ಒಟ್ಟು 1489 ಕಡೆಗಳಲ್ಲಿ , 100 ದಾಸರು , 1064 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಾಘವೇಂದ್ರಯತಿ ಗುರುರಾಯರ ಮಹಿಮೆ ಕೇಳಿರಿ ನಮ್ಮ ಗುರುರಾಯರ ಮಹಿಮೆ ಪ ಪರಮ ಭಕುತಿಯಿಂದ ಸ್ಮರಿಸುವ ಸುಜನರ ದುರಿತಗಳÀ್ಹರಿಸಿ ಸದ್ಗತಿ ಪಥವ ತೋರುವ ಅ.ಪ ಇಂದಿರೇಶನ ಮಹಿಮೆ ಪೊಗಳುವ ಭಕ್ತ ಸಂದಣಿ ಪೊರೆಯುವರ ಹಿಂದಿನ ಅಘಗಳನೊಂದೂ ನೋಡದೆ ಶ್ರೀ- ಮುಕುಂದನ ಭಜಕರ ಸಂಗಡ ನೀಡುವ ದಿವ್ಯ 1 ದೇಶ ದೇಶದೊಳಿವರ ಮಹಿಮೆಗಳ ಉ- ಲ್ಲಾಸದಿ ಪೊಗಳುವರ ದಾಸರೆಂತೆಂದು ಸಂತೋಷದಿ ಸೇವಿಪ ಮೀಸಲ ಮನದವರ ಪೋಷಿಸುತಿರುವಂಥ 2 ಹಲವು ಸಾಧನವೇತಕೆ ತನುಮನವ ಶ್ರೀ- ಹರಿಗೆ ಸಮರ್ಪಿಸಿರಲು ಕುಲಕೋಟಿ ಪಾವನ ಮಾಳ್ಪ ಶ್ರೀ ಗುರುಗಳ ಚರಣ ಸೇವಕರೆಂದು ಸಿರಬಾಗಿ ನುತಿಸಿರೊ 3 ನಿದ್ರೆ ಮಾಡುವ ಬಾಲೆಯ ಕರಗಳಿಗೆ ಶ್ರೀ- ಮುದ್ರಾಧಾರಣ ಮಾಡಿಹ ಸಜ್ಜನರಿಗಿವರ ಭಯ ವಜ್ರಕವಚವು ಸತ್ಯ ಹೃದ್ಗøಹದಲಿ ರಾಮಭದ್ರ ಮೂರುತಿ ಕಾಂಬ 4 ಸವಿನಯ ತೋರುವರ ಕನಲಿಕೆ ಕಳೆದು ಶ್ರೀ ಕಮಲನಾಭ ವಿಠ್ಠಲನೊಲುಮೆಯ ಪಡೆದ ಮಂತ್ರಾಲಯ ನಿಲಯ5
--------------
ನಿಡಗುರುಕಿ ಜೀವೂಬಾಯಿ
ರಾಜಮುಖೀ ಬೇಗ ಪ. ಚಿತ್ರವಿಚಿತ್ರಮಾಗಿ ಮೆರೆವ ರತ್ನಖಚಿತ ಮಂಟಪದಿ ಕೆತ್ತನೆಯ ಹಸೆಯಮೇಲೆ ರತ್ನಗಂಬಳಿಯ ಹಾಸಿ 1 ಪರಿಪರಿಯ ರಾಗದಿಂದ ತರುಣಿಯರು ನಿನ್ನ ಪಾಡಿ ಕರೆಯುತಿಹರೋಳ್ ಕರುಣೆಯಿರಿಸಿ ಅರಸನೊಡನೆ ಸರಸದಿಂದ2 ಪಂಕಜಾಕ್ಷಿ ನಿನ್ನ ಚರಣಕಿಂಕರರ ಮೊರೆಯ ಕೇಳಿ ಕನಕಪೀಠದಲ್ಲಿ ಕುಳಿತು ಕಾಂಕ್ಷಿತಾರ್ಥವಿತ್ತು ಸಲಹು 3 ಪರಮಪುರುಷ ಶೇಷಶೈಲವರದನರಸಿ ನಿನ್ನ ಗುಣವೆ ಸ್ಮರಿಸಿ ಸ್ಮರಿಸಿ ಕರೆಯುತಿರುವ ತರಳೆಯರಂ ಪೊರೆಯೆ ತಾಯೆ4
--------------
ನಂಜನಗೂಡು ತಿರುಮಲಾಂಬಾ
ರಾಜೀವದಳನೇತ್ರ ರಾಮಚಂದ್ರನೆ ಶುಭ- ನಾಮಧೇಯನೆ ನಿನಗಾನಮಿಸುವೆನು ಪ ರಾಮರಾಕ್ಷಸಕುಲ ಭಯಂಕರ ರಾಮದಶರಥ ಪುತ್ರನೆ ವರ ಸಾಮಗಾನ ವಿಲೋಲ ಶ್ರೀವರ ರಾಮ ಭರತ ಶತ್ರುಘ್ನ ಪಾಲಕ ಅ.ಪ ಸುರರೆಲ್ಲ ನೆರೆದು ಋಷಿವರರೆಲ್ಲ ಒಂದಾಗಿ ವರ ಕ್ಷೀರಾಂಬುಧಿಯ ಸಾರುತ ವೇಗದಿ ಪರಮಾತ್ಮ ನಿನ ಕಂಡು ಪರಿಪರಿ ಸ್ಮರಿಸುತ ನೆರೆದರು ದೇವ ಗಂಧರ್ವ ನಾರದರೆಲ್ಲ ಗರುಡ ಗಮನನೆ ಉರಗಶಯನನೆ ಪರಮ ಪುರುಷನೆ ಪುಣ್ಯಚರಿತನೆ ತ್ವರದಿ ಎಮ್ಮಯ ಮೊರೆಯ ಕೇಳೆಂದು ಭರದಿ ಪ್ರಾರ್ಥನೆ ಮಾಡುತಿಹರು 1 ಖೂಳ ದೈತ್ಯರು ನಮ್ಮ ಬಾಳಗೊಡರೊ ದೇವ ಭಾಳ ವ್ಯಾಕುಲರಾಗಿ ದು:ಖಿಪೆವು ಕೇಳಿ ತಡಮಾಡದೆ ಪಾಲಿಸಿ ಸಲಹಯ್ಯ ಶ್ರೀಲೋಲ ಶ್ರೀವರ ಶ್ರೀವತ್ಸಲಾಂಛನ ಶ್ರೀಶ ಶ್ರೀ ಭೂದೇವಿ ರಮಣನೆ ಮಾತುಳಾಂತಕ ಮದನಜನಕನೆ ವಾಸುದೇವನೆ ಭಜಿಪ ಭಕ್ತರ ಸೋಸಿನಲಿ ರಕ್ಷಿಸುತ ಪೊರೆಯುವೆ 2 ಭಕ್ತವತ್ಸಲ ಸ್ವಾಮಿ ಭಕ್ತರ ಸುರಧೇನು ಯುಕ್ತ ಮಾತುಗಳಾಡಿ ಸಂತಯಿಸಿ ಸತ್ಯ ಸಂಕಲ್ಪನು ಮತ್ತವರನು ಕಳುಹಿ ಸತ್ಯಸಂಧನ ದಶರಥನುದರದಿ ಪುಟ್ಟಿ ಮತ್ತೆ ವಿಶ್ವಾಮಿತ್ರ ಬರಲು ಅರ್ಥಿಯಲಿ ಯಾಗವನೆ ನಡೆಸಲು ಸುತ್ತಿ ಬರುವ ಸುರರನೆ ಸದೆದು ಮತ್ತೆ ಯಾಗ ನಿರ್ವಿಘ್ನ ಮಾಡಿದ 3 ಸೀತಾಸ್ವಯಂವರಕ್ಕಾಗಿ ಬರುತಿರಲಾಗವರು ಗೌತಮ ಸತಿಯ ಶಾಪಹರಿಸಿ ಪಾತಕಿ ತಾಟಕಿಯನು ಕೊಂದು ಹರುಷದಿ ನಿ- ರ್ಭೀತನಾಗಿ ಮಿಥಿಲಾಪುರಕೆ ಸೇರಲು ಬಂದು ಆತ ಲಕ್ಷ್ಮಣನೊಡನೆ ಶಿವಧನು ನೀತಿಯಿಂದೆತ್ತುತಲಿ ಸೀತೆಯು ಪ್ರೀತಿಯಲಿ ವನಮಾಲೆ ಹಾಕಲು ಆಕೆಯ ಕೈಪಿಡಿದ ರಾಮನೆ 4 ರಾಮಲಕ್ಷ್ಮಣ ಭರತ ಶತ್ರುಘ್ನರಿಗೆ ಲಗ್ನ ನೇಮದಿಂದಲಿ ಮಾಡಿ ಕಳುಹಲಾಗ ಸಾಮಜವರ ಅಯೋಧ್ಯಾಪುರದಿ ಭಕ್ತ- ಸ್ತೋಮವನೆರಹಿ ರಾಜ್ಯಾಭಿಷೇಕವ ನಡಸೆ ಆ ಮಹಾಮುನಿ ಸ್ತೋಮ ಸುರಗಣ ರಾಮನಿಗೆ ಪಟ್ಟವೆನುತ ಹರುಷಿಸೆ ಆ ಮಹಾಕೈಕೆ ವರವ ಬೇಡುತ ರಾಮನಿಗೆ ವನವಾಸವೆನಲು 5 ವನವನ ಚರಿಸುತ ಘನರಕ್ಕಸರ ಕೊಂದು ವನಜಾಕ್ಷಿ ಮಾಯಾಮೃಗವೆ ಬೇಡಲು ವನಮೃಗ ಬೆನ್ನಟ್ಟಿ ತರುವೆನೆನುತ ಪೋಗಿ ಬಣಗು ರಾವಣ ಸೀತಾಹರಣವ ಮಾಡಲು ಕುರುಹು ಕಾಣದೆ ಸೀತೆಯ ವನವನದಿ ಚರಿಸುವ ಸಮಯದಲಿ ಕಪಿ ವರರ ಸೈನ್ಯವ ಕಳುಹಿ ಮುದ್ರಿಕೆ ಇತ್ತು ಜನಕ ಜಾತೆಯ ನೋಡಿ ಬರಲು 6 ಕಡಲ ಕಟ್ಟುತ ಸೈನ್ಯ ನಡಿಸಿ ಯುದ್ಧವ ಮಾಡೆ ಬಿಡದೆ ರಾವಣ ಸಹಿತೆಲ್ಲರನು ಕೊಂದು ಕಡು ಭಕ್ತನಿಗೆ ಲಂಕಾಪುರದಲಿ ಪಟ್ಟವ ಕಟ್ಟಿ ಮಡದಿ ಸಹಿತ ಪುಷ್ಪಕವನೇರಿ ಬರುತಿರೆ ಸಡಗರದಿ ಹನುಮಂತ ಭರತಗೆ ಒಡೆಯ ಬರುತಿಹನೆಂದು ಪೇಳಲು ಕಡುಹರುಷದಿ ಅಯೋಧ್ಯೆಯನಾಳಿದ ಕಡಲೊಡೆಯ ಕಮಲನಾಭ ವಿಠ್ಠಲನೆ 7 ಬಂದ ಶ್ರೀರಾಮಚಂದ್ರ ಭಾಗವತರ ಕೂಡಿಇಂದಿರೆ ಜಾನಕಿ ಸೌಮಿತ್ರಿ ಸಹಿತದಿ
--------------
ನಿಡಗುರುಕಿ ಜೀವೂಬಾಯಿ
ರಾಮ ಜಾನಕೀರಮಣ ರಾಜೀವದಳನಯನ ಧಾಮ ನಿಧಿವಂಶ ಸೋಮನಿಗೆ ಪ ಪದುಮಶಾಲೆಯೊಳಗೆ ಪದುಮಗದ್ದುಗೆ ಹಾಕಿ ಪದುಮನಾಭನು ಬಂದು ಕುಳಿತನು ಪದುನುನಾಭನು ಬಂದು ಕುಳಿತನು ಎಡದಲ್ಲಿ ಪದುಮಾಕ್ಷಿ ಪದುಮ ಸಾಧನೆ ಲಕುಮಿ ಒಪ್ಪಿದಳು. 1 ವಾರುಣಿ ಗಿರಿಜೆ ಮೀನಕೇತನ ರಾಣಿ ಇಂದ್ರಾಣಿ ಮಿಕ್ಕಾನಲಿದಾಡುತಲಿ ಮೀನಕೇತನ ರಾಣಿ ಇಂದ್ರಾಣಿ ನಕ್ಕು ನಲಿದಾಡುತಲಿ ಆನಂದದಿ ಬಂದು ಕುಳಿತರು ತಮ್ಮ ಠಾಣೆಗೆ 2 ಚಿನ್ನದ ತಳಿಗೇಲಿ ಎಣ್ಣೆ ಅರಿಶಿಣ ಗಂಧ ಸಣ್ಣ ಕುಂಕುಮ ಜಾತಿ ಕಸ್ತೂರಿ ಪೊಂಗಳಸ ಸಣ್ಣ ಕುಂಕುಮ ಜಾತಿ ಕಸ್ತೂರಿ ಪೊಂಗಳಸ ಹೆಣ್ಣುಗಳ ಮಧ್ಯೆ ಇಳಿಸಿದರು3 ತಂದೆ ತಾತನ ಬಳಿಯ ಮಂದಾಕಿನಿ ವಾಗ್ವಿಯ- ರೊಂದಾಗಿ ಒಡಗೂಡಿ ರಂಗಯ್ಯನ ಕೈಗೆ ಒಂದಾಗಿ ಒಡಗೂಡಿ ರಂಗಯ್ಯನ ಕೈಯೊಳಗೆ ತಂದು ಅರಿಶಿಣ ಎಣ್ಣೆ ಗಂಧವಿತ್ತು4 ತಡಮಾಡಲಾಗದು ಕಡಲಶಯನ ನಿಮ್ಮ ಮಡದಿಯಂಗಕ್ಕೆ ತೊಡೆವುದೆನಲು ಮಡದಿಯಂಗಕ್ಕೆ ತೊಡೆವುದು ಎನಲಾಗಿ ಕಡು ಹರುಷದಿ ಸತಿಯಳ ನೋಡಿದನು 5 ಎನ್ನರಸಿ ಹೊನ್ನರಸಿ ಪ್ರಾಣದರಸಿ ಪಟ್ಟದರಸಿ | ಕನ್ಯೆ ಶಿರೋಮಣಿ ಪಾವನ ದೇಹಿ || ಕನ್ಯೆ ಶಿರೋಮಣಿ ಪಾವನ ದೇಹಳೆ ನಿನ್ನ | ಕನ್ನಡಿ ಮುಖವ ತೋರರಿಷಿಣವ ನಾ ಹಚ್ಚುವೆ 6 ತಂದೆ ನಂದನರಿಗೆ ಬಂಧು ಬಳಗ ಸುತ್ತ | ಹೊಂದಿದ ಜನರಿಗೆ ಹಲವರಿಗೆ || ಹೊಂದಿದ ಜನರಿಗೆ ಹಲವರಿಗೆ ಕದನ | ತಂದು ಹಾಕುವಳೆಂದು ಹಚ್ಚಿದನು 7 ತೂಗಿಸಿಕೊಂಬುವಳೆ ದೌತ್ಯಕ್ಕೆ ಸಲ್ಲುವಳೆ | ಬಾಗಿಲ ಕಾಯಿಸುವಳೆ ಬಲ್ಲಿದರ || ಬಾಗಿಲಕಾಯಿಸುವಳೆ ಬಲ್ಲಿದರನು ಬಿಡದೆ | ಸಾಗರನ ಮಗಳು ಎಂದು ತೊಡೆದನು 8 ಇಂದಿರಾದೇವಿ ಬಾ ಮಂದಿರಾಂಬುಜ ರಾಮ | ಸುಂದರ ಶ್ರೀವಾರಿ ಮಂಗಳಗಾತ್ರೆ || ಸುಂದರ ಶ್ರೀನಾರಿ ಮಂಗಳಗಾತ್ರೆ ಯೆಂದು | ಅಂಗಜ ಜನಕನು ನಗುತಲಿದ್ದ 9 ರಮಣಿಯ ದೇಹಕ್ಕೆ ಕಮಲನಾಭನು ಎದ್ದು | ವಿಮಲಕಸ್ತೂರಿ ಗಂಧವರಿಷಿಣ ಎಣ್ಣೆ || ವಿಮಲ ಕಸ್ತೂರಿ ಗಂಧವರಿಷಿಣ ಎಣ್ಣೆಯ | ಕ್ರಮದಿಂದ ಲೇಪಿಸಿ ಊಟಣಿಸಾರಿ 10 ಸಾಕಾರಗುಣವಂತಿ ತ್ರಿಲೋಕದ ಜನನಿ | ನಾಕಜವಂದಿತಳೆ ನಾಗಗಮನೆ || ನಾಕಜವಂದಿತಳೆ ನಾಗಗಮನೆ ಏಳೂ | ಶ್ರೀಕಾಂತನ ಸೇವೆಯ ಮಾಡೆಂದರು 11 ಅಂದ ಮಾತನು ಕೇಳಿ ಗಂಧ ಅರಷಿಣ ಕೊಂಡು | ನಿಂದು ಸಮ್ಮುಖದಲ್ಲಿ ರಂಗನ ನೋಡಿ | ನಿಂದು ಸಮ್ಮುಖದಲ್ಲಿ ರಂಗನ ನೋಡಿ ಹಿಗ್ಗಿ | ಚಂದ್ರವದನೆ ಪತಿಗೆ ಹಚ್ಚಿದಳು 12 ಗೋವಳರ ಎಂಜಲು ಆವಾಗ ತಿಂದವನೆ | ಮಾವನ್ನ ಕೊಂದವನೆ ಮಾಯಾಕಾರ || ಮಾವನ್ನ ಕೊಂದವನೆ ಮಾಯಾಕಾರನೆ ನಿನ್ನ | ಸೇವೆಗೆ ಶಕ್ತಳೆನುತ ಹಚ್ಚಿದಳು 13 ಬೆಣ್ಣೆ ಮೊಸರು ಕದ್ದು ಹೆಣ್ಣುಗಳ ಕೆಡಿಸಿ | ಮುನ್ನೆ ತೊತ್ತಿನ ಮಗನ ಮನಿಯ ಉಂಡ || ಮುನ್ನೆ ತೊತ್ತಿನ ಮಗನ ಮನಿಯಲುಂಡ ಹಿಂದೆ | ಹೆಣ್ಣಾಗಿ ಇದ್ದವನೆಂದು ಹಚ್ಚಿದಳು 14 ಎನ್ನರಸ ಚೆನ್ನರಸ ಪ್ರಾಣದರಸ ಪಟ್ಟಣದರಸ | ಭಿನ್ನವಖಿಳ ಜೀವಕ್ಕೆನ್ನ ಒಡೆಯ || ಭಿನ್ನವಖಿಳ ಜೀವಕ್ಕೆನ್ನ ಒಡೆಯ ಸಲಹಿಂದು | ಚೆನ್ನಾಗಿ ಅರಿಷಿಣ ಗಂಧ ಹಚ್ಚಿದಳು 15 ನಿತ್ಯ ಕಲ್ಯಾಣ ಪುರುಷೋತ್ತಮ ಸರ್ವೇಶ | ಸತ್ಯಸಂಕಲ್ಪ ಸಿದ್ಧ ಅಪ್ರಮೇಯಾ || ಸತ್ಯಸಂಕಲ್ಪ ಸಿದ್ಧ ಅಪ್ರಮೇಯನೆಂದು | ಮಿತ್ರೆ ಸರ್ವಾಂಗಕ್ಕೆ ಹಚ್ಚಿದಳು 16 ದೇವಿ ದೇವೇಶಗೆ ಈ ಉರುಟಣೆಯಿಲ್ಲ | ಆವಾವ ಬಗೆ ಎಲ್ಲ ತೋರಿಸುತ್ತ || ಆವಾವ ಬಗೆ ಎಲ್ಲ ತೋರಿ ವಧು-ವರಗಳಿಗೆ | ಹೂವು ಬಾಸಿಂಗವ ರಚಿಸಿದರು17 ಅಸುರ ವಿರೋಧಿ ವಸುದೇವನಂದನ | ಪಶುಪತಿ ರಕ್ಷಕ ಪರಮ ಪುರುಷ || ಪಶುಪತಿ ರಕ್ಷಕ ಪರಮ ಪುರುಷ ಎಂದು | ಹಸನಾಗಿ ಲೇಪಿಸಿ ಇತ್ತ ಜನರ 18 ಶೃಂಗಾರವಂತೇರು ರಂಗ ಶ್ರೀಲಕುಮಿಗೆ | ಮಂಗಳಾರತಿ ಎತ್ತಿ ಹರಸಿದರು || ಮಂಗಳಾರತಿ ಎತ್ತಿ ಹರಸಿ ದೇವರಮನೆಗೆ | ಅಂಗನೆಯಳ ಸಹಿತ ನಡೆಯೆಂದರಾಗ 17 ಎತ್ತಿಕೊಂಡನು ರಂಗ ಚಿತ್ತದ ವಲ್ಲಭೆಯ | ಮತ್ತೆ ಸುಗಂಧಿಯರು ಹೊಸ್ತಿಲೊಳಗೆ || ಮತ್ತೆ ಸುಗಂಧಿಯರು ಹೊಸ್ತಿಲೊಳಗೆ ನಿಂದು | ಪತ್ನಿಯ ಹೆಸರು ಪೇಳೆಂದರು ಆಗ 20 ಬೇಗ ಮಾರ್ಗವ ಸಾರಿ ತೂಗಲಾರನು ಇವಳ | ಸಾಗಿ ಪೋಗುವನೆಂದು ಪೇಳುತಿರಲು || ಸಾಗಿ ಪೋಗುವನೆಂದು ಪೇಳುತಿರಲು ಸ್ತ್ರೀ ಕೂಟ | ತೂಗವದೆಂತು ನಾಳೆ ನುಡಿಯೆಂದರು 21 ನಕ್ಕು ಸಂತೋಷದಲಿ ರುಕ್ಮಿಣಿ ಎಂದನು | ಅಕ್ಕಯ್ಯ ಪೇಳೆಂದು ಹೆಮ್ಮಕ್ಕಳೆಲ್ಲ || ಅಕ್ಕಯ್ಯ ಪೇಳೆಂದು ಹೆಮ್ಮಕ್ಕಳೆಲ್ಲ ಎನಲು | ಚಕ್ರಪಾಣಿ ಎಂದು ಪೇಳಿದಳು ಲಕುಮಿ 22 ಗಂಡ ಹೆಂಡತಿ ಪೋಗಿ ದಂಡ ಪ್ರಣಾಮಮಾಡಿ | ಮಂಡಲದ ಚರಿತೆ ತೋರಿದರು ಆಗ || ಮಂಡಲದ ಚರಿತೆ ತೋರಿ ವಧು-ವರಗಳಿಗೆ | ಕಂಡವರಿಗೆ ಮದುವೆಯೆನಿಸಿದರು 23 ದಂಪತಿಗಳು ಒಲಿದು ಇಂಪಾಗಿ ಉರುಟಣಿ | ಸೊಂಪಾಗಿ ಮಾಡಿದರು ಅನೇಕವಾಗಿ || ಸಂಪತ್ತು ಕೊಡುವನು ವಿಜಯವಿಠ್ಠಲರಾಯಾ 24
--------------
ವಿಜಯದಾಸ
ರಾಮಚಂದ್ರನೆ ನಿನ್ನ ನಾಮಮೃತವು ಎನ್ನ ನಾಲಿಗೆಯೊಳು ನಿಲಿಸು ಪ ದಾನವಾಂತಕ ನಿನ್ನ ಧ್ಯಾನ ಬಿಡದೆ ಇತ್ತು ದೀನ ರಕ್ಷಕ ಹರಿ ಜಾನಕಿ ರಮಣನೆ ಅ.ಪ ಕ್ಷೀರವಾರಿಧಿ ಶಯನ ಶ್ರೀ ಹರಿಯನು ಸ್ಮರಿಸುತ ಧ್ಯಾನವ ಮಾಡಿ ಭಕುತಿಲಿ ನಾರದ ಹರ ಬ್ರಹ್ಮಾದಿ ಋಷಿ ಗಂಧರ್ವರು ಸುರರೆಲ್ಲರು ಕೂಡಿ ಮಾರಮಣನ ಕೊಂಡಾಡುತ ಸ್ತೋತ್ರವ ಮಾಡಿ ಪಾರುಮಾಡು ಜಗದೀಶನೆ ಎನುತಲಿ ತವಕದಿ ಶ್ರೀ ಭೂರಮಣನು ದೀನರ ನುಡಿಗಳ ಕೇಳುತ ಆಲೋಚಿಸುತಲಿ ಬೇಗದಿ ಭೂನಾಥನ ಮನೆಯೊಳಗವತರಿಸುವೆ ಎನ್ನುತವರಿಗೆಲ್ಲಾಭಯವ ನೀಡಿದ 1 ದಶರಥನುದರದಿ ಜನಿಸಲು ನಾಲ್ವರು ಅಂದು ಯಾಗಕೆ ಕೌಶಿಕನಲ್ಲಿ ವಿದ್ಯೆಗಳನ್ನು ಕಲಿಯುತ ಬಂದು ಶಶಿಮುಖ ಜಾನಕಿ ಕರಪಿಡಿದನು ತಾನಂದು ಅಯೋದ್ಯದಿ ಎಸೆವ ಸಿಂಹಾಸನವೇರುವ ಸಮಯದಿ ಬಂದು ರಸಕಸಿ ಮಾಡಲು ಕೈಕೇಯಿಯು ತಾ ಶಶಿಮುಖ ಸೀತೆಯ ಒಡಗೂಡುತಲಿ ಬಿಸಿಲು ಗಾಳಿಮಳೆಯೊಳು ವನಚರಿಸುತ ಸತಿಯು ಬೇಡೆ ಮಾಯಮೃಗವ ಬೆನ್ನಟ್ಟಿದ 2 ಶಶಿಮುಖ ಸೀತೆಯ ದಶಶಿರನೊಯ್ಯಲು ಕೇಳಿ ದಶರಥಸುತ ಅರಸುತ ಬಲು ಶೋಕವ ತಾಳಿ ಚಿಂತಿಸಿ ಎಸೆವ ಗಿರಿ ಗುಹೆಗಳ ಹುಡುಕಲು ಮಾರುತಿ ನೋಡಿ ಮುದ್ರಿಕೆ ವಸುಧೆ ತನಯಳಿಗರ್ಪಿಸೆ ಆಕೆಯು ಮುದ ತಾಳಿ ಚೂಡಾಮಣಿ ಕೊಡಲು ಶ್ರೀ ರಘುವೀರನು ಸೇತುವೆ ಕಟ್ಟುತ ಕ್ರೂರ ಖಳರನು ಸಂಹರಿಸಿದ ಕಮಲ-ನಾಭ ವಿಠ್ಠಲ ಅಯೋದ್ಯದಿ ಮೆರೆಯುವ 3
--------------
ನಿಡಗುರುಕಿ ಜೀವೂಬಾಯಿ
ರಾಮಚಂದ್ರನೇ ಪರದೈವನೋ ನಮ್ಮ | ಶಾಮ ಸುಂದರ ಕೃಷ್ಣ ಪರದೈವನಯ್ಯ ಪ ರಾಮಭಕ್ತ ನಿದ್ದೆಡೆಗಾಗಿ ಯದುಕುಲ | ಸ್ವಾಮಿಯ ಶರಣನು ಬಂದ ಕೀರ್ತಿಸುತ | ಪ್ರೇಮದಲೀರ್ವರ ಭಕ್ತಿಯವಾದವು | ನೇಮದಿ ಬೆಳೆಯಿತು ಕೇಳಿ ಸಜ್ಜನರು1 ಚಿಕ್ಕ ತನದಿ ತಾಟಿಕೆಯನು ಕೊಂದು ಮುನಿಮುಖ | ಅಖರದಲಿ ಕಾಯದನಾರು ಹೇಳಯ್ಯ | ಠಕ್ಕಿಸಿ ಬಂದ ಪೂತನಿಅಸುಹೀರಿಜ | ನಕ್ಕಭಯ ನಿತ್ತ ಕೃಷ್ಣ ನೋಡಯ್ಯ2 ಚರಣ ಸೋಕಿಸಿ ಶಿಲೆ ಹೆಣ್ಣವ ಮಾಡುತ | ಹರಧನು ಮುರಿದವ ನಾರು ಹೇಳಯ್ಯಾ | ಮರಗಳಾದವರ ನುದ್ಧರಿಸುತ ಕಂಸಾ | ಸುರಧನು ಹಬ್ಬವ ಗೆದ್ದ ರಂಗೈಯ್ಯಾ3 ನೆರದಿಹ ದೇವ ದಾನವರೋಳುದ್ದಂಡದಿ | ಧರಣಿ ಜೆಯ ತಂದನಾರು ಹೇಳೈಯ್ಯಾ | ವರಚೈದೈ ಘೋಷರ ಭಂಗಿಸಿ ರುಕ್ಮಿಣಿ | ಕರವಿಡಿದೊಯ್ದಿದ ಕೃಷ್ಣ ನೋಡಯ್ಯಾ 4 ವನದೊಳು ಹಣ್ಣವ ನಿತ್ತಂ ಶಬರಿಗೆ | ಚಿನುಮಯ ಪದವಿತ್ತ ನಾರು ಹೇಳಯ್ಯಾ | ಅನುವರದಲಿ ದ್ರೌಪದಿಯ ಶಾಕದಳ | ವನೆ ಕೊಂಡು ಸುಖವಿತ್ತ ಕೃಷ್ಣ ನೋಡಯ್ಯಾ5 ಜಲ ನಿಧಿಯೊಳಗ ಸೇತುಗಟ್ಟಿಸಿ ವಾನರ | ದಳನಡಿಸಿದ ವೀರನಾರು ಹೇಳಯ್ಯಾ | ಗಳಿಗಿಯೊಳರಿಯದಂದದಿ ಮಧುರ ಜನ | ನೆಲೆಮಾಡಿ ನೀರೋಳಗಿಟ್ಟ ರಂಗೈಯ್ಯಾ6 - ಅಪೂರ್ಣ
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ರಾಮತಾರಕ ಮಂತ್ರ ಜಪಿಸಿ | ಸರ್ವಕಾಮಗಳ ಪಡೆದವನೆ ನಮಿಸಿ | ಬೇಡ್ವೆಕಾಮದುಷ್ಟಗಳ ಪರಿಹರಿಸಿ | ಹೃದ್‍ಧಾಮೆ ಹರಿ ತೋರೊ ಕರುಣಿಸೀ ಪ ಗಜ ಅಜಿನ ಧರಿಸಿ | ಮತ್ತೆಕರ್ಪರವ ಕೈಯಲ್ಲಿ ಇರಿಸಿ | ನೀನುಅಪವಿತ್ರ ಅಶಿವ ನೆಂದೆನಿಸೀ | ವರಮಸಫಲ ಶಿವ ಅಮಂಗಳವ ಹರಿಸೀ 1 ಪರಮ ಸದ್ಭಾಗವತ ಮೂರ್ತೇ | ಲಕ್ಷ್ಮೀನರಹರಿಯ ಆಣತಿಯ ಪೊತ್ತೇ | ವಿಷಯನಿರತರನು ಹರಿವಿಮುಖ ಶಕ್ತೆ | ಕಾಯೊಹರ ಸದಾಶಿವ ಭಾವ ಮೂರ್ತೇ 2 ತಪದಿಂದ ಹರಿಯೊಲಿಸೆ ನೀನು | ಹತ್ತುಕಲ್ಪ ಲವಣಾಂಭುದಿಯಲಿನ್ನು | ಗೈದೆತಪ ಉಗ್ರದಲಿ ಪೇಳ್ವುದೇನು | ನೀನು`ತಪ` ನೆಂದು ಕರೆಸಿದೆಯೊ ಇನ್ನು 3 ಶುಕಿಯಾಗಿ ಬಂದ ಅಪ್ಸರೆಯ | ಕೂಡ್ಡಅಕಳಂಕ ವ್ಯಾಸಾತ್ಮ ಧೊರೆಯ | ಮಗನುಶುಕನಾದೆ ಶಿವನೆ ಇದು ಖರೆಯ | ನುತಿಪೆಪ್ರಕಟ ಭಾಗವತಕ್ಕೆ ಧೊರೆಯ 4 ಮಾರುತನು ನಿನ್ನೊಳಗೆ ನೆಲಿಸಿ | ಗೋಪ್ಯದೂರೆಂಬ ನಾಮವನೆ ಧರಿಸಿ | ಇರಲುದೂರ್ವಾಸನೆಂಬ ಕರೆಸಿ | ಮೆರೆವಭೂ ಭೃತರ ಮಾನವನೆ ಕೆಡಿಸಿ 5 ಪತಿ ಸಂಗ ರಹಿತೆ | ಎನಿಸೆಭಾರತಿಯ ದೇಹದಲಿ ಜಾತೆ | ಇರಲುಪ್ರಾರಬ್ಧ ಭೋಗಿಸುವ ಮಾತೆ | ಎನಿಸಿವೀರ ಅಶ್ವತ್ಥಾಮ ಕೃಪೆ ಜಾತೆ 6 ಧಾಮ ಈಶಾನ್ಯದಲಿ ಇದ್ದು | ನಿನ್ನವಾಮದಲಿ ವಾಸುದೇವಿದ್ದು | ನೀನುವಾಮದೇವನ ಪೆಸರು ಪೊದ್ದು | ಧರಿಪೆಸ್ವಾಮಿ ಪೂಜಕನೆಂಬ ಮದ್ದು 7 ಕಾಲಾತ್ಮ ನಿನ್ನೊಳಗೆ ನೆಲಸಿ | ಪ್ರಳಯಕಾಲದಲಿ ಜಗವ ಸಂಹರಿಸಿ | ನಿನ್ನಕಾಲಾಖ್ಯ ನೆಂತೆಂದು ಕರೆಸಿ | ಮೆರೆವಲೀಲಾತ್ಮ ನರಹರಿಯು ಎನಿಸಿ 8 ಶಫರ ಹರಿದ್ವೇಷಿಗಳು ಎನಿಪ | ದೈತ್ಯತ್ರಿಪುರಸ್ಧರನು ಸಂಹರಿಪಾ | ಶಿವನೆವಪು ಧರಿಸಿ ಅಘೋರ ನೆನಿಪಾ | ಗೈದಅಪವರ್ಗದನ ಸೇ5ರೂಪ 9 ಹೃದ್ಯ ಹರಿಸೇವೆಂi5Àು ಗೈವಾ | ಮನದಿಬದ್ಧ ದ್ವೇಷಿಗಳೆಂದು ಕರೆವಾ | ದೈತ್ಯಕ್ರುದ್ಧರ ತಪಕೆ ಸದ್ಯ ವರವಾ | ಇತ್ತುಸಧ್ಯೋಜಾತನೆನಿಸಿ ಮೆರೆವ 10 ಹರಿಯಂಗ ಸೌಂದರ್ಯ ನೋಡಿ | ನೋಡಿಪರಮಾನಂದವನೆ ಗೂಡೀ | ಇಂಥಹರಿಪದ ದೊರಕೆ ಚಿಂತೆ ಗೂಡಿ | ಅತ್ತೆಹರುಷದಿ ಊರು ಸುತ ಪಾಡಿ 11 ಊರು ನಾಮಕ ರುದ್ರನಿಂದ | ಜಾತಕಾರಣ ಔರ್ವಭಿಧದಿಂದ | ಕರೆಸಿಉರ್ವರಿತ ರೋದನದಲಿಂದ | ಮೆರೆದೆಮಾರಾರಿ ಔರ್ವಭಿಧದಿಂದ 12 ವಿಷಯದಲಿ ಆಸಕ್ತರಾದ | ಮುಕ್ತಿವಿಷಯಕೆ ಬಹುಯೋಗ್ಯರಾದ | ಜನರವಿಷಯಾನುಕಂಪಿತನು ಆವ | ರುದ್ರಹಸನಾಗಿ ರೋದಿಸಿದಗಾಢ 13 ಕಮಲಾಕ್ಷಿ ದಕ್ಷಸುತೆ ತನ್ನ | ದೇಹವಿಮಲಯೋಗಾಗ್ನಿಯಲಿ ಭಗ್ನ | ಮಾಡಿಹಿಮದಾದ್ರಿ ಯೊಳಗೆ ಉತ್ಪನ್ನ | ವಾಗೆವಿಮಲ ಶಿವಗೊಂಡ ವ್ರತ ಕಠಿಣ 14 ಆದ್ಯಕಾಲದಲಿಂದ ಊಧ್ರ್ವ | ರೇತಬುದ್ಧಿಮಾಡುತ ತಪವು ಶುದ್ಧ | ಗೈದುಸಿದ್ಧನಾಗಿರುತಿರಲು ರುದ್ರ | ಕೇಳಿಊಧ್ರ್ವ ನೆಂಬಭಿಧಾನ ಪೊದ್ದ 15 ಕಾಮಹರ ತಪದಿಂದಲೆದ್ದು | ಬಹಳಪ್ರೇಮದಲಿ ಅದ್ರಿಸುತೆ ಮುದ್ದು | ಮಾಡಿಕಾಮಲಂಪಟನೆಂಬ ಸದ್ದು | ಗಳಿಸಿನಾಮ ಲಂಪಟ ನೆಂದು ಪೊದ್ದು 16 ಹರಪೊತ್ತ ಹನ್ನೆರಡು ನಾಮ | ದಿಂದಹರಿಮುಖ್ಯನಿಹನೆಂಬ ನೇಮ | ತಿಳಿದುಹರನ ಪೂಜಿಸೆ ಈವ ಕಾಮ | ನೆಂದುಗುರು ಗೋವಿಂದ ವಿಠ್ಠಲನ ನೇಮ17
--------------
ಗುರುಗೋವಿಂದವಿಠಲರು
ರಾಮನಾಮದಿ ಪಾಮರರಿಗೆ ಪ್ರೇಮ ಪುಟ್ಟುವುದೆ ಪ. ಭೃತ್ಯ ನ್ಯಾಯವರಿಯದ ಕಾಮಿಗಿದರೊಳು ನೇಮ ಬಪ್ಪುದೆ ಅ.ಪ. ದಾಶರಥಿ ಎನಿಸಿ ಜಗದೊಳು ಶ್ರೀಶನವತರಿಸೆ ಕೌಶಿಕನ ಮಖ ಘಾಸಿಗೈಯ್ಯುವ ದೋಷಿಗಳ ತಾ ನಾಶಗೈಸಿದ 1 ಶಿಲೆಯ ಪೆಣ್ಗೈದು ಲಲನೆ ಸೀತೆಯ ಒಲುಮೆಯಿಂ ವರಿಸಿ ಕುಲವನಳಿದನ ಛಲವ ಭಂಗಿಸಿ ಲಲನೆ ಸಹಿತದಿ ನೆಲಸೆ ಪುರದಲಿ 2 ಅನುಜ ಸ ಹಿತ ವನಕೆ ಬರೆ ಖ್ಯಾತಿ ರಾವಣನಾ ತಳೋದರಿ ಪ್ರೀತಿಸಲು ವಿಘಾತಿಗೈಸಿದ 3 ಮಾಯಾಮೃಗ ಕಂಡು ಪ್ರಿಯ ನೀಡೆನೆ ಸಾಯಕವನೆಸೆಯೆ ಕಾಯ ಬಿಡುತಿರೆ ಹೇಯ ರಾವಣ ಪ್ರಿಯಳನುಯ್ಯೆ ನೋಯ್ದ ಮನದಲಿ 4 ಬೆಟ್ಟವನೆ ಕಂಡು ಕುಟ್ಟಿ ವಾಲಿಯ ಪಟ್ಟ ಕಪಿಗಿತ್ತು ಶ್ರೇಷ್ಠ ಹನುಮಗೆ ಕೊಟ್ಟು ಉಂಗುರ ಪಟ್ಟದರಸಿಗೆ ಮುಟ್ಟಿಸೆಂದ 5 ಕೇಳಿ ಶ್ರೀ ವಾರ್ತೆ ತಾಳೀ ಹರುಷವ ಬೀಳು ಕೊಂಡಲ್ಲಿಂ ತಾಳೆ ಕೋಪವ ಕೇಳಿ ವನಧಿ ಸೀಳು ಆಗಲು ಶಿಲೆಯ ಬಿಗಿದ 6 ದುಷ್ಟ ರಾವಣನ ಕುಟ್ಟಿ ಶಿರವನು ಪಟ್ಟದರಸಿ ಕೂಡಿ ಶ್ರೇಷ್ಠ ಭರತಗೆ ಕೊಟ್ಟು ದಶರ್Àನ ಪಟ್ಟವಾಳಿದ ದಿಟ್ಟಯೋಧ್ಯೆದಿ 7 ರಾಮ ರಾಮನೆಂಬಾ ಹನುಮಗೆ ಪ್ರೇಮದಿಂದೊಲಿದು ಧಾಮ ಅಜಪದ ನೇಮಿಸಿ ಮುಂದೆ ಸೋಮನೆನಿಸಿದ ಭಾನು ವಂಶಕೆ8 ಬೆಟ್ಟದೊಡೆಯನ ಇಷ್ಟು ಮಹಿಮೆಯ ಮುಟ್ಟಿಮನ ಭಜಿಸಿ ದಿಟ್ಟ ಗೋಪಾಲಕೃಷ್ಣವಿಠ್ಠಲ ಶ್ರೇಷ್ಠನೆನ್ನುವ ಶ್ರೇಷ್ಠಗಲ್ಲದೆ 9
--------------
ಅಂಬಾಬಾಯಿ
ರಾಮಾ ನಿನ್ನಯ ದಿವ್ಯ ನಾಮಾ ನೆನೆವೆನು ರಾಮಾ ನಿನ್ನಯ ದಿವ್ಯ ನಾಮಾ ಪ್ರೇಮವ ಕೊಟ್ಟನ್ನಾ ನೇಮದೊಳಿರಿಸೊ ನೀ ಕರುಣದಿ ಪ ಚಿತ್ತ ಶುದ್ಧವ ಮಾಡಿ ಮತ್ತೆ ನಿನ್ನಯ ಪಾದ ನಿತ್ಯದಿ ನೆನೆವಂತೆ ಭಕ್ತಿಯೊಳಿರಿಸೊ ನೀ ಎನ್ನನು 1 ದಶರಥನುದರದಿ ಶಿಶುವಾಗಿ ಜನಿಸಿದೆ ಹೊಸ ಆಭರಣವಿಟ್ಟು ಕುಶಲಮಾತೆಯನು ನೋಡುವ 2 ಛಂದದಿಂದಲಿ ಆನಂದದೊಳಿಹ ರಾಮಾ ಚಂದ್ರನ ಮೊಗ ಅತಿ ಸುಂದರವಾಗಿರುವವನೇ 3 ಬಿಲ್ಲ ಬಾಣವಪಿಡಿದು ಎಲ್ಲಾ ದೈತ್ಯರ ಕೊಂದು ಅಲ್ಲೇ ಕೌಶಿಕಯಾಗ ಎಲ್ಲ ಸಲಹಿದೆ ಧೀರನೇ 4 ವಿಥುಳಾಪುರದಿ ಬಂದು ಅತುಳ ಧನುವ ಮುರಿದು ಸತಿ ಸೀತಾ ಸಹಗೂಡಿ ಪಿತನಾ ಪಟ್ಟಣವನು ಸೇರಿದೆ 5 ಮಾತೆಯ ವರ ಕೇಳಿ ನೀತಿಯಿಂದಲಿ ಅನು ಜಾತನ ಒಡಗೂಡಿ ಖ್ಯಾತಿಯಿಂದಲಿ ಪೋದಂತಹ 6 ಸರಯು ತೀರದಿ ಬಂದು ಪುರದ ಜನರ ಬಿಟ್ಟು ಭರದಿ ನಾವೆಯನೇರಿ ತ್ವರಿತದಿಂ ದಾಟಿ ನೀ ಪೋದೆ 7 ಭಕ್ತಿಯಿಂದಲಿ ಆ ಸಕ್ತ ಭರತನ ಕಂಡು ಯುಕ್ತಿಯಿಂದಲಿ ತೇಜೋಯುಕ್ತಪಾದುಕವನು ಕೊಟ್ಟೆನೀ 8 ಪುಸಿಯತಿಯಾಗಿ ಶೀತೆಯ ಅಸುರ ಕೊಂಡೊಯ್ದನೆಂದು ವ್ಯಸನದಿಂದಲಿ ಪೋಗಿ ಪಕ್ಷಿಯುದ್ಧರಿಸಿದೆ ಘಮ್ಮನೆ 9 ಶಾಂತಮೂರುತಿ ಹನುಮಂತರೆಲ್ಲರು ಕೂಡಿ ಅಂತರದಲಿ ಸೇತು ನಿಂತು ನೋಡುವೆ ನೀ ಛಂದದಿ 10 ಶರಣ ಬಂದ್ವಿಭೀಷಣನ ಕರುಣದಿಂದಲಿ ಕಾಯ್ದೆ ಸ್ಥಿರದಾಪಟ್ಟವಗಟ್ಟಿ ಹರುಷದೋಳ್ ನಿಲಿಸಿದೆ ಅವನನು 11 ವಾನರರೊಡಗೊಂಡು ಸೇನೆ ಸಹಿತಲೇ ದಶಾ ನನ ರಾವಣನಕೊಂದು ಮಾನಿನೀ ಸಹಿತನೀ ಬಂದಿಹೆ 12 ಪುಷ್ಪಕವನೆ ಏರಿ ಅಕಸ್ಮಾತದಲಿ ಬಂದು ಆಕ್ಷಣದಲಿ ಭರತ ರಕ್ಷಣ ಮಾಡಿದ ದೇವನೇ 13 ಪಟ್ಟಣದಲಿ ಮಾಹಾ ಪಟ್ಟವನೇರಿಸಿ ಶಿಷ್ಟ ಅಯೋಧ್ಯೆಯ ಪಟ್ಟಣವಾಳಿದೆ ರಾಮನೆ 14 ಬ್ರಹ್ಮಮೂರುತಿ ರಾಮಾಗಮನ ಚರಣದಿ ಸುಮ್ಮಾನದಲಿ ಶಾಂತಿ ತನ್ಮಯಗೊಳಿಸಾನಂದದಿ 15
--------------
ಶಾಂತಿಬಾಯಿ
ರಾಮಾನಂದ ವಿಠಲ | ಪ್ರೇಮದಲಿ ಪೊರೆಯೋ ಪ ಭಾಮಿನಿಯ ಮೊರೆ ಕೇಳಿ | ಪ್ರಾರ್ಥಿಸುವೆ ಹರಿಯೇ ಅ.ಪ. ಅನುವಂಶಿಕವಾಗಿ | ಗಾನಕಲೆಯುಳ್ಳವಳುಮೇಣು ಸಂಸ್ಕಾರಗಳು | ಹೊಂದಿಕೊಳ್ಳುತಲೀಈ ನಾರಿ ಯಂಕಿತವ | ಕಾಂಕ್ಷಿಸುತ್ತಿಹಳಯ್ಯಶ್ರೀನಿವಾಸನೆ ಇವಳ | ಬಿನ್ನಪವ ಸಲಿಸೋ 1 ಪತಿಸುತರು ಹಿತರಲ್ಲಿ | ವ್ಯಾಪ್ತ ನೀನೆಂಬ ಸ-ನ್ಮತಿಯನೇ ಕರುಣಿಸುತ | ಕಾಪಾಡೊ ಹರಿಯೆಗತಶೋಕ ಗತಿಪ್ರದನೆ | ಹತಮಾಡಿ ಗರ್ವಗಳಸ್ಮøತಿಗೆ ವಿಷಯನು ಆಗಿ | ಸತತ ಪೊರೆ ಇವಳಾ 2 ಮೋದ ಕೊಡು ದೇವಾ 3 ಭವವೆನಿಪ ಅಂಬುಧಿಗೆ | ಪ್ಲವವೆನಿಪ ತವನಾಮಸ್ತವನ ಸಂತತಗೈವ | ಹವಣೆಯಲಿ ವಜ್ರಾಕವಚವನೆ ತೊಡಿಸುತ್ತ | ಭವತಾರ ಕೆಂದಿನಿಸೋಧ್ರುವವರದ ಕರಿವರದ | ಕಾರುಣ್ಯಮೂರ್ತೇ 4 ಛಲದ ಮುನಿ ಅನುಸರಿಸಿ | ಶಿಲೆಯ ಸತಿಯಳ ಮಾಡಿಜಲಜಾಕ್ಷಿ ಜನಕಜೆಯ | ಕೈಯನೇ ಪಿಡಿದೂಇಳೆಯ ಭಾದಕ ಕಳೆದ | ಚೆಲುವಂಗದವ ಸೂರ್ಯಕುಲ ತಿಲಕನೇ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ರಾಮಾನುಜ ಮತೋದ್ಧಾರಕತಾಮಸಗುಣಪಾಶಗಿರಿವಜ್ರದಂಡ ಪ ವ್ಯಾಸರ ತೋಳೆಂದು ನಂದಿಯ ಧ್ವಜದಲ್ಲಿಹೇಸದೆ ಕಟ್ಟಿ ಪೂಜಿಪರು ನೋಡವ್ಯಾಸರದೊಂದು ತೋಳಿಗೆ ಶಿವಶರಣನಸಾಸಿರ ತೋಳ್ಗಳ ತರಿದ ನಮ್ಮಯ್ಯ 1 ಹರಿ ಎಂಬ ಶಬ್ದವ ಕೇಳಿ ಪಿಟ್ಟಕ್ಕನುಹರನ ಹೊಟ್ಟೆಯಲ್ಲಿ ಪುಟ್ಟುವೆನೆಂಬಳುಹರಹರ ಎಂಬ ಶೈವರ ಏಳ್ನೂರುಶಿರಗಳನರಿದನು ನಮ್ಮ ತಾತಯ್ಯ2 ಪಾದ ಮೇಲು ತಿಳಿದು ನೋಡಣ್ಣ 3 ಲಿಂಗವೆ ಘನವೆಂದು ಹೆಚ್ಚಿ ಕುಣಿದಾಡುವಸಂಗನ ಶರಣರೆಲ್ಲರು ಕೇಳಿರಿಲಿಂಗಪ್ರಸಾದವು ಮುಟ್ಟದಂತಾಯಿತು ನಮ್ಮರಂಗನ ಪ್ರಸಾದವು ಲೋಕಪಾವನವು 4 ಧರೆಯೊಳು ವಿರಕ್ತರು ವೀರ ಪವಾಡವಇರಿದು ಎಬ್ಬಿಸುವೆವೆಂದಾಡುವರುಹರಿಯ ನಾಮಾವಳಿಯ ಅನುಮಾನವಿಲ್ಲದೆಯೆಧರಿಸಿದಲ್ಲದೆ ದೊರೆಯದು ಗತಿಯಣ್ಣ 5 ಹರಬಂದು ಓಂಕಾರ ಗುರುವೆ ಎನ್ನುತ ಕೃಷ್ಣನರಮನೆಯ ಮುಂದೆ ಭಿಕ್ಷವ ಬೇಡಲುಹರಿಯುಂಡ ಮೇಲೆ ಪ್ರಸಾದವ ನೀಡಲುಹರ ಉಂಡು ಬ್ರಹ್ಮ ಹತ್ಯೆ ಕಳಕೊಂಡ 6 ಶಿವ ಮಹಾದೇವನು, ಧರೆಗೆ ಹರಿಯೆ ದೈವಭುವನಕ್ಕೆ ಹರಿಹರರೇಕಸ್ಥರುಭವರೋಗ ಹರ ಕಾಗಿನೆಲೆಯಾದಿಕೇಶವನವಿವರ ತಿಳಿದು ಭಜಿಸಿರೊ ಭಕ್ತ ಜನರು7
--------------
ಕನಕದಾಸ
ರಾಮಾನುಜಾಚಾರ್ಯ ಮೌನಿವರ್ಯ ನೇಮದಿಂದಲಿ ಗೈದೆ ನೀಂ ಸ್ವಾಮಿ ಕಾರ್ಯ ಪ ಆದಿಯೊಳು ನೀನಾದಿಶೇಷನು ಹರಿಶಯ್ಯೆ ಮೋದಕರ ಪ್ರಹ್ಲಾದ ಎಂದೆನಿಸಿದೆ ಸೋದರದಿ ಸೌಮಿತ್ರಿ ಸಂಕರ್ಷಣನು ಆದೆ ನಾಥ ಯಾಮಾನ ಪಥದಿ ಅರಿಗಳನು ಗೆಲ್ದೆ 1 ಗೀತ ಸೂತ್ರಕೆ ಭಾಷ್ಯಕಾರ ನೀನಾಗಿರುವೆ ಖ್ಯಾತಿಸಿದೆ ವ್ಯಾಸ ಪರಾಶರರ ಹೆಸರ ಪೂತ ಆಳುವಾರುಗಳ ಶ್ರೀಸೂಕ್ತಿ ಪ್ರಕಟಿಸಿದೆ ಮಾತೆವೊಲು ಉಭಯವೇದಗಳ ಪೊರೆದೆ 2 ನೂರೆಂಟು ತಿರುಪತಿಯ ಯಾತ್ರೆಗಳ ಮಾಡುತ್ತ ದಾರಿತೋರಿದೆ ಹರಿಯ ಸೇವಿಸುವ ಪರಿಯ ಪರಮಾರ್ಥಿಕರಾಗಿ ಪರಮವೈಷ್ಣವರಿರಲು ಸಾರಸುಖ ಪದತೋರ್ದೆ ಯತಿಸಾರ್ವಭೌಮ 3 ಎಂದೆಂದು ಮರೆಯದ ಕೂರೇಶರಾ ಸಖ್ಯ ಅಂದು ಬೋಧೆಯ ಕೊಟ್ಟ ಪೂರ್ಣಾರ್ಯರ ನೊಂದಕಾಲವ ನೆನೆದು ಕಣ್ಣೀರ ಕರೆಯುವೆನು ತಂದೆ ಗುರುವಿನ ಗುರುವೆ ದೇವಮಾನ್ಯ 4 ಯಾದವನ ಚೋಳನ ಕೃತ್ರಿಮದ ಕೋಟೆಗಳು ಮಾಧವನ ಡೆಲ್ಲಿಯಿಂ ಕರೆತಂದುದು ಬಾಧಿಸದೆ ಬ್ರಹ್ಮಪೀಡೆಗಳು ಓಡಿದುದು ಈ ಧರೆಯ ಕೀರ್ತಿಗೆ ಮೊದಲಾದವು 5 ರಾಮಚಂದ್ರನ ಕಾಡವಾಸವಂ ನೆನಪೀವ ಸ್ವಾಮಿಯರು ಗಿರಿಸೇರ್ದ ಗುರಿ ಎಲ್ಲವೂ ತಾಮಸರು ಸಾವಿರರ ಒಂದೆ ವಾರದಿ ಗೆಲ್ದ ಮಾಮೈಮೆ ಯಾರಿಗಿದೆ ಭೋಗಿರಾಜಾ 6 ಸಿರಿರಂಗ ತಿರುಪತಿ ಕಂಚಿ ಯದುಶೈಲಗಳ ಪರಮಪದಕೂ ಮಿಗಿಲು ವೈಭವವ ಗೈದೆ ನಿರುತ ತಮ್ಮವರಿಂಗೆ ಸಕಲ ಪಾಪವ ಸುಟ್ಟು ಹರಿಯ ಭರವಸೆ ಪಡೆದೆ ಮೋಕ್ಷ ಕೊಡುವಂತೆ 7 ನಿನ್ನಂತೆ ನಡೆವ ಪ್ರಪನ್ನರೇ ಧನ್ಯರು ಮನ್ನಣೆಯ ಪಡೆದಿರವ ಶ್ರೀಮಂತರು ಎನ್ನ ಬಿನ್ನಪ ಕೇಳಿ ನಿನ್ನವನ ಮಾಡಿಕೋ ಮೂರ್ತಿ ಜಾಜೀಶ ಕೀರ್ತಿ 8
--------------
ಶಾಮಶರ್ಮರು
ರಾಯ ಕಳುಹಿದ ರಂಗ ರಾಯ ಕಳುಹಿದ ಪ್ರಿಯಭಾವೆ ರುಕ್ಮಿಣಿಯರಪ್ರೇಮಭಾಳೆ ನಿಮ್ಮ ಮ್ಯಾಲೆ ಪ. ಕೇಳೋರಾಯ ನಿಮ್ಮ ಮ್ಯಾಲಿ ಬಹಳ ಪ್ರೇಮಕೃಷ್ಣರಾಯ ಹೇಳಲ್ಪಶವೆಮುಯ್ಯ ತಂದು ಏಳು ದ್ವಾರ ದಾಟಿ ಬಂದು1 ಚಂಚಲಾಕ್ಷಿ ಅರಸಿಯರು ನಿಮಗೆ ಪಂಚಪ್ರಾಣ ಕೃಷ್ಣರಾಯ ಕೆಂಚಿ ರುಕ್ಮಿಣಿಮುಯ್ಯ ತಂದುಮುಂಚಿ ಬಾಗಿಲಮನೆಯೊಳು ಇಳಿದರು 2 ಕುಂತಿದೇವಿಯರ ಅರಮನೆಗೆ ಚಿಂತಾಮಣಿಯ ತಾನೆ ಬಂದ ಎಂಥ ಸುಕೃತರಾಯ ನಿಮ್ಮಇಂಥ ಭಾಗ್ಯ ಎಲ್ಲಿ ಕಾಣೆ 3 ಸುದ್ದಿ ಕೇಳಿ ಧರ್ಮರಾಯ ಗದ್ಗದಿ ನುಡಿಯನೆ ನುಡಿದಾನಮುದ್ದು ಮುಖವ ನೋಡಿಪಾದಕೆ ಬಿದ್ದು ಧನ್ಯರಾದೆವಮ್ಮ 4 ಅಂದ ಮಾತು ಕೇಳಿರಾಯ ನಂದ ಬಟ್ಟು ನಂದ ಭಾಷ್ಪಬಿಂದು ಉದುರಿ ಬಿಗಿದು ಕಂಠಛಂದದಿ ರೋಮಗಳು ಉಬ್ಬಿ 5 ಇಂದು ಭದ್ರೆ ದ್ರೌಪತಿಗೆ ತಂದರಮ್ಮ ರುಕ್ಮಿಣಿ ಮುಯ್ಯಆನಂದದಿಂದ ಭಾವೆ ಕೃಷ್ಣಇಂದು ನಿಮ್ಮ ಅರಮನೆಗೆ 6 ಎಷ್ಟು ಸುಕೃತರಾಯ ನಿಮ್ಮ ಧಿಟ್ಟ ರಾಮೇಶತಾನೆ ಬಂದ ಅಷ್ಟ ಸೌಭಾಗ್ಯದ ಮುಯ್ಯ ಶ್ರೇಷ್ಠ ತೋರೋದಮ್ಮ ಸಭೆಯು 7
--------------
ಗಲಗಲಿಅವ್ವನವರು
ರುದ್ರಕುಮಾರನ ಚರಣಕ್ವಂದನೆ ಮಾಡಿ ವಿದ್ಯಾಭಿಮಾನಿ ವಾಣಿಯ ಸು - ಪದ್ಮ ಪಾದಗಳಿಗೆ ಎರಗಿ ನಾ ಪೇಳುವೆ ಶುದ್ಧವಾಗಿ ಕೊಡು ಮತಿಯ 1 ಶ್ರಾವಣಮಾಸ ಶುಕ್ಕುರುವಾರ ಶುಭಮೂರ್ತೆ (ಮುಹೂರ್ತೆ?) ಕಾಲದಿ ಕಮಲಾಕ್ಷಿಯನು ಆಲಯದೊಳಗಿಟ್ಟಾದರದಿಂದ ಪೂಜಿಸೆ ಬೇಡಿದಭೀಷ್ಟ ನೀಡುವಳು 2 ಇರುತಿರಲೊಂದು ಪಟ್ಟಣದಲ್ಲಿ ರಾಜನು ತನಯರಿಲ್ಲದ ಕಾರಣವು ವಿವಹದುತ್ಸವಕೆಂದು ತೆರಳೋ ಪತಿಯ ಕಂಡು ತೆಗೆದಿಟ್ಟಳಾತನಾಯುಧವ 3 ಪಟ್ಟದ ಕತ್ತಿಯ ಬಿಟ್ಟು ಬಂದೆನೆಂದು ಅಟ್ಟಿಹ ತನ್ನ ದೂತರನು ನೆಟ್ಟನೆರಡು ಕಾಲು ಚಾಚಿ ಕುಳ್ಳಿರಲಾಗ ತಟ್ಟನೆ ದಾಟಿ ನಡೆದನು 4 ಮೂರು ತಿಂಗಳು ಗರ್ಭಸಾಕ್ಯಾ (ವಾಸಕ್ಕಾ?)ಗಿ ಬಂದಿತು ನೀನೀಗ ದಾಟಿ ಪೋಗುವರೆ ಕೇಳಿ ಸಂಭ್ರಮದಿಂದ ಹೇಳೆ ರಾಜಗೆ ಬಂದು ತಾಳಿದ ಪರಮ ಹರುಷವನು 5 ಸದ್ದು ಮಾಡದೆ ಸೂಲಗಿತ್ತಿ ಕರೆಸಿ ತಾ- ನಿದ್ದ ವಾರ್ತೆಗಳ ಹೇಳಿದಳು ಮುತ್ತಿಲು ತುಂಬ್ಹೊನ್ನು ಕೊಡುವೆ 6 ಹುಡುಕುತ ಬಂದಳು ಕಡೆಯ ಬಜಾರಕ್ಕೆ ಬಡವ ಬ್ರಾಹ್ಮಣನ ಮಂದಿರದಿ ಮಡದಿಗೆ ಮೂರು ತಿಂಗಳು ಗರ್ಭವಾಗಿದೆ ಕÀಡೆಹಾಯ್ಸಲೆನ್ನ ಕರೆಸೆಂದ್ಲು 7 ಮೂರು ತಿಂಗಳ ರಾಜನರಸಿಗೆ ಮೊಗ್ಗೆಯು ಏಳು ತಿಂಗಳು ಹೂವ ಮುಡಿಸಿ ಎಂಟು ತಿಂಗಳಿಗೆ ಶ್ರೀಮಂತದುತ್ಸವ ಮಾಡಿ ಬಂತಾಗ ನವಮಾಸಗಳು 8 ವಿಪ್ರನ ಮಡದಿಗೆ ಒತ್ತಿ ಬಂದವು ಬ್ಯಾನೆ ಕಟ್ಟಿ ಕಣ್ಣುಗಳ ನಿಚ್ಚಣಿಕೆ ಹತ್ತಿ ಇಳಿದು ಹಡೆದಳ ಗಂಡುಕುಮಾರನ ಎತ್ತಿಕೊಂಡೊಯ್ದಳಾಕ್ಷಣವೆ 9 ಕಲ್ಲು ಗುಂಡನೆ ಹಡೆದಿಯೆ ನೀನೆಂಬಂಥ ಸೊಲ್ಲು ಕೇಳುತಲೆ ತಲ್ಲಣಿಸಿ ಎಲ್ಲಿದ್ದರೆನ್ನ ಕುಮಾರನು ಸುಖಬಾಳಲೆಂ- ದಲ್ಲಿ ನೇಮವ ನಡೆಸಿದಳು 10 ಜಾತಕ ಬರೆಸಿ ಸಕ್ಕರೆ ಸಗಟದಿಂದ್ಹಂಚಿ ದಕ್ಷಿಣೆ ತಾಂಬೂಲ ಸಹಿತ ಬ್ರಾಂಬರಿಗೆಲ್ಲ ಇಟ್ಟು ಭೋಜನವ ಮಾಡಿಸಿದ 11 ನಾಮಕರಣ ಜಾವಳ ಜುಟ್ಟು ಉಪÀನಯನ ಪ್ರೇಮದಿಂದ್ವಿದ್ಯವ ಕಲಿಸಿ ಸೋಮನಂದದಿ ಹೊರಗ್ಹೊರಟು ತ- ಮ್ಮಮ್ಮನ ನೋಡಿ ಮೋಹಿಸಿದÀನಾಕ್ಷಣದಿ 12 ಕತ್ತಲೊಳಗೆ ಬರುತಿರಲು ಬಾಗಿಲ ಮುಂದೆ ಕಟ್ಟಿದ ಗೋವು ಕಾಣದಲೆ ವತ್ಸದ ಕಾಲು ತುಳಿಯಲಾಗ ಅದು ಬಾಯಿ ಬಿಟ್ಟೊದರಿತು ಭಯದಿಂದ 13 ಅಮ್ಮ ನೀ ಬಾರೆ ತಮ್ಮಮ್ಮನರಿಯದವ ನಮ್ಮನು ಬಲ್ಲನೆ ಒಮ್ಮ್ಯಲ್ಲದೆರಡುಬಾರ್ಯಾಲಿಸ್ಯದರ ಮಾತು ತಮ್ಮಿ ್ಹರಿಯರನು ಕೇಳಿದನು 14 ಮಂದಾಕಿನಿಯ ಸ್ನಾನವ ಮಾಡಿ ಬಂದರೆ ಸಂದೇಹ ಪರಿಹಾರವಾಗುವುದು ಹಾ- ಗೆಂದು ಹೇಳಿದ ಹಿರಿಯರ ವಾಕ್ಯವ ಕೇಳಿ ಗಂಗಾಯಾತ್ರೆಗೆ ತೆರಳಿದನು 15 ನಡೆದು ಬಂದನು ನಡುಮಾರ್ಗದಿ ಪಟ್ಟಣ ಹಡೆದ ಮನೆಯ ಬಾಗಿಲಲ್ಲಿ ಕೊಡಬೇಕು ನಮಗಿಷ್ಟು ಸ್ಥಳಗಳೆಂದೆನುತಲಿ ನುಡಿದು ಪವಡಿಸಿದ ತಾನಲ್ಲಿ 16 ಹೊರಗಿಂದ ಶೆಟವಿ ಬಂದಳು ಮಹಾಲಕ್ಷುಮಿ ಒಳಗಿಂದ ಬಂದಳು ಎನ್ನ ವರಪುತ್ರ ಇವನ ದಾಟಲು ನಿನ್ನ ಶಿರವು ಸಿಡಿದು ಸಾ(ಸಹ?)ಸ್ರೊ ್ಹೀಳಾಗೋದೆನಲು17 ಅದು ಕೇಳಿ ಶೆಟವಿ ತಾ ತಿರುಗಿ ಪೋಗುತಲಿರೆ ಬದಿಯಲ್ಲಿ ಬದುಕಿದ್ದ ಶಿಶುವು ಇದು ನಿನ್ನ ಪುಣ್ಯದಿಂದುಳಿದಿತೆಂದೆನುತಿರೆ ಅಧಿಕ ಸಂತೋಷವಾಗಿ ಹೊರಟು 18 ಭಾಗೀರಥಿಯ ಸ್ನಾನವಮಾಡಿ ತಾನು ಪ್ರ- ಯಾಗಕೆ ನಡೆತರಲು ಬ್ಯಾಗ ಮಾಡಿದ ದಾನಧರ್ಮಕಾರ್ಯಗಳ ತಾ- ನಾಗ ಕಂಡನು ಚತುರ್ಹಸ್ತ 19 ನಾಲ್ಕು ಹಸ್ತಗಳ ಕಂಡಕಾರಣೇನೆಂದು ವ್ಯಾ- ಕುಲದಿಂದ ಕೇಳಿದನು ಸಾಕಿದವರು ಹಡೆದವರುಂಟು ನಿನಗೆಂದ್ವಿ- ವೇಕಬುದ್ಧಿ ಅವರು ಹೇಳಿದರು 20 ಗೊತ್ತಿಲೆ ಬಂದನು ಪಟ್ಟಣದೊಳಗೊಂಡು ಹೆತ್ತರಂದಿನದ (?) ಮಂದಿರದಿ ಹೊಸ್ತಿಲೊಳಗೆ ಅಡ್ಡಮಲಗಿದ್ದ ಕಾಲಕ್ಕೆ ಮತ್ತಾಗ ಬಂದಳು ಶೆಟವಿ 21 ಚೊಚ್ಚಿಲ ಮಗನ ದಾಟಲು ನಿನ್ನ ಶಿರವು ಬಿಚ್ಚಿ ಸಾಸ್ರೊ ್ಹೀಳಾಗೋದೆನಲು ಲಕ್ಷ್ಮಿ ಮಾತಿಗೆ ತಿರುಗಿದಳೆನ್ನ ತುತ್ತಿಗೆ ಮಿತ್ರ್ಯಾದ ಪಾಪಿ ಎಂದೆನುತ 22 ಸತ್ಯವಂತನೆ ನಿನ್ನ ಪುಣ್ಯದಿಂದಿಬ್ಬರು ಪುತ್ರರು ಉಳುದÀರಂತಿಹರು
--------------
ಹರಪನಹಳ್ಳಿಭೀಮವ್ವ
ರುದ್ರದೇವರು ಶಿವನೆ ನಾ ನಿನ್ನ ಕರೆಯುವೆ ಬಾರೊ ಪ ಗಿರಿಜಾಮನೋಹರನೆ ಶಂಕರನೆ ಅ.ಪ. ನೀಲ ಹರಳಿನಂತ್ಹೊಳೆವುದು 1 ಬಾಲಮುನಿಯು ತನ್ನ ಕೇಳಿ ಮೃತಿಯನುನೀಲ ಲೋಹಿತಾ ನಿನ್ನ ಸೇವೆಯ ಮಾಡಿದನುಕಾಲನ ಜೈಸುತ ಬಹಳ ಆಯುಷ್ಯವಿತ್ತವ್ಯಾಳಚಲಾಂತಕ ಶ್ರೀಶೈಲದಿ ನಿಂತೆ 2 ಮಂದರುಗ್ಮಿಯು ತಪದಿಂದ ಒಲಿಸಲುಬಂದು ಶಾಪವ ನೀಡಿ ತಂದಿ ಕ್ಷಿತಿಯೊಳುಇಂದಿರೇಶನ ದ್ವೇಷ ಎಂದು ಮಾಡುವಿ ಶಾಪಅಂದೇ ಬರುವದು ಮಂದಿರಕೋ ಇತಿ 3
--------------
ಇಂದಿರೇಶರು