ಒಟ್ಟು 5952 ಕಡೆಗಳಲ್ಲಿ , 127 ದಾಸರು , 3928 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಡದಿಲ್ಲದ ಚಿತ್ರ ನಾ ಕಂಡೆ ಪ ಕೋತಿ ಸತ್ತುದ ಕಂಡೆ ಕೋಣನಳಿದುದ ಕಂಡೆಮಾತಿಗೆ ಬಾರದ ನಾಯ ಹರಿ ತಿಂಬುದ ಕಂಡೆ 1 ಕಾಗೆ ಕಣ್ಣು ಹೋದುದ ಕಂಡೆ ಕಳ್ಳರ ತಲೆ ಬಿದ್ದುದ ಕಂಡೆಕೋಗಿಲೆ ಕೊನೆಯಲಿ ಕೂಗಿದುದ ಕಂಡೆ 2 ಮರವ ಕಡಿದುದ ಕಂಡೆ ನೆರಳಲಿ ನಿಂತುದ ಕಂಡೆಬರಿಯ ವೋಡಲಿ ಹಾಲ ಕರೆದುಂಬುದ ಕಂಡೆ 3 ನೀರ ಮೇಲೆ ಒಲೆ ಉರಿವುದ ಕಂಡೆಮೇರುವಿನ ಶಿಖರದಿ ಜ್ಯೋತಿಯ ಕಂಡೆ 4 ಇರುಳು ಹಗಲು ಒಂದಾಗಿ ಇರುವುದ ಕಂಡೆಗುರು ಚಿದಾನಂದ ಬ್ರಹ್ಮವ ಗುರುತಿಲ್ಲದ ಕಂಡೆ5
--------------
ಚಿದಾನಂದ ಅವಧೂತರು
ಕಡಲಶಯನ ಹರಿಯ ತೊಡೆಯಲ್ಲಿ ಮಡದ್ಯೇರಿಬ್ಬರು ಕುಳಿತು ಪ ಪನ್ನಂಗಶಯನ ಕೇಳೆ ಸ್ವಾಮಿ ನೀ ಎನ್ನ ಮನೆಗೆ ಏಳೊ ನಿನ್ನ ಪಾದಕ್ಕೆ ಎರಗುವೆನೆಂದು ಭಾಮೆ ಕೈ- ಯನ್ನು ಮುಗಿದಳಾಗ 1 ಎನ್ನ ಮನೆಯಲ್ಲಿದ್ದ ಶ್ರೀಹರಿ- ಯನ್ನು ಕರೆಯಲವರ ಕಣ್ಣೇಸೆನುತಲಿ ಕರ್ಣಿ(ನ್ಯೆ?) ರುಕ್ಮಿಣಿ ಕೋಪ- ವನ್ನು ಧರಿಸಲಾಗ 2 ಎಷ್ಟು ಹಣವ ನೀನು ಕೃಷ್ಣಗೆ ಕೊಟ್ಟು ಕೊಂಡಿ ಹೇಳೆ ದಿಟ್ಟತನದ ಮಾತಾಡೋ ರುಕ್ಮಿಣಿ ನಿನ್ನ ಶ್ರೇಷ್ಠತನವೇನ್ಹೇಳೆ 3 ಹತ್ತು ಆರು ಸಾವಿರದಷ್ಟ ಭಾರ್ಯೇರವೊಳಗೆ ಸತ್ಯಭಾಮೆ ಉತ್ಕøಷ್ಟ ಚೆಲುವೆಯೆಂದು ಕೃಷ್ಣ ನಿನ್ನಲ್ಲಿಹನೆ4 ಹದಿನಾಲ್ಕು ಲೋಕದಲಿ ಹರಿ ಪಾದಾಂಬುಜವ ಕಾಂಬುವೋರಿಲ್ಲೆ ಯದುನಾಥನ ಎದೆ ಮ್ಯಾಲ್ಹತ್ತಿರುವೋದು ಇದು ಸೋಜಿಗವಲ್ಲೆ 5 ಇಷ್ಟೆ ಸೋಜಿಗವೆಂದು ಆಡಲು ದಿಟ್ಟೆ ನಿನಗೆ ಅರಿದೆ ಅಷ್ಟದಿಕ್ಪಾಲಕರನೆ ಓಡಿಸಿ ವೃಕ್ಷ ಕಿತ್ತು ಒದರು(ರುವು?) ದಲ್ಲೆ 6 ಜಲಪ್ರಳಯ ಕಾಲದಲಿ ಜನರಿಲ್ಲದ ಅಂಧಕಾರದಲಿ ಎಲೆಯಾಗಾ ಪರಮಾತ್ಮನ ಮನವ ನೀ ಮೊ- ದಲೆ ಒಲಿಸಿಕೊಂಡೆ 7 ಕಾದು ಸೇವಿಸೆ ಹರಿಯ ಪಾದದ- ಲ್ಲಾದರವಿಲ್ಲದಲೆ ದಾನ ಮಾಡುತ ಮುನಿಹಿಂದಟ್ಟಿದರ್ಹರಿ ಹ್ಯಾಗೆ ಬರುವನ್ಹೇಳೆ 8 ಮೂರು ಲೋಕದ ದೊರೆಯ ಮೂರೆಲೆ ತುಳಸಿ- ಸರಿಯ ಮಾಡಿ ಮುಕುತಿದಾಯಕ ಕೈವಶವಾ- ಗಿರಲು ನೀ ಸಕಲ ಮಾಯವ ಬಲ್ಲೆ 9 ಪಟ್ಟದ್ವೊಲ್ಲಭೆ ನಾನು ಕೃಷ್ಣಗೆ ಮೆಚ್ಚಿ ಬಂದೆಯೆ ನೀನು ಅಚ್ಚುತ ತಾ ಪರಮಾನುಗ್ರ(ಹ)ವ ಮಾಡಿ ಬಂ- ದಿಚ್ಛೆಲಿರುವ ತಾನು10 ಮಾತಾಪಿತರು ಅನುಜನನ್ವಂಚಿಸಿ ಈತಗ್ವಾಲೆಯ ಬರೆದು ಯಾತಕಂಜಿಕೆ ವಲಿಸ್ಯೋಡಿ ಬಂದವಳೆಂದು ಕೀರ್ಹೊಗಳುವುದಲ್ಲೆ 11 ತಂದು ಕೊಡಲು ಮಣಿಯ ಸಭೆಯೊಳು ಅಂದು ತಗ್ಗಿಸಿ ತಲೆಯ ನಿಂದ್ಯದ ಮಾತಿಗೆ ತಂದು ನಿಮ್ಮಯ್ಯ ಮುಂದಿಟ್ಟು ಪೋದನೆ ನಿನ್ನ 12 ಕೇಳೊ ಕೇಳೊ ನುಡಿಯ ನೀನೀ- ರೇಳು ಲೋಕದ ಒಡೆಯ ಹೇಳೋ ಬುದ್ಧಿ ನಿನ್ನಯ ವಲ್ಲಭೆ ಮಾತಾ- ಡೋಳೊ ನಿರ್ಭಿಡೆಯ 13 ರಕ್ಕಸಾಂತಕ ಕೇಳೊ ನಿನ್ನ ಚಿಕ್ಕವಲ್ಲಭೆ ಮ(ಹಿ)ಮೆ ಉಕ್ಕಿ ಉಕ್ಕಿ ಎನ್ನ ಮ್ಯಾಲೆ ಬರಲು ನಿನ- ಗಕ್ಕರ ತೋರುವುದೆ 14 ಆರ್ಯಳೆಂದು ನಾನು ತಾಳಿದೆ- ನಕ್ಕ ರುಕ್ಮಿಣಿ ಮಾತ ಏರಿ ಏರಿ ಏನ್ನಮ್ಯಾಲೆ ಬರಲು ಇದು ನ್ಯಾಯವೇನೊ ನಿನಗೆ 15 ನಾಲ್ಕು ತೋಳಿನಿಂದ ಆಲಿಂಗಿಸಿ ಕಾಂತೆಯರಿಬ್ಬರನು ಯಾತಕಿಂಥ ಕದನವು ಘನವಾಯಿತು ಸಾಕು ಸಾಕುಯೆನುತ16 ವಾರಿಜಾಕ್ಷ ಕೇಳೋ ನಾರದ- ರ್ಹೂಡಿದರೀ ಜಗಳ ಪಾರಿಜಾತ ಸರಿಸವತಿಗೆ ಕೊಟ್ಟ- ರಿನ್ಯಾರು ಸೈರಿಸೋರ್ಹೇಳೊ 17 ನಂದನವನ ತರುವ ನಾ ತಂದಿಟ್ಟೆನಂಗಳದಲ್ಲೆ ಅಂದಿಬ್ಬರನಾನಂದವ ಬಡಿಸಿದ ಚೆಂದದಿಂದಲಿ ನಗುತ 18 ಭಾಮೆ ರುಕ್ಮಿಣಿ ಸಹಿತ ನಡುವೆ ಭೀಮೇಶ ಕೃಷ್ಣನು ಕುಳಿತ ಕಾಮನಯ್ಯನ ಚರಿತ್ರೆಯ ಪಾಡ- ಲಮೃತ ಪಾನವು ನಿರುತ 19
--------------
ಹರಪನಹಳ್ಳಿಭೀಮವ್ವ
ಕಂಡಿರ ಮಧುರ ನಾಥನ ಕಂಡವರು ಪೇಳಿ ದಮ್ಮಯ್ಯ ಪ ದುಂಡು ಮುಖದ ಮೋಹನಾಂಗನು ಕೊಂಡು ಪೋದನೆಮ್ಮ ಮನವ ಅ.ಪ ಮಲ್ಲಿಗೆ ತುಳಸಿ ಮಾಲತಿ ಎಲ್ಲಿ ಪೋದನು ಪೇಳಿ ಕೃಷ್ಣನು ವಲ್ಲಭನ ಚರಣಗಳಲಿ ನಿಮ್ಮನು ಸಲ್ಲಿಸಿದ ಹಂಗೆಮ್ಮೊಳಿದ್ದರೆ 1 ತೋರಿದೆರೆ ನಯನಾಭಿರಾಮನ ಸೇರುವೆ ಅವನಂಘ್ರಿಯುಗಳಕೆ ಭೂರಿ ತರದುಪಕಾರ ನಿಮಗೆ ಸ ತ್ಕಾರ ಬರುವುದು ವಿಧಿಭವರಿಂದ 2 ಪದ್ಮೆಯರಸನು ನಿಮ್ಮೊಳಿರುವ ಸುದ್ದಿ ಬಲ್ಲೆವು ತೋರದಿದ್ದರೆ ಪದ್ಮಸಂಭವ ಪಣೆಯ ಬರಹವ ತಿದ್ದಿ ಪೇಳಿರಿ ಪದ್ಮಗಳಿರ 3 ಪಾರಿಜಾತ ಸುಜಾತ ನಂದಕು ಮಾರ ಮಣಿಯೊಂದನು ಕೊಡಲಾರೆಯ ಹೇರು ವಿಧ ವಿಧ ರತ್ನ ಮಣಿಗಳ ಸೂರೆಗೈವ ಅಭೀಷ್ಠಪ್ರದಾತ 4 ಕೇಳಲೇನುಪಯೋಗವಿವರು ಪೇಳಲಾರರು ಸುದ್ದಿ ಎಮಗೆ ತಾಳಲೆಂತು ಪ್ರಸನ್ನ ಕೃಷ್ಣನೆ ಕೇಳೆಲೆಮ್ಮಯ ಮೊರೆಯ ದಯದಿ 5
--------------
ವಿದ್ಯಾಪ್ರಸನ್ನತೀರ್ಥರು
ಕಂಡಿರೇ ಬ್ರಹ್ಮದಾಟವ ಕಂಡಿರೆ ಬ್ರಹ್ಮದಾಟ ಅ-ಖಂಡರಾದ ಮಹಾತ್ಮರಿರಾ ಪ ಬುದ್ಧಿಯನ್ನು ಹೇಳುತಿದೆ ಬುದ್ಧಿಯನ್ನು ಕೇಳುತಿದೆಬುದ್ಧಿಹೀನನೆಂದು ತಾನೆ ಬದ್ಧನಾಗಿ ಕುದಿಯುತಿದೆ 1 ಒಮ್ಮೆ ಸುಖಪಡುತಲಿದೆ ಒಮ್ಮೆ ದುಃಖ ಮಾಡುತಿದೆಒಮ್ಮೆ ಹಾಡಿಪಾಡಿ ನಕ್ಕು ಒಮ್ಮೆ ಕೆಲೆದು ಕೆನೆಯುತಿದೆ 2 ದುಡುಕು ತಾನು ಮಾಡುತಿದೆ ದುಡುಕು ಅವನದೆನ್ನುತಿದೆದುಡುಕು ದುಡುಕು ಎಂದು ತಾನೆ ಬಿಡಿಸಿ ನ್ಯಾಯ ಹೇಳುತಿದೆ3 ಗಂಡ ಹೆಂಡಿರಾಗಿ ಇದೆ ಗಂಡು ಮಗನ ಬೇಡುತಿದೆಗಂಡು ಗಂಡು ಎಂದು ತಾನು ಗಂಡ ದೀಪ ಹೊರುತಲಿದೆ 4 ಬಹಳ ವೇಷ ಹಾಕಿ ಇದೆ ಬಹಳ ಹೆಸರ ಕರೆಸುತಿದೆಬಹಳ ಚೇಷ್ಟೆಯಿಂದ ತಾನು ಬಹಳ ಭೇದವಾಗಿ ಇದೆ 5 ಇಂತು ಬಹಳ ರೂಪವಿದೆ ಇಂತು ತಿಳಿಯಲೊಂದೆ ಇದೆಇಂತು ಚಿದಾನಂದ ಬ್ರಹ್ಮ ಇಂತು ಹೊತ್ತು ಕಳೆಯುತಿದೆ 6
--------------
ಚಿದಾನಂದ ಅವಧೂತರು
ಕಂಡಿರೇನೇ ರಂಗನಾ ನಿಮ್ಮ ಮನೆಗಳಲ್ಲಿ ಕಂಡರೆ ಹೇಳಿರಮ್ಮಾ ಒಂದು ಮಾತಿನಲಿ ಬೆಂಡಾದೆನೇ ಅರಸುತ ನಾನಾದಾರಿಗಳಲ್ಲಿ ಪುಂಡರೀಕಾಕ್ಷನು ದೋರನು ಎಲ್ಲಿ ಮಣಿ ಕುಂಡಲ ಮಂಡಿತ ಗಂಡ ಕಪೊಲ ಪ್ರಚಂಡನ ಲೀಲೆ 1 ಒಮ್ಮೆ ಭಾವಿಕ ಗೋವಳರಾ ಆಟ ಪಾಟದಲಿರುವಾ ಒಮ್ಮೇ ಕಾಮುಖ ಗೊಲ್ಲತೇರಾ ಚಿತ್ತಕಾನಂದ ನೀವಾ ಒಮ್ಮೆ ಯಜ್ಞ ಪತ್ನಿಯರಾ ಸವಿಯಾಟ ಕವಲಿವಾ ಅಮ್ಮ ಒಂದೇ ಠಾರ್ವೆನೇ ಹೇಳುವಾ ಅವ ನಿಮ್ಮವನೇ ತಮ್ಮನೇ ಸುಮ್ಮನೇ ತಿರುಗುತ ಘಮ್ಮನೇ ಝುಮ್ಮನೇ ಹೊಳೆವಾ 2 ಪುಲ್ಲ ನಾಭನ ಕಾಣದಿರೇ ಕಣ್ಣು ಕುರುಡವು ನಮ್ಮ ಸೊಲ್ಲ ವಾಲಿಸದಿಹ ಹರಿಯಾ ಕಿವಿಬಧಿರವು ನಮ್ಮ ಅಲ್ಲಿ ಮನುಜ ಮಹಿಪತಿಸುತ ಪ್ರಭು ಪರಬೊಮ್ಮ ನಿಲದಪ್ಪಿ ಕೊಳಲು ಸಂಭ್ರಮಾ ಅವನೆಲ್ಲೆಲ್ಲ ನೋಡಲು ಅಲ್ಲಲ್ಲಿ ನಿಂದಿಹ ಇಲ್ಲದ ಸ್ಥಳವಿಲ್ಲವಮ್ಮಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಂಡು ಎಂದಿಗೆ ಧನ್ಯಳಾಗುವೆ ನಾನು ಪಾದ ಪುಂಡರೀಕವನೂ ಪ. ಪುಂಡರೀಕನಿಗೊಲಿದು ಒಂದು ಇಟ್ಟಿಗೆ ಮೇಲೆ ಪಾಂಡವರ ಪ್ರಿಯ ಬಂಧು ನೆಲಸಿದಂಥಾ ಪಂಡರೀ ಕ್ಷೇತ್ರದಲಿ ಚಂದ್ರಭಾಗದಿ ಮಿಂದು ಮಂಡೆ ಬಾಗುತ ಹರಿಗೆ ಹಿಂಡಘವ ಕಳೆದೂ 1 ಕೋಮಲದ ಚರಣಕಭಿನಮಿಸಿ ಕರಯುಗದಿಂದ ಶ್ಯಾಮವರ್ಣನ ಪಾದಕಮಲ ಮುಟ್ಟೆ ಆ ಮಹಾ ಆನಂದ ಅನುಭವಿಪ ಭಾಗ್ಯವನು ಶ್ರೀ ಮಹಾಲಕುಮಿಪತಿ ಎಂದು ಕಾಂಬುವೆನೋ 2 ಆಪಾರಭಕ್ತರಿಗೆ ವಲಿದ ವಿಠಲನ ಮೂರ್ತಿ ಆಪಾದ ಮೌಳಿ ಈಕ್ಷಿಸುತ ಹೃದಯದಲಿ ಇರ್ಪಮೂರ್ತಿಯ ತಂದು ಗುರುಬಿಂಬ ಸಹಿತದಲಿ ಗೋಪಾಲಕೃಷ್ಣವಿಠಲನ ಎಂದು ಕಾಂಬೆ 3
--------------
ಅಂಬಾಬಾಯಿ
ಕಂಡು ಕಾಣಿರೊ ಕಾಣಿಸುವನ ಕಂಡು ಕಾಣಿಸುವನ ಖೂನ ಖಂಡ ಮಾಡುವದಿದೆ ಸುಜ್ಞಾನ ಧ್ರುವ ಕಾಣಿಸುವನ ಕಾಣದೆ ಖೂನ ಜಾಣತನದÀಲ್ಹೇಳುವದೇನ ಜ್ಞಾನಗಮ್ಯವಾದ ಸ್ಥಾನ ಮನೋನ್ಮನದಲಿ ನೋಡಿ ನಿಧಾನ 1 ಸ್ವಾನು ಭವದ ಸುರಸನೋಟ ಧ್ಯಾನಧಾರಣಕಿದೆ ನೀಟ ಅನುದಿನದಲ್ಯಾನಂದ ಆಟ ಮುನಿಜನರ ಸುಕಾಲದೂಟ 2 ಸ್ವಾಮಿಯ ನೋಡಿ ಒಡನೆ ಬಾಹ ಕೈಗೂಡಿ ನೋಡುದರೊಳು ತಾನೆ ಒಡಮೂಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡು ಕೌತುಕ ಕಾಯದೊಳಗಿನಾಶ್ರಯ ಸಾಧನ ಕೊಂಡಾಡಲೆಷ್ಟೆಂದು ನಾ ಧ್ರುವ ಏಳು ಮೂರೆರಡು ನಾದಗಳು ಪರಿಪರಿಗಳುಕೇಳಬರುತಲ್ಯದ ತಾಳಮೃದಂಗ ಭೇರಿಗಳು ಸುಫೋಷಗಳು ಕೇಳಗುಡುತಲ್ಯದ 1 ಒಳಗೆ ಕಂಡೆ ನಾ ರಾಶಿ ಬೆಳಗಿನ ಮಳೆ ಮಿಂಚಿನ ತಳದ್ಹಿಡಿದು ತುಂಬೇದ ಕಳೆಕಾಂತಿ ರವಿಕೋಟಿ ಕಿರಣ ತೇಜ:ಸ್ಪುರಣ ಥಳಥಳಗುಡುತ್ಯದ 2 ಮಂಗಳಕರದಾನಂದೋದಯ ಮಹದಾಶ್ರಯ ರಂಗಮಯದೋರುತ್ಯದ ಸಂಗಸುಖ ಬೀರುತ್ಯದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡು ಧನ್ಯನಾದೆ ನಂದತನಯನ ಕಣ್ಣಾರ ಕಂಡು ಧನ್ಯನಾದೆ ನಂದ ತನಯನ ಕಂಡು ಧನ್ಯನಾದೆ ದಣಿಯವೆನ್ನವೆರಡು ಕಂಗಳೀಗ ತಿರುಗಿ ಪೋಗಲಾರೆ ತಿಮ್ಮಲಾಪುರೀಶ ದೊರೆಯ ಬಿಟ್ಟು ಪ ಸಾಲುದೀವಿಗೆ ಸಣ್ಣನಾಮ ಸರದ ಮಧ್ಯೆ ವೈಜಯಂತಿ ಸೂರ್ಯನಂತೆ ಹೊಳೆವ ಮುದ್ದು ಮುಖವು ಮಹಾದ್ವಾರದಲ್ಲೆ 1 ಶಂಚಕ್ರ ಶ್ಯಾಮವರ್ಣ ಅಂಕಿತವುಳ್ಳ ನಾಮಗಳಿಂದ ಪಂಕಜಾಕ್ಷ ಪರಮಪುರುಷ ವೆಂಕಟನೆಂಬೊ ನಾಮಾಂಕಿತದವನ 2 ಆ ಮಹಾ ವೈಕುಂಠದಲ್ಲಾವಾಸವಾದ ನಮ್ಮ ಕುಲ- ಸ್ವಾಮಿ ಎನಿಸಿಕೊಂಡ ಭೀಮೇಶ ಕೃಷ್ಣನ ದಯದಿಂದೀಗ 3
--------------
ಹರಪನಹಳ್ಳಿಭೀಮವ್ವ
ಕಂಡು ಧನ್ಯನಾದೆ ಭೂಮಂಡಲದೋಳ್ ಪ ಶ್ರೀ ಗುರುಸಾರ್ವಭೌಮ ರಾಘವೇಂದ್ರರಾ 1 ಕಲಿಯುಗದೋಳ್ ಭಕ್ತಜನರಾ ಉದ್ಧರಿಸಬೇಕು ಎಂಬ ಮನದಿ ವರಮಂತ್ರಾಲಯದೊಳ್ ಬಂದು ನಿಂದಿಹ ಯತಿವರರಾ 2 ಮಂಗಳಮೂರುತಿ ರಾಘವೇಂದ್ರರ ಬೃಂದಾವನ ಮನದಣೆಯೆ 3 ವಿಶಿಷ್ಟ ಜನರ ಕಷ್ಟಗಳನು ನಿಮಿಷಮಾತ್ರದಿ ಕಳೆದು ಸಲಹುವ ಶ್ರೇಷ್ಟ ಗುರುಗಳ ದಿವ್ಯವಾದ ದರ್ಶನ ಭಾಗ್ಯಾ ದೊರೆಕಿತಿಂದು 4 ಆದಿವ್ಯಾಧಿಗಳೆಲ್ಲ ಹರಿಸಿ ಅಂಧ ಬಧಿರ ಮೂಕತ್ವ ತೊಲಗಿಸಿ ಬಂದ ದುರಿತಗಳೆಲ್ಲ ಓಡಿಸಿ ಕಂದನಂದದಿ ಸಲಹುವ ಗುರುಗಳಾ5 ದಿನದಿನದೊಳ್ ಇವರ ಮಹಿಮೆ ಅಧಿಕವಾಗುತಿರಲು ಕಂಡು ಹಿಂಡು ಹಿಂಡಾಗಿ ಬರುತಲಿಹರೂ 6 ಹೆಜ್ಜೆ ಹೆಜ್ಜೆಗೆ ವಂದಿಸುತಲೀ ದಂಡೆ ಮುಡಿ ಉರುಳುತಲೀ ಮಂಡೆಬಾಗಿ ನಮಿಸತಲಿ ಬಿಡದೆ ರಾಯರ ಕೊಂಡಾಡುತಲೀ 7 ಜನರೆನರವ ಕೊಡುತಾ ಕೊಡುವ ದಾತಾ 8 ನಿತ್ಯ ನಿತ್ಯದಿ ಬ್ರಾಹ್ಮಣರ ವೇದ ಪುರಾಣ ನಡೆಯುತಿರುವುದು ಕೇಳಿ ಭಕ್ತಿಯಿಂದ ಜನರಾನಂದ ಭರಿತರಾಗುತಿಹರು 9 ಕೇಳುತಿಹುದು ಮಂತ್ರಘೋಷ ಪೇಳುತಿಹ ಪುರಾಣ ರಹಸ್ಯ ನೀಡುತಿಹರು ಗುರೂಪದೇಶ ಎಮಗಾಯಿತಿಂದು ಬಹುಸಂತೋಷ10 ಗುರುಗಳ ಮನಸಾರಾ11 ಬಂದ ಭಕ್ತಬೃಂದಕೆಲ್ಲ ಬೇಡಿ ದೊರಗಳ ನೀಡುತ ಸಲಹಿ ಉಣಿಸಿದಣಿಸಿ ಹರಸಿ ಅವರ ಆನಂದದಿಂದ ಕಳುಹುತಿಹರು 12 ಭಕ್ತರಸವ ಪಾನಮಾಡಿಸಿ ಮುಕ್ತಿ ಮಾರ್ಗಕೆ ದಾರಿ ತೋರಿಸಿ ಕರ್ತೃ ಶ್ರೀಹರಿ ಹೊರತುಯಿಲ್ಲೆಂದು ಸತ್ಯವಾಕ್ಯ ವ್ಯಾಕ್ತಪಡಿಸುತಿಹರು13 ಭಕ್ತಜನರ ಪೊರೆಯಲಿವರ ಸರಿಗಾಣೆನೀಧರೆಯೊಳಗೆ ತಂದೆಯಂದದಿ ಬಿಡದೆ ಕಾಯ್ವರು ಸಾರ್ವಭೌಮ ಶ್ರೀ ರಾಘವೇಂದ್ರರು 14 ಎಷ್ಟು ಜನ್ಮದ ಸುಕೃತದ ಫಲವೋ ಶ್ರೇಷ್ಟಗುರುಗಳ ದರ್ಶನವಾಯಿತು ಕಂಗಳಿಂದಲಿ ಕಂಡು ಮನದ ಕ್ಲೇಶವೆಲ್ಲ ಪರಿಹಾರವಾಯಿತು 15 ಹಿಂದೆ ಪ್ರಹ್ಲಾದರಾಜರೆನಿಸಿ ಬಂದು ಮಂಚಾಲೆಯಾಂಬಿಕೆ ದರ್ಶನ ಕೊಂಡು ಗುರುಗಳ ದರ್ಶನ ಮಾಡಿಸೆಂದು ಭಕ್ತಿಲಿಜನ ಬೇಡುತಿಹರು 16 ದೇಶ ದೇಶದ ಜನರಿಗೆಲ್ಲ ವಿಸ್ತಾರದಿಂದ ಎಲೆಗಳ್ಹಾಕಿ ಭಕ್ಷ್ಯ ಪಾಯಸಾನ್ನಗಳನು ತೃಪ್ತಿಯಿಂದ ಉಣಿಸುತಿಹರು 17 ಶ್ರೀ ರಾಘವೇಂದ್ರಾಯ ನಮಃ ಎಂದರೆ ದುರಿತಗಳೆಲ್ಲವದೂರಮಾಳ್ವರು ಸ್ಮರಣ ಮಾತ್ರದಿ ಸಕಲಪಾಪಗಳೆಲ್ಲ ನಾಶಗೊಳಿಸೋರು18 ಗುರುವಾರ ಪೂಜಾ ಸಂಭ್ರಮದಿಂದ ನಮಗಾಯಿತು ಇಂದು ಮುಂದೆ ನಮಿಸಲು ಭಕ್ತವೃಂದಾ 19 ಜಯ ಜಯತು ಗುರುರಾಜ ಜಯ ಜಯತು ಸುರಭೂಜ ಜಯತು ಶ್ರೀ ರಾಘವೇಂದ್ರಾ ಜಯ ಜಯತು ಜಯ ಜಯತು ಜಯ ಜಯಾ 20
--------------
ರಾಧಾಬಾಯಿ
ಕಂಡು ಧನ್ಯಳಾದೆ ನಾನೀಗ | ಈ ದಿವ್ಯ ಪಾದ ಕಂಡು ಧನ್ಯಳಾದೆ ನಾನೀಗ ಪ. ಕಂಡು ಧನ್ಯಳಾದೆನೀಗ ತಂಡ ತಂಡದ ಪಾಪಗಳನು ಪಾದ ಅ.ಪ. ಭಕ್ತ ನುಡಿಗೆ ಮನದಿ ಮರುಗಿ ಮುಕ್ತಿ ತೋರ್ವೆನೆಂದು ಬಂದು ಶಕ್ತನಾದ ಹರಿಯ ತೋರಿ ಪಾದ 1 ಕಮಲನಾಭನ ಭಜಿಪ ಪಾದ ಕಮಲಾಪತಿಗೆ ಪ್ರೀತಿ ಪಾದ ಕಮಲಪುಷ್ಪ ಹರಿಗೆ ಅರ್ಪಿಸಿ ಪಾದ 2 ತಂದೆ ಮುದ್ದುಮೋಹನರೆಂ- ತೆಂದು ಜಗದಿ ಮೆರೆವೊ ಪಾದ ನಂದ ಕಂದನ ಮನದಿ ತೋರಿ ಇಂದು ಆನಂದ ಕೊಡುವೊ3 ಪಾದೋದಕವÀ ಪಾನಮಾಡಿ ಪಾದಪದ್ಮ ನಂಬಿ ನಮಿಸಿ ಪಾದಕಮಲ ಸ್ತೋತ್ರಗೈವೆ 4 ಗೋಪಾಲಕೃಷ್ಣವಿಠ್ಠಲನ ರೂಪ ಮನದಿ ತೋರ್ವ ಪಾದ ಪಾಪಗಳನು ಧ್ವಂಸಗೈದು ಪಾದ 5
--------------
ಅಂಬಾಬಾಯಿ
ಕಂಡು ನಮಿಸಿದೆ ನಿನ್ನ | ಕಡಗೋಲ ಪಿಡಿ- ದುದ್ದಂಡ ದೇವವರೇಣ್ಯ ತಾಪತ್ರಯಗಳಘ ಹಿಂಡು ಓಡಿಸು ರನ್ನ ಪೊರೆ ಸುಪ್ರಸನ್ನ ಪ. ಕಂಡೆ ನಿನ್ನಯ ಬಾಲರೂಪವ ಪುಂಡರೀಕದಳಾಯತಾಕ್ಷನೆ ಕುಂಡಲೀಶಯ ನಿನ್ನ ಚರಣದಿ ದಂಡವಿಕ್ಕುವೆ ಗೋಪಿಬಾಲ ಅ.ಪ. ಜನನ ಮರಣದಿ ನೊಂದೆ | ಶ್ರೀ ಜಾನಕೀಪತೆ ಪ್ರಣತ ಜನರಿಗೆ ತಂದೆ | ನೀ ಕಾಯದಿದ್ದರೆ ಘನವೆ ನಿನಗಿದು ಎಂದೆ | ಪಾಲಿಪುದು ಮುಂದೆ ಜನಮ ಜನುಮದ ಕರ್ಮಗಳ ನಾ ಅನುಭವಿಸಿ ಪೂರೈಸಲಾಪೆನೆ ಘನಮಹಿಮ ದಯ ಮಾಡಿದಲ್ಲದೆ ಕೊನೆಯ ಕಾಣೆನು ವಿಷಯ ವಾಸನೆ ವನಜ ಸಂಭವ ಪವನ ರುದ್ರಾ ದ್ಯನಿಮಿಷಿರಿಗಿನಿತಿಲ್ಲ ಮಹಿಮೆಯು ನಿನಗೆ ವಿೂರಿದರುಂಟೆ ದನುಜದಲ್ಲಣ ದಯದಿ ಸಲಹೊ 1 ಕಾಮಪಿತ ಮಧ್ವೇಶ | ಸೌಂದರ್ಯ ಸಾರ ತಾಮಸರ ವಿಧ್ವಂಸ | ಸಜ್ಜನರ ಕಾಯುವ ಕೋಮಲಾಂಗನೆ ಶ್ರೀಶ | ಲಕ್ಷ್ಮೀ ನಿವಾಸ ಹೋಮಕುಂಡದಿ ಪುಟ್ಟಿದಾ ಸತಿ ಕಾಮಿಗಳ ಉಪಟಳಕೆ ಸಹಿಸದೆ ಶ್ರೀ ಮನೋಹರ ಕಾಯೊ ದ್ವಾರಕೆ ಧಾಮ ನೀ ಗತಿ ಎನುತವರಲೆ ಪ್ರೇಮದಿಂದಕ್ಷಯವನಿತ್ತ ನಾಮ ಮಂಗಳ ನಿರ್ಮಲಾತ್ಮಕ ಸೋಮಶತಪ್ರಭ ಸೌಮ್ಯರೂಪ ತ್ರಿ- ಧಾಮ ಭಕ್ತರ ಕಾಮಿತಾರ್ಥನೆ 2 ಆದಿಮಧ್ಯವಿದೂರ | ಆನಂದ ಪೂರ್ಣ ಸಾಧು ಮನದಿ ವಿಹಾರ | ಸರ್ವಜ್ಞರಾಯರ ಹಾದಿ ತೋರಿಸೊ ಧೀರ | ಸುಜ್ಞಾನಸಾರ ವೇದ ಶಾಸ್ತ್ರಗಳರ್ಥವರಿಯೆನು ಮಾಧವನೆ ಮಮಕಾರದಲಿ ನಾ ಹಾದಿ ತಿಳಿಯದೆ ನೊಂದೆ ಅಜ್ಞತೆ ಹೋದಡಲ್ಲದೆ ನಿನ್ನ ಕಾಣುವ ಮೋದ ಬರುವುದೆ ಮಧ್ವವಲ್ಲಭ ಭೇದ ಮತಿ ಕೊಡು ತಾರತಮ್ಯದಿ ನೀ ದಯದಿ ಒಲಿದೆನ್ನ ಮನದಲಿ ಆದರದಿ ನೆಲೆಸಿನ್ನು ಪೊಳೆಯೊ 3 ಕಡಲಶಯನನೆ ಶ್ರೀಶ | ಕಡಗೋಲ ಕೈ ಪಡುಗಡಲ ತೀರದಿ ವಾಸ | ಕಮಲೇಶ ನಾ ನಿ- ನ್ನಡಿಯ ಕಂಡೆನು ನಾಶ | ರಹಿತನೆ ಪ್ರಕಾಶ ಎಡೆಬಿಡದೆ ನಿನ್ನಸ್ಮರಿಪ ಧ್ಯಾನವ ಕೊಡುತ ಮಧ್ಯದಿ ತಡೆವ ಸಂಸೃತಿ ತಡೆದು ಸಂತ ಚಿಂತನೆಯ ದೃಢ ಒಡಲೊಳಗೆ ನೆಲೆಸಯ್ಯ ಬಿಡದೆ ಪತಿ ಸತಿ ಪಿತ ಕಡಲವಾಸನೆ ಕಡಲ ಬಂಧನ ಕಡಲ ಮಧ್ಯದಿ ಪುರವ ರಚಿಸಿದೆ ಕಡು ದಯಾಂಬಯಧೆ ಕಾಯೊ ಸತತ 4 ಅಷ್ಟಯತಿ ನುತಪಾದ | ಸುಖ ತೀರ್ಥ ಹೃದಯ ದೀಷ್ಟಿತನೆ ಸನ್ಮೋದ | ಸಜ್ಜನರ ಮನದಾ ಭೀಷ್ಟವೀವ ಪ್ರಮೋದ | ಕರುಣಿ ಸುಪ್ರಸೀದ ಕೊಟ್ಟೆ ಮನು ಮುನಿಗಳಿಗೆ ಜ್ಞಾನವ ತುಷ್ಟಿಪಡಿಸುತÀ ಸುರರ ಸುಧೆಯಲಿ ಕುಟ್ಟಿ ಅಸುರನ ಕೋರೆದಾಡಿಲಿ ಕುಟ್ಟಿ ಅರಸರ ಕಟ್ಟಿ ಜಟೆಯನು ಮಟ್ಟಿ ಕಂಸನ ಬಿಟ್ಟು ವಸನವ ದಿಟ್ಟ ಕಲ್ಕಿ ಗೋಪಾಲಕೃಷ್ಣ ವಿಠ್ಠಲನೆÀ ಶ್ರೀ ಉಡುಪಿಲೋಲ5
--------------
ಅಂಬಾಬಾಯಿ
ಕಡುಣಸಯ್ಯ ಗುರುವರೇಶ ಪರಮಪುರುಷ ಹರಿಸರ್ವೇಶ ಧ್ರುವ ನೋಡದಿರಯ್ಯ ಭಿನ್ನಭೇದ ಮಾಡೊ ದಯ ಸುಜ್ಞಾನಬೋಧ ನೀಡೊ ನಿಮ್ಮ ನಿಜಪ್ರಸಾದ ಕೊಡುವದನುಭವಾಮೃತಸ್ವಾದ 1 ಸರಿಯಗಾಣೆ ಹರಿಯೆ ನಿಮ್ಮ ಸಿರಿಯಲೋಲಾನಂದ ಬ್ರಹ್ಮ ಕರಿಯವರದ ದಯನಿಸ್ಸೀಮ ಮೊರಿಯಗೇಳಿ ಘನಮಹಿಮ 2 ಕರುಣ ದಯದಲಿ ನೀ ಪೂರ್ಣ ಶರಣಜನರ ಸುಭೂಷಣ ಮಹಿಪತಿಯ ಪ್ರಾಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡುದನು ಪೇಳ್ವೆ ಬ್ರಹ್ಮಾಂಡ ನಾಯಕನೆ | ಕೊಂಡೆಯವಿದಲ್ಲ ಗ್ರಹಕುಂಡಲವ ಶೋಧಿಸುತ ಪ ಮಕರ ಸತಿ ಲಗ್ನದಲ್ಲಿರ್ಪ ಜಲ ತಾರಕೇಂದು ದಶೆ ಯಲಿ ನಿನಗೆ ಜಲದೊಳಾವಾಸವಾಯಿತು ಹರಿಯೆ 1 ಮನುಮಥನ ತಾತ ಕೇಳಿನಸುತನು ನಾಲ್ಕನೆಯ ಮನೆಯೊಳಿರುವನು ಲಗ್ನಕಧಿಪನೆನಿಸಿ ಮನದಿ ಯೋಚಿಸಲಿಕಾ ಶನಿದಶೆಯೊಳಾ ಕುಧರ ವನು ಪೊತ್ತು ದಣಿದೆನೀವ ನಿಧಿಯೊಳು ಹರಿಯೆ2 ಮಂಗಳನೆ ಸುಖಕಧಿಪ ಮಂಗಳನು ಸಿಂಗರದಿ ಸಿಂಗರಾಶಿಯೊಳು ತಾ ಕಂಗೊಳಿಸುತ ತುಂಗವಿಕ್ರಮನವನೆ ಸಂಘಟಿಸಿದನು ವನದಿ ಹಿಂಗದೆ ಬೇರು ಮೆಲುವಂಗವನು ಹರಿಯೆ 3 ವಾರಿಜಾಸನ ಪಿತನೆ ಕ್ರೂರಕ್ಷೇತ್ರದಿ ರಾಹು ಸಾರಿರ್ಪ ರಾಶಿ ವೃಶ್ಚಿಕವೆನಿಸಲು | ಕಾರುಣಿಕನವನ ದಶೆಯಾರಂಭದಲಿ ನಿನಗೆ ಘೋರ ರೂಪವ ತಾಳಲಾಯ್ತು ನರಹರಿಯೆ 4 ಮಂದರೋದ್ಧರ ಕೇಳು ಚಂದಿರನ ರಾಶಿಗಾ ನಂದದಧಿಪತಿ ಸೂರ್ಯನಂದನನು ತಾ ನಿಂದು ಮೇಷದೊಳತ್ರಿಕಂದನ ನಿರೀಕ್ಷಿಸಲು ಬಂದುದೈ ಭಿಕ್ಷೆಯದರಿಂದ ನಿನಗೆಲೆ ಹರಿಯೆ 5 ಅಂಬುಜಾನನ ಕೇಳು ಒಂಭತ್ತರಧಿಪ ಶಶಿ- ಸಂಭವನು ಪಾಪದಿಂ ತುಂಬಿರ್ಪನು | ಸಂಭವಿಸಲವನ ದಶೆಯಿಂದ ನೀ ಕ್ಷತ್ರಿಯ ಕ-ದಂಬ ಮರ್ದಿಸಿ ಧರ್ಮಮಂ ಬಿಟ್ಟೆ ಹರಿಯೆ 6 ದುರಿತ ಸ್ಥಾನಾಧಿಪತಿ ಗುರುವೇಳನೆಯ ಮನೆಯೊಳಿರುವನದರಿಂ | ಹಿರಿಯರುಪದೇಶದಿಂದಿರದೆ ಭಾರ್ಯೆಯನಗಲಿ ಚರಿಸಿದೆಯರಣ್ಯದೊಳಗಿರುತ ನೀ ಹರಿಯೆ 7 ಘೋರಪಾಪವಿನಾಶ ನಾರಿರಾಶಿಯ ನವಮ-ಕಾ ರವಿಯು ಸಾರಿ ನಿಂದಿರ್ಪನದರಿಂ | ಚೋರವ್ಯಾಪಾರ ಪರನಾರಿಯರ ಕೂಡೆ ವ್ಯಭಿ-ಚಾರ ನಿನಗಾಯಿತು ರಮಾರಮಣ ಹರಿಯೇ 8 ಕೈವಲ್ಯ ತಾರಕನಾಥನು | ಪೂತ ಬುದ್ಧಿಸ್ಥಾನ ವಾದನದರಿಂಲಿಂ ಭೂತಲದಿ ಸ್ಥಾಪಿಸಿದೆ ನೂತನ ಮತವ ಹರಿಯೇ 9 ಪಾರವರ್ಜಿತ ಕವಿಯು ಸಾರಿರ್ದ ದಶಮದೊಳ್-ಗಾರವ ನೆನೆಯುಂಟು ಧೀರನೆನಿಸಿ | ಭೂರಿಮ್ಲೇಂಛರನು ಸಂಹಾರ ಗೈಯುತ ತೇಜಿಯೇರಿ ಮೆರೆಯುತ್ತಿರುವ ನಾರಾಯಣ ಹರಿಯೆ 10
--------------
ಅನ್ಯದಾಸರು
ಕಂಡೆ ಕಂಡೆ ಕೃಷ್ಣನ ಕಂಡೆ ಕಂಡೆ ಪ ಕಮಲ ಪುಂಡರೀಕ ಭವಾದಿ ಪೂಜ್ಯನ ದಂಡ ಪಾಶಾನ್ವಿತನ ಕೋಟಿ ಮಾರ್ತಾಂಡಸಮ ಸಂಕಾಶದೇವನ ಅ ಅರುಣ ಪಂಕಜದಿರವ ಸೋಲಿಪ ಚರಣತಳಿನಖ ಬೆರಳ ಪಂಕ್ತಿಯು ಪರಡು ಬಣ್ಣದ ಪಿರಡಿಜಂಘೆಯು ಉರದಿ ಜಾನುಗಳೆರಡು ದರ್ಪಣ ತೆರದಿ ಶೋಭಿಸೆ ಕರಿಕರೋರುಗಳು ತರು ನಿತಂಬದಿ ಮೆರೆವ ಪೀತಾಂ ಬರದ ನಿರಿ ಸಡಗರದಿ ದೈತ್ಯರ ಮರುಳುಗೊಳಿಸಿದ ಪರಮ ಪುರುಷನ 1 ನಳಿನನಿಭ ಪೊಕ್ಕಳು ತನೂದರ ವಳಿಗಳತ್ರಯ ಚೆಲುವ ವಕ್ಷ ಸ್ಥ್ಥಳದಿ ಪದ್ಮಾಲಲನ ಕಾಂಚನ ಗಳದ ರೋಮದ ಕಲಿತ ಭುಜಯುಗ ಕುಲಿಶ ಪಲ್ದುಟಿಗಳು ಪ್ರವಾಳ ವರ್ತುಳ ಕ ಪೋಲ ಪರಿಮಳ ಚಂಪಕದಳದ ನಾಸಿಕ ಜಲಜಲೋಚನ ವಿಲಸಿತ ಭ್ರೂ ತಿಲಕ ಫಣಿಯನು 2 ಮಕರ ಕುಂ ಡಲವು ಮೂಗುತಿ ಎಳೆನಗೆಯ ಮೊಗ ಹುಲಿಯುಗುರು ಥಳಥಳಿಪ ಕೌಸ್ತುಭ ಬಲವು ಪದಕಾವಳಿ ಸರಿಗೆ ಶ್ರೀ ತುಲಸಿ ವನಮಾಲ ಸಗ್ವಲಯ ರುಳಿ ಬಿಂ ದಲಿ ರಸಾದ್ಯೆಳದಳ ಯುಗಳ ಕರ ತಳನಾಗೋ ಮಕ್ಕಳೊಡನೆ ಗೋ ಕುಲದಿ ಚರಿಸಿದೆ ಲಲಿತಾಂಗನೆ 3 ನೇಣು ಕಡಗೋಲು ಪಾಣಿಪೃಥಗಳ ಶ್ರೇಣಿಯಲಿ ಒಡ್ಯಾಣ ನೂಪುರ ಪ್ರಾಣಮುಖ್ಯರು ಕಾಣದತಿ ಕ ಲ್ಯಾಣಗುಣಗಣ ಶ್ರೇಣಿವಂತನ ಮಾಣದನುದಿನ ಸಾನುರಾಗದಿ ಧೇನಿಸುವರ ಮನೋನುಕೂಲನ ಬಾಣಗುರುವಿನ ಕಾಣೆನೆನಿಸಿದ ಜಾಣ ಪರಮ ಪುರಾಣ ಪುರುಷನ 4 ಭೂತಕೃತ್ಯದ್ಭೂತಿದಾಯಕ ವೀತ ಶೋಕ ವಿಧಾತಮರ ಪುರು ಹೂತ ಮುಖವಧ್ಯಾತ ಖರಮುರ ಸೂತಗತಸಂಕೇತ ತ್ರಿಗುಣಾ ತೀತ ನಂದನೀಕೇತನದಿ ನವ ನೀತ ಸವಿದ ಪುರಾತನ ಜಗ ನ್ನಾಥ ವಿಠಲನ 5
--------------
ಜಗನ್ನಾಥದಾಸರು