ಒಟ್ಟು 49258 ಕಡೆಗಳಲ್ಲಿ , 138 ದಾಸರು , 11863 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಧ್ವಾಂತರ್ಯಾಮಿ ಶ್ರೀ ಗುರು ಬಿಂಬ ಕಾಯೊ ಪ. ಹೃದ್ವನಜದಲಿ ನೆಲಸಿ ಆಜ್ಞಾನ ಹರಿಸಿ ಅ. ಸಾಟಿ ರಹಿತನೆ ನಿನ್ನ ಮುಖ ದರ್ಶನಾ ಹಾಟಕೋದರ ಮುಖರು ಅರಿಯದಂತವನನ್ನು ಕೋಟಲೆಯಭವ ಜನರು ಅರಿವದೆಂತಯ್ಯಾ 1 ತ್ರಿವಿಧ ಜೀವರ ತೆಗೆದು ಜನ್ಮದಲಿ ತೊಡಕಿಸೀ ಕರ್ಮ ಬಲೆ ಬೀಸಿ ಪವನನೈಯ್ಯನೆ ನಿನ್ನ ಮಾಯ ಮೋಡವ ಕವಿಸಿ ಭವಣಪಡಿಸಲು ಇನ್ನು ಬಿಡುಗಡೆಯದೆಂತೋ 2 ನೀನಾಗೆ ವಲಿದು ನಿನ್ನ ಭಕ್ತರನು ಕಾಯುತಿಯೊ ಮಾನಾಭಿಮಾನದೊಡೆಯನೆ ಆರ್ತಪಾಲ ಗಾನಲೋಲನೆ ನಿನ್ನ ಧ್ಯಾನ ಮೌನವನಿತ್ತು ಮಾನಸದಿ ನಿನ್ನ ತೋರೊ ದೀನ ರಕ್ಷಕನೇ3 ಅಂಗುಟದಿ ಗಂಗೆಯನು ಪೆತ್ತ ಪಾವನಪಾದ ಶೃಂಗಾರ ವಸನ ವಡ್ಯಾಣ್ಯನಡುವೂ ಅಂಗನೆಯು ವಕ್ಷದಲಿ ಹಾರಪದಕಗಳುಲಿಯೆ ಉಂಗುರದ ಬೆರಳು ಕಂಕಣ ಕಡಗ ಪಾಣೀ 4 ಕರ್ಣಕುಂಡಲ ಕಾಂತಿ ಮುಗುಳುನಗೆ ಕುಡಿನೋಟ ರನ್ನ ತಿಲಕದ ಫಣಿಯ ಮುಂಗುರುಳ ಸೊಬಗೊ ಸ್ವರ್ಣಕಾಂತಿಯ ತೇಜ ಕಡಗೋಲ ಕೈ ಸೊಬಗು ಚನ್ನಗೊಪಾಲಕೃಷ್ಣವಿಠಲ ಉಡುಪೀಶಾ 5
--------------
ಅಂಬಾಬಾಯಿ
ಮಧ್ವಾರ್ಯ - ಮಧ್ವಾರ್ಯ ಪ ಅದ್ವೈತಾರಣ್ಯ | ಪ್ರಧ್ವಂಸಾನಲ ಅ.ಪ. ಬಡವರು ಎನಿಸಿದ | ನಡುಮನೆ ದ್ವಿಜನಲಿಸಡಗರದಲಿ ಜನ | ಮೃಡನುತ ಗುರುವೇ 1 ಬಾಲನೆ ವೃಷಭನ | ಬಾಲ ಪಿಡಿದು ದೇ ವಾಲಯ ವನದಲಿ | ಲೀಲೆಯ ತೋರ್ದೆ2ಹಸು ಕೂಸಾಗಿಯೆ | ಬಿಸಿ ಹುರುಳಿ ಮೆದ್ದೆವೃಷ ವಿಕ್ರಯಿ ಋಣ | ತಿದ್ದಿದೆ ಬೀಜದಿ 3ಅಚ್ಚ್ಯುತ ಪ್ರೇಕ್ಷರಿಂ | ತಚ್ಚತುರಾಶ್ರಮಸ್ವೇಚ್ಛೇಲಿ ಸ್ವೀಕರ | ಕೃಛ್ರಾದ್ಯಾಚರ 4 ಇಷ್ಟ ಸಿದ್ದಿಗತ | ಭ್ರಷ್ಟ ವಿಷಯಗಳಎಷ್ಟೊ ತೋರಿ ಸುವಿ | ಶಿಷ್ಟನು ಎನಿಸಿದೆ 5 ಬೋಧ ಬದರಿಯಲಿಸಾದರ ಸ್ವೀಕೃತ | $ಗಾಧ ಭಾಷ್ಯಕೃತ 6 ಮೂಲ ಮೂರು ಹತ್ತು | ಏಳು ಗ್ರಂಥಗಳುಲೀಲೆಯಿಂದ ಕೃತ | ಶೀಲ ಸುಜನರಿಗೆ 7 ನಾನೆ ದೇವನೆಂ | ದ್ಹೀನ ಮಾಯಿಗಳಗೋಣು ಮುರಿದು ಸು | ಜ್ಞಾನವನಿತ್ತೆಯೊ8 ಏಕ ವಾಕ್ಯದಿಂ | ದೈತ್ಯವನಳಿಯುತಏಕ ಮೇವ ಹರಿ | ಏಕಾತ್ಮನೆಂದೇ 9 ಬುದ್ಧ್ಯಾಬ್ಧಿಯು ಬರೆ ಗೆದ್ದು | ವಾದದಲಿಅದ್ವೈತವ ಮುರಿ | ದದ್ವಿತೀಯ ಗುರು 10 ಕುಸುಮ ಫಲ | ನಿತ್ತು ತೋರ್ದೆ ನಿಜ 11 ಗೋಪಿ ಚಂದನದಿ | ಶ್ರೀಪ ಗೋಪ ಬರೆಶ್ರೀಪತಿ ಸ್ಥಾಪಿತ | ಆಪುರಿ ಉಡುಪಲಿ 12 ಅಷ್ಟಯತಿಗಳಿಂ | ಕೃಷ್ಣ ಪೂಜೆಗಳಸುಷ್ಠು ಗೈಯ್ಯಲೇ | ರ್ಪಟ್ಟಿತು ನಿನ್ನಿಂ13 ಐತರೇಯ ಸುವಿ | ನೀತರೆನಿಪ ತವಛಾತ್ರರಿಗಾಗಿಯೆ | ಕೂತು ಪೇಳ್ದೆ ಗುರು14 ಶೇಷ ಮುಖ್ಯರಾ | ಕಾಶದಿ ನಿಂತುಪದೇಶವ ಕೇಳುತ | ತೋಷವ ಪಟ್ಟರು 15 ತಕಿಟ ತಕಿಟವೆಂ | ದುತ್ಕಟ ನಾಟ್ಯದಿಪ್ರಕಟ ಹರ್ಷ ಸ್ತ್ರೀ | ನಿಕರಾವಳಿಯಿಂ16 ದೇವ ತತಿಯು ತಮ | ದೇವ ವಾದ್ಯದಿಂಪೂವ ಮಳೆಯ ಗರೆ | ಆವೃತನದರಿಂ 17 ಕೃತ ಕಾರ್ಯನೆ ತವ | ಸ್ತುತಿಯಗೈಯ್ಯ ಸುರತತಿಯ ಬದರಿ ಪುರ | ಗತ ನೆಂದೆವಿಸಿದೆ 18 ವ್ಯಾಸಾತ್ಮನು ಗುರು | ಗೋವಿಂದ ವಿಠಲನದಾಸ ಹೃದಯದವ | ಕಾಶದಿ ಭಾಸಿಸು 19
--------------
ಗುರುಗೋವಿಂದವಿಠಲರು
ಮಧ್ವೇಶ ವಿಠಲ ಪ ತವ ದಾಸೋಹಂ ಕೃಪಾಂಗರಂಗ ತವ ದಾಸೋಹಂ 1 ಅಗಣಿತ ತವದಾಸೋಹಂ ಜಗತ್ಪಾಲ ತವದಾಸೋಹಂ 2 ತವ ದಾಸೋಹಂ ಸಿರಿ ಮುಕುಂದಮೂರ್ತಿ ತವ ದಾಸೋಹಂ 3 ಅನ್ನಮಯನೆ ಆನಂದಮಯನೇ ವಿಜ್ಞಾನಮಯನೇ ತವದಾಸೋಹಂ ಮನೋಮಯನೇ ಮನ್ಮಥ ಜನಕನೆ ಪ್ರಾಣಮಯನೆ ಶ್ರೀ - ವಾಜ್ಞಯನೇ ತವ ದಾಸೋಹಂ4 ಶ್ರೀಶನೇ ಸರ್ವಮಹೀಶನೇ ವರ ಹನುಮೇಶವಿಠಲ ತವದಾಸೋಹಂ ಲಕುಮಿ ಉಲ್ಲಾಸನೇ ತವ ದಾಸೋಹಂ 5
--------------
ಹನುಮೇಶವಿಠಲ
ಮಧ್ವೇಶಾರ್ಪಣ ಮಧ್ವೇಶಾರ್ಪಣ ಮಧ್ವೇಶಾರ್ಪಣಮಸ್ತುಶುದ್ಧ ಶ್ರುತಿ ಪದ್ಧತಿ ನಡೆಸುವೆ ಮಧ್ವೇಶಾರ್ಪಣಮಸ್ತು 1 ವಂದಿಸುವೆನು ಗೋವಿಂದನ ಚರಣಕೆ ಮಧ್ವೇಶಾರ್ಪಣಮಸ್ತುನಿಂದು ಕರಂಗಳ ವಂದಿಸಿ ಪ್ರಾರ್ಥನೆ ಮಧ್ವೇಶಾರ್ಪಣಮಸ್ತು 2 ಅಂಬುಜನಾಭನ ನಿತಂಬಿನಿ ಕಮಲಕೆ ಮಧ್ವೇಶಾರ್ಪಣ ಮತ್ತುಡಿಂಗರಿಗನು ನಾಜಗದಂಟೆಯ ಪ್ರಾರ್ಥನೆ ಮಧ್ವೇಶಾರ್ಪಣಮಸ್ತು 3 ಸಂಧ್ಯಾದೇವಿಗೆ ವಂದಿಸುತಿರುವೆನು ಮಧ್ವೇಶಾರ್ಪಣಮಸ್ತುಒಂದಿನ ಬಿಡದೆ ತ್ರಿಕಾಲದಿ ಮಧ್ವೇಶಾರ್ಪಣಮಸ್ತು 4 ಚಾಮರ ಹಾಕುವೆ ಶ್ರೀಮನೋಹರಗೆ ಮಧ್ವೇಶಾರ್ಪಣಮಸ್ತುಕೋಮಲ ಶಯನದಿ ಮಲಗಿಸುವೆನು ಮಧ್ವೇಶಾರ್ಪಣಮಸ್ತು 5 ಕೃಷ್ಣನ ಮಲಗಿಸಿ ತೊಟ್ಟಿಲ ತೂಗುವೆ ಮಧ್ವೇಶಾರ್ಪಣಮಸ್ತುಬಿಟ್ಟು ಅಭಿಮತ ಘಟ್ಟಿಸಿ ಪಾಡುವೆ ಮಧ್ವೇಶಾರ್ಪಣಮಸ್ತು 6 ಪರಿ ತೂಗುವೆ ಮಧ್ವೇಶಾರ್ಪಣಮಸ್ತುಗುರು ಪುಷ್ಕರ ಮುನಿ ಸುರದ್ವಾರದಿ ಮಧ್ವೇಶಾರ್ಪಣಮಸ್ತು 7 ಕರ್ಮವು ಸಿರಿಯಂದು ಹರಿಗರ್ಪಿಸುವೆ ಮಧ್ವೇಶಾರ್ಪಣಮಸ್ತುದಾಸರ ಚರಣಕೆ ಶಿರಬಾಗುವೆ ನಾ ಮಧ್ವೇಶಾರ್ಪಣಮಸ್ತು 8 ಕೃತಿ ಇಂದಿರೇಶಗರ್ಪಿಸುವೆ ಮಧ್ವೇಶಾರ್ಪಣಮಸ್ತು ಮಧ್ವೇಶಾರ್ಪಣ ಮಧ್ವೇಶಾರ್ಪಣ ಮಧ್ವೇಶಾರ್ಪಣಮಸ್ತು 9
--------------
ಇಂದಿರೇಶರು
ಮನ ಬಲಿಯದನಕ ಅನುಕೂಲಾಗದನುಭವ ಧ್ರುವ ಮನವೇ ಮರೆಯ ಮಾಡೇದೆ ನೆನವಿಗೆ ತಾಂ ತಂದು ತೋರದೆ ಹೆಣ್ಣ ಹೊನ್ನದಾಶೆ ಹಚ್ಚ್ಯಾದೆ ಘನತನಗರಸದೆ 1 ಹುಚ್ಚಮಾಡಿಬಿಟ್ಟದೆ ಎಚ್ಚರ ಎಡಿಯಗೊಡದೆ ಕಚ್ಚಿ ವಿಷಯಕೆ ಬಿದ್ದದೆ ಬೆಚ್ಚಿ ಬೆದರದೆ 2 ಮನಸಿಗೆ ಮನಸಿನಿಂದ ಅನುಭವವಾಗಬೇಕಾನಂದ ಘನ ಗುರುವಿನ ಕೃಪೆಯಿಂದ ಮನ ಬಲಿವುದು ಚೆಂದ 3 ಮನೋನ್ಮನವಾಗಿ ತಾ ಘನ ಬೆರೆದು ಸ್ವಹಿತ ಙÁ್ಞನಕಿದೇ ತಾ ಸನ್ಮತ ಮುನಿಜನರ ಸುಪಥ 4 ಮನಬಲಿದು ನೀ ನೋಡೋ ಘನಸುಖ ಮಹಿಪತಿಗೊಡೊ ಅನುಭವಾಮೃತ ಸೂರ್ಯಾಡೊ ಅನುಮಾನೀಡ್ಯಾಡೊ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮನಕಧೀಶನೆನಿಪ ಗುರುವರಾ | ನಿನ್ನ ಪಾದನೆನೆವೆ ಕಳೆಯೊ ಮಲಿನ ಸತ್ವರಾ ಪ ಅನಿಲ ಸುತನು ಎನಿಸಿ ನೀನು | ಅನಿಲ ನೆನಿಸಿ ಪಾಪತೂಲಘನ ಸುಮೇರುವನ್ನೇ ದಹಿಸೊ | ಅನಲ ಈಕ್ಷಣಾನೆ ಶಿವನೆ ಅ.ಪ. ಅನುದಿನ ಪಾದ | ವನಜ ಭಜಿಪ ಶರಣರೀಗೆತೃಣವು ತೆರನು ಪಾಪ ನಿ5iÀು | ಎಣಿಸಿ ಪೊರೆವುದುಚಿತ5É್ಲ 1 ಗೌರಿಧವನೆ ವಿಷಯ ಮೋಹನ | ಕಳೆದು ವೇಗಸೂರಿ ಜನರ ಸಂಗ ಮಾಡುವ ||ಸಾರ ಮನವವಿತ್ತು ಸಲಹೊ | ಕ್ರೂರಿ ಜನರ ದೂರಮಾಡೊಘೋರಾಘೋರ ರೂಪಿ ಹರನೆ | ಮಾರಪಿತನ ಸಖನೆ ರುದ್ರ 2 ಶುಕ ವಿಭೂತಿ 3
--------------
ಗುರುಗೋವಿಂದವಿಠಲರು
ಮನಕೆ ಬೇಸರ ಬೇಡ ಮಣಿವೆ ಮಾಧವನೆ ಕ್ಷಣಕೊಂದು ಬೇಡುವ ಈ ಪಾಮರನೆಂದೆನುತ ಪ ತಂದೆಯನು ಕೊಲ್ಲೆನಲು ತಕ್ಕ ಶಿಕ್ಷೆಯ ಮಾಡು ಕೊಂದು ಅಣ್ಣನ ರಾಜ್ಯ ಕೊಡು ಎನಗೆ ಎನಲು ಕುಂದಿಟ್ಟು ಮನ್ನಿಸದಿರಲ್ಲದೆ ಎನ್ನ ಬಂಧನದ ಬಲೆಯನ್ನು ಬಯಲೆನಿಸು ಎಂಬೆ 1 ಹೆಣ್ಣಾಗಿ ಬಾರೆನಲು ಕಣ್ಣೆತ್ತಿ ನೋಡದಿರು ಎನ್ನ ಮನೆಯ ಕುದುರೆಯನು ಕಾಯಲು ಗನ್ನಗತಕನೆಂದು ಮನ್ನಿಸಿ ಸಲಹದಿರಲು ಅನ್ಯ ಬೇಡಿದೆನೇನು ಸಂತಸ ನೀಡೆಂಬೆ 2 ನಾಯಾಗಿ ಬಂದು ನಿನ್ನ ಲತ್ತೆತಿನುಯೆಂದೆನಲು ಕಾಯದಿರು ಕರುಣದಿ ದೇವದೇವೇಶ ಆವಾವ ಕಾಲದಿ ಬಾಯಬಿಡಿಸದಿರಲ್ಪ ಮಾಯ ಮೋಹಿಗಳ ಬಳಿಯೆಂದು ಬೇಡುವೆನು 3 ನೀರುಕೊಟ್ಟೆನ್ನ ಕರದಿಂದ್ಹೊಡಿಸಿಕೊಯೆನಲು ಚೋರನು ಇವನೆಂದು ಬಾರದೆ ಇರೆಲೋ ಘೋರಸಂಸಾರ ತಾಪವಾರಿಧಿಯ ಕಷ್ಟದಿಂ ಪಾರುಮಾಡೆಂದೆನುತ ಸಾರಿ ಬೇಡುವೆನು 4 ಸಲಿಸೆನ್ನ ನೈವೇದ್ಯ ಕುಲಗೇಡು ಎಂದೆನುತ ಛಲದಿ ಬೇಡಲು ಎನಗೊಲಿಯದಿರು ಸ್ವಾಮಿ ಬಲು ಹೊಲೆಯ ಪ್ರಪಂಚದ್ಹಲುಬಾಟ ಬಿಡಿಸೆನ್ನ ಮಲಿನತ್ವಳಿಕಿಸಿ ಚೆಲುವ ಸಲಹೆಂಬೆ 5 ತಿಳಿಯದೆ ನಿನ್ನನ್ನು ಕುಲಗೇಡಿಯೆಂದೆನುತ ಕುಲದಿಂದ ಹೊರಹಾಕಲೊಳಿತಾಗಿ ತಳ್ಳೋ ಮಳ್ಳತನ ಬಿಡಿಸೆನ್ನ ಮನಸಿನ ಕಿಲ್ಬಿಷವ ತೊಳದೆ ನಿಜಜ್ಞಾನದ ಪಾಲಿಸು ಎಂಬೆ 6 ನರನ ಭವಗುಣಗಳ ಪರಿಹರಿಸಿ ಬೇಗನೆ ಕರುಣಿಸು ಎನಗೆ ಪರರ ಬೇಡದ್ದನು ಕರುಣಾಳು ಶ್ರೀರಾಮ ಗುರುವೆ ನೀನಾಗೆನ್ನ ಪರಿಭವದ ದು:ಖವನು ತ್ವರಿತದ್ಹರಿ ತಂದೆ 7
--------------
ರಾಮದಾಸರು
ಮನಗೊಂಡವರಲ್ಲಿ ಘನಗೊಳ್ಳಿ ಜ್ಞಾನಾಗಮ್ಯದ ಧ್ರುವ ಮುನಿಜನರಾರಾಧಿಸುವ ನಿಧಾನ ಅನಿಮಿಷದಲಿ ನೋಡುವ ತ್ರಾಣ ಉನ್ಮನಲಿಹ ಧನ 1 ಜಾಣನೇ ಮಾಡಿಕೊಂಬನು ಪರೀಕ್ಷೆ ಸ್ವಾನುಭವದಲಿ ಪ್ರತ್ಯಕ್ಷ ಅನುದಿನದಲಿಹುದ ದಕ್ಷ ಘನಗುರು ಕಟಾಕ್ಷ 2 ಮಹಿಪತಿಸ್ವಾಮಿಯು ಪರಬ್ರಹ್ಮ ಖೂನಮಾಡವಗಿದು ಸಂಭ್ರಮ ಅನಂದೋಬ್ರಹ್ಮ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮನದಣಿ ನೋಡಿದೆನೊ ಸನಕಾದಿನಮಿತ ಮನದಣಿ ನೋಡಿದೆನು ದೃಢದಿ ಪ ನಿನಗೆ ಸರಿಯಿಲ್ಲ ಭುವನತ್ರಯದಿ ಮನಕೆ ಬೇಸರವಿಲ್ಲದನುದಿನ ತನುವನಪ್ಪಿಹಿಡಿದು ಭಕುತರ ಮನದ ವರಗಳನಡೆಸಿ ಸಲಹುವ ಕನಿಕರಾರ್ಣವ ವಿಠಲ ನಿನ್ನಡಿ ಅ.ಪ ಒಂದು ದಿನ ಆ ತ್ರೇತಾಯುಗದಲ್ಲಿ ಋಷಿಗಡಣ ಕೂಡಿ ಬಂದು ನಿಮ್ಮಯ ಚರಣಸನ್ನಿಧಿಲಿ ಭಯಭಕುತಿಯಿಂದ ವಂದಿಸಾಲಿಂಗನೆಯ ಕೋರುತಲಿ ಅಭಯ ಬೇಡುತಲಿ ನಿಂದ ಋಷಿಗಳಿಗ್ಹಲವು ಪರಿಯಲಿ ತಂದೆ ನೀ ಸಮ್ಮತವ ಪೇಳಿ ಬಂದು ದ್ವಾಪರಾಂತ್ಯಯುಗದಲಿ ಒಂದು ಅರಲವ ಅಗಲದಲೆ ನಿಮ್ಮ ಪೊಂದಿ ಆಲಿಂಗನವನೀಯುವೆ ನೆಂದು ವರವಿತ್ತ ವಿಠಲ ನಿಮ್ಮಡಿ 1 ಅಪಾರಮಹಿಮಜಾಲ ಅವತರಿತಿಸಿದಿ ದ್ವಾಪರಯುಗದಿ ಬಾಲಕೃಷ್ಣ ನೀನಾಗಿ ಶ್ರೀಪತಿ ಸುಜನಪಾಲ ದನುಜಕುಲಕಾಲ ಪಾಪಸಂಹಿತ ಅಮಿತಲೀಲ ಶಾಪಪರಿಹಾರ ವೇಣುಲೋಲ ತಾಪಸೋತ್ತಮರಿಷ್ಟ ನೀಡಲು ಗೋಪಿಕಾಸ್ತ್ರೀಯರೆನಿಸಿ ಪುಟ್ಟಿಸಿ ಗೌಪ್ಯದಾಲಿಂಗನವನಿತ್ತ ಭೂಪ ಭೂಪತಿ ವಿಠಲ ನಿಮ್ಮಡಿ 2 ಸುಗುಣ ಸಂತರಹೃದಯಸಂಚಾರ ದಾಸಾನುದಾಸರು ಪೊಗಳಿ ಭಜಿಸುವ ಗಾನಪ್ರಿಯಕರ ಮೌಲಕೌಸ್ತುಭ ಜಗದಜೀವನ ಪಾವನಾಕಾರ ಪರಮಸುಖಕರ ಅಗಣಿತಾಗಣಿತಮಹಿಮಭರಿತ ಪೊಗಳಲಳವೆ ನಿಮ್ಮ ಚರಿತ ತ್ರಿ ಜಗನಾಟಕ ಸುಲಭದಲಿ ನೀ ಅಗಲದನವರತಸಮ ಈ ಕಲಿ ಯುಗದಿ ಭಕ್ತರಿಗಾಲಿಂಗನೀಯುವ ನಿಗಮಗೋಚರ ವಿಠಲ ನಿನ್ನಡಿ 3 ಮಂದಹಾಸ ಮಂದರೋದ್ಧಾರ ಸುರಕಲ್ಪಧೇನು ಇಂದಿರೆಯರ ಪ್ರಾಣ ಮನೋಹರ ಹೇ ದೀನಬಂಧು ಸುಂದರಾಂಗ ಸುಗುಣಗುಣಹಾರ ಬಂಧನಿವಾರ ಸಿಂಧುಕಲಕಿದಪಾರ ಶೂರ ಕುಂದದೆ ಮೊರೆಕಾಯ್ದ ಸುರರ ಹೊಂದಿಭಜಿಸುವ ಭಕುತಜನಕಾ ನಂದ ನೀಡುತ ಚಂದನೋಡುತ ಸಿಂಧುನಿಲಯ ಮುಕ್ಕುಂದ ಮುರಹರಿ ಅಂದಮಾದ ವಿಠಲ ನಿಮ್ಮಡಿ 4 ಸುತ್ತಮುತ್ತ ಭಕ್ತರಾಲಯವು ಹಿಂಭಾಗದಲ್ಲಿ ಸತ್ಯಭಾಮ ರುಕ್ಮಿಣೀಕಾಂತನು ಮುಂಭಾಗದಲಿ ನಿತ್ಯನಿರ್ಮಲ ಚಂದ್ರಭಾಗಿನಿಯು ನಡುಮಧ್ಯ ರಂಗವು ಭಕ್ತಗೊಲಿದು ಭೂವೈಕುಂಠವ ಸತ್ಯವೆನಿಸಿ ಮೀರಿ ಮೆರೆವ ಭಕ್ತಜನರ ಕೈಯೆತ್ತಿ ಸಾರುವ ಪೃಥ್ವಿಗಧಿಕ ಮಹ ಪಂಢರಾಪುರ ಮುಕ್ತಿ ತವರೆಂಬ ಮಂದಿರದಲ್ಲಿ ಕರ್ತುಶ್ರೀರಾಮ ವಿಠಲ ನಿನ್ನಡಿ5
--------------
ರಾಮದಾಸರು
ಮನದಧಿಪ ಮರೆಹೊಕ್ಕೆ ಮಹದೇವ ಪಾಹಿ ಪ ತೃಣ ಮೊದಲು ಘನದಲ್ಲಿ ಬಿಡದೆ ಹರಿಯನು ಭಜಿಪ ಅ.ಪ. ಕರುಣಾಬ್ಧಿ ನೀಡೆನಗೆ ವೈರಾಗ್ಯ ಮಹಭಾಗ್ಯ ಭಾಗವತ ಪದ ನಿನ್ನದಯ್ಯ ಕಮಲ ಮಧು ಮತ್ತ ಷಟ್ಪದ ದೊರೆಯೇ ಸರ್ವತ್ರ ನಿನ್ನಲ್ಲಿ ಹರಿಯ ತೋರಿಸಿ ಸಲಹೊ 1 ಆಪ್ತತಮ ನಿನ್ನಂಘ್ರಿ ಧ್ಯಾನದಲಿ ಇಡು ಎನ್ನ ತೃಪ್ತಿ ಅನ್ಯದಿ ಬ್ಯಾಡ ಸುಪ್ತಿರಹಿತ ಸಪ್ತೆರಡು ಭಕ್ತಿಯಲಿ ಬೆಳೆಸೆನ್ನ ಉದ್ಧರಿಸು ಮೂರ್ತಿ ದರುಶನ ಭೋಗ 2 ಮೂರುತಿಯ ಕೈಗಿತ್ತುದಾರ ಸಾಗರ ಶಂಭು ಘೋರ ಭವಹರ ಹರಿಯ ದಾಸವರ್ಯ ಮಾರಮಣ ಜಯೇಶವಿಠಲನ ಭಜನೆಯಲಿ ಸಾರ ಸುಖ ನೀಡೆನಗೆ 3
--------------
ಜಯೇಶವಿಠಲ
ಮನದಧಿಪ ಮಹದೇವ ಮೊರೆಯೆ ಕೇಳೊ ಪ ತಿಮಿರ ಸ್ಥಿತಿಯಲ್ಲಿ ಎದೆ ಒಡೆದು ನಿಂದಿಹೆನು ಅ.ಪ. ಮನಕರಣಗಳು ಎನ್ನ ತಮ್ಮ ಸೆರೆಯಲಿ ಇಟ್ಟು ಘನ ಯಾತನೆಯ ಪಡಿಸಿ ಮೂರ್ಛೆಗೊಳಿಸಿ ಕ್ಷಣ ಬಿಡದೆ ದಣಿಸುವುವು ಮೊರೆ ಇಡಲು ಮುಖವಿಲ್ಲ ಪ್ರಣಿತ ಪಾಲಕರಲ್ಲಿ ಸರಿ ಇಲ್ಲ ನಿನಗೆಂದು 1 ಪವಮಾನ ಪದಕಮಲ ಮಧು ಮತ್ತ ಮಹಭೃಂಗ ಹರಿದಾಸ ಶಿರೋರತ್ನ ಅಭಯದಾಯಿ ಶಿವತಮನೆ ನಿನ್ನಂಘ್ರಿ ರಜಲಕ್ಷ್ಮಿಯನ್ನು ಶಿರ ನಿತ್ಯ ಮಾಡೆನ್ನ ಕೃತಕೃತ್ಯ 2 ಗೌರೀಶ ಗುಣನಿಧಿಯೆ ಗುಪ್ತ ಮಂಗಳ ಮಹಿಮ ಶೌರಿ ಜಯೇಶವಿಠಲ ಧ್ಯಾನಲೋಲ ತಾರಕನೆ ಭವಸಿಂಧು ದಾಟಿಸುವ ಅಂಬಿಗನೆ ಕಾರುಣ್ಯಗರೆದೆನ್ನ ಹರಿಪಾದ ದಡಕೊಯ್ಯೊ 3
--------------
ಜಯೇಶವಿಠಲ
ಮನದಲಿ ಸಕಲಾರ್ಥ | ಜಗದೊಳು ಪ ಮನ ನೆಲೆಗೊಂಡರೆ ಮೋಕ್ಷದ ಹಾದೀ | ಮನ ಚಲಿಸಲು ಬಾಧೀ 1 ಮನವೇ ತಾಹದು ನಾನಾಜನ್ಮ | ಮನ ಹರಿವುದು ಕರ್ಮಾ 2 ಯೋಗಿ ಮಹಂತಾ | ಮನಮೀರಲು ಭ್ರಾಂತ 3 ಭವ ದೂರಾ | ಮನದೊಳು ಸಂಸಾರಾ 4 ಮನ ಗುರುವರ ಮಹಿಪತಿ ಪ್ರಭು ನಾಮಾ | ನೆನಿಯಲು ಸುಖಧಾಮಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮನದಿಂದಲಿ ಮನನೋಡಿ ಮನವರಿತು ಘನ ಕೂಡಿ ಧ್ರುವ ಮನಸಿನಿಂದ ತಾ ನೋಡುವ ಖೂನ ಮನ ಮರೆಯಲದೆ ನಿಧಾನ ಮನವರಿಯದೆ ಇಹುದ್ಯಾತರ ಜ್ಞಾನ ಮನವೇ ಸ್ವಹಿತ ಕಾರಣ 1 ಮನದ ಕೊನಿಯಲಿದೆ ಘನಸುಖದಾಟ ಅನುದಿನ ನೋಡುದು ನೀಟ ಸ್ವಾನುಭವದಲಿದು ನೋಡುವ ನೋಟ ಮುನಿಜನರ ಸುಖದೂಟ 2 ಮನೋನ್ಮನದೊಳಗದೆ ಘನಸ್ಫೂರ್ತಿ ಙÁ್ಞನಕಿದೆ ಮನೆ ವಾರ್ತಿ ಮನದೊಳಗಿಹ್ಯ ಮಹಿಪತಿ ಗುರುಮೂರ್ತಿ ಮನಕಾಗಿಹ ತಾಂ ಸಾರ್ಥಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮನದೊಳಗಿರು ಹರಿಯೆ ಮೂರ್ಲೋಕ ದೊರೆಯೆ ಪ. ಮನೆದೊಳಿ(?)ಗಿರು ಬಹು ಜನರು ಪೇಳುವ ದೂರು ಎಣಿಸಲು ಶಕ್ತನಾರು ಮುಖಾಬ್ಜ ತೋರು ಅ.ಪ. ಮೂರ್ತಿ ನೀನು ಪ್ರಾಕೃತ ಗುಣಸರ್ಗದಿ ಬರುವುದೇನು ಸರ್ಗರಕ್ಷಣ ಪಾಪವರ್ಗವೆಲ್ಲವನು ನಿಸರ್ಗ ಮೀರದೆ ಮಾಳ್ಪ ದುರ್ಗಮದ್ಭುತಕರ್ಮ ದೀರ್ಘದರ್ಶಿ ಮುನಿವರ್ಗಕೊಲಿದು ನಿಜ ಮಾರ್ಗ ತೋರ್ಪ ಶ್ರೀ ಭಾರ್ಗವೀ ರಮಣಾ 1 ಜಲದೊಳಗಾಡಿದನು ಬೇರನು ಕಿತ್ತಿ ಖಳರನು ಸೀಳಿದನು ನೆಲನನಳೆದು ತಾಯಿ ತಲೆಯ ತರಿದು ನಿಜಲಲನೆಗೋಸುಗ ದೈತ್ಯ ಕುಲವ ಸಂಹರಿಸಿದ ಶಿಲೆಯನು ರಕ್ಷಿಸಿ ಕಳವಳಿಸಿದ ಕಪಿ ತಿಲಕನ ಸ್ನೇಹವ ಬಳಸಿದನೆಂಬುದು 2 ಬಾಗಿಲ ಮುಚ್ಚಿದರೆ ಗೋಡೆಯ ಹಾರಿ ಹೋಗಿ ಮನೆಯ ಒಳಗೆ ಬಾಗಿಲ ಮರೆಯಲಿ ಬಾಗಿನೋಡುತ ಮೆಲ್ಲಗಾಗಿ ಬೆಣ್ಣೆಯ ಮೆದ್ದು ಸಾಗಿ ಬರುತಲಿರೆ ನಾಗವೇಣಿಯರು ಹಿಡಿಯಲು ನೀವಿಯ ನೀಗಿ ಪುರುಷರನು ಕೂಗಿದನೆಂಬರು3 ತೊಟ್ಟಿಲೊಳಗೆ ಮಲಗಿ ನಿದ್ರೆಯಗೈವ ಪುಟ್ಟ ಶಿಶುಗಳನೆಲ್ಲ ತಟ್ಟಿ ಎಬ್ಬಿಸಿ ಕಣ್ಣಾಕಟ್ಟಿ ವಸ್ತ್ರದಿ ತಾನೆ ಚಿಟ್ಟನೆ ಚೀರಿ ಒ- ತ್ತಟ್ಟು ಎಲ್ಲರು ಕೂಡಿ ಕಟ್ಟಿದ ಕರುಗಳ ಬಿಟ್ಟ ಮೊಲೆಗೆ ಒಳ- ಗಿಟ್ಟ ಹಾಲು ಮೊಸರೊಟ್ಟಿಲಿ ಸವಿವುದೆ 4 ವಿದ್ಯೆಯ ಕಲಿಯೆಂದರೆ ಅಮ್ಮಯ್ಯ ಎನಗೆ ನಿದ್ದೆ ಬರುವುದೆಂಬುವಿ ಹೊದ್ದಿಸಿ ತಟ್ಟಿದರೆದ್ದು ಓಡುವಿ ಗೋಪೆರಿದ್ದ ಠಾವಿಗೆ ನಾನಾ ಬದ್ಧವನು ಸುರುವಿ ಸಿದ್ಧವಾಗಿ ಕಾದಿರೆ ಕೈಗೆ ಸಿಕ್ಕದೆ ಉದ್ಧವ ಗೃಹದೊಳು ಬೌದ್ಧನಂತಿರುವಿ 5 ಕುದುರೆಯ ಹತ್ತಿದರೆ ಯಾರಾದರೂ ಕದನವ ಮಾಡಲಿಹರೆ ಹೃದಯ ಮಂಟಪದಿ ನೀ ಸದರವಾಡುತಲಿರೆ ಮದನ ಜನನಿವರ ಮದಮತ್ಸರಗಳ ಒದೆದು ತೀವ್ರದಲಿ ಪದಯುಗ ಪಾಲಿಸುವುದಯ್ಯ ಗಿರೀಶ 6
--------------
ತುಪಾಕಿ ವೆಂಕಟರಮಣಾಚಾರ್ಯ
ಮನದೊಳಗೆ ಮಸಣವನು ತುಂಬಿಕೊಂಡಿರಲು ಮನೆಯ ಚಂದದಿ ಮಾಡಿದರೇನಯ್ಯ ಪ ಮನೆಯೊಡೆಯ ತಾನು ಸನ್ನಡತೆಯಲ್ಲಿರದೆ ಮನೆಮಂದಿಯನು ದಂಡಿಸಲಾಗದಯ್ಯ ಮನೆತುಂಬ ಮನತುಂಬ ಜಾಜಿಪುರಿವಾಸನನು ಅನುದಿನವು ನುತಿಸಲು ಸುಖವುಂಟು ಕೇಳಯ್ಯ 1 ದೇವರು ಧರ್ಮವನು ದಾರಿಯಾಚೆಗೆ ಅಟ್ಟಿ ದೇವಾಲಯವ ಮನೆಯೊಳಗೆ ಮಾಡಲೇನು ಅವರಿವರ ನೋಟಕ್ಕೆ ಒಪ್ಪವಾದೀತಷ್ಟೆ ಯಾವ ಪುರುಷಾರ್ಥವದರಿಂದ ಹೇಳು 2 ಅವ್ವ ಕಷ್ಟವು ಬರಲು ಅವರಿವರು ಬಾರರು ಆ ವಾಸುದೇವನಲ್ಲದೆ ಮತ್ತೊಬ್ಬರಾಗರು ಭಾವ ಮೈದುನ ಗಂಡ ಹೆಂಡತಿ ಮಕ್ಕಳು ಇವರೆಲ್ಲ ದೇವ ಜಾಜಿಪುರೀಶನೊಕ್ಕಲು 3
--------------
ನಾರಾಯಣಶರ್ಮರು