ಒಟ್ಟು 980 ಕಡೆಗಳಲ್ಲಿ , 103 ದಾಸರು , 763 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯಮಂಗಳಂನಿತ್ಯಶುಭಮಂಗಳಂ ||ಪ.ಶ್ರೀ ವತ್ಸಲಾಂಛನಗೆ ಕ್ಷೀರಾಬ್ಧಿ ವಾಸಗೆ |ಗೋವರ್ಧನೋದ್ಧಾರ ಗೋವಿಂದಗೆ ||ಮಾವ ಕಂಸನ ಕೊಂದುಮಕರಕುಂಡಲ ಧರಿಸಿ |ಜೀವಾತ್ಮನಾದ ಚಿನ್ಮಯರೂಪಗೆ 1ಅಂಬುಧಿಯ ಶಯನಗೆ ಅಖಿಲ ಭೂತೇಶಗೆ |ತುಂಬುರ - ನಾರದ ಮುನಿವಂದ್ಯಗೆ ||ಎಂಭತ್ತನಾಲ್ಕು ಲಕ್ಷ ಯೋನಿಗಳ ರಾಶಿಯನು |ಗೊಂಬೆಯನು ಮಾಡಿ ಕುಣಿಸುವ ದೇವಗೆ 2ಕಂದರ್ಪನಯ್ಯನಿಗೆ ಕೋಟಿ ಲಾವಣ್ಯನಿಗೆಸುಂದರ ಮೂರುತಿಹರಿ ಸರ್ವೋತ್ತಮನಿಗೆ ||ಕಂದ ಪ್ರಹ್ಲಾದನ ಕಾಯ್ದ ದೇವನಿಗೆಅರ |............................................. 3ಪನ್ನಂಗಶಯನಗೆಪಾವನ್ನ ಚರಿತೆಗೆ |ಸನ್ನುತರಾದ ಸಜ್ಜನ ಪಾಲಿಗೆ ||ಎನ್ನೊಡೆಯ ಸಿರಿದೇವಿಯರಸು ಮುದ್ದುರಂಗಗೆ |ತನ್ನ ನಂಬಿದವರನು ಸಲಹುವವಗೆ 4ಕರಿರಾಜವರದಗೆ ಕರುಣಾಸಮುದ್ರಗೆ |ಗರುಡ ಗಮನನಿಗೆ ವೈಭವಹಾರಗೆ ||ವರಪುರಂದರವಿಠಲ ಕಂಬುಕಂದರನಿಗೆ |ಅರವಿಂದನಾಭನಿಗೆ ಅಜನ ಪಿತಗೆ 5
--------------
ಪುರಂದರದಾಸರು
ಜಲಧಿತಕ್ಕದೊ ನಿನ್ನಳಿಯಗೂ ನಿನಗೂ |ಹಲವು ಬಗೆಯಿಂದಲಿ ಪರೀಕ್ಷಿಯನು ಮಾಡಿದರೆ ಪಮೊದಲೆ ತಿಳದಷ್ಟು ನಿನ್ನ ಮಹತ್ಮಿ ವರ್ಣಿಸುವೆ |ತುದಿಗಂಡು ಬಲ್ಲೆನೇ ಅಧಮ ನಾನೂ ||ಎದುರಿಗಂಬುವದಾಡಿಕೊಂಡ ಬಗೆ ಬ್ಯಾರೆಲ್ಲೀ |ಮುದದಿಂದ ದಯಮಾಡಿ ಕೇಳೊ ರತ್ನಾಕರನೇ 1ನಿನ್ನಿಂದ ಹುಟ್ಟಿಹುದು ವಿಷವು, ಗುರುವಿನ ಪತ್ನಿ |ಯನ್ನು ಸ್ವೀಕರಿಸಿದನು ನಿನ್ನ ಮಗನೂ ||ಘನ್ನತರ ಮಕರಾದಿಗಳು ನಿನ್ನ ಪರಿವಾರ |ಇನ್ನೆಷ್ಟು ಪೇಳಲಿ ಚರಿತ್ರ ಪಾರಾವಾರ 2ನಿನ ಒಡಲಿಗೆಷ್ಟಾದರನ್ನ ಸಾಕೆನಿಸದೂ |ದಣಿದು ಬಂದವರಿಗಾಶ್ರಯವು ಕಾಣೇ ||ಉಣಲಿಕ್ಕೆ ಅನ್ನೆಂಬದೆಂಟನೆ ರಸದಂತೆ |ಘನಖ್ಯಾತಿ ದೂರದಲಿ ಬಳಿಗೆ ಬರಲಿಂತಿಹದು 3ಪ್ರೀತಿಯಂ ಬಂದವರು, ಗ್ರಹಣ ವೈಧೃತಿ ವೇತೀ |ಪಾತದಲಿ ನಿನ ದರುಶನಾಗಬೇಕೂ ||ಭೂತ ಬಡದವರಂತೆ ನಿನ್ನ ಕಲ್ಲುಗಳಿಂದ |ಘಾತಿಸಲಿ ಬೇಕು ನೋಡಲ್ಕೆ ಬಹು ಸೋಜಿಗವು 4ತುಳಿದದಕೆ ಹಿಗ್ಗಿದಿಯೋ ಬಹುಮಾನಿ ನೀನೆಲವೊ |ಲಲನಿ ಹಡದೇಳು ಶಿಶುಗಳ ಕೊಂದಳೂ ||ಬಲುಭಂಟಹಿರಿಯಮಗಗರಸುತನ ಕೊಡಲಿಲ್ಲ |ಇಳಿಯೊಳಗೆ ನೀ ಮಾಡಿದನ್ನ್ಯಾಯಕೆಣಿಯುಂಟೆ 5ಸತಿಸಂಗ ಬಿಡಲೊಲ್ಲಿ ಪರ್ವಕಾಲಗಳಲ್ಲಿ |ಸುತಗೆ ಕಡಿಮೆದರಿಂದೆ ಆದಿ ಹ್ಯಾಗೊ ||ಪತಿವ್ರತಾ ಮಗಳಾದಳೊಂದೆ ಸುಗುಣದರಿಂದೆ |ಕ್ಷಿತಿಯೊಳನವರತ ಪೂಜಿಸಿಕೊಂಬಿ ಜನರಿಂದ 6ಜಾಮಾತನಿಗೆ ಇಹವು ಮುಖವು ಹತ್ತೊಂಬತ್ತು |ಆ ಮಧ್ಯ ಗಜಲಪನದಂತೆ ಒಂದೂ ||ಭೂಮಿಯೊಳಗಾಶ್ಚರ್ಯ ತಾನೆ ಮಕ್ಕಳ ಪಡೆವ |ಈ ಮಗಳು ಬಹುಸುಖವ ಬಡುವಳಿವನಿಂದಲ್ಲಿ 7ಬೆರಳು ಚೀಪುವನೋಡುಸುಳ್ಳಲ್ಲ ದಾನ |ಪುರುಷ ಬದುಕುವ ಚೋರತನದಿ ಜಾರಾ ||ತರುಣಿಯಾಗಿದ್ದ ನಿನ ಬಳಿಯಲ್ಲಿ ನೀ ಬಲ್ಲಿ |ತುರುಗಾಟವ ಕೊಡಲಿ ಕೊಂಡಡವಿಯೊಳಗಿರುವ 8ಗುರುಸ್ವಾಮಿ ಪಿತ ಬ್ರಹ್ಮ ವಂಶದ್ರೋಹಿಗಳವನ |ಪರಿವಾರ ಮಕ್ಕಳಿಗೆ ಮಾವನಾದಾ ||ಉರುಗ ಶಯನಂಡಜಾಧಿಪ ವಹನ ನೀಲಾಂಗ |ಅರಿತನೃಪಋಷಿಗಳೊಳಗೊಬ್ಬರಿಗ್ಯು ಮಗನಲ್ಲ 9ಕುಲಸೂತ್ರವಿಲ್ಲ ಒಂದೇ ರೂಪನಲ್ಲ ನಿ- |ಶ್ಚಲನಲ್ಲ ವತಿ ಕಠಿಣ ವಕ್ರವದನಾ ||ಬಲು ಕೋಪಿ ತಿರದುಂಬ ಸ್ತ್ರೀಯರಿಬ್ಬರ ಕೊಂದ |ಅಲವಜಾರನು, ಬತ್ತಲಿರುವ, ಕಲಹಕೆ ಪ್ರೀಯ 10ಕೊಟ್ಟೆಲ್ಲ ಅವನಿಗೀ ಕನ್ನಿಕಿಯ ಸವತಿಯರು |ಎಷ್ಟೋ ಮಲಸುತರಿಹರದಕೆ ದಶ ಮಡೀ ||ಸಿಟ್ಟಾಗ ಬ್ಯಾಡವನ ವಾರ್ತಿ ಕೇಳಲು ಜನರು |ಬಿಟ್ಟು ಸಂಸಾರವೆಂದಿಂದಿಗೊಲ್ಲದಿಹರೂ 11ನಿನ್ನ ಮಗಳವನಿತ್ತವನ ಮಗಳ ಮದಿವ್ಯಾದಿ |ಕನ್ಯ ವಿಕ್ರಯ ಪರಸ್ಪರವೆನಿಸಿತೂ ||ಇನ್ನೇಸೊ ನಿಮ್ಮ ನಿಮ್ಮಲ್ಲಿದ್ದ ನಡತಿಗಳು |ಅನ್ಯರಿದುಕೇಳಿಭಜಿಸರೊ ಶುದ್ಧ ಭಕುತಿಯಲೀ 12ಏನಾದರೇನು ಶ್ರೀ ಪ್ರಾಣೇಶ ವಿಠಲನಿಗೆ |ನೀನೆಗತಿನಿರ್ದೋಷ ವಸ್ತುವೆಂದೂ ||ಶ್ರೀನಳಿನಭವಮುಖರುನಿತ್ಯವಂದಿಸುತಿಹರೊ |ನೀನವನ ಮಾವನಾದಿನ್ನು ಪೂಜಿತನಲ್ಲೆ 13
--------------
ಪ್ರಾಣೇಶದಾಸರು
ತಪ್ಪುಗಳೆಲ್ಲ ಪರಿಹರಿಸುವ ನಮ್ಮಪ್ಪನಲ್ಲವೆ ನೀನುಒಪ್ಪಿದ ಬಳಿಕವಗುಣ ನೋಡದ ತಿಮ್ಮಪ್ಪನಲ್ಲವೆ ನೀನು ಪ.ಬೆಳಗಿನ ಜಾವದಿಹರಿನಿನ್ನ ಸ್ಮರಣೆಗೆಹಳವಿಗೆಗೊಳ್ಳದ ತಪ್ಪುಮಲಮೂತ್ರವಿಸರ್ಜನೆಯ ಮೃತ್ತಿಕೆಯಲಿಮಲಿನವ ತೊಳೆಯದ ತಪ್ಪುತುಲಸಿ ವೃಂದಾವನ ಗೋಸೇವೆಗೆಅಲಸಿಕೆ ಮಾಡುವ ತಪ್ಪುನಳಿನಸಖೋದಯಕಘ್ರ್ಯವ ನೀಡದಕಲಿವ್ಯಾಸಂಗದ ತಪ್ಪು 1ದಿನದಿನ ಉದಯದಿ ಸ್ನಾನವ ಮಾಡದತನುವಂಚನೆಯ ತಪ್ಪುಕ್ಷಣ ಶ್ರೀ ಹರಿಗುಣ ಜಿಜ್ಞಾಸಿಲ್ಲದಮನವಂಚನೆಯ ತಪ್ಪುಮುನಿಸುರ ಭೂಸುರರಾರಾಧಿಸದಧನ ವಂಚನೆಯ ತಪ್ಪುವನಜಾಕ್ಷನೆ ನಿನ್ನಪಾದವಿಮುಖ ದುರ್ಜನ ಸಂಸರ್ಗದ ತಪ್ಪು 2ಕಣ್ಣಲಿ ಕೃಷ್ಣಾಕೃತಿ ನೋಡದೆಪರಹೆಣ್ಣಿನ ನೋಟದ ತಪ್ಪುನಿನ್ನ ಕಥಾಮೃತ ಒಲ್ಲದೆ ಹರಟೆಯಮನ್ನಿಸುವ ಕಿವಿ ತಪ್ಪುಅನ್ನವ ನಿನಗರ್ಪಿಸದಲೆ ಹರುಷದಿಉಣ್ಣುವ ನಾಲಿಗೆ ತಪ್ಪುಚಿನ್ಮಯ ಚರಣಕ್ಕೆರಗದೆಉನ್ಮತ್ತರ ನಮಿಸುವ ತಲೆ ತಪ್ಪು 3ಶ್ರೀ ನಿರ್ಮಾಲ್ಯದ ವಿರಹಿತ ಸುರಭಿಯಘ್ರಾಣಿಪನಾಸಿಕತಪ್ಪುಆನಂದದಿ ಸಂಕೀರ್ತನೆ ಮಾಡದಹೀನವಿವಾದದ ಬಾಯ ತಪ್ಪುಶ್ರೀನಾಥಾರ್ಚನೆ ಇಲ್ಲದೂಳಿಗಮಾಣದಿರುವ ಕೈ ತಪ್ಪುಶ್ರೀನಾರಾಯಣ ವೇಶ್ಮನಿಗೈದದನಾನಾಟನಪಾದತಪ್ಪು4ಯಜ್ಞಾತ್ಮಗೆ ಯಜ್ಞಾರ್ಪಿಸದೆ ಸುಖಮಗ್ನಾದ ಮೇಢ್ರದ ತಪ್ಪುಅಗ್ರದ ಕರ್ಮವ ಶೌಚವ ಜರಿದ ಸಮಗ್ರ ಗುಹ್ಯಕೃತ ತಪ್ಪುಅಜ್ಞಾನ ಜ್ಞಾನದಿ ಕ್ಷಣಲವಶತವೆಗ್ಗಳಘ ಗಳಿಸುವ ತಪ್ಪುಯಜೆÕೀಶ ಪ್ರಸನ್ವೆಂಕಟ ಕೃಷ್ಣ ನಾಮಾಗ್ನಿಗೆ ತೃಣವೀ ತಪ್ಪು 5
--------------
ಪ್ರಸನ್ನವೆಂಕಟದಾಸರು
ತಿರುಪತಿಯ ಶ್ರೀವೆಂಕಟೇಶಗೋವಿಂದಹರಿಗೋವಿಂದಪರತರ ಪರಮಾನಂದ ಪಮಂದರಗಿರಿಧÀರ ಸುಂದರಮೂರುತಿನಂದನಕಂದ ಗೋವಿಂದ ಮುಕ್ಕುಂದ ಅ.ಪದುರಿತರಾಶಿ ನಾಶ ಗೋವಿಂದಪರಮಪದವಿಗೀಶ ಗೋವಿಂದಸುರಮುನಿಸೇವಿತ ಹರಅಜವಿನಮಿತಪರಮಚರಿತ ಸಿರಿಗೋವಿಂದ 1ಹುಟ್ಟುಸಾವಿಲ್ಲದ ಗೋವಿಂದತಟ್ಟು ಮುಟ್ಟಿಲ್ಲದ ಗೋವಿಂದಸೃಷ್ಟಿ ತನ್ನಾಧೀನದಿಟ್ಟು ಆಳುವ ದಿಟಸೃಷ್ಟಿಗೆ ಸಿಲುಕದ ಗೋವಿಂದ 2ಆದಿಅಂತಿಲ್ಲದ ಗೋವಿಂದನಾದಕಲೆಯಿಲ್ಲದ ಗೋವಿಂದಸಾರಿ ಪೊಗಳುವ ವೇದಕೆ ಕಾಣದಆದಿಅನಾದಿ ಬ್ರಹ್ಮ ಗೋವಿಂದ 3ಮುಚ್ಚಲು ಮಾಜದ ಗೋವಿಂದಬಿಚ್ಚಲು ಕಾಣದ ಗೋವಿಂದಅಚ್ಚುತಾನಂತೆಂದು ಬಚ್ಚಿಟ್ಟ್ಹೊಗಳುವರಸಚ್ಚಿತ್ತದ್ಹೊಳೆಯುವ ಗೋವಿಂದ 4ನಶ್ವರವಿಲ್ಲದ ಗೋವಿಂದಶಾಶ್ವತ ಮಹಿಮೆಯ ಗೋವಿಂದವಿಶ್ವವಿಶ್ವರಕ್ಷ ವಿಶ್ವನಾಟಕ ಮಹವಿಶ್ವವಿಶ್ವಾಕರ ಗೋವಿಂದ5ಅಸಮ ಲೀಲಾಜಾಲ ಗೋವಿಂದಅಸುರಕುಲದಕಾಲಗೋವಿಂದದಶವಿಧವತಾರದಿ ವಸುಧೆಯ ಭಾರವಕುಶಲದಿಂದಿಳುಹಿದ ಗೋವಿಂದ 6ತಿಳಿಯಲು ತಿಳಿಯದ ಗೋವಿಂದತಿಳಿವಿಗೆ ಸುಲಭದ ಗೋವಿಂದಬೆಳಕುಕತ್ತಲೆದೆಸೆಸುಳಿವಿಲ್ಲದಸ್ಥಾನದ್ಹೊಳೆಯುವ ಅಕಳಂಕ ಗೋವಿಂದ 7ಭೂಷಣ ಮಣಿಮಾಲ ಗೋವಿಂದಶ್ರೀಶ ಶ್ರೀನಿವಾಸ ಗೋವಿಂದವಾಸುಕಿಶಯನ ಶೇಷಾರಿಗಮನಸಾಸಿರನಾಮದ ಗೋವಿಂದ 8ನಾಮರೂಪಿಲ್ಲದ ಗೋವಿಂದನೇಮನಿತ್ಯಿಲ್ಲದ ಗೋವಿಂದಶಾಮಸುಂದರ ಮುಕ್ತಿ ಸೋಮಭೀಮಸುಖದ್ಧಾಮ ಶ್ರೀರಾಮ ನಿಜಗೋವಿಂದ 9
--------------
ರಾಮದಾಸರು
ತೊಟ್ಟಿಲ ತೂಗುವೆ ಕೃಷ್ಣನ ತೊಟ್ಟಿಲ ತೂಗುವೆಪುಟ್ಟಬಾಲಕರೊಳುಪರಮಶ್ರೇಷ್ಠನಾದನಾಪಮೀನನಾಗಿ ಭಾರಪೊತ್ತು ಬೇರು ಮೆಲ್ಲಿದನಕ್ನೂರರೂಪ ತೋರಿ ಭೂಮಿದಾನ ಬೇಡ್ದನ 1ಭೂಮಿಪರ ಸಂಹರಿಸಿದ ಶ್ರೀರಾಮಚಂದ್ರನಮಾವ ಕಂಸನ ತರಿದ ಬಲರಾಮನನುಜನ 2ಬುದ್ಧರೂಪದಿಂದ ತ್ರಿಪುರರನೊದ್ದ ಧೀರನಮುದ್ದು ತೇಜಿನೇರಿ ಮೆರೆದ ಪದ್ಮನಾಭನ 3ಉಲಿವು ಮಾಡಬೇಡಿರಮ್ಮ ಚಲುವ ಮಲಗುವನಳಿನನಾಭನನ್ನು ಸ್ಮರಿಸಿ ನಲಿದು ಪಾಡುವ 4ಕಮಲಮುಖಿಯರೆಲ್ಲ ಬನ್ನಿ ಕುಣಿದು ಪಾಡುವಕಮಲನಾಭ ವಿಠ್ಠಲನಂಘ್ರಿ ಸ್ಮರಣೆ ಮಾಡುವ 5
--------------
ನಿಡಗುರುಕಿ ಜೀವೂಬಾಯಿ
ತ್ರಿಜಗದ್ವಾ ್ಯಪಕಹರಿಎನುವರು ಸುಜನರುನಿಜದಲಿ ಪೇಳಿವದಾರಕ್ಕಾಅಜಭವಾದಿಗಳಿಗರಸನಾದಹದಿನಾಲ್ಕು ಲೋಕಕೆ ದೊರೆ ತಂಗಿ 1ನೀರೊಳು ಮುಳುಗುತ ಮೀನರೂಪದಿಸಾರುವ ಮಯ್ಯವದಾರಕ್ಕನೀರೊಳು ಮುಳುಗಿ ವೇದವ ತಂದು ಸುತಗಿತ್ತಧೀರ ಮತ್ಸ್ಯಮೂರುತಿ ತಂಗಿ 2ಭಾರಬೆನ್ನಿಲಿ ಪೊತ್ತು ಮೋರೆ ಕೆಳಗೆ ಮಾಡಿನೀರೊಳು ವಾಸಿಪದಾರಕ್ಕವಾರಿಧಿಮಥಿಸಿದಮೃತ ಸುರರಿಗೆ ಇತ್ತಧೀರಕೂರ್ಮಮೂರುತಿ ತಂಗಿ3ಕೋರೆದಾಡಿಯಲಿ ಧಾರುಣಿ ನೆಗಹಿದಫೋರನೆನುವರಿವದಾರಕ್ಕಕ್ರೂರ ಹಿರಣ್ಯಾಕ್ಷನ ಕೊಂದು ಭೂಮಿಯ ತಂದಶೂರ ವರಹ ಮೂರುತಿ ತಂಗಿ 4ಕ್ರೂರರೂಪತಾಳುತ ಕರುಳ್ವನಮಾಲೆ ಹಾಕಿದವದಾರಕ್ಕಪೋರನ ಸಲಹಲು ಕಂಬದಿಂದುಸಿದನಾರಸಿಂಹ ಮೂರುತಿ ತಂಗಿ 5ಮೂರಡಿ ಭೂಮಿಯ ದಾನವ ಬೇಡಿದಹಾರ್ವನೆನುವನಿವದಾರಕ್ಕಧೀರ ಬಲಿಯ ಭಕ್ತಿಗೆ ಮೆಚ್ಚಿ ಬಾಗಿಲು ಕಾಯ್ದವಾಮನ ಮೂರುತಿ ಇವ ತಂಗಿ 6ಮೂರು ಏಳುಬಾರಿಧಾರುಣಿ ಚರಿಸಿದಶೂರನೆನುವರಿವದಾರಕ್ಕವೀರ ಕ್ಷತ್ರಿಯರ ಮದವನಡಗಿಸಿದ ಪರಶು-ರಾಮ ಮೂರುತಿ ತಂಗಿ 7ಕೋತಿಗಳೊಡನಾಡಿ ಸೇತುವೆ ಕಟ್ಟಿದ ಪ್ರ-ಖ್ಯಾತನೆನುವರಿವದಾರಕ್ಕಮಾತರಿಶ್ವನಿಗೆ ಒಲಿದಂಥ ದಶರಥರಾಮ ಚಂದ್ರ ಮೂರುತಿ ತಂಗಿ 8ಗೋಕುಲದೊಳು ಪಾಲ್ಬೆಣ್ಣೆ ಮೊಸರುನವನೀತಚೋರನಿವದಾರಕ್ಕಲೋಕಗಳೆಲ್ಲಾ ತಾಯಿಗೆ ಬಾಯೊಳುತೋರ್ದಗೋಪಾಲಕೃಷ್ಣ ಮೂರುತಿ ತಂಗಿ 9ತ್ರಿಪುರರ ಸತಿಯರ ವ್ರತಗಳನಳಿದನುಗುಪಿತನೆನುವರಿವದಾರಕ್ಕಕಪಟನಾಟಕ ಸೂತ್ರಧಾರಿ ಶ್ರೀ-ಹರಿಬೌದ್ಧ ಮೂರುತಿ ತಂಗಿ10ಅಶ್ವುವನೇರುತ ಹಸ್ತದಿ ಖಡ್ಗ ಪುರು-ಷೋತ್ತಮನೆನುವರಿವದಾರಕ್ಕಸ್ವಸ್ತದಿ ಕಲಿಯೊಳು ಸುಜನರ ಪಾಲಿಪಕರ್ತೃ ಕಲ್ಕಿ ಮೂರುತಿ ತಂಗಿ 11ಶಂಖು ಚಕ್ರ ಗದೆ ಪದುಮವು ಸಿರದಿ ಕಿ-ರೀಟಧಾರಿ ಇವದಾರಕ್ಕಪಂಕಜಾಕ್ಷಿ ಪದ್ಮಾವತಿಪತಿಶ್ರೀ-ವೆಂಕಟೇಶ ಮೂರುತಿ ತಂಗಿ 12ಮಮತೆಲಿ ಸುಜನರ ಶ್ರಮ ಪರಿಹರಿಸುವಕಮಲಾಪತಿ ಇವದಾರಕ್ಕಕಮಲಪತ್ರಾಕ್ಷ ಶ್ರೀ ಕಮಲನಾಭ ವಿ-ಠ್ಠಲ ಮೂರುತಿ ಕೇಳಿವ ತಂಗಿ 13
--------------
ನಿಡಗುರುಕಿ ಜೀವೂಬಾಯಿ
ದಾಸ ಶೇಷಾದ್ರಿಯ ವಾಸ ತಿಮ್ಮಪ್ಪನ |ದಾಸನನು ಕರೆದೊಯ್ದು ||ಸಾಸಿರನಾಮ ವಿಲಾಸನ ಮೂರ್ತಿಯ |ಲೇಸಾಗಿ ತೋರೆನಗೆ ಪಬೆರಳು ಇಲ್ಲದ ಕೈಯೊಳುಂಡು ಜೀವಿಸುವನ |ಶಿರದ ಅಂದದ ದೇವನ ||ಉರುವ ಶಾಪಕೆ ತಾನು ಕಿರಿದಾಗಿ ಇರುವನ |ಶಿರದೊಳು ಧರಿಸಿದನ ||ಕೊರಳ ಮಾಲೆಯ ಪೆಸರೊಪ್ಪಿದ ಗಿರಿಯೊಳು |ಸ್ಥಿರವಾಗಿ ನೆಲಸಿಪ್ಪನ ||ಕರುಣವಾರಿಧಿ ವೆಂಕಟೇಶನ ಚರಣವ |ಕರೆದೊಯ್ದು ತೋರೆನಗೆ 1ವಾರಿಯೊಳುದಿಸಿದ ನಾರಿಯ ಮಧ್ಯದಿ |ಏರಿಯೆ ಕುಳಿತವನ ||ವಾರಿಜವದನದಿ ತೋರಿದ ಸಾರದಿ |ಮೂರೊಂದು ಪೆಸರವನ ||ಮೇರುವಿನಗ್ರದಿ ಊರಿದ ಚರಣವ |ಸಾರಿದವರ ಜೀವನ ||ಊರಿಗೆ ಕರೆದೊಯ್ದು ಶ್ರೀ ವೆಂಕಟೇಶ ಪ-||ದಾರವಿಂದವ ತೋರೆನಗೆ 2ಸೋತ ಮಾನಿನಿಯೊಳು ಜಾತವಾಗಿಯೆ ಮೇಲೆ |ಮಾತೆಯ ಸಲಹಿದನ ||ನೀತಿ ತಪ್ಪಿಯೆ ನಡೆವ ವಾತಭಕ್ಷಕರನ್ನು |ಘಾತಿಸಿ ತರಿದವನ ||ನೂತನವಾಗಿಹ ನಾಮ ಶೈಲದ ಮೇಲೆ |ಕಾತರದೊಳು ನಿಂದನ ||ಪಾತಕನಾಶನ ಶ್ರೀವೆಂಕಟೇಶನ |ರೀತಿಯ ತೋರೆನಗೆ 3ಋಷಿಯ ಮಕ್ಕಳನೆಲ್ಲ ಹಸಿವಿಗೆ ಗುರಿಮಾಡಿ |ವಶತಪ್ಪಿ ನಡೆವವನ ||ಬಸಿರೊಳಗುದಿಸಿಯೆ ಬಿಸಿಯನೆಲ್ಲವ ಅಂದು |ಎಸೆವ ಮಹಾವೀರನ ||ಪೆಸರೊಳಗೊಪ್ಪಿದ ಹಸನಾದ ಗಿರಿಯೊಳು |ಕುಶಲದಿ ನಿಂದವನ ||ನಸುಮುದ್ದು ಶ್ರೀ ವೆಂಕಟೇಶನ ಚರಣದ |ಬಿಸರುಹ ತೋರೆನಗೆ 4ಪಾದನಾಲ್ಕನು ಮೋದಿನಿಯೊಳಗೂರಿಯೆ |ಆದರಿಸುತ ಬಪ್ಪನ ಮೇ ||ಲಾದ ಪಾದವ ನಾಲ್ಕು ಅಂತರಿಕ್ಷದ ಮೇಲೆ |ಕಾದು ಕೊಳ್ಳುತಲಿಪ್ಪನ ||ಆದಿಯ ನಾಮಕ್ಕೆ ಅದ್ರಿಯನೊಡಗೊಂಡು |ಹಾದಿಯನಿತ್ತವನ ||ಸಾಧಿಸಿ ಇಂತಹ ಶ್ರೀ ವೆಂಕಟೇಶನ |ಪಾದವ ತೋರೆನಗೆ 5ಆದಿನಾರಾಯಣನೆಂಬ ಪರ್ವತನು |ಭೇದಿಸಿ ನಿಂತವನ ||ಸಾಧಿಸಿ ಮುಂದಣ ವೆಂಕಟಾದ್ರಿಯ ಮೇಲೆ |ಪಾದವನೂರಿದನ ||ಮೇದಿನಿಯೊಳಗುಳ್ಳ ಸಾಧುಭಕ್ತರನೆಲ್ಲ |ಕಾದುಕೊಳ್ಳುತಲಿಪ್ಪನ - ವಿ ||ನೋದ ಮೂರುತಿಯಾದ ಶ್ರೀ ವೆಂಕಟೇಶನ |ಪಾದವ ತೋರೆನಗೆ 6ಅತ್ತೆಯ ವರಿಸೆಯೆ ಮೆತ್ತ ಅಳಿಯಗಾದ |ಪುತ್ರಿಯ ತಂದವನ ||ಉತ್ತಮವಾಗಿಹ ಮಗಳ ಸನ್ನಿಧಿಯಲ್ಲಿ |ನಿತ್ಯದೊಳಿರುತಿಪ್ಪನ ||ಬತ್ತಲೆಯಾಗಿಹ ಸತಿಯಳ ಸತ್ಯಕ್ಕೆ |ಪುತ್ರನೆಂದೆನಿಸಿದನ ||ಹತ್ತಿರ ಕರೆದೊಯ್ದು ಪುರಂದರವಿಠಲನ |ನಿತ್ಯದಿ ತೋರೆನಗೆ 7
--------------
ಪುರಂದರದಾಸರು
ದಿಟ್ಟ ಮುಖ್ಯಪ್ರಾಣನೆ ಜಗಜಟ್ಟಿ ಬಾ ಸುತ್ರಾಣನೆಶ್ರೇಷ್ಠದನುಜಘರಟ್ಟ ಸುಗುಣವಿಶಿಷ್ಟ ಭಕ್ತಶಿಖಾಮಣಿ ಪ.ವಾಯುಪುತ್ರ ವಿಚಿತ್ರ ಬಲಿಸುರರಾಯರಾಯರ ಗಂಡನೆಪ್ರೀಯರಾಮಪದಾಬ್ಜಮಧುಕರ ಮಾಯಿಕದನಪ್ರಚಂಡನೆ 1ಶ್ರೀವರೋತ್ತಮ ಹನುಮ ಭೀಮಕೃಪಾವಲಂಬ ಮಹೋಜನೆಪಾವಮಾನಿಪರೇಶ ಪದ್ಮಜ ಭಾವಿ ಯತಿಕುಲರಾಜನೆ2ಶೂರಾಗ್ರಣಿ ಸುಗುಣಿ ಲಕ್ಷುಮಿನಾರಾಯಣದಾಸನೆಭಾರತೀವದನಾರವಿಂದಕೆ ಸೂರ ನಿತ್ಯವಿಲಾಸನೆ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ದೂತ ಸಂವಾದ ದೇವಿಯೊಡನಾದುದು ಪ್ರೀತಿಯಲಿ ಕೇಳಿರೆಲ್ಲದಾತೆ ಶುಂಭನ ಯುದ್ಧಕೆತಾಯೆಂದಟ್ಟಿ ಮಾತ ಮುಗಿಸಿದಳಲ್ಲಪತೆರೆಕಣ್ಣ ಮುಚ್ಚಿದ್ದಿ ಯಾಕೆ ಕಾಡೊಳಗಿರುವೆ ಕೇಳೆಲೆ ಮಹಾದೇವಿಪುರುಷರು ನಿನಗಾರು ಓರ್ವಳೆ ಮಾತಾಡು ಕೇಳೆಲೆ ಮಹಾದೇವಿಕರೆಯಲು ಬಂದೆ ಹಿಮಾಚಲಕೆ ನಿನ್ನ ಕೇಳೆಲೆ ಮಹಾದೇವಿಅರಸ ಶುಂಭನ ದೂತ ಸುಗ್ರೀವ ನಾನೀಗ ಕೇಳೆಲೆ ಮಹಾದೇವಿ1ಕಣ್ಣ ತೆರೆದು ನುಡಿದಳು ದೇವಿ ಖಳನಿಗೆ ಕೇಳೆಲೋ ಸುಗ್ರೀವನನ್ನಗೊಡವೆಏನು ನುಡಿಯಿಂದ ಕೆಲಸವೇನು ಕೇಳೆಲೋ ಸುಗ್ರೀವನಿನ್ನಧಿಕಾರವದೇನು ಶುಂಭನಾರು ನೀನಾರು ಕೇಳೆಲೊ ಸುಗ್ರೀವನನ್ನಗೊಡವೆಏನು ನುಡಿಯಿಂದ ಕೆಲಸವೇನು ಕೇಳೆಲೋ ಸುಗ್ರೀವ2ನಂಬೆನ್ನ ಮಾತನು ಕಪಟವೇನಿಲ್ಲ ಕೇಳೆಲೆ ಮಹಾದೇವಿಶುಂಭನ ಭಾಗ್ಯ ಹೇಳಲಿಕಳವಲ್ಲ ಕೇಳೆಲೆ ಮಹಾದೇವಿತುಂಬಿವೆ ಮನೆಯೊಳು ದಿವ್ಯ ರತ್ನವು ಕೇಳೆಲೆ ಮಹಾದೇವಿಶುಂಭಗೆ ನೀನು ಕಡೆರತ್ನ ದೊರಕಲು ಕೇಳೆಲೆ ಮಹಾದೇವಿ3ಕರುಣದಿ ಕಪಟವಿಲ್ಲದಲೆ ನೀನು ಕೇಳ್ವೊಡೆ ಕೇಳೆಲೋ ಸುಗ್ರೀವಇರಬಾರದು ಸುಮ್ಮಗಿದ್ದುದನಾಡಿವೆವು ಕೇಳೆಲೋ ಸುಗ್ರೀವಪುರುಷರು ಇಂದಿನವರೆಗಿಲ್ಲ ನಾ ಸ್ವತಂತ್ರ ಕೇಳೆಲೋ ಸುಗ್ರೀವಪುರುಷರಿಗೋಸ್ಕರ ನಾನು ತಪವನು ಮಾಡುವೆ ಕೇಳೆಲೋ ಸುಗ್ರೀವ4ಶುಂಭನು ಶೀಘ್ರದಿ ಕರೆತಾರೆಂದನು ನಿನ್ನ ಕೇಳೆಲೆ ಮಹಾದೇವಿಶುಂಭನ ಭಾಗ್ಯ ದೊರಕಿದಡೆ ನೀ ಕೃತಾರ್ಥೆ ಕೇಳೆಲೆ ಮಹಾದೇವಿಶುಂಭಗೆ ನಿನಗೆ ಸಕ್ಕರೆ ಹಾಲು ಬೆರೆತಂತೆ ಕೇಳೆಲೆ ಮಹಾದೇವಿಶುಂಭಗೆ ಚಾಕರ ನಿನಗೆ ಚಾಕರ ನಾನು ಕೇಳೆಲೆ ಮಹಾದೇವಿ5ಮಾಡಬಾರದ ಪ್ರತಿಜೆÕಯ ಮಾಡಿಹೆನು ಕೇಳೆಲೋ ಸುಗ್ರೀವಆಡಲಿ ಏನ ಅದೃಷ್ಟಹೀನೆಯು ಕಂಡ್ಯಾ ಕೇಳೆಲೋ ಸುಗ್ರೀವಖಾಡಾ ಖಾಡಿಯಲಿ ಜಯಿಸಿದವನೆ ಭರ್ತನೆಂದೆನೆ ಕೇಳೆಲೋ ಸುಗ್ರೀವಕೂಡಿ ಬರುವೆ ಮಾಡಿದ ಭಾಷೆಯ ಹುಸಿಯದೆ ಕೇಳೆಲೋ ಸುಗ್ರೀವ6ಕರೆಯಲು ಬಿಗಿಯಲು ಬೇಡವೆ ನೀನೀಗ ಕೇಳೆಲೆ ಮಹಾದೇವಿಥರಥರ ಸಾಲು ಸಾಲಿನ ಛತ್ರಿ ನಿನ್ನವು ಕೇಳೆಲೆ ಮಹಾದೇವಿಇರುವನು ನೀ ಹೇಳಿದಂತ ಶುಂಭನು ಕೇಳೆಲೆ ಮಹಾದೇವಿದೊರೆವುದು ನಿನಗೆ ತ್ರೈಭುವನದರಸುತನ ಕೇಳೆಲೆ ಮಹಾದೇವಿ7ಕಂಡುದಿಲ್ಲವೋ ಈವರೆಗೆನ್ನ ಜಯಿಸಿದವರನ್ನು ಕೇಳೆಲೋ ಸುಗ್ರೀವದಿಂಡುಗಡೆದರು ಎನ್ನೆದುರು ನಿಂತವರೆಲ್ಲ ಕೇಳೆಲೋ ಸುಗ್ರೀವಗಂಡನ ಪಡೆದಿರೆಶುಂಭಜಯಿಸುವನೆನ್ನ ಕೇಳೆಲೋ ಸುಗ್ರೀವಗಂಡನಾವನಿಲ್ಲದಿರೆ ಏನ ಮಾಡುವೆ ಕೇಳೆಲೋ ಸುಗ್ರೀವ8ಚಾರ್ವಾಕರ ಮಾತಾಡಲು ಬೇಡ ಕೇಳೆಲೆ ಮಹಾದೇವಿಬರ್ವಳು ನಿನ್ನ ಮಾತಿಗೆಶುಂಭಬಹನೇ ಕೇಳೆಲೆ ಮಹಾದೇವಿಉರ್ವಿಗೆ ಕರ್ತನ ಎದುರಿಗೆ ನೀ ನಿಲ್ಲುವೆಯ ಕೇಳೆಲೆ ಮಹಾದೇವಿಗರ್ವವ ಮಾಡಲು ಮುಂದಲೆ ಹಿಡಿದೊಯ್ವರು ಕೇಳೆಲೆ ಮಹಾದೇವಿ9ಎನ್ನ ಪ್ರಾರಬ್ಧವು ಇದ್ದಂತೆ ಆಗುವುದು ಕೇಳೆಲೋ ಸುಗ್ರೀವನಿನ್ನ ಮೇಲೇನು ಮಾತಿಲ್ಲವೋ ಕೇಳೆಲೋ ಸುಗ್ರೀವಎನಗೆ ಹಿತಕಾರಿ ನೀನು ಅಹಿತ ನಾನೇ ಕೇಳೆಲೋ ಸುಗ್ರೀವಇನ್ನು ಮಾತಾಡಬೇಡವೋ ಕರೆತಾನಡಿ ಕೇಳೆಲೋ ಸುಗ್ರೀವ10ಇಂತು ವಿಳಾಸ ಮಾತನಾಡಿಯೆ ಖಳನನು ಕಳುಹಿದಳು ಪರಾಂಬೆಎಂತು ಹೇಳ್ವನೋ ಶುಂಭನಾವಾಗ ಬರುವನೋ ಎನುತಲಿ ಜಗದಂಬೆಚಿಂತೆ ಹರಿಪೆ ಸುರರನು ಶುಂಭನನುಕಟ್ಟಿಎನುತಲಿ ಸರ್ವಾಂಬಚಿಂತಯಕ ತಾನಾದ ಚಿದಾನಂದ ಕರುಣೆಯು ಬಗಳಾಂಬ11
--------------
ಚಿದಾನಂದ ಅವಧೂತರು
ದೇವಿಯನೆತ್ತಿದನಾರೆಲಮ್ಮಾ ನಮ್ಮದೇವ ಸಿರಿಪತಿ ಕಾಣೆಲಮ್ಮಾದೇವಿ ನಮ್ಮ ದೇವರು ಬಂದರು ಕಾಣಮ್ಮ ಪ.ಕಣ್ಣೆವೆ ಇಕ್ಕದೆ ಮಾತಿಗೆ ಮನವಿಟ್ಟಸಣ್ಣದೊಡ್ಡನಾಹನಾರೆಲಮ್ಮಉನ್ಮತ್ತಖಳಸೋಮಕನವೈರಿಹೊಸ ಹೊನ್ನಬಣ್ಣದ ಮಚ್ಛವತಾರಿ ಅಲ್ಲೇನಮ್ಮ 1ಸಾರಿಸಾರಿಗೆ ಉಯ್ಯಾಲಿಡುತಲಿ ಮುಸುಡನುತೋರಿ ಜಾರಿದವನಾರೆಲಮ್ಮಆರಿಗು ಮೀರಿದಮಂದರಬೆನ್ನಲಿಭಾರಾಂತ ಶ್ರೀಕೂರ್ಮನಲ್ಲೇನಮ್ಮ 2ಘರ್ಘರಿಸುತ ಕಾಲಕೆದರಿ ಜಗದಗಲಭೋರ್ಗರೆವುತಲಿಹನಾರೆಲಮ್ಮದುರ್ಘಟ ದೈತ್ಯನ್ನ ದಂಷ್ಟ್ರದಿ ಚುಚ್ಚಿದನಘ್ರ್ಯವರಾಹದೇವನಲ್ಲೇನಮ್ಮ3ಕೂಗುತÀ ಕೊಲ್ಲುತ ಕಿಡಿಯನುಗುಳುತಲಗುಬಗೆದವನಾರೆಲಮ್ಮನೀಗಿದುಷ್ಟನ ಶರಣಾಗತ ಶಿಶುರಕ್ಷಯೋಗಿನರಹರಿ ಅಲ್ಲೇನಮ್ಮ4ಭೂಮಿ ಆಕಾಶಕೆ ಒಬ್ಬನೆ ಹಬ್ಬುತಸೀಮೆಯ ಮುಚ್ಚುವನಾರೆಲಮ್ಮಹೇಮಹೋಮದಿಮತ್ತಬಲಿಯನೊತ್ತ್ಯಾಳಿದಸಾಮದ ವಾಮನನಲ್ಲೇನಮ್ಮ 5ಸಾವಿರ ಕೈಯ್ಯವನಳಿದು ಕಡಿದು ತಾನೆಹೇವದಟ್ಟಿವನಾರೆಲಮ್ಮಈ ವಸುಧೆಯ ಭಾರವಿಳುಹಿದ ವೀರ ಭೂದೇವಕುಲದ ರಾಮನಲ್ಲೇನಮ್ಮ 6ಕರಡಿಕೋಡಗಕೊಂಡು ಕಡಲೊಳಗಾಡಿದಹುರುಡಿಲ್ಲದ ಬಿಲ್ಲನುಳ್ಳನಾರೆಲಮ್ಮಸರಕುಮಾಡಿ ರಕ್ಕಸರನೊದ್ದಸಮೀರಜವರದ ಸೀತಾರಾಮ ಅಲ್ಲೇನಮ್ಮ 7ಬಂಡಿ ಕುದುರಿ ಗೂಳಿ ಹಕ್ಕಿ ಸೀಳಿ ಗೊಲ್ಲಹೆಂಡಿರೊಳಾಡುವನಾರೆಲಮ್ಮಪಾಂಡವಪಾಲ ರುಕ್ಮಿಣಿ ವಿಜಯನುಬಂಡಿಕಾರ ಕೃಷ್ಣನಲ್ಲೇನಮ್ಮ 8ಉಡುಗೆಯನುಡದಂತರಾಟದಿ ಕದ ತಪ? ವಿದ್ದಮಡದೇರ ಕೆಡಿಸಿದನಾರೆಲಮ್ಮಮೃಡಸುರರುಬ್ಬಸಬಡಿಸುವ ಬೌದ್ಧರಕೆಡಿಪ ಮೋಹನ ಬುದ್ಧನಲ್ಲೇನಮ್ಮ 9ವಾಜಿಯನೇರಿ ಠೇವಿಡಿದು ಗಡಬಡಿಸಿಮೂಜಗ ಸುತ್ತುವನಾರೆಲಮ್ಮಮಾಜಿದ ಪುಣ್ಯವನೆತ್ತಿ ಕಲಿಯ ಕೊಂದಸೋಜಿಗದ ಕಲ್ಕಿ ಅಲ್ಲೇನಮ್ಮ 10ಮುಗ್ಧರಾಗಲಿ ಪ್ರೌಢ ಬಂಟರಾಗಲಿ ಕರೆದರೆದ್ದೋಡಿ ಬಂದವನಾರೆಲಮ್ಮಸಿದ್ಧಪುರುಷ ಪ್ರಸನ್ವೆಂಕಟಪತಿಸಾಧಿಸಿ ಪಾಡಿದಲ್ಲಿದ್ದನಮ್ಮ 11
--------------
ಪ್ರಸನ್ನವೆಂಕಟದಾಸರು
ಧನ್ಯ ಧನ್ಯ ನಂದಗೋಕುಲ ಪ.ಆ ನಂದವ್ರಜದ ಪೂರ್ವಪುಣ್ಯವೇನೊಆ ನಂದನಾ ಗೋಪಿಕಂದನಾ ಕಿಶೋರಾನಂದವೇನೊಆನಂದಮುನಿವರದನಾನಂದವೇನೊ ಅ.ಪ.ಗೋವರೆಳೆಯಮ್ರ್ಯಾಳ ನಿವಹದಲ್ಲಿನಿಂತು ರಂಗ ಕೋಹುಕ್ಕಕೋಹೊಹವಳಿ ಹಂಡಿ ಕಾಳಿ ಬಾ ಕೋಹುಕ್ಕ ಕೋಹೊಧವಳಿ ಚಿಂಚಿ ಕಪಿಲೆ ಬಾ ಕೋಹುಕ್ಕ ಕೋಹೊಗೌರಿ ಮೈಲಿ ನೀಲಿ ಬಾಯೆಂದುವಿವರಿಸಿ ಕರೆದು ತೃಣದ ಕವಳವನ್ನೀಡುವಾಆವಿನ್ನಾವ ಸಂಚಿತೊ ಪಾವÀನೆಂತೊ ಪುಲ್ಲಿನಾ 1ಅಮ್ಮೆಶೋದೆ ಕಟ್ಟಿದ ನಿರ್ಮಲ ಕಲ್ಲಿಯ ಬುತ್ತಿಡೋಹಕ್ಕಡೋಹೋತÀಮ್ಮ ಬನ್ನಿರುಣ್ಣ ಬನ್ನಿ ಡೋಹಕ್ಕಡೋಹೊನಮ್ಮ ಬುತ್ತಿ ನಿಮ್ಮ ಬುತ್ತಿ ಡೋಹಕ್ಕಡೋಹೊನಮ್ಮ ನಿಮ್ಮುಪ್ಪಿನಕಾಯಿ ಡೋಹಕ್ಕಡೋಹೊಕಮ್ಮಗಿಹುದೆಂದು ಕೊಡುವ ಒಮ್ಮೆ ಸೆಳೆದು ಮೆಲ್ಲುವಾ ಉತ್ತಮ್ಮರಾವ ಜೀವರೊ ಧರ್ಮದೊದಗೆಂತುಟೊ 2ಮಾಧವಮಂಜುಳ ಶಬ್ದದೂದುವ ಸುವರ್ಣವೇಣುನಾದಸ್ವಾದ ಲುಬ್ಧರಾದರಾ ಗೋಪಕನ್ಯೇರುನಾದಸ್ವಾದ ಲುಬ್ಧವಾದವಾ ಗೋವತ್ಸವುನಾದಸ್ವಾದ ಲುಬ್ಧವಾದವಲ್ಲಿ ವೃಕ್ಷವುಆದರಿಪ ನಾರಿಯರಗಾಧ ತಪವಲ್ಲವೆಪಾದಪ ಪಶುಗಳೆಲ್ಲ ಆ ದೇವರ್ಕಳಲ್ಲವೆ 3ತುರುವ ಮೇಯಿಸಿ ವ್ರಜಕೆ ಮರಳಿಸಿಗೋಪಾಲರೇಯ ಹೈಯಿ ಹೈಯೆಂದುತರುಬಿ ತಡೆಯಿರೆನ್ನುತ ಹೈಯಿ ಹೈಯೆಂಬಸ್ವರದಿ ಕೊಳಲನೂದುತ ಹೈಯಿ ಹೈಯೆಂದುಭರದಿಚೆಂಡು ಚಿಮ್ಮುತ ಹೈಯಿಹೈಯೆಂದುಧರೆಯ ಮೇಲಿಂಬಾಡುವ ಕರದ ದಂಡಿಗೇರುವತರಳರಾವ ಭಾಗ್ಯರೊ ಧರಣಿ ಯಾವ ಮಾನ್ಯಳೊ 4ಒಪ್ಪುವ ಗೋಧೂಳಿ ಮೈಯಲಿಪ್ಪ ಪೊಂದೊಡಿಗೆ ಚೆಲ್ವಶಾಮಲಾಮಲಾಂಗಗುಪ್ಪಾರತ್ಯೆತ್ತಿದರು ಶಾಮಲಾಮಲಾಂಗಗೆಕುಪ್ಪಿರಿವ ಕರುಗಳ ಶಾಮಲಾಮಲಾಂಗದÀರ್ಪಿನಾವ ರಂಬಿಸೆ ಶಾಮಲಾಮಲಾಂಗಕ್ಷಿಪ್ರಪಾಲ್ಗರೆದು ನಂದ ಗೋಪಾಂಗನೆಯರೀವ ನಮ್ಮಪ್ಪ ಪ್ರಸನ್ನವೆಂಕಟಾಧಿಪ್ಪನೆಂದು ಕಾಂಬೆನಾ 5
--------------
ಪ್ರಸನ್ನವೆಂಕಟದಾಸರು
ಧ್ವಜದತಿಮ್ಮಪ್ಪ ಪಲ್ಲಕಿಯೇರಿ ತನ್ನಯ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ನಿಜಗಿರಿಯಾತ್ರೆಗೈದಿದ ಹರುಷವಕೇಳಿಪ.ಬಲದಲಬುಜಭವ ಭವಾದಿಗಳೆಡದಲಿ |ಉಲಿವ ವೇದ - ಉಪನಿಷದುಗಳು ||ಸಲುಗೆಯಲಿ ಸನಕಾದಿಗಳು ಸೇವಿಸೆ ಮುನ್ನ |ಹಲವು ಋಷಿ - ಮುನಿನಿಕರ ಹಿಂದೆ ಬರುತಿರಲು 1ಛತ್ರವ ಶಚಿ ಚಾಮರವ ಢಾಳಿಸೆ ಇಂದ್ರ |ಚಿತ್ತಜಾತನು ವ್ಯಜನವ ಬೀಸಲು ||ಹೊತ್ತು ಮಾರುತಿ ಹಡಪ ಹೊಳೆವೆಲೆಗಳ ಕೊಡಲು |ಹಸ್ತದ ಕಾಳಂಜಿ ಹರಿಣಾಂಕನು ಬರೆ 2ವರುಣನು ಸ್ವಾದುಜಲವ ಪಿಡಿದು ಬರೆ |ತರುಣಿ ತನಗೆ ಆಧಾರದಂತಿರಲು ||ಸುರರು ಸುಮನಗಳಿಂದ ಸರ್ವರು ತಮತಮ್ಮ |ಪರಿಪರಿ ಆಯುಧಗೊಂಡು ಬಳಸಿಬರೆ 3ಮಂದರ ಮಧ್ಯಮತಾರಕ ಮೋಹನ |ದಿಂದ ಗಂಧರ್ವರು ಗಾನಮಾಡೆ ||ತೋಂಧಿಮಿಧಿಮಿಕೆಂದು ತಾಳಮೇಳದೆ ನಾ - |ರಂದ ಪಾಡಲು ಆಡುತಾಡುತ ಬರುತಿರೆ 4ಲೋಕನಾಯಕ ಲೋಕೈಕ ರಕ್ಷಾಮಣಿ |ಸಾಕಾರರೂಪ ಸದ್ಗುಣಭರಿತ ||ವೆಂಕಟೇಶ ವ್ಯಾಸಮುನಿವರದನಾದ ಕರು - |ಣಾಕರ ಪುರಂದರವಿಠಲನು ಗರುಡ 5
--------------
ಪುರಂದರದಾಸರು
ನಂದನ ಕಂದ ಗೋವಿಂದ ಮುಕುಂದಇಂದಿರಜವಂದಿತ ಇಂದುಕುಲೇಂದ್ರ ಪ.ಗೋರಸಚೋರ ಗೋಪೀರಮಣ ಧೀರಗೋರಜಪೂರಿತಚಾರುಅಲಂಕಾರಗೋರಕ್ಷ ಕ್ರೂರಸಂಹಾರ ಉದಾರವೀರ ಸುಯಮುನಾತೀರ ವಿಹಾರ 1ಶೇಷಶೀರ್ಷನೃತ್ಯ ಹಾಸ ವಿಲಾಸವಾಸವಮದನಾಶ ವ್ರಜಪೋಷ ನಿರಾಶರಾಸಕ್ರೀಡಾಸುಖಾಧೀಶ ರಮೇಶದಾಸಾಕ್ರೂರಾಶ್ರಯ ಕಂಸವಿನಾಶ 2ಪುಣ್ಯಗುಣಾನ್ವಿತ ಸುವರ್ಣವೇಣುಗಾಯನ್ನಚಿನ್ಮಯಪನ್ನಗನಾಗನಿಲಯ ಪೂರ್ಣಮನ್ನಿಸು ನಿನ್ನ ಭೃತ್ಯನ್ನ ಪ್ರಸನ್ವೆಂಕಟ ಧನ್ಯ ಇವ ನನ್ನವನೆನ್ನೆ 3
--------------
ಪ್ರಸನ್ನವೆಂಕಟದಾಸರು
ನಮೋ ಮಾಧವಾ |ಸುಜನಬಾಂಧವಾ |ನಮೋ ಕುಮುದನಯನಾ ಪಸುಮನಸಾದಿ ಮುನಿನಿಕರ ನಮಿತಪದ |ಪದ್ಮಚಕ್ರಧಾರೀ ಶ್ರೀ ಶೌರೀ ||ನಮೋ 1ರಂಗವಿಠಲ ನೀಲಾಂಗ ಜಯತು ನರಸಿಂಗಸುಜನಸಂಗಾ ||ಅಂಗಜಪಿತಕಾಳಿಂಗಮಥನಸಂಗೀತ ಗಾನಲೋಲಾ ಗೋಪಾಲ ||ನಮೋ|| 2ಇಂದಿರೇಶಅರ| ವಿಂದ ಹೃದಯ ಆ- |ನಂದ ಚಂದ್ರವದನಾ ||ಸಿಂಧುಶಯನಭವ| ಬಂಧಹರಣಗೋವಿಂದದಾಸನ ಪ್ರೆೀಮಿೀ.......|| ನಮೋ || 3
--------------
ಗೋವಿಂದದಾಸ
ನಾನೆಲ್ಲ್ಲು ಪೋಗಲಿಲ್ಲ ನಾರಿಯರೆನ್ನದೂರುವರಿದ ನೋಡಮ್ಮ ಪವಾರಿಗೆಯ ಗೆಳತಿಯರು ಸೇರುತಕೂಡಿ ಮಾತುಗಳಾಡಿ ನಗುವರುಚಾಡಿ ಮಾತುಗಳ್ಹೇಳ ಬರುವರುಕೇಳಿಮನದಲಿ ಕೋಪಿಸದಿರುಅ.ಪಬ್ರಹ್ಮನ ಪಿತನೆಂಬೊರೊ ಎನ್ನನು ಪುಟ್ಟಸಣ್ಣ ಕೂಸೆಂದರಿಯರೆಬ್ರಹ್ಮಾಂಡೋದರನೆಂಬೋರೇ ಕೇಳಮ್ಮಯ್ಯಸಣ್ಣುದುರನೆಂದರಿಯರೆಬೆಣ್ಣೆ ಕಳ್ಳನು ಸಣ್ಣವನು ಎಂದುಕಣ್ಣು ಸನ್ನೆಗೆ ಚಂದ ನಗುವರುಚಿನ್ನನೆಂದು ಮುದ್ದಿಸುವರೆನ್ನುತಕನ್ಯೆಯರು ಅಪಹಾಸ್ಯ ಮಾಳ್ಪರು 1ನೀರ ಪೊಕ್ಕವನೆಂಬೋರೆ ವೇದ ತಂದಿತ್ತನಾರುವ ಮಯ್ಯವನೆಂಬೋರೇಭಾರಪೊತ್ತವನೆಂಬೋರೇ ಮೋರೆ ತಗ್ಗಿಸಿದಘೋರರೂಪನು ಎಂಬೋರೇಕೋರೆ ದಾಡಿಯ ನೆಗಹಿ ಧರಣಿಯಶೂರ ಹಿರಣ್ಯಾಕ್ಷಕನ ಸೀಳಿದಕ್ರೂರ ರೂಪವ ಧರಿಸಿ ಕರುಳಿನಮಾಲೆ ಹಾಕಿದ ಧೀರನೆಂಬೋರು 2ಮೂರು ಪಾದದ ಭೂಮಿಯ ಬೇಡಲು ಬ್ರಹ್ಮ-ಚಾರಿಯಾದನು ಎಂಬೋರೇಮೂರು ಏಳೆನಿಸಿಕೊಂಡು ಧರಣಿಯ ಸುತ್ತಿದಧೀರ ರಾಮನು ಎಂಬೋರೇನಾರು ವಸ್ತ್ರವ ಧರಿಸಿವನವನಸೇರಿವಾನರರೊಡನೆ ಚರಿಸಿದನಾರಿಯರ ವಸ್ತ್ರಗಳ ಕದ್ದ ನವ-ನೀತ ಚೋರನೆಂದೆನಿಸುತ ನಗುವರು 3ಬತ್ತಲಿರುವನೆಂಬೋರೇ ತ್ರಿಪುರಗೆದ್ದಉತ್ತಮಹರಿಎಂಬೋರೇಉತ್ತುಮಾಶ್ವವನೇರುತ ಧರೆಯಲಿ ಮೆರೆದಮತ್ತೆ ರಾವುತನೆಂಬೋರೇಹತ್ತು ವಿಧದಲಿ ಅವತರಿಸಿ ನಿಜಭಕ್ತರನು ರಕ್ಷಿಸಿದೆನೆಂಬೋರುಮುಕ್ತಿದಾಯಕ ಹರಿಗೆ ಸಮರುಅಧಿಕರ್ಯಾರಿಲ್ಲೆನುತ ನಗುವರು 4ಮುದ್ದು ಮಾತಗಳಕೇಳಿಸಂಭ್ರಮದಿಂದಎದ್ದು ಮಗನನಪ್ಪುತಶ್ರದ್ಧೆಯಿಂದಲಿ ನೋಡುವ ತೊಡೆಯಲಿಟ್ಟುಮುದ್ದಿಸಿ ನಸುನಗುತಾಪದ್ಮನಾಭಶ್ರೀ ಕಮಲನಾಭನ ವಿ-ಠ್ಠಲನ ಮುಡಿನೇವರಿಸಿ ಹರುಷದಿತಿದ್ದುತಲಿ ಮುಂಗುರಳು ನಗುಮುಖಮುದ್ದಿಸುತ ಮುದದಿಂದ ನಲಿವಳು 5ಲಾಲಿಸಿದಳು ಮಗನ ಗೋಪೀದೇವಿಲಾಲಿಸಿದಳು ಮಗನ
--------------
ನಿಡಗುರುಕಿ ಜೀವೂಬಾಯಿ