ಒಟ್ಟು 15585 ಕಡೆಗಳಲ್ಲಿ , 137 ದಾಸರು , 6785 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹೊರ ಹೋಗಿ ಆಡದಿರೊ ಹರಿಯೆ-|ಎನ್ನ ದೊರೆಯೆ ಪಮನೆಯೊಳಗಾಡುವುದೆ ಚೆಂದ - ನೆರೆ-|ಮನೆಗಳಿಗೇಕೆ ಪೋಗುವೆಯೊ ಮುಕುಂದ ||ವನಿತೆಯರು ಮೋಹದಿಂದ - ನಿನ್ನ |ಮನವಸಹರಿಸಿಕೊಂಬುವರೋ ಗೋವಿಂದ 1ಏನು ಬೇಡಿದರೂ ನಾ ಕೊಡುವೆ-ಕೆನೆ-|ಬೆಣ್ಣೆ ಕಜ್ಜಾಯವ ಕೈಯೊಳಗಿಡುವೆ ||ನಿನ್ನ ಗುಣಗಳನು ಕೊಂಡಾಡುವೆ - ನಿನಗೆ |ಚಿನ್ನ ರನ್ನದ ಅಲಂಕಾರಗಳಿಡುವೆ 2ಹೊಲಸು ಮೈಯವನೆನ್ನುವರೊ-ದೊಡ್ಡ |ಕುಲಗಿರಿಯನ್ನು ಪೊತ್ತವನೆನ್ನುವರೊ ||ಬಲುಕೇಶದವನೆನ್ನುವರೊ-ಆ |ಎಳೆಯನನೆತ್ತಿದ ಕುರೂಪಿಯೆಂಬುವರೊ 3ಭಿಕ್ಷೆಬೇಡಿದೆ ಎಂಬುವರೊ-ಭೂಮಿ |ರಕ್ಷಿಪ ರಾಯರ ಕದಡಿದೆಯೆಂಬುವರೊ ||ಲಕ್ಷ್ಮಿಯ ಕಳೆದೆಯೆಂಬುವರೊ-------ವೈ-|ಲಕ್ಷಣ ಬೆಣ್ಣೆಯ ಕದ್ದೆಯೆಂಬುವರೊ 4ಮಾನಬಿಟ್ಟವನೆನ್ನುವರೊ-ಮಹಾ |ಹೀನರ ಬೆನ್ನಟ್ಟಿ ಹೋದನೆಂಬುವರೊ ||ದಾನವವೈರಿಯೆಂಬುವರೊ-ಸುರ-|ರಾನತ ಪುರಂದರವಿಠಲನೆಂಬುವರೊ 5
--------------
ಪುರಂದರದಾಸರು
ಹೊರಿಯೊ ವಿಪಗಮನ ಮಂಗಳಶರಧಿಜಾರಮಣ ಪ.ಸುರಕಾರ್ಯಕೆ ಪಕ್ಷ ಶಾರ್ವರಿಚರವರ ಶಿಕ್ಷಧರಣಿಜ ಹರ ಸತ್ರಾಜಿತಜಾವರಶರಣಾಗತಭಟದುರಿತವಿದೂರ1ಪೌಂಡ್ರಕವೈರಿ ನಿಜ ಕೃಷ್ಣಪಾಂಡವರ ತಾರಿಶುಂಡಾಲಚಾಣೂರ ಸಂಹಾರಿಖಾಂಡವವನ ದಹಕಾರಿ 2ವಿದುರೋದ್ಧವ ಪೋಷಸುಖತೀರ್ಥಹೃದಮಾನಸ ಹಂಸಪದುಮನಾಭ ಪ್ರಸನ್ವೆಂಕಟೇಶಪಾಹಿಸದಮಲಸದನ ಕ್ಷೀರಾರ್ಣವಶಾಯಿ 3
--------------
ಪ್ರಸನ್ನವೆಂಕಟದಾಸರು
ಹೊಲೆಯ ಹೊರಗಹನೆ ಊರೊಳಗಿಲ್ಲವೆಸಲೆ ಶಾಸ್ತ್ರವನು ತಿಳಿದು ಬಲ್ಲವರು ನೋಡಿ ಪ.ಭಾಳದಲಿ ಭಸಿತ ಭಂಡಾರವಿಡದವ ಹೊಲೆಯಕೇಳಿ ಸಲೆ ಶಾಸ್ತ್ರವನು ತಿಳಿಯದವ ಹೊಲೆಯಆಳಾಗಿ ಅರಸರಿಗೆ ಕೈಮುಗಿಯದವ ಹೊಲೆಯಸೂಳೆಯರ ಕೊಡುವಾತನೇ ಶುಧ್ಧ ಹೊಲೆಯ 1ಇದ್ದ ಧನ ದಾನ - ಧರ್ಮವ ಮಾಡದವ ಹೊಲೆಯಕದ್ದು ತನ್ನೊಡಲ ಹೊರೆವಾತನೇ ಹೊಲೆಯಬದ್ಧವಹ ನಡೆ - ನುಡಿಗಳಿಲ್ಲದಿದ್ದವ ಹೊಲೆಯಮದ್ಧಿಕ್ಕಿ ಕೊಲುವವನೆ ಮರಳು ಹೊಲೆಯ 2ಆಶೆಯನು ತೋರಿ ಭಾಷೆಗೆ ತಪ್ಪುವವ ಹೊಲೆಯಲೇಸು ಉಪಕಾರಗಳನರಿಯದವ ಹೊಲೆಯಮೋಸದಲಿ ಪ್ರಾಣಕ್ಕೆ ಮುನಿಯುವವನೇ ಹೊಲೆಯಹುಸಿಮಾತನಾಡುವವನೇ ಸಹಜ ಹೊಲೆಯ3ಕೊಂಡ ಋಣವನು ತಿರುಗಿ ಕೊಡಲರಿಯದವ ಹೊಲೆiÀುಭಂಡ ಮಾತುಳಾಡುವವನೆ ಹೊಲೆಯಗಂಡ - ಹೆಂಡಿರ ನಡುವೆ ಭೇದಗೈವವ ಹೊಲೆಯಹೆಂಡರಿಚ್ಚೆಗೆ ನಡೆವ ಹೇಡಿ ಹೊಲೆಯ 4ಪರಧನಕೆ ಪರಸತಿಗೆ ಅಳುಪಿದವನೇ ಹೊಲೆಯಗುರು ಹಿರಿಯರನು ಕಂಡು ಎರಗದಿದ್ದವ ಹೊಲೆಯಅರಿತು ಆಚಾರವನು ಮಾಡದಿದ್ದವ ಹೊಲೆಯಪುರಂದರವಿಠಲನನು ನೆನೆಯದವ ಹೊಲೆಯ 5
--------------
ಪುರಂದರದಾಸರು
ಹೋಯಿತಲ್ಲಾಯುಷ್ಯ ಹೋಯಿತಲ್ಲಯ್ಯಸಾಯಸಬಟ್ಟೆನು ಭವದಿ ಶ್ರೀಯರಸನ್ನ ನಂಬದೆ ಪ.ಪಶ್ಚಿಮ ಜಾಗರದಿ ಕಾಕುತ್ಸ್ಸ್ಥನ ಪ್ರೀತಿಗೋಸುಗದುಶ್ಚಿತ್ತ ವೃತ್ತಿಯನೀಗಿನಿಶ್ಚಿತನಾಗಿಸಚ್ಚಿದಾನಂದಕಾಯನ ಆಶ್ಚರ್ಯಕರ ನಾಮವಉಚ್ಚರಿಸದೆ ನಿದ್ರೇಲಿ ಮೆಚ್ಚಿ ಘುರುಘುರಿಸುತ 1ತುಲಸಿ ಮಂಜರಿ ಪುಷ್ಪ ಅಲಸದೆ ತಂದು ಶ್ರೀನಳಿನನೇತ್ರನ್ನ ನಾಮಾವಳಿಗಳಿಂದಸಲೆ ಅವನಂಘ್ರಿಕಮಲಕರ್ಪಿಸದೆ ಸದಾಲಲನೆಸಂಪದಾಬ್ಧಿಲಿ ಮುಳುಗಿ ದುರಾಶೆಯಲ್ಲಿ2ಸತತ ಶಕ್ತ್ಯಾನುಸಾರ ವ್ರತಧರ್ಮಾಚರಿಸದೆಅತಿಥÀರೊಳೀತನ ನಂಟನೆಂದರೆಅತಿಸ್ನೇಹ ಬಳಸುತ ಹಿತಬಿಟ್ಟೆ ವೃಥಾ ಕೆಟ್ಟೆಗತಿಕಾಣಿಸಿನ್ನಾರೆ ಶ್ರೀಪತಿ ಪ್ರಸನ್ವೆಂಕಟಯ್ಯ3
--------------
ಪ್ರಸನ್ನವೆಂಕಟದಾಸರು
ಹ್ಯಾಗಾಹದು ಭವರೋಗಿಗಾರೋಗ್ಯಮ್ಯಾಗೆ ಮ್ಯಾಗಪಥÀ್ಯವಾಗುತಿದೆ ಕೃಷ್ಣ ಪ.ಗುಜ್ಜುಗಿರಿವ ಆಶಾಲಕ್ಷಣ ಚಳಿಲಜ್ಜೆಗೆಡಿಸುತಿವೆ ಗದಗದಿಸಿವಜ್ಜರಹೊದಪಿಲಿ ನಿಲವು ಕುಶಾಸ್ತ್ತ್ರದಗಜ್ಜರಿಕಾಯಿ ದಣಿಯೆ ಮೆಲುವವಗೆ 1ಮೊರಮೊರಸು ಮೂರ್ಪರಿ ಜ್ವರ ದಾಹದಿನಿರಸನ ರಸನಾಯಿತಿದರೊಳಗೆಅರಿಕಿಲ್ಲದಹ ಗಾರಿಗೆ ಕಾಮನಹರಿಬದನೆಕಾಯುಂಬುವಗೆ 2ಕಾಮಿನಿನೋಟದ ಕಾಮಾಲೆಯಾಯಿತುನೇಮದಿ ಸೊಬ್ಬೇರಿತು ಮೈಯಪ್ರೇಮದ ಚಕ್ಷುದೋಷ್ಯಾತರಲೈದದುಕಾಮತಪ್ತ ವರೇಣ್ಯವಗೆ 3ನಮ್ಮದು ನಮ್ಮದು ಕೋ ಕೋ ಎನ್ನುತಕೆಮ್ಮಿಗೆ ಖುಳಖುಳಸಿತುಕಾಯಹಮ್ಮುಗಳಕ್ಕರೆಯ ಖಣಿಯಾದ ಉಳ್ಳಿಯಹೆಮ್ಮೂಲಂಗಿಯ ತಿನುವವಗೆ 4ಜಗಸಟೆಯೆಂಬಗೆ ಸಂಗ್ರಹಣಿಯು ಅವನಿಗೆ ಪಾಂಡಿತ್ಯ ಪಾಂಡುರೋಗವಿಗಡಕುತರ್ಕ ಚಿಕಿತ್ಸದಿ ನೂಕುನುಗ್ಗೆ ತೊಂಡೆಕಾಯಿ ಸವಿವವಗೆ 5ಅಂಜದೆ ಸಲ್ಲದ ನಿಷಿಧಗÀಳುಂಡರೆನಂಜೇರದೆ ಬಿಡುವುದೆ ಬಳಿಕಾಕಂಜಾಕ್ಷನ ಬಿಟ್ಟಿತರ ಸುರಾಸುರರೆಂಜಲು ಮೈಲಿಗೆ ಬಿಡದವಗೆ 6ಹೃದ್ರೋಗವು ಹೋಗುವುದೆ ನಿಂಬ ಹರಿದ್ರದ ಹುಡಿ ತಲೆಗೊತ್ತಿದರೆನಿದ್ರಿಲ್ಲದೆಕರಪಂಜಲಿ ಕುಣಿದರೆರುದ್ರದುರಿತಹೊಡೆಯದೆ ಬಿಡುವುದೆ7ಇಂತೆ ದಿನಾಂತರ ಕ್ಷಯ ಮೇಲಿಕ್ಕಿತ್ತುಅಂತ್ಯೌಪದ ಯಮಪುರದೊಳಗೆಎಂತಾದರೆ ಮಾಡಿಸಿ ಕೊಂಡಳುತಿಹಭ್ರಾಂತ ಕಳಿಂಗದ ಪ್ರಿಯದವಗೆ 8ಮನ್ವಂತರ ಕಲ್ಪಾಂತರ ಈ ಕ್ಲೇಶಾನ್ವಯವೆಗ್ಗಳಭೋಗಿಸುತ ಪ್ರಸನ್ವೆಂಕಟಪತಿಗುರುಮಧ್ವೇಶಧನ್ವಂತ್ರಿಯ ಪದ ವಿಮುಖನಿಗೆ 9
--------------
ಪ್ರಸನ್ನವೆಂಕಟದಾಸರು