ಒಟ್ಟು 18838 ಕಡೆಗಳಲ್ಲಿ , 137 ದಾಸರು , 8355 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಡೆನು ಪಾರ್ವತಿಯಾ | ಮೈಸೂರ |ಚಾಮುಂಡೇಶ್ವರಿಯಾ ಪಕಂಡೆನು ಕರುಣದಿ ಭಕ್ತರ ಪಾಲಿಪ |ಚಂಡಿಕರಾಳಿಯ ಪುಂಡರೀಕಾಕ್ಷಿಯ ಅಸುತ್ತಲು ಜ್ಯೋತಿಗಳ | ಹೊಳೆಯುವ |ಮುತ್ತಿನ ಕಾಂತಿಗಳೂ ಚಕೆತ್ತಿದ ನವಮಣಿರತ್ನದಿ ಶೋಭಿಪ |ಉತ್ತಮ ಕನಕಾಭರಣ ಭವಾನಿಂiÀi 1ಸಹಸ್ರಾಯುಧಭರಿತೇ | ನೀಕ್ಷಿಸೆ |ಸಹಸ್ರ ಹಸ್ತದಾತೇ |ಸಹಸ್ರರೂಪದಿ ಜಗವನು ಪಾಲಿಪ |ಸಹಸ್ರನಾಮದ್ವಯ ಸಹಸ್ರಲೋಚನೆಯ 2ಸಂಭ್ರಮದಲಿ ಚಂಡಾಮುಂಡರು |ಡೊಂಬಿಯೊಳ್ ಪ್ರಚಂಡಾ- |ರೆಂಬಾ ದೈತ್ಯಕದಂಬವ ಖಂಡಿಸಿ |ಕುಂಭಿüüನಿಗಿಳುಹಿದ ಶಾಂಭವೆ ಶಕ್ತಿಯ 3ರಾಜ ಕುಲಕೆ ದೀಪಾ | ಮೈಸೂರ್ |ರಾಜ ಕೃಷ್ಣ ಭೂಪಾ |ರಾಜನು ದಿನ ದಿನ ಪೂಜಿಸಿ ನಮಿಸುವ |ರಾಜ ರಾಜಗಿರಿರಾಜಕುಮಾರಿಯ 4ಚಂದ್ರಕೋಟಿವದನೇ | ಶೋಭಿಪ |ನಂದಕುಂದರದನೇ |ಮಂದಗಮನೆ ಗೋವಿಂದನ ಪೂಜಿಪಚಂದಿರಧರನರ್ಧಾಂಗಿಯ ಚರಣವ ||ಕಂಡೆನು||
--------------
ಗೋವಿಂದದಾಸ
ಕಣ್ಣ ಮುಂದಿರೊ-ರಂಗ-ಕಣ್ಣ ಮುಂದಿರೊ ಪಪೂತನಿಯ ಮೊಲೆಯನುಂಡು |ವಾತಶಕಟಾದಿ ದೈತ್ಯರ ||ಫಾತಿಸಿದ ರಂಗ ನಿನ್ನ |ಪೋತತನಕಂಜುವೆನು 1ಕಡಹದ ಮರವನೇರಿ |ಮಡುವ ಧುಮುಕಿ ನೋಡಿ ||ಹೆಡೆಯ ತುಳಿದ ನಿನ್ನ |ದುಡುಕಿಗಂಜುವೆನು 2ಬಾಲೆಯರ ಮನೆಗೆ ಪೋಗಿ |ಹಾಲು-ಮೊಸರು ಕದ್ದು |||ಲೀಲೆ ಮಾಡದಿರಯ್ಯ |ಲೋಲಪುರಂದರವಿಠಲ3
--------------
ಪುರಂದರದಾಸರು
ಕಣ್ಣಾರೆ ಕಂಡೆನಚ್ಯುತನ-ಕಂಚಿಪುಣ್ಯ ಕೋಟಿ ಕರಿರಾಜವರದನ ಪವರಮಣಿ ಮುಕುಟಮಸ್ತಕನ ಸುರ-ವರಸನಕಾದಿ ವಂದಿತ ಪಾದಯುಗನ ||ತರುಣಿ ಲಕ್ಷ್ಮೀ ಮನೋಹರನ-ಪೀತಾಂಬರದುಡಿಗೆಯಲಿ ರಂಜಿಸುವ ವಿಗ್ರಹನ 1ಕಸ್ತೂರಿ ಪೆರೆನೊಸಲವನ ತೋರಮುತ್ತಿನ ಹಾರ ಪದಕವ ಧರಿಸಿದನ ||ಎತ್ತಿದಭಯ ಹಸ್ತದವನ ತನ್ನಭಕ್ತರ ಸ್ತುತಿಗೆ ಹಾರಯಿಸಿ ಹಿಗ್ಗುವನ 2ನೀಲಮೇಘಶ್ಯಾಮಲನ ದೇವಲೋಲಮಕರಕುಂಡಲಧರಿಸಿಹನ ||ಮೂಲೋಕದೊಳಗೆ ಚೆನ್ನಿಗನ ಕಮಲಾಲಯಾಪತಿ ವೈಕುಂಠವಲ್ಲಭನ 3ಭಾನುಕೋಟಿ ತೇಜದವನಭವಕಾನನರಾಶಿಗೆಹವ್ಯವಾಹನನ ||ದಾನವರೆದೆಯ ತಲ್ಲಣನ ಮುನಿಮಾನಸೆಹಂಸನೆಂದೆನಿಸಿ ಮೆರೆವನ4ತುಂಗಚತುರ್ಭುಜದವನಶುಭಮಂಗಳ ರೇಖೆ ಅಂಗಾಲಲೊಪ್ಪುವನ ||ಶೃಂಗಾರ ಹಾರ ಕಂಧರನ ದೇವಗಂಗೆಯ ಪಿತಪುರಂದರವಿಠಲನ5
--------------
ಪುರಂದರದಾಸರು
ಕಣ್ಣಿನೊಳಗೆ ನೋಡೊ ಹರಿಯ - ಒಳ -ಗಣ್ಣಿನಿಂದಲಿ ನೋಡೊ ಮೂಜಗದೊಡೆಯ ಪ.ಆಧಾರ ಮೊದಲಾದ ಆರು - ಚಕ್ರಶೋಧಿಸಿ ಸುಡಬೇಕು ಈ ಕ್ಷಣ ಮೂರು ||ಸಾಧಿಸಿ ಸುಷಮ್ನ ಏರು ಅಲ್ಲಿಭೇದಿಸಿ ನೀ ಪರಬ್ರಹ್ಮನ ಸೇರು 1ಎವೆಹಾಕದೆ ಮೇಲೆನೋಡು - ಮುಂದೆತವಕದಿಂದಲಿ ವಾಯು ಬಂಧನಮಾಡು ||ಸವಿದು ನಾದವ ಪಾನಮಾಡು - ಅಲ್ಲಿನವವಿಧ ಭಕ್ತಿಯಲಿ ನಲಿನಲಿದಾಡು 2ಅಂಡದೊಳಗೆ ಆಡುತಾನೆ -ಭಾನು -ಮಂಡಲ ನಾರಾಯಣನೆಂಬುವನೆ ||ಕುಂಡಲಿತುದಿಯೊಳಿದ್ದಾನೆ - ಶ್ರೀ ಪು -ರಂದರ ವಿಠಲನು ಪಾಲಿಸುತಾನೆ 3
--------------
ಪುರಂದರದಾಸರು
ಕಣ್ಣು ಮುಚ್ಚೆನ್ನಾ ಆಡಿಸೆಸಣ್ಣವರನ್ನು ಹೊರಗಡಗಿಸೆ ಪಗಟ್ಟಿ ಹುಡುಗರು ಅವರೆಲ್ಲಮಟ್ಟ ಮಾಯಾಗಿ ಹೋದರು ||ಥಟ್ಟನೆದ್ದು ಯನ್ನ ಕೈಯವರಮುಟ್ಟಿಸದಿರೆ ಬಿಡೆ ನಿನ್ನ 1ಪಾಯಿಸ ಹೋಳಿಗೆ ಮಾಡಿಬಾಯಿಗೆ ಕೈದೋರೆಗೋಪಿ||ನಾಯೆರುವಿನೆ ನಿನ್ನ ತಲೆಗೆನೀ ಯೆರಕೊಳ್ಳ ಒಲ್ಲೆನೆನ್ನೆ 2ಅಣ್ಣನ ರಂಬಿಸಿ ಕರೆದುಹಣ್ಣುಗಳವಗೆ ಕೊಡಬೇಡೆ ||ಚಿನ್ನದ ಗೊಂಬೆ ಬಾ ಎಂದುಬಣ್ಣ ಬಣ್ಣದಲೆನ್ನ ಕರೆಯ 3ನೀ ಹಾರ ಮಗನೆಂದುಕೇಳಿಮೇದಿನಿಯೊಳು ನಾ ಹೆಚ್ಚೆನ್ನೆ ||ಹೋದಬಾರಿಹೊಟ್ಟಿಗೆಮಾರಿಹೋದಳೂ ನಿಮ್ಮಮ್ಮನೆನೆ 4ಯನಗೆ ಪಾಪ ನೀನಾಗಿತಿನಲಿಕ್ಕಪ್ಪಚ್ಚಿ ಬೇಡೇ ||ಮಣಿಗುಂಡೆನಗೆ ಕೊಡುಯೆಂದುಮುನಸುಗುಟ್ಟೆನ್ನನು ಕಾಡೇ 5ದೃಷ್ಟಿ ತಾಕಿತು ಮಗಗೆಂದುಕಟ್ಟಿಸೆ ಯಂತ್ರ ಇನ್ನೊಮ್ಮೆ ||ಕೊಟ್ಟು ಅಮ್ಮಿಯ ರಂಬಿಸಿತೊಟ್ಟಿಲೊಳಗಿಟ್ಟು ತೂಗೇ 6ಏನು ಪುಣ್ಯ ಮಾಡಿದೆನೋಕ್ಷೋಣಿಗೆ ಹತಾರ್ಥವಾಗಿ ||ಪ್ರಾಣೇಶ ವಿಠಲನು ನಿನ್ನತಾನೇ ಕೊಟ್ಟನು ಯನಗೆನ್ನ 7
--------------
ಪ್ರಾಣೇಶದಾಸರು
ಕದ್ದು ಕಳ್ಳಿಯ್ಹಾಂಗ ಮುಯ್ಯಮಧ್ಯರಾತ್ರಿಲೆ ತಂದ ಮ್ಯಾಲೆ ಬುದ್ಧಿವಂತಳೆಸುಭದ್ರಾ ಬುದ್ದಿವಂತಳ ಪ.ಮೂರುಸಂಜಿಯಲಿ ತರುವ ಮುಯ್ಯಘೋರರಾತ್ರಿಯಲೆ ತಂದಮ್ಯಾಲೆಚೋರಳೆಂದು ನಿನಗೆ ನಮ್ಮಊರ ಜನರು ನಗತಾರಲ್ಲ 1ಒಳ್ಳೆ ಮಾನವಂತಿ ಆದ ನೀನುಕಳ್ಳರ ಕಾಲದಿ ಬಾಹೋರೇನತಳ್ಳಿಕೋರಳೆಂದು ನಮ್ಮಪಳ್ಳಿ ಜನರು ನಗತಾರಲ್ಲ 2ಬಹಳೆ ಜಾಣಳು ಆದರೆ ನೀನುಕಾಳರಾತ್ರಿಲಿ ಬಾಹೋರೇನತಾಳ ತಾಳನಿನ್ನ ಕುಶಲಹೇಳಲಿನ್ನ ಹುರುಳು ಇಲ್ಲ 3ಕತ್ತಲಲಿ ಒಬ್ಬ ದೈತ್ಯಎತ್ತಿ ಒಯ್ದರೇನು ಮಾಡುವಿಪಾರ್ಥ ರಾಯನ ಧರ್ಮದಿಂದಮಿತ್ರಿಮಾನವಉಳಿಸಿಕೊಂಡಿ4ಗಾಢ ರಾತ್ರಿಲೆ ಒಬ್ಬ ದೈತ್ಯ ಓಡಿಸಿಒಯ್ದರೇನು ಮಾಡುವಿಮಾಡೋರೇನ ಮೂರ್ಖತನವಮೂಢಳೆಂದು ಜನರು ನಗರೆ 5ಸಂಧ್ಯಾಕಾಲದಿ ಮುಯ್ಯತಂದುನಿಂತೇವ ನಿನ್ನ ದ್ವಾರದಲ್ಲಿಬಂದುನಮ್ಮನ ಕರೆಯಲಿಲ್ಲಸಂದಿ ಹೋಗಿ ಸೇರುªರೇನ 6ನೀಲವರ್ಣನ ತಂಗಿಯರಿಗೆಚಾಲವರಿದು ಕರೆದೆವಲ್ಲಮೇಲುದಯದಿ ಬಂದರೆ ನೀನುಮೂಲೆಗ್ಹೋಗಿ ಸೇರೋರೇನ 7ಭಾಮೆ ರುಕ್ಮಿಣಿ ದೇವಿಯರಿಗೆಕಾಲಿಗೆರಗಿ ಕಲೆಯೋರೆಲ್ಲಆಲಯಕೆ ಬಂದರೆ ನೀನುವ್ಯಾಲನಂತೆ ಅಡಗೋರೇನ 8ಕೃಷ್ಣರಾಯನ ತಂಗಿಯರೆಂಬೋದೆಷ್ಟಗರುವಬಿಡಿಸಲುಬಂದೆವುಪಟ್ಟು ಮಾಡಿ ಬಿಡತೇವೀಗಧಿಟ್ಟ ರಾಮೇಶ ನೋಡುವಿಯಂತೆ 9
--------------
ಗಲಗಲಿಅವ್ವನವರು
ಕರವಮುಗಿದ-ಮುಖ್ಯಪ್ರಾಣ-ಕರವ ಮುಗಿದಪಕರವಮುಗಿದ ಶ್ರೀಹರಿಗೆ ತಾನೆದುರಾಗಿದುರುಳರ ಸದೆದು ನೀ ಶರಣರ ಪೊರೆಯೆಂದು ಅ.ಪಜೀವೇಶ್ವರೈಕ್ಯವು ಜಗತು ಮಿಥ್ಯವೆಂದುಈ ವಿಧ ಪೇಳುವ ಮಾಯಿಗಳನಳಿಯೆಂದು 1ಇಲ್ಲಿ ಮಾತ್ರ ಭೇದ ಅಲ್ಲಿ ಒಂದೇಯೆಂಬಕ್ಷುಲಕರನು ಪಿಡಿದು ಹಲ್ಗಳ ಮುರಿಯೆಂದು 2ತಾರತಮ್ಯಪಂಚಭೇದಸತ್ಯವೆಂದುಮಾರುತ ಮತ ಪೊಂದಿದವರನು ಪೊರೆಯೆಂದು 3ಪರಿಪರಿ ಭಕ್ತರು ಹೃದಯ ಕಮಲದೊಳುನಿರುತ ಮಾಡುವ ಪೂಜೆ ನಿನಗರ್ಪಿತವೆಂದು 4ಹರಿಯ ಮನೋಗತವರಿತು ಮಾಡುವೆನೆಂದುಪುರಂದರವಿಠಲನ ಚರಣದ ಬಳಿಯಲ್ಲಿ5
--------------
ಪುರಂದರದಾಸರು
ಕರವಮುಗಿವೇ ಕಮಲನಯನಕರುಣದಿಂದಲಿ ಪಾಲಿಸೊಕರಿವರದ ಶ್ರೀ ಕಮಲನಾಭಕರೆದು ಎನ್ನನು ಮನ್ನಿಸೊ 1ಸ್ಮರಿಸಲರಿಯೇ ಸಿರಿಯ ರಮಣಪರಮಪಾವನ ಪಾದವಾಸ್ಮರನಜನಕಶರಧಿಶಯನಇರಿಸು ಎನ್ನೊಳು ಮೋಹವಾ 2ಬಂಧು ಬಳಗ ಭಾಗ್ಯ ಭೋಗ್ಯ-ದಿಂದ ಸುಖವ ಕಾಣೆನೇದಂದಶೋಕ ಶಮನನೇ ಗೊೀವಿಂದದಾಸನ ಪ್ರಾಣನೇ 3
--------------
ಗೋವಿಂದದಾಸ
ಕರುಣಾಂಬುಧಿ ಪಾಲಿಸೊಶರಣಾಗತರರಸ ಮುರಾರಿ ಪ.ಹಿಂದೆ ಕ್ಲೇಶವನುಂಡು ಬಳಲಿ ನಾ ನೊಂದೆಮುಂದೆ ಕತ್ತಲೆ ಕವಿದಿದ್ಯಲ್ಲೊ ತಂದೆ 1ಒಡೆಯನಿದ್ದೊಡಲಿನ ಚಿಂತೆ ಎನಗ್ಯಾಕೆಪಡಿಯಾಸೆಲಿನ್ನೊಬ್ಬರೊಲಿಸಲ್ಯಾಕೆ 2ಜನಕಜನನಿಆಪ್ತಧನ ಧಾನ್ಯ ನೀನೆಅನುಮಾನ ಬಿಡಿಸುವ ಅನುಕೂಲದವನೆ 3ಪೋಕರ ಮುಂದೆÀಡಹಿದರಾರಕುಂದುಜೋಕೆ ಬಿರುದುದಾತಆನತ ಬಂಧು4ನಾಭಿಸುರಭಿಕಾಣದರಸುವ ಮೃಗದಂಥಈ ಭ್ರಾಂತಿ ಕಳೆಯೊ ಪ್ರಸನ್ವೆಂಕಟೇಶ 5
--------------
ಪ್ರಸನ್ನವೆಂಕಟದಾಸರು
ಕರುಣಿಸಬಾರದೆ ಕಂಜನಾಭನೆ ಕೈಯ ಮುಗಿವೆನಯ್ಯಾ ಪ.ವರಫಣಿಗಿರಿ ಸುಸ್ಥಿರಮಂದಿರ ಶ್ರೀಗುರುಜನಾರ್ದನಾಮರಗಣ ಪಾಲಕಅ.ಪ.ಅಪರಾಧಗಳಾಲೋಚಿಸುವರೆ ಸರೀ-ಸೃಪರಾಜನಿಗಳವೆಕೃಪೆಯಿಂದಲಿ ಸಂರಕ್ಷಿಸದಿದ್ದರೀ-ಯಪಕೀರ್ತಿಯು ಶ್ರೀಹರಿ ನಿನಗಲ್ಲವೆ 1ಕನಕಪುರಂದರಮುಖ್ಯ ದಾಸರಂತೆಗುಣವೆನಗಿನಿತಿಲ್ಲಜನರ ವಿಡಂಬನಕೆ ದಾಸನಾದರೂಘನಕೃಪಾರ್ಣವನೆ ಕನಕಾಂಬರಧರ2ಲಕ್ಷ ಮಾತ್ಯಾತಕೆ ಲಕ್ಷ್ಮೀನಾರಾಯಣರಕ್ಷಾಮಣಿ ನೀನೆಪಕ್ಷೀಂದ್ರವಾಹನ ಪಾಪವಿಮೋಚನತ್ರ್ಯಕ್ಷಮಿತ್ರನೆನ್ನಕ್ಷಿಗೋಚರನಾಗಿ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕರುಣಿಸಿ ಕೇಳು ಕಂದನ ಮಾತನುಗರುಡವಾಹನಗಂಗಾಜನಕಶ್ರೀಹರಿಯೇಪಇತ್ತ ಬಾ ಎಂಬರಿಲ್ಲ ಇರವ ಕೇಳುವರಿಲ್ಲಹತ್ತಿರ ಕುಳ್ಳಿರಿಸಿ ಆದರಿಪರಿಲ್ಲ ||ತತ್ತರ ಪಡುತಿಹೆ ತಾವರೆಲೆಯ ನೀರಂತೆಹತ್ತು ನೂರು ನಾಮವ ಪೊತ್ತ ಶ್ರೀ ಹರಿಯೇ 1ಇಂದಿಗಶನವಿಲ್ಲ ನಿಂದಿರೆ ನೆರಳಿಲ್ಲಒಂದೆ ಸುತ್ತಿಗೆ ತುಂಡು ಅರಿವೆಯಿಲ್ಲ ||ಬೆಂದೊಡಲಿಗೆ ಒಬ್ಬರಯ್ಯೋ ಎಂಬುವರಿಲ್ಲಬಿಂದು ಮಾತ್ರದ ಸುಖಕಾಣಿನಾ ಹರಿಯೇ2ಎಲ್ಲಿದ್ದರೆನಗೊಂದು ನೆಲೆಯಿಲ್ಲ ಶ್ರೀಹರಿಅಲ್ಲ ತಿಂದಿಲಿಯಂತೆ ಬಳಲುವೆನೊ ||ಘುಲ್ಲಲೋಚನ ಪೂರ್ಣ ದಯದಿ ಸಲಹೊ ಎನ್ನಸಲ್ಲದ ನಾಣ್ಯವ ಮಾಡುವರೆ ಹರಿಯೇ 3ನಖಶಿಖ ಪರ್ಯಂತ ನಾನಾ ಹಿಂಸೆಯ ಪಟ್ಟೆಸುಖವೆಂಬುದನು ಕಾಣೆ ಸ್ವಪ್ನದಲುಮುಖವರಿಯದ ರಾಜ್ಯಕ್ಕೆನ್ನನು ಎಳತಂದುಕಕಮಕ ಮಾಡುವುದುಚಿತವೆ ಹರಿಯೇ 4ಇಷ್ಟುದಿವಸ ನಿನ್ನನೆನೆಯದ ಕಾರಣಕಷ್ಟ ಪಟ್ಟೆನು ಸ್ವಾಮಿ ಕಾಯೊ ಎನ್ನ ||ಮುಟ್ಟಿ ಭಜಿಸಲಿಲ್ಲ ಮುರವೈರಿ ನೀ ದಯವಿಟ್ಟು ಸಲಹೊ ಶ್ರೀಪುರಂದರವಿಠಲ5
--------------
ಪುರಂದರದಾಸರು
ಕರುಣಿಸಿ ಬಾರೆಲೆ ತಾಯೆ ಮಾಧವನಾವ್ಯಾಕೃತನಕರೆತಾರೆ ನೀರೆ ಬೇಕಾದವಳನಿನಿತುವಿರಹವಾರಿಧಿಯಲ್ಲಿ ನೂಕಿ ಓಡಿರುವನಲ್ಲೆ ಸಲೆ ಪ.ಬಿಸಜಕುಟ್ಮಳಕುಚವಸೋಂಕಿಮುದದಿ ಪಿಡಿದುಶಶಿಮೊಗದಿ ಮೋಹವನಿಡುವ ನುಡಿವಎಸೆವ ಕೊನೆವಲ್ಲಲಳುಕಿಸಿ ಎನ್ನಅಧರಪೀಯೂಷವನೊಲಿದೊಲಿದು ಸವಿದಕೋವಿದಪೊಸಮದಕರಿಯ ಸೊಂಡಿಲ ತೋಳಲಮರ್ದಪ್ಪಿಮಿಸುನಿಪುತ್ಥಳಿಯ ತೆರದಿ ಮೆರೆದಅಸಿಯ ಮಾಣಿಕಳೆ ಕೇಳಸುರಹರನಾಳಿದನೀಅಸುತೊರೆವೆ ತಾನಪಕಾರೆ ನೀರೆ1ಎಂಟೆರೆಡು ಕಳೆದೋರಿ ಸವಿದೋರಿ ಸುಖಬೀರಿ ಸಲೆಕಂಠಮಾಲೆಯ ಕೊಟ್ಟನೆ ನೆಟ್ಟನೆಎಂಟೆರಡವಸ್ಥೆಗಳ ಮೇಳಿಗೆಯ ಕ್ಷಣಲವಕೆವೆಂಠಣಿಸಿ ಅಮೃತವೆರೆದ ನೆರೆದಕಂಟಕಿಯು ದಾವಳೊ ಹರಿಯನೊಯ್ದಳಕದಿಂಗಂಟಿಕ್ಕಿದಳೊ ಬಿಡದೆ ಮಡದೆಉಂಟು ಮಾಡಿದನಲಾಮಂದಮುಗ್ಥೆಗೆ ಅಸಿಕಕಂಟಕಬಲೆಯ ಕಾಣೆ ಜಾಣೆ 2ಸರಸವಾತಿನ ಜಾಣ್ಮೆಯೆಂತುಸುರುವೆನಬಲೆಹರಣಳಿಯದೆಂದು ಪೇಳೆ ಕೇಳೆನಿರುತವನ ಕಿರುವೆರಳ ಸೌಂದರ್ಯಮಂ ನೆನೆಯುತಿರುವೆ ಪುಸಿಯಲ್ಲ ಕಾಣೆ ಪ್ರಾಣೆಕರುಣಿ ಬಲುನೊಂದರೆಂದದು ತನಗೆಕುಂದುಮರೆಯದಿನಿತೆಲ್ಲ ಒರೆಯೆ ಚತುರೆಯೆಭರದಲೊಮ್ಮದೊಮ್ಮೆ ಬಂದು ಪ್ರಸನ್ನವೆಂಕಟಗಿರಿಯರಸನೆಂದನಕ್ಕ ರಸಿಕ 3
--------------
ಪ್ರಸನ್ನವೆಂಕಟದಾಸರು
ಕರುಣಿಸಿನ್ನಾದರೆ ರಂಗ ಸುರಾರಿಭಂಗಕರುಣಿಸಿನ್ನಾದರೆ ರಂಗ ಪ.ಹುಳು ಹಕ್ಕಿ ನಾಯಿ ನರಿ ಗಿಡ ಹುಲ್ಲು ಮುಳ್ಳುಗಳಜನ್ಮವಾಂತು ನಾ ಬಳಲಿದೆ ರಂಗನೆಲೆಗಾಣೆನಿನ್ನು ಮಾನಿಸನಾಗಿ ವೃಥನಾದೆಗುಳದ ಹಣ್ಣಿಗೆ ಸೊರಗಲ್ಯಾಕೊ ರಂಗ 1ತುದಿಮೊದಲಿಗೆ ಮದ ಮತ್ಸರದಿಂ ಬೇಗುದಿಗೊಂಡು ನಿನ್ನಂಘ್ರಿ ಮರೆದೆನೊ ರಂಗಪದುಮನಾಭನೆ ನನ್ನ ಹೊರೆಯಲಾರೆಯಹುಲ್ಲೆವದನಕ್ಕೆ ಮುಳ್ಳ ಕಡಿವಾಣ್ಯಾಕೊ ರಂಗ 2ಮಲೆತವನಾದರೊದಿಯೊ ನಿನ್ನಂಗಣದೊಳುತೊಳಲುವ ನಾಯಿಗೆ ಕ್ಲೇಶವು ಸಲ್ಲ ರಂಗಹಲವು ದುಷ್ಕøತ ನಿನ್ನ ನಾಮ ಘೋಷಣೆಯಲ್ಲಿನಿಲ್ಲಬಲ್ಲವೆ ಪ್ರಸನ್ವೆಂಕಟ ರಂಗ 3
--------------
ಪ್ರಸನ್ನವೆಂಕಟದಾಸರು
ಕರುಣಿಸೆನಗೆ ಶಂಭೋ ಕರುಣಿಸಯ್ಯಾಶರಣಾರಂದದಿ ನಿನ್ನ ಮನದಿರವರಿಯೆನುಕರವಜೋಡಿಸಿ ದೇವಾ ಚರಣಕೊಂದಿಪೆನು ಪಕ್ಷೋಣಿಯೊಳ್ ಮಾರ್ಕಾಂಡೆಯಂತೆ ಪೂಜಿಸಲಾರೆಮೀನಾಕ್ಷಿಯಂತೆ ಕಾದಿ ಪರಿಸಲಾನರಿಯೇಬಾಣಾಸುರನಂತೆ ತಪಗೈಯ್ಯಲಾರೆ ನಾನುರಾವಣನಂತೆ ಸಾಮಗಾನವನರಿಯೇ 1ಶಿರದಿ ಚಂದಿರನಂತೆ ಶೋಭಿಸಲಾರೆ ಭಕ್ತಿಸ್ಥಿರವರಿಯೆನು ಭೀಮಸೇನನಂತೆಉರಗನಂದದಿ ಕೊರಳಾಭರಣವಾಗಿರಲಾರೆಗಿರಿಜೆಯಂದದಿ ನೆರೆದು ಮುದ್ದಿಸಲರಿಯೆ 2ಮಂದಾಕಿನಿಯಂತೆ ಜಡೆಯಾಲಂಕರಿಸೆನುನಂದೀಶನಂತೆ ಪೊತ್ತು ತಿರುಗಾಡಲರಿಯೆಇಂದ್ರನಂದನನಂತೆ ಭರದಿ ಮೆಚ್ಚಿಸಲಾರೆಬಂದೆನ್ನ ಸಲಹೋ ಗೋವಿಂದನ ಸಖನೆ 3
--------------
ಗೋವಿಂದದಾಸ
ಕರುಣಿಸೊ ಕರುಣಾಸಾಗರ ನರಹರಿಯೆ ನಿನ್ನಚರಣದಾಚರಣೆಗೆಚ್ಚರಾದರನು ಪ.ಮನ ಮಲಿನವ ತೊಳೆದನುದಿನ ದೃಢದೊಳುಜ್ಞಾನ ಭಕ್ತಿ ವಿರಕ್ತಿಯ ಘನಾಸಕ್ತಿಯಮನಗಂಡು ಮುದವಂತರೆನಿಸಿ ನಾಮಾಮೃತಉಣಬಲ್ಲ ಪೂತಾಂಗ ಮಾನಿಸರ ಸಂಗ 1ಸಭ್ಯರ ದೂಷಣ ಕೇಳುಬ್ಬಸ ಶ್ರವಣಕೆಇಬ್ಬರ ಕಲಹದಿ ಶಬ್ದಗುಂದಿಅಬ್ಜನಾಭನ ಬಿರುದುಬ್ಬುಬ್ಬಿ ಸುಖವೇರಿಕೊಬ್ಬಿ ಕುಣಿವ ಶಂಲಬ್ಧರೂಳಿಗವ 2ವೃಂದಾವನದಲಿ ಮುಕುಂದನಾಲಯದಮುಂದಾ ದಿಗಿದಿಗಿತ ವಾದ್ಯವಂದನಿಂದತಂದೆ ಪ್ರಸನ್ನವೆಂಕಟೇಂದ್ರ ನಿನ್ನ ಮುದ್ರಾಂಕಹೊಂದುವ ಜನುಮವ ಆನಂದಮುನಿಮತವ 3
--------------
ಪ್ರಸನ್ನವೆಂಕಟದಾಸರು