ಒಟ್ಟು 40875 ಕಡೆಗಳಲ್ಲಿ , 138 ದಾಸರು , 10069 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಿದ್ಯಾಕಾಂತಯತಿಗಳ ಕೀರ್ತನೆ ಕಾಪಾಡಬೇಕೆಂದು ಗೋಪಾಲ ಕೃಷ್ಣಗೆ ನೀ ಪೇಳಬಾರದೆ ರುಕುಮಿಣಿ ನೀ ಪೇಳಬಾರದೆ ಸತ್ಯಭಾಮ ಪ ಪಾಪ ಮಾಡುವನೆಂದು ಕೋಪ ಮಾಡಿದಿರೆಂದು ನಾ ಪಾದಪದುಮಕ್ಕೆ ಶರಣೆಂಬೆ ತಾಯೆ 1 ನಿಮ್ಮ ನುಡಿಗಳಿಂದ ಸಮ್ಮತಿಸುವ ದೇವ ಸುಮ್ಮನೆ ತಿಳಿಸೆನ್ನ ಹಡದಮ್ಮ ತಾಯೆ 2 ಏನೊ ಪೇಳಿದನೆಂದು ನೀನೂಪೇಕ್ಷಿಸದಲೆ ಜಾನಕಿದೇವಿ ಪೇಳೆ ರಘೂಪತಿಗೆ ತಾಯೆ3 ಪಾದ ನಂಬಿದವರಿಗೆ ಮೋದವ ಕೊಡುವಂಥ ವೇದವ್ಯಾಸಗೆ ರಮೆ ತಿಳಿ ಹೇಳೆ ತಾಯೆ 4 ವಿದ್ಯಾಕಾಂತನ ಮನವಿದ್ದಂತೆ ಒಲಿಯುವ ಸದ್ದಯಾನಿಧಿ ನಮ್ಮ ನರಸಿಂಹ ತಾಯೆ 5 (ವಿದ್ಯಾಕಾಂತತೀರ್ಥರು (1824) ವ್ಯಾಸರಾಜ ಮಠದ 16 ನೇ ಯತಿಗಳು)
--------------
ವ್ಯಾಸತತ್ವಜ್ಞದಾಸರು
ವಿಧ---------- ಪ ಹದಿನಾರು ಸಾವಿರ ಹೆಂಡರು ಸಾಲು ---- -------------------------- ಶರಣಾರ್ಥಿಗಳ------ನಿನ್ನ ಬಿರುದ ಪರಮ ಕೃಪಾರಸ ತೋರದೇನೋ ಸಿರಿನಿನ್ನ ಕುಚದ ---- ಎರವು ಇಲ್ಲಿದೆ---------ಮತಿಯಲಿ ತಿರುಗುತ-----ದಿ ಪರಮ ಪುರುಷನು ಸುಖಿಭವನಗಳ’ 1 ಅಷ್ಟಧರ್ಮಗಳ ಬಿಟ್ಟೆನೊ ಅಸುರರ ಬಾಧೆಗೆ ಅಂಜಿದೆನೊ ಕ್ರೋಧಗೊಂಡೆ ಏನೋ ಮೊಸರು ಬೆಣ್ಣೆಯಷ್ಟಿಲ್ಲ -----ಬರುವನ ಕೂಡಿಕೊಂಡೆಲ್ಲರು------ಹಿಡಿದು ಕಟ್ಟಿ ಹಾಕಿದರೇನೊ 2 ಮಹಿಮನಾದ----ತ್ತಿಗಳೆಲ್ಲ ತರವಲ್ಲೆ ಪಂಥಗಳಾಡುತ ಕಾಂತೆರಕೂಡಿ ಶ್ರೀಕಾಂತ `ಹೊನ್ನಯ್ಯ ವಿಠ್ಠಲಂತರಂಗದಲಿ ನಿಂತೂ ಬಾರದ 3
--------------
ಹೆನ್ನೆರಂಗದಾಸರು
ವಿಧಿ ಪ ಪುರಾರಿನುತ ಚರಣಾ ನಾರಾಯಣಾ ಅ.ಪ ಸರಸಿಜಾಪ್ತ ಕುಲಚಂದ್ರಮ ರಾಮ | ಮ- ಹಾರಾಜ ರಾಜಲಲಾಮ ನಿಸ್ಸೀಮ 1 ಎನ್ನಪರಾಧಗಳೇನಿದ್ದರು ಸರಿ ಮನ್ನಿಸುವರು ನೀನಲ್ಲದಾರು 2 ಅಜಿತಾದ್ಯನಂತರೂಪಾಪ್ರಮೇಯಭಜಕ ಪೋಷ ಗುರುರಾಮ ವಿಠ್ಠಲ ರಾಯಾ 3
--------------
ಗುರುರಾಮವಿಠಲ
ವಿಧಿ ನಿಷೇಧವು ನಿನ್ನ ಸ್ಮರಣೆ ವಿಸ್ಮರಣೆಯ- ಲ್ಲದಲರಿಯರೇನೊಂದು ಹರಿಭಕ್ತರು ಪ ಮಿಂದದ್ದೆ ಗಂಗಾದಿ ತೀರ್ಥಗಳು ಸಾಧುಗಳು ಬಂದದ್ದೆ ಪುಣ್ಯ ಕಾಲವುಗಳು ಅವರು ನಿಂದದ್ದೆ ಗಯ ವಾರಣಾಸಿ ಕುರುಕ್ಷೇತ್ರಗಳು ಬಂದು ಪೋಗಲು ಅದುವೆ ರಾಜಬೀದಿ 1 ಕಂಡು ಕಂಡದ್ದೆಲ್ಲ ಕಮಲನಾಭನ ಮೂರ್ತಿ ಮಂಡಿಸಿದ ಶಯನ ದಂಡಪ್ರಣಾಮ ತಂಡತಂಡದ ಕ್ರಿಯೆಗಳೆಲ್ಲ ಹರಿ ಪೂಜೆಗಳು ಮಂಡೆ ಬಾಗಿಸಿ ಸಮಿಪ ಶರಣ ಜನಕೆ 2 ನಡೆವ ನಡೆಯೆಲ್ಲ ಲಕ್ಷ ಪ್ರದಕ್ಷಿಣೆ ಮತ್ತೆ ನುಡಿವ ನುಡಿಯೆಲ್ಲ ಗಾಯಿತ್ರಿ ಮಂತ್ರ ಒಡೆಯ ಶ್ರೀಕಾಂತನ್ನ ಅಡಿಗಡಿಗೆ ಸ್ಮರಿಸುತಿಹ ದೃಢ ಪ್ರಜ್ಞರೇಂಗೈಯ್ಯಲದುವೆ ಮರ್ಯಾದೆ 3
--------------
ಲಕ್ಷ್ಮೀನಾರಯಣರಾಯರು
ವಿಧಿಗೆ ದಯವಿಲ್ಲವಕ್ಕ ಎಮ್ಮ ಮ್ಯಾಲೆ ಯದುಪತಿಯನಗಲಿಸಿದ ಒಮ್ಮಿಂದಲೊಮ್ಮೆ ಅ.ಪ. ಎವೆಯ ಮರೆಯ ಮಾತನಾಡಿ ಪೋದ ಯಾಕೋ ವಿಧಿಯೇಸುಳಿಗುರುಳು ಕಡೆಗಣ್ಣ ನೋಟದಿಂದಲಿಕವಕವಿಸಿ ನಗುವ ಮುದ್ದು ಮುಖವನುತವಕದಿಂದ ಮರಳಿ ಮರಳಿ ನೋಡದ್ಹೋದೆವೆ 1 ಹಕ್ಕಿಯ ಮ್ಯಾಲುಳ್ಳ ದಯ ನಮ್ಮ ಮ್ಯಾಲೆಇಕ್ಕದೇಕೆ ಹೋದ್ಯೋ ವಿಧಿಯೇರೆಕ್ಕೆ ಎರಡುಳ್ಳರೆ ಮಧುರೆಗೆ ಪೋಗಿಫಕ್ಕನೆ ಶ್ರೀ ಹರಿಯೊಡನೆ ಕೂಡುತಿದ್ದೆವಲ್ಲ 2 ತಂಗೀ ನಮ್ಮೆದೆಯು ಕಲ್ಲಾಗಿ ಇದ್ದೇವೆಹಿಂಗುವರೆ ಸಖಿಯರು ಒಮ್ಮಿಂದಲೊಮ್ಮೆರಂಗವಿಠಲನ್ನ ಅಂಗ ಸಂಗವ ಬಿಟ್ಟು ಇಂಥಭಂಗ ಜೀವ ಸುಡ ಸುಡ ಸುಡಲ್ಯಾತಕೋ 3
--------------
ಶ್ರೀಪಾದರಾಜರು
ವಿನುತ ಸಿರಿ | ರಾಮ ವಿಠಲ ಕಾಯೋ ಪ ಈ ಸತೀ ಮಣಿಯ ನೀ | ಸಲಹಬೇಕೆಂದುಶೇಷ ಸಂಜ್ಞಿತ ಹರಿಯೆ | ಪ್ರಾರ್ಥಿಸುವೆ ಧೊರೆಯೇ ಅ.ಪ. ಅಮೃತ ಕೂರ್ಮ | ರೂಪದಿಂದರುಹೀಉಪದೇಶ ನೀಡ್ವಗುರು | ರೂಪವನೆ ತೋರಿಸುತಅಪರಿಮಿತ ಕಾರುಣ್ಯ | ರೂಪನಾಗಿರುವೆ 1 ಪರಮ ಗುರು ನಿಜ ರೂಪ | ಎರಡು ಬಾರಿಯು ತೋರಿಸರಸನಾಬ್ಯಾದಿ ಹರುಷ | ಬೀರ್ದೆ ಭಯಹಾರೀಕರುಣವೆಂತುಟೊ ನಿನಗೆ | ಸುರಸಿದ್ಧ ಸಂಸೇವ್ಯಶಿರಿ ರಮಣ ಶ್ರೀರಾಮ | ಪರಮ ಪುರುಷನೆ 2 ಈ ಸತೀಮಣಿ ಬಯಕೆ | ನೀ ಸಲಿಸಿ ಲೌಕಿಕದಿಲೇಸು ಹೊಲ್ಲೆಗಳೆಂಬ | ಪಾಶಗಳ ಬಿಡಿಸೀದೋಷ ದೂರನೆ ಹರಿಯೆ | ನೀ ಸಲಹೆ ಪ್ರಾರ್ಥಿಸುವೆದಾಶರಥೆ ಪೊರೆ ಇವಳ | ಮೇಶ ಮಧ್ವೇಶಾ 3 ಮಧ್ವಮಾರ್ಗದಿ ಇಹಳು | ಶುದ್ಧ ಭಕ್ತಿಜ್ಞಾನಸಿದ್ಧಿಸುತ ಇವಳಲ್ಲಿ | ಉದ್ಧರಿಸೊ ಹರಿಯೇ |ಕೃದ್ಧ ಖಳ ಸಂಹಾರಿ | ಸದ್ಧರ್ಮ ಪಥತೋರಿಅಧ್ವಯನೆ ತವ ನಾಮ | ಶುದ್ಧ ಸುಧೆ ಉಣಿಸೋ 4 ಸರ್ವವ್ಯಾಪ್ತನೆ ದೇವ | ಪವನಾಂತರಾತ್ಮಕನೆದರ್ವಿ ಜೀವಿಯ ಕಾಯೊ | ಶರ್ವವಂದ್ಯಾ |ಸರ್ವ ಸುಂದರ ಗುರು | ಗೋವಿಂದ ವಿಠ್ಠಲನೆಈ ವಿಧದ ಬಿನ್ನಪವ | ನೀವೊಲಿದು ಸಲಿಸೋ 5
--------------
ಗುರುಗೋವಿಂದವಿಠಲರು
ವಿಪರೀತ ಮತಿವಂತೆ ಸರಸ್ವತಿಯೆ ನಿನ್ನ ಕೃಪೆ ಬಯಸಿ ಭಜಿಸುವೆನು ಸಫಲನೆನಿಸೆನ್ನ ಪ ಶುಂಭಾರಾವಣಗಿತ್ತ ಮತಿಯೆನಗೆ ಬೇಡಮ್ಮ ಗುಂಭದಿಂ ವಿಭೀಷಣಗೆ ಕೊಟ್ಟ ಮತಿ ನೀಡು ಕುಂಭಕರ್ಣನಿಗಿತ್ತ ಮತಿ ಕನಸಿನಲಿ ಬೇಡ ಕುಂಭಿನಿಯೊಳ್ಹನುಮನಂಥ ಮತಿ ನೀಡಿ ಸಲಹು 1 ಕೀಲ ಮಾರೀಚಗಿತ್ತ ಕೀಳಮತಿ ನೀಡದಿರು ಪಾಲಿಸು ಜಟಾಯುನಂಥ ಶೀಲಮತಿಯೆನಗೆ ವಾಲಿಗೆ ನೀನಿತ್ತ ಜಾಳುಮತಿ ನೀಡದೆ ಸುಗ್ರೀವಗಿತ್ತ ಮೇಲುಮತಿ ನೀಡು 2 ಮೂಡಣಾಧಿಪನಂತೆ ಕೇಡುಮತಿ ನೀಡದೆ ರೂಢಿಯೊಳ್ಕರಿಯಂಥ ಗಾಢಮತಿ ನೀಡು ನೀಡದಿರು ಶಶಿಯಂಥ ಖೋಡಿ ದುರ್ಮತಿಯನು ನಾಡಿನಲಿ ಧ್ರುವನಂತೆ ಮಾಡುದಯ ಸುಮತಿ 3 ದುರುಳ ಕೌರವನಂತೆ ಕಿರಿಮತಿಯ ಕೊಡಬೇಡ ಪರಮ ಪಾಂಡವರಂಥ ಖರೆಮತಿಯ ನೀಡು ಧರೆಯೊಳ್ಜಯದ್ರಥನಂತೆ ನರಿಮತಿಯ ಕೊಡದಿರು ವರ ವಿದುರನಂತೆ ಬಲು ನಿರುತಮತಿ ನೀಡು 4 ಮರವೆ ಮತಿ ಒಲ್ಲೆನೌ ಹರಿಯ ನಿಜ ದಾಸರಂಥ ಸ್ಥಿರತಿಮತಿಯ ನೀಡು ಹರಣ ಪೋದರು ಬಿಡದೆ ವರದ ಶ್ರೀರಾಮನಡಿ ಅರಿವಿಟ್ಟು ಭಜಿಸುವಪಾರಮತಿ ನೀಡು 5
--------------
ರಾಮದಾಸರು
ವಿಬುಧ ಪ್ರಿಯ ವಿಠಲ | ಶುಭದ ಪೊರೆ ಇವನಾ ಪ ಅಬುಜ ಜಾಂಡೋದರನೆ | ಕುಬುಜೆ ಸದ್ ವರದಾ ಅ.ಪ. ದಾಸನಾಗಲು ಇವಗೆ | ಆಶೆ ಪ್ರೇರಕನಾಗಿವಾಸು ದೇವಾಖ್ಯ ತೈ | ಜಸನೆ ಕಾರ್ಯರೂಪಿಸೂಸಿತವ ರೂಪವನು | ಲೇಸಾಗಿ ತೋರಿಸೆಹೆಕೇಶವನೆ ಅದನೆ ಉಪ | ದೇಶಿಸಿಹೆ ಹರಿಯೆ 1 ಪ್ರೀಯ ಅಪ್ರೀಯ ಉ | ಭಾಯಾನು ಭವದಲ್ಲಿಆಯುತನು ನೀನಾಗಿ | ಉದ್ವೇಗ ಕೊಡದೇನಿಯುತಕರ್ಮದಿ ರತನ | ದಯದಿಂದ ನೀಮಾಡಿಹಯಮೊಗಾಖ್ಯ ಹರಿಯೆ | ಕೈಯಪಿಡಿ ಇವನಾ 2 ಲೋಕವಾಕ್ಯದಿ ವಿರಸ | ಲೋಕೈಕನಾಥನುವಾಕ್ಯದೊಳು ರತಿಯನ್ನೆ | ನೀ ಕೊಟ್ಟಿ ಕಾಯೋ |ಮಾಕಳತ್ರನದಾಸ | ಸಂಕುಲದಿ ಸದ್‍ಭಕ್ತಿಶ್ರೀಕರನೆ ನೀನಿತ್ತು | ಸಾಕ ಬೇಕಿವನಾ 3 ಮಧ್ವಮತದಲಿ ದೀಕ್ಷೆ | ಶುದ್ಧ ಹರಿ ಗುರುಭಕ್ತಿಅದ್ವೈತ ಕ್ರಯವರಿಯೆ | ವಿದ್ಯೆ ಸಂಘಟಿಸೀಕೃದ್ಧಖಳ ನಿವಹಗಳ | ಪ್ರಧ್ವಂಸಗೈಯುತಲೀಉದ್ದರಿಸೋ ಇವನನ್ನು | ಮಧ್ವಾಂತರಾತ್ಮ 4 ವೇದ ಕದ್ದೊಯ್ದವನ | ಬಾಧೆ ನೀ ಪರಿಹರಿಸಿಸಾದುಗಳ ಪೊರೆದಂತೆ | ಆದರಿಸಲಿವನಾಮೋದಿ ಗುರು ಗೋವಿಂದ | ವಿಠಲನೆ ಬಿನ್ನವಿಪೆಮೈದೊರಿ ಸಲಹುವುದು | ಸಾಧುವಂದಿತನೇ 5
--------------
ಗುರುಗೋವಿಂದವಿಠಲರು
ವಿಭವ ಪ್ರಪೂರಣ | ಮಾಂಗಿರಿಮೋಹನಾ ಪ ದಾನವಕುಲಭೀಷಣಾ ಕೃಪಾಕರಾ ಅ.ಪ ಪರತರ ಸುಖದಾತ ಸುಜನಗಣನುತ ಕಾಮಿತ ಸಂದಾತ ಪಾರ್ಥಿವ ರಥಸೂತ ವರದಸ್ವಯಂಜಾತಾ ಶರಣ ಸಂಪ್ರೀತಾ 1 ಮುರಹರ ಮುಚುಕುಂದ ಭಯಹರ ವರದಾ ಶ್ರೀಮುಖ ಸಾನಂದ ಗೋಕುಲ ಮಕರಂದ ಸುರಮುನಿ ಬೃಂದ ನಂದನ ಕಂದ ಸುರುಚಿರ ಕೋವಿದಾ | ಮುರಳೀ ಬೃಹನ್ನಾದ ಪಾಂಡುಸುತಾನಂದ | ಮಾಂಗಿರಿವರದಾ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವಿಮಲಮಹಿಮನೆ ದಾಸನಾಸೆಪೂರೈಸೊ ಅಮಿತ ನಿಮ್ಮಯ ಬಿರುದು ಸತ್ಯವೆಂದೆನಿಸೊ ಪ ಕಷ್ಟಹರ ನೀನಹುದೆ ದಿಟ್ಟತನ ಕೊಡುಯೆನಗೆ ಶಿಷ್ಟರೊಡೆಯ ನೀನಹುದೆ ಗಟ್ಟಿಮನವ ಪಾಲಿಸು ಇಷ್ಟಪೂರ್ಣ ನೀನಹುದೇ ಕೊಟ್ಟು ರಕ್ಷಿಸೆನ್ನ 1 ದೀನರಾಸ್ಪದನಹುದೇ ಧ್ಯಾನ ದಯೆ ಪಾಲಿಸೈ ಗಾನಲೋಲಹುದೆ ನೀ ಜ್ಞಾನವನು ನೀಡೊ ಮಾನರಕ್ಷ ನೀನಹುದೇ ಅಭಿಮಾನಯೆನದಿರೆನ್ನ ಧ್ಯಾನಿಕಧೇನಹುದೇ ಆನಂದ ನೀಡೊ 2 ನ್ಯಾಯವಂತ ನೀನಹುದೇ ಮಾಯೆಮೋಹವನು ಬಿಡಿಸು ಪಾವನಾತ್ಮ ನೀನಹುದೇ ಸಾವು ಹುಟ್ಟು ಗೆಲಿಸು ಜಯವಂತ ನೀನಹುದೇ ದೇಹಿಯೆನಿಸದಿರಲ್ಪರಿಗೆ ಕಾವದೇವ ನೀನಹುದೇ ಭಾವದ್ವಾಸಿಸೆನ್ನ 3 ಪೃಥ್ವಿ ವ್ಯಾಪಕನಹುದೇ ಚಿತ್ತಶುದ್ಧಮಾಡೆನ್ನ ಸತ್ ಚಿತ್ತ ನೀನಹುದೇ ಸತ್ಸಂಗ ನೀಡೊ ಭಕ್ತವತ್ಸಲನಹುದೇ ಅನಿತ್ಯಗುಣ ಬಿಡಿಸೆನ್ನ ಕರ್ತನು ನೀನಹದೇ ಸತ್ಪಥದೆನ್ನಿರಿಸೊ 4 ಅಸಮಕರುಣಹುದೇ ನೀ ಪುಸಿಗೊಲಿಸಿದಿರು ಎನ್ನ ದೋಷಹರ ನೀನಹುದೇ ಹಸನೆನಿಸು ಎನ್ನ ದಾಸರಭಿಮಾನ್ಯಹುದೇ ಪೋಷಿಸೆಲೊ ತವಪಾದ ಧ್ಯಾನದಿರಿಸೆನ್ನ ಶ್ರೀಶ ಶ್ರೀರಾಮ5
--------------
ರಾಮದಾಸರು
ವಿರಹ ನಿಲ್ಲದು ಕಾಣೊ ನಿನ್ನ ಕೂಡದೆ | ಗುರುತ ಮಾಡಿದ ಸೊಗಸು ಮರಿಯದೊ ಗೋಪಾಲ ಪ ಕಣ್ಣುನೋಟ ತಿರುಹಿ ನೀ ಕೈಯ ಮುದರಿ ವರಹ | ಹೊನ್ನು ಕಂಭದಲಿ ನಿಂದು ತೋರಿ | ಭ್ರಮಿಸಿ ಕುನ್ನಿಗೆ ಕಣಿಯನಿಕ್ಕಿ ಹೊಡೆಯೊನಾಗಿ | ಹೆಣ್ಣು ಭಾವನ ಕರೆದು ಸೂಚನೆ ಮಾಡಿದನು 1 ಪುಟ್ಟ ಹೆಜ್ಜೆಲೆ ಸಾಗಿ ಮುದ್ದು ಕೊಡಲು ಬಯಸಿ | ದೃಷ್ಟಿಯಿಂದ ನೋಡಲು ಭ್ರಾಂತಳಾಗಿ | ಅಟ್ಟ ಅಡಿವೆಯೊಳು ನಡಿವೆ ನಾ ಪೋಗಲು | ದುಷ್ಟ ನಾದಿನಿ ಕಂಡು ಮಾವಗೆ ಪೇಳಿದಳು 2 ಇಂದಿರೇಶ ತಾನಾಗಿ ಎದೆ ಮುಟ್ಟಿ ನಿನಗೆ | ಇಂದಿನ ದಿವಸ ನಾ ಭ್ರಮಿಸಿದ್ದು | ಒಂದೊಂದು ಬಗೆ ನೆನಿಸಿ ಕಲೆಕಲೆಗಳು ಕೆರಿದ್ಯಾಸೆ | ಮುಂದೆಗಾಣದೆ ನಡಿಯೆ ಗಂಡಾ ತಲೆದೂಗಿದನು3 ಬೀದಿಯೊಳಗೆ ನೀನು ಕುದರಿಯ ಕುಣಿಸುತ ಹಾದು ಪೋಗಲು ನಮ್ಮ ಮನಿಯ ಮುಂದೆ | ಪಾದಕ್ಕೆ ಕಪ್ಪನೆ ಇಟ್ಟು ತೊಟ್ಟ ಕುಪ್ಪಸ ಬಿಚ್ಚೆ | ಮದನ ನೋಡಿ ಮನೆಯಲ್ಲರಿಗೆ ಬೀರಿದನು4 ಪರಮಪುರುಷ ನೀನೆ ನಿನ್ನಂಗ ಸಂಗಕ್ಕೆ | ಸರಿಗಾಣೆ ಸ್ಮರಿಸೆ ಮನಸು ನಿಲ್ಲದೊ | ಸುರತ ಕೇಳಿಯ ಜಾಣ ವಿಜಯವಿಠ್ಠಲ ಎನ್ನ | ಕರೆದು ಮಸಕು ತೆಗೆದು ತರ್ಕೈಸೊ ಚನ್ನಿಗಾ 5
--------------
ವಿಜಯದಾಸ
ವಿರೋಧವ್ಯಾತಕಯ್ಯ ನಿಮಗಿದರೊಳು ಪ ಪರಂಪರದ ಸಂಪ್ರದಾಯಕೆ ನಿಮಗೆ ಅ.ಪ ಈಶ ನಾನೆಂಬುವದೊಂದು ಸರ್ವೇಶ ಹರಿಯಂಬೊದೊಂದು ಲೇಸಾಗಿ ಹೆಚ್ಚು ಕಡಮೆಗಳ ತಿಳಿಯುವದಿನ್ನೊಂದು 1 ಈ ಮೂರು ಮತಗಳಿಗೆ ಪ್ರೇಮವಾದಭಿಪ್ರಾಯಗಳು ನೇಮನೇಮವಾಗಿಟ್ಟು ಕೊಂಡಿರುತಿಹರೆಲ್ಲರು 2 ನಿಮ್ಮ ನಿಮ್ಮ ಮನಗಳಿಗೆ ಸಮ್ಮತವಾಗುವ ಪರಿ ಬ್ರಹ್ಮ ಜ್ಞಾನವೊಂದು ಸಂಪಾದಿಸಿದರೆ ಸಾಕು 3 ಸರಿಯಾದರ್ಥ ತೋರಿ ದಾರಿಯ ಕೊಡುವುದು 4 ಧೀರ ಶ್ರೀಗುರುರಾಮವಿಠ್ಠಲನೊಬ್ಬನೆ 5
--------------
ಗುರುರಾಮವಿಠಲ
ವಿವೇಕದಿಂದಾ ಮತಿಯುಕ್ತನಾಗಿ ಕುವಿದ್ಯದಾದಾ ಗುಣವೆಲ್ಲ ನೀಗಿ ಭಾವಾರ್ಥದಿಂದಾ ಸ್ಮರಿಸೋದು ನೀತಿ ಗೋವಿಂದದಾಮೋದರ ಮಾಧವೇತಿ 1 ತ್ರಿವಿಧ ತಾಪದೊಳು ಮಗ್ನನಾಗಿ ನೀವ್ಯರ್ಥದಿನಗಳಿಯದೆ ಹೋಗಿ ಭಾವಾರ್ಥದಿಂದಾ ಸ್ಮರಿಸೋದು ನೀತಿ ಗೋವಿಂದ ದಾಮೋದರ ಮಾಧವೇತಿ 2 ಈ ವಿಷಯದಾಸುಖ ನಿತ್ಯವಲ್ಲಾ ನೀವಾತು ಕೇಳಿಗುರುವೀನ ಸೊಲ್ಲಾ ಭಾವಾರ್ಥದಿಂದ ಸ್ಮರಿಸೂದು ನೀತಿ ಗೋವಿಂದ ದಾಮೋದರ ಮಾಧವೇತಿ 3 ಆವದು ತನ್ನ ಹಿತವನು ನೋಡಿ ಸಾವಧನಾಗೀ ಶ್ರವಣ ಮಾಡಿ ಭಾವರ್ಥದಿಂದ ಸ್ಮರಿಸೋದು ನೀತಿ ಗೋವಿಂದ ದಾಮೋದರ ಮಾಧವೇತಿ 4 ಅವಾವ ಯೋನಿಯಲಿ ಬಂದಹಿಂದಾ ಅವದುಗತಿಯಂದು ನೋಡಿವಂದಾ ಭಾವರ್ಥದಿಂದ ಸ್ಮರಿಸೋದು ನೀತಿ ಗೋವಿಂದ ದಾಮೋದರ ಮಾಧವೇತಿ 5 ತಾವಂದೇ ಆಶ್ರೈಸದೆ ಕಾಮಧೇನು ಸಾವಿರ ಸಾಧನಕ ಬೀಳುದೇನು ಬಾವಾರ್ಥದಿಂದಾ ಸ್ಮರಿಸೋದು ನೀತಿ ಗೋವಿಂದ ದಾಮೋದರ ಮಾಧವೇತಿ 6 ಜೀವಾತ್ಮರಾಗಿ ಸಚ ರಾಚ ರಾವ ಬಾವರ್ಥದಿಂದಾ ಸ್ಮರಿಸೋದು ನೀತಿ ಗೋವಿಂದ ದಾಮೊದರ ಮಾಧವೇತಿ 7 ಗೋವಿಂದ ಅಷ್ಟಕವ ದಾವಪ್ರಾಣೀ ಸೇವಿಸುವನು ಕಾವನು ಚಕ್ರಪ್ರಾಣೀ ಭಾವಾರ್ಥದಿಂದಾ ಸ್ಮರಿಸೋದು ನೀತಿ ಗೋವಿಂದ ದಾಮೋದರ ಮಾಧವೇತಿ 8
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ವಿಶೇಷ ಆ ಹಣ್ಣು ಈ ಹಣ್ಣು ನೆನಸಿ ಫಲವೇನೆ ಈ ಹುಣಸೇಹಣ್ಣಿಗೆ ಸಮಬಾಹೋದೇನೆ ಪ ಹಡಗಿಂದ ಬಂದಿತು ಉತ್ತತ್ತಿ ಹಣ್ಣು ಬಡವರಿಗೆ ಬೇಕಾದ ಬಾಳೆಯ ಹಣ್ಣು ಕೂತರೆ ಏಳದು ಕುಂಬಳದ್ದಲ್ಲ ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 1 ಮಕ್ಕಳು ಬಯಸುವ ಚಕ್ಕೋತ ಹಣ್ಣು ಸಕ್ಕರೆ ಸವಿಯಾದ ಅನಾಸಿನ ಹಣ್ಣು ರುಚಿ ಹಲಸಿನ ಹಣ್ಣು ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 2 ದಾಹವಡಗಿಸುವದು ದ್ರಾಕ್ಷಿಯ ಹಣ್ಣು ದೊರೆಗಳು ತಿನ್ನುವ ದಾಳಿಂಬೆ ಹಣ್ಣು ಫರಂಗಿಯರು ತಿನ್ನುವ ಪನ್ನೇರಳೆ ಹಣ್ಣು ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 3 ಅತಿಮಧುರವಾದ ಕಿತ್ತಲೆ ಹಣ್ಣು ಯತಿಗಳಿಗಾನಂದ ಸೀತಾಫಲದ್ಹಣ್ಣು ಅತಿರುಚಿಯಾದ ಅಂಜೂರದ ಹಣ್ಣು ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 4 ಮಾನವಂತರು ತಿನ್ನುವ ಮಾವಿನ ಹಣ್ಣು ಜ್ಞಾನಿಗಳಿಗೆ ರಾಮನಾಮದ ಹಣ್ಣು ದೀನಜನರು ತಿಂಬ ಮೂಸುಂಬೆ ಹಣ್ಣು ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 5 ಅಪರೂಪದಲಿ ಬೆಳೆದ ಮಾದಳದ್ಹಣ್ಣು ಕಪಿಗಳು ತಿನ್ನುವ ಸೀಬೆಯ ಹಣ್ಣು ತಪಸ್ವಿಗಳಾಹಾರ ಜಂಬುನೇರಳೆಹಣ್ಣು ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 6 ಪರಿ ಔಪಧಕೆ ಹೆರಳೆಯ ಹಣ್ಣು ಮರ್ಯಾದೆಗೆ ಕೊಡುವ ನಿಂಬೆಯ ಹಣ್ಣು ಪರಮ ರೂಪಿಯಾದ ಕರಬೂಜದ್ಹಣ್ಣು ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 7 ಬಡವರಿಗೂ ಈ ಹುಣಸೇ ಹಣ್ಣಿರಬೇಕು ಬಲ್ಲಿದರಿಗೂ ಹುಣಸೇ ಹಣ್ಣಿರಬೇಕು ರುಚಿ ಎಲ್ಲ ಜನರುಗಳು ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 8 ಹುಣಸೇಹಣ್ಣಿಲ್ಲದೆ ಭಾಂಡ ಶುದ್ಧಿಗಳಿಲ್ಲ ಹುಣಸೇ ಇಲ್ಲದೆ ಸ್ವಯಂಪಾಕ ರುಚಿಯು ಇಲ್ಲ ಹುಣಸೇ ಮರಕ್ಕಿಂತ ಗಟ್ಟಿ ಮರಗಳಿಲ್ಲ ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 9 ಹುಣಸೇಕಾಯಿಯ ಕುಟ್ಟಿ ರಸವ ಮಾಡುವರು ಹುಣಸೇಹಣ್ಣನು ಕುಟ್ಟಿ ಅಣಿಮಾಡಿಡುವರು ಹುಣಸೇಹಣ್ಣಿನ ಬೆಲೆ ಮುಗಿಲಿಗೇರಿರಲು ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 10 ಹರಿಯ ಅಪ್ಪಣೆಯಂತೆ ಹುಣಸೆಯ ಮರಹುಟ್ಟಿ ಪರರಿಗೆ ಉಪಕÀರಿಸುವದಿದು ಹರಿಯಾಜ್ಞೆ ವರದ ಶ್ರೀ ಹರಿ ಕಮಲನಾಭ ವಿಠ್ಠಲನಿಚ್ಛೆ ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 11
--------------
ನಿಡಗುರುಕಿ ಜೀವೂಬಾಯಿ
ವಿಶೇಷ ಎಂಥ ರಾಸಿಯೊ ಶ್ರೀಕಾಂತನ ಮುಖಸೂನು ನಿಂತು ಏರುವೋ ರಾಶಿನ್ಯಾವುದೊ ಇದನೆಲ್ಲರು ಪೇಳಿರಿ 1 ರಂಗ ಮೂರುತಿ ಸುತನ್ವೊೈರಿ ಏರಿಪೋ ಹೆಸ- ರೆಂದುಕೊಂಬುವ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 2 ಹರಿಸುತನಟ್ಟುಳಿಯಿಂದ ಪುಟ್ಟುವುದೇನು ಪರಮ ಗುಪ್ತದ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 3 ಇರುಳು ಹಗಲು ಮೈಯ್ಯ ತೊಳೆಯುತ ಮಣ್ಣಿನ ಲ್ಲೊ ್ಹರಳುತಿಪ್ಪುವ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 4 ಒದ್ದು ಮಾತಂಗನ ಗದ್ರಿಸ್ತಮುರಿದ ಪ್ರ- ಸಿದ್ಧನೆನಿಪ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 5 ಜೋಡು ವಂಶುದ್ಧಾರ ಮಾಡುವುದೀ ರತ್ನೆಂ- ದಾಡಿಕೊಂಬುವ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 6 ಜಗದೊಳಗೆಲ್ಲ ಭಾರಕರ್ತನಾಗಿ ಏರಿಸಿಳುಹೋ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 7 ಅಂಧಕಾರದಲಿದ್ದು ಬಂದ ಜನರ ಮುಟ್ಟಿ ದುಂದೆಬ್ಬಿಸುವ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 8 ದೊರೆಸುತ ತಾ ಬಂದು ಸರುವ ಜನರ ಮುಂದೆ ಮುರಿದುಬಿಷ್ಠುವ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 9 ಭರದಿ ಬಂದು ಕಾಲಕೆದರುತ ತನ್ನ ್ಹಲ್ಲು ಮುರಿಸಿಕೊಂಬುವ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 10 ರುಂಡ ಮಾಲೆಗಳೆಲ್ಲ ಗುಂಡಿನಂಥ ದೇಹ- ಕ್ಕ್ಹೊಂದೇರಿಳಿವೊ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 11 ಹತ್ತರೊಳಗೆ ಒಂಬತ್ತು ಬಿಟ್ಟ ಹೆಸ ರಿಟ್ಟುಕೊಂಬುವ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 12 ಯೋಚನೆ ಮಾಡಿ ಆಲೋಚಿಸಿ ನೋಡರನೇಕ ಮೂಢಜ್ಞಾನಿಗೆ ತಿಳಿವೊದೆ ಇದನೆಲ್ಲರು ಪೇಳಿರಿ 13 ಈಸು ರಾಶಿಗಳು ಭೀಮೇಶಕೃಷ್ಣನ ದಯ- ದೀಕ್ಷಣದಲ್ಲೆ ತಿಳಿದು ಪೇಳಿ ಇದನೆಲ್ಲರು ಪೇಳಿರಿ 14
--------------
ಹರಪನಹಳ್ಳಿಭೀಮವ್ವ