ಒಟ್ಟು 2688 ಕಡೆಗಳಲ್ಲಿ , 114 ದಾಸರು , 2023 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತೋರಿಸೊ ತವರೂಪ ತೋಯಜ ನೇತ್ರ ಪ ಮಾರಜನಕ ಕರುಣಾರಸಪೂರ್ಣನೆ ನಾರಾಯಣ ಭವತಾರಕ ಮಮ ಸ್ವಾಮಿ ಅ.ಪ. ದಶರಥ ನಂದನ ವಸುಮತಿ ರಮಣ ತ್ರಿ ದಶವಂದಿತ ಚರಣ ಪಶುಪತಿಧನುಭೇದನ ವಸುಧಾಸುತೆರಮಣ ಋಷಿಪತ್ನಿ ಶಾಪಹರಣ ಅಸಮಾ ವಲ್ಕಲ ಚೀರವಸನಾ ಭೂಷಣಸ್ವಾಮಿ ಬಿಸಜಾಪ್ತನ ಸುತಗೊಲಿದವನಗ್ರಜ ನಸುವನು ತೊಲಗಿಸಿ ಅಸುನಾಥನ ಸುತ ಗೊಸೆದು ಬಿಸಜಭವ ಪದವಿಯ ಕರುಣಿಸಿ ವಿಷಧಿಯ ಬಂಧಿಸಿದಸಮ ಸಮರ್ಥ 1 ದಿನಮಣಿವಂಶ ಮಸ್ತಕಮಣಿಯೆಂದೆನಿಸಿ ಮುನಿ ಕೌಶಿಕನ ಯಜ್ಞಫಲವಾಗಿ ರಕ್ಷಿಸಿ ಅನಲಾಕ್ಷಧನು ಮುರಿದು ಮುನಿಪತ್ನಿಯನು ಪೊರೆದು ಜನಕಸುತೆಯ ಕರವನು ಪಿಡಿದ ಧೀರ ಜನಕನಾಜ್ಞೆಯಿಂ ವನವ ಪ್ರವೇಶಿಸಿ ಇನಸುತಗೊಲಿಯುತ ಅನಿಲಜನಿಂದಲಿ ಘನಸೇವೆಯ ಕೊಂಡನಿಮಿಷ ವೈರಿಯ ಹನನಗೈದ ಹೇ ಅನುಪಮ ಶೂರ2 ಲೀಲಾಮಾನುಷರೂಪ ಭೂಲಲನಾಧಿಪ ಫಾಲಾಕ್ಷವಿನುತ ವಿಶಾಲಸುಕೀರ್ತಿಯು ತಾ ಆಲಸ್ಯವಿಲ್ಲದೆ ವಿಶಾಲವನವ ಪೊಕ್ಕು ವಾಲಿಯ ಸಂಹರಿಸಿ ಪಾಲಿಸಿ ಸುಗ್ರೀವನ ಲೋಲಲೋಚನೆಯಿಹ ಮೂಲವ ತಿಳಿದು ಬಂ ದ್ಹೇಳಿದ ಪವನಜಗಾಲಿಂಗನವಿತ್ತು ಖೂಳ ದಶಾಸ್ಯನ ಕಾಲನೆಂದೆನಿಸಿದ ಶ್ರೀಲೋಲನೆ ಶ್ರೀ ಕರಿಗಿರೀಶನೆ3
--------------
ವರಾವಾಣಿರಾಮರಾಯದಾಸರು
ತೋರು ನಿಮ್ಮ ಪಾದಕುಸುಮ ಮಾರನಯ್ಯಾಪಾರಮಹಿಮ ಪ ಧರೆಯ ಭೋಗದಾಸೆ ತೊರೆಸಿ ನಿರುತವಾದ ಮಾರ್ಗ ಹಿಡಿಸಿ ಕರುಣಿಸು ಎನ್ಹøದಯಕಮಲಕೆ ಕರೆ ತತ್ತ್ವಜ್ಞಾನ ಅಮೃತ1 ಕವಿದುಕೊಂಡಜ್ಞಾನಕತ್ತಲು ಜವದಿಹಾರಿಸಿ ಎನ್ನಯ ಭವದ ಬಂಧನ ದೂರಮಾಡಿ ಜವನಭಯನಿರ್ಬೈಲು ಎನಿಸು 2 ಮಯಾಮೋಹದೊಳಗೆ ಮುಳುಗಿ ಪೋಯಿತೆನ್ನಯ ಅರ್ಧವಯವು ಕಾಯಜಪಿತ ಸ್ವಾಮಿ ಶ್ರೀರಾಮ ನೋಯಿಸದೆ ನಿಜಪಥಕೆ ಹಚ್ಚೆನ್ನ 3
--------------
ರಾಮದಾಸರು
ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ಗುರುನಾಥ ತ್ರಾಹಿ ತಾರಕಬ್ರಹ್ಮ ಸಾಯೋಜ್ಯತ ತ್ರಾಹಿ ಅನಾಥ ಬಂಧು ಸಾಕ್ಷಾತ ತ್ರಾಹಿ ದೀನಾನಾಥ ತ್ರಾಹಿ ತ್ರಾಹಿ 1 ಮಾಡಲರಿಯೆ ನಾನಿಮ್ಮ ನಿಜಸ್ತುತಿ ಹಿಡಿಯಲರಿಯೆ ದೃಢ ಸದ್ಭಕ್ತಿ ಪೊಡವಿಯೊಳು ನಾ ಮೂಢಮಂದಮತಿ ಕೂಡಿಕೊಂಬೊ ದಯಮಾಡೋ ಶ್ರೀಪತಿ 2 ಮೊದಲಿಗಾಡುವ ಬಾಲಕವೃತ್ತಿ ತೊದಲುನುಡಿ ತಾಯಿಗತಿ ಪ್ರೀತಿ ಇದೆ ಪರಿಯಲೊಪ್ಪಿಸಿಕೊಂಬ ಸ್ತುತಿ ಮೇದಿನಿಯೊಳು ನಿಮ್ಮ ಖ್ಯಾತಿ 3 ಆಡಿಸಿದಂತೆ ಆಡುವೆ ನಾ ನುಡಿ ನಡೆಸಿಕೊಂಬುದು ಸನ್ಮತ ಮಾಡಿ ಕೊಡುವಂತೆ ಮಾನ್ಯ ಸಂತರೊಡಗುಡಿ ಮಾಡೊ ದಯ ನಿಮ್ಮಭಯನೀಡಿ 4 ತ್ರಾಹಿ ತ್ರಾಹಿಯೆಂಬೆ ತನು ಮನರ್ಪಿಸಿ ತ್ರಾಹಿಯೆಂಬೆ ಶಿರಸಾಷ್ಟಾಂಗ ನಮಿಸಿ ಕಾಯೊ ಮಹಿಪತಿಯ ಕರುಣಿಸಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತ್ರಿಮೂರ್ತಿಗಳ ಲಾಲಿ ಜೋಜೋ ಬಾಲಕೃಷ್ಣ ಜೋಗುಳವ ಹಾಡುತ್ತ ತೂಗುವೆ ನಾ ಪ. ನವರತ್ನ ಖಚಿತದ ತೊಟ್ಟಿಲ ಕಟ್ಟಿ ನಾಗಸಂಪಿಗೆ ಜಾಜಿ ಮಾಲೆಯನ್ಹಾಕಿ ನಾಲ್ಕುವೇದದ ಸರಪಣಿ ಬಿಗಿದು ನಾಗಶಯನನ ಮಲಗಿಸಿ ಬೇಗ ರಾಗದಿ ಅನುಸೂಯ ಪಾಡಿ ತೂಗಿದಳು ಜೋ 1 ಮುತ್ತು ಮಾಣಿಕ್ಯದ ತೊಟ್ಟಿಲ ಕಟ್ಟಿ ಮುತ್ತು ಪವಳದ ಸರಪಣಿ ಬಿಗಿದು ಮುದದಿ ಮಲ್ಲಿಗೆ ಜಾಜಿ ಪುಷ್ಪವ ಕಟ್ಟಿ ಮುಕ್ತ ಬ್ರಹ್ಮನ ಮಲಗಿಸಿ ಬೇಗ ಅರ್ತಿಲಿ ಅನಸೂಯ ತೂಗಿದಳಾಗ 2 ನೀಲ ಮಾಣಿಕ್ಯದ್ವಜ್ರತೊಟ್ಟಿಲ ಕಟ್ಟಿ ಮೇಲೆ ಕೆಂಪಿನ ಸರಪಳಿ ಬಿಗಿದು ಮಾಲತಿ ಮಲ್ಲಿಗೆ ಮಾಲೆಯ ಕಟ್ಟಿ ನೀಲಕಂಠನ ಮಲಗಿಸಿ ಬೇಗ ಬಾಲನ ಅನಸೂಯ ತೂಗಿದಳಾಗ 3 ಈ ಪರಿಯಿಂದಲಿ ತೂಗುತಿರೆ ತಾಪಸ ಅತ್ರಿಋಷಿಯಾಗ ಬರೆ ಭೂಪರ ತೊಟ್ಟಿಲು ಕಾಣ ಬರೆ ಪರಿ ಶಿಶುಗಳು ಯಾರೆನ್ನುತಾ ಶ್ಚರ್ಯದಲಿ ಸತಿಯ ಕೇಳುತಾ 4 ನಮ್ಮ ಪುಣ್ಯದ ಫಲ ವದಗಿತೆಂದು ಮುನ್ನ ತ್ರಿಮೂರ್ತಿಗಳು ಶಿಶುರೂಪದಿ ಬಂದು ತನ್ನ ಪತಿಯ ಕೂಡ ಅರುಹುತಲೆ ಚಿನ್ನರ ತೂಗುತ್ತ ಹರುಷದಿ ಚೆನ್ನ ಶ್ರೀ ಶ್ರೀನಿವಾಸನ್ನ ತೂಗಿದಳು 5
--------------
ಸರಸ್ವತಿ ಬಾಯಿ
ಥಳ ಗುಟ್ಟೊಳುತೊಬ್ಬಳೆವಾಗೆದ ತಾ ವಳಗುಟ್ಟಲೆ ದಟ್ಟದ ಬೆಳಗು ತಾಂ ತಿಳಿಗೊಟ್ಟರೆ ಸದ್ಗುರು ಭಾಸುದು ತಾ ಕಳೆಮುಟ್ಟಿದು ನೋಡಲು ಶಾಶ್ವತ 1 ಅರಿಯೊ ಸುರಿಯೊ ಪರಮಾಮೃತ ಬೆರಿಯೊ ಗುರುವೆಂದು ನೀ ಸುಗುರುತಾ ಜರಿಯೊ ಮರಿಯೊ ಮದಗರ್ವನೆ ತಾ ನೆರಿಯೊ ಗುರುಪಾದಕೆ ನೀ ತ್ವರಿತ 2 ತಿಳಿ ಸರ್ಕನೆ ನಿನ್ನೊಳು ಬ್ಯಾಗ ತಾ ಅಳಿ ತರ್ಕದ ಮಾತಿನ ಗರ್ವನೆ ತಾ ತೊಳಿ ನರ್ಕಕೆ ಬೀಳುವ ತಾಮಸ ತಾ ಸುಳಿ ಗರ್ಕನೆ ಸದ್ಗುರು ಪಾದÀದಿ ತಾ 3 ಬಿಡು ಮರ್ಕಟ ಬುದ್ಧಿಯ ಭಾವನೆ ತಾ ಕೂಡು ಸರ್ಕನೆ ಸುಮ್ಮನೆ ಗುರುವಿಗೆ ತಾ ಸುಡು ನರ್ಕಕೆ ಬೀಳುವ ಪಾಶÀವ ತಾ ತೊಡು ಮರ್ಕಟವಾದ ಸದ್ಗುಣ ತಾ 4 ಹಿಡಿಯೊ ಪಡಿಯೊ ದೃಢಭಾವನೆ ತಾ ಜಡಿಯೊ ಒಡನೆ ಗುರುಪಾದನಿ ತಾ ಕಡಿಯೊ ಬಿಡದೆ ಭವಬಂಧನ ತಾ ಅಮೃತ 5 ನಡಿಯೊ ನುಡಿದಂತೆನೆ ಸನ್ನಮತ ಹಿಡಿಯೊ ಪಡೆದಂತೆನೆ ಪಾದವ ತಾ ಇಡದಂತೆನೆ ತುಂಬೆದ ಸದ್ಘನ ತಾ ಕಡೆಗಾಂಬುದು ನೋಡಿದು ಶಾಶ್ವತಾ 6 ತಿಳಿಯೊ ಬಳಿಯೊ ಒಳಗುಟ್ಟನೆ ತಾ ಹೊಳಿಯೊ ಸುಳಿಯೊ ನೆಲಿಗೊಂಡಿದು ತಾ ಕಳಿಯೊ ಅಳಿಯೊ ಅನುಮಾನವ ತಾ ಕಳೆಕಾಂತಿಯ ನಿನ್ನೊಳು ತುಂಬ್ಯದ ತಾ 7 ಒಳಗುಟ್ಟನೆ ಸಾಧಿಸಿ ನೋಡುವು ದೆಲ್ಲಾ ಥಳಗುಟ್ಟುದು ಸಾಸಿರ ಪದ್ಮ ದಳ ನೆಲೆಗೊಂಡರೆ ವಾಗುವ ತಾ ಸಫಲಾ ತಿಳಕೊಂಬುದು ಸದ್ಗುರು ಸ್ವಾಮಿ ಬಲ 8 ಬಿಡಬಾರದು ಸಂಗತಿ ಸಜ್ಜನರ ಹಿಡಿಬೇಕಿದು ಒಂದೇ ನೋಡಿ ಸ್ಥರ ಅಡಿ ಇಟ್ಟನೆ ಬಾಹುದು ಪುಣ್ಣಿದರಾ ಪಡಕೊಂಡರೆ ಅಹುದು ಇಹಪರ 9 ತಡಮಾಡದೆ ನೋಡುವುದೀ ಸುಪಥ ಪಡಿಬೇಕಿದು ಒಂದೇ ಸುಸ್ವಹಿತ ಒಡಗೂಡದೆ ಬಾರದು ಕೈಗೂಡಿ ತಾ ಎಡಬಲಕೆ ತುಂಬಿದೆ ತುಳುಕುತ 10 ಜಾಗರ ತಾ ಎಡಿಎಡಿಗೆ ಸಂದಿಸಿ ತುಂಬಿದೆ ತಾ ಬಡಿಸಿಟ್ಟೆದ ಭಾಗ್ಯದ ನಿಧಿಯು ತಾ ಪಡಕೊಳ್ಳೆಲೊ ಮಹಿಪತಿ ಪೂರ್ಣಹಿತ11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಥಳಕು ಥಳಕು ಹೊಳೆವೋತನ್ನ ಬೆಳಕು ತುಂಬಿಭವನದೊಳು ಝಳಕು ಝಳಕು ಬಂದ ನಮ್ಮಜಾಣರಂಗನ ನೋಡುವ ಬಾರೆ ಅಂಗನೆ ಪ. ನೀಲ ಮಾಣಿಕ ರತ್ನದಿವ್ಯನಿಲವುಗನ್ನಡಿ ಹೊಳೆವ ಮಹಲಗಳ ಇಳಿದು ಬಂದ1 ಕೋಟಿ ಕೋಟಿ ಸೂರ್ಯರಂತೆ ಧಾಟತೋರೋ ಅಂಗಳದಿ ದಾಟಿ ದಾಟಿ ಇಳಿದು ಬಂದ 2 ನೂರು ಸೂರ್ಯರ ಬೆಳಕುತೋರುವಂತೆ ದ್ವಾರಗಳನು ವಾರಿಜಾಕ್ಷ ಇಳಿದು ಬಂದ 3 ಮುತ್ತಿನ ತ್ವಾರಣನವರತ್ನ ಹಂದರ ದಾಟಿಚಿತ್ರ ಚಾವಡಿ ಇಳಿದು ಬಂದ 4 ವಜ್ರ ಮಾಣಿಕವು ಬಹಳ ಸಜ್ಜ ತೊರೋ ಅಂಗಳದಿ ನಿರ್ಜರೋತ್ತಮನು ಬಂದ 5 ಪಚ್ಚದ ಪಾವಟಿಗೆ ರತ್ನಹಚ್ಚಿದ ಹೊಸ್ತಿಲವ ದಾಟಿಅಚ್ಯುತಾನಂತ ಬಂದ 6 ನಾಗಶಯನ ತನ್ನ ಮನೆಯ ಬಾಗಿಲ ಮುಂದೊಪ್ಪುತಿರಲು ಭಾಗವತರ ಮ್ಯಾಳದಿಂದ ಬಂದ7 ರುದ್ರಾದಿಗೊಂದ್ಯನ ಮುಂದೆ ಅಧ್ಯಾನ(ಅಧೀನ) ವೆಂಬುವರು ಕೋಟಿಮುದ್ದು ತೋರೋದಮ್ಮ ಸಭೆಯು 8 ಅಲ್ಲೆ ಅಲ್ಲೆ ನಿಂತ ಜನರು ಚಲ್ವರಮೆ ಅರಸನ ಮ್ಯಾಲೆಮಲ್ಲಿಗೆ ಸೂರ್ಯಾಡೋರೆಷ್ಟ 9
--------------
ಗಲಗಲಿಅವ್ವನವರು
ಥೂ ನಿನ್ನ ಮೋರೆಗೆ ಬೆಂಕ್ಯ್ಹಚ್ಚ ಮನವೆ ಕುಯುಕ್ತಿ ಬಿಡು ಮನವೆ ಪ ಮುನ್ನ ನೀ ಪಡೆದದ್ದು ನಿನ್ನಗಿರಲಿಕ್ಕಾಗಿ ಅನ್ಯರೊಡವೆಯ ಬಯಸಿ ಕಣ್ಣಿಕ್ಕಿ ಕುದಿವಿ ಕುನ್ನಿಮನಸೆ ನಾಳೆ ಕಣ್ಣಿನೋಳುರಿಗೆಂಡ ವನ್ನು ತುಂಬಿಸುವೆ ಮನಚೆನ್ನಾಗಿ ನೋಡೊ 1 ಮಿಥ್ಯ ಸತಿಸುತರಿಗೆ ತೊತ್ತಾಗಿ ದುಡಿದು ಮುದಿಕತ್ತೆ ನೀನಾದಿ ಮೃತ್ವಿಗೆ ತುತ್ತಾಗಿ ಅತ್ತತ್ತು ಬಾಯಿಬಿಡುವ ಹೊತ್ತಿಗಿರರಾರಾರು ಅರ್ತು ನೀ ನೋಡೊ 2 ಚಿತ್ತಜಪಿತನಂಘ್ರಿ ಸತ್ಯಭಜನಕೆ ಕರೆಯೆ ಸುತ್ತಿ ಮಲುಗುವಿ ಸತಿಸತ್ತಳುವನಂತೆ ಮತ್ತೆ ಎತ್ತಕೆ ಕರೆಯೆ ವತ್ತರಿಲ್ಲ ಓಡ್ವಿ ಮುಕ್ತಿಕೊಂಡೆಯ್ವೆ ಮನ ತೊತ್ತಾಗಬೇಡೊ 3 ದಾಸಾನುದಾಸರ ದೂಷಣೆಯ ಮಾಡಿ ಮಹ ಹಾಸ್ಯದಿಂ ನಗುವಿ ಭವಪಾಶದೋಳ್ಸಿಲ್ಕಿ ನಾಶಬುದ್ಧಿಯ ಬಿಡು ಹೇಸಿಮನುಜನೆ ಯಮ ಪಾಶ ಬರುವುದು ಮುಂದೆ ಸೋಸಿ ನೀನೋಡೊ 4 ನೆರೆದು ತೋರುವ ಸಂತೆಪರಿಯಂತೆ ಸಂಸಾರ ಮರೆಮೋಸದ ಉರುಲು ದುರಿತದ ತವರು ಮರುಳತನವನು ನೀಗಿ ಪರಮ ಶ್ರೀರಾಮನ ಚರಣಸ್ಮರಣೆಯೊಳಿರ್ದು ವರಮುಕ್ತಿ ಪಡೆಯೊ 5
--------------
ರಾಮದಾಸರು
ದಣಿದು ಮಲಗಿದೆನು ನಾನು-ದಣಿದು ಮಲಗಿದೆನುಮಣಿದೆ ಗುರುವಿಗೆ ಹಣಿದೆ ಶತ್ರುಗಳತಣಿದೆ ರಕ್ತವ ಕುಣಿದೆ ತಲೆಗಳಘಣ ಘಣ ಘಣ ಘಣ ನಾದವ ಕೇಳುತಮಣಿಮಯ ಮಂಟಪ ಉನ್ಮನಿ ಬಯಲಲಿ ಪ ತರಿಸಿ ತಾಪವನು ಕಾಲಲಿ ಒರೆಸಿ ಮಮತೆಯನುಹರಿಸಿ ಸಂಶಯ ಹುರಿಸಿ ದುರ್ಗುಣಕೊರೆಸಿ ವ್ಯಸನವ ಜರಿಸಿ ಮದಗಳಸುರಿ ಸುರಿ ಸುರಿವ ಸುಧಾ ಕಾರಂಜಿಯಮೆರೆವ ಸಹಸ್ರಾರ ಚಪ್ಪರ ಮಂಚದಿ 1 ಹೊಡೆದು ವಾಯುಗಳ ತುಂಡರಿಸಿ ಕ್ಲೇಶಗಳಮಡಿಯೆ ಈಷಣವು ಕಡಿಯೆ ಕಲ್ಪನೆಕೆಡೆಯೆ ಭ್ರಾಂತಿಯು ಒಡೆಯೆ ಶತ್ರುಗಳುಕಿಡಿ ಕಿಡಿಯುಗುಳುತ ವಿಷ ಮೂರ್ಧ್ನಿಯಬಿಡಿ ಮುತ್ತುದುರುವ ಹಂಸತೂಲದಿ2 ಬಳಿದು ವ್ರತಗಳನು ಎಳೆದು ಮತಗಳನುತುಳಿದು ಗರ್ವವ ತೊಳೆದು ಶೋಕವಮುರಿದು ರಾಗವ ಸೆಳೆದು ಮಾನವಥಳಥಳ ಬೆಳುದಿಂಗಳಿನೊಳುಬಲು ಚಿದಾನಂದ ಬ್ರಹ್ಮವೇ ಆಗಿಯೆ 3
--------------
ಚಿದಾನಂದ ಅವಧೂತರು
ದಂತಿಗಮನೆಯರು ಹರುಷದಲಿ ನೀಲಕುಂತಳೆಯ ರತಿರೂಪ ವಂತೆಯರು ಸೊಬಗು ಶ್ರೀ ಕುಂಕುಮವ ಸಂತವಾಡಿದರೂ ಪ ಕಳಹಂಸ ಗಿಳಿವಿಂಡುಗಳ ತಂಡ ಮಧುರದಿಂ ಕೆಲವ ಕೋಗಿಲೆಯ ವಿಹಗಾಳಿಗಳ್ ಪೊಳೆವ ಚೆಂದಳಿರ ವನದೊಳು ಮಂಟಪವ ರಚಿಸಿ ಲಲನೆಯರು ಚೆಲುವಿನಲಿ ಕೊಳವ ಸಿಂಗರಿಸಿ ಜಲಜ ನೈದಿಲೆಯ ಪೂವಲಿಯದೊಲ್ಘೇಂಕರಿಪ ಬಳಸಿನಲಿ ಕೊಳಗುತಿಪ್ಪಳಿಗಳಿಂ ಶೋಭಿಸುವ ಸಲಿಲದೊಳು ಮಲಯಜ ಸುಲಲಿತ ಕುಂಕುಮವೆರಸಿ ಸಲೆ ಪ್ರಹುಡೆ ಕೆಳನಲಿದು ಸಂತಸದೀ 1 ಮಂದಗಮನೆಯರು ಪೂರ್ಣೇಂದುವದನೆಯರು ಶುಭ್ರ ಕುಂದರದನೆಯರು ಅರವಿಂದ ನೇತ್ರೆಯರು ಗೋ ವಿಂದನೈತರಲು ಪೊನ್ನಂದಣದಲಿದಿರುಗೊಳ್ಳೆ ಕುಂದಣದ ರತ್ನಗಳಲಿ | ಬಂದಿಸಲು ದಂಡೆಗಳ ಚೆಂದದಿಂ ಪಿಡಿದು ಮಕರಂದಮಂ ಪೂರಯಿಸಿ ಕಂದರ್ಪಜನಕನನು ಸಂದಣಿಸಿ ತಮತಮಗೆ ಮುಂದುವರಿದು ಲೋವಿಡಿದು ಆನಂದದಿ ಸೂಸಿದರೂ 2 ಪದುಮಗಂಧಿಯರು ಸನ್ಮøದು ಕೀರವಾಣಿಯರು ಚದುರೆಯರ್ತೊಂಡೆವಣ್ಣಧರೆಯರು ಪೇರ್ಮೈಯ ಮದದ ಮದ್ದಾನೆಯರು ಸುದತಿಯರು ಸೌಂದರ್ಯ ಪದಪು ಗಾತಿಯರು ಬಂದೊದಗಿ ಮೂದಲಿಸಿ ಮಧುಸೂದನನ ಬಿಡದಿದಕೋ ಪಿಡಿಪಿ ಮೋಹ ನದ ಬಲೆಯನು ಬೀಸೆನುತ ಯುವತಿಯರುಗಳು ಮುದದಿಂದ ಬೆಂಗೊತ್ತಿ ಪ್ರಣಯ ಕದನದಿಂ ಸೋಲಿಸುತ ಎದೆಗೆಡಿಸಿ ನವಪರಿಮಳದಿ ಮುಸುಕಿದರೂ 3 ಅಡಿಗಡಿಗೆ ಬಟ್ಟ ಪೊಂಗೊಡ ಮೊಲೆಗಳಲುಗುತ್ತ ಕಾ ರಡಿಗಳಂ ಪೋಲ್ವ ಪೇರ್ಮುಡಿ ಸಡಿಲೆ ಹಾರಗಳ ಜಡೆಯಲೊಯ್ಯನೆ ಸಣ್ಣ ನಡು ಬಳುಕೆ ಲಾವಣ್ಯ ವೆಡೆಬಿಡದೆ ಕೋಮಲೆಯರೊಡನೆ ತವದಕಲೀ ಸಡಗರದಿ ಕುಸುಮಗಳ ಎಡೆಬಿಡದೆ ಬೀರೆ ಸೊಂ ಪಡರ್ದಂಗಲತೆಗಳಿಗೆ ತೊಡದ ಮನ್ಮಥಶರವ ಪತಿ ವಿಡಿದು ಮಡದಿಯರು ಅಲರ್ದೊಡೆಯದೊಡಿಸಿದರೂ 4 ತೊರೆದು ಮುಂಬರಿಯೆ ಯೌವನದ ಪೀತಾಂ ಬರದ ನೆರಿಗಳೋಸರಿಸೆ ಮುಂಜೆರಗನೆಳೆವುತ ವಾಮ ಕರದಂಗುಳಿಗಳಿಂದ ಕುರುಳ ನೇವರಿಸುತಾ ತುರದ ತರುಣಿಯರು ಶ್ರೀಹರಿಯ ತರುಬಿದರೂ ಸರಸಿ ಜಾಂಬಕನ ಪೇರುರವ ಕುಚಗಳ ಕೊನೆಯ ಲಿರಿದು ನಿಲ್ಲಿಸಿ ನಿಲ್ಲು ಹೋಗಬೇಡೆನುತ ಯುವತಿಯರು ಧರೆಯೊಳತ್ಯಧಿಕ ಸುರಪುರದ ಲಕ್ಷ್ಮೀಪತಿಯ ಸರಸನೆ ವವಿಡಿದು ಮೇಲ್ವರಿಯೆ ವೊಲಿಸಿದರೂ 5
--------------
ಕವಿ ಲಕ್ಷ್ಮೀಶ
ದತ್ತ ನಮ್ಮನಿ ದೈವ ಚಿತ್ತಮನದೊಳಗಿಹ್ಯ ಎತ್ತ ಹೋದರು ನಮ್ಮ ಹತ್ತಿಲಿಹನೊ 1 ನಿತ್ಯ ನಿಜ ಘನವಾಗಿ ಹೃತ್ಕಮಲದೊಳು ತಾಂ ಮುತ್ತಿನಂತೆ 2 ಗುತ್ತಳಿದು ಒಳಗ ತಾಂ ಪುಥ್ಥಳಿಯು ಹೊಳೆವ ಪರಿ ಮೊತ್ತವಾಗಿಹ್ಯ ಪೂರ್ಣ ನೆತ್ತಿವೊಳಗ 3 ದತ್ತವುಳ್ಳವನಿಗೆ ಹತ್ತಿಸಂಗಡ ಬಾಹ ವಿತ್ತ ಒಡಿವ್ಯಾಗೆ ತಾಂ ಕರ್ತುನಮ್ಮ 4 ದತ್ತಗಿಂದಧಿಕ ಮತ್ತೊಂದು ದೈವವು ಕಾಣೆ ಪೃಥ್ವಿಯೊಳು ಮಹಿಪತಿವಸ್ತು ಒಂದೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಂಭಕ-ಭಕುತಿಯ-ಮಾಡಬೇಡ ಬರಿ ಡಿಂಭವ ಪೋಷಿಸೆ-ಪಾಡಬೇಡ ಪ ಅಂಬುಜನಾಭವ ಬಿಡಬೇಡ ಒಣ ಜಂಭವ-ಮಾಡುತ-ಕೆಡಬೇಡ ಅ.ಪ. ಕಾಸಿಗೆ ದಾಸನು ಆಗಬೇಡ-ಹರಿದಾಸನು ಆದರೆ ಆಶೆಬೇಡ ದೊರಕದು ತಿಳಿಗಾಢ 1 ಕಂಡಕಂಡೆಡೆ ತಿರಿಬೇಡ-ಯಮದಂಡಕೆ ಬೆದರದೆ ನಡಿಬೇಡ ಕೆಣಕುತ ಕೆಡಬೇಡ 2 ಮುಂಬರೆ ತಿಳಿಮೂಢ ಪರ ಹೆಂಡಿರು ವಿತ್ತವ ನೋಡಬೇಡ 3 ತುಚ್ಛರ ಸೇವೆಯ ಮಾಡಬೇಡ ಮನಸ್ವಚ್ಛತೆ ಪೊಂದದೆ ಇರಬೇಡ ಕೆಚ್ಚೆದೆ ಕಷ್ಟದಿ ಬಿಡಬೇಡದೈವೇಚ್ಛೆಯೆ ಸಕಲಕು ಮರಿಬೇq4 ಆತ್ಮಸ್ತುತಿಯನು ಮಾಡಬೇಡ ಪರಮಾತ್ಮನ ಗುಣಗಳ ಕದಿಬೇಡ ಗಾತ್ರವು ಅಸ್ಥಿರ-ತಿಳಿ-ಬೇಗ-ಜೀವೋತ್ತಮ ನಂಘ್ರಿಯ ಬಿಡಬೇಡ 5 ತಿಳಿಯದೆ ಇರಬೇಡ ಮನವನು ಸೋಲಬೇಡ 6 ಸ್ನೇಹವ ಮಾಡಬೇಡ ಭವ ಕಾಡಿಗೆ ಕಿಚ್ಚಿದು ಸರಿ ಪ್ರೌಢ 7 ನೆಂಟಗೆ ಸಾಲವ ಕೊಡಬೇಡ ಅದು ಗಂಟಿಗೆ ಮೊಸವೆ ತಿಳಿಬೇಗ ಒಂಟಿಲಿ ಊಟವ ಮಾಡಬೇಡ ವೈಕುಂಠಕೆ ಸಾಧನೆ ಬಿಡಬೇಡ 8 ದಾರಿಯು ಮರಿಬೇಡ ಒಲಿಸದೆ ಬಿಡಬೇಡ 9 ಚಿಂತನೆ ತಿಳಿಬೇಗ ಕಡು ಆಲಸ್ಯವ ಮಾಡಬೇಡ ಸಿರಿಬಿಡುವಳು ಆತನ ತಿಳಿಬೇಗ10 ಮಾಧವ ನೊಲಿಮೆಗೆ ಹೆದ್ದಾರಿ ಶೀಘ್ರದಿಪೊಗಾಡು 11 ಸತ್ಯವ ಧರ್ಮವ ಬಿಡಬೇಡ ಈ ಉಕ್ತಿಗಳಾಚೆಗೆ ಹಾಕಬೇಡ ಸತ್ಯವ ಪಠಿಸದೆ ಬಿಡಬೇಡ-ಶ್ರೀ ಸತ್ಯನ ಮತವನು ಪಿಡಿಬೇಗ12 ನಿಜಸುಖ ತಿಳಿಬೇಗ ನಿಷ್ಠಿಯ ಗುರುವಡಿ ಬಿಡಬೇಡ “ಶ್ರೀ ಕೃಷ್ಣವಿಠಲ”ನ ತೊರಿಬೇಡ13
--------------
ಕೃಷ್ಣವಿಠಲದಾಸರು
ದಯ ಮಾಡೊ ಪ್ರೀಯಾ ದಾಸರ ಶುಭೋ-ದಯ ವಿಜಯರಾಯ ಸಾ |ಹಯವಾಗಿ ಒದಗುವೋಭಯ ನಿವಾರಣ ಮಾಡಿ ಪ ಪ್ರಬಲವಾಗಿಹ ಮೋಹ ನಿಬಿಡವಾದದರಿಂದಅಭಯದಾಯಕ ನಿನ್ನ ಶುಭವಾದ ಪಾದಕ್ಕೆಅಭಿವಂದಿಸದಲೆ ಅಲ್ಪರ ಸೇರಿಅಬಲನಾಗುತಲೆ ಪಾಪದ ವನಧಿUಭೀರ ನೋಡದಲೆ ಬಾಳಿದೆ ಯನ್ನಅಭಿಮಾನದೊಡೆಯನೆ ಅಗಡು ಮಾಡದಲೆ 1 ದುರಿತ ಪರಿ ವರಗಳ ಗರೆವ ಕಾರಣ ನಿನ್ನಬಿರಿದು ನಾ ಬಲ್ಲೆ ಎನ್ನಯ ಭಾರಸರಿ ನಿನ್ನದಲ್ಲೆ ಲೌಕೀಕದಪರಿ ಮತ್ತೊಂದೊಲ್ಲೆ ಇಹಪರದಲ್ಲೆ ಪರಮ ಸೌಖ್ಯಕೆ ನಿನ್ನ ಸ್ಮರಣೆ ವಂದಲ್ಲೆ 2 ಪಾಮರ ಜನರಿಗೆ ಸುಮಾರ್ಗಗೋಸುಗಶ್ರೀಮನೋಹರ ನಿನ್ನ ಪ್ರೇಮದಿಂದಲಿ ಸೃಜಿಸಿಭೂಮಿಯೊಳಿಡಲೂ ಹರಿಯ ದಿವ್ಯನಾಮ ನಾ ಬಿಡಲು ದುರ್ವಿಷಯವಕಾಮಿಸಿ ಕೆಡಲೂ | ಸುಮ್ಮನಿರದೆಯಾಮ ಯಾಮಕೆ ನಿನಗೆ ನಾ ಮೊರೆಯಿಡಲೂ 3 ಜಗದಂತರ್ಯಾಮಿಯ ಹಗಲು ಇರುಳು ಬಿಡದೆಸುಗುಣ ಮಾರ್ಗದಲಿದ್ದು ಬಿಗಿಯಾದ ಕವನಕ್ಕೆಬಗೆ ತೋರಿದವನೆ ಹರಿಯ ಕ್ಷಣ ಅಗಲದಿದ್ದವನೆ ಕಾಮದ ಬಲಿಗೆಸಿಗದೆ ನಡೆವವನೆ ಅನುನಯದಿ ಕರವಮುಗಿದು ಬೇಡುವರಲ್ಲಿ ಮುದದಿಂದ ನಲಿವನೆ 4 ಎನ್ನೊಬ್ಬಗಲ್ಲ ಈ ಬಿನ್ನಪ ಕರುಣಾಳೆನಿನ್ನ ಪೊಂದಿದವರ ಮನ್ನಿಸಿ ಸಲಹಯ್ಯಾಬೆನ್ನು ಬಿಡದಲೆ ವ್ಯಾಸ ವಿಠ-ಲನ್ನ ಪಾಡುತಲೆ ಕಾಲವ ಕಳೆವ ಸನ್ಮಾರ್ಗವನೆ ತೋರೋ ತಡಮಾಡದಲೆ 5
--------------
ವ್ಯಾಸವಿಠ್ಠಲರು
ದಯದಿ ಎಮ್ಮನು ಸಲಹ ಬೇಕಯ್ಯ | ಮಳಖೇಡ ನಿಲಯ ದಯದಿ ಎಮ್ಮನು ಸಲಹ ಬೇಕಯ್ಯ ಪ ದಯದಿ ಎಮ್ಮನು ಸಲಹ ಬೇಕೈ | ವಿಯದಧಿಪ ಸದ್ದಂಶ ಸಂಭವ ಭಯ ವಿದೂರನ ತೋರು ಎನುತಲಿ | ಜಯ ಮುನೀಂದ್ರನೆ ಬೇಡ್ವೆ ನಿನ್ನನು ಅ.ಪ. `ಇಂದ್ರಸ್ಯನು ವೀರ್ಯಾಣ’ ಎಂದೆನುತ | ಇತ್ಯಾದಿಋಕ್ಕುಗಳಿಂದ ಬಹುತೆರೆ ನೀನು ಪ್ರತಿಪಾದ್ಯ ||ಅಂದು ಮೇಘದ ಜಲವು ಬೀಳದೆ | ಬಂಧಗೈದಹಿನಾಮ ದೈತ್ಯನಕೊಂದು ಉದ್ಧರಿಸಿರುವ ಪರಿಯಲಿ | ಮುಂದೆ ದುರ್ವಾದಿಗಳ ಖಂಡಿಪೆ 1 ವಾಲಿಯಂದದಿ ದೃಷ್ಟಿಮಾತ್ರದಲಿ | ಶತೃಗತಬಲಲೀಲೆಯಿಂದಪಹರಿಪೆ ನಿಮಿಷದಲಿ ||ಕಾಲ ತ್ರೇತೆಯಲಂದು ದುಷ್ಟರ | ವಾಲಿರೂಪದಿ ವಾರಿಸಿದ ಪರಿಕಾಲ ದ್ವಾಪರದಲ್ಲಿ ಪ್ರಾರ್ಥನೆ | ಲೀಲೆ ರೂಪಿಯು ಕೃಷ್ಣಸೇವಕ 2 ದೃಷ್ಟಿ ಮಾತ್ರದಿ ಕರ್ಣಗತ ಬಲವ | ಅಪಹರಿಸಿ ನೀನುಕ್ಲಿಷ್ಟ ಯುದ್ಧದಿ ಗಳಿಸಿ ನೀ ಜಯವ ||ಶ್ರೇಷ್ಠ ಕರ್ಣನ ಅಸುವ ಕೊಳ್ಳುತ | ಸುಷ್ಠು ಅರಿಬಲ ನಾಶಮಾಡುತಭ್ರಷ್ಟ ಕೌರವನೀಗೆ ದುಃಖದ | ಕೃಷ್ಣಗರ್ಪಿಸಿ ಕೈಯ್ಯ ಮುಗಿದೆಯೊ 3 ಕಾಲ ಕಲಿಯುಗದಲ್ಲಿ ಬಲ ಭೀಮ | ಮಧ್ವಾಭಿಧಾನದಿಮೂಲ ಮೂವತ್ತೇಳು ಸೂನಾಮ ||ಭಾಳ ಗ್ರಂಥಗಳನ್ನೆರಚಿಸೀ | ಕಾಲಟಿಜಕೃತಮಾಯಿ ಮತವನುಲೀಲೆಯಿಂದಲಿ ಖಂಡಿಸುತ್ತ | ಪಾಲಿಸುತ್ತಿರೆ ಸುಜನರನ್ನು 4 `ವೃಷಾಯ ಮಾಣೆಂಬ` ಋಕ್ಕಿನಲಿ ದೇವ ಇಂದ್ರಗೆವೃಷಭದಾಕೃತಿ ಪೇಳಿಹುದು ಅಲ್ಲಿ ||ವೃಷಭ ನೀನಾಗಂತೆ ಕಲಿಯಲಿ | ಎಸೆವ ಶ್ರೀ ಮನ್ಮಧ್ವ ಗ್ರಂಥದಹಸಿಬೆ ಚೀಲವ ಹೊತ್ತು ತಿರುಗುತ | ಅಸುಪತಿಯ ಸೇವಿಸಿದ ಮಹಿಮ5 ಅಗಸ್ತ್ಯ ಮುನಿ ಸಕಲ ತೀರ್ಥಗಳ | ಸಂಗ್ರಹಿಸಿ ಕರದಿಸಾಗಿ ಗಿರ್ಯಾನಂತ ಕಮಂಡೂಲ ||ವೇಗ ಕೆಳಗಿಟ್ಟಾಚಮನ ಅಲ್ಪ | ಕಾಗಿ ಸ್ವಲ್ಪವುದೂರ ಪೋಗಲುಕಾಗೆ ರೂಪದಿ ಬಂದು ಇಂದ್ರನು | ವೇಗ ಉರುಳಿಸೆ ಜಲವು ಹರಿಯಿತು 6 ದೆವರಾಜನು ಕಾಣಿಸಿ ಕೊಳಲು | ಮುನಿಯು ಆಕ್ಷಣದೇವ ಕಾರ್ಯದ ಭಾವ ತಿಳಿಯಲು ||ಓವಿ ತತ್ಕಾಗಿಣಿಯ ನಾಮದಿ | ಭೂವಲಯದೊಳ್ಬಾತಿಸಲಿ ಎನೆತೀವರಾಶೀರ್ವಾದ ದಿಂದಲಿ | ಪಾವನವು ತತ್ ಕ್ಷೇತ್ರ ವಾಯಿತು 7 ಪಾಂಡು ಮಧ್ಯಮನಾದ ಅರ್ಜುನನು | ಇಲ್ಯುದಿಸಿ ಪೊತ್ತಧೋಂಡು ರಘುನಾಥ ಪೆಸರನ್ನು || ಗೊಂಡು ನಾಯಕ ತನವ ಅಶ್ವಕೆ | ಅಂಡಲೆದು ಬರುತಿಲ್ಲಿ ಬಿಸಿಲಲಿ ಉಂಡು ಉಂಬುದ ಜಲವ ಪಶುಪರಿ | ಕಂಡು ಮುನಿ ಅಕ್ಷೋಭ್ಯ ಬೆಸಸಿದ 8 ಸ್ವಪ್ನ ಸೂಚಿಸಿದಂತೆ ಮುನಿಶ್ರೇಷ್ಠ | ನೀರ್ಗುಡಿದವ ನರೆ ಬಪ್ಪುವನು ತಮ ಪೀಠಕೆನ್ನುತ್ತ || ಸ್ವಲ್ಪ ಹಾಸ್ಯದಿ ಪಶುವು ಪೂರ್ವದಿ | ಒಪ್ಪುವೆಯಾ ನೀನೆನ್ನ ಸಾದಿಗೆ ನೆಪ್ಪು ಬಂದುದು ವೃಷಭ ಜನ್ಮದಿ | ಕೃಪ್ಪೆಗೈದಿಹ ಮಧ್ವರನುಗ್ರಹ 9 ಸಾದಿ ಭೂಪನು ಕಳುಹಿ ತನ್ನ ಸೈನ್ಯ | ಅಕ್ಷೋಭ್ಯ ಮುನಿಪರ ಪಾದಕೆರಗುತ ಆಶ್ರಮವು ತುರ್ಯ ||ಮೋದದಿಂದ್ಯಾಚಿಸಲು ಮುನಿವರ | ಆದಿಯಿಂದಲಿ ಬಂದ ಪೀಠಕೆಸಾದರದಿ ಪಟ್ಟಾಭಿಷಕ್ತನ ಗೈದು ಆಶೀರ್ವಾದ ಮಾಡಿದ 10 ಸುತನು ತುರ್ಯಾಶ್ರಮವ ಪೊತ್ತುದನ | ಕೇಳುತ್ತ ತಂದೆಅತುಳ ಕೋಪದಿ ನಿಂದಿಸಿದ ಮುನಿವರನ |ಸುತನ ಗೃಹ ಕೆಳತಂದು ಪತ್ನಿಯ | ಜೊತೆಯಲಿಡೆ ಏಕಾಂತ ಗೃಹದಲಿಅತುಳ ಸರ್ಪಾ ಕೃತಿಯ ಕಾಣುತ | ಭೀತಿಯಲಿ ಚೀರಿದಳು ಕನ್ಯೆಯು11 ಸೋಜಿಗದ ತನಯನ್ನ ಕೊಳ್ಳುತ್ತ | ಮುನಿವರರ ಬಳಿಗೆ ಯೋಜಿಸೀದನು ಕ್ಷಮೆಯ ಬೇಡುತ್ತ ||ಆರ್ಜವದ ಮುನಿ ಕ್ಷಮಿಸಿ ತಂದೆಯ | ಮಾಜದಲೆ ತಮ್ಮ ಶಿಷ್ಯಭೂಪಗೆಯೋಜಿಸಿದರನ್ವರ್ಥನಾಮವ | ಶ್ರೀ ಜಯಾಭಿಧ ತೀರ್ಥರೆನ್ನುತ 12 ಪರ ಕರಿ ಹರ್ಯಕ್ಷರಾದಿರಿ 13 ಮಧ್ವಭಾಷ್ಯಕೆ ಟೀಕೆ ರಚಿಸುತ್ತ | ಯರಗೋಳ ಗುಹೆಯಲಿಶುದ್ಧ ಭಾವದಿ ಇರಲು ಮದಮತ್ತ ||ವಿದ್ಯ ಅರಣ್ಯಭಿಧ ನೋಡೀ | ಮಧ್ವಕೃತ ಸನ್ಮಾನ ಲಕ್ಷಣಬುದ್ಧಿಗೇ ನಿಲುಕದಲೆ ಟೀಕೆಯ | ಪದ್ಧತಿಯ ಕಂಢರ್ಷಪಟ್ಟನು 14 ಮಾಧ್ವಭಾಷ್ಯವ ನೇರಿಸಿ ಗಜವ | ತಟ್ಟೀಕೆ ಅಂತೆಯೆಅದ್ಧುರೀಯಲಿ ಗೈದು ಉತ್ಸವವ ||ವಿದ್ಯವನ ಮುನಿಪೋತ್ತುಮನು ಬಹು | ಶುದ್ಧಭಾವದಿ ಗೈದು ಸಂತಸಬುದ್ಧಿಯಲಿ ಪರಿವಾರ ಸಹಿತದಿ | ಸದ್ದುಯಿಲ್ಲದೆ ಪೋದನಂದಿನ 15 ಹತ್ತೆರಡು ಮತ್ತೊಂದು ಕುಭಾಷ್ಯ | ವಿಸ್ತರದಿ ಖಂಡಿಸೆಕೃತ್ಯವೂ ಮಧ್ವಕೃತವನುವ್ಯಾಖ್ಯಾ ||ಮತ್ತಿದಕೆ ಸೂಧಾಖ್ಯ ಟೀಕವ | ವಿಸ್ತøತವು ನಿಮ್ಮಿಂದ ಜಯಮುನಿಮೊತ್ತದಿಂಧ್ಹತ್ತೆಂಟು ಗ್ರಂಥಕೆ | ಕೃತ್ಯವಾಯಿತು ನಿಮ್ಮ ಟೀಕೆಯು16 ಪಾದ ಪಾದ ತೋರ್ವುದು ||
--------------
ಗುರುಗೋವಿಂದವಿಠಲರು
ದಯಮಾಡು ದಯಮಾಡು ಎನ್ನ ಮೇಲೆ | ಅಂತರಂಗದೊಳಿಪ್ಪ ಅಚ್ಚುತಮೂರ್ತಿ ಪ ಕುಸುಮ ಜಾಜಿ ಮಲ್ಲಿಗೆ ಮಾಲೆ | ಮಂದಾರ ಹಾರ ಕೊರಳೊಳಿಡಲೂ || ಚಂದವಿಲ್ಲವೆಂದು ತೆಗೆದು ಬಿಸಾಟಿ ಊರ | ಹಂದಿಯಂದದಿ ಇಲ್ಲಿ ಇಪ್ಪ ನರಗೆ || 1 ಹೆತ್ತ ತುಪ್ಪ ಸಣ್ಣಶಾವಿಗೆ ಪರಮಾನ್ನ | ಹೆತ್ತತಾಯಿ ತಂದು ಉಣ್ಣ ಬಡಿಸಲು || ಅತ್ತ ಮೊಗವಗಬೆ ತೊತ್ತು ಉಣಬಡಿಸಿದ | ಓಗರ ತಿಂದು ಇಪ್ಪೆನೆಂಬ ನರಗೆ 2 ತುಂಬಿದ ಹೊಳೆಯಲ್ಲಿ ಹರಿಗೋಲಿಟ್ಟುಕೊಂಡು | ಅಂಬಿಗ ತಡೆಯದೆ ದಾಟಿಸಲು || ಅಂಬುವಾಸನೆ ನೋಡಿ ದಾಟಿ ಪೋಗುವೆನೆಂ | ದೆಂಬ ಮಾನವನಾದೆ ವಿಜಯವಿಠ್ಠಲ ಕರುಣೀ3
--------------
ವಿಜಯದಾಸ
ದಯಮಾಡೊ ರಂಗ ದಯ ಮಾಡೊಕೈವಲ್ಯಪತಿ ನಮಗೆ ಕರುಣೆ ಮಾಡೊ ಕೃಷ್ಣ ಪ. ಕುಂತಿ ದೇವಿಯರು ತಂದ ಅನಂತ ಪದಾರ್ಥವ ಶಾಂತ ಮೂರುತಿಯೆ ಕೈಕೊಳ್ಳೊ ಕೃಷ್ಣಶಾಂತ ಮೂರುತಿಯೆ ಕೈಕೊಳ್ಳೊ ಎನುತಲಿ ಕಾಂತೆ ಸುಭದ್ರಾ ನುಡಿದಳು1 ಶ್ರೀದೇವಿಯರಸನ ಪಾದವ ತೊಳೆದರು ಕ್ಯಾದಿಗೆ ಗಂಧ ತುಳಸಿಕ್ಯಾದಿಗೆ ಗಂಧ ತುಳಸಿ ಅಕ್ಷತೆಯಿಂದ ವೇದಗೋಚರನ ಉಪಚರಿಸಿ 2 ಕರವ ಜೋಡಿಸುತ ಐವರು3
--------------
ಗಲಗಲಿಅವ್ವನವರು