ಒಟ್ಟು 16362 ಕಡೆಗಳಲ್ಲಿ , 134 ದಾಸರು , 7361 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇನ್ನೆಲ್ಲಿತನಕ ಇವಗೆ ದುರ್ಬವಣೆ ಹರಿಯೆ ನಿನ್ನ ಉನ್ನತವಾದ ಮರೆಬಿದ್ದ ಬಳಿಕ ಪ ಮಂದಮತಿ ತೊಲಗದು ಕುಂದು ನಿಂದೆ ಅಳಿವಲ್ಲದು ಮಂದಿಮಕ್ಕಳ ಮೋಹವೊಂದು ಕಡಿವಲ್ಲದು ಸಿಂಧುಶಯನನೆ ಗೋವಿಂದ ನಿಮ್ಮ ಚರಣ ವೊಂದೆ ಮನದಲಿ ಭಜಿಸಾನಂದಪಡಿವಲ್ಲದು 1 ಮೋಸಮರವೆ ಹರಿವಲ್ಲದು ಆಶಪಾಶ ಬಿಡವಲ್ಲದು ಹೇಸಿ ಸಂಸಾರದ ದುರ್ವಾಸನೆಯು ಹಿಂಗದು ದೂಷಣೆಗೆ ನೋಯುವುದು ಭೂಷಣೆಗೆ ಹಿಗ್ಗುವುದು ದೋಷದೂರನೆ ನಿನ್ನ ಧ್ಯಾಸನಿಲ್ಲವಲ್ಲದು 2 ಕಪಟ ಮತ್ಸರಬುದ್ಧಿ ಚಪಲತನ ಅತಿಕ್ರೋಧ ಕಪಿಮನದ ಚೇಷ್ಟೆ ಅಪರೋಕ್ಷ ನಿಲ್ಲವಲ್ಲದು ಅಪ್ಪ ಶ್ರೀರಾಮ ನಿಮ್ಮ ಜಪತಪ ಸಿದ್ಧಿಸವಲ್ಲದು 3
--------------
ರಾಮದಾಸರು
ಇನ್ನೇತರೊಳಗಾಸೆ ಎನಗಿಲ್ಲವೋ ಈಗಳಿನ್ನು ಹರಿನಾಮ ಸಂಕೀರ್ತನೆಯೊಂದು ಹೊರತಾಗಿ ಪ ನೋಡಿ ಸಾಕಾಯ್ತು ಲೋಕದ ಪ್ರಪಂಚವನು ಪೇ ಚಾಡಿ ಸಾಕಾಯ್ತು ದರಮಂ ಪೊರೆಯಲು ಆಡಿ ಸಾಕಾಯ್ತು ಸುಜನರೊಳ ನೃತಗಳನು ಒಡ ನಾಡಿ ಸಾಕಾಯ್ತು ಕುಜನರ ಸಂಗದೊಳಗೆ 1 ಉಂಡು ಸಾಕಾಯ್ತು ಸಂಸಾರ ಸುಖ ದುಃಖವನು ನಾ ಕಂಡು ಸಾಕಾಯ್ತು ಸುಜನರ ಭಂಗವನು ತಂಡಿ ಸಾಕಾಯ್ತು ಪರಸೇವೆಯನು ಮಾಡಿ ಜನ ರಂಡಲೆದು ಬೇಡಿ ಸಾಕಾಯ್ತು ಈ ಭವಕೆ 2 ತಿರು ತಿರುಗಿ ಸಾಕಾಯ್ತು ತಲೆ ಹುಳಿತ ನಾಯಂತೆ ಪರಿ ಪರಿಯ ದುಃಖಗಳನುಣ್ಣುತ ಚರಿಸಿದೆನು ಮರುತಸುತ ಕೋಣೆ ಲಕ್ಷ್ಮೀರಮಣ ಇರಿಸಿದಂತಿರ ಬೇಕು ಸಕಲಜನರು 3
--------------
ಕವಿ ಪರಮದೇವದಾಸರು
ಇನ್ನೇನ ಮಾಡುವೆ ಇನ್ನಾರ ಬೇಡುವೆ ಪ್ರ-ಸನ್ನ ಚೆನ್ನಕೇಶವ ಎನ್ನ ಬಿನ್ನಪವಮನ್ನಿಸಿ ದಿನದಿನದಲ್ಲಿನಿನ್ನನರ್ಚಿಪಂತೆ ಮಾಡು ಪ. ಮೊಲೆಯುಂಬ ಹಸುಗೂಸು ಮಾತನಾಡಿ ತನ್ನಮನದಭೀಷ್ಟವ ಪೇಳ್ವುದೆಚೀರಿ ಅಳುವದೈಸೆ ಅದನರಿತು ಅದರ ತಾಯಿಅಪ್ಪ್ಪಿಮುದ್ದಾಡಿಸುತ್ತಬಳಲಿಕೆÀ ಪೋಪಂತೆ ನಸುಬಿಸಿಪಾಲನುಬಾಯೆಂದು ಕುಡಿಸುವಳುಸಿರಿಲಲನೆಯರಸ ನಮ್ಮ ಈ ಪರಿಯಲಿನೀನು ಲಾಲಿಸಿ ಸಲಹಬೇಕು 1 ಕರಿ ಕರೆಯಲುಪೊರೆದಂತೆ ಪೊರೆಯೆನ್ನನುಮಕರಿಯ ಕೊಂದು ಪೊರೆದಂತೆ2 ಹುಲಿಯ ಕಂಡೋಡುವ ಹುಲ್ಲೆಯ ಮರಿಯಂತೆಭವದ ಬೇಗೆಯಲಿ ಬೆಂದೆ ವಿಘಳಿಗೆ ಘಳಿಗೆಯೊಳು ಅಲಸದೆ ಪಾಪವಗÀಳಿಸುವ ಗÀಸಣೆಗಂಜೆತುಳಸಿಯ ದಳದಿಂದ ಸಂತುಷ್ಟನಹ ನಿನ್ನಒಲಿಸುವ ಭಾಗ್ಯದಲ್ಲೆ ಈ ಇಳೆಗೆ ಭಾರವಾದೆಇಹಪರ ದುಃಖದ ಹಂಬಲಿಕೆ ಎಳ್ಳಷ್ಟು ಇಲ್ಲಸನ್ಮಾರ್ಗದ ಹಂಬಲಿಕೆ ಎಳ್ಳಷ್ಟು ಇಲ್ಲ ಅಪವರ್ಗದ ಹಂಬಲಿಕೆ ಎಳ್ಳಷ್ಟು ಇಲ್ಲ3 ಹೆಂಡಿರ ಸಾಕಲಾರದೆ ಹೆಣ್ಣು ಮಕ್ಕಳುಗಳಕಂಡ ಕಂಡವಗೆರ್À ಮಾರಿ ಜಗಭಂಡನೆನಿಸಿಕೊಂಡೆ ಬಡತನ ಹಿಂಗದೆಕೊಂಡೆಯಗಳ ಪೇಳುವೆಉಂಡುಡುವರ ಕಂಡು ಮತ್ಸರ ಮಾಡುವೆತಂಡ ತಂಡÀದವರಿಂದ ಕಡಗೊಂಡರ್ಧನ ಕೊಡದೆ ಕಲ್ಲಪೊರುವೆನು ಕೋ-ದಂಡವೇರಿಸಿ ಕೊಂಡೆನು 4 ದಂಡವಿಡಿದು ವೇಷಧಾರಿಯೆಂಬುದ ಕೈಕೊಂಡು ರಾವಣನಂತೆ ಚರಿಸಿ ಎನ್ನಮಂಡೆ ಬೋಳು ಮಾಡಿ-ಕೊಂಡು ಇಳೆಯೊಳು ಪರಸತಿಯರ ಮೋಹಿಪೆಪುಂಡರೀಕಾಕ್ಷ ಈ ಪರಿಯ ಕ್ಲೇಶಗಳನುಉಂಡರೆÀ ವೈರಾಗ್ಯ ಬಾರದು ಎಲೆಪಾಂಡವಪ್ರಿಯ ಇನ್ನಾರಿ ಗುಸುರುವೆನು ಉ-ದ್ದಂಡಭಕ್ತರ ಸೇರಿಸೊ ಕೈ-ಕೊಂಡು ನಿನ್ನುದ್ದಂಡಭಕ್ತರ ಸೇರಿಸೊ5 ತಪ್ಪಿದರೆ ತಾಯಿ ತನ್ನ ಮಕ್ಕಳುಗಳತಕ್ಕೈಸಿಕೊಂಬವೊಲು ಕಾಮ-ನಪ್ಪ ಎನ್ನಪ್ಪ ಒಂದು ಕೊರತೆಯ ಕಾಣದೆಕರುಣದಿ ಕಾಯಬೇಕುಅಪಾರಮಹಿಮ ನೀನಾಶ್ರಿತ ಜನರನುಅತ್ತ ಹೋಗೆನ್ನೆ ಗಡ ನೀನ-ಪ್ರತಿಮಹಿಮನೆನಿಸಿಕೊಂಡೆ ಅದರಿಂದಅಮರರ ಶಿರೋರನ್ನವೆ ಅರ್ಜುನಸಖಅಮರರ ಶಿರೋರನ್ನವೆ 6 ಸರಿಮಿಗಿಲಿಲ್ಲದ ಸರ್ವೇಶ ಹರಿಯೆಂದುಸಿರಿಹಯವದನರಾಯ ನಿನ್ನಪರಮ ಮುನಿಗಳೆಲ್ಲಪರೀಕ್ಷೆಮಾಡಿ ನೋಡಿಮುನ್ನ ನಿರ್ಣೈಸಿದರುಹಿರಿಯರ ಮಾತನು ಪಾಟಿಮಾಡದನಗೋತ್ರ ಸೂತ್ರಗಳು ಪೋಕುಪ್ರವರ ಗೋತ್ರ ಋಷಿಮೂಲಯೆಂದು ಪ್ರಸಿದ್ಧ ಇನ್ನಾರು ನಿನ್ನಂಥವರು 7
--------------
ವಾದಿರಾಜ
ಇನ್ನೇನಿನ್ನೇನು ಎನಗಿನ್ನು ಇನ್ನೇನಿನ್ನೇನು ಧ್ರುವ ಎನ್ನೊಳು ಗುರು ತನ್ನ ಮರ್ಮವು ತೋರಿದ ಇನ್ನೇನಿನ್ನೇನು 1 ಮುನ್ನಿನ ಕರ್ಮವು ನಿರ್ಮೂಲವಾಯಿತು ಇನ್ನೇನಿನ್ನೇನು 2 ಎನ್ನೊಳು ಘನಬ್ರಹ್ಮವಸ್ತು ತಾನಾಯಿತು ಇನ್ನೇನಿನ್ನೇನು 3 ನಾನು ನಾನೆಂಬುದು ನೆಲಿಯು ತಾನಾಯಿತು ಇನ್ನೇನಿನ್ನೇನು 4 ಏನೆಂದು ತಿಳಿಯದ ಅನುಮಾನ ಗಳೆಯಿತು ಇನ್ನೇನಿನ್ನೇನು 5 ಪರಮ ತತ್ವದ ಗತಿ ನೆಲೆ ನಿಭ ತೋರಿತು ಇನ್ನೇನಿನ್ನೇನು 6 ಎನ್ನೊಳಾತ್ಮ ಖೂನ ಕುರುಹವು ತಿಳಿಯಿತು ಇನ್ನೇನಿನ್ನೇನು 7 ಕನಸು ಮನಸು ಎಲ್ಲ ನಿನ್ನ ಸೇವೆ ಆಯಿತು ಇನ್ನೇನಿನ್ನೇನು 8 ಹಗಲಿರುಳೆಂಬುದು ಹಗರಣವಾಯಿತು ಇನ್ನೇನಿನ್ನೇನು 9 ಅರಹು ಮರಹಿನ ಇರುವು ತಿಳಿಯುತು ಇನ್ನೇನಿನ್ನೇನು 10 ಭಾವದ ಬಂiÀiಲಾಟ ನಿಜವಾಗಿ ದೋರಿತು ಇನ್ನೇನಿನ್ನೇನು 11 ಜೀವಶಿವನ ಗತಿ ಸೋಹ್ಯವು ತಿಳಿಯಿತು ಇನ್ನೇನಿನ್ನೇನು 12 ಆಯವು ದಾಯವು ಸಾಹ್ಯವು ದೋರಿತು ಇನ್ನೇನಿನ್ನೇನು 13 ಜೀವನ್ನ ಜಾತಿಯ ಕೀಲವು ತಿಳಿಯಿತು ಇನ್ನೇನಿನ್ನೇನು 14 ಜನ್ಮ ಮರಣದಾ ಜಂತ್ರವು ಮುರಿಯಿತು ಇನ್ನೇನಿನ್ನೇನು 15 ಸಂದೇಹ್ಯ ಸಂಕಲ್ಪ ಸೂಕ್ಷ್ಮವು ಹರಿಯಿತು ಇನ್ನೇನಿನ್ನೇನು 16 ಮರಣದ ಗತಿಗಳ ಮಂತ್ರವು ತಿಳಿಯಿತು ಇನ್ನೇನಿನ್ನೇನು 17 ಸುಷಮ್ನ ನಾಳದ ಸೂಕ್ಷ್ಮವು ದೋರಿತು ಇನ್ನೇನಿನ್ನೇನು 18 ಇಮ್ಮನವಿದ್ದದು ಒಮ್ಮನವಾಯಿತು ಇನ್ನೇನಿನ್ನೇನು 19 ಆಧಾರಚಕ್ರದ ಹಾದಿಯು ತಿಳಿಯಿತು ಇನ್ನೇನಿನ್ನೇನು 20 ಸದ್ಗುರು ಕೃಪೆಯಾದಾ ಸಾಧನವಾಯಿತು ಇನ್ನೇನಿನ್ನೇನು 21 ಇನ್ನೇನಿನ್ನೇನು 22 ಅಂತರಾತ್ಮನ ಸೂತ್ರಾಂತ್ರವು ತಿಳಿಯಿತು ಇನ್ನೇನಿನ್ನೇನು 23 ಇನ್ನೇನಿನ್ನೇನು 24 ಎನ್ನೊಳು ಭಾಸ್ಕರ ಗುರು ತಾನೆಯಾದನು ಇನ್ನೇನಿನ್ನೇನು 25
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇನ್ನೇನು ಗತಿ ಎನಗೆ ಈ ಉದರಪೋಷಣಕೆನಿನ್ನ ಸೇವೆಯನಿತ್ತು ಸಲಹೊ ರಾಮೇಶ ಪ ಊರೂರ ತಿರುಗಿ ಭಿಕ್ಷವ ಬೇಡಲಾರೆ ನಾಂಘೋರ ವಿಷವನು ಮೊದಲೆ ಕುಡಿಯಲಾರೆನೀರ ಹೊರಲಾರೆ ಬಾಗಿಲ ಕಾಯಲಾರೆ 1 ಧರಿಸುವರೆ ವಸ್ತ್ರವಿಲ್ಲದೆ ಲೋಕದೋಳ್ ದಿಗಂ-ಬರನಾಗಿ ನಿನ್ನಂತೆ ಚರಿಸಲಾರೆಕರಿ ವ್ಯಾಘ್ರಚರ್ಮವನು ಪೊದೆದು ವರ್ತಿಸಲಾರೆಧರೆಯರಿಯೆ ನಟನಾಗಿ ಕುಣಿದಾಡಲಾರೆ 2 ಭಂಗ ರಾಮೇಶಲಿಂಗ 3
--------------
ಕೆಳದಿ ವೆಂಕಣ್ಣ ಕವಿ
ಇನ್ನೇನು ಬಲ್ಲವನು ನಾನಲ್ಲ ಹರಿಯೆ ನಿನ್ನ ಧ್ಯಾನಧಿಕೆಂಬುದೊಂದೆ ನಾ ಬಲ್ಲೆ ಪ ನಿನ್ನ ಧ್ಯಾನವೆ ಮರೆವ ತರಿದ್ಹಾಕುವುದೆಂಬೆ ನಿನ್ನ ಧ್ಯಾನವೆ ಅರಿವ ಸ್ಥಿರ ಮಾಳ್ಪುದೆಂಬೆ ಶರಧಿ ಹೀರುವುದೆಂಬೆ ಸಿರಿ ನೀಡ್ವುದೆಂಬೆ 1 ನಿನ್ನ ಧ್ಯಾನವೆ ದು:ಖದೂರ ಮಾಡುವುದೆಂಬೆ ನಿನ್ನ ಧ್ಯಾನವೆ ಸುಖದ ವಾರಿಧಿಯೆಂಬೆ ನಿನ್ನ ಧ್ಯಾನವೆ ಮುಖ್ಯ ಚಾರುವೇದಗಳೆಂಬೆ ನಿನ್ನ ಧ್ಯಾನವೆ ಜ್ಞಾನಮೂಲಸಾರೆಂಬೆ 2 ನಿನ್ನ ಧ್ಯಾನವೆ ತತ್ವರೂಪವಾಗಿಹ್ಯದೆಂಬೆ ನಿನ್ನ ಧ್ಯಾನವೆ ಮುಕ್ತಿಮೂಲಾಧಾರೆಂಬೆ ನಿನ್ನ ಧ್ಯಾನವೆ ಭಕ್ತ ಜನಪ್ರಾಣಪದಕೆಂಬೆ ಎನ್ನಯ್ಯ ಶ್ರೀರಾಮ ನಿನ್ನಿಂದೆ ನಾನೆಂಬೆ 3
--------------
ರಾಮದಾಸರು
ಇನ್ನೇನು ಭಯವಿಲ್ಲನಿನಗೆ ಪಾದ ಭಜಿಸೊ ಮನದೊಳಗೆ ಪ ಬನ್ನಗೊಳಿಸುವಾ ವ್ಯಾಧಿ ಮುನ್ನೆ ಬಾರದೋ ಮಗುವೇ ಅ.ಪ ಕರ್ಮ ಶೇಷದಲಿಂದ ಈ ವಿಧದ ವ್ಯಾಧಿ ಸಂಭವಿಸಿತಲ್ಲಾ ಪಾದ ಸೇವೆ ಸತ್ಕಾರದಿಂದಲೇ ತಾವಕÀನು ನೀನೆಂದು ಗುರುರಾಯ ಪೊರೆವಾ 1 ಏನು ಕರುಣವೊ ಗುರುವರಗೆ ನಿನ್ನಲಿ ನೀನೇನು ಧನ್ಯನೋ ಈ ಲೋಕದಲ್ಲೀ ದೀನಭಾವವನೋಡಿ ದೀನವತ್ಸಲಬಂದು ತಾನೆ ಕರುಣದಿ ಪೊರೆದಮೇಲೇ2 ಅರಿಯದಿಹ ನರರಿಗಾಶ್ಚರ್ಯ ತೋರಲೋಸುಗದಿ ಮರೆಯದಂತೆ ಮನಕೆ ಕುರುಹು ಮಾಡಿ ಧರೆಯೊಳಗೀ ಗುರುವರಗೆ ಸರಿಯಿಲ್ಲ ಗುರುಜಗನ್ನಾಥ ವಿಠಲ ತಾನೇ ಬಲ್ಲಾ 3
--------------
ಗುರುಜಗನ್ನಾಥದಾಸರು
ಇನ್ಯಾಕೆ ಭವಬಾಧೆ ಇವಗೆ ಪನ್ನಂಗಶಯನನಡಿ ಚೆನ್ನಾಗಿ ಭಜಿಪವಗೆ ಪ ದುರಿತ ದುರ್ಗುಣಗಳನು ತರಿದೊಟ್ಟಿ ನ ಶ್ವರದ ಸಿರಿಯನಾಪೇಕ್ಷಿಸಿದೆ ನಿರುತ ಮಾನಸದಿ ಪರಕೆ ಪರತರವೆನಿಪ ಹರಿಯಂಘ್ರಿ ಎಡೆಬಿಡದೆ ಸ್ಮರಿಸುತ ಮನದೊಳಗೆ ಹರುಷಬರುವವಗೆ 1 ಹೀನಸಂಸಾರದ ನಾನಾ ಸಂಪದವೆಲ್ಲ ಶ್ವಾನನ ಕನಸಿನಂತೇನಿಲ್ಲವೆನುತ ಜ್ಞಾನದೊಳಳವಟ್ಟು ಜಾನಕೀಶನ ಧ್ಯಾನ ಮಾನಸದಿ ಒಲಿಸಿಕೊಂಡಾನಂದಿಸುವವಗೆ 2 ಹೇಸಿಯ ಪ್ರಪಂಚದ್ವಾಸನವನಳುಕಿಸಿ ದಾಸಜನ ಸಂಪದವೆ ಶಾಶ್ವತವೆನುತ ಶ್ರೀಶ ಶ್ರೀರಾಮನ ಸಾಸರನಾಮಗಳ ಧ್ಯಾಸದ್ಹೊಗಳುತ ಸಂತೋಷದಿರುವವಗೆ 3
--------------
ರಾಮದಾಸರು
ಇನ್ಯಾತಕನುಮಾನವಯ್ಯಾ ಪ ಅನ್ಯಥಾ ಗತಿ ಕಾಣೆ ನಿನ್ನ ಚರಣಗಳಾಣೆ ಅ.ಪ. ನಾಶರಹಿತನೆ ನಮಗೆ ಏಸೇಸು ಕಲ್ಪಕ್ಕು ವಾಸ ಏಕತ್ರದಲ್ಲಿ ನೀ ಸಾಕ್ಷಿಯಾಗಿದ್ದು ದಾಸನಾದವಗಪ್ರ- ಯಾಸದಿ ಫಲಗಳುಣಿಸಿ ಲೇಶ ಘನಮಾಡಿ ಸಂತೋಷಪಡುವಾ ನಿನ್ನ ದ್ವೇಷಿ ನಾನಲ್ಲವಯ್ಯ ದೇಶಕಾಲಾದಿಗಳಿಗೀಶ ನೀನೆಂದರಿದು ದಾಸನಾಗಿರುವೆನೆಂದಾಶೆ ಪುಟ್ಟಿದ ಬಳಿಕ 1 ನಿತ್ಯ ತೃಪ್ತನೆ ನಿನ್ನ ಕೃತ್ಯಕೇನೆಂಬೆನೋ ಸತ್ಯಸಂಕಲ್ಪ ಹರಿಯೇ ಮೃತ್ಯುಮಾರಿಗಳೆನಗೆ ಹತ್ತಿಕೊಂಡದರಿಂದ ಸತ್ತುಪುಟ್ಟುವೆಯಿನ್ನು ದತ್ತಕರ್ತೃತ್ವ ಬೆನ್ಹತ್ತಿಕೊಂಡದರಲ್ಲಿ ಅತ್ಯಪರಾಧಿಯಂದತ್ತ ಮೊಗದಿರುಗದಿರು ಭೃತ್ಯವತ್ಸಲನೆಂದಗತ್ಯ ಮನಸೋತ ಬಳಿಕ 2 ವೇದವೇದ್ಯ ಸ್ವಗತ ಭೇದವರ್ಜಿತ ಪೂರ್ಣ ಮಾಧವ ಮಹಿದಾಸ ಆದಿನಾರಾಯಣ ವಿನೋದ ವಿಷ್ವಕ್ಸೇನ ಶ್ರೀದವಿಠಲಾ ನಿನ್ನ ಕ್ರೋಧ ವರರೂಪ- ವಾದ ವಾರ್ತೆಯು ಕೇಳಿ ಧೈರ್ಯಬಿಡದಾ ಬಳಿಕಿನ್ನು 3
--------------
ಶ್ರೀದವಿಠಲರು
ಇರಬೇಕು ನಿಂದಕರು ಸಜ್ಜನರಿಗೆ ಪ ದುರಿತ ರಾಶಿಗಳ ಪರಿಹರಿಸಲೋಸುಗ ಅ.ಪ. ಕಲುಷ ಕರ್ಮವ ಮಾಡೆ ಕಳೆವರಿನ್ನಾರೆಂದು ಕಮಲಭವನು ತಿಳಿದು ನಿರ್ಮಿಸಿದವನಿಯೊಳಗೆ ನಿಂದಕರ ಕಲುಷರನ ಮಾಡಿ ತನ್ನವರ ಸಲಹುವ 1 ದಿವಿಜರಿಳೆಯೊಳಗೆ ಜನ್ಮಗಳೊಲ್ಲೆವೆಂದಬ್ಜ ಭವಗೆ ಮೊರೆಯಿಡಲು ವರವಿತ್ತನಂದು ಕರ್ಮ ಮಾಡಿದರು ಸರಿಯೆತ ನ್ನವನೆನಿಸದವಗೆ ತಜ್ಜನ್ಯ ಫಲ ಬರಲೆಂದು 2 ಮಾನವಾಧಮ ಜನರು ನೋಡಿ ಸಹಿಸದಲೆ ಹೀನ ಮತಿಯಿಂದ ಮಾತುಗಳಾಡಲು ಭಾನು ಮಂಡಲಕೆ ಮೊಗವೆತ್ತಿ ಉಗುಳಿದರೆ ನ್ನಾನನವೆ ತೊಯ್ವುದಲ್ಲದರ್ಕಗೇನಪಮಾನ 3 ಮಲವ ತೊಳೆವಳು ತಾಯಿ ಕೈಗಳಿಂದಲಿ ನಿತ್ಯ ತೊಳೆವ ನಿಂದಕ ತನ್ನ ನಾಲಗಿಂದ ಬಲು ಮಿತ್ರನಿವನೆಂದು ಕರೆದು ಮನ್ನಿಸಬೇಕು ಹಲವು ಮಹ ಪಾಪಗಳ ಕಳೆದು ಪುಣ್ಯವನೀವ 4 ಅನುಭವಿಪ ದುಷ್ಕರ್ಮಗಳ ಜನ್ಯ ಫಲವು ತ ನ್ನಣುಗರಿಗೆ ಅಪವಾದ ರೂಪದಿಂದ ಉಣಿಸಿ ಮುಕ್ತರ ಮಾಡಿ ಸಂತೈಪ ನರಕ ಯಾ ತನೆಗಳವರಿಗೆ ಇಲ್ಲದುದರಿಂದ ಎಂದೆಂದೂ 5 ಮನುಜಾಧಮರಿಗೆ ಹರಿದಾಸರಲಿ ದ್ವೇಷ ವೆನಿಪ ಸಾಧನವೆ ನಿಸ್ಸಂದೇಹವು ಅನುತಾಪ ಬಿಡದೆ ಹರುಷಿತರಾಗಿ ನಿಷ್ಪ್ರಯೋ ಜನದಿ ಹರಿಪದಾಬ್ಜ ಭಜಿಪ ಭಜಕರಿಗೆ 6 ಲೋಕದೊಳು ನಿರ್ಮಿಸಿದನಿರ್ವರನು ಹರಿ ತಾನು ಭೂ ಕೋವಿದರ ಮಲವು ಪೋಗಲೆಂದು ಶ್ರೀ ಕರಾರ್ಚಿತ ಜಗನ್ನಾಥವಿಠಲ ಗ್ರಾಮ ಸೂಕರರು ನಿಂದಕರು ಕರುಣಾಳು ಇಳೆಯೊಳಗೆ 7
--------------
ಜಗನ್ನಾಥದಾಸರು
ಇರಲಯ್ಯಾ ಶ್ರೀಹರಿ ಇರಲಯ್ಯಾ ದಾಸನ ಮೇಲೆ ದಯೆ ಪ ಮರಿಯಾದೆ ಹೋಗಲಿ ಮರಿಯಾದೆ ಇರಲಿ ಧರೆಯಮೇಲೆ ಇವ ಇರುವತನಕ ದಯೆ 1 ದು:ಖದಿಂದಿರಲಿ ನಾ ಸುಖದಿಂದಿರಲಿ ನಿಖಿಲರು ಜರಿಯಲಿ ಭಕುತನಮೇಲೆ ದಯೆ 2 ಬಂದದು ಬರಲಿ ಮಮ ತಂದೆ ಶ್ರೀರಾಮ ನಿಮ್ಮ ಬಂಧುರಧ್ಯಾನಮಾತ್ರವೊಂದೆನ್ನಗಲದಂತೆ 3
--------------
ರಾಮದಾಸರು
ಇಲ್ಲದ ಪದಾರ್ಥಕ್ಕೆ ಏನೇನೋ ಹೆಸರು ಬಿಡಿ ಪ ಬಲ್ಲೆ ಇವೆಲ್ಲಾ ನಾನೆಂಬುವರು ದುರ್ಜನರು | ನಿಜ ಅ.ಪ ನಾವೇ ದೇವರ ಮಾಡಿದೆವೋ ದೇವರು ನಮ್ಮನು ಮಾಡಿದನೋ ಭಾವಿಸಿ ನೋಡಿದರೆ ದೈವ ನಾವಲ್ಲದ್ಯಾರು 1 ವಿಷ್ಣು ಈಶ್ವರನು ಬ್ರಹ್ಮ ಎಲ್ಲಿರುವರು ನಾವೆ ವಿಶ್ವವ್ಯಾಪಕರು ವಿವಿಧ ರೂಪವಾಗಿಹೆವು 2 ಸರ್ವವೂ ಸುಳ್ಳವನಿಗೆ 3 ಬೆಳಕಿಗೆ ಕತ್ತಲು ವೈರಿ ಕತ್ತಲಿಗೆ ಬೆಳಕು ಶತ್ರು ಹೊಳವಿಗಿಂತಲೂ ಕತ್ತಲೆಯೇ ಲೇಸು ನಮಗೆ 4 ಪರಿಯಲಿ ನಿರುತ ಸಂಸಾರ ಚಕ್ರದಿ ದುರುಳರು ತೊಳಲುವರು 5
--------------
ಗುರುರಾಮವಿಠಲ
ಇಲ್ಲವಿಲ್ಲವು ಮಾಯೆಯಿಲ್ಲ ಬ್ರಹ್ಮರ ಹೊಳೆವುಬಲ್ಲವನರಿಯಲವ ಬ್ರಹ್ಮವಿನಾ ಜಗವಿಲ್ಲ ಪ ಕಾಷ್ಟದಲಿ ರೂಪು ನಾಮಗಳೆಷ್ಟು ಆದರೇನುಕಾಷ್ಟದಾ ಹೊರತು ಮತ್ತಿನ್ನೊಂದು ಉಂಟೇಶ್ರೇಷ್ಠ ಮೊದಲಾಗಿ ತೃಣವರೆಗೆ ದಿಕ್ಕುಗಳೆಲ್ಲಶಿಷ್ಟಬ್ರಹ್ಮವಲ್ಲದೆ ಬೇರೆ ಜಗವಿಲ್ಲ1 ಸುರರು ಯಮುನೆ ಪರ್ವತವೆಲ್ಲಘನಬ್ರಹ್ಮವಲ್ಲದಲೆ ಬೇರೆ ಜಗವಿಲ್ಲ 2 ಬ್ರಹ್ಮ ಆಧಾರದಲಿ ತೋರುತಡಗುವುದು ಮಾಯೆಸುಮ್ಮನೆಯೆ ಮೃಗಜಲವು ತೋರಡಗಿದಾತಹೆಮ್ಮೆ ತಾನೆಷ್ಟು ಮಾತಿನ ಮಾತ್ರವಲ್ಲದಲೆನಿರ್ಮಲ ಚಿದಾನಂದ ವಿನಾ ಜಗವಿಲ್ಲ 3
--------------
ಚಿದಾನಂದ ಅವಧೂತರು
ಇಲ್ಲಿ ಬಾರೋ ಹರಿ ತಾತ್ಸಾರ ಥರ ಪರಿ ಪ. ಬಿಲ್ಲಹಬ್ಬದ ನೆವನದಿಂದತಿ ಮಲ್ಲಕಂಸಾದಿಗಳ ಮಡುಹಿದ ಬಲ್ಲಿದನೆ ಲೋಕದಲಿ ಸರಿ ನಿನ- ಗಿಲ್ಲ ಶ್ರೀ ಭೂನಲ್ಲ ಕೃಪೆಯಿಂದ ಅ.ಪ. ಶ್ರೀ ಪಯೋಜಭವ ಶಿವ ಶಕ್ರಾದಿಗಳನ್ನು ಕಾಪಾಡಿ ಖಳಕುಲವ ಖಂಡಿಪ ಸರ್ವ ಭೂಪತಿ ತವ ಪಾದವ ನಂಬಿರಲೆನ್ನ ದುರಿತ ಮ- ಹಾಪಯೋಧಿಯೊಳಿಳಿಸಿದರೆ ಸುಜ- ನಾಪವಾದವು ಬಿಡದು ನಿನ್ನ ಪ- ದೇ ಪದೇ ಇನ್ನೆಷ್ಟು ಪೊಗಳಲಿ 1 ಕರ್ಮ ಕೊಡುವುದು ಫಲವೆಂಬ ನುಡಿಯನುಭವಸಿದ್ಧವು ಆದರು ಜಗ ದೊಡೆಯಗಾವದಸಾಧ್ಯವು ನೀ ಮಾಳ್ಪ ಚೋದ್ಯವು ನುಡಿ ಮನೋಗತಿಗಳುಕವೆಂಬೀ ಸಡಗರವು ವೇದ ಪ್ರಸಿದ್ಧವು ನಡೆಯಲೇಳಲು ಶಕ್ತಿ ಕುಂದಿದ ಬಡವನನು ಕೈಪಿಡಿದ ತವಕದೊಳ್ 2 ಬೆಟ್ಟದೊಡೆಯ ವೆಂಕಟೇಶ ನೀ ಗತಿ ಎಂದು ಘಟ್ಯಾಗಿ ನಂಬಿರುವ ದಾಸನ ಕೈಯ ಬಿಟ್ಟರೆ ಸರಿಯೆ ದೇವ ಸಜ್ಜನರ ಕಾವ ಸಟ್ಟಸ ಶಿಗಡಿ ನೀರ ಸುರಿಸುತ ಕಟ್ಟಿಕಟ್ಟಿಸುತದರ ಛಾಯ ದೊ - ಳಿಟ್ಟ ಗದ್ದಿಗೆಯಲ್ಲಿ ಕುಳಿತು ಸ- ಮೃಷ್ಟ ಸುಖವುಂಬರಸನಂದದಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಇಲ್ಲೆಂದೆ ಇಲ್ಲೆಂದೆ ಭಕ್ತಜನಕೆ ಭಯ ಇಲ್ಲೆಂದೆ ಇಲ್ಲೆಂದೆ ಪ ಪಾದ ಎಲ್ಲ ಸಂಪದವೆಂದು ಬಲ್ಲಂಥ ಭಕ್ತರಿಗೆಲ್ಲರೀತಿಲಿ ಭಯಅ.ಪ ವಂದಿಸಿ ನುಡಿದರೆ ಬಂತೇನೆಂದೆ ನಿಂದಿಸಿ ನುಡಿಯಲು ಕುಂದೇನೆಂದೆ ಸಿಂಧುಶಯನನ ತಂದು ಮಾನಸವೆಂಬ ಮಂದಿರದಿಟ್ಟವರಿಗೆಂದೆಂದಿರದು ಭಯ 1 ಬಡತನ ಬಂದರೆ ಮಿಡುಕೇನೆಂದೆ ಕಡುಸಿರಿಯಿರ್ದರೆ ನಿಜವೇನೆಂದೆ ಜಡಭವ ಕನಸೆಂದು ದೃಢವಹಿಸೊಡಲೊಳು ಮೃಡಸಿಧರನೆ ನಿಮ್ಮ ಆಡುವರಿಗೆ ಭಯ 2 ಪೊಡವಿಪ ಮೆಚ್ಚಲು ಕೊಡುವುದೇನೆಂದೆ ಕಡುಕೋಪಗೊಂಡರೆ ಕೆಡುವುದೇನೆಂದೆ ಪೊಡವೀರೇಳನು ಒಡಲೊಳಗಿಟ್ಟವನಡಿ ಬಿಡುದಿರುವರಿಗಿಡಿ ಭುವನದ ಭಯ 3 ಸತಿಸುತರಿದ್ದರೆ ಹಿತವೇನೆಂದೆ ಸತಿಸುತರಿಲ್ಲದಿರೆ ಅಹಿತವೇನೆಂದೆ ರತಿಪತಿಪಿತನಡಿ ಸತತದಿ ಗೂಡಿಟ್ಟು ನುತಿಪ ಭಕ್ತರಿಗೆ ಕ್ಷಿತಿಮೇಲೇತರ ಭಯ 4 ಭೂಷಣ ಮಾಡಲದೊಂದೇ ಅಂದೆ ದೂಷಣ ಮಾಡಲದೊಂದೇ ಅಂದೆ ಶ್ರೀಶ ಶ್ರೀರಾಮನ ಸಾಸಿರ ನಾಮದ ಧ್ಯಾಸದಿಟ್ಟವರಿಗೇಸು ಕಾಲದಿ ಭಯ 5
--------------
ರಾಮದಾಸರು