ಒಟ್ಟು 957 ಕಡೆಗಳಲ್ಲಿ , 97 ದಾಸರು , 743 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಧರ್ಮವೆಂಬ ಸಂಬಳವ ಗಳಿಸಿಕೊಳ್ಳಿರೊ |ಹೆಮ್ಮೆಯಿಂದ ಈ ಶರೀರ ನಂಬಬೇಡಿ ಕಾಣಿರೊ ಪ.ಅಟ್ಟ ಅಡಿಗೆ ಉಣಲು ಕೊಡನು ಕೊಟ್ಟಸಾಲ ಕೇಳಗೊಡನು |ಪೆಟ್ಟಿಗೆ ತುಂಬ ಹಣವು ಇದ್ದರೆ ಕೊಟ್ಟೆನೆಂದರೆಬಿಡನು ಯಮನು 1ಮಾಳಿಗೆ ಮನೆಯ ಇರಲು ಜಾಳಿಗೆ ತುಂಬಹೊನ್ನು ಇರಲು |ಆಳುಮಂದಿ ಕುದುರೆ ಇದ್ದರೆ ಬೀಳುಗೊಡದೆಯಮನು ಬಿಡನು 2ವ್ಯರ್ಥವಾದ ಈ ಶರೀರ ಸತ್ಯವೆಂದು ನಂಬಬೇಡಿ |ಕರ್ತುಪುರಂದರವಿಠಲರಾಯನ ಭಕ್ತಿಯಿಂದ ನೆನೆಯಿರೊ3
--------------
ಪುರಂದರದಾಸರು
ಧೂಪಾರತಿಯ ನೋಡುವ ಬನ್ನಿ ನಮ್ಮಗೋಪಾಲಕೃಷ್ಣನ ಪೂಜೆಯ ಸಮಯದಿ ಪ.ಅಗುರುಚಂದನ ಧೂಪ ಗುಗ್ಗುಳ ಸಾಮ್ರಾಣಿಮಘಮಘಿಸುವ ಧೂಪದಾರತಿಯು ||ಮಿಗಿಲಾದ ಏಕಾಂತ ಭಕ್ತಿಯಲಿ ನಮ್ಮಜಗನ್ನಾಥ ಕೃಷ್ಣನ ದೇವರ ಪೂಜೆಯ 1ಮದ್ದಳೆ ಜಾಂಗಟಿ ತಾಳ ತಮ್ಮಟೆಭೇರಿತದ್ಧಿಮಿ ಧಿಮಿಕೆಂಬ ನಾದಗಳು ||ಹೊದ್ದಿದಧವಳ ಶಂಖದ ಘೋಷಣಂಗಳಪದ್ಮನಾಭನ ದಿವ್ಯ ದೇವರ ಪೂಜೆಯ 2ಢಣ ಢಣ ಢಣರೆಂಬ ತಾಳ ದಂಡಿಗೆವೇಣುಢಣಕು ಧಿಮಿಕು ಎಂಬ ಮದ್ದಳೆಯು ||ಝಣಿಝಣಿಸುವ ವೀಣೆ ಕಿನ್ನರಿ ಸ್ವರಗಳಘನರಾಗದಿಂದಲಿ ಹಾಡುತ ಪಾಡುತ 3ಮುತ್ತು ಛತ್ರ ಚಾಮರ ಪತಾಕ ಧ್ವಜರತ್ನ ಕೆಚ್ಚಿದ ಪದಕ ಹಾರಗಳು ||ಮತ್ತೆ ಕೋಟಿಸೂರ್ಯ ಪ್ರಭೆಯ ಧಿಕ್ಕರಿಸುವಸತ್ಯಭಾಮೆ ರುಕ್ಮಿಣಿಯರರಸನ 4ಹರ ಬ್ರಹ್ಮಸುರಪತಿ ದೇವತೆ ಮೊದಲಾದಪರಮ ಪಾವನಮೂರ್ತಿ ಪುರುಷೋತ್ತಮನ ||ಪರದೈವತವೆಂದು ಬಿರುದು ಪೊಗಳಿಸಿಕೊಂಬಪುರಂದರವಿಠಲನ ಪೂಜೆಯ ಕಾಲದ 5
--------------
ಪುರಂದರದಾಸರು
ನಂಬಬೇಡ ನಾರಿಯರನುಹಂಬಲಿಸಿ ಹಾರಯಿಸಬೇಡಅಂಬುಜಾಕ್ಷಿಯರೊಲುಮೆ ಬಯಲುಡಂಬಕವೆಂದು ತಿಳಿಯಿರೊ ಪ.ನೋಟವೆಲ್ಲ ಪುಸಿಯು - ಸತಿಯರಾಟವೆಲ್ಲ ಸಂಚು - ಸನ್ನೆಕೂಟವೆಲ್ಲ ಗನ್ನ - ಘಾತುಕನೋಟವೆಲ್ಲ ವಂಚನೆವಾತಬದ್ಧ ಹೆಂಗಳಲ್ಲಿಕೋಟಲೆಗೊಂಡು ತಿರುಗಬೇಡಮಾಟಗಾತಿಯರೊಲುಮೆ ಬಯಲುಬೂಟಕವೆಂದು ತಿಳಿಯಿರೊ 1ಸೋತನೆಂದು ವಿಟಗೆ ದೈನ್ಯಮಾತನಾಡಿ ಮರುಳಗೊಳಸಿಕಾತರವ ಹುಟ್ಟಿಸಿ ಆವನಮಾತೆ - ಪಿತರ ತೊಲಗಿಸಿಪ್ರೀತಿ ಬಡಿಸಿ ಹಣವ ಸೆಳೆದುರೀತಿಗೆಡಿಸಿ ಕಡೆಯಲವನಕೋತಿಯಂತೆ ಮಾಡಿ ಬಿಡುವಚಾತಿಕಾರ್ತಿ ಹೆಂಗಳೆಯರ 2ಧರೆಯ ಜನರ ಮೋಹಕೆಳಸಿಭರದಿ ನೆಟ್ಟು ಕೆಡಲುಬೇಡಎರೆಳೆಂಗಳ ಹೆಂಗಳೊಲುಮೆಗುರುಳೆ ನೀರ ಮೇಲಿನಮರೆಯಬೇಡ ಗುರುಮಂತ್ರವಸ್ಥಿರವಿಲ್ಲದ ಜನ್ಮದಲ್ಲಿಕರುಣನಿಧಿ ಪುರಂದರವಿಠಲನಚರಣಸ್ಮರಣೆ ಮಾಡಿರೊ3
--------------
ಪುರಂದರದಾಸರು
ನಂಬಿ ಚೊಕ್ಕಟಿಂಬು ಪಡೆಯಿರೈ ಪ.ಇಂಬುಪಡೆದು ಹರಿಯಚರಣಅಂಬುಜಬಂಡುಂಡು ಮಿಕ್ಕಹಂಬಲವ ಉಳಿದುಭೂರಿಸಂಭ್ರ್ರಮಿಸುವವರಕೇಳಿಅ.ಪ.ಹರಿವ ಮನವಕಟ್ಟಿವಿೂರಿಬರುವ ದುರಿತಕಂಜದೆ ಸುತ್ತಿರುವ ಮಾಯಾಪಾಶ ಹರಿವ ಹರುವನಾಲಿಸಿಗುರುವಿನಾಜ್ಞಾದಂತೆ ಪುಣ್ಯದುರುಹು ಬಲ್ಲ ಪ್ರೇಕ್ಷಕಲ್ಪತರುವ ಪಿಡಿದು ನಷ್ಟ ಕಳೇವರವು ತನ್ನದಲ್ಲವೆಂದು 1ಆವಾಗೆ ಸಚ್ಛಾಸ್ತ್ರ ಶ್ರವಣಭಾವಗುಟ್ಟುಕೇಳಿಭಕುತಿಠಾವುಗಂಡು ಹಸಿವು ತೃಷೆಯಕಾವಘಸಣೆಯಸಾವಿಗ್ಹೊಂದದಂತೆ ಸಾಧುಸೇವ್ಯಗರುಡಗಮನನಂಘ್ರಿಸೇವೆಗಧ್ಯಕ್ಷಿತರಾಗಿ ನೀವೀಗ ವೈರಾಗ್ಯ ಬಲಿದು 2ಕ್ಷುದ್ರಭೋಗಬಯಸದೆ ದಾರಿದ್ರ ಭೀತನಾಗದೆ ಸಮುದ್ರಭವನನೆಂದು ಶ್ರೀಮುದ್ರಾಭರಣದಭದ್ರ ಭಾಗವತನು ಆಭದ್ರ ಬುದ್ಧಿಯಲ್ಲಿ ಕೂಡಿಚಿದ್ರೂಪ ಪ್ರಸನ್ನವೆಂಕಟಾದ್ರಿ ಭೋಗಶಯನನೆಂದು 3
--------------
ಪ್ರಸನ್ನವೆಂಕಟದಾಸರು
ನರಜನ್ಮ ಬಂದುದಕೆ ಇಪ್ಪತ್ತು ಆರುಕಳೆ|ವರದೊಳಿಹ ಹರಿರೂಪ ಚಿಂತಿಸುವದೂ ಪಎರಡನಂತದ ಮ್ಯಾಲೆ ಒಂಬತ್ತಧಿಕ ನೂರು |ಸ್ವರುಪದೊಳಗಿಹವು ಆಮ್ಯಾಲೆ ಇಚ್ಛಾ ||ವರಣದಲಿ ಒಂದು ಲಿಂಗದಲಿ ಆರೊಂದಧಿಕ |ಅರುವತ್ತು ರೂಪಗಳು ಉಂಟು ಕೇಳೀ 1ಎಪ್ಪತ್ತರೊಂಬತ್ತಧಿಕ ನೂರು ಅವ್ಯಕ್ತ- |ಕಿಪ್ಪವು ಅವಿದ್ಯದೊಳು ಯೇಳು ಅಧಿಕಾ ||ಇಪ್ಪತ್ತುಕರ್ಮಕಾಮಾವರಣದಲಿ ಮೂರು |ಇಪ್ಪತ್ತು ಮೂರು ಅರುವತ್ತು ಎಂಟೂ 2ಮಾರಮಣ ಜೀವ ಪರಮಾಚ್ಚಾದಿಕೆರಡರೊಳು |ಬ್ಯಾರೆ ಬ್ಯಾರಿಪ್ಪ ಒಂಬತ್ತು ರೂಪಾ ||ನಾರಾಯಣಾದಿ ಐದರೊಳಗೊಂದೊಂದೇವೆ |ತೋರುತಿಹವಜಪಿತನ ವಿಮಲ ಮೂರ್ತೀ 3ಎರಡು ಲಕ್ಷೆರಡು ಸಾವಿರದ ನಾನೂರು ಈ- |ರೆರಡಧಿಕ ತೊಂಬತ್ತು ಅನಿರುದ್ಧದೀ ||ಮೆರವ ಶ್ರೀವಾಸುದೇವನಾರಾಯಣ ಕವಚದಿ |ಇರುವ ಒಂದೊಂದು ಆನಂದಮಯದೀ 4ಇನ್ನುವಿಜ್ಞಾನಮನವಾಙುï ಶ್ರೋತೃ ಚಕ್ಷು ಪ್ರಾ- |ಣನ್ನಮಯ ಹೀಗೆ ಯೇಳೊಂದರೊಳಗೇ ||ವನ್ನಜಾಕ್ಷನರೂಪಒಂದೊಂದೆ ಇಹವೆಂದು |ಚೆನ್ನಾಗಿ ಭಕ್ತಿಪೂರ್ವಕ ತಿಳಿವದೂ5ಸ್ಥೂಲವಾದಂಗದಲಿ ಮೂವತ್ತೆರಡು ಕೋಟಿ |ಯೇಳೂ ಲಕ್ಷದ ಮೇಲೆ ರಮ್ಯವಾಗೀ ||ಶ್ರೀಲೋಲ ತೊಂಬತ್ತು ಮೂರು ಸಾವಿರದ ಹದಿ- |ನೇಳಧಿಕ ಎಂಟು ಶತರೂಪದಲಿಹಾ 6ಈರನಂತ ಮೂವತ್ತೆರಡು ಕೋಟಿ ನವಲಕ್ಷ |ಆರಧಿಕ ತೊಂಬತ್ತು ಸಾವಿರೆಂಟೂ ||ನೂರು ಐವತ್ತೆಂಟು ರೂಪಗಳು ಸ್ತಂಭಾದಿ |ವಾರಿಜಭವಾಂತ ದೇಹಗಳೊಳೀಹವೂ 7ಮೋದತೀರ್ಥರ ಮತವ ಪೊಂದಿದವರೀರೂಪ|ಸಾದರದಿ ಚಿಂತಿಸುವದೇ ಮೋಕ್ಷಕೇ ||ಸಾಧನವಿದು ಸಾತ್ವಿಕರಿಗಲ್ಲದಲೆ ಅನ್ಯ- |ವಾದಿಗಳಿಗುಪದೇಶ ಮಾಡಸಲ್ಲಾ8ಪ್ರಾಣೇಶ ವಿಠ್ಠಲನ ಸುಮೂರ್ತಿ ಈ ಪರಿಯಿಂದ |ಧ್ಯಾನಕ್ಕೆ ತಂದು ಹಿಗ್ಗದಲೆ ಬರಿದೇ ||ಏನು ಓದಿದರು ಕೇಳಿದರು ತಪ ಮಾಡಿದರು |ಆನಿ ತಿಂದಕಪಿತ್ಥದಂತೆರಿವದೂ 9
--------------
ಪ್ರಾಣೇಶದಾಸರು
ನಾಮ ಭಜೇ ಹರಿನಾಮ ಭಜೇಹರಿನಾಮ ಭಜೇಹರಿನಾಮ ಭಜೇಪಕಾಮಿತದಾಯಕ ಕಾಮಧೇನು ಭಕ್ತಪ್ರೇಮಮಂದಿರನ ನಾಮ ಭಜೇ ಅ.ಪವಂದಿತ ಅಜಹರಮಂದರಗಿರಿಧರಸುಂದರಮೂರುತಿಪಾದ ಭಜೇಸಿಂಧುಶಯನ ಗೋಪೀಕಂದ ಮುಕ್ಕುಂದಗೋವಿಂದನ ಆನಂದ ನಾಮ ಭಜೇ 1ಪಂಕಜಪಾಣಿಪಾದ ಕಿಂಕರಪಾಲಕಳಂಕಮಹಿಮನಾಪಾದ ಭಜೇಕೊಂಕಿನ ದೈತ್ಯರ ಬಿಂಕಮುರಿದ ಮಹಶಂಖಪಾಣಿಯ ನಾಮ ಭಜೇ 2ಶೇಷಶಯನ ಜಗದೀಶ ಪರಮಪ್ರಕಾಶ ನಿರಂಜನಪಾದ ಭಜೇವಾಸುದೇವಭವನಾಶ ಜಾನಕಿಪ್ರಾಣೇಶನ ವಿಮಲನಾಮ ಭಜೇ 3ನೀಲಮೇಘಶ್ಯಾಮಶೂಲಪಾಣಿಸಖಬಾಲಗೋಪಾಲನ ಶ್ರೀಪಾದ ಭಜೇಪಾಲ ಮೂಲೋಕನ ಮೇಲು ಮೇಲೆನ್ನುತಕಾಲಕಾಲದಿಸುನಾಮಭಜೇ4ಜಯ ಜಯಅಚ್ಯುತಜಯ ಜಯ ಸಚ್ಚಿತ್ತಜಯ ಜಯಾನಂತನಪಾದಭಜೇಜಯ ಜಯ ಸ್ಮರಪಿತ ಜಯ ಜಯ ಮುಕ್ತೀನಾಥಜಯವೆಂದು ಶ್ರೀರಾಮ ನಾಮ ಭಜೇ 5
--------------
ರಾಮದಾಸರು
ನಾರದ ಕೊರವಂಜಿ1ಜಯ ಜಯ ಜಯ ಜಯ ಜಯ ಜಯ ಪ.ಶ್ರೀ ರಮಾರಮಣ ಜಯ ಶ್ರೀಕರ ಗುಣಾಬ್ಧಿ ಜಯಶ್ರೀ ರುಕ್ಮಿಣೀಶ ಜಯ ಶ್ರೀ ಶ್ರೀನಿವಾಸ ಜಯನೀರಚರಕಮಠಕಿಟಿನೃಹರಿವಟುಭೃಗುಜ ರಘುವೀರ ಯದುಪತೆಬುದ್ಧಕಲ್ಕಿ ಸ್ವರೂಪಾ ಜಯ ಜಯ1ಶ್ರೀ ಮತ್ಕಪಿಲ ಋಷಭ ಯಜÕದತ್ತ ಕಂಸ್ತುಘ್ನ ?ಕೌಮಾರ ವ್ಯಾಸ ಹಯಗ್ರೀವ ಶ್ರೀಮದ್ದಜಿತ ಜಯಸ್ವಾಮಿ ಮಹಿದಾಸ ತಾಪಸ ಉರುಕ್ರಮಶೂಲಿವ್ಯಾಮೋಹ ಧನ್ವಂತರೆ ಹಂಸ ಶುಕ್ಲಾ ಜಯ ಜಯ 2ಆನಂದ ಜ್ಞಾನ ಬಲಮಯ ಚಿತ್‍ಸ್ವರೂಪ ಜಯಅನಂತ ಮಹಿಮ ವೈರಾಜ ಪುರುಷೋತ್ತಮ ಜಯಅನಂತ ಬ್ರಹ್ಮ ರುದ್ರೇಂದ್ರಾದಿಸೇವ್ಯಜಯಅನಂತ ಜೀವಗ ಪ್ರಸನ್ವೆಂಕಟ ಕೃಷ್ಣಾ ಜಯ ಜಯ 32ಶರಣು ಮಂಗಳ ದೇವತೇವರಶರಣುಚಿತ್ಸುಖಸಾಗರಶರಣುಅಗಣಿತಗುಣಶುಭಾಕರಶÀರಣು ವೆಂಕಟ ಮಂದಿರ 4ದುರುಳದೈತ್ಯರು ಸೊಕ್ಕಿ ವರದಲಿಧರೆಗೆ ಕಂಬನಿ ತರಿಸಲುತ್ವರದಿ ಸುರರಿಗೆ ಮೊರೆಯನಿಟ್ಟಳುಧರಿಸಲಾರೆನು ಎನುತಲಿ 5ಸರಸಿಜೋದ್ಭವಭವಪುರುಹೂತರರಿದು ಚಿಂತಿಸಿ ಮನದಲಿವರಪಯೋನಿಧಿಗೈದಿ ಸ್ತುತಿಸಲುಕರುಣದಲಿ ಅವತರಿಸಿದೆ 6ಬಂದು ಧರ್ಮದ ವೃಂದ ರಕ್ಷಿಪೆನೆಂದು ದೀಕ್ಷೆಯವಿಡಿದು ನೀಅಂದಗೆಡಿಸುತ ದನುಜನಿಕರವಹೊಂದಿ ದ್ವಾರಕ ನಗರವ 7ಇಂದಿರೆಯು ನಿನ್ನಿಚ್ಛೆಯನುಸರದಿಂದ ಕ್ರೀಡಿಪಳನುದಿನÀಮಂದಜನರಿಗೆ ಮೋಹಿಸುತನರರಂದದಲಿ ತೋರಿದೆ ಹರೆ 8ದೇವಋಷಿ ನಾರದನು ಶ್ರೀಪದಸೇವೆಗÉೂೀಸುಗ ಕೊರವಿಯಭಾವದಲಿ ಜಗದಂಬೆ ರುಕ್ಮಿಣಿದೇವಿಯಳ ಬಳಿಗೈದು ತಾ 9ದೇವ ನಿನ್ನಯ ಬರವ ಬೆಸಸಿದಕೋವಿದತೆಯನು ಪೇಳುವೆಶ್ರೀವರ ಪ್ರಸನ್ವೆಂಕಟ ಕೃಷ್ಣಪಾವನ ಮತಿಯ ಕರುಣಿಸೊ 103ಶ್ರೀ ರಂಭೆ ಭೀಷ್ಮಕನಭೂರಿಪುಣ್ಯದ ಗರ್ಭವಾರಿಧಿಯಲ್ಲಿ ಜನಿಸಿನಾರಿ ರುಕ್ಮಿಣಿಯೆಂಬ ಚಾರುನಾಮದಿಕಳೆಯೇರಿ ಬೆಳೆದಳಂದವ್ವೆ 11ಜನನಿಜನಕರೆಲ್ಲ ತನುಜೆಯ ಹರಿಯಂಘ್ರಿವನಜಕೆ ಕೊಡಬೇಕೆನ್ನೆನೆನೆದು ತಾನೊಂದು ರುಕ್ಮನು ದಮಘೋಷನತನುಜಗೆ ತಂಗಿಯನು 12ಕೈಗೂಡಿಸುವೆನೆಂಬ ವೈಭವದಲ್ಲಿರೆವೈಮನಸದೊಳು ಕನ್ಯೆಯುಸುಯ್ಗರಿಯುತ ಮುರವೈರಿ ಪ್ರಸನ್ವೆಂಕಟಕೃಷ್ಣಯ್ಯನೊಳ್ ಮನವಿಟ್ಟಿರೆ 134ದನುಜಮಥನÀ ಹರಿಸೇವೆ ಇದೆಂದುಅನಿಮಿಷಮುನಿ ಧರೆಗಿಳಿದು ತಾ ಬಂದುವನಿತೆ ಕೊರವಂಜಿಯ ವೇಷವÀ ಧರಿಸಿಜನಪ ಭೀಷ್ಮಕನೋಪವನದಲ್ಲಿ ನೆಲಸಿ 14ಹಲವು ಕೊರವಿಯರ ಕೂಡಿ ಸಿಂಗರದಿಬೆಲೆ ಇಲ್ಲದುಡಿಗೆ ತೊಡಿಗೆ ಇಟ್ಟು ಮುದದಿಇಳೆಯ ಜನರು ಮೋಹಿಸುವಪರಿಇಹಳುಕೆಳದೇರ ಗಡಣದಲಿ ಚೆಲುವೆ ಒಪ್ಪಿದಳು 15ಮಂಜುಗಾವಿಯ ಸೀರೆ ನಿರಿತೆಗೆದುಟ್ಟುಕೆಂಜೆಡೆ ಬಿಟ್ಟೋರೆದುರುಬಿನ ಕಟ್ಟುಪಂಜಿನೋಲೆಯ ಮೂಗುತಿಯ ಬಲಿದಿಟ್ಟು ಗುಲಗಂಜಿ ಹೊಂದಾಳೆ ಸರಗಳಳವಟ್ಟು 16ಕಂಚುಕಪುಟ ಬಿಗುಪೇರಿದ ಕಟ್ಟುಚಂಚಲನೇತ್ರಕಂಜನ ಕಾವಲಿಟ್ಟುಮಿಂಚುವಾಭರಣಿಟ್ಟು ಪ್ರಸನ್ವೆಂಕಟ ಕೃಷ್ಣನಂ ಚಿಂತಿಸಿ ಜಯ ಜಯಯೆಂದಳುಕೊರವಿ175ಅಡಿಗಡಿಗೆ ಝಣ ಝಣರೆಂದು ನಡೆತಂದು ನಡೆತಂದುಮಡದಿ ರಾಜಬೀದಿಯಲಿನಿಂದು18ಮೃಡಗಹಿತನ ಪಟ್ಟದಾನೆ ಮಂದಗಮನೆ ಮಂದಗಮನೆಕಡುಮೌನಿ ಜನರ ಮೋಹಿನೆ 19ಚಪಲ ನೋಟಕೆ ನಾಗರಿಕರು ನೋಟಕರು ನೋಟಕರುಲಿಪಿಯ ಚಿತ್ರದೊಲು ನಿಂತಿಹರು 20ನಿಪುಣೆಕೊರವಿಶ್ರೀಪ್ರಸನ್ವೆಂಕಟ ಕೃಷ್ಣನ್ನ ಕೃಷ್ಣನ್ನಶ್ರೀಪ್ರÀ್ರಸಾದವ ಬೇಡುತಿದ್ದಳಣ್ಣ 216ಬೆಡಗಿನ ಗಮನದಿ ಎಡಬಲಕೊಲಿದುಕಡಗ ಶಂಖದ ಬಳೆ ನುಡಿಸುತ ನಡೆದುಅಡಿಗೊಮ್ಮೆ ತಿರುಮಲ ಒಡೆಯನ ನೆನೆದು ತಕ್ಕಡ ಧಿಗಿಧಿಮಿಕೆಂದುಜಡಿದುತಾಳ್ವಿಡಿದು22ತಿಗುರಿದ ಗಂಧ ಸೆಳ್ಳುಗುರಿನ ನಾಮಮೃಗಮದದ ಬೊಟ್ಟಿನ ನಗೆಮೊಗದ ಪ್ರೇಮಮಗುವನುಡಿಯಲೆತ್ತಿ ಜಗಚ್ಚರಿಯಮ್ಮಹೆಗಲ ರನ್ನದ ಬುಟ್ಟಿ ಮುಳ್ಳುವಿಡಿದಮ್ಮ 23ನಗರದ ಜನದ ಕಣ್ಣಿಗೆ ಕೌತುಕೆನಿಸಿಬಗೆ ಬಗೆ ಒಗಟು ಮಾತುಗಳನುಚ್ಚರಿಸಿನಗರಾಧಿಪತಿಯ ಮನೆಯಕೇಳಿನಡೆದುಮಿಗೆ ಪ್ರಸನ್ವೆಂಕಟ ಕೃಷ್ಣಗೆ ಕೈಮುಗಿದು 247ಬ್ರಾಹ್ಮರ ಕೇರಿಗೆ ಬಂದಳಾಕೊರವಿಪರಬ್ರಹ್ಮನ ಗುರುತ ಕೇಳುತ್ತನಮ್ಮಮ್ಮ ನಮ್ಮವ್ವೆ ನಮ್ಮಜ್ಜಿ ನೀಡೆಂದುಸನ್ಮಾನದಾಲಯವ ಪೊಗುತಾ 25ಇಂತಪ್ಪ ಸೊಬಗುಳ್ಳ ಕೊರವಿಯನು ಕಂಡುನೃಪನಂತಃಪುರದ ಸತಿಯರೈದಿಕಂತುವಿನ ಜನನಿಗೆ ಕರವೆರಡು ಮುಗಿದು ಏಕಾಂತ ಪೇಳಿದರು ಚೆನ್ನಾಗಿ 26ಓರ್ವ ಕಾಲಜ್ಞಾನ ಪೇಳ್ವ ಕೊರವಮ್ಮ ನಮ್ಮೂರ್ವಳಗೆ ತಿರುಗುತಿಹಳಮ್ಮಸರ್ವೇಶ ಪ್ರಸನ್ವೆಂಕಟ ಕೃಷ್ಣನಾಗಮದನಿರ್ವಚನ ಕರೆಸಿ ಕೇಳಮ್ಮ 278ಬಂದಳು ನೃಪನರಮನೆಗೆ ತಾನಿಂದಲ್ಲಿ ನಿಲ್ಲದೆ ಕಿಲಿಕಿಲಿ ನಗುತಾ ಕುಲು ಕುಲು ನಗುತಾ ಪ.ಬಂದ್ಹೇಳಿದ ನುಡಿಗೇಳ್ದು ಪೂರ್ಣೇಂದುವದನೆ ಮುದತಾಳ್ದುಮಂದಿರಕೆ ಕರೆಸಿದಳು ನಲವಿಂದಲಿ ಬಲು ಬೆಡಗಿನ ಕೊರವಂಜಿ 28ತಳಪಿನ ಮುತ್ತಿನ ಕಟ್ಟುಶುಭತಿಲಕದ ಹಚ್ಚೆಯ ಬಟ್ಟುಅಲುಗುವ ಮೂಗುತಿಯಬಲೆ ಸಲೆಬಳುಕುತ ಬಡನಡುವಿನ ಚಪಲೆ 29ಬಟುಗಲ್ಲದ ಮಕರಿಕಾಪತ್ರ ಪವಳದುಟಿ ದಾಡಿಮರದಗೋತ್ರವಿಟಮೃಗಸ್ಮರಶರ ನೇತ್ರ ಕೊರಳ್ದಟಿಸುವಮಣಿಮುತ್ತಿನ್ಹಾರಗಳೊಲಪಲಿ30ಇಟ್ಟೆಡೆ ಮೊಲೆಯ ಪಟ್ಟಿಕೆಯು ಶ್ರೋಣಿಮುಟ್ಟುವ ಮುಡಿಯ ಮಾಲಿಕೆಯುಬಿಟ್ಟ ಮುಂಜೆರಗಮಲಿಕೆಯು ಕಣ್ಣಿಟ್ಟ ಮೃಗಕೆ ಭ್ರೂಸ್ಮರಕಾರ್ಮುಕೆಯು 31ತೆಳ್ವೋದರದ ತ್ರಿವಳಿಯ ಜಗುಳಿಬೀಳ್ವ ಮಣಿಮುಕ್ತಾವಳಿಯಸಲ್ಲಲಿತ ಸಂಪಿಗೆ ಕಳೆಯ ಗೆಲ್ವಚೆಲ್ವೆಕೊರವಿಪುರವೀಥಿಯ ಬಳಿಯ32ಕಿಣಿ ಕಿಣಿ ರವದ ಕಿಂಕಿಣಿಯುಝಣ ಝಣತ್ಕಾರಿಪಂದುಗೆ ಮಣಿಯುಕಣಿ ಕಣಿ ಒಯ್ಯೆಂಬೊಕ್ಕಣಿಯು ಕುಚಕುಣಿ ಕುಣಿಸಿ ನಟಿಪ ನಡೆವಾಂಗನೆಯು 33ಸಿಂಗನ ಉಡಿಯಲ್ಲಿಕಟ್ಟಿಉತ್ಸಂಗದೊಳೊಲಪಿನ ದಿಟ್ಟಿರಂಗ ಶ್ರೀ ಪ್ರಸನ್ವೆಂಕಟ ಕೃಷ್ಣಾಂಗನೆಯನು ಕಾಂಬುವೆನೆಂಬ ತವಕದಿ 349ವಚನಪದುಮನಾಭನ ರಾಣಿ ರಾಣಿವಾಸದಲಿಯದುಕುಲೇಂದ್ರನ ಚರಣೋಚ್ಚಾರಣೆಯಲ್ಲಿರಲುಒದಗಿ ಬಂದಳುಕೊರವಿಕರೆಯುತ್ತ ತಾನುಚದುರ ಪ್ರಸನ್ವೆಂಕಟ ಕೃಷ್ಣನರಸಿಯನು 3510ಎಲ್ಲಿಹಳೆಲ್ಲ್ಲಿಹಳಾ ರಾಯನ ಮಗಳೆಲ್ಲಿಹಳೆ ನೀಡೆಯವ್ವನಲ್ಲೆ ಬಾ ನಲ್ಲೆ ಬಾ ನಲ್ಲೆ ಬಾ ರುಕ್ಮಿಣಿನಲ್ಲೆ ಬಾರೆ ಮುಂದಕವ್ವ 36ಬಲ್ಲೆ ನಾ ಬಲ್ಲೆ ನಿನ್ನಯ ಮನದೆಣಿಕೆಯಸೊಲ್ಲುವೆನೆ ನೀಡೆಯವ್ವನಿಲ್ಲದು ನಿಲ್ಲದಕ್ಕಿಯು ನಿನ್ನದ್ಹಸಿತ ಕೈಒಳ್ಳೆ ಕಜ್ಜಾಯ ನೀಡೆಯವ್ವ 37ಕೆಟ್ಟೋಗರಕೆ ಚಿತ್ತವಿಟ್ಟ ಕೊರವಿಯಲ್ಲಮೃಷ್ಟಾನ್ನವ ನೀಡೆಯವ್ವಶ್ರೇಷ್ಠಾದ ಶಾವಿಗೆ ಬಟ್ಟುವಿ ಪಾಯಸಹೊಟ್ಟೆ ತುಂಬ ನೀಡೆಯವ್ವ 38ಅಟ್ಟಿಟ್ಟ ಪಂಚವಿಧ ಭಕ್ಷ್ಯ ಎನಗಿಂದುಇಷ್ಟ ಕಾಣೆ ನೀಡೆಯವ್ವಇಷ್ಟುಣಲಿಕ್ಕೆನ್ನತುಷ್ಟಿಬಡಿಸಿ ಸತ್ಯಗೋಷ್ಠಿಕೇಳೆ ನೀಡೆಯವ್ವ39ಮನ್ನಣೆ ಇಲ್ಲದ ಮನೆಯ ಹೊಗುವಳಲ್ಲಕನ್ನೆ ಬಾರೆ ಮುಂದಕವ್ವಮುನ್ನ ರಕ್ಕಸನೊಯ್ದ ಮಡದಿಗೆ ಒಳಿತವನೆಲ್ಲ ಹೇಳಿದ್ದೆನವ್ವ 40ನಿನ್ನ ಪ್ರಾಣದ ಪ್ರಿಯನೊಬ್ಬನೆ ಪರದೈವಕನ್ನೆ ಕೇಳಜಕಾಮರವ್ವಕಣ್ಣಾರ ಕಾಂಬೆ ನಿನ್ನಣ್ಣನಪಾಟುಪ್ರಸನ್ನವೆಂಕಟ ಕೃಷ್ಣನಿಂದವ್ವ 4111ಚೂರ್ಣಿಕೆಈ ವಾಕ್ಯವಂಕೇಳಿತೀವಿ ತೋಷವ ತಾಳಿದೇವಿ ರುಕ್ಮಿಣಿಯಕ್ಕ ಪಾವನ ಹಾಸಂಗಿಯಿಕ್ಕಿಆವಲ್ಲಿಂ ಬಂದ್ಯವ್ವ ದೇವಲೋಕದ ಕೊರವೆಈ ಒಳ್ಳೆ ಮೆಚ್ಚು ಮಾತು ಆವಾಗನುಭವೆಂ ಮಾತೆಹೀಗೆಂದಾಸನ ಕೊಟ್ಟು ಬಾಗಿಲೊಳು ಕಾವಲಿಟ್ಟುಬೇಗ ಪ್ರಸನ್ವೆಂಕಟ ಕೃಷ್ಣನಾಗಮವ ಮನದಿ ಕೇಳ್ದಳವ್ವೆ 4212ಕುಳ್ಳಿರೆ ಕುಳ್ಳಿರೆ ಕುಳ್ಳಿರೆ ಕೊರವಂಜಿಫುಲ್ಲಬಾಣನಾನೆ ಕುಳ್ಳಿರೆಸೊಲ್ಲಮ್ಮ ಸೊಲ್ಲಮ್ಮ ಹಲವು ಮಾತಿನ ಜಾಣೆಎಲ್ಲ ಬಯಕೆಯನೆಲ್ಲ ಸೊಲ್ಲಮ್ಮ ಕೊರವಂಜಿ 43ಆದರದಾ ಮಾತ ಕೇಳುತ ಕುಳಿತಳುಯಾದವರರಸ ಮುಕುಂದನಕೋದಂಡಪಾಣಿ ತಿರುವೆಂಗಳ ಮೂರ್ತಿಯಪಾದಕೆ ಮಾಡಿದಳೊಂದನೆ ಕೊರವಂಜಿ 44ಮಣಿಮಯ ಬುಟ್ಟಿಯ ಎಡದಲಿಟ್ಟುಕೊಂಡುವನಿತೆ ಪದ್ಮಾಸನವಿಟ್ಟಳುಮಿನುಗುವ ಎಳೆನಗೆಯಣುಗನ್ನ ಮಲಗಿಸಿವನಿತೆ ರುಕ್ಮಿಣಿಯನ್ನು ಕರೆದಳು ಕೊರವಂಜಿ 45ಜಾಣೆ ಬಾರೆ ಸುಗುಜಾಣೆ ಬಾರೆ ನಾರಿಮಾಣಿಕಳೆಕಟ್ಟಾಣಿಬಾರೆವಾಣಿಪತಿಪಿತ ಪ್ರಸನ್ವೆಂಕಟ ಕೃಷ್ಣನರಾಣಿ ಬಾರೆಸುಪ್ಪಾಣಿಬಾರೆ ಕಲ್ಯಾಣಿ ಬಾರೆ ಫಣಿವೇಣಿ ಬಾರೆಶುಭಶ್ರೋಣಿ ಬಾರೆ ಎಂದು ಕರೆದಳು ಕೊರವಂಜಿ 4613ವಚನಅಮ್ಮ ರುಕ್ಮಿಣಿಯಮ್ಮ ಉಮ್ಮ್ಮಯವಟ್ಟುಮುಮ್ಮೊರದ ರತುನ ಮುತ್ತಿನ ಕಾಣಿಕಿಟ್ಟುಪರಬೊಮ್ಮಪ್ರಸನ್ವೆಂಕಟಕೃಷ್ಣನ ಅಡಿಗಳನಮ್ಮಿಸುತ ಮನೋರಥವÀ ಮನದಿ ಬೆಸಗೊಳ್ಳಲು 47ಉಂಡ ಊಟ ಕಂಡ ಕನಸು ಪುಂಡರೀಕಾಂಬಕಿಯೆತಂಡ ತಂಡದ ವಾರುತೆಗಳ ಪೇಳುವೆನು ಸಖಿಯೆಹಿಂಡುದೈವದಗಂಡಪ್ರಸನ್ವೆಂಕಟ ಕೃಷ್ಣನ ಕಣ್ಣಾರಕಂಡು ಸಾರುವಕೊರವಿಎಳ್ಳನಿತು ಸಟೆಯರಿಯೆ4815ಚೂರ್ಣಿಕೆಕಾಸಿನಾಸೆಯವಳು ನಾನಲ್ಲಭಾಷೆ ಹುಸಿದರೆ ಬಿರುದು ಬಿಸುಡುವೆನೆಲ್ಲಭಾಷೆ ಪಾಲಕರು ನಮ್ಮ ಸಿದ್ಧರೆಲ್ಲ ಲೇಸುಲೇಸೆಂದುಕೇಸಕ್ಕಿತಿಮ್ಮಯ್ಯನ ಬೆತ್ತವ ಮುಟ್ಟೆಲೆ ದುಂಡೆಎನ್ನ ಮನದ ದೈವ ಎನ್ನಕ್ಕ ಕೇಳೆಯವ್ವತಿರುಮಲೆ ತಿರುವೆಂಗಳಯ್ಯವರಅಹೋಬಲ ನರಸಿಂಗಯ್ಯಹರಿಕಂಚಿ ವರದರಾಜಯ್ಯಶಿರಿ ರಂಗದ ರಂಗರಾಯಯ್ಯಬದರಿಯ ನರನಾರಾಯಣಯ್ಯಪುಂಡರೀಕವರದ ಪಂಢರಿರಾಯ ಎಮ್ಮಉಡುಪ ಕುಲಜ ಮನ್ನಾರು ಕೃಷ್ಣಮ್ಮಒಡ್ಡಿಜಗನ್ನಾಥ ಅಲ್ಲಾಳನಾಥಯದುಗಿರಿನಾಥ ಶಿರಿಮುಷ್ಣನಾಥಕೃತಪುರದ ವೀರ ನಾರಾಯಣಕೊಲ್ಲಾಪುರದ ಕನ್ನೆ ವೇಲಾಪುರದ ಚೆನ್ನಅನಂತಶಯನ ಜನಾರ್ದನ್ನಅನವರತಪರಸನ್ನ ವೆಂಕಟ ಕೃಷ್ಣನ ಕನ್ನೆಇಂತಪ್ಪಾನೇಕ ದೈವ ಏಕವೆಂದು ಏಕಾನೇಕವೆಂದುನಂಬಿಪ್ಪೆನೆ ಕೇಳೆಯವ್ವ 4916ಇಂತಿಪ್ಪ ಎನ್ನ ಮನೆಯ ದೈವ ಅವರಂತವ ಬೊಮ್ಮರರಿಯರವ್ವ ವಿಶ್ರಾಂತಿಲಿ ಕೊಂಡಾಡುವೆನವ್ವ ನಾನುಕಂತುವಿನಣ್ಣನ ಮಗಳವ್ವ 50ಇಪ್ಪಲ್ಲಿಪ್ಪಕೊರವಿನಾನಲ್ಲ ಹೋಗಿಬಪ್ಪೆ ಹದಿನಾಲ್ಕು ಲೋಕಕೆಲ್ಲಛಪ್ಪನ್ನದೇಶಗಳ ಸುದ್ದೀನೆಲ್ಲಕೇಳಿಬಪ್ಪುವ ಕಜ್ಜವ ಕೃಷ್ಣ ಬಲ್ಲ 51ಆವಾವ ದೇಶದ ಸುದ್ದಿ ಕೇಳವ್ವ ನಿನ್ನಭಾವದ ಬಯಕೆಯನೆಲ್ಲ ಕೇಳವ್ವಶ್ರೀವರ ಪ್ರಸನ್ನವೆಂಕಟಾದ್ರಿ ಕೃಷ್ಣ ದ್ವಾರಕಿಂದಾವಾಗ ಬಪ್ಪನೆಂದು ಕೇಳವ್ವ 5217ಚೂರ್ಣಿಕೆಓಯಮ್ಮ ನಿನ್ನವರುಗಳು ಆ ಬಲಮಗು ಮದನಕಾಮಬುಡುಕ್ಕಾನೆ ಪರತಾನು ಚಿಂತಿಶೆ ಮಾಣಮ್ಮನಾ ತಿರುಕ್ಕಿ ವಂದ ದೇಶ ಐವತ್ತಾರು ಶೊಲ್ಲರೆಅಂಗ ವಂಗ ಕಳಿಂಗ ಕಾಂಬೋಜ ಭೋಟಕರ್ನಾಟಕ ಘೋಟ ಮಹಾಘೋಟಜಿನ್ನ ಮಹಾಜಿನ್ನ ಜೊನ್ನಗಕಾಶ್ಮೀರ ತುರುಷ್ಕಮಾಗಧಬಂಗಾಳ ಗೌಳ ಮಾಳವ ಮಲೆಯಾಳನೇಪಾಳ ಗೌಡ ಗುರ್ಜರ ಕೊಂಕಣದರ್ದುರಬರ್ಬರ ಸೌರಾಷ್ಟ್ರ ಮಹಾರಾಷ್ಟ್ರಸಂಬರ ಮುಂಗಿಳ ಘೋಟ ಮುಖಏಕಪಾದ ಸೌಳ ಸಂಸಾಳಕಆನರ್ತ ಹಮ್ಮೀರ ಕೊಮ್ಮೀರಮತ್ಸ್ಯಪಾಂಚಾಲರಾಜಶೇಖರ ವರಶೇಖರ ಯುಗಂಧರ ಮಧ್ಯದೇಶಲಂಬಕರ್ಣ ಸ್ತ್ರೀರಾಜ್ಯ ಆಂಧ್ರ ದ್ರವಿಡಅರವ ಕನ್ನಡ ತುಳುವ ತುಳಾಂಡಜಾಳೇಂದ್ರ ಕೈಕೇಯ ಕೌಸಲ ಕಂಚಿಕನೋಜ ಸವ್ವೀರಸಿಂಧುಕೇರಳವೈದರ್ಭ ದೇಶದೊಳ್ಕುಂಡಿನಾಪುರದೊಳ್ ನಿನ್ನಂ ಕಂಡುಮನದಂಡಲಿಕೆಗೆ ಸಾಗಿತ್ತೆನೆಲೆ ದುಂಡೆ 5318ಈ ನಾಡ ಚರಿಸಿ ನಿನ್ನರಸುತ ಬಂದೆನೆಜಾಣೆ ಬಂಗಾರವ್ವ ಕೈ ತೋರೆ 54ನಿನ್ನ ಕಾಣುತ ಹಸಿವೆ ನೀರಡಿಕೆಲ್ಲ ಹೋಯಿತುಜಾಣೆ ಬಂಗಾರವ್ವ ಕೈ ತೋರೆ 55ಸಂಧಾನಕ್ಹಾರುವನಟ್ಟಿದ್ದೆ ಮೊದಲಹುದೇನೆ ಮಂಗಳದೇವಿ ಕೈ ತೋರೆ 56ನೀ ಬರೆದೊಕ್ಕಣೆ ಯದುರಾಯನರಿತಾನುಸೌಭಾಗ್ಯವಂತೆ ಕೈ ತೋರೆ 57ರಥವನೇರಿಕೊಂಡು ಬರಹ ನೋಡಿಕೊಳ್ವಜಾಣೆ ಬಂಗಾರವ್ವ ಕೈ ತೋರೆ 58ಧ್ಯಾನದ ಕಳವಳ ಮುಸುಡುಗಂಟಿನ ಚಿಂತೆಮಾಣು ಮಂಗಳದೇವಿ ಕೈತೋರೆ 59ತ್ರಿಭುವನೇಶ ಪ್ರಸನ್ನವೆಂಕಟ ಕೃಷ್ಣತಾ ಬಹನೆಲೆ ದುಂಡಿ ಕೈ ತೋರೆ 6019ಚೂರ್ಣಿಕೆಎಲೆಲೆ ಎಳೆವೆಂಗಳೆ ಎಲೆ ಹುಲ್ಲೆಗಂಗಳೆಮಹಾಭೂಷಣದ ಮಾರುವೇಣಿ ಮಡದಿಯರಸುಪ್ಪಾಣಿಕೀರವಾಣಿ ಕಿಸಲಯಪಾಣಿಕಂಧಿಜ ಬಿಂಬವದನೆ ಕುಲಿಶಮಣಿರದನೆಮದನಕಾರ್ಮುಕೋಪಮ ಭ್ರೂಲತೆಯಳೆ ಮಹಾಲಕುಮಿಯಳೆಅರುಣವಿಧ್ರುಮಾಧರೆ ಅಬ್ಜಜಾ ಕಂಧರೆಅರ್ಧಚಂದ್ರನ ಪೋಲ್ವಡಿ ಪಣೆಯಳೆ ಅನಘ್ರ್ಯ ಚೂಡಾಮಣಿಯಳೆಸಿಂಧೂರಸೀಮಂತಿನಿಯೆಸಿರಿತಿಲಕದ ಶೋಭಿನಿಯೆನುಣ್ಗದಪುನಾಸಿಕಮಣಿಯಳೆ ನೂತನೊಜ್ರದೋಲೆಯಳೆನಿಷ್ಕ ಕಂಠಾಭರಣೆಯಳೆ ನಿತ್ಯಮಂಗಳ ಸೂತ್ರಿಯಳೆನಿಡುಜಾಲಕ ಮಾಲೆಯಳೆಬುಗುಡಿ ಚಳತುಂಬು ಕೊಪ್ಪಿನ ಕಿವಿಯಳೆಬಾವಲಿ ನಾಗೋತ್ರ ಪೊಂಬರಳೆಲೆ ಲಲಿತ ಬಾಹುಲತೆಯಳೆಲಸತ್ವನಜಕೋರಕ ಸ್ತನಿಯಳೆಕಡು ತೆಳ್ವೋದರಿ ನಿಮ್ನ ನಾಭಿಯಳೆಕಂಠೀರವಕಟಿಯಳೆ ಕರಭೋರು ಯುಗಳೆಯಳೆಅಪರಂಜಿಕಂಚುಕಾಂಬರ ಉತ್ತರೀಯಳೆಅಮೂಲ್ಯ ಕಾಂಚಿದಾಮಾಂಕಿತಳೆಬಟುಗನ್ನಡಿ ಜಾನುದ್ವಯಳೆ ಬ್ಞಣ ಪಂಚಕನ ಬತ್ತಳಿಕೆ ಜಂಘೆಯಳೆಕೋಮಲತರಾಂಘ್ರಿ ಸರಸಿಜಯುಗಳೆನೀಲಪಚ್ಚ ಪದ್ಮರಾಗ ಹೀರ ಮುತ್ತಿನ ಪೆಂಡೆಯಳೆಕಾಲಂದಿಗೆ ಮೆಂಟಿಕೆ ವೀರಮುದ್ರೆ ಕಿರಿ ಪಿಲ್ಲಿಯಳೆಮಣಿಮಯಾಂಗುಲ್ಯದ ವಲಯಾಭರಣೆ ಮದಗಜಗಮನೆಪ್ರತಿಯಿಲ್ಲದ ರನ್ನದ ಬೊಂಬೆ ಪರಬೊಮ್ಮನ ಪಟ್ಟದ ರಂಭೆಬಾಬಾ ತಾತಾ ಎಂದು ವಾಮಕರವಬೇಡಲಿತ್ತಳಾ ರುಕ್ಮಿಣಿ ತಾಯಿ 6120ಜಗದ ನಾರಿಯರ ಕೈಗಳ ಕಂಡೆನವ್ವಮೃಗಮದಗಂಧಿ ನಿನ್ಹೋಲ್ವರಿಲ್ಲವ್ವ 62ಯುಗಯುಗಾಂತರ ದೇಶ ದೇಶದಲ್ಲವ್ವಅಗಲ್ಯಾಟವಿಲ್ಲ ನಿನ್ನರಸ ನಿನಗವ್ವ 63ಸವತೇರು ಬಹಳುಂಟು ನೆಂಟರ ಜಾಣೆ ಎಲೆ ಬೀಗರ ಸುಗುಣೆಯುವತಿ ಪ್ರಸನ್ವೆಂಕಟ ಕೃಷ್ಣ ನಿನ್ನ ಪ್ರಾಣ 6421ಕಣಿ ಕೇಳೆ ಕಣಿ ಕೇಳೆ ಕಣಿ ಕೇಳೆ ಚೆಲ್ವೆಕಣಿ ಕೇಳೆ ನಿನ್ನ ಮನದಾ ಮಾತ್ಹೇಳ್ವೆಎಣಿಕೆಗೊಳ್ಳದಿರಮ್ಮಇಂದುನಾಳೆಂದುಗುಣನಿಧಿ ಗೋಪಾಲ ಬಹ ದಯಾಸಿಂಧು 65ತ್ರುಟಿಯುಗವಾಗಿದೆ ನಿನಗೀಗ ಮುಗ್ಧೆಕುಟಿಲಮಾಗಧಸಾಲ್ವ ನೆನೆವ ದುರ್ಬುದ್ಧೆಘಟಿಸದೆಂದಿಗೆ ಖಳರ ಮನೋರಥ ಸಿದ್ಧೆದಿಟವೆನ್ನವಾಕುಸುರಲೋಕ ಪ್ರಸಿದ್ಧೆ66ಹಿಂದೊಮ್ಮೆ ಖಳರು ಗೋವಿಂದ ಬಂದಾಗಮಂದಮತಿಯಲಿ ಮನ್ನಿಸದಿರಲಾಗಇಂದ್ರ ಸಿಂಹಾಸನವ ಹರಿಗೆ ಕಳುಹಿಸಿದವೃಂದ ದೈತ್ಯರಿಗೆಲ್ಲ ಭಯವ ಸೂಚಿಸಿದ 67ಜಂಭಾರಿಕುಲಿಶಕಂಜುತ ಪೋಕರೆಲ್ಲಥಂಬಿಸಿದರು ವಾಗಾಡಂಬರವೆಲ್ಲಅಂಬುಜಾಕ್ಷಗೆ ನಿನ್ನತಾತಪೂಜಿಸಿದಅಂಬುಜನಾಭ ತನ್ನೊಳುವಿಶ್ವತೋರ್ದ68ಅದನೆಲ್ಲ ಬಲ್ಲ್ಯವ್ವ ಹರಿಯ ನಿಜನಲ್ಲೆಬೆದರಿದೊಲ್ಲೋರ್ವ ನಿನ್ನ ಮಾಯವ ಬಲ್ಲೆಪದುಮಜ ಭವರ ಹೃದಯಾಬ್ಜ ನಿಯಂತ್ರೆಉದಧೀಶನಾಜÕದಿ ಸರ್ವಸ್ವತಂತ್ರೆ 69ಕೇಳಮ್ಮ ನಿನ್ನ ಹೆತ್ತವರಿಗೆ ನಿನ್ನಮೇಲೆ ಹಂಬಲ ಬಹಳ ಪಾಪಿ ನಿಮ್ಮಣ್ಣಆಲೋಚನೆಯಿಲ್ಲದೆ ನಿಶ್ಚೈಸಿದ್ದಾನೆ ಶಿಶುಪಾಲಗೆ ನಿನ್ನ ಕೊಡುತೇನಂತೈದಾನೆ 70ಆಗಲ್ಯಾಕವನಿಂದಲೀಕಜ್ಜ ಬುರ್ರಾಬೇಗ ಭೀಷ್ಮಕನಂತರ ಬಲ್ಲ ಶ್ರೀಧರ್ರಾಸಾಗರಶಯನ ತಾ ಸಮಯಕೈತರುವನೇಗಿಲಧರನು ಕೃಷ್ಣನ ಕೂಡ ಬರುವ 71ಆ ಗೌರಿ ಮೌನಿಯೆಂಬುವಳ ಪೂಜೆಯಲಿಯೋಗವಾಗಿದ್ರ್ದಾ ಕಾಪುರುಷ ಸಭೆಯಲ್ಲಿಮೇಘಮುಸುಕಿರ್ದ ಚಂದಿರನಂತೆ ನಿನ್ನಯೋಗೇಶ ಪ್ರಸನ್ವೆಂಕಟ ಕೃಷ್ಣ ನೊಯ್ವ ಚೆನ್ನ 7222ಇನಿತೆಲ್ಲ ಕೊರವಂಜಿಕರವಪಿಡಿದು ಹೇಳಿಕ್ಷಣ ಕ್ಷಣಕೊಡೆಯನ ಹೊಗಳಿನೆನಪಿಗೆ ಬೆಸಗೊಂಬೆ ಕಾಲಜ್ಞಾನದ ವಾರ್ತೆಎನಗೆ ತಿಮ್ಮಯ್ಯ ಹೇಳೆಂದು 73ಶ್ರೀ ರುಕ್ಮಿಣಿಯ ಮನದುಲ್ಲಾಸವನೆಲ್ಲಪೂರೈಸುವೆನೆಂಬ ನುಡಿಯತೋರು ಎನ್ನಯ ನಾಲಿಗೆಯಿಂದಲುಸುರುವೆವೀರ ದ್ರಾವಿಡ ವೆಂಕಟಯ್ಯ 74ಶರಣ್ಯೆಲೆ ಸತ್ಯನೆ ಶರಣ್ಯೆಲೆ ನಿತ್ಯನೆಶರಣು ಶರಣು ನಿತ್ಯಮುಕ್ತಶರಣು ಪರೇಶನೆ ಶರಣು ಅವಿನಾಶನೆಶರಣು ಪ್ರಸನ್ವೆಂಕಟ ಕೃಷ್ಣ 7523ವಚನಓ ರುಕ್ಮಿಣಿ ತಾಯಾರೆಉನ್ನ ಮನಸಿಲೆ ನಿನೈಚ್ಚ ಕಾರ್ಯಂ ಕೈಕ್ಕೂಡಿನಾಲ್ಎನಕ್ಕೆ ಎನ್ನ ಸಂತೋಷಂ ಪಣ್ಣಿರಾಯ್ಓಯಮ್ಮ ಉನ್ ಪ್ರಾಣನಾಯಗನ್ ಶ್ರೀಕೃಷ್ಣನ್ ವಂದುಪೊಟ್ಟಣೆ ಕೈ ಪಿಡಿಚ್ಚಿ ಕಲ್ಯಾಣಂ ಪಣ್ಣಿಕೊಳ್ಳರಾಂಇಂದ ವಾರ್ತೆ ತಪ್ಪಿನಾಲ್ ನಾಂ ಕೊರ್ತಿಯೇ ಅಲ್ಲೆಉನ್ ತಮಯನ್ ರುಗ್ಮಂ ವೇಕ್ಕತ್ತೆ ಕೊಲ್ಲರಂ ವರಾನುಓಯಮ್ಮ ಇಂದ ವಾರ್ತೆಯೈ ಪಣ್ಣಿಕೋ ಅª, À್ಮು 7624ಮದ್ಯಪಾನಿತಾಮಸಯವನನ ಕೊಲಿಸಿದನೆನಿದ್ರೆಗೈವ ರಾಯನಿಂದಲಿಸದ್ದಿಲ್ಲದೆ ಮಧುರೆ ಜನರ ಸಾಗರದಮಧ್ಯ ದ್ವಾರಕೆಯಲ್ಲಿಟ್ಟನೆ 77ಯವನ ಸೈನ್ಯಜಲಧಿಬತ್ತಿಸಿ ಸಾಲ್ವಾದ್ಯರಹವಣಮುರಿದು ನಿಜರ ಹೊರೆವನು ನಿನ್ನವಿವಹ ಮಾಳ್ಪೆನೆಂಬ ಮಾಗಧನು ಚೈದ್ಯ ತನ್ನಕುವರನೆಂದು ಮಾನವಿಡಿದಿಹ 78ಇನಿತರೊಳು ರಂಗರಾಯನು ಮೋಹರದಿಮಣಿರಥವನೇರಿ ಬಹನುವನಿತೆ ನಿನ್ನಂದಣವ ನೋಡುತ ಜಿಗಿವನಲ್ಲಿಂದ ಘನತರ ಮೃಗೇಂದ್ರನಂದದಿ 79ನರಿಯ ಹಿಂಡಿನೊಳಗಿನಾನೆಯ ಒಯ್ವ ತೆರದಿಹರಿನಿನ್ನಪ್ಪಿಕೊಂಡುಹಾರುವಗರುಡನಮೃತ ಕಲಶವ ಸುರರ ಗೆದ್ದುಹರುಷದಿಂದೊಯ್ಯುವಂತೆ ಒಯ್ವನು 80ಸರಸಿಯಾಬ್ಜ ಹಂಸ ಒಯ್ವವೋಲ್ ಪರಮಪುರುಷತ್ವ, ರಿಯ ತನ್ನ ರಥಕೆ ಒಯ್ವನೆಬರಿಯ ದುಗುಡವ್ಯಾಕೆ ಬಾಲಕಿಪ್ರಸನ್ವೆಂಕಟ ಕೃಷ್ಣ ನಿನ್ನ ಮೆಚ್ಚುಗಾರನೆ 81ಬಂದನೆಂಬ ನುಡಿಯು ಬರುತಿದೆಜವದಿಕೃಷ್ಣಬಹನೆಂಬ ನುಡಿಯು ಬರುತಿದೆ 8225ಚೂರ್ಣಿಕೆನೀಡೆಯವ್ವ ಎನ್ನ ಮನೆ ಗಂಡನ ಕಾಟ ಘನ್ನವವ್ವಕ್ಷಣಕೈದು ನಡೆಯವನವ್ವಒಮ್ಮಾನ ತಿರಿತಂದರೆ ಇಮ್ಮಾನ ಬೇಡುವನವ್ವಚೆಂಬಣ್ಣ ಕರಿಬಿಳಿಯಬಟ್ಟೆನಮ್ಮತ್ತೆಗಳವ್ವಆರು ಮಂದಿ ಗಂಡನ ಗೆಳೆಯರವ್ವಏಳು ಪದರು ಮೂರು ತ್ಯಾಪೆ ಗುಡಲುಂಟವ್ವಎಪ್ಪತ್ತೆರಡು ಸಾವಿರ ನುಲಿಯ ಸಿಂಬಿಗಳವ್ವಗುಡಲೊಳು ಮೂರು ಒಲೆಯುಂಟವ್ವಗುಡಲು ಬಿದ್ದರೆ ನುಲಿಗೆ ಮಾರ್ಯೆವ್ವಒಂಬತ್ತು ಗುದ್ದಿನೊಳಗೆ ಹತ್ತು ಹೆಗ್ಗಣದೋಡ್ಯಾಟವವ್ವಕೊರವನ ಕೈಯಿಚ್ಛೆ ಮೂರು ನಾಯಿಗಳವ್ವಎಣಿಕಿಲ್ಲದ ಕುತ್ತಗಳುಂಟವ್ವಕೊಬ್ಬಿನ ಸವತೇರೆಂಟು ಮಂದಿ ಕೊರವಗೆ ಮಚ್ಚೂಡುವರವ್ವಸಂಸಾರದಲೆಳ್ಳನಿತು ಸುಖವಿಲ್ಲವ್ವಅತ್ತೆಗಳಾಟ ಗಂಡನ ಬ್ಯಾಟ ಸವತಿಯರ ಕಾಟನೆರೆಹೊರೆಯವರ ನೋಟ ಮನೆಯ ಮಾಟಗತರಸದೂಟಕಂಜಿ ನಡುನಡುಗಿಮೂರೂರ ಹಾದಿ ಮೆಟ್ಟಿ ಬಂದುಆರೂರರಸಿನ ಮೊರೆ ಹೊಕ್ಕೆನೆಯವ್ವವಿದರ್ಭದೇಶದ ಕುಂಡಿನಾಪುರದೊಳು ನಿನ್ನ ಗುರುತಕೇಳಿಉಪವನದ ಪ್ರದ್ಯೋತನಾಳ್ವ ಎರಡು ಬಾವಿಯ ಮ್ಯಾಗಣಹೂವಿನ ತೋಟದ ನಡುವೆ ಬುತ್ತಿಯನುಂಡು ನಿನ್ನ ಕಂಡುಕುಂತಳಾಪುರದಲ್ಲಿ ಕುಳಿತುಂಬಬ್ರಹ್ಮಾನಂದದವರ ಭಾಗ್ಯವ ಬೇಡ ಬಂದೆನೆ ಅವ್ವಅಸುವಿಗೆ ಹಾಲನೆರೆಯವ್ವಶಿಶುವಿಗೆನವನೀತನೀಡೆಯವ್ವಬಂಗಾರೆವ್ವ ಸಿಂಗಾರೆವ್ವ ಸೋರ್ಮುಡಿಯವ್ವಮಲ್ಲಿಗೆದುರುಬು ಸಂಪಿಗೆದುರುಬುಪಚ್ಚೆ ಮರುಗ ಮುಡಿವಾಳ ಶಾವಂತಿಗೆ ತುರಬಿನವ್ವಪ್ರಸನ್ವೆಂಕಟಕೃಷ್ಣನ ತೋಳ್ತಲೆಗಿಂಬಿನವ್ವ ನೀಡೆಯವ್ವ 8326ವಚನಇಂತಾಧ್ಯಾತ್ಮವಂ ಪೇಳಿಕಂತುವಿನಯ್ಯನ ಕಾಂತೆಯಂ ಸಂತಸಪಡಿಸಿಅಂತರಂಗದಿ ಚಿಂತಾಯಕನಂ ನೆನೆನೆನೆದುಭ್ರಾಂತಿ ಪರವಶಾದಂತೆ ಕೆಂಜೆಡೆಯಂ ತೂಗಿ ತೂಗಿಅಂತದತ್ಯಂತ ತೂಳಂತುಂಬಿಇಂತೆಂದಳಾ ಕೊರವಂಜಿ 8427ಬರುತಾನೆ ಜಾಣೆ ಬರುತಾನೆಬರುತಾನೆ ಚೆಲ್ವೆ ಬರುತಾನೆ 85ಹಿಂಡುಭಂಡರೆಲ್ಲ ಕೂಡಿ ನಿನ್ನ ಮುಚ್ಚಲು ಎತ್ತಿಕೊಂಡು ಒಯ್ವ ಜಾಣ ಬರುತಾನೆಪುಂಡರೀಕಸುರಗಿ ಖಡ್ಗ ಭಿಂಡಿವಾಲ ನುಗ್ಗುಮಾಡಿದಂಡಿಸುವ ಜಾಣ ಬರುತಾನೆ 86ಕುಂಡಿನಾಪುರದಿ ನೆರೆದ ಕೊಂಡಿ ಕುಹಕರ ತಲೆಯಚಂಡನಾಡ್ವ ಜಾಣ ಬರುತಾನೆಮಂಡೆಯಲ್ಲಿ ಪಚ್ಚಚೂಡವಿಟ್ಟು ರುಕ್ಮನಭಿಮಾನಕೊಂಡೇನೆಂಬ ಜಾಣ ಬರುತಾನೆ 87ತಂಡ ತಂಡದಲ್ಲಿ ನಿನ್ನಯ್ಯನ ಸದ್ವಾಸನನ್ನಉಂಡೇನೆಂಬ ಜಾಣ ಬರುತಾನೆಲೆಂಡದಾನವಾರಿ ಪ್ರಸನ್ನವೆಂಕಟಕೃಷ್ಣ ಬೊಮ್ಮಾಂಡಪತಿ ಜಾಣ ಬರುತಾನೆ 8828ಚೆನ್ನೆ ಕೊರವಂಜಿ ಮಾತು ಶ್ರೀಕನ್ಯೆಕೇಳಿನಲಿವಾಂತುಮನ್ನಿಸಿ ಗುಣವ ಕೊಂಡಾಡಿ ಮುಕ್ತಿರನ್ನಗಾಣಿಕೆಯನು ನೀಡಿ 89ಎಲೆ ಸತ್ಯಲೋಕದ ಕೊರವೆ ನೀಬಲು ಸತ್ಯ ನುಡಿದೆ ನಾನರಿವೆಛಲದಂಕ ದೇವರದೇವ ಈಖಳರೊಳು ಒಯ್ವುದರಿದವ್ವ 90ಹರಿರಥವೇರಿ ಬಾಹೋಣ ಕಾಪುರುಷರ ಮತ ಕೆಡಿಸೋಣಗುರುಪ್ರಸನ್ವೆಂಕಟ ಕೃಷ್ಣ ಬಂದುಹೊರೆವುದುಂಟೇನವ್ವ ರಮಣಿ 9129ನಂಬಲೇನೆ ನಿನ್ನ ಮಾತು ಕೆಳದಿ ಕೊರವಮ್ಮ ನಮ್ಮಂಬುಜಾಕ್ಷ ಬಾಹನೇನೆ ದೇವಿ ಕೊರವಮ್ಮ 92ಉಡಿಯ ಕಂದನಾಣೆ ಇಡುವೆ ನಂಬೆ ರುಕ್ಮಿಣಿ ನಾನುಡಿವ ನಾಮದಾಣೆ ಇಡುವೆ ನಂಬು ರುಕ್ಮಿಣಿ 93ಎಡದ ತೋಳು ತೊಡೆಕಂಗಳುಹಾರಲೊಳಿತೇನೆ ಚಿಲಿಪಿಲಿನುಡಿವಶಕುನಎಡದ ಗೌಳಿಯ ನುಡಿಯು ಒಳಿತೇನೆ94ಕಡಲಶಯನ ನಿನ್ನ ಪ್ರಾಣದೊಡೆಯ ಬಪ್ಪನೌ ಎನ್ನಪಡೆದನಯ್ಯ ಪ್ರಸನ್ನವೆಂಕಟಕೃಷ್ಣ ತಪ್ಪನೌ 9530ನಿನ್ನಗಂಡಬೆಣ್ಣೆಗಳ್ಳ ಕನ್ನೆಗೊಲ್ಲತಿಯರ ನಲ್ಲಕಣ್ಣೆವೆ ಸನ್ನೆಗಾರ ನಂದಗೋಪ ಕುಮಾರ 96ಚಿನ್ನತನದಿ ದಶಲಕ್ಷ ಚಿನ್ನರ ಪಡೆದನು ದಕ್ಷಪೊನ್ನ ಕೊಳಲನೂದಿ ಮೂಜಗವ ಮೋಹಿಸುವ 97ಉನ್ಮತ್ತಮಾತುಳನ್ನ ತುಳಿದ ತನ್ನ ಪೆತ್ತವರೆಡರ್ಗಳೆದಮನ್ನಿಸಿ ಪಾಂಡವರÀ ಪೊರೆದ ಚಿನ್ಮಯ ಸುಖದ 98ಪೆಣ್ಗಳ್ ಹದಿನಾರುಸಾವಿರದ ನೂರೆಂಟನಾಳ್ವ ಚದುರನಿನ್ನ ಪ್ರಾಣ ಪ್ರಿಯ ಬಂದ ಪ್ರಸನ್ನವೆಂಕಟ ಕೃಷ್ಣ ಮುಕುಂದ 9931ನುಡಿ ನುಡಿಯೆಲೆ ಬಡನಡುವಿನ ಮಡದಿ ನಿನ್ನುಡಿಗುಚಿತವಕೊಡುವೆನಡಿವಿಡಿವೆ ಮನವಿಡುವನೆ ಕಡಲೊಡೆಯ ಕೈವಿಡಿವನೆ ಎನ್ನ ಕಡೆಯ ನೋಡಿ ನುಡಿವನೆ ಸವಿನುಡಿಯಕಡು ಬಲಿಭುಜ ಗಡಣಂಗಳ ನಡುವ್ಹಂಸನಪಡಿಮಿಡುಕುವೆನುಡಿ ಬೇಗೆಂದು ಪಡೆಗೂಡಿ ಹಲಿಯೊಡನಾಗಮ ನುಡಿಯೇ ನಿನ್ನುಡಿಗಮೃತವ ಪಡೆಯೇ ಮತ್ತೀಜಡಜಡಿ ಲೋಕೊಡೆಯೆ ಪ್ರಸನ್ನವೆಂಕಟ ಕೃಷ್ಣರಾಯನನುಡಿಯೆಲೆ ನುಡಿನುಡಿಯೆ ನುಡಿನುಡಿಯೆ 10032ಹರಿಬರುತಾನೆ ಗುರುತು ಗಂಟ ಕಟ್ಟೆಪಕೇಳೆ ನರಸಿಂಗನಂಗನೆಯನೊಯಿದು ಕೆಟ್ಟನರಿಗಳಾಳಬಲ್ಲವೇನೆ ನಲಿದು ನೀನುದುರುಳರಿಗೆ ದಕ್ಕಬಲ್ಲ್ಯೇನಮ್ಮ ನಿನ್ನಾಚರಣೆಯೆಲ್ಲ ಜಗದ್ವಿಡಂಬನಮ್ಮ 101ನನ್ನ ತರಳನಾಣೆ ಸಟೆಯನಾಡೆನಮ್ಮ ನಾನೊರೆದವಾಕುಸಾಕ್ಷಿ ಬರುತಾವಮ್ಮ ಮ್ಯಾಲರಕೆಯುಳ್ಳ ತಾಯಿಯಾದರೆ ನೀ ನನ್ನಕರೆಸಿ ಕೇಳೆ ನಿನ್ನ ಮನೆಗೆ ಜಾಣೆ 102ನಿನ್ನ ಹೆಸರ ತಕ್ಕ ಊಟವ ನೀಡೀಗ ನಾಹಸಿದೆನೆಂದು ಉಂಡುಕೊರವಿಬೇಗಪ್ರಸನ್ನವೆಂಕಟ ಕೃಷ್ಣನ ರಾಣಿಗೆÉ ಹಾರೈಸಿದಳು ಬಸುರು ಬುಡುಕೆಂದು 10333ಚಕ್ಕನೆ ನಿಂತಳು ಕೊರವ್ಯಮ್ಮ ಕಂಡುಫಕ್ಕನೆ ನಿಂತಳು ರುಕ್ಮಿಣಮ್ಮ ಪ್ರಾಣದಕ್ಕರ ಬಿಡಲಾರೆ ನಿನ್ನ ಗೆಳತಿ ಪ್ರೇಮಉಕ್ಕುತಿದೆ ನೀ ಹೋಗುವುದೊಳಿತೆ ಎನಲು ನಕ್ಕು 104ಶ್ರೀ ಗೋಪಾಲ ಬಾಹನಕ ನಿಲ್ಲೆ ವಿಯೋಗ ತಾಳಲಾರೆ ನೀ ಬಲ್ಲೆಹೀಗೆನೆÀ್ನ ಬೇಡಿಕೊಂಡಳು ಮರುಳೆ ನೆನೆದಾಗೆ ಬಹೆನೆಂದ್ಹೇಳಿ ತೆರಳೆ ಅನುರಾಗದಿಂದ 105ಆವ ಪರಿಂದಾರೆ ಹರಿಸೇವೆ ಮಾಡಿದೇವಋಷಿ ನಿಜಾನಂದ ತೀವಿಶ್ರೀವರ ಪ್ರಸನ್ವೆಂಕಟ ಕೃಷ್ಣನ ಮಹತೇವಿಡಿದು ಹೊಗಳುತ ಮುನಿರನ್ನ ರಾಮೆಯಾಜÕದಿ 10634ಸುರಋಷಿಪೇಳ್ದ ಒಕ್ಕಣೆಯಹರುಷದಿ ಕೇಳ್ದ ರುಕ್ಮಿಣಿಯಅರಸ ಪ್ರಸನ್ನವೆಂಕಟ ಕೃಷ್ಣನಿರುತದಿ ಜಯ ನಮಗೀವ 107ಜಯ ಜಯ ಚಿನ್ಮಯಮೂರ್ತಿಜಯ ಜಗನ್ಮಯ ಸ್ವಚ್ಛಕೀರ್ತಿಜಯ ಜಯ ಪ್ರಸನ್ವೆಂಕಟ ಕೃಷ್ಣಜಯಮೂರ್ತಿನಿನಗೆ ಶರಣು108
--------------
ಪ್ರಸನ್ನವೆಂಕಟದಾಸರು
ನಿನ್ನ ಕೊಳಲಿಗೆ ಮೋಹಿಸಿ ನಿನ್ನ ಕೊಳಲಿಗೆಅನ್ಯ ವಿಷಯಜರಿದುಬಂದರೆ ಇನ್ನು ಯಾತಕೆ ಬಂದಿರೆÉಂದಿಪ.ಅತ್ಯಂತ ಕಾಳ ರಾತ್ರಿಯೊಳುಮತ್ತೆ ಬಂದ ಬಾಲೆಯರಿಗೆಉತ್ತಮ ಉತ್ತಮವ ನೋಡಿಮತ್ತೆ ಮನೆಗೆ ಪೋಗಿರೆಂದಿ 1ಪ್ರೀತಿ ಪತಿಗಳ ಬಿಟ್ಟು ನೀವುಯಾತಕಿಲ್ಲೆ ಬಂದಿರೆಂದಿಮಾತುಗಳನು ಆಡಿ ಪೋಗಿರಿಘಾತುಕ ಪುರುಷನಯ್ಯ ಕೃಷ್ಣ 2ಭರದಿ ಬಂದ ಬಾಲೆಯರಿಗೆತಿರುಗಿ ಪೋಗಿರೆಂದು ನುಡಿದಿಕರಗಲಿಲ್ಲ ಕಠಿಣ ಹೃದಯಕರೆವರ್ಹ್ಯಾಂಗ ಪತಿಗಳವರ 3ಜಾರರಾಜ ನಿನಗೆ ಒಂದೂತೋರದಿದ್ದ ಭಾವವೇನುಯಾರ್ಯಾರ ಅಂಜಿಕೆ ಇಲ್ಲವೆಂದುನಾರಿಯರಿಗೆ ಖಿನ್ನ ಬಡಿಸಿದೆಲ್ಲೊ 4ಇಂದುರಾಮೇಶ ಬಿಟ್ಟರೆÉ ನೀನುಹೊಂದೋದಿಲ್ಲ ಪತಿಗಳ ಘನ್ನಚಂದಾಗಿ ಬೆರಿಯೆ ಚಕೋರನ್ನಇನ್ನರೆ ರಮಿಸಿದೆಲ್ಲೊ ಚನ್ನ 5
--------------
ಗಲಗಲಿಅವ್ವನವರು
ನಿನ್ನ ಮಗನ ಮುದ್ದು ನೀನೆ ಲಾಲಿಸಮ್ಮಚಿನ್ನನೆಂದಾಡಿಸಮ್ಮಬಣ್ಣದ ಬಾಲೇರ ಭೋಗಿಪ ಚದುರತೆಸಣ್ಣವರ ಸರಸೇನಮ್ಮ ಪ.ತಾಳಬೇಕೆಷ್ಟೆಂದು ಗಾಡಿಕಾರನ ಮಾತಹೇಳಲಂಜುವೆವಮ್ಮ ನಮ್ಮಾಳುವ ಇನಿಯರ ವೇಡಿಸಿ ನಮ್ಮ ಲಜ್ಜೆಹಾಳುಮಾಡಿ ಹೋದನೆ 1ಕೃಷ್ಣ ಸಿಕ್ಕಿದನೆಂದು ನಮ್ಮ ಮಕ್ಕಳ ನಾವೆದಟ್ಟಿಸಿ ಕೊಲುವೆವಮ್ಮ ಈದೃಷ್ಟಿ ಮಾಯದಜಾಲನೋಡೆ ನಂದನರಾಣಿಸೃಷ್ಟೀಶರಿಗೆ ತೀರದು 2ಕನ್ನೆಯರೊಗ್ಗೂಡಿ ಕಳ್ಳನ ಕೈಕಟ್ಟಿನಿನ್ನೆಡೆಗೆ ತರುತಿದ್ದೆವೆಕಣ್ಣಿಯ ಕೊರಳಿನ ಕರುವೆಂದು ಜನವಾಡೆಖಿನ್ನರಾಗಿ ಹೋದೆವೆ 3ಆವಾವ ಕೇರೀಲಿಜಾರಚೋರನ ಮಾತುಆವಾವ ಮನೆಗಳಲ್ಲಿಭಾವೆಯರೆಳೆ ಮೊಲೆ ಮೂಗ ಚಿವುಟಿ ಜಾವಜಾವಕಂಜಿಸಿಕೊಂಬನೆ 4ನಾವು ಮಾಡಿದ ಸುಕೃತವೆಂತೊ ಗೋಪಾಲರೇಯಭಾವಕೆ ಮೆಚ್ಚಿದನೆದೇವರ ದೇವ ಪ್ರಸನ್ವೆಂಕಟೇಶಜೀವಕೆ ಹೊಣೆಯಾದನೆ 5
--------------
ಪ್ರಸನ್ನವೆಂಕಟದಾಸರು
ನೀನೆನ್ನ ಪೆತ್ತಿಲ್ಲವಂತೆ-ಅಮ್ಮಾ |ನಾನಿನ್ನ ಮಗನಲ್ಲವಂತೆ ||ಧೇನುಕಾಯುವರಿಲ್ಲವೆಂದು ನೀನು |ಸಾನುರಾಗದಿ ಸಲಹಿದೆಯಂತೆ 2ವಿಷವು ತುಂಬಿದ ಮೊಲೆಯ-ಕೊಟ್ಟ |ಅಸುರೆಯ ಸಂಹರಿಸಿದೆನಂತೆ ||ಅಸುರನಾದ ಶಕಟನನಾಕ್ಷಣದಲಿ |ಶಿಶುವಾಗಲೆ ಒರೆಸಿದೆನಂತೆ 3ವತ್ಸಾಸುರನನು ಕೆಡಹಿದೆನಂತೆ |ಕಿಚ್ಚನೆಲ್ಲವನು ನುಂಗಿದೆನಂತೆ ||ಕಚ್ಚಬಂದ ಕಾಳಿಂಗನಾ ಹೆಡೆ-|ಚಚ್ಚಿ ತುಳಿದು ಓಡಿದೆನಂತೆ 4ಕುಸುಮಗಂಧಿಯರಡುವ |ವಸನಕದ್ದು ಓಡಿದೆನಂತೆ ||ಹಸುಗೂಸು ಅಲ್ಲ ಇವ |ಅಸುರ ಮಗನು ಎಂತೆಂಬುವರೆ 5ಒರಳನೆಳೆತಂದು ಮತ್ತಿ-|ಮರವ ಮುರಿದೋಡಿದೆನಂತೆ ||ತರಳೆಯರ ವಸ್ತ್ರವ ಕದ್ದು |ತರುವನೇರಿದೆನಂತೆ 6ಪರಮಗಾಡಿಕಾರನಿವ |ಪುರಂದರವಿಠಲರಾಯ ||ತರುಣಿಯರ ವಂಚಿಸುತ್ತ |ಠಕ್ಕಿಸಿ ಪೋದನೆಂತೆಂಬುವರು7
--------------
ಪುರಂದರದಾಸರು
ನೆಚ್ಚದಿರೀ ಭಾಗ್ಯ ಆರಿಗೂ ಸ್ಥಿರವಲ್ಲನೆಚ್ಚದಿರೆಚ್ಚರಿಕೆಹೆಚ್ಚದೆ ಹಿಗ್ಗದೆ ಇದ್ದರೆ ಲೋಕಕೆಮೆಚ್ಚು ಕೇಳೆಚ್ಚರಿಕೆ ಪ.ಪೊಡವಿಪರೊಲೂಮೆ ಸುಸ್ಥಿರವೆಂದು ಗರ್ವದಿನೆಡೆಯದಿರೆಚ್ಚರಿಕೆಕೊಡವನಂಧಕ ಪೊತ್ತು ನಡೆವಂತೆ ಅಧಿಕಾರಕಡೆಉಒಲ್ಲ ಎಚ್ಚರಿಕೆಕಡುಚಪಲನು ತಾನೆಂದು ಪರರವಗಡಿ ಸದಿರೆಚ್ಚರಿಕೆಬಡವರೆಡರ ಲಾಲಿಸದೆಮುಂದಕ್ಕಿ ಹೆಚ್ಚುಇಡಬೇಡವೆಚ್ಚರಿಕೆ 1ದೊರೆಗಳ ಒಲವಲಂಯಂತೆಂದಲ್ಲರೊಳುಹಗೆತರವಲ್ಲ ಎಚ್ಚರಿಕೆಉರಗನ ಮುತ್ತಿ ಕಟ್ಟಿರುವೆಯು ಕೊರೆದಂಥತೆರನಪ್ಪುದೆಚ್ಚರಿಕೆಗುರುಹಿರಿಯರ ಕಂಡು ಚರಣಕೆ ಶಿರಬಾಗಿನಡೆಯುತಿರೆಚ್ಚರಿಕೆಸಿರಿಯೆಂಬ ಸೊಡರಿಗೆ ಮಾನ್ಯರ ಅವಮಾನಬಿರುಗಾಳಿ ಎಚ್ಚರಿಕೆ 2ಲೋಕಾಪವಾದಕೆ ಅಂಜಿ ನಡೆಯುವುದು ವಿವೇಕ ಕೇಳಚ್ಚರಿಕೆನಾಕೇಂದ್ರನಾದರೂ ಬಿಡದಪಕೀರ್ತಿ ಪರಾಕು ಕೇಳೆಚ್ಚರಿಕೆಕಾಕು ಮನುಜರಕೊಂಡೆಯ ಕೇಳೀ ಕೋಪದುದ್ರೇಕ ಬೇಡೆಚ್ಚರಿಕೆಭೂಕಾಂತೆ ನಡು - ನಡುಗುವಳು ನಿಷ್ಠುರವಾದವಾಕುಕೇಳೆಚ್ಚರಿಕೆ3ನಳ - ಮಾಂಧಾತರೆಂಬವರೇನಾದರುತಿಳಿದು ನೋಡೆಚ್ಚರಿಕೆಅಳಿವುದು ಈ ದೇಹ ಉಳಿವೂದೆಂದೇ ಕೀರ್ತಿಇಳೆಯೊಳಗೆಚ್ಚರಿಕೆಅಳಲಿಸಿ ಪರರನು ಗಳಿಸಿದಂಥ ಹೊನ್ನುಉಳಿಯದು ಎಚ್ಚರಿಕೆಉಳಿದಲ್ಪಕಾಲದಿ ಬಡವರಾದವರನುಹಳಿಯದಿರೆಚ್ಚರಿಕೆ 4ಪರಸತಿ - ಪರಧನಕಳುಪಲು ಸಿರಿಮೊಗದಿರುಹುವಳಚ್ಚರಿಕೆನೆರೆ ಛಿದ್ರಕುಂಭದ ನೀರಿನಂತಾಯುಷ್ಯಸರಿಯುವುದೆಚ್ಚರಿಕೆಬರುವ ಹಾನಿವೃದ್ಧಿ ತನ್ನ ಕಾಲದ ಮೀರಲರಿಯದು ಎಚ್ಚರಿಕೆವರದ ಪುರಂದರವಿಠಲರಾಯನಮರೆಯದಿರೆಚ್ಚರಿಕೆ 5
--------------
ಪುರಂದರದಾಸರು
ನೆಚ್ಚಿದಿರೋ ಪ್ರಾಣಿ ಸಂಸಾರ ಸ್ಥಿರವೆಂದುಹುಚ್ಚು ಬುದ್ದಿಯಲಿ ನೀ ಕೆಡಬೇಡ ಪ.ಎಚ್ಚರಿತುಕೊಂಡು ಧರ್ಮದಿ ನಡೆ ಕಣ್ಣನುಮುಚ್ಚಿದ ಮೇಲುಂಟೆ - ನರಜನ್ಮ ಸ್ಥಿರವಲ್ಲ ಅಪಅಷ್ಟಕಂಬವನಿಕ್ಕಿ ತಾಕದುಪ್ಪರಿಗೆಯಕಟ್ಟಿದ ಮನೆ ಇದ್ದಂತಿಹುದುಹೊಟ್ಟೆತುಂಬ ಉಣದೆ ಧನವ ಗಳಿಸಿ - ಬಚ್ಚಿಟ್ಟಲ್ಲಿರದೆ ಸಂಗಡ ಬಾಹೋದಲ್ಲ 1ಅತಿ ಪ್ರೀತಿಯಿಂದ ಮದುವೆಯಾದ ಮೋಹದಸತಿ ತನ್ನ ಮರಣದ ಕಾಲಕ್ಕೆಗತಿಯಾವುದೆನುತಲೆ ಮರುಗಿದಪ್ಪಳಲ್ಲದೆಜತೆಯಾಗಿ ನಿನ್ನ ಸಂಗಡ ಬಾಹಳಲ್ಲ 2ಒಂದೊಂದು ಪರಿಯ ಬುಧ್ಧಿಯ ಪೇಳಿ ಸಲುಹಿದಕಂದ ನಿನ್ನಾವಸಾನ ಕಾಲಕೆಮುಂದೇನು ಸಂಸಾರ ನಡೆಸಲುಪಾಯವೇನೆಂದು ಚಿಂತಿಸುವ ಸಂಗಡ ಬಾಹನಲ್ಲ 3ನಾಟರಿಷ್ಟರು ಬಂಧು - ಬಳಗವುಹರಿ ಕೊಟ್ಟುದುಂಟಾದರೆ ಬಂದು ಉಣ್ಣುವರುಕಂತಕ ಬಂದರೆ ಹೊತ್ತು ಕಾಷ್ಠದೊಳಿಟ್ಟುಕಂತಿಯ ತಂದೊಟ್ಟಿ ಸುಡುವರು ಕಾಣೊ 4ಇಂತಿದು ಒಂದು ಪ್ರಯೋಜನ ನಿನಗಿಲ್ಲಅಂತ್ಯಕಾಲಕ್ಕೆ ಸಂಗಡ ಬಾಹುದುಕಂತುಜನಕ ನಮ್ಮ ಪುರಂದರವಿಠಲನಸಂತತ ಧ್ಯಾನದೊಳಿರು ಕಾಣೋ ಮನುಜಾ 5
--------------
ಪುರಂದರದಾಸರು
ಪಂಚಭೇದತಿಳಿವದು ಪ್ರತಿದಿನದಲೀ |ಮುಂಚಿನಜ ಮಧ್ವಮುನಿ ಮತವನುಸರಿಸಿದವರೂ ಪಜೀವೇಶರಿಗೆ ಭೇದ ಜೀವ ಜೀವಕೆ ಭೇದ |ದೇವರಿಗು ಜಡಕು, ಜಡಕೆ ಜಡ ಭೇದಾ ||ಆವಾಗಜೀವರಿಗೆ ಜಡಗಳಿಗೆ ಭೇದುಂಟು |ಈ ವಿವರವ ಪೇಳ್ವೆ ಯನ್ನಾಪನಿತು ಕೇಳುವದೂ 1ಈಶನಿತ್ಯಅನಾದಿಸ್ವರತಸರ್ವಗ ಸ್ವಪ್ರ- |ಕಾಶ ಸರ್ವಜÕವಿಶ್ವವಿಲಕ್ಷಣಾ ||ಮೇಶ ಅಪರಿಚ್ಛಿನ್ನಮೂರ್ತಿಪ್ರಾಣಿಗಳಿಂದ |ತಾ ಸಾಕ್ಷಿಯಾಗಿ ಬಹು ಕರ್ಮಗಳ ಮಾಡಿಸುವ 2ಶ್ರೀ ಮುಖ ಜಗತ್ಯಕುತ್ಪತ್ಯಾದಿ ಕಾರಣ ಮ- |ಹಾ ಮಹಿಮ ಸರ್ವತಂತ್ರ ಸ್ವತಂತ್ರಾ ||ಆಮಯವಿದೂರ ಜ್ಞಾನಾನಂದ ಬಲ ಪೂರ್ಣ |ಸೀಮೆಯಿಲ್ಲದ ಸುಗುಣ ಕ್ರಿಯಾತ್ಮಕ ಸ್ವರೂಪ 3ಸುಖ ದುಃಖಭೋಗಿಜೀವನು ಅಸ್ವತಂತ್ರ ಬಹು |ಕಕುಲಾತಿಉಳ್ಳವನು ದುರ್ವಿಷಯದೀ ||ಲಕುಮೀಶನಲ್ಲಿ ಭಕ್ತಿ ವಿವರ್ಜಿತನುಪ್ರತಿಕ್ಷ- |ಣಕೆ ಅನಂತ ಅಪರಾಧಿ ಜನ್ಮ ಮೃತಿ ಉಳ್ಳವನು 4ಆದಿ ವ್ಯಾಧಿಗಳಿಂದ ಪೀಡಿತನು ಅಜ್ಞಾನಿ |ಮಾಧವನ ಬಂಧಕ ಶಕುತಿಯೊಳಗಿಹ್ಯಾ ||ತಾ ಧರಿಸಿಹನುಪ್ರಾಕೃತಪ್ರಾಕೃತಾವರಣ |ಭೇದವೆ ಸಿದ್ಧ ಯಿಂಥ ಜೀವಗೂ ಹರಿಗ್ಯೂ 5ಒಂದಲ್ಲ ಸರ್ವ ಜೀವರು ಸತ್ವ ರಜ ತಮರು |ಯಂದು ಭೇದಗಳುಂಟವರ ಲಕ್ಷಣಾ ||ಮುಂದಿನ ಪದದಿ ಪೇಳ್ವೆ ಸಜ್ಜನರು ಕೇಳಿಯಾ- |ನಂದ ಬಡಲೆಂದು ವಿನಯದಲಿ ಬಿನ್ನೈಸುವೆನು 6ಛಿನ್ನ ಭಕ್ತರು ಯನಿಪರೆಲ್ಲ ದೇವತಿಗಳ |ಚ್ಛಿನ್ನ ಭಕ್ತರು ವಿಧೀರವರ್ಹೆಂಡರೂ ||ಚನ್ನಾಗಿ ಮುದದಿ ಈ ನಿರ್ಜರರ ತರತಮ್ಯ |ವನ್ನು ಕೇಳಿಕೊಬೇಕು ಜ್ಞಾನಿಗಳ ಮುಖದಿಂದ 7ವಿಧಿಮೊದಲು ತೃಣ ಜೀವಪರಿಯಂತಸಾತ್ವಿಕರು |ಇದರೊಳಗೆ ದೇವ, ಋಷಿ, ಪಿತೃಪ, ನರರೂ ||ಸುಧಿಗೆ ಯೋಗ್ಯ ರಜಾದಿಗೀರ್ವಾಣಗಂಧರ್ವ |ತುದಿಯಾಗಿ ಸಾಂಶರು ನಿರಂಶರುಳಿದವರೆಲ್ಲ 8ಇವರಿಂದ ಭಿನ್ನ ರಾಜಸರು ಗೋ ಭೂ ನರಕ |ತ್ರಿವಿಧಗತಿಉಳ್ಳವರು ಪಂಚಭೇದಾ ||ವಿವರ ತರತಮ ದೇವರ ಮಹತ್ಮಿಯನು ಅರಿಯ |ದವರು ಲಿಂಗಕಳಿಯರುಧಾಮತ್ರಯಪೊಗದವರೂ 9ಸಂಸಾರಿಗಳಿಗೆ ಭಿನ್ನರು ತಮೋಗುಣದವರು |ಕಂಸಾರಿಯಲಿ ದ್ವೇಷವರ ಸ್ವಭಾವಾ ||ಆ ಸುರಾರಿಗಳು ನಾಲ್ಕು ಪ್ರಕಾರ ದೈತ್ಯ ರಾ |ಕ್ಷಸರು, ಪಿಶಾಚರವರನುಗರು, ನರಾಧಮರು 10ಈ ನಾಲ್ಕು ಬಗೆಯ ಸುರರಿಗೆ ಅರಸು ಕಲಿಯವನಾ |ಹೀನತನವೆಷ್ಟುಚ್ಚರಿಸಲಿ ಮಿಥ್ಯಾ ||ಜ್ಞಾನಿಭೇದವನರಿಯ ಪಂಚ ಮಹಾಪಾತಕಿ ಪು- |ರಾಣ ವೇದಗಳಿಗೆ ವಿರುದ್ಧಾರ್ಥ ಕಲ್ಪಿಸುವಾ 11ಸುಜನರಾಚರಣೆ ನಡಿಯಗುಡ ದುಃಖ ಬಡಿಸುವ |ಕುಜನರಿಗನೇಕ ಬಗೆ ಸಹಯವಹನೂ ||ಪ್ರಜಗಳನ ರೋಗನಾ ವೃಷ್ಟಿಯಿಂ ದಣಿಸುವನು |ವೃಜನವನ ವಪು ತಾಯಿ ತಂಗಿಯಂಬರನರಿಯ 12ಬವರಬಂಗಾರ ದ್ಯೂತಾ ಪೇಯಅನೃತನಟ |ಯುವತಿಯೀಯಾರು ಸ್ಥಳ ನಿಲಯವವರಿಗೆ ||ನವವಿಧ ದ್ವೇಷಿಗಳಿಗಾಕಾರನೆನಿಸುವನು |ಅವನ ಸಮ ಪಾಪಿಗಳು ಮೂರು ಲೋಕದಲಿಲ್ಲ 13ಆ ನೀಚನ ಮಲಮೂತ್ರ ವಿಸರ್ಜನದಿಘೋರ|ಕಾನನದಿ ಕತ್ತಲಿಯೊಳಗೆ ಸ್ಮರಿಪುದೂ ||ಕ್ಷೋಣಿಯೊಳವನ ನಿಂದೆ ನಿರುತದಲಿ ಮಾಡುವದೆ |ಶ್ರೀನಾಥನರ್ಚನೆ ಮಹಾಯಜÕವೆನಿಸುವದು 14ಈ ವಿಧದಿ ಮೂರು ಗುಣದಿಂದ ಪರಸ್ಪರ ಜೀವ |ಜೀವರಿಗೆ ಭೇದ ಯೋಗ್ಯತಿ ಪ್ರಕಾರಾ ||ಮೂವರಿಗೆ ಪಾಪಮಿಶ್ರಿತಕರ್ಮಪುಣ್ಯ ಬಹು |ನೋವು ಸ್ವರ್ಗ ನರಕ ಸುಮೋಕ್ಷಾದಿಗತಿಉಂಟು 15ಈ ಜೀವರಿಗೆ ಉಳ್ಳನುಭವ ಜಡಗಳಿಗಿಲ್ಲ |ನೈಜವಾಯಿತು ಭೇದ ಜೀವ ಜಡಕೇ ||ಆ ಜಡ ತ್ರಿ, ನಿತ್ಯಾ ಅನಿತ್ಯನಿತ್ಯಾ,ನಿತ್ಯ|ಮಾಜದವು ಅವ್ಯಾಕೃತ ನಭಶೃತಿ ವರ್ಣಗಳೂ 16ಪ್ರಾಕೃತವಿಕೃತ ವೈಕೃತತ್ರಯ ಅಸ್ಥಿರ ಜಡವು |ಪ್ರಾಕೃತವಜಾಂಡ ಧೊರ ಆವರಣವೂ ||ಸ್ವೀಕೃತೈವತ್ತು ಕೋಟ್ಯೋಜನ ಸುವರ್ಣಾತ್ಮ |ಕಾಕ್ರಮಿಸಿಹದಜಾಂಡಕಿದು ವಿಕೃತ ಜಡವೆಂದು 17ಸರಸಿಜಭವಾಂಡದೊಳಿಹ ನೆಲಜಲಧಿಗಿರಿಗಳು |ಎರಡೇಳುಭುವನವೈಕೃತ ಜಡವಿದೂ ||ಸ್ಥಿರ ಅಸ್ಥಿರ ಜಡತ್ರಯ ವಿಧ ಪುರಾಣಗಳರ್ಥ |ಇರುತಿಹವು ಅಚಲಾಗಿ ಶಬ್ದಗಳ ನಿತ್ಯಾ 18ಮೂಲ ಪ್ರಕೃತಿಗತ ತ್ರಿವಿಧಾನಂತ ಪರಮಾಣು |ಜಾಲಕಾರಣತ ಸುಸ್ಥಿರವೆನಿಪವೂ ||ಮ್ಯಾಲೆ ಅದರಿಂದಾದ ತತ್ವಗಳನಿತ್ಯಮಹ |ಕಾಲವೆಂದಿಗ್ಯುನಿತ್ಯಅಣುಕಾಲಗಳ ನಿತ್ಯಾ19ಹೀಗೆ ಮೂರು ವಿಧ ಜಡ ಒಂದೊಂದೆ ಮೂರು ಮೂ- |ರಾಗಿರಲು ಜಡ ಜಡಕೆ ಭೇದ ಸಿದ್ಧಾ ||ಭಾಗಾರ ಮಾಡಿ ಗುಣರೂಪ ಕ್ರಯದಿ ನೋಡೆ |ನಾಗಾರಿವಹಗೆ ಜಡಗಳಿಗೆ ಭೇದವೇ ಸತ್ಯಾ20ಈ ಕಮಲಜಾಂಡವು ಅನಿತ್ಯವಿದರೊಳಗೆ ಎಂ- |ದೂ ಕೆಡದೆ ಸುಖಕಾಂತಿ ಯುಕ್ತವಾದಾ ||ಶ್ರೀಕಳತ್ರನ ತ್ರಿಧಾಮಗಳು ಕುಕಲಿಗೆ ತಕ್ಕ |ಶೋಕಪೂರಿತವಾದನಿತ್ಯನರಕಗಳಿಹವು 21ಈಪಂಚಭೇದಜ್ಞಾನಿಲ್ಲದವ ಶ್ರೀ ಮುದ್ರಿ |ಗೋಪಿಚಂದನ ಧರಿಸಿದರು ಫಲವೇನೂ ||ಈ ಪೊಡವಿಯೊಳು ವೇಷಧಾರಿಗಳು ಜೀವಿಸರೆ |ಆ ಪರಿಯ ಭಾಸ ವೈಷ್ಣವನೆಂದರಿಯಬೇಕೂ 22ಹರಿಗುರುಗಳ ದಯ ಪಡೆವರಿಗೆರುಚಿತೋರ್ವದಿತ |ರರಿಗೆ ಈ ಕೃತಿಯುಕರ್ಣಕಠೋರವೂ ||ತರಣಿಬರೆ ಸರ್ವರಿಗೆ ಘೂಕಗಾದಂತೆ ಇದು |ಬರಿಯ ಮಾತಲ್ಲ ಶಾಸ್ತ್ರಕೆ ಸಮ್ಮತಾಗಿಹದು 23ಹೀನರೊಳು ಬೆರಿಯದಲೆ ಪಂಚಭೇದವ ತಿಳಿದು |ಸಾನುರಾಗದಲಿಹರಿಸರ್ವೋತ್ತುಮಾ ||ಪ್ರಾಣದೇವರೆ ಗುರುಗಳೆಂದರಿತು ಭಜಿಸುವರು |ಕಾಣರು ಕು ಸಂಸಾರ ಧಾಮತ್ರ ವೈದುವರು 24ಇಪ್ಪತ್ತೈದು ಪದಗಳಿಂದ ಸಂಗತಿಯಾಗಿ |ಒಪ್ಪುತಿಹ ಈ ಪಂಚಭೇದವನ್ನೂ ||ತಪ್ಪದಲೆನಿತ್ಯಪಠಿಸುವರ ಪೊರವವನು ಬೊಮ್ಮ- |ನಪ್ಪ ಶ್ರೀ ಪ್ರಾಣೇಶ ವಿಠಲನಿಹಪರದಲ್ಲಿ 25
--------------
ಪ್ರಾಣೇಶದಾಸರು
ಪಂಚಮಿಯ ದಿನರಂಭೆs :ಏನಿದು ಇಂದಿನವಿಭವನಮ್ಮಶ್ರೀನಿವಾಸನ ಮಹಾತ್ಮವಮಾನಿನಿರನ್ನೆ ನೀ ಪೇಳೆ ಭಕ್ತಾ-ಧೀನದ ಚರಣದ ಲೀಲೆಭಾನುಉದಯದಲಿ ವೀಣಾದಿ ಸು-ಗಾನ ವಾದ್ಯ ನಾನಾವಿಧ ರಭಸದಿ 1ಎತ್ತಲು ನೋಡಿದಡತ್ತ ಜನ-ಮೊತ್ತವಿಲಾಸವಿದೆತ್ತಚಿತ್ತದಿ ನಲಿನಲಿದಾಡಿ ತೋಷ-ವೆತ್ತಿರುವನು ಒಟ್ಟುಗೂಡಿಸುತ್ತುಮುತ್ತು ಒತ್ತೊತ್ತಿಲಿಹರು ವಿ-ಪ್ರೋತ್ತಮ ಶ್ರೀಹರಿಭಕ್ತರ ಮಯವಿದು 2ಚಾಮರ ಛತ್ರ ಸಿಗುರಿಯು ಜನ-ಸ್ತೋಮಪತಾಕೆ ತೋರಣವುಹೇಮದ ಕಂಚುಕಿ ಈಟಿ ಗುಣ-ಧಾಮನ ಬಿರುದುಗಳ್ ಕೋಟಿಆ ಮಹಾಭೇರಿ ಪಟಹ ನಿಸ್ಸಾಳಕಸಾಮಗಾನ ಸಾಮ್ರಾಜ್ಯವೋಲಿಹುದು 3ಬಾಲರು ವೃದ್ಧ ಯೌವನರು\ಜನ-ಜಾಲವೆಲ್ಲರು ಕೂಡಿಹರುಲೋಲಸ್ರೀಮುಂದ್ರಾಂಕಿತದಿ ಬಹು ವಿ-ಶಾಲ ದ್ವಾದಶನಾಮ ಮುದದಿಆಲಯದೊಳಗಿಹ ಬಾಲಕಿಯರು ಸಹಸಾಲಂಕೃತ ಸಮ್ಮೇಳದಿ ನಲಿವರು 4ಒಂದು ಭಾಗದಿ ವೇದಘೋಷ ಮ-ತ್ತೊಂದು ಭಾಗದಿ ಜನಘೋಷಇಂದಿನ ದಿನದತಿಚೋದ್ಯ ಏ-ನೆಂದು ವರ್ಣಿಸುವದಸಾಧ್ಯಚಂದಿರಮುಖಿ ಯಾರೆಂದೆನಗುಸುರೆಲೆಮಂದರಧರಗೋವಿಂದನ ಮಹಿಮೆಯ5ಪೇಳಲೇನದಾ ಮೂರ್ಲೋಕದೊಳಗೀ ವಿ-ಶಾಲವ ನಾ ಕಾಣೆ ಪ.ಸೋಜಿಗಸೌಭಾಗ್ಯ ಸಂಪದಕಿದು ಬೀಜ ಕಾಣೆಲೆರಾಜೀವನಾಭನ ಪೂಜಾವಿನೋದದಿರಾಜವದನೆ ವನಭೋಜನದಿಂದಿನ 1ನೇತ್ರದ ಕಲ್ಮಷವಡಗುವದು ಪವಿತ್ರವಾಗಿಹಗೋತ್ರಕುಮಾರಿ ಪ್ರೀತ್ಯರ್ಥದಿ ಕೊಟ್ಟಿಹರಾತ್ರಿ ಪೂಜೆ ಗೈವ ಮಾತ್ರದಿ ಪೊರಟರು 2ಇಂದಿನ ದಿನದಂದವನೂತನವೆಂದು ನೀ ಪೇಳುವಿಚಂದಿರ ಮುಖಿ ಜನಸಂದಣಿಗಳು ಮಹಾಮಂದಿ ಓಲೈಸುವರಿಂದು ಮುಕುಂದನ 3ಬಾರೆ ನಾರೀಮಣಿ ವೈಯ್ಯಾರೆ ನೀರೆ ಬಾರೆ ಪ.ನಿನ್ನಿಂದಾಯಿತ್ತು ಪುಣ್ಯ ಸಂಪಾದನೆ ಕಣ್ಣಾರೆಕಾಣುವ ಯೋಗಭೋಗ 1ಎನಗತಿ ಮನವು ನಿನಗತಿ ಛಲವುಜನುಮಾಂತರ ಪುಣ್ಯವೈಸೆ ನೀ 2ರಂಭೆ : ಏನಮ್ಮ ಬಾರಿತ್ತಲು ನೋಡೀತನ್ಯಾರಮ್ಮಾಭಾನುಕೋಟಿ ಪ್ರಕಾಶದಿಂದ ಮೆರೆವನಮ್ಮಾ ಪ.ಅನವರತದಿಂದ ಬರುವ ಪುರುಷನಲ್ಲಮೀನಕೇತನ ಶತರೂಪ ಕಾಣೆ 1ನೂತನ ಪುರುಷನಿವನ್ಯಾರೆಂದರಿಯೆನಮ್ಮಾಶಾತಕುಂಭದ ಮಂಟಪವೇರಿ ಬರುವನಮ್ಮಾ 2ಸುರುಚಿರಫಣಿಪ ಪೆಡೆ ಶಿರದೊಳಿರುವದಮ್ಮಾತರತರ ರತ್ನವರದ ಬಾಯೊಳಿರುವದಮ್ಮಾ 3ಕೊರಳೊಳು ಕೌಸ್ತುಭವ ಧರಿಸಿಕೊಂಡಿಹನಮ್ಮಾಪರಮಪುರುಷನಂತೆ ತೋರುವನು ಅಮ್ಮಾ4ಬಾಲಾರ್ಕನಂತೆ ಮುಖ ಪ್ರಜ್ವಲಿಪುದುನೀಲಮಾಣಿಕ್ಯ ಕಾಂತಿಯ ಸೋಲಿಪುದು 5ಮೂರ್ಲೋಕದೊಳಗೆ ಸರಿಯುಪಮೆತೋರಲರಿಯೆಕಾಲಿಗೆರಗುವೆನು ಪೇಳಬೇಕು ಸಖಿಯೆ 6ಕರದೊಳು ಶಂಖಚಕ್ರವ ಧರಿಸಿಕೊಂಡಿಹನಮ್ಮಾಬೆರಳೊಳು ವಜ್ರದುಂಗುರವನಿಟ್ಟವನಮ್ಮಾ 7ವರರತ್ನಖಚಿತದಾಭರಣದಿಂದ ಮೆರೆವಚರಣಸರೋಜದೊಳು ರೇಖೆಯಿಂ ಶೋಭಿಸುವ8ವಲ್ಲಭೆಯರ ಸಹಿತುಲ್ಲಾಸದಿ ಬರುವಖುಲ್ಲರ ಮಾನಸಕೆ ಝಲ್ಲೆನಿಸಿ ಮೆರೆವ 9ಬಲ್ಲಿದಪುರುಷನಿವನೆಲ್ಲಿಂದ ಬಂದಎಲ್ಲವ ಪೇಳೆಲೆಗೆ ನಲ್ಲೆ ಸದಾನಂದ 10ಊರ್ವಶಿ :ನೋಡುನಿತ್ಯಾನಂದಕರನಮೂಡಗಿರಿಯಿಂದೋಡಿ ಬಂದನ ನೋಡೆ ಪ.ಛಪ್ಪನ್ನೈವತ್ತಾರು ದೇಶಕಪ್ಪಕಾಣಿಕೆಗೊಂಬ ತೋಷಸರ್ಪಶೈಲ ರಾಜವಾಸಚಪ್ಪರ ಶ್ರೀ ಶ್ರೀನಿವಾಸ 1ತಿರುಗುತ್ತಿಪ್ಪಾ ತಿರುಮಲೇಶಶರಣ ರಾಮನ ಭಕ್ತಿಪಾಶದುರುಳಿನಲಿ ನಿಂದಿರ್ಪಶ್ರೀಶತರಿಸುವನುಕಾಣಿಕೆವಿಲಾಸ2ಪಟ್ಟದರಸನಾದ ದೇವಸೃಷ್ಟಿಯಾಳುವಜಾನುಭಾವದೃಷ್ಟಿಗೋಚರವಾಗಿ ಕಾಯ್ವಇಷ್ಟವೆಲ್ಲವ ಸಲಿಸಿ ಕೊಡುವ 3ವೃಂದ ನೆರಹಿ ವನಕೆಅಂದಣವೇರಿ ಮುಕುಂದನೊಲವಿನಲಿಕುಂದಣಮಂಟಪವೇರಿ ಮತ್ತೊಬ್ಬನುಸಂದರುಶನವಂ ನೀಡುತ ಯಿಬ್ಬರುಒಂದಾಗುತ್ತಾನಂದವ ಬೀರುತ್ತ 1ಅಕ್ಕ ನೀನೋಡುಬಹುಮಾನದಿಸಿಕ್ಕಿದಿ ಬಿರುದು ಪೊತ್ತಾತೆಕ್ಕೆಪಕ್ಕೆಯ ವಿಲಾಸ ಮನಸಿನೊಳುಉಕ್ಕುವದತಿ ತೋಷಇಕ್ಕೆಲದಲಿ ಬೀಸುವ ಚಾಮರಗಳ ವಕ್ಕಣಿಸುವಸ್ತುತಿಪಾಠಕ ಜನಗಳಮಿಕ್ಕಿ ನೊಡುವ ನೋಟಕೆ ಮನಸಿನೊಳುಝಕ್ಕೆನ್ನುವ ಕ್ಷಿತಿಗಕ್ಕಜ ತೋರುತ್ತಾ 2ಛತ್ರ ಚಾಮರ ತೋರಣ ಪತಾಕೆಪವಿತ್ರ ನಿಶಾನಿಧಾರಣಾಸುತ್ರಾಮಾರ್ಚಿತ ಚರಣಭಕ್ತರನುಪವಿತ್ರಗೈಯುವ ಕಾರಣಮಿತ್ರಮಂಡಳವನು ಮೀರಿ ಪೊಳೆವುತಿಹರತ್ನಖಚಿತ ಮಂಟಪದಲಿ ಮಂಡಿಸಿಧಾತ್ರಿಯೊಳಗೆ ಅನ್ಯತ್ರವಿಲ್ಲೆಂಬುವಕೀರ್ತಿಯ ಧರಿಸಿ ಜಗತ್ರಯಪಾವನ 3ವಾಲಗಶ್ರುತಿಭೇರಿಡಿಂಡಿಮನಿಸ್ಸಾಳ ಪಟಹಭೂರಿತಾಳ ಮೃದಂಗ ರವದಿಂದಜನಜಾಲಕೂಡಿರುವಮೇಳವಿಸುತ್ತನುಕೂಲಿಸಿ ಬಹು ಬಿರುದಾಳಿಗೆ ಸಂಭ್ರಮದೇಳಿಗೆಯಿಂದಲಿಕೋಲು ಪಿಡಿದು ಓಹೋಯೆಂಬಂಥ ವಿ-ಶಾಲ ಭಕ್ತರ ಮೇಲು ಸಂತೋಷದಿ 4ದೇಶದೇಶದ ಜನರು ನಾನಾ ವಿಧಭಾಷೆ ಪ್ರವರ್ತಕರುಆಶಾಪಾಶರು ಪಾತಕಮಾನಸ-ರೀ ಸಮಯದಿ ಶ್ರೀನಿವಾಸನೆ ಎಮ್ಮಯದೋಷಗಳೆಲ್ಲವ ನಾಸಿಸು ಯೆನುತಭಿ-ಲಾಷೆಯ ಜನಗಳ ಪೈಸರದಿಂದಲಿ 5ವೇದಶಾಸ್ತ್ರಪೌರಾಣಪ್ರಜÕರು ತರ್ಕವಾದಿಪಾಠಕ ಜಾಣಸಾಧು ಕುಶಲದಿ ವಿದ್ಯಾಪ್ರವೀಣವಿನೋದ ಸಿದ್ಧ-ಸಾಧ್ಯ ಸಾದರದಿಂದ ಸರಸಕವಿ ವಾಗೀಂ-ದ್ರಾದಿಗೀರ್ವಾಣಸಮುದಾಯದಿಂದ ಕೃ-ಪೋದಯ ತೋರುತ್ತಾದಿಮೂರುತಿ ಜಯ-ನಾದದಿ ಭಕ್ತರಮೋದಪಡಿಸುತ್ತಾ6ರಂಭೆ : ನಾರಿ ಕೇಳೆ ಶ್ರೀರಮಾಧವಸ್ವಾರಿ ಪೊರಟ ಕಾರಣ ಪೇಳೆ 1ಯಾವ ರಾಜ್ಯದಿ ಪ್ರಭುದೇವಸ್ವಾರಿಯಠೀವಿಯ ಕಾಣೆ ಅಂತರ್ಭಾವವೇನೆ 2ಭೂರಿದೇಶವ ಸಂತತಪ .ವೀರವೈಷ್ಣವ ಭಕ್ತರು ಸದ್ಭಕ್ತಿಯಸಾರದಿ ನಿಲಿಸಿದರುಮಾರಜನಕನಿಗೆ ಮನನಿಲ್ಲದೆ ಸಂ-ಚಾರಕೆ ತಾ ಮೈದೋರಲು ಬೇಕೆಂ-ಬೀ ರೀತಿಗೆ ತಾ ಪೂರ್ವಸ್ಥಾನ ವಿ-ಚಾರಕೆ ಬಂದಿಹ ಕಾರಣವೀಗಲೆ 1ರಾಜ ಬಂದನೆ ಅಮ್ಮಾ ಆಶ್ರಿತಸುರ-ಭೂಜಬಂದನೆ ಅಮ್ಮಾಓಜೆಯಿಂದಲಿ ಕಾಣಿಕೆಯನ್ನು ಒಪ್ಪಿಸಿರಾಜಕದಿವ್ಯಾರತಿಯನು ಎತ್ತುತರಾಜೀವನಾಭನೆ ರಕ್ಷಿಸೆನುತ್ತಲಿಸೋಜಿಗಪಟ್ಟೆಲ್ಲಾಜನವಿರ್ದುದು 2
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಪತಿಭಕುತಿಯಿಲ್ಲದಿಹ ಸತಿಯ ಸಂಗವ್ರತಗೆಟ್ಟು ಸುಖ ಪಡೆಯಲಿಲ್ಲವೊ ರಂಗ ಪ.ಗಂಡ ಬಂದರೆ ಎದ್ದುನಿಲ್ಲದೆ ಆ ಕ್ಷಣದಿಕಂಡಾಡಿ ಏಕವಚನಂಗಳನಾಗಅಂಡಲೆದು ಮಾರ್ಮಲೆಂದು ಕಾಡಿಬೇಡುವ - ಇಂಥಭಂಡುದೊತ್ತಿನ ಕೂಟ ಏಳುನಾಗರ ಕಾಟ 1ಒಂದು ತಂದರೆ ಮನೆಗೆ ಹತ್ತಾಗಿ ಭಾವಿಸದೆತಂದರೆ ಹತ್ತು ಮನೆಯೊಳಗೊಂದ ಮಾಡಿಇಂದಿಗೆ ಇಲ್ಲವೆಂದು ಮುಖವ ತಿರುಹುತಲಿ ಮದದಿಂದ ಹೋಹಳು ನಾರಿ ಬಹು ದೊಡ್ಡಮಾರಿ2ಮಕ್ಕಳಿಗೆ ಇಡಲಿಲ್ಲ ಮರಿಗಳಿಗೆ ತುಡಲಿಲ್ಲಇಕ್ಕುವಡೆ ಬೆಳ್ಳಿ - ಬಂಗಾರವಿಲ್ಲಚಿಕ್ಕವಳು ನಾ ನಿನ್ನ ಕೈಪಿಡಿದು ಕೆಟ್ಟೆನೆಂಬಮೂರ್ಖ ತೊತ್ತಿನ ಸಂಗ ಕುಲಕೆಲ್ಲಭಂಗ3ತಾಯನು ಹೊರಡಿಸು ತಂದೆಯನು ತೆರಳಿಸುದಾಯಾದಿಯನು ಮನೆಯಲಿರಿಸಬೇಡಬಾಯಿನ್ನುಮನೆ ಕಟ್ಟಿ ಬೇರಿರುವ ನಾವೆಂಬಮಾಯಾಕಾತಿಯ ಸಂಗ ಅಭಿಮಾನಭಂಗ4ಇಷ್ಟನೆಲ್ಲವ ಬಿಟ್ಟು ಕೆಟ್ಟೆನೈ ನಾನಿಂದುಕಷ್ಟ ಸೆರೆಯೆನುವೆನೆ ಈ ಪರಿಯಲಿಸ್ಪಷ್ಟಿಗಾಧಿಕನಾದ ದಿಟ್ಟ ಶ್ರೀಪುರಂದರವಿಠಲ ಪಶ್ಚಿಮದ ರಂಗಧಾಮ 5
--------------
ಪುರಂದರದಾಸರು