ಒಟ್ಟು 2142 ಕಡೆಗಳಲ್ಲಿ , 112 ದಾಸರು , 1711 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೋಡಿದ್ಯಾ ಮನವೇ ಪ. ನಾರಿಯರ ಮನವಾ ಸೆಳೆದು ಊದುತಲಿರುವನು ಅ.ಪ. ಇಂದು ಈ ಗೋವಿನ ಆನಂದವ ನೋಡಿದ್ಯಾ ಇಂದಿರೇಶನ ಪಾದಾಮೃತ ಸವಿಯುತಿರುವುದು 1 ಕಾಯ ಜನಕನ ಕೊಳಲ ಧ್ವನಿಯು ಕೇಳುತಲಿರುವುದು 2 ರಮಾವಲ್ಲಭ ವಿಠಲನು ಮುರಳಿಸ್ವರದಿಂದ ಮಾರ ಜನಕ ರಾಗದಿಂದ ಊದುತಲಿರುವನು 3
--------------
ಸರಸಾಬಾಯಿ
ನೋಡಿರಯ್ಯ ಈ ರೂಢಿಯ ಜನರೆಲ್ಲಾ ಮೂಡಲಗಿರಿವಾಸನಾ ವೆಂಕಟೇಶನಾ ಪ ಬೇಡಿದ ವರಗಳ ಭಕ್ತ ಸಮೂಹಕೆ ನೀಡುತಲಿ ಕೊನೆಗೆ ನಿಜಪದವೀವನಾ ಅ.ಪ ಹರಿಬ್ರಹ್ಮರೊಳಾವನುತ್ತಮನೆಂದು ಪರೀಕ್ಷಿಸೆ ಭೃಗುಮುನಿಯು ತೆರಳಿಬಂದು ಅಜಹರನೊಪ್ಪದೆತಾ- ಪರಮಪದಕೆ ಬರಲು ಪರಿ ಸಿರಿಯ ತೊಡೆಯ ಮೇಲೆ ಹರಿಮಲಗಿರೆ ಕಂಡು ಚರಣದಿಂದ ಹೃದಯಕೆ ತಾಡನೆ ಮಾಡಲು ಪರಮ ಭಕುತಿಯಿಂದ ಋಷಿಯ ಪೂಜಿಸಿದ 1 ಸಿರಿಕರವೀರಪುರವನೈದಲು ಧರೆಯೊಳು ವೆಂಕಟಗಿರಿಯ ಸಾರುತ- ಲ್ಲಿರೆ ವಲ್ಮೀಕದಲಿ ಸರಸಿಜಭವ ಶಿವರು ತುರುಕರುವಾಗಿ ಪಾ ಲ್ಗರೆಯೆ ವಲ್ಮೀಕದಲಿ ದೊರೆ ಚೋಳನ ಭೃತ್ಯಗೋವನು ಭಾದಿಸೆ ಶಿರದೊಳಾಂತು ನೃಪಗೆ ಶಾಪವನಿತ್ತ 2 ಮನುಜನೋಲ್ ನಟಿಸುತಲಂಬರರಾಜನ ತನುಜೆಯ ಕೈಪಿಡಿದು ನೆನೆವರಿಗೆ ತಿರುಪತಿಯೆ ವೈಕುಂಠ- ವೆನುತ ಸಾರಿ ಒಲಿದು ಘನಮಹಿಮೆಗಳನು ತೋರಿ ಸಕಲರಿಂ ಗುಣನಿಧಿ ಶ್ರೀಗುರುರಾಮವಿಠಲ ಈ ಘಣಿಗಿರಿಯೊಳಗಿರುತಿಪ್ಪ ತಿಮ್ಮಪ್ಪ 3
--------------
ಗುರುರಾಮವಿಠಲ
ನೋಡಿರೇ ನೋಡಿರಮ್ಮಾ ಚೆಲುವನಾ ನೋಡಿರೇ || ಇವ|| ರೂಢಿಗೆ ಆವನಿಜೆಯಾ ತಕ್ಕುವರನೇ ಮುದ್ದುಸ್ಮರನೇ ಪ ಪಾದ ಜಂಘಯಿಂದ ಜಾನೂರುಮಾರಾ ತ್ರಿವಳವೇ| ಹಾರ ದಿಯ ಕರ ಸರಳವೇ 1 ಮಂಡಿತದ ಕುಂಡಲವಾ| ಮೃಗಮದ ಕಿರೀಟ 2 ಆವರಾಯನಮಗನೋತಾನರಿಯೇ|ಭೂಸು| ರಾವಳಿಯೊಳಿಂದ್ಧಾರೇನು |ಅಂಗ| ದಾವ ತೇಜಮುಸುಕಿತು ಧರಿಯೇ|ತ್ರ್ಯೆಭುವನವರಕ್ಷಿಸ ಬಂದಾಹರಿಯೇ | ಮುಜ್ಜಿಮರಿಯೇ 3 ಮುಟ್ಟಿಲೀ ತಗಧನುಏಳಲಿ ಝಮ್ಮೆನೇ ನಾವು ನೆಟ್ಟನೆಪೂಜಿಪೆವು ಗೌರಮ್ಮನೇ ಎಂದು ಬಿಟ್ಟ ಮಗಳು ಬೇಡಿಕೊಂಡರು ಸುಮ್ಮನೇ ಆಡಿಯಿಟ್ಟುನಲಿದು ಬರುವ ರಾಮೊ ಘಮ್ಮನೇ ಪರಬೊಮ್ಮನೆ 4 ಬಂದು ನೋಡಿಬಿಲ್ಲನೆತ್ತಿದ್ದಾಚಕ್ಕನೇ ಅರುವಿಂದ ಲೋಚನೆ ಮಾಲಿ ಹಾಕಲು ಘಕ್ಕನೇ ವೃಂದ ಕಾಣುತ ಹೆದರಿತುಧಕ್ಕನೇ ನಮ್ಮ ತಂದೆ ಮಹಿಪತಿ ನಂದನ ಪ್ರಭು ಠಕ್ಕನೇ ಪಾಲಕ್ಕುನೇ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೋಡುವ ಬನ್ನಿರೆಲ್ಲರು ಲೋಕ ನಾಯಕ ಚೆಲ್ವ ಮೂಡಲ ಗಿರಿವಾಸ ಶ್ರೀವೆಂಕಟೇಶನ ಪ ಭೂಮಿಗೆ ವೈಕುಂಠವೆಂದು ತೋರುತ ನಿಂತ ಸ್ವಾಮಿ ಪುಷ್ಕರಣಿಯ ತೀರದೊಳು ಪ್ರೇಮದಿ ಭಕ್ತರ ಸಲಹಿಕೊಂಬುವನಂತೆ ಕಾಮಿತಾರ್ಥವನಿತ್ತು ಕಳುಹುವನಂತೆ 1 ಬ್ರಹ್ಮಾದಿ ಸುರರಿಂದ ಪೂಜಿಸಿಕೊಂಬನಂತೆ ನಿರ್ಮಲ ರೂಪದಿ ತೋರ್ಪನಂತೆ ಕರ್ಮಬಂಧಗಳನ್ನು ಕಡಿದು ಕೊಡುವನಂತೆ ಹೆಮ್ಮೆಯ ಪತಿಯೆಂದು ತೋರ್ಪನಂತೆ 2 ಆಡಿ ತಪ್ಪುವರಿಗೆ ಕೇಡ ಬಗೆವನಂತೆ ನೋಡಿಯೆ ನಡೆಯಲು ಕೊಡುವನಂತೆ ಮೂಡಿದ ಆದಿತ್ಯ ಶತಕೋಟಿ ತೇಜನಂತೆ ರೂಢಿಗೊಡೆಯ ನಮ್ಮ ವರಾಹತಿಮ್ಮಪ್ಪನಂತೆ 3
--------------
ವರಹತಿಮ್ಮಪ್ಪ
ನೋಡುವಾ ಬನ್ನಿರೆ ರಂಗಯ್ಯನ ನೋಡುವಾ ಬನ್ನಿರೇ ಪ. ಬೇಡಿಕೊಳ್ಳುವ ನಾವು ಅ.ಪ. ಕುಂಭಮಾಸದಲಿ ಭಕ್ತರು ಬಿಟ್ಟಾನಂದಮಂಟಪದಿನಿಂದು ಪೂಜೆ ಗೊಂ[ಬ] ಹರುಷದಿ ಮಂದಹಾಸದಿ ಬಂದ ಶ್ರೀರಂಗನ 1 ಹಂಸ ಯಾಳಿ ಸಿಂಹ ಆನೆಯು ಮೊದಲಾದ ಗರುಡ ಹನುಮ ಕಲ್ಪ ವೃಕ್ಷವು ಸರ್ಪವಾಹನವೇರಿ ಅರ್ಥಿಯಿಂದಲೆ ಬರುವ ಶ್ರೀರಂಗನ 2 ಶುದ್ಧದಶಮಿಯಲಿ ರಂಗಯ್ಯ ಮುದ್ದು ಸತಿಯರ ಒಡಗೊಂಡು ಅ ಲ್ಲಿದ್ದ ಮಂಟಪದಲಿ ಹರುಷದೀ ತಾನಿ[ದ್ದ] ಶ್ರೀರಂಗನ 3 ತೆಪ್ಪಮಂಟಪವ ಭಕ್ತರೆಲ್ಲ ವಿಸ್ತಾರದಲಿ ಕಟ್ಟಿ ಪತ್ನಿಸಹಿತಲೆ ತೆಪ್ಪವ ಹತ್ತಿ ಸುತ್ತಿಸುತ್ತಿ ಮೂರುಬಾರಿ ಬರುವ [ಶ್ರೀರಂಗನ] 4 ಮಧ್ಯಮಂಟಪದಿ ತಾನಿದ್ದು ಭಕ್ತರಿತ್ತ [ಸವಿಯಾದ] ಕ್ಷೀರವು ಉದ್ದಿನವಡೆ ಹುಗ್ಗಿ ಮೆದ್ದು ಬರುವ ಶ್ರೀಮುದ್ದುರಂಗನ 5 ಪುಷ್ಪಬಾಣಂಗಳು ಸುತ್ತಿಬಿಡುವ ಚಕ್ರಬಾಣಂಗಳು ನಕ್ಷತ್ರಬಾಣಂಗಳ ಲಕ್ಷ್ಮಿಯೆದುರಲರ್ತಿಯಿಂದಲೆ ನೋಡಿ ನಿಂದ ಶ್ರೀರಂಗನ 6 ತಾ ಕರುಣದಿಂದಲೆ ತೀರ್ಥಸ್ನಾನವನಿತ್ತು ಬರುವ ವೆಂಕಟರಂಗನ 7
--------------
ಯದುಗಿರಿಯಮ್ಮ
ನೋಡೊ ಮನ ಕೊಂಡಾಡೊ ಮರೆಯದಲೆ ಮನ ಚಿಂತÀ ಲ್ರೇವ ಲೇಶನ ? ಪಾಡುತಿರೆ ಕೃಷ್ಣಾತೀರದ್ವಾಸನ ಮಾಡೊ ಮಹಾತ್ಮರೆಂದೆನಿಸೊ ದಾಸರ ಜೋಡು ಪಾದಂಗಳಿಗೆ ವಂದನೆ ಪ ಅಂಜನೆಯಲ್ಲುದಿಸಿ ಕೌಸಲ್ಯಾ- ಕಂದನಂಘ್ರಿಕಮಲ ಸೇವೆಗೆ ಅಂಗದ ಮೊದಲಾದ ಕಪಿಗಳ ಸಂಗ ಬಿಟ್ವಾರಿಧಿಯನ್ಹಾರುತ ಭಂಗ ಬಡಿಸುತ ರಾವಣನ ಪುರ ಮಂಗಳಾರತಿ ಮಾಡಿ ಜಾನಕಿ ಗುಂಗುರವನಿಟ್ಟೆರಗಿ ರಾಮರಿ ಗಂಗನೆಯ ವಾರ್ತೆಗಳನರುಹಿದೆ1 ಕುಂತಿಸುತನಾಗ್ಯುದಿಸಿ ಬ್ಯಾಗನೆ ಪಂಥಮಾಡುತ ಕೌರವರ ಕುಲ- ಕಂತಕನು ನಾನೆಂದು ರಣದೊಳು ನಿಂತು ಗದೆ ಹಾಕವರ ಸವರುತ ಅಂತರಂಗದಿ ಹರಿಯ ದಿವ್ಯಾ- ನಂತ ಗುಣಗಳ ತಿಳಿದು ದ್ರೌಪದೀ- ಕಾಂತನೆನಿಸಿ ತಾ ಕರುಣನಿಧಿಗೇ- ಕಾಂತ ಭಕ್ತನೆಂದಿನಿಸಿದಾತನು 2 ಮಧ್ಯಗೇಹಭಟ್ಟರಲ್ಲಿ ಮಗನಾ- ಗಿದ್ದ ಸುಜನರಭೀಷ್ಟದಾಯಕ ಗೆದ್ದು ಮಾಯಾವಾದಿಗಳನೆ ಪ್ರ ಸಿದ್ಧಿನೆನಿಸಿದೆ ಸರ್ವಲೋಕದಿ ಶುದ್ಧ ಜ್ಞಾನಾನಂದತೀರ್ಥರು ಮಧ್ವಮತದ ಬಿರುದನೆತ್ತಿದ ಪದ್ಮಪತಿ ಭೀಮೇಶಕೃಷ್ಣಗೆ ಪರಮಭಕ್ತನೆಂದೆನಿಸಿದಾತನು 3
--------------
ಹರಪನಹಳ್ಳಿಭೀಮವ್ವ
ಪ(ಪಾ)ವನಾ ಗುರು ಪವಮಾನ ಪ ಪಾವನ ಗುರು ಪವಮಾನ ದೇವ ಅವಾವಕಾಲದಿ ಸಲಹುವ ಕರುಣಿ ಕೃಪಾ ವಲೋಕನದಿಂದ ಕಾವುದೆಮ್ಮನು ಗುರುಅ.ಪ ಪರಮ ಮಹಿಮ ಶ್ರೀ ಮುಕುಂದಾ ನಿಂದ ಕರುಣಾದಿಂದ ಜನಿಸಿಬಂದ ಬಂದು ಸರ್ವಜೀವರೊಳಾನಂದದಿಂದ ಕರಣದೊಳು ನಿಂತಚಂದಾ ||ಆಹ|| ನಿರುತದಿ ಹರಿಪ್ರೇರಣೆಯಿಂದ ಕಾರ್ಯವ ಪರಿಪರಿಮಾಡಿ ಶ್ರೀಹರಿಗರ್ಪಿಸುವ ದೇವ 1 ತರುಚ್ಛಾಯೆಯಂತೆ ಶ್ರೀ ಹರಿಗೆ ನೀನೆ ಪರಮ ಪ್ರತಿಬಿಂಬನಾಗೆ ಸರ್ವ ಚರಾಚರಾದಿಗಳೊಳಗೆ ಅದರ ದರಯೋಗ್ಯತೆಗನುವಾಗೇ ಆಹ ನಿರುತಕಾರ್ಯವ ಮಾಳ್ವೆ ಅಣುಮಹದ್ರೂಪನೆ ಪರಿಪರಿ ಪ್ರಾಣಾದಿಗಳ ಕಾರ್ಯ ನಿನ್ನಿಂದ2 ಚಕ್ರವರ್ತಿ ಆಜ್ಞೆಯಂತೇ ಪುರದ- ಧಿಕಾರಿನಿಯಮದಂತೇ ಅದಕ- ಧಿಕೃತರಿರುವರಂತೇ ಅಂತೆ ತ- ತ್ವ ಕಾರ್ಯವು ನಿನ್ನಿಚ್ಛೆಯಂತೇ ||ಆಹ|| ಮಿಕ್ಕಾದ ತತ್ವರಿಗೆ ತಕ್ಕ ಕಾರ್ಯವನಿತ್ತು ನಿ- ಯುಕ್ತರ ಮಾಡುವೆ ಹರಿಉಕ್ತಿಯ ಮೀರದೆ 3 ಇಭರಾಜವರದನ ಪ್ರೀಯ ನೀನೆ ಪ್ರಭುವಾಗಿರುವೆ ಸರ್ವಕಾಯದೊಳು ಶುಭಾಶುಭಂಗಳ ಕಾರ್ಯ ನಿತ್ಯ ನಿಬಿಡ ನಿನ್ನಿಂದಲೆ ಜೀಯಾ ||ಆಹ|| ಅಬುಜಾಂಡದೊಳಗೆಲ್ಲ ಪ್ರಬಲ ನಿನ್ನಯ ಶೌಂiÀರ್i ಅಬುಜಭವನ ಪದಪಡೆವ ಪ್ರಭುವೆ ನೀನು4 ಪ್ರಾಣಾದೇವ ನಿನ್ನಿಂದ ಪಂಚ- ಪ್ರಾಣಾದಿರೂಪಗಳಿಂದ ತನು ಸ್ಥಾನದಿಭೇದಗಳಿಂದ ಜಡ ಪ್ರಾಣಭೂತ ಪಂಚದಿಂದಾ ||ಆಹ|| ಕಾಣಿಸಿಕೊಳ್ಳದೆ ಜಾಣತನದಿ ಪುಣ್ಯ ಪಾಪ ಜೀವಗೆ ಉಣಿಸುತಲಿರುವೆಯೊ5 ಪಾಯೂಪಸ್ಥದಿ ಅಪಾನ ಮುಖ ನಾಸಿಕ ಶ್ರೋತ್ರ ಪ್ರಾಣಾ-ನಾಭಿ ಅಯನವಾಗಿರುವ ಸಮಾನಾ ಇನ್ನು ಪಯಣವು ನಾಡಿಯೊಳು ವ್ಯಾನ ||ಆಹ|| ಒಯ್ದುಕೊಡುವ ಫಲಕಾರ್ಯವೆಲ್ಲ ಉದಾನನಿಂದ ಕೂಡಿ ಜೀಯ ನೀ ನಡೆಸೂವೆ 6 ಸೃಷ್ಟಿಯೊಳು ನೀ ಪ್ರವಿಷ್ಟನಾಗಿ ಸೃಷ್ಟಿಕಾರ್ಯದೊಳು ಚೇಷ್ಟಾ ಮಾಡಿ ಸೃಷ್ಟೀಶನೊಲಿಸಿ ಪ್ರತಿಷ್ಠಾ ತತ್ವ ಶ್ರೇಷ್ಠರೆಲ್ಲರ ಮನೋಭೀಷ್ಠ ||ಆಹ|| ತುಷ್ಟಿಪಡಿಸಿ ಪರಮೇಷ್ಠಿಯಾಗುವೆ ಕಪಿ ಶ್ರೇಷ್ಠನೆ ಉರಗಾದ್ರಿವಾಸವಿಠಲನದೂತ 7
--------------
ಉರಗಾದ್ರಿವಾಸವಿಠಲದಾಸರು
ಪಂಕಜನಯನ ಪಾವನ್ನ ಸುಖ ಸಂಕೂಲ ಮೂರುತಿ ಲಾಲಿಸು ಚಿನ್ನಾ ವೆಂಕಟ ನಿಲಯಾ ಹಸೆಗೇಳು ಪ ಕಮಲ ಸಂಭವಗಿತ್ತ ಕಮನೀಯ ಕಾಯ ಸುಮನಸ ಜನತೆ ಸುಧೆಯನುಣಿಸಿ ಭೂಮಿ ಚೋರನ ಕೊಂದ ಮುನಿಗಳೊಡೆಯ ವಿಮಲ ಮೂರುತಿ ಹಸೆಗೇಳೋ 1 ನರಹರಿ ರೂಪದಿ ಬಂದು ದೈತ್ಯ ನುರವ ಬಗೆದು ವಟು ರೂಪದಿ ನಿಂದ್ಯೋ ದುರುಳ ರಾಯರನೆಲ್ಲ ಕೊಂದು ಲಂಕಾ ಪುರದಾಧಿಪತಿಯ ಸದೆದ ದಯಸಿಂಧೋ ಕರುಣಾಸಾಗರನೆ ಹಸೆಗೇಳೋ 2 ಯದುಜನೆನಿಸಿ ಎಲ್ಲಾ ಖಳರ ಜಯಿಸಿ ಸುದತೇರ ವ್ರತವ ಕೆಡಿಸಿದತಿ ಧೀರ ಕುದುರೆನೇರಿದ ಮಾಧಾರಾ ನಿನ್ನ ಅದುಭೂತ ಬಲ್ಲಿದಕ್ಕೆಣೆಗಾಣೆನುದಾರಾ ಉದಧಿ ಶಯನನೆ ಹಸೆಗೇಳು 3 ಅಪ್ರತಿಮಲ್ಲ ಅನಂತಾ ಸುಹಜ ನ ಪ್ರೀಯಾ ಸುರಪತಿ ಸಿರಿದೇವಿ ಕಾಂತಾ ಸ್ವ ಪ್ರಕಾಶಿತನೆ ಧೀಮಂತಾ ಅತಿ ಕ್ಷಿಪ್ರದಿ ಭಕ್ತರ ಪೊರೆವತಿ ಶಾಂತಾ ಸುಪ್ರದಾಯಕನೆ ಹಸೆಗೇಳೋ 4 ಪರಮ ಪುರುಷ ಪುಣ್ಯನಾಮಾ ಪರ ಪುರಷೋತ್ತಮ ಪರಿಪೂರ್ಣ ಕಾಮಾ ಶರಣರ ಭವವನ ಧೂಮಾ ಕೇತು ಕರಿಯ ಬಲ್ಲೆನೆ ಕಾಮಿತರ ಕಲ್ಪದ್ರುಮಾ ಕರಿರಾಜವರದಾ ಹಸೆಗೇಳೋ 5 ನಿತ್ಯ ಅತ್ಯಂತ ಮಹಿಮನೆ ಆಪ್ತ ಜನರ ಕ್ಲೇಶ ಕಳೆವ ಸುಕೀರ್ತೀ ಚಿತ್ತಜ ಜನಕ ಹಸೆಗೇಳೋ 6 ಕ್ಷೀರಾಬ್ಧಿವಾಸಾ ಚಿನ್ಮಯನೆ ನಿನ್ನ ಪಾರ ಮಹಿಮೆ ತಿಳಿವವನಿಹನೆ ಮೂರು ಗುಣ ರಹಿತನೆ ದೋಷ ದೂರ ವಿದೂರ ಶಿರಿದೇವಿಯೊಡನೆ ಬಾರಯ್ಯ ಹಸೆಯ ಜಗುಲಿಗೆ7 ವ್ಯಾಳಮರ್ದನನೆ ವಿಗಮನಾ ತ್ರಿ ಶೂಲ ಪಾಣಿಯ ಓಡಿಸಿದ ಖಳನಾ ಸೋಲಿಸಿದಪ್ರತಿಸುಗುಣ ಹೇಮ ಲಲಿತಾಂಗ ಹಸೆಗೇಳೋ 8 ಅಗಣಿತ ಜೌದಾರ್ಯ ಸಾರಾ ನಿನ್ನ ಪೊಗಳ ಬಲ್ಲೆನೆ ಪಾತಕದೂರಾ ನಗರಾಜನುತ ನಿರಾಧಾರ ಭವಾದಿಗಳಿಂದ ವಂದ್ಯನೆ ನವನೀತ ಚೋರ ಜಗನ್ನಾಥ ವಿಠಲ ಹಾಸೆಗೇಳೋ9
--------------
ಜಗನ್ನಾಥದಾಸರು
ಪಕ್ಷಿ ಬಂದಿದೆ ಗಂಡಭೇರುಂಡ - ತನ್ನಕುಕ್ಷಿಯೊಳು ಈರೇಳು ಜಗವನಿಂಬಿಟ್ಟಂಥ ಪ ಜಾತಿ ಸೂತಕವೆಂಬ ತ್ರಿಮಲಕ್ಕೆ ಶೂಲದಂತಿಹ ಪರವಸ್ತು ಅ ತಿರುಮಂತ್ರೋದಯವೆಂಬಾಸನವನೆ ಪೊತ್ತು ತಾಹರುಷದಿಂದ ವೈಷ್ಣವರೆಡೆಯ ಪಾಡಿಪರವ ತೋರುವೆನೆಂದು ಪಾಕವನೆತ್ತುತಾಹರಿಹರ ಬ್ರಹ್ಮಾದಿಗಳ ಪುಟ್ಟಿಸಿದಂಥ1 ಅಕಾರ ಉಕಾರ ಮಕಾರ ಸಾಕಾರದಿಂದಪರಮ ರೂಪವ ತಾಳಿಆಕಾರ ಕ್ರಿಯಾ ನಾಮ ಮಕಾರವನುಓಂಕಾರದಿಂದ ಪುಟ್ಟಿಸಿದಂಥ ಪರವಸ್ತು 2 ಪತಿ ತಿರುವಕೋವಲೂರಿನೊಳಿರುವಂಥಾದಿಕೇಶವರಾಯ ತಾನಾದ ಪರವಸ್ತು 3
--------------
ಕನಕದಾಸ
ಪಂಚಮಿಯ ದಿನ ವಿಭವ ನಮ್ಮ ಶ್ರೀನಿವಾಸನ ಮಹಾತ್ಮವ ಮಾನಿನಿ ರನ್ನೆ ನೀ ಪೇಳೆ ಭಕ್ತಾ- ಧೀನದ ಚರಣದ ಲೀಲೆ ಭಾನು ಉದಯದಲಿ ವೀಣಾದಿ ಸು- ಗಾನ ವಾದ್ಯ ನಾನಾವಿಧ ರಭಸದಿ1 ಎತ್ತಲು ನೋಡಿದಡತ್ತ ಜನ- ಮೊತ್ತವಿಲಾಸವಿದೆತ್ತ ಚಿತ್ತದಿ ನಲಿನಲಿದಾಡಿ ತೋಷ- ವೆತ್ತಿರುವನು ಒಟ್ಟುಗೂಡಿ ಸುತ್ತುಮುತ್ತು ಒತ್ತೊತ್ತಿಲಿಹರು ವಿ- ಪ್ರೋತ್ತಮ ಶ್ರೀಹರಿಭಕ್ತರ ಮಯವಿದು2 ಚಾಮರ ಛತ್ರ ಸಿಗುರಿಯು ಜನ- ಸ್ತೋಮ ಪತಾಕೆ ತೋರಣವು ಹೇಮದ ಕಂಚುಕಿ ಈಟಿ ಗುಣ- ಧಾಮನ ಬಿರುದುಗಳ್ ಕೋಟಿ ಆ ಮಹಾಭೇರಿ ಪಟಹ ನಿಸ್ಸಾಳಕ ಸಾಮಗಾನ ಸಾಮ್ರಾಜ್ಯವೋಲಿಹುದು3 ಬಾಲರು ವೃದ್ಧ ಯೌವನರು\ಜನ- ಜಾಲವೆಲ್ಲರು ಕೂಡಿಹರು ಲೋಲ ಸ್ರೀಮುಂದ್ರಾಂಕಿತದಿ ಬಹು ವಿ- ಶಾಲ ದ್ವಾದಶನಾಮ ಮುದದಿ ಆಲಯದೊಳಗಿಹ ಬಾಲಕಿಯರು ಸಹ ಸಾಲಂಕೃತ ಸಮ್ಮೇಳದಿ ನಲಿವರು4 ಒಂದು ಭಾಗದಿ ವೇದಘೋಷ ಮ- ತ್ತೊಂದು ಭಾಗದಿ ಜನಘೋಷ ಇಂದಿನ ದಿನದತಿಚೋದ್ಯ ಏ- ನೆಂದು ವರ್ಣಿಸುವದಸಾಧ್ಯ ಚಂದಿರಮುಖಿ ಯಾರೆಂದೆನಗುಸುರೆಲೆ ಮಂದರಧರ ಗೋವಿಂದನ ಮಹಿಮೆಯ5 ಊರ್ವಶಿ : ಕೇಳಿದ್ಯಾ ನಳಿನಾಕ್ಷಿ ಶ್ರೀಹರಿಲೀಲೆ ಪೇಳಲೇನದಾ ಮೂರ್ಲೋಕದೊಳಗೀ ವಿ- ಶಾಲವ ನಾ ಕಾಣೆಪ. ಸೋಜಿಗ ಸೌಭಾಗ್ಯ ಸಂಪದಕಿದು ಬೀಜ ಕಾಣೆಲೆ ರಾಜೀವನಾಭನ ಪೂಜಾವಿನೋದದಿ ರಾಜವದನೆ ವನಭೋಜನದಿಂದಿನ1 ನೇತ್ರದ ಕಲ್ಮಷವಡಗುವದು ಪವಿತ್ರವಾಗಿಹ ಗೋತ್ರಕುಮಾರಿ ಪ್ರೀತ್ಯರ್ಥದಿ ಕೊಟ್ಟಿಹ ರಾತ್ರಿ ಪೂಜೆ ಗೈವ ಮಾತ್ರದಿ ಪೊರಟರು2 ನೂತನವೆಂದು ನೀ ಪೇಳುವಿ ಚಂದಿರ ಮುಖಿ ಜನಸಂದಣಿಗಳು ಮಹಾ ಮಂದಿ ಓಲೈಸುವರಿಂದು ಮುಕುಂದನ3 ಬಾರೆ ನಾರೀಮಣಿ ವೈಯ್ಯಾರೆ ನೀರೆ ಬಾರೆಪ. ನಿನ್ನಿಂದಾಯಿತ್ತು ಪುಣ್ಯ ಸಂಪಾದನೆ ಕಣ್ಣಾರೆ ಕಾಣುವ ಯೋಗಭೋಗ1 ಎನಗತಿ ಮನವು ನಿನಗತಿ ಛಲವು ಜನುಮಾಂತರ ಪುಣ್ಯವೈಸೆ ನೀ2 ರಂಭೆ : ಏನಮ್ಮ ಬಾರಿತ್ತಲು ನೋಡೀತನ್ಯಾರಮ್ಮಾ ಭಾನುಕೋಟಿ ಪ್ರಕಾಶದಿಂದ ಮೆರೆವನಮ್ಮಾಪ. ಅನವರತದಿಂದ ಬರುವ ಪುರುಷನಲ್ಲ ಮೀನಕೇತನ ಶತರೂಪ ಕಾಣೆ1 ನೂತನ ಪುರುಷನಿವನ್ಯಾರೆಂದರಿಯೆನಮ್ಮಾ ಶಾತಕುಂಭದ ಮಂಟಪವೇರಿ ಬರುವನಮ್ಮಾ2 ಸುರುಚಿರಫಣಿಪ ಪೆಡೆ ಶಿರದೊಳಿರುವದಮ್ಮಾ ತರತರ ರತ್ನವರದ ಬಾಯೊಳಿರುವದಮ್ಮಾ3 ಕೊರಳೊಳು ಕೌಸ್ತುಭವ ಧರಿಸಿಕೊಂಡಿಹನಮ್ಮಾ ಪರಮ ಪುರುಷನಂತೆ ತೋರುವನು ಅಮ್ಮಾ4 ಬಾಲಾರ್ಕನಂತೆ ಮುಖ ಪ್ರಜ್ವಲಿಪುದು ನೀಲಮಾಣಿಕ್ಯ ಕಾಂತಿಯ ಸೋಲಿಪುದು5 ತೋರಲರಿಯೆ ಕಾಲಿಗೆರಗುವೆನು ಪೇಳಬೇಕು ಸಖಿಯೆ6 ಕರದೊಳು ಶಂಖಚಕ್ರವ ಧರಿಸಿಕೊಂಡಿಹನಮ್ಮಾ ಬೆರಳೊಳು ವಜ್ರದುಂಗುರವನಿಟ್ಟವನಮ್ಮಾ7 ವರರತ್ನಖಚಿತದಾಭರಣದಿಂದ ಮೆರೆವ ಚರಣ ಸರೋಜದೊಳು ರೇಖೆಯಿಂ ಶೋಭಿಸುವ 8 ವಲ್ಲಭೆಯರ ಸಹಿತುಲ್ಲಾಸದಿ ಬರುವ ಖುಲ್ಲರ ಮಾನಸಕೆ ಝಲ್ಲೆನಿಸಿ ಮೆರೆವ9 ಬಲ್ಲಿದ ಪುರುಷನಿವನೆಲ್ಲಿಂದ ಬಂದ ಎಲ್ಲವ ಪೇಳೆಲೆಗೆ ನಲ್ಲೆ ಸದಾನಂದ10 ಊರ್ವಶಿ : ನೋಡು ನಿತ್ಯಾನಂದಕರನ ಮೂಡಗಿರಿಯಿಂದೋಡಿ ಬಂದನ ನೋಡೆಪ. ಛಪ್ಪನ್ನೈವತ್ತಾರು ದೇಶ ಸರ್ಪಶೈಲ ರಾಜವಾಸ ಚಪ್ಪರ ಶ್ರೀ ಶ್ರೀನಿವಾಸ1 ತಿರುಗುತ್ತಿಪ್ಪಾ ತಿರುಮಲೇಶ ಶರಣ ರಾಮನ ಭಕ್ತಿಪಾಶ ದುರುಳಿನಲಿ ನಿಂದಿರ್ಪಶ್ರೀಶ ತರಿಸುವನು ಕಾಣಿಕೆ ವಿಲಾಸ2 ಪಟ್ಟದರಸನಾದ ದೇವ ಸೃಷ್ಟಿಯಾಳುವಜಾನುಭಾವ ದೃಷ್ಟಿಗೋಚರವಾಗಿ ಕಾಯ್ವ ಇಷ್ಟವೆಲ್ಲವ ಸಲಿಸಿ ಕೊಡುವ 3 ಊರ್ವಶಿ : ಬಂದ ಗೋವಿಂದ ಸಾನಂದದಿ ಭಕ್ತರ ವೃಂದ ನೆರಹಿ ವನಕೆ ಅಂದಣವೇರಿ ಮುಕುಂದನೊಲವಿನಲಿ ಕುಂದಣ ಮಂಟಪವೇರಿ ಮತ್ತೊಬ್ಬನು ಸಂದರುಶನವಂ ನೀಡುತ ಯಿಬ್ಬರು ಒಂದಾಗುತ್ತಾನಂದವ ಬೀರುತ್ತ 1 ಅಕ್ಕ ನೀ ನೋಡು ಬಹುಮಾನದಿ ಸಿಕ್ಕಿದಿ ಬಿರುದು ಪೊತ್ತಾ ಉಕ್ಕುವದತಿ ತೋಷ ಸ್ತುತಿಪಾಠಕ ಜನಗಳ ಮಿಕ್ಕಿ ನೊಡುವ ನೋಟಕೆ ಮನಸಿನೊಳು ಝಕ್ಕೆನ್ನುವ ಕ್ಷಿತಿಗಕ್ಕಜ ತೋರುತ್ತಾ 2 ಪವಿತ್ರ ನಿಶಾನಿಧಾರಣಾ ಪವಿತ್ರಗೈಯುವ ಕಾರಣ ಮಿತ್ರಮಂಡಳವನು ಮೀರಿ ಪೊಳೆವುತಿಹ ರತ್ನಖಚಿತ ಮಂಟಪದಲಿ ಮಂಡಿಸಿ ಧಾತ್ರಿಯೊಳಗೆ ಅನ್ಯತ್ರವಿಲ್ಲೆಂಬುವ ಕೀರ್ತಿಯ ಧರಿಸಿ ಜಗತ್ರಯಪಾವನ 3 ನಿಸ್ಸಾಳ ಪಟಹ ಭೂರಿ ಜನ ಜಾಲ ಕೂಡಿರುವ ಮೇಳವಿಸುತ್ತನುಕೂಲಿಸಿ ಬಹು ಬಿರು ದಾಳಿಗೆ ಸಂಭ್ರಮದೇಳಿಗೆಯಿಂದಲಿ ಕೋಲು ಪಿಡಿದು ಓಹೋಯೆಂಬಂಥ ವಿ- ಶಾಲ ಭಕ್ತರ ಮೇಲು ಸಂತೋಷದಿ 4 ದೇಶದೇಶದ ಜನರು ನಾನಾ ವಿಧ &ಟಿ
--------------
ತುಪಾಕಿ ವೆಂಕಟರಮಣಾಚಾರ್ಯ
ಪಡಿ ಇನಿಯನ ವಶದಿ ಮನಸಿಜನಯ್ಯನ ದಯದಿಂದ ಬಾಲೆ ಪ ಮನೆಗೆಲಸಗಳನು ದಿನಗೈಯುತ ಬಲು ವಿನಯ ಸೌಶೀಲ್ಯದಿ ವನಿತೆಯರೊಳು ನೀ 1 ಪತಿಯನು ಪರದೇವತೆಯೆಂಬುವ ಮಹಾ ಮತಿಯಲಿ ಸೇವಿಸಿ ಸುತರನು ಪಡೆದು ನೀ 2 ಗುರುಜನರಿಗೆ ಸದಾಶಿರಬಾಗುತ ಬಹು ಸರಸದಿ ಸದ್ಗುಣಾಭರಣಗಳಿಂದ ನೀ 3 ರತಿಪತಿ ಪಿತನಿಗೆ ಪ್ರತಿಮೆಗಳೆನ್ನುತ ಅತಿಥಿಗಳನು ಸಂತತ ಸತ್ಕರಿಸುತ 4 ಗಿರಿಜೆಯ ಪೂಜೆಯನು ನಿರುತದಿಗೈಯುತ ಸಿರಿಕಾರ್ಪರ ನರಹರಿಯನು ಸ್ಮರಿಸುತ 5
--------------
ಕಾರ್ಪರ ನರಹರಿದಾಸರು
ಪತಿ ಎನಿಸಿ | ವೀಣೆಯನು ಪಿಡಿಯುತ್ತಲೀ ||ಕ್ಷೋಣಿ ಬೆಳಗಾವಿ ಬ್ರಾಹ್ಮಣ | ಶ್ರೇಣಿಯಲಿ ನೀ ನಿಂತೆಯೋ ||ಕಾಣೆನೊ ನಿನಗೆಣೆಯ | ಕಾಣೆ ಕರುಣಿಗಳರಸ ಜ್ಞಾನಿ ಜನ ಮನೊವಾಂಛಿತಾ |ಮಾಣದಲೆ ನೀ ನೀವೆ | ಪ್ರಾಣ ಪದಕನೆ ಹನುಮಜ್ಞಾನ ಭಕುತಿಯ ಬೇಡುವೇ 1 ವಾತ ವ್ರಾತ ಕಿನ್ನಣೆಯುಂಟೆಮಾತುಳಾರಿಯ ದೂತ ಜಯೆ ಜಾತಾ ||ಸೋತು ಬಲು ಭವದೊಳಗೆ | ಆರ್ತನಾಗುತ ನಿನ್ನ ಕಾತುರೆತಲಿಂ ಪ್ರಾರ್ಥಿಪೇ 2 ವೃಂದಾವನಾರ್ಯರಿಂದ್ವಂದಿತವು ಎಂದೆನಿಪ ವೃಂದಾವನಿಲ್ಲಿ ಇಹುದೂ |ವೃಂದಾರ ಕೇಂದ್ರ ಜನ | ಬಂದಿಲ್ಲಿ ರಾಜರ |ವೃಂದಾವನರ್ಚಿಸುವರೋ |ನಂದನನು ದಶರಥಗೆ | ನಂದನನು ದೇವಕಿಗೆ | ನಂದನನು ಸತ್ಯವತಿಗೇ |ಒಂದೊಂದು ಹಯಶೀರ್ಷ | ಅಂದರೂಪಗಳಿಂದ ನಂದನನು ಭಕ್ತ ಜನಕೇ 3 ಜೀವಾಂತರಂಗದಲಿ | ಜೀವಾಂತರಾತ್ಮನನ ದ್ವೈವಿಧ್ಯ ರೂಪ ಸೇವಾ |ತಾವಕದಿ ನೀ ಮಾತರಿಶ್ವಾಖ್ಯನೆಂದೆನಿಸಿ ಸೇವಿಸುವೆ ಘರ್ಮೋಕ್ತದಿ ||ಜೀವ ಸಕಲೋತ್ತಮನೆ | ದಾವ ಶಿಖಿ ಭವವನಕೆದೇವ ಬಲಿಭುಜ ಮಾರುತೀ |ದೇವಾದಿ ವಂದ್ಯ ಗುರು | ಗೋವಿಂದ ವಿಠ್ಠಲನಭಾವದಲಿ ತೋರಿ ಪೊರೆಯೊ 4
--------------
ಗುರುಗೋವಿಂದವಿಠಲರು
ಪತಿ ಪಾಹಿ | ರುದ್ರದೇವ ಪ ರುದ್ರದೇವ ಅದ್ರಿಜೆ ರಮಣನೆ | ಭದ್ರವ ಕೊಟ್ಟುದ್ದರಿಸೆನ್ನ ಅ.ಪ. ಭುಜಗ ಪಾವನಿ | ಗಂಗಾಧರನೇ 1 ದಿನಮಣಿ ಸೋಮ | ಅನಲೇಕ್ಷಣನೆಮನುಜ ಸಿಂಹಾಂಕಿತ | ಅನಘನ ಸೇವಿಪ2 ರಾಮ ತಾರಕ | ಆ ಮಹ ಮಂತ್ರವಭಾಮಿನಿ ಗಿರಿಜೆಗೆ ಪ್ರೇಮದಿಂದೊರೆದೆ 3 ಕುಸುಮ ಕುಸುಮ 5ಭೃಂಗ 4 ಸುರವರೇಣ್ಯ ಗುರು |5ೂೀವಿಂದ ವಿಠಲನಕರುಣವ ದೊರಕಿಸು | ಹರ ಮಹದೇವ 5
--------------
ಗುರುಗೋವಿಂದವಿಠಲರು
ಪತಿ ವಿಠಲ ನೀನಿವಳ ಕಾಯಬೇಕೊ ಪ ಕರುಣಾದ್ರ್ರ ಹೃದಯ ನಿನ್ನಡಿಗೆ ಮೊರೆಯಿಡುವೇ ಅ.ಪ. ಮಾನವ ಸುಜನ್ಮದಲಿ ನೀನಿವಳ ತಂದಿರುವೆಜ್ಞಾನಸಾಧನವ ಮಾರ್ಗ ಕಾಣದಲೆ ಬರಿದೇ |ಮಾನಿನಿಯ ಆಯುಷ್ಯ ಬರಿದೆ ಪೋಯಿತು ಹರಿಯೆನೀನಾಗಿ ಸಲಹಿವಳ ದೀನಜನ ಬಂಧೋ 1 ಪಂಚಭೂತಾತ್ಮಕದ ಈ ದೇಹ ಸ್ಥಿರವಲ್ಲಕೊಂಚಮತಿಯನು ಕಳೆದು ಸರ್ವಾಂತರಾತ್ಮ |ಪಂಚಭೇದವನರುಹಿ ಮುಂಚೆ ತರತಮ ತಿಳಿಸಿಪಂಚ ಪಂಚಾತ್ಮಕನೆ ಸಲಹ ಬೇಕಿವಳಾ 2 ಹರಿಗುರೂ ಸದ್ಭಕ್ತಿ ಮರಳಿ ವೈರಾಗ್ಯವನೆ ಕರುಣಿಸೂವುದು ಹರಿಯೆ ದುರಿತಾಂಧ ರವಿಯೆ ಹರಿಗೋಲುಭವನಿಧಿಗೆ ಎಂದೆನಿಪ ತವನಾಮ ಸ್ಮರಣೆ ಸಂತತವಿತ್ತು ಪೊರೆಯ ಬೇಕಿವಳಾ 3 ಜೇನು ಸವಿಯಂತಿಪ್ಪ ಆನಂದಕರ ಶಾಸ್ತ್ರಮಾನನಿಧಿ ಮಧ್ವಾಖ್ಯ ಸಾನುರಾಗದಲೀ |ಕ್ಷೋಣಿಸುರರುದ್ಧಾರ ಕಿತ್ತಿಹುದ ನೀನರುಹಿಜ್ಞಾನಗಮ್ಯನೆ ಕಾಯೊ ಪ್ರಾಣಾಂತರಾತ್ಮ 4 ಇಂದೀವರಾಕ್ಷಹರಿ ದ್ವಂದ್ವಗಳ ಸಹನೆಯನುತಂದೆ ಕರುಣಿಸಿ ಕಾಯೊ ಕಂಜದಳ ನೇತ್ರಅಂದು ಇಂದಿಗು ಮುಂದೆ ಎಂದೆಂದು ಗತಿ ನೀನೆಎಂದು ನಂಬಿಹೆ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಪತಿತಪಾವನ ಕರಿವದನ ನಾರಾಯಣ ಮತಿಗೆಮಂಗಳವೀಯೋ ಮುನಿಜನಾಭರಣ ಪ ಇತರವ್ಯಾಕುಲಗಳ ಮಥನವು ಮನದೆ ಬಹಳ ವ್ಯಥೆಯ ತೋರುತ್ತಲಿದೆ ಗತಿಯಾವುದೊ ಹರಿಯೆ ಸತತ ನಿನ್ನ ಗುಣಕಥನ ಮಾಡುವ ಅತಿಶಯ ಮಾರ್ಗದಿ ಕ್ಷತಿಯೊಳು ಪೊರೆಯ್ಯೆ 1 ಧ್ರುವ ಪ್ರಹ್ಲಾದ ನರ ದ್ರೌಪದಿ ಅಂಬರೀಷ ಇವರ ಕಷ್ಟಗಳಿಂದ ಪಾರುಗಾಣಿಸಿದೆ ಅವನೀಭಾರವನಿಳುಹುವ ದೊರೆಯೇ ಕುವಲಯನೇತ್ರ ಕುಮಾರನ ಕೈಪಿಡಿ2 ಶ್ರೀರಮಣೀವರ ಸಾರಗುಣಾಕರ ಸಿರಿ ಜಾಜೀಶ್ವರ ಕೋರುತಿರುವೆಮಗೆ ತೋರಿಸು ತವಪದ ನಾರದ ಮುನಿನುತ ಸಾರುತೆ ನಮಿಪೆ 3
--------------
ಶಾಮಶರ್ಮರು