ಒಟ್ಟು 2086 ಕಡೆಗಳಲ್ಲಿ , 116 ದಾಸರು , 1514 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಲಿಸಯ್ಯ ಪದುಮವದನ ಪಾಲಸಾಗರಶಾಯಿ ನಂಬಿದೆ ಪ ಪಾಲ ಸುಜನಶೀಲ ಸುಗುಣ ಕಾಲಕಾಲದಿ ತವ ಭಜನ ಅ.ಪ ನಾದಬ್ರಹ್ಮನಾದಿಕಾಲದ ಆದಿವಸ್ತು ಭಜಿಪೆ ಸದಾ ಮೋದದೀಯೋ ಎನಗೆ ಮುದ ಭೇದವಾದ ಗೆಲಿದ ವಿಮಲ ಸಾಧುಸುಜನರಮಿತವರ್ತನ ವೇದವೇದಾಂತದೊಳು ಗೌಪ್ಯ ವಾದ ನಿಜ ಬೀಜಮಂತ್ರ 1 ಮಾಲತುಲಸಿ ಕೌಸ್ತುಭಾಂಬರ ಮೇಲುನಿಲಯ ಕುಜನಕುಠಾರ ಶೀಲ ಸುಗುಣ ಕರುಣಾಮಂದಿರ ಕೀಳುತನದಿ ಮಾಡಿದ ಎನ್ನ ಹಾಳು ಪಾಪಗಳನು ಸುಟ್ಟು ಬಾಲನೆಂದು ಕರುಣವಿಟ್ಟು ಮೂಲತತ್ತ್ವಕಿಳಿಸು ದಯದಿ 2 ಭಾಸುರಕೋಟಿವರಪ್ರಕಾಶ ಸಾಸಿರನಾಮ ಜಗಜೀವೇಶ ದೋಷಹರಣ ಭವವಿನಾಶ ದಾಸಜನರ ಪ್ರಾಣಪ್ರಿಯ ಪೋಷಿಸೆನ್ನನುಮೇಷÀ ನಿಮ್ಮ ದಾಸರ ದಾಸನೆನಿಸಿ ಶೇಷಶಯನ ಶ್ರೀಶ ಶ್ರೀರಾಮ 3
--------------
ರಾಮದಾಸರು
ಪಾಲಿಸು ಮರೆಯದೆನ್ನ ಪಾಲ ತ್ರಿಜಗಮೋಹ ಮಾಲಕೌಸ್ತುಭ ಸತ್ಯಭಾಮಾ ಲೋಲ ಭಕ್ತಜನರ ಪ್ರೇಮ ಕಾಲಕಾಲದಿ ನಿಮ್ಮ ಭಜನಲೋಲಜನರೊಳಿರಿಸಿ ಎನ್ನ ಬಾಲನೆಂದು ಕರುಣದಾಳು ಕಾಳರಕ್ಕಸಕುಲಸಂಹಾರ ಪ ವಾರಿಧಿಯೊಳು ಮುಳುಗಿದ ವೇದಗಳ ತಂದು ವಾರಿಜಾಸನಗೊಪ್ಪಿಸಿದಿ ಸಾಧುಗಳ ಬಂಧು ವಾರಿಧಿಯೊಳು ವಾರಿಧಿಯ ಕಡೆದಿ ವಾರಿಧಿಯೊಳು ವಾಸನಾದಿ ವಾರಿಧಿಸುತೆಪತಿ ನೀನಾದಿ ವಾರಿಧಿಯನು ಬಂಧಿಸಿ ಮತ್ತೆ ವಾರಿಧಿಯ ಮಧ್ಯದ ಪುರವ ಸೂರೆಗೈದಾಪಾರಮಹಿಮ ಘೋರತಾಪದಿ ಬಿಡದೆ ದೇವ1 ಮಾಯಾಜಗವ ತುಂಬಿದಿ ಮಹರಮಣ ಹರಿಯೆ ಮಾಯದ ಮರುಣುಣಿಸಿದಿ ವೈಕುಂಠಪತಿಯೆ ಮಾಯೆಗೆ ಮಾಯೆಯೆನಿಸಿದಿ ಮಾಯೆಹರನಾದಿ ಮಾಯದಿಂ ಬಲಿಯನ್ನು ತುಳಿದಿ ಕಶ್ಯಪನ ಅಳಿದಿ ಮಾಯದ್ಹಿರಣ್ಯಕನ ಸೀಳಿದಿ ಮಾಯದಿಂ ಮಾಯೆಮೂಗು ಕುಯ್ಸಿದಿ ಮಾಯಮೃಗವನು ಮಾಯದಿಂ ಕೊಂದಿ ಮಾಯದೆನ್ನ ನೂಕದೆ ದೇವ 2 ಕಪಟಕೋಟಿಗಳನ್ನಳಿದಿ ಚಪಲಸುರಪನ ಕಪಟಗರುವವ ಮುರಿದಿ ಲಕುಮಿರಮಣ ಕಪಟನಾಟಕ ನೆನಿಸಿದಿ ಕಪಟಹರನಾದಿ ಕಪಟ ಅಸುವ ಸೆಳೆದಿ ಕಪಟ ಕಂಸನ ಶಿರವಮೆಟ್ಟಿದಿ ಕಪಟಿಗಳ ಮಹ ಕಪಟದಿಂ ಕೊಂದಿ ಶ್ರೀರಾಮ3
--------------
ರಾಮದಾಸರು
ಪಾಲಿಸೆ ಸರಸ್ವತಿ ಪಾಲಿಸೆ ಪಾಲಿಸೆ ನಿನ್ನಯ ಪಾರಿಗೆ ಬಂದೆನುಕಾಲಕಾಲಕೆ ನಿನ್ನಯ ಕಾಲಿಗೆರಗುವೆ ಪಾಲಿಸೆ ಪ. ಆದಿ ಬ್ರಹ್ಮನರಾಣಿಯೆ ವೇದಕ್ಕ ಭಿಮಾನಿಯೆಮೋದ ಗಾಯನ ಕುಶಲಳೆಮೋದ ಗಾಯನ ಕುಶಲಳೆ ಸರಸ್ವತಿ ನೀ ದಯಮಾಡಿ ಮತಿಯ ಕೊಡು 1 ಹೊನ್ನವರೆ ಹೊಸ ಕಪ್ಪು ಬೆನ್ನಿನ ಮ್ಯಾಲಿನ ಹೆರಳುಕಿನ್ನರಿ ನಿನ್ನ ಬಲಗೈಯಕಿನ್ನರಿ ನಿನ್ನ ಬಲಗೈಯ್ಯಲಿ ಹಿಡಕೊಂಡುಖನಿ ಬಾ ನಮ್ಮ ವಚನಕ್ಕೆ 2 ಮಿತ್ರಿ ಸರಸ್ವತಿಗೆ ಮುತ್ತಿನ ಉಡಿಯಕ್ಕಿಮತ್ತೆ ಮಲ್ಲಿಗೆಯ ನೆನೆದಂಡೆಮತ್ತೆ ಮಲ್ಲಿಗೆಯ ನೆನೆದಂಡೆ ತಂದಿದ್ದೆಪ್ರತ್ಯಕ್ಷವಾಗ ಸಭೆಯೊಳು3 ಅರಳು ಮಲ್ಲಿಗೆ ನೆನೆದಂಡೆ ತಂದಿಹೆತಡೆಯದೆ ನಮಗೆ ವರವ ಕೊಡು 4 ಗುಜ್ಜಿ ಸರಸ್ವತಿಗೆ ಗೆಜ್ಜೆ ಸರಪಳಿಯಿಟ್ಟು ವಜ್ರಮಾಣಿಕ್ಯ ದಾಭರಣವಜ್ರಮಾಣಿಕ್ಯ ದಾಭರಣ ಭೂಷಿತಳಾಗಿನಿರ್ಜರೊಳುತ್ತಮಳೆ ನಡೆ ಮುಂದೆ 5 ಹರದಿ ಸರಸ್ವತಿ ಸರಿಗೆಸರಪಳಿಯಿಟ್ಟುಜರದ ಸೀರೆಯನೆ ನಿರಿದುಟ್ಟು ಜರದ ಸೀರೆಯನೆ ನಿರಿದುಟ್ಟು ಬಾರಮ್ಮದೊರೆ ರಾಮೇಶನ ಅರಮನೆಗೆ6
--------------
ಗಲಗಲಿಅವ್ವನವರು
ಪಾಲಿಸೆನ್ನ ಗೋಪಾಲ ಕೃಷ್ಣ ಪ ಪಾಲಿಸೆನ್ನ ದಧಿಪಾಲ ಮುಖರ ಗೋ ಪಾಲಬಾಲ ಕೃಪಾಲಯ ಹರಿಯೇ ಅ.ಪ. ಭವ ರುಂಡಮಾಲ ಮೇ ಷಾಂಡ ಪ್ರಮುಖ ಸುರಷಂಡ ಮಂಡಿತನೆ 1 ಗೋಪಿ ಗೋಪಾಲ ವೃಷ್ಣಿಕುಲ ದೀಪ ಶ್ರೀಪಶಿವಚಾಪ ಭಂಜನಾ 2 ಅಂಡಜಾಧಿಪ ಪ್ರಕಾಂಡ ಪೀಠ ಕೋ ದಂಡಪಾಣಿ ಬ್ರಹ್ಮಾಂಡ ನಾಯಕ 3 ವ್ಯಾಪ್ತ ಗೋಪ್ತ ಜಗದಾಪ್ತ ದೋಷ ನಿ ರ್ಲಿಪ್ತ ಪ್ರಾಪ್ತಗತಸುಪ್ತ ಸುಷುಪ್ತಾ 4 ವೇದವೇದ್ಯ ಬ್ರಹ್ಮಾದಿವಂದ್ಯ ಸುಖ ಬೋಧಪೂರ್ಣ ಬ್ರಹ್ಮೋದನ ಭೋಕ್ತಾ 5 ಅಧ್ವರೇಶ ಲೊಕೋದ್ಧಾರÀ ಪಾಣಿ ಸ ರಿದ್ವರ ಪಿತಗುರು ಮಧ್ವವಲ್ಲಭಾ6 ಪೋತ ವೇಷದರ ಪೊತನಾರಿ ಪುರು ಹೂತ ಮದಹ ಜಗನ್ನಾಥ ವಿಠ್ಠಲ 7
--------------
ಜಗನ್ನಾಥದಾಸರು
ಪಾಲಿಸೆನ್ನ ಪಾವ9ತೀಶನೆ | ಮಹಾನುಭಾವ | ನೀಲಕಂಠ ರುಂಡಮಾಲನೆ ಪ ಪಾಲಿಸೆನ್ನ ಭವದೊಳಿಂದು | ಬಾಲಚಂದ್ರಧರನೆ ಬಂದು | ಕಾಲಕಾಲ ದುರಿತಜಾಲ | ಮೂಲನಾಶಗೈದುವೊಲಿದು ಅ.ಪ. ಅಂತರಾತ್ಮನಖಿಲ ಪೋಷಣ | ಕಪಾಲಧರ ದು-| ರಂತ ಮಹಿಮ ತ್ರಿಗುಣ ಕಾರಣ || ಸಂತಸುಜನ ಚಿಂತಿತಾಥ9 | ಭವಾಬ್ಧಿ ಪೋತ | ಅಂತಕಾಂತನಖಿಲ ಭುವನ | ಕ್ರಾಂತಾನಂತ ಮಹಿಮ ದೇವ 1 ಭುಜಗಾಭರಣ ಅಜಸುರಾಚಿ9ತ | ತ್ರಿಶೂಲಧಾರ| ಸುಜನ ಬಂಧು ಮುಕ್ತಿದಾಯಕ || ತ್ರಿಜಗದೀಶ ತ್ರಿಪುರನಾಶ | ರಜತಶೈಲವಾಸ ಭಕ್ತ | ನಿಜಮನೋರಥಾಬ್ಧಿ ಚಂದ್ರ | ಭಜಿಸುವೆ ಚರಣಾರವಿಂದ 2 ಆದಿಮಧ್ಯಾಂತರಾತ್ಮನೆ | ಜಗನ್ನಿವಾಸ | ವೇದವೇದ್ಯ ಸುಜನಸೇವ್ಯನೆ || ಆದಿಮಾಯೆಯಾದಿಮೂಲ | ಆದಿಪುರುಷ ಶ್ರೀನಿವಾಸ | ಸಾದರದೊಳೆನ್ನ ಕಾಯ್ದು | ಮೋದದಿಂದ ಸಲಹೊ ದೇವ 3
--------------
ಸದಾನಂದರು
ಪಾಲಿಸೆನ್ನನು ಪಂಪಾಕ್ಷೇತ್ರವಾಸ ಫಾಲಲೋಚನ ಶಂಭೋ ವ್ಯೋಮಕೇಶ ಪ ನೀಲ ಲೋಹಿತ ವೀತ | ಚೈಲ ಭೂಷಿತ ಭಸಿತ ಕಾಲಾರಿ ಶಿವ ದ್ರೌಣಿ | ಶೂಲ ಪಾಣಿ || ಕಾಲ ಕೂಟವ ಮೆದ್ದು ಕೊಂಡ ಮೇತೌಷಧವನಿತ್ತು 1 ವ್ಯಾಧರೂಪದಿ ರಣದಿ ಕಾದು ಪಾರ್ಥಗೆ ಸೋತು ನೀದಯದಿ ದಿವ್ಯಾಸ್ತ್ರ ಕರುಣಿಸಿದೆಯೋ ಮೇದಿನೀಶಗೆ ಶಾಸ್ತ್ರ ಬೋಧಿಸಿದ ಮುನಿವರ್ಯ ವೇದನಂದನ ನಿನ್ನ ಪಾದಕ್ಕೆ ನಮಿಸುವೆನು 2 ಕಾಮಾರಿ ಸುಪವಿತ್ರ | ಸೋಮಾರ್ಕಶಿಖಿ ನೇತ್ರ ಶಾಮಸುಂದರವಿಠಲ ಸ್ವಾಮಿ ಮಿತ್ರ ಭೀಮ ಪಾವನಗಾತ್ರ ಪ್ರೇಮಾಬ್ಧಿ ಸುಚರಿತ್ರ ಕಳತ್ರ | ಮಹಿಮ ಚಿತ್ರಾ 3
--------------
ಶಾಮಸುಂದರ ವಿಠಲ
ಪಾಲಿಸೈಯ್ಯ ಇವಳಾ ಶ್ರೀ ಭೂತರಾಜರ ಹೃನ್ಮಂದಿರ ನಿಲಯ ಧವಳ ಗಂಗಾವಾಸಿ ಹಯಮುಖನ ತನಯ ವಾಗೀಶಗುರು ಅರ್ಚಕಾ ಪ ನಿತ್ಯ ನಿನ್ನಲ್ಲಿಶ್ರೀಹರಿಯು ಅನುಗಾಲ ಕೋಲಾಹಲದೆ ಮಾಳ್ಪ ಆನಂದ ಕ್ರೀಡೆಗಳ ಕಾರುಣ್ಯರೂಪದಲಿ 1 ಸತಿ ಭಾರತಿಯು ಪರುಶುಕ್ಲಳೊ ಸತತ ಧ್ವನ್ತದುರಾಗಮಾ ನೀನೆಂದು ಸಾರುತಿದೆ ಶೃತಿಯು ಶೃತಿವೇದ್ಯ ನೀನೈಯ್ಯ ಶೃತಿಯಿಂದ ನೀ ಗಮ್ಯ ಶೃತ್ಯರ್ಥರೂಪ ನೀನೆನಗೆ ಸತತಾ 2 ನಾ ಪಾಮರಕೆ ಪಾಮರನು ಎಂದೆಂದು ಮಮಸ್ವಾಮಿ ನಾನು ತುತಿಸಲಾಪೆನೆ ನಿನ್ನ ನಿರ್ದೋಷಗುಣರಾಶಿಯಾ ಗಾನಮಾಡಿ ವೈರಾಗ್ಯ ಶಕ್ತಿ ಭಕ್ತ ಯುಕ್ತಿ ರಾಘವ ಎಮಗಿಲ್ಲವೆನುತಾ ಬಾಗಿ ಬಗ್ಗಿ ಹಾರುವುದು ಪೀಠಕೆ ಸತತ ಶಿವಶೇಷ ಗುರುತಾದಿ ಸುರಕೋಲಿನಿಕರಾ 3 ಒಂದು ಅರಿಯದಾಕಂದ ಇಂದಿರೆಯು ನಂಬಿಹಳು ಗತಿದಾತನೆಂದು ಸತತ ಅಂತರಂಗದಿ ನಲಿವ ಮಮತೆ ನಾನಿನ್ನ ನಿಜ ದೂತನೆಂದು ಹೌದಾದರವಳ ಮನ ಸೆಳೆದು ನಿನ್ನಲ್ಲಿ ಶ್ರೀಕೃಷ್ಣನಲಿ ಬಿಡು ಅವಳ ವಾಜಿವದನಾರ್ಚಿಶ್ರೀವಾದಿರಾಜ 4 ಜಾಗರ ಭಾರತೀಶ 5
--------------
ಗುರುತಂದೆವರದಗೋಪಾಲವಿಠಲರು
ಪಾಲಿಸೊ ಪರಮ ಪಾವನ್ನ ಕಮ ಲಾಲಯ ನಂಬಿದೆ ನಿನ್ನ ಆಹ ನಖ ತೇಜ ಮೂರ್ಲೋಕದರಸೆ ನೀನಾಲಯ ಬಿಡದಲೆ ಅ.ಪ ಹಿಂದೆ ಪ್ರಹ್ಲಾದನ ಮೊರೆಯ ಕೇಳಿ ಬಂದು ಕಾಯಿದೆ ಭಕ್ತ ಪ್ರಿಯ ಸುಖ ಸಂದೋಹ ಮೂರುತಿ ಆಯ ತಾಕ್ಷ ಎಂದೆಂದು ಬಿಡದಿರು ಕೈಯ ಆಹ ವೃಂದಾರ ಕೇಂದ್ರಗೆ ಬಂದ ದುರಿತಂಗಳ ಹಿಂದೆ ಮಾಡಿ ಕಾಯ್ದೆ ಇಂದಿರಾರಮಣನೆ 1 ಹರಣದಲ್ಲಿ ನಿನ್ನ ರೂಪ ತೋರಿ ಪರಿಹರಿಸೊ ಎನ್ನ ಪಾಪ ದೂರ ದಿರದಿರು ಹರಿಸಪ್ತ ದ್ವೀಪಾಧಿಪ ಸಿರಿಪತಿ ಭಕ್ತ ಸಲ್ಲಾಪ ಆಹ ಕರಣಶುದ್ಧನ ಮಾಡಿ ಕರೆಯೊ ನಿನ್ನ ಬಳಿಗೆ ನರಕಂಠೀರವ ದೇವ ಚರಣ ಆಶ್ರೈಸಿದೆ 2 ಶರಣ ಪಾಲಕನೆಂಬೊ ಬಿರುದು ಕೇಳಿ ತ್ವರಿತದಿ ಬಂದೆನೊ ಅರಿದು ಇನ್ನು ಪರಿ ಅಪರಾಧ ಜರಿದು ಪರತರನೆ ನೋಡೆನ್ನ ಕಣ್ತೆರೆದು ಆಹ ಮರಣ ಜನನಂಗಳ ತರಿದು ಬಿಸುಟು ನಿನ್ನ ಶರಣರ ಸಂಗದಲ್ಲಿರಿಸಿ ಉದ್ಧರಿಸೆನ್ನ 3 ಸಂಸಾರ ಸಾಗರ ದೊಳಗೆ ಎನ್ನ ಹಿಂಸೆ ಮಾಡುವರೇನೊ ಹೀಂಗೆ ನಾನು ಕಂಸಾರಿ ಅನ್ಯರಿಗೆ ಬಾಗೆ ಮತ್ತೆ ಸಂಶಯವಿಲ್ಲ ಮಾತಿಗೆ ಆಹ ಹಂಸ ಡಿಬಿಕರನ್ನು ಧ್ವಂಸ ಮಾಡಿದ ಶೌರಿ ಮೂರ್ತಿ ದಿವಸ ದಿವಸದಲ್ಲಿ 4 ಭವ ಶಕ್ರಾದ್ಯಮರ ಕೈಯ ನಿರುತ ತುತಿಸಿಕೊಂಬ ಧೀರ ಶುಭ ಪರಿಪೂರ್ಣ ಗುಣ ಪಾರಾವರ ಭಕ್ತ ವಾರಿನಿಧಿಗೆ ಚಂದಿರ ಆಹ ಸ್ಮರನ ಕಾಂತಿಯ ನಿರಾಕರಿಸುವ ತೇಜನೆ ಎರವು ಮಾಡದೆ ಹೃತ್ಸರಸಿಜದೊಳು ತೋರಿ 5 ಮೊದಲು ಮತ್ಸ್ಯಾವತಾರದಿ ವೇದ ವಿಧಿಗೆ ತಂದಿತ್ತ ವಿನೋದಿ ಶ ರಧಿಯೊಳು ಸುರರಿಗೋಸ್ಕರದಿ ನೀನು ಸುಧೆಯ ಸಾಧಿಸಿ ಉಣಿಸಿದೆ ಆಹ ಅದುಭೂತ ಭೂಮಿಯ ತೆಗೆದೊಯ್ದುವನ ಕೊಂಡು ಮುದದಿ ಹಿರಣ್ಯಕನುದರ ಬಗಿದ ಧೀರ 6 ಬಲಿಯ ಮನೆಗೆ ಪೋಗಿ ದಾನ ಬೇಡಿ ತುಳಿದೆ ಪಾತಾಳಕ್ಕೆ ಅವನ ಪೆತ್ತ ವಳ ಶಿರ ತರಿದ ಪ್ರವೀಣ ನಿನ್ನ ಬಲಕೆಣೆಗಾಣೆ ರಾವಣನ ಆಹ ತಲೆಯನಿಳುಹಿ ಯದುಕುಲದಿ ಜನಿಸಿ ನೀನು ಲಲನೇರ ವ್ರÀ್ರತವಳಿದಾಶ್ವಾರೂಢನೆ 7 ಮಾನಸ ಪೂಜೆಯ ನೀ ದಯದಿ ಇತ್ತು ಶ್ರೀನಾಥ ಕಳೆ ಭವವ್ಯಾಧಿ ಕಾಯೋ ಅನಾಥ ಬಂಧು ಸುಮೋದಿ ಚತುರಾ ನನಪಿತ ಕೃಪಾಂಬುಧಿ ಆಹ ತಾನೊಬ್ಬರನರಿಯೆ ದಾನ ವಿಲೋಲನೆ ಏನು ಮಾಡುವ ಸಾಧನ ನಿನ್ನದೊ ಹರಿ8 ನಿನ್ನ ಸಂಕಲ್ಪವಲ್ಲದೆ ಇನ್ನು ಅನ್ಯಥಾವಾಗಬಲ್ಲುದೆ ಹೀಂಗೆ ಚೆನ್ನಾಗಿ ನಾ ತಿಳಿಯದೆ ಮಂದ ಮಾನವನಾಗಿ ಬಾಳಿದೆ ಆಹ ಎನ್ನಪರಾಧವ ಇನ್ನು ನೀ ನೋಡದೆ ಮನ್ನಿಸಿ ಕಾಯೋ ಜಗನ್ನಾಥ ವಿಠಲ 9
--------------
ಜಗನ್ನಾಥದಾಸರು
ಪಾಲಿಸೋ ಪರಿಪಾಲಿಸೋ ಪ ಪಾಲಿಸೋ ನೀ ಕಾಲನಾಮಕ-ಶ್ರೀಲೋಲ ಕಾಲಕರ್ಮದಲೆನ್ನಕರುಣಿಸಿ ನೀನೀಗ ಅ.ಪ ದುಷ್ಟಜನರ ಸಂಹಾರಕ-ಸರ್ವ ಶಿಷ್ಟಜನರ ಪರಿಪಾಲಕ-ದೇವ ಸೃಷ್ಟ್ಯಾದ್ಯಷ್ಟಕರ್ತುಕ-ತ್ವದ್ಭಕ್ತರಾ- ಭೀಷ್ಟದಾಯಕಾ 1 ಜಗದ್ಭರಿತ ಜಗದಂತರ್ಯಾಮಿ-ಸರ್ವ ಜಗದಾದ್ಯಂತ ಭಿನ್ನನೇಮಿ-ನೀನೆ ಸ್ವಗತಭೇದಶೂನ್ಯಮಹಿಮಾ ಇನ್ನು ಜಗದ್ಭುಕು ಮಮಕುಲಸ್ವಾಮಿ 2 ಪರಮೇಷ್ಟಿಭವಇಂದ್ರವಂದಿತ-ಕ್ಷರಾ- ಕ್ಷರ ಪುರುಷ ಪೂಜಿತ-ಪಾದ ನಿರವಧಿಕಗುಣಗಣಾನ್ವಿತ ನೀನೆ ಜರಾಮರಣನಾಶ ವರ್ಜಿತ 3 ಮುಕ್ತಾಮುಕ್ತಾಶ್ರಯದೇವನೆ-ಸರ್ವ ಭಕ್ತಮುಕ್ತಿಪ್ರದಾತನೆ-ವ್ಯಕ್ತಾ ವ್ಯಕ್ತಪುರುಷದೇವನೆ ಪುರುಷ- ಸೂಕ್ತಸುಮೇಯ ಅಪ್ರಮೇಯನೆ 4 ಸ್ವರವರ್ಣ ಶಬ್ದವಾಚ್ಯನೆ-ದೇವ ಸುರಾಸುರಾರ್ಚಿತ ಪಾದನೆ ಓಂ- ಕಾರ ಪ್ರಣವ ಪ್ರತಿಪಾದ್ಯನೆ ನಿತ್ಯ ನಿಖಿಳಾಗಮದೊಳು ಸಂಚಾರನೆ5 ಅಚಿಂತ್ಯಾನಂತರೂಪಾತ್ಮಕ-ನಿನ್ನ ಭಜಕರ ಭವಬಂಧ ಮೋಚಕ-ಸರ್ವ ಅಬುಜಾಂಡ ಕೋಟಿನಾಯಕ ನೀನೆ ಜಗದಾದ್ಯಂತ ವ್ಯಾಪಕ6 ವೇದ ವೇದಾಂತ ವೇದ್ಯನೆ-ನೀನೆ ಆದಿಮಧ್ಯಾಂತದೊಳ್ ಖ್ಯಾತನೆ ಗುರು ಮೋದತೀರ್ಥರ ಹೃತ್ಕಾಂತನೆ ಶ್ರೀ ವೇಂಕಟೇಶ ಉರಗಾದ್ರಿವಾಸವಿಠಲನೆ 7
--------------
ಉರಗಾದ್ರಿವಾಸವಿಠಲದಾಸರು
ಪಾಲಿಸೋಯನ್ನ ಪರಾತ್ಪರಾ - ಹರಿ ಪ ಪಾಲಿಸೊ ಬುಧಹಿತ ಫಾಲನಯನನುತ ಲೀಲಾನಟನ ಘಣಿಶೈಲ ನಿಲಯ-ಹರಿ ಅ.ಪ ಜಲಜಭವನ ನಿಜಕುಕ್ಷಿಯೊಳಿದ್ದ ಸುಲಲಿತ ವೇದಾಪಹಾರಿಯ ಕಂಡು ಜಲಜರೂಪಿನಿಂದಾ ಖಳ ಸಂಹರ ಗೈದು ಜಲಜಸಂಭವನಿಗೆ ಒಲಿದ ಮತ್ಸ್ಯಾವತಾರ 1 ಅಂದು ದೂರ್ವಾಸನ ಶಾಪದಿ ಜಗವು ಇಂದಿರೆ ಕರುಣಾವಿಹೀನದಿ ಬಲು ನೊಂದು ಕಂಗೆಡುತಲಿರೆ ಸಿಂಧುಮಥನಗೈದು ಕೂರ್ಮ 2 ಧರಣಿಯನಪಹಾರಗೈಯ್ಯಲು ಬೇಗ ಸೂಕರ ರೂಪವ ತಾಳಿ ಧರಣೀಚೋರನ ಕೊಂದ ಸರಸೀರುಹಾಂಬಕ3 ಸರಸಿಜಜನ ವರದರ್ಪದಿ ಜಗವನುರುಹಿ ತರಳನ ಬಾಧೆಗೈಸಿದ ಬಲು ದುರುಳ ಹಿರಣ್ಯಕನುರವ ನಖದಿಂದ ಸೀಳಿ ಕರುಳಮಾಲೆಯನಿಟ್ಟ ಧುರಧೀರ ನರಹರಿ 4 ಬಲಿಯ ಮೂರಡಿಭೂಮಿ ದಾನವ ಬೇಡಿ ಅಳೆದು ಈರಡಿಮಾಡಿ ಲೋಕವ ಮತ್ತೆ ಉಳಿದೊಂದು ಪಾದದಿ ಬಲಿಯ ತಲೆಯನು ಮೆಟ್ಟಿ ನಲಿದು ಗಂಗೆಯ ಪೆತ್ತ ಚೆಲುವ ವಾಮನರೂಪ5 ಚಕ್ರಾಂಶನಾದ ಕಾರ್ತಿವೀರ್ಯನ ಭುಜ ಚಕ್ರದೊಡನೆ ದುಷ್ಟ ಭೂಪರ ಅತಿ ಅಕ್ರಮವನು ಕಂಡು ವಿಕ್ರಮಾನ್ವಿತ ನೃಪ ಚಕ್ರವ ಮುರಿದ ಮುನಿಚಕ್ರರಕ್ಷಕ ರಾಮ 6 ಕ್ರೂರ ರಾವಣ ಕುಂಭಕರ್ಣರ ಬಲು ಘೋರತನಕೆ ತ್ರಿವೇಶರ ದೊಡ್ಡ ದೂರ ಕೇಳುತ ಮನುಜಾಕಾರವ ಧರಿಸಿ ದೈತ್ಯ ವೀರರ ಮಡುಹಿದ ಶ್ರೀರಾಮ ಮೂರುತಿ 7 ಬಲಭದ್ರನೆಂಬುವ ನಾಮದಿ ಧುರದಿ ಹಲ ನೇಗಿಲುಗಳನು ಹಸ್ತದಿ ಪಿಡಿದು ಬಲವಂತರಾದ ದೈತ್ಯಕುಲವ ತರಿದು ದಿವಿಜ ಕುಲವ ಸಂರಕ್ಷಿಸಿದ ಜಲಧರನಿಭಚೇಲ 8 ಭಾರ ಸೃಷ್ಟೀಶನಲ್ಲಿ ದೂರಿಡೆ ಬಲು ಭ್ರಷ್ಟ ಕೌರವ ಯುಧಿಷ್ಠಿರಗೆ ವೈರ ಪುಟ್ಟಿಸಿ ಭೂಭಾರ ಮಟ್ಟುಮಾಡಿದ ಕೃಷ್ಣ 9 ಕಲಿಯಿಂದ ಕಿಡೆ ನಿಜಧರ್ಮವು ಬಹು ಖಳರಿಂದ ವ್ಯಾಪಿಸೆ ಲೋಕವು ಆಗ ಲಲಿತ ತೇಜಿಯನೇರಿ ಕಲುಷಾತ್ಮಕರ ಕೊಂದು ವಿಲಸಿತ ಧರ್ಮವನು ಸಲಹಿದ ಕಲ್ಕಿರೂಪ 10 ಗಿರಿಜಾವಿವಾಹದಿ ತ್ವಷ್ಟ್ರನ ಶಾಪ ಶರಧಿಯೀಂಟಿದ ಮುನಿಗೈದಲು ಬೇಗ ವರವ್ಯಾಘ್ರ ಗಿರೀಶನೆ ಶರಣೆಂದ ಮುನಿಪಗೆ ವರವಿತ್ತು ಸಲಹಿದ ವರದವಿಠಲಹರಿ11
--------------
ವೆಂಕಟವರದಾರ್ಯರು
ಪಾಲಿಸೋಯನ್ನ ಪರಾತ್ಪರಾ ಹರಿ ಪ ಪಾಲಿಸೊ ಬುಧಹಿತ ಫಾಲನಯನನುತ ಲೀಲಾನಟನಫಣಿ ಶೈಲ ನಿಳಯ-ಹರಿ ಅ.ಪ. ವೇದಾಪಹಾರಿಯಕಂಡು ಜಲಚರ ರೂಪಿನಿಂದಾ ಖಳನ ಸಂಹರಗೈದು ಜಲಜಸಂಭವನಿಗೆ ಒಲಿದ ಮತ್ಸ್ಯಾವತಾರ 1 ಕರುಣಾವಿಹೀನದಿ ಬಲು ನೊಂದು ಕಂಗೆಡುತಲಿರೆ ಸಿಂಧುಮಥನಗೈದು ಕೂರ್ಮ 2 ದುರುಳ ಹಿರಣ್ಯಾಕ್ಷನೆಂಬುವ-ದೈತ್ಯ-ಧರಣಿಯನ ಪಹಾರಗೈಯಲು ಬೇಗ ಪರಮೇಷ್ಟಿಗೊಲಿದು ಸೂಕರನ ರೂಪವ ತಾಳಿ ಧರಣೀಚೋರನ ಕೊಂದ ಸರಸೀರುಹಾಂಬಕ 3 ಗೈಸಿದ ಬಲು ದುರುಳ ಹಿರಣ್ಯಕನುರವ ನಖದಿಂದ ಸೀಳಿ ಕರುಳಮಾಲೆಯನಿಟ್ಟ ಧುರಧೀರ ನರಹರಿ4 ಅಳೆದು ಈರಡಿಮೂಡಿಲೋಕವ ಮತ್ತೆ ಉಳಿದೊಂದು ಪಾದದಿ ಬಲಿಯ ತಲೆಯನು ಮೆಟ್ಟಿ ನಲಿದು ಗಂಗೆಯಪೆತ್ತ ಚಲುವ ವಾಮನ ರೂಪ 5 ಚಕ್ರದೊಡನೆದುಷ್ಟಭೂಪರಅತಿ ಅಕ್ರಮವನು ಕಂಡು ವಿಕ್ರಮಾನ್ವಿತ ನೃಪ ಚಕ್ರವ ಮುರಿದ ಮುನಿಚಕ್ರರಕ್ಷಕ ರಾಮ 6 ತ್ರಿದಿವೇಶರದೊಡ್ಡ ದೂರಕೇಳುತ ಮನುಜಾಕಾರವ ಧರಿಸಿ ದೈತ್ಯ ವೀರರ ಮಡುಹಿದ ಶ್ರೀ ರಾಮ ಮೂರುತಿ 7 ನೇಗಿಲುಗಳನು ಹಸ್ತದಿಪಿಡಿದು ಬಲವಂತರಾದ ದೈತ್ಯಕುಲವತರಿದು ದಿವಿಜ ಕುಲವ ಸಂರಕ್ಷಿಸಿದ ಜಲಧರ ನಿಭಚೇಲ 8 ಭಾರ ತಾಳದೆ-ಧರಣೀ-ಸೃಷ್ಟೀಶನಲ್ಲಿದೂರಿಡೆ ವೈರಿ ಪುಟ್ಟಿಸಿ ಭೂಭಾರ ಮಟ್ಟುಮಾಡಿದ ಕೃಷ್ಣ9 ವ್ಯಾಪಿಸೆಲೋಕವು ಆಗ ಲಲಿತತೇಜಿಯನೇರಿ ಕಲುಷಾತ್ಮಕರಕೊಂದು ವಿಲಸಿತ ಧರ್ಮವನ್ನು ಸಲಹಿದ ಕಲ್ಕಿರೂಪ 10 ಮುನಿಗೈದಲುಬೇಗ ವರವ್ಯಾಘ್ರಗಿರೀಶನೆ ಶರಣೆಂದಮುನಿಪಗೆ ವರವಿತ್ತು ಸಲಹಿದ ವರದ ವಿಠಲ ಹರಿ11
--------------
ಸರಗೂರು ವೆಂಕಟವರದಾರ್ಯರು
ಪಾವನಾತ್ಮಕಿಯೆ | ಪಾಲಿಸು | ಪಾವನಾತ್ಮಕಿಯೆ ಪ ಭಾವಜಾರಿಹಿತೆ ಸುಪ್ರೀತೆ|| ದೇವಿಪಾವನೆ ಪಾಲಿಸು ಮಾತೆ ಅ ಪ ಸೃಷ್ಟಿ ಭಾರರಾಗುತಿರ್ದ| ದುಷ್ಟ ದನುಜರಸುವ ಹೀರ್ದ|| ಶಿಷ್ಟರಿಂಗೆ ದಯವದೋರ್ದ| ಸೃಷ್ಟವಿನುತೆ ಶಿಷ್ಟದಾತೆ 1 ವೇದವಿನುತೆ ಭೇದರಹಿತೆ| ಸಾಧುಸುಜನಮೋದದಾತೆ|| ಆದಿಮಧ್ಯಾಂತರಹಿತೆ| ಮಾಧವನ ಸಹಜಾತೆ 2 ಶಂಖಚಕ್ರಗಳನು ಧರಿಸಿ| ಬಿಂಕದ ಸುರರನ್ನು ವಧಿಸಿ|| ಸೋದರಿ ಶಂಕರಿ3
--------------
ವೆಂಕಟ್‍ರಾವ್
ಪಾವನೀ ಆವಹಿ ಮಾಂ ಪ ಪಾವನಿ ಪಾತಕಾರಣ್ಯ ಮಹಾ ಪಾವಕÀ ನೀನಾದ್ಯೊ ಘನ್ನ ಆಹಾ ಆವಕಾಲದಲ್ಲಿ ಭಾವಜಜನಕನ ಸೇವೆಯೊಳಿರುವಂಥ ಭಾವ ಪಾಲಿಸೊ ದೇವ ಅ.ಪ ಪ್ರಾಣಾದಿ ಪಂಚರೂಪಕನೆ ಸುರ ಗಣ ಕರಾರ್ಚಿತ ಪಾದಯುಗನೆ ಗುಣ ಗಣನಿಧಿ ಬಾರತೀಧವನೇ ಜಗ ತ್ರಾಣ ಕಾರಣನೆ ಮಾರುತನೇ ಆಹಾ ಚಾರು ಚ ರಣ ವಂದಿಪೆ ಜಗತ್ಕಾರಣಕರ್ತನೇ 1 ಖದ್ಯೋತ ಶತ ನಿಭ ಚರಣಾ ಅನಾದ್ಯ ಹರಣ ಸದ್ಯ ವಿದ್ಯೋತ ವೇದಾಂತಾಭರಣಾ ಅನ ವಧ್ಯ ಸ್ವಭಕ್ತಾಂತಃ ಕರಣಾ ಆಹಾ ವಿದ್ಯಾರಮಣ ನೀನೆ ಸದ್ಯೋಜಾತಗೆ ಸು ವಿದ್ಯಾ ಪೇಳಿದ್ಯೋ ಪ್ರದ್ಯುಮ್ನನ ತೋರಿಸೋ 2 ಶ್ರೀನಾಥನಿಗೆ ಪ್ರತೀಕಾ ಬಾಲ ಭಾನುಕೋಟಿ ಪ್ರಕಾಶಾ ಏನು ಕರುಣಾಳೊ ಭಕ್ತಾಭಿsಲಾಷಾ ಅನು ಸಾರದಿ ಪೂರ್ತಿಪ ಈಶಾ ಆಹಾ ಹನುಮದಾದಿರೂಪ ಘನವಾಗಿ ಧರಿಸಿ ನೀ ವನಧಿ ಲಂಘಿಸಿ ಹರಿ ವನಿತೆಯ ತಂದಿತೆÀ್ತ 3 ಸೂತ್ರನಾಮಕ ಶುಭಗಾತ್ರಾ ಚಿತ್ರ ಚಂiÀರ್i ಪಿತಾಮಹಪುತ್ರಾ ಗೋತ್ರ ಧರಮುಖ ದ್ಯು ಸ್ವಕÀಲತ್ರಾ ಮಿತ್ರ ತಾಡನ ಹರ್ತ ಅರ್ಥಗಾತ್ರಾ ಆಹಾ ಸುತ್ರಾಮ ಮುಖ ತ್ರಿನೇತ್ರಾಂತ ಸುರಕೃತ ಸ್ತೋತ್ರ ಪದಾಂಬುಜ ಮದಂತ್ರದಿ ನಿಲಿಸಯ್ಯಾ 4 ಘೋಟ ಖೇಟ ಕಂಠೀರವ ವದನಾ ಭವ ಕಾಟ ತಪ್ಪಿಸಿ ಪೊರಿ ಎನ್ನಾ ಕಿಟ ಮ ರ್ಕಟ ರೂಪನೆ ನಿನ್ನಾ ಭಕ್ತ ಕೋಟಿಯೊಳಗೆ ಸೇರಿಸೆನ್ನಾ ಆಹಾ ದಿಟ್ಟ ಮಹಿಮ ಗುರು ಜಗನ್ನಾಥ ವಿಠಲನ್ನ ಮುಟ್ಟ ಭಜಿಪ ದಿವ್ಯ ದÀೃಷ್ಟಿಯ ಪಾಲಿಸೋ 5
--------------
ಗುರುಜಗನ್ನಾಥದಾಸರು
ಪಾವಮಾನಿಯೆ ತವ | ಯಾವ ಮಹಿಮೆಯೊಳೇಕಭಾವ ಪೊಗಳಲು ಆವ | ದೇವತೆಗಳಿಗಳವೇ ಪ ಶ್ರೀವರನಂಘ್ರಿಯ | ಸೇವೆಗೈವಲಿ ಬಹು | ಧಾವಿಸೀ |ಬಹು ಎಚ್ಚರದಿ ಸೇವಿಸೀ ||ನಿರುತ ಭಕ್ತಿಯ | ಭಾವದಲಿ ದುರಿ | ತಾವಳಿ ವಿಭಾವಸುನೀ ವೊಲಿದು ಭೃ | ತ್ಯಾವಳಿಯ ಪಾಲಿಪೆ | ಸಾರ್ವಕಾಲ ಮ-ತ್ತೋರ್ವರಿಲ್ಲವೊ | ದೇವರೊತ್ತಮ | ದೇವ ನೀನೇ ಅ.ಪ. ಸೂರ್ಯ ಮೋಚನ |ಆಶಿಸುತಲಿ ಹಾರಿ | ದೋಷವ ಕಳೆಯಲು | ಯತ್ನೀಸೆ ಆ ಸುಮಹದಾಕಾರ ಶೃಣಗೈದೀವಾಸವನು ನಿನ ಘಾತಿಸಲು ಕುಲಿಶದೀ ಅದಕಂಡು ತವ ಪಿತಶ್ವಾಸಗಳ ಬಲು ಪರಿಯ ರುದ್ಧಿಸಲು | ಮೂರ್ಲೋಕ ತಪಿಸೇಅಸುರರು ವಿಧಿವಿಧದಿ ಮೊರೆ ಇಡಲೂ | ಆಲೈಸ ನಾಲ್ಮೊಗಶ್ವಾಸ ಸತಿಯನು ಸೂಸಿ ಸೂಚಿಸಲೂ | ಅದಕೇಳಿ ಮತ್ತೆಲೇಸುಗೈಯ್ಯಲು ಮನವ ಮಾಡಲೂ ವಾಸವಾದ್ಯರಶ್ವಾಸ ಮಾಡುವ ತೆರನ ಮಾಡೆಯ್ದೊಕ್ಲೇಶನಾಶನ ಶ್ವಾಸಮಾನಿ ಮಹಾ ಕೃಪಾಳೊ 1 ವ್ರಾತ ಮಣಿ ರಘು | ಜಾತಗಿತ್ತೆಯೊ | ಮಾತರಿಶ್ವಾ 2 ಪುಂಡರೀಕಾಕ್ಷ ಉರ ಬಗೆದು ಕರುಳಕೊಂಡು ಕೊರಳಲಿ ಧರಿಸೀ | ನರ ಮೃಗನ ಲೀಲೆಕಂಡು ದ್ವಯೆ ಬಲ ತಪಿಸೀ | ಅರಕ್ಷೌಹಿಣಿ ಮುಂ-ಕೊಂಡು ನೀನೆ ಸಂಹರಿಸೀ | ಕೌರವನ ತೊಡೆಖಂಡಿಸುತವನ ಛೇದಿಸೀ |ಅಂಡಜಾಧಿಪವಹಗೆ ಅರ್ಪಿಸಿ | ನಿಂದೆ ಭೀಮಾ 3 ಅದ್ವೈತ ಸಿದ್ಧಿಲಿಹೇಯ ಬಹಳವ ನೀನೆ ತೋರಿಸೀ | ಬದರಿಯಲಿ ಬಾದರಾಯಣರಿಂದ ಉಪದೇಶೀಸಿ | ಮತ್ತಿಲ್ಲಿ ಬರುತಲಿಧೇಯ ಸಾಧಿಸೆ ಗ್ರಂಥ ಬಹು ರಚಿಸೀ | ಕುಭಾಷ್ಯಗಳ ಬಹುಹೇಯತ್ವವನೆ ಸಾಧಿಸೀ | ವಾದ ಕಥೆಯಲಿಮಾಯಿಗಳ ಬಲುಪರಿಯ ಸೋಲಿಸೀ |ಕಾರ್ಯ ಸರ್ವವ | ರಾಯ ಕೃಷ್ಣಗೆ ಅರ್ಪಿಸಿದೆ ಮಧ್ವಾ 4 ಪರಿ ವ್ಯಾಪ್ತನೆ | ಅಧ್ಯರ್ಥ ರೂಪಿಅಪ್ರಾಪ್ಯ ಅಶಕ್ತಿ ರಹಿತಾನೇ |ವ್ಯಾಪಿಸುತ ಜಗ | ವೀಪರೀಯಲಿ | ಮಾಳ್ಪೆ ಪ್ರಾಣಾ 5 ಮೋಕ್ಷಾಧೀಚ್ಛೆಯ ವರ್ಜ | ಅಚ್ಛಿನ್ನ ಭಕುತಾನೇದಕ್ಷಿಣಾಕ್ಷಿ ಗೋ | ವತ್ಸ ರೂಪಾನೇ ||ಅಕ್ಷಿಯೋಳಿಹ ತ್ರಿದಶಾ | ದ್ಯಕ್ಷರಿಂದಲಿ ಸಂ | ಸೇವ್ಯಾನೇ |ಕಂಠದಲಿ ನೀ ಹಂಸೋಪಾಸಕನೇ |ಶಬ್ದಗಳ ನುಡಿದು ನುಡಿಸುತಿರುವಾನೆ | ಕೂರ್ಮರೂಪಿ ಸಲಕ್ಷಣದಿ ಬ್ರಹ್ಮಾಂಡ ಧಾರಕನೆ | ಸಪುತ ಸ್ಕಂದಗತಇಚ್ಛೆಯಲಿ ಲೋಕಧಾರಕನೆ | ಬೃಹತಿ ಸಾಸಿರವಾಚ್ಯನೆಂದೆನಿಸುತ್ತ ಸ್ತುತ್ಯಾನೆ | ಪತ್ಯಬಿಂಬ ಮುಖ್ಯನೆಈಕ್ಷಿಸುವೆ ಸರ್ವತ್ರ ಹರಿಯನ್ನೆ | ಮುಂದಿನಜ ಅಪರೋಕ್ಷವನು ಪಾಲಿಸೆಂಬೇನೆ ||ಮೋಕ್ಷದನೆ ಕರುಣಾ ಕಟಾಕ್ಷದಿ | ಈಕ್ಷಿಪುದು ಪವನ 6 ಜೇಷ್ಠ ಶ್ರೇಷ್ಠನೆ ಸ | ಮಷ್ಟಿ ರೂಪನೆ ಪವನ |ವ್ಯಷ್ಟಿರೂಪದಿ ಜಗದಿ | ವರೀಷ್ಟನೇ ||ನಿಷ್ಠೇಲಿ ಭಜಿಪರಿ | ಗಿಷ್ಟಾರ್ಥವನೆ | ಸಲಿಸೂವೇ |ಅತಿರೋಹಿತ ವಿಜ್ಞಾನಿ ಎನಿಸಿರುವೆ ||ಸಕಲ ಗುಣಗಣ ಭೋಕ್ತøವೆನಿಸಿರುವೆ | ಸಕಲ ಜ್ಞಾನೋಪದೇಷ್ಟನೆಂದೆನಿಸಿ ಕರೆಸೂವೆ | ಶಿವ ಶೇಷ ಖಗಪರಿನಿಷ್ಟ ಗುರು ನೀನೆ ಎನಿಸಿರುವೆ ಸಜಾತಿ ಗುಣ ಅಯುತವರಿಷ್ಟನು ನೀನು ಆಗಿರುವೆ | ವಿಜಾತ್ಯನಂತ ಗುಣಗರಿಷ್ಟ ರೂಪಿ ಎನಿಸಿರುವೇ | ವೇದಾನುಕ್ತ ಗುಣವಿಶಿಷ್ಟ ರೂಪದಲಿಂದ ಮೆರೆಯುವೇ ||ಇಷ್ಟ ಗುರು ಗೋವಿಂದ ವಿಠ್ಠಲ | ಪ್ರೀತಿ ಪಾತ್ರನು ಆದ ಪ್ರಾಣ 7
--------------
ಗುರುಗೋವಿಂದವಿಠಲರು
ಪಾಹಿ ಪದ್ಮದಳಾಯತಾಂಬಕ ಪಾಹಿ ಪದ್ಮಾರಮಣ ಪರಾತ್ಪರ ಪಾಹಿ ಪದ್ಮಾಸನ ಜನಕ ಮಾಂ ಪಾಹಿ ಪ್ರಪನ್ನ ಪಾಲಕ ಪ ವಾಸುದೇವ ಕೃತೀಶ ಶಾಂತಿಪ ಕೇಶವಾಚ್ಯುತ ವಾಮನ ಹೃಷೀಕೇಶ ಪ್ರಶ್ನಿಗರ್ಭ ಋಷಭ ನೃಕೇಸರಿ ಹಯಗ್ರೀವ ವೇದ ವ್ಯಾಸ ದತ್ತಾತ್ರಯ ಉರುಕ್ರಮಾ ವಾಸವಾನುಜ ಕಪಿಲ ಯಜ್ಞ ಮ ಹೇಶ ಧನ್ವಂತ್ರಿ ಹಂಸ ಮಹಿ ದಾಸ ನಾರಾಯಣ ಕೃಷ್ಣಹರೆ 1 ಮಾಧವ ಪ್ರದ್ಯುಮ್ನ ಶ್ರೀ ದಾಮೋದ ರಾಧೋಕ್ಷಜ ಜನಾರ್ದನ ಶ್ರೀಧರ ಶ್ರೀ ಪದ್ಮನಾಭ ವೃಕೋದರ ಪ್ರಿಯತಮ ತ್ರಿವಿಕ್ರ ವಿರಿಂಚಿ ವಿನುತ ಗದಾಧರ ಗಯಾಸುರ ವಿಮರ್ದನ ಸಾಧಿತ ಜಗತ್ರಯ ಪುರಾತನ ಪಾದ ಪರಮ ಕೃಪಾಂಬುಧೇ ಮಾಂ 2 ನಂದಗೋಪನ ಕುಮಾರ ಗೋಪಿ ವೃಂದ ಪೋಷಿತನಮಿತ ಸಂಕ್ರಂಡನ ಕೃಪಾ ಸಾಂದ್ರ ವರ ಕಾಳಿಂದಿ ತಟನಿ ವಿಹಾರ ಪಾಂಡವ ಬಂಧು ದ್ರೌಪದಿವರದ ನೃಪ ಮುಚು ಕುಂದಸ್ತುತಿ ಸಂಪ್ರೀತ ಲಕ್ಷ್ಮೀ ನಂದಮಯ ನಿಜ ಭಕ್ತವತ್ಸಲ 3 ಮೀನಕೂರ್ಮವರಾಹ ಪಂ ದಿತಿಸುತ ವಾಮನ ಕ್ಷೋಣಿಪಾರ್ವನ ಬ್ರಾಹ್ಮಣ ಪ್ರಿಯ ವನೌಕಸನಾಥ ಮುಖ್ಯ ಪ್ರಾಣಸಖ ವಸುದೇವ ದೇವಕಿ ಸೂನು ಸುಂದರಕಾಯ ಪುರಹರ ಬುದ್ಧ ಕಲ್ಕಿ ಪ್ರ ಧಾನ ಪುರುಷೇಶ್ವರ ದಯಾಕರ 4 ನಿಂತ ನಿಜಬಲ ಮಾತುಳಾಂತಕ ಶ್ವೇತವಾಹನ ಸೂತ ತ್ರಿಗುಣಾ ತೀತ ಭವನಿಧಿ ಪೋತ ಮೋಕ್ಷನಿ ಕೇತನಪ್ರದ ಭೂತಭಾವ ಧೌತ ಪಾಪ ವ್ರಾತ ತ್ರಿಜಗತಾತ ನಿರ್ಗತ ಭೀತ ಶ್ರುತಿ ವಿಖ್ಯಾತ ಭಕ್ತಿಸುವೇತನ ಪ್ರಿಯ ಭೂತಿದ ಜಗನ್ನಾಥ ವಿಠ್ಠಲ 5
--------------
ಜಗನ್ನಾಥದಾಸರು