ಒಟ್ಟು 1315 ಕಡೆಗಳಲ್ಲಿ , 104 ದಾಸರು , 1058 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶಂಕರ ಗಂಡನ ಹಾಡು ಸರಸ್ವತಿಗಭಿವಂದಿಸುವೆ ಒಡೆಯನು ಎನ್ನ ಮನದೊಡೆಯ 1 ಸಂಭ್ರಮ[ದಾ] ಕೇಳಿ ಸಜ್ಜನರು 2 ವಿಶಾಲ ವಿಲಾಸ ಪಟ್ಟಣದಿ ಖಚಿತ ಮಂದಿರದಿ 3 ಮಂದಮಾರುತ ತಂಪೆÉಸೆಯೆ ಗಂಧ ಕಸ್ತೂರಿ ಕದಂಬವನೇರಿಸಿ ಆನಂದವಾಗಿದ್ದ ಮನ್ಮಥನು4 ಮಯೂರ ಪಕ್ಷಿಗಳು ನಳಿನ ನಾಭನ ಓಲಗವು 5 ನಿರ್ಭಯದಲಿನಲ್ಕಾವತಿಯು ಪಾಲಿಸುತ್ತ 6 ಮರಿಹಾವುಗಳ ನೆರೆಹುವಳು ಗೊಂಬೆಯಾಟವನೆ ಆಡುವಳು 7 ಕೂಡಿದ್ದ ಗೆಳತಿಯರ ಒಡನೆ ನೋಡಿದ ನವಯೌವನೆಯನು 8 ಕುಚವು ತೋರಿದವು ಚಿತ್ತದೊಳಗೆ ಚಿಂತಿಸುತ್ತಿದ್ದ 9 ಚೆನ್ನಿಗನು ಮನ್ಮಥನು ಉದಯಕ್ಕೆ ಕರೆತನ್ನಿರೆಂದ 10 ಬಂದು ವಿಲಾಸ ಪಟ್ಟಣದೊಳು ಮದನಗೆ ಪ್ರೀತಿಲಿ ನಿಂದು ಕೈ ಮುಗಿದರು ಹೋ ಗ್ಯೆಂದು ಶಂಕರಗಂಡ ಕಳುಹಿದ ನಿಮ್ಮನೆಗೈತಂದೆವೆನಲು 11 ಮಾತಾಡಿ ನಗುತ ಭೂ ಕೇಳಿದ ಮನ್ಮಥನ 12 ರಾಜ್ಯವು ಕ್ಷೇಮವೆನ್ನಲು ಬ್ರಹ್ಮಾನಂದದಲಿದ್ದ ಶಂಕರಗಂಡನು 13 ವಿವಾಹ ಮಾಡಲಿಚ್ಛಿಸುವೆ ಚಂದ್ರಮುಖಿಯು 14 ಸಂಭ್ರಮದಿಂದ ಕುಳಿತರು ತಂದಿಡುವರು ಮನ್ಮಥಗೆ 15 ಅಂಗಜ ಅತಿ ದೈನ್ಯ ಉಕ್ತಿಯಿಂದಲಿ ಬಹು ಮಂಗಳ ಮೃದು ವಾಕ್ಯವನ್ನು ಪ್ರ ತಂಗಿಯನೆನಗೀಹುದೆಂದ 16 ಮಲ್ಲಿಗಿಸರ ಕಬ್ಬು ಬಿಲ್ಲು ಹಿರಿಯರು ಹೇಳುವರು 17 ಒಬ್ಬಳೇ ರತಿ ನಮ್ಮ ತಂಗಿ ಹಬ್ಬ ಹುಣ್ಣಿಮೆಗೆ ಕಳಿಸದೆ ನಮ್ಮನೆಗೆ ನಿರ್ಬಂಧ ಮಾಡುವಿರೆಂದ 18 ಕಡುಮೋಹದಿಂದ ಸಾಕಿದೆನು ಕೊಡಲಾರೆ ತಂಗಿಯನೆಂದ 19 ಅವಳಿಗೆ ಸ್ವತಂತ್ರವಿಲ್ಲೇನು ನುಡಿದ ದೈನ್ಯದಲಿ 20 ಭಾಗ್ಯದಿಂದಲಿ ನೋಡಿದರು ಮದನ ನೇಮವನೆ ಮಾಡಿದರು 21 ಪ್ರತಿಬಿಂಬ[ದಂದ]ದಲಿ ಎಣಿಕೆಯಿಲ್ಲದ ಬಂಧು ಜನರ 22 ಎಲ್ಲರು ನೆರೆದು ಸಂಭ್ರಮದಿ ಮಲ್ಲಿಗೆ ಸರದಿ ಮದನರತಿದೇವಿಗೆ ಕಲ್ಯಾಣವನೆ ಮಾಡಿದರು 23 ಬಟ್ಟಲು ಗಿಂಡಿಗಳನ್ನು ಬಳುವಳಿ ತಂಗಿಗೆ ಇತ್ತ 24 ಸಾಸಿರ ಗೋವು ಗಜವು ತುರಗವು ಬ್ಯಾಸರಿಯದೆ ತಂಗಿಗಿತ್ತ ವಿಲಾಸಪಟ್ಟಣಕೆ ಕಳಿಸಿದ 25 ದಿನ ಬಾಳುತಿರಲು ತಾನೇ ಯೋಚಿಸಿದ 26 ಬಿಗಿದ ನಾಡಗಂಬಳಿಯ ನಗುವಂತೆ ಮಾಡಿ ರೂಪವನು 27 ಕುಡಗೋಲು ಕÀವಣೆಯ ಪಿಡಿದು ಮಾಡುವೆನೆನುತ 28 ರೂಢಿಯೊಳಗೆ ಅತಿಚೆಲುವ ಸತಿಗೆ ತೋರಿದನು 29 ಒಡಹುಟ್ಟಿದಣ್ಣ ತಾ ಮುನಿಯೆ ನಮಗೆ ಬೇಡವೆಂದ್ಲು 30 ಕಾರಣವ ಹೇಳದಂತೆ ದಿನÀಕರ ನಂತೆ ಹೊಳೆಯುತ ಸಭೆಯಲಿತವಕದಿಂದಲಿ ಬಂದು ಕುಳಿತು31 ಗೆಲುವಿನಿಂದ ಮಾತಾಡಲಿಲ್ಲ ಜುಲ್ಮಿಂದ ತಾನೆ ಕೇಳಿದನು 32 ನಮ್ಮನೆಯಲಿ ನಾವೀಗ ಕಳಿಸುವೋರಲ್ಲ 33 ತೌರುಮನೆಯ ಹಾರೈಸುವರು ಉಂಡು ಸಂಭ್ರಮದಿಂದ ಬಾಹೋಳೆಂದ 34 ಕರುವ ಕಾಯಿ ನಮ್ಮ ಮನೆಯ ಮರೆಯದೆ ಹೊಯ್ಸುವೆಂನೆಂದ 35 ಜೋಳವ ಕೊಂಡು ಹೋಗೆನಲು ಬೇಡೆಲವೊ ಕಾಮ ನಿನ್ನ ಐಶ್ವರ್ಯವ ಹಾಳು ಮಾಡುವೆನೊಂದÀು ಗಳಿಗೆಯಲಿ 36 ಗಮಕದಿಂದಲಿ ಬೆಳೆವೆನೆಂದು ಚಮತ್ಕಾರದಿಂದ ಮಾಯವಾದ 37 ಅಟ್ಟ ಅಡಿಗೆ ಮನೆಂiÉ
--------------
ಹೆಳವನಕಟ್ಟೆ ಗಿರಿಯಮ್ಮ
ಶಂಭು ಶಂಕರನೆ ನಿನಗೊಂದಿಸಿ ಬೇಡುವೆ ಬಿಂಬದಲ್ಲಿರುವ ಮನ ಸ್ವಾಮಿಯ ತೋರೈ ಪ. ರುದ್ರ ದೇವನೆ ಮನಶುದ್ಧಿಯ ನೀ ಮಾಡಿ ಶ್ರದ್ದೆಯಿಂದಲಿ ಅನಿರುದ್ಧನ ತೋರೈ 1 ಸಿದ್ದಗುಣಗಳೊಡೆಯ ಉದ್ದರಿಸೆನ್ನ ಹದ್ದುವಾಹನ ಪ್ರದ್ಯುಮ್ನನ ತೋರೈ 2 ಶಂಕರನೇ ನಿನ್ನ ಕಿಂಕರಳನೆ ಮಾಡಿ ಮಂಕುಬುದ್ದಿಯ ಬಿಡಿಸಿ ಸಂಕರುಷಣನ ತೋರೈ 3 ವಾಸುದೇವನಿಗೆ ಶಿಶುವಿನ ಶಿಶು ನೀನಾಗಿ ಹುಸಿಯ ಮಾಡದೆ ವಾಸುದೇವನ ತೋರೈ 4 ಪಾರ್ವತಿ ಪತಿಹರ ಪಾಪವ ಕಳೆಸೆನೆಗೆ ಪಾರ್ಥನ ಸಖನ ನಾರಾಯಣನ ತೋರೈ 5 ನಂದಿವಾಹನ ನಿನಗೊಂದಿಸಿ ಬೇಡುವೆ ಬಂಧನ ಬಿಡಿಸಿ ಗೋವಿಂದನ ತೋರೈ 6 ರಮಾವಲ್ಲಭ ವಿಠಲ ನಾಮವ ಅನುಗಾಲ ನುಡಿವಂತೆ ವರಗಳ ನೀ ನೀಡೈ 7
--------------
ಕಳಸದ ಸುಂದರಮ್ಮ
ಶರಣರೆಳಕಂದಿ ನೀನ್ಯಾಕೆ ಕರುಣಿಸಲೊಲ್ಲಿ | ದುರಿತ ಭಯ ಪರಿಹರಿಸಿ ಸಲಹೆನ್ನ ತಂದೆ ಪ ಬಂದರ ವಿಭೀಷಣಗ ಅಭಯಕರವಿತ್ತೇ | ಬಂಧನಕ್ಕೋಳಗಾದ ಗಜರಾಜನನು ನೆಗಹಿ | ಛಂದದಭಿಮಾನುಳಿಹಿ ದ್ರೌಪದಿಯ ಕಾಯ್ದೆ 1 ಕಲುಷವಾರಿಸಿ ಮುನಿ ಸತಿಯ ನೀನುದ್ದರಿಸಿ | ಒಲಿದು ಧ್ರುವಗಾನಂದ ಪದವಿತ್ತೆ ಧರಿಲಿ | ಸಿಲುಕಿರಲು ಲಾಕ್ಷಗೃಹದಿ ಪಾಂಡವರನುಳುಹಿ | ಲಲನೆ ಗರ್ಭದಿ ಪರೀಕ್ಷಿತನ ಕಾಯ್ದೆ ಸ್ವಾಮಿ 2 ಅವರ ದಾಸಾನುದಾಸರ ಭಾಗ್ಯವೆಮಗಿಲ್ಲಾ | ತವನಾಮಧಾರಕೆನಿಸಿದ ಬಿರುದಿಗಿಂದು | ಕುವಲಯ ಶ್ಯಾಮ ಗುರು ಮಹಿಪತಿ ಸುತ ಪ್ರಭುವೆ | ಯಮನ ಬಾಧೆಯ ಬಿಡಸೋ ಬ್ಯಾಗೊದಿಗಿ ಬಂದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಗಿರಿಯ ತಿಮ್ಮಾ | ಶರಣು ಪುರುಷೋತ್ತಮಾ | ಶರಣು ಮಹಾ ಮಹಿಮ | ಶರಣು ಪರಬೊಮ್ಮಾ | ಪರಿಹರಿಸುವದು ಹಮ್ಮಾ ಪ ವರೇಣ್ಯ | ಭಂಗ | ಹರಿಸಿದ ಶಿರಿ ರಂಗ | ವಿಹಂಗ | ತುರಗ ತುರಗ ವದನ | ಸದನ ಕರ ಮುಗಿವೆನೈಯಾ | ಕರದ ಮಾತಿಗೆ ಜೀಯಾ | ಭರದಿಂದ ಕೊಡು ಮತಿಯಾ 1 ಪಾದದಲಿ ಪೆಣ್ಣಾ | ಮೋದದಲಿ ಪೆತ್ತ ಚಿಣ್ಣಾ | ನಾದ ಬಲು ಪಾವನ್ನಾ | ಭೇದಾರ್ಥ ಜ್ಞಾನ | ಆದರಿಸೆ ಅನುದಿನಾ | ನೀ ದಯದಲಿ ಕೊಡು | ಈ ದೇಹ ನಿನ್ನ ಬೀಡು | ಯಾದುದೆ ಇತ್ತ ನೋಡು 2 ಜಲದೊಳಗಾಡಿದೆ | ಚಲಕೆ ಬೆನ್ನ ನೀಡಿದೆ | ನೆಲ ಬಂದು ನೆಗಹಿದೆ | ಖಳನನ್ನ ಕೆಡಹಿದೆ | ಇಳಿಯ ಮೂರಡಿ ಮಾಡಿದೆ | ಕುಲವ ಕೂಡಲಲಿ ಹಾರ | ಜಾರ ಚೋರ | ಅಳಿದೆ ಮುಪ್ಪುರು ಶೂರಾ | ವಿಜಯವಿಠ್ಠಲ ಪಾರಾ | ಫಲವೀವೆ ಧರಣೀಧರಾ 3
--------------
ವಿಜಯದಾಸ
ಶರಣು ಬಂದೆನೊ ಹರಿಯೆ ಶರಣು ಬಂದೆನೊ ಪ ಕರುಣದಿ ನೋಡೆನ್ನ ಸಲಹು ಎಂದೆನೊ ಅ.ಪ. ಜನನ ಮರಣ ಸುಳಿಗಳಲಿ ತೊನೆದು ಬಳಲಿ ನೊಂದೆನೊಘನಭವದಲಿ ಮೂರುತಾಪಗಳಲಿ ಸಿಲುಕಿ ಬೆಂದೆನೊ 1 ಧನಕೆ ಮೆಚ್ಚಿ ನಿನ್ನ ಮರೆತು ಕಹಿಯ ಫಲವ ತಿಂದೆನೊಅನುದಿನ ಘನ ಚಿಂತೆಯಿಂದ ಮನದ ಶಾಂತಿ ಹೊಂದೆನೊ 2 ವನಿತೆ ಸುತರು ಪೊರೆವರೆಂಬ ಭ್ರಮದೊಳಾತ್ಮ ಕೊಂದೆನೊಕೊನೆಗೆ ಗದುಗು ವೀರನಾರಾಯಣನೆ ಗತಿಯೆಂದೆನೊ 3
--------------
ವೀರನಾರಾಯಣ
ಶರಣು ಭಾರತಿರಮಣ ಶಮಲವರ್ಜೀತ ಚರಣ ಕೆರಗಿ ಬೇಡುವೆ ವರವ ಪಿಡಿಯೆನ್ನ ಕರವಾ ಪ ಇಪ್ಪತ್ತೊಂದು ಸಾವಿರದಾರುನೂರು ಜಪ ತಪ್ಪದೆಲೆ ಸಕಲ ಜೀವರೊಳು ಜಪಿಸಿ ಮುಪ್ಪಿಲ್ಲದ ಜನ ಪದವಿಯನೈದಿ ಭಜಕರಿಗೆ ಸುಪ್ತಿ ಸ್ವಪ್ನವ ಬಿಡಿಸಿ ಮುಕ್ತರನು ಮಾಳ್ಪೆ 1 ಪವಮಾನರಾಯಾ ನೀ ಸಲಹದಿರೆ ಪಾಲಿಸುವ ದಿವಿಜರಿನ್ನುಂಟೇನೋ ಲೋಕದೊಳಗೆ ಯವನರಿಂದಲಿ ಬಂದ ಭಯವ ಪರಿಹರಿಸಿ ನಿ ನ್ನವರ ಸಂತೈಸು ಸರ್ವಕಾಲದಲೀ 2 ಲೋಗರಿಗೆ ಬೇಡಿದಿಷ್ಟಾರ್ಥಗಳ ಕೊಟ್ಟು ಚ ನ್ನಾಗಿ ಸಂತೈಪೆನೆಂದನು ದಿನದಲೀ ಭೋಗಪುರದಲಿ ಬಂದು ನೆಲೆಸಿದೆಯ ನೀ ಪರಮ ಭಾಗವತ ತಿಲಕ ಪಾಲಕ ವೀತಶೋಕ 3 ಭಾನುನಂದನಗೆ ನೀ ಒಲಿದ ಮಾತ್ರದಲಿ ರಘು ಸೂನು ಸಂರಕ್ಷಿಸಿದ ಸುರಪತನಯಾ ವಾನÀರೋತ್ತಮ ವಾಲಿಯನು ಸದೆದ ನಿನ್ನ ದಯ ಕಮಲ ಸಂಭವನ ಪದಕೆ ಯೋಗ್ಯ 4 ಶುಚಿನಾಮಕನೆ ಎನಗೆ ಹರಿಕಥಾ ಶ್ರವಣದಲಿ ರುಚಿಪುಟ್ಟುವಂತೆ ಮಾಡುನುಗಾಲದೀ ಮುಚುಕುಂದ ವರದ ಜಗನ್ನಾಥವಿಠಲನ ಗುಣ ರಚನೆಗೈವ ಸಮರ್ಥ ನೀನೇ ಸುಕೃತಾರ್ಥ 5
--------------
ಜಗನ್ನಾಥದಾಸರು
ಶರಣು ಶರಣುರಾಯಾ | ಸರಸಿ-ಜಾಲಯ ಪ್ರೀಯಾ | ಶರಣು ಪಾವನಕಾಯಾ | ಸಲಹುನಮ್ಮಾ ಪ ಸ್ತುತಿಯ ಮಾಡಲರಿಯೇ | ಯತಿ ಛಲಗುಣ ವರಿಯೇ | ಪಾವನ ದೇವ ದಯಾನಿಧಿಯೇ 1 ಶಿರಿವಧು ರಮಣನಾ ಚರಿತವ ಪೇಳುವೆ | ಕರುಣದಿ ಶ್ರೀಹರಿ ನುಡಿಸಿದಂತೆ | ಕೇಳಿ | ಧರಿಯೊಳು ಭಾಗವತರು ಯಲ್ಲಾ 2 ಬನ್ನಿ ಸಾತ್ವಿಕ ಗುಣ ಸಂಪನ್ನ ಮುತ್ತೈದೇರು | ಅನ್ಯ ಭಾವನೆಗಳಿಗೆ ತೊಡಕದೇ | ಯನುತಲಿ | ಉನ್ನತ ಸಂಭ್ರಮದಿ ನೆರೆದರು 3 ದಿವ್ಯಾಂಬರವನುಟ್ಟು ದಿವ್ಯಾಭರಣನಿಟ್ಟು | ದಿವ್ಯಾಕೃತಿಯಲಿ ವಪ್ಪುತಿಹಾ | ಮುನಿ | ಮದನ ಲಾವಣ್ಯನು 4 ಅನಾದಿ ಮಹಿಮ ಮೋಹನನಾದ ಕೃಷ್ಣನು | ಜ್ಞಾನಾಂಗನೇ ರುಕ್ಮಣಿ ವಧುವಿನಾ | ಈರ್ವರಾ | ಅನುಭವ ದೂಟಣಿಯನ್ನು ಮಾಡಲಾರಿ 5 ಸಡಗರದಿಂದಾ ಹೃದಯಾ ಪೊಡವಿಯೊಳೊಪ್ಪುದಾ | ದೃಢ ವಜ್ರದಿಂದಲಿ ರಚಿಸಿದಾ | ಜಗದಲಿ | ಒಡನೆ ರತಿ ರತ್ನಾಸನ ಹಾಕಿ 6 ಮ್ಯಾಲ ಭಾವಕಿಯರು ಮೂಲೋಕವಂದ್ಯರಾ | ಲೋಲವಧು ವರರನು ಕುಳ್ಳಿರಿಸಿ | ಹರುಷದಿ | ಮೇಲೆನಿಸಿ ಊಟಣಿಯ ಮಾಡಿಸಲು 7 ಶುದ್ಧ ಮತಿವಂತಿಯರು ಅಧ್ಯಕ್ಷರತರಾಗಿ | ಸಿರಿ | ಮುದ್ದು ಶ್ರೀ ಕೃಷ್ಣನು ವಲಿವಂತೇ 8 ನಾನಾ ಗಂಟಗಳುಳ್ಳಾ ಕಠಿಣವಾದಾ ಅಭಿ | ಮಾನ ಅರಿಷಿಣವನು ಸಣ್ಣ ಮಾಡೀ | ಈಗಾ | ಏನುಳಿಯದ್ಹಾಂಗ ವಿವೇಕದಿಂದ 9 ಹಮ್ಮಿನರಿಷಿಣವನು ಸಮ್ಯಜ್ಞಾನದ ಕದಿ | ಕಮ್ಯ ದೋರುವಂತೆ ಕಲಿಸುತಾ | ಶ್ರೀವರ | ಬ್ರಹ್ಮನ ಪಾಪಕ ಅರ್ಪಿಸಿದರು 10 ತ್ವರಿತ ಲಕ್ಷ್ಮೀ ಕಾಲಾ ಪರವಾ ವಪ್ಪಿಲೆ ಹಚ್ಚಿ | ಭರದಿಂದಾಕ್ಷಣ ಕ್ಷಣಕ ರುಕ್ಮಣಿ ಯಾಮುಖದಿಂದ | ಹರಿಯಾ ನಾಮಗಳನು ನುಡಿಸುತಾ 11 ಭಾವನಿಂದ ರಂಜಿಸುವ ಕುಂಕುಮ ಮ್ಯಾಲೆ | ಆ ವಿಮಲ ಮುಕ್ತಿಯ ಶೇಶೇ ನಿಟ್ಟು ಧ್ಯಾನಾ | ಲೇವಿಗಂಧವಾ ಲೇಪಿಸಿದರು 12 ಪರಿಮಳ ಸುವಾಸನೆಯ ಬೇರದ ಸುಮನ ಸರವಾ | ಕೊರಳಿಗೆ ಹಾಕಿದೆ ಪರಿಯಿಂದಾ ಕೃಷ್ಣನಾ | ಕರದಿ ನೇಮಿಸಿದರು ರುಕ್ಮಣಿಗೆ 13 ಆರ್ತ ಜಿಜ್ಞಾಸನು ಧನಾರ್ಥಿಯು ಬೈಲಿ ಘಳಿಗೆ | ಅರ್ತು ಮುಖದಲಿ ಕೊಟ್ಟು ಬಿಸುಡಿದರು ಬುಧರು | ನಿರ್ತದಿಂದಲಿ ನೋಡಿ ಇಬ್ಬರಿಂದ 14 ಮಗುಳೆ ಸಂಕಲ್ಪಾದಾ ಬಗೆದಾ ಕುಪ್ಪಸಿನ | ಬಿಗಿ ಬಿಗಿದು ಕಟ್ಟಿದಾ ಗಂಟವನು ಒಂದೇ | ಜಗದೀಶನಾ ಕೈಯಿಂದ ಬಿಡಿಸಿದರು 15 ಹರಿಯಾ ತೊಡೆಯ ಮ್ಯಾಲ ನಿಂದಿರಿಸಿ ರುಕ್ಮಿಣಿಯನು | ಕರದಿ ಶಾಂತಿ ಅಂಬಿ ಬಿಂಬಿಸಿದರು | ನೋಡಿ | ಧರಿಯೊಳಾನಂದವ ತೋರುವಂತೆ 16 ತನುವಿನಾರತಿಯೊಳು ಘನದೆಚ್ಚರ ದೀಪದಿ | ಮನದಿಂದಾ ಜಯಾ ಜಯಾವೆಂದೂ ಬೆಳಗೀ | ಮರಹು | ಅನುವಾಗಿ ತಾವು ನಿವಾಳಿಸಿದರು 17 ಮರೆವಾ ಪ್ರಕೃತಿ ಪುರುಷರ ಶರಗಂಗಳಾ ಯರಡಾ | ಭರದಿಂದ ಕಟ್ಟಿ ಸುವೃತ್ತಿಂದಾ | ಬಳಿಕಾ | ತ್ವರಿತ ನಿಜ ಮಂದಿರವ ಸಾರಿದರು 18 ಇಂತಿ ಪರಿಯಾಗಿಹ ಅಂತರನು ಭವದಾ | ಕಂತುಪಿತ ಲಕ್ಷ್ಮಿಯ ಚರಿತವನು | ನೋಡಿ | ಸಂತತ ಸುಖವನು ಪಡೆದರೆಲ್ಲಾ 19 ಇನಿತು ಸುಖ ಕರವಾದಾ ಅನುಭವ ದೂಟಣಿಯನು | ಅನುವಾಗಿ ನುಡಿಸಿದಾ ಯನ್ನ ಮುಖದೀ | ಈಗಾ | ಘನ ಗುರು ಮಹಿತಪಿ ಸುತ ಸ್ವಾಮಿ 20 ತಂದೆ ತಾಯಿ ಮಿತ್ರ ಬಂಧು ಬಳಗನಾದಿ | ಎಂದೆಂದೂ ಶರಣರ ಸಲಹುವಾ | ದೇವನೇ | ಇಂದೆನ್ನ ನುದ್ಧರಿಸು ದತ್ತಾತ್ರೇಯಾ 21
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣುಹೊಕ್ಕೆನು ಕರುಣಾಂಬುಧಿಯೇ ಕಾಯೊ ಪ ಸುರಪುರ ನಿಲಯ ಲಕ್ಷ್ಮೀಪತಿಯೇ ಅ.ಪ ಪುಂಡುದಾನವರ ಶಿರವನೆ ಛೇದಿಸಿ ಮುಂ ದಿಂಡುದರಿದು ರಕ್ಕಸರ ಸಂಹರಿಸಿ ಖಂಡ ವಿಭೀಷಣಗುದ್ದಂಡಪದವಿಯ ಇತ್ತನೆಂದು 1 ಸುರಪನ ವರ ತನುಜನ ರಥದೊಳು ನಿಂದು ಕರುಣದಿಂದಲೆ ತುರಗವ ಪೊಡೆಯೆ ಕುರುಕುಲ ಚತುರ್ಬಲವ ಸಂಹರಿಸಿಯೆ ಉರಗಶರವು ಬರೆ ನರನ ಕಾಯ್ದನೆಂದು 2 ನರಮೃಗರೂಪಿನಲಿ ಹಿರಣ್ಯಕಶಿಪುವಿನ ಉರವ ಬಗೆದು ಶರಣನ ಪೊರೆಯೆ ಸುರಪುರವಾಸನೆ ಶ್ರೀಲಕ್ಷ್ಮೀ ಅರಸನೆ ದುರುಳ ನೆಗಳ ಕೊಂದು ಕರಿಯ ಕಾಯ್ದನೆಂದು 3
--------------
ಕವಿ ಲಕ್ಷ್ಮೀಶ
ಶಶಿವದನೇರೆಲ್ಲ ದಿವಸಿವ್ರತವ ಮಾಡಿರೇ ಶಶಿಧರನ ಮಡದಿಯಾ ಭಜಿಸಿ ಪಾಡಿರೇ ಪ ಕತ್ಲೆರಾಯನ ಪತ್ನಿಯೂ | ಸುಪುತ್ರನ್ನ ಪಡೆಯಲೂ ಇತ್ತಳು ವಸ್ತ್ರಗಳನ್ನು ಚೆಂದದಿ ದ್ವಿಜರಿಗೆ ಕೊಡಲೂ ಪಡೆದಳು ಪುತ್ರನಾ ಬುಧರು ಕಾಳಿಂಗ ನೆಂದು ಕರೆದರು ಪರಿ ಪರಿವಿಧದಿಂದ ರಾಜರು ಹರುಷಗರೆದರೂ 1 ಗಿರಿಕಾನನದಿ ಚಲಿಸಿ | ಮೃಗವ ಸಂಹರಿಸೀ ಬಾಲಕನೂ | ಬರುತಿರಲು ಬಾಲಕನು ವ್ಯಾಘ್ರದ ದನಿಕೇಳಿ ಮೂರ್ಛೆಗೈದು ಮೃತನಾದನು 2 ಮೃತನಾದ ಸುತಗೆ | ಸತಿಯ ಕೊಡಬೇಕೆಂದು ಸಾರಿಸಿದ ಸತತ ದ್ರವ್ಯ ಕೊಡುವೆನೆಂದು ಮಾತ ನಾಡಿದೆ ದ್ವಿಜನಸುತನ ಸತಿಯ ತ್ಯಜಿಸಿ ಹೋಗಿರಲು ನಿಜಸುತಗೆ ಭಗಿನಿಯ ಕೊಡುವೆನೆಂದು ನುಡಿದಾನು 3 ಬೆಳ್ಳಿ ಬಂಗಾರ ಸಹಿತ ನಮಗೆ ಇರುವೋದೂ ಕನ್ನಿಕೆಗೆ ಮಾಂಗಲ್ಯ ಬಂಧನ ಮಾಡಿಹೋದಾರು 4 ರಾಜನು ಹೋಗುವಾಗ | ಸೊಸಿಯಮನೆಗೇಳೆಂದನು ಪತಿಯ ಬಿಟ್ಟು ಹ್ಯಾಂಗೆ ಮನೆಗೆ ಬರುವೋದೆಂದಳು ಪತಿಯ ಬಿಟ್ಟು ಬಂದರೆ ಪತಿವ್ರತವು ಇರುವೋದೆ ಹಿತವು ಬಯಸಿ ಬಂದರೆ ಸದ್ಗತಿಯು ದೊರೆವುದೇ 5 ಒಂದು ದಿನ ಸುಂದರಿ ಬಂದವರ ಕೇಳಿದಳು ಇಂದು ದಿವಸಿ ವ್ರತವು ಅಂದರು ಹಿಂದೆ ಗೌರಿಪೂಜಿಸಿದೆ ಮುಂದೆ ವ್ರತವನು ಬಂಧು ಬಳಗೆ ಇಲ್ಲದಲೆ ಮಾಡುವುದೇನು 6 ನಾರುಬತ್ತಿ ನೀರು ಎಣ್ಣೆ ಗೌರಿಗೆ ಮಾಡಿದಳು ಅಪಾರ ಸದಿಗೆ ಮುರಿದುಗೌರಿ ಪೂಜಿಸಿದಳು ಹರತಾ ಭಂಡಾರ ಒಡೆದು ಹರುಷಗರೆದನು ವರ ಕಾಳಿಂಗ ಕ್ಷಣ ದೊಳೆದ್ದು ಮಾತಾಡಿದನು ಪತಿಯಸಹಿತಾಗಿ ತಮ್ಮ ಗೃಹಕೆ ಬಂದರು ಸತತ ನಾರಸಿಂಹನ ಸ್ಮರಣೆ ಮಾಡಿದರು 7
--------------
ಓರಬಾಯಿ ಲಕ್ಷ್ಮೀದೇವಮ್ಮ
ಶಾಂತಿನಿಲಯ ಸುಖದ ಪ ಭ್ರಾಂತನಾದೆ ಪರಿಭವದ ತಂತು ತಿಳಿಯದಕಟ ಶ್ರೀ ಕಾಂತ ಕಾಯೊ ಪಿಡಿದು ಕರು ಣಾಂತರಂಗ ಕುಸುಮನಾಭ 1 ಉದಧಿಯಂದದುಕ್ಕಿಬರುವ ಅಧಮನಕೆ ಕಲ್ಪನೆಗಳು ಒದಗಿ ವಿಧ ವಿಧ ನೋಯಿಪು ದಿದನು ಬೇಗ ಪರಿಹರಿಸು 2 ನಂಬಿಭಜಿಪ ಭಕುತಜನರಿ ಗಿಂಬು ನೀನೆ ಅಂಬುಜಾಕ್ಷ ಇಂಬುಗೊಟ್ಟು ಸಲಹು ಸದಾ 3
--------------
ರಾಮದಾಸರು
ಶಿಖರಪುರ ದಾಸಾರ್ಯ ವಂಶದಿ ಶಶಿಯಂತೆ ಉದಿಸಿದ ಶ್ರೀನಿವಾಸಾರ್ಯರೆಂಬ ಪ್ರಚಲಿತ ನಾಮದ ದಾಸಾರ್ಯರ ಚರಿತೆ ಗುರುಗಳ ದಯದಿಂದ ಅರಿತಷ್ಟು ಪೇಳುವೆ ಬುಧ ಜನರು ನಿಷ್ಕಪಟ ಭಾವದಿಂದಲಿ ಕೇಳಿ ಸಿರಿಗುರುತಂದೆವರದಗೋಪಾಲವಿಠ್ಠಲನ ಭಕ್ತರೊಳಗಿವರೊಬ್ಬರು ಕಾಣಿರೊ 1 ಶ್ರೀ ರಮೇಶಕೃಷ್ಣನು ತನ್ನ ಪರಿವಾರ ಸಹಿತಾಗಿ ಓಲಗದಿ ಕುಳಿತಿರಲು ಸಾವಧಾನದಿ ತಾನು ಶ್ರೀದೇವಿ ಋಷಿಯಾಜ್ಞೆಯಿಂದಲಿ ಬಂದು ಶಿರಬಾಗಿ ಧರಣಿಯೊಳು ಭಾಗವತರ ಮಹಿಮೆತಿಳಿದು ಸಾಧನೆಗೈಯ್ಯಬೇಕೆಂಬ ಕುತೂಹಲದಿಂದ ದೇವಾಂಶರ ಬಿಡದೆ ಅವತಾರ ಮಾಡಿದ ಪವಿತ್ರವಂಶದಿ ಬಹುಕಾಲ ಪುತ್ರಾಪೇಕ್ಷೆಯಿಂದಲಿ ಶ್ರೀನಿವಾಸನ ಸೇವೆಗೈದ ಮಾತೆ ಶ್ರೀ ರುಕ್ಮಿಣೀದೇವಿ ಪಿತ ರಾಘವೇಂದ್ರರ ಉದರದಿಂದಲಿ ಜನಿಸಿ ಬಾಲತ್ವ ಕೆಲಕಾಲ ಕಳೆದು ತದನಂತರದಿ ಭೂವೈಕುಂಠಪುರದಲ್ಲಿ ದ್ವಿಜತ್ವವನೆ ಪಡೆದು ಲೌಕಿಕ ವಿದ್ಯೆಗಳನೆಲ್ಲ ಕಲಿಸಿ ಬಳಿಕ ಸಂಗೀತ ವಿದ್ಯೆಯ ಸಾಧನಕೆ ಮಿಗಿಲೆಂದು ಸಾಧಿಸಿ ಬಿಡದೆಲೆ ಪ್ರಾವೀಣ್ಯತೆಯ ಪಡೆದು ಅತಿ ಗೌಪ್ಯದಿಂದಲಿ ಶಿರಿಗುರು ತಂದೆವರದಗೋಪಾಲವಿಠ್ಠಲನ ಸ್ತುತಿಸಿ ಮನದಿ ಅತಿ ಹಿಗ್ಗುತಲಿರ್ದ ಬಗೆ ಕೇಳಿ 2 ಗುರು ಕಾಳಿಮರ್ದನ ಕೃಷ್ಣಾಖ್ಯದಾಸರ ಸಹವಾಸದಿಂದಲಿ ಲೌಕಿಕದಿ ಹುರುಳಿಲ್ಲವೆಂಬ ಮರ್ಮವ ತಿಳಿದು ಮನದಿ ವಿಚಾರಿಸುತಿರಲು ಕಾಲವಶದ ಸೋತ್ತುಮ ರಾಜ್ಯದಿ ಸ್ವರೂಪ ಕ್ರಿಯೆಗಳಾಚರಣೆಗೆ ಮನಮಾಡುತಲಿಹ ಓರ್ವ ದ್ವಿಜನ ಮರ್ಮವ ತಿಳಿಯದೆ ನಿಂದಿಸುವ ಮನವ ಮಾಡೆ ಶ್ರೀವದ್ವಿಜಯರಾಯರುತಮ್ಮ ವಂಶಜನಿವನೆಂದು ಶ್ರೀಮತ್ ರಾಘವೇಂದ್ರ ಮುನಿಗೆ ಬಹು ವಿಧ ಪ್ರಾರ್ಥಿಸಿ ಫಲ ಮಂತ್ರಾಕ್ಷತೆಯನಿತ್ತು ಧ್ಯಾನಕ್ಕೆ ತೊಡಗಿಸಿ ಶ್ರೀಮದ್ ಭಾವಿ ಸಮೀರ ಪದರಜವೇ ಬಹು ಭಾಗ್ಯವೆಂದು ಧೇನಿಪ ಭಕ್ತವರ್ಯರಾದ ತಂದೆವರದಗೋಪಾಲ ವಿಠಲದಾಸರಾಯರ ಪದಪದ್ಮಂಗಳಿಗೊಪ್ಪಿಸಿ ಅಪರಾಧಗಳನ್ನೆಲ್ಲ ದೃಷ್ಟಿ ಮಾತ್ರದಿ ದಹಿಸಿ ಫಣಿಗೆ ಮೃತ್ತಿಕೆ ತಡೆದು ಗುರುಗಳನೆ ಅರುಹಿ ನಿಜ ಮಾರ್ಗದಿಂದ ಶಿರಿಗುರುತಂದೆವರದಗೋಪಾಲವಿಠ್ಠಲನ ಕರುಣಿ ಪಡೆವ ಮಾರ್ಗವನೆ ಪಿಡಿದರು ಜವದಿ 3 ಭವದೊಳು ಬಳಲುವ ಭೌತಿಕ ಜೀವಿಗಳ ಬಹು ಬೇಗದಿಂದಲಿ ಉದ್ಧರಿಸಲೋಸುಗ ಬೋಧಮುನಿ ಕೃತ ಗ್ರಂಥಸಾರವ ಬೋಧಿಪ ಮುನಿಗಳ ದರ್ಶನಗೋಸುಗ ಪೊರಟ ಸಮಯದಲಿ ಶ್ರೀಗುರು ವಾದಿರಾಜ ಮುನಿವರ್ಯ ತನ್ನಯ ಪುತ್ರನ ಮೊರೆಕೇಳಿ ಶ್ರೀಲಕ್ಷ್ಮೀಹಯವದನನ ಮೂರ್ತಿಯ ಪ್ರಾರ್ಥಿಸೆ ರೌಪ್ಯಪೀಠ ಪುರವಾಸಿ ಶ್ರೀಕೃಷ್ಣನ ಕರದಿ ಶೋಭಿಪ ವಸ್ತುವಿನ ಪುರದಿ ಸ್ವಪ್ನದಿ ಬಂದು ತಂದೆವರದವಿಠ್ಠಲನೆಂಬ ಅಂಕಿತವನಿತ್ತು ಅದೇ ಸುಂದರ ರೂಪವ ತೋರಿ ನೈಜಗುರುಗಳ ದ್ವಾರಾ ಭಜಿಸೆಂದು ಬೋಧಿಸಿದ ನಂತರದಿ ಬಹು ಸಂಭ್ರಮದಿಂದಲಿ ಉಬ್ಬುಬ್ಬಿ ತನ್ನ ತನುಮನಧನ ಮನೆ ಮಕ್ಕಳನೆಲ್ಲ ನಿನ್ನ ಚರಣಾಲಯಕೆ ಅರ್ಪಿತವೆಂದು ಅರ್ಪಿಸಿ ಗುರುಗಳ ದ್ವಾರಾ ಸಿರಿಗುರು ತಂದೆವರದಗೋಪಾಲಗೆ ಸದಾ ಧೇನಿಸುತ ಮೈಮರೆತಿರ್ದನೀ ದಾಸವರ್ಯ 4 ಪಾದ ಕರವ ಮುಗಿದು ಸ್ವಾಮಿ ಶ್ರೀಗುರುರಾಜಾತ್ವದ್ದಾಸವರ್ಗಕೆಸೇರಿದ ಬಾಲಕ ದಾಸನೀತಾ ಕರುಣದಿಂದಲಿ ಜವದಿ ಕರುಣ ಕಟಾಕ್ಷದಿ ಈಕ್ಷಿಸಿ ಉದ್ಧರಿಸಬೇಕೆಂದು ಬಹುವಿಧ ಪ್ರಾರ್ಥಿಸಲು ಪರಮ ಕರುಣಾನಿಧಿ ಋಜುವರ್ಯ ಶ್ರೀ ವಾದಿರಾಜಾರ್ಯ ತನ್ನ ಹಂಸರೂಪಿಣಿ ಶ್ರೀ ಭಾವೀ ಭಾರತಿಯಿಂದೊಡಗೂಡಿ ಬಹು ಆನಂದದಿಂದಲಿ ಪಂಚ ಬೃಂದಾವನ ರೂಪದಿ ಮೆರೆವ ತನ್ನಯ ರೂಪವ ತೋರಿ ತುತಿಸಿಕೊಂಡು ಬಹು ಆನಂದಭರಿತರಾಗಿ ಬಹು ಬೇಗ ಸಾಧಿಸುವ ಗೈಸಲೋಸುಗ ಶಿರಿಗುರು ತಂದೆವರದಗೋಪಲವಿಠಲನ ಪ್ರಾರ್ಥಿಸಿ ಸಕಲ ಉತ್ಸವಗಳ ತೋರಿ ಶ್ರೀಮದ್ವಿಶ್ವೇಂದ್ರರ ದ್ವಾರಾ ತವ ಪಾದರೇಣು ಫಲ ಮಂತ್ರಾಕ್ಷತೆಯನಿತ್ತು ಬಗೆಯನೆಂತು ವರ್ಣಿಸಲಿ ಪಾಮರ ನರಾಧಮನು ನಾನು 5 ಕೇವಲ ಲೌಕಿಕ ಜನರಂತೆ ಆಧುನಿಕ ಪದ್ಧತಿಗನುಸರಿಸಿ ದಿನಚರ್ಯವನೆ ತೋರುತಲಿ ಭಾರತೀಶನ ಪ್ರಿಯವಾಗಿಹ ಕರ್ಮಗಳನೊಂದನೂ ಬಿಡದೆ ತಿಳಿದು ಮನದಿ ಮಾಡುತಲಿ ಮಂಕುಗಳಿಗೆ ಮೋಹಗೊಳಿಸಿ ಮಮಕಾರ ರಹಿತನಾಗಿ ದಿನಾಚರಣೆಗೈದು ಶ್ರೀ ಶುಕಮುನಿ ಆವೇಶಯುತರಾದ ಸದ್ವಂಶಜಾತ ಶ್ರೀಕೃಷ್ಣನ ಸೇವೆಗೋಸುಗ ಅವತರಿಸಿದ ವಾಯುದೇವ ಪೆಸರಿನಿಂದಲಿ ಶೋಭಿಪ ಕುಲಪುರೋಹಿತರ ಬಳಿಯಲಿ ಬಹು ವಿನಯದಿಂದಲಿ ಶ್ರೀ ನಿಜತತ್ವಗಳ ಮರ್ಮಗಳ ಕೇಳಿಕೊಂಡು ಮನದಿ ವಿಚಾರಿಸಿ ದೃಢೀಕರಣ ಪೂರ್ವಕ ಪಕ್ವವಾದ ಮನದಿಂದಲಿ ಶ್ರೀಶಶ್ರೀ ಮಧ್ವಮುನಿ ಶ್ರೀಗುರುಗಳ ಕರಣವನೆ ಕ್ಷಣಕ್ಷಣಕೆ ಬಿಡದೆ ಸ್ಮರಿಸುತಾನಂದ ಭಾಷ್ಯೆಗಳ ಸುರಿಸುತ ಭಾಗವತರ ಸಮ್ಮೇಳನದಿ ತತ್ವಗಳ ವಿಚಾರಿಸುತ ಶ್ರೀ ದಾಸಾರ್ಯರಾ ಉಕ್ತಿಗಳ ಆಧಾರವನೆ ಪೇಳುತಲಿ ಮನದಿ ಗುರುಗಳ ಸನ್ನಿಧಿಗೆ ಅರ್ಪಿಸಿ ತತ್ವದ್ವಾರ ತಿಳಿದುಪೂರ್ಣ ಸಾಧನವಗೈದು ಶ್ರೀ ಪ್ರಲ್ಹಾದ ಬಲಿ ಮಾಂಧಾತ ಕರಿರಾಜ ಶಿಬಿಮೊದಲಾದ ಚಕ್ರವರ್ತಿಗಳಲಿ ಬಹುಬೇಗ ಸಾಧನವ ಗೈದರು ಇವರಾರೊ ನಾ ಕಾಣೆ ಶಿರಿ ಗುರುತಂದೆವರದ-ಗೋಪಾಲವಿಠಲನ ಆಣೆ 6 ಸತಿ ವತ್ಸರ ವತ್ಸರ ಸತಿ ಮಾಯಾ ಶುಭ ದಿನದಿ ಸಂಖ್ಯಾ ಕಾಲದಿ ಪ್ರಥಮ ಯಾಮವೆಮಿಗಿಲೆಂದು ಮನದಿ ಲಯ ಚಿಂತನೆಯ ಬಿಡದೆ ಮಾಡುತದೇವತೆಗಳ ದುಂದುಭಿ ವಾದ್ಯಗಾಯನಗಳ ರಭಸದಿಶ್ರೀ ಲಕುಮಿ ದೇವಿಯ ಸೌಮ್ಯ ದುರ್ಗಾ ರೂಪಕೆನಮೋ ನಮೋ ಎಂದು ಶಿರಿಗುರುತಂದೆವರದಗೋಪಾಲ ವಿಠಲನಪುರಕೆ ಪುಷ್ಪಕ ವಿಮಾನ ರೋಹಿಣಿಯನೆ ಮಾಡಿನಲಿನಲಿದಾಡುವ ತೆರಳಿ ಪೋದಾರಿವರು 7 ಜತೆ :ಸತಿದೇವಿ ರಮಣನ ಭಕ್ತನೇ ನಿನ್ನಯಸುಖತನವೆಂದಿಗೂ ಕೊಡಲೆಂದು ಬೇಡಿಕೊಂಬೆಸಿರಿಗುರುತಂದೆವರದಗೋಪಾಲ ವಿಠಲನಿಗೆ 8
--------------
ಸಿರಿಗುರುತಂದೆವರದವಿಠಲರು
ಶಿಶುಗಳಪರಾಧಕೆ ಶಿಕ್ಷೆ ಕಣ್ಣೀಲಲ್ಲದೇ ಯಶವ ಬಡಿಗೋಲವನು ಎತ್ತುವರೇ ರಂಗಾ ಪ ಇಲಿಗೆ ಹೆಬ್ಬುಲಿಯಾಕೆ|ಮೊಲಕೆ ಮದಗಜವ್ಯಾಕೆ| ಕಳೆತ ಹಣ್ಣಿಗೆ ಮತ್ತೆ ಕರಗಸ್ಯಾಕೆ| ಕಲೆ ಬಿದ್ದ ಕನ್ನಡಿಗೆ ಗುದ್ದಲಿಯ ತರಲೇಕೆ| ಗುಳಲಿ ಕಾಯಿಗೆ ಹೊತ್ತಗಲ್ಲ ವ್ಯಾಕೆ 1 ಹಳ್ಳಗೆ ಹಡಗವ್ಯಾಕೆ|ಕೊಳ್ಳಿಗೆ ಕೊಡ ಜಲವ್ಯಾಕೆ| ಮುಳ್ಳು ಮುರಿದುದಕ ಮೊನೆ ಹಾರಿ ಯಾಕೆ| ಮಲ್ಲಿಗೆ ಹೋವಿಗೆ ಬಂಧ ಹಗ್ಗದಲ್ಯಾಕೆ| ಹಲ್ಲಿ ಬೆದರಿಸೆ ಹೊಡೆವ ಭೇರಿಯಾಕೆ 2 ಜ್ಞಾನಹೀನರ ನಮ್ಮ ತಪ್ಪನೆಣಿಸಿದುರಿತ| ಮೊನೆಗಾಣಿಸುತ ಬನ್ನಿ ಬಡಿಸುವುದುಚಿತವೇ| ದೀನವತ್ಸಲ ತಂದೆ ಮಹಿಪತಿ ಸುತ ಪ್ರಭುವೇ| ನ್ಯೂನಾರಿಸದೇ ನಿನ್ನವನೆಂದು ಸಲಹೋ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶೃತಿ ಪ್ರತಿಪಾದ್ಯನೆ | ಕೃತಿದೇವಿ ರಮಣನೆವಿತತ ವಿಶ್ವದಪಾಲ | ಮೃತ ಶಿಶು ಪರಿಪಾಲ ಪ ಮತ್ರ್ಯರ ಬೀಷ್ಟವ | ಸಾರ್ಥಕಗೊಳಿಸುವಪಾರ್ಥ ಸಾರಥಿಯೆ | ಕೀರ್ತಿಸಲರಿಯೆಮೂರ್ತಿಯ ಕಾಣುವ | ವಾರ್ತೆ ಇರಲಿ ದೇವಸೂಕ್ತ ಮೇಯ ಅ | ಸಕ್ತಿ ಪ್ರದಾತಾ ಅ.ಪ. ಪರಿ ಗುಣ ಜಾಲ | ದರಿವನೆ ಕೊಡು ಕೋಲಧರಿಸಿಹೆ ವನಮಾಲಾ | ಶರಣರ ಪಾಲ1 ಪರಿ ಭಕ್ತರನ | ಪೊರೆದ ಮೋಹನ್ನ 2 ಪಟು ಭಟಗಾನಂದ | ಘಟಿಸಲು ಮುಕುಂದಕುಟಿಲ ರಹಿತ ಛಂದ | ಪಟುತರ ವ್ಯಾಪ್ತಿಂದಛಟ ಛಟ ಕಂಬದಿಂದ | ಪುಟ ನೆಗೆಯುತ ಬಂದದಿಟ ಗುರು ಗೋವಿಂದ | ವಿಠಲ ಆನಂದ 3
--------------
ಗುರುಗೋವಿಂದವಿಠಲರು
ಶೋಭಾನೆ ಶೋಭಾನೆ ಶೋಭಾನೆ ಪ ಶ್ರೀಗಣಾಧಿಪತಿಯ ಸಂಸೇವಿಸಿ ಶಂಕರನ ಭಜಿಸಿ ವಾಗಾಭಿಮಾನಿಯೆನಿಪ ಸರಸ್ವತಿ ದೇವಿಗೆ ವÀಂದಿಸಿ ಸಾಗರಸುತೆಯರಮಣ ನಿಂತು ಪೇಳಿಸಿದ ಪರಿಯೊ ಳೀಗ ಗಂಡುಮಕ್ಕಳಾಶೀರ್ವಾದ ಪದವ ಪೇಳ್ವೆ ಸುಜನರೆಲ್ಲಾಲಿಪುದು ಶೋಭಾನೆ 1 ಬಾಲನಾಗಿ ಪ್ರಹ್ಲಾದನವೋಲ್ ಬಹುಕ್ರೀಡೆಗಳಾಡುತಲಿ ಮೇಲೆ ಪಂಚಾಬ್ದದಿ ಸದ್ ವಿದ್ಯಾಭ್ಯಾಸಗಳನೆ ಮಾಡಿ ಶಾಸ್ತ್ರಾರ್ಥವೇತ್ತನಾಗುತಲಿ ಶೀಲಾದಿ ಸದ್ಗುಣಗಳುಳ್ಳ ಬಾಲೆಯಳ ಮದುವೆಯಾಗಿ ಕಾಲ ಕಾಲದಲ್ಲಿ ದೇವಋಷಿ ಪಿತೃಗಣಗಳ ಪೂಜೆ ಅಗ್ಗಳ ನೀನಾಗು 2 ಕೆರೆಗಳ ಕಟ್ಟಿಸು ಸರೋವರಗಳನ್ನೆ ಮಾಡಿಸು ನಿ- ನಿಖಿಳ ಯಜ್ಞಗಳಾಚರಿಸು ಸತ್ಪಾತ್ರಕ್ಕೆಯಿತ್ತುದಾತನೆಂದೆನಿಸು ನಿರತ ಬಂದವರಿಗನ್ನ ನೀಡುತ್ತ ಪ್ರಸನ್ನ ಮನದಿ ಮರಗಳ ಹಾಕಿಸು ಸಪ್ತಸಂತಾನಗಳನ್ನೆಗಳಿಸು ಮಾನ್ಯರೊಳು ವರ್ತಿಸಿಸುಖಿಸು 3 ಧರ್ಮಯುಕ್ತನಾಗುತ್ತ ಅಧರ್ಮಗಳ ಬಿಡುತ ಸ- ತ್ಕರ್ಮಗಳಾಚರಿಸು ಫಲವ ಕಂಜಾಕ್ಷಗರ್ಪಿತಮಾಡು ನಿತ್ಯ ಸಂತಸದಿ ಮರ್ಮಜ್ಞರೆನಿಪ ಗುರುಹಿರಿಯರ ಸೇವಿಸುತ ಸ ಮಾಡಿ ನಿತ್ಯಸುಖಿಯಾಗು 4 ಧೀರ್ಘಾಯುವಾಗಿರು ಬಂಧು ವರ್ಗವ ಪರಿಪೋಷಿಸು ಭರ್ಗಾದಿ ದೇವತೆಗಳ ಭಕ್ತಿಯಿಂದಾ ಪೂಜಿಸಿತ್ರಿ- ಅರ್ಥಿಯ ಪೊಂದು ಸ್ವರ್ಗಸ್ಥಿತಿ ಲಯಕರ್ತ ಗುರುರಾಮವಿಠಲ ನಘ್ರ್ಯ ಸಂಪದಗಳಿತ್ತು ಆದರಿಸಿ ತನ್ನ ಭಕ್ತಾ ನಿತ್ಯ ಸತ್ಯಾಧನವ ಮಾಡಿಸುವಾ ಶೋಭಾನೆ 5
--------------
ಗುರುರಾಮವಿಠಲ
ಶೌನಕಾದಿ ಮುನಿಗಳಿಗೆ ಸಾನುರಾಗದಲಿ ಪೇಳಿದರು 1 ಕೈಲಾಸಶಿಖರ ಮೆರೆವುದು ಮೇಲಾದ ರತ್ನಕಾಂತಿಗಳಿಂ2 ಜಂಬುಕೇತಕಿ ಪನಸ ಪುನ್ನಾಗ ಸರ್ವಾತಿಶಯದಲಿ ತೋರುವದು 3 ಸಿದ್ಧಿದಾಯಕ ವೆಂದಿಲ್ಲಿ ಪದಧ್ಯಾನದಿ ಕುಳಿತಿಹರು 4 ದಿವಿಜ ಅವನಿಧರಾಗ್ರಣಿಯಾಗಿ ಭುವನೋದರತ್ವದಿ ಭುವನಜನಾಭ ಶ್ರೀಧವನಂತೆ ಗಿರಿಯು ಮೆರೆಯುವುದು5 ಪಾರ್ವತಿಯೊಡನೆ ಸತಿ ನಮಿಸಿ ನುಡಿದಳು 6 ನುಡಿಯ ಲಾಕ್ಷಣದಿ ನಾಕರುಣಿಸುವೆ ಕೇಳೆಂದ7 ವರಮಹಾಲಕ್ಷ್ಮಿಯ ವೃತವು ದೊರೆವುದು ಸಕಲಸೌಭಾಗ್ಯ 8 ಶ್ರಾವಣ ಪೂರ್ಣ ಮಾಸಿಯ ದಿನದಿ ಪೂಜಿಪದು ವಿಶ್ವಾಸದಿಂದಾರಾಧಿಸುತಲಿ 9 ಪಕ್ವಾನ್ನ ಲೇಹ್ಯಾದಿ ನೈವೇದ್ಯ ತತ್ತನ್ನಿಯಾಮಕರ ಚಿಂತಿಪುದು 10 ಕೃಪಾಪಯೋನಿಧೆಯ ಪೂಜಿಪುದು ಬಿಂಬಾಪರೋಕ್ಷಿಗಳು ಪೂಜಿಪರು 11 ಕಾಮಿತ ಪಡೆದವರ್ಯಾರು ಮಹಾಮಹಿಮೆಯನು ಚನ್ನಾಗಿ12 ಮಡದಿ ತಾನಿರಲು ಕರೆಯುವರೆಲ್ಲಾರು ಪುರದಿ 13 ವನಜನಾಭನ ಶೇವೆಯೆಂದು ಗುಣದಿ ಭೂಷಿತಳು 14 ಬಂದಳು ವರಮಹಾಲಕ್ಷ್ಮಿ ಪರಮ ಸಂಭ್ರಮದಿ 15 ನಿರ್ಮಿಸುವನು ಜಗವೆಲ್ಲ ನೀ ಕರುಣಿಸು ಮಾತೆ 16 ಶ್ರಾವಣ ಹರುಷದಿಂದೆನ್ನಯ ವೃತವ ವರಗಳನಿತ್ತಳು ದಯದಿ 17 ಸಂತೋಷದಲಿ ಪೇಳಲವರು ಚಿಂತಿತ ಫಲವೀವುದೆಂದು 18 ಸಿಂಗರಿಸಿದಳಾದಿನದಿ ವಿಪ್ರಾಂಗನೆಯರನು ಕರೆದಳು 19 ಶಿರಿದೇವಿ ಪೂಜಾಸಾಧನವ ನೆರೆದರಾ ದ್ವಿಜನಮಂದಿರದಿ 20 ಕುಂಭಗಳಿಟ್ಟಘ್ರ್ಯಾದಿಗಳಿಂ ಸುರರ ಸಮ್ಮುಖದಿ 21 ಇಂದಿರ ದೇವಿಗಾರುತಿಯ ಬಂಧÀ£ವÀನÉ ಮಾಡುತಿಹರು 22 ಪೂಜಿಸುತಿರಲಾಗೃಹವು ಸೋಜಿಗವಾಯ್ತು ನೋಳ್ಪರಿಗೆ 23 ಕೊರಳೊಳುನವರತ್ನಹಾರ ಸಿರಿದೇವಿ ಕರುಣವಿದೆಂದು 24 ಇತ್ತರು ಬಾಗಿಣಗಳನು ಪೋದರು ತಮ್ಮ ಮನೆಗೆ 25 ಪುಣ್ಯದಿಂದೆಲ್ಲರು ನಾವೆಂ ಧನಧಾನ್ಯ ಸಂಪದಾಗಮನ 26 ಪಾಲಿಸುವಳು ಸಿರಿಯೆಂದು ಶಿವನು ಹೀಗೆಂದು ||27| ಕಾಯಜ ಜನನಿಯ ಕಾಯುವದೆಂದು ನೀ ತಿಳಿಯೆ 28 ನಿರ್ಮಲ ಭಕ್ತಿಜ್ಞಾನ ವೈರಾಗ್ಯ ಇಳೆಯೊಳು ಕಾರ್ಪರ ನಿಲಯ ಶ್ರೀನರಹರಿ ಒಲಿವನು ನಿರುತ ಪಠಿಸಲು30
--------------
ಕಾರ್ಪರ ನರಹರಿದಾಸರು