ಒಟ್ಟು 2199 ಕಡೆಗಳಲ್ಲಿ , 105 ದಾಸರು , 1325 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂದ ಬಂದ ವಾಯು ಪೆಸರಿನವ - ರಿಂದಅನಿಮಿತ್ತ ಬಂದು ವೆಂಕಟ ನಿಲಯ ಪ ಇಂದಿರೆ ಸುತನೆನೆ | ಸುಂದರನೂ ಮಮ | ಮಂದಿರ ಸೇರಲುನಂದದಿ ಬಂದನು | ಚಂದ್ರ ಭಾಗ ತಟ | ಸುಂದರ ವಿಠಲನುಮುಂದೆ ಬರುವ | ನೆಂದೆಂಬುದ ಸೂಚಿಸೆ ಅ.ಪ. ಮಕರ ಕೌಸ್ತುಭ ಬ್ರಹ್ಮಾ ಧಿಷ್ಠಿತವಾಗಿರೆ ಹೃತಮ ಕಳೆ ಹರಿ 1 ಸೋಮಕುಲ ಸುಭೂಷ ದಿವ್ಯ | ಧಾಮದಲ್ಲಿ ಶೋಭಮಾನ ||ಶ್ರೀ ಮಹಿಳೆಯು ಎಡ | ಪದ್ಮ ಹಸ್ತ ಬಲಭೂಮಾಂಬೆಯು ಬಲ | ಪದ್ಮ ಹಸ್ತ ಎಡಭೂಮಾರ್ಣವ ಗುಣ | ಸ್ತೋಮ ತುತಿಸುತಲಿಆ ಮಹ ದಿವಿಜರ | ಸ್ತೋಮ ನಿಚಯವಿರೆ2 ಮಾಸ ಸಿರಿ | ಶೇಷಗಿರೀಶನುಒಸೆದು ಹಸ್ತ ಎಡೆ | ಎಸೆವ ಕಟಯಲಿಟ್ಟುವಸುದೇವ ಸುತ ಬಲ | ಹಸ್ತ ಅಭಯ ತೋರಿಬಸುರಿಲಿ ಬೊಮ್ಮನ | ಪ್ರಸವಿಸಿರವ ಹರಿ 3 ಶರಧಿ | ಕಟಿಯ ಮಿತವು ಭಕುತಗೆಂದ ||ವಿಠಲಾಗಮನವು | ದಿಟವೆನೆ ಸೂಚಿಸಿಎಟ ಪಾದವು ಸುರ | ತಟನಿಗೆ ಕಾರಣಪಟುಭಟರೆನಿಸುವ | ನಿಟಿಲ ನಯನ ಸುರಕಟಕವ ಪಾಲಿಪ | ಧಿಟ ದೊರೆ ವೆಂಕಟ 4 ಅರಿ | ಹೊಳೆವ ಶಂಖ ಎಡ ನಿಲವು ಮಾಟವಿಗೆ | ಗೆಲವು ಸುರರಿಗೆನೆಕಳೆ ಕಳೆ ನಗು ಗುರು | ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಬಂದ ಬಂದ ಹಿಮದ ಗಿರೀ | ಯಿಂದ ಅನಿಮಿತ್ತ ಬಂಧು | ಬದರಿವಾಸ | ಬಂದ | ಬಂದ ಪ ಇಂದಿರೆ ಅಜ ಭವ ಕ್ಷಿತಿ | ವೃಂದಾರಕ ವಹಬಂದನು ತಾ ಮಮ | ಮಂದಿರಕಿಂದೂ ಅ.ಪ. ಕೌಸ್ತುಭ ಉರ ಸಿರಿ ವತ್ಸಾಂಕಿತ ಸುರಚಿರೋದರವು | ಮೆರೆವ ತ್ರಿವಳಿಯಿಂವರ ಪಟ್ಟಕ ವಸನವು | ತರ್ಕ ಚಿಹ್ನಿತಕರಸುರ ಭೂಸುರರಿಗೆ | ವರ ಜ್ಞಾನದ ಹರಿ1 ಕಾಯ ಕಟಕ ಕರ | ಪುಟದಲಿ ಜಪಮಣಿಕಟಕ ಧರಿಸಿ ಸುರ | ತಟನಿ ತೀರಗ ಸುರಕಟಕವೆರಸಿ ಉತ್ | ಕೃಷ್ಟನು ಮಮ ಮಂದಿರಕೆ 2 ಸುಜನ ಸುರದ್ರುಮಕುಜನಾರಾತಿಯು | ರಜಮಾರನು ಸುರವ್ರಜವು ಪೊಗಳುತಿರೆ | ಮಝ ಭಾಪೆಸೆ ಮಮರಜವ ಕಳೆಯೆ ಗುರು ಗೋವಿಂದ ವಿಠಲ 3
--------------
ಗುರುಗೋವಿಂದವಿಠಲರು
ಬಂದದ್ದನುಭವ ಮಾಡ್ವೆ ಕಂದನಾಗಿರುವೆ ತಂದೆ ನಿನ್ನಯ ದಯವೊಂದಿರಲಿ ಹರಿಯೆ ಪ ಮಂದಿ ಮಕ್ಕಳು ಎನ್ನ ಕುಂದಿಟ್ಟು ಜರೆಯಲಿ ಬಂಧು ಬಾಂಧವರೆಲ್ಲ ನಿಂದಿಸಿ ನುಡಿಲಿ ಬಂಧನವು ಬಿಡರಿರಲಿ ಎಂದೆಂದು ಮರೆಯದಂತೆ ಇಂದಿರೇಶ ನಿಮ್ಮ ಧ್ಯಾನವೊಂದೇ ಎನಗಿರಲಿ 1 ಭೂಪತಿಗಳೆನ್ನೊಳ್ಕೋಪಮಂ ತಾಳಲಿ ತಾಪಬಡಿಸಲಿ ಮಹಪಾಪಿವನೆನುತ ತಾಪತ್ರಯ ಬಿಡದಿರಲಿ ಪಾಪಲೋಪನೆ ಜಗ ದ್ಯ್ಯಾಪಕನೆ ನಿನ್ನ ಧ್ಯಾಸಪರೂಪ ಎನಗಿರಲಿ 2 ಕಂಡಕಂಡಂತೆ ಜನರು ಭಂಡನೆಂದೆನ್ನಲಿ ತಂಡತಂಡದಿ ಕಷ್ಟ ಅಂಡಲೆದು ಬರಲಿ ಹೆಂಡರು ಸೇರದೆ ಗಂಡನೆಲ್ಲೆಂದೆನಲಿ ಪಂಢರೀಶ ನಿನ್ನ ಪದೆನ್ನ ಮಂಡೆಮೇಲಿರಲಿ 3 ಎತ್ತ ಪೋದರು ಜನರು ಹತ್ರ ಬಡಿಯಲಿ ಎನಗೆ ವಿತ್ತಕೊಟ್ಟೊಡೆಯರು ನಿತ್ತರಿಸದೊದಿಲಿ ಮುತ್ತಿಕೊಂಡ್ವೈರಿಗಳು ಕುತ್ತಿಗೆ ಕೊಯ್ಯಲಿ ಚಿತ್ತಜಪಿತನಿನ್ನ ಭಕ್ತ್ಯೊಂದೆನಗಿರಲಿ 4 ಪೀಡಿಸಲಿ ಬಡತನವು ಕಾಡಿಸಲಿ ದಾರಿದ್ರ್ಯ ಓಡಿಸಲಿ ಪೊಡವಿಪರು ನಾಡ ಬಿಟ್ಟೆನ್ನ ನೋಡಲಿ ಮುನಿದೆನ್ನ ನಾಡದೈವಗಳೆಲ್ಲ ಬೇಡೆನೆ ಶ್ರೀರಾಮ ನಿನ್ನಡಿ ಬಲೊಂದೆನಗಿರಲಿ5
--------------
ರಾಮದಾಸರು
ಬಂದನು ರಘುವೀರ ರಣಧೀರ ಪ ತಡೆ ಭರತನೆ ಮುಂದಡಿಯಿಡಬೇಡ ದುಡುಕಿ ಬೀಳದಿರು ಬಡಜನ ಮುಖಕೆ 1 ಸೀತಾನಾಥನ ದೂತನಾದೆನ್ನ ಮಾತನು ಕೇಳು ಆತುರಪಡದೆ 2 ಭ್ರಾತನ ನೋಡಲು ಕಾತರನಾಗಿ ವಾತವೇಗದೊಳು ಆತನು ಬರುತಿಹ 3 ಅದೊ ನೋಡದೊ ನೋಡದರ ದೆಶೆಯಲಿ ವಿದುಶತಕಿಲ್ಲದಗದಿರದದ್ಯುತಿಯ 4 ಅದೊ ಪುಷ್ಪಕವು ಅದರ ಪ್ರಭೆ ನೋಡು ಅದರಿರವ ನೋಡು ಒದಗಿ ಬರುತಿದೆ 5 ಧಾಮ ಮಧ್ಯೆ ನಿ ಸ್ಸೀಮ ನಿಮ್ಮಣ್ಣ ರಾಮನ ನೋಡು 6 ವಾಮದಿ ಸೀತಾಭಾಮೆ ಕುಳ್ಳಿಹಳು ಪ್ರೇಮದಿ ಲಕ್ಷ್ಮಣ ಚಾಮರ ಬೀಸುವ 7 ಬಲದಿ ಸುಗ್ರೀವ ನೆಲೆಸಿಹ ನೋಡು ಕೆಲದಿ ವಿಭೀಷಣ ನಲಿಯುತ ನಿಂತಿಹ8 ಅಂಗದ ತನ್ನಯ ಜಂಘೆಲಿ ದೇವನ ಮಂಗಳ ಚರಣವ ಹಿಂಗದೆ ಸೇವಿಪ 9 ವೃದ್ಧ ಜಾಂಬವ ಗದ್ದುಗೆ ಮುಂದಿಹ ಯುದ್ಧ ಪ್ರವೀಣರು ಸಿದ್ಧರಾಗಿಹರು 10 ಉಳಿದ ಕಪಿ ದನುಜ ದಳಗಳು ಹಿಂದೆ ಕಲಕಲ ಮಾಡುತ ಉಲಿಯುತಲಿಹವು 11 ಅರರೆ ವಿಮಾನವು ತಿರುಗಿತು ನೋಡು ಧರಣಿಗೆರಗುತಿದೆ ಭರದೊಳು ನೋಡು 12 ಭಳಿರೇ ರಾಮನು ಇಳಿದನು ನೋಡು ಕಳವಳವೆಲ್ಲವ ಕಳೆಯುತ ನೋಡು 13 ಬಂದನು ಅದಕೊ ಬಂದೇ ಬಂದನು ಇಂದುಮುಖಿಯ ತಾ ಹಿಂದಿಟ್ಟುಕೊಂಡು14 ಮುಂದೆ ಬರುವ ಕಪಿಯನು ಉಳಿದು ಸುಂದರ ಮುಖವು ಕುಂದಿದೆ ನೋಡು 15 ನಡೆದು ಬರುತಿಹ ಮಡದಿಯೊಡಗೂಡಿ ತಡಮಾಡದಿರು ಪೊಡಮಡು ಪೋಗು 16 ಇಂತು ನುಡಿದು ಧೀಮಂತನಾದ ಹನು- ಮಂತ ಚಿಗಿದು ಖಗನಂತೆ ಬಂದಿಳಿದ17 ವಾತಸುತನ ಸವಿಮಾತಲಿ ಭರತನು ಪ್ರೀತಿಲಿ ತಿರುಗಿದನಾತುರದಿಂದ 18 ನೋಡುತ ರಾಮನ ಓಡುತ ಬಂದೀ ಡಾಡಿದ ತನುವ ಬಾಡಿದ ಮುಖದಿ 19 ಅನುಜನ ನೋಡಿ ದನುಜಾರಿಯಾಗ ಮನ ಮರುಗಿದ ಬಲು ಕನಿಕರದಿಂದ 20 ರಂಗೇಶವಿಠಲ ಕಂಗಳ ಜಲದೊಳು ಮಂಗಳಯುತನಾಲಿಂಗನಗೈದ 21
--------------
ರಂಗೇಶವಿಠಲದಾಸರು
ಬಂದಾರೆ ಅತ್ತಿಗೆಯರು ಚಂದನೋಡಿರೆಚಂದ ನೋಡಿರೆ ಇಂದಿರೇಶನ ಮುದ್ದುತಂಗಿಯರು ಕರೆಯಲು ಬಂದಾರೆ ಪ. ಸಾಲು ದೀವಿಗೆಯಂತೆ ಬಾಲೆಯರು ನಿಂತಾರೆ ಮ್ಯಾಲೆ ಸುಭದ್ರೆ ದ್ರೌಪತಿಯೆ ಇಂದೀವರಾಕ್ಷಿಮ್ಯಾಲೆ ಸುಭದ್ರೆ ದ್ರೌಪತಿ ನುಡಿದಳು ಮೇಲೆಂದು ನಿಮ್ಮ ದೊರೆತನ ಇಂದೀವರಾಕ್ಷಿ 1 ಕೃಷ್ಣನ ಮಡದಿಯರು ಎಷ್ಟು ದಯವಂತರು ಅಷ್ಟೂರಲ್ಲಿದ್ದ ಗರುವನೆಅಷ್ಟ್ಟೂರಲ್ಲಿದ್ದ ಗರುವನೆ ತುರುಬಿಗೆ ಮಲ್ಲಿಗೆ ಮಾಡಿ ಮುಡಿದಾರೆ2 ಫುಲ್ಲನಯನರ ದೈವ ಎಲ್ಲಿವರ್ಣಿಸಬೇಕುಎಲ್ಲರಲ್ಲಿದ್ದ ಗರುವನೆ ಎಲ್ಲರಲ್ಲಿದ್ದ ಗರುವನೆ ತಮ್ಮಲ್ಲಿಟ್ಟುಕೊಂಡಾರೆವಿನಯದಿ ಸಖಿಯೆ ಇಂದೀವರಾಕ್ಷಿ 3 ಹಿರಿಯ ಅತ್ತಿಗೆ ತಾನು ಗರುವಿನ ಸೀರೆಯನುಟ್ಟುಬರಿಯ ಬಿಂಕದ ಕುಪ್ಪುಸವ ತೊಟ್ಟುಬರಿಯ ಬಿಂಕದ ಕುಪ್ಪುಸವ ತೊಟ್ಟುಕರೆಯಲಿ ನಮ್ಮ ಇದುರಿಗೆ ಇಂದೀವರಾಕ್ಷಿ4 ಮಡದಿ ಸತ್ಯಭಾಮೆ ಬಡಿವಾರದ ಸೀರೆಯನುಟ್ಟುಕಡುಕೋಪವೆಂಬೊ ಕುಪ್ಪುಸವಕಡುಕೋಪವೆಂಬೊ ಕುಪ್ಪುಸವ ತೊಟ್ಟುಒಡಗೂಡಿ ನಮ್ಮ ಕರೆಯಲು ಇಂದೀವರಾಕ್ಷಿ5 ಅಷ್ಟು ಮಡದಿಯರು ಅತಿ ಸಿಟ್ಟಿನ ಸೀರೆಯನುಟ್ಟುಅಷ್ಟ ಮದವೆಂಬೊ ಕುಪ್ಪುಸವಅಷ್ಟ ಮದವೆಂಬೊ ಕುಪ್ಪುಸವ ತೊಟ್ಟುಧಿಟ್ಟಯರು ನಮ್ಮ ಕರೆಯಲು ಇಂದೀವರಾಕ್ಷಿ6 ಭಾಪುರಿ ಅತ್ತಿಗೆಯರು ಕೋಪದೊಸ್ತಗಳಿಟ್ಟುಭೂಪರಾಮೇಶನ ಮಡದಿಯರುಭೂಪರಾಮೇಶನ ಮಡದಿಯರು ಬಂದರೆದ್ರೌಪತಿ ದೇವಿಯ ಕರೆಯಲು ಇಂದೀವರಾಕ್ಷಿ 7
--------------
ಗಲಗಲಿಅವ್ವನವರು
ಬಂದಿರುವೆನು ಭೂಜಾತೆ | ಶರ- ದಿಂದುವದನೆ ವೋ ಸೀತೆ ಪ ಕೂಗುವುದೇತಕೆ ನಿಮ್ಮಯ ಪೆಸರೇ ನೀಗ ತಿಳಿಸಿರೈ ಸ್ವಾಮಿ | ನುಡಿ ಭಾಗವತ ಜನಪ್ರೇಮಿ ಅ.ಪ ಹೀನತಮವ ಮುರಿದಜಗೆ ಶೃತಿಗಳಿತ್ತ ಮೀನಾವತಾರನೆ ನಾನು | ಬಾ ಜಾನಕಿ ಬೇಗನೆ ನೀನು ಮೀನಾದರೆ ನೀರೊಳಗಿರುವುದು ಸರಿ ಮಾನಿನಿಯಲಿ ಕಾರ್ಯವೇನು | ನಡಿ ದೀನ ಜನರ ಸುರಧೇನು 1 ಕಮಲನಯನೆ ನಾ ಪೂರ್ವದಿ | ಗಜ- ಗಮನೆಯೆ ನೋಡನುರಾಗದಿ ಭ್ರಮೆಯಾತಕೆ ಕೇಳ್ ಕಠಿಣಾಂಗಗೆ ನಾ ಸಮಳೆ ನಿನಗೆ ನೀ ನೋಡು | ಸಂ ಭ್ರಮವಿದ್ದಲಿ ನಲಿದಾಡು 2 ವರಹಾರೂಪನೆ ಕಾಮಿನಿ | ಓ ತರುಣಿಯರೊಳಗೆ ಶಿರೋಮಣಿ ವರಾಹನಾದರೆ ಅಡವಿಯ ತಿರುಗುತ- ಲಿರದೇತಕೆ ಇಲ್ಲಿ ಬಂದೆ | ನಡಿ ಪರಿಪರಿ ಮೃಗಗಳ ಹಿಂದೆ 3 ಕರುಳ ಬಗೆದ ನರಸಿಂಹ | ನಾನು ಪರಮ ಪುರಷ ಪರಬ್ರಹ್ಮ ನರಸಿಂಹನು ನೀನಾದರೆ ನಡಿನಡಿ ಗಿರಿಗುಹೆಯೊಳಗಿರು ಹೋಗೈ | ಬಹು ಪರಿನುಡಿಗಳು ನಿನಗೇಕೈ 4 ಭೂಮಿಯ ದಾನವ ಬೇಡಿ ಬಲಿಯ ಗೆದ್ದ ವಾಮನ ನಾನೆಲೆ ನಾರಿ | ಸು ತ್ರಾಮಾದ್ಯರಿಗುಪಕಾರಿ ಬ್ರಾಹ್ಮಣನಾದರೆ ನಮಿಸುವೆ ಚರಣಕೆ ಹೋಮಧ್ಯಾನ ಜಪಮಾಡೈ | ನಿ ಷ್ಕಾಮ ಜನರ ಪಥನೋಡೈ 5 ದುರುಳನೃಪರ ಸಂಹರಿಸವನಿಯ ಭೂ ಸುರರಿಗೆ ಕೊಟ್ಟೆನೆ ದಾನವು | ಕೇಳ್ ಪರಶುರಾಮಾಭಿದಾನವು ವರಮಾತೆಯ ಶಿರವರಿದವ ನೀನಂತೆ ಸರಸವೇತಕೆನ್ನಲ್ಲಿ | ಮನ ಬರುವಲ್ಲಿಗೆ ತೆರಳಲ್ಲಿ 6 ತಾಯನುಡಿಗೆ ತಮ್ಮಗೆ ರಾಜ್ಯವ ಕೊಟ್ಟು ಪ್ರಿಯದಿ ವನದೊಳಗಿದ್ದೆನೆ | ದೈ ತ್ಯೇಯ ನಿಕರವನು ಗೆದ್ದೆನೆ ಸ್ರೀಯರಲ್ಲಿ ಹಿತವೇನು | ಕಮ ಲಾಯತಾಕ್ಷ ನಡಿ ನೀನು 7 ನಾರಿಯರನು ಕೂಡಿ ರಾಸ ಕ್ರೀಡೆಯೊಳ್ ತೋರಿದೆ ಪರಿಪರಿ ಚಿತ್ರವ | ವಿ- ಜಾರ ಪುರಷನಿಗೆ ಹೋಲುವಳಲ್ಲವು ಸಾರ ಪತಿವ್ರತೆ ನಾನು | ಇ- ನ್ನ್ಯಾರು ತಿಳಿಸು ಮತ್ತೆ ನೀನು 8 ಪತಿವ್ರತೆಯರ ಸದ್‍ವ್ರತವ ಕೆಡಿಸಿದಾ ಪ್ರತಿಮ ಬುದ್ಧನೆ ಲತಾಂಗಿ | ಓ ಮತಿವಂತಳೆ ಮೋಹನಾಂಗಿ ಕೃತಕವಾಡದಿರು ಒಲ್ಲೆ | ಕೇ ಳತಿ ಮೋಹಕ ನೀ ಬಲ್ಲೆ 9 ಹಲವು ನುಡಿಗಳೇನು ಕಲಿಯುಗಾಂತದಲಿ ಮಲೆತ ಮನುಜರನು ಕೊಲ್ವೆನೆ | ಓ ಲಲನೆ ನೋಡು ಬಲು ಚೆಲ್ವನೇ ಕಲಿತನವ ತೋರಿಸದಿರು ಈ ಪರಿ ಹಲವು ವೇಷ ನಿನಗೇಕೆ | ಕೇ ಳೆಲವೊ ಸ್ವಾಮಿ ನುಡಿ ಜೋಕೆ 10 ವೇಷವಲ್ಲ ಸರ್ವೇಶ ನಾನು ಪರಿ- ಪೋಷಿಸುವೆನು ನಿಜಭಕ್ತರ | ಸಂ- ತೋಷಿಸುವೆನು ಧರ್ಮಯುಕ್ತರ ಪೋಷಿಸುವನು ನೀನಾದರೆಲ್ಲಿ ನಿನ್ನ ವಾಸಪೇಳು ನಿಜವೀಗಾ | ಪರಿ ಹಾಸವೇಕೆ ನುಡಿಬೇಗ 11 ಪರಮಾತ್ಮನು ನಾ ಕೇಳೆ | ಎನ್ನ ಮರತೆಯೇನೆ ಎಲೆ ಬಾಲೆ ಅರಿತೆನೀಗ ಬಹು ಸಂತಸವಾಯಿತು ಎರಗುವೆ ಚರಣಕೆ ನಾನು | ನಿನ್ನ ಸರಿಯಾರೈ ದೊರೆ ನೀನು 12 ಧರೆಯೊಳಯೋಧ್ಯಾ ಪುರದರಸನ ಮಗ ಗುರುರಾಮವಿಠಲನೆ ನಾನು | ಓ ತರುಣಿ ನಿನಗೊಲಿದು ಬಂದೆನು ಧರಣಿ ತನಯೆ ನಸುನಾಚಿಕೆಯಿಂದಲಿ ಣಗಳನು ತೊಳೆದಳು ಬೇಗ 13
--------------
ಗುರುರಾಮವಿಠಲ
ಬಂದು ನಿಮ್ಮಡಿಗಳ ನಾಶ್ರಯಿಸಿದೆ ಪ್ರಭುವೆ ಭವ ಬಂಧನಗಳ ಬಿಡಿಸಿ ನೀ ಕಾಯೊ ಸದ್ಗುರುವೇ ಪ ಎಲ್ಲೆಲ್ಲಿಯೂ ತಿರುಗಿ ಕಾಯುವರ ಕಾಣದೆಲೆ ತಡಮಾಡದೆಮ್ಮಯ ದುಗುಡಗಳ ಪರಿಹರಿಸಿ ಕರುಣದಿಂದಲಿ ಕಾಯೊ ಗುರುರಾಘವೇಂದ್ರಾ 1 ನಿಶೆ ಹಗಲು ನಿನ್ನನು ಸ್ತುತಿಸಿ ಬೇಡುವೆ ಪ್ರಭುವೆ ಗತಿಗಾಣೆ ನಿನ್ಹರತು ಈ ಪೃಥುವಿಯೊಳಗೆ ಅತಿವ್ಯಥೆಯಲೀ ನೊಂದು ಮತಿಯಿಲ್ಲದಂತಿಹೆನು ತ್ವರಿತದಿಂದಲಿ ಕಾಯೊ ಹೇ ಗುರುರಾಜ ಪ್ರಭುವೇ 2 ಜಗವೆಲ್ಲ ನಿಮ್ಮ ಮಹಿಮೆ ಸಾರುತಿರುವುದ ಕೇಳಿ ಭರದಿಂದ ಬಂದೆನೋ ಗುರುರಾಘವೇಂದ್ರಾ ಇಂದೆಮ್ಮ ಅಪರಾಧಗಳ ಎಣಿಸದೆಲೆ ಸಲಹೈಯ್ಯಾ ಕಾರುಣ್ಯಮೂರ್ತಿ ಶ್ರೀ ಗುರುರಾಘವೇಂದ್ರಾ 3
--------------
ರಾಧಾಬಾಯಿ
ಬಂದು ನಿಲ್ಲೋ ಶ್ರೀಹರೇ-ಬಂದುನಿಲ್ಲೊ ಪ ಇಂದು ಹಿಂದು ನೀನೆಂದಿಗು ತಂದೆ ಗೋ- ವಿಂದ ಅನಿಮಿತ್ತಬಂಧು ಕಣ್ಣಮುಂದೆ ಅ.ಪ ಸ್ವಾಂಶದಿಂದ ಅಭಿವ್ಯಕ್ತಿಯಾದೆ ಪಂ- ಚಾಂಶತೋರಿ ಸರಸ ಜನನ ಮಾಡಿದೆ ಸ್ವಾಂಶನಾಗಿ ಅವತರಿಸಿ ಮೆರೆವ ಸ- ರ್ವಾಂಶದಿಂದಿಹ ತ್ರಿಂಶ ರೂಪನೇ 1 ಸ್ವಗತಭೇದವಿವರ್ಜಿತನೆನಿಸಿ ತ್ರಿಗುಣಮಯದಿ ಬ್ರಹ್ಮಾಂಡ ನಿರ್ಮಿಸಿ ಅಗಣಿತಮಹಿಮಾಧಾರನಾಗಿ ನಿಂದು ಮಿಗೆ ಶೋಭಿಸುವ ವಿರಾಟಮೂರುತಿಯೆ2 ಕಾರಣನೆನಿಸಿದ ಕರ್ಮನಿವೃತ್ತಿಗೆ ಸಾರವಾದ ಜ್ಞಾನಯೋಗ ಮಾರ್ಗವ ನಾರದಾದಿ ಮಹಾಮುನಿಗಳಿಗರುಹಿದ ನರನಾರಾಯಣ ಬದರಿ ಆಶ್ರಯನೇ 3 ಹಂಸಕಪಿಲ ದತ್ತಾತ್ರೇಯ ರೂಪನೆ ಹಂಸರಹಸ್ಯಗಳೆಲ್ಲವ ಪೇಳಿ ಸಂಶಯ ಬಿಡಿಸಿದೆ-ಜೀವಪರಮಾತ್ಮರ ಅಂಶಗಳರುಹಿದ ಹಂಸಮೂರುತಿಯೆ4 ಅಜಪಿತ ನೀ ಗಜರಾಜನ ಸಲಹಿದೆ ಭಜಿಸಿದ ವಾಲಖಿಲ್ಯರ ಕಾಯ್ದೆ ಅಜಹತ್ಯವು ವೃತ್ರವಧೆಯಿಂದ ಕಾಯ್ವ ಬಿ- ಡೌಜನ ಸಲಹಿದ ಗಜರಾಜ ವರದಾ5 ಪುರುಹೂತನ ಅಹಂಕಾರ ಖಂಡಿಸಿ ಕಿರುಬೆರಳಲಿ ಗೋವರ್ಧನಗಿರಿ ಎತ್ತಿ ಪರಿಪಾಲಿಸಿ ಗೋಬೃಂದವನೆಲ್ಲವ ಸುರರಿಂದ ಪೊಗಳಿಸಿಕೊಂಡೆ ಗೋವಿಂದ6 ಬುಧರರಿಯುಲು ಆ ವೇದ ವಿಭಾಗಿಸೆ ಉದಯಿಸಿ ಮುದದಿಂದ ಬದರಿಯ ಸದನದಿ ಬೋಧಿಸುತ್ತಲಿಹ ಬಾದರಾಯಣನೇ7 ಅಖಿಳಾಂಡಕೋಟಿಬ್ರಹ್ಮಾಂಡನಾಯಕ ವಿಕುಂಠಳೆಂಬೊ ಉದರದಿ ಜನಿಸಿ ಲಕುಮಿರೂಪಿಯಾದ ಸುಂದರಿಯ ಕೂಡ ಭೂ- ವೈಕುಂಠ ನಿರ್ಮಿಸಿದ ವೈಕುಂಠಮೂರುತಿಯೆ 8 ಸತ್ಯವ್ರತನೆಂಬೊ ಮನುವಿನುದ್ಧರಿಸಿ ಉತ್ತಮ ಔಷಧಿಗಳೆಲ್ಲವ ಸಲಹಿದೆ ದೈತ್ಯನಾದ ಉನ್ಮತ್ತನ ಕೊಂದು ಶ್ರುತಿಯ ತಂದಿತ್ತ ಮತ್ಸ್ಯಮೂರುತಿಯೆ 9 ಸುರಭಿನೆವನದಿ ಶರಧಿಮಥಿಸೆ ತಾ ಭರದಿ ಬೆನ್ನೊಳು ಧರಿಸಿಹೆ ಮಂದರ ಗಿರಿಧರನೆನಿಸಿದೆ ಕಮಠರೂಪನೆ 10 ಪ್ರಳಯ ಜಲಧಿಯೊಳು ಇಳೆಯನು ಕದ್ದಾ ಖಳಹಿರಣ್ಯನಾ ಶಿರವ ಚೆಂಡಾಡಿ ಜಲಧಿಯ ಶೋಧಿಸಿ ಇಳೆಯನು ತಂದು ಜಲಜಸಂಭವಗಿತ್ತ ಕ್ರೋಢರೂಪನೆ 11 ದುರುಳತನದಿ ತನ್ನ ತರಳನ ಬಾಧಿಪ ಹಿರಣ್ಯಕಶಿಪುವಿನ ಉದರವ ಬಗೆದು ಶರಣನಿಗಭಯವ ಕರುಣಿಸಿ ತೋರಿದ ಸರ್ವವ್ಯಾಪ್ತನೆಂದರುಹಿದ ನರಹರಿಯೇ12 ಬಲಿಯಿಂದಪಹೃತವಾದ ಸಾಮ್ರಾಜ್ಯವ ಸುಲಭದಿಂದಲಿ ಪುರಂದರಗಿತ್ತು ಸಲಹಿದೆ ಒಲಿದು ಬಲಿಯ ಭಕ್ತಿಗೆ ನೀ ಬಾ- ಗಿಲ ಕಾಯ್ದ ವಟು ವಾಮನನೆ 13 ದುರುಳತನದಿ ಆ ಹೈಹಯರೆಂಬ ನರಪರದುರ್ಮದ ಮರ್ದಿಸಲೋಸುಗ ನೃಪರ ಶಿರವನೆಲ್ಲ ತರಿದು ನಿಗ್ರಹಿಸಿದ ಭಾರ್ಗವ ಮೂರ್ತೇ 14 ಶರಧಿ ಬಂಧಿಸಿ ಸೇತುಕಟ್ಟಿ ಕಪಿ- ವೀರರೊಡನೆ ಆ ರಾವಣನಡಗಿಸಿ ಭೂ ಭಾರವನಿಳುಹಿಸಿ ಭೂಮಿಜೆಯನು ತಂದ ಅ- ಸುರ ಮರ್ದನ ದಾಶರಥಿ ರಾಘವ 15 ವಸುಮತಿಭಾರವನಿಳುಹಲೋಸುಗ ವಸುದೇವಸುತ ಶ್ರೀಕೃಷ್ಣನೆನುತಲಿ ಶಿಶುಪಾಲಾದಿಗಳಾಂತಕನೆನಿಸಿದ ಶಶಿಮುಖಿರುಕ್ಮಿಣಿ ಸಹಿತ ಶ್ರೀಕೃಷ್ಣ 16 ವೇದ ಕರ್ಮಗಳಿಗನರ್ಹರೆಲ್ಲರು ಸಾದರದಿಂದಲಿ ಅಧಮರೆಸಗುತಿರೆ ವೇದವಿರುದ್ದವಾದಗಳಿಂದಲೇ ಮೋಹವ ತೋರಿದೆ ಬುದ್ಧಸ್ವರೂಪನೆ17 ದುರುಳತನದಿ ಇಳೆಯಾಣ್ಮರುಗಳು ಕ್ರೂರತನದಿ ಪರಪೀಡಕರಾಗಿರೆ ಪರಿಹರಿಸಲು ಭೂಭಾರಕ್ಕಾಗಿ ಅವ- ತರಿಸಿ ಮೆರೆಯುವ ಕಲ್ಕಿರೂಪನೆ 18 ಏಕರೂಪ ಅನೇಕರೂಪನೆ ಏಕಮೇವ ನೀ ಪ್ರಕಟ ಮಾಡುವೆ ಪಿನಾಕಿ ಪ್ರಮುಖರು ಏಕದೇಶದಿ ಸಾಕಲ್ಯವ ತಿಳಿಯರೊ 19 ದೋಷದೂರ ಶೇಷಾಚಲವಾಸ ಪೋಷಿಸೊ ನಿನ್ನಯ ದಾಸಜನರ ಸರ್ವ ದೋಷಕಳೆದು ಮನೋಕಾಶದಲಿ ನಿಲ್ಲೊ ಶೇಷಗಿರೀಶ ಶ್ರೀ ವೆಂಕಟೇಶನೆ 20
--------------
ಉರಗಾದ್ರಿವಾಸವಿಠಲದಾಸರು
ಬಂದು ಪಾಲಿಸೆನ್ನ ರಮಾಸಿಂಧುಜೆ ಶ್ರೀರಾಮ ಇಂದು ಭಜಿಪೆ ನಿಮ್ಮ ಪ ಕಂದನೆಂದು ಮನಕೆ ತಾರದಿರಲು ನೊಂದೋಯ್ತು ನೀ ಬೇಗ 1 ಧೀಮಣಿ ಭಕ್ತಚಿಂತಾಮಣಿ ನೀ ಬೇಗ 2 ನಿಮ್ಮ ಕಂದನಾಶ್ರಯಿಸಲು ಸುಮ್ಮನಿರುವದೇನುಚಿತವೇ ನೀ ಮೊಖ [ತೋರಿ] ಬೇಗ 3
--------------
ಚನ್ನಪಟ್ಟಣದ ಅಹೋಬಲದಾಸರು
ಬಂದೆ ಬಂದೆ ಸ್ವಾಮಿಯೆ ಬಂದೆ ಬಂದೆ ಪ. ಬಂದೆ ಬಂದೆ ಗೋವಿಂದ ಗೋವಳ ಬಾಂಧವ ಭಕ್ತವತ್ಸಲಇಂದಿರೇಶ ಶ್ರೀ ವೆಂಕಟ ನಿನ್ನ ಸಂದರುಶದಕೆ ಸಾಗಿ ನಾನಿಲ್ಲಿ ಅ.ಪ. ನಡೆದು ನಡೆಸುತ ನುಡಿದು ನುಡಿಸುತಅಡಿಗಡಿಗೆ ಕಾಪಾಡುತಒಡನೆ ಆಡುತ ಬಿಡದೆ ಕ್ಷಣವನುಸಡಗರದಿ ಕರೆತರಲು ನಾನಿಲ್ಲಿ 1 ಆಪ್ತ ಅನಿಮಿತ್ತ ವ್ಯಾಪ್ತ ಸರ್ವತ್ರಗುಪ್ತ ಗುಣಗಣಪೂರ್ಣನೆಪ್ರಾಪ್ತ ನೀನೆನಗಾಗಬೇಕೆಂದುವ್ಯಾಪ್ತಿ ನಿನ್ನದು ಹುಡುಕುತಲಿ ನಾ2 ಒಂದು ರೂಪದಿ ನಿಂದು ಎನ್ನಲ್ಲಿಚೆಂದದಿಂ ಕರೆತಂದೆ ಇಲ್ಲಿಒಂದರಿಯೆ ನಿನ್ನ ವಂದಿಸುವ ಬಗೆಬಂದೊದಗೊ ನೀನೆನ್ನ ವದನಕೆ 3 ಬಂದೆ ಬಂದೆ ನೀ ಬಂದಂತೆ ಕರ-ತಂದುದಕೆ ಫಲ ನೀನೆ ಬಲ್ಲೆಸಂದರುಶನ ನಿನಗೆ ನೀ ಮಾಳ್ಪಂದವನು ನೋಳ್ಪಾತುರದಿ ನಾ 4 ಏನು ಕೊಡಲಿಲ್ಲ ಏನು ಬೇಡಲಿಲ್ಲಏನು ಪಡೆಯಲೊ ಕರುಣಿಯೆನೀನು ಕೊಟ್ಟ ಸ್ವಾತಂತ್ರ್ಯದ ಫಲನಿನಗೆ ಅರ್ಪಿಸಬೇಕೆನುತ ಇಲ್ಲಿ 5 ರಕ್ಷಶಿಕ್ಷಕ ಮೋಕ್ಷದಾಯಕಸೂಕ್ಷ್ಮ ಘನ ಮಹಾವ್ಯಾಪಕಕುಕ್ಷಿಯೊಳು ಜಗದ್ಭರಿತ ಪೂರಿತಅಕ್ಷಯಫಲದಾಯಕ 6 ನಮೋ ನಮೋ ನಾಗಾರಿವಾಹನನಮೋ ನಮೋ ಸುರಸುಪ್ರಸನ್ನನೆನಮೋ ನಮೋ ಗೋಪಾಲವಿಠಲನಮಿಪ ಭಕ್ತರ ಸಲಹುವನೆಂದು 7
--------------
ಗೋಪಾಲದಾಸರು
ಬಂದೆ ಭಗವತ್ಪಾದಯುಗಾರ ವಿಂದಕೆ ಮಿಳಿಂದನಾಗಿ ವಂದನೀಯರೆ ಯತಿಕುಲಾಬ್ಧಿ ಚಂದ್ರರ ಭುವನೇಂದ್ರತೀರ್ಥರೆ1 ಪರಮ ಪಾವನ ಭುವನೇಂದ್ರರ ಕರಸಂಜಾತ ವರದೇಂದ್ರರ ಕರಸರೋರುಹಭವರೆ ಮಹಾ ಕರುಣಾಂತಃಕರಣ ಧೀರರೆ2 ಸುಮತೀಂದ್ರಾದಿ ಯತೀಂದ್ರರ ವಿಮಲ ಹೃದಯಕಮಲಭಾಸ್ಕರ ಅಮಮ ನಿಮ್ಮ ಕಾಂಬ ಯೋಗ ಸುಕೃತ ಭೋಗಪೂಗ3 ಪೂರ್ಣಪ್ರಜ್ಞಾಚಾರ್ಯವರ್ಯ ಸನ್ನುತ ಮತಧೈರ್ಯ ಧುರ್ಯ ಧನ್ಯನಾದೆನು ನಾನಿಂದು ಸನ್ನಿಧಾನವನು ಕಂಡೆನು4 ಶ್ರೀಶ ಲಕ್ಷ್ಮೀನಾರಾಯಣ ವ್ಯಾಸ ರಘುಪತಿಯ ಚರಣೋ- ಪಾಸಕರೆ ಪಾವನರೆ ಕಾಶೀವiಠಾಧೀಶ್ವರರೆ 5
--------------
ತುಪಾಕಿ ವೆಂಕಟರಮಣಾಚಾರ್ಯ
ಬಂದೆವಯ್ಯ ಗೋವಿಂದಶೆಟ್ಟಿ - ನಿಮ್ಮಹರಿವಾಣ ತೀರ್ಥಪ್ರಸಾದ ಉಂಟೆನಲಾಗಿ ಪ ಅಪ್ಪವು ಅತಿರಸ ತುಪ್ಪವು ಚಿನಿಪಾಲುಒಪ್ಪುವ ಸಕ್ಕರೆ ಯಾಲಕ್ಕಿಯುಅಪರೂಪವಾದ ಕಜ್ಜಾಯಗಳನೆಲ್ಲಛಪ್ಪನ್ನ ದೇಶಕ್ಕೆ ಮಾರುವ ಶೆಟ್ಟಿ1 ತುಂಬಿ ಮಿಕ್ಕ ಅನ್ನವ ಮಾರಿಸಿಒಡವೆಯ ಗಳಿಸುವ ಕಡುಲೋಭಿ ಶೆಟ್ಟಿ 2 ಶೇಷಗಿರಿಯಲ್ಲಿ ವಾಸ ಮಾಡಿಕೊಂಡುದೇಶದೇಶಕ್ಕೆ ಹೆಸರಾದ ಶೆಟ್ಟಿಕಾಸುಕಾಸಿಗೆ ಬಡ್ಡಿ ಗಳಿಸಿಕೊಂಬ ಆದಿಕೇಶವ ನಾರಾಯಣ ತಿಮ್ಮಶೆಟ್ಟಿ 3
--------------
ಕನಕದಾಸ
ಬಂಧನ ಬಿಡಿಸು ಶ್ರೀಶಾ ಇಂದಿರೇಶಾ ಪ. ಇಂದು ಈ ಭವದಲ್ಲಿ ನೊಂದು ನೊಂದೆನೊ ದೇವಾ ಗೋವಿಂದಾ ಪಾಲಿಸಬೇಕಯ್ಯಾ ಗೋಗಳರಾಯ ಅ.ಪ. ಇಂದಿರೇಶನೆ ನಿನ್ನ ಒಂದಿನಾದಿ ನಾನು ದೈನ್ಯದಿ ಭಜಿಸದೆ ಸುಂದರ ಮೂರುತಿ ನೀನು ಯನ್ನ ಹೃದಯ ಮಂದಿರದಲ್ಲಿ ಸಂದರುಶನ ಕೊಡೊ ಇಲ್ಲಿ 1 ಸದೋಷಿಯು ನಾನು ದೋಷರಹಿತ ನೀನು ಶೇಷಶಯನ ನಿಮ್ಮ ನಾಮವೇ ಭೂಷಣ ಸ್ವರಮಣನೀ ನಿನ್ನ ಸ್ಮರಣೆಯಾ ಮಾಡದೆ ಹಾಳು ಮಾತುಗಳಿಂದ ಹೊತ್ತುಗಳದೆ ಮುಕುಂದಾ 2 ಮತ್ಗ್ಯಾದ್ಯನಂತವತಾರ ನೀನು ತುಚ್ಛದೈತ್ಯಸ ಸಂಹಾರ ಇಚ್ಛಾದಿಂದಲಿ ನೀನು ಸುರರಿಗಾಧಾರ ಕಾಳಿಯಮರ್ದನ ಕೃಷ್ಣಧೀರ ಗಂಭೀರಾಸುತಸುಕುಮಾರಾ 3
--------------
ಕಳಸದ ಸುಂದರಮ್ಮ
ಬನ್ನಿರಿ ಬನ್ನಿರಿ ಪುರಜನರೆಲ್ಲರು ಕೃಷ್ಣನ ದರುಶನಕೆ ಪೋಗುವ ಪ ಕೃಷ್ಣನು ಜನಿಸಿದ ಈ ದಿನ ಇಷ್ಟವ ಪ್ರಾರ್ಥಿಸಲು ಪೋಗುವಅ.ಪ ದುಂದುಭಿ ನಾದವು ಕೇಳುತಿದೆ ಬಲು ಮಂದಿಯ ತಂಡವು ಹೋಗುತಿದೆ ಕಂದನ ರೂಪದಿ ಬಂದಿಹ ಆನಕ ದುಂದುಭಿ ಕುವರನ ಸಂಭ್ರಮ ನೋಡಲು 1 ಪೇಳಿರಿ ನಿಮ್ಮಯ ಕೊರತೆಗಳೆÀಲ್ಲವ ಕೇಳಿರಿ ವರಗಳ ಧೈರ್ಯದಲಿ ಬಾಲನು ಸುಲಭದಿ ಒಲಿಯುವ ಒಳ್ಳೆಯ ಕಾಲವಿದೆಲ್ಲರಿಗೆ ಬೇಗನೆ 2 ಜನುಮ ಜನುಮಗಳ ಪುಣ್ಯದ ರಾಶಿಯು ಜನುಮಾಷ್ಟಮಿ ದಿನದಿ ಲೋಕಕೆ ಜನುಮಾದ್ಯಷ್ಟಕದಾತನ ದರುಶನ ಮನಕೆ ಪ್ರಸನ್ನತೆ ಕೊಡುವುದು ಪೋಗುವ 3
--------------
ವಿದ್ಯಾಪ್ರಸನ್ನತೀರ್ಥರು
ಬನ್ನಿರೈಯ್ಯ ಬನ್ನಿರೈಯ್ಯ ಬನ್ನಿರೈಯ್ಯ ಬನ್ನಿರಿ ಪ ಚಿನ್ನ ಕೃಷ್ಣನ ಚೆನ್ನಾಗಿ ನೆನೆದು ಪ್ರಸನ್ನ ಮಾಡಿರಿ ಅ.ಪ. ಸತಿಯು ಸುತರು ಗತಿಯು ಎಂದು ಕೆಡಲು ಬೇಡಿರಿ ಮಿತಿಯು ಇಲ್ಲ ಮೇರೆಯು ಇಲ್ಲ ಫಲವು ಇಲ್ಲ ಕೇಳಿರಿ ಮತಿಯ ಹರಿಯ ಅಡಿಯಲ್ಲಿಟ್ಟು ಪ್ರೀತಿಮಾಡಿರಿ ಗತಿಯನೀಡಿ ತ್ವರಿತದಿಂದ ಪೊರೆವ ನಿಮ್ಮ ನೊಡಿರಿ 1 ಇಂದು ಕಾಲ ಕಳೆಯ ಬೇಡಿರಿ ಶುಭ ಇಂದೆ ನೆನೆಯಿರಿ ಬಂದು ಯಮನ ಭಟರು ಕರೆದರೆ ಏನು ಮಾಡೋರಿ ಮುಂದೆ ಇಂಥ ಜನ್ಮಬಹುದೆ ಬಂಧ ನೂಕಿರಿ2 ಆಶಪಾಶ ಮೋಸ ಬಲುಕ್ಲೇಶ ತಿಳಿಯಿರಿ ಹೇಸಿಕೆ ಸಂಸಾರವನು ಘಾಸಿಕೆ ನೋಡಿರಿ ವಾಸವೇಶ ಜಯಮುನೀಂದ್ರ ವಾಯುಸ್ಥ ಕೃಷ್ಣ ವಿಠಲನ ದಾಸನಾಗಿ ಗೆಜ್ಜೆಕಟ್ಟಿ ನಿರಾಶೆಯಿಂದ ಭಜಿಸಿರಿ 3
--------------
ಕೃಷ್ಣವಿಠಲದಾಸರು