ಒಟ್ಟು 10452 ಕಡೆಗಳಲ್ಲಿ , 133 ದಾಸರು , 5883 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂತು ಶೋಭಿಪ ನೋಡೀ - ಶ್ರೀವ್ಯಾಸ ವಿಠಲಸಂಪುಟವ ಮನೆ ಮಾಡೀ - ವಿಶ್ವಜ್ಞ ತೀರ್ಥರಶಾಂತ ಸೇವೆಯ ಗೂಡೀ - ಮೆರೆಯುತಿಹ ನೋಡೀ ಪ ಕಂತು ಸಿರಿ | ಕಾಂತ ವಿಠಲ ಶಾಂತಮೂರುತಿಸಂತ ಯತಿವರರಂತರಂಗದಿ | ಚಿಂತಿಸುತಲೇಕಾಂತ ಪೂಜೆಗೆ ಅ.ಪ. ಉತ್ತಮ ಮತಿ ಸುದತೇರು - ಛತ್ರಿ ಚಾಮರಗಳಎತ್ತಿ ಬೀಸುತಲಿಹರೋ ||ದ್ರುತ - ಕೃತಿವಾಸನ ಸಖನ ಪರಮ - ಸು | ಹೃತ್ತಮೋತ್ತಮ ಚಿತ್ಸುಖಪ್ರದಚಿತ್ತವಿಸು ಚಿತ್ತಾಖ್ಯ ಪೀಠಿಕೆ | ಸತ್ಯಕಾಮ ಶರಣ್ಯ ಮೂರುತಿ 1 ಕಾಯ ಭವಪಿತ ತೋಯಜಾಕ್ಷನೆ | ದಾಯ ನಿನ್ನದು ಎನ್ನ ಗತಿಗೇಪ್ರೇರ್ಯ ಪ್ರೇರಕ ಶ್ರೀಗುರು | ಗೋವಿಂದ ವಿಠಲನೆ ಕಾಯೋ ಬೇಗ 2
--------------
ಗುರುಗೋವಿಂದವಿಠಲರು
ಎಂತು ಶೋಭಿಪ ನೋಡೀ ಶ್ರೀವ್ಯಾಸ ವಿಠ್ಠಲಸಂಪುಟನ ಮನೆ ಮಾಡೀ | ವಿಶ್ವಜ್ಞ ತೀರ್ಥರಶಾಂತ ಸೇವೆಯ ಗೂಡೀ | ಮೆರೆಯುತಿಹ ನೋಡಿ ಪ ಎಂತು ಶೋಭಿಪ ಕಂತುಪಿತ ಶಿರಿ | ಕಾಂತ ವಿಠ್ಠಲ ಶಾಂತಿ ಮೂರುತಿಸಂತ ಯುತಿವರ ರಂತರಂಗದಿ | ಚಿಂತಿಸುತಲೇಕಾಂತ ಪೂಜೆಗೆ ಅ.ಪ. ಶ್ರೀಮಧ್ವಮುನಿಗಳ ಕರಜ | ಶ್ರೀವಿಷ್ಣು ತೀರಥರಾ ಮಹಾಮುನಿ ಪೂಜಾ | ಗೊಂಡಿರುವ ಶ್ರೀರಾಮ ನರಹರಿ ಪೂಜಾ | ಶ್ರೀ ವ್ಯಾಸ ವಿಠ್ಠಲ ಪ್ರೇಮ ಗುರುಗಳ ಕರಜ | ಶ್ರೀವಿಶ್ವಜ್ಞ ತೀರ್ಥ ||ಪ್ರೇಮದಲಿ ಗೈವ ಸುನೇಮದಲಿ | ಸೀಮೆ ಸುಬ್ರಹ್ಮಣ್ಯದಲ್ಲಿ ಝಾವ ಝಾವಕೆ ಭಜಿಪ ಭಕ್ತರ | ಕಾಮಿತಾರ್ಥಗಳೀಯುತಿರೆ ಹರಿ 1 ವತ್ಸರ ಸುವಿಕ್ರಮದೀ | ಎರಡೊಂದು ಮಾಸದ ಸಿತ ಪಕ್ಷದಲಿ ಹರಿ ದಿನದೀ | ರವಿವಾರದೊಳು ಶ್ರೀಯತಿವರರು ಸ್ವಗೃಹದೀ | ಆಗಮಿಸಿ ಪೂಜೆಯ ಶೃತಿ ಉಕುತ ಮಾರ್ಗದೀ | ಗೈಯ್ಯೆ ಭಕುತರೂ ಕೃತಿಪತಿಯ ಚರಣಾಬ್ಜಗಳ ಸಂ | ಸ್ತುತಿಸುತ ಸುವೇದ ಘೋಷದಿ ಕೃತ ರಜತ ಪೀಠಸ್ಥ ನರಹರಿ |ಪ್ರತಿ ರಹಿತ ಮಹ ಅತುಳ ವಿಭವದಿ 2 ಪಾವನ್ನರಾದೆವು ನಾವು | ಸಂಯಮಿ ವರರ ಪಾವನ್ನ ಪದ ರಜಕಾವು | ದ್ವಾದಶಿಯ ದಿನಶ್ರೀವರನ ಮಹ ಅರ್ಚನವು ಗೈದ ವೈಭವವೂ ||ಕಾವ ಕರುಣೆಯ ಸ್ಮರಣೆ ತವಕದಿಂದಲಿ ಮಾಡ್ದತಾವಕನ ಪರಮಾಲ್ಪವೆನಿಪ | ಸೇವೆಯನೆ ಸ್ವೀಕರಿಸಿ ನರಹರಿ ದೇವ ಗುರು ಗೋವಿಂದ ವಿಠಲ | ಕಾವ ಕರುಣಾಳುಗಳ ಒಡೆಯ3
--------------
ಗುರುಗೋವಿಂದವಿಠಲರು
ಎಂತುನುತಿಪೆ ನಾನು ಈ ಜಗದಂತರ್ಯಾಮಿಯನು ಪ ಪರಿಯವು ಸಂತತ ವಾಙ್ಮನ ಅ.ಪ ಸಾಸಿರಮುಖದವನ ಅವಯವಸಾಸಿರವುಳ್ಳವನ ಮೀಸಲಳಿಯದಂತೀ ಸಚರಾಚರ ವಾಸಿಯಾದ ಶ್ರೀ ವಾಸುದೇವನನು 1 ಜಗವನು ನಿರ್ಮಿಸುವ ಬೊಮ್ಮನು ಮಗನೆಂದೆನಿಸಿರುವ ಬಗೆಯುವಡೀ ಜಗವ ಜಠರದಿ ನುಸುಳಿಕೊಂಡಿರುವ ಮ್ಮೊಗನೆಂಬುವರೀಯಗಣಿತ ಮಹಿಮನ 2 ನಿಗಮವ ಪೆತ್ತವನ ಬೊಮ್ಮಗೆ ನಿಗಮವನಿತ್ತವನ ನಿಗಮೋದ್ಧಾರಕನ ನಿತ್ಯದಿ ನಿಗಮಗೋಚರನ [ಸುಗುಣ]ಶ್ರೀಪದಯುಗಳಾಂಬುಜನನು 3 ಮಾಯಾಧೀಶ್ವರನ ದೇವನಿಕಾಯಾರಾಧಿತನ ಕಾಯಜ ಸುಂದರನಾ ಜೀವನಿಕಾಯಕೆ ಮಂದಿರನಾ ದಾಯಗೆಟ್ಟರನ್ಯಾಯದಿ ಮುನಿಗಳು 4 ಪರಮಪದದೊಳಿಹನಾ ಪುನರಪಿ ತರಣಿಯೊಳಿರುತಿಹನ ಶರನಿಧಿ ಮಂದಿರನಾ ಶ್ರೀಪುಲಿಗಿರಿಯೊಳು ನಿಂದಿಹನಾ ಪೊರೆಯುವ ವರದವಿಠಲನ ನಾ5
--------------
ವೆಂಕಟವರದಾರ್ಯರು
ಎಂತುನುತಿಪೆ ನಾನು-ಈ ಜಗ | ದಂತರ್ಯಾಮಿಯನು ಪ ಸಂತತ ವಾಙÁ್ಮನ ಅ.ಪ. ಸಾಸಿರ ಮುಖದವನ-ಅವಯವ-ಸಾಸಿರವುಳ್ಳವನ ಸಾಸಿರ ಪೆಸರವನ-ರೂಪಿ ಸಾಸಿರವಾಗಿಹನ ಮೀಸಲಳಿಯದಂತೀ ಸಚರಾಚರ ವಾಸಿಯಾದ ಶ್ರೀ ವಾಸುದೇವನು1 ಜಗವನು ನಿರ್ಮಿಸುವ-ಬೊಮ್ಮನು-ಮಗನೆಂದೆನಿಸಿರುವ ಬಗೆಯುವದೀಜಗವ-ಜಠರದಿ-ನುಸುಳಿಸಿಕೊಂಡಿರುವ ಮಗುಳಿದ ನಳಿಯುವ ನಗಚಾಪರಮೊಮ್ಮಗನೆಂಬುವರೀ | ಯಗಣಿತ ಮಹಿಮನ 2 ನಿಗಮವ ಪೆತ್ತವನ-ಬೊಮ್ಮಗೆ-ನಿಗಮವನಿತ್ತವನ ನಿಗಮೋದ್ಧಾರಕನ-ನಿತ್ಯದಿ-ನಿಗಮಗೋಚರನ ಬಗೆಬಗೆಯೋಗಿಗಳ ಧ್ಯಾನಕೆನುಗಳಿದ ಶ್ರೀಪದ ಯುಗಳಾಂಬುಜನನು 3 ಮಾಯಾಧೀಶ್ವರನ-ದೇವನಿ-ಕಾಯಾರಾಧಿತನ ಕಾಯಜ ಸುಂದರನಾ-ಜೀವನಿ-ಕಾಯಕೆ ಮಂದಿರನಾ ಮಾಯಾಕಾರನಿವ ನಾಯವ ನರಿಯದೆ ದಾಯಗೆಟ್ಟರ ನ್ಯಾಯದಿ ಮುನಿಗಳು 4 ಪರಮಪದದೊಳಿಹನಾ ಪುನರಪಿ- ತರಣಿಯೊಳಿರುತಿಹನ ಶರನಿಧಿ ಮಂದಿರನಾ-ಶ್ರೀ ಪುಲಿಗಿರಿಯೊಳು ನಿಂದಿಹನ ನಿರುತವು ತನ್ನಯ ಚರಣವ ನಂಬಿದ ಶರಣರ ಪೊರೆಯುವ-ವರದ ವಿಠಲನಾ 5
--------------
ಸರಗೂರು ವೆಂಕಟವರದಾರ್ಯರು
ಎತ್ತುವೆನಾರತಿಯ ರಂಗಧಾಮನಿಗೆತ್ತುವೆನಾರತಿಯ ಪ. ಗೋಕುಲದೊಳು ಬೆಳೆದು ಆಕಳನೆಲ್ಲ ಕಾಯ್ದು ಪಾಕಶಾಸನನಿಗೆ ಪರಾಕ್ರಮ ತೋರಿದ ನೀರಗೆ 1 ಮಥುರೆಗೆ ನಡೆತಂದು ಮಾವ ಕಂಸನ ಕೊಂದು ಮಾತೆಗೆ ಮುದವಿತ್ತ ಮಧುಸೂದನ ಕೃಷ್ಣಗೆ 2 ಶೇಷಗಿರಿಯಲ್ಲಿ ವಾಸವಾಗಿರುತಿರ್ಪ ಶೇಷಭೂಷಣನುತ ವೃಷ್ಣಿವಂಶೋತ್ತಮಗೆ 3
--------------
ನಂಜನಗೂಡು ತಿರುಮಲಾಂಬಾ
ಎಂಥ ಆಟವಿದು ಕ್ಷಿತಿಜಪತಿದೆಂಥ ಆಟವಿದು ಪ ಎಂಥ ಆಟ ಶ್ರೀ ಕಂತುಜನಕ ಭ ಕ್ತಾಂತರಂಗ ಸುರಚಿಂತಾಮಣಿಯೇ ನಿನ್ನದೆಂಥ ಅ.ಪ ಮಡುವಿನೊಳಡಗಿರುವ ಉರಗನ ಹೆಡೆಮೆಟ್ಟಿ ನಾಟ್ಯಮಾಡುವ ಸಡಗರದಲಿ ಗೊಲ್ಲ ರ್ಹುಡುಗರ ಕೂಡಿಸಿ ಒಡನೆ ಬಿಲ್ಲಿನಾಟ ರಚಿಸಿ ಮಧುರಪುರ ಬಿಡದೆ ಸೇರಿ ಗಡಕಡಿದು ಮಾವನ ಶಿರ ತಡೆಯದೆಮನಪುರಪಥವ ಪಿಡಿಸಿದ್ದು 1 ಗೋವಳರೊಡಗೂಡಿ ಗೋವುಗಳ ಕಾಯಲ ಡವಿಸೇರಿ ಮಾಯವೃಷ್ಟಿ ಅತಿಭರದಿ ಗೈಯಲಾಗ ಗೋವರ್ಧನ ಗಿರಿಯೆತ್ತೆ ಏಳುದಿನ ಗೋವುಗಳನು ಮತ್ತು ಗೋವಳರೆಲ್ಲರ ಜೀವ ಸಮಾನಮಾಡಿ ಪ್ರೇಮದಿ ಸಲಹಿದ್ದು 2 ಎಷ್ಟು ಕ್ಷೀರ ನೀಡೆ ಜನನಿಗಿನ್ನಿಷ್ಟೆಂದ್ಹಟ ಮಾಡೆ ಸಿಟ್ಟಿನಿಂದ ತಾಯಿ ಕಟ್ಟಲು ಒರಳಿಗೆ ಅಟ್ಟಹಾಸದಿ ಡುರುಕಿಟ್ಟು ನಡೆದು ಶಾಪ ಪಟ್ಟು ಪಟ್ಟಣಮುಂದೆಷ್ಟೋಕಾಲದಿಂದ ಕಷ್ಟಪಡುವರ ದಯದೃಷ್ಟಿಯಿಂ ಸಲಹಿದ್ದು 3 ದುರುಳ ಭಸ್ಮನಂದು ಹರನಿಂ ಉರಿಹಸ್ತವನು ಪಡೆದು ಪರಮಪಾಪಿ ವರ ಕರುಣಿಸಿದವನಿಗೆ ಮರುಳಮಾಡವನ ಕರವೆ ಅವನ ಮೇ ಲ್ಹೊರೆಸಿ ಉರುವಿಸಿ ಹರನ ರಕ್ಷಿಸಿದ್ದು 4 ಬತ್ತಲೆ ಪುರಗಳನ್ನು ಪೊಕ್ಕು ನೀ ಸತಿಯರ ವ್ರತಗಳನು ಹತಗೈದು ತ್ರಿಪುರದ ಪಥಪಿಡಿಸೆಮಪುರ ಹಿತದಿಂ ಸುರಗಣಕತಿಸೌಖ್ಯವ ನಿತ್ತು ಜತನಗೈದಿ ಸಿರಿಪತಿಯ ಶ್ರೀರಾಮನೆ ಸತತದಿಂಥ ಮಹಪತಿತ ಮಹಿಮದಿಹ 5
--------------
ರಾಮದಾಸರು
ಎಂಥ ಕರುಣಿಯೋ | ಐಕೂರು ಗುರುಗಳೆಂಥ ಸುಗುಣಿಯೋ ಎಂಥ ಪರಮ ಕರುಣಿಯೋ ಇವ ರೆಂಥ ಸುಗುಣ ಶಾಲಿಯೋ ಸು ಸ್ವಾಂತದಿ ಏಕಾಂತದಿ ಶ್ರೀಕಾಂತನ ಪದಕ್ರಾಂತ ಶಾಂತರಂತಃಕರುಣಿಯೋ ಅ.ಪ ವಸುಧಿ ತಳದಲಿ ಶ್ರೀಶನಾಜ್ಞೆಯಿಂದ ಶಶಿಯಮತದಲಿ ಬಂದು | ಸುನಿತ ಮನದಲಿ ವಸುಮತಿ ಸುಶಾಸ್ತ್ರಧರ್ಮ | ನಿಶಿಹಗಲಾಚರಿಸಿ ಶಿಷ್ಯ ಭವ | ಘಸಣೆ ಕರೆದು ಕುಶಲಗರೆದ 1 ನಿತ್ಯ ಉತ್ಕøಷ್ಟ ಭಕುತಿಲಿ ಮುಟ್ಟಿ ಪಾಡಿ ನೋಡಿ ಕುಭವ ದಟ್ಟುಳಿಯನಿಟ್ಟವರು 2 ಜ್ಞಾನ ಶೀಲರು ದಾಸಕವನ | ಗಾನಲೋಲರು ನೆರೆನಂಬಿದಂಥ ದೀನಪಾಲರು ಶ್ರೀನಿಧಿವರ ಶಾಮಸುಂದರ | ಧ್ಯಾನಾಮೃತಪಾನಗೈದು ಕ್ಷೋಣಿ ಮಂಡಲದಿ | ಮದಿಸಿದಾನೆಯೆಂತೆ ಚರಿಸಿದವರು 3
--------------
ಶಾಮಸುಂದರ ವಿಠಲ
ಎಂಥ ಗುರುಶಿಷ್ಯರ ಜೋಡಿಯು ನೋಡಿರಿಇಂಥವರ ಸ್ಮರಿಸಿದರೆ ಚಿಂತೆ ದೂರಾಗುವದು ಪಧ್ರುವರಾಜವಂಶದಿಂದಿಳೆಯೊಳಗೆ ಅವತರಿಸಿಸರ್ವದುರ್'ಷಯದಲಿ ವೈರಾಗ್ಯ ಬೆಳೆಸಿಬಾಲ್ಯದಲಿ ಪರಮಹಂಸಾಶ್ರಮ ಸ್ವೀಕರಿಸಿಶ್ರೀಪಾದ-ರಾಜರೆಂದೆನಿಸಿ ಮೆರೆವರು ನೋಡು 1ಶ್ರೀಶನನು ಕಂಬದಿಂದ ತಂದ ಪ್ರಲ್ಹಾದನೆವ್ಯಾಸಮುನಿಯಾಗಿ ಅವತರಿಸಿ ಬಂದುದೇಶಾಧಿಪತಿಗೆ ಬಂದಾಪತ್ತು ಪರಿಹರಿಸಿಶ್ರೀ ಪಾದರಾಜರಿಗೆ ಶಿಷ್ಯರಾದರು ನೋಡು 2ಜ್ಞಾನ ವೈರಾಗ್ಯ ಭಕ್ತಿಯು ತುಂಬಿರುವುದುದೀನಜನ ಮಂದಾರ ಭಕ್ತ ಪುರಧೇನು'ಜುೀಂದ್ರ ವಾದಿರಾಜರಿಗೆ ಗುರು ಪರಮಗುರುಭೂಮಪತಿ'ಠ್ಠಲನ ಕುಣಿಸಿದ ಮಹಾತ್ಮರು 3ಸೋದೆ ವಾದಿರಾಜರು
--------------
ಭೂಪತಿ ವಿಠಲರು
ಎಂಥ ಟವಳಿಗಾರನಮ್ಮ ಪ ನಂದ ಗೋಪ್ಯಮ್ಮ ಕೇಳೆ - ನಿನ್ನ ಮಗ ಎಂಥ ಟವಳಿಗಾರನಮ್ಮ ಅ ಹಣವ ಕೊಟ್ಟೇನೆಂದುಗುಣದಿಂದ ಎನ್ನ ತಂದಹಣವ ಕೇಳಿದರಲ್ಲಿ - ಹಣವೆ ?ತಡೆಯಲಾರದ ತಲ್ಲಣವೆ ?ಕುದುರೆ ಮೇಲಿನ ಪಲ್ಲಣವೆ ?ಇಲ್ಲ, ಬಾಯಿಗಿಟ್ಟ ಬೊಕ್ಕಣವೆ ? - ಹೋಗೆನುತಾನೆ 1 ಕೊಪ್ಪಾನೆ ಕೊಟ್ಟೇನೆಂದುಒಪ್ಪಿಸಿ ಎನ್ನ ತಂದಕೊಪ್ಪಾನ ಕೇಳಿದರಲ್ಲಿ - ಕೊಪ್ಪ ?ಊರಮುಂದಿನ ತಿಪ್ಪ ?ಕೇರಿಯೊಳಗಿನ ಕೆಪ್ಪ ?ಕೆರೆಯೊಳಗಿನ ಹುಳಿಸೊಪ್ಪ ? - ಹೋಗೆನುತಾನೆ2 ಬಳೆಯ ಕೊಟ್ಟೇನೆಂದುಬಲು ಮಾತಿನಲಿ ತಂದಬಳೆಯ ಕೇಳಿದರಲ್ಲಿ - ಬಳೆಯೆ ?ಊರ ಮುಂದಿನ ಗಳೆಯೆ ?ಗದ್ದೆಯೊಳಗಿನ ಕಳೆಯೆ ?ಕೈಕಾಲ ಹಿಡಿದು ಸೆಳೆಯೆ ? - ಹೋಗೆನುತಾನೆ 3 ವಾಲೆ ?ಕನ್ನಡಿಯ ಕಪೋಲೆ ?ಹೇಳು ಸುವ್ವಿ ಸುವ್ವಾಲೆ ?ನಿನ್ನ ಕಾಲಿಗೆ ಸಂಕೋಲೆ ? - ಹೋಗೆನುತಾನೆ 4 ಕಡಗವ ಕೊಟ್ಟೇನೆಂದುಸಡಗರದಿಂದ ತಂದಕಡಗ ಕೇಳಿದರಲ್ಲಿ - ಕಡಗ ?ಅಂಬರದ ಗುಡುಗ ?ಮುಂಗೈ ಮೇಲಿನ ಗಿಡುಗ ?ಎತ್ತಿನ ಮ್ಯಾಲಿನ ಧಡಗ ? - ಹೋಗೆನುತಾನೆ 5 ಬುಗುಡಿಯ ಕೊಟ್ಟೇನೆಂದುರಗಡು ಕಿವಿಹಿಂಡಿ ತಂದಬುಗುಡಿ ಕೇಳಿದರಲ್ಲಿ - ಬುಗುಡಿ ?ಪಾಂಡವರಾಡಿದ ಪಗಡಿ ?ಮೂಗಿಂದ ಸುರಿವ ನೆಗಡಿ ?ಛಿ ! ನೀನೆಂಥ ಧಗಡಿ ? - ಹೋಗೆನುತಾನೆ 6 ಆದಿಕೇಶವನ ಮೇಲೆಆಣೆಯಿಟ್ಟು ಕರೆತಂದಆಣಿ ಎಲ್ಲಹುದೆಂದು ತೋರ್ದಆನಂದದಿಂದಲಿ ಬೆರೆದಬೀದಿಗೆ ಬಂದು ಕರೆದಹೀಂಗೆ ಧರೆಯೊಳು ಮೆರೆದ - ಶ್ರೀ ಕೃಷ್ಣರಾಯ 7
--------------
ಕನಕದಾಸ
ಎಂಥ ದಯವಂತನೋ | ಮಂತ್ರ ಮುನಿನಾಥನೊ ಸಂತಸದಿ ತನ್ನನು | ಚಿಂತಿಪರಿಗೆ ಸುರಧೇನು ಪ ವರ ಪ್ರಹ್ಲಾದನು | ಮರಳಿ ಬಾಹ್ಲೀಕನು | ಶ್ರೀ ಗುರುವ್ಯಾಸರಾಯನೊ | ಪರಿಮಳಾಚಾರ್ಯನೊ 1 ಇರುವ ತುಂಗಾತಟದಲ್ಲಿ | ಬರುವ ತಾನು ಕರೆದಲ್ಲಿ ಕರಪಿಡಿದು ಪೊರೆವಲ್ಲಿ ಸರಿಗಾಣೆ ಧರೆಯಲ್ಲಿ 2 ದುರಿತ ಕಳೆವ ಶಕ್ತನು ತರಣಿ ನಿಭಗಾತ್ರನು | ಪರಮಸುಚರಿತ್ರನು 3 ಶಿಶುವಿಗವುಗರೆದನು | ವಸುಧಿ ಸುರರ ಪೊರೆವನು ಅಸಮ ಮಹಿಮನೊ | ಸುಶೀಲೇಂದ್ರ ವರದನೊ 4 ಭೂಮಿಯೊಳು ಖ್ಯಾತನು | ಶಾಮಸುಂದರ ಪ್ರೀತನು ಕಾಮಿತಾರ್ಥದಾತನು | ಸ್ವಾಮಿ ನಮಗೆ ಈತನು 5
--------------
ಶಾಮಸುಂದರ ವಿಠಲ
ಎಂಥ ಧರ್ಮರಾಯ ಸಂತೋಷ ಬಡಿಸುವ ಅನಂತ ಪ್ರಜರಿಗೆಲ್ಲ ಚಿಂತಾಮಣಿಯು ತಾಎಂಥ ಧರ್ಮರಾಯ ಇಂದಿವರಾಕ್ಷಿ ಪ. ಒಡಹುಟ್ಟಿದವರೆಲ್ಲ ಬಿಡದೆ ಸೇವಿಸುವರು ಕಡುಭಕ್ತಿಯಿಂದಲೆ ನಡೆನುಡಿ ಬಿಡದೆ 1 ಹರದೆಯರು ರಾಯಗೆ ಪರಿಪರಿ ಸೇವಿಸಿ ಎರಗೋರು ಕಾಲಕಾಲಕೆ ಪರಮ ಭಕ್ತಿಯಲಿ2 ಭೃತ್ಯರು ರಾಯಗೆ ಅತ್ಯಂತ ಸೇವಿಸಿ ಚಿತ್ತವ ಹಿಡಿಯಲು ಉತ್ತಮನೆಂದು 3 ದಾಸರು ರಾಯಗೆ ಸೋಸಿಲೆ ಸೇವಿಸಿಏಸೇಸು ಕಾಲಕ್ಕೆ ಈ ಸ್ವಾಮಿ ಬಯಸೋರು4 ವಿಪ್ರರು ರಾಯಗೆ ಒಪ್ಪೋದು ದೊರೆತನ ತಪ್ಪದೆ ಇರಲೆಂದು ಗೌಪ್ಯದಿ ಜಪಿಸೋರು 5 ಮಿಕ್ಕ ಜನರಿಗೆ ಸಕ್ಕರೆ ಹೇರಮ್ಮಲಕ್ಷ್ಮಿ ರಮಣಗೆ ಸಖ್ಯನು ರಾಯ 6 ಎಲ್ಲ ಜನಕೆ ರಾಯಬೆಲ್ಲದ ಹೇರಮ್ಮಚಲ್ವ ರಾಮೇಶನ ನಲಿವಿನ ಮುಂದೆ 7
--------------
ಗಲಗಲಿಅವ್ವನವರು
ಎಂಥ ಮಾತನಾಡಿದಿ ಎಲಾ ನೀನು | ಛೀ | ಸಂತನಾದ ಮೇಲೆ ಮುಂಚಿನದೇನೊ ಪ ಊರ ಮುಂದಿನ ಕೆರೆ ಭಾವಿಯ ನೀರು |ಊರೆಲ್ಲ ಬಳಕಿಗೆ ತಾವು ತರುವರು | ಪಾರಮಾರ್ಥಿಕರ ಪಾದೋದಕ ಮಾಡಲು | ನೀರೆಂದು ಅದಕಿನ್ನು ದಾರಾಡುವರು ? 1 ಕಲ್ಲಲ್ಲಿ ಲಿಂಗವ ಮಾಡಿದರೇನೊ | ಲಿಂಗವಲ್ಲದೆ ಕಲ್ಲು ಎಂಬುವರೇನೊ | ಬಲ್ಲ ಸತ್ಪುರುಷರ ಬಗೆಯನರಿತು | ತನ್ನಲ್ಲಿ ಬ್ರಹ್ಮವ ಕಂಡವನೀಗ ನರನೇನೊ 2 ಕಾಮರ ಅಡವಿಯೊಳಿರುವದಾ ತಂದು | ಕಾಮಿಸಿ ಪಾದುಕ ಮಾಡಲು ಎಂದು | ಸ್ವಾಮಿ ಸದ್ಗುರು ಭವತಾರಕ ಮೆಟ್ಟಲು | ಭೂಮಿ ಜನರಡ್ಡ ಬೀಳ್ವರಿದೇನೋ 3
--------------
ಭಾವತರಕರು
ಎಂಥ ಶೂರನೊ ರಾಮ ಎಂಥ ಧೀರನೊ ಪ ಕಂತುಹರನ ಧನುವನೆತ್ತ ಪಂಥದಿಂದ ಮುರಿದು ಬಿಸುಟ ಅ.ಪ. ಹಲವು ಶೂರರಾಜರದನು ಚಲಿಸಲಾಗದ ಧನುವ ಸುಲಭದಿಂದಲೆತ್ತಿ ಮುರಿದು ಲಲನೆ ಸೀತೆಯೊಲಿಸಿದವನು 1 ಸಕಲ ಕ್ಷತ್ರಿಯರನು ಗೆಲಿದು ಪ್ರಕಟನಾದ ಪರಶುರಾಮ ಶಕುತಿಯನ್ನು ತಾನು ಪರಮ ಯುಕುತಿಯಿಂದ ಗೆಲಿದು ಬಂದ 2 ಸಾಲು ಶಿರನ ಕೀಟವೆಂದು ಬಾಲದಲ್ಲಿ ತಂದ ವೀರ ವಾಲಿಯನೇಕ ಬಾಣದಲಿ ಲೀಲೆಯಿಂದಲಿರಿದ ಜಾಣ 3 ಹತ್ತನಾಲ್ಕು ಲೋಕಗಳನು ಸುತ್ತಿಗೆಲಿದು ಖ್ಯಾತನಾದ ಹತ್ತು ತಲೆಯ ದುಷ್ಟನನ್ನು ಕತ್ತು ಕಡಿದು ಕೆಡಹಿದವನು 4 ರಾಸಿ ದೈತ್ಯರನ್ನು ಕೊಂಡು ದೇಶವನ್ನು ಉದ್ಧರಿಸಿದ ವಾಸವಾದಿ ಸುರನುತ ರಂ- ಗೇಶವಿಠಲರೇಯನವನು 5
--------------
ರಂಗೇಶವಿಠಲದಾಸರು
ಎಂಥ ಸುಂದರವಾದ ವೃಂದಾವನಾನಿಂತು ನೋಡಲು ಮನಕೆ ಸಂತೋಷವಾಗುವದು ಪಶ್ರೀ ರಾಘವೇಂದ್ರ ಗುರುಸಾರ್ವಭೌಮರ ದಿವ್ಯಧೀರ ಗಂಭೀರ ಸುಮನೋಹರ ಸುಮೂರ್ತಿರಾರಾಜಿಸುತಿಹುದು ಮುಗಳುನಗೆ ಮುಖದಿಂದಾಶರಣಾಗತರಿಗೆಲ್ಲ ಅಭಯ ಹಸ್ತವ ನೀಡಿ 1ಪ್ರೇರಕರು ತಾವಾಗಿ ಪ್ರೇರ್ಯರೊಬ್ಬನ ಮಾಡಿಕಾರಾಗಿರನ ಕನಸು ಮನಸಿನಲಿ ಪೋಗಿಇರಬೇಕು 'ೀಗೆಂಬ ವೃಂದಾವನದಿ ಚಿತ್ರತೋರಿಸುತ ಅಂತರಂಗದಿ ನಿಂದು ಮಾಡಿಸಿದ 2ಅಡಿಗಡಿಗೆ ಮ'ಮೆಯನು ತೋರಿಸುತ ಗಲಗಲಿಗೆನಡೆತಂದು ಶ್ರೀ ಮಠವ ಹ'್ಮುಕೊಂಡಿಹರುಸಡಗರದಿ ಭಕುತರಿಂ ಸೇವೆಕೊಳ್ಳುತಲಿಹರುಬಡವರಿಗೆ ಭಾಗ್ಯ ನಿಧಿಯು ಬಂದಂತೆ ಆಯ್ತು 3ಅಲ್ಲಿ ಮಂತ್ರಾಲಯವು ಇಲ್ಲಿ ಗಾಲವಕ್ಷೇತ್ರಅಲ್ಲಿ ತುಂಗಾ ಇಲ್ಲಿ ಕೃಷ್ಣವೇಣಿಅಲ್ಲಿ ಪ್ರಹ್ಲಾದರಾಜ ಯೋಗ ಮಾಡಿದನು ಇಲ್ಲಿತಪವ ಗೈದಿಹರು ಗಾಲವ ಮರ್ಹಗಳು 4ಅಲ್ಲಿ ರಾಯರಬಂಡಿ ಇಲ್ಲಿ ಋಗಳ ಬಂಡಿಅಲ್ಲಿ ಮಂಚಾಲೆಮ್ಮಾ ಇಲ್ಲಿ ಜಗದಂಬಾಅಲ್ಲಿ ಹೊಳೆದಾಟಿದರೆ ಪಂಚಮುಖಿಪ್ರಾಣೇಶಇಲ್ಲಿ ಹೊಳೆ ದಾಟಿದರೆ ಸಂಜೀವ ಪ್ರಾಣೇಶ 5ಕಲಿಯುಗದ ಸುರಧೇನು ಕಲ್ಪತರು ಗುರುರಾಯಗಲಗಲಿಯ ಭಾಗ್ಯ'ದು ಬಂದು ನಿಲಿಸಿಹನುಕಲುಷವರ್ಜಿತರಾಗಿ ದರುಶನವ ಮಾಡಿದರೆಕರೆದು ಈಪ್ಸಿತವ ಕೊಡುವ ಪರಮ ಕರುಣಾಳು 6ಪಾಪಿ ಕೋಪಿಷ್ಠರಿಗೆ ಸೇವೆ ದಕ್ಕುವದಿಲ್ಲಮಾಂ ಪಾ' ಪಾ' ಎಂಬುವ ಭಕುತರಾತಾಪತ್ರಯವ ಕಳೆದು ಸುಪ'ತ್ರರನು ಮಾಡಿಭೂಪತಿ'ಠ್ಠಲನ ಅಪರೋಕ್ಷ ಮಾಡಿಸುವ 7
--------------
ಭೂಪತಿ ವಿಠಲರು
ಎಂಥಾ ಪಾವನ ಪಾದವೋ ಶ್ರೀರಾಮನ ದೆಂಥಾ ಚೆಲುವ ಪಾದವೋ ಪ ಸಂತತವು ಸಜ್ಜನರ ಪಾಲಿಸೆ ನಿಂತು ಧನುವನು ಧರಿಸಿ ಮೆರೆವ ಅ.ಪ ಮುನಿಪತಿ ನುಡಿ ಮನ್ನಿಸಿ ತಪೋವನಕ್ಕನುಜನೊಡನೆ ಗಮಿಸೀ ಮುನಿಯಾಜ್ಞೆಯಿಂ ಘೋರ ತಾಟಕಿಯನೆ ವಧಿಸಿ ವಿನಯದಿ ಯಜ್ಞರಕ್ಷಣೆ ಮಾಡಿ ಮುದವಿತ್ತ 1 ಘನಶಾಪವನು ಕಳೆಯೆ ಮುನಿಯಾಜ್ಞೆಯಿಂ ಘನಶಿಲೆಯ ಮೇಲಡಿಯಿಟ್ಟು ಘನತರ ಮಾನಿನಿಯನು ನಿರ್ಮಿಸಿ ಮೆರೆದ 2 ಗುಹನು ಗಂಗೆಯ ತಟದಿ ದೋಣಿಯ ತಂದು ಗಹನ ಶಂಕೆಯೊಳಂದು ಸಹಜಭಕ್ತಿಯಲಿ ನಿರ್ಮಲಗಂಗೆಯುದಕದಿಂ ದಹಹ ಪಾದರಜವನು ತೊಳೆಯಲೊಪ್ಪಿದ 3 ಹರಧನುವನು ಭಂಗಿಸಿ ಮಿಥಿಲೆಯಲಿ ವರ ವಿಕ್ರಮವ ಮೆರೆಸಿ ತರುಣಿ ಜಾನಕಿಯಂದು ಶಿರದಿ ನಿನ್ನಡಿಗಳಿ ಗೆರಗಲು ಘನ ಶಂಕೆಯಿಂ ಮಾಲೆಯರ್ಪಿಸಿದ 4 ಸಾಧುಗಳ ಪೊರೆಯೆ ಚರಣ ಪಾದುಕೆಗಳ ಶರಣ ಭರತಗಿತ್ತು ಬರಿಗಾಲಲಿ ನಡೆದ ರಘುರಾಮವಿಠಲನ5
--------------
ರಘುರಾಮವಿಠಲದಾಸರು