ಒಟ್ಟು 56123 ಕಡೆಗಳಲ್ಲಿ , 139 ದಾಸರು , 12212 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮದನ ಜನಕ ಸದಯ ಎನ್ನ ಹೃದಯ ಮಂದಿರದಲಿ ಕಮಲ ನಿಲ್ಲಿಸೊ ಸತತ ಯದುತಿಲಕ ಪ ಮದ ಮತ್ಸರದಿಂದ ಬಹಳ ಚದುರುತಿರುವ ಎನ್ನ ಮನದ ಹದವಗೈದು ನಿನ್ನ ದಿವ್ಯ ಪದಸೇವೆಯ ಮುದವೊದಗಿಸೊ ಅ.ಪ ಮಲಿನವಾದ ಎನ್ನ ಮನವು ಹಲವು ವಿಧದÀ ಅನುಭವಗಳಿÀಂ ಪೊಂದಿರುವೆನೊ 1 ಕಲಿಪುರುಷನಿಗೆ ಸುಲಭದಲಿ ಸಿಲುಕದಂತೆ ಎನ್ನ ಮನಕೆ ಬಲವನಿತ್ತು ಹರುಷದಿಂದ ಒಲಿಯುತ ಪ್ರಸನ್ನನಾಗೊ 2
--------------
ವಿದ್ಯಾಪ್ರಸನ್ನತೀರ್ಥರು
ಮದನನಗೇಹ ಸುಖ ಮರಣ ಸುಖಮದನನ ತೊತ್ತಿನ ಮಕ್ಕಳಾಗ ಬೇಡಿರೋ ಪ ಸ್ತ್ರೀಯರೂಪವ ಕಂಡು ಸೈರಿಸದೆ ಕಳಕಳಿಸಿಸುಯ್ಗರೆದು ಶರೀರವು ಬೆವರೇರುತಕೈಕಾಲ್ಗಳಿಗೆ ನಡುಕ ಹುಟ್ಟಿ ಕಾಮ ಶರಕೆ ಮೈಯನಿತ್ತುಕೊಯಿಸಿಕೊಳ್ಳುವ ಕೊರಳ ನಿತ್ಯದಿ ಕಷ್ಟದಿ ಸುಖವು 1 ಮುಖ ಕಾಂತಿಯ ನೋಡಿ ಮೋಹದಲಿ ಮುಳುಗಾಡಿಸುಖವೆಂದು ಬಗೆಯುತ ಸಂಗಯೋಗದಕಕುಲಾತಿಪಡುತಲಿ ಕೆಡೆದುತಾಪದಿ ಹೊರಳಿಬಕಧ್ಯಾನದಲಿ ತನ್ನ ನಿಜಸುಖವ ಮರೆವ 2 ಪತಿ ಚಿದಾನಂದ ಕಾಣದ ಸುಖವು3
--------------
ಚಿದಾನಂದ ಅವಧೂತರು
ಮದನನಯ್ಯಾ ಮೋಹನ್ನರಾಯಾ ನೀ ಬಾರೋ |ಹದನದಿಂದ ಹೇಳಿದಳು ಮದಗಜಗಾಮಿನಿ ಪ ಕಾಣದೆ ನಿಲ್ಲಲಾರಳು | ಕನಸನಾದರೂ ಕಾಣಳು |ಗಾಢ ನಿದ್ರೆಯನರಿಯಳು | ಬೆಳಗಾದರೂ ಮರೆಯಳು 1 ನಿನ್ನ ಮೊನ್ನ ಬರದೆ ಹೋಗಿ | ಭಿನ್ನನುಸರದೆ ಬೆರಗಿ |ಸೊನ್ನೆಗಳ ಮಿತವೆಂದು | ಎನ್ನ ಕೂಡನಾಡಿದಳು 2 ಆವ ಮೋಹದ ಮಡದಿ | ನಿನ್ನಗಲಿಸಿದ್ದಾಳು |ರುಕ್ಮಭೂಷಾ ಆವಳಾಣಿಗಳ | ನಿನಗೆ ಹಾಕಿ ಹಿಡಿದಾಳು 3
--------------
ರುಕ್ಮಾಂಗದರು
ಮದನಮೋಹನ ಮಾಮನೋಹರ ಶ್ರೀದೇವ ಸಾಧುಪಾಲನಕಾಗಿ ಬಂದು ಮೇದಿನಿಯ ಭಾರಿಳುಹಿದೆ ಧ್ರುವ ಬಂದು ಯದುಕುಲದಲಿ ಜನಿಸಿದೆ ಶ್ರೀ ಕೃಷ್ಣನು ಪೂತಣಿ ನಂದಗೋಕುಲಲ್ಯಾಡಿದೆ ಮಂದರಧರ ಸುಂದರರೂಪ ಮುಕುಂದ ವೃಂದಗೋಪರ ನಂದದಲಿ ಕೂಡಿ ಚಂದ ಚಂದದಲ್ಯಾಡಿದೆ1 ದೇವಕೀ ಕಂದ ದೇವಾಧಿದೇವ ಗೋವಿಂದ ಹಾವನ್ಹಿಡಿದಿ ನೀ ಮೆಟ್ಟಿ ಫಣಿಯಲಿ ಮಾವನ ಮರ್ದಿಸಿದೆ ಸಾವಿರನಾಮ ಪಡೆದ ನೀ ಪೂರ್ಣ ಶ್ರೀಹರಿ ದೇವ ಇಂದ್ರನು ಮಳಿಯಗರೆ ಗೋವರ್ಧನವ ನೀನೆತ್ತಿದೆ 2 ವಿದುರವಂದ್ಯ ಸದಾ ಪಾಂಡವಪಕ್ಷ ಶ್ರೀಧರ ನಿರ್ಮಿಸಿ ಮಡುಹಿದೆ ವಾಸುದೇವ ನಮ್ಮಯ್ಯ ಮಹಿಪತಿಯ ಘನಸುಖದಾಯಕ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಂದಮತಿಯೇ ಮಾನವಾ ಪ ಹಿಂದೊ ಮುಂದೊ ಎಂದು ಯೋಚಿಸದಿರು ಅ.ಪ ಸತತವು ಲಕ್ಷ್ಮೀಪತಿಯ ಭಜಿಸು 1 ಭಾವದಿ ತಿಳಿದತಿಭಕ್ತಿಯೊಳಿರು 2 ಈ ಚರಾಚರಕು ಗೋಚರಿಸುವ ಕಂಜ- ಲೋಚನನೆಂದು ನಿನ್ನ ನಾಚಿಕೆ ಬಿಡು 3 ಕೊರಳು ನೋಯುವಂತೆ ಕೂಗುತಲಿರು 4 ಪರದಲಿ ಮುಕ್ತಿಯು ಇಹದಲಿ ಸೌಖ್ಯವು ಗುರುರಾಮವಿಠಲನೆ ಕರುಣಿಸುವನು 5
--------------
ಗುರುರಾಮವಿಠಲ
ಮಂದರ ಧರನೆಂಬೊ ಕೋಲಸುಂದರಾಂಗನೆಂಬೊ ಯಾದವೇಂದ್ರಚಂದ್ರನೆಂಬೊ ಕೋಲ ಪಿಡಿದು ನಿಂತಾರು ಪ. ಹದಿನಾರು ಸಾವಿರ ಮಂದಿಮುದದಿಂದ ಹೆಜ್ಜೆಯನಿಕ್ಕುತ ಚದುರೆಯರು ಕೋಲಾಟಕ್ಕಾಗಿಒದಗಿ ನಿಂತಾರು1 ನೂರು ಮಂದಿ ನಾರಿಯರೆಲ್ಲಹಾರಭಾರ ಅಲಿಯುತಲೆಮುರಾರಿಯ ಮುಂದೆಲ್ಲಸಾಲು ಸಾಲಿಲೆನಿಂತರು 2 ನೀಲ ವರ್ಣನ ಮಡದಿಯರೆಲ್ಲಮೇಲಾದ ಕೋಲಾಟಕ್ಕಾಗಿಬಾಲೆಯರು ಬಂದೆಲ್ಲಸಾಲಾಗಿ ನಿಂತರು3 ಚಕ್ರಧರನ ಮಡದಿಯರೆಲ್ಲಚಕ್ಕನೆ ಕೋಲಾಟಕ್ಕಾಗಿನಕ್ಕು ಮುಗುಳನಗೆಯಸಖ್ಯದಲೆ ನಿಂತರು 4 ಪ್ರೇಮದಿಂದ ನಾರಿಯರೆಲ್ಲಭಾವೆ ರುಕ್ಮಿಣಿಗೆ ಎರಗಿಶ್ರೀಮಂತ ಧೀಮಂತ ನಮ್ಮಸ್ವಾಮಿ ಗೆಲಿಸೆಂದು 5 ಅಂಗನೆಯರು ರಾಮೇಶನ ಮಂಗಳ ಮಹಿಮೆಯಬೆಳದಿಂಗಳ ತುಂಬಿದರುಮೋಹನಾಂಗ ಚಂದ್ರಗೆ 6
--------------
ಗಲಗಲಿಅವ್ವನವರು
ಮಂದರಧರ ಗೋವಿಂದ ಜಯ ನಂದನ ಕಂದ ಬಾಲಕುಲದಾಸಾನಂದ ಪ ಬೃಂದಾವನ ಗೋಪೀಜನ ವೃಂದ ಸುಂದರ ಮುರಳೀ ಗೀತಾನಂದ ಅ.ಪ ಶ್ರೀವತ್ಸಾಂಕಿತ ಪಾವನಚರಣ ದೇವ ದೇವಾನತ ದೇವಕಿತರುಣ ಭಾವ ಸಂಭವಪಿತ ರಾಧಾರಮಣ ಭಾವುಕ ಸೇವಿತ ಕರುಣಾಭರಣ1 ಮಂಗಳನಾಮಾ ಯದುಕುಲಸೋಮಾ ಸಂಗರಭೀಮ ಜಗದಭಿರಾಮ ಭೃಂಗಕುಂತಳ ಮಾಲಿಂಗನಿಸ್ಸೀಮ ರಂಗರಥಾಂಗ ಮಾಂಗಿರಿವರಧಾಮ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಂದರೋದ್ಧಾರಾನಂದನ ಕಂದ ಬಾ ಬೇಗಾ ನಿನ್ನ ಸುಂದರಾನನಾನಂದದಿ ನೋಳ್ಪೆ ಬಾ ಬೇಗಾ ಪ. ಮದನ ಮೋಹನ ಚದುರ ಶ್ರೀ ಕೃಷ್ಣ ಬಾ ಬೇಗ ಸುದತಿಯೇರ ಮುದವಿಹಾರ ಮದಸೂದನ ಕೃಷ್ಣ ಅ.ಪ. ಕಸ್ತೂರಿತಿಲಕ ಶಿಸ್ತಲಿ ಪೊಳೆಯೆ ಬಾ ಬೇಗಾ, ನಿನ ಮಸ್ತಕದರಳೆಲೆ ಶಿಸ್ತನು ನೋಳ್ವೆ ಬಾ ಬೇಗಾ ಹಸ್ತದಿ ಕಡಗ ಕಂಕಣ ಶೋಭಾ ಬಾ ಬೇಗಾ ಶಿಸ್ತಿನಿಂದ ಕೊಳಲನೂದೆ ಹಸ್ತಿವರದನೆ 1 ಕೊರಳೊಳು ತುಲಸಿಮಾಲಾ ಶೋಭಾ ಬಾ ಬೇಗಾ ನಿನ ಮುಂಗುರುಳು ಕೂದಲೊಳು ಮೆರೆವ ಕಿರೀಟ ಬಾ ಬೇಗಾ ವೈಜಯಂತಿ ಮಾಲಾ ಶೋಭಾ ಬಾ ಬೇಗಾ ಸರಿಯಾರೊ ಜಗದಿ ನಿನಗೆ ವರ ಶ್ರೀ ಶ್ರೀನಿವಾಸ2
--------------
ಸರಸ್ವತಿ ಬಾಯಿ
ಮದಲಗಟ್ಟಿ ಪ್ರಾಣನಾಥಾ ಮುದವನಿತ್ತು ಪಾಲಿಸಯ್ಯ ಪ ಮದನಜನಕ ಮಾಧವಾನಬೋಧವಿತ್ತು ಕರುಣಿಸಯ್ಯ ಅ.ಪ. ತಾಪ ಮೂರ್ತಿ ನೀನುದೀಪದಂತೆ ಹೊಳೆದು ಭವದಕೂಪ ದಾಟಿಸಯ್ಯಾ ಭೂಪ 1 ದೇವ ದೇವೋತ್ತಮನೆ ನೀನುಜೀವದಾನ ಮಾಡಿಸಯ್ಯಪಾವಮಾನಿ ಪರಿಕೆಸೆಮ್ಮಾನೋವನದೂರ ಮಾಡಿಸಯ್ಯಾ 2 ಅಂಧ ಬಧಿರ ಮೂರ್ಖ ಜನರುಬಂದು ನಿನ್ನ ವಂದಿಸಲುಛಂದದಿಂದ ಅವರ ದುರಿತವೃಂದವನ್ನು ನಾಶಗೈವೆ 3 ಭೂಸುರೇಂದ್ರ ವ್ಯಾಸರಿಂದಆರು ತುಂಗಾ ಹೃದವ ಬಿಟ್ಟುಭಾವಿಸುವೆ ಇಲ್ಲದೇವಆ ಸಮೀರ ಜಾತ ಶೂರ 4 ಮುದದಿನಾಥ ಜ್ಞಾನ ವಾತಾಕಂದಧೀಮಂಧ ರಾಮ ದೂತಾಹೃದಯ ಸದನದಲ್ಲಿ ತೋರೋತಂದೆಶ್ರೀನರಹರಿಯ ರೂಪ 5
--------------
ತಂದೆ ಶ್ರೀನರಹರಿ
ಮಂದಹಾಸನ ಮುಖವ ಸಖಿಯೆ ಎಂದು ಕಾಂಬೆನೆ ಒಂದೊಂದು ನಿಮಿಷ ಯುಗವಾಗಿ ರಂಗಯ್ಯ ಬಾರೊ ತಂಗಿ ನಾ ಹ್ಯಾಂಗಿರಬೇಕಪ. ಒಂದಿನ ಸುಭದ್ರ ಮಂದಿರದೊಳು ಕುಳಿತುತಂದೆಯ ಭಾಗ್ಯ ಸ್ಮರಿಸುತ ಹಿಗ್ಗುತ ತಂದೆ ಭಾಗ್ಯ ಸ್ಮರಿಸುತ ಹಿಗ್ಗುತ ಇಂದಿರಾಪತಿ ನೆನೆದಾಳ 1 ಹೆಣ್ಣು ಸುಭದ್ರ ತಮ್ಮ ಅಣ್ಣನ ಭಾಗ್ಯವಬಣ್ಣ ಬಣ್ಣದಲೆ ಸ್ಮರಿಸುತಬಣ್ಣ ಬಣ್ಣದಲೆ ಸ್ಮರಿಸುತ ಹಿಗ್ಗುತ ಕಣ್ಣು ಮುಚ್ಚುತಲೆ ತೆರೆಯುತಲೆ2 ತಿಂಗಳಿಗೆ ಸುಭದ್ರಾ ಬಂದೆನ ನಿನ್ನ ನೋಡಲುಒಂದೇ ಮನದಿಂದ ಇರುಯೆಂದಒಂದೆ ಮನದಿಂದ ಇರುಯೆಂದ ಕಳುಹಿದ ಇಂದೆನ್ನ ಮನಸ್ಸು ಕಲಕಿತ 3 ಕೈವಲ್ಯಪತಿಯ ದಯದಿಂದ ಸಲುಹಿದವೈಭವದೊಳಗÀÉ ಮರೆತಾನವೈಭವದೊಳಗÀÉ ಮರೆತಾನ ಮುಯ್ಯವ ಒಯ್ದರೆ ನೋಡಿ ಬರಬೇಕ 4 ಕೃಷ್ಣರಾಯರ ಮನೆಯ ಅಷ್ಟೈಶ್ವರ್ಯವಎಷ್ಟು ವರ್ಣಿಸಲ್ವಶವಲ್ಲಎಷ್ಟು ವರ್ಣಿಸಲ್ವಶವಲ್ಲ ಮುಯ್ಯವ ಒಯ್ದರ ನೋಡಿ ಬರಬೇಕ 5 ಗೊಲ್ಲಾಧೀಶನ ಭಾಗ್ಯ ಚಲುವಿ ಸುಭದ್ರಸೊಲ್ಲುಸೊಲ್ಲಿಗೆ ನುತಿಸುತ ಹಿಗ್ಗುತಸೊಲ್ಲುಸೊಲ್ಲಿಗೆ ನುತಿಸುತ ಹಿಗ್ಗುತ ಎಲ್ಲರ ಮನಸ್ಸು ಎರಗೀತ6 ಗೋಕುಲೇಶ ರಾಮೇಶ ಯಾಕೆ ಮಥುರೆ ಬಿಟ್ಟವಾಕ್ಕುಪೇಳೆಂದು ವನಿತೆಯರುವಾಕ್ಕುಪೇಳೆಂದು ವನಿತೆಯರು ನುಡಿಯಲುಸಾಕಲ್ಯದಿಂದ ತಿಳಿಸಿದಳು7
--------------
ಗಲಗಲಿಅವ್ವನವರು
ಮದಾಂಧನೋ ನಾನು ಮಧುಸೂದನ ಪ ಜಗವನು ತುಂಬಿದ ತ್ರಿಗುಣಾತ್ಮಕನೆತೆಗೆದು ಕಣ್ಗಳ ನೋಡದ ನಾನು 1 ಪವನನೊಡೆಯ ನಿನ್ನ ಸವಿಸವಿ ಸ್ತವಕೆಕಿವಿಗೊಡದೆ ಕಿವುಡನಾದೆನಾ 2 ಎಡೆಗಿದ್ದರು ಗಡ ಅಡಗಿಹನಿಲ್ಲೆಂದುಹುಡುಕುತ ಕೇಳುವ ಜಡಮತಿ ನಾನು 3 ಗದುಗಿನ ವೀರನಾರಾಯಣನೆ ಎನ್ನಎದೆಯೊಳು ನಿಂತಿರೆ ನೋಡದ ನಾನು 4
--------------
ವೀರನಾರಾಯಣ
ಮಂದಾನ ಬಾಧೆಗೆ ಮನಿ ಮಂದಿ ನಾವು ಸಹಿತ ಬೆಂದು ಬೇಸರ ಗೊಂಡು ಬಳಲು ತೇವು ಹರಿ ತಂದಿ ಬೇಗದಿ ಬಂದು ದಯಮಾಡಿ ಸಲಹೋ ಗೋವಿಂದಾ ಕೃಪಾಳು ಶ್ರೀ ಕರುಣಾಂಬುಧಿಯೆ ಪ ಕೃಷ್ಣಾ ರೌದ್ರಾಂತಕನ ಕ್ರೂರದೃಷ್ಟಿ ಮುಖ ಹಲಾ ತ್ಕøಷ್ಠವಾಗಿ ಎನ್ನ ಕಾಡುತಿರಲು ನಿಷ್ಠೆ ನೇಮಗಳೆಲ್ಲ ಜರಿದು ಮತಿ ಭೃಷ್ಟನಾಗಿ ಕಷ್ಟಕ್ಕೆ ಒಳಗಾದೆ ಕಡೆಹಾಯಿಸೊ ಧೊರಿಯೆ ಇಷ್ಟದಾಯಕ ನಿನ್ನಲ್ಲಿನ ಮಾಯವೆ ಆಡುದು (ಅಹುದು) ಕೃಷ್ಣಮೂರುತಿ ಬೇಗ ಕೈಹಿಡಿ ಇನ್ನಾ ಸೃಷ್ಟಿಗೊಡೆಯ ಶ್ರೀನಿವಾಸಕೇಶವ ಎನ್ನ ಕಷ್ಟವು ಪರಿಹರಿಸಿ ಕಾಯೋ ಸಂಪೂರ್ಣ 1 ಸೂರ್ಯಾನ ಪುತ್ರನ ಕಾರ್ಯಾವು ಎಮ್ಮ ಮೇಲೆ ಭಾರಿ ಕಾಣುತಲಿದೆ ಪರಮಾತ್ಮನೆ ------- ಘಟಗಳಿಗುಪದ್ರಕಾರನಾಗಿ ವ್ಯಾಧಿ ಖಂಡಿಸೋ ವೇಳೆ ಆರು ಈ ಗ್ರಹಕರ್ತರಾಗಿರಲು ದೇವರಿನ್ನು ಧಾರುಣಿಯೊಳು ಹರಿ ದನುಜಾಂತಕಾ ವಾರಿಜಾನಾಭಾ ಶ್ರೀ ವೈದೇಹಿ ಪತಿರಾಮಾ ಸಾರನೆ ಗಡ ಬಂದು ಸಲಹೋ ತಂದೆ 2 ಗರ್ಭಾದಿ ಮುದನಿಂ ಸುಖಭ್ರೂಣ ಭಯವೆಂಬ ದೆಬ್ಬಿಗೆ ತಾಳದೆ ತಲ್ಲಣಿಸುವೆ ಅರ್ಭಕ ನಾನೊಂದು ಅರಿತು ಅರಿಯೆ ದೇವ ಸಭ್ಯಾ ನೀ ನಂದ ಸರ್ವೋತ್ತುಮಾ ನಿರ್ಭಯನನು ಮಾಡಿ ನೀನೆ ರಕ್ಷಿಸದಿರೆ ದಾರು ಮನಸು----ಳಗೆ ದರ್ಭಶಯನ ರಾಮನ-----'ಹೊನ್ನ ವಿಠ್ಠಲ’ ಸಾಕಾರ ನೀ ಎನ್ನ ತ್ವರದಿ ಪೊರೆಯೊ 3
--------------
ಹೆನ್ನೆರಂಗದಾಸರು
ಮಂದಾರ ತರುವೇ | ನಾ ಬೇಡುವೇ | ಮಂದಾರ ತರುವೇ ಪ ಇಂದು ಮೌಳಿನುತ | ಸಂದರುಶನ ತವ ಅ.ಪ. ಸಾರಥಿ ಪದ ಬಿಸಜಯುಗಳದಿ ನಿಜಗತಿಯ ಕೊಡುತ ನಡೆಸು ಸುಪಥದಿ 1 ದಶರಥ ಹರಿ ವಚೋನಯ | ಅಸುಪತಿಪರಿಕೃಷ್ಣ ವಚೋನಯಯಶದಿ ಮೆರೆದು ಮುಂಬರುವ ಅಸುಪತಿ ವಸುದೆಜೆರಮಣನ ಯಶವ ನುಡಿಸು ಯತಿ 2 ಭವ ತಾರಕ ನಿರುತಿಹೆ ಮುದಮುನಿ ಮತೋದ್ಧಾರಕ 3
--------------
ಗುರುಗೋವಿಂದವಿಠಲರು
ಮಂದಾಸಲ ರಗಳೆ ರಾಮ ಪದಾಂಬುಜ ಭೃಂಗಗೆ ಜಯ ಜಯ ತಾಮಸ ಕುರುಕುಲ ಧ್ವಂಸಕ ಜಯ ಜಯ ಶ್ರೀ ಮತ್ಪೂರ್ಣ ಪ್ರಜ್ಞಗೆ ಜಯ ಜಯ 1 ವಾಸುದೇವ ಸುನಾಮಕ ಜಯ ಜಯ ದೋಷ ಜ್ಞಾನ ವಿನಾಶಕ ಜಯ ಜಯ ಸೂರ್ಯ ವ್ಯಾಸ ಸುಭೋಧೆಯ ದರ್ಪಣ ಜಯ ಜಯ 2 ಶುಭಗುಣಲಕ್ಷಣ ಶೋಭಿತ ಜಯ ಜಯ ಭವ ಮೋಚಕ ಜಯ ಜಯ ಇಭವರದಾಜ್ಞಾಧಾರಕ ಜಯ ಜಯ ವಿಭುಧ ಸುಖಾಂಬುಧಿ ಸೋಮನೆ ಜಯ ಜಯ3 ನಿತ್ಯ ಸದಾಗಮ ಕೋಶಗೆ ಜಯ ಜಯ ಸತ್ಯವತೀಸುತ ಪ್ರೀಯಗೆ ಜಯ ಜಯ ಸತ್ಯಾಖ್ಯಾತ ಸುಮಿತ್ರಗೆ ಜಯ ಜಯ ಸುರತರು ಜಯ ಜಯ 4 ಅಚ್ಚುತ ಪ್ರೇಕ್ಷರ ಶಿಷ್ಯಗೆ ಜಯ ಜಯ ಸ್ವಚ್ಚಗುಣಾರ್ಣವ ಋಜುಪತಿ ಜಯ ಜಯ ಕೆಚ್ಚೆದೆ ವೀರಾಗ್ರೇಸಗೆ ಜಯ ಜಯ ಪಾವಕ ಜಯ ಜಯ 5 ಶೃತಿತತಿ ವಿಮಲ ಸುಭೋದಕ ಜಯ ಜಯ ರತಿಪತಿ ಪಿತವರ ದೂತಗೆ ಜಯ ಜಯ ಕ್ಷಿತಿಧರ ದ್ವಿಜಶಿವವಂದಿತ ಜಯ ಜಯ 6 “ಶ್ರೀ ಕೃಷ್ಣವಿಠಲ” ಸದಾರತ ಜಯ ಜಯ ಲೋಕ ಹಿತಪ್ರದ ನಿಜಗುಣ ಜಯ ಜಯ ಶ್ರೀಕರ ಶುಭಕರ ಜಯಕರ ಜಯ ಜಯ ಆಕಮಲಾಸುತ ರಯೀಪತಿ ಜಯ ಜಯ 7
--------------
ಕೃಷ್ಣವಿಠಲದಾಸರು
ಮಂದಿರ ಕರುಣಾಕರ ಪ ದುರಿತ ಸುರವರ ಮಾಮುದ್ಧರ ಅ.ಪ ಸುತೆಯಾ ಶುಭವಾರ್ತೆಯಾ ಬಿಡಿಸಯ್ಯ ಸಂಸೃತಿ ಭಯ 1 ಕಂಸಾರಿ ಪಡೆದಿಯೊ ಜವ ಶೌರಿ ನೋಳ್ಪ ಸುಖವ2 ಮಹಿಮೆಯ ತಿಳಿವ ಬಗೆಯ ಕೊಡು ಸುಮತಿಯ 3
--------------
ಕಾರ್ಪರ ನರಹರಿದಾಸರು