ಒಟ್ಟು 2472 ಕಡೆಗಳಲ್ಲಿ , 109 ದಾಸರು , 1878 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನ ಕಾಣಬಂದೆನಯ್ಯ ಚೆನ್ನಕೇಶವಾ ನಿನ್ನ ಕಂಡು ನಲಿದೆ ರಮಾರನ್ನ ಮಾಧವಾ ಪ ಜಳದಿ ಮುಳುಗಿ ತೊಳಲಿ ಬಳಲಿ ಬಹಳನೊಂದೆನು ತಳವ ಬಯಸಿ ಬಳಸಿ ಬಳಸಿ ನಡುವೆ ನಿಂದೆನೊ ಬಳಿಯ ಬಳಗವಿಲ್ಲ ನೋವಿನಿಂದ ಬೆಂದೆನೋ ಸುಳಿಗೆ ಸಿಲುಕಿ ಅಳುಕಿ ಬಳುಕಿ ವಿಧಿಯ ಬೈದೆನೋ 1 ಕರವ ಮುಗಿದು ಕರೆವೆ ನಿನ್ನ ಕರುಣದಿ ಬಾರೋ ಮರುಗಿ ಮರುಗಿ ಕೊರಗಿದೆನಗೆ ಚರಣವ ತೋರೋ ಕರಿಯ ಪೊರೆದೆ ತರಳಗೊಲಿದೆ ಮರುಕವ ಬೀರೋ ಶಿರವ ಚರಣಕಿರಿಸುವೆ ಮಾಂಗಿರಿಯರಂಗ ಬಾರೋ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಿನ್ನ ಕ್ಲೇಶವ ಕೇಳೆ ಎನಗೆ ಮರುಕಪ ಎನ್ನ ಕ್ಲೇಶವ ನಿನಗೆ ತಿಳಿಸಬಹುದೆ ದೇವ ಅ.ಪ ಹದಿನಾಲ್ಕು ಲೋಕಗಳ ಹುಡುಗತನದಲಿ ಪಡೆದು ಅದಕೆಲ್ಲ ಅನ್ನವೀಯುವ ಚಿಂತೆಯು ಹದಿನಾಲ್ಕು ಲೋಕಗಳ ಸರ್ವಕರ್ಮಗಳಿಗೂ ಹಗಲಿರುಳು ಪ್ರೇರಣೆಯ ಮಾಡುವಾತಂಕ 1 ಹಿರಿಮಗನದೊಂದುಸಿರ ತರಿದರೆಂಬಾತಂಕ ಕಿರಿಮಗನ ದೇಹ ಪೊಸಕಿದ ಚಿಂತೆಯು ಹರನು ಮೊಮ್ಮಗ ಹಾಲಾಹಲವ ಕುಡಿಯುತ ಹಲ್ಲು ಕಿರಿಯುವಾತಂಕಕ್ಕೆ ಹರವು ತೆರವಿಲ್ಲ 2 ಚಂಚಲಳು ಸತಿಯೆಂದು ಹೊಂಚು ಕಾಯುವ ಚಿಂತೆ ಮಂಚದಲಿ ಘಟಸರ್ಪ ವಿಷದ ಚಿಂತೆ ಸಂಚಿತಾಗಮ ಪ್ರಾರಭ್ಧಗಳನಳಿಸುವಗೆ ವಂಚಕರು ಏನು ಮಾಡುವರೆಂಬ ಚಿಂತೆ 3 ಹಲವು ವಿಧ ವೇಷಗಳ ತಾಳಿ ಜಗಂಗಳಲಿ ನೀ ತಲೆಯ ಮರಿಸಿಕೊಂಡರೇನು ಫಲವೊ ಬಳಸಿ ಹುಡುಕಿ ಗೂಢಚಾರಿ ಯೋಗಿಯು ನಿನ್ನ ತಿಳಿದು ಬೆಳಕಿಗೆ ತರುವ ಮರೆಮಾಚಲೇಕೊ 4 ತಾಪತ್ರಯ ತಳೆಯೆ ಗೋಪನಲಿ ಪುಟ್ಟಿದರು ಗೋಪಿಯರ ಸಾಸಿರದ ಗೋಳು ನಿನಗೆ ಭೂಪ ದಶರಥನ ಮಗನಾಗಿ ಪುಟ್ಟಿದರಯ್ಯೊ ಪಾಪ ಸತಿಯಳ ಕಳೆದುಕೊಂಡ ಬಲುಚಿಂತೆ 5 ನಿನ್ನ ಬೇಡುವುದಿಲ್ಲ ನಿನ್ನ ಕಾಡುವುದಿಲ್ಲ ನಿನ್ನ ನೋಡಲು ಎನಗೆ ಬೇಸರವು ಜಗಕೆ ನಿನ್ನ ಚಿಂತೆಯು ಮನ ಪ್ರಸನ್ನತೆ ನೀಡುವುದು ಇನ್ನೇನು ನಿನಗೆ ಚಿಂತೆಯೊ ತಿಳಿಸಿ ಪೊರೆಯೊ 6
--------------
ವಿದ್ಯಾಪ್ರಸನ್ನತೀರ್ಥರು
ನಿನ್ನ ಚಂದ್ರಕೋಟಿ ತೇಜ ಚಕ್ರಧರನ ಭೃತ್ಯಾ ಪ ತ್ರಿದಶ ದೈತ್ಯರು ಕೂಡಿ ತೀವ್ರದಿಂದಲಿ ತಾವು ಮಂದರ ಶೈಲ ತವಕದಿ ತಂದಾಗ ಉದಧಿಯೊಳಿಟ್ಟು ಸರ್ಪವನೆ ಸುತ್ತಿದರು ಪಿಡಿದು ಮುದದಿಂದ ಕಟಿಯಲು ಮುನಿದು ಮಹರೋಷದಿ ಅದು ನೋಡಿ ಮದನಾರಿ ಕಂಗೆಡಲು ಅಂಜದೆ ನೀನು ಸುರರು ಸುಖಬಡಲು 1 ವಾತನ ಸುತನಾಗಿ ವಾಲಿಯ ತಮ್ಮನ ಕೂಡಿ ಭೂತಳಾಧಿಪ ರಾಮಚಂದ್ರನ ಪದವಾರಿ ಜಾತಕ್ಕೊಂದನೆ ಮಾಡಿ ವೃತ್ತಾಂತವನು ಪೇಳಿ ಆತುರದಲಿ ಪುರಹೂತನಂದನ ನಿ ರ್ಭೀತನ ಕೊಲ್ಲಿಸಿ ಶರಧಿಯನು ಹಾರಿ ಸೀತೆಗುಂಗುರ ಕೊಟ್ಟು ಬೆಳೆದ ಚಲ್ವ- ವಾತಹತಮಾಡಿ ಲಂಕಾಪುರವ ಸುಟ್ಟ 2 ಪಾಂಡುಚಕ್ರವರ್ತಿ ಕುಂತಿಯಲಿ ಜನಿಸಿ ಮಂಡಲದೊಳು ಮಹಾಶೂರನೆನಿಸಿ ವಿಷ ಉಂಡು ದಕ್ಕಿಸಿಕೊಂಡು ಉರಗಲೋಕದಲ್ಲಿದ್ದು ತಾಂಡ ಭಾದಿಯ ಗೆದ್ದು ಹಿಡಿದು ಹಿಡಂಬನ ಹಿಂಡಿ ಬಕಾಸುರನ ಖಂಡರಿಸಿ ಕೀಚಕನ ಮಂಡಲದೊಳಗೆ ನಿಂದೆ ವಿರಾಟನ್ನ ದಿಂಡುಗೆಡುಹಿ ಕದನದಲಿ ವೇಗ ಕೊಂದೆ 3 ಬುದ್ಧಿಹೀನರಾಗಿ ಬಾಳಿದ ಮನುಷ್ಯರ ಶುದ್ಧಾತ್ಮರನ ಮಾಡಿ ಶುಭವೇಗದಲಿ ಶ್ರೀ ಮುದ್ರೆಧಾರಣ ಕೊಟ್ಟು ಜ್ಞಾನಾಂಬುಧಿಯೊಳಿಟ್ಟು ಅದ್ವೈತ ಮತ ಕಾಲಿಲೊದ್ದು ಪರವಾದಿ ಎದ್ದೋಡಿ ಬಂದು ತಿರುಗಿ ನಿಮ್ಮ ಉದ್ಧರಿಸಿ ಅವರವರ ದೋಷ ಹೋಯಿತು ಕರಗಿ4 ಭೂವ್ಯೊಮ ಪಾತಾಳದೊಳಗೆ ಎದುರುಗಾಣೆ ವಾಯು ಹನುಮ ಭೀಮ ಮಧ್ವನೆಂದಿನಿಸಿದೆ ಕಾಯಜ ಜನಕನ ಪದವ ಪೂಜಿಸಿ ಅಂಬು ಜೆಯನ ಪದವಿ ಪಡೆದು ಹರ ಇಂದ್ರಾದಿಗಳಿಗೆ ನಾಯಕನೆನಿಸಿದೆ ನಾನಾ ದುರಿತವಾಗಿ ಮಾಯಿಗಳೆಲ್ಲ ತರಿದೆ ಸುಭಕುತರ ಆಯತದಿಂದ ಪೊರೆದೆ ವಿಜಯವಿಠ್ಠಲರಾಯ ವೆಂಕಟನ ಒಲಿಮೆಯಿಂದಲಿ ಮೆರೆದೆ5
--------------
ವಿಜಯದಾಸ
ನಿನ್ನ ಚಿತ್ತ ನಿನ್ನ ಚಿತ್ತ ನಿನ್ನ ಚಿತ್ತವೋ ಪ. ಬನ್ನ ಬಡಿಸಬೇಡವಿನ್ನು ಭಯವ ಬಿಡಿಸಿ ಕಾಯೊ ಎನ್ನ ಅ.ಪ. ಘನ್ನ ಮನಸು ಮಾಡಿ ಈಗ ಎನ್ನ ಸಲಹಿದರೆ ಜಗದಿ ನಿನ್ನ ಕೀರ್ತಿಯು ಉನ್ನತದಲಿ ಮೆರೆವುದಿದೆಕೊ ಬನ್ನ ಬಡಿಸಬೇಡವಿನ್ನು ಘನ್ನಮಹಿಮ ಕೇಳು ಸೊಲ್ಲ ಇನ್ನು ಸುಮ್ಮನಿರಲು ಸಲ್ಲ ಘನಮಹಿಮನೆ 1 ಬುದ್ಧಿ ಭ್ರಮೆಯಿಂದ ನಾನು ಪೊದ್ದಿರುವ ಭಯವ ಬಿಡಿಸಿ ನಿದ್ದೆಯಲಿ ತಿಳಿಸಿದ್ವಾರ್ತೆ ಶುದ್ಧಗೊಳಿಸುತ ಮುದ್ದುಕೃಷ್ಣ ಅಭಯ ತೋರಿ ಉದ್ಧರಿಸಿದರೆ ಎನ್ನ ಶ್ರದ್ಧೆಯಿಂದ ನಿನ್ನ ಕೀರ್ತಿ ಮಧ್ವಮತದಿ ಸಾರುವೆನು2 ಬೆದರಿಸುವ ಪರಿಯದೇನು ಬದಿಗನಾಗಿ ಅರಿಯದೇನು ಹೃದಯದಲ್ಲಿ ನಿಂತ ಮೇಲೆ ಎನ್ನದಿನ್ನೇನು ಪದುಮನಾಭ ನಿನ್ನ ನಂಬಿ ಪದೋಪದಿಗೆ ನೆನೆಸುತಿರಲು ವಿಧ ವಿಧದಿ ಪರಿಕಿಸುವ ವಿಧವನರಿಯೆ ಪದುಮೆಯರಸ3 ಉಡಲು ಉಣಲು ಆಸೆಯಿಲ್ಲ ತೊಡಲು ಇಡಲು ಮಮತೆಯಿಲ್ಲ ಎಡದ ಬಲದ ನೆಂಟರಭಿಮಾನವಿಲ್ಲವು ಎಡರು ಬರಲು ಭಯವು ಇಲ್ಲ ಬಿಡಲು ದೇಹ ಅಂಜಿಕಿಲ್ಲ ನಡುವೆ ಕರೆವುದುಚಿತವಲ್ಲ ಮೃಡನ ಸಖನೆ ಕೇಳೊ ಸೊಲ್ಲ 4 ನಿರ್ದಯವನು ಮಾಡಲಿಕ್ಕೆ ಮಧ್ಯಮಧಮಳಲ್ಲವಿನ್ನು ಮಧ್ವಮುನಿಯ ಮತದಿ ಜನಿಸಿ ಶುದ್ಧ ಭಾವದಿ ಶುದ್ಧ ಸಾತ್ವಿಕರು ತಂದೆ ಮುದ್ದುಮೋಹನ ಗುರುಗಳಿಂದ ಪೊದ್ದಿ ದಾಸ್ಯರೀಗ ಜಗದಿ ಬದ್ಧ ಕಂಕಣಧರಿಸಿ ಮೆರೆವೆ 5 ಒಡೆಯ ನೀನು ಎನ್ನ ಧರೆಗೆ ಬಿಡದೆ ತಂದು ಜನ್ಮವಿತ್ತು ಬಿಡದೆ ಕಾಯ್ವ ಗುರುಗಳನ್ನು ಅಗಲಿಸುತ್ತಲಿ ಅಡಿಗಡಿಗಭಯವ ತೋರಿ ಪಿಡಿದು ಕೈಯ್ಯ ಸಲಹದಿರಲು ಅಡಿಗಳಾರದಿನ್ನು ನಾನು ಪಿಡಿಯೆ ಕಡಲಶಯನ 6 ನಾಥರಾರು ಎನಗೆ ಇಲ್ಲ |ಅ- ನಾಥಗಳನ್ನು ಮಾಡಿ ನಿನ್ನ ಮೂತಿ ತಿರುಹಿ ಸಲಹದಿರಲು ಪಾತಕಲ್ಲವೆ ಪಾತಕಾದಿ ದೂರನೆಂಬೊ ಖ್ಯಾತಿ ಸಟೆಯದಾಯ್ತು ಈಗ ನೀತಿಯರಿತು ಪೊರೆಯದಿರಲು ಜಾತರಹಿತ ಜಗದಿ ಸಲಹು 7 ದಾಸತನದಿ ಮೆರೆವೊದೊಂದು ಆಸೆಯಿಲ್ಲದಿನ್ನು ಬೇರೆ ಆಸೆಯೊಂದು ಇಲ್ಲ ಕೇಳು ನಾಶರಹಿತನೆ ಪಾಶಕರ್ಮ ಹರಿಸಿ ನಿನ್ನ ದಾಸಳೆಂದು ಮೆರೆಸೆ ಜಗಕೆ ಈಶನೆಂದು ನಿನ್ನ ಮೆರೆಸಿ ಆಸೆ ಪೂರೈಸಿಕೊಂಬೆ 8 ಮೃತ್ಯುವಿಗೆ ಮೃತ್ಯುವಾಗಿ ತುತ್ತುಮಾಡಿ ಜಗವ ನುಂಗಿ ಮತ್ತೆ ಬ್ರಹ್ಮಾಂಡ ಸೃಜಿಸಿ ಪೆತ್ತು ಜೀವರ ಭಕ್ತ ಜನಕೆ ಬಂದ ಎಡರು ಮೃತ್ಯುಗಳನು ಕಾಯ್ದ ದೇವ ಮೃತ್ಯು ಮೃತ್ಯು ಶರಣು ನೃಹರಿ ಮೃತ್ಯು ಹರಿಸಿ ಕಾಯೊ ಶೌರಿ9 ಬಿಡಲಿಬೇಡ ಕೈಯ್ಯ ಇನ್ನು ಬಿಡದೆ ಕಾಯೊ ಶರಣು ಶರಣು ಒಡೆಯ ಶ್ರೀ ಗೋಪಾಲಕೃಷ್ಣವಿಠ್ಠಲಾತ್ಮಕ ಕಡೆಗೆ ನಿನ್ನ ಪಾದಸೇವೆ ಬಿಡದೆ ಕೊಡುವ ದೃಢವ ಬಲ್ಲೆ ಕರವ ಪಿಡಿಯೊ 10
--------------
ಅಂಬಾಬಾಯಿ
ನಿನ್ನ ದಾಸನು ನಾನು ಎಂತಾಹೆನಯ್ಯಅನ್ನಂತ ಅಪರಾಧಕಾಕರಾದವನು ಪ. ಅರುಣೋದಯವ ಜರಿದು ಆಹ್ನಿಕ ಕರ್ಮವ ತೊರೆದುಪೊರೆವ ನಿನ್ನಡಿಯ ಮರೆದುದುರುಳರಿಗೆ ಬಾಯ್ದೆರೆದು ದೈನ್ಯದಲಿ ಪಲ್ಗಿರಿದುಮರಿಯಾದೆಗೆಟ್ಟು ತಿರಿದುಇರುಳು ಹಗಲೆನ್ನದೆ ಈ ವಿಧದಿ ಹೊಟ್ಟೆಯಹೊರೆದು ಇದು ಪುಣ್ಯ ಇದು ಪಾಪವೆಂದರಿಯದವ 1 ಜಟ್ಟಿಗಳ ಮನೆಯ ನಾಯಂತೆ ಒಳ್ಳೆಬಟ್ಟೆಗಳತೊಟ್ಟವರ ಹಿಂದೆ ತಿರುಗಿಅಟ್ಟುಂಡು ಬಾಳಿಬದುಕಿದ ತಮ್ಮ ಹಿರಿಯರುಕೆಟ್ಟು ಮುರಿದುದನು ಪೇಳಿಉಟ್ಟ ಅರಿವೆಯ[ಕೋರಿ] ಹೊಟ್ಟೆ ಬಾಯನೆ ತೋರಿಕೊಟ್ಟುದಕೆÉ ತೃಪ್ತನಾಗದೆ ಅವರ ಬಯ್ವವನು 2 ವೃತ್ತಿ ಅಲ್ಲದ ಶೂದ್ರ ವೃತ್ತಿಗಳನನುಸರಿಸಿ ಅ-ಕೃತ್ಯ ಶತಗಳನು ಮಾಡಿಸತ್ಯ ಶೌಚಂಗಳ ಬಿಟ್ಟು ಶ್ರವಣ ಮನನಾದಿ ಪ್ರ-ಸಕ್ತಿಗಳ ಹೋಗಲಾಡಿಉತ್ತಮರು ತಾಯಿತಂದೆ ಗುರುಹಿರಿಯರುಗಳಅರ್ಥಗಳನಪಹರಿಸಿ ಅವರ ನಿಂದಿಸುವನು 3 ಪರ್ವ ಉಪರಾಗ ದ್ವಾದಶಿ ಅಯನಗಳಲ್ಲಿಸರ್ವವಿಹಿತಗಳ ಮೀರಿಉರ್ವಿಯೊಳು ಉಳ್ಳ ಯೋಗ್ಯರನೆಲ್ಲ ಹಳಿದೆನ್ನನಿರ್ವಾಹಗಳನೆ ತೋರಿದುರ್ವಿಚಾರದಿ ಸ್ವಲ್ಪಧನಕಾಗಿ ಎನ್ನೊಳಿಹಪೂರ್ವಸಂಚಿತಮಂತ್ರ ತುಚ್ಛರಿಗೆ ಮಾರಿದವ 4 ಛಲ ಚಾಡಿ ಡಂಭ ಮಿಥ್ಯಾಜ್ಞಾನ ದುರ್ವಿಷಯಕುಲಸತಿಯ ಕೂಡೆ ಕಲಹಕಳವು ಕಠಿಣೋಕ್ತಿ ದುಷ್ಟಾನ್ನಭೋಜನ ಮದುವೆ-ಗಳ ಮುರಿವ ಪಾಪಚಿಂತೆಹಳಿವ ಹರಿವಾಸರ ವ್ರತಭಂಗದಿಂದ ನಾನಾಗಿಸುಲಭ ಹಯವದನನ್ನ ಮರೆತ್ಹಾಳುಹರಟೆಯವ 5
--------------
ವಾದಿರಾಜ
ನಿನ್ನ ನಂಬಿದವರಿಗೆ ಇನ್ನು ಕೊರತೆಗಳುಂಟೆ ಪನ್ನಗಾದ್ರಿನಿವಾಸ ಶ್ರೀ ವೆಂಕಟೇಶ ಪ. ಬನ್ನ ಬಡಿಸದೆ ಎನ್ನ ಧ್ಯಾನವನ್ನು ಮರೆವರು ಭಕ್ತರಂದು ಬನ್ನ ಬಿಡಿಸಿ ಪೊರೆವೆ ಕರುಣದಿ ಅ.ಪ. ಅಧಿಕ ಸಂಸಾರದಿ ಪದೆಪದೆಗೆ ತೊಡರುಗಳ ಬದಿಗನಾಗಿದ್ದವರಿಗೆ ಕೊಟ್ಟು ಸದಮಲಾನಂದ ಪರೀಕ್ಷಿಸುವೆ ತವಕದಿ ಚದುರಿಸುತ ಮನವನ್ನು ಅದುಭುತನೆ ನಸುನಗುತ ನೀನೋಡುತ್ತ ಹೆದರಿ ಬೆದರಿ ನಿನ್ನ ಧ್ಯಾನಕ್ಕೊದಗಲಿ ಮನವೆಂಬೆಯಲ್ಲದೆ ಮಧುರವಾಣಿಯ ತೋರಿ ಸಲಹಲು ವದಗಿ ಕಾಯುವೆ ಭಕ್ತರನ್ನು (ಚದುರ ನಿನಗೆಣೆಗಾಣೆ ಜಗದೊಳು) 1 ಜಾಣರೊಳತಿ ಜಾಣತನ ತೋರುತ್ತ ಕಾಣಿಸಿ ಕಾಣದಂತಿರುತ ಭಕ್ತರೊಳು ಗಾಣಕೆ ಸಿಲ್ಕಿದ ಎಳ್ಳು ಸಚ್ಛದೆಣ್ಣೆ ಮಾಣದೆ ಬರುವ ತೆರ ತೋರುವೆ ಜನಕೆ ಕಾಣದಿಹ ಕಾಮಕ್ರೋಧದ್ಹಿಂಡಿಯ ಮಾಣದೆ ಬೇರ್ಪಡಿಪೆಯಲ್ಲದೆ ಇದು ಕಾಣ್ವರು ನಿನ್ನ ಚರಣದಂಘ್ರಿಯ ಕಾಣುತಲೆ ಸ್ತುತಿಮಾಡಿ ಹಿಗ್ಗುತಲಿಹರು 2 ದಿಟ್ಟಮೂರುತಿ ಕೇಳೊ ಕೊಟ್ಟರೊಳ್ಳಿತು ಕಷ್ಟ ಉತ್ಕøಷ್ಟವಾಗಲಿ ಹರಿಯೆ ಎನ್ನ ದೊರೆಯೆ ಕಟ್ಟಕಡೆ ನಿನ ಧ್ಯಾನ ಕೊಟ್ಟು ಕಾಯುವ ಭಾರ ಘಟ್ಟಿ ಕಂಕಣ ಕಟ್ಟಿ ನಿಂತಿಹೆ ಶ್ರೀ ಶ್ರೀನಿವಾಸ ಎನ್ನ ದುಷ್ಟತನವೆಲ್ಲ ಕುಟ್ಟಿ ಕೆಡಹುವೆ ಕಟ್ಟಕಡೆಗೆ ನಿನ್ನ ಪಾದಾಂಗುಷ್ಠ ಸೇರಲಿಯೆಂದಾ ಭಕ್ತರ ಬೆಟ್ಟದೊಡೆಯನೆ ಸಲಹುತಿರುವೆ ಉತ್ಕøಷ್ಟ ಮೂರುತಿ ಭಕ್ತರಿಷ್ಟದಾಯಕ 3
--------------
ಸರಸ್ವತಿ ಬಾಯಿ
ನಿನ್ನ ನಂಬಿರುವೆ ಪ್ರಸನ್ನನಾಗು ಬ್ಯಾಗಚನ್ನಿಗವರದ ವಿಜಯರಾಯ ಪ ಮನ್ನಿಸಿ ಎನ್ನ ಪಾವನ್ನ ನೀ ಮಾಡದಿರೆಬೆನ್ನ ಬಿಡೆನೊ ನಿನ್ನ ಜೀಯಾ ಅ.ಪ. ಕರುಣಸಾಗರನೆಂಬೊ ಬಿರಿದು ನಿನಗಿಹುದೆಂದುಹಿರಿಯರಿಂದರಿತಿರುವೆ ಜೀಯಾ ||ಮರೆಯದೇ ಪೊರೆ ನಿನ್ನ ಚರಣಭಜಕನೆಂದುಸರುವ ಅಘವನು ಕ್ಷಮಿಸಿ ರಾಯಾ ||ದುರುಳ ವಿಷಯಕ್ಕಿಳಿವ ಮರುಳ ಮನವನ್ನು ನಿನ್ನಚರಣದಲಿ ನಿಲಿಸಿನ್ನು ಜೀಯಾ ರಾಯಾ 1 ವಿಧಿ ಜಪ ತಪವ ಅರಿಯೆ ಹೋಮ ನೇಮಅರಿಯೆ ಮಂತ್ರ ಸ್ತೋತ್ರವ ||ಬರಿದೆ ಧರಿಯೊಳು ತಿರುಗಿ ಹರಿಯ ಸ್ಮರಿಸದೆ ದಿನವಇರುಳು ಹಗಲು ಕಳದೆನು ||ಕರುಣವಿಲ್ಲವ್ಯಾಕೆ ಶರಣಾಗತನ ಇನ್ನುಪೊರೆಯದೇ ಬಿಡುವದು ಥರವಲ್ಲವೆಂದಿಗೂ 2 ಅಜ ಭವರಿಂದೊಂದ್ಯನಾದ್ವಿಜಯ ಮೋಹನ ವಿಠಲಭಜಕರಿಗೊಲಿದಂತೆ ಉಪಾಯ ||ನಿಜವಾಗಿ ಮಾಡದಿರೆ ಬಿರುದಿಗೆ ಕುಂದುಗಜರಾಜವರದನ ಪ್ರಿಯಾ ||ಕುಜನರ ಮತ ಬಡಿದು ವಿಜಯ ವಿಠಲನೇ ಪರನೆಂದುತ್ರಿಜಗದೊಳು ಮೆರಸಿದ ಭಜಕಾಗ್ರೇಸರ ಗುರುವೆ 3
--------------
ಮೋಹನದಾಸರು
ನಿನ್ನ ನಾನೇನೆಂದೆನೋ ರಾಮೇಶ್ವರನಿನ್ನ ನಾನೇನೆಂದೆನೋ ಸಕಲ ಲೋಕವನ್ನು ಪೊರೆವ ಪಾರ್ವತೀಶನೆಂದೆನಲ್ಲದೆ ಪ ತಾರಕಾಸುರನ ಪುತ್ರರ ಬಾಧೆಯನು ತಾಳಲಾರದೆ ಹರಿಮುಖ್ಯ ನಿರ್ಜರರುಶ್ರೀರುದ್ರ ಸಲಹೆಂದು ಪಾದಕೆ ಮಕುಟವ-ನೂರೆ ಪೊರೆದ ತ್ರಿಪುರಾರಿಯೆಂದೆನಲ್ಲದೆ ವಿಧಿ ಶಿರವ ಕೈ-ಯ್ಯಾರೆ ಕಡಿದನೆಂದೆನೆ ಭಕ್ತವತ್ಸಲವಾರಿಜಭವನುತಿಲೋಲನೆಂದೆನಲ್ಲದೆ 1 ನಾರದಸಹಿತ ಮತ್ಯಾರು ಕಾಣದಂದದಿಓರುಗಲ್ಲರಸಿನ ಮನೆಗೆ ಪೋಗಿತೋರುವ ಭಿತ್ತಿಯ ಕೊರೆದಾತನಿಷ್ಟವಪೂರಿಸಿದನುಪಮಮಹಿಮನೆಂದೆನಲ್ಲದೆಚೋರರ ಗುರುವೆಂದೆನೆ ಪಾರ್ಥಚಾಪದಿಂ-ದೇರುವಡೆದನೆಂದೆನೆ ಬತ್ತಲೆಮದವೇರಿ ಕುಣಿದನೆಂದೆನೆ ಅರ್ಜುನಗೊಲಿದಾರಾಜಿಸುವ ಮಹಾನಟನೆಂದೆನಲ್ಲದೆ2 ಸುರರು ದಾನವರೆಲ್ಲ ನೆರೆದು ವಾದಿಸಿ ಕ್ಷೀರಶರಧಿ ಮಥನವ ವಿರಚಿಸಲುಉರು ಹಾಲಾಹಲಮೊಗೆದುರುಹಲು ಸರ್ವರಪೊರೆದ ಶ್ರೀನೀಲಕಂಧರನೆಂದೆನಲ್ಲದೆಗರವ ಕುಡಿದನೆಂದೆನೆ ಪೆಣ್ಣಿತ್ತನಶಿರವನರಿದನೆಂದೆನೆ ಊರೂರೊಳುತಿರಿದುಗರುವನೆಂದೆನೆ ದುಷ್ಟ ಶಿಕ್ಷಕವರ ಕೆಳದಿಯ ರಾಮೇಶ್ವರನೆಂದೆನಲ್ಲದೆ3
--------------
ಕೆಳದಿ ವೆಂಕಣ್ಣ ಕವಿ
ನಿನ್ನ ನೋಡಲಿ ಬಂದೆ ಘನ್ನ ಮಹಿಮನೆ ಕೃಷ್ಣಾ ಮನ್ನಿಸಿ ಕೃಪೆಯ ಮಾಡೊ ಪ. ನಿನ್ನ ದರುಶನವಿತ್ತು ಎನ್ನ ಪಾಪವ ಕಳೆದು ನಿನ್ನ ಪಾದವನೆ ತೊರೋ ಸ್ವಾಮಿ ಅ.ಪ. ರಜತಪೀಠಾಪುರದಿ ರಮ್ಯ ಮಂದಿರದಲ್ಲಿ ರಾಜಿಸುತ್ತಿಹ ದೇವನೆ ಕುಜನಮರ್ಧನ ಎನ್ನ ರಜ ತಮೋಗುಣ ಕಳದು ನಿಜಭಕ್ತರೊಡನಾಡಿಸಿ ಸುಜನವಂದಿತ ನಿನ್ನ ಭಜನೆಯಿಂದಲಿ ನಲಿದು ನಿಜರೂಪ ನೋಡುವಂತೆ ವಿಜಯಸಾರಥಿಯೆ ನೀ ಈ ತೆರದಿ ಪೊರೆಯದಿರೆ ಭಜಿಸಲ್ಯಾತಕೆ ನಿನ್ನನು ದೇವ 1 ಶ್ರೀ ತಂದೆ ಮುದ್ದುಮೋಹನದಾಸರೆಂತೆಂಬ ನೀತ ಗುರುದ್ವಾರದಿಂದ ನಾ ತಿಳಿದು ಬಂದೆ ನಿನ್ನಯ ಮಹಿಮೆ ಜಾಲಗಳ ಪ್ರೀತನಾಗಿ ಕಾಯೋ ನೀತಿಯಲ್ಲವು ನಿನಗೆ ಮಹಿಮೆ ತೋರದೆ ಎನ್ನ ಘಾತಿಗೊಳಿಸುವರೆ ಹೀಗೆ ನಾಥ ನಿನ್ನಗಲಿ ನಾನರಘಳಿಗೆ ಇರಲಾರೆ ಸೋತು ಬಂದಿಹೆನೊ ಭವದಿ ಮನದಿ 2 ಸತ್ಯಸಂಕಲ್ಪ ನೀನಾದಡೆ ಎನಗಿನ್ನು ಅತ್ಯಧಿಕ ರೂಪ ತೋರೊ ಮೃತ್ಯು ಬೆನ್ಹತ್ತಿ ಆಯುಷ್ಯವ ಪರಿಹರಿಸುವುದು ಎತ್ತ ಪೋದರು ಬಿಡದೆಲೊ ಭೃತ್ಯತನವನೆ ವಹಿಸಿ ನಿನ್ನ ತೋರೆಂದೆನಲು ಮತ್ತೆ ಕರುಣವಿಲ್ಲವೆ ಚಿತ್ತಜಾಪಿತ ನಿನ್ನ ಒಲುಮೆ ಮಾರ್ಗವನರಿಯೆ ಚಿತ್ತಕ್ಕೆ ತಂದು ಕಾಯೊ ಕೃಷ್ಣ 3 ಆನಂದಮುನಿವರದ ಆನಂದ ಕಂದನೆ ಆನಂದನಿಲಯವಾಸ ಆನಂದರತ್ನಪ್ರಭಾದಿಂದ ರಾಜಿತನೆ ಆನಂದಮೂರ್ತಿ ಕೃಷ್ಣ ಆನಂದಗೋಕುಲದಿ ಆನಂದದಲಿ ಮೆರೆದು ಆನಂದ ಸುಜನಕಿತ್ತೆ ನೀನಿಂದು ಎನ್ನ ಮನಕೆ ಆನಂದವನೆ ಇತ್ತು ಆನಂದರೂಪ ತೋರೊ ಕೃಷ್ಣ 4 ಥರವಲ್ಲ ನಿನಗೆನ್ನ ಕರಕರೆಗೊಳಿಸುವುದು ಪೊರೆವರಿನ್ಯಾರು ಜಗದಿ ಮರೆತು ಗರ್ವದಿ ಎನ್ನ ಮರೆವರೆ ನೀನ್ಹೀಗೆ ಗುರುಗಳಂತರ್ಯಾಮಿಯೆ ಸರ್ವನಿಯಾಮಕ ಸರ್ವವ್ಯಾಪಕನೆಂಬ ಬಿರುದು ಪೊತ್ತಿಲ್ಲವೇನೊ ಕರುಣಾಳು ಗೋಪಾಲಕೃಷ್ಣವಿಠ್ಠಲ ನಿನ್ನ ಪರಿಪರಿಯ ರೂಪ ತೋರೊ ಕೃಷ್ಣ 5
--------------
ಅಂಬಾಬಾಯಿ
ನಿನ್ನ ಪಾದವ ನಂಬಿ ಅನ್ಯರಾಶ್ರಯವ್ಯಾಕೆಚನ್ನ ಗುರು ವಿಜಯರಾಯ ಪ ಇನ್ನೇನು ಯಿನ್ನೇನು ಯೆನ್ನ ಕುಲಕೋಟಿ ಪಾ-ವನ್ನವಾದುದು ನಿಶ್ಚಯಾ ಜೀಯ ಅ.ಪ. ಪಂಚ ಮಹ ಪಾತಕರೊಳಗೆ ಮೂರನೆ ಕಕ್ಷಿಕಾಂಚನ ದ್ರೋಹಿ ನಾನು ಯೆನ-ಮುಂಚೆ ಬಂದಾಗ ಕೈ ಬಿಡದೆ ಪ್ರಾ-ಪಂಚವನೆ ಬಿಡುಯೆಂದು ನುಡಿದೆ ಯೆನ್ನಸಂಚಿತಾಗಮವೆಲ್ಲ ತೊಡದೆ ಯೆನ್ನ ||ಕಂಚು ಕಟ್ಬುಳಿ ಕಲ್ಲೊತ್ತಿನ ಮೇಣ್ ಕಾಶಿಗೆ ||ಪಂಛೇರು ಮಾಡಿ ನಡದೆ ಬಿಡದೆ 1 ವ್ಯಾಸರಾಯರ ಗುಹೆಯೊಳಗೆ ನವ ಸಂ-ನ್ಯಾಸಿಗಳ ಸಮಕ್ಷಮದಲಿ ಯೆನ್ನದಾಸನಾಗೆನುತ ನೀ ಪೇಳ್ದೆ ಯೆನ್ನವಾಸಿ ಪಂಥಗಳೆಲ್ಲ ತಾಳ್ದೆವೊಲಿದುದೋಷಾಂಕುರಗಳೆಲ್ಲ ಸೀಳ್ದೆ ಸ್ವಾಮಿ ||ಶ್ರೀಶ ಸರ್ವೋತ್ತಮನೆಂದು ನೀ ಪೇಳಿ ಸಂ-ತೋಷದಿಂದೆನ್ನ ಪೊರದೆ ಬಿಡದೆ 2 ನಿತ್ಯ ಮೆರೆವೆ ಯೆನ್ನ ||ಪೂಜಾ ಫಲವೆಂದು ಆವಾಗೆ ನಿನ್ನ ಪದರಾಜೀವ ಧ್ಯಾನಿಸುವೆ ಸ್ವಾಮಿ 3 ಪುಶಿಯು ಜಗವೆಲ್ಲ ದೈವವು ತಾನೆನುತಅಸಮ ವೇದ ಪೌರುಷ ಯೆಂಬಂಥಭಸುಮಧಾರಿಯನೆ ಕರದೆ ಅವನಅಸುರ ಭಾವವನೆಲ್ಲ ಮುರಿದೆ ನಮ್ಮಬಿಸಜಾಕ್ಷ ಪರನೆಂದು ಪೊರೆದೆ ಸ್ವಾಮಿ ||ಎಸೆವ ದ್ವಾದಶನಾಮ ಪಂಚಮುದ್ರಿಯನಿಡಿಸಿನಸುನಗುತಲವನ ಪೊರದೆ ಬಿಡದೆ 4 ವಾಕು |ಅನ್ಯಥಾ ಮಾಡುವುದು ಸಲ್ಲ ಮೋ-ಹನ್ನ ವಿಠ್ಠಲ ಯಿದನು ಬಲ್ಲ ಮುನ್ನಾಪನ್ನಗಶಯನ ಪ್ರಸನ್ನನಾದದಕೆ ಯಿದುಎನ್ನ ಮನೋರಥ ಸಿದ್ಧಿಯೊ ಸ್ವಾಮಿ 5
--------------
ಮೋಹನದಾಸರು
ನಿನ್ನ ಪೋಲುವ ಕರುಣಿಗಳನಾರ ಕಾಣೆ ಪ್ರ ಪನ್ನ ತಾ ಪಾಪಹರನೇ ಪ ಎನ್ನಪರಾಧಗಳ ಎಣಿಸದಿರು ಅಜಭವಶ ರಣ್ಯ ಪರಿಪೂರ್ಣೇಂದಿರಾಗಾರ ಅ ಶುದ್ಧಾಖ್ಯ ದ್ವಿಜನು ದಾರಿದ್ರ್ಯದಲಿ ನೆರೆ ನೊಂದು ಸದ್ಧರ್ಮ ತೊರೆದು ಮರೆದು ಶ್ರಾದ್ಧಾದಿ ದುಷ್ಟನ್ನ ಮೆದ್ದು ನಿಂದಿತನಾಗಿ ಬಿದ್ದಿರಲು ಸತಿಯು ಮತಿಯು ತಿದ್ದಿ ಪೇಳಲು ಕೇಳಿ ಶುದ್ಧ ಭಾವದಿ ತವ ಪ ದದ್ವಯಕ್ಕೆರಗಿ ಮರುಗಿ ಪದ್ಮೇಶ ಸಲಹೆನಲು ಸಿದ್ಧಿಸಿ ಮನೋರಥವ ಉದ್ಧಾರವನು ಮಾಡ್ದೆ ನೋಡ್ದೆ 1 ವಿಧಿಯ ಸಂಸ್ತುತಿ ಕೇಳಿ ಮಧ್ವಜಾಕಾರಿ ಮದಡತಮನುದರ ಬಗೆದೇ ಉದಧಿ ಮಥನದಲುದಿಸಿದಮೃತ ದೇವತೆಗಳಿಗೆ ಮುದದಿಂದಲೆರೆದೆ ಪೊರೆದೆ ಹೇಮ ಲೋಚನನ ನೀ ದೌಂಷ್ಟ್ರ ತುದಿಯಿಂದ ಕೊಂದೆÀ ತಂದೆ ಬೆದರದಲೆ ಕರೆದರ್ಭಕನ ನುಡಿಗೆ ಅವನಯ್ಯ ನುದರ ರಕ್ತವನು ಸುರಿದೇ ಮೆರೆದೇ 2 ವೈರೋಚನಿಯ ಭೂಮಿ ದಾನವನು ಬೇಡಿ ಭಾ ಗೀರಥಿಯ ಪಡದಿ ಪದದಿ ಧಾರಿಣಿಯ ದಿವಿಜರಿಗೆ ದಾನವಿತ್ತವನಿಪರ ಗಾರು ಮಾಡಿದೆ ಸವರಿದೇ ನೀರಧಿಯ ಬಂಧಿಸಿ ದಶಾಸ್ಯನ ಬಲವನು ಸಂ ಹಾರ ಮಾಡಿದೆ ರಣದೊಳು ಕಾರಗೃಹದೊಳಗಿಪ್ಪ ಜನನಿ ಜನಕರ ಬಿಡಿಸಿ ತೋರಿಸಿದೆ ವಿಶ್ವರೂಪಾ ಶ್ರೀಪಾ 3 ಆದಿತೇಯರು ಮಾಳ್ಪ ಸಾಧುಕರ್ಮಗಳ ಶುದ್ಧೋದನಾಚರಿಸೆ ತಿಳಿದು ವೇದ ಶಾಸ್ತ್ರಾರ್ಥ ಪುಸಿಯೆಂದರುಪಿ ಜಿನನತಿ ಭೇದಗೈಸಿದೆ ಸಹಿಸಿದೇ ಭೇದಗೊಳಿಸುವ ಕಲಿಯ ಕೊಂದು ಶೀ ಘ್ರದಿ ತಮಸಿಗೈಸಿದೆ ಕಲ್ಕಿ ಭಳಿರೇ ನಿಖಿಳ ಲೋಕವನೆಲ್ಲ ಧರಿಸಿ ಪ್ರಳ ಯೋದಕದಿ ಮಲಗಿ ಮೆರೆದೇ ಪೊರೆದೇ 4 ಹಂಸರೂಪದಲಿ ಕಮಲಾಸನಗೆ ತತ್ವೋಪ ದೇಶಮಾಡಿದೆ ಕರುಣದೀ ವ್ಯಾಸಾವತಾರದಲಿ ದೇವ ಋಷಿ ಪಿತೃಗಳಭಿ ಲಾಷೆ ಪೂರೈಪ ನೆವದೀ ಭಾಷ್ಯತ್ರಯಗಳಿಂದ ಭಗವದ್ಗುಣಂಗಳ ಪ್ರ ಭಾಷ್ಯತ್ರಯಗಳಿಂದ ಭಗವದ್ಗುಣಂಗಳ ಪ್ರ ಕಾಶÀ ಮಾಡಿದೆ ಮೋದದಿ ವಾಸವಾನುಜ ಜಗನ್ನಾಥವಿಠಲ ನಿನ್ನವರ ಸಲ ಹೋ ಸಮರ್ಥಾ ಕರ್ತಾ 5
--------------
ಜಗನ್ನಾಥದಾಸರು
ನಿನ್ನ ಬೆನ್ನು ಬಿದ್ದೆ ಪನ್ನಂಗಶಯನ ಎನ್ನನ್ನು ನೀನೀಗ ಮನ್ನಿಸಿ ಸಲಹೆಂದು ಪ ಎನ್ನನೆಲ್ಲಿಗೆ ಒಯ್ವಿ ನಿನಗೆ ಕೂಡಿತು ನಿನ್ನ ಬಿಟ್ಟರೆ ಎನಗೆ ಅನ್ಯ ಗತಿಯಲ್ಲ 1 ವನಜಾಕ್ಷ ನಿಮಪಾದ ನೆನೆವು ನಿಲ್ಲಿಸಿ ಎನ್ನ ಮನದಾಸೆ ಪೂರೈಸಿ ಕನಿಕರದಿ ಕಾಯೆಂದು 2 ಶಾಮಸುಂದರ ಶ್ರೀರಾಮ ನಿಮ್ಮಯ ಪಾದ ಪ್ರೇಮ ಎನ್ನೊಳರಿಸಿ ಕ್ಷೇಮದಿಂ ಪೊರೆಯೆಂದು 3
--------------
ರಾಮದಾಸರು
ನಿನ್ನ ಮಹಿಮೆ ತಿಳಿಯುವುದೊಂದಗಾಧ ದೇವ ಉನ್ನತೋನ್ನತಚರಿತ ನುತಸಹಜಭಾವ ಪ ಯೋಗಿ ನೀನಾದಯ್ಯ ಜೋಗಿಯೆಂದೆನಿಸಿದಿ ಆಗಾಧ ದೇಹ ತಾಳ್ದಿ ಬಾಗಿಲವ ಕಾಯ್ದಿ ಮಿಗಿಲಾದ ರೂಪಾದಿ ಜಗವ ಪಾಲಿಸಿದಿ 1 ಕರುಣದಿಂದಾಳಿದಿ ವರವಿತ್ತು ಕಳುಹಿದಿ ಧರೆಗೆ ಭಾರೆನಿಸಿದಿ ತಿರುಗಿ ನೀ ಮುನಿದಿ ಘಟ ನೀಡ್ದಿ ಪರಮಭಟನೆನಿಸಿದಿ ಶರಗಳನು ಪೋಣಿಸಿದಿ ಧುರದೊಳಗೆ ಕೊಂದಿ 2 ತಮ್ಮನ ಪಕ್ಷ್ಹಿಡಿದಿ ತಮ್ಮನಣ್ಣನಕೊಂದಿ ತಮ್ಮಗಧಿಕಾರ ಗೈದಿ ಸಮ್ಮತದಿ ಕಾಯ್ದಿ ತಮ್ಮನಿಗೆ ಭಾವನಾದಿ ತಮ್ಮನಿಗೆ ಬೋವನಾದಿ ತಮ್ಮನಿಂ ಕೊಲ್ಲಿಸಿದಿ ಸಮ್ಮತವ ಗೈದಿ 3 ಮಾವಗಳಿಯನಾದಿ ಮಾವಗೆ ವೈರ್ಯಾದಿ ಮಾವನ ಕುಲವಳಿದಿ ತಾಯನ್ನ ಕಾಯ್ದಿ ಗೋವು ಪಾಲಕನಾದಿ ಗೋವಿಗೆ ಮಗನಾದಿ ಗೋವುಗಳನಾಳಿದಿ ಗೋವುಕುಲ ಪೊರೆದಿ 4 ಮೀನಾದಿ ಕೂರ್ಮಾದಿ ದಾನ ಬೇಡುವನಾದಿ ಕಾನನ ಮೃಗನಾಗಿ ಧ್ಯಾನಿಪರಕಾಯ್ದಿ ದೀನಪಾಲನೆ ನಿನ್ನ ಜಾಣಮಹಿಮಂಗಳನ್ನು ಹೀನರರಿವರೆ ಮಮಪ್ರಾಣ ಶ್ರೀರಾಮ 5
--------------
ರಾಮದಾಸರು
ನಿನ್ನ ಸಂಕಲ್ಪಾನುಸಾರ ಮಾಡೋ ಎನ್ನ ಸಾಕುವ ಧೊರೆಯೆ ತಿಳಿದು ನೀ ನೋಡೋ ಪ ಪಾತ್ರನೆಂದೆನಿಸೋ ಬಹು ಪಾಪಾತ್ಮನೆಂದೆನಿಸೋ ಶ್ರೋತ್ರೀಯನೆಂದೆನಿಸೋ ಶುಂಠನೆನಿಸೋ ಪುತ್ರಮಿತ್ರಾದ್ಯರಿಂ ಬಯಸಿ ಪೂಜೆಯಗೈಸೋ ಕರ್ತೃ ನೀ ಜಗಕೆ ಸರ್ವತ್ರ ವ್ಯಾಪಕನೆ 1 ಜನರೊಳಗೆ ನೀನಿದ್ದು ಜನ್ಮಗಳಲ್ಲಿ ಗುಣಕಾಲಕರ್ಮ ಸ್ವಭಾವಂಗಳಾ ಅನುಸರಿಸಿ ಪುಣ್ಯ ಪಾಪಗಳ ಮಾಡಿಸಿ ಫಲಗ ಳುಣಿಸಿ ಮುಕ್ತರ ಮಾಡಿ ಪೊರೆವೆ ಕರುಣಾಳು 2 ಯಾತಕೆನ್ನನು ಇನಿತು ದೂಷಕನ ಮಾಡುವಿ ಧ ರಾತಲದೊಳನುದಿನದಿ ಮಾಯಾಪತೇ ಭೀತಿಗೊಂಬುವನಲ್ಲ ಭಯನಿವಾರಣ ಜಗ ನ್ನಾಥ ವಿಠ್ಠಲ ಜಯಪ್ರದನೆ ಜಗದೀಶಾ3
--------------
ಜಗನ್ನಾಥದಾಸರು
ನಿನ್ನನ್ನೆ ನಂಬಿದೆನೊ ಪನ್ನಂಗಶಾಯಿ ಎನ್ನ ನೀ ಕಾಯಬೇಕೊ ಪ ದೀನದಯಾಳು ದೇವ ನೀನೆ ಕಾಯದೆ ಬಿಟ್ಟ ರಿನ್ನಾರು ಕಾಯ್ವರು ಎನ್ನನೀ ಜಗದೊಳುಅ.ಪ ಉನ್ನತ ಹೃದಯನೆ ಮುನ್ನ ನಾ ಮಾಡಿದ ಗನ್ನಗತಕತನವನ್ನು ದಯದಿ ಕ್ಷಮಿಸು ಇನ್ನೀಭವದಿ ಎನಗೆ ನಿನ್ನಯ ಸನ್ನುತಿ ಯನ್ನು ಪಾಲಿಸಿ ಸತತ ಬನ್ನಬಡಿಸದೆ ಕಾಯೊ 1 ಶರಣಾಗತರಕ್ಷಣಾನಾಥಜನಬಂಧುವೇ ಕರುಣದಿ ನಿಮ್ಮಂಥ ದೇವರನುಕಾಣೆ ದುರಿತದೂರನೆ ಎನ್ನ ದುರಿತದುರ್ಗಣವನ್ನು ಪರಿಹರಿಸಿ ಸಲಹಯ್ಯ ಶರಣುಜನರ ಪ್ರೀಯ 2 ಕೈಯ ಪಿಡಿದು ಪೊರೆಯೊ ಬಿಡದೆನಮ್ಮಯ್ಯ ಜಗ ದಯ್ಯ ಶ್ರೀರಾಮ ವಿಜಯವಿಠಲರಾಯ ಕೈಯ ಮುಗಿದು ಮರೆಹೊಕ್ಕು ಬೇಡುವೆಯ್ಯ ಜೀಯ ದಯದಿ ಕಾಯೊ ಪಂಢರಿರಾಯ 3
--------------
ರಾಮದಾಸರು