ಒಟ್ಟು 3847 ಕಡೆಗಳಲ್ಲಿ , 123 ದಾಸರು , 2597 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಮ್ಮ ಮಾತಿನರಹು ತಮಗಿಲ್ಲಾ | ಸುಮ್ಮನಾಡುತಲ್ಯೆದ ಜಗವೆಲ್ಲಾ ಪ ನಾನೇ ಆ ಬ್ರಹ್ಮನೆಂದುಸುರುವನು | ತಾನುದಾರು ಮತ್ತಾರಿಗ್ಹೇಳುವನು 1 ನಿಸ್ತರಗಾಂಬೋಧಿಯೆನಿಸಿದಾ | ವಸ್ತುವಿಗೆ ದೃಶ್ಯವಿವಾದಾ 2 ಬೆಲ್ಲ ಸವಿದ ಮೂಕನಂತಾಗಿ | ನಿಲ್ಲುವವನೇ ಜಗದೊಳು ಯೋಗಿ3 ದ್ವೈತಾದ್ವೈತ ಮೀರಿಹ ಖೂನಾ | ತಾತ ಮಹಿಪತಿ ಗುರುಜ್ಞಾನಾ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತಮ್ಮನರಿಯದೆ ತಮ್ಮೊಳೀತೆರನಾಡುವರು |ಹಮ್ಮ ಬಿಡದೆ ಪರಬಮ್ಮನ ಜರಿಯುವರು ಪ ಒಂಬತ್ತು ಛಿದ್ರುಳ್ಳ ಕುಂಭದ ಗಾಲಿಗೆ |ಸ್ತಂಭದಂತೆ ನಿಲಿಸಿ ಸಂಭ್ರಮ ಪಡೆವರು 1 ಮುಂಡ ಬೋಳವ ಮಾಡಿ ಕಂಡಲ್ಲನ್ನವನುಂಡು |ದಂಡ ಧರಿಸಿ ಮನ ದಂಡಿಸದಿರುವರು 2 ಕದಲಿಸದೆ ಕಾಯಾ ಹದನದಿಂದಲಿರಿಸಿ |ವೇದದ ಮೊದಲೆಂದು ನಾದಕೆ ಬೆರೆವರು 3 ಓದಿ ಆಗಮಗಳನು ಭೇದಿಸಿ ತಿಳಿಯದೆ |ಮೇದಿನಿಯೊಳಗೆಲ್ಲ ವಾದಿಸಿ ಮೆರೆವರು 4 ಪಥ ಪಡೆದು ವೇಷ ಪಾಲಟ ಮಾಡಿ |ದೋಷಕಂಜದೆ ರುಕ್ಮ ಭೂಷಗೆ ಮರೆವರು 5
--------------
ರುಕ್ಮಾಂಗದರು
ತಮ್ಮಾ ನೀ ನೋಡಿದ್ಯಾ | ಒಮ್ಮನದಿಂದಬೊಮ್ಮ ಮೂರುತಿ ಶ್ರೀ | ವಲ್ಲಭ ರಂಗನಾ ಪ ಹಿಂಡು ದೈವರ ಗಂಡ | ಚಂಡ ವಿಕ್ರಮ ನಮ್ಮಕೊಂಡಜ್ಜಿ ಬಳಿಲಿರುವ | ಪುಂಡರೀಕಾಕ್ಷನ 1 ನೂಪುರ ಗೆಜ್ಜೆಪೆಂಡ್ಯ | ಆಪಾದ ಸೊಬಗಿಂದಶ್ರೀಪತಿ ಮೆರೆಯುವ | ಭೂಪತಿ ವರದನ 2 ಅಕ್ಷಯ ಫಲದವನವಕ್ಷದೋಳ್ ಧರಿಸೀಹ | ಲಕ್ಷ್ಮೀ ಉಳ್ಳವನ 3 ಕೌಸ್ತುಭ | ಕರ್ಣದಿ ಕುಂಡಲಶಿರದಲ್ಲಿ ಕಿರೀಟ | ಧರಿಸಿ ಮೆರೆವವನ4 ಪವನಾಂತರಂಗನ | ಪಾವನ ಚರಿತನಭುವನ ಮೋಹನ ಗುರು | ಗೋವಿಂದ ವಿಠಲನ 5
--------------
ಗುರುಗೋವಿಂದವಿಠಲರು
ತರತಮದಿ ಶರಣು ಮಾಡುವೆ ನಿಮಗೆ ಕರಣಶುದ್ಧಿಯಲ್ಲಿ ಕರುಣ ಮಾಡಿ ಎನ್ನ ಪರಿಪಾಲಿಸಬೇಕು ನಿರುತ ಬಿಡದೆ ಮನ ಸಿರಿಹರಿ ಚರಣಕ್ಕೆ ಎರಗುವಂತೆ ವರಭಕುತಿಯಲ್ಲಿ ಪ ಪರಮೇಷ್ಠಿ ವಾಯು ಸರಸ್ವತಿ ಭಾರತೀ ಉರಗ ಈಶ ಹರಿ ಸತಿಯರು ಮೂ ರೆರಡು ಜನರು ಆ ತರುವಾಯ ಸೌಪರ್ಣಿ ಸಿರಿ ಗುರು ದಕ್ಷನೆ ಶಚಿ ಮರುತ ಪ್ರವಾಹ ಮೂ ವರು ಸನಕಾದ್ಯರು ದುರಿತಶಾಸನ ಶಶಿ ತರಣಿ ಶತರೂಪ ವರುಣ ನಾರದರ 1 ಮುನಿಗಳ ಶ್ರೇಷ್ಠ ಭೃಗು ಅನಲ ಪ್ರಸೂತಗಾಧಿ ತನುಜ ವಾರಿಜಾಜನ್ನತನಯರು ವೈವಸ್ವತ ಸೂರ್ಯ ದನು ಪ್ರವಾಹವೆಂಬ ಅನಿಲನ್ನ ತಳೋದರಿ ಅನಿಲದೇವಜ ಅಶ್ವಿನಿ ದೇವತೆಗಳು ಅನಳಾಕ್ಷಸುತ ಧನಪತಿ ಪ್ರಹ್ಲಾದ ಗುಣಿಸುವೆ ವಸು ಏ ಳನು ದಶರುದ್ರರು ಇನಿತರೊಳಗೆ ಒಬ್ಬನ ಬಿಟ್ಟನು ದಿನ 2 ದಶ ವಿಶ್ವದೇವತರು ಸ್ವಶನರೊಳಗೆಗೀರ್ವರ ರಸದ್ಯುನವಕೋಟಿ ತ್ರಿದಶರೂಪ ಪಿತ್ರರೂ ಎಸವ ಸೋಮ ಪುನರ್ವಾಪಸರಿಪಶತಸ್ಥರು ನಸುನಗೆ ಕರ್ಮಜ ಋಷಿ ಈರ್ವರು ಮನು ಕುಶಲ ಸಪ್ತ್ತರಿಗೆ ತುತಿಸೆ ಕಾಲಕಾಲದಿ 3 ಮಾಂಧಾತ ಬಲಿ ಶಶಿಬಿಂದುವೆ ಪ್ರಿಯವ್ರತ ಪರೀಕ್ಷಿತ ನಂದ ಕಕುಸ್ಥ ಗಯ ಕುಂದದೆ ಯದುಕುಲದಿಂದ ಬಂದ ಹೈಹಯನು ಚಂದ್ರನ ಮಡದಿ ಏಳೊಂದನೆ ಸೂರ್ಯನು ಮಂದಹಾಸಾಂಬುಜ ಬಾಂಧವನಸತಿ ಕಲದರ್ಪನಸೂಸೆ ವೃಂದಾರಕರಿಗೆ 4 ಸದಮಲ ಸ್ವಾಹಾದೇವಿ ಬುಧಾ ಉಷಾದೇವಿ ಶನಿ ಮುದದಿಂದ ಪುಷ್ಕರ ಸಹೃದಯ ತುಂಬರರಿಂದ ಮೊದಲಾಗಿ ನೂರುಮಂದಿ ತ್ರಿದಶ ಗಂಧರ್ವರು ಚದುರೆ ಊರ್ವಸಿ ರಂಭೆ ಅದಿತಿ ಕಶ್ಯಪದಿತಿ ಹದಿನಾರು ಸಾವಿರ ಬುಧನ ಮಕ್ಕಳು ತಪೋನಿಧಿಗಳು ಎಂಭತ್ತು ತದುಪರಿ ಅಜಾನಜ ತ್ರಿದಶರು ಓಜಸ್ತರೆದರಾಗಿ ನಾನಿಂದು 5 ಹರಿಭಕ್ತರಾದ ಅಪ್ಸರ ಸ್ತ್ರೀಯರು ಕೆಲಕೆಲವು ಮರಳೆ ಚಿರಾಖ್ಯನಾಮದಿರುತಿಪ್ಪ ಪಿತೃಗಳು ಪರಿಪರಿ ನೂರುಕೋಟಿ ಪರಮಋಷಿಗಳಿಗೆ ಸುರ ಗಂಧರ್ವರ ವಿಸ್ತರ ಮನುಜ ಗಂಧರ್ವ ಧರಿಣಿಜಾಕವಿ ಮೇಲರಿದು ಜಯಂತಗೆ ಕರ ಮುಗಿವೆ ಕ್ಷಿತಿಪರನು ಕೊಂಡಾಡುತ ಇರುಳು ಹಗಲು ಉತ್ತಮರ ಮನುಜರ ಪಾಡಿ ನಿರುತ ಜಂಗಮ ಸ್ಥಾವರಗಳ ನೋಡುತ 6 ಭುಜಗಶಯನನಿಂದ ಸೃಜಿಸಿದ್ದ ಸರ್ವರಿಗೆ ನಿಜವಾಗಿ ಶಿರವಾಗಿ ಭಜಿಸುವೆ ಚನ್ನಾಗಿ ತ್ರಿಜಗದೊಳಗೆ ಎನ್ನ ರಜ ತಾಮಸ ಗುಣದ ವೃಜವೆ ಓಡಿಸಿ ನಿತ್ಯಸುಜನ ಮಾರ್ಗವ ತೋರಿ ರಜನಿ ಚರಾಂತಕ ವಿಜಯವಿಠ್ಠಲನ್ನ ಭಜಿಪೆನದಕೆ ನಿಮ್ಮ ನಿಜವ್ಯಾಪಾರದಿ ಸೃಜಿಸಿ ಕೊಡುತ ಧರ್ಮ ವೃಜಗಳೊದಗಿಸುತ್ತ ಕುಜನ ಮತದ ಮೇಲೆ ಧ್ವಜವೆತ್ತಿಸುವುದು 7
--------------
ವಿಜಯದಾಸ
ತಲೆ ಬೆಳಗಾಯಿತು ತಲೆ ಬೆಳಗಾಯಿತು ಎನ್ನ ಬೆಳಗದೊಳು ಕೂಡಿ ಧ್ರುವ ಹಿಂದೆ ಗೋವಿಂದನು ಮುಂದೆ ಮುಕುಂದನು ಅಂದಿಗಿಂದಿಗೆ ಅನಿರುದ್ಧ ತಂದೆ ತಾಯಿಯ ವೃಂದಾವನ ಪತಿಯು ಮಂದರಧರ ಬಂಧು ಬಳಗ 1 ಕುಂದ ನೋಡದೆ ಸಲಹುವ ಸಂಕರುಷಣಾ ನಂದ ಮೂರುತಿ ತ್ರಿ ವಿಕ್ರಮನ ದುರಿತ ದೂರಮಾಡಿ ದಾಮೋದರ ಚಂದ ಮಾಡುವ ಜನಾರ್ದನನು 2 ಎಡಕ ಯಾದವ ನಾರಾಯಣ ಕೃಷ್ಣನು ಬಲಕ ಬಾಲಮುಕುಂದ ಎತ್ತ ನೋಡಿದರತ್ತ ಸುತ್ತ ಪುರುಷೋತ್ತಮ ಚಿತ್ತ ಮನದೊಳು ಅಚ್ಯುತನು 3 ಪ್ರಾಣಪತಿಕರಿಸಿಹ್ಯ ಪ್ರದ್ಯುಮ್ನ ಆಭಯನಿತ್ತಿಹ ಪದ್ಮನಾಭ ಮಾಧವ ಮಧುಸೂದನ ಯದು ಕುಲೋತ್ತಮ ಶ್ರೀಧರನು 4 ತುಂಬಿ ಹೃಷಿಕೇಶ ದೃಷ್ಟಿಮೂರುತಿ ನರಸಿಂಹ ದೃಷ್ಟಿಯೊಳಗೆ ಹರಿ ವಿಷ್ಣು ವಾಸುದೇವ ಸೃಷ್ಟೇಶ ಗುರು ಕೇಶವನು 5 ಲಕ್ಷ್ಮಿಯೊಳಗೆ ಗುರು ಲಕ್ಷುಮಿಕಾಂತನು ರಕ್ಷಿಸುವ ಅಭೋಕ್ಷಜನು ಉಪೇಕ್ಷವಿಲ್ಲದೆ ಹೊರೆವ ಉಪೇಂದ್ರನು ಮೂರ್ತಿ ವಾಮನನು 6 ತುಂಬಿದ ಬಳಗವು ಕಂಡ ಮೇದಿನಿಯೊಳು ಕಂದ ಮಹಿಪತಿ ಸ್ತುತಿಸಿದನು ಬಂದ ಜನ್ಮವು ಕಡೆ ಆಯಿತೆಂದು ಮನದೊಳು ತ್ರಾಹಿ ತ್ರಾಹಿ ಎಂದ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತವರು ಮನೆಯು ನನ್ನ ಸುವಿದ್ಯಪುರಲ್ಯದೆ ಸಾವಿರಕೊಬ್ಬಗೆ ದೋರುತದೆ ಧ್ರುವ ಸಾವಿರಕೊಬ್ಬನೆ ತಾ ಸುದೇವನೆ ಬಲ್ಲ ಭಾವಿಸದಲ್ಲದೆ ತಿಳಿಯುವದಲ್ಲ ಅವಿದ್ಯಪುರ ದಾಟ, ಮಂದಾಕ್ಕಾಗಲು ಎಲ್ಲ ಆವಾಗ ತಿಳಿವುದು ಹೇಳಿದ ಸೊಲ್ಲ 1 ಸಾವಿರ ತೆನೆಯಲೊಪ್ಪುತದೆ ಒಳಕೋಟ ಠವಿಠವಿಸುತದೆ ನೋಡಿ ಮನಮುಟ್ಟಿ ಅವ್ವ ಅಪ್ಪನೇ ನಮ್ಮ ಇಹಸ್ಥಾನವು ಘಟ್ಟಿ ದೇವಾಧಿ ದೇವನೊಬ್ಬನೆ ಜಗಜಟ್ಟಿ 2 ಬಲು ಅಭೇದ್ಯಸ್ಥಳ ತಿಳಿಯದಿನ್ನೊಬ್ಬರಿಗೆ ನೆಲೆವಂತರಿಗೆ ತಾನು ತಿಳಿವದು ಬ್ಯಾಗೆ ತುಂಬಿ ಥಳಗುಟ್ಟಿ ಹೊಳವ್ಹಾಂಗೆ ಬಲಗೊಂಡು ಕೇಳಿ ಶ್ರೀಸದ್ಗುರುವಿಗೆ 3 ಅಣ್ಣನೆಂಬಾತ್ಹಾನೆ ಅನಂದದಲ್ಹಾನೆ ನೆನೆಪಿಗೊಮ್ಮೆ ಬಂದು ಸುಳವುತ್ಹಾನೆ ಕಣ್ಣೆಲಿ ಕಟ್ಯಾನೆ ತಮ್ಮನೆಂಬತ್ಹಾನೆ ಕ್ಷಣಕೊಮ್ಮೆ ಹೊಳೆವುವಾನೆ4 ಅಕ್ಕನೆಂಬಾಕಿ ತಾ ಸಖರಿ ಅಗ್ಹಾಳೆ ಅಖರದಲೆವ್ವ ಈ ಮಾತು ಕೇಳೆ ಪ್ರಖ್ಯಾತದಲಿ ಪ್ರೀತಿಮಾಡುವ ತಂಗ್ಹ್ಯಾಳೆ ಸುಖ ಸುರುತ್ಹಾಳೆ ಇರುಳು ಹಗಲು 5 ಅತ್ತಿಗೆ ನಾದುನಿ ಭಾವ ಮೈದುನರೆಲ್ಲ ಅಂತ್ಯಕವಾಗ್ಹ್ಯಾರೆ ಮನಿಯೊಳಗೆಲ್ಲ ಸುತ್ತೇಳುವ ಬಳಗ ಉತ್ತುಮರೆನಗೆಲ್ಲ ಹಿತದೋರುತಾರವ್ವ ಸರ್ವಾಪ್ತರೆಲ್ಲ 6 ಸರ್ವಾಪ್ತವೆಂಬುದು ಸರ್ವೇಶನೆ ತಾನು ಸರ್ವದಾ ಎನ್ನೊಳು ತಾ ಕಾಮಧೇನು ಪರ್ವಕಾಲದ ಬಹಳ ಏನೆಂದ್ದೇಳಲಿ ನಾನು ಸರ್ವಾರ್ಥ ಕೊಡುತ್ಹಾನೆ ಸರ್ವಾತ್ಮ ತಾನು 7 ಅವ್ವ ನಮ್ಮಪ್ಪಗೆ ಸರಿ ಇಲ್ಲ ಜಗದೊಳು ಆವ ಕಾಲಕೆ ತಾ ಇವರ ಮೇಲು ಇವರೆಂಬುದು ಒಂದೆ ಮಾತಿನ ಸ್ವಕೀಲು ಸವಿಸುಖಬಲ್ಲರು ಅನುಭವಿಗಳು 8 ತೌರಮನೆಂಬುದು ಪ್ರತ್ಯೇಕಾ ತಾನಿಲ್ಲ ಭಾವಾರ್ಥದ ಮಾತು ಕೇಳಿರೆಲ್ಲ ಅವಗುಣನೆ ಬಿಟ್ಟು ಕೇಳಿ ಸವಿಯ ಸೊಲ್ಲ ಪೂರ್ವಿಕರಿಗಿದೆ ಸಾರವೆಲ್ಲ 9 ಸುದ್ದಿ ಹೇಳಿ ಕಳುಹುಲಿಕ್ಕೆ ಈ ಸಾಧನ ಇದುವೆ ಅಯಿತು ತವರ ಮನಿ ಬುದ್ಧಿವಂತನೆಬಲ್ಲ ಲಕ್ಷಕೊಬ್ಬ ಜ್ಞಾನಿ ಸಿದ್ಧಿದರಿಡುವದು ಸದ್ಗುರು ಪ್ರಾರ್ಥನಿ 10 ಬಳಗದೊಳು ಕೂಡಿ ಒಳಿಥಾಗ್ಯಾಯಿತು ಎನಗೆ ಒಳ ಹೊರಗೆ ಸುಖ ಎದುರಿಟ್ಟತೀಗ ಕುಲಕೋಟಿ ಬಳಗ ಸದ್ಗುರು ಪಾದವ್ಯನಗೆ ಸಲಹುತಾನೆ ಸ್ವಾಮಿ ಮಹಿಪತಿಗೆ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಾ ಕಾಯುತಿದ್ದ ಕೃಷ್ಣನು ಗೋಪಾಲರನೂಗೋಕುಲದಲ್ಲಿ ಗೂಢನೂ ಪುೀಕುಂಭಿನಿಯೊಳಗಿರುತಿಹ ದುಷ್ಟರನೂಕುವ ಬಿಲದಲಿ ಅನುಪಮ ಧೀರಾ ಅ.ಪಅಸಿತ ಪಕ್ಷವು ಬಂದುದೂ ಮಾಸಗಳೊಳುಎಸೆವೇಕಾದಶಿಯೆಂಬುದು ಬರಲು ಅಂದುಬಸವಾಸುರಾನಾ ಬಡಿದು ತಾನಂದು ವ್ರಜದಿ ವಸುಧೇಶ ನಿದ್ದನೊಲಿದು ಅಸುರನು ಅಳಿಯಲು ಆ ವ್ರಜವುಳಿಯಲು ಹಸುಗಳು ಹೆಚ್ಚಲು ಹರಿ ತಾನಲಿಯಲು ವಸಗೆವ್ರಜದೊಳಗೆ ಬಹುಮಸಗೆ ಹೆಸರಾಗೆ 1ದ್ವಾದಶೀ ದಿವಸಾದಲ್ಲಿ ಉದಯಕಾಲವಾದುದು ''ತದಲ್ಲಿ ಶ್ರೀಕೃಷ್ಣನಿಗೆಬೋಧವಾಗಲು ಬೇಗದಲಿ ಬಾಲರು ಸಹಾ ಮಾಧವಾ ಮುದದಿಂದಲಿಕಾದಿರೆ ಗೋವ್ಗಳ ಕಾನನಮಧ್ಯದಿಕಾದಲು ಬಂದಾ ಕೇಶಿಯನುದಯದಿಕಾದಿ ಅಸುವಸಿಗಿದಿ ವೊದ'ದೀ ಈ 'ಧದಿ 2ವೃಂದಾಖ್ಯವಾದವನಾದಿ ಗೋಪಾಲಕರಾ ವೃಂದದಾ ವರಸ್ತೋಮವಾಮದಿ ನಿಂದಿದ್ದನಾಗಾಕಂದರ್ಪಕೋಟಿತೇಜದಿ ಕುಂಭಿನಿಯನ್ನು ಹೊಂದಿಸಿದನು ಹರುಷದಿ ಮಂದರಧಾರನು ಮಂಜುಳ ಮ'ಮನು ನಿಂದಿಹ ನೀರನು ನಿಜಗುಣಧಾಮನು ಅಂದು ಅಜಬಂಧು ತಾನೆಂದೂ ಅಲ್ಲಿನಿಂದು3ಘನ ನೀಲಾಳಕದ ವೃಂದ 'ುಶ್ರಿತವಾದಾಮಣಿಮಯ ಮಕುಟದಿಂದಾ ಮೂಡುವ ಕಾಂತಿಪಣೆಯಲ್ಲಿ ಮೊಳೆಯುವಂದಾ ಕಸ್ತುರಿತಿಲಕ ಗಣನೆಗೆ ಬರುವ ಛಂದಾ ಗುಣಿಸುವರಾರಿದ ಗುಣನಿಧಿಯೊಪ್ಪಿದ ಪ್ರಣತಪ್ರೇಮದ ಪದ ಮುಖ ಪದ್ಮದಗುಣನೂ ಗುರುತರನೂ 'ನಯವನೂ 'ವರಿಪನೂ 4ಸಿಂಗಾರಿಯ ಸೋಲಿಸುವಾ ಸುಭ್ರುವದಿಂದಾಮಂಗಳವಾದ ಮುಖದ ಮನ್ನಿಸುತಿಹಕಂಗಳ ಕೋಡಿವರಿವಾ ಕಟಾಕ್ಷವನ್ನೂ ಸಂಗಿಸಿದ ಸುಸ್ಮಿತವಾ ತೊಂಗುತ ತೋರಲು ತನ್ನಾಸಿಕವೂರಂಗಿಸಿ ರಾಜಿಸೆ ರದನಚ್ಛದವೂಹೊಂಗೆ ುೀರಂಗೆ ನೋಳ್ಪಂಗೆ ಭವ'ಂಗೆ 5ಕುಂಡಲಗಳ ಕಾಂತಿಯೂ ಕರ್ನಾಗಳಲ್ಲಿಮಂಡಿತವಾಗಿ ಮತ್ತೆಯೂ ಮುಕುರದಂಥಾಗಂಡ ಸ್ಥಳಗಳಲ್ಲಿಯೂ ಗೋಚರಿಸುತ ದಿಂಡಾಗಿ ತೋರೆ ದೀಪ್ತಿಯೂ ಪುಂಡರೀಕಾಕ್ಷನು ಪೊಳೆಯುತಲಿದ್ದನು'ಂಡುತ ಖಳರನು ಹೆದರುವ ಜನರನುಕಂಡೂ ಕರಕೊಂಡೂ ಕೈಕೊಂಡೂ ಹುರಿಗೊಂಡೂ6ವೇಣುವ 'ವರಿಸಲು 'ೀರನಾ ಮುದ್ದೂತಾನೊಂದು ತೇಜ ತೋರಾಲು ಅಂಗುಲೀಗಳುಅನುಕೂಲಗಳಾಗಾಲು ಉಂಗುರಗಳೊಳು ಮಾಣಿಕ್ಯಗಳು ಮೂಡಲುಭಾನುವ 'ುೀರಲು ಬಾಹುಗಳೊಪ್ಪಲುಗಾನಗಳಾಗಲು ಗೋವ್ಗಳು ಕೇಳಲುತಾನು ತೋರಿದನು ಜಾಣುವನು ಜಗಧರನೂ 7ಭೋಗಿಯ ಭೋಗದ ಹಾಗೆ ಬಾಹುಗಳಿರೆತೂಗಿ ಜಾನುಗಳ ತಾಗೆ ಕೇಯೂರಗಳರಾಗ ರಂಜಿತಗಳಾಗೆ ಕಂಕಣವಲಯ ಯೋಗದಿಂದಿರೆ 'ೀಗೆಆಗಿನ ಕಾಲದಲಮರಿದ ಶೃಂಗದುೀಗುರು ಕೃಷ್ಣನ ಇಷ್ಟ ಕೊಳಲಿನಯೋಗೀ ಇಹಭಾಗೀ ಗತರಾಗೀ ಗುರಿಯಾಗೀ8ಕಂಬುಕಂಧರದಿಂದಲೂ ಅಲ್ಲಿರುತಿಹತೊಂಬೆ ತಾರಹಾರಗಳು ಲಕ್ಷ್ಮಿಯು ತಾನುಇಂಬೀನುರದಲಿರಲು ಕೌಸ್ತುಭಕಾಂತಿ ತುಂಬಿ ನಾಭಿಯ ತಾಕಲುಅಂಬುಜ ಸಂಭವನಾಲಯ'ರಲುಜೃಂಭಿಸಿ ಮಾಲೆಯು ಜೋಲಿಡುತಿರಲೂನಂಬೀ ಬಹುತುಂಬೀ ುಹವೆಂಬೀ ಜಗದಿಂಬೀ 9ಕಟಿತಟದತಿಶಯವು ಕಾಂಚಿಯಧಾಮಾಸ್ಪುಟವಾಗಿ ಸ್ವರ್ಣವಸ್ತ್ರವು ಊರುಗಳಲ್ಲಿಗೆಘಟಿಸಿರೆ ಗೂಢವಾದವೂ ಜಾನುಗಳಿಂದ ಪಟು ಜಂಘೆ ಪುದುಗಿಹವೂಕಟಕಗಳಿಂದಲು ಕಡುಚೆಲುವೆನ್ನಲುಅಟಸುತಲಡಿಗಳು ಅತಿಮೃದುವೆನ್ನಲುದಿಟನೂ ನರನಟನೂ ಭವತಟನೂ ಪಟುತರನೂ 10ಕಮಲ ಸೋಕಲು ಕಂದುವ ಲಕ್ಷ್ಮೀಯಕರಕಮಲಕೆ ಕಾಂತಿಯನೀವ ಯೋಗಿಯ ಹೃದಯಕಮಲದಿ ಕುಳಿತಿರುವ ುೀ ದಿವ್ಯಪಾದ ಕಮಲವಕಾಣಿಸುವಾಕಮಲೆಯ ಕಾಂತನ ಕಮಲಜ ಜನಕನ ಕಮಲವ ಕಾವನ ಕಾಂತಿಯ 'ುೀರ್ವನಕ್ರಮವೂ ಕಾಮದವೂ ಶ್ರಮ ಶಮವೂ ಶೋಭನವೂ 11ಬಲಿಯ ಬಳಿಗೆ ಬಂಜವು ಭಾಗ್ಯವನಿತ್ತುಸಲ'ದ ಸೌಮ್ಯಗಳಿವು ಬ್ರಹ್ಮನು ಬಂದುತೊಳೆಯಲು ಬಂದು ತೋರುತಿದ್ದವು ಆ ಪಾದಗಳೆ ಇಳೆಯೊಳಗಿರುತಿಹವೂಕಲಿಮಲಹರಗಳು ಕಲಿಗಳ ಕಾವವುತಾಳಿದವು ನಾಗನ ತದ್ವಶವಾಗಲುಸಿಲುಕೀ ಸಿರಿತುಳುಕೀ ಅಘಕಲಕೀ ಅವು ನಿಲುಕೀ 12ಅಂಕುಶವರ'ಂದವು ಧ್ವಜವಜ್ರವಂಕೀತವಾಗಿಯಾಢ್ಯಾವು ಲಕ್ಷ್ಮಿಯ ಕುಚಕುಂಕುಮವನ್ನು ಕದ್ದವು ಭೂ'ುಗೆ ಪಾದ ಪಂಕಜಗಳು ಬಂದಾವುಕಿಂಕರರಭಿಮತ ಕಂಕೆಯನಟ್ಟುತಮಂಕುಗಳೆನಿಸುತ ಮಲೆವರ ಮುರಿಯುತಶಂಕೆ ಸಲೆ ಕೊಂಕೆ ಹೊರೆುಂಕೆ ಸಿರಿಸೋಂಕೆ13ಈ ರೀತಿಯಲಿ ಈಶನು ಇರುತಲಿರೆನಾರದ ಬಂದು ನಿಂದನು ಕಾಣುತ ಕೃಷ್ಣಕಾರುಣ್ಯ ನಿಧಿ ಕೇಳ್ದನು ಕ್ಷೇಮಗಳನು ತೋರುತ ರೂಪವ ತಾನುವಾರಿಜನೇತ್ರನು ವರದವರೇಣ್ಯನು'ುೀರದೆ ಮುನಿಯನು ಮಾತನು ನುಡಿದನುಸಿರೀ ಅನುಸಾರೀ ಬಗೆದೋರೀ ಮುರವೈರೀ 14ಅರಿತನು ಆತನನುವ ಆ ಕಂಸಗಾಗಅರು' ತೋರಿಸಿದರ್ಥವ ಅದು ತನ್ನ ಕಾರ್ಯನೆರವೇರುವತಿಶಯವ ತಾನಾಗಿ ಮುನ್ನ ಪಿರಿದಾಗಿ ಪ್ರೇರಿಸಿರುವಕರುಣಾವನಧಿಯು ಕಾರ್ಯವ ತೋರಿಯುಮುರಹರಮೂರ್ತಿಯು ಮುಂದಿರುವಲ್ಲಿಯುಅರಿತೂ ಅಲ್ಲಿಕುಳಿತೂ ಬರೆಹೊತ್ತೂ ುದಿರಿತ್ತು 15ಕಾಣುತ ಮುನಿಕೃಷ್ಣನ ಮಾನಸದಲ್ಲಿಧ್ಯಾನಿಸಿದನು ದೇವನ ತಾ ಬಂದುದನ್ನುತಾನು ತೋರಿಸಲು ತತ್ತ್ರಾಣ ಬಂದಾಗ ನ'ುಸಿ ಪ್ರಾಣೇಶಗತಿಪ್ರ'ೀಣಾಕೃಷ್ಣಾ ಕಂಸಗೆ ಹೊದ್ದುವ ರೀತಿಗೆಶ್ರೀನಿಧಿಯಾದಗೆ ಸೂಚಿಸಿ ಸ್ವಾ'ುಗೆತಾನು ಅಜಸೂನು ಅರು'ದನು ಅರಿತದನೂ 16ಮಾನುಷಮೂರ್ತಿಯಾಗಿಯೆ ಭೂ'ುಗೆ ಬಂದುಆನತರನು ಆಳಿಯೆ ಅರ್ಥವ ಸಲಿಸಿಧೇನುವಾಗಿಹೆ ಧೊರೆಯೆ ಯೆನ್ನುತ 'ೀಗೆ ಆನತನಾಗುತಲಿಯೆಮಾನಸಪುತ್ರನು ಮಾತನು ನುಡಿದನುಶ್ರೀನಿಧಿ ತಿರುಪತಿ ವೆಂಕಟರಮಣನುತಾನೂ ತಾಳಿದನೂ ಮಾನಸನೂ ಮಾಡ್ದುದನೂ 17
--------------
ತಿಮ್ಮಪ್ಪದಾಸರು
ತಾತ್ವಿಕ ಹಿನ್ನೆಲೆಯ ಹಾಡುಗಳು (ಸರ್ವೋತ್ತಮತ್ವ ವರ್ಣನೆ) ಸಕಲವು ತ್ವದಧೀನವು ಶ್ರೀಶನೀ ಕೇಳು ಪ. ಸಕಲವು ತ್ವದಧೀನ ಸಾಕಯ್ಯ ಸತ್ಯಮಾನ ವಿಖನ ಸಗಣಧಾಮ ವಿಶ್ವಗುಣಾಭಿರಾಮ ಅ.ಪ. ಕಮಲ ಸಂಭವ ಮುಖರು ಶ್ರೀಶ ತ್ವತ್ಪಾದ ವಿಮಲ ಪದ್ಮ ಸೇವಕರು ಅಮಿತ ಗುಣಾಂಬುಧಿ ಆಡುವಿ ನಿರುತದಿ ದುರಿತ ಬೀಜ ಶ್ಯಾಮ ಸುಂದರ ರಾಜ 1 ದೇಹ ಗೇಹಾದಿಗಳೆಲ್ಲ ಸುವರ್ಣ ಪಕ್ಷಿ ವಾಹ ನಿನ್ನೊಶ ಭೂನಲ್ಲ ಮೋಹದಿ ತನ್ನದೆಂದು ಜೋಹಗೊಂಡ ಪರಿಗೆ ಬಾಹದಿರದು ಕೇಡು ಬಿಡದೆಂದು ನಗೆಗೇಡು 2 ಪರಮ ಕೃಪಾಳು ನಿನ್ನ ಪಾದವ ನಂಬಿ ಮರೆದೆ ದುರ್ಮಾನವನ್ನ ಉರಗ ಗಿರೀಂದ್ರನೋಳ್ಮೆರೆವ ಮಹಾತ್ಮನೆ ಶರಣ ಜನ ಮಂದಾರ ಸೇರಿಸು ಕೃಪಾಧಾರ3
--------------
ತುಪಾಕಿ ವೆಂಕಟರಮಣಾಚಾರ್ಯ
ತಾತ್ವಿಕವಿವೇಚನೆ ಏರಿಸಿ ಏರಿಸಿ ಮಾರುತ ಮ್ವತಧ್ವಜ ಸಾರ ಸುಖಂಗಳ ನಿತ್ಯದಲುಂಬುವ ಯೋಗ್ಯತೆ ಯುಳ್ಳವರೂ ಪ ಈರನ ಮತವೇ ಸಾರವು ಶ್ರುತಿಗಳ ಶೌರಿಯ ಮತವೇ ಈರನ ಮತ ಖರೆ ದೂಡಿರಿ ಸಂದೇಹ ಅ.ಪ ಇಲ್ಲವು ಜಗವಿದು ಭ್ರಾಂತಿಯ ಕಲ್ಪನೆ ಸುಳ್ಳೇ ಎಲ್ಲವು ಬ್ರಹ್ಮನ ಬಿಟ್ಟರೆ ಬ್ರಹ್ಮನೆ ಸತ್ಯವೆನೆ ಅಲ್ಲವು ನುಡಿಯಿದು ಬ್ರಹ್ಮನು ಕಾರಣ ಸುಳ್ಳಾಯಿತು ನುಡಿ ಅಲ್ಲವೆ ಯೋಚಿಸಿ ಕೊಡದು ಈ ಮನವು 1 ಉಂಬುದು ಉಡುವುದು ಕಾಂತೆಯ ಸಂಗವು ನಂಬಲು ಬೇಡಿರಿ ಸುಳ್ಳೇಯೆಂತೆಂನೆ ಸಾಕ್ಷಿಯು ಒಪ್ಪುವುದೇ ನಂಬಲನರ್ಹವೆ ಕಾರ್ಯಸುಕಾರಿಯ ಖರೆ 2 ಒಂದೇ ತೆರವಿಹ ವಸ್ತು ದ್ವಯವಿರೆ ಒಂದನು ಮತ್ತೊಂದೆಂಬುವ ಭ್ರಾಂತಿಯು ಕೊಡುವದೂ ಪೊಂದಿಹ ಹೇಗೆನೆ ಉತ್ತರ ಸಿಕ್ಕದು ಯೋಚಿಸಿ ಕೋವಿದರೆ 3 ಭ್ರಾಂತಿಯ ಪೆಣ್ಣನು ಕೊಡುತ ತಾಸ್ವಾ ತಂತ್ರ ವಿಹೀನನು ಆಗುತ ಮಿಡುಕುವ ದೇವನು ಎನಿಸುವನೆ ಮಂತ್ರಿಸೆ ಬ್ರಹ್ಮನ ನಾನಿಹೆ ನೆಂಬುದ ಭ್ರಾಂತಿಯ ತೊಲಗುತ ಬ್ರಹ್ಮನು ಆಹನೆ ಮನವ ವಿಚಾರಿಸಿರಿ4 ನಾನೇ ಬ್ರಹ್ಮನು ಎಂಬೀ ಜ್ಞಾನವು ತಾನೇ ಬಾರದು ಸಹಜ ವಿದಲವು ಅನುಭವ ವಿರುದ್ಧಾ ತಾನೇ ಬ್ರಹ್ಮನು ಆಗಿರೆ ಭವದೊಳು ನಾನಾ ದುಃಖವ ನುಣ್ಣಲು ಬಂದರೆ ಹುಚ್ಚನೆ ಅವಸರಿಯು5 ಬ್ರಹ್ಮ ದ್ವಯವಿದೆ ಸತ್ಯ ದ್ವಯವಿದೆ ಬ್ರಹ್ಮನು ಆಹುದು ಕೊನೆ ಮಾತೆಂದರೆ ಬ್ರಹ್ಮನು ಶೂನ್ಯನಿಹ ಬ್ರಹ್ಮನು ನಿರ್ಗುಣ ನಂದವಿಹೀನನು ಬ್ರಹ್ಮನ ಗತಿಯೆನೆ ಸರ್ವವಿನಾಶವೆ ಯಾರಿದ ಬಯಸುವರೂ6 ವ್ಯಕ್ತಿತ್ವವು ತಾನಾಶವು ಆಹುದೆ ಮುಕ್ತಿಯು ಯೆಂತೆನೆ ಸರ್ವವಿನಾಶಕೆ ಸಾಧನೆಯೇ ಬತವು ಮುಕ್ತಿಯು ದುಃಖವಿವರ್ಜಿತ ಬರಿಸುಖ ರಿಕ್ತವು ಬರಿಯೆನೆ ಭವವಿದು ವರವೈ ಬೇಡವು ಆ ಮುಕ್ತಿ7 ಸತ್ಯವ ನುಡಿವುದು ವೇದವು ಒಂದೆಡೆ ಮಿಥ್ಯವ ನುಡಿವುದು ಮತ್ತೊಂದೆಡೆಯೆನೆ ಯಾವುದು ಸಿದ್ಧಾಂತ ಮೊತ್ತವ ನೂಕುತ ಕಿಚ್ಚಡಿ ವೇದಕೆ ಮೊತ್ತವ ಕೊಳ್ಳುತ ಒಂದೇ ಅರ್ಥವ ಜೋಡಿಸಿ ಇದು ನೀತಿ8 ಬೌದ್ಧರು ಒಪ್ಪನು ಶ್ರುತಿಗಳ ದೇವನ ವೇದವ ಒಪ್ಪುವ ಮಾಯಾವಾದಿಯ ಬ್ರಹ್ಮನು ಸೊನ್ನೆಯಿಹ ವೈದಿಕ ವೇಷದ ಬೌದ್ಧನ ವಾದವೆ ಶೋಧಿಸಿ ನೋಡಲು ಮತ್ತೇನಿಲ್ಲವು ಚಿಂತಿಸೆ ಸರಿಯಿಷ್ಠೆ9 ತರತಮ ಬಹುವಿಧ ಭೋಗವ ಮುಕ್ತಿಲಿ ಇರುವುದು ಸಿದ್ಧವು ಶೃತಿಗಳ ನಂಬಲು ಜೀವರ ಭಿನ್ನತೆಯು ಸ್ಥಿರವೇ ಆಯಿತು ಇದರಿಂ ಮುಕ್ತಲಿ ಪರಿ ಬಗೆತಾ ವಿದಿತವೆ ಜಗದಲಿ ಭೇದವೆ ಸರ್ವತ್ರ10 ನಾಸ್ತಿಕ ವಾದವ ತಳ್ಳಿರಿ ಆಚೆಗೆ ನಾಸ್ತಿಕ ಬಂದನೆ ತಂದೆಯು ಇಲ್ಲದೆ ಕಾರ್ಯವು ಜಗವಿರಲು ಆತನು ನೊಡಿಹ ಜ್ಞಾನಿಗಳಿಲ್ಲವೆ ಪೊಗಳವೆ ಗೋತತಿಯು11 ಪ್ರಕೃತಿ ವಿಕಾರದ ಜಗವಿದು ವಿದಿತವೆ ವಿಕಲ ವಿಶೇಷದ ಜೀವನು ಹಾಗೆಯೆ ಉಭಯರ ಆಳುವನು ವಿಕಲ ವಿವರ್ಜಿತ ಸಕಲ ಗುಣಾರ್ಣವ ಸಕಲ ನಿಯಾಮಕ ಸರ್ವ ಸಮರ್ಥನು ಇರಲೇ ಬೇಕಷ್ಟೆ12 ನಿತ್ಯವು ಈತ್ರಯ ಸಿದ್ಧವು ಆದರೆ ನಿತ್ಯ ಪರಸ್ಪರ ಸಂಬಂಧ ತ್ರಯ ಜ್ಞಾನವೆ ಪುರುಷಾರ್ಥ ಉತ್ತಮ ನೊಬ್ಬನು ಅಧಮರು ಇಬ್ಬರು ಮತ್ತಿವರಲಿ ಹಾಗಧಮನು ಜೀವನು ಚೇತನ ಪ್ರಕೃತಿ ವರ13 ಸರ್ವ ಸ್ವತಂತನು ಒಬ್ಬನೆ ಇರದಿರೆ ಸರ್ವಾ ಭಾಸವೆ ಜಗವಿದು ಆಹುದು ಪ್ರಭು ದ್ವಯ ಕೂಡುವುದೆ ಸರ್ವಗ ಶಾಶ್ವತ ಪೂರ್ಣಾ ನಂದನು ಸರ್ವ ವಿಚಿತ್ರನು ಮುಕ್ತಿದನಿರದಿರೆ ಪ್ರಭು ಅವನೆಂತಾಹ14 ಶುರುಕೊನೆ ಮಧ್ಯವು ಇದ್ದ ದೇವಗೆ ಬರುವನೆ ಹೊಸ ಹೊಸ ದೇವನು ಪ್ರತಿಪ್ರತಿ ಕಲ್ಪದಿ ಯೋಚಿಸಿರಿ ಇರದಿರೆ ಸಕಲೈಶ್ವರ್ಯವು ಆತಗೆ ತರುವನು ನಂದದ ಸೃಷ್ಠಿಯ ಹೇಗವ ವರಸಮರಿಲ್ಲವಗೆ15 ಸುಳ್ಳಿರೆ ಜಗವಿದು ಪಾಲಿಪ ದೊರೆಯದ ಕಳ್ಳನೆ ಅಲ್ಲವೆ ಅಷ್ಠಕರ್ತುತ್ವವು ಕೂಡುವ ದ್ಹೇಗಿನ್ನು ಎಲ್ಲಾ ಜಗವಿದು ನಿತ್ಯಾ ನಿತ್ಯವು ಎಲ್ಲಾ ಸತ್ಯವೆ ಶ್ರುತಿಗಳ ನುಡಿಗಳು ಭೃತ್ಯರು ಜೀವಗಣ16 ನಿತ್ಯವು ಪ್ರಕೃತಿಯು ಜೀವರು ಈಶನು ಸತ್ಯವು ಇದುಯೆನೆ ಪಂಚಸುಭೇದವು ನಿತ್ಯವೆ ಎಲ್ಲೆಲ್ಲು ನಿತ್ಯ ಸುಖಂಗಳ ಬಯಸುವ ನಮಗವು ಹತ್ತವು ಕಾರಣ ಸರ್ವಸ್ವತಂತ್ರನು ದೇವನೆ ಸತ್ಯವಿದು17 ಚೇತನ ಪ್ರಕೃತಿಯೆ ಲಕ್ಷ್ಮಿಯು ತಿಳಿವುದು ಆತನ ರಾಣಿಯು ನಿತ್ಯಸುಮುಕ್ತಳು ನಿತ್ಯಾವಿಯೋಗಿನಿಯು ಚೇತನ ನಿಚಯದ ಚೇತನ ಹರಿ ಇಹ ಆತನೆ ದೊರೆ ಜಗ ಜಂಗಮ ಸ್ಥಾವರ ಸತ್ತಾದಾಯಕನು 18 ದೋಷ ವಿದೂರ ಅಶೇಷ ಗುಣಾರ್ಣವ ದಾಸ ಪೋಷನಿಜ ಮುಕ್ತಿದ ನಿರದಿರೆ ಭಜಿಸುವದೇಕವನ ಶ್ರೀಶನು ಬಿಡೆ ಜಡ ಚೇತನ ಚೇಷ್ಠೆಯು ನಿಹ ಉಲ್ಲಾಸದಿ ಭಜಿಸುವುದು 19 ಪರಿಮಿತ ಶಕ್ತನು ದೇವನು ಇದ್ದರೆ ಪರಿಮಿತ ಜೀವರ ತೆರವೇ ಆಹನು ಕಾರಣ ನಿಸ್ಸೀಮ ಹರಿಗುಣವಗಣಿತ ಸಿಗ ಸಾಕಲ್ಯದಿ ನಿರುಪಮ ಸುಖಜ್ಞಾನಾತ್ಮಕ ವಿಭುವರ ಅನಾದಿ ಸಿದ್ಧವಿದು 20 ಪ್ರಾಕೃತ ಗುಣಗಣ ವರ್ಜಿತ ದೇವನ ಜ್ಞಾನ ಸುದೃಷ್ಠಿಗೆ ಗೋಚರನು ಸ್ವೀಕೃತ ನಾದರೆ ಜೀವನು ಹರಿಯಿಂ ತಾಕಿಸಿ ದೃಷ್ಠಿಗೆ ತನ್ನನೆ ತೋರುವ ಭಕ್ತರ ಬಾಂಧವನು 21 ತರತಮ ಜ್ಞಾನದಿ ಗುಣ ಉತ್ಕರ್ಷವು ಬರುವುದು ಕಾರಣ ತಿಳಿಯುತ ಹರಿಪರ ಮೋಚ್ಛನು ಹೌದೆನ್ನಿ ಅರಿವುದು ಅತಿಪರಿ ಪಕ್ವದ ಭಕ್ತಿಯ ಮಾಧವ ಮೆಚ್ಚುವನು22 ವೇದಗಳಿಂದಲೆ ದೇವನು ವ್ಯಕ್ತನು ವೇದಗಳಿಂದಲೆ ಧರ್ಮಾಧರ್ಮವಿ ವೇಕವು ಸರಿಯಷÉ್ಠ ವೇದ ನಿಜಾರ್ಥವೆ ಸಚ್ಛಾಸ್ತ್ರಂಗಳು ಮೋದವೆ ದೊರಕದು ಬಿಟ್ಟರೆ ಇವುಗಳ ಸಾದರ ಭಜಿಸುವುದು23 ಬಿಂಬನು ಹರಿ ಪ್ರತಿ ಬಿಂಬನು ಜೀವನು ಬಿಂಬಾಧೀನವು ಪ್ರತಿ ಬಿಂಬನ ಚೇಷ್ಠೆಗಳೆಂತರಿತು ಉಂಬುತ ಮುದದಿಂ ಸುಖದುಃಖಂಗಳ ಬಿಂಬಕ್ರಿಯೆಯೆನುಸಂಧಾನವ ಗುರುವಿಂದರಿತು ಸಮರ್ಪಿಸಿ24 ಮೆಚ್ಚುಲು ಮಾಧವದಾವುದಸಾಧ್ಯವು ಅಚ್ಚುತನೊಲಿಮೆಗೆ ಹೆಚ್ಚಿದುದೇನಿದೆ ಕೊಚ್ಚುತಕಲಿ ಸೊಂಕು ತಚ್ಛಭಿಮಾನ ಫಲೇಚ್ಛೆಯ ತ್ಯಜಿಸುತ ಕಚ್ಛಪ ನೊಲಿಮೆಗೆ ವಿಧಿಯ ನಿಷೇಧವ ಮರೆಯದೆ ಗೈಯುತಲಿ25 ಪರ ಮೋಚ್ಚನು ವರಸಮರಿಲ್ಲವು ಸಿರಿ ವರ ವಿಧಿಪಿತ ಸೃಷ್ಠ್ಯಾದ್ಯಷ್ಠಸು ಕರ್ತನು ವಿಭುವೆಂದು ನಿರುಪಮ ನಿಖಿಳಾಗಮ ಪ್ರತಿ ಪಾದ್ಯನು ಸ್ವರತ ಸ್ವತಂತ್ರನು ಪೂರ್ಣಾನಂದನು ಎನ್ನುತ ಸಾರುತಲಿ26 ಸಾಮನು ಸರ್ವರ ಬಿಂಬನು ಸರ್ವಸು ನಾಮನು ಸರ್ವಾಧಾರನು ಜಡಜಂಗಮ ವಿಲಕ್ಷಣನು ಭೂಮನು ಭಕ್ತ ಪ್ರೇಮಿಯು ಸದ್ಗುಣ ಧಾಮನು ಪೂರ್ಣನು ನಿಜ ಸುಖ ಮುಕ್ತಿದನೆನ್ನುತ ಸಾರುತಲಿ27 ವಿಧಿ ಪರಿಸರ ವಿಪಶಿವ ಪ್ರಮುಖರು ಪರಿವಾರವು ನಿರವದ್ಯನು ಮುಕ್ತಾ ಮುಕ್ತರ ನಾಯಕನು ಉರುಗಾಯನ ಜಗದೊಳ ಹೊರವ್ಯಾಪ್ತನು ಪರಿಮರ ಸ್ವಗತ ಭೇದ ವಿವರ್ಜಿತನೆಂಬುದ ಸಾರುತಲಿ28 ತರತಮ ಪಂಚಸುಭೇದವು ನಿತ್ಯವು ನಿರುತದಲುಂಬುವ ಸಾರವೆ ದುಃಖ ನಿರ್ಲೇಪನು ಅದ್ಭುತನು ಅರಿಯರು ಯಾರೂ ಇವನೇ ವಲಿಯದೆ ಪುರುಷೋತ್ತುಮ ಸಾಕಲ್ಯದವಾಚ್ಯನು ಎಂದು ಡಂಗುರ ಹೊಡೆಯುತ 29 ಗುರುವಿನ ದ್ವಾರವೆ ಹರಿತಾ ವಲಿಯುವ ಗುರುವೆನೆ ಮುಖ್ಯದಿ ಮುಖ್ಯ ಪ್ರಾಣನೆ ಸರಿಸಿರಿ ಯೆಂತೆಂದು ಗುರುಗಳು ಹಿರಿಯರು ಎಲ್ಲಾ ಕ್ರಮದಲಿ ಮಧ್ವರಿಗೊಂದಿಸಿ ಮುದದಿ 30 ಅನುಭವವಿಲ್ಲದ ಜ್ಞಾನವು ವಣವಣ ಸಾಧನೆ ಇದು ಖರೆಯ ಚಿನುಮಯ ನೊಲಿಸಲ್ ಮನೆಧನ ಬೇಡವು ತನುಮನೆ ವಿಷಯಗಳಿಂದಲೆ ಪೂಜಿಪ ಕ್ರಮದಿಂಯಜಿಸುತ 31 ಕಲಿಯುಗವಿದು ವರ ಸುಲಭದಿ ಸಾಧನೆ ವಲಿಯುವ ಬೇಗನೆ ನಾಮ ಸ್ಮರಣೆಗೆ ಭಜಿಸಿರಿ ಹರಿನಾಮ ವಳದಾರಿಯು ಸರಿ ಕ್ರಮದಿಂ ಪಾಡಲು ಮುಳುಗುತ ಭಕ್ತಿಯ ಕಡಲೊಳ್ ನಿಜಹರಿ ದಾಸರು ದೀಕ್ಷೆಯಲಿ32 ಕವಿಗುರು ರಾಜರ ಚರಣದಿ ಬಾಗುತ ಪವನ ಮತಾಂಬುಧಿ ಸೋಮನು ಜಯಮುನಿ ಹೃದಯಗ ವಾಯುವಲಿ ಅವಿರತ ನಲಿಯುವ ಶ್ರೀ ಕೃಷ್ಣವಿಠಲನು ತವಕದಿ ವಲಿಯುವ ಗ್ರಹಿಸಲ್ ಈ ಪದ ಜಯ ಜಯವೆನ್ನುತ33
--------------
ಕೃಷ್ಣವಿಠಲದಾಸರು
ತಾಯಿತಂದೆಯರಿಗೆ ನಮನ (ವಾರ್ಧಕ ಷಟ್ಪದಿ) ಆನಮಿಪೆ ಮಾತೆ ಪಿತರರ್ಗೆ ಪ ಆನಮಿಸಿ ಈರ್ವರಿಗೆ | ಜ್ಞಾನ ಸಾಧನ ದೇಹದಾನ ಮಾಡ್ದದಕವರ | ಧೇನಿಸುತ ಪದವನಜಗಾನ ಮಾಡುವೆ ವಂಶದ ಅಕ್ಷೀಣ ವಾರ್ತೆಗಳ ಕೇಳ ಬಯಸುವರಾಲಿಸಿ ಅ.ಪ. ವಿಸ್ತರದ ಕೀರ್ತಿಯುತ | ಚಿತ್ತೂರು ಕೃಷ್ಣಾಖ್ಯರಿತ್ತ ಮಹಿ ಶೂರೊಳಗೆ | ನೆಲೆಸುತ್ತ ತಮ ಧರ್ಮಪತ್ನಿಯಲಿ ಚತುರ ಕುವ | ರರ ಪಡೆದು ಚತುರರಂಗೆಅಯ್ಯುತಿರೆ ವಿಧಿವಶದಲಿ |ಪೆತ್ತ ಪಿತ ಪರಪುರಕಡರೆ ಮಾತೆ ಕಡೆ ಕುವರಗೆತ್ತಣದು ವಿದ್ಯೆ ಎಂ | ದೆನ್ನಿಸದೆ ಸಲಹುತ್ತಉತ್ತಮರು ಬಕ್ಷಿತಿರು | ಮಲರ ವಂಶೋದ್ಭೂತ ಸುಬ್ಬರಾಯರ ಕುವರಿಯ 1 ಕಾಲ ಕಳೆಯುತಿರಲು 2 ಪತಿ ವಿಯೋಗವು ಆಯ್ತುಮಾರಿ ಕೋಪದ್ರವದಿ | ಮಾರಿ ಕಣಿವೆಲಿ ಪ್ರಥಮ ಅಪಮೃತ್ಯು ಸಂಭವಿಸಲು |ತಾರುಣ್ಯ ಉರುತರ | ವ್ಯಸನದಿಂ ನೂಕುತ್ತಪೋರನಭಿವೃದ್ಧಿಗಿ | ನ್ನೇನುಗತಿ ಎಂದೆನುತನಾರಾಯಣ ಸ್ಮರಣೆ | ಪರಿಪರಿಯಗೈಯ್ಸುತ್ತ ನಿಟ್ಟುಸಿರ ಬಿಡುತ್ತಿದ್ದಳು 3 ನಾಲ್ಕಾರು ವರುಷಗಳು | ದಾಯಾದ್ಯರೊಳು ದುಡಿದುನಾಲ್ಕೆಂಟು ಕಡುಕ್ರೂರ | ವಾಕ್ಕುಗಳ ಸಹಿಸುತ್ತಪ್ರಾಕ್ಕು ಕರ್ಮದ ಫಲವ | ಮುಕ್ಕಲೇಬೇಕೆಂಬ ವಾಕ್ಕುಗಳ ಮನ್ನಿಸುತಲಿ ||ನೂಕುತಿರೆ ಕೆಲಕಾಲ | ತೋಕಗಾಯ್ತುಪನಯನಕಾಕು ಮಾತುಗಳಾಡಿ | ನೂಕಲೂ ಗೃಹದಿಂದಆ ಕುಮಾರ ಧೃವನ | ನೂಕಿದಾಪರಿಯಾಯ್ತು ಎಂದೆನುತ ಹೊರ ಹೊರಡಲು 4 ಭವ ತರಣ | ಧವಣೆಯಲಿ ಕುವರಂಗೆ ವೈವಾಹ ತಾವಿರಚಿಸಿ 5 ಭಾಗವತ ವತ್ಸರ ವಸಿತ ದ್ವಿತಿಯ ತೃತಿಯ ತಿಥಿ ಹರಿ ಸ್ಮøತಿಲಿತನು ವಪ್ಪಿಸಿದಳು 6 ಭಾರತೀಶ ಪ್ರಿಯಗಭಿನ್ನಾತ್ಮನಮೊ ಗುರು ಗೋವಿಂದ ವಿಠ್ಠಲನ ದಾಸ ದಾಸಿಯರಿಗೇ ನಮೊ ಎಂಬೆನು 7
--------------
ಗುರುಗೋವಿಂದವಿಠಲರು
ತಾರೆ ಆರುತಿ ಸಾರಸಾಂಬಕಿ ಭಾರತೀವರಗೆ ಬೆಳಗುವೆನು ಪ ನರಸಿಂಹಾರ್ಯ ಶೇವಿತಗೆ ಅ.ಪ ನೂರುಯೋಜನ ವಾರಿನಿಧಿಯನು ಹಾರಿ ಜಾನಕಿಗೆ ಚಾರು ಮುದ್ರಿಕೆಯನಿತ್ತು ಪುರದಿಭಯ ತೋರಿರಾಕ್ಷಸಗೆ ನಾರಿಮಣಿಯ ಶುಭವಾರುತಿಯ ರಘುವೀರಗರುಹಿದ ಮಾರುತಾತ್ಮಜಗೆ 1 ಇಂದು ಕುಲದಲಿ ಬಂದು ಕುಂತಿಯ ಕಂದನೆಂದೆನಿಸಿ ನಿಂದು ರಣದಿ ಖಳವೃಂದ ಸಹಿತ ಕುರುವೃಂದವನು ಮಥಿಸಿ ಛಂದದಲಿ ಪಡೆದಂಥ ಭೀಮಗೆ 2 ಭೂತಳದಿ ಸುಖತೀರ್ಥರೆನಿಸಿ ಸಚ್ಛಾಸ್ತ್ರವನು ರಚಿಸಿ ಭೀತಿ ಪುಟ್ಟಿಸುತ ಖ್ಯಾತಮಾಯ್ಗಳ ವ್ರಾತವನು ಜಯಿಸಿ ಪೂತ ಕಾರ್ಪರ ಕ್ಷೇತ್ರ ನರ ಮೃಗನಾಥನ ಪರಮಪ್ರೀತಿ ಪಾತ್ರನಿಗೆ 3
--------------
ಕಾರ್ಪರ ನರಹರಿದಾಸರು
ತಾರೋ ವಸನ-ಎಷ್ಟೋ ವಿನೋದ ಪ ಕಡಹದ ಮರನೇರಿ ಕಾಡುವುದುಚಿತವೆ ತಡವಾಗುವುದೈ ಒಡೆಯರುಳ್ಳವರಿಗೆ 1 ಚಿತ್ತಜನೈಯನೆ ಮತ್ತಗಮನೆಯರ ಬತ್ತಲೆ ನಿಲಿಸುವುದುತ್ತಮವಲ್ಲವೊ2 ಸಿರಿ ವಿಜಯವಿಠ್ಠಲ 3
--------------
ವಿಜಯದಾಸ
ತಾಳಬೇಕು ಭಕ್ತಿಯೇಳಬೇಕು ಪ ತಾಳಬೇಕಾದವನು ಮೇಳದಲಿ ಬಾಳಬೇಕು ಅ.ಪ ಹಾಡಲು ತಾಳಬೇಕು ಬೇಡಲು ತಾಳಬೇಕು ಓಡಾಡಿ ಕುಳಿತು ಮಾತಾಡಲು ತಾಳಬೇಕು ನೋಡಬೇಕಾದವನು ನೋಡಲು ತಾಳಬೇಕು ಮಾಡಿ ಮುಳುಗುವ ಜನ್ಮಬೇಡೆಂದು ತಾಳಬೇಕು 1 ತಾಳರಿತಮೇಲಂತರಾಳವನು ಕಾಣಬೇಕು ತಾಳದವ ಬಾಳುವನೇ ಮೇಳದೊಳಗೇ ತಾಳ ನೋಡುವರೆಲ್ಲ ಹೂಳನೋಡಲಿಬೇಕು ತಾಳಿ ಮಾಂಗಿರಿರಂಗನೂಳಿಗಕ್ಕೆ ನುಗ್ಗಬೇಕು 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತಾಳರವವನು ತೋರ್ಪೆನು ತಾನೇಳು ವಿಧಗಳಾಗಿ ತಿರುಗುವ ಗತಿಯುಳ್ಳಪಧ್ರುವವೆಂದು ಮಠ್ಯವೆಂದು ಧ್ವನಿಯು ರೂಪಕವೆಂದುತ್ರಿವಡೆ ಜಂಪೆಗಳೆಂದು ತಾವೆರಡುಅವು ಐದು ಗಣನೆಯೊಳಟ್ಟತಾಳವಾರದುಇವರ ಹಾಗೆಕ್ಕ ತಾಳವದೇಳು ಬಗೆಯೆಂಬ 1ಕಾಲ ಮಾರ್ಗವು ಕ್ರಿಯೆ ಕೂಡಿದಂಗಗಳೆಂದುಕೇಳಿ ಗ್ರಹವು ಜಾತಿ ಕಳೆಗಳೆಂದುಆ ಲಯವೆನ್ನುತಲೆತಿ ಪ್ರಸ್ತಾರಕವೆಂದುಈ ಲಲಿತದ ವಸ್ತುುವು ಹತ್ತು ಪರಿಯೆಂಬ 2ಒಂದೊಂದು ಬಹುವಾಗಿಯೊಡೆದು ನಾನಾ ಭೇದದಿಂದ ಗಾನಕೆ ಕೂಡುತಿಷ್ಟವಾಗಿನಿಂದು ನಾದಿಸುತಿವೆ ನಿನ್ನಾಜ್ಞೆ ಯಲಿ ದೇವಇಂದಿದ ತಿರುಪತಿಯೊಡೆಯ ಲಾಲಿಸು ಕೃಷ್ಣ 3ಓಂ ತಮಾಲಶ್ಯಾಮಲಾಕೃತಯೇ ನಮಃ
--------------
ತಿಮ್ಮಪ್ಪದಾಸರು
ತಾಳಲಾರೆ ರಂಗಯ್ಯ ನಾ ತಾಳಲಾರೆ ತಾಳಲಾರೆ ಕರುಣಾಳು ರಾಜೇಂದ್ರನೆ ಖೂಳ ಜನರು ಕೂಡಿ ಪೇಳುವ ನುಡಿಯನ್ನು ಪ. ದೇವ ನಿನ್ನ ಪಾದಾಂಬುಜ ಸೇವೆಯನ್ನು ಭಾವಶುದ್ಧದಿ ಮಾಳ್ವ ಭಾಗ್ಯ ಪೊಂದಿರಲು ಮೂ- ದೇವಿ ಎಂದೆನ್ನನು ಮೂದಲಿಸುವ ಮಾತ 1 ಹೇಡಿ ಜನರು ಮನಕೆ ಬಂದಂ- ತಾಡುತ್ತಿಹರು ರೂಢಿಪ ಮುಖದಿ ನೀ ಮಾಡುವ ಕೃತ್ಯದ ಪ್ರೌಢಿಮೆಯರಿಯದೆ ಮೂಢ ಜನರ ಮಾತ 2 ಹೆತ್ತ ಮಗನು ಹಸ್ತಕನಾಗಿ ಹತ್ತಲಿರಲು ಉತ್ತಮ ಪದವಿಯ ತೊತ್ತಿನ ಕುವರರಿಗಿತ್ತದು ಸರಿಯೆ ಸ- ರ್ವೋತ್ತಮ ದೊರೆಯೆ ನಾ 3 ತೋರೊ ಸೂಕ್ತಿ ತಾತ್ಸಾರವ್ಯಾಕ- ಪಾರ ಯುಕ್ತಿ ಕ್ರೂರ ಮಾನವರಹಂ- ಕಾರ ಖಂಡಿಸಿ ಮುಖ್ಯ ಧಾರುಣಿ ಪರೊಳಂತ:ಪ್ರೇರಿಸುವುದು ಶಕ್ತಿ 4 ಲೋಕನಾಥ ನೀನಹುದೆಂಬ- ದ್ಯಾಕೆ ಗಾಥಾ ಈ ಕಪಟದ ಕೃತ್ಯ ಯಿಕ್ಕಡಿವುತ ಬೇಗ ಸಾಕೆನ್ನ ಭಕ್ತ ಪ- ರಾಕು ವೆಂಕಟನಾಥ 5
--------------
ತುಪಾಕಿ ವೆಂಕಟರಮಣಾಚಾರ್ಯ