ಒಟ್ಟು 3226 ಕಡೆಗಳಲ್ಲಿ , 122 ದಾಸರು , 2221 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಂಗಳೊಡೆಯರು ತಂಗಳೊಡೆಯರೇ ನಿಮ್ಮ | ಮಹಿಮೆಗೇನೆಂಬೆಅಂಗವನೆ ಮರೆಮಾಚಿ | ಮಂಗಳವಕೊಂಡಾ ಪ. ನಾಮ ನಿರ್ದೇಶ ಜನ | ಸ್ತೋಮಕಾಕರವೆಂದುನಾಮವನೆ ತೊರೆಯುತ್ತ | ಗೂಢಭಾವದಲೀ |ಭೀಮ ತೀರದಿ ನಿಂದು | ತಪವ ಗೈಯ್ಯುತಲಿರುವೆಸೀಮೆ ಮೀರಿದ ಮಹಿಮ | ದಯೆದೋರೊ ಎನಗೆ 1 ಬೋಧ | ಮೋದದಿಂ ತಿಳಿಸುತ್ತಸಾಧನವ ಗೈಸೆನಗೆ | ಹೇದಯಾ ಪೂರ್ಣ 2 ವೈರಾಗ್ಯ ಹರಿ ಭಕುತಿ | ವೀರಮೂರುತಿ ಎನಿಸಿಮಾರನ್ನ ನೀ ಗೆಲಿದು | ಮೋಕ್ಷಕಾಮೀಸಾರತಮನೂ ಗುರೂ | ಗೋವಿಂದ ವಿಠಲೆಂದುಬಾರಿಬಾರಿಗೆ ಸ್ಮರಿಸಿ ಆನಂದ ಗೊಳ್ವಾ 3
--------------
ಗುರುಗೋವಿಂದವಿಠಲರು
ತತ್ತ ಪ್ರತಿಪಾದನೆ ದೂಡಿಸುವ ಸಂಸಾರ ದೇವ ರೂಢಿಯೊಳು ಭÀಕ್ತರೊಡನಾಡಿ ರಂಗ ಪ. ಭವ ನಾವಿಕನಾಗಿ ಗಾಢನೆ ನಡೆಸುತ ಜೋಡು ಕುಂಡಲಧರ ಅ.ಪ. ಭಕ್ತಿರಸವೆಂಬ ತೊಗಲನ್ನು ಹೂಡಿ ಯುಕ್ತಿಲಿ ಮಣ್ಣಿನ ಬೊಂಬೆಯೊಳಗಾಡಿ ಪರ ಶಕ್ತಿಯೆಂಬ ಹೊಲಿಗೆಯನ್ನು ಕೂಡಿ ಭಕ್ತಿಲಿ ಸ್ತುತಿಸುವ ಭಕ್ತರೊಳಾಡಿ 1 ಗುರುಹಿರಿಯರ ಸೇವೆಯೆಂಬ ಮನಕೊಟ್ಟು ಸರಸದಿ ಮನೆಗೆಲಸವ ಗುಟ್ಟಿಲಿಟ್ಟು ಸರಸಿಜನಾಭನÀ ಮನಸಿನೊಳಿಟ್ಟು ಹರುಷದಿ ಸ್ತುತಿಪರ ಸಲಹುವನೆಂಬೊ ಬಿರುದಿಟ್ಟು2 ಕರುಣಾಮಯನೆಂಬೊ ಪೆಸರನು ಇಟ್ಟು ಹರುಷದಿ ಕೂಗುವ ಭಕ್ತರೊಳಗೆ ತಾ ಗುಟ್ಟು ಕರುಣಾಸಾಗರ ವರ ಶೇಷಾಚಲವಾಸ ಭವ ಸಂಸಾರವ 3
--------------
ಸರಸ್ವತಿ ಬಾಯಿ
ತತ್ವಸುವಾಲಿಗಳು ಓಂಕಾರ ಪ್ರತಿಪಾದ್ಯ ಶ್ರೀಕಾಂತನೇ ನಿನ್ನ ಭವ ಭಂಗವ ಗೈಸಿ ಶುಭಾಂಗನೆ ಕಾಯಯ್ಯ ಶ್ರೀರಂಗ 1 ಕಾಲತÀ್ರಯಕೃತ ವಿಕಾರವಿಲ್ಲದೆ ನೀನೆ ಮೂಲರೂಪನೆ ಬಹು ರೂಪ-ಬಹುರೂಪ ಸ್ವಗತಭೇದ ವಿವರ್ಜಿಕನೆ ಸಲಹಯ್ಯ 2 ಆವಕಾಲಕು ನೀನೆ ಚತುರ ರೂಪದೊಳಿದ್ದು ಜೀವ ನಿಯಾಮನು ನೀನಾಗಿ-ನೀನಾಗಿ ವಿಶ್ವ ತೈಜಸ ಪ್ರಾಜ್ಞ ತುರ್ಯಾತ್ಮ3 ಶುಭ ವಿಷಯಂಗಳಾ ಮಾಡಿ ಉಣಿಸುವೆ 4 ವಿಶ್ವದಲಿ ವ್ಯಾಪಿಸಿಹೆ ವಿಶ್ವನಂಬೋರು ನಿನ್ನ ನಾಶರಹಿತನೆಂದೂ ನರನೆಂದೂ-ನರನೆಂದೂ ನಿನ್ನ ವೈಶ್ವಾನರನು ಎಂದು ಪೇಳ್ವಾರೊ 5 ಹರಿ ನಿನ್ನ ವಿಶ್ವನೆಂದು ಉಪಾಸನೆಯನು ಮಾಡಿ ಹೇರಂಬ ನಿನ್ನ ಒಲಿಸಿದಾ-ಒಲಿಸಿದಾ ಗಜವಕ್ತ್ರನಾಗಿ ನಿನ್ನ ಸ್ತುತಿಪಾನೋ 6 ದೇಹದೊಳು ಸ್ವಪನದಲಿ ನೀ ನೀಡಿ-ನೀ ನೀಡಿ ಜೀವರುಪಭೋಗಿಸುವ ಸಾರವನು ರಕ್ಷೀಪೆ 7 ತೈಜಸನೆ ವಾಸನಾಮಯವೆಲ್ಲ ತೋರೀಪೆ8 ತತ್ವಗಳ ವ್ಯಾಪಾರವೇ ವ್ಯಾಪಾರ9 ಸುಪ್ತಕಾಲದಿ ಜೀವ ಸ್ವರೂಪಕೆ ತಕ್ಕ ಕ್ಲುಪ್ತ ಅಜ್ಞಾನ ಮೊದಲಾದ-ಮೊದಲಾದ ಕಾಲವನನುಸರಿಸಿ ಜೀವನಿಗೆ ತನ್ನ ತಿಳಿಯಗೊಡದೆ 10 ಪ್ರಾಜ್ಞಮೂರುತಿ ನೀನೆ ಹೃದಯಸ್ಥಾನದೊಳಿದ್ದು ಅಜ್ಞಾನಿ ಜೀವನ ಕಾಲಾವ-ಕಾಲಾವ ನನುಸರಿಸಿ ಜೀವ ಸ್ವರೂಪಾನಂದವÀನು ನೀನೀವೆ11 ಸ್ವಪನ ಜಾಗ್ರತ ಜ್ಞಾನವಿನಿತಿಲ್ಲವೆಂದು ಕೂಡುವ ಜೀವ ಆನಂದ ಹಿಂದೆಂದೂ ಕಾಣನೊ12 ಘನ ಬಹಿ ಪ್ರಾಜ್ಞ ತೈಜಸಾಂತ ಪ್ರಾಜ್ಞ ಘನ ಪ್ರಾಜ್ಞ ಮೂರುತಿ-ಮೂರುತಿ ಗಳುಪಾಸನೆ ಮಾಳ್ವ ಬುಧರೇನು ಧನ್ಯರೊ 13 ನಾಗಿ ನೀ ಕೊಡುತಿರುವೆ ಮುಕ್ತರಿಗೆ ಆನಂದ 14 ಮುಕ್ತರಿಗೆ ದೃಷ್ಟನೋ ಅದೃಷ್ಟನೋ ಅ- ಗುರುಪ್ರಾಣನನುಗ್ರಹದಿ ಲಭ್ಯನಹುದಯ್ಯಾ ಹೇ ಜೀಯ 15 ಕಣ್ಮನ ಹೃದಯ ತ್ರಿಧಾಮಗಳಲ್ಲಿ ಇದ್ದು ಉಣಿಸೂವೇ ಜೀವರಿಗೆ ಫಲಭೋಗ-ಫಲಭೋಗವು ವಿಶ್ವತೈಜಸ ಪ್ರಾಜ್ಞ ಸ್ಥಿತಿಯೊಳು 16 ಸರ್ವರೂಪವು ಪೂರ್ಣ ಸರ್ವಗುಣ ಸಂಪೂರ್ಣ ಸರ್ವೋತ್ಪಾದಕ ಸುಖರೂಪಿ-ಸುಖರೂಪಿ ಸರ್ವಲೋಕ ಜೀವರೊಳಿದ್ದು ನಿರ್ಲಿಪ್ತಾ 17 ವರ್ಣತ್ರಯಯುತ ಓಂಕಾರದೊಳಾದ್ಯವರ್ಣ ವಿಶ್ವ ನೀನೆ-ವಿಶ್ವನು ನೀನೆ ಉಕಾರವೇ ತೈಜಸನು ಮಕಾರ ವಾಚ್ಯನೇ ಶ್ರೀಪ್ರಾಜ್ಞ 18 ನಾದದೊಳು ನೀ ವಾಚ್ಯ ತುರ್ಯರೆಂಬೋರು ನಿನ್ನ ಸದನವಾಗಿಹುದೈ ಶಿರಸ್ಥಾನ-ಶಿರಸ್ಥಾನ ನಾಶಿಕಾಗ್ರದಿ ಊಧ್ರ್ವ ದ್ವಾದಶಾಂಗುಲದಲ್ಲಿ ನೆಲೆಸಿರ್ಪೆ 19 ತೈಜಸನೊಡಗೂಡಿ ವಾಸನಾ-ವಾಸನಾಮಯ ಕಳೆವ ಅಜ್ಞಾನಿ ಜೀವನನ್ನಾಡಿಸುವೆ ಶ್ರೀಪ್ರಾಜ್ಞ 20 ಸರ್ವಶಕ್ತನು ನೀನೆ ಸರ್ವಕತರ್Àನು ನೀನೆ ಸವೋತ್ತಮನು ನೀನೆ ಸರ್ವಜ್ಞ-ಸರ್ವಜ್ಞ ಪೂರ್ಣಪ್ರಜ್ಞಾಂತರ್ಯಾಮಿ ಸಲಹಯೈ21 ಪಲವಿಲ್ಲ ವಾಸುದೇವನೆ ನಿನ್ನ ದಯ ಬೇಕೊ 22 ನೀ ಸುಮ್ಮನಿರದೆ ಎನ್ನನೂ-ಎನ್ನನು ಪ್ರೇರಿಸುವೆ ಲೇಸುಮನ ನಿನ್ನಲ್ಲಿ ನೆಲೆಸಲೋ 23 ಕಂಡಕಂಡಲ್ಲಿ ನಾ ಉಂಡುಂಡು ಓಡಾಡಿ ಧಾಂಡಿಗನಾಗಿ ಬೆಳೆದೆನೊ-ಬೆಳೆದೆನೊ ಪುಂಡರೀಕಾಕ್ಷ ನಿನ್ನ ಮರೆತೆನೋ24 ಅವಾವ ಕಾಲದೊಳು ನೀನಿದ್ದು ಉಣಿಸುವೆ ಜೀವಕೃತ ಕರ್ಮಫಲಗಳ-ಫಲಗಳ ಶ್ರೀ ವೇಂಕಟೇಶ ನೀನಿತ್ತು ಸಲಹೂವೇ 25 ವಂದನೆಯು ಒಂದೆ ಮನದಿಂದೆ-ಮನದಲಿ ನಿನ್ನ ಪಾದಾರವಿಂದವ ತೋರಯ್ಯ26 ಬಂಧುಗಳು ಹಿತರೆನ್ನೆ ಬಂಧಕರಾಗಿಹರು ಬಂಧನಕೆ ನಾ ಇನ್ನು ಸಿಲುಕಿದೆ 27 ಘನವಾಗಿ ತನು ಬೆಳೆಸಿ ಹಿತದಿಂದ-ಹಿತದಿಂದ ಮುಂದೆ ಪರಗತಿಯ ಕಾಣುವುದೆಂತೊ ಗೋವಿಂದ28 ವಿತ್ತಾಪಹಾರಕರು ಹೃತ್ತಾಪಕಳೆವರೆ ಉತ್ತಮಗತಿಯ ತೋರಿಸು29 ಹರಿಕಥಾಪುರಾಣಶ್ರವಣ ನಿತ್ಯದೀ ಮಾಡೀ ಪರಿಯಿಂದ ನಿಜತತ್ವವರಿಯಾದೆ-ಅರಿಯಾದೆ ಬರಿದೇ ವಿಪರೀತ ಜ್ಞಾನಕೆ ವಶನಾದೆ30 ಮದ್ಯ ತುಂಬಿದ ಭಾಂಡ ಗದ್ಗುಗೆಯ ಮೇಲಿಟ್ಟು ಶ್ರಧ್ದೆಯಿಂದಲಿ ಅದನ ಪೂಜಿಸೆ-ಪೂಜಿಸೆ ಪೂತÀ ದುರ್ಗಂಧ ಫಲವದು ಬಿಟ್ಟೀತೆ 31 ಮಂದಹಾಸದಿ ಜನರ ಸಂದೋಹದಲಿ ಕುಳಿತು ನಿಂದೆ ಮಾತುಗಳಾಡಿ ಮದತುಂಬೀ-ಮದತುಂಬಿಬಿದಾ ದುರ್ಮ ದಾಂಧರಿಗೆ ಗತಿಯು ಮುಂದೆ ಇನ್ನೆಂತೊ32 ಕಂಡಕಂಡವರಲ್ಲಿ ಕೊಂಡೆ ಮಾತುಗಳಾಡಿ ಪುಂಡರೀಕಾಕ್ಷ ನಿನ್ನ ಸ್ಮರಿಸಾದೆ-ಸ್ಮರಿಸದಲೆ ಪರದಿ ಯಮದಂಡಕ್ಕೆ ಗುರಿಯಾದೆ33 ಹಿಂದೆ ಮಾಡಿದ ಪುಣ್ಯದಿಂದ ಇಂದಿನ ಭಾಗ್ಯ ವೆಂದು ತಿಳಿದು ಮುಂದೆ ನಡೆಯಾದೆ-ನಡೆಯಾದೆ ತಿಳಿಗೇಡಿ ಬುದ್ಧಿಯಿಂದ ಕುಂದುಪೊಂದುವೆ 34 ಬಾಯಿಮಾತಲ್ಲ ಶ್ರೀ ತೋಯಜಾಕ್ಷನ ಭಕ್ತ- ರಾಯತನ ತಿಳಿವುದು ಶ್ರಮಸಾಧ್ಯ-ಶ್ರಮಸಾಧ್ಯ ವನು ಸದುಪಾಯದಿಂದ ತಿಳಿದು ನಲಿದಾಡೊ 35 ನಿಂದಕರ ನುಡಿಯಿಂದ ಹಿಂದೆ ಮಾಡಿದ ಪಾಪ ಒಂದೊಂದು ಪರಿಯಲ್ಲಿ ಪರಿಹಾರ-ಪರಿಹಾರವಾಗಿ ನಿಂದಕರು ಬಂಧನಕೆ ಬೀಳ್ವಾರೋ 36 ಸ್ಮøತಿಯುಕ್ತಿಯನೆ ಬಿಟ್ಟು ಯುಕ್ತಿಮಾತುಗಳಿಂದ ಹೊತ್ತು ಕಳೆಯುತ ಉನ್ಮತ್ತನೆನಿಸಿ-ಉನ್ಮತ್ತನೆನಿಸಿದವ ಇ- ನ್ನೆತ್ತÀ್ತ ಭವಶರಧಿಯ ದಾಟÀುವ 37 ಅರೆಘಳಿಗೆ ಕಳೆದುದಿಹ ನರಜನ್ಮ-ನರಜನ್ಮ ಬಂದುದು ನರಕಯಾತನೆಗಲ್ಲದಿನ್ನಿಲ್ಲ 38 ಪರಿಯಂತ ಉದರಭರಣಕಾಗಿ ಉದಧಿಶಯನ ನಾ ನಿನ್ನ ಭಜಿಸಾದೆ-ಭಜಿಸಾದೆ ಮದದಿಂದ ಬುಧಜನರ ನಿಂದೆಯ ಮಾಡೀದೆ39 ಇನ್ನಲ್ಲ ಪರಗತಿಯ ಸಾಧನ-ಸಾಧನವು ತನ್ನೊಳು ತÀನ್ನಿರವರಿತು ಸುಮ್ಮನಿರುವುದು ಅದು ನಿಧಾನ40 ಭಿನ್ನಧರ್ಮಂಗಳ ಗ್ರಹಿಸಾದೆ-ಗ್ರಹಿಸಾದೆ ನೀನೆಣಿಸಿದೆ ತನ್ನಗುಣಧರ್ಮದಂತನ್ಯರಿಹನೇನೊ 41 ಕಾಯವೇ ತಾನೆಂದು ಮಾಯಕೆ ಒಳಗಾಗಿ ಕಾಯಯಾತನೆಗೊಂಡು ನೋಯುವಾ 42 ವಚನ ವಚನವು ಸರ್ವ ಉಚಿತ ದೇಹದ ಕಾರ್ಯ ನಿಚಯದೊಳು ಹರಿ ಪ್ರಚುರನಾಗಿ-ಪ್ರಚುರನಾಗಿ ಕಾಯಕುಪಚಯವಿತ್ತು ಸಲಹೂವ 43 ದೇಹ ಕಾಯದ ಕಾರ್ಯಪ್ರಕ್ರಿಯವ ತಿಳಿಯಾದೆ ಮಾಯೆಗೊಳಗಾಗದಿರು ಹೇ ಮಾನವಾ-ಮಾನವನೆ ತಿ- ಳಿಯೊ ಮಾಯಾರಮಣನ ಬಿಂಬಕ್ರಿಯವಾ44 ಅನ್ಯರೊಳು ನೀ ಹೋರಾಡಬಲ್ಲೆಯ-ಬಲ್ಲೆಯಾ ನಿನ್ನ ವೈರಿಗಳ ಜಯಿಸಲರಿಯದ ಖೂಳ ರಣಹೇಡಿ 45 ಕೊಳೆತು ನಾರುವ ದೇಹದೊಳಗಿರುವ ಹುಳುಕುಗಳ ಕೊಳೆಯ ಕಳೆಯದ ಮನುಜ ನೀನೆಂತೊ-ನೀನೆಂತೊ ಕೊಳೆತÀ ಸಗಣಿಯೊಳಗಿಹ ಹುಳುವೆ ನಿನ್ನ ಗತಿಯೆಂತೊ46 ಆದದ್ದು ಆಯಿತು ಯತ್ನ ತಪ್ಪಿತು ಎಂದು ಹೆದ್ದಾರಿ ಹಿಡಿದು ಪರಮಾರ್ಥ-ಪರಮಾರ್ಥವ ಬುದ್ಧಿ ತಿದ್ದಿಕೊಳ್ಳಲು ಮುಂದೆ ಅನುವಾಗೊ47 ತತ್ತ ್ವದೇವತೆಗಳು ತತ್ತತ್ವಕಾರ್ಯಜಿ- ವೋತ್ತಮನಾಜ್ಞೆಯಿಂ ತಾವ್ ಗೈವರೊ-ತಾವ್‍ಗÉೈ ಯುತ್ತಲಿರೆ ನಾನೆತ್ತ ಮೃತ್ತಿಕಾಪ್ರತಿಮೆಯೋ48 ಒಂದೊಂದು ರೀತಿಯಿಂ ಚೆಂದಾಗಿ ಯೋಚಿಸು ಮಂದಮತಿಯು ನೀನು ಹಿಂದೆಂತೂ-ಹಿಂದೇನು ವಂದನೆಯೊಂದಲ್ಲದಿನ್ನಿಲ್ಲ49 ಡಾಂಭಿಕತನ ಬಿಟ್ಟು ಡಿಂಬದೊಳು ಸರ್ವದಾ ಅಂಬುಜನಾಭನೇ ಇಂಬಾಗಿ-ಇಂಬಾಗಿ ಸರ್ವತ್ರ ತುಂಬಿಕೊಂಡಿಹನೆಂದು ನಲಿದಾಡೋ 50 ತುಷ್ಟಿಯಾಗಿರು ನೀನು ಕೊಟ್ಟಷ್ಟು ಲಾಭಕ್ಕೆ ದುಷ್ಟವಿಷಯಗಳಿಗೆ ಎರಗಾದೆ-ಎರಗಾದೆ ಇರಲು ಸಂ- ತುಷ್ಟ ನಾಗುವನಯ್ಯ ಶ್ರೀಕೃಷ್ಣ51 ಕಾಯ ನಿನ್ನದು ಅಲ್ಲ ಮನವು ಅಧೀನವಲ್ಲ ಹೇಯವಿಲ್ಲದೆ ಮಾಯಕೊಳಗಾಗಿ ಮರುಳಾಗದಲೆ-ಮರುಳಾಗದಲೆ ಮಾಯಾರಮಣನ್ನ ನೆನೆಯೊ ನಿರ್ಭಯದಿಂದ 52 ಹಲವು ಶಾಸ್ತ್ರವ ನೋಡಿ ತಲೆಹರಟೆಯ ಬಿಟ್ಟು ಅಲವಬೋಧರ ತತ್ತ ್ವಸುಧೆಯನ್ನು- ಸುಧೆಯನ್ನು ಸವಿದು ನಿ-
--------------
ಉರಗಾದ್ರಿವಾಸವಿಠಲದಾಸರು
ತಂದೆ ನೀನೆ ದಯದಿ ಪಾಲಿಸೆಂದು ಬಂದೆನೋ ಪ ಹಿಂದುಮುಂದು ಗತಿಯದಾರುಯಿಲ್ಲವೆಂಬೆನೊ ಅ.ಪ ಕುಕ್ಷಿಯೊಳಗೆ ಜಗವನಿಟ್ಟುಕೊಂಡು ಪೊರೆವನೆ ಪಕ್ಷಿಗಮನ ನಿಮ್ಮ ನೆನೆವೆ ಭಜಕಗೊಲಿವನೆ 1 ಕ್ಷೀರವಾರ್ಧಿಶಯನ ಗೋಪಿ-ಜಾರ ಪಾಲಿಸೊ ಮಾರಜನಕ ಮುದದೊಳೆನ್ನ ದೂರಲಾಲಿಸೊ 2 ಸುಮಹದೇವಪುರದ ನಿಲಯ-ಸುಜನರಕ್ಷನೆ ಕ್ರಮದೊಳೆನ್ನ ರಕ್ಷಿಸಯ್ಯ-ಕಮಲೆಯಾಣ್ಮನೆ 3
--------------
ರಂಗದಾಸರು
ತಂದೆ ಮುದ್ದು ಮೋಹನ್ನ ತವ ಚರಣ ಕಾನಮಿಪೆಬಂದೆನ್ನ ಸಲಹ ಬೇಕೋ ಪ ಎಂದೆಂದಿಗೂ ನಿಮ್ಮ ಪದ ಧ್ಯಾನವಿತ್ತು ಭವಬಂಧನವ ಬಿಡಿಸಬೇಕೋ | ಕರುಣೀ ಅ.ಪ. ಅಂಕಿತವನಿತ್ತೆ ಮನಪಂಕ ಹರಿಸೀ ಹರಿಕಿಂಕರರ ಸಂಗ ಸಲಿಸೋ |ಸಂಕಟವ ಪರಿಹರಿಪ ವೆಂಕಟೇಶನ ಪಾದಪಂಕಜಕೆ ಮಧುಪ ನೆನಿಸೋ |ಶಂಕೆಗಳು ಎಂದೆನಿಪ | ಸೊಂಕು ಜಾಡ್ಯವ ಹರಿಸೆಡೊಂಕು ಮನ ವೈದ್ಯನೆನಿಸೋ |ಮಂಕುಮತಿಯಾದೆನಗೆ ಅಕಲಂಕ ಮಹಿಮನನಲೆಂಕತನವನೆ ಇತ್ತು ಕಾಯೋ | ಕರುಣೀ 1 ಪರಿ ಮಾನವ ಎನ್ನ | ಮರುಕದಿಂದಲಿ ನೋಡಿವಿರಕುತಿಯನಿತ್ತು ಸಲಹೋ | ಕರುಣೀ 2 ಲೆಕ್ಕವಿಲ್ಲದ ದೇಹ ಗೇಹಾದಿಗಳ ಪೊಕ್ಕುಸಿಕ್ಕಿನಿಂದಲಿ ನೊಂದೆನೋ |ಕಕ್ಕಸದ ಸಂಸಾರ | ಅಕ್ಕರವು ಎಂದೆನುತಮರ್ಕಟನ ತೆರನಾದೆನೋ |ಸೊಕ್ಕು ಮೂರೈದನ್ನ | ಮುಕ್ಕಿ ಕಾಡುತ್ತಿರಲುನಕ್ಕು ನೀ ನೋಳ್ಪುದೇನೋ |ಪಕ್ಕಿವಹ ದೇವ ಗುರು ಗೋವಿಂದ ವಿಠ್ಠಲನಅಕ್ಕರದಿ ತೋರಯ್ಯಾ | ಕರುಣೀ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತನು ಸದನದಿ ಪೀಠವಯ್ಯ | ಭಾನು ಕುಲೋದ್ಧೀಪಕ ಪ ಅನಿಲನೆ ಜೀವನಾ ಮಹಾ | ಮಂಚನವು ರಮಾ ಶಯ್ಯಕೆ ಬಾ ಅ.ಪ. ಸುನಾಮ ಮೂರ್ತಿ ಕರವ ಪಾದ 1 ಮಧು ವಿರೋಧಿ ವೇದಾಂತ | ವೇದ್ಯ ಸುಧಾ ಕಲಶ ಪಾಣಿವಿಧಿ ಭವಾದಿ ವಂದ್ಯ ಚರಣ | ಅದುಭುತ ಚರ್ಯ ಹರಿಯೆಪದದಿ ಸುರನದಿಯ ಪಡೆದವ | ನದಿಸುತ ಗೊಲಿದ ಮಹಿಮಯದುಕುಲೋತ್ತಮ ಶ್ರೀ ಕೃಷ್ಣನೇ ಹದುಳದಲಿ ಪೊರೆ ಬಾ 2 ತರಳ ದ್ರೌಪದಿಗೊಲಿದವನೆ | ಶೌರೀ ವರ ಅಹಲ್ಯಾ ವರದಗುರು ಮಡದಿ ತಾರಾವರದ | ಶರಣರ್ಗೆ ಸುರಧೇನು ||ಪರಮ ಪಾತಕಿಯಾದವರ | ಪೊರೆದ ಮಹಾದಯವಂತ ಪರಿಸರಾಂತರ್ಗತನೆ ಪೊರೆಯೊ | ಗುರು ಗೋವಿಂದ ವಿಠಲ 3
--------------
ಗುರುಗೋವಿಂದವಿಠಲರು
ತನು ಸಹ ಕಾಂಬುದೆ ಬ್ರಹ್ಮಸತ್ಯವು ಸತ್ಯವ ಕೇಳೆಲೋ ತಮ್ಮತನು ಸಹ ಕಾಂಬುದೆ ಬ್ರಹ್ಮತನುವನು ಬಿಟ್ಟು ಬೇರೇನೂ ತೋರದುನಿನಗೆ ಅರಿದು ನಿಮ್ಮಪ್ಪಗೆ ಅರಿದು ಪ ಹೂವನೆ ಮುಂದೆ ಮುಂದಿಟ್ಟುಕೊಂಡುಸರ ಕಟ್ಟಬಹುದು ದೊಡ್ಡ ಚೆಂಡುಹೂವನೆ ಮುಂದಿಟ್ಟಿಕೊಂಡುಹೂವನೆ ಬಿಟ್ಟು ಪರಿಮಳ ಕಟ್ಟೆನೆಅವ್ವಗೆ ಅರಿದು ಅವ್ವನವ್ವಗೆ ಅರಿದು1 ಮುತ್ತದು ಕೇವಲ ಜ್ಯೋತಿ ಕಿವಿಗೆಮುತ್ತಿಡುವರಿಗದು ನೀತಿಮುತ್ತದು ಕೇವಲ ಜ್ಯೋತಿಮುತ್ತದು ಬಿಟ್ಟು ಜ್ಯೋತಿಯ ಬಿಡು ಎನೆಮುತ್ತದು ಅಜಗೆ ಅರಿದು ಮಹೇಶ್ವರಗರಿದು2 ಬೆಲ್ಲದ ಮುದ್ದೆಯ ನೋಡುಹಲ್ಲಿನಿಂದಲೇ ತಿನಬೇಕು ಕಡಿದುಬೆಲ್ಲದ ಮುದ್ದೆಯ ನೋಡುಬೆಲ್ಲವನು ಬಿಟ್ಟು ಸಿಹಿಯನು ತಿನ್ನೆನೆಬಲ್ಲ ಚಿದಾನಂದ ಸದ್ಗುರುಗರುದು 3
--------------
ಚಿದಾನಂದ ಅವಧೂತರು
ತನುಮನಧವನೆಲ್ಲ ನಿನಗರ್ಪಿಸಿದೆನಿನ್ನು ಎನಗಾವುದಾಧೀನವಿನಿತಿಲ್ಲ ದೇವ ಪ ಜನಕ ನಾನು ಕ್ಷಣಕೆ ಕ್ಷಣಕೆ ಉಣವುದೆಲ್ಲವು ನಿನ್ನ ಪ್ರಸಾದ ಕನಸುಮನಸಿನೊಳಗೆ ನಾನು ಮಣಿವುದೆಲ್ಲವು ನಿನ್ನ ಚರಣ ಅ.ಪ ಮಡದಿಯಿಂ ಮಮತದಿ ಸಡಗರದಾಡ್ಯಾಡಿ ಕಡು ಆನಂದಿಪುದೆಲ್ಲ ಒಡೆಯ ನಿನ್ನಾಟ ಎಡೆಬಿಡದೆ ಅಡಿಗಡಿಗೆ ಕಡುಸಿರಿವಡೆದು ನಾ ಪೊಡವಿಯೋಳ್ಜೀವಿಪುದು ಕಡು ನಿಮ್ಮ ಪ್ರೇಮ ನುಡಿವುದೆಲ್ಲ ನಿನ್ನ ಮಂತ್ರವು ಕೊಡುವುದೆಲ್ಲವು ನಿನ್ನ ಅಧಿಕಾರ ನಡೆವುದೆಲ್ಲವು ನಾ ನಿನ್ನ ಯಾತ್ರೆಯು ಇಡುವತೊಡುವುದು ನಿನ್ನ ಬಿರುದು 1 ಗಳಿಸುವುದೆಲ್ಲ ನಾ ಚಲಿಸದ ತವಪಾದ ನಳಿನದಾಸರಸಂಗೀ ಇಳೆಯೊಳು ಪ್ರಭುವೇ ಬಳಸುವುದೆಲ್ಲ ನಾ ಅಳಕದ ತವಚರಿತ ಕಲಿಯುವುದೆಲ್ಲ ನಿಮ್ಮ ವಿಲಸಿತನಾಮಧ್ಯಾನ ಮಲಗುವುದೇ ನಿಮ್ಮ ಧ್ಯಾನ ಆನಂದ ನಲಿವುದಖಿಲ ನಿಮ್ಮ ಭಜನೆಯು ಅಳಿವುದೆಲ್ಲನುಭವದ ಗುಣಗಳು ತಿಳಿವುದೆಲ್ಲವು ನಿಮ್ಮ ಮಹಿಮೆ 2 ಅಮಿತ ತವಪ್ರೇಮವು ಗಮಿಸುವುದೆಲ್ಲ ನಾ ಸುಮನರ ಸಭೆಯು ಕ್ರಮದಿ ನಾ ಬೇಡುವುದು ವಿಮಲ ಸುಜ್ಞಾನವು ದಮೆ ದಯ ಭಕ್ತಿ ತವ ನಿರ್ಮಲಂಘ್ರಿಯ ಅರಿವು ನೇಮದಿಂ ನಾ ಬರುವುದೆಲ್ಲ ಸ್ವಾಮಿ ನಿಮ್ಮಯ ಮಹಿಮೆ ಖ್ಯಾತಿಯು ಕ್ಷೇಮನಿಧಿ ಶ್ರೀರಾಮ ನಿಮ್ಮೊಳು ಕಾಮಿಸುವುದೇ ನಾ ಮುಕ್ತಿಪದವು 3
--------------
ರಾಮದಾಸರು
ತನುವೆನ್ನದು ಚೇತನವೆನ್ನದು ಎಂದು ಅನುದಿನ ಪೋಷಣೆಯನು ಮಾಡಿದೆ ಹರಿ ಪ ಚಿನುಮಯ ನಿನ್ನನು ನೆನೆವೆನೆಂದರೆ ಮನ ತನುಮಧ್ಯೆಯರ ತನುವಿನೊಳಿರುತಿಹುದು ಅನಘ ನಿನ್ನನು ನೋಡುವೆ ನಾನೆನ್ನಲು ದೃಷ್ಟಿ ಕನಕಾಂಗಿಯರ ಕುಂಭಸ್ತನದ ಮೇಲಿಹುದಯ್ಯ1 ಚರಣದ ಪೂಜೆಯೊಳಿರುವೆನೆಂದರೆ ಕರವರೆಡು ಕೋಮಲೆಯರನರಸುವುವು ಹರಿಕಥಾಶ್ರವಣದೊಳಿರೆ ಈ ಕಿವಿಗಳು ಹರಿಣಾಕ್ಷಿಯರ ಕಂಠಸ್ವರಕೆ ಮೋಹಿಪವಯ್ಯ 2 ದುರಿತದೂರನ ನಾಮ ಸ್ಮರಿಸದು ನಾಲಿಗೆ ಸರಸಿಜಾಕ್ಷಿಯರೊಳು ಸರಸೋಕ್ತಿ ಪಡೆದು ಚರಣಶ್ರೀತುಳಸಿಯನರಿಯದೆ ನಾಸಿಕ ತರುಣಿಯ ಮೈಗಂಪನರಸಿ ಹಿಗ್ಗುವದಯ್ಯ 3 ನಿನ್ನಂಘ್ರಿಗೆರಗದೆ ಕುನ್ನಿಶರೀರವಿ ದುನ್ನುತಸ್ತನವುಳ್ಳ ಕನ್ನೆಯರೊಳ್ ತನ್ನ ಸುರತಸುಖವನೆ ಚಿಂತಿಸುವದು ಎನ್ನಾಧೀನದೊಳಿಲ್ಲ ನೀನೆ ಬಲ್ಲೆ 4 ಎರವಿನ ಸಿರಿಯಂತೆ ಕರಣಕಳೇವರ ಬರಿದೆ ನನ್ನದು ಎಂದು ಮೆರೆದೆ ನಾನು ಹರಿ ನಿನ್ನದೇ ಸರಿ ದುರಿತಸುಕೃತಕೆನ್ನ ಗುರಿಮಾಡದೆ ಕಾಯೋ ವರದವಿಠಲ ಕೃಷ್ಣ 5
--------------
ವೆಂಕಟವರದಾರ್ಯರು
ತನ್ನ ತಿಳಿದು ತಾನಾದಂಥ ಗುರುವಿನ ಪಾದವ ಹೊಂದುತನ್ನನರಿಯದ ಗುರುವ ಹೊಂದಬೇಡೆಂದೆಂದು ಪ ನಿನ್ನನು ದೇವನೆಂದೆನ್ನುವಗೆ ಈಗ ಶರಣು ಮಾಡೋಅನ್ಯ ದೇವರನೆಂದೆನ್ನುವನ ಹಾದಿ ಹೋಗಬೇಡೋ 1 ಕೋಟಿರವಿ ತೇಜವ ಕಣ್ಣಲಿ ನೋಡುಬೂಟಿಕ ಕಾಯಕಗಳ ದೂರಮಾಡು 2 ಸೋಹಂ ಮಂತ್ರವ ಹೇಳದವನ ಸೆರಗ ಬಿಟ್ಟು ನೀನುಊಹಿಸುವ ಬೇರೆ ಗುರುವನು ಉತ್ತಮ ಅವನು3 ವಾಸನೆ ಕಳೆದಾತಂಗೆ ಒಪ್ಪಿಸಯ್ಯ ತನುವಆಸೆ ಹಚ್ಚುವವನತ್ತ ಬಿಡಲಿ ಬೇಡ ಮನವ 4 ಚಿದಾನಂದ ಗುರುವ ಹೊಂದು ಚಿನ್ಮಾತ್ರನಹೆ ಮದಮುಖ ಗುರುವ ಹೊಂದದಿರು ತಿಳಿ ಮುಂದೆ ನೀನು ಕೆಡುವೆ 5
--------------
ಚಿದಾನಂದ ಅವಧೂತರು
ತಪಿಸಲಾರೆ ನಾನು ಪರಿಪರಿ ತಾಪದಲಿ ಕೃಪೆಮಡಿ ಸಲಹಿರಿ ಶ್ರೀ ಗುರುಗಳೆ ಪ. ಸುಪಥ ಕಾಣದೆ ನಿಮ್ಮ ಪಾದವನೆ ನಂಬಿದೆನು ಗುಪಿತ ಮಹಿಮರೆ ಇನ್ನು ಭವಪಾಶ ಬಿಡಿಸುತ್ತ ಅ.ಪ. ಬಂಧು ವರ್ಗಗಳನ್ನ ಬದುಕಿಸುವರು ಎಂದು ಬಂಧನದೊಳು ಬಿದ್ದು ಬೆಂದು ನೊಂದೆ ಮುಂದೆ ದಾರಿಯ ಕಾಣೆ ಮುಕ್ತಿ ಮಾರ್ಗವನರಿಯೆ ಬಂಧು ಬಳಗಗಳೆಲ್ಲ ನೀವೆಂದು ನಂಬಿದೆ 1 ಅಶನವಸನಗಳಲ್ಲಿ ಆಸೆಯನು ತೊರೆಯದೆ ವಸುಮತಿಯೊಳು ಜ್ಞಾನ ಹೀನವಾಗಿ ಪಶುವಿನಂದದಿ ತಿರುಗಿ ಕಾಲವ್ಯರ್ಥ ಕಳೆದೆ ಅಸಮ ಮಹಿಮರೆ ಇನ್ನು ಅಜ್ಞಾನ ಪರಿಹರಿಸಿ 2 ಮಮತೆಯನು ತೊರೆಯದೆ ಮಾಯ ಪಾಶಕೆ ಸಿಲುಕಿ ಮಮಕಾರದಿಂದ ನಾ ಮೈಮರೆತೆನು ನಮಿಸುವೆನು ದೈನ್ಯದಲಿ ನಾನೀಗ ನಿಮ್ಮ ಪದಕೆ ರಮೆಯರಸನ ತೋರಿ ಎನ್ನ ಮನ ಮಧ್ಯದಿ 3 ಪಾವನರೂಪರೆ ಪಾಪರಾಹಿತ್ಯರೆ ಪಾವಿನಶಯನಗೆ ಪರಮಪ್ರಿಯರೆ ದೇವತೆಗಳೊಡೆಯರೆ ದೇವಾಂಶ ಸಂಭವರೆ ಪಾವಮಾನಿಗೆ ಪ್ರಿಯರೆ ಪಾವನ್ನಗಾತ್ರರೆ 4 ಆಪತ್ತು ಕಳೆಯುವರೆ ಶ್ರೀಪತಿಯ ತೋರ್ವರೆ ಕೋಪಿಸದೆ ಎನ್ನೊಳು ಕೃಪೆಗೈಯ್ಯರಿ ಗೋಪಾಲಕೃಷ್ಣವಿಠ್ಠಲ ತಾನು ಹೃದಯದಲಿ ತೋರ್ಪುತೆ ಕರುಣಿಸುತ ಈ ಪರಿಯಿಂ ಸಲಹಿರಿ5
--------------
ಅಂಬಾಬಾಯಿ
ತಪ್ಪ ಪಾಲಿಸಯ್ಯ ತಿಮ್ಮಯ್ಯ ತಪ್ಪ ಪಾಲಿಸಯ್ಯಪ. ತಪ್ಪ ಪಾಲಿಸದೆಯಿಪ್ಪರೆ ಯೆನ್ನೊಳು ಒಪ್ಪಿಗೆ ಪಟ್ಟೊಲಿಯಪ್ಪ ತಿಮ್ಮಪ್ಪನೆಅ.ಪ. ಜಲಜನಾಭ ನಿನ್ನ ಮಹಿಮೆಯ ನೆಲೆಯನರಿಯದೆನ್ನ ಮನವದು ನೆಲೆಯಿಲ್ಲದ ಭವಜಲಧಿಯೊಳಾಡುತ್ತ ಲಲನಾ ವಿಷಯದ ಬಲೆಗೆ ಮೋಹಿಸಿ ಮನ ಸಿಲುಕಿ ಮಲಿನವಾಯ್ತು ತತ್ವದ ನೆಲೆಯನರಿಯದಾಯ್ತು ಹೀಗೆನ್ನುತ ಕಳೆದುಹೋಯ್ತು ವಿಂಶತಿ ವತ್ಸರಗಳು ತೊಳಲಿ ಸಕಲ ಭವದೊಳಗಾರ್ಜಿತವಹ1 ಹಾಳು ಮನವು ಕೂಡಿ ನಾನಾ ಚಾಳಿ ಮಾಳ್ಪುದಾಡಿ ಬುದ್ಧಿಯ ಪೇಳಿದಷ್ಟು ದುಶ್ಯೀಲವೆ ಮಾಳ್ಪುದು ಆಲೋಚನೆಯೊಳಗೆ ಬಿದ್ದರೆ ಮೇಲಿಲ್ಲವು ಕ್ಷಣಕೆ ತನ್ನಯ ಶೀಲವನೆ ಸ್ವೀಕರಿಸುತಿರುವುದು ಪೇಳಲೇನು ಕರುಣಾಳು ನೀ ಯೆನ್ನಯ2 ನಾನಾ ಕಷ್ಟಪಟ್ಟೆ ಇನ್ನಾದರು ಮಾನಿಸಬೇಕಷ್ಟೆ ಎನ್ನೊಳು ಊನ ಗ್ರಹಿಸಿ ಅನುಮಾನ ಸಾಧಿಸಿದರೆ ನಾನೆಂಬುವದೇನು ಸ್ವತಂತ್ರವ ಕಾಣೆನು ಎನ್ನೊಳಗೆ ಸಂತತ ನೀನೇ ಗತಿಯೆನಗೆ ಇದಕನು- ಮಾನವಿಲ್ಲ ಪಾದಾನತಜನರಾ ಧೀನನೆಂಬ ಬಿರುದಾನಬೇಕಾದರೆ3 ಅಪರಾಧಿಯೆ ನಾನು ಹೇಗೈ ಅಖಿಲಾತ್ಮನು ನೀನು ಹೃದಯದಿ ಕೃಪೆಯ ಬೀರಿ ತೋರಿಪ ಪರಮಾತ್ಮನೆ ಚಪಲನಾಗಿ ಎನ್ನುಪಮೆಗೆಯೊಡ್ಡಿದೆ ಸಫಲವಾಯ್ತು ಎನಗೆ ಕೀರ್ತಿಯು ಅಪಕೀರ್ತಿಯು ನಿನಗೆ ಪಾದವ ಜಪಿಸುವಂತೆ ಕರುಣಿಪುದಿನ್ನಾದರೂ ಕಪಟವಾಯ್ತೆ ಸರೀಸೃಪಗಿರಿರಾಜನೆ4 ದೂಷಣಾರಿ ನಿನ್ನ ಪಾದದ ದಾಸಗೈಯ್ಯೊ ಎನ್ನ ಎನ್ನೊಳು ದೋಷವಿಲ್ಲ ಜಗದೀಶ ಜನಾರ್ದನ ದಾಶರಥಿಯ ಕರುಣಾಶರಧಿಯೊಳಗೆ ಈಸಾಡಿದ ದಾಸ ಕಾರ್ಕಳಾ ಧೀಶ ಶ್ರೀನಿವಾಸ ರವಿಶತ ಭಾಸ ಶ್ರೀಲಕ್ಷ್ಮೀನಾರಾಯಣ ಸ ರ್ವೇಶ ಭಕ್ತಜನಪೋಷ ನೀಯೆನ್ನಯ5
--------------
ತುಪಾಕಿ ವೆಂಕಟರಮಣಾಚಾರ್ಯ
ತಪ್ಪು ಮಾಡುವದು ಮನುಜ ಧರ್ಮ | ನಮ್ಮದು ಬೇಡುವದು ಕಾಡುವದು ಪ ನಡೆ ನುಡಿಗೆ ತಪ್ಪು ನೋಡುವದು ನ್ಯಾಯವೇ ನಿನಗೆ ||ಬಡವರಾಟಗಳೆಂದು ಸಲುಹಯ್ಯ | ಮಾಡಲಬೇಡ ತಡವ |ಕಡಿದ್ಹಾಕು ಕಮಳಲೋಚನಾ | ಎನ್ನ ನಿನ್ನಡಿಗೆಸೇರಿಸು | ಕಡಲಶಯನ ಮೋಹನ್ನಾ 1 ಮಡಹಿ ಮಲ್ಲನ ಕೆಡವಿ | ಜೋಡು ಮತ್ತಿಯ ಮರವ ತಡವಿ | ಮಧು ಮೊದಲಾದವರನ್ನು | ಅಡವಿ ಕಿಚ್ಚವ ನುಂಗಿ | ಕಡುವಿ ಮಡುವ ಧುಮುಕಿ | ಬಡವಿ ಕುಬ್ಜಿಯ ಕೈಪಿಡಿದು ಯಶವ ಪಡೆದಿ 2 ನಡೆವವನು ಎಡವುವನೆಂದು | ಅಪರಾಧಗಳನುಬಡಿದಾಡದೆ ಒಡಲೊಳಗೆ ಹಿಡಿವ | ಮಡದಿಯನುನಿಮ್ಮ ಜಡೆಯಲಿರಿಸಿದ ಮನೆಯಲಿ ಎನ್ನ |ಸಡಗರದ ರುಕ್ಮದಿಂದಿಡಿದು ಲಾಲಿಸು 3
--------------
ರುಕ್ಮಾಂಗದರು
ತಲ್ಲಣಿಸದಿರು ಕಂಡ್ಯ ತಾಳು ಮನವೆ ಪ ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ ಅ ಬೆಟ್ಟದಾ ತುದಿಯಲ್ಲಿ ಹುಟ್ಟಿದ ವೃಕ್ಷಕ್ಕೆಕಟ್ಟೆಯನು ಕಟ್ಟಿ ನೀರೆರೆದವರು ಯಾರೊಪುಟ್ಟಿಸಿದ ಸ್ವಾಮಿ ತಾ ಹೊಣೆಗಾರನಾಗಿರಲುಗಟ್ಯಾಗಿ ಸಲಹುವನು ಇದಕೆ ಸಂಶಯವಿಲ್ಲ 1 ಅಡವಿಯೊಳಗಾಡುವ ಮೃಗಪಕ್ಷಿಗಳಿಗೆಲ್ಲಅಡಿಗಡಿಗೆ ಆಹಾರವಿತ್ತವರು ಯಾರೊ ಪಡೆದ ಜನನಿಯ ತೆರದಿ ಸ್ವಾಮಿ ಹೊಣೆಗೀಡಾಗಿಬಿಡದೆ ರಕ್ಷಿಪನು ಇದಕೆ ಸಂಶಯವಿಲ್ಲ 2 ನವಿಲಿಗೆ ಚಿತ್ರ ಬರೆದವರು ಯಾರುಪವಳದ ಲತೆಗೆ ಕೆಂಪಿಟ್ಟವರು ಯಾರುಸವಿಮಾತಿನರಗಿಳಿಗೆ ಹಸುರು ಬರೆದವರು ಯಾರುಅವನೆ ಸಲಹುವನು ಇದಕೆ ಸಂಶಯವಿಲ್ಲ3 ಕಲ್ಲಿನಲಿ ಹುಟ್ಟಿ ಕೂಗುವ ಕಪ್ಪೆಗಳಿಗೆಲ್ಲಅಲ್ಲಲ್ಲಿಗಾಹಾರ ತಂದೀವರಾರುಬಲ್ಲಿದನು ಕಾಗಿನೆಲೆಯಾದಿಕೇಶವರಾಯಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ 4
--------------
ಕನಕದಾಸ
ತವರು ಮನೆಯು ನನ್ನ ಸುವಿದ್ಯಪುರಲ್ಯದೆ ಸಾವಿರಕೊಬ್ಬಗೆ ದೋರುತದೆ ಧ್ರುವ ಸಾವಿರಕೊಬ್ಬನೆ ತಾ ಸುದೇವನೆ ಬಲ್ಲ ಭಾವಿಸದಲ್ಲದೆ ತಿಳಿಯುವದಲ್ಲ ಅವಿದ್ಯಪುರ ದಾಟ, ಮಂದಾಕ್ಕಾಗಲು ಎಲ್ಲ ಆವಾಗ ತಿಳಿವುದು ಹೇಳಿದ ಸೊಲ್ಲ 1 ಸಾವಿರ ತೆನೆಯಲೊಪ್ಪುತದೆ ಒಳಕೋಟ ಠವಿಠವಿಸುತದೆ ನೋಡಿ ಮನಮುಟ್ಟಿ ಅವ್ವ ಅಪ್ಪನೇ ನಮ್ಮ ಇಹಸ್ಥಾನವು ಘಟ್ಟಿ ದೇವಾಧಿ ದೇವನೊಬ್ಬನೆ ಜಗಜಟ್ಟಿ 2 ಬಲು ಅಭೇದ್ಯಸ್ಥಳ ತಿಳಿಯದಿನ್ನೊಬ್ಬರಿಗೆ ನೆಲೆವಂತರಿಗೆ ತಾನು ತಿಳಿವದು ಬ್ಯಾಗೆ ತುಂಬಿ ಥಳಗುಟ್ಟಿ ಹೊಳವ್ಹಾಂಗೆ ಬಲಗೊಂಡು ಕೇಳಿ ಶ್ರೀಸದ್ಗುರುವಿಗೆ 3 ಅಣ್ಣನೆಂಬಾತ್ಹಾನೆ ಅನಂದದಲ್ಹಾನೆ ನೆನೆಪಿಗೊಮ್ಮೆ ಬಂದು ಸುಳವುತ್ಹಾನೆ ಕಣ್ಣೆಲಿ ಕಟ್ಯಾನೆ ತಮ್ಮನೆಂಬತ್ಹಾನೆ ಕ್ಷಣಕೊಮ್ಮೆ ಹೊಳೆವುವಾನೆ4 ಅಕ್ಕನೆಂಬಾಕಿ ತಾ ಸಖರಿ ಅಗ್ಹಾಳೆ ಅಖರದಲೆವ್ವ ಈ ಮಾತು ಕೇಳೆ ಪ್ರಖ್ಯಾತದಲಿ ಪ್ರೀತಿಮಾಡುವ ತಂಗ್ಹ್ಯಾಳೆ ಸುಖ ಸುರುತ್ಹಾಳೆ ಇರುಳು ಹಗಲು 5 ಅತ್ತಿಗೆ ನಾದುನಿ ಭಾವ ಮೈದುನರೆಲ್ಲ ಅಂತ್ಯಕವಾಗ್ಹ್ಯಾರೆ ಮನಿಯೊಳಗೆಲ್ಲ ಸುತ್ತೇಳುವ ಬಳಗ ಉತ್ತುಮರೆನಗೆಲ್ಲ ಹಿತದೋರುತಾರವ್ವ ಸರ್ವಾಪ್ತರೆಲ್ಲ 6 ಸರ್ವಾಪ್ತವೆಂಬುದು ಸರ್ವೇಶನೆ ತಾನು ಸರ್ವದಾ ಎನ್ನೊಳು ತಾ ಕಾಮಧೇನು ಪರ್ವಕಾಲದ ಬಹಳ ಏನೆಂದ್ದೇಳಲಿ ನಾನು ಸರ್ವಾರ್ಥ ಕೊಡುತ್ಹಾನೆ ಸರ್ವಾತ್ಮ ತಾನು 7 ಅವ್ವ ನಮ್ಮಪ್ಪಗೆ ಸರಿ ಇಲ್ಲ ಜಗದೊಳು ಆವ ಕಾಲಕೆ ತಾ ಇವರ ಮೇಲು ಇವರೆಂಬುದು ಒಂದೆ ಮಾತಿನ ಸ್ವಕೀಲು ಸವಿಸುಖಬಲ್ಲರು ಅನುಭವಿಗಳು 8 ತೌರಮನೆಂಬುದು ಪ್ರತ್ಯೇಕಾ ತಾನಿಲ್ಲ ಭಾವಾರ್ಥದ ಮಾತು ಕೇಳಿರೆಲ್ಲ ಅವಗುಣನೆ ಬಿಟ್ಟು ಕೇಳಿ ಸವಿಯ ಸೊಲ್ಲ ಪೂರ್ವಿಕರಿಗಿದೆ ಸಾರವೆಲ್ಲ 9 ಸುದ್ದಿ ಹೇಳಿ ಕಳುಹುಲಿಕ್ಕೆ ಈ ಸಾಧನ ಇದುವೆ ಅಯಿತು ತವರ ಮನಿ ಬುದ್ಧಿವಂತನೆಬಲ್ಲ ಲಕ್ಷಕೊಬ್ಬ ಜ್ಞಾನಿ ಸಿದ್ಧಿದರಿಡುವದು ಸದ್ಗುರು ಪ್ರಾರ್ಥನಿ 10 ಬಳಗದೊಳು ಕೂಡಿ ಒಳಿಥಾಗ್ಯಾಯಿತು ಎನಗೆ ಒಳ ಹೊರಗೆ ಸುಖ ಎದುರಿಟ್ಟತೀಗ ಕುಲಕೋಟಿ ಬಳಗ ಸದ್ಗುರು ಪಾದವ್ಯನಗೆ ಸಲಹುತಾನೆ ಸ್ವಾಮಿ ಮಹಿಪತಿಗೆ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು