ಒಟ್ಟು 19050 ಕಡೆಗಳಲ್ಲಿ , 136 ದಾಸರು , 7377 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂದಳು ಸಿರಿಲಕುಮಿಯು ನಮ್ಮ ಮನೆಗೆತಂದಳೈಶ್ವರ್ಯಂಗಳ ಪಇಂದಿರೆಹರಿಯುರ ಮಂದಿರ ನಿತ್ಯಾನಂದನಿಲಯಭವಬಂಧ ವಿಮೋಚನಿಅ.ಪಸುಂದರಾಂಗಿ ಸುಗುಣಾಸಿಂಧುಜಗಜ್ಜನನೀಇಂದುಸೋದರಿ ಪೂರ್ಣೇಂದು ಬಿಂಬಾನನೆ 1ಯೆಂದಿಗೆ ಸಂಪದಕುಂದಬರವ ಹಾಂಗೆನಿಂದುಪಾಲಿಸುವನೆಂದು ದೀಕ್ಷೆಯು ಮಾಡಿ2ಬೃಂದಾರಕಸಂಕ್ರಂದನವಂದಿತೆಮಂದಹಾಸದಿ ರಘು ನಂದನ ಸುಪ್ರಿಯೆ 3ಕಂದ ತುಲಸಿದಾಸನೆಂದು ಸಂಭ್ರಮದಿ ಮುಚುಕುಂದವರದ ಪಾದದ್ವಂದ್ವ ಭಕ್ತಿಯು ಕೊಡಲು 4
--------------
ತುಳಸೀರಾಮದಾಸರು
ಬಂದಿದೆ ದುರಿತಘಸಂಗ ಶ್ರೀರಂಗಮಂದಮತಿಯೆಂದುಪೇಕ್ಷಿಸದುಳುಹೊ ಪ.ಒಲ್ಲೆನೆಂದರೆ ಬಿಡದೀ ಮನ ತಿಳಿದತ್ತೆಕ್ಷುಲ್ಲ ವೃತ್ತಿಯ ಸೇರಿ ಬಿಡಲೊಲ್ಲದುಕಲ್ಲುಗೊಂಡಿದೆ ಪುಣ್ಯಮಾರ್ಗಕ್ಕೆ ಇದರೊಳುಫುಲ್ಲನಾಭನೆ ಆವ ತೆರದಿಂದ ಸಲಹೊ 1ಕೆಂಡವ ಕೊಂಡು ಮಂಡೆಯ ಬಾಚುತಿದೆಪರಹೆಂಡಿರು ವಿತ್ತದಾಸೆಗೆ ತೊಡಕಿಕಂಡರೆ ಸೊಗಸದು ಭಕುತಿ ವೈರಾಗ್ಯವಪುಂಡರೀಕಾಕ್ಷನೆಗತಿನೀನೆ ಬಲ್ಲೆ2ಮೆಲ್ಲ ಮೆಲ್ಲನೆ ದುಷ್ಕರ್ಮವ ಸಾಧಿಸಿಬಲ್ಲಿದಜವನವರ ಬರಮಾಡಿದೆವಲ್ಲಭಪ್ರಸನ್ವೆಂಕಟ ಕೃಷ್ಣನಿಲ್ಲಿಸು ನಿನ್ನ ನಾಮವ ನಾಲಿಗೆಯಲಿ 3
--------------
ಪ್ರಸನ್ನವೆಂಕಟದಾಸರು
ಬಂದು ನಿಂದಿಹ ನೋಡಿ- ಭೂತಳದಿ ವೆಂಕಟಇಂದಿರೆಯನೊಡಗೂಡಿ- ಒಪ್ಪುವ ನಿರಂತರಪೊಂದಿ ಭಜನೆಯ ಮಾಡಿ- ಆನಂದ ಬೇಡಿ ಪವಂದಿಸುತ ಮನೆದೊಳಗೆ ಇವನಡಿ-ದ್ವಂದ್ವ ಭಜಿಸಲು ಬಂದ ಭಯಹರ |ಇಂದುಧರಸುರವೃಂದನುತ ಗೋ-ವಿಂದಘನದಯಾಸಿಂಧು ಶ್ರೀಹರಿ ಅ.ಪದ್ವಾರದೆಡಬಲದಲ್ಲಿ- ಜಯವಿಜಯರಿಬ್ಬರುಸೇರಿ ಸೇವಿಪರಲ್ಲಿ- ಸನಕಾದಿನುತ ಶೃಂ-ಗಾರನಿಧಿ ಅಂಗದಲಿ- ಮುತ್ತಿನಲಿ ಶೋಭಿಪಹಾರ ಹೊಂದಿಹುದಲ್ಲಿ- ವಿಸ್ತಾರದಲ್ಲಿ ||ವಾರವಾರಕೆ ಪೂಜೆಗೊಂಬುವಹಾರ ಮುಕುಟಾಭರಣ ಕುಂಡಲ-ಧಾರಿ ಭುಜ ಕೇಯೂರ ಭೂಷಿತಮಾರಪಿತಗುಣಮೋಹನಾಂಗ ||ಚಾರುಪೀತಾಂಬರ ಕಟಿಯ ಕರ-ವೀರ ಕಲ್ಹಾರಾದಿ ಹೂವಿನಹಾರ ಕೊರಳೊಳು ಎಸೆಯುತಿರೆ ವದ-|ನಾರವಿಂದನು ನಗುತ ನಲಿಯುತ 1ಎಲ್ಲ ಭಕುತರಭೀಷ್ಟ-ಕೊಡುವುದಕೆ ತಾ ಕೈ-ವಲ್ಯ ಸ್ಥಾನವ ಬಿಟ್ಟ- ಶೇಷಾದ್ರಿ ಮಂದಿರದಲ್ಲಿ ಲೋಲುಪ ದಿಟ್ಟ-ಸೌಭಾಗ್ಯನಿಧಿಗೆದುರಿಲ್ಲ ಭುಜಬಲ ಪುಷ್ಪ-ಕಸ್ತೂರಿಯಿಟ್ಟ ||ಚೆಲ್ವ ಪಣೆಯಲಿ ಶೋಭಿಸುವ ಸಿರಿ-ವಲ್ಲಭನಗುಣಪೊಗಳದಿಹ ಜಗ-ಖುಲ್ಲರೆದೆದಲ್ಲಣ ಪರಾಕ್ರಮಮಲ್ಲಮರ್ದನಮಾತುಳಾಂತಕ||ಫಲ್ಗುಣನಸಖಪ್ರಕಟನಾಗಿಹದುರ್ಲಭನು ಅಘದೂರ ಬಹುಮಾಂಗಲ್ಯ ಹೃಯಯವ ಮಾಡಿ ಸೃಷ್ಟಿಗೆಉಲ್ಲಾಸ ಕೊಡುತಲಿ ಚೆಂದದಿಂದಲಿ 2ಪದಕ-ಕೌಸ್ತುಭದಾರ-ಸರಿಗೆಯ ಸುಕಂಧರಸುದರ್ಶನ-ದರಧಾರ-ಸುಂದರ ಮನೋಹರಪದಯುಗದಿ ನೂಪುರ-ಇಟ್ಟಿಹನು ಸನ್ಮುನಿಹೃದಯ ಸ್ಥಿತ ಗಂಭೀರ-ಬಹುದಾನ ಶೂರ ||ವಿಧಿ-ಭವಾದ್ಯರ ಪೊರೆವ ದಾತನುತುದಿ ಮೊದಲು ಮಧ್ಯವು ವಿರಹಿತನುಉದುಭವಾದಿಗಳೀವ ಕರ್ತನುತ್ರಿದಶಪೂಜೀತ ತ್ತಿಭುವನೇಶ ||ಸದುನಲಾಸದಿ ಸ್ವಾಮಿ ತೀರ್ಥದಿಉದುಸುತಿರೆಸಿರಿಮಹಿಳೆ ಸಹಿತದಿಪದುಮನಾಭಪುರಂದರವಿಠಲನುಮುದದಿ ಬ್ರಹ್ಮೋತ್ಸವದಿ ಮೆರೆಯುತ 3
--------------
ಪುರಂದರದಾಸರು
ಬದುಕಿದೆನು ಬದುಕಿದೆನು ಭವದುರಿತ ಹಿಂಗಿತುಪದುಮನಾಭನ ಪಾದದೊಲಿಮೆ ಎನಗಾಯಿತು ಪಹರಿಯ ತೀರ್ಥ ಪ್ರಸಾದವು ಎನಗೆ ದೊರೆಕಿತು |ಹರಿಕಥಾಮೃತವೆನ್ನ ಕಿವಿಗೊದಗಿತು ||ಹರಿದಾಸರುಗಳೆನ್ನ ಬಂಧು ಬಳಗವಾದರು |ಹರಿಯ ಶ್ರೀ ಮುದ್ರೆಯೆನಗೆ ಆಭರಣವಾಯ್ತು 1ಮುಕ್ತರಾದರು ಎನ್ನ ನೂರೊಂದು ಕುಲದವರು |ಮುಕ್ತಿ ಮಾರ್ಗಕೆ ಯೋಗ್ಯ ನಾನಾದೆನು ||ಸುಕೃತಿದೇಹಕ್ಕೆನ್ನ ಮನವು ತಾನೆಳಸಿತ್ತು |ಅಕಳಂಕ ಹರಿನಾಮ ದಿವ್ಯಕೊದಗಿತ್ತು 2ಇಂದೆನ್ನ ಸಂತತಿಗೆ ಸಕಲ ಸಂಪದವಾಯ್ತು |ಮುಂದೆನ್ನ ಜನ್ನ ಸಾಫಲ್ಯವಾಯ್ತು ||ತಂದೆ ಶ್ರೀಹರಿಪುರಂದರವಿಠಲ ರಾಯನೇ |ಬಂದೆನ್ನ ಹೃದಯದೊಳು ನೆಲೆಯಾಗಿ ನಿಂತ 3
--------------
ಪುರಂದರದಾಸರು
ಬಂದೆನೇಳೆ ಗೋವಿಂದ ನಾ ಇಂದುಮುಖಿ ನಿದ್ರೆ ಬಿಟ್ಟುಬಂದು ನೀ ಬಾಗಿಲ ತೆಗೆಯೆ ಗೋವಿಂದ ನೀ ಗೋವೃಂದವ ಕಾಯಲು ಹೋಗಯ್ಯ ಪ.ಸೋಮಕ ಖಳನ ಕೊಂದು ನೇಮದಿ ವೇದವ ತಂದಶ್ರೀ ಮತ್ಸ್ಯಾವತಾರ ಬಂದೆನೆ ಮತ್ಸ್ಸ್ಯನಾದರೆಆ ಮಹಾಂಬುಧಿಗೆ ಹೋಗಯ್ಯ 1ಸಿಂಧುಮಥÀನ ಕಾಲಕೆ ವೃಂದಾರಕರಿಗÉೂಲಿದಸುಂದರ ಕೂರ್ಮನು ಬಂದೆನೆ ಕೂರ್ಮನಾದರೆಮಂದರಹೊರಲು ಹೋಗಯ್ಯ2ಪ್ರಳಯಾಂಬುಗಿಳಿದೊಬ್ಬನ ಸುಲಭದಿ ಕೋರೇಲಿ ಸೀಳಿದಚೆಲುವ ವರಾಹನು ಬಂದೆನೆ ವರಾಹನಾದರೆಇಳೆಯ ಕೂಡಾಡ ಹೋಗಯ್ಯ 3ಸೊಕ್ಕಿ ಕಂಬವ ಗುದ್ದ್ದಿದ ರಕ್ಕಸನಂತರ ಮಾಲೆಯನಿಕ್ಕಿದ ನರಹರಿ ಬಂದೆನೆ ನರಹರಿಯಾದರೆಚಿಕ್ಕವನೊಳಾಡ ಹೋಗಯ್ಯ 4ಹೋಮವ ಮಾಡಿ ಮೀರಿದ ಭೂಮಿಪನುಕ್ಕ ಮುರಿದನೇಮದ ವಾಮನ ಬಂದೆನೆ ವಾಮನನಾದರೆನೇಮ ನಿಷ್ಠೆಗೆ ನೀ ಹೋಗಯ್ಯ 5ಭೂಭಾರವನಿಳುಹಿ ದ್ವಿಜರ್ಗೆ ಭಾಗ್ಯವ ಕೊಟ್ಟ ಶೌರ್ಯಶೋಭಿತಭಾರ್ಗವಬಂದೆನೆ ಭಾರ್ಗವನಾದರೆಆ ಬಾಲೇರಂಜಿಸ ಹೋಗಯ್ಯ 6ಸೀತೆಗಾಗಿ ರಾವಣನ್ನ ಘಾತಿಸಿದೆ ಕೇಳೆವಾತಜಾತ ವಂದ್ಯ ರಾಮ ಬಂದೆನೆ ರಾಮನಾದರೆ ಸರಯೂ ತೀರದಲ್ಲಿರ ಹೋಗಯ್ಯ 7ಸೋಳಸಾಸಿರ ಗೋಪೇರನಾಳುವ ಪ್ರೌಢ ಕಾಣೆ ಗೋಪಾಲ ಚೂಡಾಮಣಿ ಬಂದೆನೆ ಗೋಪಾಲನಾದರೆ ಗೋಪಾಲೇರೊಡನಾಡ ಹೋಗಯ್ಯ 8ದೃಢದಲ್ಲಿ ತಪವಿದ್ದ ಮಡದೇರ ಮನಗೆದ್ದಕಡುಮುದ್ದು ಬುದ್ಧ್ದ ಬಂದೇನೆ ಬುದ್ಧನಾದರೆ ಮಿಥ್ಯದಸಡಗರದಲ್ಲಿರ ಹೋಗಯ್ಯ 9ಪದ್ಮಗಂಧಿ ನಿನ್ನ ರತಿಗೊದಗಿದೆ ಬಿಂಕವಿನ್ನ್ಯಾಕೆಕುದುರೆಯೇರಿ ಕಲ್ಕಿ ಬಂದೆನೆ ಕಲ್ಕಿಯಾದರೆಕದನಕೆ ಜಾಣ ಹೋಗಯ್ಯ 10ವಲ್ಲಭನ ನುಡಿಕೇಳಿ ನಲ್ಲೆ ಸತ್ಯಭಾಮೆಪಾದಪಲ್ಲವಕೆರಗಿ ನಿಂತಳು ಪ್ರಸನ್ವೆಂಕಟಚೆಲುವ ನೀನೆಂದರಿಯೆನೆಂದಳು 11
--------------
ಪ್ರಸನ್ನವೆಂಕಟದಾಸರು
ಬಂದೆಯಾ ಪರಿಣಾಮದಿ ನಿನ್ನಬಂಧು ಬಳಗವನೆಲ್ಲ ಬಿಟ್ಟು ಸನ್ಮಾರ್ಗದಿ ಪಸಂಚೀತ ಪ್ರಾರಬ್ಧ ಕರ್ಮಂಗಳನೆಲ್ಲಕಿಂಚಿತು ಮಾಡಿ ಸಂಕೋಲೆಯ ಹಾಕಿ ||ಮಿಂಚುವ ಧನ - ಪುತ್ರ ದಾರೇಷಣಂಗಳವಂಚಿಸಿ ಕವಲು ದಾರಿಯ ಬಿಟ್ಟು ಮಾರ್ಗದಿ 1ಕಾಮವ ಖಂಡಿಸಿ ದ್ರೋಹವ ದಂಡಿಸಿನಾಮರೂಪ ಕರ್ಮಂಗಳ ನಿಂದಿಸಿ ||ತಾಮಸಕರ್ಮನಡತೆಯ ತಗ್ಗಿಸಿ ನಿರ್ನಾಮ ಮಾಡಿ ಮದ-ಮತ್ಸರಂಗಳನೀಗಿ2ಅಷ್ಟಭೋಗಂಗಳ ನಷ್ಟಂಗಳ ಮಾಡಿಅಷ್ಟೈಶ್ಚರ್ಯವ ಮಟ್ಟು ಮಾಡಿ ||ಅಷ್ಟ ಪ್ರಕೃತಿಗಳ ಕುಟ್ಟಿ ಕೆಡಕಿ ಬಹಳನಷ್ಟತುಷ್ಟಿಗಳಲ್ಲಿ ದೃಷ್ಟಿಯೇನಿಲ್ಲದೆ 3ಸ್ಥೂಲ ಸೂಕ್ಷ್ಮ ಕಾರಣ ದೇಹಂಗಳನೆಲ್ಲಬೀಳುಗೆಡಹಿ ಪಂಚಭೂತಂಗಳ ||ಪಾಳು ಮಾಡಿ ಪಂಚ ಪಂಚ ಇಂದ್ರಿಯಗಳಕೋಳಕೆ ತಗುಲಿಸಿ ಕೊನಬುಗಾರನಾಗಿ 4ಹೊಳೆವ ಪ್ರಪಂಚದ ಬಲೆಯ ಬೀಸಿ ಸಂಗ-ಡಲೆ ಸಾಗಿ ಬರುತಿಹ ದಾರಿಯೊಳು ||ಒಲಿದು ಮುಕ್ತಿಯನೀವ ಪುರಂದರವಿಠಲನುಬಲವನಿತ್ತುದರಿಂದೆ ನಾನು ನೀನೆನ್ನದೆ 5
--------------
ಪುರಂದರದಾಸರು
ಬಂದೆವಯ್ಯ ಶ್ರೀಕೃಷ್ಣಮೂರ್ತಿ ನಿನ್ನ ಸುಂದರಚರಣಾರವಿಂದ ನೋಡುವುದಕ್ಕೆ ಬಂದೆ ಪಮಂದರೋದ್ಧರ ಅರವಿಂದ ನೇತ್ರಗೆ ನಮ್ಮೊ-ಳಿಂದು ಕೃಪೆಯ ತೋರಿ ಸಲಹೋ ಸಚ್ಚಿದಾನಂದ ಅ.ಪಭಾವಸಂವತ್ಸರ ಪೌಷ ಬಹುಳಮವಾಸೆಮಹಾ ದೃಢದಿ ಸಮುದ್ರವ ಸ್ನಾನಗೈದುಆ ವಡಭಾಂಡೇಶ್ವರದಿಂದ ಬಲರಾಮದೇವರ ಕಂಡು ನಾವೆರಗಿ ಕೈಮುಗಿದೀಗ ಬಂದೆ 1ಮಧ್ವಸರೋವರವೆಂಬ ತೀರ್ಥದಿ ಮಿಂದುಶ್ರದ್ಧೆ ಭಕ್ತಿಯೊಳ್ ನಿನ್ನ ಕಂಡು ಬಲಬಂದುಬದ್ಧಾಂಜಲಿಯ ನೀಡಿ ಸ್ಮರಿಸಿ ವಂದನೆಗೈದುಉದ್ಧರಿಸೆಂದು ವರವ ಬೇಡುವದನೀಗ ಬಂದೆ 2ಅಷ್ಟಾವಧಾನ ಸೇವೆಯೊಳು ನಿನ್ನನುಯತಿಶ್ರೇಷ್ಠರು ಪೂಜಿಸಿ ವರವ ನೀಡಿ ಕೊಟ್ಟಮಂತ್ರಾಕ್ಷತೆ ತೀರ್ಥ ಪ್ರಸಾದವ ಪಡೆದುನಮ್ಮಯ ಭವಕಷ್ಟ ನೀಗುವುದಕ್ಕೆ ಬಂದೆ 3
--------------
ಗೋವಿಂದದಾಸ
ಬಂದ್ಯಾ ವಿಠಲಇಂದುಬಡವನಲ್ಲಿವೃಂದಾವನದಲ್ಲಿ ಗೋವೃಂದಗಳ ಕಾಯಿದವನೆಸುಳಿಗುರುಳು ಮೇಲೆ ಅರಳೆಲೆಯು ಸಿರಿಕಿರೀಟಕೊರಳಲ್ಲಿ ಸರಿಗೆ ಸರಪಳಿ ಪಚ್ಚೆಪದಕವುಮುಂಗಯ್ಯ ಕಡಗ ಸರಪಳಿ ತೋಳಭಾಪುರಿಮಾಳಿಗೆ ಶ್ರೀನಿವಾಸಾರ್ಯರ ಮನೆಯಿಂದಈಸು ಬಗೆ ಪೂಜೆಯು ಎನ್ನಿಂದಲಾಗದು
--------------
ಗೋಪಾಲದಾಸರು
ಬನ್ನಿಗಡ ಸುಜನರೆಲ್ಲ ಪಾವನಕಾಯ ಸುಜನಪ್ರಿಯಪುಣ್ಯ ಸತ್ಯನಾಥಯತಿರನ್ನನ ಪಟ್ಟಣಕಿಂದು ಪ.ಪರಬೊಮ್ಮನೆಂಬುವ ಮನೆದೈವನಾಗಿಹಪರಸುಖವನೀವ ಮರುತದೇವನೆಂಬಾತಪರಮಪದದ ಗುರುವು ಯುಕ್ತಿಯಿಂದ ಕಾಪುರುಷರಗಲಿಸುವಂತೆ ಸತ್ಯನಾಥಪುರಪತಿಗೆ ಬೋಧಿಸುವ ಪರಮವಾರ್ತೆಯ ಕೇಳ 1ನವಭಕುತಿರತುನದಿಂದ ನಿರ್ಮಿತ ಪ್ರಾಕಾರಕೆನವದ್ವೇಷಿಗಳು ದಾಳಿಯಿತ್ತು ಅಂಡಲೆಯಲು ದಾನವಾರಿಯ ನಾಮಾಯುಧವ ಸತ್ಯಾಭಿನವÀÀ ತೀರ್ಥರೆಂಬೊ ಪುತ್ರಗೆ ನೀಡುತಮಾನವ ಹರಿಯೆಂಬಸುರರ ಮಡುಹಿಸುವುದು ನೋಡ 2ಕಾಯಜಚೋರನೆಂಬವ ತಾ ಕಳ್ಳ ಹನ್ನೊಂದರ ಕೂಡಿಕಾಯವೆಂಬ ರಾಜಗೃಹಕೆ ಕನ್ನವಿಕ್ಕುವುದ ಕಂಡುಕಾಯುವ ಜ್ಞಾನೆಂಬ ಭಟನು ಅಟ್ಟಲವನಕೈದು ಚಾಪವ ಸೆಳೆದು ಮಿಕ್ಕು ಚೋರನೀಕಾಯಕಟ್ಟಿಸುವಂಥ ಕರುಣಿಗೆ ನಮಿಸುವ3ಹರಿದಾಸರೆನಿಸುವ ಹಲವು ದೊರೆಗಳುಂಟುಹರದಾರಿಕ್ಕೆಲದಿ ಪಣ್ಯವ ಮಾಡಿ ಸುಧೆüವೀರಿಹರಿತತ್ವ ನಾಣ್ಯದೊಳು ರಾಮನಾಮದಹಿರಿದುಮುದ್ರೆಯನೊರೆದು ಪರಂಪರಹರುಷ ವ್ಯವಸಾಯವುಂಟು ಹಿರಿಯಾಮೃತವುಣ್ಣ 4ಅಭಿನವ ಚಂದ್ರಿಕೆದೋರಿ ಅಭಿಜ್ಞಾನತೆ ಮೆರೆದಅಭೀತ ಮಂಗಳಗಾತ್ರ ಅಮಿತ ಬುಧರಮಿತ್ರಅಭಿಜÕಗುರು ಸತ್ಯನಿಧಿಯ ಸುತ ಸತ್ಯನಾಥಅಭು ಪ್ರಸನ್ವೆಂಕಟೇಶನ ಭಜಕನ ಕವಿತಅಬುಜ ಪರಿಮಳಮಂದಾನಿಲವಿಡಿವಳಿಯಂತೆ 5
--------------
ಪ್ರಸನ್ನವೆಂಕಟದಾಸರು
ಬಯಲಭಾವಿಯ ನೀರಿಗೆ ಬಂದಳೊಬ್ಬಳು ಬಾಲೆ |ಬಾಯಾರಿ ಬಿದ್ದಳು ಕೊಡವೊಡೆಯಿತು ನೀರುರುಳಿತು ಪ.ನೀರಿಲ್ಲದೆ ನೆರಳಿಲ್ಲದೆ ಬೇರಿಲ್ಲದೆ ಸಸಿಹುಟ್ಟಿಹೂವಿಲ್ಲದೆ ಕಾಯಿಲ್ಲದೆ ಅದು ಫಲಕೆ ಬಂದು ||ಕರವಿಲ್ಲದೆ ಕಾಲಿಲ್ಲದೆ ಕೊಯ್ವರಯ್ವರು ಆ ಹಣ್ಣನು |ಮರುಳಾಯಿತು ಮೂವತ್ತು ಸಾವಿರ ಮಂದಿ 1ಕುರುಡ ಕಂಡನು ಸರ್ಪನಡುವಿರುಳು ಬಾಹುದನು |ಮೂಕ ಕಂಡನು ಕನಸ ಕಿವುಡನು ಕೇಳಿದ ||ಇರವು ಹಾರಿತು ಗಗನಕೆ ಮರವು ಮುರಿಯಿತು ನೋಡಿ |ವಿಧಿತನ್ನ ಬೇಟಿಗೆ ಹೋಗುವ ಸಡಗರ ನೋಡಿ2ಕಿಚ್ಚಿನ ಕೊಡದವಳೆ ನೀ ಬಂದೆ ತೋರಣಗಟ್ಟಿ |ರಚ್ಚಿಗೆ ಬಾಹೋರು ನಾಲುವರೊಳಗೆಉಚ್ಚರಿಸಲೂ ಸಲ್ಲ ಕೇಳು ಪುರುಷನ ಸೊಲ್ಲಅಚ್ಚಪುರಂದರವಿಠಲ ತಾನೆ ಬಲ್ಲ 3
--------------
ಪುರಂದರದಾಸರು
ಬರಗಾಲವಲ್ಲವಿದು ಬಳಲದಿರಿಧ್ಯಾನಪ್ರಿಯವು ಆಗೆ ಧನ ಬ್ಯಾರೆ ಪ್ರಿಯನಲ್ಲಅಗ್ಗವಾದಾಗಲಿ ಮುಗ್ಗಿ ಬೆಳುವರೆಮಾರುವಧಾರಣೆಯು ಏರಿ ಇಳುವುದಕೆವರಣ ಆಶ್ರಮಗಳ ಮರಿಯಾದಿಗಳು ತಪ್ಪಿಜ್ಞಾನ ಬರಗಾಲವು ಬಿದ್ದದೆ ಜನಕೆಲ್ಲಪಾಲನೆಯ ಕಾಲವಿದು ಸಂಹಾರ ಕಾಲಲ್ಲಿಹರಿಯ ಮರದಿಪ್ಪುದೆ ಬರಗಾಲ ಬರಗಾಲ
--------------
ಗೋಪಾಲದಾಸರು
ಬರಬೇಕೋ ರಂಗಯ್ಯ ನೀ - ಬರಬೇಕೊ ಪಬರಬೇಕೊ ಬಂದು ಒದಗಬೇಕೊ ಮಮಗುರು |ನರಹರಿ ನಾರಾಯಣ ನೀನಾ ಸಮಯಕೆ ಅ.ಪಕಂಠಕೆ ಪ್ರಾಣ ಬಂದಾಗ - ಎನ್ನ |ನಂಟರಿಷ್ಟರು ಬಂದಳುವಾಗ ||ಗಂಟು ಹುಟ್ಟಿನ ಕಾಲಬಂಟರು ಕವಿದೆನ್ನ |ಗಂಟಲೌಕುವಾಗ ವೈಕುಂಠನಾರಾಯಣ 1ನಾರಿಯು ಪುತ್ರ ಮಿತ್ರರು -ಬಂಧುಗಳು |ಆರೆನ್ನ ಸಂಗಡ ಬಾರರು ||ಆರಿಗಾರಿಲ್ಲ ಯಮನಾರುಭಟಕೆ ಅಸು-|ರಾರಿ ಮೈಮರೆದಾಗ ನೀರೇರುಹನಾಭ 2ಕರಿಪ್ರಹಲ್ಲಾದಾದಿ ಭಕ್ತರ -ಪತಿ|ಕರಿಸಲು ಒದಗಿದೆ ಶ್ರೀಧರ ||ನೆರೆಹೀನನೆನ್ನ ಉದ್ಧರಿಸಿಅಚ್ಯುತನಿನ್ನ |ಚರಣದೊಳಿಂಬಿಡೊ ಪುರಂದರವಿಠಲ 3
--------------
ಪುರಂದರದಾಸರು
ಬರಿಯ ಮಾತಲಿಲ್ಲ ಶ್ರೀಹರಿಯ ಪ್ರೀತಿರಣ್ಣ ಮಧ್ವಾಚಾರ್ಯರುಪದೇಶವೆ ಮುಕ್ತಿಪುರದೊಳು ಖ್ಯಾತಿರಣ್ಣ ಪ.ರಂಗನ ಪ್ರತಿಮೆಯನು ಬಿಡದೆ ಬಹಿರಂಗದಿ ಪೂಜೆಯ ಮಾಡಿಕಂಗಳುತುಂಬಲು ಮೆಲ್ಲನೆ ಅಂತರಂಗದಿ ಪೀಠದಿ ನೋಡಿಹಿಂಗದೆ ಗುರುಶಿಕ್ಷಾಕ್ರಮದಲಿ ಧ್ಯಾನಂಗತನಾಗ್ಯೊಲಿದಾಡಿಲಂಘಿಸಿ ಜನ್ಮಾಯುಷಗಳ ತುದಿಯಲಿಮಂಗಳ ಬಿಂಬವ ನೋಡದೆ ನೋಡಿ 1ಒಮ್ಮಿಂದೊಮ್ಮೆ ಹೃದಯದದ್ದಕೆಧರ್ಮವ ಜರಿದರೆ ಹೀನನಿರ್ಮಳ ಶೌಚಾಚಮನವೆ ಗಳಿಸಿದಸಮ್ಯಕ್‍ಜ್ಞಾನ ನಿಧಾನತಮ್ಮವಗುಣ ರೋಗಕೆ ಔಷಧವುಕರ್ಮದ ಮೂಲವೆ ಸ್ನಾನಹಮ್ಮಿಲಿ ಸನ್ಮಾರ್ಗಕೆ ಕುಂದಿಡದೆಇಮ್ಮಡಿ ಸಾಧಿಸಿ ನವನವೀನ 2ಸದ್ವ್ವ್ರತ ದೀಕ್ಷೆಯು ಧ್ರುವಪದ ಮುಕ್ತಿಯುಸುದ್ವಾರವ ಬಿಡಬಹುದೆಮಧ್ವೇಶನ ಮಹಿಮೆಯ ಕೇಳದೆ ರಕ್ಷಾಧ್ವರ ಕಥೆ ಕೇಳಬಹುದೆವಿಧ್ವಂಸಿಸುವ ಚೋರರು ಹೇಳ್ಯಾಡುವಸದ್ವಚನದಿ ಸುಖವಾಹುದೆಅದ್ವಯ ಪ್ರಸನ್ವೆÉಂಕಟೇಶನ ಪಾದಕಮಲದ್ವಯ ಬಿಟ್ಟಗೆ ತಮಸಹುದಹುದೆ 3
--------------
ಪ್ರಸನ್ನವೆಂಕಟದಾಸರು
ಬಲಿಯ ದಾನವಬೇಡಿ | ಚೆಲುವಕಾರವಾಗಿದೆ |ನೆಲನಾ ನಿರಡಿಯಾ ಮಾಡಿದಾಡೆ ನಾನಾ|ಲಲಾನೆ ಮಾಡಿಯಾಲಿಟ್ಟುಶಿರಾ ವಾನೊರಾಸೂಕ್ತ | ಮೊಲೆಯಾನೂಡುವಾ ಪುಣ್ಯ ಹೀಗೆಪಡೆದಾಳೋ | ಮಗಾನೆಂದೂ ಪಮಗಾನೆಂದಾಡಿಸುವಾಳು | ಮೊಗಾನೊಡಿನಗೂವಾಳು |ಮಿಗೆ ಹರೂಪದಾಲಿ ಲೊಲಾಡುವಾಳೂ |ಜಗಾದೂರಂಗಾಗಿ | ಮೊಗ ಬಂದು ರಕ್ಷಕ |ಬಿಗಿದಪ್ಪೊ ಪುಂಣ್ಯ ಹೇಗೆ ಪಾಡದಾಳೊ 1ಪಶೂಪಾಲೆಯರೂ | ಬ್ರಂಹ್ಮವನೂ ನೂರಮುನಿಗಳು |ವಸುಧಯ ಮಲುಳಿದಾವರೆಲ್ಲಾರು | ಶಶಿಮೌಖಿಸಾವಿರಾ |ವರಹಾವಿತ್ತವಾನೆಂದೂ | ಕೊಸಾರಾನಿಡುವಾ ಪುಣ್ಯಹೇಗೆ ಪಡದಾಳೊ 2ಸಾಗಾರಾ ಸುತಿಯಾರು |ಭೋಗಿ ಯನಾನಾ |ಯೋಗಾನಿದ್ರೆಯೊಳದ್ಯ ದೇವನಾ |ಆಗಾಮಾ ಶೃತಿಗಾಳು | ಆರಾರೆ ಕಾಣದ ವಾಸ್ತುವ |ಕೂಗಿದಾಳೆ ಪುಂಣ್ಯ ಹೇಗೆ ಪಾಡದಳೋ 3ಕಾಲಲಂದ್ಹುಗೆಕಿಂಕಿಣಿ ಹೊಂನ್ನು ಕಿರೂಗೆಜ್ಜೆ |ಹಾರಾಸಾರದಾ ಕೊರಾಳಾ ಪಾದಾಕಾ | ಬಾಲದೊಡಿಗೆಸಮ್ಮಬಾಲಾನಾಯತ್ತಿಕೊಂಡು | ಹಾಲಾಕೂಡಿಸುವಾ ಪುಂಣ್ಯಹೇಗೆ ಪಾಡಾದಾಳೊ 4ತೋಳಂನಾಡೆಲೊ ಕೃಷ್ಣ ಕೊಳಂನಾಡಿಸುಕಾಲಿ |ಭಾಮೆರೂಕಮಿಣಿ ಬಿಗಿದಪ್ಪುವಾ |ಭಾಮರೂಕೂಮಿಣಿ ಬಿಗಿದಾಪ್ಪುವಾ ನೆಲನಾ ತೊಳಂನಾಡಿಸುವಪುಣ್ಯ ಹೇಗೆ ಪಾಡದಾಳೊ 5ಆನೆಯೊಡೆಲೊ ಕೃಷ್ಣ | ಆನೆಯೊಡೆನೂಲಾಲಿರಾಯರಾಯರೂಗಾಗೆಲಿದಂತ | ರಾಯಾ ರಾಯಾಕೂ ಗಾಲಾ ಪಟ್ಟದಾನೆಯಾಡಿಸುವ ಪುಂಣ್ಯಹೇಗೆ ಪಡದಾಳೋ 6
--------------
ಪುರಂದರದಾಸರು
ಬಲ್ಲವನಾದರೆ ಈ ತಳ್ಳಿಬೇಡ |ಅಲ್ಲದಪಥಇದರಾಸೆಯ ಬಿಡು ನೀನುಪ.ಸರ್ಪನ ಪಣೆಯೊಳು ಜೇನು ತುಪ್ಪವ ಕಂಡು |ಅಪ್ಪನೆ ತಾರೆಂದು ಅಳುತಿರಲು ||ತುಪ್ಪದ ಸವಿಯನು ಜನರುಂಡುತೀರಲು |ಮುಪ್ಪಾಗಿ ಇರುವುದ ಕಂಡು ಮೂದಲಿಸುವ 1ನಂಬಿದ ಮನುಜರ ಹಂಬಲ ಮರೆವುದು |ಡೊಂಬಿಯವರು ಕಂಡು ತಡೆಯಲಾಗಿ ||ಕುಂಭದ ರೊಕ್ಕದ ಲಂಚವನಿತ್ತಲ್ಲಿ |ಅಂಬರವನು ಕಂಡು ನಗುತಿಪ್ಪ ಮನುಜನ 2ಅಂಬರವಡಗಿಯೆಕುಂಭಿನಿ ಜಾರಿಯೆ |ನಂಬಿದ ಮನುಜರು ನಡೆವಡೆಯೆ ||ಕುಂಭದ ನೀರನು ಚೆಲ್ಲುತ ಮಗುಳಲ್ಲಿಕಂಬದ ಹಾಗೆಯೆ ನಿಂತಿಹ ನರನು 3ಇಟ್ಟಿಹ ಬಾಗಿಲ ಕಾಣದೆ ತಾ ಬಂದು |ಹೊಟ್ಟೆಯ ಬಗಿದಲ್ಲಿ ಹೊರವಂಟ ವೇಳೆ ||ಕಟ್ಟಿದ್ದು ಕರಗಿಯೆ ಸೆಟ್ಟೆಲೆ ಒಣಗಿಯೆ |ದುಷ್ಟನೊಬ್ಬನು ಬಂದು ನಿಂತಿಹನು 4ಕಡಹದ ಪಲ್ಲಕ್ಕಿ ಬೆಡಗನು ಕಾಣುತ |ಅಡವಿಯಮೃಗ ಬಂದು ಕುಳಿತಿರ್ದುದ ||ಒಡನೆ ಕಟ್ಟಿದ ವಾಹಕರು ಹದಿನಾರು ಮಂದಿ |ಕಡಮೆಯ ಸಂಬಳ ತಡವಿಡುವವರನು 5ಅಕ್ಕಿಯ ರಾಶಿಯು ತೀರಲು ಕೊಳಗವು |ಬೆಕ್ಕಸ ಬೆರಗಾಗಿ ಕುಳಿತಿಪ್ಪದು ||ಬಿಕ್ಕಿದ ಅಕ್ಕಿದ ಹಕ್ಕಿಯು ಹಕ್ಕಿಯೆ |ಗಕ್ಕನೆ ಹಾರವ ಪಕ್ಷಿಯ ನೋಡುತ 6ಇರುತಿರೆ ಗಣಿತದಿರವಿಶಶಿ ಒಂದಾಗಿ |ಧರೆಯೊಳು ಸಾವಿರ ಎಲೆ ಬೀಳ್ವುದು ||ಎರವಿನಾಭರಣವ ಅವರವರೊಯ್ಯಲು |ಪುರಂದರವಿಠಲನ ಮೊರೆಬೀಳು ಕಂಡೆಯ 7
--------------
ಪುರಂದರದಾಸರು