ಒಟ್ಟು 1900 ಕಡೆಗಳಲ್ಲಿ , 109 ದಾಸರು , 1384 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬರುವ ಸಂದಣಿ ಭಾಳೆ ಭಾಳವೆ ಅಲ್ಲಿ ರಂಭೆ ಊರ್ವಶಿಯರ ಸಮ್ಮೇಳವೆ ಪ. ವರಗಿರಿ ವಾಸನ ಕರೆಯ ಬರುವ ಸೊಬಗು ಧರೆಯ ಮ್ಯಾಲಿಲ್ಲ ಸುಂದರಿಯೆ ರುಕ್ಮಿಣಿಯೆ 1 ಪಾಂಚಾಲಿ ಮೊದಲಾದ ಕೆಂಚೆಯರ ಆಭರಣವುಮಿಂಚಿನಂತೆ ಹೊಳೆಯುತ ಸಿದ್ಧರಾಗಿಹರಮ್ಮ ಚಂಚಲೆಯರು2 ಕಾಲಿಂದಿ ಮೊದಲಾದವರು ಭಾಳ ವಸ್ತಗಳಿಟ್ಟುವೈಯಾರಿಯರು ಒಲಿಯುತ ವ್ಯಾಳಾಶಯನನ ಬಳಿಗೆ 3 ಭದ್ರೆ ಮೊದಲಾದವರು ತಿದ್ದಿ ತಳಪಿಟ್ಟು ಶುದ್ಧ ವಸ್ತಗಳಿಟ್ಟುಸಿದ್ಧರಾಗಿಹರಮ್ಮ ಅನಿರುದ್ದನ ಕರೆಯಲು4 ಮಂದಗಮನೆಯರು ಗಂಧಕಸ್ತೂರಿ ಪುಷ್ಪಅಂದಾಗಿ ಧರಿಸಿ ಆನಂದವಾಗಿಹರಮ್ಮ5 ಕಾಲಂದುಗೆಗೆಜ್ಜಿ ತೋಳಲೆ ತಾಯಿತ ಭಾರಿ ವಸ್ತಗಳಿಟ್ಟು ಲೋಲ್ಯಾಡುತಿಹರಮ್ಮ6 ಅಚ್ಚಮುತ್ತಿನ ವಸ್ತ ಸ್ವಚ್ಚತೋರುವಂತೆ ಬಿಚ್ಚಿ ಚಾದರ ಹೊತ್ತು ಮಚ್ಚನೇತ್ರಿಯರೆಲ್ಲ 7 ಅಂದುಗೆ ಅರಳೆಲೆ ಬಿಂದುಲಿ ಭಾಪುರಿ ಕಂದರಿಗೊಸ್ತಗಳಿಟ್ಟು ಆನಂದವಾಗಿಹರಮ್ಮ8 ಮುತ್ತಿನ ಝಲ್ಲೆ ವಸ್ತಗಳಿಟ್ಟು ಫುಲ್ಲನಾಭನ ಕರೆಯಲು ಎಲ್ಲರೂನಿಂತಾರೆ9 ಶ್ರೇಷ್ಠ ರಾಮೇಶನ ಅಷ್ಷೊಂದು ಕರೆಯಲು ಪಟ್ಟಾವಳಿಗಳನುಟ್ಟು ಧಿಟ್ಟೆಯರು ನಿಂತಾರೆ10
--------------
ಗಲಗಲಿಅವ್ವನವರು
ಬಲವಂತರೋಳಗೆ ಬಲವಂತ ಹನುಮಾ | ನಳಿನಸಂಭವ ಕರ್ತನಾದ ಮಹಿಮಾ ಪ ಗಾವುದೈದತ್ತು ಸಾವಿರದಲಿಹ ಪರ್ವತವ | ಝಾವ ಮೂರಕೆ ತಂದ ನೋಡಿನೇಮಾ1 ಪೋಗಲಾಗಮ್ಯವಾಗಿದ್ದ ಸ್ಥಳವನೇ ಪೊಕ್ಕು | ಸೌಗಂಧಿಕಾ ಪುಷ್ಪ ತಂದ ಭೀಮಾ2 ವೇದಾಂತ ಸಾಗರದಿ ಖಳನಬಳಿಪ ಹಲವು | ದು- ರ್ವಾದಿ ಜಲಚರರ ಬಾಯಿಬಿಗಿದ ಮಹಿಮಾ 3 ಗುರು ಮಹೀಪತಿ ಸ್ವಾಮಿ ರಾಮಚಂದ್ರ ಪ್ರೀಯ | ದುರಿತೌಘದ್ಯುಮಣಿ ಎನಿಪ ನಾಮಾ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಲುಕಷ್ಟ ಬರಗಾಲ ಬಂದಿತಯ್ಯ ವೈರಿ ಜನಕೆ ಬರಬಾರದಯ್ಯ ಪ ಶಿಶುಗಳಿಗೆ ಹಾಲಿಲ್ಲ ಪಶುಗಳಿಗೆ ಮೇವಿಲ್ಲ ಉಸರಲು ಬಾಯಿಲ್ಲ ವೃದ್ಧ ಜನಕೇ ಅಶನ ವಸನಕ್ಕಾಗಿ ವ್ಯಸನ ಪೂರಿತರಾಗಿ ನಿಶಿ ಹಗಲು ಜನರೆಲ್ಲ ಉಸುರು ಹಾಕುತಲಿಹರು 1 ಧÀವಸಧ್ಯಾನ್ಯದ ಬೆಲೆಯು ದಿವಸ ದಿವಸಕೆ ಮಹಾ ಪ್ರವಾಹದಂದದಿ ವೃಧ್ಧಿಯಾಗುತಲಿಹುದು ಅವಸರಕೆ ಬೇಡಿದರೆ ಲವಣದೊರೆಯದು ಮೇಲೆ ಶಿವಶಿವಾಯೆಂದು ಭವಣಿಯನನುಭವಿಸುವರು 2 ಶಾರೆ ಕಾಳು ಭಿಕ್ಷೆಕೆರೆಯುವದಕೆ ಗತಿಯಿಲ್ಲಾ ಶರಗೊಡ್ಡಿ ಕರೆದರೂ ಕೊಂಡರೊಬ್ಬರುಯಿಲ್ಲಾ ಅರೆಹೊಟ್ಟಿಯುಂಡು ಹರಕು ಬಟ್ಟಯನುಟ್ಟ ಮರಮರನೆ ಮನದೊಳಗೆ ಮರುಗುವರು ಬಡಜನರೂ 3 ಜೋಳನವಣಿ ಸಜ್ಜಿ ಕಾಳಿಗೇರಿದ ಬೆಲೆಗೆ ತಾಳಿ ಮನದಲಿ ವ್ಯಥಿಯ ಕೂಲಿ ಜನರು ಕೂಳಿಗಾಗದು ಎಂದು ಬಾಳುವೆಯ ಗೈಯುವಂಥ ಕೂಲಿವಲ್ಲೆವು ಎನುತ ಗೋಳಿಡುತಲಿಹರು 4 ಕಡಲೆ ಕಾಣದ ಹರಿಯು | ಕಡಲೊಳಡಗಿದ ಮೃಡನು ಸೊಡರೆಣ್ಣೆಸಿಗದೆಂದು ಸುಡುಗಾಡು ಸೇರಿದಾ ಅಡಕಿ ಸಕ್ಕರೆ ಗೋಧಿ ಕೊಡುವ ಬೆಲೆಯನು ಕೇಳಿ ಮಿಡುಕಿ ಮನದೊಳು ಕಣ್ಣ ಬಿಡುತಿಹರು ಸುಮನಸರು 5 ಮಳೆರಾಯ ಮುನಿದುದಕೆ ಹೊಲ ಬೆಳೆಯದಿದ್ದುದಕೆ ಬಳುತಿಹವು ಬಡಜನರ ಕಣ್ಣಿಂದ ನೀರು ಜಲಹರಿಸುವದು ನೋಡಿ ನಲಿದಾಡಿ ನಗುತಿಹಳುಕ್ಷಾಮದೇವಿ 6 ಕ್ಷಾಮದೇವಿಗೆ ತನ್ನ | ಧಾಮಸೇರುವಂತೆ ನೀಡಿ ಮಾಡಿ ಸಾಕು ನಮ್ಮ ಸಕಲ ಜನಕೇ | ಕ್ಷೆಮ ಸೌಖ್ಯವಗರೆದು | ಪ್ರೇಮದಲಿ ಪೊರೆ ಕರವ ನಾ | ಮುಗಿದು ಪ್ರಾರ್ಥಿಸುವೆ ಶಾಮಸುಂದರ ಸ್ವಾಮಿ 7
--------------
ಶಾಮಸುಂದರ ವಿಠಲ
ಬಲುಸೂಕ್ಷ್ಮ ಗುರು ಗೂಢವಿದ್ಯ ನೆಲೆವಂತಗಿದು ನಿಜವಾಗುದು ಸಾಧ್ಯ ಧ್ರುವ ಕಣ್ಣಿನ ಕೊನೆ ಮುಟ್ಟಿನೋಡಿ ನಿಜಖೂನ ಉನ್ಮನವಾಗಿ ಬೆರೆದಾಡುವ ನಿಜಸ್ಥಾನ ಚೆನ್ನಾಗ್ಯಾದಾನಂದ ಘನ ಭಿನ್ನವಿಲ್ಲದೆ ಮಾಡಿ ನಿಜಗುರು ಧ್ಯಾನ 1 ಜಾಗ್ರ ನಿದ್ರೆಯ ಮಧ್ಯ ಅರವಿನೊಳು ನಿಜಗೂಡಿ ಶೀಘ್ರ ಸಿದ್ಧಾಂತನುಭವಿಸಿ ತಾಂ ನಿಜಮಾಡಿ ಅಗ್ರ ಗುರುಪಾದವನು ಕೂಡಿ ಶುಕ ಮುನಿಗಳಿಗಿದೆ ನೋಡಿ 2 ಶಿರದಲಿ ಕರವಿಟ್ಟು ನೋಡಿ ನಿಜವರ್ಮ ಹರಿಸಿ ಅನೇಕ ಜನ್ಮಾಂತರದ ದುಷ್ಕರ್ಮ ತರಳಮಹಿಪತಿಗಿದೆ ಸುಬ್ರಹ್ಮ ಗುರು ಭಾಸ್ಕರಸ್ವಾಮಿ ಶ್ರೀಪಾದ ಧರ್ಮ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಾ ದೀನವತ್ಸಲ ಲಕ್ಷ್ಮೀನಿವಾಸ ಶ್ರೀವೆಂಕಟೇಶ ಮಾಧವ ಮಧುರಿಪು ಮಾನುಷವೇಷ ಶರಣಾಗತಪೋಷಪ. ವೇದಾಗಮ್ಯ ದಯೋದಧಿ ಗೈದಪ- ರಾಧ ಕ್ಷಮಿಸಿ ಸುಗುಣೋದಯನಾಗುತಅ.ಪ. ಅನಾಥ ಜನರ ಕಾಮಧೇನು ಕಾಯೊ ಎಮ್ಮನು ದಾನವಕಾನನಕಲ್ಪಕೃಶಾನು ಸರ್ವೋತ್ತಮ ನೀನು ಆನತಜನ ಸುತ್ರಾಣಿಸುವಂತೆ ಪ್ರ- ದಾನಿಯಂತೆ ಶತಭಾನು ಪ್ರಕಾಶದಿ1 ಕೋಟಿ ಬ್ರಹ್ಮಾಂಡವ ಕಾಯುವ ಮಹಿಮ ಸದ್ಗುಣಗಣಧಾಮ ಹಾಟಕವಸನ ಕೈರವಶ್ಯಾಮ ಮುನಿಮನವಿಶ್ರಾಮ ಕಾಟಕ ಮನಸಿನ ಮಾಟವ ನಿಲ್ಲಿಸಿ ಘೋಟಕಾಸ್ಯ ನರನಾಟಕಧಾರಿ2 ಸೇನಾನಾಯಕನಿಲ್ಲದ ಸೇನೆ ಕಂಡರೆ ತಾನೆ ಭೂನಾಥಗಿಲ್ಲವೇನು ಬೇನೆ ಉಂಟೆಂಬುದು ನೀನೆ ಕಾಣಿಸದೆಮ್ಮಲಿ ಮೌನವ ಮಾಳ್ಪರೆ ದೀನಜನರ ದುಮ್ಮಾನಗೊಳಿಸುವರೆ 3 ಹಿಂದೆಮ್ಮ ಕಾಯ್ದವ ನೀನೆ ಹರಿ ಸುರನರ ಕೈವಾರಿ ಮಂದಜ್ಞಾನಿಗಳ ತಪ್ಪನು ಮಾರಿ ಮೂರ್ಲೋಕೋದ್ಧಾರಿ ಹೊಂದಿದವರಿಗೆಂದೆಂದಿಗು ಬಿಡನೆಂ- ಬಂದವ ತೋರಿ ಆನಂದವ ಬೀರುತ 4 ಸರ್ಪಾದ್ರಿಯಿಂದ ಓಡಿಬಂದ ಕಾರ್ಕಳದೊಳು ನಿಂದ ಚಪ್ಪರ ಶ್ರೀನಿವಾಸ ಮುಕುಂದ ಪರಿಪೂರ್ಣಾನಂದ ಒಪ್ಪಿಸಿದೆಮ್ಮಭಿಪ್ರಾಯವ ತಿ- ಮ್ಮಪ್ಪ ಲಕ್ಷ್ಮೀನಾರಾಯಣ ಸಲಿಸಲು 5
--------------
ತುಪಾಕಿ ವೆಂಕಟರಮಣಾಚಾರ್ಯ
ಬಾ ಬಾ ಭಕುತರ ಹೃದಯ ಮಂದಿರ ಬಾ ಬಾ ಜಗದೋದ್ಧಾರ ಪ ಬಾ ಬಾ ವೇಂಕಟಾಚಲ ವಿಹಾರ ಬಾ ಬಾನೇಕಾವತಾರ ಧೀರ-ಶೂರ ಅ.ಪ. ದಕ್ಷ ಕಮಲಾಕ್ಷ ರಾಕ್ಷಸ ಕುಲ ಶಿಕ್ಷ ಲಕ್ಷ್ಮಣನಗ್ರಜ ಲಕ್ಷ್ಮೀವಕ್ಷ ಪಕ್ಷಿವಾಹನ ಪೂರ್ಣಲಕ್ಷಣ ಸರ್ವೇಶ ಮೋಕ್ಷದಾಯಕ ಪಾಂಡವ ಪಕ್ಷ ಅಕ್ಷಯವಂತ ಸೂಕ್ಷ್ಮಾಂಬರ ಧರಾ- ಧ್ಯಕ್ಷ ಪ್ರತ್ಯಕ್ಷದ ದೈವ ಅಕ್ಷತನಾರೇರ ತಕ್ಷಣದಲಿ ತಂದ ಅಕ್ಷರ ಪುರುಷ ಗೋವಿಂದ 1 ಜಾಂಬೂನಾದಾಂಬರ ಸಾಂಬಜನಕ-ನೀ ಲಾಂಬುದ ವರ್ಣಸುಪೂರ್ಣ ಸಾಂಬವಿನುತ ಸುಗುಣಾಂಬುಧಿ ನಾನಾ ವಿ ಡಂಬನ ತೋರಿದ ಮಹಿಮ ಕಾಂಬುವೆ ನಿನ್ನ ಚರಣಾಂಬುಜ ಮನದೊಳು ಜಾಂಬುವಂತನ ಪರಿಪಾಲಾ ವಿ- ಶ್ವಂಭರಂಬರಗ್ಗಣಿಯ ಪಡೆದ ವೃ- ತ್ತುಂಬರೇಶಾಂಬುಧಿ ಶಾಯಿ 2 ತಾಳ ಜಾಗಟೆ ಮದ್ದಳೆ ದುಂದುಭಿ ಭೇರಿ ಕಾಳೆ ಹೆಗ್ಗಾಳೆ ತಮ್ಮಟಿ ನಿ- ಸ್ಸಾಳೆ ಪಟಹ ತಂಬೂರಿ ಪಣವ ಕಂಸಾಳೆ ಕಂಬುಡಿಕ್ಕಿ ವಾದ್ಯ ಸೂಳೈಸುತಲಿರೆ ಭಾಗವತರು ಸಂ ಮೇಳದಿ ಕುಣಿದೊಲಿದಾಡೆ ಸಾಲುಪಂಜಿನ ಗುಂಜಿ ಛತ್ರ ಚಾಮರ ಧ್ವಜ ಢಾಲುಗಳು ಒಪ್ಪಿರಲು3 ಹಂಸವಾಹನ ಕ್ರತುಧ್ವಂಸಿ ಸುಮನಸೋ ತ್ತಂಸ ಕೃಶಾನು ಪಾಪಿಗಳ ಹಿಂಸೆಯ ಗೊಳಿಸುವ ಪಾಂಸರಕ್ಕಸಪಾಳಿ ಕೌಂಶಿಕಾಪತಿಯು ಧನವ ಅಂಶಮಾಲಿ ಸೋಮಕಂಶಿಕಮುನಿ ಪರಮ ಹಂಸರು ಅಲ್ಲಲ್ಲಿ ನಿಂದು ಸಂಶಯ ಮಾಡದೆ ಸಮ್ಮೊಗರಾಗಿಹರು ಕಂಸಾರಿ ತ್ರಿಗುಣಾತೀಶ 4 ಮೂರು ನಾಮಂಗಳ ಧರಿಸಿದ ದಾಸರು ವೀರ ಮಾರುತಿ ಮತದವರು ಸಾರುತ್ತ ಬೊಮ್ಮಾದಿ ಸುರರುಗಳನ್ನು ತಾರತಮ್ಯದಿಂದ ತಿಳಿದು ವಾರಿಧಿಯಲಿ ಮಗ್ನರಾಗಿ ತಾರರು ಮನಸಿಗೆ ಮುರಡು ದೇವತೆಗಳ ಸಾರ ಹೃದಯರು ನಿಂದಿಹರು 5 ಅಂದು ಬಲೀಂದ್ರನ್ನ ದ್ವಾರದಿ ನೀನಿರೆ ಮಂದಮತಿಯು ರಾವಣನು ಬಂದು ಕೆಣಕೆ ನಗುತ ಮಹಾಲೀಲೆ ಯಿಂದಲಿ ನೀನಾ ಖಳನ ಒಂದು ಶತಯೋಜನ ತಡಮಾಡದಲೆ ನೀ ಹಿಂದಕ್ಕೆ ಬೆರಳಲ್ಲಿ ಒಗೆದೆ ಅಂದವಾಗಿಹುದೇನೊ ದೇವ6 ಬಂಗಾರ ರಥದೊಳು ಶೃಂಗಾರವಾದ ಶ್ರೀ ಮಂಗಳಾಂಗ ಕಳಿಂಗ ಭಂಗ ನರಸಿಂಗÀ ಅಂಗಜ ಜನಕ ಸಾ- ರಥಾಂಗ ಪಾಣಿ ವಿಹಂಗ ಪ್ಲ- ಸಂಗೀತ ಲೋಲ ಗೋಪಾಂಗನೆಯರ ಅಂತ- ರಂಗ ಸಂತಾಪ ವಿದೂರ 7 ತಡಮಾಡಲಾಗದೊ ಪೊಡವೀಶ ನೀನಿಂದು ತಡೆವರಿನ್ನಾರೈಯ ವಡೆಯ ವೇದವೇದ್ಯ ಕಡೆಗಣ್ಣಿನಿಂದ ನೋಡಿದಲೆ ನಡೆವುದು ನುಡಿವುದು ಅಡಿಗಡಿಗೆ ನೀನು ಬಿಡದೆ ಒಳಗೆ ಹೊರಗಿದ್ದು ಸಡಗರ ದೈವವೆ ನುಡಿಯ ಲಾಲಿಸುವುದು ವಡನೊಡನೆ ಪಾಲಿಸುತ್ತ 8 ಹತ್ತವತಾರದ ಹರಿಯೆ ಘನಸಿರಿಯೆ ಮತ್ತೊಬ್ಬರನು ಹೀಗೆ ಕರೆಯೆ ಭೃತ್ಯರ ಸಂಗಡೋಡ್ಯಾಡುವ ದೊರೆಯೆ ಎ- ನ್ಹತ್ತಿಲಿ ಆಡುವ ಮರಿಯೆ ಚಿತ್ತದೊಲ್ಲಭ ನಮ್ಮ ವಿಜಯವಿಠ್ಠಲರೇಯ ಎತ್ತನೋಡಲು ನಿನಗೆ ಸರಿಯೆ ಅತ್ತಿತ್ತ ಪೋಗದೆ ಇತ್ತ ಬಾರೈಯ ಎ- ನ್ಹತ್ತಿಲಿ ವೆಂಕಟದೊರೆಯ 9
--------------
ವಿಜಯದಾಸ
ಬಾಗಿ ಭಜಿಸಿರೋ | ಭಾಗಣ್ಣ ದಾಸರನಾ | ನಮಿಪರ ಬೀಷ್ಟದನಾ ಪ ಭೋಗಿ ಭೂಷಣ ಸುತನಾ | ಮನ್ಮಥ ಸದೃಶನನಾ ಅ.ಪ. ಮುರಹರ ನಾಮಕನರಸಿಯುದರದಲ್ಲಿ | ಜನುಮತಾಳಿ ಅಲ್ಲೀಸುರಪುರ ವೈದಲು ತನ್ನ ಪಿತನು ಮುಂದೇ | ಸಂಕಾರ ಪುರಸೇರ್ದೇ | ವರಚಿಂತಲ ವೇಲಿಲಿ ಧ್ಯಾನಕಾಗಿ ನಿಂದು | ಗಾಯಿತ್ರಿ ಜಪಿಸು ತಂದು ವರಮಾರುತಿ ಗುಡಿಯೊಳು ನೆಲಿಸುತ್ತಾ | ವರಪಡೆದೆಯೊ ಜಪಿಸುತ್ತಾ 1 ತ್ರಿಲಿಂಗಪುರಕೇ ಕವಿಯೈತರಲೂ | ಪಂಡಿತರನು ಗೆಲಲೂಬಲುಚಿಂತಿಸಿ ಜನಸಭೆಯ ಸೇರಿ ಆಗ | ತೀರ್ಮಾನಿಸಿ ವೇಗ |ಕಳುಹಿದರವನ ಭಾಗಣ್ಣನ ಬಳಿಗಾಗೀ | ಬಲವನು ತೋರೆನಲಾಗೀ ನಿಲಲಾರದೆ ತೆರಳಿದ ಭೀತಿಯಲೀ | ವರಕವಿ ಮೆರೆದನು ಕೀರ್ತಿಯಲೀ2 ಪರಿ ನಿತ್ಯ ಶ್ರೀ ವೆಂಕಟಕೃಷ್ಣನ ಪಾಡುತ್ತಾ | ನರ್ತನ ಗೈಯ್ಯುತ್ತಾ ಸುತ್ತಿ ಬರುವ ಜನರ ದೃಷ್ಠಾರ್ಥಾ | ಪೇಳುತ ಗಳಿಸಿದೆ ಅರ್ಥಾ 3 ತಿಮ್ಮಣ್ಣ ದಾಸಾರ್ಯರ ಬಳಿಯಲೀ | ಆದವಾನಿಯಲ್ಲೀನೆಮ್ಮದಿಲಿದ್ದಲ್ಲಿಂದಲಿ ತೆರಳಿ | ಕಾಶೀಶನ ಬಳೀಕ್ರಮ್ಮಿಸಿ ದಿನ ಗುರು ಸೇವೆಯಲ್ಲಿ ಬಹಳಾ | ಮೆಚ್ಚಿಸಿ ಗುರುಗಳ | ಹಮ್ಮಿನ ವಿಜಯರಿಂದುಪದೇಶಾ | ಗೋಪಾಲ ವಿಠ್ಠಲದಾಸ 4 ವೆಂಕಟರಾಮಗೆ ರಾತ್ರಿಕಾಲದಲ್ಲೀ | ಆಘ್ರ್ಯವ ಕೊಡುವಲ್ಲೀ ಪಂಕಜಮಿತ್ರನ ತೋರುತಲವರೀಗೆ | ಸಂಶಯ ಕಳೆದವಗೆ | ವೆಂಕಟೇಶನೊಳ್ ಭಕುತಿ ಪುಟ್ಟುವಂತೆ | ಸೇವೆ ವಿಧಿಸಿ ಅಂತೇ ಪಂಕಜನಾಭನ ಕೀರ್ತನಾದಿಗಳನೂ | ಮಾಡಿ ಕಳೆದ ದಿನಗಳನೂ 5 ವೆಂಕಟೇಶನ ಪರೋಕ್ಷಿ ದಾಸರೆಂದು | ಪೇಳೆ ಜನರು ಅಂದು ವೆಂಕಟ ನರಸಿಂಹಾಚಾರ್ಯಾ | ದಾಸರೊಳು ಮಾತ್ಸರ್ಯಾ | ಶಂಕೆಪಟ್ಟು ಭಜನೆಯೊಳಿರುವಂದೂ | ಮುಂದಿನ ಪೀಠದಲೊಂದೂ ಲಂಕೆಯ ಪುರವನು ದಹಿಸಿದನಾ | ಕಂಡರು ಕೋಡಗನಾ 6 ವಾಸುದೇವ ವಿಠಲನ್ನಾ | ಕಾಣುತಲಿ ಮುನ್ನಾ ಅಂಕಿತ ನಾಮದಿ ಪದಪದ್ಯಾ | ರಚಿಸಿ ಮೆರೆದ ನಿರವದ್ಯಾ7 ರೋಗದಿ ಶ್ರೀನಿವಾಸಾಚಾರ್ಯಾ | ಬರಲಾಗ ದಾಸಾರ್ಯ ಜಾಗ ಗುಡಿಯಲಿ ಶುದ್ಧಿ ಮಾಡುತಿರಲು | ಕೇಳಿ ಗೃಹಕೆ ಹೋಗಲು | ವೇಗದಿ ಮಂತ್ರಿತ ರೊಟ್ಟಿ ತಿಂದು ಇನ್ನ | ಕಳೆದ ರೋಗವನ್ನ ನಾಗಶಯನ ಶ್ರೀ ಜಗನ್ನಾಥ ವಿಠಲನ್ನಾ | ತೋರ್ಯರ್ಧಾಯು ಇತ್ತವನ್ನಾ 8 ಮುದದಲಿ ನಿಜಜನರನು ಪೊರೆಯೇ | ಶಾಸ್ತ್ರರ್ಥವ ನೊರೆಯೆ ಪದ ಸುಳಾದಿಯನೆ ಬಲುರಚಿಸೀ | ಭಕುತಿ ಮಾರ್ಗ ಬೆಸಸೀ | ಸುಧೆಸಮವೆನೆ ಹರಿಕಥೆಸಾರ | ರಚಿಸಿ ಜನೋದ್ಧಾರ ಮುದಮುನಿ ಮತಗ್ರಂಥಗಳೊರೆದೇ | ಸಚ್ಛಾಸ್ತ್ರಪೊರೆದೇ 9 ಹತ್ತೆಂಟು ಒಂದು ಮೊಗದ ರೂಪ | ಶ್ರೀ ವಿಶ್ವರೂಪನಿತ್ಯ ಚಿಂತಿಪ ತನ್ನ ಬಿಂಬರೂಪ | ಅಂಶದಿಹನು ಗಣಪಚಿತ್ರಿಸಿರುವ ಚಕ್ರಾಬ್ಜ ವಲಯವನ್ನ | ಧೇನಿಸಿ ವಿಜಯರನ್ನಕೃತ್ಯ ಪೇಳಲೊಶವೆ ಅಪರೋಕ್ಷಿಗಳ | ಮಂದನು ನಾ ಬಹಳ 10 ಚಿತ್ರಮಾರ್ಗದಿ ಭ್ರಾತೃವರ್ಗವನ್ನ | ದೂರಕಳಿಸಿ ಮುನ್ನಚಿತ್ರಭಾನು ಸಂವತ್ಸರದಲ್ಲಿ | ದಶಮಾಸಾಷ್ಟಮಿಲೀ |ಚಿಂತಿಸುತ ಯೋಗಮಾರ್ಗದಲ್ಲಿ | ದಹಿಸಿ ದೇಹವಲ್ಲೀ |ಚಿತ್ರ ಚರಿತ ಗುರುಗೋವಿಂದ ವಿಠ್ಠಲನಾ | ಪದಕಮಲವ ಸೇರಿದನ 11
--------------
ಗುರುಗೋವಿಂದವಿಠಲರು
ಬಾಗುವ ತೆಂಗಿನ ಮರನೋಡ ರಂಗನ ಅಂಘ್ರಿಗೆರಗುವಂತೆ ಸಖಿಯೆ ಪ. ಶೃಂಗಾರದ ವನ ನೋಡ ಪಂಚರಂಗದ ಗಿಳಿ ನೋಡ ಮಂಗಳ ಸ್ವರ ನೋಡ ಕೋಕಿಲ ರಂಗನ ಪಾಡುತಲಿವೆ 1 ಮೃಗ ನೋಡ ಕಸ್ತೂರಿ ಹರಿಪಾದಕೆ ಆತುರದಿ ಬರುತಲಿವೆ 2 ನೆಲ್ಲಿ ನೇರಲೆ ನೋಡ ಪುಷ್ಪ ಚೆಲ್ಲಿ ನಲಿಯುತಲಿವೆ ಮಲ್ಲ ಮಲ್ಲಿಗೆ ನೋಡ ಹರಿಪಾದ ಪಲ್ಲವಕೆ ಎರಗುತಿವೆ 3 ಸಾರ ಪಕ್ಷಿಗಳ ನೋಡ ಹರಿಗುಣ ಸಾರುತ ನಲಿಯುತಿವೆ4 ನಾಗ ಪುನ್ನಾಗ ನೋಡ ಸಂಪಿಗೆ ಪರಿಮಳ ನೋಡ ಹಾಂಗೆ ಕ್ಯಾದಿಗೆ ನೋಡ ಹರಿಪಾದ ಕ್ಹೋಗಿ ಎರಗುತಿವೆ 5 ಕುಸುಮ ನೋಡ ತುಳಸಿ ವಿರಾಜಿಸುªವನÀ ನೋಡ ಸಹಜದವನವ ನೋಡ ರಂಗನ ಪೂಜೆಗೆ ಒದಗುವಂತೆ 6 ಮಂದ ಮಾರುತ ನೋಡ ಪರಿಮಳ ತಂದು ಬೀಸುತಲಿದೆ ಸುಂದರ ಲತೆ ನೋಡ ರಂಗಗೆ ಫಲ ತಂದು ಅರ್ಪಿಸುವಂತೆ7 ಓಕುಳಿ ಕುಣಿನೋಡ ನಿಲ್ಲಿಸಿದ ಜೀಕಳಿ ಗೊಂಬೆಗಳ ಲೋಕ ನಾಯಕ ಹರಿಗೆ ಚಿಮ್ಮುತ ಹಾಕುವ ಪರಿಯಂತೆ 8 ಸಾಲು ಮರಗಳ ನೋಡ ರಂಗಗೆ ಫಲ ಮೇಲಾಡಿ ಮೆಲಿಸುವಂತೆ ಲಾಲಿಮಣಿಯ ನೋಡ ರಾಮೇಶನ ವಾಲೈಸಿ ಕರೆಯುತಿವೆ9
--------------
ಗಲಗಲಿಅವ್ವನವರು
ಬಾಗೋ ಬಾಗೋ ಜೀವನೇ ಸಾಗರನಿಲಯಗೆ ಪ ಬಾಗೋ ಮನಸಿನ ನೀಗಿ ಕಲ್ಮಷ ಬೇಗ ತಿಳಿದು ನೀಜೋಗಿವಂದ್ಯಗೆ ಅ.ಪ ಕನಸಿದು ಜಗಮೋಹ ಕಾಣು ಕಾಣೋ ನಿನಗೆ ವೈಕುಂಠ ಒಂದೇ ಗೇಣೋ ಚಿನುಮಾಯಾತ್ಮನ ತ್ವರ ಕಾಣು ಕಾಣೋ ತನುಮನವರ್ಪಿಸಿ ನೆನವು ನಿಲ್ಲಿಸಿ ನಿಜ ಘನಮಹಾತ್ಮನ ಹಿಡಿ ಖೂನ ಖೂನೋ 1 ಕಾಯ ಕಾಯ ಗುರುತಿಟ್ಟರಿಯಿದರ ನೆಲೆಯ ನೆಲೆಯ ಮರುಳನೆ ನರಕದ ಕುಣಿಯು ಕುಣಿಯೋ ನೆರೆದು ತೋರಿ ಸಂತೆ ಹರಿದು ಹೋಗುವಂತೆ ಧರೆ ನಿನಗೊಂದಿನ ಮಾಯ ಮಾಯ 2 ಬಂದದ್ದು ವಿಚಾರ ಮಾಡೋ ಮಾಡೋ ಇಂದಿನ ಸಮಯ ಕಳಿಬೇಡೋ ಬೇಡೋ ಬಂಧುರಸುಖಕೆ ಮನ ನೀಡೋ ನೀಡೋ ಇಂದು ನಾಳೆನ್ನದೆ ತಂದೆ ಶ್ರೀರಾಮನ ಬಂಧುರಚರಣವ ಪಾಡೋ ಪಾಡೋ 3
--------------
ರಾಮದಾಸರು
ಬಾರಪ್ಪ ನೀ ಬಾರಪ್ಪಾ ಭಾರತಿರಮಣಾ ಮುಖ್ಯಪ್ರಾಣಾಗೋ'ನದಿನ್ನಿ ಹಣ್ಣಮಪ್ಪಾ ನೀ ಗಾಲವ ಕ್ಷೇತ್ರಕೆ ಬಾರಪ್ಪಾ ಪಗಾಲವಕ್ಷೇತ್ರಕ್ಕೆ ಬಾರಪ್ಪಾ ನೀ ಹೋಳಿಗೆತುಪ್ಪಾ ಹೊಡೆಯಪ್ಪಾಕೃಷ್ಣವೇಣಿಯ ತಟದ ಶಿಲೆಯೊಳು ಒಡಮೂಡುತ ನೀ ಇದ್ದೆಪ್ಪಾ1ಶಿಷ್ಟರಾದ ಶ್ರೀ ಉಮರ್ಜಿ ಆಚಾರ್ಯರ ನಿಷ್ಠೆಗೆ ಒಲಿದು ಬಂದೆಪ್ಪಾಶರಧಿಗೆ ಜಿಗಿದು ಸೀತಾದೇ'ಗೆ ರಾಮಮುದ್ರಿಕೆಯ ಕೊಟ್ಟೆಪ್ಪಾದುರುಳ ರಾವಣನ ಲಂಕಾಪಟ್ಟಣ ಸುಟ್ಟ ಕಪಿವರನು ನೀನಪ್ಪಾದುಷ್ಟ ಕೌರವನ ತೊಡೆಯ ಒಡೆದು ಗದೆಪಿಡಿದ ಭೀಮ ನೀ ಹೌದಪ್ಪಾ 2ದುಃಶಾಸನನ ಕರುಳ ಬಗೆದು ನರಸಿಂಹನ ಪ್ರೀತಿ ಪಡೆದೆಪ್ಪಾಹರಿಯದ್ವೇಗಳ ದುರ್ಮತಗಳನು ಮುರಿದು ಮಧ್ವಯತಿ ಆದೆಪ್ಪಾರಾಶಿ ರಾಶಿ ಸದಗ್ರಂಥ ರಚಿಸಿ ನೀ ವ್ಯಾಸರ ಸನ್ನಿಧಿ ಪಡೆದೆಪ್ಪಾಕೃಷ್ಣವೇಣಿತಟ ನರಾಹರಿ ಇರುವನು ರಾಯರು ಇರುವರು ಬಾರಪ್ಪಾ 3ಎಲ್ಲಿ ನರಹರಿ ಎಲ್ಲಿ ರಾಯರು ಅಲ್ಲಿ ನೀ ಇರಬೇಕಪ್ಪಾಪಾಪಿಷ್ಠರ ಗತಿಭಯಂಕರನು ನೀಪುಣೈವಂತರಿಗೆ ಸುಲಭಪ್ಪಾಭೂಪತಿ'ಠ್ಠಲನ ಭಕ್ತರ ಪೊರೆಯಲು ನೀ ಗಾಲವ ಕ್ಷೇತ್ರಕೆ ಬಾರಪ್ಪಾ 4ರುದ್ರದೇವರು
--------------
ಭೂಪತಿ ವಿಠಲರು
ಬಾರೆ ದೇವಿ ಭಾಗ್ಯವಂತೆ ಬೇಡಿಕೊಂಬೆ ಬೇಗ ಹಸೆಗೆ ಪ ಸುತ್ತನಾಲ್ಕು ದೀಪಗಳಿಟ್ಟು ಎತ್ತಲೂ ಪ್ರಜ್ವಲಿಸುತಿರ್ಪ ಮುತ್ತುರತ್ನ ಕೆತ್ತಿಸಿರುವ ಉತ್ತಮ ಮಣಿಪೀಠಕೆ 1 ಜಡೆಯಬಂಗಾರವನು ಹಾಕಿ ಬಿಡದೆ ಕಮಲಮಾಲೆಧರಿಸಿ ಮುಡಿದು ಮಲ್ಲಿಗೆ ಸಂಪಗೆಯ ಒಡನೆ ಪೀತಾಂಬರವನುಟ್ಟು 2 ಜಾಜಿಪಟ್ಟಣನರಸಿಯೆ ನೀಂ ರಾಜಿಸು ತನುರಾಗದಿಂ ದೀನ ಜನರಂ ಹರುಷಗೊಳಿಸು ಮಾಜದೇ ನೀ ಮಂಗಳಾಂಗಿ3
--------------
ಶಾಮಶರ್ಮರು
ಬಾರೆ ಪಾರ್ವತಿ ಸಾರೆ ಸುಖವ ತೋರೆ ನಿನ ದಯವ ಪ ಬಾರಿ ಬಾರಿಗು ಪ್ರಾರ್ಥಿಸುವೆನೆ ಸಾರಸಾಕ್ಷಿಯೆ ಸರ್ಪವೇಣಿಯೆ ಅ.ಪ ದಕ್ಷಕುವರಿಯೆ ಈಕ್ಷಿಸೆನ್ನನು- ಪೇಕ್ಷೆ ಮಾಡದಲೆ ಅಕ್ಷಿತ್ರಯನ ಸತಿಯೆ ಭಕ್ತರ ಕಷ್ಟ ಬಡಿಸುತಲಿ ಸೂಕ್ಷ್ಮ ಮತಿಯನಿತ್ತು ಕೃಷ್ಣನ ಸ್ತೋತ್ರಗಾನದಲಿ ಅ- ಪೇಕ್ಷೆಯೊದಗುವ ಮನವ ಪಾಲಿಸು ರಕ್ಷಿಸೀಗಲೆ ಭಕ್ತವತ್ಸಲೆ 1 ಮಂದಗಮನೆ ಮತ್ತೊಂದು ಪೇಳುವೆ ನಂದಿವಾಹನನಾ ಮುಂದೆ ಸ್ತುತಿಪ ಭಕ್ತವೃಂದ ವಿ- ದೆಂದು ಪೇಳಿದೆ ನಾ ಸುಂದರ ಶ್ರೀ ಹರಿಯ ಸೇವೆಗೆ ಪೊಂದಿಸೆನ್ನ ಮನ ಚಂದದಿಂದ ಪ್ರಾರ್ಥಿಸುವೆನೆ ಸುಂದರಾಂಗಿಯೆ ನಿನ್ನನನುದಿನ 2 ಕಮಲನೇತ್ರೆಯೆ ವಿಮಲ ಸದ್ಗುಣಗುಣಿಯೆ ಪಾರ್ವತಿ ಕಮಲಸಂಭವ ಭವಸುರಾರ್ಚಿತನ ಸ್ಮರಿಸುವ ಮತಿ ಹೃ- ತ್ಕಮಲದೊಳಗೆ ನಿಲಿಸುವಂತೆ ಮಾಡು ಸದ್ಗತಿ ಕಮಲನಾಭ ವಿಠ್ಠಲ ಕೊಡುವ ನೆನುತ ಕೀರುತಿ 3
--------------
ನಿಡಗುರುಕಿ ಜೀವೂಬಾಯಿ
ಬಾರೆ ಸಖಿ ಪೋಗಿ ರಾಸ ಕ್ರೀಡೆಯಾಡುವ ಪ ಸಾರಸಾಕ್ಷ ಕೃಷ್ಣನು ತಾ ಕೊಳಲನೂದುವ ಅ.ಪ ಜಾರನೆಂದು ಸಣ್ಣಮಾತನಾಡಿದ್ದಾಯಿತು ಚೋರನೆಂದು ಬಹಳ ದೂರು ಮಾಡಿದ್ದಾಯಿತು ಮೂರು ನಿಮಿಷ ಅವನ ಮರೆಯಲಾಗದಾಯಿತು ಬೀರುತಿರುವ ಮೋಹಜಾಲ ಸಡಲದಾಯಿತು 1 ಯಾವನೀತನೆಂದು ಚಿಂತೆ ಮಾಡಿದ್ದಾಯಿತು ಗೋವಳನಿವನಲ್ಲವೆಂದು ನಿರ್ಧರಾಯಿತು ಯಾವನಾದರೇನು ಇವನ ಕ್ಷಣವು ಕಾಣದೆ ಜೀವನ ಕಳೆಯುವುದೆ ದೊಡ್ಡ ಭಾರವಾಯಿತು 2 ಮಂದಹಾಸದಿಂದ ಸಕಲ ಜಗವ ಬೆಳಗುವ ಚಂದ್ರನು ತಾನಿವನ ನೋಡಿ ಬಹಳ ನಾಚುವ ಸಾಂದ್ರವಾಯಿತಂತರಿಕ್ಷ ಮಧುರ ನಾದದಿ ಮಲಯ ಮಾರುತ ತಾ ತಲೆಯನಾಡುವ 3 ನಾದದ ಸುಧೆ ಸಾಗರದಲಿ ತೇಲುವಂತಿದೆ ಮಾಧವ ತಾ ಸುಧೆಯ ರಸವನೆರಚುವಂತಿದೆ ಬಾಧಿಸುತಿಹ ಭವದ ತಾಪವಡಗಿದಂತಿದೆ ಮಾದರಿಫಲ ರಾಸಕ್ರೀಡೆ ತೋರುವಂತಿದೆ 4 ಸಕಲ ಲೋಕನಾಥನೀತನೆಂದು ತಿಳಿಯಿತು ಸಕಲವನರ್ಪಿಸುವುದೊಂದೆ ಮಾರ್ಗ ಉಳಿಯಿತು ಲಕುಮಿ ಮುರುಳಿ ರೂಪದಲ್ಲಿ ಇಹುದು ಹೊಳೆಯಿತು ಭಕುತಿ ಹರಿದು ಎನ್ನ ವiನ ಪ್ರಸನ್ನವಾಯಿತು 5
--------------
ವಿದ್ಯಾಪ್ರಸನ್ನತೀರ್ಥರು
ಬಾರೈ ಬಾರೈ ಗುರು ಸಾರ್ವಭೌಮನೇ ಪ. ಉಟ್ಟವಸನವು ತೊಟ್ಟ ಆವಿಗೆ ಇಟ್ಟ ದ್ವಾದಶ ಊಧ್ರ್ವ ಪುಂಡ್ರವು ದಿಟ್ಟತನದಿ ಇಟ್ಟು ಕೊರಳೊಳು ಮಣಿ ಮನೋಭೀಷ್ಠವ ಸಲಿಸುತ 1 ದಂಡಕ ಮಂಡಲ ಕೈಯಲಿ ಪಿಡಿದು ಕಂಡ ಕಂಡದ ಪೂಜೆಗೊಂಬುವ ಕೊಂಡ ಜನರ ಪರಿಪಾಲಿಸುತಲಿ ಕಂಡ ಕಂಡವರ ಕಾಯುವ ಕರುಣೆ2 ಭೂತ ಪ್ರೇತ ಭಯ ನಾಶಗೊಳಿಸಿ ಭೀತಿಯ ಬಿಡಿಸಿ ಮಂತ್ರಾಲಯದಿ ಖ್ಯಾತಿವಂತ ರುಕ್ಮಿಣೀಶವಿಠಲನ ಕರುಣದಿ ಪ್ರೀತಿಪ ಜನರ ಮನೋಭೀಷ್ಠವೊಲಿದ 3
--------------
ಗುಂಡಮ್ಮ
ಬಾರೈಯ್ಯಾ ಗೋವಿಂದಾ | ಕೀರ್ತನೆಗೆ ಮುಕುಂದಾ | ಬೀರುತ ನಿಮ್ಮ ಮಹಿಮೆ ಸ್ವಾನಂದ ಪುರದಿಂದಾ ಪ ಕೋಂಡಾಡುವಂತೆ ಕೀರ್ತಿ ನೀಡಬೇಕು ನಿಜಸ್ಪೂರ್ತಿ | ಮಂಡೀಸಿ ಭಕ್ತರಂಗಾ ಹೇಳುವೆ ನಿಮ್ಮ ವಾರ್ತೆ 1 ವೈಕುಂಠ ಯೋಗಿವರಿಯಾ ಸ್ಥಳಸುರ ಮುನಿರಾಯಾ | ನೀ ಕರಿಸಿ ಪಾಡುವಲ್ಲಿ ಇಹನೆಂದೆ ನಿಶ್ಚಯಾ 2 ಕಂದನ ತೊದಲು ಮಾತಾ ಕೇಳಿ ಹಿಗ್ಗುವಂತೆ ಮಾತಾ | ತಂದೆ ಮಹಿಪತಿ - ಸ್ವಾಮಿ ಬಲವಾಗೋ ಶ್ರೀ ಕಾಂತಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು