ಒಟ್ಟು 799 ಕಡೆಗಳಲ್ಲಿ , 64 ದಾಸರು , 684 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ವಾಮಿಪರಾಕುಮಹಾಸ್ವಾಮಿ ಸಜ್ಜನಪ್ರೇಮಿಪ.ಕ್ಷೀರಸಾಗರಶಯನ ನಿವಾಸಾಪಾರಗುಣಗಣಾಶ್ರಯಪಾರಮೇಷ್ಠಿ ಪ್ರಮುಖಾಮರಪೂಜಿತಚಾರುಪದಾಬ್ಜದ್ವಯ ದನು-ಜಾರಿ ಧನಂಜಯಪ್ರಿಯ ಮದವಾರಣಕೃತನಿರ್ಭಯ ನಮ್ಮದೂರನುಲಾಲಿಸುಚಿನ್ಮಯ ಜಯ1ದುಷ್ಟ ನಿಶಾಚರರಟ್ಟುಳಿಘನಕಂಗೆಟ್ಟುದು ಸುರಮುನಿಗಣ ಆಭ್ರಷ್ಟರು ಮಾಡುವ ನಿಷ್ಠುರಕೆ ಮೈಗೊಟ್ಟೆವು ಸಂಕರ್ಷಣ ನಾವಿ-ನ್ನೆಷ್ಟೆಂಬುದು ದುರ್ಗುಣವಶ ಬಿಟ್ಟೆವು ಸುರಪಟ್ಟಣ ನಮ್ಮಕಷ್ಟವು ಪದಕರ್ಪಣ ಪರಾಯಣ 2ಅಂತರಂಗ ಬಹಿರಂಗ ಭ್ರಷ್ಟದನುಸಂತತಿ ಸಂತತಿ ಭಾರಿ ಬಲುಭ್ರಾಂತಿವಿಜ್ಞಾನವಿತಾನಧುರೀಣರ್ಸಂತಾಪಿಪರು ಮುರಾರಿ ನಮ್ಮಸಂತೈಸೈ ಗಿರಿಧಾರಿ ಶ್ರೀಕಾಂತ ಕೃಪಾರ್ಣವಶೌರಿಜಗ-ದಂತ ವಿಹಾರಿ ನಿರಂತ ಪರಂತಪ 3ಚೆನ್ನಕೇಶವ ಚರಾಚರಾತ್ಮ ಚೈತನ್ಯರೂಪ ಶ್ರೀರಂಗ ನಮ್ಮಬಿನ್ನಪಲಾಲಿಸುತ್ರಿಭುವನವನ್ನುಸನ್ನುತಶುಭಾಂಗ ಸ-ರ್ವೋನ್ನತ ಮಹಿಮತರಂಗದುರಿತಾನ್ವಯತಿಮಿರಪತಂಗ ಸುಪ್ರಸನ್ನಸದೋದಿತವಿಹಂಗತುರಂಗ4ನೀಲೇಂದೀವರ ಶ್ಯಾಮಲ ಕೋಮಲಕಾಲನಿಯಾಮಕ ಪ್ರಾಣ ನಿನ್ನೋಲಗ ಸೇವಕರಾಳಿಯೂಳಿಗವ ಕೇಳು ತ್ರಿಲೋಕತ್ರಾಣನತಪಾಲ ಪರೇಶ ಪುರಾಣ ಶ್ರೀಲೋಲ ವಿಗತ ಪರಿಮಾಣ ಹೃದ-ಯಾಲಯಮಣಿ ಲಕ್ಷ್ಮೀನಾರಾಯಣ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಹನುಮ ನಮ್ಮ ಕಾಮಧೇನು ಭೀಮ ನಮ್ಮ ಕಲ್ಪವೃಕ್ಷಆನಂದತೀರ್ಥಗುರು ಚಿಂತಾಮಣಿ ಪ.ಸೂತ್ರರಾಮಾಯಣ ಮಹಾವ್ಯಾಕರ್ಣ ಪಂಚರಾತ್ರ ಭಾರತಪುರಾಣ ಶ್ರುತ್ಯರ್ಥ ಸುಧಾರಸವಾವೇತ್ತøಜನಕಾ ಸಂತತಕಿಂಪುರುಷವರುಷದಿ ಉಣಲಿತ್ತನಾ ಸುಸ್ವರದಿ ಶ್ರೀರಾಮಪ್ರಿಯನು 1ರಾಜಸೂಯ ಮೂಲದಿಂದ ಶಾಖೋಪಶಾಖ ಸಧರ್ಮಸೋಜಿಗದ ಕರ್ಮಕುಸುಮ ಬ್ರಹ್ಮತ್ವಛಲದಿರಾಜಿಸುತ್ತ ಸಹಸ್ರಾಕ್ಷ ಸಖಮುಖ್ಯದ್ವಿಜರ್ಗೆ ಸುಖಬೀಜ ನಿಂತು ಹೊರೆದನು ಶ್ರೀಕೃಷ್ಣ ಪ್ರಿಯನು 2ಹಂತ ಭಾಷ್ಯಧ್ವಾಂತದಿ ವೇದಾಂತವಡಗೆಪೋಕಮಣಿಮಂತನ ಮುರಿದನು ಮೂವತ್ತೆರಡು ಲಕ್ಷಣದಿಕಾಂತಿಯಿಂದ ಪ್ರಸನ್ನವೆಂಕಟ ಕಾಂತನ್ನ ಪ್ರಕಾಶಿಸಿದಚಿಂತಿತಾರ್ಥ ನಮಗೀವ ಶ್ರೀವ್ಯಾಸಪ್ರಿಯನು ವೇದವ್ಯಾಸಪ್ರಿಯನು 3
--------------
ಪ್ರಸನ್ನವೆಂಕಟದಾಸರು
ಹರಿಯಲ್ಲದನ್ಯ ದೈವಂಗಳು ಕೈವಲ್ಯವೀವವೇನೈ ಶ್ರೀಹರಿಯ ಕರುಣಾಸಾಗರಕೆ ಕೂಪವಾಪಿಯು ಹೋಲ್ವವೇನೈ ಪ.ಹಳುವದ ಬಿದಿರಮೃತದ ಮಳೆಯಲಿ ಇಕ್ಷುವಹದೇನೈಹಲಕಾಲವರೆಯ ಬೇಯಿಸಿದರೆ ಮೃದುರುಚಿಯಹದೇನೈ 1ಕೆಸರು ಮಳಲು ಮೆದ್ದರೊಡಲಗ್ನಿ ತಣ್ಣಸವಹದೇನೈಬಿಸಿಲ ತೊರೆಗೆ ಮಂಜುವನಿಗೆ ಧಗೆಯತೃಷೆಹೋಹದೇನೈ2ಮಲಯಜಲೇಪಕೆ ಬಲವತ್ತರ ಭವತಾಪ ಶಾಂತವೇನೈಎಳೆಗರು ಮಣ್ಣಾವಿನ ಮೊಲೆಯುಂಡು ಜೀವಿಪುದೇನೈ 3ಹರಿಯೊಪ್ಪದಿರದಾ ಹಲವು ಧರ್ಮಕರ್ಮದ ಕಾರಣೇನೈಕರಿಯುಂಡ ಬೆಳವಲ ಹಣ್ಣಿನ ತಿಳಲೆಂದಿಗುಳಿವುದೇನೈ 4ಏಕೋ ನಾರಾಯಣ ಆಸೀತ್ ಹಾಗಂದಿಲ್ಲವೇನೈಸಾಕು ನ ಬ್ರಹ್ಮಾ ನ ಚ ಶಂಕರ:ಎಂಬೊ ಮಾತದೇನೈ 5ವಾಸುದೇವನ ಡಿಂಗರರಿಗೆ ಅಶುಭ ಹೊಂದಬಲ್ಲದೇನೈಕ್ಲೇಶಾಧಿಕವು ನೋಡಿ ಅವ್ಯಕ್ತಾಸಕ್ತರಿಗಲ್ಲವೇನೈ 6ಪ್ರಸನ್ನವೆಂಕಟಪತಿ ಅರ್ಚನೆದಾರಿಲಿ ಕಂಟಕೇನೈಹುಸಿಯಲ್ಲ ಧ್ರುವಬಲಿವಿಭೀಷಣರೆ ಸಾಕ್ಷಿ ನಂಬಿರಿನ್ನು7
--------------
ಪ್ರಸನ್ನವೆಂಕಟದಾಸರು
ಹರಿಯೆ ಗತಿಯೆನ್ನಿರೈ ಶ್ರೀನರಹರಿಯೆ ಶರಣೆನ್ನಿರೈ ಪ.ಹರಿಪಾದಕಮಲವ ನಂಬದ ಮೂಢನು ಮನುಜನಲ್ಲದನುಜಶ್ರೀಹರಿಚರಿತಾಮೃತ ಕೇಳದೆ ಗರ್ವಿಪ ನರನು ಪಾಮರನÀು 1ಹರಿಯ ಬಂಟರ ಅನುಸರಣೆಗಳ ಪರಿತ್ಯಾಗಿ ವೃದ್ಧಗೂಗಿಹರಿಮಹಿಮೆಯ ಹೊಗಳಾಡದ ಮಾತಿನ ಮುಖನು ಮಂಡೂಕನು 2ಕೃಷ್ಣಗೆ ಪ್ರಿಯವ್ರತ ದಾನಕೆ ವಿಮುಖಾದ ಧನಪನವ ಕುಣಪಕೃಷ್ಣಾಕೃತಿಯ ಬಹಿರಂತದಿ ನೋಡದ ಜಾಣನವ ಕೋಣ 3ಕೃಷ್ಣಗೆ ನಮಿಸದೆಸತಿಸುತರೊಳು ಭೂರಿತುಷ್ಟ ಹಿತನಷ್ಟ ಶ್ರೀಕೃಷ್ಣನವರ ಕಂಡೆರಗದ ವಿಷಯದಭೋಗಿಭವರೋಗಿ4ಗೋವಿಂದ ಸರ್ವೋತ್ತಮನಿರೆ ಬೇರೆಂಬಜ್ಞಾನಿ ಮದ್ಯಪಾನಿಗೋವಿಂದನೊಳು ವಿಶ್ವಾಸಿಲ್ಲದ ಭಕ್ತಿಯ ಧೀರ ಶುದ್ಧಜಾರ5ಗೋವಿಂದ ತೀರ್ಥ ಪ್ರಸಾದÀವ ನರಿಯದ ಬಲ್ಲನೆ ಕಳ್ಳನುಗೋವಿಂದನೊಪ್ಪದ ಮತವಿಡಿದವ ಮಹಿಗೆಕಕ್ಕಸರಕ್ಕಸ6ಪ್ರಸನ್ನ ಮೂರುತಿ ವಿಧಿಭವವಂದ್ಯನ ಅರ್ಚಕ ಧನ್ಯರೆ ಮಾನ್ಯರುಪ್ರಸನ್ನವೆಂಕಟಪತಿ ಕಂಡುಂಡಾ ಭಕ್ತಿಯಾಸಕ್ತರೆ ಮುಕ್ತರು 7
--------------
ಪ್ರಸನ್ನವೆಂಕಟದಾಸರು
ಹರಿಹರಿಯೆ ಕಡೆಗಾಣೆನೈ ಜನುಮವಭವಕಡಲ ತಡಿಯ ಸೇರಿಸುಮಾಧವಪ.ವಿಷಯಾಸೆ ತೆರೆಗಳಲ್ಲಿ ಗೃಹವೆ ಗ್ರಹವಿಷಮ ಸತಿಸುತ ಗುಲ್ಮವು ವಡವಾಗ್ನಿಹಸಿವುತೃಷೆದಹಿಸಿತೆನ್ನ ಇದರೊಳಾಲಸಿಕೆಸುಳಿಭ್ರಮಣ ಘನ್ನ1ಷಟ್ಚರ್ಯ ಹಡಗದವರು ಬಿಡದೆ ಬೆನ್ನಟ್ಟಿ ಬಡಿದಂಜಿಸುವರು ಮನವಾಯುವಿನಟ್ಟುಳಿಗೆ ನಿಲವಿಲ್ಲವು ಇಂದ್ರಿಯಜಂತುಕಟ್ಟಿಲ್ಲದೆಳೆದೊಯ್ವವು 2ಸಂಸಾರಸಾರಫೇನ ಭುಂಜಿಸಲುಸಂಶಯದ ರೋಗ ನವೀನ ದುರಿತಾಂಬುಹಿಂಸೆ ಮಾಡದೆ ಉಳುಹಿತು ಅಜÕವ್ಯಾಳದಂಶ ಕ್ಷಣಲವಕಾಯಿತು 3ಸುಖವೆ ಬೊಬ್ಬುಳಿ ರಾಶಿಯು ಬಂಧು ಬಳಗಸಖಸ್ನೇಹ ಪಾಶಲತೆಯು ಅಹಿತಾಗಮ ಕಠೋರ ದುಶ್ಯಬ್ದಕೆಸ್ಮøತಿಹೋಗಿಚಕಿತನಹೆ ದೀನಬಂಧು 4ಇಂತು ಬಳಲುವುದ ನೋಡಿ ಸಿರಿಲಕುಮಿಕಾಂತ ನಿರ್ದಯನಾದೆ ನೀ ಪ್ರಸನ್ನವೆಂಕಟಕಾಂತ ಸಂತರ ಕೂಡಿಸೊ ಶ್ರೀ ಮೂರುತಿಅಂತ್ಯಯಾತ್ರೆಗೆ ಉದಯಿಸೊ 5
--------------
ಪ್ರಸನ್ನವೆಂಕಟದಾಸರು
ಹಿಂದಿನ ಪುಣ್ಯ ಫಲವೆಂತೊಇಂದಿರೇಶಾನಂದದ ಲೀಲೆ ಅರುಹಿದ ಪ.ಚಿತ್ರವಿಚಿತ್ರ ಮಹಿಮೆಯ ತೋರುತಖಳದೈತ್ಯರನೆಲ್ಲ ಮಡುಹಿದದೈತ್ಯರನೆಲ್ಲ ಮಡುಹಿ ಬಳಲ್ದನೆಂದುಕಸ್ತೂರಿ ತೈಲವೆರಸಿ ತಂದು 1ಶಂಕಿನಿ ಪದ್ಮಿನಿಯರೊಂದಾಗಿ ಕೃಷ್ಣನಪಂಕಜಾಸನದಲಿ ಕುಳ್ಳಿರಿಸಿಪಂಕಜಾಸನದಲಿ ಕುಳ್ಳಿರಿಸಿ ತಮ್ಮ ಒಲ್ವಕಂಕಣಗೈಯ ಮೌಳಿಯೊಳಿಟ್ಟು 2ಈರೇಳು ಲೋಕದ ದೊರೆಯಾಗು ಭಕುತರಸಿರಿಯಾಗು ದಿತಿಜರರಿಯಾಗುಸಿರಿಯಾಗು ಭಕ್ತರ ದಿತಿಜಾರಿಯಾಗೆನುತಹರಸಿದರರ್ಥಿ ಮಿಗಿಲಾಗಿ 3ಕುಂಭಕುಚದ ಕಾಮಿನಿಯರು ಹರುಷದಿಅಂಬುಜಾಕ್ಷನ ಪೂಸಿ ಕಿರುಬೆಮರಿಅಂಬುಜಾಕ್ಷನ ಪೂಸಿ ಕಿರುಬೆಮರಿ ದಣಿಯದೆ ಕದಂಬ ಕಡಿದಟಕಾಳಿಯ ತಂದು 4ವಿಕ್ರಮಾನ್ವಿವತವಾದವ್ಯಾಕೃತ ಗಾತ್ರಕೆಅಕ್ಕರಿಂದೆ ತೈಲನಾಶನವಅಕ್ಕರಿಂದಲಿ ತೈಲನಾಶನವ ಪೂಸಿ ಜಗುಳಲುಘಕ್ಕನಂಬರವ ಬಿಗಿದುಟ್ಟ 5ಹದವಾದ ಬಿಸಿನೀರ ಪೊಂಬಂಡೆಯೊಳುತುಂಬಿಪದುಮಗಂಧೆಯರು ನೀರೆರೆದರುಪದುಮಗಂಧೆಯರು ನೀರೆರೆವ ಸಂಭ್ರಮಕ್ಕೆಮುದದಿಸುರರುಹೂಮಳೆಗರೆದರು6ಮುಂಬರಿಯುತ ಬಾಲೆಯರುತಕದಿಂದಅಂಬುಧಾರೆಯ ನಿಲ್ಲಗುಡದೆರೆದುಅಂಬುಧಾರೆಯ ನಿಲ್ಲಗುಡದೆರೆದುಜಾಂಬೂನದಾಂಬರವುಡಿಸಿ ಕರೆತಂದು 7ಚಿತ್ರಮಂಟಪಕೆ ನವರತ್ನ ತೆತ್ತಿಸಿದ ಕಂಭಕಸ್ತೂರಿ ಕಾರಣೆ ರಚನೆಯಕಸ್ತೂರಿ ಕಾರಣೆ ರಚನೆಯ ಮಧ್ಯದಿಮುತ್ತಿನ ಹಸೆಯೊಳು ಕುಳ್ಳಿರಿಸಿ 8ನೀಲಮಾಣಿಕಮೋಘದಿಂದಲೊಪ್ಪುವ ಪದಕಲೋಲನೇತ್ರೆಯರಳವಡಿಸಿದರುಲೋಲನೇತ್ರೆಯರು ಅಳವಡಿಸಿ ಅಂಗುಲಿಗೆಲ್ಲ ಮುದ್ರಿಕೆನಿಟ್ಟು ನಲಿದರು 9ಮುಕುಟಕೌಸ್ತುಭಮಣಿಯುಕುತ ಭೂಷಣವಿಟ್ಟುರುಕುಮಿಣಿ ಸತ್ಯರೆಡಬಲದಿರುಕುಮಿಣಿ ಸತ್ಯರೆಡಬಲದಿ ಕುಳ್ಳಿರೆನಿತ್ಯಮುಕುತಗಾರತಿಯ ಬೆಳಗಲು 10ಚಿನ್ನದ ಹರಿವಾಣದಿ ರನ್ನದಾರತಿಯಿಟ್ಟುಕನ್ನೇರು ಕಿರುನಗೆ ಬೀರಿದರುಕನ್ನೇರು ಕಿರುನಗೆ ಬಿರಿಯುತ ಪಣೆಯೊಳುಪೊನ್ನಿನಾಕ್ಷತೆಯಿಟ್ಟು ಲಲಿತವ 11ಜಯ ರಾಮ ತ್ರೈಧಾಮ ಜಯ ಜೀಮೂತಶಾಮಜಯ ಪೂರ್ಣಕಾಮ ಸಾಸಿರನಾಮಜಯ ಪೂರ್ಣಕಾಮ ಸಾಸಿರನಾಮನೆಂದುಭಯರಹಿತಗಾರತಿಯ ಬೆಳಗಿದರು 12ಚಿತ್ತಜನಯ್ಯಗೆ ಚಿನುಮಯ ದೇಹಗೆಉತ್ತಮಗುಣಗಣ ಭರಿತಗೆಉತ್ತಮಗುಣಗಣ ಭರಿತಗೆ ಪರಮಪವಿತ್ರೇರಾರತಿಯ ಬೆಳಗಿದರು 13ಪನ್ನಗಾದ್ರಿವಾಸ ಪ್ರಸನ್ನವೆಂಕಟೇಶಕನ್ನೆ ಲಕ್ಷ್ಮಿಯ ಕೂಡಿ ಆರೋಗಣೆಯಕನ್ನೆ ಲಕ್ಷ್ಮಿಯ ಕೂಡ ಆರೋಗಣೆಯ ಮಾಡಿತನ್ನ ಭಕ್ತರಿಗೆಲ್ಲ ಸುಖಪ್ರೀತ 14
--------------
ಪ್ರಸನ್ನವೆಂಕಟದಾಸರು
ಹೇ ಮನವೆ ಈ ದೇಹ ಗಾಳಿದೀಪ ಪ.ನಳ ಪುರೂರವ ಹರಿಶ್ಚಂದ್ರ ಪುಣ್ಯಶ್ಲೋಕರುಇಳೆಯೊಳು ಒಯ್ಯಲಿಲ್ಲ ದಾರೂ 1ಹಂಬಲಗಡಲೊಳು ಮುಳುಗಲಿನ್ನಾವ ಸುಖಅಂಬುಜಾಕ್ಷಗೆ ಸಲ್ಲಲೀ ಲೆಕ್ಕ 2ಧರ್ಮವ ಹಳಿದು ಸತ್ಕರ್ಮವ ಜರೆದರೆನಮ್ಮ ಪ್ರಸನ್ನವೆಂಕಟ ದೂರ 3
--------------
ಪ್ರಸನ್ನವೆಂಕಟದಾಸರು
ಹೇಮದ ತೊಟ್ಟಿಲ ಭಾಮೆಯರ್ಹೂಡಿಕೋಮಲ ಕಾಂಚನಧಾಮವ ಮಾಡಿಕಾಮಜನಕನೊಳು ಕಾಮಿತ ಬೇಡಿಪ್ರೇಮದಿ ತೂಗಿದರ್ನಾಮದಿ ಪಾಡಿ ಜೋ ಜೋ 1ಚೆನ್ನಿಗರರಸ ಮೋಹನ್ನ ಸುಶೀಲಕನ್ನಡಿ ಕದಪಿನಕಮನೀಯಬಾಲಪುಣ್ಯವೃಕ್ಷಗ ಫಲ ಪೂರ್ಣೇಂದು ಲೀಲನಿನ್ನ ರಕ್ಷಿಸಲಿ ಪ್ರಸನ್ನ ಗೋಪಾಲ ಜೋ ಜೋ 2ಕೆಂದಾವರೆಯಂತೆ ಚೆಂದುಳ್ಳಚರಣಚಂದಿರವದನ ಗೋವಿಂದನ ಶರಣಮುಂದಿನ್ನು ಸೌಭಾಗ್ಯ ಹೊಂದೆನ್ನ ತರುಣಕಂದ ಕಂದರ್ಪನ ಸುಂದರಾಭರಣ ಜೊ ಜೋ 3ಶ್ರೇಯಾರೋಗ್ಯ ದೀರ್ಘಾಯು ಸಂಪೂರ್ಣನ್ಯಾಯ ನೀತಿ ಸದುಪಾಯ ಸಂಪನ್ನಪ್ರೀಯನೆ ಕರ್ಣಾಂತಾಯತನಯನಕಾಯಲಿ ಲಕ್ಷ್ಮೀನಾರಾಯಣ ನಿನ್ನ ಜೋ ಜೋ 4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಹ್ಯಾಂಗಾದರು ದಾಟಿಸೊ ಭವಾಬ್ಧಿಯಹ್ಯಾಂಗಾದರು ದಾಟಿಸೊ ಪ.ಗಂಗಾಜನಕನಾ ನಿನ್ನವನೆಂದುಹ್ಯಾಂಗಾದರು ದಾಟಿಸೊ ಅ.ಪ.ನಗುತ್ತಾದರು ಉಂಡೆ ಅಳುತ್ತಾದರು ಉಂಡೆಬಗೆ ಬಗೆ ದುರ್ಜನ್ಮ ಸುಖದು:ಖವತಗೆ ಬಗೆ ನಿರಯದಿ ಹೊರಳ್ಯಾಡುವನ ತಂದುಮಿಗಿಲಾದ ದೇಹವನಿತ್ತೆ ಇನ್ನೆಲೆ ಕೃಷ್ಣ 1ತಿಳಿದಾದರು ಮಾಡಿ ತಿಳಿಯದಾದರು ಮಾಡಿಹಲವು ದೋಷದ ರಾಶಿ ಒದಗಿಸಿದೆಬಲುತಪ್ಪು ನೋಡದೆ ನಾಮಾಮೃತವನಿತ್ತುಸಲಹುವ ಮನಬಲ್ಲ ಎಲ ಎಲೋ ಮುಕುಂದ 2ಮಂದಮತಿಯುಗ್ರಾಹ ಅಂಧ ಕೂಪದಿ ಬಿದ್ದುಎಂದಿಗುಭೋಗಭೋಗಿಸಲಾಪೆನೆತಂದೆ ಪ್ರಸನ್ನವೆಂಕಟಪತಿಗೊಲಿದುನಿಂದೆನ್ನ ಛಿದ್ರವನೆಣಿಸುವರೆ ರಂಗ 3
--------------
ಪ್ರಸನ್ನವೆಂಕಟದಾಸರು