ಒಟ್ಟು 1384 ಕಡೆಗಳಲ್ಲಿ , 97 ದಾಸರು , 1214 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಂಗಳ ಜಯ ಜಯ ಮಂಗಳ ತುಳಸಿಗೆ ಮಂಗಳ ಜಯ ಜಯ ರಂಗನಾಯಕಗೆ ಪ ವಾರಿಧಿ ಮಥÀನದಿ ವಾರಿಜನಾಭನ ವಾರಿಜನೇತ್ರನ ವಾರಿಗಳಿಂದ ತೋರಿದ ತುಳಸಿಯು ಸೇರಿದಳೆಲ್ಲ ಶ- ರೀರವ ಪಾವನ ಮಾಡಬೇಕೆನುತ 1 ತುಳಸಿಯ ನಾಮವ ಬೆಳೆಸಿಯೆ ಲೋಕವ ಬಳಸಿಕೊಂಡಿರುವೆನು ಎನುತಲೆ ಬಂದು ಕಳಸಿದ ಮನುಜರ ಉಳಿಸಬೇಕೆನುತಲೆ ಕಳಸದ ತೆರನಂತೆ ಉದಿಸಿದಳು ತುಳಸಿ 2 ಸಾಲಿಗ್ರಾಮವು ಇಲ್ಲದಾತನ ಮನೆಯೊಳು ಕಾಲೂರಿ ನಿಲ್ಲಳು ಹರುಷದೊಳಿವಳು ಪಾಲಿಪ ಹರಿಶಿಲೆಯಿರುವಂಥ ಸ್ಥಳದೊಳು ಓಲಗವಾಗಿಯೆ ತೋರುತ್ತಲಿಹಳು3 ಎಲ್ಲಿಯು ತುಳಸಿಯು ಅಲ್ಲಿಯೆ ಶ್ರೀಹರಿ ವಲ್ಲಭೆ ಸಹವಾಗಿ ಇರುತಿಪ್ಪ ಬಿಡದೆ ಫುಲ್ಲನಾಭನು ಕೃಷ್ಣ ಆಡಿದ ಪರಿಯನು ಗೊಲ್ಲತಿಯರು ಕಂಡು ನಾಚಿ ಹಿಗ್ಗಿದರು 4 ಬಂದಳು ಭಕ್ತರ ಮಂದಿರದೆಡಗೆ ಗೋ- ವಿಂದನ ಕಂಡಿರೆ ಎಂದು ಕೇಳಿದಳು ವೃಂದಾವನದೊಳು ನಿಂದಳು ತುಳಸಿಯು ಚಂದವು ನಿಮ್ಮಯ ಭವನದೊಳೆನುತ 5 ಗೋವಿನ ತುಪ್ಪದಿ ದೀವಿಗೆಯಿರಿಸಿಯೆ ಭಾವ ಶುದ್ಧತ್ವದಿ ಬಲವಂದರವಳು ಕಾವಲು ಪೋಗಿಯೆ ಕರ್ಣದ ಒಳಗಿದ್ದು ಜೀವಿತ ಮುಕ್ತಿಯ ತೋರುವೆನೆನುತ 6 ಸರ್ವತೀರ್ಥಗಳನ್ನು ಮೂಲದಿ ಧರಿಸಿಯೆ ಸರ್ವ ದೇವರ್ಕಳ ಮಧ್ಯದೊಳಿರಿಸಿ ಸರ್ವ ವೇದಂಗಳ ಶಿರದೊಳು ಧರಿಸಿಯೆ ಸರ್ವವ ಕಾಲಗೆ ನಿರ್ವಹಿಸುತಿಹಳು 7 ಅಂಗಳದೊಳಗಿಹ ಮಂಗಳ ಮಹಿಮಗೆ ರಂಗುವಲ್ಲಿಯನಿಕ್ಕಿ ಶೃಂಗಾರವಾಗಿ ಸಾಂಗ್ಯದೊಳಿಹ ಒಂದು ಮಂಗಳ ಬರೆದರೆ ಬಂಗಾರ ಮನೆಯನ್ನು ತೋರುವಳಿವಳು 8 ಮೂಲದ ಮೃತ್ತಿಕೆ ಮೂಲ ಪಣೆಯೊಳಿಟ್ಟು ಕಾಲದಿ ಸ್ನಾನವ ಮಾಡಿದ ನರರು ಭಾಳವಾಗಿಹ ಅಘರಾಶಿಯನೆಲ್ಲವ ಚಾಳಿಸಿ ಕಳೆವರು ಕಾಲನ ಗೆಲಿದು 9 ತನ್ನ ಕಾಷ್ಟವ ತಂದು ಚಿನ್ನದಿ ಸುತ್ತಿಸಿ ಕರ್ಣದಿ ಧರಿಸಿದ ಮನುಜರಿಗೆಲ್ಲ ಉನ್ನತ ಪದವಿಯ ತೋರುವೆನೆನುತಲೆ ಪನ್ನಗಶಯನಗೆ ಪ್ರೀತಿಯಾಗಿಹಳು 10 ಉತ್ತಮವಾಗಿಹ ಕಾರ್ತಿಕ ಮಾಸದಿ ಅರ್ತಿಯಿಂದಲೆ ನಲಿನಲಿಯುತ್ತ ದೇವಿಯ ಕರ್ತನ ಕೀರ್ತನೆ ರಚಿಸುವ ಮನದಿ 11 ಬ್ರಾಹ್ಮಿ ಮುಹೂರ್ತದಿ ಸ್ನಾನ ತರ್ಪಣವನ್ನು ನಿರ್ಮಲ ತೀರದಿ ತಿದ್ದಿಯೆ ಕೊಂಡು ಧರ್ಮಕ್ಕೆ ಯೋಗ್ಯಳ ಪೂಜೆಯ ಮಾಡಲು ಕರ್ಮ ಬಂಧಗಳೆಲ್ಲ ಕಡಿದುಕೊಳುವುದು 12 ಸಾಯಂಕಾಲದಿ ದೀವಿಗೆ ಹಚ್ಚಲು ಮಾಯಗಳೆಲ್ಲವು ಮರುಗಿ ಪೋಗವುವು ದಾಯವಾಗಿಯೆ ಸುರರಾಯನೊಳರ್ಥವ ಬೇವಿನವರು ಕಂಡು ಹೊರಸಾರುತಿಹರು 13 ಸರ್ವದಾನಗಳನ್ನು ಸರ್ವಪೂಜೆಗಳನ್ನು ಸರ್ವರು ಋಷಿ ಪಿತೃ ತರ್ಪಣಗಳನು ಸರ್ವಥಾ ತುಳಸಿಯ ತಪ್ಪಿಸಬೇಡೆಂದು ನಿರ್ವಾಹವಾಗಿಯೆ ಶ್ರುತಿಯು ಪೇಳಿದುದು 14 ಅಂಗದೊಳಗಿಹ ಮಂಗಳ ಮಹಿಮಗೆ ಸಾಂಗ್ಯದೊಳಿದನು ಪಠಿಸಿ ಪೇಳಿದರೆ ಗಂಗೆ ಗೋದಾವರಿ ತುಂಗಭದ್ರೆಯ ಮಿಂದು ರಂಗನ ಕ್ಷೇತ್ರವ ನೋಡಿದ ಫಲವು 15 ಅಂಗಳ ತುಳಸಿಯ ದಿನ ದಿನದಿ ತಾವೆದ್ದು ಹಿಂಗದೆ ನೋಳ್ಸ ಶ್ರೀರಂಗನ ಭಕ್ತರಿಗೆ ಬಂಗಾರಗಿರಿವಾಸ ವರಾಹತಿಮ್ಮಪ್ಪನ ಮಂಗಳಮೂರ್ತಿಯ ನೋಡಿದ ಫಲವು 16
--------------
ವರಹತಿಮ್ಮಪ್ಪ
ಮಂಗಳಂ ಜಯ ಜಯ ಮಂಗಳಂ ಪ ಪರಮಾಸನದಲಿ ಕುಳಿತವಗೆ ಪರತತ್ವವ ತಾ ತಿಳಿದವಗೆ ಕರುಣದಿಂದ ದುರಿತಾವಳಿಗಳನು ಸ್ಮರಿಸಿದ ಮಾತ್ರದಿ ಪರಿಹರಿಸುವಗೆ 1 ಪೊಡವಿಯಲಿ ಶೋಭಿಸುವವಗೆ ಕಡಲಶಯನನ ಭಕ್ತನಿಗೆ ಅಡಿಗಳ ಬಿಡದೆ ಭಜಿಪ ಸುಜನರಿಗೆಲ್ಲ ಕಡುತರ ಜ್ಞಾನವ ನೀಡುವಗೆ 2 ಸತ್ಯಧೀರರ ಕುವರನಿಗೆ ಸತ್ಯಜ್ಞಾನನೆಂದೆನಿಸುವಗೆ ಅತ್ಯಾದರದಿಂದ ರಾಮನ ಧ್ಯಾನಿಸಿ ಪ್ರತ್ಯಕ್ಷವ ಕರೆಸಿರುವವಗೆ 3 ಕಾಮಕ್ರೋಧವ ಬಿಟ್ಟವಗೆ ಪ್ರೇಮ ಆಶೆಗಳ ಸುಟ್ಟವಗೆ ಧೂಮಕೇತು ಸಖ ಸೂನುವಾಹನನ ನೇಮದಿಂದ ಆರಾಧಿಪಗೆ 4 ದಂಡ ಕಮಂಡಲ ಪಿಡಿದವಗೆ ಪಂಡಿತರಿಂದತಿ ಪೂಜಿತಗೆ ಕೊಂಡಾಡಿದರ್ಯಮ ದಂಡನೆ ತಪ್ಪಿಸಿ ಶೊಂಡನಾದ ನರಹರಿ ತೋರ್ಪಗೆ 5
--------------
ಪ್ರದ್ಯುಮ್ನತೀರ್ಥರು
ಮಂಗಳಂ ಜಯ ಮಂಗಳಂ ಮಂಗಳಂ ಬೆಟ್ಟದೊಡೆಯ ಹರಿಗೆ ಜಯ ಪ. ಮಂಗಳಂ ಕೊಳಲನೂದುವ ದೊರೆಗೆ ಮಂಗಳಂ ಶ್ರೀ ಶ್ರೀನಿವಾಸ ವೆಂಕಟನಿಗೆ ಮಂಗಳಂ ಶೇಷಾಚಲ ಹರಿಗೆ ಅ.ಪ. ವೈಕುಂಠದಲಿ ಬಂದವಗೆ ಆ ಕೋಲಗಿರಿಯಲಿ ನಿಂದವಗೆ ತಾ ಕಾಸುಕಾಸಿಗೆ ಬಡ್ಡಿಯ ಕೊಳುತಲಿ ಬೇಕಾದ ವರಗಳ ಕೊಡುವನಿಗೆ 1 ಬುತ್ತಿ ಪೊಂಗಲುಗಳ ಮಾರುವಗೆ ಮತ್ತೆ ದರ್ಶನ ಕೊಡದೆ ಒದೆಸುವಗೆ ನಿತ್ಯ ಸ್ವಾಮಿಪುಷ್ಕರಣಿ ತೀರದಿ ನಿಂತು ಭೃತ್ಯವರ್ಗಗಳನು ಪೊರೆವವಗೆ 2 ಶಂಖ ಚಕ್ರ ವರ ಹಸ್ತನಿಗೆ ಶಂಕೆಯಿಲ್ಲದೆ ಅಭಯ ಕೊಡುವನಿಗೆ ಶಂಕರಮಿತ್ರಗೆ ಪರಮಪವಿತ್ರಗೆ ಸಂಕೋಲೆ ಹನುಮಗ್ಹಾಕಿಸಿದವಗೆ 3 ವೃಂದಾವನದಲಿ ಮೆರೆದವಗೆ ಮಂದಗಮನೆಯರ ಮೋಹಿಪಗೆ ಚಂದದ ಪೊಂಗೊಳಲೂದಿ ಗೋಪಿಯರ ಕಾಯ್ದ ಗೋಪಿ ಕಂದನಿಗೆ 4 ನಾಗರಾಜನ ಗಿರಿ ನಿಲಯನಿಗೆ ಯೋಗಿಗಳಿಗೆ ನಿಲುಕದ ಹರಿಗೆ ಸಾಗರನಿಲಯ ಗೋಪಾಲಕೃಷ್ಣವಿಠ್ಠಲ ಭೋಗಿಶಯನ ಲಕ್ಷ್ಮೀಪತಿಗೆ 5
--------------
ಅಂಬಾಬಾಯಿ
ಮಂಗಳ ಮಂಗಳ ಜಯಮಂಗಳ ಶುಭ ದೇವದೇವೋತ್ತಮಗೆ ಧ್ರುವ ಕೇಶವ ನಾರಾಯಣಗೆ ಮಂಗಳ ವಾಸುದೇವ ವಾಮನಗೆ ಮಂಗಳ ಹೃಷೀಕೇಶ ಪುರುಷೋತ್ತಮಗೆ ಮಂಗಳ ವಸುದೇವಸುತ ಶ್ರೀಕೃಷ್ಣಗೆ ಮಂಗಳ 1 ಅಚ್ಯುತ ಜನಾರ್ಧನಗೆ ಮಂಗಳ ಮತ್ಸ್ಯಕೂರ್ಮ ವರಾಹಿಗೆ ಮಂಗಳ ಸಚ್ಚಿದಾನಂದ ಶ್ರೀಧರಗೆ ಮಂಗಳ ಮುಚುಕುಂದವರದ ವಿಷ್ಣುಗೆ ಮಂಗಳ2 ಮಾಧವ ಮಧುಸೂದನಗೆ ಮಂಗಳ ಸಾಧು ಹೃದಯುವಾಸಗೆ ಮಂಗಳ ಅಧೋಕ್ಷಜ ಅನಿರುದ್ಧಗೆ ಮಂಗಳ ಪದ್ಮನಾಭ ಪ್ರದ್ಯುಮ್ನಗೆ ಮಂಗಳ 3 ಗರುಡವಾಹನ ಗೋವಿಂದಗೆ ಮಂಗಳ ಉರಗಶಯನ ಉಪೇಂದ್ರಗೆ ಮಂಗಳ ಹರಿ ದಾಮೋದರ ಸಂಕರುಷಣಿಗೆ ಮಂಗಳ ನಾರಸಿಂಹ ತ್ರಿವಿಕ್ರಮಗೆ ಮಂಗಳ 4 ಪರಮ ಪಾವನ ಭಾರ್ಗವಗೆ ಮಂಗಳ ಕರುಣಾಕರ ಶ್ರೀ ರಾಮಗೆ ಮಂಗಳ ಧರಿಯೊಳು ಭೌದ್ಧ ಕಲ್ಕಿಗೆ ಮಂಗಳ ತರಳ ಮಹಿಪತಿಸ್ವಾಮಿಗೆ ಮಂಗಳ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಂಗಳಂ ಮಂಗಳಂ ಮಾರಮಣಗೆ ಪ ಕುಂಡಲಿ ಶಯನಗೆ ಗುಣನಿಧಿಗೆ ಪುಂಡರೀಕಾಕ್ಷ ಶ್ರೀ ಪುರುಷೋತ್ತಮಗೆ 1 ಸರ್ವಪ್ರಾಣಿಗಳ ಹೃತ್ಕಮಲನಿವಾಸಗೆ ಉರ್ವಿಭಾರವ ಪರಿಹರಿಸಿ ಭಕ್ತರ ಕಾಯ್ವ ಸಾರ್ವಭೌಮ ಹರಿಸರ್ವೋತ್ತಮಗೆ 2 ಭಾಗ್ಯವಲ್ಲಿ ಹನುಮನೊಡೆಯನಮ್ಮ ಗುರುರಾಮ ವಿಠಲ ಶ್ರೀ ಕೃಷ್ಣಮೂರುತಿಗೆ3
--------------
ಗುರುರಾಮವಿಠಲ
ಮಂಗಳ ಮಾಧವಗೆ ಮಾರಮಣಗೆ ಮಂಗಳ ಶ್ರೀಧರಗೆ ಪ ಭಂಗ ಭವಗಜ ಸಿಂಗ ಕರುಣಾಪಾಂಗ ಶ್ರೀಶಗೆ ಗಂಗಾಜನಕಗೆ ತುಂಗ ಮಹಿಮಗೆ ಭಂಗರಹಿತಗೆ ಅನಂಗಪಿತನಿಗೆ 1 ಭುವನ ಮೋಹನ ಸುಮನಸರ ಪ್ರಿಯ ಕವಿಜನರ ಹೃದ್ಗøಹ ನಿವಾಸಗೆ ನವನವ ಲೀಲೆಗಳ ತೋರ್ದಗೆ ನವರತುನದಾರತಿಯ ಬೆಳಗಿರೆ 2 ಗರುಡಗಮನಗೆ ಉರಗಶಯನಗೆ ಪರಮಪುರುಷಗೆ ಪುಣ್ಯಚರಿತಗೆ ಉರಗಗಿರಿವಾಸನಿಗೆ ದೇವಗೆ ಸುರರೊಡೆಯ ಶ್ರೀ ಶ್ರೀನಿವಾಸಗೆ3 ಸೌಮ್ಯನಾಮ ಸಂವತ್ಸರದಂದು ನೇಮದಿಂದ ಭಜಿಪ ಭಕುತರ ಕಾಮ್ಯಕರ್ಮವ ತರಿದು ಪೊರೆಯುವ ಕಮಲನಾಭ ವಿಠ್ಠಲನ ಪ್ರತಿದಿನ4
--------------
ನಿಡಗುರುಕಿ ಜೀವೂಬಾಯಿ
ಮಂಗಳಂ ವೆಂಕಟೇಶಗೆ ಅಲಮೇಲ್ ಮಂಗಾ ಮನೋಹರಗೆ ಪ ಭವ ಶುಭ ಅ.ಪ ಆಕಾಶರಾಯನಳಿಯಗೆ | ಪಿ ಲೋಕವಿಶೃತಗೆ ಶ್ರೀ ಭೂರಮಣಗೆ 1 ತೊಂಡಮಾನ ನೃಪ ಪೂಜಿತಗೆ | ಬ್ರ ಕುಂಡಲಿ ಶಯನಗೆ ಗೋಪಾಲಗೆ ಮೃ ದ್ಭಾಂಡವ ರಚಿಸುವಗೆ ಭೀಮಗೊಲಿದವಗೆ 2 ವರ ಚಕ್ರಗಧಾಧರ ಹಸ್ತಗೆ 3
--------------
ಗುರುರಾಮವಿಠಲ
ಮಂಗಳಂ ಶ್ರೀ ಗುರುವರ್ಯರಿಗೆ | ಮಂಗಳಾಂಗರಿಗೆ ಮಂಗಳಂ ಶ್ರೀ ಗುರುವರ್ಯರಿಗೆ ಪ. ರಂಗನಾಥನ ಪದ ಸರೋಜಕೆ ಭೃಂಗರೆನಿಸಿ ಮೆರೆಯುವರಿಗೆ ಅ.ಪ. ತಂದೆ ಮುದ್ದುಮೋಹನರೆಂ ತೆಂದು ಮೆರೆಯುತ ಮಂದಮತಿಯ ಬಿಡಿಸಿ ಎನ್ನ ತಂದೆಯಂತೆ ಪೊರೆಯುವರಿಗೆ 1 ನಾಗಶಯನ ಹರಿಯ ಭಜಿಪ ಭೋಗಿವರರಿಗೆ ಭಾಗವತರ ಸಂಘದೊಳಗೆ ಯೋಗಿಯಾಗಿ ಚರಿಸುವರಿಗೆ 2 ಪರಮಪ್ರಿಯರಾಗಿ ಹರಿಗೆ ಪರಮಪ್ರಿಯರೆಂದು ಕರೆಸಿಕೊಳುತ ನರಹರಿಯ ಚರಣ ಮನದಿ ಸ್ಮರಿಸುವರಿಗೆ 3 ಕರ್ಮಗಳನೆ ಕಡಿದು ಜ್ಞಾನ ಧರ್ಮಮಾರ್ಗದಿ ಧರ್ಮತತ್ವ ಬೋಧಿಸಿ ಅ- ಧರ್ಮಗಳನೆ ಬಿಡಿಸುವರಿಗೆ4 ಗೋಪಾಲಕೃಷ್ಣವಿಠ್ಠಲನ ರೂಪ ತೋರುತ ಪಾಪಗಳನೆ ತರಿದು ಭವ ಕೂಪದಿಂದ ಪೊರೆಯುವರಿಗೆ 5
--------------
ಅಂಬಾಬಾಯಿ
ಮಂಗಳಂ ಶ್ರೀ ಪಾರ್ಥಸಾರಥಿಗೆ ಮಂಗಳಂ ಸಂಕರ್ಷಣನಿಗೆ ಅನಿರುದ್ಧ ಸಾತ್ಯಕೀಸಹ ಬಂದು ನಿಂದವಗೆ ಪ ವಸುಧೆ ಭಾರವನಿಳುಹಲೆಂದು ದೇವಕೀ ವಸುದೇವರುದರದಿ ಶಿಶುವಾಗಿ ಅಸುರ ಪೂತನಿಯಸುವ ನೀಗಿದ ಕುಸುಮನಾಭಗೆ 1 ವಾತಾಸುರನಕೊಂದು ಬಾಯೊಳುಮಾತೆಗೆ ಬ್ರಹ್ಮಾಂಡತೋರ್ದಗೆ 2 ಒತ್ತಿ ಕಾಳಿಯ ಶಿರವನಾಗ ಸುತ್ತಿದಾ ಕಿಚ್ಚನ್ನು ನುಂಗಿ ಎತ್ತಿ ಗೋವರ್ಧನಗಿರಿಯ ಹತ್ತಿ ಗೋಮಂತವನು ಹಾರ್ದಗೆ 3 ಕೇಶಿಯನು ಸಂಹರಿಸಿ ದುಷ್ಟದ್ವೇಷಿಯಾದ ವೃಷಭನನು ಕೊಂದು ದಾಸಿ ತಂದ ಗಂಧವನು ಪೂಸಿ ಮೆರೆದ ಕ್ಲೇಶನಾಶಗೆ 4 ಬಿಲ್ಲು ಮುರಿದು ಬೀದಯಲ್ಲಿ ಎಲ್ಲರಿಗೆ ತಕ್ಕ ರೂಪ ತೋರಿ ಮಲ್ಲರನು ಮರ್ಧಿಸುತ ಮಾವನ ಸೊಲ್ಲನಡಗಿಸಿದ ಪುಲ್ಲನಾಭಗೆ 5 ರುಕ್ಮಿಣೀ ಸತ್ಯಭಾಮೆ ಕಾಳಂದಿ ಜಾಂಬವತಿಯು ಮೊದಲಾದ ಲಕ್ಷ್ಮಣೆ ಸತ್ಯಭದ್ರೆ ಮಿತ್ರವಿಂದೆಯು ತಂದ ಲಕ್ಷ್ಮೀರಮಣಗೆ 6 ಕೊಂದು ನರಕನ ಹದಿನಾರುಸಾವಿರ ಸ್ತ್ರೀಯರನು ಬೇಗ ತಂದು ದ್ವಾರಕಿಯಲ್ಲಿ ಸತಿಸಹ ಆನಂದದಿಂದಲಿ ನಿಂದಕೃಷ್ಣಗೆ 7 ಹೇಮದಾಭರಣವಿಟ್ಟು ರುಕ್ಮಿಣಿ ನೇಮದಿಂದಲೆ ಬೀಸುತಿರಲು ಪ್ರೇಮಕಲಹದಿ ಬೀಳಲಾಕ್ಷಣ ವಿರಾಮವಿಲ್ಲದೆ ಎತ್ತಿದವಗೆ8 ಎತ್ತಿ ಅಂಕದೊಳಿಟ್ಟು ಪ್ರೇಮದಿ ಅರ್ಥಿಯಿಂದಲೆ ಕುರುಳನೇವರಿಸಿ ತತ್ವವಾಕ್ಯವನ್ನು ಹೇಳಿದ ಮುಕ್ತಿದಾಯಕ ಮುದ್ದು ಕೃಷ್ಣಗೆ 9 ಜಾಣತನದಲಿ ಕಾಶಿಯನುಸುಟ್ಟು ಪೌಂಡ್ರಕನಪ್ರಣಾಪಹರಿಸಿದವಗೆ 10 ಮಿಥುಳವಾಸಿಗೆ ಮುಕ್ತಿಯನಿತ್ತು ಸುತನ ತಂದು ವಿಪ್ರನಿಗಿತ್ತು ಹತವಮಾಡಿ ವೃಕಾಸುರನ ಶ್ರುತಿಗಗೋಚರನಾದ ಸ್ವಾಮಿಗೆ 11 ಅರಗಿನಮನೆಯಿಂದ ರಕ್ಷಿಸಿ ದ್ರೌಪದಿ ಸುಭದ್ರೆಯ ಸಾಧಿಸಿತ್ತಗೆ 12 ನೆತ್ತವಾಡಿ ಕೌರವರೊಡನೆ ಅರ್ಥವನು ಸೋಲಲು ಪಾಂಡವರು ಭಕ್ತವತ್ಸಲನೆನ್ನೆ ದ್ರೌಪದಿಗೆ ವಸ್ತ್ರವಿತ್ತು ಕಾಯ್ದ ಕೃಷ್ಣಗೆ 13 ವನವಾಸದಲ್ಲಿ ಪಾಂಡವರು ಉಲ್ಲಾಸದಿಂದಲೆ ಇರುತಿರಲು ಪಾಶುಪತ ವನು ಪಾರ್ಥನಿಗೆ ಈಶನಲಿ ಕೊಡಿಸಿದ ಸರ್ವೇಶಗೆ 14 ವೇಷವನ್ನು ಮರೆಸಿಕೊಂಡು ವಿರಾಟನಗರದಿ ವಾಸ ಮಾಡಲು ಮೋಸದಿಂದಲೇ ಕೀಚಕಾದಿಗಳ ನಾಶಮಾಡಿಸಿದ ವಾಸುದೇವಗೆ 15 ಆನಂದರೂಪವ ತೋರಿದವಗೆ 16 ತೋರಿದವಗೆ 17 ಜಾಹ್ನವೀಸುತನ ಯುದ್ಧವನ್ನು ತಾಳಲಾರದೆ ಜನರ್ಧನಗೆ ಪೇಳೆ ಜಾಣತನದಲಿ ಶಿಖಂಡಿಯನುತೋರಿ ಬಾಣಮಂಚದಿ ಮಲಗಿಸಿದವಗೆ 18 ಸುಭದ್ರೆ ಪುತ್ರನ ಯುದ್ಧದಲ್ಲಿ ಪದ್ಮವ್ಯೂಹವ ಪೋಗಿಸಲಾಗ ಮುದ್ದುಬಾಲಕನ ಕೊಲಿಸಿದವಗೆ 19 ಸಿಂಧುರಾಜನ ಕೊಲ್ಲುವೆನೆಂದು ನರನು ಪ್ರತಿಜ್ಞೆಮಾಡಲು ತಂದಚಕ್ರವ ರವಿಗೆತೋರಿಸಿ ಸೈಂಧವನ ಕೊಲ್ಲಿಸಿದಸ್ವಾಮಿಗೆ 20 ದೃಪತಿಯತೋರಿದವಗೆ 21 ಕರ್ಣನು ಘಟ್ಟಿಯಾಗಿ ರಥವನೊತ್ತಿ ದಿಟ್ಟತನದಲಿ ಶಿರವ ಕಾಯ್ದಗೆ 22 ಮದ್ರರಾಜನ ಕೊಲ್ಲುವೆನೆಂದು ಸಮುದ್ರಶಯನನ ಸಹಾಯದಿಂದ ಭದ್ರಗಜವನು ಏರೆ ಧರ್ಮಜ ಕಾಲರುದ್ರನಂದದಿ ಕೊಲಿಸಿದವಗೆ 23 ಭೀಮ ದುರ್ಯೋಧನರು ಯುದ್ಧದಿ ಹೇಮದ ಗದೆಯನ್ನು ಪಿಡಿದು ಪ್ರೇಮದಿಂದಲೆ ಕಾದುತಿರಲು ನಿರ್ನಾಮವನು ಮಾಡಿಸಿದ ಸ್ವಾಮಿಗೆ 24 ಗೃಧ್ರ ಉಲೂಕದ ವೃತ್ತಿಯ ನೋಡಿ ಭದ್ರೆದ್ರೌಪದಿ ಪುತ್ರನನ್ನು ನಿದ್ರೆಕಾಲದಿ ಕೊರಳಕೊಯ್ಯಲು ಶಿರದಲಿದ್ದ ಮಣಿಯ ತೆಗೆಸಿದವಗೆ 25 ದ್ರೋಣಪುತ್ರನ ಬಾಣದಿಂದಲೆ ತ್ರಾಣಗೆಟ್ಟ ಶಿಶುವ ನೋಡಿ ಜಾಣತನದಲಿ ಚಕ್ರವಪಿಡಿದು ಪ್ರಾಣವನು ರಕ್ಷಿಸಿದ ಸ್ವಾಮಿಗೆ 26 ಏಳುಹನ್ನೊಂದು ಸೇನೆಗಳನೆಲ್ಲ ಹಾಳುಮಾಡಿ ಹದಿನೆಂಟುದಿವಸದಿ ಖೂಳಕೌರವರನೆಲ್ಲ ಕೊಂದು ಧರ್ಮನಲಿ ರಾಜ್ಯವಾಳಿಸಿದಗೆ 27 ಸೌಪ್ತಿಕದಲಿ ಪುತ್ರನ ಕೊಲ್ಲಿಸಿ ಸ್ತ್ರೀಪರ್ವದಿ ಭೂಮಿ ಭಾರವಡಗಿಸಿ ಶಾಂತಿಪರ್ವದಿ ಧರ್ಮರಾಯಗೆ ಪಟ್ಟಾಭಿಷೇಕವ ಮಾಡಿಸಿದಗೆ 28 ಮುಸಲದಲಿ ಯಾದವರನಡುಗಿಸಿ ಅನುಶಾಸನದಿ ಧರ್ಮಪೇಳಿಸಿ ಅಶ್ವಮೇಧ ಮಹಾಪ್ರಸ್ಥ ಸ್ವರ್ಗಾರೋಹಣವ ಮಾಡಿಸಿದಗೆ 29 ಅಂದುಪಾರ್ಥಗೆ ಸಾರಥ್ಯವಮಾಡಿ ಬಂಧುಗಳ ಸ್ವರ್ಗವಾಸಮಾಡಿಸಿ ಬಂದು ಬೃಂದಾರಣ್ಯದಲ್ಲಿ ಇಂದಿರೇ ಸಹನಿಂದ ಸ್ವಾಮಿಗೆ 30 ಅನಿರುದ್ಧ ಸಾತ್ಯಕಿ ರುಕ್ಮಿಣಿ ಸಹಿತಲೆ ಬಂದು ನಿಂದವಗೆ 31 [ವರ] ಕಲಿಯುಗದೊಳಗುಳ್ಳ ದುಷ್ಟಕರ್ಮಿಗಳನೆಲ್ಲ ಸಲಹುವೆನೆಂದು ಕೈರವಿಣಿತೀರದಲಿನಿಂದ ಕರುಣಿ ವೆಂಕಟಕೃಷ್ಣನಂಘ್ರಿಗೆ ಮಂಗಳಂ 32
--------------
ಯದುಗಿರಿಯಮ್ಮ
ಮಂಗಳಂ ಶ್ರೀ ರಘುಪುಂಗವನಿಗೆ ಜಯ ಶುಭ 1 ಶಿಷ್ಟ ಜನಗಳಿಗೆ ಇಷ್ಟಾರ್ಥಗಳೀವ ವೃಷ್ಟಿವರೇಣ್ಯ ಶ್ರೀ ಕೃಷ್ಣ ಮೂರುತಿಗೆ 2 ಸಚ್ಚಿದಾನಂದ ಸ್ವರೂಪಗೆ ಮಂಗಳಂ ಸತ್ಯವತಿ ಸುಕುಮಾರಗೆ ಮಂಗಳಂ3 ಹೇಮಕಶಿಪುವಿನ ತನಯನಿಗೊಲಿದ ನಾಮಗಿರೀಶ ಶ್ರೀ ಸ್ವಾಮಿನೃಸಿಂಹಗೆ 4 ತನ್ನ ಭಕುತರಿಗೆ ಹೊನ್ನು ಮಳೆಗರೆವ ಪನ್ನಗಶಯನ ಪ್ರಸನ್ನವಿಠಲಗೆ 5
--------------
ವಿದ್ಯಾಪ್ರಸನ್ನತೀರ್ಥರು
ಮಂಗಳಂ ಶ್ರೀ ಶ್ರೀನಿವಾಸಗೆ ಶೃಂಗಾರರೂಪಗೆ ಮಂಗಳಂ ಶ್ರೀ ಶ್ರೀನಿವಾಸಗೆ ಪ. ಪದ್ಮನಾಭ ಪದ್ಮ ಮುಖಗೆ ಪದ್ಮಪಾದಗೆ ಪದ್ಮವತಿಯ ವರಿಸಿದವಗೆ ಪದ್ಮೋದ್ಭವನ ಸೇವೆ ಕೊಂಬಗೆ 1 ಆರ್ತ ಜನರ ಪೊರೆಯುವನಿಗೆ ಪಾರ್ಥಸಾರಥಿಗೆ ಕೀರ್ತಿಸುವರ ಕಾಯ್ದೆನೆಂದು ಅರ್ಥಿಯಿಂದ ನಿಂತಿರುವಗೆ 2 ಯೋಗಿಗಳಿಗೆ ನಿಲುಕದವಗೆ ಭೋಗಿಶಯನಗೆ ಭಾಗವತರು ಸ್ತುತಿಸಲು ಅನು- ರಾಗದಿಂದ ಲಾಲಿಪನಿಗೆ 3 ಭಕ್ತ ಜನರ ಕಾಯುವನಿಗೆ ಮುಕ್ತಿದಾಯಕನಿಗೆ ನಿತ್ಯಮುಕ್ತ ನಿಗಮವೇದ್ಯ ಸತ್ಯಸಂಕಲ್ಪ ಹರಿಗೆ 4 ಭೂಪರೈವರ ಪೊರೆದವಗೆ ತಾಪಹರನಿಗೆ ಗೋಪಾಲಕೃಷ್ಣವಿಠ್ಠಲಗೆ ಶ್ರೀಪತಿ ಶ್ರೀ ಶ್ರೀನಿವಾಸಗೆ 5
--------------
ಅಂಬಾಬಾಯಿ
ಮಂಗಳಂ ಶ್ರೀರಂಗಗ ಮಂಗಳಂ ಇಂಗಿತ ಭಕ್ತರ ಅಂಗಸಂಗಾದವಗ ಪ ಸಿರಿತಳಕ ಮಂಗಳ ಕಾಲಿಯ ವರದನಾ ವರನಖಮಂಗಳ ಗಂಗೆ ಪಡಿದನಾ ಚರಣ ಕಮಂಗಳ ಅಹಿಲ್ಯ ಉದ್ಧಾರಗ ನೆರೆಜಂಘಗೆ ಮಂಗಳೆ ಶೊದಾನಂದನಾ 1 ತೊಡೆಗಳಿಗೆ ಮಂಗಳ ಗರುಡ ವಾಹನನಾ ನಡುವಿಗೆ ಮಂಗಳ ಧೃವ ಗೊಲಿದನ ಒಡಲ ಕಮಂಗಳ ಜಗವಳ ಕೊಂಬನಾ ಧೃಡ ನಾಭಿಗೆ ಮಂಗಳ ಬ್ರಹ್ಮ ಪಿತನಾ 2 ಉರ ಸಕ ಮಂಗಳ ಉಪಮನ್ಯು ಪ್ರೀಯನಾ ಸಿರಿವಕ್ಷಕ ಮಂಗಳ ಭೃಗು ರಕ್ಷನಾ ಕರಗಳಿಗೆ ಮಂಗಳ ಕರಿರಾಜ ವರದನಾ ಕೊರಳಿಗೆ ಮಂಗಳ ತುಳಸಿ ಧರನಾ 3 ಇದು ಶೃತಿಗೆ ಮಂಗಳ ಹನುಮನೇ ಕಾಂತನಾ ವದನಕ ಮಂಗಳ ವಿದುರ ಗೊಲಿದನಾ ಅದೇ ಫ್ರಾಣಕೆ ಮಂಗಳ ಪ್ರಲ್ಹಾದ ವತ್ಸಲನಾ ಮದನ ಮೋಹನನಾ 4 ಸಿರಸಕ ಮಂಗಳ ಫಣಿರಾಜಶಯನನಾ ದೊರೆತನಕ ಮಂಗಳ ಶ್ರೀ ಭೂರಮಣನಾ ಗುರುತನಕ ಮಂಗಳ ಉದ್ಬವತಾರಕನಾ ಕರುಣಿಗೆ ಮಂಗಳಾರ್ಜುನ ಬೋಧನಾ 5 ಪ್ರಭುಗೆ ಮಂಗಳ ಬಲಿ ವಿಭೀಷಣರ ಸ್ಥಾಪನಾ ಅಭಯಕ ಮಂಗಳಾಜಮೀಳ ಪಾಲನಾ ಅಭಿಮಾನಿಗೆ ಮಂಗಳಾ ಪಾಂಚಾಲಿಕಾಯಿದನಾ ಪ್ರಭೆಗೆ ಮಂಗಳಾ ರವಿ ಸೋಮಾತ್ಮಕನಾ 6 ಸಿರಿನಾಮಕ ಮಂಗಳ ನಾರದ ಪ್ರೀಯನಾ ಕ ಮಂಗಲ ಶಿವ ವಂದ್ಯನಾ ಗುರುವರ ಮಹಿಪತಿ ನಂದನಸಾರಥಿ ಬಿರದಿಗೆ ಮಂಗಳಾಂಬರೀಷ ನೊಡಿಯನಾ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಂಗಳಂ ಶ್ರೀರಾಮಚಂದ್ರಗೆ ಜಯ ಮಂಗಳಂ ಸೀತಾಸಮೇತನಿಗೆ ಪ. ಮಚ್ಛಾವತಾರಗೆ ವೇದವ ತಂದಗೆ ಕೂರ್ಮರೂಪದಿ ಜಲದೊಳು ಪೊಕ್ಕವಗೆ ಹಿರಣ್ಯಾಕ್ಷಸುರನ ಗೆಲಿಯೆ ಬಂದು ಮೆಚ್ಚೆ ವರಹರೂಪ ತೋರಿದಗೆ 1 ಛತ್ರಿಯ ಪಿಡಿದು ಭರತ ನಿಂದಿರಲಾಗ ಶತ್ರುಘ್ನ ಚಾಮರವನು ಬೀಸಲು ಮತ್ತೆ ಲಕ್ಷ್ಮಣ ಮಡುದೆಲೆ ಕೊಡುತಿರಲಾಗಿ ವಿಸ್ತಾರ ವೈಭೋಗ ರಘುರಾಮಗೆ 2 ತಮ್ಮ ಲಕ್ಷ್ಮಣ ಸಹ ಒಲ್ಮೆಯಿಂದಲಿ ಬಂದ ನಮ್ಮ ಶ್ರೀರಘುರಾಮಚಂದ್ರನಿಗೆ ಸನ್ಮಾನದಲಿ ರಾಮ ಸಾಗರಶಯನಾಗೆ ಚೆನ್ನ ಚುಂಚನಕಟ್ಟೆಸ್ಥಿರವಾಸಿಗೆ 3 ಎಡದ ಕರದಿ ಬಿಲ್ಲು ಬಲದ ಕರದಿ ಬಾಣ ಕರದ ಕಮಲದೊಳಗಿಪ್ಪವನಿಗೆ ಸಿರಿ ಸೀತೆಯ ಧರಿಸಿದ ಚದುರ ಶ್ರೀ ಕಲ್ಯಾಣ ಚಂದ್ರನಿಗೆ 4 ಹರುಷದಿ ದೇವತೆಗಳಿಗೊರವಿತ್ತಗೆ ದುರುಳ ರಕ್ಕಸರ ಸಂಹರಿಸಿದಗೆ ಪರಮ ಭಕ್ತನಿಗೆ ಸ್ಥಿರರಾಜ್ಯವನೆ ಕೊಟ್ಟ ಹಯವದನಮೂರ್ತಿ ಎಂದೆನಿಸಿದಗೆ 5
--------------
ವಾದಿರಾಜ
ಮಂಗಳಂ ಸರ್ವಜೀವ ರಕ್ಷಕಗೆಮಂಗಳಂ ಅಂಬುಜದಳಾಕ್ಷಗೆ ಪ ಶುಭ ಮಂಗಳಂ 1 ವಸುಧೆ ಈರಡಿ ಗೈದವಗೆ ಮಂಗಳಂವಸುಧೇಶ ಕುಲವನಳಿದಗೆ ಮಂಗಳಂದಶಕಂಧರನನು ಗೆಲಿದಗೆ ಮಂಗಳಂಪಶುಗಳ ಕಾಯ್ದವಗೆ ಮಂಗಳಂ 2 ವಾಹನ ವಾರಿಧಿ ಶಯನವರ ಕಾಗಿನೆಲೆಯಾದಿಕೇಶವಗೆ ಮಂಗಳಂ 3
--------------
ಕನಕದಾಸ
ಮಂಗಳ ಸೋದೆಯ ರಾಜರಿಗೆ | ಜಯಮಂಗಳ ವಾದೀಭ ಮೃಗರಾಜರಿಗೇ ಪ ಬುದ್ಧ ಚಂದ್ರನಿಗೆ 1 ಶ್ರೀ ಮದ್ಹಯ ಮುಖ | ಸ್ವಾಮಿ ಸುಪ್ರೀಯಗೆಕಾಮಿತ ಫಲ ಪ್ರದ | ಕಾಮಧೇನುವಿಗೆ 2 ನಿರತಿ ಶಯನು ಹರಿ | ಸರ್ವಕ್ಕಧಿಕನಾದಗುರು ಗೋವಿಂದ ವಿಠಲ ಭಕ್ತೇಶನಿಗೇ 3
--------------
ಗುರುಗೋವಿಂದವಿಠಲರು