರೆಯಿಡಲು ಪತಿವ್ರತೆ ಮಹಾತ್ಮನೆ ಮತ್ತೊಬ್ಬ ಪತಿವ್ರತೆಯೇ ಪ್ರತಿ ಮಾಡುವಳು ಅತ್ರಿಋಷಿ ಪತ್ನಿ ಅನಸೂಯಾ ಪತಿವ್ರತಾ ರತ್ನಳಾ ಸಹಾಯ ಕೇಳೆಂದರು ವೇಧ 20 ಶಕ್ರಾದಿ ಸುರರುಗಳು ಅನಸೂಯಾದೇವಿಯಲಿ ಕೋರಿಕೆ ಮಾಡಲು ಆಕೆ ದೇವತೆಗಳ ಸಮೇತ ಧೀರ ಪತಿವ್ರತೆಯಾದ ಕೌಶಿಕಾ ಗೃಹಕೆ ಹೋಗಿ ಪರಿಚಯ ಮಾಡಿಕೊಂಡು ಕೊಂಡಾಡಿದಳಾ ಸಾಧ್ವಿಯ 21 ಮಹಾಭಾಗರು ಇಂದ್ರಾದಿಗಳಿಗೂ ಅನಸೂಯಗೂ ವಿಹಿತೋಪಚಾರ ಪೂಜಾದಿಗಳ ಮಾಡಿ ಆ ಸಾಧ್ವಿ ಮಹಾಭಾಗ್ಯ ಆಗಮನ ಎನ್ನುತ್ತ ಕಾರಣವನು ಬಹು ಹಿತದಲಿ ಕೇಳಿದಳು ತನ್ನ ಸ್ಥಿತಿ ಹೇಳಿ 22 ಸೂರ್ಯ ಉದಿಸುವದಕ್ಕೆ ಪತಿ ಬದುಕಿಸಲ್ಪಡುವನು ಎನ್ನುತೆ ಕೌಶಿಕಾ ಸಾಧ್ವಿಯು ಅನುಮೋದನೆ ಕೊಂಡು ಇನ ಉದಿಸಲಿ ಎಂದ ಅಘ್ರ್ಯ ಕೊಟ್ಟಳು ಮುದದಿ 23 ಸೂರ್ಯ ಮುನಿಶಾಪ ಫಲಿಸಿತು ಬಿದ್ದ ಕೆಳಗೆ ಕೌಶಿಕ ತತ್‍ಕ್ಷಣವೇ ಬದುಕಿ ಎದ್ದ ಪತಿವ್ರತಾ ಶಿರೋಮಣಿ ಅನಸೂಯಾ ದೇವಿ ಪ್ರಭಾವ ಪತಿವ್ರತಾ ಮಹಾತ್ಮೆ ಜ್ವಲಿಸಿತು ಲೋಕದಲ್ಲಿ 24 ಕೌಶಿಕನ್ನ ಬದುಕಿಸಿದ್ದು ಮಾತ್ರವಲ್ಲದೇ ಸರ್ವ ಕುಷ್ಠಾದಿ ರೋಗ ಪರಿಹರಿಸಿ ಯುವವಾಗಿ ಮಾಡಿ ಅಯುಷ್ಯ ಬಹುನೂರು ವರ್ಷಗಳ ಅನುಗ್ರಹಿಸಿ ತುಷ್ಠಿ ಸುಖಜೀವನ ಒದಗಿಸಿದಳ್ ಅನಸೂಯಾ 25 ಅನಸೂಯೆಯ ಪಾತಿವ್ರತ್ಯ ಮಹಾತ್ಮೆಯ ಶ್ಲಾಘಿಸಿ ಏನು ವರ ಕೇಳಿದರೂ ಕೊಡುವವೆಂದು ಸುರಪ ಆನಿಮಿಷರು ಹೇಳಲು ಪತಿವ್ರತಾ ಶಿರೋಮಣಿ ವಿಧಿ ಶಿವ ತನ್ನಲ್ಲವತರಿಸಲೆಂದಳು 26 ತಥಾಸ್ತು ಎಂದ ದೇವತೆಗಳ ವರ ಸತ್ಯಮಾಡೆ ಸುತಪಸ್ವಿ ಅತ್ರಿಗೆ ಹಂಸ ವೃಷಾರೂಡರು ಪ್ರತ್ಯಕ್ಷದಿ ಹೇಳಿದಂತೆಯೂ ಅನಸೂಯ ಅತ್ರಿಗೆ ಪುತ್ರರೆಂದುದಿಸಿದರು ಸೋಮಸ್ತ ಬ್ರಹ್ಮೇಶ ವಿಷ್ಣು 27 ಮುಖ್ಯಪ್ರಾಣಾಂತರ್ಗತನೇ ಪಂಕಜಾಸನ ಪಿತನೆ ಶ್ರೀಕರಾರ್ಚಿತ ಶ್ರೀಪ್ರಸನ್ನ ಶ್ರೀನಿವಾಸ ಕಪಿಲ ಅರ್ಕಕೋಟ್ಯಾಮಿತ ತೇಜನೇ ಬ್ರಹ್ಮಾದ್ಯಮರ ಗುರೋ ಜಗದೀಶ ದತ್ತಾತ್ರಯನಮೋ ಪ್ರಿಯತಾಂ ಶರಣು 28 ಎರಡನೇ ಅಧ್ಯಾಯ ಶ್ರೀ ದತ್ತಾತ್ರಯ ಪ್ರಾದುರ್ಭಾವ ಸಾರ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಭೋಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ಬ್ರಹ್ಮಾವಿಷ್ಟನು ಸೋಮ ಔಷಧಿಗಳ ರಾಜನಾದ ಉನ್ಮಾದ ಚರ್ಯದಿ ಕೋಪ ಪ್ರಕಟಿಸಿ ಮೆರೆವರು ತಮ್ಮ ಶಿಷ್ಯರೊಡಗೂಡಿ ಶಿವಾವತಾರ ದೂರ್ವಾಸ ಸುಮ್ಮನಸ ಸಜ್ಜನ ಹಿತರು ದುಷ್ಟನಿಗ್ರಹರು 1 ತನ್ನನ್ನ ತಾನೇ ಸುತನಾಗಿ ದತ್ತಮಾಡಿಕೊಂಡನು ವಿಷ್ಣು ಅತ್ರಿ ದಂಪತಿಗೆ ಆದ ಕಾರಣ ಪ್ರಖ್ಯಾತೆ ಉನ್ನಾಮ ದತ್ತಾತ್ರಯ ಕ್ಷೋಣಿ ಯೋಗ್ಯಾಧಿಕಾರಿಗಳಿಂ ಘನಭಕ್ತಿಯಿಂ ಶುಚಿಯಿಂ ಜಪ್ಯ ಸ್ಮರಣೀಯಿಂ ಶ್ರೋತವ್ಯ ಜಯತು 2 ಕಲ್ಯಾಣತಮ ಪೂರ್ಣ ಅಮಲ ಗುಣಗಣ ಸಿಂಧು ಮಾಲೋಲ ಶ್ರೀವಕ್ಷ ಶ್ರೀಶನೇ ಪ್ರಾದುರ್ಭವಿಸಿದನು ಚೆಲುವ ಅನುಪಮ ಸೌಂದರ್ಯಸಾರ ಸರ್ವೋತ್ತಮ ಲೀಲಾನಂದಮಯ ಚಿನ್ಮಾತ್ರಗಾತ್ರ ಭಕ್ತೇಷ್ಟದಾತ 3 ಕಮಲಾಸನಾವಿಷ್ಟ ಸೋಮ ರುದ್ರಾವತಾರ ದೂರ್ವಾಸ ತಮ್ಮ ತಮ್ಮ ಉದ್ಯೋಗಸಾಧನಕೆ ಬೇರೆ ಬೇರೆ ಹೋಗೆ ಸುಮನೋಹರ ರೂಪ ಶ್ರೀಮನೋರಮ ದತ್ತಾತ್ರಯ ಸುಮಹಾ ಯೋಗಿಯಾದ ನಿಸ್ಸಂಗ ಯೋಗೇಶ್ವರೇಶ್ವರ 4 ಅತ್ರೇಯರು ಮೂವರು ಹೀಗೆ ಬೇರೆ ಬೇರೆಯಾಗಿಯೇ ತಮ್ಮ ತಮ್ಮ ರೂಪದಲ್ಲೇ ಇದ್ದರು ಒಂದಾಗಿ ಅಲ್ಲ ಸೋಮ ಶಿವ ದತ್ತರಿಗೆ ಬೇರೆ ಬೇರೆ ಮಂತ್ರವುಂಟು ಸೋಮ ಪಂಚ ಶಿವ ಪಂಚ ದತ್ತ ನವಅಕ್ಷರವು 5 ಪ್ರೋದ್ಯ ದಿವಾಕರ ಪೋಲ್ವ ವರ್ಣವುಳ್ಳ ಶುಭಗಾತ್ರ ಆದಿತ್ಯ ಸಹಸ್ರಾಮಿತ ಮಹೋತ್ಕøಷ್ಟ ತೇಜಃಪುಂಜ ವ್ಯಾಪ್ತ ಸರ್ವತ್ರ ಜ್ಞಾನಾಭಯಕರನು ಬ್ರಹ್ಮಾದಿ ತ್ರಿದಿವ ಸುಬೋಧಕನು ಕಪಿಲನು ದತ್ತಾತ್ರಯ 6 ಇಂಥ ಮಹಾಮಹಿಮನು ಕಪಿಲ ದತ್ತಾತ್ರಯನು ಅಧಿಕಾರಿಗಳಿಗೆ ಅಪರೋಕ್ಷಜ್ಞಾನ ಮೋಕ್ಷದಾತ ಶ್ರೋತೃ, ಮಂತ್ರ, ಧ್ಯಾತೃಗಳಿಗೆ ಕಪಿಲ ದತ್ತಾತ್ರಯ ಭಕ್ತಿ ಮೆಚ್ಚಿ ಸದಾ ಸಂರಕ್ಷಿಸಿ ಇಷ್ಟಾರ್ಥ ಕೊಡುವ 7 ಪದ್ಮ ಭವಾದ್ಯಮರರಿಂ ಧ್ಯಾತ ದತ್ತಾತ್ರಯ ಹರಿ ಮೇದಿನಿ ನರರಂತೆ ಅವತಾರ ಲೀಲೆ ಚರಿಸಿ ಅದ್ಭುತ ಯೋಗಾನುಷ್ಠಾನದಿ ಇರುತಿರೆ ಜನರು ಈತನ ಸೌಂದರ್ಯ ಯೋಗಸಾಮಥ್ರ್ಯ ಹೊಗಳಿದರು 8 ಸಹಸ್ರಾರು ಋಷಿಪುತ್ರ ಬ್ರಹ್ಮಚಾರಿಗಳು ಬಂದು ಅಹರ್ನಿಶಿ ಯೋಗೇಶ್ವರೇಶ್ವರ ದತ್ತನಾಶ್ರಮದಿ ಬಹಳುತ್ಸಾಹದಲಿ ಸುತ್ತು ಮುತ್ತು ಗುಂಪುಗೂಡಿ ಮಹಾಯೋಗಾಭ್ಯಾಸಕ್ಕೆ ಚ್ಯುತಿಯ ಕಲ್ಪಿಸಿದರು 9 ಯೋಗ್ಯರು ಸಜ್ಜನರು ಈ ಭಕ್ತ ಋಷಿಕುವರರು ಯೋಗ್ಯಸಾಧನೆ ಅವರವರ ಆಶ್ರಮದಲ್ಲಿಯೇ - ಗೈಯಲಿ ಬೇಕೆಂದು ಅವರುಗಳು ಹೋಗೋ ಉಪಾಯ ನಿಶ್ಚೈಸಿ ಮುಳುಗಿದ ದತ್ತನು ಸರೋವರದೊಳು 10 ಸುರಮಾನದಿ ಸಾವಿರವರ್ಷ ಭಗವಾನ್ ದತ್ತನು ಸರೋವರದೊಳಿದ್ದನು ಹೊರಜನಕ್ಕೆ ಕಾಣದೆ ಆ ಋಷಿಪುತ್ರರು ತೀರದಲಿ ಇಕೋ ಈಗ ನಾಳೆ ಬರುವನು ಮೇಲೆ ಎಂದು ಕಾಯುತ್ತಿದ್ದರು ದೃಢದಿ 11 ಜಲಧಿ ಉಕ್ಕಿ ಹರಿದು ಕ್ಷೋಣಿಯ ಮುಳುಗಿಸದೆ ಜಲಮಧ್ಯ ತಾನಿದ್ದು ಕಾಯುವ ವಡವಾ ಮುಖಾಗ್ನಿ ಜಲಮಧ್ಯದಿ ಈಗ ಹೊಕ್ಕಿರುವ ದತ್ತಾತ್ರಯನು ಮುಳುಗಿರುವುದು ಆಶ್ಚರ್ಯವಲ್ಲ ಈರ್ವರೂ ಏಕ 12 ಬಲುದೀರ್ಘ ದೇವವರ್ಷಗಳು ಸಾಸಿರವಾದರೇನು ಶೀಲತಮ ವರವಾಯುವು ವರುಣನು ಬುಧಾದಿ ಜಲಾಭಿಮಾನಿಗಳು ಕಿಂಕರರಾಗಿ ಇರುತಿಹರು ಜಲಶಾಯಿ ನಾರಾಯಣ ಅವತಾರ ದತ್ತನಿಗೆ 13 ಒಂದು ದಿನ ಕೆರೆನೀರು ಚಲಿಸಲು ಸಂತೋಷದಿ ಬಂದರೂ ಬಂದರೂ ಎಂದು ಕೂಗೆ ಋಷಿಕುವರರು ಇಂದಿರಾಪತಿ ದತ್ತ ಮೇಲೆದ್ದು ಬಂದ ಬದಿಯಲ್ಲಿ ಇಂದಿರಾಂಗಿ ನಾರೀಮಣಿ ಓರ್ವಳ ಆಲಿಂಗಿಸುತ 14 ಯಾರನ್ನೂ ಲೆಕ್ಕಿಸದೆ ಕಾಮವಿಲಾಸ ಕೇಳಿಯ ಆ ಸ್ತ್ರೀಯೊಡನೆ ಮಾಡುತ್ತಿದ್ದುದು ಕಂಡು ಯುವಕರು ಯೋಗಿ ಹೀಗಾದರೆ ಎನ್ನುತ ತ್ವರಿತ ತೆರಳಿದರು ಜುಗುಪ್ಸೆಯಲ್ಲಿ ತ್ಯಜಿಸಿ 15 ಆ ಪುಣ್ಯವಂತ ಋಷಿಪುತ್ರರು ತಿಳಕೊಳ್ಳಲಿಲ್ಲ ಆ ಸ್ಛುರದ್ರೂಪಿಣಿ ನಾರಿ ಸಾಕ್ಷಾತ್ ಲಕ್ಷ್ಮೀದೇವಿಯೆಂದು ವಿಪುಲ ಮನ ಹರುಷ ತೋರಿಸಿ ದತ್ತಾತ್ರಯನು ಕೈಪಿಡಿದು ಲಕ್ಷ್ಮಿಯ ಕರೆದುಹೋದ ಆಶ್ರಮಕೆ 16 ಯಾವ ತನ್ನಾಶ್ರಮದಿ ಸ್ವಾಧ್ಯಾಯ ಪ್ರವಚನಗಳ್ ದಿವ್ಯ ಯೋಗ ಅಭ್ಯಾಸ ಶಿಷ್ಯರ್ಗೆ ಶೀಕ್ಷಾದಿಗಳ್ ಯಾವಾಗಲೂ ಹಿಂದೆ ನಡೆಸುತ್ತಿದ್ದನೋ ಅಲ್ಲಿ ಈಗ ದೇವಿಯೊಡನೆ ಲೀಲಾವಿಲಾಸಗಳ ತೋರಿಸಿದ 17 ಮಂದ ಧೀಗಳು ಈ ವಿಡಂಬನೆ ಕಂಡು ಮೋದದಲಿ ಶ್ರೀದತ್ತ ಈ ರೀತಿ ಆದನಲ್ಲಾ ಎಂದು ಮಾತನಾಡೆ ಸುಧೀಗಳು ಬೃಹಸ್ಪತ್ಯಾದಿಗಳು ದತ್ತಾತ್ರಯನು ಮೋದಚಿನ್ಮಯ ನಿರ್ದೋಷ ಹರಿ ಶ್ರೀಶನೆ ಎಂದರÀು 18 ಮುಖ್ಯಪ್ರಾಣಾಂತರ್ಗತನೇ ಪಂಕಜಾಸನ ಪಿತನೆ ಶ್ರೀಕರಾರ್ಚಿತ ಶ್ರೀಪ್ರಸನ್ನ ಶ್ರೀನಿವಾಸ ಕಪಿಲ ಅರ್ಕಕೋಟ್ಯಮಿತ ತೇಜನೇ ಬ್ರಹ್ಮಾದ್ಯಮರ ಗುರೋ ಜಗದೀಶ ದತ್ತಾತ್ರಯ ನಮೋ ಪ್ರಿಯತಾಂ ಶರಣು 19 -ಇತಿ ಎರಡನೇ ಅದ್ಯಾಯ ಸಂಪೂರ್ಣಂ - ಮೂರನೇ ಅದ್ಯಾಯ ಸಂಪತ್‍ಲಕ್ಷ್ಮೀ ವೃತ್ತಾಂತ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಬೊಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ಸುರಪ ಜಂಭಾಸುರನಿಂದ ಅಪಜಯವ ಕೊಂಡು ಸುರಗುರು ಪ್ರೇರಣೆಯಿಂ ದತ್ತಾತ್ರಯನಲಿ ಹೋಗಿ ಶರಣು ಹೊಕ್ಕು ಸೇವಗೈಯಲು ಆಗ ಅವನನ
--------------
ಪ್ರಸನ್ನ ಶ್ರೀನಿವಾಸದಾಸರು
ಮೋಕ್ಷ ಪುಣ್ಯ ಫಲಾ ಮದನ ಗೋವಿಂದನ ಕರುಣವು ಪ ಆಕಾರಾಮೊದಲಾ ದಕ್ಷರದಲಿ ನೇಕಾ ಪರಿಯಲಿ ಕರೆದು ಸುವರ್ತಡದನಿಂದಾದಾ ಆದಿಮುನಿ ಗಣಸಹಿತಾ ಶ್ರೀ ಕರದಿಂದಾಲಾಶ್ರಿತ ಜನ ಪೋಷಕನ ನೀ ಕಾಮನಾದಿ ಪೂಜಿಸಿ ನಿಜಭಕುತಿ ಆಕಾಲದಲ್ಲಿ ಮಾಡಿದವರಿಗೆ ಎಲ್ಲಾ ಮುಕುತಿ ಲೋಕನಾಯಕನನುಗ್ರಹದಿಂದಲೇ 1 ನಾಯಕ ಪೂಜಿತನಾ ಸಾಸಿರನಾಮದ ಸರ್ವೇಶನ ದಾಸೋತ್ತುಮರಾದ ವರಿಗೆಲ್ಲಾ ವಾಸುದೇವಾನು ತನ್ನವರು ಎಂದು ಪಾಲಿಸಿ ಈಸು ಜನರಿಗಿತ್ತಾ ಇಹಪರವು 2 ಅಂದು ಚಂದ್ರಗೆ ಬಂದ ಶಾಪವು ಕಳೆದಾ ಅಜಮಿಳನಂತ್ಯ ಕಾಲಕೆ ಕಾಯ್ದ ಕಂದಾ ಕೂಗಲು ನೇರ ಕಂಭದೊಳಗೆ ಬಂದಾ ಮುಂದಾ ದನುಜನ ಸೀಳಿ ಮಗನಕಾಯ್ದ ಸಿಂಧುಶಯನ ತನ್ನ ಹೊಂದಿದವರನೆಲ್ಲಾ ಬಂಧು ಬಳಗ ಆಗಿಪೊರೆವಂಥಾ ಸ್ಮರಿಸುವ ಶರಣರಿಗೆ 3
--------------
ಹೆನ್ನೆರಂಗದಾಸರು
ಮೋದದಲಿರಬೇಕಮ್ಮ | ಸುಮ್ಮನೆ ನೀನು ಮೋದದಲಿರಬೇಕಮ್ಮ ಪ. ಮೋದ ಶ್ರೀ ಗುರುಗಳ ಚರಣ ಕಮಲವನ್ನು ಮೋದದಿಂದಾಶ್ರಯಿಸಿ ಸುಖದಲಿರಲಿಬೇಕು ಲೋಕದ ಜನಗಳ ನುಡಿಗಳ ಲೆಕ್ಕಿಸದೆ ಲೋಕವಂದ್ಯನ ಚರಣ ಕಮಲವ ಸ್ಮರಿಸುತ ಅ.ಪ. ಪರಮಾತ್ಮನ ಕೃಪೆಗೆ ಕಾರಣವಿದು ಗುರುಕರುಣದ ಬಲವು ಅರಿಯದ ಮನುಜರ ಬಿರುನುಡಿಗೆ ಮನ ಕೊರಗಿಸದಂದದಿ ಹರುಷಪಡಲಿಬೇಕು 1 ಎಚ್ಚತ್ತು ನಡಿಯಬೇಕು | ಶ್ರೀ ಗುರುಸೇವೆ ಇಚ್ಛೆಯಿಂ ಮಾಡಬೇಕು ತುಚ್ಛ ಮಾತುಗಳಿಗೆ ಮನಕೊಡದೆ ಹರಿ ಮೆಚ್ಚುವಂದದಿ ಗುರು ಇಚ್ಛೆಯನರಿತು ನಡೆದು 2 ವಂದನೆ ನಿಂದ್ಯಗಳ | ಮೋಕ್ಷಾರ್ಥಿಯು ಒಂದಾಗಿ ಭಾವಿಸುತ ಮಂದರೋದ್ಧರನ ಮಾಯಕೆ ಮನದಿ ಮೋದಿಸುತ ಮಂದರಂದದಿ ಮನುಜರಿಗೆ ತೋರುತಲಿದ್ದು 3 ಮಾನವ ಜನ್ಮ ಸಾಧನ ಜನ್ಮವಮ್ಮ ಸಾಧಾರಣವಲ್ಲ ಸಾಧು ಸಜ್ಜನಸಂಗ ಸಾಧಿಸಿ ದುಷ್ಕರ್ಮ ಛೇದಿಸಬೇಕಮ್ಮ 4 ಚಿಂತೆಯನಳಿಯಬೇಕು | ಶ್ರೀ ಗುರು ಕರುಣ ಅಂತರ ತಿಳಿಯಬೇಕು ಸಂತತ ಗೋಪಾಲಕೃಷ್ಣವಿಠ್ಠಲನ ಅಂತರಂಗದಿ ಭಜಿಸಿ ಮುಕ್ತಿ ಸಾಧಿಸಬೇಕು 5
--------------
ಅಂಬಾಬಾಯಿ
ಮೋಹ ಬೇಡಣ್ಣಾ ಸಂಸಾರದೊಳು ಪ ಎರವಿನ ಕಂಗಳು ಎರವಿನ ಶ್ರುತಿಯೊಳು | ನಾಸಿಕ ಎರವಿನ ನಾಲಿಗೆ | ಎರವಿನ ಕರಗಳು ಎರವಿನ ಪಾದವು | ಎರವಿನ ಬುಧ್ಯರವಿನ ಬದುಕು 1 ಎರವಿನ ಹಣಗಳು ಎರವಿನ ಭೂಷಣ | ವಾಹನ ಎರವಿನ ಸಿರಿಸುಖ | ಎರವಿನ ತರುಣಿಮದ್ಯೆರವಿನ ಸುತರು | ಎರವಿನ ಬಂಧು ಎರವಿನ ಬಳಗಾ 2 ಹರಿಯೇ ಕರ್ತನು ಹರಿ ಸೂತ್ರಾತ್ಮನು | ಗುರುಮಹಿಪತಿ ಪ್ರಭು ಹರಿ ಪರವೆಂದು | ಹರಿಯನೆ ಸ್ಮರಿಸಿ ಹರಿಯನೇ ಧ್ಯಾನಿಸಿ | ಹರಿಯನೆ ಪೂಜಿಸಿ ಹರಿ ಪದಹೊಂದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಯಚ್ಚರಿಕೆ ಯಚ್ಚರಿಕೆ ಶ್ರೀ ಸೋದೆಪುರಯಚ್ಚರಿಕೆ ಯಚ್ಚರಿಕೆ ಶ್ರೀ ಸೋದೆಪುರವಾಸಿ ಗುರುಪಾದ ಯಚ್ಚರಿಕೆ ಯಚ್ಚರಿಕೆ ಪ ಶ್ರೀ ತ್ರಿವಿಕ್ರಮ ಲೋಕನಾಥನ ತಂದೆ ಶ್ರೀಪಾದಯಚ್ಚರಿಕೆ ಯಚ್ಚರಿಕೆ ಅ.ಪ. ಗುರುಹಯವದನ ಮನಮುಟ್ಟಿ ಸ್ಮರಿಸಿ ಪೂಜಿಪಶ್ರೀ ಗುರುಪಾದ ಯಚ್ಚರಿಕೆ ಯಚ್ಚರಿಕೆ 1 ಶತಷಣ್ಣವತಿ ಸಪ್ತ ಬ್ರಹ್ಮ ಕಲ್ಪಗಳಲ್ಲಿ ಶ್ರೀಹರಿಯೆ ಮಹ ಮಾರೆತವ ಚರಿಸಿದ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 2 ತಪಚರಿನಿಯರ ಡೃವತ್ತೂ ಷಣ್ಣವತಿ ಲಿಷ್ಟನೇ ಕಲ್ಪದ-ಲಿಲಾತವ್ಯ ವಾಯುಸಾಧನ ಮಾಡುವಾನಂದ ಜ್ಞಾನ ಯೋಗ ಸಿದ್ಧಿಸಿ ಕೊಡುವ ಉದಾರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 3 ಪ್ರಧಾನ ವಾಯು ಪದ ಸ್ವೀಕರಿಪ ಹಂಸವಾಹನ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ4 ಹಿಂದೆ ವಿರಜಸ್ನಾನದಿ ಅಜ್ಞಾನಾತ್ಮಕ ಲಿಂಗದೋಷನಿಶ್ಶೇಷ ಹೊಂದಿದ ಗುರುವಿರಾಜರ ವಾದದ್ವಯ ಯಚ್ಚರಿಕೆ ಯಚ್ಚರಿಕೆ 5 ನಿರ್ಜೀವ ನಿಷ್ಕ್ರಿಯಾ ದಗ್ಧಪಟದಪ್ಪಂತಿರುವ ದೇಹ ಲಿಂಗವ ನಿಮಿತ್ತ ಮಾತ್ರಕೆ ಹರಿಯಿಭಯಿಂ ಧರಿಸಿರುವ ಲಾತವ್ಯ ಗುರುಪಾದ ಯಚ್ಚರಿಕೆ ಯಚ್ಚರಿಕೆ6 ಮುಕ್ತ ಅಮುಕ್ತಿ ಭೇದ ತೋರ್ಪದಕೆ ಶಿರಿಯಿಂದನದಿ ಶಾಲ್ಮಲ ವಾಸಿಯ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 7 ದ್ವಸ್ತ ದುರಾಗಮಿ ಶ್ರೀರಾಜಗುರು ಪಾದಕೆಚ್ಚರಿಕೆ 8 ಅಜ್ಞಾನ ಅಹಂಕಾರ ಭಯ ಮೋಹ ವಿಸ್ಮøತಿ ದುಃಖಾದಿಬಂಧನ ಕಳೆವ ಪ್ರಭುವಾದಕೆಚ್ಚರಿಕೆ 9 ಪತಿ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 10 ತ್ರಿವಿಧ ಜೀವರ ಚತುರ್ವಿಧಶರೀರದಿಯಿದ್ದವರ ಸಾಧನವಾ ಮಾಡಿಸಿ ಜೀವರ ಸುಖದುಃಖಗಳಿಂತಾ ಬದ್ಧರಾಗದೆ ಪೂರ್ಣ ನಿರ್ಲಿಪ್ತರಾಗಿರುವಶ್ರೀಪಾದ ಯಚ್ಚರಿಕೆ ಯಚ್ಚರಿಕೆ11 ತ್ರಿವಾರ ವಿರಜ ಸ್ನಾನವ ಮಾಡ್ವ ಸೌಭಾಗ್ಯ ಪ್ರಾರಬ್ಧಪೊಂದಿರುವ ಗುರು ವಾದಿರಾಜರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 12 ಸತ್ವ ಜೀವರ ಮೋಕ್ಷ ಪ್ರಾಪ್ತಿಗೆ ವಿರಜ ನದಿಯಲಿಸ್ನಾನ ಮಾಡಿಸಿ ಜೀವಸತ್ವರ ಮೋಕ್ಷಕ್ಕಿಡುವ ನಿವ್ರ್ಯಾಜ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 13 ಸುಜೀವರ ಅನಾದಿ ಲಿಂಗ ಅಜ್ಞಾನ ಸ್ವರೂಪ ದೇಹ-ಭಂಗಿಸುವ ಶ್ರೀರಮಾತ್ಮಕ ವಿರಜ ನದಿಯಲಿ ಸ್ನಾನ-ಮಾಡಿ ಸ್ವಲಿಂಗ ವಿಶಿಷ್ಟವಾದ ಅಜ್ಞಾನದಿಂ-ವಿರಹಿತರಾದವರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 14 ಆನಂದವ ವೃಷಭಾವಿ ಆನಂದ ತೀರ್ಥ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 15 ತ್ರಿವಿಧ ಜೀವರಲಿಯಿದ್ದು ತ್ರಿವಿಧಸಾಧನ ಮಾಡಿಸುವ ಭಾವಿ ವಾಯುನಾಮಕ ನತ್ತಾ ಪ್ರದ ಲಾತವ್ಯವಾಯು ವಾದಿರಾಜ ಮಧ್ವ ಮುನಿ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 16 ಆಯಾಯರ ಜೀವರ ಚಲನವಲನಾದಿ ವ್ಯಾಪಾರ ಮಾಡಿಸುವ ಭಾವಿ ಪ್ರಾಣನಾಮಕ ಭೀಷ್ಟಾಪ್ರದ ವಾದಿರಾಜಗುರುಪಾದಯಚ್ಚರಿಕೆ ಯಚ್ಚರಿಕೆ 17 ಚತುರ್ವಿದ ಶರೀರಗಳಲಿದ್ದು ಸಂರಕ್ಷಿಸುವ ಭಾವಿ ಧರ್ಮನಾಯಕಧಾರಣಪ್ರದ ಶ್ರೀ ಗುರುರಾಜರಶ್ರೀಪಾದ ಯಚ್ಚರಿಕೆ ಯಚ್ಚರಿಕೆ 18 ಪ್ರಭುತ್ವವಾರ್ತೈಸಿಜೀರರ ಅವರವರ ಸ್ವರೂಪಯೋಗ್ಯಗತಿ ಕೊಡುವ ಭಕ್ತಿ ಮುಕ್ತಿ ಪ್ರದ ಭಾವಿ ಭಾರತೀ ರಮಣ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 19 ದೇವೋತ್ತಮ ಲಾತ ವಾಯುಸ್ವನಾಮಕೆ ಭಗವಂತಗೇ ನಿತ್ಯನ್ವ ಭಕ್ತರ ಪಾಪ ಮನ್ನಿಸುವಂತೆ ಪ್ರಾರ್ಥಿಸಿ ತಾವು ಮನ್ನಿಸಿ ಕ್ಷಮಿಸುವಲ್ಲಿ ಕ್ಷಮಾ ಸಮುದ್ರರಾದ ಶ್ರೀಗುರುಪಾದಯಚ್ಚರಿಕೆ ಯಚ್ಚರಿಕೆ 20 ಪುಣ್ಯ ಪ್ರದಾನ ಮಾಡುವಲ್ಲಿ ಜೀವರಿಗೆ ಪರಮ ದಯಾಳು ಆರ್ತರಿಗೆ ದಯತೋರುವ ಕೃಪಾನಿಧಿ ಸಜ್ಜನರ ದೋಷ ವಿಚಾರದಿ ಮಹಾ ಸಹಿಷ್ಣುಗಳಾದವರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 21 ಶಿಖಾಮಣಿ ಸಕಲ ತಾತ್ವಿಕ ದೇವತಾ ರಂಜಕ ಆಹ್ಲಾದಕರ ದಾನವ ಭಂಜಕ ಸಂಹಾರ ಕರ್ತರಾದ ಕಾರಣ ಭಾವಿ ಪ್ರಭಂಜನ ವರವಾಜ್ಯರಾದವರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 22 ಸರ್ವದಾ ಅನ್ಯ ಜೀವರು ಕಾಣದಾ ಅಸಾಧಾರಣ ಗುಣ ಕ್ರಿಯಾ ಸ್ವರೂಪರಾದ ವೇದ ಪ್ರತಿಪಾದ್ಯರಾದುದರಿಂದ ಮಹಂತರೆಂದು ಕರೆಸುವ ಭಾವಿ ವಾಯುವಿನ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ23 ಅವರವರ ಸಾಧನಗಳ ಪೂರೈಸಿ ಕೊನೆಗವರ ನಿಜಗತಿ ಪ್ರವರಾದ ಸರ್ವ ಜೀವರಂತರ್ಯಾಮಿ ಸಕಲ ಗುಣ ಸದ್ಧಾಮ ಭಾವಿ ಮರುತ ಗುರುವಾದಿರಾಜರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 24 ಬರುವ ಜಗತ್ತಿನ ಸರ್ವ ಜೀವರಿಗೆಲ್ಲ ಜೀವನ ಪ್ರಾಣ- ವಾಗಿರುವ ಜೀವೋತ್ತಮ ಶ್ರೀ ಭಾವಿ ಬ್ರಹ್ಮ ಮರುತ ವಾದಿರಾಜರ ಶ್ರೀಪಾದದ್ವಯ ಯಚ್ಚರಿಕೆ ಯಚ್ಚರಿಕೆ 25 ಸಕಲ ಜೀವರ ಸಂಜೀವರಾದ ಯಲ್ಲ ಜೀವರ ಜೀವ ಯಲ್ಲಪ್ರಾಣಿಗಳ ಪ್ರಾಣರಾಗಿ ಪ್ರಾಣೆಂದು ಕರೆಸುವ ಭಾವಿ ಮುಖ್ಯ ಪ್ರಾಣ ವಾದಿರಾಜರ ಗುರುಪಾದಕೆಚ್ಚರಿಕೆ 26 ಸದಾಸರ್ವತ್ರ ಭಗವದ್ರಷ್ಟøಗಳಾದ ಬ್ರಹ್ಮದೇವರ ಭೃತ್ಯಣ ಜೀವ ಪರ್ಯಂತ ವ್ಯಾಪ್ತರಾದ ಆಯಾ ಸ್ಥಳದಿದ್ದು ಆಯಾ ಜೀವರ ತಕ್ಕ ವ್ಯಾಪಾರ ಮಾಡುವ ಭಾವಿ ಪೂರ್ಣಪ್ರಜ್ಞರೆನಿಸಿರುವ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 27 ಸಾಕ್ಷಾತ್ರ್ಪತಿಬಿಂಬರಾದ ಕಾರಣ ಭಾವಿ ಮುಖ್ಯ ಪ್ರತಿಬಿಂಬ-ರೆಂದೆನಿಸಿಕೊಂಡ ಗುರುವಾದಿರಾಜ ವಿಭುಪಾದಕೆಯಚ್ಚರಿಕೆ ಯಚ್ಚರಿಕೆ 28 ನಿತ್ಯ ಸಾಯುಜ್ಯ ಸಹ ಭೋಜನದ ಭೋಗ ಹೊಂದುವ ಭಾವಿ ಮರುತ ಶ್ರೀಲಾತವ್ಯ ವಾಯು ಗುರು ಮಧ್ವ ಮುನಿಯ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 29 ಸದನ ಪೂರ್ಣ ಚಂದ್ರವದನರು ಮೋಕ್ಷ ಸಾಮ್ರಾಜ್ಯ ನಿರ್ದುಷ್ಟ ಆನಂದ ಸುಖಸ್ವರೂಪರು ಪರಮ ಪುರುಷಾರ್ಥ ಪಾತ್ರಗಳು ಪುಣ್ಯ ಸ್ವರೂಪ ಪಂಚ ರೂಪಾತ್ಮಕ ಹರಿಯೆ ಪಂಚ ವೃಂದಾವನ ಸ್ವರೂಪದಿಯಿರುವ ರಂಜಪುಣ್ಯ ವೃಂದಾವನದಿ ವಿರಾಜಿಸಿ ಪಂಚ ಪುಣ್ಯ ಧಾರೆಯೆರೆವ ಪಂಚಪ್ರಾಣರಾದ ವಾದಿಗಳ ಪಲ್ಮುರಿವ ವಾದಿರಾಜಮಧ್ವ ಮುನಿಯ ಶ್ರೀ ಭಾವೀ ಭಾರತೀದೇವಿ ತನ್ನ ಮೃದು ಕೋಮಲ ತೊಡೆಯ ಮೇಲೆ ಪತಿಯ ಶ್ರೀಪಾದಪದ್ಮದ್ವಯವಿಟ್ಟು ವತ್ತೂವ ಅಜ್ಞಾನ ತಿಮಿರಕೆ ಮಾರ್ತಾಂಡ ವಾದ ಜ್ಞಾನಾನಂದ ದಾಯಕ ಶ್ರೀಗುರುಪಾದ ಯಚ್ಚರಿಕೆ ಯಚ್ಚರಿಕೆ30 ಜಗಜ್ಜೀವನಗಳಿಗೆ ಮುಖ್ಯ ಕಾರಣ ಪ್ರಾಣ ಆ ಪ್ರಾಣವಿಲ್ಲದಿರೆ ಸ್ವತಃ ಚಲಿಸಲು ಅಸಮರ್ಥ ಸರ್ವ ಜಗತ್ತಿಗೆ ಪ್ರಾಣ ವಿಜ್ಞಾನ ಪ್ರಾಣಾಗ್ನಿ ಶಬ್ದವಾಜ್ಯ ಈ ಭಾವಿಮುಖ್ಯ ಪ್ರಾಣ ಜಗಜ್ಜೀವನಗಳಿಗೆ ತಾನೇ ಮುಖ್ಯ ಪ್ರಾಣರೂಪ ಹೀಗೆಂದು ಬಳಿತ್ಥಾ ಸೂಕ್ತ ಅಗ್ನಿ ಸೂಕ್ತದಲಿ ಉಕ್ತ ಈ ಸೂಕ್ತಿಗಳಿಂದ ಪ್ರತಿಪಾದ್ಯರಾದ ಜಗನ್ನೇತ್ರಜಗಜ್ಜೀವನರಾದ ಪಂಚಪ್ರಾಣ-ರೂಪಾತ್ಮಕ ಶ್ವಾಸನಿಯಾಮಕ ಸೋದೆಪುರವಾಸಿ ಭೂತರಾಜರ ಹೃನ್ಮಂದಿರ ವೇದ್ಯ ವೇದ್ಯನುತ ಅಹಿಪ ಖಗಪ ಉಮೇಶಾದಿ ಸುರರಿಗೆ ಚಿಂತಿಸಲು ಅಳವಲ್ಲದ ಅಗಮ್ಯ ಮಹಿಮ ಶ್ರೀ ಪ್ರಭು-ವಾದಿರಾಜರ ನಿರ್ದೋಷ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 31 ಜಿತಣಮ ಸರ್ವಜ್ಞ ಅಶೇಕ್ಷ ಸಂಪದ್ವಿಶಿಷ್ಟ ಸದ್ಗುಣ ಭರಿತ ಪೂರ್ಣ ತೃಪ್ತ ನಿಶ್ಚಲ ಭಕ್ತ ದೃಢವ್ಯೆರಾಗ್ಯಶಾಲಿಚಿರಂಜೀವಿ ಶ್ರೀ ಗುರುವಾದಿರಾಜರ ಶ್ರೀಪಾದ ಪದ್ಮ ನಖರೇಣುಗಳಿಗೆ ಯಚ್ಚರಿಕೆ ಯಚ್ಚರಿಕೆ 32 ಪರಿ ಪರಿ ಕ್ರೀಡೆ-ರಮಿಸಿ ಆ ಆನಂದ ಶ್ರೀ ಹರಿಗೆ ಅರ್ಪಿಪ ಗುರುವಾದಿರಾಜಶ್ರೀಪಾದಂಗಳ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 33 ನಿತ್ಯ ನಿತ್ಯ ಶ್ರೀವರ ಮಾಲೇಶೆಗೆ ಅರ್ಪಿಪ ಭಾವಿಲಾಳೂರ ಶ್ರೀ ಗುರುರಾಜರ ಪಾದಕೆ ಯಚ್ಚರಿಕೆ ಯಚ್ಚರಿಕೆ34 ತನ್ನ ಶ್ರೀಪಾದ ರಜ ಧೆಣಿಯಲಿ ಧರಿಸಿ ಜೀವಿವರ ಹಯವದನ ಪಾದಕರ್ಪಿಸುವೆನೆಂದು ಪಣತೊಟ್ಟು ಜೀವನ್ಮುಕ್ತರನು ಮಾಡಿ ಪರಿಪಾಲಿಪೆನೆಂದು ಧೀರ ವೃಂದಾವನದಿ ಮೆರೆವ ಶ್ರೀಗುರು-ವಾದಿರಾಜರ ಶ್ರೀಪಾದಕೆ ಯಚ್ಚರಿಕೆ ಯಚ್ಚರಿಕೆ 35 ಶ್ರೀ ತ್ರಿವಿಕ್ರಮನ ರಥೋತ್ಸವಕೆ ಬಂದವರಲಿ ಒಂದೊಂದಂಶ ಸುರರ ಪ್ರವೇಶಿಸಿ ಅವರಲ್ಲಿ ತನ್ನೊಂದಂಶದಿಂದ ಸುರರ ಸಾಧನ ಮಾಡಿ ಸುರನರರ ಕೃತ ಕೃತ್ಯರೆನಿಸಿ ಶಿರಿ ಹಯ-ವದನನ ಕಾಣ್ವ ಜ್ಞಾನ ಭಕುತಿ ವೈರಾಗ್ಯ ನಿಷ್ಠಿಯನಿತ್ತು ಬ್ರಹ್ಮ ನಿಷ್ಯ್ಠೆ ಕರೆನು ಮಾಳ್ವ ಶ್ರೀ ಗುರು ಶ್ರೀಪಾದಕೆಯಚ್ಚರಿಕೆ ಯಚ್ಚರಿಕೆ 36 ಶ್ರೀ ಧವಳ ಗಂಗೆಯ ಸ್ನಾನ ಮಾಡುವ ಜ್ಞಾನವೀವ ಶ್ರೀ ಗುರು-ಪಾದಕೆ ಯಚ್ಚರಿಕೆ ಯಚ್ಚರಿಕೆ 37 ವಾಸುದೇವ ಪರಿ ಸ್ತೋತ್ರ ಮಾಡಿರೈ ಜ್ಞಾನಿ-ಗಳಾದವರೆಲ್ಲ ಶ್ರೀ ಗುರುಪಾದದೆಚ್ಚರಿಕೆಯಲಿ ತಂದೆವರದಗೋಪಾಲವಿಠಲ 38
--------------
ಗುರುತಂದೆವರದಗೋಪಾಲವಿಠಲರು
ಯತಿಗಳು ಆನೆ ಬರುತ್ತಿದಿಕೋ ದಾಸರ ಮರಿ-ಯಾನೆ ಬರುತ್ತಿದಿಕೋ ಪ. ಮದವೇರಿ ಹದಮೀರಿ ಮದನಾರಿ ತಾನೆಂಬಅಧಮರೆದೆಯ ಮೆಟ್ಟಿ ಸೀಳಲು ಅ.ಪ. ಮರುತಮತ ನಿರಂತರ ಚರಣದ ಧೂಳಿಕರದಲಿ ಪಿಡಿದು ಶಿರದ ಮೇಲೆ ಚೆಲ್ಲುತ್ತ 1 ಇದ್ದು ಜಗಕ್ಕಿಲ್ಲೆಂಬ ಶುದ್ಧ ಮೂರ್ಖತೆಯುಳ್ಳಅದ್ವೈತಿಗಳ ಬುದ್ಧಿಮಡುವನ್ನೆ ಕಲಕುತ್ತ 2 ಜಗಕೆ ಕರ್ತ ನಾನೆಂದು ಬೊಗಳಿಕೊಂಬುವ ನಾ-ಯಿಗಳ ಕರದಲ್ಲಿ ಪಿಡಿದು ಮೊಗದ ಮೇಲೆ ಉಗುಳುತ್ತ3 ಮಧ್ವಮುನೇಂದ್ರರ ಶುದ್ಧತೀರ್ಥದಿ ಮಿಂದುತಿದ್ದಿದ ನಾಮ ಶ್ರೀಮುದ್ರೆ ಶೃಂಗಾರದಿ 4 ಮುರಿಯಲು ದುರುಳನ ಗರುವವನೆ ಮುನ್ನಸಿರಿ ಹಯವದನನ ಅರಮನೆ ಪಟ್ಟದ 5
--------------
ವಾದಿರಾಜ
ಯತಿಗಳು (ಶ್ರೀ ಬ್ರಹ್ಮಣ್ಯತೀರ್ಥರು) ಕೈಪಿಡಿದು ಪಾಲಿಸೈ ಬ್ರಹ್ಮಣ್ಯಗುರುವೇ ಪ ಅಯ್ಯನೀನೆಂದು ನಿನ್ನಡಿಗೆ ವಂದಿಸುವೇ ಅ.ಪ ಮೂಢವiತಿಗಳು ಬಂದು ಬೇಡಿ ಕೊಳ್ಳಲು ಕರುಣ ನೀಡಿ ನಿನ್ನವರನ್ನು ಕಾಯ್ದರೀತಿ ಗಾಢದಿಂದಲಿ ಬಂದು ಮೂಢನಾದೆನ್ನನು ಗೂಢದಿಂದಲಿ ಕಾಯೊ ಗುಣನಿಧಿಯೆ ಗುರುವೇ . . 1 ಪುರುಷೋತ್ತಮಾರ್ಯರ ವರಪುತ್ರನೆಂದೆನಿಸಿ ಹರುಷದಿಂದಲಿ ಬಂದ ಭಕ್ತಜನರ ಮೊರೆಯಲಾಲಿಸಿ ಸ್ವಾಮಿ ಸ್ಮರಣೆಯ ಕೊಟ್ಟೆನ್ನ ಹರುಷಪಡಿಸುವ ಗುರುವು ನೀನೆಂದು ನಾ ಬಂದೆ 2 ವರಕಣ್ವನದಿ ಕೂಲದಲಿ ಕಲ್ಮಷ ತೊಳೆದು ಸಾರ್ವಭೌಮನ ಗುಣವ ಸರ್ವದಾ ಪಾಡುತಲಿ ಸರ್ವಜನರನು ಕಾವೆ ಸರ್ವಕಾಲದಲಿ 3 ಸರ್ವಗುಣ ಪೂರ್ಣ ಬ್ರಹ್ಮಣ್ಯಪುರ ವಾಸ ನರಹರಿಯ ಪಾದವನು ಸ್ಮರಿಸಿನಿತ್ಯ ಸರಸದಲಿ ಅಬ್ಬೂರು ಪುರವಾಸಿಗಳನೆಲ್ಲ ಅರ್ಭಕರ ತೆರನಂತೆ ರಕ್ಷಿಸುವ ಗುರುವರ್ಯ 4 ಮಣಿದು ಬೇಡುವೆ ನಿನ್ನ ಚರಣದಾಶ್ರಯವಿತ್ತು ಅಣುಗನೆಂದೆನಿಸೆನ್ನ ಸಲಹಬೇಕೊ ಗುಣನಿಧಿ ಶ್ರೀ ಪ್ರಾಣನಾಥ ವಿಠ್ಠಲನ ಘನ ಚರಣ ಸ್ಮರಣೆಯ ನೀಯೊ ಗುರುವೆ 5
--------------
ಬಾಗೇಪಲ್ಲಿ ಶೇಷದಾಸರು
ಯಂತ್ರೋದ್ಧಾರಕ ರಾಯರ ಸ್ಮರಣೆಯ ಮಾಡಿ ಅಂತರಾತ್ಮನ ದಾಸರ ಪ ಸಂತತ ಮನದಿ ನಿಶ್ಚಿಂತೆಯೊಳ್ ಸ್ಮರಿಸಲು ಸಂತಾಪಗಳ ಕಳೆದು ಚಿಂತಿತಾರ್ಥವನೀವ ಅ.ಪ ಶರಧಿಯ ನೆರೆದಾಟಿದ ಕಾಲುವೆಯಂತೆ ನಲಿದು ಲಂಕೆಯ ಸಾರಿದ ಬಲಶಾಲಿ ಲಂಕಿಣಿಯು ಪುರವ ಕಾಯುವ ಶ್ರಮ ಹರಿಸಿ ಸೂಕ್ಷ್ಮದ ರೂಪ ಧರಿಸಿ ಪುರವ ಪೊಕ್ಕು ಪರಿಪರಿ ಕೋಟೆಗಳಿರವನೆ ಕಾಣುತ ಕರಿ ಹಯ ರಥ ಶಾಲೆಗಳ ಪರಿಕಿಸುತ ಖಳನರಮನೆ ಪೊಕ್ಕರು ಫಲವಿಲ್ಲದೆ ಕಡೆಗೆ ಅಶೋಕ ವನದೊಳು ಚರಿಸಿದ1 ವನದ ಮಧ್ಯದೊಳಿರಲು ರಕ್ಕಸ ಬಹು ಘನತೆಯಿಂದಲಿ ಬರಲು ಬಣಗು ದೈತ್ಯನ ತೃಣಕೆಣೆಮಾಡಿ ನುಡಿಯಲು ಪವನ ತನಯ ನೋಡಿ ಮನದಿ ಸ್ತೋತ್ರವ ಮಾಡಿ ಮನದೊಳು ಶ್ರೀ ರಘುವರನನು ಧ್ಯಾನಿಸಿ ಘನ ಮುದ್ರಿಕೆ ಮುಂದಿಡಲಾ ಜಾನಕಿ ನಯನಂಗಳ ಕಂಬನಿಗರೆಯುತ ಮುಂದಿಹ ಹನುಮನೊಳಿಂತೆನೆ ಲಾಲಿಸಿದ 2 ಯಾವ ರಾಯರ ದೂತನೋ ಪೇಳಯ್ಯ ಬಲು ಸಾವಧಾನದಿ ಮಾತನು ಶ್ರೀರಾಮಚಂದ್ರ ನಿನ್ನ ಸೇರಿ ಮಿತ್ರತ್ವಮಾಡೆ ಕಾರಣವೇನುಂಟು ಸಾವಧಾನದಿ ಪೇಳು ಯಾರನುಮತಿಯಿಂದೀ ಪುರ ಪೊಕ್ಕೆಯೊ ಯಾರಿಗಾಗಿ ಈ ವಾನರ ರೂಪವು ಪೋರನಂತೆ ಕಾಣುವಿ ನಿನ್ನ ವಚನವು ಬಾರದು ಮನಕೆಂದೆನಲು ಮಾತಾಡಿದ 3 ಜನಕ ಜಾತೆಯೆ ಲಾಲಿಸು ದೈತ್ಯರ ಸದೆ ಬಡಿಯುವನೆಂದು ಭಾವಿಸು ಇನಕುಲ ತಿಲಕನ ಚರಣಸೇವೆಯು ಮಾಡೆ ಜಲಜಾಕ್ಷನಾಜ್ಞದಿಂದ ಭುವಿಯೊಳು ವಾನರ- ಕುಲದೊಳಗವತರಿಸುವ ಶತ ಸಂಖ್ಯೆಯೊಳಿರುತಿರೆ ಗಿರಿವನಚರಿಸುವ ಸಮಯದಿ ಜಲಜಾಕ್ಷಿಯನರಸುತ ರಾಘವಬರೆ ಚರಣಾಂಬುಜಗಳಿಗೆರಗಿದೆವೆಂದೆನಲು 4 ಜಲಜಾಕ್ಷಿ ನಿಮ್ಮ ಕಾಣದೆ ಮನದೊಳಗೊಂದು ಘನವಾದ ಚಿಂತೆ ತಾಳಿದೆ ಜನಕ ಜಾತೆಯ ಪಾದಾಂಬುಜವ ಕಾಣದೆ ಮರಳಿ ಪುರವ ಸಾರುವದೆಂತು ರವಿಸುತನಾಜ್ಞೆ ಮೀರ- ಲರಿಯದೆ ಈ ಉಪವನದೊಳಗರಸುವ ಸಮಯದಿ ಶ್ರೀವರನಿಯಮಿಸಿ ಪೇಳಿದ ಪರಿಯನು ತಿಳಿಯುತ ಪರಮಾನಂದದಿ ರಘುವರನ್ವಾರ್ತೆಯ ಲಗುಬಗೆ ಪೇಳಿದ 5 ಕುರುಹು ಕೊಡಮ್ಮ ಜಾನಕಿ ಮನಸಿನ ಚಿಂತೆ ಬಿಡುಬೇಗ ಭದ್ರದಾಯಕಿ ಕ್ಷಣದೊಳ್ ಶ್ರೀರಾಮನೊಳು ಇನಿತೆಲ್ಲವನು ಪೇಳಿ ಕ್ಷಣದಿ ರಕ್ಕಸರನೆಲ್ಲ ನೆಲಸಮ ಮಾಳ್ಪೆನೆಂಬೀ ಅಣುಗನಿಗಪ್ಪಣೆಯನು ಪಾಲಿಸೆನಲು ಅನುಮತಿನೀಡಿದ ಅವನಿಜೆಗೊಂದಿಸಿ ಕ್ಷಣದೊಳು ವನಭಂಗವ ಮಾಡಿದ ನುಡಿ ಕೇ- ಳಿದ ರಾವಣನ ಪುರವ ಅನಲನಿಗಾಹುತಿ ಇತ್ತ 6 ಜಯ ಜಯ ಜಯ ಹನುಮಂತ ಜಯ ಜಯ ಬಲವಂತ ಜಯ ಶ್ರೀರಾಮರ ಪ್ರಿಯದೂತ ಜಯ ಜಯ ಜಯವೆಂದು ಸನಕಾದಿಗಳು ಪೊಗಳೆ ಅನಲ ಸಖನ ಸೂನುವನು ಸ್ತೋತ್ರದಿಂದ ಪಾಡೆ ಕಮಲಜಾದಿ ಸುರಗಣ ತಲೆದೂಗೆ ಶ್ರೀ ಕಮಲನಾಭ ವಿಠ್ಠಲನನು ಪಾಡುತ ಅಮಿತ ಪರಾಕ್ರಮವಂತನ ಪೊಗಳುತ ನಮಿಸಿ ಶ್ರೀರಾಮರ ಗುಣಗಳ ಪೊಗಳುವ 7
--------------
ನಿಡಗುರುಕಿ ಜೀವೂಬಾಯಿ
ಯಾಕೆ ಈ ದಾಸನನು ಸಲಹಲೊಲ್ಲೆ ಶ್ರೀಕಾಂತ ಭಕ್ತನನು ಕಾಯಲೊಲ್ಲೆ ಪ ತರಳತನದಲಿ ನಾನು ಪಾಪಗಳ ಮಾಡಿದರೆ ಪರಮಾತ್ಮ ಸದ್ಗುರುವೆ ತಿಳಿದು ಮಾಡಿದನೇ ನಿರುತ ಯೌವನದಲ್ಲಿ ಪಾಪಗಳ ಮಾಡಿದರೆ ಅರಿತು ಮಾಡಿದೆನೆಂದು ಬಗೆದೆಯಾ ಹರಿಯೇ 1 ಈಗ ವಾರ್ಧಿಕ್ಯದಲಿ ಪಾಪಮಾಡಿದೆನೆಂದು ನಾಗೇಶಶಯನನೇ ಮುನಿದೆಯಾ ಹರಿಯೇ ಜಾಗುಮಾಡದೆ ನೀನು ಅಜಮಿಳಗೆ ವಲಿದಂತೆ ಬೇಗನೇ ಸಲಹಯ್ಯ ನಾಮಸ್ಮರಿಸುವೆನೊ2 ಹರಿಸೇವೆಯನ್ನು ನಾ ಭಕ್ತಿಯಲಿ ಗೈವೇ ಹರುಷದಿಂ ಹರಿಯೆಂನ ಪಾಪಗಳ ಕ್ಷಮಿಸುತ್ತ ಸಿರಿ ಚನ್ನಕೇಶವನೆ ಮುನಿಯದಿರು ತಂದೆ 3
--------------
ಕರ್ಕಿ ಕೇಶವದಾಸ
ಯಾಕೆ ನಿನಗೆ ಮನವೆ ವ್ಯಥೆಯು ಎಷ್ಟು ಲೋಕನಾಯಕ ಶ್ರೀಲೋಲ ಲಕ್ಷ್ಮಯ್ಯಾ ರಮಣ ಶ್ರೀಕಪರೇಯಾ ನಿನ್ನನ್ನೇ ಸ್ಮರಿಸುವುದು ಬಿಟ್ಟೂ ಪ ಹಲವು ಹಂಬಲಿಸಿದರೇನು ಫಲಾ ವ್ಯರ್ಥಾ ಬಳಲುವದೊಂದೇ ಅಲ್ಲದೆ ಬಾಧೆಯಿಂದಾ ಅಜ ಬ್ರಹ್ಮಾಂಬರದ ವರ-----ಆರಾರಿಗ್ವಶನಲ್ಲಾ ನಳಿನಾನಾಭನಾ ದಿವ್ಯನಾಮಾ ಭಜನೆಯ ತೊರೆದು 1 ಹರಿಶ್ಚಂದ್ರಾ ನಳರಾಜಾ-------ದಶರಥ ಮೊದಲು ಪುರಾಕೃತ ಕರ್ಮಾದಿ ಭಂಗಾ ಬಡಲಿಲ್ಲೇನೋ ಅರಿತೂನೀ ಹೃದಯಾದಿ ಅನ್ಯಚಿಂತನೆ ಹಿಡಿದು ಪರಮಾತ್ಮ ಪರಬ್ರಹ್ಮನ ಪಾದಧ್ಯಾನವೇ ಬಿಟ್ಟು 2 ಧರೆಯೊಳಾಧಿಕನಾದ ಧೋರಿ 'ಹೊನ್ನವಿಠಲನ’ ಚರಣವೇ ಗತಿಯೆಂದು ಚಿತ್ತಾದಲೆ ಸ್ಥಿರವಾಗಿ ಪೂಜಿಸಿ ಸೇವೆಯನೆ ಮಾಡಿ ಪರಮಹರುಷದಿಂದ ಪಡೆಯಾದೆ ಹರಿಕರುಣಾ 3
--------------
ಹೆನ್ನೆರಂಗದಾಸರು
ಯಾಕೆ ನಿರ್ದಯನಾದೆ ಲೋಕೇಶ ಪ್ರಭುವೆ ಸಾಕಲಾರದೆ ಎನ್ನ ನೂಕಿ ಭವದೊಳಗೆ ಪ ನಿನ್ನ ನಾಮಸ್ಮರಣೆ ಮಾಡದಲೆ ಹಗಲಿರುಳು ಅನ್ಯ ವಿಷಯಗಳಿಂದ ನೊಂದು ಬಳಲಿದೆನೊ ನಿನ್ನ ಧ್ಯಾನವ ಮಾಳ್ಪಚ್ಛಿನ್ನ ಭಕ್ತರೊಳಿರಿಸಿ ಚನ್ನಾಗಿ ಸಲಹೊ ಪ್ರಸನ್ನ ಮಾಧವನೆ 1 ಆಪನ್ನ ಜನರನು ಪೊರೆದೆ ಸನ್ನುತಾಂಗನೆ ದೇವ ಸರ್ವವ್ಯಾಪಕನೆ ಪನ್ನ ಗಾರಿವಾಹನ ಪ್ರಸನ್ನ ಶ್ರೀಹರಿ ಶೌರಿ ಎನ್ನ ಕಡೆಹಾಯಿಸಯ್ಯ ಜೀಯ 2 ಅಕ್ಷಯ ಫಲಪ್ರದ ಪಕ್ಷಿವಾಹನ ಕೃಷ್ಣ ಕುಕ್ಷಿಯೊಳು ಜಗವನಿಂಬಿಟ್ಟ ಶ್ರೀ ಹರಿಯೆ ರಕ್ಷ ಶಿಕ್ಷಕ ಜಗದ್ರಕ್ಷ ಪಾಂಡವ ಪಕ್ಷ ಈಕ್ಷಿಸಿ ಎನ್ನನುದ್ಧರಿಸಿ ಸಲಹದಲೆ3 ಪರಿಪರಿಯ ಕಷ್ಟಗಳ ಪರಿಹರಿಸಿ ಭವದೊಳಗೆ ದುರಿತದೂರನೆ ಕಾಯೊ ಶರಣ ಜನರ ಪರಿಸರನೊಡೆಯ ನಳನಾಮ ಸಂವತ್ಸರದಿ ಕರೆಕರೆಯ ಕಷ್ಟಗಳ ಬಿಡಿಸಿ ಸಲಹದಲೆ4 ಕನಕಗರ್ಭನ ಪಿತನೆ ಕಮಲನಾಭ ವಿಠ್ಠಲ ಮಿನಗುತಿಹ ದಿವ್ಯ ಸೌಂದರ್ಯ ಮೂರುತಿಯೆ ಸನಕಾದಿ ಮುನಿವಂದ್ಯ ಕ್ಷಣ ಬಿಡದೆ ಸ್ಮರಿಸುವರ ಇನಕುಲೇಂದ್ರನೆ ದೇವ ಬಿಡದೆ ಸಲಹದಲೆ5
--------------
ನಿಡಗುರುಕಿ ಜೀವೂಬಾಯಿ
ಯಾಕೆ ಪುಟ್ಟಿಸಿದಿ ನೀ ಸಾಕಲಾರದೆ ಜಗ-ದೇಕ ಕಾರಣಪುರುಷನೆ ಕೃಷ್ಣ ಪ ವಾಕು ಚಿಂತಿಸೆ ಇಂಥಕಾಕು ಮಾಡುವುದುಚಿತವೆ ಕೃಷ್ಣ ಅ.ಪ. ಒಡಲಿಗನ್ನವ ಕಾಣೆ ಉಡಲು ಅರಿವೆಯ ಕಾಣೆಗಡಗಡನೆ ನಡುಗುತಿಹೆನೋ ಕೃಷ್ಣಮಡದಿ ಮಾತೆಯರ ಬಿಟ್ಟು ಒಡಹುಟ್ಟಿದವರ ಬಿ -ಟ್ಟಡವಿ ಪಾಲಾದೆನಲ್ಲೋ ಕೃಷ್ಣಕುಡುತೆ ಕೊಡುವವರಿಲ್ಲ ನುಡಿಯ ಕೇಳುವರಿಲ್ಲಬಡತನವು ಕಂಗೆಡಿಸಿತೋ ಕೃಷ್ಣಕಡೆ ಹಾಯಿಸುವರ ಕಾಣೆ ನಡುಮಡುವಿನೊಳು ಕೈ ಬಿಡದೆ ದಡವನು ಸೇರಿಸೋ ಕೃಷ್ಣ 1 ಕೊಟ್ಟವರ ಸಾಲವನು ಕೊಟ್ಟು ತೀರಿಸದವರಪೊಟ್ಟೆಯೊಳು ಪುಟ್ಟಲಾಯ್ತೋ ಕೃಷ್ಣಎಷ್ಟು ಜನುಮದಿ ಮನಮುಟ್ಟಿ ಮಾಡಿದ ಕರ್ಮಕಟ್ಟೀಗ ಉಣಿಸುತಿಹುದೋ ಕೃಷ್ಣಸೃಷ್ಟಿಯೊಳಗೆನ್ನಂಥ ಕೆಟ್ಟ ಪಾಪಿಷ್ಠ ಜನಘಟ್ಟಿಸಲಿಲ್ಲವೇನೋ ಕೃಷ್ಣವಿಠ್ಠಲನೆ ನಿನ್ನ ಮನಮುಟ್ಟಿ ಭಜಿಸಿ ಹಿಂದೆಎಷ್ಟು ಜನ ಬದುಕಲಿಲ್ಲೋ ಕೃಷ್ಣ 2 ಆಳು ದೇಹವು ಗೇಣು ಕೀಳಾಗಿ ಪಲ್ಕಿರಿದುಖೂಳ ಜನರ ಮನೆಗೆ ಕೃಷ್ಣಹಾಳು ಒಡಲಿಗೆ ತುತ್ತು ಕೂಳಿಗೆ ಹೋಗಿ ಅವರವಾಲೈಸಲಾರೆನಲ್ಲೋ ಕೃಷ್ಣಬಾಳು ಈ ಪರಿಯಾದ ಮ್ಯಾಲೆ ಭೂಮಿಯಲಿ ಬಹುಕಾಲ ಕಳೆಯುವುದುಚಿತವೆ ಕೃಷ್ಣಆಲಸ್ಯ ಮಾಡದಲೆ ಈ ವ್ಯಾಳ್ಯದಲಿ ಅರಿತುಪಾಲಿಸಲು ಬಹು ಕೀರ್ತಿಯೋ ಕೃಷ್ಣ 3 ಸಿರಿ ಅರಸನೆಂದು ಶ್ರುತಿ ಸಾರುತಿದೆಬಂದುದೀಗೇನು ಸಿರಿಯೋ ಕೃಷ್ಣಒಂದೊಂದು ನಿಮಿಷ ಯುಗಕಿಂತಧಿಕವಾಗುತಿದೆಮುಂದೋರದ್ಹಾಂಗಾಯಿತೋ ಕೃಷ್ಣಸಂದೇಹವಿಲ್ಲ ಗೋವಿಂದ ಶ್ರೀಪದದಾಣೆತಂದೆ ನೀ ರಕ್ಷಿಸದಿರೆ ಕೃಷ್ಣಮುಂದೆ ಭಜಿಸುವರು ಹೀಗೆಂದು ವಾರುತೆ ಕೇಳಿಬಂದುದಪಕೀರ್ತಿ ಮಾತು ಕೃಷ್ಣ 4 ವತ್ಸರ ಈರೀತಿ ಕಾಲಕಳೆದೆನೋ ಕೃಷ್ಣವ್ಯರ್ಥವಾಯಿತು ಜನುಮ ಸಾರ್ಥಕಾಗದು ಕಣ್ಣುಕತ್ತಲೆಗವಿಸಿತಲ್ಲೋ ಕೃಷ್ಣಇತ್ತ ಬಾರೆಂತೆಂದು ಹತ್ತಿಲಿಗೆ ಕರೆದೊಂದುತುತ್ತು ಕೊಡುವರ ಕಾಣೆನೋ ಕೃಷ್ಣವಿಸ್ತರಿಸಲಾರೆ ಇನ್ನೆತ್ತ ಪೋಗಲೊ ನಿನ್ನಚಿತ್ತವ್ಯಾತಕೆ ಕರಗದೋ ಕೃಷ್ಣ 5 ಆರು ಗತಿ ನಿನಗಧಿಕರಾರು ಧಾರುಣಿಯೊಳಗೆತೋರಿಸೈ ಕರುಣನಿಧಿಯೆ ಕೃಷ್ಣಈರೇಳು ಲೋಕಕಾಧಾರವಾದವಗೆ ಬಲುಭಾರವಾದವನೆ ನಾನು ಕೃಷ್ಣಮೀರಿ ನುಡಿಯಲು ಹದಿನಾರೆರಡು ಪಲ್ಗಳುಬೇರು ಕಳಕಳಯಿತೋ ಕೃಷ್ಣತೋರು ಬಂಕಾಪುರದ ಧಾರುಣಿಪುರವಾಸವೀರ ನರಸಿಂಹದೇವ ಕೃಷ್ಣ 6 ಹರಿಯಾತ್ರೆ ಮಾಡಲಿಲ್ಲ ಹರಿಮೂರ್ತಿ ನೋಡಲಿಲ್ಲಹರಿದಾಸ ಸÀಂಗವಿಲ್ಲ ಕೃಷ್ಣಹರಿಸ್ಮರಣೆ ಮಾಡಲಿಲ್ಲ ಸುರನದಿಯ ಮೀಯಲಿಲ್ಲಧರಣಿ ಸಂಚರಿಸಲಿಲ್ಲ ಕೃಷ್ಣಅರಿತರಿತು ಮನ ವಿಷಯಕೆರಗಿ ಹರುಷವ ತಾಳಿಬರಿದಾಯಿತಾಯುವೆಲ್ಲ ಕೃಷ್ಣಮರುತಾಂತರ್ಗತ ಸಿರಿಯರಸ ಹರಿಯೆಂದುಹರುಷಾಬ್ದಿ ಮಗ್ನನಲ್ಲ ಕೃಷ್ಣ7 ಹರಿನಾರಾಯಣನೆಂದು ಕರವೆತ್ತಿ ಮುಗಿದೊಮ್ಮೆ ಮೈ ಮರೆದು ನಟಿಸಲಿಲ್ಲ ಕೃಷ್ಣಹರಿಸ್ಮರಣೆ ಸ್ಮರಿಸಿ ಸಿರಿತುಳಸಿ ಪುಷ್ಪವನುಕರವೆತ್ತಿ ನೀಡಲಿಲ್ಲ ಕೃಷ್ಣಸರ್ವಜ್ಞರಾಯರು ವಿರಚಿಸಿದ ಗ್ರಂಥವನುದರುಶನವೆ ಮಾಡಲಿಲ್ಲ ಕೃಷ್ಣಸ್ಮರಿಸಲಾರದ ಪಾಪ ಸ್ಮರಣೆಪೂರ್ವಕ ಮಾಡಿಸ್ಥಿರಭಾರನಾದೆನಲ್ಲೋ ಕೃಷ್ಣ 8 ದುರುಳಜನರೊಡನಾಡಿ ಹರಿಣಾಕ್ಷಿಯರ ಕೂಡಿಸರಿ ಯಾರು ಎಂದು ತಿರುಗಿ ಕೃಷ್ಣನಿರುತ ಕ್ಷುದ್ರವ ನೆನೆಸಿ ನೆರೆದೂರ ಮಾರಿ ಹೆಗ್ಗೆರೆಗೋಣನಂತೆ ತಿರುಗಿ ಕೃಷ್ಣಪರರ ಅನ್ನವ ಬಯಸಿ ಶರೀರವನೆ ಪೋಷಿಸಿಶಿರ ಒಲಿದು ಶಿಲೆಗೆ ಹಾಯಿದು ಕೃಷ್ಣಶರಣವತ್ಸಲನೆಂಬೊ ಬಿರುದು ಪಸರಿಸುವಂಥಕರುಣ ಇನ್ನೆಂದಿಗಾಹುದೊ ಕೃಷ್ಣ 9 ಉರಗ ಫಣಿ ತುಳಿಯಲೊಎರಡೊಂದು ಶೂಲಕ್ಹಾಯಲೊ ಕೃಷ್ಣಕೊರಳಿಗ್ಹಗ್ಗವ ಹಾಕಿ ಮರವೇರಿ ಕರಬಿಡಲೋಗರಗಸದಿ ಶಿರಗೊಯ್ಯಲೋ ಕೃಷ್ಣಕರುಣವಾರಿಧಿ ಎನ್ನ ಕರಪಿಡಿದು ಸಲಹದಿರೆಧರೆಯೊಳುದ್ಧರಿಪರ್ಯಾರೋ ಕೃಷ್ಣ 10 ಎಷ್ಟು ಹೇಳಲಿ ಎನ್ನ ಕಷ್ಟ ಕೋಟಿಗಳನ್ನುಸುಟ್ಟೀಗ ಬೇಯ್ಯುತಿಹವೋ ಕೃಷ್ಣಕಷ್ಟಬಟ್ಟ ಮಗನೆಂದು ದೃಷ್ಟಿ ನೀರೊರೆಸೆನ್ನಪೊಟ್ಟೆಯೊಳ್ಪಿಡಿವರ್ಯಾರೊ ಕೃಷ್ಣಕೃಷ್ಣನಾಮ ವಜ್ರಕ್ಕೆ ಬೆಟ್ಟ ದುರಿತವು ನೀಗಿಥಟ್ಟನೆ ಬಂದು ನೀನು ಕೃಷ್ಣಇಷ್ಟವನು ಸಲಿಸಿ ಗುಟ್ಟ್ಟಲಿ ಶ್ರೀರಂಗವಿಠಲ ಎನ್ನ ಕಾಯೋ ಕೃಷ್ಣ 11
--------------
ಶ್ರೀಪಾದರಾಜರು
ಯಾಕೆ ಮನದಲಿ ಶೋಕಿಸುತ್ತಿರುವೆ ಜಗ ದೇಕನಾಥನು ಸಾಕುತಿರುವನು ನೀ ತಿಳಿಯದಿರುವೆ ಪ ಲೋಕನಾಥನ ವಿವೇಕದಿ ಸ್ತುತಿಸದೆ ವ್ಯಾಕುಲದಿಂ ಮನ ಕಳವಳಗೊಳುತಲಿ ಅ.ಪ ಸೃಷ್ಟಿಕರ್ತನು ರಕ್ಷಿಸುತ್ತಿರುವ ದುರಿತಂಗಳ ರಾಸಿಯ ಬೆಟ್ಟಗಳ ತರಿದೊಟ್ಟು ತಿರುವ ಅದು ತಿಳಿಯದು ನೀ ಬಲು ಕಷ್ಟಗಳ ಪಡುತಿರ್ಪ ವಿಷಯಗಳ ನೋಡುತ ನಗುತಿರುವ ಇಷ್ಟು ಈತನ ಪ್ರಭಾವವು ತಿಳಿಯದೆ ಲಕ್ಷ್ಮಿರಮಣ ರಕ್ಷಿಸೆನ್ನುತ ಸ್ಮರಿಸದೆ 1 ನಾನು ನನ್ನದು ಎಂಬ ಅಭಿಮಾನ ಅದು ಪೋಗುವ ತನಕ ಜ್ಞಾನ ಮಾರ್ಗಕೆ ಇಲ್ಲ ಸಾಧನ- ವೆಂದರಿಯುತ ಮನದಲಿ ಧ್ಯಾನಿಸುತ್ತಿರು ಶ್ರೀನಿಧಿ ಗುಣಗಳನು ಹೀಗಿರುವುದೆ ಪ್ರಧಾನ ಧ್ಯಾನ ಗಾನ ಮೌನಾದಿ ವ್ರತಗಳನು ಶ್ರೀನಿಧಿಗರ್ಪಿಸಿ ಮನ ಹರುಷಿಸದಲೆ2 ತಂದೆ ಶ್ರೀ ವೆಂಕಟೇಶ ವಿಠ್ಠಲನು ಹರಿಭಕುತರ ಮೊರೆಯನು ಛಂದದಿಂದಲಿ ಕೇಳಿ ಪೋಷಿಪನು ಮುಕುಂದನಲಿ ಭಕುತಿ ಎಂದೆಂದಿಗೂ ತಪ್ಪದೆ ಉದ್ಧರಿಸುವನು ನಿಜವೆಂದರಿ ಇದನು ಮುಂದೆ ಕಮಲನಾಭ ವಿಠ್ಠಲ ಭಕುತರ ಸಂದಣಿ ಪೊರೆದು ಸಂತೈಸುತಲಿರೆ ವೃಥ 3
--------------
ನಿಡಗುರುಕಿ ಜೀವೂಬಾಯಿ