ಒಟ್ಟು 3977 ಕಡೆಗಳಲ್ಲಿ , 126 ದಾಸರು , 2593 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುಬೋಧ ಪರಮಸುಖಕಾರಿ ಬಾರಿ ಬಾರಿಗೂ ಕೇಳೈ ಭವರೋಗೀ ಪ ಬಿಡು ಬಾಳಿನ ಭ್ರಮೆಯ ಸಂಸಾರಿ ದುಃಖದ ಬಾಳಿದು ವಿನಾಶಕಾರಿ ಇದರೊಳು ಸಿಗುತಿಹ ಸುಖವು ವಿಕಾರಿ ತಿಳಿಯೈ ಮುಕ್ತನಾಗಲಿದು ದಾರಿ 1 ಆರಿ ನಿನ್ನಯ ನಿಜವಾ ಸುವಿಚಾರಿ ಅರಿವೇ ನಿನ್ನಯ ಈ ಭವತಾರಿ ಬೇರಾವುದು ನಿನಗಾಗದು ದಾರಿ ಈ ನುಡಿ ಪೇಳುತಿಹುದು ಶೃತಿಸಾರಿ 2 ಜಾಗರಾ ಕನಸು ನಿದ್ರೆಯ ಮೀರಿ ಅಮರವಾಗಿರುವ ಪದವನೆ ತೋರಿ ಅದೆ ನೀನೆನ್ನುತ ಪರಿಪರಿ ಸಾರಿ ಶಂಕರಭೋಧವಿದುವೆ ಭವಹಾರಿ3
--------------
ಶಂಕರಭಟ್ಟ ಅಗ್ನಿಹೋತ್ರಿ
ಗುರುಭಕ್ತನೆವೆ ಧನ್ಯನು ಬಲು ಮಾನ್ಯನು ಪ ಗುರುದಯ ಸಂಗಡಿಯನು ಹಿಡಿದಿಹನು | ತರಣೋಪಾಯವ ಕೂಡಿದಾ ನಲಿದಾಡಿದಾ 1 ಅನ್ಯ ಮಾರ್ಗವ ನೋಡನು ತಾ ಕೂಡನು | ತನ್ನ ನಿಷ್ಠೆಯೊಳಾಡುವಾ ಗತಿ ಬೇಡುವಾ 2 ಗುರು ಮಾತೇ ಮಂತ್ರ ವೆಂಬನು | ಸವಿ ದುಂಬನು | ಗುರು ಸೇವೆಯಲಿ ಬಾಳುವಾ ಅದೇ ಕೇಳುವಾ 3 ಪುಂಡಲೀಕನ ಭಕ್ತಿಯಾ | ಆಸಕ್ತಿಯಾ | ಕಂಡು ತಾನೆವೆ ಬಂದನು ಮುಕುಂದನು 4 ಸಾರಥಿ | ನೆರೆ ಭಕ್ತಿ ಕೀಲ ಬೋಧನಾ ಹೇಳಿದನು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗುರುರಾಜ ಗುರುಸಾರ್ವಭೌಮ ಪ ಗುರುರಾಜ ತವ ಪಾದ ಸರಸಿಜಯುಗಲಕ್ಕೆ ಮೊರೆಪೊಕ್ಕ ಜನರನ್ನ ಪೊರೆ ಎಂದೇ ಅ.ಪ ಶರಣ ಪಾಲಕನೆಂಬೊ - ಬಿರುದು ಬೀರುತಲಿದೆ ಶರಣರ ಮರೆವೊದು ಥರವೇನೋ 1 ಸಾರಿದಜನರ‌ಘ ದೂರಮಾಡುವೆನೆಂಬೊ ಧೀರರ ವಚನವು ಸಾರುತಿದೆ 2 ದೂರದೇಶದಿ ಜನ - ಸಾರಿ ಬಂದರೆ ವಿ - ಚಾರಿಸಿ ಹರಕೆ ಪೊರೈಸುವೀ 3 ಕುಷ್ಟಾದಿ ಮಹರೋಗ ನಷ್ಟಮಾಡುತಲ - ಭಿಷ್ಟೇಯ ಪೂರ್ತಿಪ ಮಹ ಶ್ರೇಷ್ಠನೆ 4 ಆದಿವ್ಯಾಧಿ ಉ-ಪಾಧಿ ಸಂಘಗಳನ್ನು ಮೋದ ಸಲಿಸುವಿ 5 ಸತಿಜನರಿಗೆ ಅತಿ ಹಿತದಿಂದ ಸುತರನ್ನ ಸತತ ನೀಡುವಿ ಯತಿ ಕುಲನಾಥ 6 ಮತಿ ಹೀನ ಅತಿ ಮೂರ್ಖ ತತಿನಿನ್ನ ಭಜಿಸಲು ವಿತತ ಭಕುತಿ ಜ್ಞಾನ ನೀಡುವೀ 7 ಮೂಕ - ಬಧಿರ - ಪಂಗು - ಏಕೋಭಾವದಿ ಸೇವೆ ಏಕಮನದಿ ಮಾಡೆ ರಕ್ಷೀಪಿ 8 ಅವರ ಮನೋ ಬಯಕೆ ಹವಣಿಸಿ - ನೀಡುತ ಅವನಿಯೊಳಗೆ ನೀ ಮೆರೆಯುವೀ 9 ಅಂಧಜನಕೆÀ ಚಕ್ಷು - ವಂಧ್ಯಜನಕೆ ಸುತರು ಬಂದ ಬಂದವರರ್ಥ ಪೂರೈಸುವೀ 10 ಪರಮಂತ್ರ ಪರಯಂತ್ರ ಪರಕೃತ್ಯಪರಮಾಹಿ ಪರಿಪರಿ ವ್ಯಥೆಗಳ ಹರಿಸುವೀ 11 ದುರುಳಜನರ ಬಾಧೆ ಮೊರಳುಮಾಯದ ಮೊದ್ದು ಕಿರಳುಪದ್ರಗಳೆಲ್ಲ ಕಳೆಯುವೀ 12 ಕಾಮಿತ ಫಲಗಳ - ಕಾಮಿಪ ಜನರಿಗೆ ಪ್ರೇಮದಿ ನೀಡುವೊ ಧ್ವರಿ ನೀನೇ 13 ಅನ್ನ ವಸನ ಧನ - ಧಾನ್ಯ ಹೀನರಗಿನ್ನು ಮನ್ನಿಸಿ ನೀನಿತ್ತು ಸಲಹುವೀ 14 ಅಧಿಕಾರ ಕಳಕೊಂಡು ಬದಕಲಾರದ ಜನ ವದÀಗಿ ನಿನ್ನನು ಭಜಿಸೆ ಕರುಣಿಪೀ 15 ಮಾನವ ನಿನ್ನ ಸೇವೆ ಮಾಡುವನವ ಕೋವಿದನಾಗುವ ನಿಶ್ಚಯಾ 16 ಇನಿತೆ ಮೊದಲಾದ ಘನತರ ಮಹಿಮವು ಜನರಿಗೆ ಶಕ್ಯವೆ ಗುರುರಾಯಾ 17 ಸುರತರು ಸುರಧೇನು ವರಚಿಂತಾಮಣಿ ನೀನೆ ಶರಣವತ್ಸಲ ಬಹು ಕರುಣೀಯೇ 18 ದಿನ ದಿನ ಮಹಿಮವು ಘನ ಘನ ತೋರೋದು ಬಿನಗು ಮಾನವರಿಗೆ ತಿಳಿಯಾದೋ 19 ಕರುಣಾನಿಧಿಯೆ ನೀನು ಶರಣ ಮಂದಾರನೆ ಶರಣ ವತ್ಸಲ ನಿನಗೆ ಶರಣೆಂಬೆ 20 ವಸುಧಿತಳದಿ ನೀನೆ ವಶನಾಗೆ ಜನರಿಗೆ ವ್ಯಸನಗಳುಂಟೇನೊ ಪೇಳಯ್ಯಾ 21 ದುರಿತ ದುಷ್ಕøತವೆಲ್ಲ ದೂರದಲೋಡೋವು ಕರಿಯು ಸಿಂಹನ ಕಂಡತೆರನಂತೆ 22 ನಿನ್ನ ನಾಮದ ಸ್ಮರಣೆ ಘನ್ನ ರೋಗಗಳನ್ನು ಚೆನ್ನಾಗಿ ನಾಶನ ಮಾಳ್ಪೋದೋ 23 ರಾಘವೇಂದ್ರ ಗುರು ಯೋಗಿಕುಲಾಗ್ರಣಿ ವೇಗಾದಿ ಪೊರೆದೆನ್ನ ಪಾಲಿಪೆ 24 ಜನನಿ ಜನಕರು ತಮ್ಮ ತನಯರ ಪೊರೆದಂತೆ ದಿನದಿನ ನೀನೇವೆ ಸಲಹೂವಿ 25 ಅನಿಮಿತ್ತ ಬಾಂಧವ ಅನುಗಾಲ ನೀನಿರೆ ಜನರು ಮಾಡುವ ಬಾಧೆÉ ಎನಗೇನೋ 26 ಮನಸಿನೊಳಗೆ ನಿತ್ಯ ನೆನೆಯುತ ತವ ಪಾದ ವನಜ ಯುಗಳ ಮೊರೆ ಪೊಂದಿದೆ 27 ನಿನ್ನ ಮಹಿಮ ಶ್ರವಣ ನಿನ್ನ ಗುಣಕೀರ್ತನ ನಿನ್ನ ಮೂರ್ತಿಧ್ಯಾನ ನೀಡೈಯ್ಯಾ 28 ನಿನ್ನ ಉಪಾಸನ ನಿನ್ನ ದಾಸತ್ವವ ಚನ್ನಾಗಿ ಎನಗಿತ್ತು ಸಲಹೈಯ್ಯಾ 29 ನಿನ್ನನುಳಿದು ಈಗ ಮನ್ನಿಸಿ ಪೊರೆವಂಥ ಘನ್ನ ಮಹಿಮರನ್ನ ಕಾಣೆನೋ 30 ದಾತ ಗುರು ಜಗ ನ್ನಾಥ ವಿಠಲಗತಿ ಪ್ರೀತಿ ಪಾತ್ರನು ನೀನೆ ನಿಜವಯ್ಯೊ 31
--------------
ಗುರುಜಗನ್ನಾಥದಾಸರು
ಗುರುರಾಜ ನಿನ್ನ ಹೊರತು ಪೊರೆವ ಧೊರೆಗಳ ಕಾಣೆ | ಶರಣಜನರಿಷ್ಟವನೆ ಸುರತರುವಿನಂತೀವೆ ಪ ತರಳಪ್ರಹ್ಲಾದನಾಗಿರಲು ವರಭಕುತಿಯಿಂ | ನರಹರಿಯ ಮೆಚ್ಚಿಸಿದೆ ಪರಮಕರುಣಾಸಿಂಧೊ 1 ವ್ಯಾಸಮುನಿಯು ನೀನೆ ವಾಸುದೇವನ ಭಜಿಸಿ | ಲೇಸಾದ ಚಂದ್ರಿಕೆಯ ಭೂಸುರರಿಗರುಹಿದೆ 2 ಶ್ರೀರಾಮಚಂದ್ರಪದಸರಸೀರುಹಾಭೃಂಗ | ಶ್ರೀ ರಾಘವೇಂದ್ರಯತಿ ಸುರುಚಿರಕೃಪಾಪಾಂಗ 3 ನರಹರಿ ಸಿರಿರಾಮ ಮುರವೈರಿ ಮುನಿವ್ಯಾಸ | ಇರುತಿಹರು ನಿನ್ನೊಳು ಧರೆಯ ಪಾಲಿಸೆ ಮುದದಿ 4 ಕರೆದಲ್ಲಿ ಬರುವೆನೆಂದೊರೆದ ವಚನವ ಸಲಿಸೆ | ಭರದಿ ನಾರಾಯಣಪುರಕೈದಿದಿಯೊ ಮುದದಿ 5 ಭೀಮಸೇತ್ವ್ಯಾಖ್ಯ ಮಠ ಸೋಮರಘುತಿಲಕರಿಂ | ದೇ ಮಹಾಸೇವೆಯ ಕೈಗೊಂಡೆಯೋ ಮುದದಿ 6 ದೋಷದೂರನೆ ಪ್ರಭುವೆ ಆಶೆಯಿಂ ಸೇವಿಪರ | ಕ್ಲೇಶವೆಲ್ಲವನಳಿದು ಶ್ರೀಶಕೇಶವನೊಲಿಸೊ 7
--------------
ಶ್ರೀಶ ಕೇಶವದಾಸರು
ಗುರುರಾಯ ಪಾಲಿಸುವುದು ನೀ ಎನ್ನ ಪ ಅನ್ಯರೊಬ್ಬರನಾ ನಾ ಕಾಣೆ ಮನ್ನಿಸಿ ಸಲಹುವರನಾ ನಿನ್ನವನೊ ನಾನು ಅನುದಿನದಲಿ ನಿನ್ನ ನೆನೆದು ನೆನೆದು ಇಂದಿನವರೆಗೆ ನಾ ದಿನಗಳೆದೆನೋ ಅ.ಪ. ಇಷ್ಟುದಿನ ಪಟ್ಟ ಕಷ್ಟವು ಸಾಕೋ ಇಷ್ಟಕೆ ನೀ ದಯಾದೃಷ್ಟಿ ಇಟ್ಟು ಜ್ಞಾನವ ಕೊಡಬೇಕೊ ಕಪಟ ಬುದ್ಧಿಯನಷ್ಟು ಕಳೆದಿಷ್ಟವ ಪೂರೈಸಬೇಕೊ ಬಿಟ್ಟವನಲೊ ್ಲನಾ ಕೊಟ್ಟವರು ಪರಿಕರ ಬಿಟ್ಟವರು ಸರಿ ನಾ ಕಟ್ಟಿಕೊಳ್ವೆ ತವ ಚರಣವ ಕೊರಳಿಗೆ 1 ಅಷ್ಟದಿಕ್ಕುಗಳಿಗೆ ಪರಿಹರಿಸಿಹುದೊ ಇಷ್ಟೆಲ್ಲ ಕೇಳಿ ನಾ ಇಟ್ಟೆ ಮನವನು ತವ ಪಾದದಿ ತಿಳಿದು ಸಂತುಷ್ಟನೆ ಎನ್ನ ಬಿಟ್ಟರೆ ಮುಂದಿನ ಬಟ್ಟೆಯ ಕಾಣದೇ ಕೆಟ್ಟು ನಾ ಮೂರಾಬಟ್ಟೆಯಾಗುವೆನೋ 2 ತವ ಪಾದದಿ ತುಳಿದು ಮೆಟ್ಟಿ ಎನ್ನ ಶಿರ ಥಟ್ಟನೆ ಭೂಮಿಯಲಿ ಕೆಡಹುವುದು ಹುಟ್ಟಿದರೆ ದಯವು ಅಟ್ಟಿ ಅಜ್ಞಾನವ ಕಟ್ಟಿ ಸುಜ್ಞಾನವ ಘಟ್ಟಿ ಭಕುತಿಯನು ಕೊಟ್ಟು ನೀ ಪಾಲಿಸೊ 3
--------------
ಹನುಮೇಶವಿಠಲ
ಗುರುವರ್ಯ ವಿಶ್ವಪ್ರಿಯ ಶಿಷ್ಯರ ಪ ಆಂಗ್ಲದೇಶದ ರಾಣಿಯು ನಿಮ್ಮಯ ಶಾಸ್ತ್ರ ಸಂಪÀದ ಮಹಿಮೆಯನು ಆಂಗ್ಲೇಯ ಜನರಿಂದ ತಿಳಿದು ತಾ ಬಹುಮಾನ- ವಾಂಗ್ಲೇಯ ಭಾಷೆಯೊಳಿತ್ತಳಾದರದಿ 1 ಪಂಡಿತಾಗ್ರಣಿಯಾದರು 2 ಅರುವತ್ತನೆಯ ವರ್ಷದಿ ಪ್ಲವಾಬ್ದದಿ ರಾಜೇಶ ಹಯಮುಖನ ಚರಣವ ಸ್ಮರಿಸುತ್ತ ಸ್ಮರತಾತನನೈದಿದ ಕರುಣಾಸಮುದ್ರರ ಚರಣಕ್ಕೆ ನಮಿಸುವೆ 3
--------------
ವಿಶ್ವೇಂದ್ರತೀರ್ಥ
ಗುರುವಿಗೆ ಒಂದು ಶರಣಾರ್ಥಿ ಗುರು ಭಕ್ತರಿಗೊಂದು ಶರಣಾರ್ಥಿ ಪ ಸಾಧನ ನಾಲ್ಕನು ಸಾಧಿಸುತಿರುತಿಹ ಸಾಧಕರಿಗೆ ಒಂದು ಶರಣಾರ್ಥಿವಾದವ ವರ್ಜಿಸಿ ವಸ್ತುವ ಧ್ಯಾನಿಪ ಉತ್ತಮರಿಗೆ ಒಂದು ಶರಣಾರ್ಥಿ1 ಯೋಗಗಳಿಂದಲೆ ಯೋಗ್ಯರಾಗಿಹ ಯೋಗೀಶರಿಗೊಂದು ಶರಣಾರ್ಥಿರಾಗ ಪೋಗಿ ರಂಜಿಸುತಿರುತಿಹ ರಂಜಕರಿಗೆ ಒಂದು ಶರಣಾರ್ಥಿ 2 ದೂಷಣ ಭೂಷಣ ದೂರ ಮಾಡಿಹ ದೃಢವಂತರಿಗೆ ಒಂದು ಶರಣಾರ್ಥಿಆಸೆಗಳೆಂಬ ಅಳಿದು ಇರುತಿಹ ಆನಂದರಿಗೊಂದು ಶರಣಾರ್ಥಿ3 ಪ್ರಪಂಚವೆಲ್ಲವ ಪರಮಾರ್ಥ ಮಾಡಿಹ ಪಂಡಿತರಿಗೆ ಒಂದು ಶರಣಾರ್ಥಿತಾಪವನೀಗಿ ತಮ್ಮನೆ ಮರೆತಿಹ ತಾಪಸರಿಗೆ ಒಂದು ಶರಣಾರ್ಥಿ4 ಜನನ ಮರಣಗಳ ಜಡರನೆ ಕಳೆದಿಹ ಜನಪತಿಗಳಿಗೊಂದು ಶರಣಾರ್ಥಿಚಿನುಮಯಾತ್ಮಕ ಚಿದಾನಂದನ ಬೆರೆದಿಹ ಚಿದ್ರೂಪರಿಗೆ ಒಂದು ಶರಣಾರ್ಥಿ 5
--------------
ಚಿದಾನಂದ ಅವಧೂತರು
ಗುರುವಿನರಿಯದಾರಂಭ ತೋರುವುದ್ಯಾತಕೆ ಡಂಭ ಸುರಮುನಿಗಳಿಗಿದು ಗುಂಭ ಗುರುಮಾರ್ಗವಾಗಿರಾಲಂಬ 1 ಹೃದಯದೊಳಿರಲಙÁ್ಞನ ತುದಿನಾಲಗಿಲ್ಯಾತಕ ಙÁ್ಞನ ಇದು ನಿಜ ಮೋಹಿಸು ಖೂನ ಸಾಧಿಸುದಲ್ಲ ನಿಧಾನ 2 ಅಳಿಯದೆ ಕಾಮಕ್ರೋಧ ಹೊಳುವದ್ಯಾತಕೆ ಬೋಧ ತಿಳಿಯದೆ ಶ್ರೀಗುರುಪಾದ ಬೆಳಿಸುವದ್ಯಾತಕೆ ವಿವಾದ 3 ತತ್ವನರಿಯದ ಕವಿತ್ವ ಯಾತಕಿದು ಅಹಮತ್ವ ಸತ್ವದೊಳಾಗದೆ ಕವಿತ್ವ ಮಿಥ್ಯವಿದ್ಯಾತಕೆ ಮಹತ್ವ 4 ಆಶಿಯನಳಿದರೆ ಸಾಕು ವೇಷದೋರುದ್ಯಾತಕೆ ಬೇಕು ಹಸನಾದರ ರಸಬೇಕು ಭಾಸುದು ಮಹಿಪತಿ ಘನಥೋಕು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರುವೆ ಪರಬ್ರಹ್ಮ ವಾಸುದೇವಾರ್ಯಗುರುವೆ ಪರಬ್ರಹ್ಮ ಪಅರಿವು ಮರವೆಗಳ ಪರಿಯ ನಿರೂಪಿಸಿಅರಿ'ನ ಘನವಾಹ ತೆರಗೈದು ಪಾಲಿಪ ಅ.ಪಸುಖಬುದ್ಧಿುಂಪಾಪಾಸಕ್ತ ಮಾನಸರನುಯುಕುತಿುಂದಲಿ ಹರಿಭಕುತಿಗಳವಡಿಪ 1ಭಾಗವತಾರ್ಥದಿ ರಾಗವ ಪುಟ್ಟಿಸಿಹಾಗೆ ಗೀತಾಮೃತ ಸಾಗರದೆಡೆಗೊಯ್ವ 2ನಾನಾಮತಗಳೊಳು ಮಾನಿಸಹೊಗದಂತೆಶ್ರೀನಿವಾಸನ ಪಾದಧ್ಯಾನವ ಬಲಿಸುವ 3ಕಾಮಾದಿ ಕಲುತ ತಾಮಸ ಜನರನುಪ್ರೇಮದಿಂದಲಿ ಸಪ್ತ ಭೂ'ುಕೆಗೇರಿಪ 4ಒಂದೊಂದರೊಳು ಮತಿನಿಂದು ತಿಳಿದೊಳಿಸೆಂದು ನಡೆದೂ ಪೂರ್ಣಾನಂದರಹುದಮಾಳ್ಪ 5ಹೊರಗೊಳಗುಗಾಣದೆ ಬರಿಯರಿವಳಮಲಪರಮನೆ ನಾನೆಂಬ ಪರಿಗೈದು ಪೊರೆವ 6ಕರುಣದಿಂ ಚಿಕನಾಗಪುರದಿ ಭಜಕರಿಗೆಕರದು ಜ್ಞಾನಾಮೃತವೆರೆವ ವಾಸುದೇವಾರ್ಯ 7
--------------
ವೆಂಕಟದಾಸರು
ಗುರುವೆ ವರಹಜೆ ತಟವಾಸಾ | ಗುರುವೇ ಪುರಿ ಮಂತ್ರಾಧೀಶಾ ಪ ಆರು ಮೊರೆ ಇಡುವೆನೊ | ವರಪದ ಪದುಮಕೆಕರುಣದಲೆಮನ | ಹರಿಯಲಿ ಇರಿಸೋ ಅ.ಪ. ಬಾಗಿ ಭಜಿಪೆ ಗುರುವೇ | ಎನ್ನಯರೋಗ ಹರಿಸು ಪ್ರಭುವೇ ||ರಾಘವೇಂದ್ರ ದುರಿತೌಘ ವಿದೂರನೆ |ಭೋಗಿ ಶಯನ ಪದ | ರಾಗದಿ ಭಜಿಸುವ 1 ಭೂತ ಪ್ರೇತ ಬಾಧೇ | ಬಿಡಿಸುವಖ್ಯಾತಿ ನಿಮ್ಮದು ತಿಳಿದೇ ||ದೂತರೆನಿಪ ಜನ | ಆತುನಿಮ್ಮ ಪದ |ಪ್ರೀತಿ ಸೇವೆಯಲಿ | ಕಾತುರರಿಹರೋ 2 ಯೋನಿ ಬರಲೇನು ಅಂಜೆನೂ 3 ಪರಿಮಳಾರ್ಯರೆಂದೂ | ನಿಮ್ಮಯಬಿರಿದು ಕೇಳಿ ಬಂದೂ ||ಮೊರೆಯ ನಿಡುವೆ ತವ | ಚರಣಾಂಬುರುಹಕೆ |ಅರಿವ ನೀಯೊ ತವ | ಪರಿಮಳ ಸೊಬಗನು 4 ಪಾದ ಬಿಸಜ ||ವರ ಸುಹೃದ್ಗ ಗುರು | ಗೋವಿಂದ ವಿಠಲನಚರಣ ಸರೋಜವ | ನಿರುತ ಭಜಿಪ ಗುರು 5
--------------
ಗುರುಗೋವಿಂದವಿಠಲರು
ಗುರುವೆಂದರವಗೆ ಪರಮಸುಖ ಭವಾರ್ಣವ ದುಃಖ ಧ್ರುವ ಗುರು ಎಂದ್ಹಾಂಗ ಬಾಯಿಲಿ ಅರಿಯಬೇಕು ಮನದಲಿ ದೋರುವದಾನಂದ ಲೀಲಿ ಗುರು ಕೃಪೆಯಲಿ 1 ಅರ್ತರೊಂದೆ ಸಾಕು ಪೂರ್ಣ ಕರ್ತು ಸದ್ಗುರು ಚರಣ ಮತ್ರ್ಯದೊಳಿದೆ ನಿಧಾನ ಸಾರ್ಥಕಗುಣ 2 ನರನೆಂದು ಮರೆದೀಗ ಗುರು ನಿಜಾಗುವ ಬ್ಯಾಗ ಸೆರಗು ಮಹಿಪತಿಗೆ ದೋರಿತು ಈಗ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರುಸುಶೀಲೇಂದ್ರ | ಚರಣವಾರಿಜ ಯುಗ್ಮ ಸ್ಮರಿಸುವ ನರರು ಶ್ರೀಹರಿದಾಸರು ಪ ಹರಿವರ ಸುಮಚಾಬ್ಧಿ | ಹರಿಣಾಂಕರೆನಿಸಿದ ವರಸುವೃತೀಂದ್ರರ ತೀರ್ಥರ ಕರಕಮಲಜ ಅ.ಪ ಮಾಸ ತ್ರಯದಿ ಸಡಗರದಲಿ ಮಹ ಸಭೆ ನಿರ್ಮಿಸಿ ಪೊಡವಿಯೊಳಿದ್ದ ಭೂಸರರಾಜ್ಞ ಪತ್ರ ಬರಮಾಡಿ ವಿದ್ವಾಂಸರ ಒಡಗೂಡಿ | ಮಧ್ವಾಗಮನವನು ನೋಡಿ ಬೆಲೆಯುಳ್ಳವೆಗ್ಗಳ ಒಡವೆ ಉಡುಪಗಳನು ಕರುಣಿಸಿ ಮೃಷ್ಟಾನ್ನ ದ್ವಿಜರಿಗೆ ಕಡು ಸುಪ್ರೇಮದಿ ಸಲಿಸಿ | ಮುದ ಬಡಿಸಿ ಜಡಕುಮಾಯ್ಗಳ | ಗಡಣ ಜಡಧಿಗೆ ವಡೆಯ ತಾನೆನಿಸಿ ಕ್ರೋಢ ಜಾಸ್ಥಿತ | ಒಡೆಯ ಶ್ರೀಗುರು ರಾಘವೇಂದ್ರರ ಅಡಿಗಳಾಬ್ಜಕಾ ರಡಿಯಂತೊಪ್ಪುತ | ಬಿಡದೆ ಸಂತತ ಧೃಢದಿ ಸೇವಿಸಿ ಜಡಜ ಜಾಂಡದಿ ಮೆರೆದ ಅಸ್ಮದ್ 1 ತರಣಿ ಕುಲೇಂದ್ರನ ಕರುಣವೆಷ್ಟಿವರೊಳು ಅರುಹಲಾರೆ ವರಕಾಪ್ಯಾಸನ ಪುರಕೆ ಎರಡಾರು ಯತಿಗಳ ವತಿಯಿಂದ ತಮ್ಮಯ ಶಿಷ್ಯ ತತಿಯಿಂದ ಬಹುವಿಧ ಬಿರುದಾವಳಿಯಿಂದ ತೆರಳಿ ಶಶಿರವಿವರ ಸುವಾದ್ಯಧ್ವಾನ ಮೊಳಗಿಸುತ ‌ಘನ ಭಕ್ತಿ ಪರವಶರಾಗಿ ಸುರಚಿರ ಕನಕಮಣಿ ಧನ ತನುಮನ ತ್ವರಿತ ತೃಣ ಬಗೆಯ ದೇವಕಿ ತರಳ ರುಕ್ಮಿಣಿ ವರ ಮುರಾಂತಕÀ ಚರಣಗರ್ಪಿಸುತ | ಆನಂದಪಡುತ ಸರ್ವಮುನಿ ಜನಗಳಿಗೆ ಬಲು ಉಪಚರಿಸಿ | ಮನ್ನಣೆ ಧರಿಸಿ ಹರುಷದಿ ವರ ಸುಧೀಂದ್ರರ ಕರಜರನು ನೆರೆಸ್ಥಾಪಿಸಿ ಆಶ್ಚÀರ್ಯ ಚರಿತ 2 ಪತಿ ಶೃತಿ ಶಾಸ್ತ್ರಾರ್ಥ ಚತುರ ತನದಿ ಪಡೆದು ವಿತತ ಮಹಿಮನಾದ ಪತಿತ ಪಾವನ ಶಾಮಸುಂದರನ ಸ್ತುತಿಸುತಲಯ ಚಿಂತನೆ ಗೈಯುತ ಶ್ರೀಯುತ ಸಂಸ್ಥಾನಮತಿ ವಿಶಾರದರಾದವರ ಸುವೃತೀಂದ್ರ ತೀರ್ಥರಿಗೆ ಹಿತದಿಂದ ಒಪ್ಪಿಸಿ | ಯತಿ ಧೀರೇಂದ್ರರ ಚಾರುಸ್ಥಳದೊಳಗೆ ತನುವಿತ್ತು | ಹರಿಪುರಪಥವ ಪಿಡಿದೈದಿದರು ಚನ್ನಾಗಿ | ಸೇವಿಪ ಜನರಿಗೆ ಅತಿದಯದಿ ಮನೋರಥವ ನೀಡುತ ಸತತ ಮಾಣದೆ ಪರಮ ಭಕುತಿಲಿ ಪೃಥ್ವಿ ಸುರಕರ ಶತಪತ್ರಗಳಿಂದ ನುತಿಸಿಕೊಳುತಲರ್ಚನೆಗೊಂಬ 3
--------------
ಶಾಮಸುಂದರ ವಿಠಲ
ಗುರುಹಿರಿಯರನುಸರಿಸಿ ಹÀರಿಯ ಮನದೊಳಗಿರಿಸಿಪರಗತಿಯ ಬೇಗ ಸಾಧಿಸಿರೊ ಪ. ಲೆಕ್ಕವಿಲ್ಲದ ದೇಹವೆಂಬ ಸೆರೆಮನೆಯೊಳಗೆಸಿಕ್ಕಿ ಬಹುಕಾಲ ಬಳಲದಿರಿರಕ್ಕಸಾರಿಯ ಭಕ್ತರೊಳು ಸೇರಿ ಮುಂದೆ ಸೆರೆ-ಯಿಕ್ಕದಂತವನ ಮರೆಹೋಗಿರೊ 1 ಕಂಬಳಿಯ ಬುತ್ತಿಯಂತೀ ದೇಹದೊಳಗೆ ಸುಖವೆಂಬುದಿಲ್ಲವು ದುಃಖಭರಿತಅಂಬುಜಾಕ್ಷನ ದಿವ್ಯ ಮಂಗಳ ಕಥಾಮೃತವ-ನುಂಬ ಸಂಭ್ರಮಕೆ ಸರಿಗಾಣೆನು 2 ಮಕ್ಕಳುಗಳಳುವಾಗ ಮಡದಿಯರು ಜರಿವಾಗಭಿಕ್ಷುಕರು ಬಂದು ಬೈದ್ಹೋಗುವಾಗಇಕ್ಕಿ ಪೊರೆವುದಕೆ ಬಗೆಯಿಲ್ಲದ ದರಿದ್ರಂಗೆಸೌಖ್ಯವೆತ್ತಣದು ಮನುಜರಿಗೆ 3 ತಾಯ ಮಾರಿ ತೊತ್ತಕೊಂಬ ಪಾಮರನಂತೆಹೇಯಕುಜನರ ಚರಣಕೆರಗಿಶ್ರೀಯರಸನಂಘ್ರಿಗಳ ನೆನೆಯಲೊಲ್ಲದ ಮನುಜರಿಗೆಆಯುಷ್ಯ ಬರಿದೆ ಹೋಯಿತಲ್ಲ 4 ಐವರಿತ್ತೊಡವೆಯನು ಅವರವರು ಒಯ್ವರು ಮ-ತ್ತೈವರೆಂಬುವರು ತೊಲಗುವರುಮೈಯ ಹತ್ತರಕೂಟ ಹರಿದು ಹೋಗುವ ಮುನ್ನಕೈಯ ಪಿಡಿದೆತ್ತುವರ ಕಾಣೆ 5 ಕಾಲು ಜವಗುಂದಿದವು ರೋಗರುಜಿನಗಳಿಂದಕಾಲನ ಭಟರು ಬಂದು ಕವಿದುಸಾಲಾಗಿ ನಿಂತಾಗ ಮುಖಘಂಟೆಯೊಳಗಿನನಾಲಿಗೆಗೆ ನಾದವೆಲ್ಲಿಹುದೊ 6 ಈಗಲೆ ಹರಿನಾಮನಾದದಿಂದೆಚ್ಚೆತ್ತುನಾಗಶಯನನ ಪುರದ ಪಥವಆಗಮಜ್ಞರ ಕೈಯ ಕೇಳಿಕೊಳ್ಳಿರೊ ನೀವುಈ ಗಾಳಿದೀಪ ಸ್ಥಿರವಲ್ಲ7 ಜರೆ ಬಂದು ಕಡೆಯಲ್ಲಿ ಗುರುಗುರುಟ್ಟುವಾಗಶರೀರಸಂಬಂಧಿಗಳ ಕಾಟತರುಣಿಯರ ಮೇಲಾಸೆ ತಮ್ಮ ಹಿತವರಿಯದೆಬರಿದೆ ಭವದೊಳಗೆ ಬಳಲದಿರಿ 8 ವೇದಶಾಸ್ತ್ರವನೋದಲಿಲ್ಲ ಜಪತಪಸಾಧು ಸತ್ಕರ್ಮಗಳ ಸರಕಿಲ್ಲಮಾಧವನ ಪೂಜೆಯನು ಮಾಡಿದವನಲ್ಲ ಹರಿಪಾದತೀರ್ಥ ವ್ರತಗಳಿಲ್ಲ 9 ಊಧ್ರ್ವಪುಂಢ್ರsÀಗಳೆಲ್ಲಿ ಹರಿಯ ಲಾಂಛನವೆಲ್ಲಿಪದ್ಮಾಕ್ಷಿ ಶ್ರೀತುಲಸಿ ಸರಗಳೆಲ್ಲಿಸದ್ಧರ್ಮಪಥವೆಲ್ಲಿ ವಿಷಯಾಂಧಕೂಪದೊಳುಬಿದ್ದು ಹೋರಳುವ ಮನುಜರೆಲ್ಲಿ 10 ಏಕಾದಶಿಯ ಮಾಡಿ ಯತಿಗಳೊಡನೆ ಆಡಿಪೋಕವೃತ್ತಿಗಳನೀಡಾಡಿಶ್ರೀಕಾಂತನನು ಬೇಡಿ ಸುಕೃತಿಗಳನೆ ಕೂಡಿಆ ಕೃಷ್ಣನಂಘ್ರಿಗಳ ಪಾಡಿ 11 ಉಕ್ಕಿ ಹರಿಯನೆ ಪೊಗಳಿ ಅವನಂಗಣದಿ ಹೊರಳಿಶುಷ್ಕ ತರ್ಕಗಳ ಮೇಲೆ ಉಗುಳಿಭಕ್ತಿಜ್ಞಾನಗಳಿರಲಿ ಮಿಕ್ಕ ಪಥದಿಂ ಮರಳಿಮುಕ್ತಿಮಾರ್ಗದಲಿನ್ನು ತೆರಳಿ 12 ಕೊಳ್ಳೆನಾಯಕ ಬಂದು ಕೋಟೆಗಡರದ ಮುನ್ನಕಳ್ಳರೈವರ ಕಾಟದಿಂದಉಳ್ಳ ಪುಣ್ಯಾರ್ಥಗಳು ಕೊಳ್ಳೆ ಹೋಗದ ಮುನ್ನಫುಲ್ಲನಾಭದಲಿ ಬಚ್ಚಿಡಿರೊ 13 ಮಲಮೂತ್ರರಕ್ತಮಾಂಸದ ರಾಸಿಗಳು ಕೂಡಿಎಲುವಿನ ಬಿಲದಲ್ಲಿ ಗೂಡಮಾಡಿಬೆಳೆಸಿದೀ ತನುವೆಂಬ ನರಕದಾಸೆಯ ಬಿಟ್ಟುಜಲಜನಾಭನ ಸೇರಿಕೊಳ್ಳಿರೊ14 ಒಂಬತ್ತು ಛಿದ್ರವುಳ್ಳ ದೇಹವೆಂಬ ಮಡಕೆಯಲ್ಲಿತುಂಬಿದ ವಾಯು ಸ್ಥಿರವೆಂದುನಂಬಿಕೊಂಡಿರಬೇಡಿ ಹಯವದನ ಹರಿಯ ಪಾ-ದಾಂಬುಜವ ಸೇರಿ ಬದುಕಿರೊ 15
--------------
ವಾದಿರಾಜ
ಗುಲ್ಲು ಹುಟ್ಟಿತು ಗ್ರಾಮದೊಳಗೆ ಗಲಿಬಿಲಿಯಾಯಿತು ನೀವು ಕೇಳಿಖುಲ್ಲರು ಕುಲಸಹ ಕೂಡೆ ಮಡಿದರು ನೀವು ಕೇಳಿ ಪ ಮರ ಮುರಿದೊರಗಿತು ನೆರಳೆ ನೆಲೆಯಾಯಿತು ನೀವು ಕೇಳಿಕುರಿತಳೇ ಸತ್ತವು ನರಿ ಮಾಳಿಗೆ ಏರಿತು ನೀವು ಕೇಳಿ 1 ಅತ್ತೆಯು ಅಳಿದಳು ಸೊಸೆಯು ಸುಖಿಸಿದಳು ನೀವು ಕೇಳಿಮುತ್ತೈದೆಯಾದಳು ರಂಡೆ ತಾನೀಗ ನೀವು ಕೇಳಿ2 ಕೊಡವೊಡೆಯಿತು ಕಳ್ಳರ ತಲೆ ಹೋದವು ನೀವು ಕೇಳಿನಡೆದುಹೋದರು ಬಯಲೂರಿಗೆ ಗೂಳೆಯ ನೀವು ಕೇಳಿ 3 ಮಂಡೆಗೆ ಕೈ ಬಂದಿತು ಮುರುಕು ಆಯಿತು ಹುಟ್ಟು ನೀವು ಕೇಳಿರುಂಡವಿಲ್ಲದೆ ತಲೆ ಬಂದು ಹತ್ತಿತು ನೀವು ಕೇಳಿ 4 ಗುಡ್ಡದ ಸಂದಿಯ ನೀರನೆ ಕುಡಿದು ನೀವು ಕೇಳಿದೊಡ್ಡ ಚಿದಾನಂದ ಗುರುವ ಸೇರಿದರು ನೀವು ಕೇಳಿ 5
--------------
ಚಿದಾನಂದ ಅವಧೂತರು
ಗೋದಾವರಿ ಎನಗೆ ಶ್ರೀಧರನ ತೋರೆ ಪ. ನೀ ದಯದಿ ಸಲಹೆನ್ನ ಮಾಧವಗೆ ಪ್ರಿಯೆ ಅ.ಪ. ಸ್ವಚ್ಛವರ್ಣಳೆ ಬಹು ಹೆಚ್ಚಾಗಿ ಪರಿಯುವಳೆ ಮುಚ್ಚಿರುವ ಮಲಗಳನು ದೂರಮಾಡೆ ಅಚ್ಯುತನ ಪದವೀವ ಹೆಚ್ಚಿನಾ ಜ್ಞಾನವನು ಸ್ವಚ್ಛತನದಲಿ ಕೊಟ್ಟು ಮೆಚ್ಚಿ ಎನ್ನನು ಸಲಹೆ 1 ಧರೆಯ ಜನರು ನಿನ್ನೊಳ್ ಬರುತ ಮಲಗಳ ತೊಳೆಯೆ ಅರಿತು ಅದನು ಮನದಿ ಪರಿಹರಿಸಿಕೊಳಲು ಪರಮ ಭಾಗವತರ ವರ ಮಂದಿರಕೆ ಪೋಗಿ ವರಹ ವೆಂಕಟಗಿರಿಯೊಳ್ ಸ್ಥಿರವಾಗಿ ನಿಂತೆ 2 ಬರುತ ದಾರಿಯೊಳೆನಗೆ ಸ್ವಪ್ನದಲಿ ತೋರಿದೆ ವರ ದಿವ್ಯರೂಪವನು ನಾರಿಮಣಿಯೆ ಸರಿಗೆ ಕಂಕಣ ಮುತ್ತಿನಾ ಬುಗುಡಿಯನೆ ಧರಿಸಿ ವರ ಮುತ್ತೈದೆಯರಿಬ್ಬರಂದದಲಿ ತೋರಿದೆ 3 ಮುಕ್ಕೋಟಿ ಗಂಧರ್ವ ದೇವರ್ಕಳೂ ಬರುತಿರಲು ಅಕ್ಕರದಿ ತಂಗಿಯನೆ ಒಡಗೂಡುತ ಲಕ್ಕುಮಿ ಸ್ವಾಮಿ ಶ್ರೀ ಪುಷ್ಕರಣಿ ಸಾರಿರಲು ಉಕ್ಕುವೋ ಉಲ್ಲಾಸದಿಂದ ತೆರಳಿದೆಯೆ 4 ಜಿಷ್ಣು ಸಖನ ದಿವ್ಯ ಪಟ್ಟಣವ ಸೇರಲು ಕೃಷ್ಣವೇಣಿಯ ಒಡಗೂಡಿ ವಿಷ್ಣುಪಾದೋದ್ಭವೆಗೆ ಸರಿಯೆನಿಸಿ ಗೋಪಾಲ ಕೃಷ್ಣವಿಠ್ಠಲನ ಬಹುನಿಷ್ಠೆಯಿಂ ಧ್ಯಾನಿಸುವೆ 5
--------------
ಅಂಬಾಬಾಯಿ