ಒಟ್ಟು 1351 ಕಡೆಗಳಲ್ಲಿ , 104 ದಾಸರು , 1023 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ವಿಷ್ಣು ತೀರ್ಥರು (ಮಾದನೂರು) ಶ್ರೀ ವಿಷ್ಣು ತೀರ್ಥರೆ ನಮೋ ಪ ತಾಮರಸ ಭ್ರಮರರೆಂದನಿಸೂವಲೌಕಿಕ ಸುವೈದಿಕ ಸುಶಬ್ದ ಜಾತವಸಾರ್ವಭೌಮ ಹರಿಗನ್ವಯಿಪರಂ ಭಜಿಸುತ್ತ ಇಷ್ಟಾರ್ಥವಂ ಪಡೆಯಿರೊ ಅ.ಪ. ಸವಣೂರು ಸನಿಯ ಸಿದ್ಧಾಪುರದ ಸೀಮೆಯಲಿಅವಸಿತರು ಬಾಲ ಆಚಾರ್ಯ ಭಾಗೀರ್ಥಿ ಎಂಬುವರು ಸದ್ಧರ್ಮರತರೆನಿಸಿ ಜಯತೀರ್ಥರಂ ಸೇವಿಸಲು ಬಹು ಭಕುತಿಲಿ |ಅವರನುಗ್ರಹ ಜಾತ ವರಶಿಶುವಿಗವರ ನಾಮವನಿಟ್ಟು |ಕಾಲದೊಳಗುಪನಯ ನವಂ ಮಾಡಿ ಸರ್ವ ವೇದ ವೇಂದಾಗ ಪಾರಂಗತರು ಐಜಿ ಆಚಾರ್ಯರಲಿ ಬಿಡಲು 1 ಕುಶಲತೆಯು ಮತ್ತೆ ಸೌಶೀಲ್ಯ ಗುಣನಿಧಿ ಎನಿಪಶಿಷ್ಯನಿಗೆ ಸಚ್ಛಾಸ್ತ್ರ ಪಾರಂಗತನು ಎನಿಸಿಒಸೆದು ದ್ವಿತಿಯಾಶ್ರಮಕೆ ಚೋದಿಸಿ ಕಳುಹಲವ ಗೃಹಧರ್ಮ ಸ್ವೀಕರಿಸುತ |ಎಸೆವ ಕೀರ್ತಿಲಿ ಮೆರೆದು ಶಿಷ್ಯರಿಗೆ ಶಾಸ್ತ್ರ ಬೋ-ಧಿಸುತಲಿರಲು ಸತ್ಸಂತಾನವಂತರಾಗುತಎಸೆವ ಹಂಸತೂಲಿಕ ತಲ್ಪದೊಳು ಪವಡಿಸಿರೆ ಅಪರಾಹ್ನ ರೋಗಾರ್ತರು 2 ಪತಿ ಪುರಂದರ ಸುದಾಸಾರ್ಯ ನುಡಿದುದನುಅಂತೆ ಮಂಚ ಬಾರದು ಮಡದಿ ಬಾರಳು ಎಂಬಪಿಂತಿನ್ವಚನವ ಕೇಳಿ ಚಿಂತಿಸುತ್ತಿರೆ ತಮಗೆ ಜಾತಿ ಸ್ಮøತಿ ಒದಗುತಿರಲು 3 ಘನವಾದ ಐಶ್ವರ್ಯ ಸತಿಸುತರು ಬಂಧುಗಳತೃಣಕೆ ಸಮ ತಿಳಿಯುತ್ತ ಜಯ ಗುರೂ ಹೃದ್ಗತವಅನು ಸರಿಸೆ ಅಜ್ಞಾತ ಬಗೆಯಲಿರುತಿಹನೆಂದು ವೈರಾಗ್ಯವನೆ ಪೊಂದುತ ||ಮನೆಯಿಂದ ಹೊರ ಹೊರಟು ಅನತಿ ದೂರವಸಾಗೆಘನ ಸರ್ಪ ರೂಪದಿಂ ತೋರಿ ಕೊಳೆ ಜಯತೀರ್ಥ ಮುನಿವರ್ಯ ಹೃದ್ಗತವ ತಿಳಿದು ವಸುಮತಿ ವ್ಯರ್ಥ ಸಂಚರಣೆ ಸಂತ್ಯಜಿಸುತ 4 ಶೃತಿ ಸ್ಮøತಿಗೆ ಸಮ್ಮತವು ದಶಮತಿಯ ಸಮಯವೆನುತತಿ ಹಿತದಿ ಪ್ರವಚನೆಗೆ ಪ್ರೇರಿಸಿಹ ಗುರುಮತವ ಸತ್ಕರಿಸಿ ಕಾರುಣ್ಯ ಕೊಂಡಾಡಿ ಸಾಧಿಸಲು ತೃತಿಯಾಶ್ರಮವನು ||ಹಿತದಿ ಕೈಕೊಂಡು ಮಲವ ತಾನಪಹರಿಪಸರಿತೃತಟದಲಿ ಇರುವ ಮನುವಳ್ಳಿ ಪಳ್ಳಿಯಲಿ ನೆಲಿಸುತಲಿ ವಿಹಿತ ಕರ್ಮಾಚರಿಸಿ ಸಿರಿಮತ್ಸು ಮಧ್ವ ವಿಜಯವ ಪಠಿಸುತಿಹರು 5 ಸಂಚಿತ ಸಿರಿ ವಿಷ್ಣುತೀರ್ಥರೆಂಬಂಕಿತದಿ ಮೆರೆಯುತಿಹರು 6 ಭಾಗವತ ಸಾರದುದ್ಧಾರವನುಮುಂತಾದ ಮುಕುತಿ ಸತ್ಪಂಥಗಳ ಬೋಧಿಪಗ್ರಂಥಗಳ ರಚಿಸಿ ಸುಜನೋದ್ಧಾರವನೆ ಗೈದು ಶೋಭಿಸುವರವನಿಯಲ್ಲಿ 7 ಲಕ್ಷುಮಿಯು ನರೆಯಣರನುಗ್ರಹವನೇ ಪಡೆದುದಕ್ಷಿಣದಿ ಬದರಿಕಾಶ್ರಮವೆನುತಿರೆ ಮೆರೆವತ್ರಕ್ಷ್ಯ ಮೋದೇಶ್ವರ ಪುರದಲಿ ನೆಲಿಸಿ ನೂರೆಂಟು ಸಲ ಸುಧೆ ಪ್ರವಚಿಸುತಲಿ ||ಕುಕ್ಷಿಯೊಳಗುಳ್ಳ ಸು ಕ್ಷೇತ್ರಗಳ ಸಂಚರಿಸಿ ಲಕ್ಷಿಸುತ || ಯೋಗ್ಯ ಜನಕುಪದೇಶ ಚರಿಸಲುಸ್ವಕ್ಷೇತ್ರಕೇ ಮರಳಿ ಕುಶಸರಿತು ತೀರದಲಿ ಪರ್ಣ ಶಾಲೆಯಲಿ ವಸಿಸಿ 8 ಕಾಲ ತಾ ತಿಳೀಯುತ್ತ ಶಿಷ್ಯಜನಕರಿವಿತ್ತು ಶಾಲಿವಾನ ಸಹಸ್ರ ಷಟ್ಯತೊತ್ತರವಷ್ಟಸಪ್ತತಿಯು ಮಾಘಾಸಿತ ಪಕ್ಷ ತ್ರಯೋದಶಿ ಸುಮೂಹೂರ್ತದಿ ||ಸುರರು ಭೂಸುರರೆಲ್ಲ ಜಯಘೋಷ ಗೈಯ್ಯುತಿರೆವರ ಮಹಾತ್ಮರು ಆಗ ಹೊಗಲು ವೃಂದಾವನವಪರಿಜನರು ಮುಳುಗಿದರು ದುಃಖ ಆನಂದ ಸಾಗರದಲದನೇನೆಂಬನು 9 ಅವತಾರಮಾರಭ್ಯ ಐದು ದಶ ವರ್ಷಗಳುಅವನಿಜನ ದೃಗ್ವಿಷಯರೀ ಮಹಾತ್ಮರು ತಾವುಅವಧೂತ ವೇಷದಿಂ ಭವನ ಪಾವನವೆನಿಸಿ ಪಿಂತೆ ಶುಕಮುನಿಯಂದದಿ ||ಪವನ ಮತ ಶರನಿಧಿಗೆ ಶಶಿಯು ಇಪ್ಪತ್ತೆಂಟುಪವಿತರ ಸುಲಕ್ಷಣ ಸುತನುವಿಂದುರೆ ಮೆರೆದುಅವನಿಸುರ ಶಿಕ್ಷಣ ಸದುಪದೇಶನುಷ್ಠಾನದಿಂ ಗೈದ ಕೀರ್ತಿಯುತರು 10 ಇವರ ನಾಮಸ್ಮರಣೆ ಕಲಿಮಲದ ಅಪಹರಣೆಇವರ ಸೇವೆಯ ಫಲವು ಸರ್ವಾಮಯ ಹರವುಇವರುನುಗ್ರಹವಿರಲು ವಾದಿನಿಗ್ರಹವಹುದು ಇದಕೆ ಸಂಶಯ ಸಲ್ಲದು ||ಇವರಿಹರು ಸುರತರುವಿನಂದದಲಿ ಶರಣರಿಗೆಇವರೆ ಚಿಂತಾಮಣಿಯು ಸರ್ವ ಭಯ ಹರಿಸುವರು ಇವರ ಗುಣಕೊಂಡಾಡಿ ಇವರೊಲಿಮೆ ಅರ್ಜಿಸಲು ಸರ್ವಕಾಮವು ಲಭ್ಯವು 11 ಸರ್ವಕ್ಷೇತ್ರಾಧಿಕದಿ ಭೂವರಹ ನಿಲ್ಲಿರುವಸರ್ವಭಯ ನಾಶನಕೆ ನರಹರಿಯು ಅರಿರೂಪಸರ್ವಭಕ್ತರ ಭೀಷ್ಟ ವರ್ಷಣಕೆ ಗೋಪಾಲಕೃಷ್ಣರೂಪದಿ ಇರುವನು ||ಇವರ ವೃಂದಾವನದೊಳೀ ಪರೀ ಹರಿರೂಪಪವನ ರೂಪಗಳಿಹವು ಶಿರದೊಳಗೆ ಜಯ ಮುನಿಯುಸರ್ವಋಷಿ ದೇವತೆಗಳಿಹರು ವೃಕ್ಷರೂಪದಿ ಈ ಪವಿತರ ಕ್ಷೇತ್ರದಿ 12 ಭಾಗವತ ನಿಷ್ಠಾತರೆ ||ನಮೊ ನಮೋ ಭಕ್ತಜನ ಕಾಮಧುಕ್ ಭವ್ಯಾತ್ಮನಮೋ ಶ್ರೀ ಮದಾನಂದ ಮುನಿಚರಣ ಮಧುಪರೆನಮೊ ಗುರೂ ಗೋವಿಂದ ವಿಠಲ ಪಾದಾಶ್ರಿತರೆ ನಮೊ ವಿಷ್ಣುತೀರ್ಥ ಪಾಹಿ ||
--------------
ಗುರುಗೋವಿಂದವಿಠಲರು
ಶ್ರೀ ವೆಂಕಟಾಚಲ ನಿವಾಸ ನಿನ್ನ ಸೇವಾನುಸೇವಕರ ದಾಸಾ ಎನಿಸಿ ಜೀವಿಸುವ ನರಗೆ ಆಯಾಸಾ ಯಾಕೆ ಶ್ರೀವರನೆ ಕೊಡು ಎಮಗೆ ಲೇಸಾ 1 ಕಂಸಾರಿ ಪ್ರಭು ನಿನ್ನ ದಿವ್ಯ ನಾಮ ಒದಗಲು ಜಿಹ್ವೆಗೆನ್ನಾ ದೋಷ ಸೀಮೆಗಾಣದಿದ್ದರೆನ್ನ ಸ್ವಾಮಿ ನೀ ಮರೆಯಲಾಗದು ಸುಪ್ರಸನ್ನ 2 ನೀಚ ಯೋನಿಗಳಲ್ಲಿ ಬಂದೆ ಇನ್ನು ನಾಚಿಕಿಲ್ಲವೊ ಎನಗೆ ತಂದೆ ನೀನೆ ಮೋಚಕನು ಬಿನ್ನಪ ವಿದೆಂದೆ ಸವ್ಯ ಸಾಚಿಸಖ ಕೈಪಿಡಿಯೋ ತಂದೆ 3 ನಾನೊಬ್ಬನೇ ನಿನಗೆ ಭಾರವಾದೆ ನೇನೊ ಸಂತತ ನಿರ್ವಿಕಾರ ಎನ್ನ ಹೀನತ್ವ ನೋಡಲ್ಕಪಾರ ಚಕ್ರ ಪಾಣಿ ಮಾಡಿದಿರೆನ್ನ ದೂರ 4 ಕಂಡ ಕಂಡವರಿಗಾಲ್ಪರಿದು ಬೇಡಿ ಬೆಂಡಾದೆ ನಿನ್ನಂಘ್ರಿ ಮರೆದು ದಿಟ ತೊಂಡವತ್ಸಲನೆಂಬ ಬಿರುದು ಕಾಯೊ ಪುಂಡರೀಕಾಕ್ಷ ನೀನರಿದು 5 ಈ ಸಮಯದೊಳೆನ್ನ ತಪ್ಪ ನೋಡಿ ನೀ ಸಡಿಲ ಬೇಡುವರೇನಪ್ಪ ನಿನ್ನ ದಾಸರ್ಪೆಸರ್‍ಗೊಳಲು ಬಪ್ಪಾ ದೋಷ ನಾಶವಾಗೋದು ತಿಮ್ಮಪ್ಪ 6 ಕಾಮಾದಿಗಳ ಕಾಟದಿಂದ ನಿನ್ನ ನಾ ಮರೆದೆ ಸಚ್ಚಿದಾನಂದ ಎನ್ನ ಈ ಮಹಾ ದೋಷಗಳ ವೃಂದ ನೋಡದೆ ನೀ ಮನ್ನಿಸೆನ್ನ ಮುಕುಂದ 7 ನೀ ಪಿಡಿದವÀರ ಸಹಸ್ರಾರ ಸುಜನ ಪಾಪಾಟವಿಗೆ ಸುಕುಠಾರಾ ಜಗ ದ್ವ್ಯಾಪಕನೆ ಎನ್ನ ಸಂಸಾರ ಘೋರ ಕೊಪದಿಂದೆತ್ತಯ್ಯ ಧೀರ 8 ಸಿಂಧೂರ ರಾಜ ಪರಿಪಾಲ ಕೋಟಿ ಕಂದರ್ಪ ಲಾವಣ್ಯ ಶೀಲ ಧರ್ಮ ಮಂದಾರ ಭೂಜಾಲಪಾಲ ಯೋಗಿ ಸಂದೋಹ ಹೃತ್ಕುಮುದ ಶೀಲಾ 9 ಶಿವನ ವೈರಿಯ ಕೊಂದ ಶಕ್ತ ಪುಣ್ಯ ಶ್ರವಣ ಕೀರ್ತನ ನಿನ್ನ ಭಕ್ತಾ ಜನರ ಭವದೊಳಗೆ ದಣಿಸುವುದು ಯುಕ್ತವೇನೊ ಭುವನ ಪಾವನ ನಿತ್ಯಮುಕ್ತ 10 ಶ್ರೀಕರ ಶ್ರೀಮದಾನಂತ ನಿಖಿಳ ಲೋಕೈಕನಾಥ ನಿನ್ನಂಥ ಸಖರ ನಾ ಕಾಣೆನೆಲ್ಲಿಯೂ ಮಹಂತಾ ಎನ್ನ ನೀ ಕಾಯೋ ಕಂಡ್ಯ ಭೂಕಾಂತಾ 11 ಕರ್ಮ ಚಿತ್ರತ್ವಗ್ರಸನ ಕಾಯ ಕರಣ ಮನಹಂಕಾರ ಘ್ರಾಣಾ ಬುದ್ದಿ ಚರಣ ಪಾಯೂಪಸ್ಥ ನಯನಜಾತ ಉರುಪಾಪ ಕ್ಷಮಿಸು ಶ್ರೀ ರಮಣಾ 12 ಅನಿಮಿತ್ತ ಬಂಧು ನೀಯೆನ್ನ ಬಿಡುವು ದನುಚಿತವೋ ಲೋಕಪಾವನ್ನ ಚರಿತ ಮನ ವಚನ ಕಾಯದಲಿ ನಿನ್ನ ಪಾದ ವನಜ ನಂಬಿದೆ ಸುಪ್ರಸನ್ನಾ 13 ನೀನಲ್ಲದೆನಗೆ ಗತಿಯಿಲ್ಲ ಪವ ಮಾನವಂದಿತ ಕೇಳೋ ಸೊಲ್ಲ ಎನ್ನ ಜ್ಞಾನೇಚ್ಛೆ ಕ್ರಿಯಂಗಳೆಲ್ಲಾ ನಿನ್ನ ಧೀನವಲ್ಲವೆ ಲಕ್ಷ್ಮೀನಲ್ಲಾ 14 ಪ್ರಾಚೀನ ಕರ್ಮಾಂಧ ಕೂಪದೊಳಗೆ ಯೋಚಿಸುವ ನರರ ಸಂತಾಪ ನಿನಗೆ ಗೋಚರಿಸದೇನೋ ಬಹುರೂಪ ವೆಂಕ ಟಾಚಲನಿಲಯ ಪಾಹಿ ಶ್ರೀಪಾ 15 ಯಾಕೆ ದಯ ಬಾರದೆನ್ನಲ್ಲಿ ನರಕ ನಾಕ ನರಕ ಭೂ ಲೋಕಂಗಳಲ್ಲಿ ಚರಿಸಿ ನಾ ಕಷ್ಟಪಟ್ಟ ಬಗ್ಗೆ ನೀ ಬಲ್ಲಿ ವೀತ ಶೋಕ ಕೊಡು ಭಕುತಿ ನಿನ್ನಲ್ಲಿ 16 ಬನ್ನ ಬಡಿಸುವರೇನೋ ಬಿಡದೆ ನಾನು ಮುನ್ನ ಮಾಡಿದ ಪಾಪ ಕೆಡದೆ ನೀ ಪ್ರ ಪನ್ನ ವತ್ಸಲನೆಂದು ನುಡಿದೆ 17 ತಾಪತ್ರಯಗಳಿಂದ ನೊಂದೆ ಮಹಾ ಪಾಪಿಷ್ಠರಲ್ಲನ್ನ ತಿಂದೆ ಇನ್ನು ಆಪರೇತೇಶ್ವರನ ಮುಂದೆ ಪೋಗಿ ನಾ ಪೇಕೊಳಲೇನು ತಂದೆ 18 ದೇಹ ಸಂಬಂಧಿಗಳ ಸಹಿತವಾಗಿ ನಾ ಹೊಂದಿದೆನು ಲೋಕಮೋಹಿತ ಎನ್ನ ಮೋಹಿಪ್ರದು ನಿನ್ನಗೇನು ವಿಹಿತ ಹೃದಯ ಬಾಹಿರಂತರದಿ ಸನ್ನಿಹಿತ 19 ಪೋಗುತಿದೆ ದಿವಸ ಕಮಲಾಕ್ಷ ಪರಮ ಅಪರೋಕ್ಷ ಎನಗೆ ಹೇಗಾಗುವುದೊ ಸುರಾಧ್ಯಕ್ಷ ದುರಿತ ನೀನು ಕಾಮಿತ ಕಲ್ಪವೃಕ್ಷ 20 ಗತಿಯಾರು ನಿನ್ನುಳಿದು ದೇವ ರಮಾ ಸಂಜೀವ ಎನ್ನ ಸತಿಸುತರ ಅನುದಿನದಿ ಕಾವ ಭಾರ ಸತತ ನಿನ್ನದು ಮಹಾನುಭಾವ 21 ದೊಡ್ಡವರ ಕಾಯ್ವುದೇನರಿದು ಪರಮ ದಡ್ಡರನು ಕಾಯ್ವದೇ ಬಿರುದು ಎನ್ನ ಗುಡ್ಡದಂತಹ ಪಾಪ ತರಿದು ಕಾಯೋ ವಡ್ಡಿ ನಾಯಕ ಸಾರೆಗರದೊ 22 ಜ್ಞಾನಿಗಳು ನೀಚರಲಿ ಕರುಣಾ ಮಾಡ ರೇನೋ ಬಿಡುವರೇ ರಥಚರಣ ಪಾಣಿ ಭಾನು ಚಂಡರವಿಕಿರಣ ಬಿಡದೆ ತಾನಿಪ್ಪನೆ ರಮಾರಮಣ23 ಆಡಲ್ಯಾತಕೆ ಬಹಳ ಮಾತಾ ಪರರ ಬೇಡಲಾರೆನೋ ಜಗತ್ರಾತಾ ಹೀಗೆ ಮಾಡುವರೇ ಕೆಳೆನ್ನ ಮಾತ ನೀನೆ ನೀಡೆನಗೆ ಪುರುಷಾರ್ಥ ದಾತಾ 24 ಬೇಡಲೇತಕೆ ಬಹಳ ಮಾತಾ ಎನ್ನ ಕೇಡು ನಿನ್ನದಲ್ಲೇ ಬಲಿದೌತ ಪಾದ ಬೇಡಿಕೊಂಬುವೆ ನಾನನಾಥ ದೂರ ನೋಡಲಾಗದು ಪಾರ್ಥಸೂತ 25 ನಿತ್ಯ ಬಿಡದೆ ಶಾರದೇಶನ ನುತಿಪ ಭಕ್ತ ಜನರ ಪಾರ ಸಂತೈಸುವುದು ಮಿಥ್ಯವಲ್ಲ ಶ್ರೀರಮಣ ಸಾಕ್ಷಿದಕೆ ಸತ್ಯಾ 26 ಪರಿಯಂತ ಶಯನ ಪ್ರಣತಾರ್ತಿ ಹರನೆಂಬೊ ಅಂಕಾ ಕೇಳಿ ಮಣಿದ ನಿನ್ನಂಘ್ರಿಗೆ ಶಶಾಂಕಾ ಭಾಸ ದಣಿಸಲಾಗದು ನಿಷ್ಕಳಂಕಾ27 ಕಾರ್ತವೀರ್ಯಾಜುನನ ಕೊಂದ ಭವ್ಯ ಕೀರ್ತಿ ನಿನ್ನಾನಂದ ವೃಂದ ಸತತ ಕೀರ್ತಿಸುವ ನರರ ಬಹುಕುಂದ ನೋಡ ದಾರ್ತನ್ನ ಪೊರೆಯೊ ಗೋವಿಂದ 28 ದಯದಿಂದ ನೋಡೆನ್ನ ಹರಿಯೆ ಜಗ ನ್ಮಯನೆ ಜ್ಞಾನಾನಂದ ವೃಂದ ಸಿರಿಯೆ ಮನಾ ಭಯದೂರರಿನ್ನೊಬ್ಬರರಿಯೇ 29 ನರಸಿಂಹ ನಿನ್ನುಳಿದು ಜಗವ ಕಾಯ್ವ ಪರಮೋಷ್ಠಿ ರಾಯನು ನಗುವ ನಿತ್ಯ ನಿರಯಾಂಧ ರೂಪದೊಳು ಹುಗಿವಾ 30 ದಾಸ ದಾಸರ ದಾಸನೆಂದು ಬಿಡದೆ ನೀ ಸಲಹೋ ಎನ್ನನೆಂದೆಂದೊ ನಿನ್ನ ನಾ ಸೇವಿಸುವೆ ಕೃಪಾಸಿಂಧು ಎಮ್ಮನು ದಾಸಿಸದÀನಿಮಿತ್ತ ಬಂಧೂ 31 ಎಂದೆಂದು ನೀ ಬಡವನಲ್ಲ ನಿನ್ನ ಮಂದಿರದೊಳಗೆ ಬಲ್ಯಲ್ಲಾ ಚಿದಾ ನಂದ ನೀ ಭಕ್ತ ವತ್ಸಲ್ಲಾ 32 ಕಾಮಿತಪ್ರದನೆಂಬ ಬಿರಿದು ಕೇಳಿ ನಾ ಮುದದಿ ಬಂದೆನೋ ಅರಿದು ಎನ್ನ ತಾಮಸ ಮತಿಗಳೆಲ್ಲ ತರಿದು ಮಮ ಸ್ವಾಮಿ ನೋಡೆನ್ನ ಕಣ್ದೆರದು33 ಹಿತವರೊಳು ನಿನಗಧಿಕರಾದ ತ್ರಿದಶ ತತಿಗಳೊಳು ಕಾಣೆನೋ ಪ್ರಮೋದ ನೀನೆ ಗತಿಯೆಂದು ನಂಬಿದೆ ವಿವಾದವ್ಯಾಕೊ ಪತಿತಪಾವನ ತೀರ್ಥಪಾದ 34 ಮಡದಿ ಮಕ್ಕಳು ತಂದೆ ತಾಯಿ ಎನ್ನ ಒಡಹುಟ್ಟಿದವರ ನೀ ಕಾಯಿ ಲೋಕ ದೊಡೆಯ ನೀನಲ್ಲದಿನ್ನಾರೈ ಎನ್ನ ನುಡಿ ಲಾಲಿಸೋ ಶೇಷಶಾಯಿ 35 ಅನುಬಂಧ ಜನರಿಂದ ಬಪ್ಪ ಕ್ಲೇಶ ವನುಭವಿಸಲಾರೆ ಎನ್ನಪ್ಪ ಉದಾ ಸೀನ ಮಾಡಿ ದಯಮಾಡದಿಪ್ಪರೇನೋ ಘನ ಮಹಿಮ ಫಣಿರಾಜತಲ್ಪ 36 ಹದಿನಾಲ್ಕು ಲೋಕಂಗಳನಾಳ್ವ ಬ್ರಹ್ಮ ಮೊದಲಾದವರು ನಿನ್ನ ಚಲ್ವನಖದ ವಿಧಿಸಲಾಪೆನೆ ನಿನ್ನ ಸಲ್ವಾ 37 ಧನ ಧಾನ್ಯ ಪಶು ಪತ್ನಿ ಗೇಹ ಜನನೀ ಜಾಮಾತ ಸಖ ನೇಹ ಅನುಜ ತನುಜಾಪ್ತವರ್ಗದಿಂದಾಹ ಸೌಖ್ಯ ನಿನಗರ್ಪಿಸಿದೆ ಎನ್ನ ದೇಹಾ 38 ನೀನಿತ್ತ ಸಂಸಾರದೊಳಗೆ ಸಿಲುಕಿ ನಾನೊಂದೆ ಕರೆ ನಿನ್ನ ಬಳಿಗೆ ಚರಣ ಧ್ಯಾನ ದೊರಕಲು ಭವದಿ ಮುಳುಗೆ ನಿನ್ನ ಕಾಣದಿರಲಾರೆನರ ಘಳಿಗೆ 39 ಸಲುಗೆ ಬಿನ್ನಪವ ನೀ ಕೇಳೋ ಎನ್ನ ಬಲು ದುರುಳತನವ ನೀ ತಾಳೋ ನೀನೆ ನೆಲೆಯಲ್ಲದೆನಗಾರು ಪೇಳೋ ಎನ್ನ ಕುಲದೈವ ಬಹುಕಾಲ ಬಾಳೋ40 ಸಾಂದೀಪ ನಂದನನ ತಂದ ನಂದ ಭವ ವೃಂದ ಕಳೆದು ಎಂದೆಂದು ಕುಂದದಾನಂದವೀಯೋ ಇಂದಿರಾರಮಣ ಗೋವಿಂದ41 ತೈಜಸ ಪ್ರಾಜ್ಞ ತುರಿಯಾ ಎನ್ನ ದುಸ್ವಭಾವವ ನೋಡಿ ಪೊರೆಯದಿಹರೆ ನಿಸ್ಪøಹ ನಾನಿನ್ನಂಘ್ರಿ ಮೊರೆಯ ಪೊಕ್ಕೆ ಅಸ್ವತಂತ್ರನ ಕಾಯೋ ಪಿರಿಯಾ42 ಇಹಪರದಿ ಸೌಖ್ಯ ಪ್ರದಾತ ನೀನೆ ಅಹುದೋ ಲೋಕೈಕ ವಿಖ್ಯಾತ ಮಹಾ ಮಹಿಮ ಗುಣಕರ್ಮ ಸಂಜಾತ ದೋಷ ದಹಿಸು ಸಂಸಾರಾಬ್ದಿ ಪೋತಾ 43 ಲೋಕಬಾಂಧವನೆಂಬ ಖ್ಯಾತಿಯನ್ನು ನಾ ಕೇಳಿದೆನು ಖಳಾರಾತಿ ಮನೋ ಶೋಕ ಮೋಹಾಜ್ಞಾನ ಭೀತಿ ಬಿಡಿಸು ಶ್ರೀ ಕರಾರ್ಚಿತ ಸ್ವಯಂ ಜ್ಯೋತಿ44 ಒಂದು ಗೇಣೊಡಲನ್ನಕಾಗಿ ಅಲ್ಪ ಮಂದಭಾಗ್ಯರ ಮನೆಗೆ ಪೋಗಿ ದೈನ್ಯ ದಿಂದ ಸತ್ಕರ್ಮಗಳ ನೀಗಿ ಕಂದಿ ಕುಂದಿದೆನೋ ಸಲಹೋ ಲೇಸಾಗಿ45 ಪಾತಕರೊಳಗಧಿಕ ನಾನಯ್ಯ ಜಗ ತ್ಪಾತಕವ ಕಳೆವ ಮಹಾರಾಯ ನಿನ್ನ ದೂತನಲ್ಲವೆ ಜೀಯ ಜಗ ನ್ನಾಥ ವಿಠ್ಠಲ ಪಿಡಿಯೋ ಕೈಯಾ 46
--------------
ಜಗನ್ನಾಥದಾಸರು
ಶ್ರೀ ವೆಂಕಟೇಶ ಪಾಹಿ-ತಾವಕ ಭಕ್ತಿಂದೇಹಿ ಪ ವಾರಿಜನೇತ್ರಾ-ವಾರಿದಗಾತ್ರಾ ನಾರದಸನ್ನುತ ಪಾತ್ರ ನರಮಿತ್ರ ಸುಚರಿತ್ರ 1 ಅಂಡಜಯಾನ-ಕುಂಡಲಿ ಶಯನ | ಖಂಡಪರಶು ಪರಿಪಾಲನ ಮುನಿಲಾಲನ ಸುರಖೇಲನ 2 ವೆಂಕಟರಮಣ ಪಂಕಜಚರಣ ಸಂಕಟಮೊಚನಕಾರಣ ಭವತಾರಣ ಗುಣಪೂರಣ 3 ದಶರಥ ಬಾಲಾ ದಶಮುಖ ಕಾಲ ದಶಶತ ಲೋಚನ ಪಾಲಾ-ಭೂಪಾಲಾ-ಸುರಮುನಿಲೋಲ4 ನಂದ ಕುಮಾರ-ನವನೀತ ಚೋರ ಬೃಂದಾವನ ವಿಹಾರ-ಬಹುದಾರಾ-ಧುರಧೀರ5 ಅಜನುತ ಪಾದ-ಅಪಹೃತ ಖೇದ ಸುಜನಕಲುಷ ನಿರ್ಭೇದ ನುತದೇವ ಸುರಮೋದ 6 ವರವ್ಯಾಘ್ರಾಚಲವಿಹರಣ ಶೀಲ ವರದ ವಿಠಲ ಗೋಪಾಲ-ಶ್ರೀ ಲೋಲ-ಬಹು ಲೀಲಾ 7
--------------
ಸರಗೂರು ವೆಂಕಟವರದಾರ್ಯರು
ಶ್ರೀ ವೆಂಕಟೇಶಮಾಂ ಪಾಲಯ ಸುಗುಣಾಲಯ ಪ ಶಿಖಾಮಣಿ ಸೇವಕ ಸುಚಿಂತಾಮಣಿ ಅ.ಪ. ಕಮಲಲೋಚನ ಭಕ್ತ ಶಮಲ ಲೋಚನ ಶಕ್ತ ವಿಮಲ ಚರಿತಪೂರ ಕಮನೀಯಶರೀರ 1 ಧೀರ ದಶರಥಕುಮಾರಾ ಬುಧಜನವಿಹಾರ ವೀರಹರಿ ಪರಿವಾರ ಕ್ರೂರಾಸುರವಿದಾರ 2 ಸರಸಿಜಾಸನನುತ ಸುರಮುನಿಸೇವಿತ ಹರಿಣಾರಿಧರಾಗಾರ ವರದ ವಿಠಲಾಕಾರ 3
--------------
ಸರಗೂರು ವೆಂಕಟವರದಾರ್ಯರು
ಶ್ರೀ ವೇಣುಗೋಪಾಲ ಕೃಷ್ಣಾ ಕಾವುದೈ ಪರಿಹರಿಸಿ ನೀನೆನ್ನ ಕೃಷ್ಣಾ ಪ ಶ್ರೀ ವ್ಯಾಸರಾಯಾರ್ಜಿತ ಕರುಣಾ ದೇವಾದಿನುತಚರಣ ಗುಣಗಣಾಭರಣ ಅ.ಪ. ಭೂಮಿ ಆಕಾಶಾದಿ ಸಕಲವನು ವ್ಯಾಪಿಸಿದಪ್ರೇಮದಿಂ ನಿನ್ನಂಶವನು ಪೂರ್ಣಗೊಳಿಸಿದನೇಮದಿಂ ಜಾಂಬುವತಿ ಭಕುತಿಯಿಂ ಪೂಜಿಸಿದಭೀಮರಥಿಯಿಂ ಬಂದು ಶ್ರೀ ವ್ಯಾಸರಾಯಗೊಲಿದ 1 ಪುರಂದರ ಕಚ್ಚು ನೈವೇದ್ಯಕ್ಕೆಮೆಚ್ಚಿಯತಿ ವ್ಯಾಸರನು ಅಚ್ಚರಿಯಗೊಳಿಸಿದಹುಚ್ಚು ಕುರುಬಗೆ ಜಗನ್ನಾಥದಾಸರ ಜನುಮದಿಚ್ಛೆಯನು ವ್ಯಾಸರಿಂ ಪೂರೈಸಿ ಮೆರೆಯುತಿಹ 2 ಕನ್ನಡದ ರಾಜ್ಯವೆಂದೆನಿಸಿದ ವಿದ್ಯಾನಗರದುನ್ನತಿಯ ಗೈದ ಯತಿ ವ್ಯಾಸರನು ಪಟ್ಟದೊಳುಸನ್ನಹಿಸಿ ಘನ ಕೃಷ್ಣ ನರಪತಿಗೆ ಬಂದಿದ್ದಬನ್ನ ಕುಹುಯೋಗವ ಸಂಹರಿಸಿ ಪಾಲಿಸಿದ 3 ಪ್ರಾಣಯತಿ ಹರ ವ್ಯಾಸರಾಯಾದಿ ಹರಿದಾಸಜಾಣರನು ಕುಣಿಸಲಿಕೆ ನಾದವನು ಕೊಡಲೆಂದುವೇಣುವನು ಊದುತ್ತೆ ಮೋದಿಸುವನೆಂಬಂತೆಕಾಣಿಸುವ ರೀತಿಯಲಿ ನರ್ತಿಸುತ ನಿಂತಿರುವ 4 ವ್ಯಾಸರಂದದಿ ಧರ್ಮದುಪದೇಶ ಮಾಡುತ್ತೆದೇಶದೊಳು ಪಸರಿಸಲು ಲಕ್ಷ್ಮೀಶ ತೀರ್ಥರನುಶಾಸನವ ಗೈದುಪನ್ಯಾಸಕ್ಕೆ ನೇಮಿಸಿದಶ್ರೀಶ ಗದುಗಿನ ವೀರನಾರಾಯಣನು ಎಂಬ 5
--------------
ವೀರನಾರಾಯಣ
ಶ್ರೀ ವೇಣುಗೋಪಾಲ ಶುಕಮುನಿಯ ಬಿಂಬ ಪ ಧ್ಯಾನ ಪಾಲಿಸು ನಿನ್ನದೀನಭವದಿ ನೆಲಸಿ ಅ.ಪ. ಜ್ಞಾನ ಮನ ದಶ ಕರಣ ಪ್ರಾಣ ಪಂಚಕರಲ್ಲಿ ಭಾನುತೇಜನೆ ನೆಲಿಸಿ ತಿಳಿಸದಲೆ ನಾನಾ ಬಗೆಯಲಿ ದಣಿಸಿ ನೀನಾಟ ಆಡುತಿಹೆ ಮರವೆ ಬಿಡಿಸಿ ಪೊರೆಯೊ 1 ಕೋಟಿ ಸೂಂiÀರ್iರ ಕಾಂತಿ ಧಿಕ್ಕರಿಪ ಚಿನ್ಮಯನೆ ಮಾಟ ಮಾಡದೆ ನಿನ್ನ ಲೀಲೆ ತೋರೊ ನಾಸಿಕ ಶ್ರವಣ ತನುಮನದಿ ಸಾಯುಜ್ಯ ಬೇಟೆಯಲಿ ಇದ್ದೆನ್ನ ಕಣ್ಣು ಕಟ್ಟುವುದ್ಯಾಕೆ 2 ಶತಕೋಟಿ ಬ್ರಹ್ಮಾಂಡ ಗತ ಜೀವಗಣಕಮೃತ ಸತತ ಪಾಲಿಪ ಕರುಣ ನಿನದಲ್ಲವೇನೊ ಹಿತಮಾಡು ಜಯೇಶವಿಠಲನೆ ಮದ್ಭಿಂಬ ಪ್ರತಿಬಿಂಬ ಭಾವದಲಿ ಬೆಳೆಸೆನ್ನ ಉದ್ಧರಿಸೊ 3
--------------
ಜಯೇಶವಿಠಲ
ಶ್ರೀ ಶ್ರೀ ರಾಘವೇಂದ್ರತೀರ್ಥರು ಆನೆಂತು ತುತಿಪೆ ನಿನ್ನ - ಮಂಚಾಲಿ ರನ್ನ ಪ ಆನೆಂತು ತುತಿಪೆ ನಾ - ಮಾನಮೇಯದಿನಿಪುಣಗಾನ ವಿಶಾರದ - ಶ್ರೀನಿವಾಸನ ದೂತ ಅ.ಪ. ಕೃತಯುಗದಲಿ ನೀನು | ದಿತಿಜ ವಂಶದಿ ಬಂದುವಿತತ ವಿಶ್ವಾಧಾರ | ಕೃತಿಪತಿಯ ತುತಿಸಿ ಮುಕುತಿ ಪಥಕೆ ಸತ್ತರ ತಮ ಪಂಚಭೇದಮತಿಯೆ ಸಾರ್ಥಕವೆಂದು | ಹಿತದಿಂದ ಸಾಧಿಸೆಮತಿಭ್ರಾಂತನಾದಂಥ | ದಿತಿಜ ಗುರುವು ತಾನುಖತಿಯಿಂದ ನೋಡುತ್ತಲೀ || ಬಾಲಕರೆಲ್ಲಹತಭಾಗ್ಯರೆನ್ನುತ್ತಲೀ | ನೃಪಗೆ ಪೇಳೆಖತಿ ನಿನ್ನೋಳ್ ತೋರುತ್ತಲೀ | ದಂಡಿಸೆ ನಿನ್ನಪಿತಗೆ ಬುದ್ಧಿಯ ಪೇಳ್ದ | ಅತುಳ ಪರಾಕ್ರಮೀ 1 ಕಡು ವೇಗದಲಿ ಬಂದ | ಶಂಡ ಮರ್ಕನ ಕಳುಹಿಒಡ ಹುಟ್ಟಿದವನನ | ದಾಡೆದಂತಗಳಿಂದಬಿಡದೆ ಶೀಳಿದ ಹರಿಯ | ದೃಢದಿ ಪೂಜಿಪೆ ನೀನುಬಿಡು ಬಿಡು ಈ ಮತಿ | ಮೃಡನೆ ನಮ್ಮಯ ದೇವಪುಡುಕಿ ಆ ಹರಿಯನ್ನೆ | ಖಡುಗದಿಂದಲಿ ಅವನಕಡಿದು ಹಾಕುವೆನೆನ್ನುತ್ತ || ಕರೆದು ನಿನ್ನಕಡು ಭಾಗ್ಯ ಕೋ ಎನ್ನುತ್ತ | ಪೇಳಲು ನೀನುಮಿಡುಕದೆ ಬೇಡೆನ್ನುತ್ತ | ಬುದ್ದಿಯ ಮಾತದೃಢದಿ ಪಿತಗೆ ಪೇಳ್ದೆ | ಬಿಡೆನು ಹರಿಯ ಎನ್ನುತ್ತ 2 ಸಹೋದರಿ | ವರಲಕ್ಷ್ಮಿ ಮಾತೆಯಸ್ಮರಿಸಿ ಜೀವಿಸೆ ಅವನೂ || ರಕ್ಕಸ ನೋಡಿಭರದಿ ಖಡ್ಗವ ಸೆಳೆದೂ | ತೋರೊ ಕಂಬದಿಹರಿಯ ಎಂದು ಒದೆದೂ | ನಿಲ್ಲಲು ಪಿತಗೆನರಹರಿ ರೂಪವ ತೋರ್ದೆ | ಕ್ರೂರನ ಜರಿದೂ 3 ದಿಟ್ಟ ತರಳನ ಸಲಹೆ | ಗಟ್ಟಿ ಕಂಬದಿ ಬರೆಛಟ ಛಟ ಶಬ್ದಾ | ಜಾಂಡ ಕಟಹ ಬಿಚ್ಚೆಕಠಿಣ ಖಳನ ಪಿಡಿದು | ಜಠರವ ಭೇದಿಸಿಹಠದಿ ಕರುಳಿನ ಮಾಲೆ | ಕಂಠದಿ ಧರಿಸುತ್ತತೃಟಿಯು ಬಿಡದೆ ತನ್ನ | ಹಠದಿ ಭಜಿಪನಿನ್ನಸ್ಫುಟದಿ ಕರದೋಳತ್ತಿದ || ಮುದ್ದಿಸಿ ಬಲುದಿಟ ಭಟ ಎನೆ ಎನಿಸೀದ | ಮಗನ ಮಾತುದಿಟವ ಜಗಕೆ ತೋರಿದ | ವೆಂಕಟನ್ನಪಟುತರ ವ್ಯಾಪ್ತಿಯ | ಮಹಿಮೆ ಸ್ಫುಟದಿ ತೋರ್ದ 4 ದಶಶಿರ | ದೂತ ಹನುಮನ್ನವ್ಯಥೆಯ ಪಡಿಸೆ ಪೋಗಲೂ || ಖತಿಯಲಿ ಲಂಕೆಹುತವಹನಿಗೆ ಈಯಲೂ | ವಾತನ ನೀಪ್ರೀತಿಯಲ್ಲಾಶ್ರಯಿಸಲೂ | ಲಂಕೆಯ ಪುರನೀತಿಯಿಂದಲಿ ಆಳ್ದ | ಖ್ಯಾತ ದೂತನೆನಿಸಲೂ 5 ಪಾದ ಭಜಿಸಿದಿ 6 ಶೇಷಾವೇಶದಿ ಪುಟ್ಟಿ | ವ್ಯಾಸ ತೀರ್ಥರಾಗಿಮೀಸಲಾದ ಮತ | ದಾಶಯಗಳನೆಲ್ಲಸೂಸಿ ಪೇಳುತ್ತಲಿ | ಶೇಷಾಚಲದಿ ಶ್ರೀನಿವಾಸನ ದ್ವಾದಶ | ವರ್ಷ ಸೇವಿಸಿ ನೃಪತೀಶನ ಕುಹುಯೋಗ | ಲೇಸಾಗಿ ಕಳೆಯುತಆಶುಗತಿಯ ತತ್ವ ಮತವ || ಸ್ಥಾಪಿಸಿ ಬಲುಮೀಸಲು ತರ್ಕತಾಂಡವ | ನ್ಯಾಯಾಮೃತಭೂಸುರರ್ಗಿತ್ತು ನಾಯಕರ | ಪುರಂದರದಾಸರಾಯರ ಮಾಡ್ದ | ದಾಸ ಪಂಥೋದ್ಧಾರ 7 ವಿಹಂಗ ವಾಹನ ಶ್ರೇಷ್ಠನೂ || ಎಂದೆನಿಸುತ್ತತುಂಗ ತೀರದಲಿ ನೀನೂ | ರಾಮರ ಪಾದಭೃಂಗನೆಂದೆನಿಸಿ ಇನ್ನೂ | ವ್ಯಾಖ್ಯಾನದಿಶೃಂಗರಿಸಿದೆ ನಿನ್ನ | ಬಿಂಬ ಮೂರುತಿಯನ್ನೂ 8 ಮಾಸ ಭವ ವನಧಿಯತರಣೋಪಾಯವ ತೋರುತ್ತ | ಪವನಾಂತಸ್ಥಗುರುಗೋವಿಂದ ವಿಠಲನೆಂಬಾತ | ಗುಣ ಪೂರ್ಣಸರ್ವೋತ್ತಮನೆನ್ನುತ್ತ | ಕೀರ್ತಿಪೆ ನೀನು ನಿರುತ9
--------------
ಗುರುಗೋವಿಂದವಿಠಲರು
ಶ್ರೀ ಸತ್ಯ ವಿಜಯತೀರ್ಥ ಚರಿತ್ರೆ ನಮೋ ಸತ್ಯ ವಿಜಯಾರ್ಯ ತೀರ್ಥರೇ ಸುಮಹ ಕಾರುಣ್ಯದಿಂ ಎನ್ನ ಪಾಪಗಳ ಮನ್ನಿಸಿ ವಿಮಲ ವಾಙ್ಮನೋಕಾಯದಲಿ ಶ್ರೀ ರಾಮ ಯದುಪತಿ ಸ್ಮರಣೆ ಇತ್ತು ಪಾಲಿಪುದು ಪ ಅಶೇಷ ಗುಣಗಣಾಧಾರ ವಿಭು ನಿರ್ದೋಷ ಹಂಸ ಶ್ರೀಪತಿಯಿಂದುದಿತ ಗುರುಪರಂಪರೆಗೆ ಬಿಸಜಭವ ಸನಕಾದಿ ದೂರ್ವಾಸ ಮೊದಲಾದ ವಂಶಜರು ಸರ್ವರಿಗೂ ಶರಣು ಶರಣೆಂಬೆ 1 ಅಚ್ಯುತ ಪ್ರೇಕ್ಷರಿಗೂ ಪರವಾಯು ಅವತಾರಾನಂದ ತೀರ್ಥರಿಗೂ ಉತ್ಕøಷ್ಠ ಗುರುತಮ ಮಧ್ವ ಆನಂದ ಮುನಿಗಳ ಕರಕಂಜಭವ ಸರ್ವ ಯತಿಗಳಿಗು ಶರಣು 2 ಮಾಧವ ಅಕ್ಷೋಭ್ಯ ಅದ್ವಿತೀಯ ಸುಸ್ಪಷ್ಟ ಟೀಕಾಗಳಿತ್ತ ಮೇಧಾಪ್ರವೀಣ ಜಯತೀರ್ಥಾರ್ಯರಿಗೂ ವಿದ್ಯಾಧಿರಾಜರಿಗೂ ನಮೋ ನಮೋ ಶರಣು 3 ವಿದ್ಯಾಧಿರಾಜರ ಶಿಷ್ಯರು ಈರ್ವರಲಿ ಮೊದಲನೆಯವರು ರಾಜೇಂದ್ರ ತೀರ್ಥರಿಗು ನಂತರ ಕೋವಿದೋತ್ತಮ ಕವೀಂದ್ರರಿಗೂ ತತ್ವಜ್ಞ ಶಿಷ್ಯವಾಗೀಶ ತೀರ್ಥರಿಗು ಶರಣು 4 ವಾಗೀಶ ತೀರ್ಥರು ಕವೀಂದ್ರ ಕರಜರು ವಾಗೀಶ ಕರಜರು ರಾಮಚಂದ್ರಾರಾರ್ಯರು ಈ ಗುರುಗಳಿಗೆ ಈರ್ವರು ಶಿಪ್ಯರು ಇಹರು ಬಾಗಿ ಶರಣಾದೆ ಈ ಈರ್ವರಿಗೂ 5 ಮೊದಲನೆಯವರು ವಿಭುದೇಂದ್ರತೀರ್ಥಾರ್ಯರು ವಿದ್ಯಾನಿಧಿ ತೀರ್ಥಾರ್ಯರ ಅನಂತರವು ವಿದ್ಯಾನಿಧಿ ಸುತರು ರಘುನಾಥತೀರ್ಥರು ವಂದಿಸಿ ಶರಣೆಂಬೆ ಇವರಿಗು ಇವರ ವಂಶಕ್ಕು 6 ರಘುನಾಥ ಕರಕಮಲಜಾತರಘುವರ್ಯರಿಗೆ ರಘೂತ್ತಮ ವೇದವ್ಯಾಸ ವಿದ್ಯಾಧೀಶ ವೇದನಿಧಿ ಸತ್ಯವ್ರತ ಸತ್ಯನಿಧಿ ಸತ್ಯನಾಥ ಸತ್ಯಭಿನವ ಸತ್ಯಪೂರ್ಣರಿಗೆ ನಮಿಪೆ 7 ಸತ್ಯಾಭಿನವತೀರ್ಥರ ಮಹಿಮೆ ಬಹುಬಹುವು ಸುತಪೋನಿಧಿಯು ಶ್ರೀನಿವಾಸನ್ನೊಲಿಸಿಕೊಂಡಿಹರು ಸತ್ಯಪೂರ್ಣರಿಗೆ ಶಿಷ್ಯರು ಈರ್ವರು ಸತ್ಯವರ್ಯರು ಸತ್ಯವಿಜಯರು ಎಂದು 8 ಸತ್ಯ ಪೂರ್ಣಾರ್ಯರು ತಮ್ಮ ಗುರು ಸತ್ಯಾಭಿನವರ ಪದ್ಧತಿ ಅನುಸರಿಸಿ ಶ್ರೀಮಠ ಆಳುತ್ತ ಸತ್ಯವರ್ಯರನ್ನು ಗೋದಾವರಿ ಕ್ಷೇತ್ರ ವಿಜಯ ಮಾಡೆಂದು ಸತ್ಯವಿಜಯರನ್ನ ಕಳುಹಿದರು ಪೂರ್ವದಿಸೆಗೆ 9 ಸತ್ಯವರ್ಯರು ಗೋದಾವರಿ ಪಂಚವಟಿ ನಾಸಿಕ ತ್ರಿಯಂಬಕಾದಿ ಕ್ಷೇತ್ರ ಸಮೀಪ ವಿಜಯಮಾಡೆ ಸತ್ಯವಿಜಯರು ತೋಂಡದೇಶ ಚÉೂೀಳ ಪಾಂಡ್ಯಾದಿ ನಾಡಲ್ಲಿ ವಿಜಯ ಮಾಡಿದರು 10 ಜಯಶೀಲರಾಗಿ ದಿಗ್ವಿಜಯಮಾಡಿ ತೋಯಜಾಕ್ಷನಪಾದಐದಿದರು ನಿಯಮೇನ ಸತ್ಯವಿಜಯರು ಅಲಂಕರಿಸಿದರು ಪೀಠ 11 ಸತ್ಯಾಭಿನವ ಆರ್ಯರ ಸತ್ಯಪೂರ್ಣ ಗುರುಗಳ ಪದ್ಧತಿಯಲಿ ಸತ್ಯವಿಜಯಾರ್ಯರು ವೇದಾಂತವಾಖ್ಯಾರ್ಥ ದುರ್ವಾದ ಖಂಡನ ಅಧಿಕಾರಿಗಳಿಗು ಉಪದೇಶ ಮಾಡಿದರು 12 ಸೇತುಯಾತ್ರೆ ಮಾಡಲು ದಿಗ್ವಿಜಯ ಕ್ರಮದಲಿ ಬಂದರು ಆರಣಿಗೆ ತೋಂಡದೇಶದಲಿ ವಿಪ್ರ ಆರಣಿ ರಾಜನು ಸಂತಾನ ವೃದ್ಧಿಗೆ ಕೊರಗುತ್ತಿದ್ದ 13 ಯುಕ್ತಮರ್ಯಾದೆಗಳ ವೈಭವದಿಂದಲಿ ಸತ್ಯವಿಜಯರಿಗೆ ಮಾಡಿ ದೇವಾರ್ಚನೆ ಭೂದೇವರಿಗೆ ಭೋಜನಮಾಡಿಸಿದ ರಾಜನು ವೇದ್ಯವಾಯಿತು ಗುರುಗಳಿಗೆ ರಾಜನ ಕೊರತೆ 14 ಸತ್ಯವಿಜಯತೀರ್ಥಾರ್ಯರ ಗುರುವರ್ಯರು ಸಪ್ತದಶ ಅಕ್ಷರ ಮಂತ್ರ ಪ್ರತಿಪಾದ್ಯಹರಿದಯೆಯಿಂದ ಒದಗಿಸುವ ವಂಶವೃದ್ಧಿ ಎಂದು ಅನುಗ್ರಹಿಸಿ ಪೋದರು ದಿಗ್ವಿಜಯಕೆ ವರವು ಪೂರ್ಣವಾಯಿತು 15 ಸೇತುಯಾತ್ರೆ ದಿಗ್ವಿಜಯ ಪೂರಯಿಸಿ ಆ ಗುರುಗಳು ಮತ್ತು ಬಂದರು ಆರಣಿ ಕ್ಷೇತ್ರಕ್ಕೆ ಕೃತಜ್ಞ ಆ ರಾಜನು ಎದುರುಗೊಂಡು ಗುರುಗಳ ಪಾದದಲಿ ಶಿರವಿಟ್ಟು ಸ್ವಾಗತವನಿತ್ತ 16 ಸಂಸ್ಥಾನ ಮೂರ್ತಿಸ್ಥ ಹರಿಪೂಜಾ ವೈಭವವು ನಿತ್ಯ ಪ್ರವಚನ ಪಾಠಕೀರ್ತನೆ ಏನೆಂಬೆ ಸತ್ಯವಿಜಯರನ್ನ ರಾಜ ಅಲ್ಲಿಯೇ ಇರಬೇಕು ಎಂದು ಕೋರಿ ಒದಗಿಸಿದ ತಕ್ಕ ಸೌಕರ್ಯ 17 ಸತ್ಯವಿಜಯಾರ್ಯರಿಗೆ ದೇಹ ಅಧಾರೂಢ್ಯ ವೇದ್ಯವಾಯಿತು ಆರಣಿರಾಜನಿಗೆ ಭಕ್ತಿಶ್ರದ್ಧೆಯಿಂದಲಿ ಉಪಚಾರ ಮಾಡಿದನು ಮಾಧವಗೆ ಅರ್ಪಿಸುತಕೊಂಡರು ಗುರುಗಳು 18 ಶ್ರೀ ಸತ್ಯವಿಜಯತೀರ್ಥರ ಮಹಿಮೆ ಬಹು ಉಂಟು ಒಂದು ಮಾತ್ರ ಸ್ಥಾಲಿಪುಲಿಕನ್ಯಾಯದಲಿ ಈ ದಿವ್ಯ ಸಣ್ಣ ನುಡಿಗಳಲಿ ಪೇಳಿಹುದು ಮಾಧ್ವಯತಿ ಹರಿದಾಸ ಮಹಿಮೆಗಳಿಗೆ ಅಳವುಂಟೆ 19 ತಮ್ಮ ತರುವಾಯ ಸಂಸ್ಥಾನ ಆಡಳಿತವ ಶ್ರೀ ಮನೋಹರ ಹರಿ ಪ್ರಿಯರು ಸತ್ಯವರ್ಯ ಸುಮನೋಹರ ಸತ್ಯಪ್ರಿಯ ತೀರ್ಥನಾಮದಲಿ ರಮಾರಮಣಸೇವೆಗೆ ವಹಿಸಬೇಕೆಂದು 20 ಭಕ್ತಿಮಾನ್ ಆರಣಿ ರಾಜನಿಗೆ ಹೇಳಿ ಹಿತದಿ ಅನುಗ್ರಹಿಸಿ ಗುರುವರ್ಯ ಸತ್ಯವಿಜಯರು ಧ್ಯಾನದಿಂ ಐದಿದರು ಹರಿಪುರ ಚೈತ್ರ ಕೃಷ್ಣಪುಣ್ಯದಿನ ಏಕಾದಶಿ ದ್ವಾದಶಿಲಿ 21 ಮತ್ತೊಂದು ಅಂಶದಲಿ ಸತ್ಯವಿಜಯ ನಗರಾಖ್ಯ ಕ್ಷೇತ್ರ ಆರಣಿ ಸಮೀಪ ವೃಂದಾವನದೀ ಇದ್ದು ಸೇವಿಸುವ ಸುಜನರಿಗೆ ವಾಂಛಿತ ಒದಗಿಸುತ ಕುಳಿತಿಹರು ಹರಿಧ್ಯಾನ ಪರರು 22 ಸತ್ಯಲೋಕೇಶಪಿತ ಶ್ರೀಪ್ರಸನ್ನ ಶ್ರೀನಿವಾಸ ಪ್ರಿಯ ಸತ್ಯಾಭಿನವತೀರ್ಥ ಕರಕಂಜ ಜಾತ ಕರ ಕಾಯವಾಙ್ಮನದಿ ನಮೋ ಶರಣು ಮಾಂಪಾಹಿ 23
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಸತ್ಯಧೀರರು ಚಾರು ಚರಣಗಳಿಗೆರಗುವೆನು ಪ ವರಮತಿಗುಣಗನ ಮಣಿಯೆ ಅ.ಪ. ಯತಿ ಆಶ್ರಮದಿ ಸೀತಾ ಪತಿಯ ಪೂಜಿಸುತಿರೆ ಮತಿಹೀನರಪಹಾಸ್ಯ ಮಾಡಿದರೆ ಪರಿಯಂತ ಹರಿಸೇವೆಯಾ ಅತಿ ಭಕುತಿಯಿಂದಲಿ ಮಾಡಿದ್ಯೋ ಜೀಯಾ ಹಿತದಿಂದ ಕೈಗೊಂಡ ದಶರಥನಂದ ರಘುರಾಯ ಯತಿವರನೆ ನಿನ್ನಯ ಕ್ಷಿತಿಯೊಳಗೆ ಹರಿ ಪ್ರತಿ ದಿಗಂತ ಪರಿಹರಿಸಿದ ವರಕೀರ್ತಿ ಆಶ್ರಯದಿಂದ ಬಂದೆ 1 ವರಮಧ್ವಮತಾಭಿಮಾನಿಯೆ ನಿನ್ನಯ ದರುಶನದಿಂದ ಪಾವನನಾದೆನೋ ದೊರಕಾದೊ ಯಂದಿಗೆಲ್ಲರಿಗೆ ಈ ಗುರುಗಳ ವರಸೇವಾ ಸರ್ವಜ್ಞ ಪೀಠಕೆ ಸರಸ ಶೋಭಿಸುವಾ ಹರಿವಾಯುಗಳಲಿ ನಿಶ್ಚಯದ ಭಕುತಿಯನು ಪಾಲಿಸುವಾ ನಿರುತದಲಿ ಕಾವಾ ಪರಮಭಕ್ತರ ಭಾಗ್ಯನಿಧಿಯಂದರಿದು ಹಂಬಲಿಸುತಲಿ ನಿನ್ನಯ ಚರಣಕೆರಗಿದೆ ತ್ವರದಿ ಕರುಣಿಸಿ ಪೊರೆಯೊ ಶರಣರ ಸಂಜೀವಾ 2 ಆನಂದಜ್ಞಾನದಾಯಕನಾಜ್ಞೆಯಿಂ ಸತ್ಯಜ್ಞಾನಾ- ನಂದಗಿತ್ತಿ ಉತ್ತಮಪದವಾ ಗಾನಲೋಲನ ಜಗತ್ಪಾಲನ ಪ್ರಿಯನೇ ತವ ಸೇವಾ ತನುವನೊಪ್ಪಿಸಿ ಇಡುವೆ ನಿನ್ನಡಿಗಳ ಮೇಲೆ ಶಿರವಾ ಸೇವಕನೋ ಅನುಚಿತೋಚಿತಕರ್ಮ ಕೃಷ್ಣಾರ್ಪಣವೆನುವ ಸುಮನವ ಕೊಡು ನೀ 3
--------------
ಹನುಮೇಶವಿಠಲ
ಶ್ರೀ ಸತ್ಯಸಂಧರು ಸತ್ಯ ಬೋಧರ ಕಂಡ | ಯತಿವರ್ಯ ಸತ್ಯಸಂಧ ಕೃತ್ಯ ನಿಮ್ಮದು ಆನಂದಾ ಪ ಸ್ತುತ್ಯುಯತ್ಯಾಶ್ರಮವ ವಹಿಸುತಪ್ರತ್ಸಹತ ಸಚ್ಚಾಸ್ತ್ರ ಬೋಧಕಪ್ರತ್ಯರ್ಥಿ ಮಾಯ್ಗಳ ಖಂಡಿಸುತಭೃತ್ಯ ಜನಕಭೀಷ್ಟ ಗರೆವಾ ಅ.ಪ. ಗಂಗೆಮೀಯಲು ಸಾಧು ಸಂಗದಿ ತೆರಳುತ್ತಅಂಗಜಾರಿಯ ಪುರದೀ |ಮಂಗಳಾಂಗನು ಹರಿಪದಾಬ್ಜದಿಬೃಂಗರೆನಿಸುತ ಪೂಜೆಯ ಗೈಯ್ಯಲುರಂಗ ಹರಿಪಾದಾರವಿಂದವಕಂಗಳಿಂದಲಿ ಕಂಡಯತಿಯ 1 ಗಯ ಗಧಾದರ ನಂಘ್ರಿಪ್ರಿಯವಿಂದ ಭಜಿಸಲುನಯಸುತ್ತ ಪರಿವಾರವಾ |ಮಾಯಿಗಳ ದುರ್ವಾದ ಖಂಡಿಸಿಹೇಯಮತವಿದ್ವಂಸ ಗೈಯ್ಯುತರಾಯದಶರಥ ಸುತನು ರಾಮಗೆಜಯಪತ್ರಾರ್ಪಿಸಿದ ಮಹಿಮ 2 ವಿಷ್ಣುಪಾದವ ಮನ ಮುಟ್ಟಿ ಭಜಿಸಲು ಪೋಗೆದುಷ್ಟಗಯಾಳವಾರರು |ದಿಟ್ಟತನದಲಿ ಕದವಮುಚ್ಚಲು |ಶ್ರೇಷ್ಠ ಯತಿಗಳ ಭಕ್ತಿಗೊಲಿಯುತಥಟ್ಟನೇ ಕದತೆರೆಯಲಂದಿನಅಟ್ಟಹಾಸದಿ ಪೂಜೆಗೈದ 3 ಬಾಳಲಜ್ಜೆಲಿಗಯ | ವಾಳರು ಶರಣೆನ್ನೆಲಾಲಿಸುವರ ಭಿನ್ನ ಪ |ಮೂಲರಾಮರ ಸೇವೆಯನುಗಯೆವಾಳರೆಲ್ಲರು ಮಾಡಲೆನುತಲೀಲೆಯಿಂ ಮುದ್ರಾಂಕಗೈದಘಜಾಲವನು ತಾ ಕಳೆದ ಯತಿಯ 4 ಮಹಿಷಿ ಕ್ಷೇತ್ರದಿಅಂಗವೃಂದಾವನವ ಪೊಗಿಸುತರಂಗಗುರು ಗೋವಿಂದ ವಿಠಲನಮಂಗಳ ಧ್ಯಾನದಲಿರುತಿಹ 5
--------------
ಗುರುಗೋವಿಂದವಿಠಲರು
ಶ್ರೀ ಸುಮಧ್ವ ವಿಜಯಸ್ಥ ಅಷ್ಟೋತ್ತರ ಶತನಾಮಾವಳಿ ನಮಿಸುವೆ ಜಗದ್ಗುರುಗಳೇ ಪ ಅಮಿತ ಮಹಿಮನ ವಿಮಲ ಪದಪದ್ಮ ತೋರ್ವುದೆಮಗೇ ಅ.ಪ. ಭೂರಿ ವಿಶ್ವ ಭೂಷಣರೇ ಪಾಹಿಮಾಂ ಪಾಹಿ 1 ಪರಿಪೂರ್ಣ ಪ್ರಮತಿಯೇ | ಪುರುಸಂಖ್ಯ ಪೂರ್ಣೇಕ್ಷ ಅರವಿಂದ ಲೋಚನರೆ | ಗುರುಮತ್ಯಮಿತ ಬುದ್ಧಿ ಮರುದಂಶ ಪ್ರಚುರಧೀ | ಪುರು ಕರುಣ ಆಂಬುಧಿಯ ಮೇರೆಯನು ಮೀರಿದವರೆ || ಸರುವಿತ್ ಪೂರ್ಣದೃಕ್ | ಉರುಮತಿಯೆ ಸಕಲಜ್ಞ ಸರುಧೀ ಪೃಥು ಹೃದಾ | ಪುರುಧೀ ಪ್ರಭೂತಧೀಃ ಪರಮ ಆನಂದ ಸತ್ತೀರ್ಥ ಸೂರಿರಾಜಾಧಿ ರಾಜರೆ ಪಾಹಿ ಪಾಹಿ 2 ಫುಲ್ಲ ಬೋಧ ಬಹುಲ ಪ್ರಬೋಧರೇ | ಮಹೀಷ್ಟ ಸುಹೃದಯರೇ ಬಹುಲ ಬೋಧಾಖ್ಯರೇ | ಮಹಾ ಪುರುಷೋತ್ತಮನ ದಾಸರೊಳಧಿಕನೆ ಪಾಹಿ 3 ನಮೊ ನಮೋ ಧೀರಮತಿ | ನಮೊ ಪೃಥೂ ದರ್ಶನರೆನಮೊ ನಮೋ ಸುಖ ತೀರ್ಥ | ನಮೊ ಪೃಥುಲ ಚೇತಾತ್ಮನಮೊ ನಮೋ ಪೃಥುಮತಿಯೆ | ನಮೊ ನಮೊ ಸಮಗ್ರ ಧೀರ್ಸುಸ್ಮಿತೇಂದುಗಳೆ ಪಾಹಿ || ನಮೊ ವಿಪುಲ ಹೃದಯರೇ | ಅಮಂದಧಿಯೆ ಶುದ್ಧಧೀಃ ನಮೊ ನಮೋ ಸುವಿಚಾರ | ನಮೊ ದಾನವರ್ಭೀಮ ನಮೊ ಪುಷ್ಟ ಬುದ್ಧಿಯೇ | ನಮೊ ಪೃಥುಲ ಹರಿ ನಿಗೂಢ ಮೂರ್ತಿಯೆ ಪಾಹಿ ಪಾಹಿ4 ಆನಂತ ಬೋಧಾಖ್ಯ | ಅನೂನ ಬೋಧರು ಎನಿಪಆನಂದ ತೀರ್ಥಾಖ್ಯ | ಅನುಮಾನ ತೀರ್ಥರೇಸ್ವರ್ಣವರ್ಣಾಭಿಧರೆ | ಧನ್ಯ ಪ್ರವರರು ಎನಿಪ ಆದೀನ ಸತುವಾಭಿಧರೆ ||ಅನಂತಧಿಯ ಮಧ್ವ ಸು | ಪೂರ್ಣ ಸಂಖ್ಯ ಧೀರದಿಹನುಮಂತ ಕೃಷ್ಣೇಷ್ಟ | ಪ್ರಾಣೇತ ಪ್ರಾಜ್ಯೇಕ್ಷಆನಮಿಸಿ ಬೇಡ್ವೆ ಸಂ | ಪೂರ್ಣ ಪ್ರಮತಿಯೆ ತವ ಚರಣ ತೋರಿಸಿ ಸಲಹುವುದೂ 5 ಪಾಹ್ಯದ ಭ್ರಮನೀಷ | ಪಾಹಿ ಪ್ರಚುರ ಪ್ರಜ್ಞಪಾಹಿ ವಿಪುಲ ಪ್ರಮತಿ | ಪಾಹಿ ಆಯುತ ಚೇತಪಾಹಿ ಪೃಥು ಪ್ರಬೋಧಾ | ಪಾಹಿ ಪ್ರಬರ್ಹ ಬೋಧಾಖ್ಯರೇ ಪಾಹಿ ಪಾಹಿ ||ಪಾಹ್ಯ ಮಂದಮನೀಷ | ಪಾಹ್ಯದ ಭ್ರಸುಸಂಖ್ಯಪಾಹಿ ಬೃಹತು ಪ್ರಬೋಧ | ಪಾಹ್ಯತಿ ಭದ್ರ ಭಾಷಣಪಾಹ್ಯ ಪೂರ್ವ ಪುರುಷ | ಪಾಹಿ ದಶಧಿಷಣಾರ್ಯಾ ವರ್ಯ ಚರ್ಯರೇ ಪಾಹಿ 6 ಸಿರಿ ಮಾಧವನ | ಗುಣ ಸಾಧಕಾಗ್ರಣಿಯೆ ಪಾಹಿಮಾಂ ಪಾಹಿ ಪಾಹಿ 7 ವಾಸುದೇವ ಪರಿ | ಶಿಕ್ಷಣದಿ ದಕ್ಷನೆನಿಸುವನಿಗೇ ಜಯವಾಗಲಿ ||ಜಯ ಹರಿಗಧಿಷ್ಠಾನ | ಜಯ ಮುಖ್ಯ ಪ್ರತಿ ಬಿಂಬಜಯ ಜಯತುದಾರಮತಿ | ಜಯ ಹರಿದಯಿತ ವರನೆಜಯ ಶ್ರೀ ಮದಾನಂದ | ತೀರ್ಥಾರ್ಯವರ್ಯ ಜಯ ಜಯತು ನಿಮ್ಮ ಪದಗಳಿಗೇ 8 ಮಧ್ವಾಖ್ಯ ಶೃತಿಪ್ರತೀ | ಪಾದ್ಯರೆಂದೆನಿಸುತಲಿಮಧ್ವ ವಿಜಯಾಖ್ಯ ಪ್ರ | ಸಿದ್ಧ ಗ್ರಂಥದಿ ಪೊಳೆವಮಧ್ವಗುರು ತವನಾಮ | ಶಬ್ದಾಖ್ಯ ಮಣಿಗಳಷ್ಟೋತ್ತರದ ಮಾಲೆಯನ್ನೂ ||ಮುದ್ದು ಮೋಹಜ ತಂದೆ | ಮುದ್ದು ಮೋಹರಲಿರುವಮಧ್ವಗುರುವೇ ನಿಮ್ಮ | ಹೃದ್ಗುಹದಲಿರುವಂಥಮುದ್ದು ಗುರುಗೋವಿಂದ | ವಿಠ್ಠಲನಿಗರ್ಪಿಸುವೆ ಉದ್ಧರಿಪುದೆಮ್ಮ ಸತತ 9
--------------
ಗುರುಗೋವಿಂದವಿಠಲರು
ಶ್ರೀ ಹಯಗ್ರೀವ ಮಂತ್ರಸ್ತೋತ್ರ ಜ್ಞಾನ ಬಲಾನಂದಾದಿ ಸರ್ವಗುಣ ವಾರಿನಿಧಿ ಅನಿಷ್ಟಹರ ಇಷ್ಟಪ್ರದ ಹಯಗ್ರೀವ ಅನಘ ಸನ್ನುತ ಸೇವ್ಯ ಘನ ದಯಾಂಬುಧೇ ನಮೋ ಗುರುಗ ಲಕ್ಷ್ಮೀಶ ಪ ಕಮಲಾಸನ ಋಷಿಯು ಗಾಯತ್ರಿಛಂದಸ್ಸು ಅಮಲಾಷ್ಟಾಕ್ಷರ ಮಂತ್ರ ದೇವತೆ ಹಯಾಸ್ಯ ಸೋಮ ಮಂಡಲ ಸ್ಥಿತನು ಅಕಳಂಕ ಕಾಂತಿಮಾನ್ ಅಮೃತ ತನ್ನಯ ಸ್ವರೂಪ ಕಿರಣ ಸುರಿಸುವನು 1 ನಾಶರಹಿತನು ಅವ್ಯಯ ನಿತ್ಯೋ ನಿತ್ಯಾನಾಮ ಅಂಡ ಬಹಿರಂತರದಿ ಎಲ್ಲೂ ಪುಸ್ತಕ ಚಿನ್ಮುದ್ರೆಯು ಶಂಖಾಕ್ಷ ಮಾಲಾಧರ ಕಾಶಿಸುತಿಹ ತುರಗ ವದನ ಸರ್ವಜ್ಞ2 ಪೂರ್ಣ ಜ್ಞಾನಾತ್ಮನು ಪೂರ್ಣ ಐಶ್ವರ್ಯಾತ್ಮ ಪೂರ್ಣ ಪ್ರಭಾತ್ಮನು ಪೂರ್ಣ ತೇಜಾತ್ಮಾ ಪೂರ್ಣಾನಾನಂದಾತ್ಮನು ಪೂರ್ಣ ಶಕ್ತ್ಯಾತ್ಮನು ಪೂರ್ಣ ಗುಣನಿಧಿ ಸದಾ ನಿರ್ದೋಷ ಈಶ 3 ಪ್ರತಿವಾದಿ ಜಯಪ್ರದನು ಸರ್ವ ವಿದ್ಯಾದಾತ ಬುದ್ದಿ ಸ್ಥೈರ್ಯ ಸತ್ಜ್ಞಾನ ವರ್ಚಸ್ಸು ಈವ ಮುಕ್ತ್ತಿಸಾಧನೆ ಅಪರೋಕ್ಷಜ್ಞಾನವನಿತ್ತು ಸಾಧು ಅಧಿಕಾರಿಗಳ ಯೋಗಕ್ಷೇಮ ವಹಿಪ 4 ಏಕದಶÀ ಶತÀ ಸಹಸ್ರಾನಂತ ರೂಪನೇ ಸ್ವಗತ ಭೇದ ವಿಲ್ಲದ ಸುಪೂರ್ಣ ಸ್ವತಂತ್ರ ಶ್ರೀಕದಶ ವಿಧಿಪಿತ ಪ್ರಸನ್ನ ಶ್ರೀನಿವಾಸ ನಮೋ ವ್ಯಾಂ ಕಪಿಲದತ್ತÀ ವರಾಹಹಯಗ್ರೀವ 5 ಶ್ರೀ ಮಧ್ವಾಂತರ್ಗತ ಶ್ರೀ ಕೃಷ್ಣಾರ್ಪಣಮಸ್ತು
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀಕರ ಅಷ್ಟಾಕ್ಷರ ಮಂತ್ರ ಗುಣವಾರಿನಿಧಿ ಅನಘ ಉತ್ತಮಮಹಾ ಪ್ರಭುವೆ ನಿನಗೆ ನಮೋ ಶ್ರೀಕರ ನಾರಾಯಣನೆ ಶರಣು ಪ ಉತ್ತಮೋತ್ತಮಗುತ್ತ ಮೋತ್ತ ಮೋದೀತ ಚೇತನಾಚೇತನರಿಗುತ್ತಮಾಶ್ರಯನು ಉತ್ತಮ ಉಮೇಶಾದಿ ಭಾರತಿಗುತ್ತಮ ವಾಯು ಆತಗುತ್ತಮೆ ಸಿರಿಗೆ ಉತ್ತಮೋತ್ತಿಷ್ಠ 1 ಶ್ರೀ ಎಂದರೆ ಜ್ಞಾನಸುಖಪೂರ್ಣೆ ಲಕ್ಷ್ಮಿಸ್ಥ ಕ ಎಂದರಾನಂದಶತ ಸುಖಾಂತಸ್ಥ ರ ಎಂದರೆ ಸ್ವರತ ಸುಖಪ್ರದ ಸುಖಾಶ್ರಯನು ಇಂದಿರೇಶನೆ ಎನಗೆ ಸೌಭಾಗ್ಯವೀಯೊ 2 ಸ್ವಾಹಾ ಆತ್ಮನು ಸ್ವವಶ ಸರ್ವವಶಿ ಶ್ರೀಪನು ಹರಿ ಹಂಸ ನಿರ್ದೋಷ ಬ್ರಹ್ಮ ನಾರಾಯಣ ಅಹರ್ನಿಶಿ ಈ ರೀತಿ ನಿನ್ನ ಸ್ಮರಿಸುವ ಜನಕೆ ನಿಖಿಳ ಐಶ್ವರ್ಯವೀವೆ 3 ಕಂಬು ಅರಿ ಶಂಖನಿಧಿ ಪದ್ಮನಿಧಿ ದಿವ್ಯ ಹಸ್ತಗಳಲಿ ಶೋಭಿತವಾಗುಂಟು ದ್ರವ್ಯ ಹಾಟಕ ರತ್ನ ಧನ ಕೊಡುವ ಕರಗಳು ದೇವಿ ಶ್ರೀ ಹ್ರೀ ಸಹ ಗರುಡಾಂಶಸಂಸ್ಥ 4 ಮೀನಾದಿರೂಪ ತ್ವದ್ ಮಸ್ತಕಾದ್ಯಂಗದಿ ಇನಗಮಿತದೀಪ್ತ ಆಭರಣ ಜ್ವಲಿಸುತಿವೆ ಶ್ರೀನಿವಾಸನೆ ಸ್ವರ್ಣವರ್ಣ ನಮೋ ಶರಣು 5
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀಕೃಷ್ಣಪರಬ್ರಹ್ಮ ನಮೊ ಶೇಷತಲ್ಪಶಯಶೌರಿ ನಮೊಪ್ರಾಕೃತರ'ತಾನಂತ ನಮೊ ಪರಮಪುರುಷ ಭವದೂರ ನಮೊ 1ಮದನಾರ್ವಧುಸುರಸ್ತೌತ್ಯ ನಮೊ ಮಧುಕೈಟಭದೈತ್ಯಾರಿ ನಮೊಯದುಕುಲಾಂಬುಧಿಸುಧಾಂಶ ನಮೊ ವಾಸುದೇವ ಪರಮಾತ್ಮ ನಮೊ 2ದೇವಕಿದೇ'ಕಿಶೋರ ನಮೊ ದ್ವಿಜಸುತಪ್ರಾಣಸುರಕ್ಷ ನಮೊಭಾವಜಪಿತ ಜಗನ್ನಾಥ ನಮೊ ಭಕ್ತಪ್ರಿಯಗೋಂ'ದ ನಮೊ 3ಅಷ್ಟಮಗರ್ಭಸಂಜಾತ ನಮೊ ಅ'ುತಧೈರ್ಯಗಾಂಭೀರ್ಯ ನಮೊದುಷ್ಟಪೂತನಧ್ವಂಸ ನಮೊ ಧೇನುಕಶಕಟ'ದೂರ ನಮೊ 4ಗೋವರ್ಧನಗಿರಿಧಾರಿ ನಮೊ ಗೋಪಗೋಪಿಕಾಲೋಲ ನಮೊಶ್ರೀವಸುದೇವಾನಂದ ನಮೊ ಸಾಂದೀಪಪ್ರಿಯಬೋಧ ನಮೊ 5ಯಶೋದನಂದೋತ್ಸಾಹ ನಮೊ ವೇಣುಗಾನ'ನೋದ ನಮೊಶಿಶುಪಾಲಶಿರಚ್ಛೇದ ನಮೊ ಶಂಖಚಕ್ರಕರಧಾರಿ ನಮೊ 6ಕೌರವಗರ್ವ'ದಾರಿ ನಮೊ ಕುಬ್ಜಪಾಲಕಮಲಾಕ್ಷ ನಮೊಪಾರಿಜಾತಮಪಹಾರಿ ನಮೊ ಪಾವನತೀರ್ಥಪದಾಯ ನಮೊ 7ತೃಣಾವರ್ತನಾಶಾಯ ನಮೊ ದ್ವಾರಕಾಪುರ'ಹಾರಿ ನಮೊಮೌನಿಮಾನಸೊಲ್ಲಾಸ ನಮೊ ಮಧುರಾಪುರಿನಾಥಾಯ ನಮೊ 8'ದುರ ಅಕ್ರೂರಸ್ತೌತ್ಯ ನಮೊ ವೃಷಭ ಮ್ಟುಕ ಮುರಾರಿ ನಮೊ (?) 9ಶ್ರೀರುಕ್ಮಣಿಹೃದಯೇಶ ನಮೊ ಸಿಂಧುಶಯನ ಕಂಸಾರಿ ನವನೀತ ನಮೊ ಜಂಭಭೇದಿಸುತಪ್ರೇಮ ನಮೊ 10ವೈಜಯಂತಿವನಮಾಲ ನಮೊ ವನದಶ್ಯಾಮಲವರ್ಣ ನಮೊವಜ್ರಸ್ಥಗಿತಕಿರೀಟ ನಮೊ ವರಮಣಿಕುಂಡಲಧರಣ ನಮೊ 11ಭುಜಕಿರೀಟಶುಭಗಾತ್ರ ನಮೊ ಭುವನಮೋಹನಾಕಾರ ನಮೊಅಜಪಿತಕನಕಸುಚೇಲ ನಮೊ ಆರ್ತಶರಣ್ಯೋದ್ಧಾರ ನಮೊ 12ಕಾಲಯವನಮದಖಂಡ ನಮೊ ಕೋಟಿರ'ಪ್ರಭಾಭಾಸ ನಮೊಮಾಲಾಕಾರುಪಕಾರ ನಮೊ ಲೀಲಾಮಾನುಷವೇಷ ನಮೊ 13ದ್ರೌಪತಿಕಭಯೋದ್ಧಾರ ನಮೊ ಧನಂಜಯಾದಿಸುಪಕ್ಷ ನಮೊಶ್ರೀಪತಿಸಕಲಾಧಾರ ನಮೊ ಸರ್ವಭೂತಹೃದಯಾತ್ಮ ನಮೊ 14ನಿಖಿಲಚರಾಚರದೂಪ ನಮೊ ನಾಮರೂಪಕ್ರಿಯರ'ತ ನಮೊಅಖಂಡಮಚಲಾಕಾರ ನಮೊ ಅದ್ಭುತಮ'ಮಾಪಾರ ನಮೊ 15ಸಗುಣನಿರ್ಗುಣಾತೀತ ನಮೊ ಸತ್ಯಾಸತ್ಯಸುಬೋಧ ನಮೊನಿಗಮಾಗನಶೃತಿಸಾರ ನಮೊ ನಿರ್ವಿಷಯಾಭವಪ್ರಣವ ನಮೊ 16ಅಜಪಸೂತ್ರಸಂಕೇತ ನಮೊ ಹಂಸತತ್ವಸುಪ್ರಕಾಶ ನಮೊತ್ರಿಜಗಾಂತರ್ಬ'ವ್ಯಾಪ್ತ ನಮೊ ತ್ರಿಗುಣಾಪ್ರತಿಭಾಗಮ್ಯ ನಮೊ 17ತುಳಸಿರಾಮ ಗುರುಸ್ತೌತ್ಯ ನಮೋ ತಾಕ್ಷ್ರ್ಯಾಚಲವರವಾಸ ನಮೊಮುಳಬಾಗಿಲಪುರಿಪಾಲ ನಮೋ ಮಹಾನುಮಪ್ರಿಯ ವಂದ್ಯ ನಮೋ 18ಮಂಗಳಮಘಚಯಭಂಗ ನಮೋ ಮಂಗಳಂ ಪಾ' ಪಾ' ನಮೋರಂಗಸ್ವಾ'ುದಾಸ ಪೋಷ ನಮೋ ಮಂಗಳಾಂಗ ಶ್ರೀಕೃಷ್ಣ ನಮೋ 19
--------------
ಮಳಿಗೆ ರಂಗಸ್ವಾಮಿದಾಸರು
ಶ್ರೀಗೋಪಾಲ ಕೃಷ್ಣಾತ್ಮಕ ಶ್ರೀರಾಮ ಭಜನೆ ರಾಮ ರಾಮ ಜಯರಾಮ ಪರಾತ್ಪರ | ನೌಮಿ ಪದಾಂಬುಜ ಶ್ರೀರಾಮಸೋಮ ಕುಲೋದ್ಭವ ಭೂಮ ಗುಣಾರ್ಣವ | ಕಾಮ ಪಿತನೆ ಶ್ರೀಕೃಷ್ಣ 1 ಖೂಳರ ಬಾಧೆಗೆ ಸುಜನರು ಮೊರೆಯಿಡೆ | ಪಾಲುಂಬುಧಿ ಶಯ ಶ್ರೀರಾಮಪಾಲಿಪೆನೆಂದ್ವರ ಪಾಲಿಸಿದನು | ಪಾಲಾಂಬುಧಿಶಯ ಶ್ರೀಕೃಷ್ಣ 2 ದಶಮುಖ ದೈತ್ಯನು ಲೋಕವ ಬಾಧಿಸೆ | ದಶರಥಗುದಿಸಿದ ಶ್ರೀರಾಮವಸುಧೆಯ ಭಾರವ ನೀಗುವೆನೆಂ | ದ್ವಸುದೇವ ಸುತನಾದ ಶ್ರೀಕೃಷ್ಣ 3 ಅನುಜರು ಲಕ್ಷ್ಮಣ ಭರತ ಶತೃಘ್ನರ | ಅನುಮೋದಿಸುತಲಿ ಶ್ರೀರಾಮಅನುಜನು ತಾ ಬಲರಾಮನಿಗಾಗುತ | ಅನುಜೆಯಳೊಂದಿಗೆ ಶ್ರೀಕೃಷ್ಣ4 ಶಿಶುತನ ಲೀಲೆಯ ದಶರಥಗೇ | ಕೌಸಲ್ಯಗೆ ತೋರಿದ ಶ್ರೀರಾಮಶಿಶುತನ ಲೀಲೆ ಯಶೋದೆಗೆ ನಂದೆಗೆ | ಸಂತೋಷವು ಶ್ರೀಕೃಷ್ಣ 5 ಯಾಗವ ರಕ್ಷಿಸೆ ಕರೆದೊಯ್ದನು | ಆ ಗಾಧಿಜ ನಿನ್ನನು ಶ್ರೀರಾಮಬಾಗುತ ಬಂದ ಕ್ರೂರನು ಧನು | ರ್ಯಾಗಕೆ ಒಯ್ದ ನಿನ್ನ ಶ್ರೀಕೃಷ್ಣ 6 ಮಾರ್ಗದಿ ಮಂತ್ರಗಳುಸುರಿದ ಮುನಿ | ನೈರರ್ಗಳದೀ ಶ್ರೀರಾಮಗರ್ಗಾಚಾರ್ಯನು ಭೋದಿಸೆ ಮಂತ್ರವ | ನಿರ್ಗಮಿಸಿದೆಯೋ ಶ್ರೀಕೃಷ್ಣ 7 ಪ್ರಥಮದಲಾಹುತಿ ಇತ್ತೆಯೊ ಕ್ರತುವಿಗೆ | ದಿತಿಜೆಯ ತಾಟಕಿ ಶ್ರೀರಾಮದಿತಿಜೆಯು ಪೂಥಣಿ ಅಸುವನು ಹೀರಿದೆ ಪ್ರಥಮದಿ | ಕವಳಕೆ ಶ್ರೀಕೃಷ್ಣ 8 ಅಸುರ ಸುಬಾಹುವನಳಿಯುತಲಬ್ದಗೆ | ಎಸೆದೆ ಮಾರೀಚನ ಶ್ರೀರಾಮ |ಉಸಿರನು ಹೀರಿದೆ ತೃಣವರ್ತನ ನೀ | ಅಸುರ ಶಕಟನ ಅಳಿದೆಯೊ ಶ್ರೀಕೃಷ್ಣ 9 ಚಾರು ಸುಂದರನೇ ಶ್ರೀರಾಮತೋರಿದೆ ವದನದಿ ವಿಶ್ವವ ಮಾತೆಗೆ | ಚಾರ್ವಾಂಗನೆ ಶ್ರೀಕೃಷ್ಣ 10 ವರಪದ ಶಿಲೆ ಸೋಕಲಹಲ್ಯಾ | ಶಾಪ ವಿಮೋಚನೆ ಶ್ರೀ ರಾಮವರಳೆಳೆಯುವಾಗ ಮಣಿಗ್ರೀವರ | ಶಾಪ ವಿಮೋಚನೆ ಶ್ರೀಕೃಷ್ಣ 11 ವ್ಯಾಕುಲರಾಗಿದ್ದಾ ಋಷಿಕುಲ ನಿ | ರಾಕುಲರಾದರು ಶ್ರೀರಾಮಗೋಕುಲವೂ ತವ ಲೀಲೆಗಳಿಂ ನಿ | ರಾಕುಲ ವಾಯಿತು ಶ್ರೀಕೃಷ್ಣ 12 ವೃಂದಾರಕ ವೃಂದವ ಸಲಹಿದನೂ | ಸುಂದರ ಮೂರುತಿ ಶ್ರೀರಾಮವೃಂದಾವನ ವೃಂದವ ಸಲಹೆ ದು | ರ್ವೃಂದವನಳಿದನು ಶ್ರೀಕೃಷ್ಣ 13 ಭಾಮಿನಿ ಸೀತೆಯ ಸ್ವಯಂವರ ನೇಮದಿ | ಪ್ರಾಣಿ ಗ್ರಹಣ ಶ್ರೀರಾಮಭೈಷ್ಮೀ ರುಕ್ಮಿಣಿ ಸ್ವಯಂವರ ನೇಮದಿ | ಪಾಣಿ ಗ್ರಹಣ ಶ್ರೀಕೃಷ್ಣ 14 ಭಾರ್ಗವನೂ ತಾ ನೊಂದೆಂಬುದ ನೈ | ರರ್ಗಳ ತೋರ್ದನು ಶ್ರೀರಾಮ |ವಾಕು ಸಲಿಸೆ ಬಹು ಪತ್ನಿಯರಾಳಿದ |ಏಕ ಮೇವ ತಾ ಶ್ರೀಕೃಷ್ಣ 15 ಏಕಮೇವ ತಾನೇಕ ಪತ್ನಿತ್ವವ | ಲೋಕಕೆ ತೋರಿದ ಶ್ರೀರಾಮ |ವಾಕು ಸಲಿಸೆ ಬಹು ಪತ್ನಿಯರಾಳಿದ | ಏಕಮೇವ ತಾ ಶ್ರೀಕೃಷ್ಣ 16 ರಾಜ್ಯವ ಬಿಟ್ಟನ ರಾಜ್ಯವ ಸಾರ್ದ ನಿ | ರ್ಲಜ್ಜರ ಸದೆಯಲು ಶ್ರೀರಾಮರಾಜ್ಯವ ಕಟ್ಟಿ ಸ್ವರಾಜ್ಯವ ಮಧುರೆಲಿ ನಿ | ರ್ಲಜ್ಜರ ಹನ ಶ್ರೀಕೃಷ್ಣ 17 ಭಂಜನ ಶ್ರೀಕೃಷ್ಣ 18 ದಂಡಕ ವನದಲಿ ಪುಂಡರ ದಂಡಿಸೆ | ದಂಡವ ಪಿಡಿದನು ಶ್ರೀರಾಮ |ಮಂಡೆಯ ಪಿಡಿದು ಕಂಸನ ಶಿರ | ಚೆಂಡಾಡಿದನು ಶ್ರೀಕೃಷ್ಣ 19 ಶಬರಿಯ ಭಕ್ತಿಗೆ ಎಂಜಲ ಮೆ | ದ್ದಬುಜಾಂಡೋದರ ಶ್ರೀರಾಮ |ಕುಬುಜೆಯ ಭಕ್ತಿಗೆ ವಕ್ರವ ತಿದ್ದಿದ | ಅಬುಜಾಂಡೋದರ ಶ್ರೀಕೃಷ್ಣ 20 ಕಾಯ ಛೇದ ಉ | ಪಾಯದ ಗೈದೆಯೊ ಶ್ರೀಕೃಷ್ಣ 21 ವಾಹನ ಗೈಯುತ | ಮೋಕ್ಷವನಿತ್ತನು ಶ್ರೀಕೃಷ್ಣ 22 ಸೀತೆಯ ಕಳಕೊಂಡ್ವೆಥೆಯನೆ ನಟಸಿದ | ಪೃಥ್ವೀಪತಿಯು ಶ್ರೀರಾಮಕೌತುಕ ತೋರಿದ ನಾರದಗೇ ಬಹು | ಪತ್ನಿಯರಲ್ಲಿ ಶ್ರೀಕೃಷ್ಣ 23 ಮಾಯಾ | ವೈಭವ ಪೊಗಳಿರಿ ಶ್ರೀಕೃಷ್ಣ 24 ಜೋಡಿಸಿ ಬಹು ಸೈನ್ಯವ ಹೂಡಿದ | ರಾವಣ ಸಂಗರ ಶ್ರೀರಾಮಜೋಡಿಸಿ ಬಹು ಸೈನ್ಯವ ಜರೆ ಜನು | ಹೂಡಿದ ಯುದ್ಧವ ಶ್ರೀಕೃಷ್ಣ 25 ಮುರ ನಬಕರು ಮಡಿದರು | ದೇವ ನೀ ಬಾಣವ ಬಿಡೆ ಶ್ರೀಕೃಷ್ಣ 26 ಸೀತೆಯನಗ್ನಿ ನಿವೇಶವ ಗೈಸುತ | ಪೂತಳು ಎನಿಸಿದ ಶ್ರೀರಾಮ |ಕೌತುಕಳು ವೇದ್ವತಿಯಳ ನೀ | ನಾಂತೆಯೊ ಶ್ರೀ ವೆಂಕಟ ಕೃಷ ್ಣ 27 ಪ್ರಥಮಾಂಗನು ಮಾರುತನಿಂ | ಪೃಥ್ವೀ ಭಾರವನಿಳುಹಿದೆ ರಾಮ |ಪ್ರಥಮಾಂಗನು ಭೀಮನಿಂ | ಪೃಥ್ವೀ ಭಾರವನಿಳುಹಿದೆ ಕೃಷ್ಣ 28 ಭರತನಿಂ ವಾರ್ತೆಯ ಕಳುಹಿ | ಭರತನ ಉಳುಹಿದೆ ಶ್ರೀರಾಮ |ಅರದಿ ರವಿ ಮರೆ ಮೌಡುತ ನೀ | ನರನನು ಉಳುಹಿದೆ ಶ್ರೀಕೃಷ್ಣ 29 ಸೀತೆಯ ಸಹ ಪುರಿ ಕೋಸಲೆಗೆ ನೀ | ಮಾತುಳಹಲು ಬಂದೆ ಶ್ರೀರಾಮ |ನೀತರು ನರಕನಿಂದಾ ತರುಣಿಯರ | ಪ್ರೀತಿಲಿ ತಂದೆಯೊ ಶ್ರೀಕೃಷ್ಣ 30 ಪಟ್ಟವಗಟ್ಟಲಯೋಧ್ಯಾಪುರಿಲಿ | ಶಿಷ್ಟರ ಸರ್ವರ ಮಾಡಿದೆ ರಾಮಪಟ್ಟ ಭದ್ರ ಪ್ರಭು ದ್ವ್ಯಷ್ಟಸಾಸಿರ ಪ | ತ್ನ್ಯಷ್ಟರನಾಳಿದೆ ಶ್ರೀಕೃಷ್ಣ 31 ಕುಶಲವರ್ಹ ಸುಳೆಗಳಾ ಮಗೆ | ಅಸಮ ಸಾಹಸಿಗಳ್ ಶ್ರೀರಾಮ |ಶಿಶುಗಳ್ಕøಷ್ಣಗೆ ಗಣನೆಗಸಾಧ್ಯವು | ಅಸಮ ಸಾಹಸಿಗಳ್ ಶ್ರೀಕೃಷ್ಣ 32 ರಾಜ್ಯ ಸುಭೀಕ್ಷವು ಪತಿವ್ರತೆರೆಲ್ಲರು | ವ್ಯಾಜ್ಯ ರಹಿತ ಸ್ವರಾಜ್ಯದಿ ಶ್ರೀರಾಮಪರ್ಜನ್ಯವರ್ಷಿಸಿ ರಾಜ್ಯ ಸುಭಿಕ್ಷವು | ಆರ್ಜವರು ಪ್ರಜೆ ರಾಜ್ಯದಿ ಕೃಷ್ಣ 33 ಪಾಲನ ಪಾಲನ ಶ್ರೀಕೃಷ್ಣ 34 ಭಕ್ತಲಿ ರಾಮನ ಚರಿತೆಯ ಕೇಳಿ | ಮುಕ್ತಿದನು ಕೃಷ್ಣಾತ್ಮಕ ರಾಮಭಕ್ತಿಯಿಂದಾಲಿಸೆ ಭಾಗವತಾ ಕಥೆ | ಮುಕ್ತಿದನು ಗುರು ಗೋವಿಂದ ವಿಠಲ 35
--------------
ಗುರುಗೋವಿಂದವಿಠಲರು