ಒಟ್ಟು 13912 ಕಡೆಗಳಲ್ಲಿ , 138 ದಾಸರು , 7210 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸುಮ್ಮನೆ ಕಾಲವ ಕಳೆವರೆ - ಯಮ - |ಧರ್ಮರಾಯನ ದೂತರೆಳೆಯರೆ ಪ.ನರಿ - ನಾಯಿ ಜನುಮವು ಬಾರದೆ - ಹಾಗೆ - |ನರಜನ್ಮದಲಿ ಬಂದು ಸೇರದೆ ||ಹರಿಯ ಸ್ಮರಣೆ ಮಾಡಲಾರದೆ - ಸುಮ್ಮ |ನಿರಲು ಪಾಪದ ವಿಷವೇರದೆ 1ಬಾಲನಾಗಿದ್ದಾಗ ಬಹುಲೀಲೆ - ಮುಂದೆ |ಲೋಲನಾಗಿ ಬಾಳಿದ ಮೇಲೆ ||ಮೂಳ ವೃದ್ಧಾಪ್ಯ ಬಂತಾಮೇಲೆ - ಇನ್ನು - |ಬಾಳುವುದೆಲ್ಲ ನೂಲಮಾಲೆ 2ಮಡದಿ - ಮಕ್ಕಳ ಕೂಡಣ ಬಾಳು - ತನ್ನ |ಒಡಲಿಗಾಗೆ ತಾನು ಕರವಾಳು ||ಬಿಡದೆ ಸಂಕೀರ್ತನೆ ಮಾಡೇಳು - ಮಿಕ್ಕ - |ನುಡಿದ ನುಡಿಗಳೆಲ್ಲವು ಬೀಳು 3ಮನೆಮನೆ ವಾರ್ತೆಯು ಸ್ಥಿರವಲ್ಲ - ಈ |ಮನುಜರ ಮಾತೇನು ಘನವಲ್ಲ ||ವನಜಸಂಭವಗೂ ನಿಶ್ಚಯವಿಲ್ಲ - ಮುಂದೆ |ಹನುಮಂತ ಪಟ್ಟಕೆ ಬಹನಲ್ಲ 4ಇಂದಿನಹಮ್ಮು ನಾಳೆಗೆ ಇಲ್ಲ -ಭವ |ಬಂಧನದೊಳು ಸಿಕ್ಕಿ ನರಳಿದೆನಲ್ಲ ||ಮುಂದನರಿತು ನಡೆದುದಿಲ್ಲ - ಮೃತ್ಯು |ಬಂದಾಗ ಬಿಡಿಸಿಕೊಳ್ಳುವರಿಲ್ಲ 5ಮರಣವುಆವಾಗ ಬರುವುದೋ - ತನ್ನ |ಶರೀರವುಆವಾಗ ಮುರಿವುದೊ ||ಕರಣಂಗಳೆಲ್ಲವು ಜರಿವುದೊ - ತನ್ನ |ಗರುವದುಬ್ಬಸವೆಲ್ಲ ಮುರಿವುದೊ 6ಮರಣಕಾಲಕೆ ಅಜಮಿಳನಾಗ - ತನ್ನ |ತರಳನನಾರಗನೆಂದು ಕರೆದಾಗ ||ಕರುಣದಿ ವೈಕುಂಠ ಪದವೀಗ -ನಿತ್ಯ - |ಪುರಂದರವಿಠಲನ ನೆನೆ ಬೇಗ 7
--------------
ಪುರಂದರದಾಸರು
ಸುಮ್ಮನೆ ದೊರಕುವುದೇ ಶ್ರೀರಾಮನ ದಿವ್ಯನಾಮವು |ಜನ್ಮಜನ್ಮಾಂತರದ ದುಷ್ಕರ್ಮ ಹೋದವಗಲ್ಲದೆ ಪ.ಕಂತುಪಿತನ ಮೂರುತಿಯ ತನ್ನಂತರಂಗದೊಳಿಟ್ಟು |ಚಿಂತೆ ಎಲ್ಲ ಬಿಟ್ಟು ನಿಶ್ಚಿಂತನಾದವಗಲ್ಲದೆ 1ಭಕ್ತಿರಸದಲಿ ತನ್ನ ಚಿತ್ತಪರವಶನಾಗಿ |ಅಚ್ಯುತನ ನಾಮವನು ಬಚ್ಚಿಟ್ಟು ಕೊಂಡವಗಲ್ಲದೆ 2ತನ್ನೊಳಗೆ ಇದ್ದ ಮೂರುತಿಯ ಕಣ್ಣೊಳಗೆ ತಂದರೆ |ಆನಂದ ಪೂರ್ಣ ಪುರಂದರವಿಠಲನ ನೋಡಿದವಗಲ್ಲದೆ 3
--------------
ಪುರಂದರದಾಸರು
ಸುಮ್ಮನೆ ಬರುವುದೆ ಮುಕ್ತಿ ಗುರುಧರ್ಮಭಿಕ್ಷವ ಬೇಡಿದವಗೆ ಸುಕೀರ್ತಿಮನದಲ್ಲಿ ದೃಢವಿರಬೇಕು ದುಷ್ಟಜನಸಂಸರ್ಗಗಳನು ಬಿಡಲಿಬೇಕುಕಾಮಕ್ರೋಧವ ಬಿಡಬೇಕು ಹರಿನಾಮ ಸಂಕೀರ್ತನೆಯನು ಮಾಡಬೇಕುವ್ಯಾಪಾರ ವರ್ಜಿಸಬೇಕು ಜ್ಞಾನದೀಪದ ಕಾಂತಿಯಲ್ಯೋಲಾಡಬೇಕು
--------------
ಗೋಪಾಲದಾಸರು
ಸುಮ್ಮನೆ ಬಾಹೂದೆ ಮುಕುತಿ - ನಮ್ಮ |ಚೆನ್ನಾದಿ ಕೇಶವನ ದಯವಾಗದನಕ ಪ.ಮನದಲ್ಲಿ ದೃಢವಿರಬೇಕು - ದುರ್ |ಜನರ ಸಂಗತಿಯನು ನೀಗಲುಬೇಕು ||ಅನಮಾನಂಗಳ ಬಿಡಬೇಕು - ತನ್ನ |ತನು - ಮನ ಹರಿಗೆ ಒಪ್ಪಿಸಿ ಕೊಡಬೇಕು 1ಕಾಮ - ಕ್ರೋಧವ ಬಿಡಬೇಕು -ಹರಿ |ನಾಮಸಂಕೀರ್ತನೆ ಮಾಡಲುಬೇಕು ||ಹೇಮದಾಸೆಯ ಸುಡಬೇಕು - ತ |ನ್ನಾ ಮನ ಹರಿಯ ಪಾದದಲಿಡಬೇಕು 2ಪಾಪಗಳನೆ ಕಳೆಯಬೇಕು - ಜ್ಞಾನ |ದೀಪ ಬೆಳಕಿನಲಿ ಲೋಲಾಡ ಬೇಕು ||ತಾಪ ರಹಿತಗೈಯಬೇಕು - ನಮ್ಮಓಪ ಪುರಂದರವಿಠಲನೊಲೆಯ ಬೇಕು 300
--------------
ಪುರಂದರದಾಸರು
ಸುರನರರ ಸಹಸಕ್ಹರಿ ಸಹಾಯ ಬೇಕುನರಹರಿಯು ಕೊಡದನಕ ದೊರೆವುದೇನು ಪ.ಹರಿಕೊಡದೆ ಅಜಭವರಿಗರಸುತನವೆಲ್ಲಿಯದುಹರಿಕೊಡದೆ ಸಿರಿಸಂಪದೆರವು ತನಗೆಹರಿಕೊಡದೆ ಸಕಳ ಜೀವರಿಗಶನ ದುರ್ಲಭವುಹರಿಕೊಡುವನಿರಲು ಅನ್ಯರಿಗೆ ಸ್ವಾತಂತ್ರ್ಯಿಲ್ಲ 1ಹರಿಯೆ ಜಡಚೇತನರ ಹೊರೆದುದ್ಭವಿಸಿ ಅಳಿವಹರಿಯಾವ ಕಾರ್ಯಕ್ಕೆ ಬೆರೆದು ಬರುವಹರಿಅಂತರ್ಬಹಿರದೊಳು ಭರಿತನಾಗಿಹ ತತ್ವಹರಿಯಿಲ್ಲದಾವ ತಾಣಿಲ್ಲ ನಂಬು ಹರಿಯ 2ಹರಿನುಡಿಯದಾರಿಗುತ್ತರಗುಡಲು ಬಲವಿಲ್ಲಹರಿನುಡಿಯನಾಲಿಪರು ಸಿರಿದಿವಿಜರುಹರಿನುಡಿಯೆ ಗತಿಮತಿಯು ಹರಿಯೆನ್ನ ದಾತಾರಹರಿಪ್ರಸನ್ವೆಂಕಟಪ ನಿರುತ ಬಿಡನೆನ್ನ3
--------------
ಪ್ರಸನ್ನವೆಂಕಟದಾಸರು
ಸುಲಭವಲ್ಲವೊ ಮಹಾನಂದ ತ -ನ್ನೊಳಗೆ ತಿಳಿಯಬೇಕುಗುರುದಯದಿಂದಪ.ಬೆಕ್ಕನು ಇಲಿ ನುಂಗುವನಕ - ಕಡು -ರಕ್ಕಸಿಯನು ಕಂಡು ಗಿಣಿ ನುಂಗುವನಕ ||ಮಕ್ಕಳ ಭಕ್ಷಿಸುವನಕ - ಮದ -ಸೊಕ್ಕಿದ ಗಜವನು ನರಿ ನುಂಗುವನಕ 1ಇಬ್ಬರೊಡನೆ ಕೊಡುವನಕ - ಮೂರು -ಹಬ್ಬಿದ ಬೆಟ್ಟವ ನೊಣ ನುಂಗುವನಕ ||ಒಬ್ಬರೊಡನೆ ಸೇರುವನಕ - ಕೆಟ್ಟ -ಗುಬ್ಬಿಯ ರಾಜಹಂಸವು ನುಂಗುವನಕ 2ಒಳ ಹೊರಗೊಂದಾಗುವನಕ - ತಾನು -ತಿಳಿದೆನೆಂಬಭಾವ ಬಯಲಾಗುವನಕ ||ಬೆಳಕಿನೊಳಗೆ ಕಾಣುವನಕ ನಮ್ಮ -ಚೆಲುವ ಪುರಂದರವಿಠಲನ ದಯವಾಗುವನಕ 3
--------------
ಪುರಂದರದಾಸರು
ಸುವ್ವಿ ಎಂದು ಪಾಡಿರೆ ಸುಜ್ಞಾನ ದೇವರಭವಹರಿವುದು ಭಯವಿಲ್ಲ ಸುವ್ವಿಪಂಚ ಶಕ್ತಿಗಳೆಂಬಪರಮಮುತ್ತೈದೆಯರುವಂಚನೆಗೆ ದೂರಾಗಿ ವರ್ತಿಸುತ ಸುವ್ವಿವಂಚನೆಗೆ ದೂರಾಗಿ ವರ್ತಿಪಐದೆಯರುಮುಂಚೆ ಬೇಗದಲಿ ಮಡಿಯಾಗಿ ಸುವ್ವಿ1ಕ್ಷೇತ್ರದ ಒರಳಲ್ಲಿ ಕ್ಷರನೆಂಬ ಅಕ್ಕಿಯುಕ್ಷೇತ್ರಜÕನೆಂಬ ಒನಕೆಯ ಸುವ್ವಿಕ್ಷೇತ್ರಜÕನೆಂಬ ಒನಕೆಯ ಪಿಡಿದುಪಾತ್ರನಾಗೆಂದು ಹರಸುತ ಸುವ್ವಿ2ಆರು ಮೂರಾದವನ ಐದು ಎಂಟಾದವನಬೇರೇಳು ನಾಲ್ಕೆರಡು ಬಗೆಯಾದವನ ಸುವ್ವಿಬೇರೇಳು ನಾಲ್ಕೆರಡು ಬಗೆಯಾದನೆಲ್ಲನುವಾರಣದಿ ನೀವೆಲ್ಲ ತಳಿಸಿರೆ ಸುವ್ವಿ3ವಾಸನೆಯ ಮೆರುಗನು ಒಳಿತಾಗಿ ತಳಿಸುತ್ತಸೂಸದಂತೆಲ್ಲವ ಮಗುಚುತ್ತ ಸುವ್ವಿಸೂಸದಂತೆಲ್ಲವ ಮಗಚುತ್ತ ಅಕ್ಕಿಯರಾಶಿಯನು ಮಾಡಿ ಬಿಡಿರವ್ವ ಸುವ್ವಿ4ಪರವಸ್ತುವಾದವನ ಪರಬ್ರಹ್ಮವಾದವನಪರಮಾತ್ಮನೆಂಬ ಪುರುಷನ ಸುವ್ವಿಪರಮಾತ್ಮನೆಂಬ ಪುರುಷ ಚಿದಾನಂದನಪರಮನೈವೇದ್ಯದ ಪಾಕಕ್ಕೆ ಸುವ್ವಿ5
--------------
ಚಿದಾನಂದ ಅವಧೂತರು
ಸುವ್ವಿ ಸುವ್ವಾಲಿ |ಸುವ್ವಿ ಸಾಧ್ವಿಯರು ರಾಘವೇಂದ್ರರ ಪಾಡಿ ಪಅಂದಿನ ಕಾಲದ ಮಧ್ವಶಾಸ್ತ್ರವ ಮನಕೆ ತಂದು |ಅಂದದಿ ಟಿಪ್ಪಣಿ ಮಾಡಿದ ದೇವರಾರು | ಸುವ್ವಿ ||ಅಂದು ವಾದಿಸುವ ಜನರನ್ನು ಬಾಯಿ ಮುಚ್ಚಿಸಿದ |ಚಂದಿರ ವದನೆ ಈತನಮ್ಮ ಗುರುವು | ಸುವ್ವಿ 1ಇವರ ಚರಿತೆಯನ್ನು ತೋರಿದಷ್ಟು ತುತಿಸುವೆ |ಕಿವಿಗೊಟ್ಟು ಕೇಳುವದುಬುಧಜನರು | ಸುವ್ವಿ ||ಪವನಾಂಶರಿವರು ಕವಲಿಲ್ಲ ಖ್ಯಾತರಾಗಿ |ಅವನಿಯ ಸುರರಿಂದರ್ಚನೆಗೊಂಗುವರು | ಸುವ್ವಿ 2ಅಷ್ಟಾಕ್ಷರ ಮಂತ್ರವನು ತಪ್ಪದಲೆ ನಿತ್ಯವಾಗಿ |ನಿಷ್ಠೆಯಿಂದ ಭಜಿಸಲು ಭೂತ ಭಯವು | ಸುವ್ವಿ ||ಕುಷ್ಠರೋಗ ಕ್ಷಯ ಪಾಂಡು ಜ್ವರ ಸನ್ನಿ ಮೊದಲಾದ |ಅಷ್ಟುಪದ್ರವಾಕ್ಷಣ ಬಿಟ್ಟು ಓಡುವುದು | ಸುವ್ವಿ 3ಮೃತ್ತಿಕೆಮಾಲೆಅಂಗಾರದಿವ್ಯ ಮಂತ್ರಾಕ್ಷತೆಯು |ಹತ್ತಿರವಿರಲು ಕ್ಲೇಶವ ಲೇಶ ಕಾಣರು | ಸುವ್ವಿ ||ಎತ್ತ ಹೋದರು ಜನರಿಗೆ ಜಯಪ್ರದ ತೋರುವದು |ಕತ್ತಲಿಲ್ಲ ಶತಸಿದ್ಧ ಮತ್ತೇನುಕೇಳಿ| ಸುವ್ವಿ 4ಪಂಡಿತರು ಮೊದಲಾಗಿಹಸ್ತಿಉಷ್ಟ್ರ ಕುದುರೆಯ |ಹಿಂಡುಗಳು ತೃಷೆಯಿಂದ ಬಳಲುತಿರೆ | ಸುವ್ವಿ ||ದಂಡ ಜಗತಿಗೂರಿ ತೋಯ ತೆಗಿಸಿಯವನೀ |ಮಂಡಲದೊಳಗೆ ಪೆಸರಾದರಿವರು | ಸುವ್ವಿ 5ಕಟ್ಟಲಿಯ ಭತ್ತದೊಳು ಭೂಪದಳಯುಕ್ತ ಬರ |ಲಿಟ್ಟುಕೊಂಡು ಉಣಿಸಿ ಉತ್ತಮ ವರವ | ಸುವ್ವಿ ||ಕೊಟ್ಟು ಕಳಿಸಿದ ಮೇಲೆ ಆವು ಕೊಂಚಿಯಾಗಲಿಲ್ಲ |ಗಟ್ಟಿ ಸಂಕಲ್ಪರಿವರು ಮುನಿವರರು | ಸುವ್ವಿ 6ವಿಪ್ರರೆಲ್ಲರು ಹೇಳಿಸಿ ಕಟ್ಟಿಸಿದ ಸದನವ |ಥಟ್ಟನೆ ಕೆಡಿಸಿ ಭೂಪ ಮೆಚ್ಚುವಂದದಿ | ಸುವ್ವಿ ||ನೆಪ್ಪು ಧರೆಗಾಗಲೆಂದುಗುರುಸುಧೀಂದ್ರ ಕುಮಾರ |ಸರ್ಪನ ತೋರಿಸಿ ಸುಪ್ರಖ್ಯಾತರಾದರು | ಸುವ್ವಿ 7ದ್ವಿಜರ ಸ್ತೋಮವು ಬಾಯಿ ಬಿಡುತಿರೆ ದಯದಿಂದ |ನಿಜಕಾಷ್ಟವಿಳೆಗೆ ನಿಲ್ಲಿಸಿ ಮರವ | ಸುವ್ವಿ ||ಸೃಜಿಸಿ ಪಲ್ಲವ ಫಲಯುಕ್ತವಾಗಿ ತೋರಿಸಿದ |ಭಜಿಸಿರಿವರನ್ನು ಮಕ್ಕಳು ಬೇಡುವವರು | ಸುವ್ವಿ 8ಮುತ್ತಿನ ಮಾಲಿಕೆನೃಪಭಕ್ತಿಯಿಂದ ಕೊಡಲಾಗಿ |ಸಪ್ತಜಿಹ್ವಗುಣಿಸಿದ ಸರ್ವರು ನೋಡಿ | ಸುವ್ವಿ ||ಮತ್ತೆ ಬೇಡಲು ಪಾವಕನಿಗೆ ಪ್ರಾರ್ಥನೆಯ ಮಾಡಿ |ಮತ್ರ್ಯಪಗೆ ಇತ್ತರು ಮೊದಲಂತೆಯೆ ತಂದು | ಸುವ್ವಿ 9ಹಿಂದೆ ಮಾಡಿದ ದುಷ್ಕರ್ಮ ತೀರ ಬಂದದನು ನೋಡಿ |ಬಂದಾಕ್ಷಣದಲ್ಲಿ ಅವನ ವಿಚಾರಿಸಿ | ಸುವ್ವಿ ||ಇಂದಿರೇಶನ ಕಾರುಣ್ಯ ಬಲದಿಂದ ಜನನೋಡೆ |ಸಂದೇಹವಿಲ್ಲದೆ ಸುಲೋಕವನಿತ್ತರು | ಸುವ್ವಿ 10ತುಂಗಾತೀರ ಮಂತ್ರಾಲಯದಲ್ಲಿಶ್ರಾವಣಬಹುಳ |ಮಂಗಳ ಬಿದಿಗಿಯಲ್ಲಿ ನಿವಾಸವಾದರು | ಸುವ್ವಿ ||ಶೃಂಗಾರ ವೃಂದಾವನ ದ್ವಾದಶನಾಮ ಶ್ರೀ ಮುದ್ರೆಯು |ಕಂಗಳುಸಾಲವು ನೋಡ ಹೊದ್ದ ಶಾಠಿಯ | ಸುವ್ವಿ 11ಅಂಧಕಬಧಿರಕುಂಟ ನಾನಾ ರೋಗಿಗಳು ಮತ್ತೆ |ಕಂದ ವಜ್ರ್ಯ ಮೊದಲಾದವರಿಗೆಕಾಮ್ಯ| ಸುವ್ವಿ ||ತಂದುಕೊಡುವರು ಬೇಗ ಇತರ ಸಂಶಯವಿಲ್ಲ |ಮಂದಭಾಗ್ಯರಿಗೆ ಇವರ ಸೇವೆ ದೊರೆಯದೇ || ಸುವ್ವಿ 12ಕೌತುಕವೇನೆನ್ನಲಿ ಮುಂಜಿ ವಿವಾಹ ಮಾಡಿಸುವರು |ಚಾತುರ್ಮಾಸದೊಳಗೆ ಗ್ರಹಗಳಸ್ತವಾಗೆ | ಸುವ್ವಿ ||ಧಾತಾ ಪಿತ ನಿಲಯವಿದೇನೋಯೆಂದು ತೋರುವದು |ಪ್ರೀತಿಯುಳ್ಳ ಭಕ್ತರಿಗೆ ಅಧಮರಿಗಲ್ಲ | ಸುವ್ವಿ 13ಪಾಡ್ಯ ಪೂರ್ವಾರಾಧನೆ ಉತ್ತರಾರಾಧನೆಗೆ |ಒಡ್ಡಿಬರುವುದು ಎಂಟು ದಿಕ್ಕುಗಳಿಂದ ಜನವು | ಸುವ್ವಿ ||ಕಡ್ಡಿಹಿಡಿಯದಂಥ ಸಂದಣಿಯೊಳು ಸನ್ಮುಹೂರ್ತದಿ |ದೊಡ್ಡ ರಥವೇರಿ ಮಠವ ಸುತ್ತುವರು | ಸುವ್ವಿ 14ಇಷ್ಟೇಯೆನ್ನಲು ವಶವಲ್ಲ ಮಹಿಮೆಗಳಿನ್ನೂ ಉಂಟು |ನಷ್ಟ ಮಾಡುವರು ದುರ್ಮತ ದಾರಿದ್ರ್ಯವ | ಸುವ್ವಿ ||ಸೃಷ್ಟಿಗೊಡೆಯ ಪ್ರಾಣೇಶ ವಿಠ್ಠಲನೆಂದು ಪೇಳ್ವರು |ಎಷ್ಟು ಪೇಳಿದರೂ ಎನ್ನಿಂದಲಿ ತೀರದು | ಸುವ್ವಿ 15
--------------
ಪ್ರಾಣೇಶದಾಸರು
ಸುಳಾದಿಧ್ರುವತಾಳಬಾಲ ಸೂರ್ಯನಿಭಮಣ್ಯಾಂಕಮೌಳಿಹೀಲಿಯ ಪಿಂಛಪ್ರವಾಳಗುಚ್ಛಮ್ಯಾಲಲರದಂಡೆ ಝೇಂಕರಿಪಾಳಿಬಾಲರಯ್ಯನ ಮೊಗದ ಶೋಭೆಭ್ರೂಲತೆ ವಿಲಾಸ ನೋಟದಿಮಕರಕುಂಡಲವಿಶಾಲೇರಿ ಸಿರಿವತ್ಸಕೌಸ್ತುಭನೀಲಮಾಣಿಕ ವಜ್ರವಲಯ ವೈಜಂತಿವನಮಾಲೆ ತುಲಸಿ ಗಂಧ ಮೌಕ್ತಿಕ ಸರಗಳನೀಲನದ ರತುನದಾಮಪೊನ್ನಚೇಲನೂಪುರ ಕಿರುಗೆಜ್ಜೆಯ ಗೋಪಾಲ ಪರಸನ್ನವೆಂಕಟ ಕೃಷ್ಣ ಶಾಮಲಕಾಯ 1ಮಠ್ಯತಾಳನಂದವ್ರಜದ ಗೋವರ ವೃಂದಾಂಬುಧಿಗೆ ಪೂರ್ಣೇಂದು ನÀಂದಸೂನು ಲಾಸ್ಯವಾಡೆಒಂದೊಂದು ಲಯದಗತಿಹೊಂದ್ಯಮರದುಂದುಭಿಗಳ್ದಂ ಧಳಧಂ ಧಂದಳೆನ್ನೆಗಂಧರ್ವ ತುಂಬುರರು ನಾರಂದ ಮಹತೀಗೀತ ಪ್ರಬಂಧ ಹೇಳೆ ನಂದರಸದಿಂದಾಡುತಿರೆ ಗೋವಿಂದ ದಂದಂ ದಂದಂ ಧಿಮಿಕೆನ್ನಲಂದದಿ ಮದ್ದಳೆ ತಾಳಬಂದಿಮೊಗ ? ತುತ್ತುರಿ ಕಹಳೆ ಕಂಬುವೇಣುಗೂಡಿಅಂದಾಡಿದ ಪ್ರಸನ್ವೆಂಕಟ ಕೃಷ್ಣ ನಲವಿಂದ 2ತ್ರಿವಿಡಿ ತಾಳಶ್ರೀಕಮಲ ಭಭೂರ್ವಪಿನಾಕಿವಿಪಾಹಿಪನಾಕಜಾದ್ಯರ ಚೇಷ್ಟಕಶ್ರೀಕರ ಪ್ರಸನ್ನವೆಂಕಟ ಕೃಷ್ಣಆಕಳಕಾವರ ವಶಗ ಹಾಹಾ 3ಅಟ್ಟತಾಳಅನಂತನಿಗಮನಿಕರಕೆ ನಿಲುಕದಅನಂತಾನಂತ ಗುಣಪರಿಪೂರ್ಣಗೆಧÉೀನುಕಾವರ ಪಳ್ಳಿ ಗೋಟಲೆತೀಯಂ ತೀಯಂ ವೈಯ್ಯ ಅಯ್ಯಾಧೇನುಕಾವರ ಪಳ್ಳಿ ಗೋಟಲೆಜ್ಞಾನಿಜನಕೆಮೋದಹಾನಿ ಖಳರ್ಗೀವಜ್ಞಾನಾನಂದ ಬಾಲ ಪ್ರಸನ್ನವೆಂಕಟ ಕೃಷ್ಣಗೆ 4ಏಕತಾಳವೈಕುಂಠ ವಾರಿಜಾಕ್ಷ ಲೋಕರಕ್ಷತೋಕವೇಷಧರಮುರಹರಶ್ರೀಧರಶ್ರೀಕರ ಗುಣನಿಧೆ ಪುರಾಣಪುರುಷ ಹರೇ ಹರೇಗೋಕುಲಪತೆ ಗೋವರ್ಧನಧರಪಾಕಹ ಮದನಿಕಾರಕರ ಪ್ರಸನ್ವೆಂಕಟ ಕೃಷ್ಣನೆಲೊ ಭಕ್ತವತ್ಸಲ 5ಜತೆಶುಭಕೀರ್ತನೆ ಜಿಹ್ವೆಗೆ ಶುಭಕಥೆ ಕಿವಿಗಳಿಗೆಶುಭಮೂರ್ತಿ ಕಣ್ಗೀಯಯ್ಯ ಪ್ರಸನ್ವೆಂಕಟಕೃಷ್ಣಯ್ಯ
--------------
ಪ್ರಸನ್ನವೆಂಕಟದಾಸರು
ಸುಳ್ಳು ಮಾತಿನ ನಿನ್ನಾಚಾರವು ತಿಳಿವಿಕೆ ಏನೇನಿಲ್ಲಎಲ್ಲ ಡಂಭವು ನಡತೆಯ ವಿವರವು ಗತಿಗೆನೀ ದೂರಾದೆಯಲ್ಲಪಮಂಡೆಯ ಬೋಳಿಸಿ ಕಣ್ಣನೆ ಮುಚ್ಚುವಿಪಿಟಿಪಿಟಿ ಏನದು ಮಂತ್ರದಂಡವೇತಕೆ ಮನಸದು ಚಂಚಲಏತಕೆ ಮಾಡುವಿ ತಂತ್ರ1ಕೈಯಣ ಗಿಂಡಿಯ ಕಂಕುಳ ಪೆಟ್ಟಿಗೆಕಟ್ಟಿಯಿಹುದು ತಲೆಗಟ್ಟುಬೈಗಳೆಂಬುವು ಪರಿಪರಿ ನೋಡಲುಕೋತಿ ಹಾರಿಕೆಯಳವಟ್ಟು2ಜ್ಞಾನವದಿಲ್ಲವು ಪುಸ್ತಕ ಮನೆಯೊಳುಹೋಳಿಗೆ ತುಪ್ಪದ ಗಬಕುಧ್ಯಾನವಿಲ್ಲವು ಮೌನವಿಲ್ಲವು ಯಮನಕೈಯಿಂದ ದುಬುಕು3ನಿರಿವಿಡಿದುಟ್ಟಿಹ ಪಂಚೆಕಚ್ಚೆಯಧೋತ್ರನಾಮ ವಿಭೂತಿಯ ಬೆಳಕುಪರಮಾನ್ನವ ಸಕ್ಕರೆಯನು ಕಲಸಿನುಂಗುವೆ ಗುಳುಕು ಗುಳುಕು4ಮುಂದೆ ಹೇಳುವನ ಮೆಟ್ಟಿಕೊಂಡುಂಬುದುಇಂತಿದು ನಿನ್ನಯ ಬದುಕುಸುಂದರ ಚಿದಾನಂದ ಸ್ವರೂಪವ ತಿಳಿವುದುಎಂದುಎಂದಿಗೆ ಬಲುಧಡಕ5
--------------
ಚಿದಾನಂದ ಅವಧೂತರು
ಸೂದನ ಗುಣಗಳ ಶೋಧನ ಮಾಡೋದೇ ಪಹರಿಸರ್ವೋತ್ತಮಗುರುಜೀವೋತ್ತಮಪುರಹರಸುರವರ ಪರಿವಾರಾವರಿತು ವಿಧಿಯ ನೀ ಪರಿಪರಿ ಭಜಿಪೋದೆ 1ಸೀಲಜೀವರ ಪ್ರೇಮ ಮೆಲ್ಲುವನೆಂಬುದೆ 2ಮತ್ಸರಿಸದೆ ಪರಮೋತ್ಸನಾಗೋದೆ 3ಮಾತಾಪಿತರುಸತಿಪೋತರು ಸಿರಿಸತಿನಾಥನ ಪದಯುಗದೂತರು ಎಂಬುದೆ 4ವನಜಾಕ್ಷನಗುಣಮನದಲಿ ಎಣಿಸಿದೆದಣಿದರೆ ಮುಕುತಿಯು ತನಗಿಲ್ಲೆಂಬುದೆ 5ದಾಸನಾಗಿ ಭವದಾಸೆಯ ನೀಗೋದೆ 6ನಂದದಿ ಪರರನು ನಿಂದಿಸದಿಪ್ಪೋದೆ 7ಪಾಸನ ಮಾಡುತ ಸೋಸಿಲಿ ಇರುವೋದೆ 8ಮಾಧವದೊರೆಯನು ಖೇದವು ಬರುವುದುಮೋದಕೊಡುವವೋ ಹಾದ್ಯೆಲ್ಲೆಂಬೋದೆ9ಸದಮಲಮೂರುತಿ ಹೃದಯದಿ ಕಾಂಬೋದೆ 10ಅಂಬುಜಭವನಾಂಡದಿ ಶಿರಿಬಿಂಬನೆ ಈಪರಿತುಂಬಿಹನೊಬೊಂಬೆಯ ತೆರ ಕುಣಿಸುವನೆಂಬೋದೆ 11ಶ್ರೀವರ ತಾ ನಮ್ಮ ಕಾವನುಎನುತಭಾವಿಸಿ ಈಪರಿಸೇವೆಯ ಮಾಡೋದೆ12ವಹಿಸಿದ ದಾಸ್ಯದ ವಿಹಿತನು ಎನಿಸೋದೆ 13ನಾಥನೆಂದು ಈ ರೀತಿಲಿ ಇಪ್ಪೋದೆ 14
--------------
ಗುರುಜಗನ್ನಾಥದಾಸರು
ಸೆರಗ ಬಿಡಯ್ಯ ಕೃಷ್ಣ - ಕರೆಯಲು ಪೋಪೆನು |ಕರುಗಳು ಹಸಿದಿವೆ ಕರುಣಿಗಳರಸನೆ ಪಕೆನೆಮೊಸರನೆ ಕಡೆದು ನಿನಗೀವೆ ಬೆಣ್ಣೆಯ |ಗೊನೆಯ ಬಾಳೆಯ ಹಣ್ಣ ತಿನಲು ಕೊಡುವೆ ||ನೆನೆಗಡಲೆ ಕೊಬ್ಬರಿ ನಿನಗೆ ಮೆಲಲಿಕ್ಕುವೆ |ತನಯರೊಡನೆ ಆಡಕಳುಹುವೆ ರಂಗಯ್ಯ 1ಗೋವಳರೆಲ್ಲ ಬಂದು ಬಾಗಿಲೊಳಗೆನಿಂದು|ಗೋವುಗಳನು ಬಿಡಲು ಸಾರುತಿಹರು ||ನೋವುಗೊಳಿಸಬೇಡ ಪರರ ಮಕ್ಕಳ ನೀನು |ಭಾವಜನಯ್ಯನೆ ಲಾಲಿಸೀ ನುಡಿಯನು 2ಶರಧಿಯ ತಡಿಯಲಿ ನೆರೆದಿಪ್ಪ ಸತಿಯರ |ಪರಿಪರಿ ವಸ್ತ್ರವ ಸೆಳೆಯಬೇಡ ||ನೆರೆಮನೆ ಹೊರೆಮನೆ ಕರುಗಳ ಬಿಡಬೇಡ |ಸುರರಿಗೊಡೆಯ ನಮ್ಮ ಪುರಂದರವಿಠಲ 3
--------------
ಪುರಂದರದಾಸರು
ಸೈಶಬಾಸ ಗಬರು ದರೋಡೆ ಬರತದಅಬಬ್ಬ ನೋಡಿದರೆ ಆರ್ಭಟಸಬಬ ಐತಿದು ಸಾಧುರ ಪುಣ್ಯಶುಭನುಡಿಯುತದ ಶಕುನದ ಹಕ್ಕಿಪಐದು ಮಂದಿ ನೆಲೆಗಳ್ಳರು ಕೂಡಿಊರ ಆತ್ಮದಲಿ ಸೇರುವರುಐಕ್ಯದಿಂದ ಶ್ರೀ ಗುರುವಿನ ಕೂಡಿಐದು ಮಂದಿ ಬಿಟ್ಟೋಡುವರು1ಎಂಟು ಹತ್ತು ಮಂದಿ ಬಂಟರು ಕೂಡಿಮುತ್ತಿಗೆ ಹಾಕಿ ನಿನ್ನ ಕೆಡಿಸುವರುಸತ್ಯನಾದ ಶ್ರೀ ಗುರುವಿನ ನೆನೆದರೆಹತ್ತು ಮಂದಿ ಬಿಟ್ಟೋಡುವರು2ನೋಡಿ ಬಗೆಯೋ ನಿನ್ನ ಕಾಡವು ಹುಲಿಗಳುಬೇಡಿದ ಪದಾರ್ಥ ದೊರಕುವುದುಕೂಡಿ ಭಜಿಸೊ ಶ್ರೀ ಚಿದಾನಂದನಮೂಲ ಮಂತ್ರಪ್ರಣವದೊರಕುವುದು3
--------------
ಚಿದಾನಂದ ಅವಧೂತರು
ಸೈಸಲಾರೆನೆಗೋಪಿನಿನ್ನ ಮಗನ ಲೂಟಿ |ಏಸೆಂದು ಪೇಳಲಮ್ಮ ||ವಾಸುದೇವನು ಬಂದು ಮೋಸದಿಂದಲಿ ಎನ್ನ |ವಾಸವಸೆಳಕೊಂಡು ಓಡಿ ಪೋದನಮ್ಮಪದೇವರ ಪೆಟ್ಟಿಗೆ ತೆಗೆದು ಸಾಲಿಗ್ರಾಮ |ಸಾವಿರ ನುಂಗುವನೆ ||ಭಾವಜನಯ್ಯಇದೇನೆಂದರೆ ನಿಮ್ಮ |ಕಾಮದೇವರು ನಾನು ಕೇಳಿಕೊ ಎಂಬನೆ 1ಅಗ್ರೋದಕತಂದು ಜಗುಲಿ ಮೇಲಿಟ್ಟರೆ |ವೆಗ್ಗಳದಲಿ ಕುಡಿವ ||ಮಂಗಳ ಮಹಿಮನ ವಿೂಸಲೆಂದರೆ ನಿಮ್ಮ |ಮಂಗಳಮಹಿಮನ ಅಪ್ಪನಾನೆಂಬುವ 2ಅಟ್ಟಡಿಗೆಯನೆಲ್ಲ ಉಚ್ಛಿಷ್ಟವ ಮಾಡಿ |ಅಷ್ಟು ತಾ ಬಳಿದುಂಬನೆ ||ವಿಷ್ಣು ದೇವರ ನೈವೇದ್ಯವೆಂದರೆ ನಿಮ್ಮ |ಇಷ್ಟದೇವರು ತೃಪ್ತನಾದನೆಂತೆಂಬುವ 3ಋತುವಾದ ಬಾಲೆಯರು ಪತಿಯೆಡೆ ಪೋಪಾಗ |ಕೃತಕದಿಂದಡಗಿಹನೆ ||ಮತಿಗೆಟ್ಟ ಪೆಣ್ಣೆ ಸುಂಕವ ಕೊಡು ಎನುತಲಿ |ಪ್ರತಿಯಾಗಿ ಮಾರನ ಸೂರೆಗೊಂಬುವನೆ 4ಅಚ್ಚಪಾಲು-ಮೊಸರುನವನೀತಮಜ್ಜಿಗೆ |ರಚ್ಚೆಮಾಡಿ ಕುಡಿವ ||ಅಚ್ಚ ಪುರಂದರವಿಠಲರಾಯನ |ಇಚ್ಛೆಯಿಂದಲಿ ನಿಮ್ಮ ಮನೆಗೆ ಕರೆದುಕೊಳ್ಳಿ 5
--------------
ಪುರಂದರದಾಸರು
ಸೊಡ್ಡುಡಂಬಕಅವನಿಭಾರಂಗೆ ಸೊಡ್ಡುಸೊಡ್ಡು ಭಕುತಿಹೀನ ಹೆಡ್ಡಂಗೆ ಸೊಡ್ಡು ಪ.ಶುದ್ಧ ಸಾತ್ವಿಕಗುರುಮಧ್ವಮತವ ಬಿಟ್ಟುಬದ್ದಡ್ಡ ದಾರಿಯವಿಡಿದಗೆ ಸೊಡ್ಡುಮದ್ಯಘಟಕೆ ಮನವಿಟ್ಟು ಪೀಯೂಷವನೊದ್ದು ಕಳೆದ ಹೊಲೆ ಮಾನಿಸಗೆ ಸೊಡ್ಡು 1ಜಗದೆರೆಯನ ಜಗದಾಕಾರ ಸಟೆಯೆಂದುಬಗುಳ್ವ ಬಾಯೊಳು ಹೊಡೆ ಮಗುಳೆ ಸೊಡ್ಡುಅಘಹರನಾಳಿಗಾಳಾಗಿ ದೊರೆಯೆ ತಾನೆಂಬಗೆ ನಗೆಗೇಡಿನಾ ಮಾತೆ ಸೊಡ್ಡು 2ಶ್ರುತಿಸ್ಮøತಿಗಳವಡದನಂತಗುಣಗೆ ದುರ್ಮತಿಯಲ್ಲಿ ನಿರ್ಗುಣೆಂದವಗೆ ಸೊಡ್ಡುರತಿಪತಿಪಿತನಲ್ಲದನ್ಯ ಸರ್ವೋತ್ತಮತ್ವಕೆ ನಿರಯದಂಧತಮದ ಸೊಡ್ಡು 3ಹರಿಗೆ ಮನುಭವವಿಧಿಯೆಂದೊಕ್ಕಣಿಪಗೆಚಿರಕ್ಲೇಶ ಭವಯಾತ್ರೆಲಂಜು ಸೊಡ್ಡುಒರೆದೊರೆದಖಿಳಾಗಮಾರ್ಥವ ತಿಳಿದೇನುಹರಿಯೊಪ್ಪದಾ ನರಖರನಿಗೆ ಸೊಡ್ಡು 4ಪರಮಭಾಗವತರಾಚರಣೆಗೆ ಅಸೂಯಕ್ಕವರಗ್ರಂಥಚೋರಗೆ ಶಿರದಿ ಸೊಡ್ಡುಸಿರಿಪತಿ ಪ್ರಸನ್ವೆಂಕಟೇಶನ ಭಟರ ಕಂಡ್ಹರುಷಲ್ಲದವಗೆ ಮೂಗಲಿ ಸುಣ್ಣ ಸೊಡ್ಡು 5
--------------
ಪ್ರಸನ್ನವೆಂಕಟದಾಸರು