ಒಟ್ಟು 32858 ಕಡೆಗಳಲ್ಲಿ , 139 ದಾಸರು , 10357 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಕ್ಷುಮಿ ನಾರಾಯಣ ಸಂರಕ್ಷಿಸು ಎನ್ನನು ಬೇಗ ಪ. ಪಕ್ಷ್ಮ(?)ಗಳಕ್ಷಿಗಳನು ಕಾವಂದದೊಳಕ್ಷಯ ನಿಧಿಯ ಸ- ಮಕ್ಷದಿ ತೋರುತ ಅ.ಪ. ಅರ್ಭಕನಾ ಮೋರೆ ಕೇಳಿ ಕರ್ಬುರ ಚರ್ಮನ ಸೀಳಿ ಗರ್ಭೀತ ಕರುಳ ಮಹಾರ್ಭಟದಿಂ ತೆಗದುರ್ಬಿಗೆ ಬೀರಿದ ನಿರ್ಭಯಕಾರಿ 1 ಮಣಿಗರ್ಭ ಮೂರ್ತಿಗೆ ನೀ ಎಣೆಯಾಗಿಲ್ಲಿಗೆ ಬಂದು ಕುಣಿಯಲು ನಿಧಿ ಸಂದಣಿಗೊಳದಿರೆ ಲಕ್ಷಣಕೆ ಕೊರತೆಯಂ- ದೆಣಿಸರೆ ಸುಜನರು 2 ಶಕ್ರ ಚತುಷ್ಕರ ಸಿರಿಯು ಚಕ್ರಗದಾಬ್ಜರ ಪರಿಯು ವಕ್ರ ಮತಿಯ ರಿಪುಚಕ್ರವ ತರಿವ ಪರಾಕ್ರಮ ಕರುಣೋ- ಪಕ್ರಮ ತೋರುತ 3 ಅಂಬುಜನಾಭನೆ ನಿನ್ನ ನಂಬಿದ ಭಾವನೆಯೆನ್ನ ತುಂಬಿದ ಜಗದೊಳಗಿಂಬುಗೊಂಡಿಹ ನಿನಗೆಂಬುದೇನು ಪೀ- ತಾಂಬರ ಧಾರಿ4 ಎರಡೊಂದು ಋಣಬಂಧ ಪರಿಹರಿಸೊ ಗೋವಿಂದ ಸುರತರು ಕರುಣಾರಸವಿರಿಸು ಶೇಷಗಿರಿ- ವರ ತ್ವರೆಯಿಂದ 5
--------------
ತುಪಾಕಿ ವೆಂಕಟರಮಣಾಚಾರ್ಯ
ಲಕ್ಷುಮೀನಾರಾಯಣ ಜಯಲಕ್ಷುಮೀ ನಾರಾಯಣ ಲಕ್ಷುಮೀನಾರಾಯಣ ಜಯ ಲಕ್ಷುಮೀ ನಾರಾಯಣ ಪ. ಪಾದ ದಾನವ ಗರ್ವಹರಣ ಗದಾದಿ ಧಾರಣ ಪರ್ವತಾರಿ ವರ ಪ್ರದ 1 ನಂಬಿಕೊಂಡಿಹೆ ನಿನ್ನ ದಿವ್ಯ ಪದಾಂಬುಜಗಳನು ಸರ್ವಕಾಲದಿ ಮನದೊಳಗಿಂಬುಗೊಳು ಕಮಲಾಂಬಕ 2 ಆರು ಸಂಖ್ಯೆಯ ಕಳ್ಳರೆನ್ನನು ಗಾರುಮಾಡುವರಾದರಿಂದತಿ ಧೀರ ನಿನ್ನ ಪದಾರವಿಂದಕೆ ದೂರುವೆನು ರಘುವೀರನೆ 3 ದುರ್ಮತಿಗಳಾದಸುರಹರಣಕೆ ಭರ್ಮಗರ್ಭನು ಬಂದು ಸ್ತುತಿಸಲು ಧರ್ಮಸಂಸ್ಥಾಪಿಸುತ ಬಹು ಶುಭಕರ್ಮ ತೋರುವ ಕರುಣಿಯೆ 4 ಸಪ್ತ ಋಷಿಗಳ ಕೂಡಿಕೊಂಡತಿ ಭಕ್ತಿಯಿಂದಲಿ ನಿನ್ನ ಭಜಿಸಿದ ಸತ್ಯವ್ರತನಿಗೆ ಸಕಲ ಶ್ರುತಿಗಳ ತತ್ವ ತಿಳಿಸಿದ ಮತ್ಸ್ಯನೆ 5 ಮುಳುಗಿಕೊಂಡಿಹ ಅಮಿತಗುರು ಮಂದರವ ಧರಿಸುತ ಅಮೃತರಸ ತೆಗೆದಿತ್ತನೆ 6 ದೈತ್ಯನ ತರಿದು ಬಿಸುಟು ವಿ- ಜನಿತ ಪವಿತ್ರ ಯಜ್ಞ ವರಾಹನೆ 7 ಘಡುಘಡಿಸಿ ಕಂಬದೊಳು ಬಂದ ಸಿಡಿಲಿನಂತಿಹ ನಖದಿ ದೈತ್ಯನ ಒಡಲ ಬಗೆದನು ಕೋಪದಿಂದ 8 ದಾನಕೊಂಡನಾನೆವನದಿ ದಾನವಾಹೃತ ಧರೆಯ ಕಸ್ಯಪಸೂನುಗಳಿಗೊಲಿದಿತ್ತನೆ 9 ದುಷ್ಟಭೂಭುಜಭಾರದಿಂದತಿ ಕಷ್ಟಪಡುತಿಹ ಧರೆಯ ಕರುಣಾ ನೃಪರ ಕಡಿದ 10 ನೀರಜಾವದನಾರವಿಂದ ಮಹಾ ರಸಾಸ್ವಾದನ ಪದ ಕಪಿವೀರನಿಗೆ ಸ್ವಾರಾಜ್ಯ ನೀಡಿದ ಮಾರುತಿಗೆ ದಯ ಮಾಡಿದ 11 ಬಾಲ ಲೀಲೆಯ ತೋರಿ ಗೋಪಕ ಬಾಲೆಯರ ಕೂಡಾಡಿದೆ ಖೂಳಕಂಸನ ಕೆಡಹಿ ದಾನವಮೂಲ ಕಿತ್ತು ಬಿಸಾಡಿದೆ 12 ಜೈನರನು ಮೋಹಿಸುವೆನೆಂದನುಮಾನವಿಲ್ಲದೆ ನಗ್ನನಾಗಿ ಹೀನ ಬುದ್ಧಿಯ ತಿಳಿಸಿ ತ್ರಿಪುರವ ಹಾನಿಗೈಸಿದ ಬೌದ್ಧನೆ 13 ಸುಧೆಯನು ಕರೆದು ಶಿರದಲಿ ತುಂಗ ವಿಷಯ ತರಂಗ ತಪ್ಪಿಸು ಅಂಗಭಂಗವ ಶಿಂಗನೆ 14 ಮಿಂಚಿನೊಡ್ಡಿದ ಮೇಷನಂದದಿ ಪಂಚವರ್ಣದ ತುರಗವೇರಿ ಸಂಚರಿಸಿ ಮ್ಲೇಂಛರನು ಕೊಲ್ಲಿಸಿ ಲಾಂಛಜೀವನ ವರದನೆ 15 ಮಂದಿರದಿ ನೀ ಬಂದು ರಕ್ಷಿಪೆ ಎಂದು ಸಕಲಾನಂದಗೊಂಡಿಹೆ ಇಂದಿರೇಶನೆ ಎಂದಿಗೂ ಈ ಅಂದದಿಂದಲಿನಿಂದ ಸಲಹು 16 ಕೇಶವಾದಿ ದ್ವಿದಶರೂಪವು ಮಾಸಗಳಿಧಿಷ್ಠಾನನಿಗೆ ಪ- ರೇಶ ಕಡೆಯಲಿರುವ ಕಾರ್ತಿಕವಾಸ ದಾಮೋದರ ಹರನೆ 17 ಬಳಲಿ ಕರ್ಮವ ಮಾಡಲಾರೆ ನಳಿನಜಾರ್ಜಿತ ನಿನ್ನ ಪಾದದ ನೆಳಲನಂಬಿ ಸುಮ್ಮನಿರುವೆ 18 ಅಖಿಳದೋಷ ನಿವಾರಣಾದ್ಭುತ ಸಕಲಸದ್ಗುಣಧಾರಣಾ ಕುಂಡಲ ಧಾರಿ ವೆಂಕಟಶಿಖರ ವರ ಸುಖಕಾರಣಾ 19
--------------
ತುಪಾಕಿ ವೆಂಕಟರಮಣಾಚಾರ್ಯ
ಲಕ್ಷ್ಮಿ ನರಹರಿ ವಿಠಲ | ರಕ್ಷಿಸೋ ಇವಳ ಪ ತ್ರ್ಯಕ್ಷ ಬಿಂಬನೆ ಸ್ವಾಮಿ | ಪಕ್ಷಿವಹ ಕರುಣಾಕಟಾಕ್ಷ ದಿಂದೇಕ್ಷಿಸುತ | ಕಾಪಾಡೊ ಹರಿಯೇ ಅ.ಪ. ಅಕ್ಷಿ ಮೂರುಳ್ಳ ನಿಟಿ | ಲಾಕ್ಷನೈ ರೂಪದಲಿಅಕ್ಷಿ ಗೋಚರನಾಗಿ | ಸ್ವಚ್ಛ ತೈಜನನೇದೀಕ್ಷೆ ದಾಸತ್ವದಲಿ | ಲಕ್ಷ್ಯವಿಟ್ಟಿಹಳ ಉ-ಪೇಕ್ಷಿಸದೆ ದಯತೋರ್ದೆ | ಲಕ್ಷ್ಮಿ ನರಸಿಂಹಾ 1 ಮನ್ಯು ಸೂಕ್ತದಿಂ ಬ | ಹ್ಪನ್ನ ಭೊಕ್ತøವಿನಿಂದಚೆನ್ನಾಗಿ ಸೇವಿತನೆ | ಅನ್ನಂತ ಮಹಿಮಾಬಿನ್ನವಿಪೆ ನಿನಗೆ ಕಾ | ರುಣ್ಯ ಮೂರುತಿ ಹರಿಯೆಕನ್ಯೆಗಭಯದನೆ ಆ | ಪನ್ನ ಪರಿಪಾಲಾ 2 ಲೌಕಿಕದಿ ಬಹುಪರಿಯ | ಸೌಖ್ಯಗಳ ನೀನಿತ್ತುಪ್ರಾಕ್ಕು ಕರ್ಮವ ಕಳೆದು | ಕಾಪಾಡೊ ಹರಿಯೇ |ಚೊಕ್ಕ ಭಕ್ತಿ ಜ್ಞಾನ | ಅಕ್ಕರದಿ ತವಪದದಿಉಕ್ಕುವ ಪರಿಮಾಡು | ರಕ್ಕಸಾಂತಕನೇ 3 ನೀಚೋಚ್ಚ ತರತಮವು | ಪಂಚ ಬೇದವನರುಹಿಸಂಚಿತವ ದಹಿಸೂವ | ಹಂಚಿಕೆಯನಿತ್ತೂಅಂಚೆವಹಪಿತನೆ ಹೃ | ತ್ಪಂಕಜದಿ ನಿನಕಾಂಬಸಂಚಿಂತನೆಯ ನೀಯೊ | ಪಂಚ ಪ್ರಾಣಾತ್ಮಾ 4 ಪಾವಮಾನಿಯ ಪ್ರೀಯ | ಸಾರ್ವಕಾಲದಿ ನಿನ್ನಪಾವನ ಸ್ಮøತಿಯಿತ್ತು | ಭಾವದಲಿ ತೋರೋ |ನೀವೊಲಿಯುತಿವಳಿನ್ನ | ಕಾವುದೆನೆ ಬಿನ್ನೈಪೆಗೋವಿದಾಂಪತಿಯೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಲಕ್ಷ್ಮೀ ದೇವಿ ಇಂದಿರೆ ನಾ ನಿನ್ನ ವಂದಿಸಿ ಬೇಡುವೆ ಬಂದು ನೀ ಪಾಲಿಸೇ ಚಂದಿರವದನೆ ಪ ಸಿಂಧು ಕುಮಾರಿಯೆ ಎಂದಿಗೂ ನಿನ್ನ ಪದ ದ್ವಂದ್ವವ ಸೇವಿಪೆನೆಂದು ನಾ ಬೇಡುವೆ ಅ.ಪ ದೇವಿ ನಿನ್ನಂಘ್ರಿಯ ಸೇವಿಸಿ ಪದ್ಮಭವ ಭಾವಿ ಫಣೇಶ ಸುರಾಧಿಪರೆಲ್ಲರು ಈ ವಿಧವಾದನುಭಾವವ ಪೊಂದಿರಲು ಈ ವಿಷಯಕೆ ಶ್ರುತಿ ಸಾವಿರವಿರುವುದೆ 1 ಪನ್ನಗವೇಣಿಯೆ ನಿನ್ನನೆ ನಂಬಿರಲು ಸಣ್ಣ ಮನುಜರ ವರ್ಣಿಪುದೇಕೆಲೆ ಎನ್ನಪರಾಧವ ಮನ್ನಿಸಿ ಕೃಪೆಯನು ಎನ್ನೊಳು ತೋರಲು ಧನ್ಯ ನಾನಾಗುವೆ 2 ತಾಮರಸಾಕ್ಷಿಯೆ ನಾಮಗಿರೀಶ ಶ್ರೀ ಸ್ವಾಮಿ ನೃಸಿಂಹನ ಕಾಮಿನೀಮಣಿಯೇ ಕೋಮಲಗಾತ್ರಯೆ ಶ್ರೀ ಮಹಾಲಕ್ಷ್ಮಿ ಎನ್ನ ಸಹೋದರಿ 3
--------------
ವಿದ್ಯಾರತ್ನಾಕರತೀರ್ಥರು
ಲಕ್ಷ್ಮೀ ದೇವಿ ಕಾದಿರುವಳು ರುಕ್ಮಿಣಿ ಕೃಷ್ಣ ಬರುವನೆಂದು ಪ. ಕರವ ಪಿಡಿವನೆಂದು ಅ.ಪ. ವಿಪ್ರನ್ನ ಕಳುಹಿರುವೆನು ಕ್ಷಿಪ್ರದೊಳು ಗುಡಿಯೊಳಿಹೆನು ಅಪ್ರಮೇಯ ನಿನ್ನಡಿಗಳನ್ನು ಸುಪ್ರಕಾಶ ನಂಬಿರುವೆನೆಂದು 1 ಶಿಶುಪಾಲನೊಲ್ಲೆನೆಂದು ವಸುಧೀಶ ನೀನೆ ಗತಿಯೆಂದು ಹಸುಳೇಯ ಸಲಹು ಎಂದು ಬೆಸಸಿಹೆನು ಪತ್ರವೆಂದು 2 ರಥವೇರಿ ಬರುತಲಿಹನೊ ಪಥದೊಳು ಕಾದಿರುವನೊ ರತಿಪತೀ ಪಿತನ ಪದವ ಅತಿಶಯದಲಿ ಕಾಣುವ ತವಕದಿ 3 ಶಂಕಾತುರಂಗಳಿಂದ ಶಂಕರೀಯಪೂಜೆಗೈದು ಕಿಂಕಿಣಿಯ ನಾದದಿಂದ ಶಂಕರಾದಿವಂದ್ಯ ಬರುವ ಪಥದಿ ಬಂದು 4 ಬಂದಾನೋ ಬಾರನೋ ಎನುತಾ ಇಂದಿರೆಯ ಅರಸನ್ಹೊರತು ಪೊಂದಲಾರೆನನ್ಯರನೆನುತ ಸುಂದರೀಮಣಿ ಕೃಷ್ಣನಾಗಮ ನೋಡುತ 5 ದ್ವಾರಕಿಯಾ ನಾಥ ಬಂದು ಪಾರುಗಾಣಿಸುವನೆಂದು ಚಾರುಕರದೊಳೆತ್ತಿ ಎನ್ನ ದ್ವಾರಕೆಗೊಯ್ವ ಶ್ರೀ ಶ್ರೀನಿವಾಸನೆಂದು 6
--------------
ಸರಸ್ವತಿ ಬಾಯಿ
ಲಕ್ಷ್ಮೀ ನಾರಾಯಣ ವಿಠಲ | ಪೊರೆಯ ಬೇಕಿವಳಾ ಪ ವಾಹನ ದೇವ | ಲಕ್ಷುಮಿಯ ರಮಣಾ ಅ.ಪ. ಸೃಷ್ಟಿ ಸ್ಥಿತಿ ಸಂಹಾರ | ಅಷ್ಟಕ್ಕು ಕಾರಣನೆಕಷ್ಟಗಳ ಪರಿಹರಿಸಿ | ಕಾಪಾಡೊ ಹರಿಯೇ |ಶಿಷ್ಟ ಸದಾಚಾರ | ನಿಷ್ಠೆಯಲಿ ಗೈಯ್ಯುವಳುಶಿಷ್ಟೇಷ್ಟ ಹರಿಯೆ ಸದ | ಭೀಷ್ಟಗಳಗರೆಯೋ 1 ವಿೂಸಲೆಂದೆನಿಸಿರುವ | ದಾಸತ್ವದಾಕಾಂಕ್ಷೆಸಾಸಿರಕ್ಕೋರ್ವರಿಗೆ | ಲೇಸು ಪುಟ್ಟವುದೋಈ ಸಮಯದಲ್ಲೀಕೆ | ಆಶಿಸುತ್ತಿಹಳಯ್ಯಕೇಶವನೆ ಒಲಿದಿವಳ | ದಾಸ್ಯ ಸ್ವೀಕರಿಸೋ 2 ಶುದ್ಧ ತರತಮ ಜ್ಞಾನ | ಮಧ್ವೇಶನಲಿ ಭಕುತಿಇದ್ವದಕೆ ತೃಪ್ತಿಯಿಂ | ಬದ್ಧ ವೈರಾಗ್ಯಾಸಿದ್ಧಿಸುತ ಸಾಧನದಿ | ಬದ್ಧ ಕಂಕಣಳೆನಿಸೊಅದ್ವಿತೀಯನೆ ಹರಿಯೆ | ಮಧ್ವಾಂತರಾತ್ಮಾ 3 ಮುಪ್ಪುರದ ವೈರಿನುತ | ಸರ್ಪಶಯನನೆ ದೇವಾಸ್ವಪ್ನ ಸೂಚನೆಯಂತೆ | ಗೋಪ್ಯದಂಕಿತವಾಸುಪ್ತೀಶ ಇತ್ತಿಹೆನೊ | ಒಪ್ಪಿ ಕೈಪಿಡಿ ಇವಳಗುಪ್ತ ಮಹಿಮನೆ ದೇವ | ಆಪ್ರಕಟ ಹರಿಯೇ 4 ಶರ್ವಾದಿ ದಿವಿಜೇಡ್ಯ ಶಾರ್ವರೀಕರ ಪಾಲದುರ್ವಾದಿ ತಿಮಿರಕ್ಕೆ ಮಾರ್ತಾಂಡ ರೂಪೀದರ್ವಿ ಜೀವಿಯ ಕಾವ | ನಿರ್ವಹಣೆ ನಿನ್ನದೋಗುರ್ವಂತರಾತ್ಮ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಲಕ್ಷ್ಮೀ ಮನೋಜ್ಞ ವಿಠಲ | ಕಾಪಾಡೊ ಇವಳಾ ಪ ಪಕ್ಷೀಂದ್ರವಹ ಹರಿಯೆ | ಇಕ್ಷುಶರ ಪಿತನೇ ಅ.ಪ. ಸುಕೃತ | ದಿಂದ ಫಲ ತೊರೆತಿಹುದುಮಂದಾಕೀನಿ ಜನಕ | ಇಂದಿವಳ ಪೊರೆಯೆ 1 ಹರಿಯೆ ಪರತರನೆಂಬ | ಸುರರ ಮನೊ ಭಾವದಲಿಹರಿ ಗುರು ಹಿರಿಯರಲಿ | ವರಭಕ್ತಿಯುತಳೂತರತಮದ ಸುಜ್ಞಾನ | ವರಭೇದ ಪಂಚಕದಅರಿವಿತ್ತು ಪೊರೆ ಇವಳ | ಮರುತಾಂತರಾತ್ಮ 2 ಕಂಸಾರಿ ಪೂಜೆ ಎಬಂಶವನು ತಿಳಿಸುತ್ತ | ಕಾಪಾಡೊ ಹರಿಯೇಸಂಶಯವುರಹಿತ ತ | ತ್ವಾಂಶ ದರಿವಿತ್ತು ವಿಪಾಂಸಗನು ಹರಿಯಪದ | ಪಾಂಸುವನೆ ತೊಡಿಸೋ 3 ಅಕ್ಷಯ ಫಲದಾತಈಕ್ಷಿಸೋ ಇವಳ ಕರು | ಣೇಕ್ಷಣದಿ ಹರಿಯೇ 4 ಗೋವತ್ಸ ದನಿಕೇಳಿ | ಧಾವಿಸುವ ಪರಿಯಂತೆಶ್ರೀವರನೆ ನೀನಾಗಿ | ಓವಿ ಪೊರೆ ಎಂಬಾಆವ ಈ ಬಿನ್ನಪವ | ನೀವೊಲಿದು ಸಲಿಸುವುದುಗೋವಿದಾಂಪತಿ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಲಕ್ಷ್ಮೀ ಮನೋಹರ ವಿಠಲ | ರಕ್ಷಿಸೋ ಹರಿಯೇ ಪ ಲಕ್ಷಿಸದಲೇ ಇವಳ | ಲಕ್ಷಾಪರಾಧಾ ಅ.ಪ. ತೈಜಸ ಮೂರ್ತಿದರುಶನವ ತಾನಿತ್ತು | ಹರುಷ ಪಡೆಸಿಹನೋಹರಿದಾಸ್ಯಕೇ ಮಾರ್ಗ | ವರಸೂಚಿ ಎಂಬಂತೆಪರಮ ಸಿದ್ಧತೆ ತೋರ್ದೆ | ವರಸತೀ ಮಣಿಗೇ 1 ಕಾರುಣಿಕ ನೆಂ | ದರಿತು ಬೇಡುವೆ ಹರಿಯೆಸರುವ ಕಾರ್ಯದಿ ನಿನ್ನ | ಸ್ಮರಣೆ ಸುಖವೀಯೋ 2 ಎರಡು ಮೂರ್ಭೇಧಗಳ | ಅರಿವನೀಕೆಗೆ ಇತ್ತುಎರಡು ನಾಲ್ಕರ ವರ್ಗ | ದೂರಗೈಸೋಮರುತಾಂತರಾತ್ಮ ನಿ | ನ್ಹೊರತು ಕಾಯುವರಾರೊಎರಡೇಳು ಭುವನಗಳ | ಅರಸಿಯೂ ಕಾಣೇ 3 ವಿಶ್ವ ಕರ್ಮ | ಸತ್ಶ್ರವಣ ಕೊಡುತಾ 4 ಭೂವಿ ಬುಧ ಹೆದ್ದೈವ | ಮಾವಿನೋದಿಯೆ ಹರಿಯೆನೀವೊಲಿಯ ದಿನ್ನಿಲ್ಲ | ಮಾವ ಕಂಸಾರೀದೇವ ದೇವೇಶ ಗುರು | ಗೋವಿಂದ ವಿಠ್ಠಲ್ಲಭಾವದೊಳು ಮೈದೋರಿ | ಕಾವುದೀಕೆಯನೂ 5
--------------
ಗುರುಗೋವಿಂದವಿಠಲರು
ಲಕ್ಷ್ಮೀ ವೆಂಕಟೇಶ ವಿಠಲ | ರಕ್ಷಿಸೋ ಇವಳಾ ಪ ವಿಶ್ವ ವ್ಯಾಪಕನೇ ಅ.ಪ. ಪುಟ್ಟಿ ಸತ್ಕುಲದಲ್ಲಿ | ತೊಟ್ಟು ಸತ್ಸಿದ್ಧಾಂತ ಇಷ್ಟ ಪಡುತಿಹಳಯ್ಯ | ಕಷ್ಟದಾಸತ್ವಾಇಷ್ಟ ಮೂರುತಿ ನೀನು | ತೈಜಸೀ ರೂಪದಲಿಸ್ಪಷ್ಟ ತೋರಿದ ಹರಿಯೆ | ಇತ್ತೆ ಉಪದೇಶಾ 1 ಮರುತ ಮತದಲಿ ದೀಕ್ಷೆ | ಹಿರಿಯರನು ಸರಣೆಯಲಿನಿರುತ ಆಸಕ್ತಿಯನು | ಕರುಣಿಸುತ ಭವದಾಶರಧಿಯನೆ ದಾಟಿಸುವ | ಮಾರ್ಗವನೆ ತೋರೊ ಹರಿಕರುಣಾಂಬುನಿಧಿಯೆಂದು | ಮೊರೆ ನಿನಗೆ ಇಡುವೇ 2 ಕಷ್ಟ ನಿಷ್ಠೂರಗಳ | ಸುಷ್ಠುಸಮತೆಲಿ ಉಂಬಶ್ರೇಷ್ಠ ಮತಿಯನೆ ಇತ್ತು | ರಕ್ಷಿಸೋ ಇವಳಾ |ಅಷ್ಟ ಸೌಭಾಗ್ಯಗಳ | ಕೊಟ್ಟು ಕಾಯಲಿ ಬೇಕೊಕೃಷ್ಣ ಮೂರುತಿ ಹರಿಯೆ | ಭಕ್ತ ವತ್ಸಲ್ಲಾ 3 ಪರಮಾರ್ಥ ಸಾಧನಕೆ | ಗುರು ಕರುಣಬೇಕೆಂಬವರಮತಿಯ ಕರುಣಿಸುತ | ಪೊರೆಯ ಬೇಕಿವಳಾಗರುಡ ಗಮನನೆ ದೇವ | ಸರ್ವಾಂತರಾತ್ಮಕನೆಕರುಣದಿಂ ಕೈ ಪಿಡಿದು | ಉದ್ಧರಿಸೋ ಇವಳಾ 4 ಪಾವಮಾನಿಯ ಪ್ರೀಯ | ಭಾವದಲಿ ಮೈದೋರಿಜೀವಿಯನು ಉದ್ಧರಿಸೋ | ದೇವ ದೇವೇಶಾಗೋವತ್ಸದನಿ ಕೇಳಿ | ಆಪು ಪೊರೆವಂತೆ ತೋರಿಗೋವಿದಾಂಪತಿ ಗುರೂ | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಲಕ್ಷ್ಮೀ ಸ್ತುತಿಗಳು ಆರೋಗಿಸು ತಾಯೇ ಮೋದದಿ ಕ್ಷೀರಾಂಬುಧಿ ತನಯೆ ಪ. ಸಾರಸನಯನೆ ಮದವಾರಣಗಮನೆ ಸಾರಿ ಚೀಡುವೆ ಸರಾಗದೊಳೀಕ್ಷಿಸು ಅ.ಪ. ಉಪ್ಪು ಉಪ್ಪಿನಕಾಯಿಕೋಸುಂಬರಿ ಹಪ್ಪಳ ಸಂಡಿಗೆಯ ತಪ್ಪದೆ ತಂದೊಪ್ಪಿಸುತಿಹೆ ಎನ್ನಪ್ಪನೊಡನೊಪ್ಪದಿ ವ ುಂಡಿಸಿ 1 ಚಕ್ಕುಲಿ ಕರಜಿಕಾಯಿ ಅತಿರಸ ಸಕ್ಕರೆ ಹೋಳಿಗೆಯಂ ನಲಿಯುತ 2 ದಧಿ ನವನೀತ ಘೃತ ಮಧುಸಾರವೆನಿಪ ಪರಮಾನ್ನ ಕ್ಷೀರಶರಧಿಸುತೆ ನೀ ನೀರಸ ಸಹಿತಾಪಾರ ಕೃಪಾಪಾಯದೊಳೀಕ್ಷಿಸಿ3 ಸವಿನೋಡುತೆ ನಲಿದು4 ನಿಗಮಾಗಮ ವಿನುತೇ ನಮಿಸುವೆ ನಗಧರ ಸುಪ್ರೀತೆ ಗುಣಗಳ ಬಗೆಗೊಳಿಸುತ್ತಲಿ 5
--------------
ನಂಜನಗೂಡು ತಿರುಮಲಾಂಬಾ
ಲಕ್ಷ್ಮೀದೇವಿ 13 ಭಾಗ್ಯವ ಕೊಡು ತಾಯೆ ಪ ಭಾರ್ಗವಿ ನಿನ್ನಯ| ಪದಯುಗಕೆರಗುವೆ| ಭಾಗ್ಯದ ಲಕ್ಷ್ಮೀ ಸೌ| ಭಾಗ್ಯದ ನಿಧಿಯೇ ಅ. ಪ ಸಾಗರಸಂಜಾತೆ| ದೇವಿ| ನಾಗವರದಪ್ರೀತೆ || ಯೋಗಿಜನಾವಳಿ| ಮಾನಸಪೂಜಿತೆ | ಅಗಣಿತಗುಣಮಣಿ| ತ್ರಿಜಗದ್ವಂದಿತೆ 1 ಸುರುಚಿರಸುಮಗಾತ್ರೆ | ದೇವಿ| ಹಿಮಕರನಿಭವಕ್ತ್ರೆ || ಕಿನ್ನರ | ಸುರಮುನಿ ಪೂಜಿತೆ | ಕಾಮಿತವೀಯುವ || ಕರುಣಾಕರೆಯೆ 2 ಜನನಿಯೆ ನಿರತವು ನೀ | ಪ್ರೇಮವ | ನಿರಿಸುತಲೆನ್ನೊಳು ನೀ | ಕನಕದ ವೃಷ್ಟಿಯ | ಕರೆಯುತಲನುದಿನ | ಮನ್ಮನದಿಷ್ಟವು | ಸಿದ್ಧಿಸುವಂದದ 3 ಅಹಿಪತಿ ಶಯನನಿಗೆ | ಮೋಹದ | ಮಹಿಷಿಯು ನೀನಾಗೆ || ಮಹಿಮಾಕರೆ ನೀ | ಮಹಿಯೊಳಗನಿಶವು | ಇಹಪರ ಸುಖವನು | ಭವಿಸುವ ತೆರದಾ 4 ಅಜಭವಸುರವಿನುತೆ | ದೇವಿ | ಸುಜನಾವಳಿಪ್ರೀತೆ || ಗಜವಾಹಿನಿ ವರ | ಮದಗಜಗಮನೆಯೆ | ವಿಜಯವಿಠಲಪ್ರಿಯೆ ಶ್ರೀ ಗಜಲಕ್ಷ್ಮಿಯೆ 5 ಶುಭ | ಮಂಗಳೆ ಸುಪವಿತ್ರೆ || ಮಂಗಳಾಂಗಿ ನರ | ಸಿಂಗನ ರಮಣಿಯೆ | ಮಂಗಳಕಾರ್ಯಗ | ಳನುದಿನವೆಸಗುವ 6 ಪಂಕಜದಳನೇತ್ರೆ | ದೇವಿ | ಕಿಂಕರನುತಿಪಾತ್ರೆ || ಶಂಖಚಕ್ರಾಂಕಿತ | ಶ್ರೀ ವೈಕುಂಠನ |ಅಂಕದಿ ಮೆರೆವಖಿ | ಳಾಂಕ ಮಹಿಮಳೇ 7
--------------
ವೆಂಕಟ್‍ರಾವ್
ಲಕ್ಷ್ಮೀದೇವಿ ಅಂಜಿಸುವುದ್ಯಾಕಮ್ಮ ಕಂಜೋದ್ಭವ ನಮ್ಮ ನೀ ಅಂಜಿಸಿದರೆ ಲೋಕ ಅಂಜದಿರುವುದೆ ಪ ಕುಂಜರಗಮನೆ ನಾವಂಜನದೇವಿ ಸಂಜಾತನಾದ ಪ್ರಭಂಜನನಣುಗರು ಪಾದ ಕಂಜಕ್ಕೆ ವಿಮುಖ ಸಂಜಿಲಿ ಚಲಿಸುವ ಪುಂಜರು ಕಡಿಮೆ 1 ನಿನ್ನನೆ ನಂಬಿ ನಾವಿನ್ನು ಸಂಸೃತಿಯ ಬನ್ನವೆ ಕಳಕೊಂಡು ಚನ್ನಾಗಿ ಜಗದಿ ಧನ್ಯರಾದೇವೆಂದು ಮನ್ನಾದಿ ಬಯಸೆ ಅನ್ಯಾರಂದದಲಿ ನೀ ನಮ್ಮನ್ನ ನೋಡುವರೆ2 ಸಿರಿ ನಾರಸಿಂಹನ್ನ ವರ ಭಕ್ತಿಯಲಿ ನೀನು ಕರವಶ ಮಾಡಿಪ್ಪೆ ಪರವೇನೆ ನಿನಗೆ ಪರಮೇಷ್ಠಿ ಮೊದಲಾದಮರರ ನೀ ಪೊರೆವೆ ಸಿರಿ ವಾಸುದೇವವಿಠಲನ್ನ ತೋರಮ್ಮ 3
--------------
ವ್ಯಾಸತತ್ವಜ್ಞದಾಸರು
ಲಕ್ಷ್ಮೀದೇವಿ ಜನನಿ ಬ್ರಹ್ಮನ ರಾಣಿ | ಪುಸ್ತಕಪಾಣಿ ಪ. ಫಣಿರಾಜನಿಭವೇಣಿ | ವರವೀಣಾಪಾಣಿ || ಘನವಿದ್ಯಾದಾಯಿನಿ | ಪರಮಕಲ್ಯಾಣಿ1 ಶರದಿಂದುನಿಭವಕ್ತ್ರೆ | ಅರವಿಂದದಳನೇತ್ರೆ || ಪರಮಕೋಮಲಗಾತ್ರೆ | ಸುರಮುನಿನುತಿಪಾತ್ರೆ 2 ನೃತ್ಯವಿನೋದಿನಿ | ಸ್ತೋತ್ರ ಸುಪ್ರೀತೆ ನೀ ಭೃತ್ಯೌಘಪಾಲಿನಿ | ನಿತ್ಯಕಲ್ಯಾಣೀ 3
--------------
ವೆಂಕಟ್‍ರಾವ್
ಲಕ್ಷ್ಮೀದೇವಿ ದಾಸನಲ್ಲವೇ ನಿನ್ನ ದಾಸನಲ್ಲವೆ ಪ ದಾಸನಾದ ಮೇಲೆ ಎನ್ನ ಘಾಸಿಗೊಳಿಸುವುದುಚಿತವೇನೇ ಘೋಷ ರೂಪನ ಪೆತ್ತ ತಾಯಿ ಅ.ಪ. ಮಾರ ಮುಖ್ಯ ಶರತಾಪವ ಹರಿಸುತ ಮಾನದಿಂದ ಕಾಂiÉಮಾರನ ತಾಯೇ 1 ಶರಧಿ ನಾನು ತಿದ್ದಿ ತೋರೆ ಹೃತ್ಪದ್ಮನಿವಾಸಿಯ ಶಿರಿಪದ್ಮನ ರಮಣಿಯೆ 2 ಭವ ಕಟ್ಟು ಬಿಡಿಸಿ ನೋಡೇ ಯೆಷ್ಟೆಂದು ಪೇಳಲಿ ಗುರುಕೃಷ್ಣನ ಪೆತ್ತ ಶಿಷ್ಟ ಶಿಖಾಮಣಿಯೆ 3 ಸಾರಶಾಸ್ತ್ರ ತೊರೆದೂ ದಿವ್ಯ ಮಾರಶಾಸ್ತ್ರ ಸುರದೂ ಶಾಸ್ತ್ರಾ ಶಾಸ್ತ್ರದ ದಾರಿಯ ತೋರಿಸಿ ಶತ್ರು ನಿವಾರಿಸು 4 ಇಂದು 5
--------------
ಸಿರಿಗುರುತಂದೆವರದವಿಠಲರು
ಲಕ್ಷ್ಮೀದೇವಿ ನಂಬಿದೆ ನಿನ್ನ ಪಾದಾಂಬುಜಯುಗಳವ- ಶಂಬರಾರಿ ಜನನಿಪ ಬೆಂಬಿಡದೆನ್ನಹೃದಂಬುಜದೊಳಗವಲಂಬಿಸಿ- ಸಲಹುಮದಂಬೆ ಸನಾತನಿ ಅ.ಪ ಅಂಬುಜಮುಖಿ....ಚಿಕುರೆ ಶರ ದಂಬುಜದಳನಯನೆ ಬಿಂಬಫಲಾಧರೆ 1 ಕರ್ಣದೊಳೆಸೆವಸು ವರ್ಣವಿಡಿದ ಪೊಸರನ್ನದೊಡವೆಗಳ ರನ್ನೆ ಗುಣಾರ್ಣವೆ 2 ಮಾಲತಿಮಲ್ಲಿಗೆ ಮಾಲೆಯಿಂದೊಪ್ಪುವ ನೀಲಭುಜಗವೇಣಿ ಗೈದಲಮೇಲಮಂಗಾಮಣಿ 3
--------------
ಸರಗೂರು ವೆಂಕಟವರದಾರ್ಯರು