ಒಟ್ಟು 1824 ಕಡೆಗಳಲ್ಲಿ , 115 ದಾಸರು , 1442 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂದಾಳು - ಬಂದಾಳು ಕನ್ನಿಕೆಯಾಗ || ಮೋಹನ್ನ ರೂಪದಿ ಪ ಪತಿ ಸುರವೃಂದ ಪೊರೆಯಲುಮಂದರಧರ ಆನಂದವ ಬೀರುತ ಅ.ಪ. ಪರಿ ಪರಿ ಭಾವದಿ 1 ಘಲು ಘಲ್ಲು ಘಲಿರೆನ್ನಲು ಗೆಜ್ಜೆಯನಾದ | ಅಸುರರಿಗುನ್ಮಾದ |ಕೆಲಸಾರಿ ಕೆಲ ಸಾರೆನ್ನುತಲೀ ನಾದ | ಆಯಿತು ವಿವಾದ ||ಘಳಿಗೆಯೊಳಮೃತದ | ಕಲಶ ಕನ್ನಿಕೆ ಕರತಲದೊಳಗಿರಿಸುತ | ಬಲು ಬಲು ವಂದಿಸೆ 2 ಸಾಲು ಸಾಲಾಗಿ ಕುಳ್ಳಿರಲಾಗ | ಕಣ್ಮುಚ್ಚಿರೆಂದಳಾಗ ಕಾಲಾಲಂದಿಗೆ ಝಣಿ ಝಣಿಸುವ ಸೋಗ | ಹಾಕಿದಳ್ ತಾನಾಗ | ಕೈಲಿ ಕಲಶ ಸೌಟು | ಚಾಲಿಸುತಲಿ ಸುರಪಾಳಯ ಕುಣಿಸುತ | ಜಾಲ ಮಾಡಿದ ಹೆಣ್ಣು3 ದಿವಿಜಾರ ಮಧ್ಯದಿ ರಾಹುವು ತಾನು | ಎತ್ತಲು ತನ ಗೋಣುರವಿಯು ಚಂದ್ರಮರ ಸೂಚನೆಗಳನು | ಅನುಸರಿಸುತ ಪೆಣ್ಣುಹವಣಿಸಿ ಚಕ್ರದಲವನ ಕೊರಳನೂಜವದಿ ಕಡಿಯೆ ಗ್ರಹವೆರಡೇರ್ಪಟ್ಟವು 4 ಸುರರು ಅಸುರರಿಗೇ | ಆದಾವು ಫಲ ಬೇರೊಬ್ಬಬ್ಬರಿಗೆ | ಸ್ವರ್ಯೂಪ್ಯೋಗ್ಯತೆಗೇ ||ವೇದ ವೇದ್ಯ ಗುರು ಗೋವಿಂದ ವಿಠಲನುಸಾಧು ಪೆಣ್ಣು ಸಮ ವೈಷಮ್ಯ ರಹಿತ 5
--------------
ಗುರುಗೋವಿಂದವಿಠಲರು
ಬಂದಿದ್ದನೆ ರಂಗ ಬಂದಿದ್ದನೆ ಕೃಷ್ಣ ಬಂದಿದ್ದನೆ ಪ. ಬಂದಿದ್ದನೆ ನಮ್ಮ ಮಂದಿರದೊಳು ಬೆಳ ದಿಂಗಳ ತೆರದೊಳು ಬಂದಿದ್ದನೆ ಅ.ಪ. ಗೆಜ್ಜೆ ಕಾಲ್ಕಡಗ ಸಜ್ಜಿನಿಂದಿಟ್ಟು ಕರ ಕ್ಷಿತಿ ತಳ ವಂದಿತ ಸತಿ ಪದುಮಾವತಿ ಲಕುಮಿ ಸಹಿತ ಕೃಷ್ಣ 1 ರವಿಯ ಕಾಂತಿ ಕೋಟಿ ಪ್ರಭೆ ಕಿರೀಟವು ವರದ ಮಾಧವನು2 ಚತುರ ಹಸ್ತದಿ ಶಂಖ ಚಕ್ರಗದಾ ಪದ್ಮ ಸತಿ ತುಳಸಿಯ ಮಾಲಧರನೆ ಜತೆ ತನ್ನ ಭಕ್ತರ ಹಿತದ ಪೂಜೆಯಗೊಂಡು ವಿತತ ವೈಭವದಿಂದ 3 ವರಪ್ರದ ವೆಂಕಟ ವರಗಳ ನೀಡುತ ತನ್ನ ಚರಣ ತೋರುತ ಭಕ್ತರಿಗೆ ಕೇಸರಿ ತೀರ್ಥವ ಕರುಣದಿ ತೋರುತ ಕರಿವರದ ಕೃಷ್ಣ 4 ಪಂಚಾಮೃತದಭಿಷೇಕವ ಕಂಡೆನೆ ಎನ್ನ ಸಂಚಿತಾರ್ಥದ ಪುಣ್ಯದ ಫಲದಿ ಮಿಂಚಿದ ಪಾಪವ ಕಳೆದರತಿಹರುಷದಿ ಹಂಚಿ ವರದ ಹಸ್ತ ಕಂಚಿ ವರದ ತೋರೆ ಬಂದಿದ್ದನೆ 5 ಕಂಕಣ ಕೈಯೊಳು ಧರಿಸಿಹನೆ ದಿವ್ಯ ಹೇಮ ಶೋಭಿತನೆ ಕಿಂಕರ ವರದ ಮಾಂಗಲ್ಯ ಕಟ್ಟಿದ ಸತಿ ಶಂಕರಾದಿ ಸ್ತುತ ವೆಂಕಟರಮಣನು 6 ಸುರವರÀ ವಂದ್ಯಗೆ ಆರತಿ ಎತ್ತಲು ಕೇಸರಿ ತೀರ್ಥವ ನೀಡಿದನೆ ವರ ಪ್ರಸಾದದ ಮಹಿಮೆಯ ತೋರುತ ಶರಧಿ ಗಂಭೀರನು 7 ಉರುಟಣಿಯ ಮಾಡಿದ ವರಸತಿ ಜತೆಯಲಿ ವರ ಶೇಷಾಚಲನು ತಾನೆ ಹರುಷವ ಬೀರುತ ವರ ಶೇಷನ ಮೇಲೆ ಮೆರೆವ ಶಯನಗೊಂಡು ಹರುಷದಿ 8 ಗಂಧ ಪುಷ್ಪ ತಾಂಬೂಲವಗೊಂಡನೆ ತಂಡ ತಂಡ ಭಕ್ತರ ವಡೆಯ ಉದ್ದಂಡ ಭಕ್ತರಿಗೆ ಉದ್ದಂಡ ವೆಂಕಟ 9 ನಾಟಕಧಾರಿ ತಾ ವಧೂಟಿ ಭೂಪ ಲಕ್ಷ್ಮಿ ಸಹ ನೋಟಕರಿಗೆ ಆನಂದ ತೋರಿದನೆ ಧಾಟಿಧಾಟಿ ರಾಗದಿ ಭಕ್ತರು ಸ್ತುತಿಸೆ ಸಾಟಿಯಿಲ್ಲದ ವೈಭವವ ತೋರುತ ಕೃಷ್ಣ 10 ಕರವ ಮುಗಿದು ಸ್ತೋತ್ರವ ಮಾಡಿದೆನೆ ಎನ್ನ ಕರೆದಾದರಿಸು ಹರಿಗೆ ನಿರುತ ಎಮ್ಮನು ಹಯನೇರಿದನೆ ಭಯಕೃದ್ಭಯ ಹಾರಿ 11
--------------
ಸರಸ್ವತಿ ಬಾಯಿ
ಬಂದು ನಿಂದಾ | ಕಣ್ಣ ಮುಂದೆ | ಬಂದು ನಿಂದಾ ಪ ಬಂದು ನಿಂದಾ ಭಾಗವತರ ಪ್ರಿಯಾ | ಮೂರ್ತಿ ಅಪ ಕುಟಿಲ ಕುಂತಲ ದೇವ | ವಟು ವೇಷದಿಂದಲಿ || ನಟನೆ ಮಾಡುತ ದಿವ್ಯ | ಪಟುತರದಲಿ ತಾನು 1 ಮುರಳಿನೂದುತ್ತ | ಮರುಳುಗೊಳಿಸಿ ಜನರ || ಕೊರಳ ಪದಕಹಾರ | ಧರಿಸಿ ತಾ ನಲಿಯುತ 2 ಸುಜನರ ಪೊರೆಯುವ | ಕುಜನರ ತರಿಯುವ | ಸಾರಥಿ ದಿವ್ಯ | ವಿಜಯವಿಠಲರೇಯಾ 3
--------------
ವಿಜಯದಾಸ
ಬಂದು ನಿಲ್ಲೋ | ಕಣ್ಣ ಮುಂದೆ ಪ ಬಂದು ನಿಲ್ಲೋ ನಿನ್ನ ಪಾದಕ್ಕೆ ವಂದಿಪೆ ಇಂದಿರೆಯರಸಾ ಗೋವಿಂದ ಮುಕುಂದಾ ನೀ ಅ.ಪ. ಅರಳಿದ ಕೆಂದಾ | ವರೆಯ ಧಿಕ್ಕರಿಸುವ ಚರಣಾರವಿಂದವ | ನಿರುತ ತೋರು ನೀನು 1 ಭ್ರಮರ ಕುಂಡಲ ಮಂಡಿತ || ಮೇಲಾದ ರಾಕೇಂದು | ಮುಖವ ತೋರಿಸುತಲೀ2 ಪದುಮನೇತ್ರನೆ ನಿನ್ನ | ಸದನವೆನುತಯೆನ್ನ || ಹೃದಯದೊಳಗೆ ನಿಂತು ನಾ | ಮುದದಿ ಭಜಿಸುವಂತೇ 3 ಕರಿಯ ಮೊರೆಯ ಕೇಳಿ | ಕರುಣದಿಂ ಬಂದಂತೆ || ಕರೆದಾಗ ನಿನ್ನ ದಿವ್ಯ | ಚರಣಾವ ತೋರಿಸುತಾ4 ಅಜಭವಾದಿಗಳಿಗೆ | ನಿಜಪದವನಿತ್ತಂತೆ || ಭಜಿಪ ಭಕ್ತರಿಗೊಲಿವ | ವಿಜಯವಿಠ್ಠಲರೇಯಾ5
--------------
ವಿಜಯದಾಸ
ಬಂದು ಸಂಸಾರದಿ ನೊಂದು ತಾಪತ್ರಯದಿ ಬೆಂದು ಕಂದಿ ಕುಂದಿದೆ ದೇವಾ ಪ ಪರಮ ಕರುಣಿಯೆ ನಿನ್ನ ಶರಣು ಪೊಕ್ಕಾ ಜನರ ಪರಿಪಾಲಿಪನೆಂಬ ಬಿರಿದೊ ಅರಿದೂ ನೀನೆ ಮೆರೆಯದಲೆ ಸಲಹÀಬೇಕೆನ್ನ ನಿನ್ನ ಚರಣನೀರಜಯುಗ್ಮವನ್ನಾ ತೋರಿ ಹರುಷವನೆ ನೀಡೆಲೋ ಮುನ್ನಾ ಘನ್ನ ಪರಮಭಕುತಿ ವಿರಕುತಿ ನೀನೆ ಎನಗಿತ್ತೆನ್ನ ಹರುಷದಲಿ ಪಾಲಿಸೈಯ್ಯಾ ಜೀಯಾ 1 ಮಾನುಷಾಧಮ ನಾನು ಹೀನಮತಿಯಲಿ ನಿನ್ನ ಧ್ಯಾನವನು ಮಾಡದಲೆ ಬರಿದೆ ಜರಿದೆ ಇಂಥ ಹೀನಭವದೊಳಗೆ ಬಾಯಿದೆರದೆ ದಿವ್ಯ ಜ್ಞಾನಿಜನರನ್ನು ನಾ ಜರಿದೆ ಙÁ್ಞನ ಹೀನನಾಗಿ ಕಾಲಕಳೆದೆ ಇನ್ನು ಶ್ರೀನಿವಾಸನೆ ನಿನ್ನ ಧ್ಯಾನ ಮಾಡುವೆನೋವಿ - ಜ್ಞಾನವನೆ ಪಾಲಿಸಯ್ಯಾ ಜೀಯಾ 2 ಈಸುವತ್ಸರ ನಿನ್ನುಪಾಸನವ ಮಾಡದಲೆ ರಾಸಭಾನಂತೆ ಬದುಕಿದೆ ದೇವಾ ಈಗ ವಾಸವಾಗೆಲೋ ಮನದಿ ಸ್ವಾಮೀ ನಾನು ಈಸಲಾರೆನು ಭವದಿ ಪ್ರೇಮೀ ಎನ್ನ ಆಸೆ ಪೂರ್ತಿಸೊ ಅಂತರ್ಯಾಮಿ ಇನ್ನು ಎಸುವಿಧದಲಿ ಸರ್ವೇಶ ಪೇಳಲಿ ಮುನ್ನೆ ಈಶ ಭವಶ್ರಮ ಕಳಿಯೋ ಈಗಾ ವೇಗಾ 3 ಆವ ಕರ್ಮದಲಿಂದ ಈ ವಸುಮತಿಯಲ್ಲಿ ಈ ವಿಧಾದಿಂದ ಬಂದೆ ನಿಂದೆ ನಿನ್ನ ಸೇವಕಾನಲ್ಲವೆ ತಂದೆ ಎನ್ನ ಆವಾಗ ನೋಡುವಿಯೊ ಮುಂದೆ ಈಗ ಕಾವವನಾರು ನಾ ಎಂದೆ ವೇಗ ದೇವ ನಿನ್ನಯ ಪಾದಸೇವೆ ಸುಖವನು ಇತ್ತು ಆವ(ಅವ)ರಂತೆ ಪೊರೆಯೊ ಎನ್ನಾ ಚೆನ್ನಾ 4 ಉರಗಾದ್ರಿ ನಿಲಯನೆ ವರಭೋಗಿಶಯನನೆ ಪರಮಪುರುಷನು ಎಂದು ಮೊರೆಯಾ ಇಡುವೆ ನಿನ್ನ ಪರಿಪರಿಯ ಜನರನ್ನು ಪೊರೆವೆ ಎನ್ನ ತಿರಸ್ಕಾರ ಮಾಡುವುದು ಥsÀರವೇ ನಿನ್ನ ಮರಿಯಾದೆಯಲ್ಲಮರತರುವೇ ಕೃಪಾ ಕರನೇ ಸರ್ವರಿಗು ಸರಿಯಾಗಿ ಇರುತಿರುವಿ ಗುರುಜಗನ್ನಾಥ ವಿಠಲಾ ವತ್ಸಲಾ 5
--------------
ಗುರುಜಗನ್ನಾಥದಾಸರು
ಬಂದು ಹೃದಯಮಂದಿರದೊಳಗೆಕೂಡೋ ಕೇಶವಮಾಧವ ಪ ತಂದೆಯೆನಾಂ ವಂದಿಪೆನೋ ಕಂದನ ಕುಂದನೆಣಿಸದೆ ಅ.ಪ ಭ್ರಮರ ಕೀಟನ್ಯಾಯದಿ ಬೇಗದಿ ತಾನೆ ತಾ ತನ್ಮಯತೇ ದಿವ್ಯಮಂಗಳ ವಿಗ್ರಹನೇ 1 ನಾಲಗೆಯ ನಡೆಮುಡಿ ಹಾಸುವೆ ಪಾಲ ಸುಮೃದುಪದಾ ಶುಭದ ನೀನೊಲಿಯುತೆ ನಲಿದು 2 ಗಾತ್ರ ಮೂರ್ತಿ ಶ್ರೀಕರ ತಂಗದಿರಾ ಬೆಂಗದಿರಾ ಶಂಕಚಕ್ರ ಚತುರ್ಭುಜ 3 ಸಂಚಿತವೆಂತೋ ಸ್ವಾಮಿ ಹಂಚಿ ನಿನ್ನ ಸೇವೆಯ ಗೈಸುತ 4 ಮುನಿಜನಗಳ ಪೊರೆವುದು ಹೆಚ್ಚೇ ಚಿನುಮಯಾತ್ಮನೇ ಚೆನ್ನಿಗ ಅಣುಗನು ನಾನಜ್ಞಾನಿ ಕನಿಕರದೆನ್ನ ಕಾಯ್ದರೆ ಕೀರ್ತಿ 5 ಮಾಯಮುಚ್ಚಿ ಕಾಯನೆಚ್ಚಿ ನೋಯುತ್ತಿಹೆನೋ ನರಹರಿ ಜೀಯ ಜಾಜೀಶಹರಿ ರಾಮ ರಕ್ಷಿಸು ಶ್ರೇಯ ಕೊಟ್ಟು6
--------------
ಶಾಮಶರ್ಮರು
ಬನ್ನ ಮಂದ ಸಿಂಧು ವಕ್ತ್ರ ಭಾಗವತ ಸಿರಿ ಪಾದ ಕರ ಕಮಲ ಭಾರತೀಶ ಭವ ಕಾಲ ವಜ್ರ ವಿಧಿ ಸಖನೋ ಗುರುರಾಜ ವಾದಿಗಳ ಕುಲವದ್ದು ದಶರಥ ಹೇಯನೆನಿಸಿದ ಬೌದ್ಧದೇವನ ಗುರುರಾಜ ಶ್ರದ್ಧೆಯಿಂದಲಿ ಸಿದ್ಧಪಡಿಸುವದೆಂದು ಗುರುರಾಜ ಜನರ ಬುದ್ಧಿ ಭೇದವ ಮಾಡಿ ದಿವದಿ ಕದ್ದು ದೇವನಭಾವದಿಂದಲಿ ಪೂಜಿಸಲು ನೀ ಗುರುರಾಜಅದು ಬಲು ಸುದ್ದಿಯ ತಿಳಿಯಲು ಸದ್ದು ಇಲ್ಲದೆ ಬೌದ್ಧ ಜನರು ಬಂದು ನೋಡೆ ಗುರುರಾಜ ತಿದ್ದಿ ವಿಗ್ರಹ ತೋರಿ ಸರ್ವ ಸುರರನು ಸಲಹಿ ಅಸುರರ ವದ್ದ ಪಲ್ಗಳ ಮುರಿದು ಮೆರೆದೇ ಗುರುರಾಜ ನೀ ಪದ್ಮಜಾತನ ಪದವಿ ಪೊಂದುವಿ ಎಂದು ನಿನ್ನಯಪದ್ಮಪಾದಕೆ ಬಿದ್ದೆನಾ ಗುರುರಾಜ ನೀ ಗುರು ಮಧ್ವವಲ್ಲಭನಿಂದ ರಮಣವ ಕೊಂಡು ಭಜಿಸುವೆ ಗುರುರಾಜ ಸಿದ್ಧ ಶೇಖರ ಸೋಮ ವಂದ್ಯನೊ ನೀ ಗುರುರಾಜ ಹರುಷದಿಂದಲಿ ನಿನ್ನ ದರುಶನವಾದ ದಿನದಾರಭ್ಯ ಗುರುರಾಜ ಮನದಲಿ ಮಿಂಚಿನಂತೆ ಪೊಳೆವೊ ಸುಂದರ ಸುಂದರಾಂಗಿಯ ಸಹಿತ ವಂದಿಪೆನೊ ಗುರುರಾಜ
--------------
ಗುರುತಂದೆವರದಗೋಪಾಲವಿಠಲರು
ಬರುತಾದೋ ಪದ ಬರುತಾದೋ ಪ ಪದುಮನಾಭನ ದಿವ್ಯಸದಮಲಪಾದದ ವಿಧವಿಧ ಮಹಿಮೆಯಯ ಪೊಗಳಿ ಬಾಳುವ ಪದ ಅ.ಪ ಛಂದಸ್ಸು ಮೀಮಾಂಸೆ ಅಂದದ ಯತಿಗಣ ಒಂದು ನಾನರಿಯದೆ ಸಂದೇಹಮಿಲ್ಲದೆ ಮಂದರಧರನಡಿ ಒಂದೇ ತ್ರಿಭುವಿಗೆ ಮಿಗಿ ಲೆಂದು ಪಾಡುತಲಾನಂದ ಪಡೆಯುವ ಪದ 1 ಸಕಲರು ತೆಗೆದಿಟ್ಟ ಅಕತಪಚಟಯೆಂಬ ವಖಿಲಮಂ ಗಣಸದೆ ಪ್ರಕಟಮಿನಿತಿಲ್ಲದೆ ಅಕಟಕಟೆನ್ನುತ ನಿಖಿಲವ್ಯಾಪಕನಂಘ್ರಿ ಭಕುತಿಯಿಂ ಭಜಿಸುತ ಮುಕುತಿ ಪಡೆಯುವ ಪದ 2 ಅಳುಕದೆ ಲೌಕಿಕ ತಿಳೆಸುಖಕೆಳಸದೆ ಮಲಿನದಿ ಸಿಲ್ಕದೆ ಚಲನವಲನಿಲ್ಲದೆ ಜಲಜಾಕ್ಷ ಭಕ್ತರ ಸುಲಭ ಶ್ರೀರಾಮನಂ ಒಲಿಸಿ ಪ್ರಾರಬ್ಧವ ಗೆಲಿದು ನಲಿಯುವ ಪದ 3
--------------
ರಾಮದಾಸರು
ಬಲು ರಮ್ಯವಾಗಿದೆ ಹರಿಯ ಮಂಚ ಪ ಎಲರುಣಿಕುಲ ರಾಜ ರಾಜೇಶ್ವರನ ಮಂಚಅ.ಪ. ಪವನತನಯನ ಮಂಚ ಪಾವನತರ ಮಂಚ ಭುವನತ್ರಯನ ಪೊತ್ತ ಭಾರಿಮಂಚ ಕಿವಿಗಳಿಲ್ಲದ ಮಂಚ ಶ್ರೀನಿಕೇತನ ಮಂಚ ಶಿವರೂಪದಲಿ ಹಿಂದೆ ಹರಿಯನೊಲಿಸಿದ ಮಂಚ 1 ನೀಲಾಂಬರವನುಟ್ಟು ನಳನಳಿಸುವ ಮಂಚ ನಾಲಗೆ ಎರಡುಳ್ಳ ನೈಜಮಂಚ ನಾಲ್ವತ್ತು ಕಲ್ಪದಿ ತಪವ ಮಡಿದ ಮಂಚ ತಾಲ ಮುಸಲ ಹಲವ ಪಿಡಿದಿರುವ ಮಂಚ 2 ರಾಮನನುಜನಾಗಿ ರಣವ ಜಯಿಸಿದ ಮಂಚ ತಾಮಸ ರುದ್ರನನು ಪಡೆದ ಮಂಚ ಭಿಮಾವರಜನೊಳು ಆವೇಶಿಸಿದ ಮಂಚ ಜೀಮೂತ ಮಂಡಲವ ತಡೆಗಟ್ಟಿದ ಮಂಚ 3 ಜೀವನಾಮಕನೆನಿಸಿ ವ್ಯಾಪ್ತನಾದ ಹರಿಯ ಸೇವಿಸಿ ಸುಖಿಸುವ ದಿವ್ಯ ಮಂಚ ಸಾವಿರ ಮುಖದಿಂದ ತುತ್ತಿಸಿ ಹಿಗ್ಗುವ ಮಂಚ ದೇವಕೀಜಠರದಿ ಜನಿಸಿದ ಮಂಚ4 ವಾರುಣೀ ದೇವಿ ವರನೆನಿಸಿದ ಮಂಚ ಸಾರುವ ಭಕುತರ ಸಲಹೊ ಮಂಚ ಕಾರುಣ್ಯನಿಧಿ ಜಗನ್ನಾಥ ವಿಠಲನ ವಿ ಹಾರಕ್ಕೆ ಯೋಗ್ಯವಾದ ವಿಮಲ ಶೇಷ ಮಂಚ5
--------------
ಜಗನ್ನಾಥದಾಸರು
ಬಲುಕಷ್ಟ ಬರಗಾಲ ಬಂದಿತಯ್ಯ ವೈರಿ ಜನಕೆ ಬರಬಾರದಯ್ಯ ಪ ಶಿಶುಗಳಿಗೆ ಹಾಲಿಲ್ಲ ಪಶುಗಳಿಗೆ ಮೇವಿಲ್ಲ ಉಸರಲು ಬಾಯಿಲ್ಲ ವೃದ್ಧ ಜನಕೇ ಅಶನ ವಸನಕ್ಕಾಗಿ ವ್ಯಸನ ಪೂರಿತರಾಗಿ ನಿಶಿ ಹಗಲು ಜನರೆಲ್ಲ ಉಸುರು ಹಾಕುತಲಿಹರು 1 ಧÀವಸಧ್ಯಾನ್ಯದ ಬೆಲೆಯು ದಿವಸ ದಿವಸಕೆ ಮಹಾ ಪ್ರವಾಹದಂದದಿ ವೃಧ್ಧಿಯಾಗುತಲಿಹುದು ಅವಸರಕೆ ಬೇಡಿದರೆ ಲವಣದೊರೆಯದು ಮೇಲೆ ಶಿವಶಿವಾಯೆಂದು ಭವಣಿಯನನುಭವಿಸುವರು 2 ಶಾರೆ ಕಾಳು ಭಿಕ್ಷೆಕೆರೆಯುವದಕೆ ಗತಿಯಿಲ್ಲಾ ಶರಗೊಡ್ಡಿ ಕರೆದರೂ ಕೊಂಡರೊಬ್ಬರುಯಿಲ್ಲಾ ಅರೆಹೊಟ್ಟಿಯುಂಡು ಹರಕು ಬಟ್ಟಯನುಟ್ಟ ಮರಮರನೆ ಮನದೊಳಗೆ ಮರುಗುವರು ಬಡಜನರೂ 3 ಜೋಳನವಣಿ ಸಜ್ಜಿ ಕಾಳಿಗೇರಿದ ಬೆಲೆಗೆ ತಾಳಿ ಮನದಲಿ ವ್ಯಥಿಯ ಕೂಲಿ ಜನರು ಕೂಳಿಗಾಗದು ಎಂದು ಬಾಳುವೆಯ ಗೈಯುವಂಥ ಕೂಲಿವಲ್ಲೆವು ಎನುತ ಗೋಳಿಡುತಲಿಹರು 4 ಕಡಲೆ ಕಾಣದ ಹರಿಯು | ಕಡಲೊಳಡಗಿದ ಮೃಡನು ಸೊಡರೆಣ್ಣೆಸಿಗದೆಂದು ಸುಡುಗಾಡು ಸೇರಿದಾ ಅಡಕಿ ಸಕ್ಕರೆ ಗೋಧಿ ಕೊಡುವ ಬೆಲೆಯನು ಕೇಳಿ ಮಿಡುಕಿ ಮನದೊಳು ಕಣ್ಣ ಬಿಡುತಿಹರು ಸುಮನಸರು 5 ಮಳೆರಾಯ ಮುನಿದುದಕೆ ಹೊಲ ಬೆಳೆಯದಿದ್ದುದಕೆ ಬಳುತಿಹವು ಬಡಜನರ ಕಣ್ಣಿಂದ ನೀರು ಜಲಹರಿಸುವದು ನೋಡಿ ನಲಿದಾಡಿ ನಗುತಿಹಳುಕ್ಷಾಮದೇವಿ 6 ಕ್ಷಾಮದೇವಿಗೆ ತನ್ನ | ಧಾಮಸೇರುವಂತೆ ನೀಡಿ ಮಾಡಿ ಸಾಕು ನಮ್ಮ ಸಕಲ ಜನಕೇ | ಕ್ಷೆಮ ಸೌಖ್ಯವಗರೆದು | ಪ್ರೇಮದಲಿ ಪೊರೆ ಕರವ ನಾ | ಮುಗಿದು ಪ್ರಾರ್ಥಿಸುವೆ ಶಾಮಸುಂದರ ಸ್ವಾಮಿ 7
--------------
ಶಾಮಸುಂದರ ವಿಠಲ
ಬಾ ವೆಂಕಟಶೈಲಾಧಿಪ ಮನ್ಮನಕೆ ತಡಮಾಡುವುದ್ಯಾಕೆ ಶ್ರೀ ವಲ್ಲಭನಾ ನಿನ್ನಂಘ್ರಿ ಕಮಲಕೆ ನಮಿಸುವೆ ಪ್ರತಿ ಕ್ಷಣಕೆ ಪ ನೀ ಒಲಿದೆನ್ನ ದಯಾವಲೋಕನದಿ ಪಾವನಮಾಡಲು ದೇವವರೇಣ್ಯ ಅ.ಪ. ವೈಕುಂಠಾಧೀಶ ವಿಗತಕ್ಲೇಶ ಚಿತ್ಸುಖಮಯವಪುಷ ಭವ ಮದನ ದಿ ವಾಕರ ಪ್ರಮುಖ ದಿವೌಕಸ ವರದ 1 ಮಮಸಮಾಸ್ವಾಮಿ ಮದಂತರ್ಯಾಮಿ ಸರ್ವಾಂತರ್ಯಾಮಿ ಅಮಿತಾತ್ಮ ಅತಿರೋಹಿತ ನಿಷ್ಕಾಮಿ ಸೇವಿತ ಶ್ರೀಭೂಮಿ ಅಮಿತ ಸುಗುಣಪೂರ್ಣ ಅಮಲಮಹಿಮ ಖಳದಮನ ದಯಾಳೊ 2 ನಾಮಾಭಿಧೇಯ ಲೋಕಾಧ್ಯಕ್ಷಾ ಕಮಲಾಯತಾಕ್ಷ ಸೋಮ ಭೂಮ ನಿಸ್ಸೀಮ ಮಹಿಮ ತ್ರಿ ಧಾಮರಾಮ ಘನಶ್ಯಾಮ ಲಲಾಮ 3 ಪವನಂತರಾತ್ಮಾ ನಿರ್ಮಲಾತ್ಮಾ ಪರಮಾತ್ಮ ಜ್ಞಾನಾತ್ಮಾ ಅವಿಕಾರ ಅತಿರೋಹಿತ ಭೂತಾತ್ಮ ಪೂತಾತ್ಮ ಮಹಿತಾತ್ಮ ತ್ರಿವಿಧ ಜೀವರಿಗೆ ವಿವಿಧ ಫಲಂಗಳ ತವಕದಿ ಕೊಟ್ಟವರವರ ಪಾಲಿಸೋ 4 ಸೃಷ್ಟ್ಯಾದಿಕರ್ತ ತ್ರಿಜಗದ್ಭರ್ತ ಲೋಕೈಕ ಸಮರ್ಥ ವೃಷ್ಣೀಶಾ ವೃಂದಾರಕ ರಿಪುಹರ್ತಾ ಮುಕ್ತರ ಪುರುಷಾರ್ಥ ಪರಮೇಷ್ಟಿ ಜನಕ ಶಿ ಷ್ಟೇಷ್ಟ ಹೃಷ್ಟ ಅನಿವಿಷ್ಟ ನಿವಿಷ್ಟ 5 ವೇದಸ್ತೇಯಾರಿ ಮಂದರಧಾರಿ ಭೂವರ ನರಹರಿ ಭೂ ದಾನವ ಬೇಡಿದ ಚಾಪಕುಠಾರಿ ರಾವಣಕುಲವೈರಿ ಯಾದವ ವಂಶ ಮಹೋದಧಿ ಚಂದಿರ ಸಾದಿತ ತ್ರಿಪುರ ಖಳೋದರ ಪಾಹಿ 6 ದಯದಿಂದ ನೋಡೊ ದೀನೋದ್ಧಾರ ಸದ್ಗುಣ ಗಂಭೀರಾ ಪ್ರಿಯ ನೀನೇ ಎನಗೆ ಲೋಕೋದ್ಧಾರ ಸೌಂದರ್ಯಸಾರಾ ಹಯಮುಖ ಲೋಕತ್ರಯ ಪತ್ರಯಾಮಯ ವಯನಗಯ್ಯ ನಾ ಬಯಸುವೆ ನಿನ್ನ7 ಭವ ಭಯಹಾರಿ ಬಿನ್ನೈಸುವೆ ಶೌರಿ ವಿಹಿತಾಹಿತಗಳು ನಿನ್ನನು ಮೀರಿ ಮಾಳ್ಪೆಗೆ ಕಂಸಾರೀ ಮಹಿತ ಶಮಲ ಸದಹಿತ ಲಕುಮಿ ಭೂ ಸಹಿತ ಮನದಿ ಸನ್ನಿಹಿತನಾಗೆಲೋ 8 ದಾತಾ ನೀನಲ್ಲದನ್ಯರರಿಯೇ ಕಂಡವರನು ಕರಿಯೇ ಪ್ರೀತನಾಗೆನ್ನೊಳು ಶ್ರೀ ಹರಿಯೇ ಮೂರ್ಲೋಕದ ದೊರೆಯೇ ಶ್ರೀ ತರುಣಿಯೊಡಗೊಡೀ ತನು ಸದನಕೆ ನೀ ತ್ವ ರಿತದಿ ಜಗನ್ನಾಥ ವಿಠ್ಠಲ 9
--------------
ಜಗನ್ನಾಥದಾಸರು
ಬಾಗಿ ಬೇಡುವೆ ಪಿಡಿಯೊ ಬೇಗ ಕೈಯಾ ಭಾಗವತ ಜನಪ್ರೀಯ ಭಾಗಣ್ಣದಾಸಾರ್ಯ ಪ ದ್ವಿಜ ಕುಲಾಬ್ಧಿಗೆ ಪೂರ್ಣ | ದ್ವಿಜರಾಜನೆಂದೆನಿಪ ವಿಜಯವಿಠಲದಾಸರೊಲುಮೆ ಪಾತ್ರ || ನಿಜಮನದಿ ನಿತ್ಯದಲಿ | ಭುಜಗಶಯನನಪಾದ ಭಜಿಪ ಭಾಗ್ಯದಿನಲಿವ | ಸುಜನರೊಳಿಡು ಎಂದು 1 ನೀನೇವೆ ಗತಿಯೆಂದ | ದೀನರಿಗೆ ನಾನೆಂಬ ಹೀನಮತಿ ಕಳೆದು ಪವಮಾನ ಪಿತನ | ಧ್ಯಾನಗೈಯ್ಯುವ ದಿವ್ಯ ಜ್ಞಾನ ಮಾರ್ಗವ ತೋರಿ | ಸಾನುರಾಗದಿ ಪೊರೆವ | ದಾನಿ ದಯಾವಾರಿಧಿಯೆ 2 ಮಂದಜನ ಸಂದೋಹ | ಮಂದಾರ ತರುವಿಜಿತ || ಕಂದರ್ಪ ಕಾರುಣ್ಯಸಿಂಧು ಬಂಧೋ || ಕಂದನಂದರಿದೆನ್ನ | ಕುಂದು ಎಣಿಸದೆ ಹೃದಯ ಮಂದಿರದಿ ಶ್ರೀ ಶಾಮಸುಂದರನ ತೋರೆಂದು 3
--------------
ಶಾಮಸುಂದರ ವಿಠಲ
ಬಾಗಿಲ ತೆಗೆಯವ್ವಾ ಲಕ್ಷ್ಮೀದೇವಿ ಬಾಗಿಲ ತೆಗೆಯವ್ವಾ ಪ ಬಾಗಿಲ ತೆಗೆಯವ್ವಾ ಸಾಗಿ ಬಂದಿಹನಯ್ಯಾ ಭೋಗಿ ಭೂಷಣ ಪ್ರಿಯ ಕೇಶವನ ದಾಸಾ ಅ.ಪ. ಸಂಸಾರ ಜಾಲದಲೀ ಸಿಲುಕಿ ಬೆಂದೇ ಸಂಸಾರ ಮಾಯದಲೀ ಹಿಂಸೆ ಮಾಡಿದವಯ್ಯಾ ಐದಾರುರಿಪುಗಳು ಸಂಶಯ ಪಡದೆ ಬಂದೇ ಶರಣೆಂದೇ 1 ಭವದೊಳುರಳಿ ಬಿದ್ದೆನೋ ಪ್ರಾಣಾಂತಕ ಸವೆದು ಕರಗಿ ಬೆಂದೆನೋ ಯುವತಿಯರೊಡಗೂಢಿ ಇಹವೆನ್ನೆ ನೆರೆನಂಬಿ ವಿವಿಧ ಕಷ್ಟವ ಪೊಂದಿ ಬಂದೇ ಶರಣೆಂದೇ 2 ಹಲವು ಜನ್ಮಗಳಿಂದ ನೋಡಲು ಬಂದೆ ಹಲವು ರೀತಿಗಳಿಂದ ನಳಿನ ನಾಭನ ದಿವ್ಯ ರೂಪವ ನೋಡುವೆ ನಳಿನಾಕ್ಷಿ ತಾಯ ಕೇಶವನ ಸೇರುವನು 3
--------------
ಕರ್ಕಿ ಕೇಶವದಾಸ
ಬಾಯೊಳು ಉಂಗುಷ್ಟವನಿಟ್ಟಮಾಯವ ನÉೂೀಡಮ್ಮಾ ಪ ಶ್ರೀಯರಸನೀಲಮೇಘಛ್ಛಾಯ ಕೃಷ್ಣರಾಯತನ್ನ ಅ.ಪ. ನಿರಂಜನ ತಾ ಲೀಲೆಯಿಂದ1 ಪುಟಿತ ಹಾಟಕ ಮಣಿಘಟಿತ ಕಂಕಣಾಂಗದಕಟಿಸೂತ್ರಗಳನಿಟ್ಟು ನಟನಂದದಿವಟಪತ್ರ ಶಾಯಿ ಓಷ್ಠಪುಟದಿ ಪಾದವನಿಕ್ಕಿಕಟಬಾಯೊಳಮೃತವ ಸ್ಫುಟವಾಗಿ ಸುರಿಸುತ 2 ನಿತ್ಯ ಮಂಗಳ ದೇವಿಯರಗಂಗೆಯ ಪಡೆದ ಶಿವನಂಗ ಶುದ್ಧಿಗೈಸಿದಾತನ3 ಗೋಪಿ ಗೃಹಕರ್ಮರತಳಾಗಿರಲು ಒಮ್ಮನದಿಂದಅಮರಗಣಾರಾಧೀತ ಕ್ಷಮೆಯನಳೆದ ಪಾದಸುಮ್ಮನೆ ಕರದೊಳೆತ್ತಿ ಕಮ್ಮಗಿಹದೆಂದು ತನ್ನ 4 ಕರಪಲ್ಲವಾಮೃತ ಲೋಕವಂದ್ಯರೂಪ ಫಣಿಶೇ-ಖರಾದ್ರಿವಾಸ ಭಕ್ತನಾಕ ಭೂರುಹ ನೀಕರೆಸಿ ದುರಿತವ ಸೋಕದಂತೆ ನಮ್ಮನೀಗಸಾಕುವ ಪರಮ ಕರುಣಾಕರ ಶ್ರೀಕೃಷ್ಣ 5
--------------
ವ್ಯಾಸರಾಯರು
ಬಾರಮ್ಮ ಇಂದಿರಮ್ಮ ಪ ನೀರೇಜ ಪದಯುಗಕೆ ಸಾರಿ ವಂದಿಪೆನಮ್ಮ ಹಾರಗಳನರ್ಪಿಸುವೆ ಸ್ವೀಕರಿಪುದಮ್ಮ ಅ.ಪ ಆವ ತೆರದಲಿ ನಿನ್ನನರ್ಚಿಸಿದರೂ ಕೊರೆಯೆ ಭಾವಶುದ್ಧಿಯಲಿ ಪೂಜೆಗೈವೆನಮ್ಮ ಓವರಿಗೆ ದಯಮಾಡು ದೇವಗಂಗಾ ಜಲದಿ ಪಾವನ ಪಾದಾಂಬುಜವ ತೊಳೆವೆನಮ್ಮಾ 1 ತವದಿವ್ಯ ಭೂಷಣವ ನವರತ್ನ ಹಾರಗಳ ಸುವಿಲಾಸದಿಂದಿತ್ತು ಮಣಿವೆನಮ್ಮ ಪವಳಪದುಮಾಸನ ವಿಶ್ರಾಂತಳಾಗಮ್ಮ ನವಪುಷ್ಪ ಕುಂಜಗಳ ಧರಿಪೆನಮ್ಮ 2 ಅಗರು ಚಂದನ ಧೂಪಮಿಗೆ ದಿವ್ಯ ಗಂಧಗಳ ಬಗೆಬಗೆಯ ದೀಪಗಳ ನೀಡುವೆನಮ್ಮಾ ಸೊಗಸಾದ ಭಕ್ಷ್ಯ ಭೋಜ್ಯಂಗಳನು ಅರ್ಪಿಸುವೆ ನಗುನಗುತ ಸ್ವೀಕರಿಸಿ ಪಾಲಿಸಮ್ಮ3 ದೇವಕನ್ಯೆಯರೆಲ್ಲ ದಿವ್ಯಗಾನವ ಪಾಡಿ ದೇವಿ ತವಕರುಣೆಯನು ಬೇಡುತಿಹರು ಶ್ರೀವನಿತೆ ನಾನೀವ ತಾಂಬೂಲವನು ಸವಿದು ಜೀವಕೋಟಿಗೆ ಸುಖವನೀವುದಮ್ಮಾ 4 ಪೊಡಮಡುವೆ ನಿನ್ನಡಿಗೆ ಕೊಡು ಭಕ್ತಿಭಾಗ್ಯವನು ಎಡೆಬಿಡದೆ ಹರಿಪಾದ ಸೇವೆಗೈದು ಕಡುಮುದದಿ ನಿನ್ನ ಸಂಕೀರ್ತನೆಯ ಪಾಡಿಸು ಬಡವರಾಧಾರಿ ಮಾಂಗಿರಿಯೊಡೆಯನ ರಾಣಿ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್