ಒಟ್ಟು 936 ಕಡೆಗಳಲ್ಲಿ , 99 ದಾಸರು , 733 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಾರತೀರಮಣ ನಂಬಿದೆ ಪಾದವಾರಿಜಾಕರುಣಾ ವಾರಿಧೆ ಯನ್ನನು |ದೂರ ನೋಡದೆ ನಿನ್ನ ಸಾರೆಗರೆದುಭಯ ನಿವಾರಿಸಿ ಸಲಹೋ ಪನೀಲಲೋಹಿತನ ಪಿತನೇ ಗೋಪಾಲನ ಸುತಾ |ಕಾಳಕೂಟ ಪಾನಿ ವಿಶಾಲಾಂಬಕಾ ಮಾರರಿಂದ ||ವೇಳೆ ವೇಳೆಗಳಲ್ಲಿ ವೋಲಗವ ಕೈಕೊಂಬುವ |ಕಾಳೀವಲ್ಲಭಭೇಶಭಾಸ್ಕರರೋಲು ಸನ್ನಿಭ ||ಈ ಲೌಕಿಕ ನರರಾಲಯ ಕಾಯಿಸದೆ |ವಾಲಯ ಸುಮತಿಯ ಪಾಲಿಪುದೊಲಿದು 1ಜಾನಕೀಪತಿ ಸೇವೆ ಮಾಡಿದೈ ಕಾಣೆನೋಪ್ರತಿ|ಯಾ ನಿನಗಾರಾರಾ ಭುವನದೊಳಗೆ ಗಂಧವಹನೆ ||ಮುದ್ರಿಯ ಕೊಂಡು ಕ್ಷಣದೊಳಗೆ ಜಲಧಿಯನ್ನೆ ಹಾರಿದೆ |ಸೀತೆಗುಂಗುರವನ್ನೆ ತೋರಿದೆ ||ಆ ನಗರವನು ದಹನಗೈಸಿ ಬಹು |ದಾನವರನಳಿದು ದಶಾನನನೊದ್ದೆ 2ಪಾಪದೂರನೆ ವೃಕೋದರ ಶ್ರೀ ದ್ರೌಪದೀಶನೇ |ವಿಪಿನಚರಿಸಿ ಕುರುಪತಿಯ ತರಿದು ||ಕ್ಷಿತಿಪರನ್ನು ಬಿಡಿಸಿದೆಯೈ ಪಾಂಡವರ (ಪರಿ) ಪಾಲಕ |ಕೋಪನಾಶನ ಉದ್ಧರಿಸೆನ್ನ ಚಾಪಭಂಜನ ||ಶ್ರೀಪತಿ ದ್ವಯ ಪದ ಆಪಜ ಭಜಿಸುವ |ನೇ ಪರಮೇಷ್ಠಿಯರೂಪಗುಣಾಢ್ಯ 3ದೇಶಿಕೋತ್ತಮ ಮಾರುತಿ ಇಂದಿರೇಶನ ಪ್ರೇಮ |ಸಂಪಾದಿಸಿಕೊಂಡತಿಶಯ ಭಕುತಿಯಿಂದಲೀ ಸಮೀಚೀನವಾಗಿ ||ತ್ರಿಂಶತಿ ಸಪ್ತ ಸಂಖ್ಯಾ ದರುಶನ ಗ್ರಂಥ ವಿರಚಿಸಿ ದು |ರ್ಭಾಷ್ಯವ ಸಂತರಾ ಸಲಹುವರನಾಭಾಸ ಮಾಡಿದೆ ||ವ್ಯಾಸಭಜಕ ನಿನ್ನ ದಾಸನೆನಿಸಿಕೊಳ್ಳೋ4ಅಂಜನಾಸುತ ಪ್ರಾಣೇಶ ವಿಠಲನೆಂಜಲನೊಯ್ಯುತ |ಭುಂಜಿಸಿದಿಯಲೊನಿರಂಜನಕಪಿ ಪ್ರ- ||ಭಂಜನಕೊಡು ಕೃತಾಂಜಲಿಯಿಂ ಬೇಡುವೆ |ಕಂಜನಾಭನ ಸ್ಮರಣೆ ದಿವಾ ಸಂಜೆಯಲಿಘನ||ಪುಂಜ ಸುಗುಣಮಣಿ ಮಂಜರಿ ಅರ್ಥ ಪ- |ರಂಜಳ ತಿಳಿಸೋ ಧನಂಜಯ ರಕ್ಷ 5
--------------
ಪ್ರಾಣೇಶದಾಸರು
ಭಾವೆತೋರೆಲೆ ಶ್ರೀನಿವಾಸನ ಜಗದಜೀವಗಳಿಗೆ ಭಿನ್ನನಾದ ವಾವೆಯಿಲ್ಲದ ಶ್ರೀನಿವಾಸನ ಪ.ಮಾವನ ಅಣುಗನನುಜೆಯಳಿಗೆ ಮಾವನೆನಿಸಿದ ತನ್ನ ಮಗಳಮಾವನ ಸೊಸೆಯ ಬಸಿರಲುದಿಸಿ ಮರಮೆಳೆಯನು ಸೇರಿ ಮತ್ತೆಮಾವನ ಸುತರಿಗಜ್ಜನೆನಿಸಿದ ಮಗುಳೆಮಾವನ ಮಾವನ ಮಗಳಿಗಣ್ಣನೆನಿಸಿದ ಒಮ್ಮೆ[ಬಾವನ] ಭವನವೆಣ್ಗಳ ಬಿಡಿಸಿ ರಮಿಸಿದ 1ಸತಿಯ ಸುತೆಗೆ ಅರಸನಾದ ಸತಿಯಳಿಗೆ ಸಹೋದರನಾದಸತಿಯಳನುಜ ಕುಲದಿ ಜನಿಸಿಸತಿಹಲವರ ಕೂಡಿ ಸುಖಿಸಿಸತಿಸಖಿಯರ ಬಂಧುವೆನಿಸಿದ ಮತ್ತೆ ಸುತನಸತಿಯ ಮಗನ ಮೊಮ್ಮನೆನಿಸಿದ ಓರ್ವ ಮೊಮ್ಮನಸತಿಗೆ ನೋಡಿದಳಿಯನೆನಿಸಿದ 2ಅಣ್ಣಗೆ ಜನಕನಾಗಿ ಮಗನ ಅಣ್ಣನೆನಿಸಿದ ಜಗವರಿಯಲುಅಣ್ಣನೆ ತಮ್ಮ್ಮಗೆ ತಮ್ಮನಾದ ಹುಟ್ಟಿದ ತಾಣವಜರಿದುಬೆಳೆದುಅಣ್ಣಗೆ ಭಾವನಾಗಿರುವ ಚೆಲುವನೆ ತನ್ನ ಬಾವನಅಣ್ಣನಯ್ಯಂಗೆ ಪುತ್ರನಾದವನೆ ಪ್ರಸನ್ನವೆಂಕಟತನ್ನವಳಿಗಾಪ್ತನಾಗಿ ಹೊರೆವನೆ 3
--------------
ಪ್ರಸನ್ನವೆಂಕಟದಾಸರು
ಮಂಗಲಂ ಜಯ ಮಂಗಲಂಮಂಗಲಂಶುಭಮಂಗಲಂಪನೀರೊಳು ಮುಳುಮುಳುಗ್ಯಾಡಿದಗೇಘೋರತಮವ ಹತ ಮಾಡಿದಗೆಮೂರೊಂದು ವೇದವ ತಂದವಗೆಧೀರಗೆ ಮತ್ಸ್ಯವತಾರನಿಗೆ1ಸುರರ ಮೊರೆಯಕೇಳಿಬಂದವಗೇಗಿರಿಯ ಬೆನ್ನಲಿ ಪೊತ್ತು ನಿಂದವಗೆತ್ವರಿತದಿ ಶರಧಿಯ ಮಥಿಸಿದಗೆಕರುಣಾಕರನಿಗೆ ಕೂರ್ಮನಿಗೆ2ಕೆರಳುತ ಕೋರೆಯ ಮಸೆದವಗೆಗುರುಗುರಿಸುತ ಧುರವೆಸೆದವಗೆದುರುಳಹೇಮಾಕ್ಷನ ಮಥಿಸಿದಗೆಧರಣಿಯ ತಂದಗೆ ವರಹನಿಗೆ3ತರಳನು ಸ್ಮರಿಸಲು ಬಂದವಗೆಧುರದೊಳುದೈತ್ಯನ ಕೊಂದವಗೆಕರುಳನು ಕಂಠದಿ ಧರಿಸಿದಗೆಸುರನರವಂದ್ಯಗೆ ನರಸಿಂಹಗೆ4ಬಲಿಯೊಳು ದಾನವ ಬೇಡಿದಗೆನೆಲವನುಈರಡಿಮಾಡಿದಗೆಛಲದಲಿ ಬಲಿಯನು ಮೆಟ್ಟಿದಗೆಚಲುವಗೆ ವಾಮನ ಮೂರುತಿಗೆ5ಹಸ್ತದಿ ಕೊಡಲಿಯ ಪಿಡಿದವಗೆಪೃಥ್ವೀಪಾಲರ ಶಿರ ಕಡಿದವಗೆಧಾತ್ರಿಯ ವಿಪ್ರರಿಗಿತ್ತವಗೇ ಕ್ಷತ್ರಿವಿರೋಧಿಗೆ ಭಾರ್ಗವಗೆ6ದಶರಥ ನಂದನನೆನಿಸಿದಗೆಶಶಿಮುಖಿಸೀತೆಯ ವರಿಸಿದಗೆದಶಶಿರದೈತ್ಯನ ಮಥಿಸಿದಗೆಕುಸುಮಾಕ್ಷನಿಗೆ ಶ್ರೀರಾಮನಿಗೆ7ಮುರಲೀಧರನೆಂದೆನಿಸಿದಗೆದುರುಳಕಂಸನ ಮಥಿಸಿದಗೆತರಳೆ ರುಕ್ಮಿಣಿಯನು ತಂದವಗೆಮುರಹರಮೂರ್ತಿಗೆ ಕೃಷ್ಣನಿಗೆ8ತ್ರಿಪುರರ ಸತಿಯರ ಒಲಿಸಿದಗೆತ್ರಿಪುರರ ಶಿವನಿಂಗೆಲಿಸಿದಗೆಕಪಟದ ಮೋಹನ ರೂಪನಿಗೆನಿಪುಣಗೆ ಬೌದ್ಧಾವತಾರನಿಗೆ9ಹಸ್ತದಿ ಕತ್ತಿಯ ಪಿಡಿದವಗೆಉತ್ತುಮ ಹಯವೇರಿ ನಡೆದವಗೆಮಾತುಳಶಿರವನು ಕಡಿದವಗೆಉತ್ತುಮ ಮೂರ್ತಿಗೆ ಕಲ್ಕ್ಯನಿಗೆ10ಇಂದಿರೆಯರಸಗೆ ಸುಂದರಗೆಸಿಂಧುಮಂದಿರದಲಿ ನಿಂದವಗೆಮಂದಸ್ಮಿತಮುಖ ಚಂದ್ರನಿಗೆಗೋವಿಂದಗೆ ದಾಸನ ವಂದ್ಯನಿಗೆ11xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ
ಮಂಗಳಾರತಿಯ ತಂದೆತ್ತಿರೆ ಹೇಮಾಂಗನೆಯರು ವೆಂಕಟಪತಿಗೆ ಪ.ಪೊಂಗಿಂಡಿಯುದಕ ಕಂಗಳಿಗೊತ್ತಿ ಪೊಸಬಗೆರಂಗು ಮಾಣಿಕದಕ್ಷತೆಯನಿಟ್ಟುಪೊಂಗಂಕಣ ಪೊಳೆವಿನ ಪ್ರಭೆಯಲಿ ಮರಿಭೃಂಗಕುಂತಳೆಯರೆಡಬಲದಿ 1ಅನುದಿನಮಂಗಳ ಮನಸಿಜನಯ್ಯಗೆವನಮಾಲಿ ಕೌಸ್ತುಭಹಾರನಿಗೆಘನಮಹಿಮೆಯ ಜಗ( ದ?) ವರಿಗೆ ತೋರುವನಿಗೆಮುನಿ ಸನಕಾದಿ ವಂದಿತ ಪಾದಗೆ 2ವಿಕ್ರಮಕೆ ಎದುರಾರಿಲ್ಲವೆಂದುಬಲಿಚಕ್ರನು ಸುರರ ಬಾಧಿಸುತಿರಲುಶಕ್ರನ ಪೊರೆದವನುಕ್ಕ ತಗ್ಗಿಸಿ ತ್ರಿವಿಕ್ರಮನೆನಿಸಿದ ದೇವನಿಗೆ 3ವ್ರಜದ ಗೋಪಾಂಗನೆಯರ ಮನೋಹರಗೆಭುಜಗಶಾಯಿ ಭಕ್ತ ಭಯದೂರಗೆನಿಜ ಭಕ್ತ ಪಾರ್ಥರ ಪಥಿಕರಿಸಿದವನಿಗೆಗಜವನುದ್ಧರಿಸಿದ ದನುಜಾರಿಗೆ 4ಕಡುಮೂರ್ಖ ಸೀತಾಕೃತಿಯನೊಯ್ದಸುರನಬಿಡದೆ ಮರ್ದಿಸಿದ ಶ್ರೀ ರಘುಪತಿಗೆಸಡಗರದಲಿ ಶೇಷಾದ್ರಿಲಿ ನಿಂತ ಎನ್ನೊಡೆಯ ಪ್ರಸನ್ನವೆಂಕಟಪತಿಗೆ 5
--------------
ಪ್ರಸನ್ನವೆಂಕಟದಾಸರು
ಮನಸಿಟ್ಟು ಭ್ರಮಿಸುವರೇನೆ -ಘನ - |ಗುಣವಂತನೇನವ ಜಾಣೆ ? ಪಅನುದಿನ ಗೊಲ್ಲಪಳ್ಳಿಗೆ ಕಳ್ಳನೆನಿಸಿದ |ದನಗಾಹಿ ನಿನಗೇನ ಮರುಳು ಮಾಡಿದನೆ ? ಅ.ಪಜಲವಾಸಿ ಮುಖವೊಳಸೆಳೆವ - ಇವ |ನೆಲವ ಕೆದರಿ ಕಂಬದಿ ಬಾಯ್ ತೆಗೆವ ||ಇಳೆಯನಳೆದ ಕೊರಳಗೊಯ್ಕ ವನವಾಸಿಯ |ಕೊಳಲಪಿಡಿದ ಕುರುಬಲವನಳಿದಾತಗೆ 1ಅಂದು ಮಧುರೆಯಲಿ ಪುಟ್ಟಿದನ - ಆ |ನಂದಗೋಪ - ಯಶೋದೆ ಕೋಮಲನ ||ಕಂದನಾಗಿ ಮೊಲೆಯುಂಡು ಪೂತನಿಯನು |ಕೊಂದು ಕಂಸರಪುರ ತಂದೆಗಿತ್ತವಗೆ2ಬತ್ತಲಿರುವ ಶ್ರೀನಿರ್ವಾಣಿ - ತೇಜಿ - |ಹತ್ತಿ ಪಿಡಿದ ಖಡ್ಗಪಾಣಿ ||ಮತ್ತರನೆಲ್ಲರ ಮರ್ದಿಸಿ ಬಲವಂತ |ಪಾರ್ಥಗೊಲಿದ ಶ್ರೀ ಪುರಂದರವಿಠಲಗೆ 3
--------------
ಪುರಂದರದಾಸರು
ಮನೆಯೊಳಗಾಡೊ ಗೋವಿಂದ-ನೆರೆ-|ಮನೆಗಳಿಗೇಕೆ ಪೋಗುವೆಯೊ ಮುಕುಂದ ಪನೊಸಲಿಗೆ ತಿಲಕವನಿಡುವೆ-ಅಚ್ಚ-|ಹೊಸಬೆಣೆಯಿಕ್ಕಿ ಕಜ್ಜಾಯವ ಕೊಡುವೆ ||ಹಸನಾಧಾಭರಣಗಳಿಡುವೆ-ಚಿಕ್ಕ-|ಹಸುಳೆ ನಿನ್ನನು ನೋಡಿ ಸಂತೋಷಪಡುವೆ 1ಅಣ್ಣಯ್ಯ ಬಲರಾಮಸಹಿತ-ನೀ-|ನಿನ್ನೆಲ್ಲಿಯಾದರೂ ಆಡುವುದು ವಿಹಿತ ||ಹೆಣ್ಣುಗಳೇಕೋ ಸಂಗಾತ-ರಂಗ |ಬಿನ್ನಪಪರಿಪಾಲಿಸೊ ಜಗನ್ನಾಥ2ಜಾರನೆನಿಸಿಕೊಳಲೇಕೆ-ರಂಗ-|ಚೋರನೆನಿಸಿಕೊಂಬ ದೂರು ನಿನಗೇಕೆ ||ವಾರಿಜಾಕ್ಷಿಯರ ಕೂಡಲೇಕೆ-ನಮ್ಮ-|ಪುರಂದರವಿಠಲರಾಯ ಎಚ್ಚರಿಕೆ 3
--------------
ಪುರಂದರದಾಸರು
ಮಾರುತನೆ ಏಳೆಂದು ಎಬ್ಬಿಸಿದಳಂಜನೆಯುಶ್ರೀ ರಾಮ ಸೇವೆಗೆ ತಡವಾಯಿತೇಳು ಪ.ಸೇತುಗಟ್ಟಲು ಬೇಕುಶರಧಿ ದಾಟಲು ಬೇಕುಮಾತೆಗೆ ಉಂಗುರವ ಕೊಡಲು ಬೇಕು ||ಪಾತಕಿ ರಾವಣನ ಶಿರವನ್ಹರಿಯಲು ಬೇಕುಸೀತೆಪತಿ ರಾಮರಿಗೆ ನಮಿಸಬೇಕು 1ಇಂತು ಕಳಿಯಲು ಬೇಕು ಅಙ್ಞÕತವಾಸವನುಪಂಥದಲಿ ಕೀಚಕರ ಒದೆಯಬೇಕು ||ತಂತ್ರದಲಿ ಗೆಲಬೇಕು ಶಕುನಿ ದುರ್ಯೋಧನರಕುಂತಿನಂದನನೆಂದು ಹೆಸರಾಗಬೇಕು 2ಮಧ್ವರಾಯರು ಎಂದು ಪ್ರಸಿದ್ಧರಾಗಲು ಬೇಕುತಿದ್ದಿ ಹಾಕಲು ಬೇಕು ಸಕಲಗ್ರಂಥಗಳ ||ಅದ್ವೈತವಾದಿಗಳ ಗೆದ್ದು ಕೆಡಹಲು ಬೇಕುಮುದ್ದು ಪುರಂದರವಿಠಲ ದಾಸನೆನಿಸಲು ಬೇಕು 3
--------------
ಪುರಂದರದಾಸರು
ಮುಖ್ಯ ಪ್ರಾಣನೆ ನಮ್ಮ ಮೂಲ ಗುರುವು |ರಕ್ಕಸಾಂತಕ ಶ್ರೀ ಭಾರತಿಯ ರಮಣನೆಂಬ ಪಅಂಜನಾ ಸುತನಾಗಿ ದಶರಥ ಸುತನಂಘ್ರಿ |ಕಂಜಭಜಿಸಿ ರಾವಣಾದಿ ಖಳರಾ ||ಅಂಜಿಸಿ ಕಪಿಗಳು ಚೇತನ ಕೆಡಲಾಗ |ಸಂಜೀವನವ ತಂದು ಪ್ರಾಣವನುಳುಹಿದ 1ಹರಿಗೆ ದ್ವೇಷಿಗಳಾದ ಮಗಧಾದಿ ಕ್ಷಿತಿಪರ |ತರಿದು ದ್ರೌಪದಿಯಳಕರವಪಿಡಿದು ||ದುರುಳಕೌರವರನ್ನು ಅಳಿದು ದ್ವಾಪರ ಕೊಟ್ಟಾ |ಗರಳಭೋಜನ ಮಾಡಿ ವೃಕೋದರನೆನಿಸಿದಾ2ವಿಷಯಂಗಳ ತೊರೆದು ಕಾಷಾಯಾಂಬರ ಧರಿಸಿ |ವಸುಧೆಯೊಳಗೆ ದುರ್ಮತವ ಸೋಲಿಸಿ ||ಅಸಮ ಶ್ರೀ ಪ್ರಾಣೇಶ ವಿಠ್ಠಲ ಪರದೈವವೆಂದು |ಹಸನಾಗಿ ತಿಳಿಸಿದ ಶ್ರೀ ಮಧ್ವಮುನಿಯೆಂಬ 3
--------------
ಪ್ರಾಣೇಶದಾಸರು
ಯಾಕಿಂತು ಮನಸೋತೆ ಏ ರುಕ್ಮಿಣೀದೇವಿಲೇಖನವ ಬರೆದು ನೀನಾ ಕೃಷ್ಣಗೆಪಲೋಕಮಾನ್ಯಳೆ ನೀನು ಬೇಕಾಗಿ ಮರುಳಾದೆಈ ಕೃಷ್ಣ ಯಾದವರ ಕುಲಕೆ ತಿಲಕಅ.ಪಜನಿಸಿದನು ಮಧುರೆಯೊಳು ದೇವಕಿಯ ಜಠರದಲಿತನಯನೆನಿಸಿದ ಗೋಪಿಗಿವನು ಗೋಕುಲದಿದನುಜೆ ಪೂತನಿಯಳ ಮೊಲೆಯುಂಡು ತೇಗಿದನುಮನೆ ಮನೆಯ ಪಾಲ್ಮೊಸರು ಕದ್ದು ಮೆದ್ದಾ1ತುರುವ ಕಾಯ್ದನ ವನದಿ ತಿರಿಯ ಬುತ್ತಿಯನುಂಡಶಿರಕೊರಳಿಗಾಭರಣ ನವಿಲ್ಗರಿಯ ತುಂಡುತರಳತನದಲಿ ಹಲವು ತರುಣಿಯರ ವ್ರತವಳಿದಕರಿಯನಿವ ಸ್ತ್ರೀಯರುಡುವ ಸೀರೆ ಕದ್ದೊಯ್ದ2ನಂದಗೋಕುಲದಿ ಸಾಕಿದ ಸ್ತ್ರೀಯರನು ಬಿಟ್ಟುಬಂದು ಮಧುರೆಯೊಳು ಮಾತುಳನ ಮರ್ದಿಸಿದಾಚಂದವೆ ಆ ಕುಬುಜೆ ಡೊಂಕ ತಿದ್ದಿಯೆ ನೆರೆದಸಿಂಧುಮಧ್ಯದಿಂzÀಗೋವಿಂದ ಮಾಗದಗಂಜಿ3xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ
ಯಾಕೆ ನಿನ್ನ ಮನಕೆ ಬಾರೆ ಸಾಕೊ ನಿನ್ನ ಧ್ವರಿಯತನ ಪಕಾಕುಜನರ ಕಾಯ್ದು ಎನ್ನ ಸಾಕದಿರುವದೇನು ನ್ಯಾಯ ಅ.ಪಘನ್ನನೆನಿಸಿ ಪೊರೆದು ಎನ್ನಬನ್ನಬಡಿಸೋದು ನ್ಯಾಯವೇ1ನಾಚಿಕಿಲ್ಲದೆಂಜಲ್ಹಣ್ಣು ಯಾಚಿಸಿ ತಿಂದ್ಯಲ್ಲೊ 2ಮುಷ್ಟಿಯವಲಕ್ಕಿ ತಿಂದು ಅಷ್ಟೈಶ್ವರ್ಯ ಕೊಟ್ಟಿಯಲ್ಲೊ 3ಶÀಕ್ರಾದಿ ಸುರವಂದ್ಯ ತ್ರಿವಿಕ್ರಮನೆನಿಸಿ ತ್ರೀ -ವಕೆÀ್ರಗಂಧಕೆ ಒಲಿದು ಕುಬ್ಜೆಯ ಆಕ್ರತದಲಿ ಬೆರೆತಿಯಲ್ಲೊ 4ಉನ್ನತಾದ ಸುಖವಿತ್ತು ಚಿನ್ನನಾಗಿ ನಡೆದಿಯಲ್ಲೊ 5ಬಿಟ್ಟತನಯನೆಂದು ಕರುಣಾ ದೃಷ್ಟಿಯಿಂದ ಪೊರೆಯವಲ್ಯಾ 6ದಾತಗುರುಜಗನ್ನಾಥ ವಿಠಲ ನೀನುಪಾತಕಿಜನರ ಪೊರೆದ ರೀತಿ ಏನುನ್ಯಾಯವೋ7
--------------
ಗುರುಜಗನ್ನಾಥದಾಸರು
ಯಾವ ಭಯವು ನಮಗೆ |ಶಂಕರ ದೇವನೊಲಿದು ಕಡೆಗೆ ಪಸಾವಧಾನದಿ ಸರ್ವಭಕ್ತ ಜನರಕಾವ|ದೇವ ದೇವೇಶ ಸರ್ವೇಶ ನೀನೊಲಿದರೆ ಅಪದುರಿತದ ಭಯವೇನಲೇ | ಶಂಕರ ನಿನ್ನ |ಸ್ಮರಿಸಲು ದೂರವಲೇ |ಮರಣದ ಭಯವೆನೆ | ಅಂತಕಾಂತಕ ನೀನು ||ಉರಗನ ಭಯವೆನೆ | ಗರಳಕಂಧರನೂ 1ಚೋರರ ಭಯವೇನೂ | ದಧಿಘೃತ |ಚೋರ ನಿನ್ನಯ ಸಖನೂ ||ನಾರೀ ಚೋರನ ದೇವ | ಧೀರಕೈರಾತನೀ |ಘೋರರಕ್ಕಸರೆನೆ | ತ್ರಿಪುರಸಂಹಾರ2ಮೃಗಪಕ್ಷಿ ಭಯವೆನಲೇ |ಸತಿಸುತಸಖ|ಖಗಮೃಗವೇರ್ದರೆಲೇ |ಜಗದೊಡತಿಯು ಲಕ್ಷ್ಮೀ | ಗಗ್ರಜನೆನಿಸಿಹೆ ||ಭಗಪೀಠನು ಧನ | ಮಾನಾಭಿಮಾನಕೇ 3ವಸನಕ್ಕೆ ಚರ್ಮಾಂಬರನೂ |ಸಂಸಾರವೆಂಬ ವ್ಯಸನಕೆ ದಿಗಂಬರನೂ ||ತೃಷೆಗೆ ಗಂಗಾಧರ | ಅಶನಕ್ಕೆ ಬಿಕ್ಷುಕನೀ |ಅಂಗ ಶೃಂಗಾರಕೆ | ಭಸ್ಮಲೇಪನನೂ 4ಪೊಗಳಲಳವೇ ನಿನ್ನಾ | ಮಹೇಶ್ವರ |ಜಗದಿ ಭಕ್ತರ ಸಂಪನ್ನಾ ||ಭೃಗುಲಾಂಛನಧರ ಗೋವಿಂದದಾಸನ |ಹಗಲಿರುಳೆನ್ನದೆಪೊರೆಯೋ ಮಹಾದೇವ 5
--------------
ಗೋವಿಂದದಾಸ
ಯೋಗಿಯಹುದಹುದೋ ಚಿದಾನಂದಯೋಗಿಯಹುದುಹುದೋ ದಯಾಸಾಗರ ಕಾರಣ್ಯದಾಗರ ನಿತ್ಯಾತ್ಮಪಅಷ್ಟಮದಂಗಳನ್ನು ಸುಟ್ಟು ಭಸ್ಮವ ಮಾಡಿಹಅಷ್ಟ ಪ್ರಕೃತಿಯನ್ನು ಕಾರಿ ಕಾರಿ ಮಹದಷ್ಟ ಯೋಗವ ಸಾಧಿಸಿ ಶ್ರವಣವನ್ನುಕೊಟ್ಟುನಾದವ ಭೇದಿಸಿ ಆತ್ಮದಲ್ಲಿದೃಷ್ಟಿ ಎಂಬುದ ನಿರಿಸಿ ಸರ್ವಕಾಲಶಿಷ್ಟರೆಂದೆನಿಪ ಉತ್ಕøಷ್ಟಮಾರ್ಗದವಾಸಿ1ಆರು ಅರಿಯ ಮೀರಿದರು ಭ್ರಮೆಯ ವಿಕಾರವ ತರಿದುತರಿದು ಹೀರಿ ಆರು ಚಕ್ರದ ಮೇಲೆಏರಿ ಸಹಸ್ರಾರ ಸ್ಥಳದಿನಿಂದುಜ್ಯೋತಿರ್ಮಯಸಾರವ ಸೇವಿಸುತಲಂದು ನಿತ್ಯಾನಿತ್ಯಘೋರತಪದಿಯೋಗಿಶೂರ ಭಕ್ತರ ಬಂಧು2ಸಪ್ತವ್ಯಸನರೂಪಕೆಡಿಸಿ ಬಳಿಕ ದುಷ್ಟಸಪ್ತಾವರಣವನ್ನು ತುಳಿದು ಪಾದದಲೊದ್ದುಗುಪ್ತವಾಗಿಹ ಪ್ರಭೆಯ ಶೋಧಿಸಿಘನತೃಪ್ತ ಅಮೃತ ಸುಧೆಯ ಸುರಿದು ಮೇರುಕಾಂಚನ ಗಿರಿಯ ಸೇರಿಯೆ ಜ್ಯೋತಿವ್ಯಾಪಕಭಾಸ್ಕರದೀಪ್ಯಮಾನ ಪ್ರಭಾ3ಕರ್ಮಪಾಪವು ಪುಣ್ಯಹಮ್ಮುವಾಸನಕ್ಷಯದುರ್ಮತಿ ದುರ್ಗುಣವೆಲ್ಲ ದೊಡ್ಡಬ್ರಹ್ಮಾನಂದದ ಲಕ್ಷಣ ತಿಳಿದಾ ನಿತ್ಯಾನಿರ್ಮಳ ನಿರಾವರಣ ರೂಪಿತ ಆತ್ಮಸ್ವರ್ಮಣಿ ಸುಗುಣನಿರ್ಗುಣಪರಬ್ರಹ್ಮವೇ ತಾನಾಗಿ ಬೆಳಗುವ ಯತಿ ಜಾಣ4ಸಾಧನ ನಾಲ್ಕನು ಸಾಧಿಸಿನಾದವ ಭೇದಿಸಿ ಜ್ಯೋತಿ ಸಂಪಾದಿಸಿ ಆತ್ಮನಭೇದವೆಂಬುದನರಿತ ಬಳಿಕಘನಸಾಧನಗುಣಚರಿತಯೋಗಿ ತಾನೆನಿಸಿ ಕೈವಿಡಿಯೆನ್ನಬೋಧಸದ್ಗುರು ಚಿದಾನಂದಅವಧೂತ5
--------------
ಚಿದಾನಂದ ಅವಧೂತರು
ರಂಗ ನೀ ಎನ್ನೊಡೆಯನಾಗಿ ಅಮಂಗಳಾತ್ಮರ ಮನೆಗೆ ಹೋಗ್ಯೆನ್ನಿಂಗಿತವನುಸುರಿದರೆ ಕುಂದಿನ್ನಾರಿಗೆಲೆ ತಂದೆ ಪ.ಹಂಚಿನೆದುರಲಿ ಹಲ್ಲು ತೆರೆದರೆಮಿಂಚುಕನ್ನಡಿಯಾಗಬಲ್ಲದೆವಂಚಕರ ಅನುಸರಿಸಿ ಒಡಲಾಸೆಯಲಿ ಬಳಲಿದರೆಕಿಂಚಿದಭಿಮಾನಿಲ್ಲೆ ನಿನಗೆ ಪ್ರಪಂಚ ಸೂತ್ರಿ ಮುರಾರಿ ಎನ್ನಯಸಂಚಿತಾರಬ್ಧಾಗಮವ ನೂಕುವರು ದಾರುಂಟೈ 1ಅರಸು ಮುಟ್ಟಿದ ನಾರಿ ಮಾನ್ಯಳುಪರಸುಹೊಂದಿದ ಲೋಹ ಪ್ರಿಯಪರಮಪುರುಷ ನಿನ್ನವನೆನಿಸಿ ಕ್ಷುದ್ರರ ವಶವ ಮಾಡುವರೆಅರಿದುದಾವುದಘಟಿತಘಟಕನೆಶಿರಿವಿರಿಂಚಿ ಶಿವೇಂದ್ರರೊಡೆಯನೆಪರಮಪಾತಕಿಯಾದರೇನ್ಮ್ಮುದ್ರಾಂಕಿತನು ಕಾಣೈ ರಂಗ2ಮಧ್ವರಗಣನೆ ನಿನ್ನ ಶರಣರುಒದ್ದು ಭವಸಾಗರವ ದಾಟಿದರುದ್ಧಟರು ನಾಕೇಳಿಕಕುಲತೆಯಿಂದ ಮೊರೆ ಹೋಗುವೆಅದ್ದು ವಿಷದೊಳಗೆ ಸುಧೆಯೊಳುಅದ್ದು ನಿನ್ನ ನಂಬಿದವನು ನಾಶುದ್ಧ ಭಟಜನಪಾಲ ಪ್ರಸನ್ವೆಂಕಟಾದ್ರೀಶ 3
--------------
ಪ್ರಸನ್ನವೆಂಕಟದಾಸರು
ರಂಗ ರಂಗ ಎಂಬ ನಾಮವ ನೆನೆವರ |ಸಂಗದೊಳಿರಿಸು ಎನ್ನ ಪಅಂಗದೊಳ್ಲೆವರು ದೆಸೆದಸೆಗೆಳೆಯುವ |ಭಂಗವ ಬಿಡಿಸೊ ಹರಿಯೆ-ಸ್ವಾಮಿ ಅ.ಪಹರೆಕೃಷ್ಣ ಎಂದೆಂಬೆಜಿಹ್ವೆತಾನಿರುತಿರೆ |ಬರಿಯೆ ಮಾತಾಡುವೆ ನಾ ||ಗುರು-ಹಿರಿಯರ ವಂದನೆಗೆ ಕರ-ಶಿರವಿರೆ |ಗುರುವಹಂಕಾರತನ ||ಪರಿಪರಿ ಪುಷ್ಪದಲಿ ಪೂಜಿಸದೆ ಅಚ್ಯುತನ |ಮರೆತಿಹೆ ನಾನನುದಿನ |ಅರಿವ ನೋಡಿದರೆ ಎನ್ನಲಿ ಕಾಣೆನೈ ದೇವ |ಮೊರೆಹೊಕ್ಕೆ ಸಲಹೊ ಎನ್ನ-ಸ್ವಾಮಿ 1ವೇದ ಶಾಸ್ತ್ರ ಪುರಾಣ ನಾಮವ ನೆನೆವರ |ಚೋದ್ಯವ ನಾನರಿಯೆನು ||ಹಾದಿಬೀದಿ ತಿರುಗುವ ಜಾರಸ್ತ್ರೀಯಳ ಕಂಡು-ವಿ-|ನೋದಗಳ ಮಾಡುತಿಹೆನು ||ಮಾಧವಗೋವಿಂದ ಎನ್ನದೆ ಕಾಲನ |ಬಾಧೆಗಳಿಗೊಳಗಾದೆನೊ ||ಈ ಧರೆಯೊಳಗೆನ್ನ ರಕ್ಷಿಸುವವರ ಕಾಣೆ |ಶ್ರೀಧರ ನೀನೆ ಸಲಹೊ-ಸ್ವಾಮಿ 2ಮಡದಿ-ಮಕ್ಕಳಿಗೆಲ್ಲ ಒಡವೆ ಬೇಕೆಂಬುವ |ಕಡುಲೋಭತನವ ಬಿಡಿಸೊ ||ಅಡಿಗೆ ಅಡಿಗೆ ನಾರಾಯಣನೆಂಬ ನಾಮವನು |ನುಡಿವ ನಾಲಗೆಗಿರಿಸೊ ||ಪೊಡವಿಯೊಳುಪುರಂದರವಿಠಲರಾಯನೆ ನಿನ್ನ |ಅಡಿಯದಾಸನೆನಿಸೊ-ಸ್ವಾಮಿ 3
--------------
ಪುರಂದರದಾಸರು
ರಥವಾನೇರಿದ ಯತಿವರನ್ಯಾರೇ ಪೇಳಮ್ಮಯ್ಯಾ ಪವಿತತ ಮಹಿಮಾ - ನತಜನರನತಿಹಿತದಿ ಪಾಲಿಸುವ - ಅತುಲ ಮಹಿಮ ಕಾಣಮ್ಮ ಅ.ಪಸ್ಮರಿಸುವ ಭಕುತರಪರಿ-ಪರಿಸಲಹುವನ್ಯಾರೇ ಪೇಳಮ್ಮಯ್ಯಾಗುರುವರ ರಾಘವೇಂದ್ರ ಕಾಣಮ್ಮಾ 1ಸ್ತುತಿಸುವ ಜನರಿಗೆ ಸತಿಸುತ ಸಂಪದ -ಮತಿರಹಿತರಿಗೆ ಸುಮತಿಯ ನೀಡುವನ -ಭೂತಳಜನನಾಥನೆನಿಸಿ ಮಹಾ -ಭೂತಿದಾಯಕ ರಾಘವೇಂದ್ರ ಕಾಣಮ್ಮಾ 2ಭೂತಪ್ರೇತ ಪಿಶಾಚ ಸುಮಹ -ಪಾತಕವನುಕುಲವೀತಿಹೋತ್ರಸುಖದೂತನೆನಿಪ ಗುರುರಾಯ ಕಾಣಮ್ಮ 3
--------------
ಗುರುಜಗನ್ನಾಥದಾಸರು