ಒಟ್ಟು 8641 ಕಡೆಗಳಲ್ಲಿ , 130 ದಾಸರು , 5054 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂಥಾ ಮಹಿಮನಿವನೆ ಗೋಪಾಲಕೃಷ್ಣ ಎಂಥ ಮಹಿಮನಿವನೆ ಪ. ಎಂಥಾ ಮಹಿಮನಿವನಂತ ಕಂಡವರಿಲ್ಲ ಕಂತು ಜನಕ ಸರ್ವರಂತರಂಗದೊಳಿಪ್ಪ ಅ.ಪ. ಕರಚರಣಗಳಿಲ್ಲದೆ ಇದ್ದರು | ಮುದುರಿ ಘುರುಘುರುಗುಟ್ಟುತಿಹುದೆ ವರಕಂಬೋದ್ಭವ ವಟು ಪರಿಶು | ಧರಿಸಿರುವನ ಚರಿಸಿ ಮಾವನ ಕೊಂದ ನಿರ್ವಾಣ ಹಯವೇರಿ ಶರಧಿಯೊಳಾಡಿ ಗಿರಿಯಡಿ ಓಡಿ ಧರೆಯನು ತೋಡಿ ಕರಳೀಡ್ಯಾಡಿ ಕರವ ನೀಡಿ ಭಾರ್ಗವ ದಶರಥ ಸುತ ಅಂಬರ ತೊರೆದ ರಾವುತ 1 ಮಂದರ | ಬೆಂಡಂತೆ ಧರಿಸಿ ವನಿತೆಯ ತಂದನೀ ಧೀರ ಘನ‌ಘರ್ಜನೆಯು ಗಂಗಾಜನಕ | ಜಮದಗ್ನಿಸುತ ವನಚಾರಿ ತುರುಪಾಲ ವನಿತೆರೊಂಚಕ ಕಲ್ಕಿ ಜನಿಸಿ ಜಲದಿ ಬೆನ್ನಲಿ ಗಿರಿಕೋರೆ ಘನ ಹೊಸಲಾಸನ ತಿರಿದನುಜನ ತರಿದ ಮಾತೆ ಕಪಿವೆರಸಿ ವೃಂದಾವನ ಚರಿಸಿ ದಿಗಂಬರ ಹರಿ ಏರಿದನೆ 2 ಸುತನಿಗಾಗಮವಿತ್ತನೆ | ಕ್ಷಿತಿಧರಧಾರಿ ಸುತನ ಮೂಗಿನೊಳ್ ಬಂದನೆ ಸುತವಾಕ್ಯ ಸತ್ಯವೆನಿಸಿ ಅತಿ ಕುಬ್ಜ ಕ್ಷಿತಿಯನಿತ್ತು ವ್ರತಧಾರಿ ವಸನ ಚೋರ ವ್ರತಭಂಗ ಏರಿ ತುರಂಗ ಸತಿಯನೆ ಪೊರೆದ ಸತಿಯಂತಾದ ಸತಿಯಳ ಸಂಗ ಸತಿಗರಿದಂಗ ಸತಿಯ ಬೇಡಿ ನೀಡಿ ಸತಿಯ ಕೂಡಿ ಜಾರ ಸತಿ ಹೆಗಲೇರಿದ 3 ವಾಸ ಜಲದಿ ಮೈ ಚಿಪ್ಪು | ಯಜ್ಞ ಸ್ವರೂಪ ಮಾನವ ಮೃಗರೂಪು ಆಸೆಬಡಕ ಮಾತೆ ದ್ವೇಷ ವನದಿ ವಾಸ ಪೋಷ ಪಾಂಡವ ಜಿನ ಮೋಸ ವಾಜಿ ಮೇಲ್ವಾಸ ನಾಸಿಕ ಶೃಂಗ ನಗಪೋತ್ತಂಗÀ ಮಾನವ ಸಿಂಗ ನೃಪರ ದ್ವೇಷ ಪೋಷಿ ಯಜ್ಞವೃಂದ ವಾಸಿ ಘಾಸಿವ್ರತ ಕಲಿಮುಖ ದ್ವೇಷಿ 4 ಅಮೃತ ಭೂಸತಿಯ ಪೊರೆದು ಪಾಪಿ ಕರುಳ್ಬಗೆದ ಜಲಪಿತ ಭೂಪರ ಕಾಡಿ ರಘುಭೂಪ ಸೋದರತಾಪ ಗೋಪ್ಯಕಲ್ಯಂತಕಾಲ ಗೋಪಾಲಕೃಷ್ಣವಿಠ್ಠಲ ಆಪಜವಾಸ ಆ ಪೃಥ್ವೀಶ ಆ ಪುತ್ರಪೋಷ ಆ ಪದ ಸರಿತ ಕೋಪಿ ಲಂಕೆ ಪುರತಾಪಿ ಗೋಪಿಕಾ ವ್ಯಾಪಿ ಮಾನಹೀನ ಘೋಟಕವಹನ 5
--------------
ಅಂಬಾಬಾಯಿ
ಎಂಥಾ ಮೋಹನನೇ ನೋಡಮ್ಮಯ್ಯಾ| ಸಂತತ ತೃಪ್ತನು ಬಾಲಕನಾದಾ|ಅ- ನಂತ ಚರಿತೆಯಾ ದೋರುವ ಕೃಷ್ಣ ಪ ಮೂಡಣ ದೇಶಕೆ ಪಡರಲು ಗೋಪಿಯು| ತಡೆಯದೆ ದುಮುಧುಮು ಧುಮುಕೆನುತ| ಕಡೆಯಲು ಧುಡು ಧುಡು ಧುಡುನಡೆಯುತ ಬಂದು| ಪಿಡಿದೆನ್ನ ಸೆರಗ ಬೆಣ್ಣೆ ಬೇಡುವಾ ಕೃಷ್ಣ 1 ಸಮಗೆಳೆಯರ ಸಂಗಡ ಧ್ವನಿವೇಣಿಯ| ಉಮಟೆಸುತಲಿ ಧಿಗಿಧಿಗಿಲೆನುತಾ| ಧಿಮಿಕಿಟ ಧಿರಕಿಟ ತಿರುಕಿಟವೆಂಬೋ| ಕ್ರಮದಿ ವಾದ್ಯವ ಬಾರಿಸುವಾ ಕೃಷ್ಣ 2 ಗುರು ಮಹೀಪತಿ ಪ್ರಭುವಿನ ಪದರಜ| ದೊರಕದು ಅಜಭವ ಮುಖ್ಯರಿಗೆ! ಹರುಷದಿ ತೋಳ್‍ದೊಡೆ ಮೇಲೆ ಓಡಾಡುವಾ| ಧರೆಯೊಳು ಯಶೋಧೆ ಸುಕೃತವೆಂತೋ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂಥಾ ಸ್ಥಿತಿಯೆ ಶ್ರೀರಾಮಗೆ ಪ ಚಿಂತಿತ ಫಲದಗೆ ಚಿಂತಾಪ್ರಾಪ್ತಿಯೆ ಅ.ಪ. ಲೋಕೈಕನಾಥಗೆ ಈ ಕಪಿನಾಥನು ಸು- ಗ್ರೀವನು ನಾಥನೆಂದೆನಿಸುವ ಪರಿಯೆ 1 ಸಕಲ ಲೋಕ ಶರಣ್ಯಗೆ ಕಕುಲತೆಯಿಂದನ್ಯರಲಿ ದೈನ್ಯವೆ 2 ಯಾವನನುಗ್ರಹ ಬೇಡುವರು ಈ ವಿಭುವಿಗೆ ಸುಗ್ರೀವನ ದಯವೆ 3 ಎಲ್ಲರ ದುಃಖವ ಪರಿಹರಿಸುವನಿಗೆ ಇಲ್ಲಿ ಸುಗ್ರೀವನೊಳ್ ದೈನ್ಯದ ಮೊರೆಯೆ 4 ಕರಿಗಿರೀಶನ ಕಾರ್ಯಕೆ ಕಪಿವರ ಪರಿ ಮಾಡಿಸುವುದೆ 5
--------------
ವರಾವಾಣಿರಾಮರಾಯದಾಸರು
ಎಂಥಾದಯವಂತನೋ ಸಂತಾರನಾಥನೋ ಪ ಕಂತೂ ಜನಕಾನ ಪ್ರಿಯ್ಯಾನೋ ಆ - ನಂತಾ ನಂತಾ ಮಹಿಮನೋ ಅ.ಪ ರಮ್ಯಾ ಗುಣಾ ಪೂರ್ಣನೋ - ಆ - ಗಮ್ಯಾ ಸಚ್ಚರಿತಾನೋ ನಮ್ಯಾನತರಾ ಪೊರೆವಾನೋ - ಈತ ನಮ್ಯಲ್ಲಾರ ಸಲಹೋನೋ 1 ಪ್ರಾಣಾವೇಶಾಯುತನೋ - ಜಗ - ತ್ರಾಣಾ ತಾನಾಗಿಹನೋ ಕ್ಷ್ಯೋಣೀಯೋಳ್ವಿಖÁ್ಯತಾನೋ - ಎನ್ನ ಪ್ರಾಣಾUಳಿಗೆ ನಾಥನೋ 2 ಕರುಣಾಶಾಲಿ ಎನಿಪಾನೋ - ತನ್ನ ಚರಣಾ ಸೇವಾ ನೀಡುವನೋ ಶರಣಾಬ್ಜ - ತರಣೀ ಸÀಮನೋ - ಅಂತಃ ಕರಣಾದಲ್ಲಿರುವಾನೋ 3 ಜನನೀ ಜನಕಾರೆನಿಪನೋ - ಸಕಲ ಜನರೀಗೆ ಸಮ್ಮತನೋ ಜನುಮಾ ಜನುಮದಲೀತನೋ - ನಿಶ್ಚಯ ಎನಗೆ ತಾತನೋ 4 ಭೂತಾಳದೊಳು ವಿಖ್ಯಾತನೋ ನಿಜ - ದಾತಾ ಜನರಿಗೆ ಪ್ರೀತನೋ ನೀತಾ ಗುರು ಜಗನ್ನಾಥಾ ವಿಠಲ - ಪ್ರೀತಿಯ ತಾಪೊಂದಿಹನೋ 5
--------------
ಗುರುಜಗನ್ನಾಥದಾಸರು
ಎಂಥಾದೋ ಶ್ರೀ ವೈಕುಂಠವೆಂಥಾದೋ ಪ ಕಂತುಪಿತನ ದೇಹಕಿರಣ ಅದ ರಂತರಂಗ ಹೇಮಾಭರಣ ಕಾಂತಿ ಗಂತು ನಾಚಿದ ರವಿ ಅರುಣ ಅಹಾ ನಂತ ಕಾಲದಲ್ಲಿ ಸಂತತ ತುತಿಪರ್ಗೆ ಪ್ರಾಂತಕ್ಕೆ ನಾಲ್ಕು ನಿಶ್ಚಿಂತ ಮುಕ್ತಿಯ ಸ್ಥಾನ 1 ಪಾಲಸಾಗರ ಮಧ್ಯೆ ಕೂಟ ಒಳ ಗೇಳು ಸುತ್ತಿಸಾಗರ ದಾಟಿ ತಾಳ ಮೇಳದವರು ಮೂರುಕೋಟಿ ನಾಮ ಪೇಳ್ವ ಗಾಯಕರ ಗಲಾಟೆ ಆಹ ಶೀಲ ಮುನಿಗಳು ದೇವ ಗಂಧರ್ವರು ಜೀವನ್ಮುಕ್ತರುಗಳು ಸೇರಿಪ್ಪ ಹರಿಪುರ2 ಹೇಮ ಪ್ರಾಕಾರದ ಪುರವು ಅಲ್ಲಿ ಆ ಮಹ ಬೀದಿ ಶೃಂಗಾರವು ನೋಡೆ ಕಾಮಧೇನು ಕಲ್ಪತರುವು ಬಲು ರಮಣೀಯವಾದ ಇರವು ಆಹಾ ಶ್ರೀ ಮೂರುತಿಯೊಂದು ವೇದಾಂತಶ್ರುತಿ ಸಾರೆ ಆ ಮಹಮುಕ್ತರು ಸೇರಿಹ ಮಂದಿರ 3 ಸುತ್ತಲು ಸನಕಾದಿ ಮುನಿಯ ದಿವ್ಯ ನರ್ತನ ಗಾಯನ ಧ್ವನಿಯು ಪುಷ್ಟ ವೃಷ್ಟಿ ಚಂಪಕ ಜಾಜಿ ಹನಿಯು ಅಲ್ಲಿ ಅಷ್ಟಮ ಸ್ತ್ರೀಯರ ಮನೆಯು ಆಹಾ ಪಾದ ಸಂ ಪತ್ತಿಗೀ ಶಯನ ಸರ್ವೋತ್ತಮನ ಗೃಹ 4 ಥಳಥಳಿಸುವ ದಿವ್ಯದ್ವಾರ ಅಲ್ಲಿ ಹೊಳೆವಂಥ ರಂಗಮಂದಿರ ಮುತ್ತಿ ಭಾರ ಹೇಮ ತುಳಸಿ ಸರದ ಶೃಂಗಾರ ಆಹಾ ಹೊಳೆವ ಮಾಣಿಕದ ಮಂಟಪ ಮಧ್ಯದೊಳ್ಮೆರವ ಚೆಲುವ ಜಗನ್ನಾಥ ವಿಠಲನ ನಿಜಸ್ಥಾನ 5
--------------
ಜಗನ್ನಾಥದಾಸರು
ಎಂಥಾದ್ದೊ ಹರಿಯ ಕರುಣ ಪ ಎಂಥಾದ್ದೊ ಹರಿಯ ಮಹಿಮೆಎಂಥಾದ್ದೆನ್ನ ಬಾರದು ಗಡ ಅ.ಪ ಅಂತ್ಯವಿಲ್ಲದ ನಿಜಾನಂದ ತೃಪ್ತನು ಗಡಸಂತರೊಕ್ಕುಡಿತೆಯ ಜಲಕೆ ಹಿಗ್ಗುವ ಗಡ 1 ಸನಕಾದಿ ಮುನಿಮನಕೆ ಸಿಲುಕದಗಮ್ಯನು ಗಡನೆನೆವರ ಮನದಣಿಯೆ ತನ್ನ ತೋರುವ ಗಡ2 ಶ್ರ್ರುತಿತತಿಗೆ ಮೈದೋರದತಿ ಮಹಿಮನು ಗಡಮತಿಯುಳ್ಳವನ ಭಕ್ತಿ ಸ್ತುತಿಗೆ ಹಿಗ್ಗುವ ಗಡ3 ಲೋಕ ಪತಿಗಳಿಗೆಲ್ಲ ಒಡೆಯ ತಾನೆ ಗಡಬಾಕುಳಿಕನಾಗಿ ಭಕುತರ ವಶದಲ್ಲಿಪ್ಪ ಗಡ 4 ಆರರೊಳು ಸಡ್ಡೆಯಿಲ್ಲದ ನಿಸ್ಸಂಗನು ಗಡಸಾರಿದವರಿಗೆ ತಂದೆತಾಯಿ ಸಿರಿಕೃಷ್ಣ ಗಡ 5
--------------
ವ್ಯಾಸರಾಯರು
ಎಂದಿಗಾದರೂ ನಾನು ಮರೆಯೆ ಗುರುವಿನತಂದು ಪೂಜಿಸು ತ್ರಿನಯನ ಪ್ರಾಣದೊಡೆಯನ ಪ ಅಂಬು ಹೂಡಿದ |ತಾಮಸದ ಗುಣಗಳನು ಕಡೆಗೆ ಮಾಡಿದರಾಮ ರಾಮ ಎಂಬ ಬೀಜ ಮಂತ್ರ ನೀಡಿದ 1 ಕಾಣ ಬಂತು ಜಗವು ಎನಗೆ ರಾಮರೂಪವುತಾನು ತಾನೆ ಉದಯವಾಯ್ತು ಜ್ಞಾನದೀಪವು |ಏನು ಪೇಳಲಿ ಕರಗಿ ಹೋಯ್ತು ಮನದ ತಾಪವುಸ್ವಾನುಭಾವದಲಿ ನಾಸ್ತಿ ಪುಣ್ಯಪಾಪವು 2 ಎರಡು ಪಕ್ಷ ಮೀರಿಹ ಗುಣಾತೀತನಪರಬ್ರಹ್ಮ ಪರಂ ಜ್ಯೋತಿ ಸದೋದಿತನ |ಕರುಣಸಿಂಧು ತಂದ ಜ್ಞಾನಬೋಧ ತಾತನಹರುಷ ಪೂರ್ಣವಾಗಿ ಸುಖವ ಕೊಡುವ ದಾತನ 3
--------------
ಜ್ಞಾನಬೋದಕರು
ಎಂದಿಗಾಹುದೋ ನಿನ್ನ ದರುಶನ | ಇಂದಿರೇಶ ಮುಕುಂದ ಕೇಶವ ಪ ಗಾನಲೋಲನೆ ದೀನವತ್ಸಲ | ಮಾನದಿಂದಲಿ ನೀನೆ ಪಾಲಿಸೋ 1 ಯಾರಿಗೆ ಮೊರೆ ಇಡುವೆ ಶ್ರೀ ಹರಿ | ಸಾರಿ ಬಂದು ನೀ ಈಗಲೆ ಪೊರಿ 2 ಗಜವ ಪಾಲಿಸೊ ಗರುವದಿಂದಲಿ | ಭುಜಗಶಯನ ಶ್ರೀ ವಿಜಯವಿಠಲಾ 3
--------------
ವಿಜಯದಾಸ
ಎಂದಿಗೂ ಮರುಳಾಗೆನೋ ಸಂಸಾರಕ್ಕೆ ಎಂದಿಗೂ ಮರುಳಾಗೆನೋ ಪ ಬಂಧವ ತರಿವ ಕೇಶವನ ದಾಸನಾಗಿ ಪಾದ ಸೇರುವೆನಯ್ಯ ಅ.ಪ ನಾರಿಯರನು ನೆಚ್ಚಿಸೀ ಧರ್ಮವ ಬಿಡಿಸಿ ಮಾರಿಯರ ಸಾಕಿಸೀ ಆರರ ವಶಮಾಡಿ ರತಿಕ್ರೀಡೆ ನಂಬಿಸಿ ಮಾರಿಯ ಗೃಹಕೆನ್ನ ಗುರಿಮಾಡ್ವ ಭವಕೇ 1 ಹÉೂನ್ನುಗಳಿಗೆ ಮೆಚ್ಚಿಸೀ ಸತ್ಯವ ಬಿಡಿಸಿ ಮಣ್ಣುಗಳಿಗೆ ಸೊಕ್ಕಿಸೀ ಬಣ್ಗೆಣ್ಣಿಸಲಾಗದ ಪಾಪವ ಮಾಡಿಸಿ ಚಿನ್ನನ ಮರೆಸುವ ಪುಸಿಯಾದ ಭವಕೇ 2 ಸ್ಮರಣೆಗಳನ್ನೇ ಮಾಡಿ ಸರಸದಿ ಪಾಲಿಪ ಭಕ್ತರ ಪರಿಯನ್ನು ಭರದಿ ಸೇರಿಸಿ ಚನ್ನಕೇಶವಾ ಗತಿಯೆಂಬೇ 3
--------------
ಕರ್ಕಿ ಕೇಶವದಾಸ
ಎಂದಿಗೆ ಕಾಂಬುವೆ ಇಂದಿರೇಶನೆ ನಿನ್ನ ಪಾದ ಕೃಪೆಯ ಪ ಒಂದರಲವ ನಿಂದು ಒಂದೇ ಮನದಿ ನಿನ್ನ ಮಂದ ಭಾಗ್ಯನು ನಾನು ಅ.ಪ ಎನ್ನ ಮನಸಿನ ಚೇಷ್ಟೆ ವರ್ಣಿಸಲಳವಲ್ಲ ಕ್ಷಣಕೊಂದು ಪರಿಯಪ್ಪುದು ಘನದೃಢ ಹರಿಪಾದ ನೆನೆಯುವುದು ನಿಮಿಷದಿ ಎಣಿಯಿಲ್ಲದೈಶ್ವರ್ಯವನು ಭೋಗಿಸುವುದು 1 ಗಳಿಗೆಯೊಳ್ದಶಲಕ್ಷ ಸುಲಭದಿಂ ಗಳಿಸರ್ಥ ಬಲವಾಗಿ ನಿಲಯದಿಟ್ಟು ಲಲನೆಯೊಳೊಡಗೂಡಿ ಬಲುಸೌಖ್ಯ ಬಡುಕೊಂಡು ಗಳಿಗೆಯೊಳ್ ದೇಶಾಂತರಕೆಳಸುವುದಭವ 2 ಅರಿಗಳಂ ಬಂಧಿಸಿ ಸೆರೆಯೊಳಿಟ್ಟರಲವದಿ ಶಿರವರಿಪೆನೆನುತಿಹ್ಯದು ಪರಮ ವೈರಾಗ್ಯದಿಂ ಚರಿಸುವುದರಲವದಿ ಪರಲೋಕ ಸಾಧನದಿರುತಿಹ್ಯದಕಟ3 ದೃಢದಿ ನಡೆವುದು ನಿಮಿಷ ಪೊಡವಿಜನಕೆ ಸತ್ಯ ನುಡಿಯು ಬೋಧಿಸುತಿಹ್ಯದು ದೃಢತರಬಲದಿ ತಾ ಕಡುಗಲಿಯೆನಿಸೊಂದೇ ಕೊಡೆಯಿಂದಲಾಳುವುದು ಪೊಡವಿಯಂ ಸಕಲ 4 ಕಾಮಿಸುತೀಪರಿ ಕಾಮಕೊಳಪಡಿಸೆನ್ನ ಪಾಮರನೆನಿಸುವುದು ಸ್ವಾಮಿ ಶ್ರೀರಾಮ ಎನ್ನ ಪಾಮರಮನಸಿನ ಕಾಮಿತವಳುಕಿಸಿ ಪ್ರೇಮದಿಂ ಸಲಹಯ್ಯ 5
--------------
ರಾಮದಾಸರು
ಎಂದಿಗೆ ನಿಮ್ಮ ಪದ ಕಾಂಬೆನೊ | ಗುರು ಎಂದಿಗೆ ನಿಮ್ಮ ಪದ ಕಾಂಬೆನೊ ಪ. ಎಂದಿಗೆ ನಿಮ್ಮ ಕಾಂಬೆ ಅಂದಿಗೆ ಮುಕ್ತಳಹೆ ಅ.ಪ. ಸಕಲ ಶಾಸ್ತ್ರಗಳನೆ ಶೋಧಿಸಿ | ಬಹು ಅಕಳಂಕ ತತ್ವವ ಸಾಧಿಸಿ | ಬೇಗ ಮುಕುತಿ ಯೋಗ್ಯರಿಗೆಲ್ಲ ಸುಖವ ತೋರುವ ಗುರು 1 ಮನದಿ ನೆಲಸಿ ಲೀಲೆ ತೋರುತ | ದೃಢ ಮನದಿ ಮನಸಿಜನ ಗೆಲ್ಲುತ | ದೇವ ಮನಸಿಜನಯ್ಯನ ಮನಸಿನೊಳ್ ತೋರುತ 2 ಕಷ್ಟಪಡುವುದು ಕಾಣುತ | ಬಹು ತುಷ್ಟರಾಗಿ ಅಭಯ ನೀಡುತ | ಮನ ಮುಟ್ಟಿ ರಕ್ಷಿಪೆನೆಂದು ಇಷ್ಟು ಸಲಿಪ ಗುರು 3 ನರಹರಿ ಧ್ಯಾನಿಪ ಶ್ರೀ ಗುರು | ಬಹು ಕರುಣಾಳುವೆ ದೇವತರು | ನಿಮ್ಮ ಅರಘಳಿಗೆ ಬಿಟ್ಟು ಇರಲಾರೆ ಧರೆಯೊಳು 4 ಮುಕ್ತಿ ಸೌಭಾಗ್ಯವ ನೀಡುವ | ಬಹು ಶಕ್ತರಹುದು ನಿಮ್ಮ ಭಾವವ | ನಾನು ಎತ್ತ ಯೋಚಿಸೆ ಕಾಣೆ ಸತ್ಯವಚನವಿದು 5 ಆನಂದಪಡಿಸುವ ಶ್ರೀ ಗುರು | ನಿಮ್ಮ ಏನೆಂದು ಸ್ತುತಿಹಲಿ ಪಾಮರರು | ನಿಮ್ಮ ಕಾಣರು ಜಗದಲಿ ಏನೆಂಬೆ ಮಹಿಮೆಯ 6 ಗೋಪಾಲಕೃಷ್ಣವಿಠ್ಠಲನ | ಶುಭ ರೂಪವ ತೋರುವ ಕಾರುಣ್ಯ | ದೇವ ಪರಿ ನಿಮ್ಮ ಸ್ತುತಿಸಿ ನಾ ಪಾರು ಕಾಂಬೆನು 7
--------------
ಅಂಬಾಬಾಯಿ
ಎಂದಿಗೆ ನೀ ಕರುಣಿಸುವಿ ಸುಂದರಾಂಗ ಎನ್ನೊಳು ಕುಂದಿ ಪೋದೆನಲ್ಲೊ ಬೇಗ ಬಂದು ಕಾಯೊ ಕರುಣಾಳು ಪ. ಧರ್ಮ ಕರ್ಮಗಳು ಮಾಳ್ಪ ಮರ್ಮವರಿಯದಿದ್ದರು ಭರ್ಮದಾಶೆಗಾಗಿ ಹೀನ ಕರ್ಮದೊಳಗೆ ಬಿದ್ದರು ದುರ್ಮದಾಂಧರನು ಗೆಲುವ ನಿರ್ಮಲ ಚಿದಾತ್ಮ ನಿನ್ನ ಹಮ್ರ್ಯದ ಮುಂದೊದರಿ ಸರ್ವಶರ್ಮಪೊಂದಿಚ್ಛಿಸುವೆನು 1 ಜೀಯ ನಿನ್ನ ಪೊಗಳಿ ಪಾಡುವಾಯವಿರಲು ಸಾಕಯ್ಯ ರಾಯರೊಲವು ತನ್ನಂತೆ ನಿರಾಯಾಸದಿಂದಹುದೈಯ್ಯ ವಾಯುವೀಯ ಜನರ ಕೂಡಿ ಮಾಯ ಗೆಲಲು ಮಾನವೀಯ ಕಾಯವನ್ನು ನೋಯದಂತೆ ಕಾಯೊ ಸಕಲದಾಯಕಾರಿ 2 ನಿತ್ಯಾನಂದ ನಿನ್ನ ಪಾಡಿ ಹೊತ್ತ ಕಳೆವ ಕಾರ್ಯಕ್ಕೆ ಒತ್ತಿ ಬರುವ ವಿಘ್ನಬಾಧೆ ಹತ್ತದಂತೆ ಓಡಿಸು ಸತ್ಯರಮಣ ಶರಣ ಪುರುಷೋತ್ತಮ ಶ್ರೀ ವೆಂಕಟೇಶ ಚಿತ್ತದಲ್ಲಿ ನಿನ್ನ ದಿವ್ಯ ಮೂರ್ತಿದೋರೊ ಮರಿಯದಿರು 3
--------------
ತುಪಾಕಿ ವೆಂಕಟರಮಣಾಚಾರ್ಯ
ಎಂದಿಗೆನಗೆ ಬುದ್ಧಿ ಬಂದಿತೋ ಹರಿಯೆ ಇಂದೀವರಾಕ್ಷ ನೀನೆ ಗತಿ ದೊರೆಯೆ ಪ. ಕಣ್ಣಿದಿರಲಿ ಕಂಡು ಕಾಲಗತಿಗಳನ್ನು ತನ್ನ ಸಂಸ್ಥಿತಿ ಮುಂದೆಂತಾಹುದನು ಚೆನ್ನಾಗಿ ಗ್ರಹಿಸದೆ ಚಪಲ ಚಿತ್ತದಿ ಗೃಹ ಸನ್ಮಹದಲಿ ಮನವನಿಟ್ಟು ಬಳಲುವೆ 1 ಸಾಗದ ಕಾರ್ಯವ ಸುಲಭವೆಂದೆಣಿಸಿದ- ರಾಗದು ಹಗಲಿರಳೊರಳಿದರು ನಾಗಶಯನ ನೀನು ನಿರ್ಣಯಿಸಿದ ರೀತಿ ಯಾಗುವದೆಂಬುದನರಿಯದೆ ಮರುಳಾದೆ 2 ಇಂತಾದ ಮ್ಯಾಲೆ ಶ್ರೀಕಾಂತ ನೀ ದೊರಕುವ- ದೆಂತು ಸಂಘಟ್ಟಿಪದೋ ನಾನರಿಯೆ ಕಂತುಜನಕ ವೆಂಕಟೇಶನೆ ಮಾನಸ ಭ್ರಾಂತಿಯ ಬಿಡಿಸು ನಿಶ್ಚಿಂತೆಯಿಂದಿರಿಸ 3
--------------
ತುಪಾಕಿ ವೆಂಕಟರಮಣಾಚಾರ್ಯ
ಎಂದಿಗ್ಯಾಹೋದೋ ನಿನ್ನ ದರುಶನ ಪ ವೇಳೆ ತಪ್ಪದೆ ಊಳಿಗವನು ಧ್ಯಾನ ಮಾಳ್ಪ ನಿನಾಳುಗಳ ಸಂಗ 1 ನಿನ್ನ ಮೂರ್ತಿಗಳ್ಧ್ಯಾನ ಮಾಡುವ ಉನ್ನಂಥಾ ಗುಣಯೆನ್ನ ಸೇರ್ವದೋ 2 ತ್ರಿಜಗವಂದಿತ ಕುಜನನಿಂದಿತ ಭುಜಗಶಯನ ಶ್ರೀ ವಿಜಯವಿಠ್ಠಲನೇ 3
--------------
ವಿಜಯದಾಸ
ಎಂದಿದ್ದರೀ ಕೊಂಪೆ ಎನಗೆ ನಂಬಿಕೆಯಿಲ್ಲ ಪ ಮುಂದರಿತು ಶ್ರೀಹರಿಯ ಭಜಿಸುವುದು ಲೇಸುಅ ಎಲುವುಗಳು ತೊಲೆಜಂತೆ ನರಗಳವು ಬಿಗಿದಂತೆಬಲಿದ ಚರ್ಮವು ಮೇಲು ಹೊದಿಕೆಯಂತೆಗಳಗಳನೆ ನುಡಿವ ನಾಲಗೆ ಗಂಟೆಯುಲಿಯಂತೆಕೆಲಕಾಲಕೀ ಕೊಂಪೆ ಕಡೆಗಾಹುದಂತೆ 1 ಕಂಡಿಗಳು ಒಂಬತ್ತು ಕಳಬಂಟರೈವರುಅಂಡಲೆವುದೊತ್ತಿನಲಿ ಷಡುವರ್ಗವುಮಂಡಲಕೆ ಹೊಸಪರಿಯ ಮನ್ಮಥನ ಠಾಣ್ಯವಿದುಮಂಡೆ ಹೋಗುವುದನ್ನು ಅರಿಯದೀ ಕೊಂಪೆ2 ಕೊಂಪೆಯಲಿ ಶೃಂಗಾರ ಕೊಂಡಾಡಲಳವಲ್ಲಕೆಂಪು ಬಣ್ಣಗಳಿಂದ ಚೆನ್ನಾಯಿತುಇಂಪಿನಲಿ ಕಾಗಿನೆಲೆಯಾದಿಕೇಶವನನ್ನುಸೊಂಪಿನಲಿ ನೆನೆನೆನೆದು ಸುಖಿಯಾಗು ಮನುಜಾ 3
--------------
ಕನಕದಾಸ