ಒಟ್ಟು 1275 ಕಡೆಗಳಲ್ಲಿ , 106 ದಾಸರು , 1055 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಂದಿಸು _ ಶ್ರೀ ಹರಿಯ ಪ ಇಂದಿರೆನಾಥ ಮಹೇಂದ್ರ ಪರಾತ್ವರ ಸುಂದರ ಜಗಪಿತ ನಂದ ಮಹೋದಧಿ ಸಿಂಧು ಶಯನ ಅರ- ವಿಂದ ಸುನಾಭ ಮುಕುಂದ ಮುರಾರಿಯ ಅ.ಪ. ವೇದಸುಗೋಚರ _ ಖೇದವಿವರ್ಜಿತ _ ಸಾದರನುತಿಪರ ಖೇದವಿಮೋಚಕ ಮಾಧವ ಗೀತಾ _ ಬೋಧಕ ವಿಧಿಗುರು 1 ನಿರಂಜನ _ ಪಕ್ಷಿ ಧ್ವಜ ಜಗ ಕುಕ್ಷಿ ಪರಾಮೃತ _ ರಕ್ಷಿಸಿ ಜಗವಂ ಭಕಿÀ್ಷಪಧೋಕ್ಷಜ _ ಸಾಕ್ಷಿ ನಿರಪೇಕ್ಷ ಸುಪಕ್ಷನ2 ಸತ್ಯಾಧಾರ ವಿಚಿತ್ರ ಗುಣಾರ್ಣವ _ ಸತ್ಯವ್ರತ ಪುರು ಷೋತ್ತಮ ನಿರ್ಮಲ_ ಸತ್ಯವತೀಸುತ _ ನಿತ್ಯತೃಪ್ತ ಮ ಹಾತ್ಮಜಗಾತತ _ ಭೂತಿದ ಹೃಸ್ಥನ 3 ಭೂಮಿಯ ವರಜಯ ಧಾಮಸಖಖಳಭ್ರಾಮಕ ಕಲ್ಕಿಯೆ4 ಮಾಯಾ ಪರ- ಮೇಷ್ಠ ಜನಕ- ಶ್ರೀ ಕೃಷ್ಣವಿಠಲಪದ ನಿಷ್ಠರ ಸೇರಿ ವಿಶಿಷ್ಠ ಸಮರ್ಪಿಸಿ 5
--------------
ಕೃಷ್ಣವಿಠಲದಾಸರು
ವಂದಿಸುವೆನು ನಿನ್ನ ಅರವಿಂದಲೋಚನ- ದಿಂದ ನೋಡೊ ನೀ ಎನ್ನ ವಂದಿಸುವೆ ಅರವಿಂದಲೋಚನ- ದಿಂದ ನೋಡೊ ದಯಾಸಿಂಧು ಎನಿಸುವೆ ನಂದನಂದನನಾದ ಶ್ರೀ ಮುಕುಂದ ನೀ ಮುಚು- ಕುಂದ ವರದ ವಂದಿಸುವೆನು ನಿನ್ನ ಪ ಅಂಬರೀಷನು ಏನೋ ಮುಚುಕುಂದ ಮುನಿವರ- ನೆಂದು ರಕ್ಷಿಸುವೇನೊ ದ್ವಿಜ ತಂದವಲಕ್ಕಿ ತಿಂದ ಭಿಡೆಯಗಳೇನೊ ನೀನೆ ಸುರಧೇನು ಕಂದ ಧ್ರುವಪ್ರಹ್ಲಾದ ಕರೆಯಲು ಬಂದು ಭರದಿಂದವರ ಸಲಹಿದೆ ಮಂದಮತಿ ನಾ ಮ- ತ್ತೊಂದನರಿಯದೆ ವಂದಿಸುವೆ ನಿನ್ನ 1 ಗಜನು ಅಜಮಿಳನೇನೊ ಪಾದಾಂಬುಜ ಸ್ತುತಿಸ- ಲಜಸುತನು ನಾರದನೇನೊ ನಿಜ ಭಕುತಿಯಿಂದಿರಲ್ವಿದುರ ಉದ್ಧವನೇನೊ ನದಿಯಲ್ಲಿ ನಿನ್ನ ನಿಜಸ್ವರೂಪವ ತೋರಲಿಕ್ಕೆ ನಿನ್ನ ಬಾಂಧವಕ್ರೂರನೇ ನಾ ಕೇಳು ಘನ್ನ ಮಹಿಮ ಪ್ರಸನ್ನನಾಗಲಿಕ್ವಂದಿಸುವೆನು ನಿನ್ನ 2 ಸತ್ವರೊಳು ನಾನಲ್ಲ ಅಹಲ್ಯೆ ದ್ರೌಪದಿ ಭಕ್ತಿ ಮೊದಲೆನಗಿಲ್ಲ ಪಾಂಡವರ ದುರಿತಾಪತ್ತು ಕಳೆದ್ಯೊ ನೀಯೆಲ್ಲ ಕೇಳೆನ್ನ ಸೊಲ್ಲ ಭಕ್ತಾಧೀನನೆ ಭಯನಿವಾರಣ ಇಷ್ಟು ಭವಭಯ ಬಿಡಿಸಿ ಭೀಮೇಶಕೃಷ್ಣ ನಿನ್ನದಯ- ವಿಟ್ಟುಕರುಣಿಸೊ ವಂದಿಸುವೆನು ನಿನ್ನ 3
--------------
ಹರಪನಹಳ್ಳಿಭೀಮವ್ವ
ವಂದಿಸುವೆನು ರಘುವರನಾ ಸುರವಂದಿತ ಚರಣಾಂಬುಜನ ಪ ತಂದೆ ಮಾತಿಗೆ ವನಕ್ಹೋಗಿ ಬಂದವನಾಸುಂದರ ಸಹ ಸೀತೆಯಿಂದ ಅನುಜನಾ ಅ.ಪ ಚಾಪ ಭಂಜಕನಾ 1 ವಾರಿಧಿ ಸೇತು ಬಂಧಕನಾ ಸೀತಾ -ಚೋರನ ಶಿರವಳಿದವನಾಚಾರು ಸಿಂಹಾಸನವೇರುತ ಸರಯು -ತೀರದ ಅಯೋಧ್ಯಾ ವಿಹಾರ ಸುಂದರನಾ2 ಕೇಸರಿ ಸುತಗೆ ತನುಧನಮಣಿಆಶ್ರಯವನು ಕೊಟ್ಟವನಾಕೋಸಲ ಜನರಿಗೆ ಮೋಕ್ಷವವಿತ್ತವನಾಇಂದಿರೇಶ ಸುಖಾತ್ಮ ನಿರ್ದೋಷ ಪುರುಷನಾ 3
--------------
ಇಂದಿರೇಶರು
ವನರುಹ ನಯನಾ | ವನಜೇಕ್ಷಣ ಪ್ರಿಯವನರುಹ ನಯನಾ | ಪ ತನುಮನ ಧನಗಳಾ | ನಿನಗರ್ಪಿಸುವಂಥಜನರ ಮನೋರಥ | ಅನುನಯದಿಂದಲೀವೆ 1 ಮನಸಿಜ ಜನಕನೇ | ಫಣಿಶೈಲ ಸದನನೇಅನಲಾಕ್ಷನ ಪ್ರಿಯ | ಗುಣ ಪರಿಪೂರ್ಣ 2 ಮನೆ ಮಗ ಮಡಧ್ಯಬಿ | ಮಾನವು ಪೋಗಲಿಲ್ಲಘನ ವಿಷಯಕೆ ಮನ | ಅನುಸರಿಸುವುದಯ್ಯ 3 ಕನಸು ಮನಸಿನೊಳು | ನಿನಪದ ಧ್ಯಾನವಅನುನಯದಿಂದಲಿತ್ತು | ಜನುಮ ಸಾರ್ಥಕ ಮಾಡೊ 4 ವ್ರಜ ಕರ ಪಿಡಿದು 5
--------------
ಗುರುಗೋವಿಂದವಿಠಲರು
ವರದ ವೆಂಕಟ ಶ್ರೀನಿವಾಸ ಪ ಕರುಣದಿ ಪಿಡಿಯೊ ಎನ್ನ ಶೇಷಗಿರೀಶಾಅ.ಪ. ಘೋರ ಭವದಿ ನೊಂದೆನು ಇಂದು ಭಾರ ನಿನ್ನದು ಎಂದು ಸಾರಿ ಬೇಡಿದೆ ನಿನಗೆ ಭಕ್ತಬಂಧು ದೂರಮಾಡಲು ಬೇಡ ಕರುಣಾ ಸಿಂಧು ವಾರಿಜಾಸನ ವಂದ್ಯ ನೀರಜನಯನನೆ ಶರಣರ ಪೊರೆಯುವ ಸುರ ದ್ರುಮನೆ ಪರಿಪರಿ ಭವಣೆಯ ತರಿಮಹಿದಾಸನೆ ಚರಣ ಸೇವಕರ ಸೇವಕನೆನಿಸೊ ಶ್ರೀಶನೆ ದುರುಳ ಅಸುರನ ಶಿರವ ತರಿದು ತರಳ ಪ್ರಹ್ಲಾದನ ಪೊರೆದೆ ಎಂದು ಸುರರು ಪೊಗಳವುದನ್ನು ತಿಳಿದು ಭರದಿ ಬಂದು ಶಿರವ ನಮಿಸುವೆ ನಿಂದು 1 ಸಿರಿ ಅಜಭವಾದಿ ವಂದಿತ ಚರಣ ಪರಿಮಿತಿಯಿಲ್ಲದ ಗುಣ ಗಣ ಪೂರ್ಣ ನೀರಜ ಭವಾಂಡೋದಯಕೆ ಕಾರಣ ದುರಿತ ಹರಣ ಕ್ರೂರಜನ ಕುಠಾರ ದೇವನೆ ಗರುಡಗಮನ ಭೀಮರೂಪನೆ ಅರಗಳೆಣಿಸದೆ ಪೊರೆಯಂ ಬೇಗನೆ ಕರವ ಮುಗಿದು ಸಾರಿ ಬೇಡುವೆ ಕರಿಯ ತೊಡರನು ತರಿದು ನಕ್ರನ ಶಿರವ ಸೀಳಿದ ಕರುಣಿ ಕೃಷ್ಣನೆ ಸೀರೆ ಪಾಲಿಸಿ ಪೊರೆದ ದಾತನೆ ಮರಳಿ ಬರುವ ಭವವ ಬಿಡಿನೊ ರಂಗನೆ 2 ನಂಬಿದವರ ಕಲ್ಪವೃಕ್ಷ ನಂಬದವರ ಕಲುಷಕೆ ಶಿಕ್ಷಾ ಇಂಬಾಗಿ ಸರ್ವತ್ರ ಸುಜನರ ರಕ್ಷಾ ತುಂಬಿದ ವೈಭವದಿ ಮೆರೆಯೊ ದಕ್ಷಾ ಕಂಬುಕಂಠನೆ ನಿನ್ನ ನಂಬಿದೆ ಅಂಬರದಲಿ ಕಾಣೆಂದು ಬೇಡಿದೆ ಬಿಂಬನ ನಾಮನುಡಿಸೆಂದು ಕೇಳಿದೆ ಶಂಬರವೈರಿ ನಿನ್ನ ಚರಣವ ಸಾರಿದೆ ಶಂಭುವಂದಿತ ತುಂಬುರ ಪ್ರಿಯ ನಂಬಿ ಭಜಿಸುವೆ ತುಂಬು ಮನದೊಳು ಅಂಬುಜಾಕ್ಷನೆ ಜಯತೀರ್ಥ ಮುನೀಂದ್ರ ಬೆಂಬಲವಾಯುಗ ಶ್ರೀ ಕೃಷ್ಣವಿಠಲಾ 3
--------------
ಕೃಷ್ಣವಿಠಲದಾಸರು
ವರದಾತೀರದಿ ನೆಲಸಿಹ ಗುರುವರನ್ಯಾರೆ ಪೇಳಮ್ಮಯ್ಯ ಪ ವರದಾಯ ಶ್ರೀ ರಾಘವೇಂದ್ರರ ಕರುಣ ಪಡೆದ ಸುಶೀಲೇಂದ್ರ ಮುನಿಪನೆ ಅ.ಪ ದರಪೋಲುವ ಕಂಧರದಿ ತುಲಸಿ ಮಣಿಹಾರ | ಪೇಳಮ್ಮಯ್ಯ ಅರಶಶಿಸಮ ಸುವಿಶಾಲ ಫಾಲದಲಿ ತಿಲಕ ಪೇಳಮ್ಮಯ್ಯ ಪರಿ ಪರಿ ವಿಭವದಿ ಮೆರೆದ ಕರುಣವರ ಪುಣ್ಯ ಪುರುಷನ 1 ಮಾರ್ಗಣ ತೃಣ ಸಮವೇಣಿಸಿಹನು ಪೇಳಮ್ಮಯ್ಯ | ಅನಿಮಿಷ ಲೋಚನೆ ಅನುಮಾನಿಸದಿರು ಅನಿಮಿಷಾಮಶರಿವರನನುದಿನ ಸೇವಿಸು 2 ಯತಿ ಶಿರೋಮಣಿ ಧೀರೇಂದ್ರರ ಹಿತಕತಿ ಪಾತ್ರ ಪೇಳಮ್ಮಯ್ಯ ಅತುಳ ಮಹಿಮೆ ಸುಕೃತೀಂದ್ರ ಹೃದಯಶತಪ್ರ ಪೇಳಮ್ಮಯ್ಯ ಸತತ ರವಿ ಎನಿಸಿ ಶಾಮಸುಂದರನ ಅತಿ ಭಕುತಿಲಿ ತುತಿಪ ಗುಣನಿಧಿ 3
--------------
ಶಾಮಸುಂದರ ವಿಠಲ
ವಶವಾಗಿ ಉದ್ಧರಿಸಮ್ಮಾ ಪಾಲನ ಪ ಮತಿಯ ಕೊಡುತಿಪ್ಪ ಎನ್ನ ಅಂತರಂಗನ ತ್ರಿಪುರವ ಭಂಗನಾ ಕರುಣಾ ಪಾಂಗನ1 ಬುದ್ದ್ಯಾಭಿಮಾನಿ ದೇವಿ ಇಂದ್ರಾದ್ಯ ಸುರರನ್ನ ಕಾಯ್ವಿ ಗಾತ್ರನ ಧನಪತಿ ಮಿತ್ರನಾ 2 ತ್ರಿಜಗ ಪೂಜಿತೆ ಉಮೆ ಪೊಗಳುವೆನು ಒಮ್ಮೆ ವಿಜಯವಿಠ್ಠಲರೇಯನ ದಾಸದಾಸನ ಕೈಲಾಸವಾಸನ ಜಗಕೆ ವಿಶೇಷನಾ 3
--------------
ವಿಜಯದಾಸ
ವಾಣಿನಾಥ ನಿನ್ನ ಮಹಿಮೆಕ್ಷೋಣಿಯೊಳಗೆ ಪೊಗಳುವೆನು ಪ ಶ್ರೀನಿವಾಸನಮಲ ಮುಖವಾಮಾನಸಾದಿ ತೋರಿಸೀಗ ಅ.ಪ. ಹರಿಯ ನಾಭಿ ಕಮಲದಲ್ಲಿ ಧರಿಸಿ ತನುವ ತಪತಪೆಂದುಎರಡುವರ್ಣ ಕೇಳಿ ಚರಿಸೆಪರಮಪುರುಷನನ್ನು ಕಂಡೆ 1 ಸಣ್ಣಬಾಲ ನಾಮ ಹರಿಯತಿನ್ನಬೇಡ ನಿನಗೆ ಬಹಳಅನ್ನಮಾಡಿಕೊಡುವೆನೆಂದುಧನ್ಯ ಜಗವ ನಿರ್ಮಿಸಿದೆಯಾ 2 ಕರ್ಮ ಮಾಡದಲೆಇಂದಿರೇಶ ನಿನ್ನ ಮನದಿಪೊಂದಿ ಭಜಿಪೆ ಪಾವನಾತ್ಮಾ 3
--------------
ಇಂದಿರೇಶರು
ವಾತನ್ನ ಜಯಾಜಾತನ್ನ ಲೋಕ- ಪ್ರೀತನ್ನ ಸ್ತುತಿಸಿ ಖ್ಯಾತನ್ನ ಪ ವಿಷವ ನುಂಗಿದ ಮಹಾಶೌರ್ಯನ್ನ ನಿತ್ಯ ಅಸಮ ಸುಂದರ ಮತಿಧಾರ್ಯನ್ನ ನಿಶಾಚರ ಕುಲದೋಷ ಸೂರ್ಯನ್ನ ಆರಾ ಧಿಸುವ ಭಕ್ತರ ಸುಕಾರ್ಯನ್ನ 1 ವಾನರ ಕುಲದೊಳು ಧೈರ್ಯನ್ನ ಮುದ್ದು ಆನನ ಗೀರ್ವಾಣವರ್ಯನ್ನ ಆನಂದ ವಿಜ್ಞಾನ ಚರ್ಯನ್ನ ದುಷ್ಟ - ದಾನವರಳಿದತಿ ವೀರ್ಯನ್ನ 2 ದ್ವಿಜರಾಜ ಕುಲಾಗ್ರಣಿ ಭೀಮನ್ನ ಮಹ ದ್ವಿಜಕೇತ ನಂಘ್ರಿಗೆ ಪ್ರೇಮನ್ನ ದ್ವಿಜರ ಪಾಲಿಸಿದ ನಿಸ್ಸೀಮನ್ನ ಕುರು ವ್ರಜವ ಸದೆದ ಸಾರ್ವಭೌಮನ್ನ 3 ಅದ್ವೈತ ಮತ ಕೋಲಾಹ ಲನ್ನ ವೇದ ಸಿದ್ಧಾಂತ ಶುಭಗುಣ ಶೀಲನ್ನ ಸದ್ವೈಷ್ಣವರನ್ನು ಪಾಲನ್ನ ಗುರು ಮಧ್ವಮುನಿ ಗುಣಲೋಲನ್ನ 4 ಚಾರುಚರಿತ ನಿರ್ದೋಷನ್ನ ಲೋಕ ಮೂರರೊಳಗೆ ಪ್ರಕಾಶನ್ನ ಧೀರ ವಿಜಯವಿಠ್ಠಲೇಶನ್ನ ಬಿಡದೆ ಆರಾಧಿಪ ಭಾರತೀಶನ್ನ 5
--------------
ವಿಜಯದಾಸ
ವಾದಿರಾಜಗುರು ನಿಮ್ಮಡಿಗೆರಗುವೆ ಸಾದರದಿಂದಲಿ ಮಂದನ ಕೈಪಿಡಿಯೋ ಪ ಸಾಧುಜನಾಶ್ರಯ ಮೇದಿನೀಸುರತರು ಪಾದವಪಿಡಿದಿಹೆ ಬೋಧಿಸು ವಿಜ್ಞಾನ ಅ.ಪ. ಕಾದಿಡೆ ಸುಜನಕೆ ಮಧ್ವಾಗಮನಿಧಿ ಸಾದರದುದಿಸಿದಿ ಬುಧಜನಕುಲಮೌಳಿ ಬೂದಿಯ ಮಾಡುತ ದುರ್ಮತಜಾಲವ ಮಾಧವ ಮಧ್ವರ ಸೇವೆಯ ಸಲ್ಲಿಸಿದೇ 1 ಕವಿತಾವನಿತೆಯ ಕುಣಿಸುತ ಶಾಸ್ತ್ರವ ನವವಿಧ ರಸದಿಂ ಪೇಳಿದೆ ಶಿಷ್ಯರಿಗೆ ಭುವಿಯಲಿ ಮೆರೆದೆಯೋ ಮಧ್ವಾನುಜ ತೆರ ಪವನ ಮತಾಬ್ಧಿಯ ಸೋಮನೆ ಶರಣೆಂಬೆ2 ರಿಕ್ತಬ್ರಹ್ಮನ ಭಕ್ತರ ನೊಲ್ಲನು ಯುಕ್ತಿಗಳೆಂಬುವ ಮಲ್ಲಿಗೆ ಪಟ್ಟಲಿ ಶಕ್ತಯತೀಂದ್ರನೆ ಅಡಗಿಸಿ ಸರ್ವೋ- ದ್ರಿಕ್ತನ ಗುಣಗಣ ಸಾಧಿಸಿ ನೀ ಮರೆದೇ3 ತೀರ್ಥಕ್ಷೇತ್ರವ ಪಾವನಗೈಯ್ಯಲು ಸುತ್ತುತನೀಡಿದೆ ತೀರ್ಥಪ್ರಬಂಧವನೂ ಪಾರ್ಥಿವ ಮೊರೆಯಿಡೆ ಅಕ್ಷತೆನೀಡುತ ಶತ್ರುಗಳಳಿಸುತ ಪೊರೆದೆಯೊ ಕರುಣಾಳು4 ಅರವತ್ನಾಲ್ಕು ಕಲಾಜ್ಞನೆ ಗುಣನಿಧಿ ಸುರಗಣಗಚ್ಚಿರಿಯೇ ಸರಿ ತವ ಮಹಿಮ ಹರಿಸಿದೆ ಮೃತ್ಯುವ ರಾಜನ ಅಳಿಯಗೆ ಸಿರಿಪತಿ ವ್ಯಾಸರ ಕಂಡೆಯೊ ಪ್ರತ್ಯಕ್ಷ5 ಗುಂಡಕ್ರಿಯೆ ವೈಕುಂಠ ವರ್ಣನೆ ಕಂಡಕಂಡಪದ ಪುಂಜವ ಪಾಡುತಲೀ ಕೂಡದು ಭಾಷಾ ಸಡಗರ ವೆಂಬುದ ಪಂಡಿತನಿಕರಕೆ ತೋರಿದೆ ಯತಿತಿಲಕಾ6 ಜಂಗಮಗರುವನ ಭಂಗಿಸೆ ತವಕದಿ ಇಂಗಿಸಿ ಸಲಹಿದೆ ವಿಪ್ರರ ಕಷ್ಟಗಳ ಗಂಗಾಪಿತ ತ್ರಿವಿಕ್ರಮ ದೇವನ ಮಂಗಳ ಸುರಿಸಲು ಸ್ವಾದಿಲಿ ಸ್ಥಾಪಿಸಿದೆ7 ಗೋಧರ ಹಯಮುಖ ಸಾಕ್ಷಾತ್ತಿ ಎಂಬುವ ಛಂದದಿ ನೀಡಿದ ಓದನವೆಂತೆನೆ ಸಾಧ್ಯವೆ ಶೇಷನು ಪೊಗಳಲು ನಿಮ್ಮನು ಮಂದಿರನವನಿವ ನೆನ್ನುತ ಕೈ ಪಿಡಿಯೋ8 ಇಂದ್ರನ ದೂತರ ತಡೆಯುತ ದಿನತ್ರಯ ಚಂದದಿ ಕುಳಿತೆಯಾ ಬೃಂದಾವನದೊಳಗೆ ಇಂದಿಗು ನೋಳ್ಪರು ಬುಧಜನ ನಿಮ್ಮನು ವೃಂದಾರಕಗಣ ವಂದಿತ ಚರಣಯುಗ9 ಸುಂದರ ಹಯಮುಖ ರಾಮನು ಕೃಷ್ಣನು ವೇದವ್ಯಾಸರು ಹನುಮಾದಿ ತ್ರಯರು ಮಧ್ಯದಿ ಕುಳಿತಿಹ ನಿನ್ನ ಸುನಾಲ್ಕೆಡೆ ನಿಂದಿಹರೆಂಬುದು ಸಿದ್ಧವು ಮಹಮಹಿಮಾ 10 ಬೃಂದಾವನ ಪಂಚದಿ ಹರಿ ತಾನಿಹ ಚಂದದಿ ಸೇವೆಯ ಕೊಳ್ಳುತ ನಿನ್ನಿಂದ ಸುಂದರ ದಶಗಳ ಪಂಚನುರೂಪವ ವಂದಿಸಿ ನೋಡುತ ನೆನೆಯುವೆ ಏನೆಂಬೆ11 ಗಂಗಾಪಿತ ತ್ರಿವಿಕ್ರಮದೇವನ ಹಿಂಗದೆ ನೆನೆಯುವೆ ಲಕ್ಷಾಭರಣವನು ರಂಗಗೆ ನೀಡಿದೆ ನಮ್ಮಯ ಭವವನು ಇಂಗಿಸೆ ಕಷ್ಟವೇ ಗುರುವರ ದಯಮಾಡೋ12 ಜಯಮುನಿ ಹೃದಯದಿ ವಾಯುವಿನಂತರ ಜಯದಿಂ ನಲಿಯುವ ಶ್ರೀಕೃಷ್ಣವಿಠಲನ ದಯದಿಂ ತೊರಿಸು ಭಾವೀಜಯಾಸುತ ಹಯಮುಖ ಕಿಂಕರ ನಮಿಸುವೆ ಭೂಯಿಷ್ಠಾ13
--------------
ಕೃಷ್ಣವಿಠಲದಾಸರು
ವಾದಿರಾಜರು ವಾದಿರಾಜ ಗುರುರಾಜರ ಕೊಂಡಾಡಿ ಜನಿಪ ಸುಖವನು ಬೇಡ ಪ ಸೋದೆ ಸ್ಥಳದಲಿ ನಿಂತು ಮೆರೆವನಯ್ಯಹಯವದನನ ಪ್ರಿಯ ಅ.ಪ. ಮೋದತೀರ್ಥ ಮತವಾರಿಧಿ ಪೂರ್ಣಚಂದ್ರ ಸದ್ಗುಣ ಸಾಂದ್ರಾಮೇದಿನಿಯೊಳಗಿಹ ತೀರ್ಥ ಕ್ಷೇತ್ರವ ಚರಿಸಿ ಸಂತರನುದ್ಧರಿಸಿಸಾದರದಲಿ ಹರಿಮಹಿಮೆಯ ಕೊಂಡಾಡಿ ಪ್ರಬಂಧವನು ಮಾಡಿವಾದಿಗಳೆಂಬುವ ಗಜಕುಲ ಹರ್ಯಕ್ಷನಾಗಿಹ ಹರಿದೀಕ್ಷಾ 1 ಎರಡೀರರುವತ್ತು ವಿದ್ಯಾಪೂರ್ಣನೆನಿಸೀ ದೂಷಕರನು ಜಯಿಸಿಬಿರುದುಗಳನಪಹರಿಸಿದ ಯತಿವರ್ಯ ಹರಕಾರ್ಯ ಧುರ್ಯವರಭೈಷ್ಮಿಶನ ವಿಜಯದ ಕಾವ್ಯವನು ಬಹುಪರಿ ಮಹಿಮೆಯನುವಿರಚಿಸಿ ಕವಿಕುಲ ಮಾನ್ಯನೆನಿಸಿಕೊಂಡ ಹರಿದಾಸ ಪ್ರಚಂಡಾ 2 ಅನುದಿನ ಸೇವಕರುಭೂತಳದ ಜನರು ಬೇಡಿದ ಇಷ್ಟಾರ್ಥ ಕೊಡುವಂಥ ಸಮರ್ಥಧಾರುಣಿಪತಿ ಗೋಪತಿವಿಠಲ ನಿನ್ನೊಶನಾಗಿಹನಲ್ಲ 3
--------------
ಗೋಪತಿವಿಠಲರು
ವಾದಿರಾಜಾಶ್ರಮ ನೋಡಲು ಸಂಭ್ರಮ ಪಾಡಿ ಪೊಗಳುವರಿಗಾಹುದು ಪ್ರೇಮ ಪ ಕಾಡೊಳಗೆ ಸಂಚರಿಪ ಋಷಿಗಳು ಪಾಡಿಪೊಗಳುತ ಪರಮ ಪುರುಷನ ಬೇಡಿದಿಷ್ಟಾರ್ಥಗಳ ಪಡೆಯುತ ಕೂಡಿ ಸುಖಿಸುವ ಶಿಷ್ಟರಂದದಿ ಅ.ಪ ಪರಮಸಾತ್ವಿಕರೆಲ್ಲ ಪುರಂದರದಾಸರ ಪರಮ ಪುಣ್ಯದ ದಿನ ಬರಲು ಸಂಭ್ರಮದಿ ಪರಿಪರಿವಿಧದಿಂದ ಹರಿದಾಸರೆಲ್ಲರು ತ್ವರದಿಂದ ಗುರುಗಳಾಜ್ಞೆಯ ಮೀರದೆ ಭರದಿಂದ ನೆರೆದರತಿ ಶೀಘ್ರದಿಂದಲಿ ಮುದದಿಂದ ಗುರುಗಳಡಿಗೊಂದಿಸುತ ಕ್ರಮದಿಂದ ಸರಸವಾಕ್ಯಗಳಿಂದ ಶಿಷ್ಯರಿಂದ ಹರಿಸಿ ಆಶೀರ್ವಾದದಿಂದಲಿ ಸುರಿಸಿ ಅಮೃತವಾಣಿ ನುಡಿಯುತ ಹರುಷಪಡುತಿಹ ಗುರುಗಳಿಹ ಸ್ಥಳ 1 ಪವಮಾನಮತದವರೆಲ್ಲರೊಂದಾಗುತ ನಮಿಸಿ ಶ್ರೀಪತಿಗೆ ವಂದನೆ ಮಾಡುತ ವಿನಯದಿಂದಲಿ ತಮ್ಮನಿಯಮಿತ ಕಾರ್ಯವ ನÀಡೆಸುತ್ತ ತಂಬೂರಿಗಳ ಸುಸ್ವರದಿ ಮೀಟುತ ನಿಂದು ಹರುಷಿಸುತ ತಾಳಗಳ ಬಾರಿಸುತ ಶಿಷ್ಯರು ಕುಣಿಯುತ್ತ ಬಲುನಾದ ಕೊಡುತಿಹ ಕಾಲಗೆಜ್ಜೆಗಳೆಲ್ಲ ಘಲುರೆನುತ ದಾಸರಿಗೆ ಉಚಿತದ ಜೋಳಿಗೆಗಳನೆ ಪಿಡಿದು ನಡಿಯುತ್ತ ಶ್ರೀರಾಮರ ದೂತನ ಬಾರಿಬಾರಿಗೆ ನಮಿಸಿ ನಮಿಸಿ ಪೊಗಳುತ್ತ ಹರಿನಾಮ ಸ್ಮರಣೆಯಲಿ ಮಾರುತೀಶನ ಭಕುತರೆಲ್ಲರು ದ್ವಾರಬಿಡುತಲಿ ಪೊರಟು ಭಜಿಸುತ ಬೀದಿಯಲಿ ಕುಣಿಯುತ್ತ ಹರಿಗುಣ ಪಾಡಿ ಪೊಗಳುವ ಪರಮ ವೈಭವ2 ಆ ಮಾರುತನ ದಯದಿಯಾಯಿವಾರವು ಮಾಡಿ ಶ್ರೀನಿಕೇತನ ಪಾಡಿ ಪೊಗಳುತಲಿ ಜ್ಞಾನಿ ಪುರಂದರದಾಸರ ಚರಿತೆಯ ಪೇಳುವರು ಸಂಭ್ರಮದಿಂದಲಿ ನಲಿದಾಡುವರು ಹರಿದಾಸರ ಅದ್ಭುತಕಾರ್ಯಗಳ ಸುಸ್ವರದಿ ಪಾಡುವರು ಹರಿದಾಸ ಶ್ರೇಷ್ಠರ ಮಹಿಮೆಗಳ ಇನ್ನುಳಿದ ಶಿಷ್ಯರು ಪೇಳುವರು ವರ ಪಾರ್ಥಿವ ವತ್ಸರದಿ ಗುರುಗಳ ಕರುಣ ಪಡೆದವರು ನೆರೆದು ರಾತ್ರಿಕಾಲದಲಿ ಶ್ರೀ ಹರಿಯ ಭಜನೆ ಮಾಡುತಿರಲು ಹರುಷ ಪಡುತಲಿ ನಲಿದು ಕಮಲನಾಭ- ವಿಠ್ಠಲನೆ ಸಲಹು ಎನ್ನುವ3
--------------
ನಿಡಗುರುಕಿ ಜೀವೂಬಾಯಿ
ವಾದೀಗಳಾಗೆದ್ದು ಸಿದ್ಧಾಂತ ಸ್ಥಾಪಿಸಿ ಮುದ್ದು ಕೃಷನ ತಂದ ವೇದ ವ್ಯಾಸರ ಪ್ರಿಯ ಮಧ್ವರಾಯ ಮಧ್ವರಾಯ ಪ ಬಿದ್ದೆ ನಿಮ್ಮಯ ಚಲುವ ಪಾದಪದ್ಮಂಗಳಿಗೆ ವೇದ ಮಧ್ವರಾಯ ಮಧ್ವರಾಯ ಅ.ಪ ತಂದು ಚೂಡಾಮಣಿ ನಿಂದೆ ರಾಮನ ಮುಂದೆ ಮಧ್ವರಾಯ ಮಧ್ವರಾಯ ಕಂದನು ಎಂತೆಂದು ಮುಂದೆ ಪಾಲಿಸ ಬೇಕು ಮಧ್ವರಾಯ ಮಧ್ವರಾಯ 1 ದ್ವಾಪರ ಯುಗದಲ್ಲಿ ದ್ರೌಪದಿ ಗಂಡನೆನಿಸಿ ಪಾಪಿಗಳಾಕೊಂದು ಪತಿ ಸೇವೆ ಮಾಡ್ದೆ ಮಧ್ವರಾಯ ಮಧ್ವರಾಯ ಕೋಪವು ಮಾಡದೆ ತಾಪಗಳೋಡಿಸಿ ಗೋಪಾಲ ಕೃಷ್ಣನ ಕೃಪೆಯ ಕೊಡಿಸೈಯ ಮಧ್ವರಾಯ ಮಧ್ವರಾಯ 2 ದುರುಳ ಮಾಯಿಗಳೆಲ್ಲ ಹರಿಯ ದೂರುತ್ತಿರಲು ಸುರರ ಮಧ್ವರಾಯ ಮಧ್ವರಾಯ ಭವ ಬಿಡಿಸಿ ವೀರ ವೈಷ್ಣವ ನೆನಿಸಿ ಸಾರಿ ಸಾರಿಸ ಬೇಕು ಹರಿಯ ನಾಮವನ್ನು ಮಧ್ವರಾಯ ಮಧ್ವರಾಯ 3 ಲೋಕದಿ ಸಜ್ಜನರ ಸಾಕಬೇಕು ಎಂದು ಬೇಕೆಂದು ಯತಿಯಾದೆ ಶ್ರೀಕಾಂತ ಪಟ್ಟಪುತ್ರ ಮಧ್ವರಾಯ ಮಧ್ವರಾಯ ನೂಕೋದುರಿತ ರಾಶಿ ಲೋಕಕ್ಕೆಲ್ಲಾ ಗುರು ಮಧ್ವರಾಯ ಮಧ್ವರಾಯ 4 ಸುರರೆಲ್ಲ ಪರಿವಾರ ತಾರತಮ್ಯವ ತೋರ್ದೆ ಮಧ್ವರಾಯ ಮಧ್ವರಾಯ ಸೂರಿಗಳೊಡೆಯನೆ ಭಾರತಿ ಪ್ರಾಣಕಾಂತ ಮಧ್ವರಾಯ ಮಧ್ವರಾಯ5 ಮತ್ತೆ ಹರಿಯಮತದಂತೆ ಬರೆದೆಯೊ ಹೊಸ ಭಾಷ್ಯ ಮಧ್ವರಾಯ ಮಧ್ವರಾಯ ಪೊರೆದೆ ಹರಿಯಪ್ರಧಮಾಂಗ ವೀರ ಮಾರುತಿ ದೇವ ಮಧ್ವರಾಯ ಮಧ್ವರಾಯ 6 ಬೃಹತೀಗೆ ನೀ ಪ್ರತಿಮ ಬಹುರೂಪ ಧಾರಕ ವಹಿಸೊ ಎಮ್ಮೆಯ ಅಹಿ ಭೂಷಣ ಪ್ರಿಯ ಮಧ್ವರಾಯ ಮಧ್ವರಾಯ ದಹಿಸೋ ಸೋಹಂ ಜ್ಞಾನ ಮಹಿಯೊಳು ಅಪ್ರತಿಮ ಮಧ್ವರಾಯ ಮಧ್ವರಾಯ 7 ಜಪ ಬೇರೆ ಬೇರೆ ಮಾಡಿ ಮೂರು ಗತಿಯ ತೋರ್ಪೆ ಮಧ್ವರಾಯ ಮಧ್ವರಾಯ ಭಾರೀಶಕ್ತನು ನೀನು ಆರು ಸರಿಯು ನಿನಗೆ ಮಧ್ವರಾಯ ಮಧ್ವರಾಯ 8 ಆನಂದ ಶಾಸ್ತ್ರವ ಸಾನುರಾಗದಿ ಪೇಳ್ದೆ ಮಧ್ವರಾಯ ಮಧ್ವರಾಯ ಮಾನವ ಜ್ಞಾನಾದಿಗಳ ಕೊಟ್ಟು ಕಾಯ ಬೇಕೋ ಮಧ್ವರಾಯ ಮಧ್ವರಾಯ 9 ಜಗ ಭಾರವ ವಹಿಸಿದೆ ಮೇರೆ ಗಾಣದ ಸತ್ವ ಮಧ್ವರಾಯ ಮಧ್ವರಾಯ ಹರಿಯ ಅರಿವ ಮರ್ಮ ಕರುಣದಿ ಅರುಹೈಯ್ಯ ಮಧ್ವರಾಯ ಮಧ್ವರಾಯ 10 ಅಮರ ವೃಂದಕ್ಕೆಲ್ಲ ಹರಿಯ ತೋರಿಸಿ ಕೊಟ್ಟೆ ಮಧ್ವರಾಯ ಮಧ್ವರಾಯ ಬೊಮ್ಮದೇವಗು ಬಲವ ಕೊಟ್ಟನ್ನ ಕೊಳ್ಳುವೆ ಮಧ್ವರಾಯ ಮಧ್ವರಾಯ 11 ಬಂದು ಮೂವತ್ತೇಳು ಸುಂದರ ಗ್ರಂಥ ಮಾಡ್ದೆ ಮಧ್ವರಾಯ ಮಧ್ವರಾಯ ಶುದ್ದ ಸತ್ವಮೂರ್ತಿ ಬದ್ಧನು ನೀನಲ್ಲ ವದ್ದು ಅವಿದ್ಯೆಯ ತಿದ್ದೊ ಎಮ್ಮೆಯ ಮನ ಮಧ್ವರಾಯ ಮಧ್ವರಾಯ 12 ಅಖಿಳಾಗಮಾವೇತ್ತ ಸುಖದ ಪ್ರಾರಬ್ಧವೋ ಮಧ್ವರಾಯ ಮಧ್ವರಾಯ ಸಕಲ ಲಕ್ಷಣವಂತ ಸಕಲ ತತ್ವರಪತಿ ಮಧ್ವರಾಯ ಮಧ್ವರಾಯ 13 ತತ್ವೇಶ ರೊಳಗೆಲ್ಲ ನಿನ್ನವ್ಯಾಪಾರವು ಉತ್ತಮ ನಿನ್ನಲ್ಲಿ ಹರಿಯ ವ್ಯಾಪಾರವು ಮಧ್ವರಾಯ ಮಧ್ವರಾಯ ನಿತ್ಯ ಕೃಷ್ಣನಕಾಂಬ ಸೂತ್ರನಾಮಕದೊರೆ ಮಧ್ವರಾಯ 14 ಉತ್ತುಮೋತ್ತುಮ ವಿಷ್ಣು ನಿನ್ನ ದ್ವಾರವೆ ವಲಿವ ಮಧ್ವರಾಯ ಮಧ್ವರಾಯ ನಿತ್ಯ ತೃಪ್ತನಿಗೀವೆ ನಿಷ್ಕಾಮ ಭಕ್ತಿ ನಿಧಿ ಮಧ್ವರಾಯ ಮಧ್ವರಾಯ15 ದಿವಿಜಾನಾಯಕ ನೀನು ಪಾದ್ಯ ಹೌದಯ್ಯಮಧ್ವರಾಯ ಮಧ್ವರಾಯ ಸೇವಕರೆನಿಸುವ ಭಾಗ್ಯವಿತ್ತು ಕಾಯೋ ಮಧ್ವರಾಯ ಮಧ್ವರಾಯ 16 ನಾಗಾರಿಶಿವ ಗುರುವೆ ಭವ ಬಿಡಿಸು ಮಧ್ವರಾಯ ಮಧ್ವರಾಯ ನೀಗಿಸು ಇವರ ಬಾಧೆ ಪಂಚ ಕೋಶಗ ಪ್ರಾಣ ಮಧ್ವರಾಯ ಮಧ್ವರಾಯ17 ಶ್ರೀ ಪತಿದಯದಿಂದ ತಾಳ ಹಾಕುವ ಶಕ್ತ ಮಧ್ವರಾಯ ಮಧ್ವರಾಯ ನೀಪಾಲಿಸಿದ ರುಂಟು ಏನೆಂಬೆ ನಿಮ್ಮ ಮಹಿಮೆ ಮಧ್ವರಾಯ ಮಧ್ವರಾಯ18 ಭಾನುಸ್ಥ ಪ್ರಭು ನೀನು ಆಧ್ಯಾತ್ಮಗತನಾಗಿ | ಸಾನುರಾಗದಿ ಜಗ ಜೇಷ್ಟೆಯ ನಡಿಸುವೆ ಮಧ್ವರಾಯ ಮಧ್ವರಾಯ ಶ್ರೀನಿವಾಸನ ಪೂರ್ಣ ಕೃಪೆಗೆ ನೀ ಪಾತ್ರನು | ಪೂರ್ಣ ಭೋದ ಗುರುವೆ ದೀನರೆಮ್ಮನು ಪಿಡಿ ಮಧ್ವರಾಯ ಮಧ್ವರಾಯ19 ಅಣವು ಮಹದ್ ಘನ ಪೂರ್ಣ ಪ್ರಜ್ಞನು ನೀನು | ಅನ್ನಜೀವರು ನಿನಗೆ ಅನ್ನ ಶ್ರೀಶಗೆ ನೀನು ಮಧ್ವರಾಯ ಮಧ್ವರಾಯ ನಿನ್ನ ರೂಪಗಳಲ್ಲಿ ನ್ಯೂನವಿಲ್ಲವು ಗುಣದಿ | ಮಣಿಸದೆ ಚಿತ್ತದಲ್ಲಿ ಉಣಿಸೋ ಹರಿ ಕೀರ್ತನೆ ಮಧ್ವರಾಯ ಮಧ್ವರಾಯ 20 ಭೇದಬೊಧೆಯ ನಿತ್ತು ಉದ್ದಾರ ಮಾಡಿದೆ | ವಾದಿ ಭೀಕರಯತಿ ಶ್ರೆದ್ಧೆ ಮನೋಹರ ಮಧ್ವರಾಯ ಮಧ್ವರಾಯ ಮುದ್ದು ಕೃಷ್ಣನ ತಂದು ತಿದ್ದಿ ಪದ್ದತಿಗಳ | ಶುದ್ಧವೈಷ್ಣವರಿಗೆಲ್ಲ ವೃದ್ಧಿ ಮಾಡಿದೆ ಭಕ್ತಿ ಮಧ್ವರಾಯ ಮಧ್ವರಾಯ 21 ಗುರು ಪ್ರಾಣ ನಾಥನೆ ಹರಿಯ ಮನದಂತೆ | ಪರಿಪರಿಲೀಲೆಯ ನಿರುತ ತೋರುತಲಿಪ್ಪೆ ಮಧ್ವರಾಯ ಮಧ್ವರಾಯ ಭರತ ಪ್ರಭುವೆ ನಿನ್ನ ಚರಣವ ಸಾರಿದೆ | ಗಾರು ಸಂಸಾರದಿ ದಾರಿ ತೋರಲಿ ಬೇಕು ಮಧ್ವರಾಯ ಮಧ್ವರಾಯ 22 ಜಯ ಜಯ ಜಯ ಹನುಮ ಜಯ ಜಯ ಜಯ ಭಿಮ ಮುಖ್ಯಪ್ರಾಣ ಮರಾಮರಾ ಜಯ ಜಯತೀರ್ಥ ವ್ಯಂದ್ಯನೆ ಜಯ ಕೃಷ್ಣವಿಠಲನ ಮಧ್ವರಾಯ ಮಧ್ವರಾಯ 23
--------------
ಕೃಷ್ಣವಿಠಲದಾಸರು
ವಾಮನಾವತಾರ ವಾಮನನನು ನೆನೆ ಹೇ ಮನವೇ ವಟು ವಾಮನನನು ನೆನೆ ಹೇ ಮನವೇ ಕಾಮಪೂರಣ ಲಕ್ಷ್ಮೀಧಾಮನ ಮರೆಯದೆ ಪ. ಶ್ಯಾಮಸುಂದರ ಸುರ ಪ್ರೇಮದಿ ಕಶ್ಯಪ ಧಾಮವಾ ಬೆಳಗುತ ಬಂದ ಭೂಮಿಯನಳದ ಸುತ್ರಾಮಗಿತ್ತ ನಿ ಸ್ಸೀಮ ಸಾಹಸ ಗೋವಿಂದ ನೀ ಸಲಹೆಂದು 1 ಬಲಿಯ ದೃಢಕೆ ಮೆಚ್ಚಿ ಸಲಹುತ ಮುಂದಿನ ವಲಭಿದಾಗುವೀ ನೀನೆಂದ ಕಲುಷಾಪಹಪದಕಮಲವ ಶಿರದೊಳು ನಿಲಿಸಿ ಬಾಗಿಲೊಳು ನಿಂದವ ನೀನೆಂದು 2 ಶ್ರೀ ಭೂಮಿಯುತ ಮುಕ್ತಾಭರಣಾಶ್ರಿತ ಸೌಭಾಗ್ಯಕರ ಲೀಲಾ ಆಭೀರರ ಕನ್ನೆಯರೊಲಿಸಿದ ಪದ್ಮ- ನಾಭ ವೆಂಕಟಪತಿ ಪರಮ ಪುರುಷನೆಂದು 3
--------------
ತುಪಾಕಿ ವೆಂಕಟರಮಣಾಚಾರ್ಯ
ವಾಯಸ ಸಿದ್ಧಿ ಕೊಟ್ಟಾವಮ್ಮ ಒಲಿದಾಳೆ ದೂತೆ ಶ್ರೀಶನ ದಯ ಸೂಸಿತುಳುಕುತ ಶ್ರೇಯಸ್ಸು ಬರಲೆಂದು ಪ. ಶುದ್ಧ ಮುತ್ತು ರತ್ನದವಸ್ತ ತಿದ್ದಿಸೀರಿ ಕುಪ್ಪುಸ ತೊಟ್ಟುಬದ್ಧವಾದ ತಳಪಿಲಿಂದ ಮುದ್ದು ಸುರಿಯುತ1 ಪುಂಡರಿಕಾಕ್ಷನ ಪಾದಕೆ ದಂಡಪ್ರಣಾಮವ ಮಾಡಿ ಕೊಂಡಾಡಿ ಕೃಷ್ಣನ ನಡೆದಳು ಪಾಂಡವರರಮನೆಗೆ2 ಭಾವೆ ರುಕ್ಮಿಣಿ ದೇವಿಯರಿಗೆ ಭಾವ ಭಕ್ತಿಯಿಂದ ನಮಿಸಿ ಸ್ವಾಮಿ ಕಾರ್ಯ ಸಾಧಿಸಿ ನಿಸ್ಸೀಮಳು ನಡೆದಾಳೆÉ 3 ಅಂದಣ ಏರಿದಳು ದೂತೆ ಬಂದವು ನೀರಿನ ಕುಂಭಚಂದದ ಸೇವಕರು ಮಾರ್ಗ ಮುಂದೆ ನಡೆದರು 4 ಹಾಲು ಮೊಸರು ಹಲವು ಫಲ ಸಾಲುಸಾಲು ಮುತ್ತೈದೆಯರು ಮೇಲಾದ ವಿಪ್ರರು ಮೇಲೆ ಮೇಲೆ ಬಂದರು5 ಧೀರ ಧರ್ಮರಾಯನ ಸಭೆüಯ ದ್ವಾರಪಾಲಕಳಾಗಿ ದೂತೆ ವೀರ ಮುದ್ರಿಕೆಯ ಕೊಟ್ಟು ನೀರೆ ನಡೆದಳು6 ಶ್ರೀದೇವಿ ದೂತೆ ರಾಮೇಶನ ಪಾದಸ್ಮರಣೆಯ ಮಾಡಿಮೋದಭರಿತಳಾಗಿ ರಾಯನ ಪಾದಕ್ಕೆರಗಿದಳು 7
--------------
ಗಲಗಲಿಅವ್ವನವರು